ವಿಷಯದ ವಿವರಗಳಿಗೆ ದಾಟಿರಿ

Posts tagged ‘ರಾಜಕೀಯ’

22
ಆಗಸ್ಟ್

ನೆಹರೂ,ಗಾಂಧಿಗೊಂದು ನ್ಯಾಯ, ಸಾವರ್ಕರ್’ರಿಗೊಂದು ನ್ಯಾಯವೇ?

  • ರಾಕೇಶ್ ಶೆಟ್ಟಿ

ಸಾವರ್ಕರ್ ಅವರ ಹೆಸರು ಕೇಳಿದರೆ ದ್ವೇಷಕಾರುವ ಸಿದ್ದರಾಮಯ್ಯನವರು, ಸುಳ್ಳುಗಳೇ ತುಂಬಿರುವ ಲೇಖನವೊಂದನ್ನು ಬರೆದು ಮುಖ್ಯಮಂತ್ರಿಗಳನ್ನು ಚರ್ಚೆಗೆ ಕರೆದಿದ್ದಾರೆ. ಮಾಜಿ ಮುಖ್ಯಮಂತ್ರಿಯೊಬ್ಬರು ಹೀಗೆ ಆಧಾರ ರಹಿತ ಸುಳ್ಳುಗಳ ಸರಮಾಲೆಯನ್ನು ಹೇಗೆ ಬರೆಯಲು ಸಾಧ್ಯ? ಅವರ ಲೇಖನದ ಕೆಲವು ಪ್ರಶ್ನೆಗಳು, ಸುಳ್ಳುಗಳ ಬಗ್ಗೆ ಮಾತನಾಡುತ್ತಲೇ, ಸಾವರ್ಕರ್, ಗಾಂಧಿ, ನೆಹರೂ ಅವರ ಜೈಲುವಾಸಗಳ ಬಗ್ಗೆ ಒಂದಿಷ್ಟು ವಿಷಯಗಳನ್ನು ಹಂಚಿಕೊಳ್ಳಬೇಕು.

10 ಡಿಸೆಂಬರ್ 1934 – ಬ್ರಿಟಿಷ್ ಪಾರ್ಲಿಮೆಂಟಿನಲ್ಲಿ ಜವಹರಲಾಲ್ ನೆಹರೂ ಅವರ ಜೈಲುವಾಸದ ಬಗ್ಗೆಯೊಂದು ಚರ್ಚೆಯಾಗುತ್ತದೆ. ಸದಸ್ಯರಾದ ಹಾರಾಲ್ದ್ ಹೇಲ್ಸ್ ಅವರು, ನೆಹರೂ ಅವರ ಪತ್ನಿ ಕಮಲಾ ನೆಹರೂ ಅವರ ಅನಾರೋಗ್ಯದ ಸ್ಥಿತಿಯನ್ನು ಗಮನಿಸಿ, ಜವಹರಲಾಲ್ ನೆಹರೂ ಅವರನ್ನು ಶೀಘ್ರ ಬಿಡುಗಡೆ ಮಾಡುವ ಬಗ್ಗೆ ಪರಿಶೀಲಿಸುವಂತೆ ಆಗ್ರಹಿಸುತ್ತಾರೆ.

ಅದಕ್ಕೆ ಉತ್ತರವಾಗಿ, ಅಂದಿನ ಬ್ರಿಟಿಷ್ ಭಾರತದ ಅಧೀನ ಕಾರ್ಯದರ್ಶಿಯಾಗಿದ್ದ ಬಟ್ಲರ್ ಉತ್ತರಿಸುತ್ತಾ : ಅವರ ಹೆಂಡತಿಯನ್ನು ನೋಡಿಕೊಳ್ಳಲಿ ಎನ್ನುವ ಕಾರಣಕ್ಕಾಗಿಯೇ, ಕಳೆದ ಬೇಸಿಗೆಯಲ್ಲಿಯೇ ಅವರನ್ನು ಕೆಲವು ದಿನಗಳ ಕಾಲ ಬಿಡುಗಡೆ ಮಾಡಿದ್ದೆವು. ಈಗ ಅವರನ್ನು ಆಸ್ಪತ್ರಗೆ ಹತ್ತಿರ ಇರುವ ಜೈಲಿಗೆ ವರ್ಗಾವಣೆ ಮಾಡಲಾಗಿದ್ದು, ವಾರದಲ್ಲಿ ಒಂದು ಅಥವಾ ಎರಡು ದಿನ ವೈದ್ಯರ ಸಲಹೆಯಂತೆ ಅವರು ಹೋಗಿ ನೋಡಿಕೊಂಡು ಬರಲು ಅನುಮತಿ ನೀಡಲಾಗಿದೆ.

ಸರ್ಕಾರದ ವಿರುದ್ಧದ ಪಿತೂರಿಯ ಆರೋಪದಲ್ಲಿ ನೆಹರೂ ಎರಡು ವರ್ಷಗಳ ಸಾಮಾನ್ಯ ಶಿಕ್ಷೆಗೆ ಗುರಿಯಾಗಿದ್ದರು. ಆ ಜೈಲು ಶಿಕ್ಷೆಯ ಅವಧಿಯ ಕುರಿತು ನಡೆದ ಚರ್ಚೆಯಿದು. ಕೇಸ್ ದಾಖಲಾಗಿ ಬಂಧನವಾದ ನಂತರ, ನೆಹರೂ ಅವರ ಭಾವನೆಗಳಿಗೆ ಘಾಸಿ(!)ಯಾಗುವುದಾದರೆ ಪ್ರಕರಣದ ವಿಚಾರಣೆಯನ್ನು ಖಾಸಗಿಯಾಗಿಯೇ ಮಾಡುವ ಆಫರ್ ಅನ್ನು ಬ್ರಿಟಿಷ್ ಅಧಿಕಾರಿ ನೀಡುತ್ತಾರೆ! ಕಡೆಗೆ, 6 ತಿಂಗಳ ಮೊದಲೇ ಬಿಡುಗಡೆ ಮಾಡುತ್ತದೆ ಬ್ರಿಟಿಷ್ ಸರ್ಕಾರ. ನೆಹರೂ ಅವರ ಮೇಲೆ ಇಂತಹ ಪ್ರೀತಿಯನ್ನು ಇದೇ ಮೊದಲ ಬಾರಿಯೇನೂ ಬ್ರಿಟಿಷ್ ಸರ್ಕಾರ ತೋರಿಸಿದ್ದಲ್ಲ.

ಅಕ್ಟೋಬರ್ 24 ,1930 ರಂದು ಕೂಡ ಎರಡು ವರ್ಷಗಳ ಸಾಮಾನ್ಯ ಶಿಕ್ಷೆಗೆ ಗುರಿಯಾದಗಲೂ, ಅವರನ್ನು ಕೇವಲ 97 ದಿನಗಳಲ್ಲೇ ಬಿಡುಗಡೆ ಮಾಡಿತ್ತು ಬ್ರಿಟಿಷ್ ಸರ್ಕಾರ. ಬ್ರಿಟಿಷರಿಗೆ ನೆಹರೂ ಅವರ ಮೇಲೆ ಅದಿನ್ನೆಂತಹ ಪ್ರೀತಿ! ಅಥವಾ ನೆಹರೂ ಅವರು ಜೈಲಿನ ಒಳಗಿದ್ದರೂ, ಹೊರಗಿದ್ದರೂ ಬ್ರಿಟಿಷ್ ಸಾಮ್ರಾಜ್ಯಕ್ಕೆ ಅಪಾಯಕಾರಿಯಲ್ಲ ಅಂತಲೇ? ನೆಹರೂ ಅವರ ರಾಜಕೀಯ ಜೀವನದಲ್ಲಿ, ಒಂದೇ ಕೇಸಿನಲ್ಲಿ ಗರಿಷ್ಟ ಜೈಲು ವಾಸ ಅಂತ ಅವರಿಗೆ ಆಗಿದ್ದು ಕ್ವಿಟ್ ಇಂಡಿಯಾ ಎಂಬ Failed ಚಳವಳಿಯಲ್ಲಿ. 2 ವರ್ಷ 8 ತಿಂಗಳ ಸೆರೆವಾಸವದು. ಹಾಗೆಂದು ನೆಹರೂ ಅವರ ಸೆರೆವಾಸಗಳೇನು ಸೆಲ್ಯುಲಾರ್ ಜೈಲಿನಂತೆ ಒಂಟಿಯಾಗಿ, ಕತ್ತಲೆ ಹಾಗೂ ಕೆಟ್ಟ ಸೆಲ್ಲಿನೊಳಗಿನ ವಾಸವೇನು ಆಗಿರಲಿಲ್ಲ. ಮೇಲಿನ ಉದಾಹರಣೆಯಂತೆ ಬ್ರಿಟಿಷರ ಉದಾರತೆ ಹೇಗಾದರೂ ನೆಹರೂ ಅವರಿಗೆ ಸಿಗುತ್ತಿತ್ತು. ಉದಾಹರಣೆಗೆ, ದಂಡಿ ಸತ್ಯಾಗ್ರಹದಲ್ಲಿ ಪಾಲ್ಗೊಂಡ ನಂತರ ನೆಹರೂ ಅವರನ್ನು ನೈನಿಯಲ್ಲಿ ಜೈಲಿಗೆ ಹಾಕಿದರು. ಜೈಲಿನಲ್ಲಾದರೂ ಬಡಪಾಯಿ ನೆಹರೂ ಅವರಿಗೆ ಹೆಚ್ಚೇನು ಸೌಲಭ್ಯ ಸಿಗಲಿಲ್ಲ. ಅಬ್ಬಬ್ಬಾ ಎಂದರೆ ಒಬ್ಬ ಖೈದಿಯನ್ನು ಅವರ ಅಡುಗೆಯವನನ್ನಾಗಿ ನೇಮಿಸಲಾಯಿತು, ಗಾಳಿ ಬೀಸಲು ಮತ್ತೊಬ್ಬ ಖೈದಿ ನಿಯುಕ್ತಿಯಾದ. ಜೈಲಿನ ಊಟ ತಿಂದು ನಾಲಗೆ ಜಡ್ಡುಗಟ್ಟದಿರಲೆಂದು ಮನೆಯ ಊಟ, ಹಣ್ಣು ಹಂಪಲು ತರಿಸಿಕೊಳ್ಳುವ ಅವಕಾಶ ನೀಡಲಾಗಿತ್ತು.ನೆಹರೂ ಅವರ ದರ್ಶನಕ್ಕೆಂದು ಬರುತ್ತಿದ್ದ ಖೈದಿಗಳು ಬೇಕಾದ ಸಣ್ಣಪುಟ್ಟ ಸೇವೆಗಳನ್ನು ಮಾಡಿಕೊಡುತ್ತಿದ್ದರು. ತೀರಾ ನೆಹರೂ ಅವರ ಭಾಷೆಯಲ್ಲಿಯೇ ಹೇಳುವುದಾದರೆ, ಶೇ.95 ರಾಜಕೀಯ ಖೈದಿಗಳಿಗೆ ಇಂತಹ ಸೌಲಭ್ಯಗಳು ಸಿಗುತ್ತಿರಲಿಲ್ಲ. ನೆಹರೂ-ಗಾಂಧಿಯಂತವರು 5% ನೊಳಗಿದ್ದವರು. ಬ್ರಿಟಿಷರ ಪಾಲಿಗೆ ನಿರುಪದ್ರವಿಗಳಾಗಿರಬಹುದೇ?

ಮತ್ತಷ್ಟು ಓದು »
8
ಜುಲೈ

ಭಾರತ ಮತ್ತೊಂದು ಪಾಕಿಸ್ತಾನವಾಗಬಾರದು ಎಂದರೆ…

– ರಾಕೇಶ್ ಶೆಟ್ಟಿ

ಜೂನ್ 28ರ ಮಧ್ಯಾಹ್ನ ರಾಜಸ್ಥಾನದ ಉದಯಪುರದಲ್ಲಿ ನಡೆದ ಭೀಕರ ಹತ್ಯೆಯ ಘಟನೆಯಿಂದ ಸಾಮಾನ್ಯ ಹಿಂದೂ ತಲ್ಲಣಗೊಂಡಿದ್ದಾನೆ, ಆಕ್ರೋಷಿತನಾಗಿದ್ದಾನೆ. ‘ನಂಬಿಸಿ ಕತ್ತು ಕೊಯ್ಯುವುದು’ ಎಂದರೇನು ಎನ್ನುವುದನ್ನು ಇಸ್ಲಾಮಿಕ್ ಉಗ್ರರು ಕಮಲೇಶ್ ತಿವಾರಿಯ ನಂತರ, ಉದಯಪುರದ ಬಡ ಟೈಲರ್ ಕನ್ನಯ್ಯ ಲಾಲ್ ಅವರ ಹತ್ಯೆಯ ಮೂಲಕ ತೋರಿಸಿಕೊಟ್ಟಿದ್ದಾರೆ. ಕಮಲೇಶ್ ತಿವಾರಿಯವರ ಹಂತಕರಾದ ಫರಿದುದ್ಡೀನ್ ಶೇಖ್, ಅಶ್ಫಾಖ್ ಶೇಖ್ ಅವರು ತಮ್ಮನ್ನು ಹಿಂದೂಗಳೆಂದು ಫೇಸ್ಬುಕ್ಕಿನಲ್ಲಿ ಪರಿಚಯ ಮಾಡಿ, ಸ್ನೇಹ ಸಂಪಾದಿಸಿ, ಕೇಸರಿ ಕುರ್ತಾ ಧರಿಸಿ, ಸ್ವೀಟ್ ಬಾಕ್ಸಿನೊಳಗೆ ರಿವಾಲ್ವರ್ ಹಾಗೂ ಚಾಕು ಹಿಡಿದು ಬಂದಿದ್ದರು. ಕಮಲೇಶ್ ತಿವಾರಿಯವರ ಸಹಾಯಕನನ್ನು ಸಿಗರೇಟ್ ತರುವಂತೆ ಕಳುಹಿಸಿ, ಏಕಾಂಗಿಯಾಗಿದ್ದ ಕಮಲೇಶ್ ತಿವಾರಿಯರ ಮೇಲೆ ಎರಗಿ ಕತ್ತು ಸೀಳಿ, ಗುಂಡು ಹಾರಿಸಿ ಕೊಲ್ಲಲಾಗಿತ್ತು. ಮರಣೋತ್ತರ ವರದಿಯ ಪ್ರಕಾರ 15 ಬಾರಿ ಚುಚ್ಚಿ ಕೊಲ್ಲಲಾಗಿತ್ತು. 1926ರಲ್ಲಿ ಅಬ್ದುಲ್ ರಶೀದ್ ಕೂಡ ಹೀಗೆಯೇ ಸಂಭಾವಿತನಂತೆ ಬಂದು, ಸಹಾಯಕನನ್ನು ನೀರು ತರಲು ಕಳುಹಿಸಿ ಸ್ವಾಮಿ ಶ್ರದ್ದಾನಂದರನ್ನು ಗುಂಡಿಕ್ಕಿ ಕೊಂದಿದ್ದ.

ಕನ್ನಯ್ಯ ಲಾಲ್ ಅವರ ಹತ್ಯೆ ನಡೆದಿದ್ದೂ ಹೀಗೆಯೇ. ಬಟ್ಟೆ ಹೊಲಿಸುವವರ ಸೋಗಿನಲ್ಲಿ ಬಂದ ಮೊಹಮ್ಮದ್ ಗೌಸ್ , ಮೊಹಮ್ಮದ್ ರಿಯಾಜ್ , ಅಳತೆ ತೆಗೆದುಕೊಳ್ಳುವಾಗ ಕನ್ನಯ್ಯಲಾಲ್ ಅವರ ಕತ್ತು ಕೊಯ್ದರು. 21 ಬಾರಿ ಚುಚ್ಚಿ ಕೊಲ್ಲಲಾಗಿದೆ ಎಂದಿದೆ ಮರಣೋತ್ತರ ವರದಿ. ಬಹುಶಃ ಹಂತಕರು ವಿಡಿಯೋವನ್ನು ವೈರಲ್ ಮಾಡದೇ ಇದ್ದಿದ್ದರೆ, ರಾಜಸ್ಥಾನದ ಕಾಂಗ್ರೆಸ್ ಸರ್ಕಾರ ಇದಕ್ಕೊಂದು ಬೇರೆ ಕತೆ ಕಟ್ಟಿ ಮುಗಿಸುತ್ತಿತ್ತು. ನಂತರ ತಿಳಿದು ಬಂದ ವಿಷಯದ ಪ್ರಕಾರ, ಕನ್ನಯ್ಯ ಲಾಲ್ ಅವರು ಕೇವಲ ನೂಪುರ್ ಶರ್ಮ ಅವರನ್ನು ಬೆಂಬಲಿಸಿದ ಕಾರಣಕ್ಕೆ ಬಂಧನವಾಗಿ, ಬಿಡುಗಡೆಯಾಗಿ ಬಂದ ನಂತರ, ತನ್ನ ಪ್ರಾಣಕ್ಕೆ ಅಪಾಯವಿದೆ ಎಂದು ಪೋಲಿಸ್ ರಕ್ಷಣೆ ಕೋರಿದ್ದರು. ಒಬ್ಬ ಬಡವನ ಮನವಿಯನ್ನು ಪೋಲಿಸರು ಹೇಗೆ ತಾತ್ಸಾರದಿಂದ ಸ್ವೀಕರಿಸುತ್ತಾರೋ, ಹಾಗೆಯೇ ಸ್ವೀಕರಿಸಿ ಕಸದ ಬುಟ್ಟಿಯ ಜಾಗ ತೋರಿಸಿದರು. ಅಂದ ಹಾಗೆ, ಕನ್ನಯ್ಯ ಲಾಲ್ ಅವರ ಕುರಿತ ಮಾಹಿತಿಯನ್ನು ಹಂಚಿಕೊಂಡವನು ಯಾರೋ ಅನಾಮಿಕನಲ್ಲ. ಕನ್ನಯ್ಯ ಅವರ ಪಕ್ಕದ ಮನೆಯ ನಜೀಂ. ನಜೀಮನಿಗೆ ನೆರೆ ಮನೆಯವನ ಸ್ನೇಹಕ್ಕಿಂತ ಆತನ ಇಸ್ಲಾಂ ಮುಖ್ಯವಾಗಿತ್ತು. ನಂಬಿ ಕೆಟ್ಟವನು ಕನ್ನಯ್ಯ. ಕಾಶ್ಮೀರದ ಪಂಡಿತರ ಹತ್ಯೆಯಲ್ಲೂ ನೆರೆಮನೆಯವರೇ ಹೇಗೆ ಸಹಾಯ ಮಾಡಿದ್ದರು ಎನ್ನುವುದನ್ನು, ಕಾಶ್ಮೀರ್ ಫೈಲ್ಸ್ ಸಿನಿಮಾದಲ್ಲಿ ಇಡೀ ಭಾರತವೇ ನೋಡಿದೆ. ಜೊತೆಗಿದ್ದವರಿಗೆ ಮೂಹೂರ್ತ ಇಡುವ ಧೂರ್ತ ಮನಸ್ಥಿತಿಯನ್ನು ಇವರು ಕಲಿಯುವುದು ಎಲ್ಲಿಂದ?

ಮತ್ತಷ್ಟು ಓದು »
28
ಮೇ

ಸ್ವದೇಶ, ಸ್ವಧರ್ಮ, ಸ್ವಾತಂತ್ರ್ಯಗಳ ನೈಜದನಿ ವೀರ್ ಸಾವರ್ಕರ್

ಲೇಖಕರು : ಬಿ ಎಸ್‌ ಜಯಪ್ರಕಾಶ ನಾರಾಯಣ
ಪತ್ರಕರ್ತರು, ಖ್ಯಾತ ಅನುವಾದಕರು
ವೈಭವ್‌ ಪುರಂದರೆಯವರ ವೀರ್‌ ಸಾವರ್ಕರ್‌ ಪುಸ್ತಕವನ್ನು ಕನ್ನಡಕ್ಕೆ ತಂದಿದ್ದಾರೆ.

ಸಾವರ್ಕರ್ ಜನ್ಮದಿನ (ಮೇ 28)
ವಿನಾಯಕ ದಾಮೋದರ ಸಾವರ್ಕರ್ ಎನ್ನುವ ಹೆಸರೇ ಮೈಮನಗಳಲ್ಲಿ ದೇಶಹಿತದ ಸಂಕಲ್ಪವನ್ನು ತಾಳುವಂತೆ ಮಾಡುವಂಥದ್ದು! ಇಂದು ಅವರಿದ್ದಿದ್ದರೆ 140ನೇ ವಸಂತಕ್ಕೆ ಕಾಲಿಡುತ್ತಿದ್ದರು. ವ್ಯವಸ್ಥಿತ ಅಪಪ್ರಚಾರ ಮತ್ತು ಕ್ಷುಲ್ಲಕ ಶಕ್ತಿಗಳು ಸೃಷ್ಟಿಸಿರುವ ವಿಸ್ಮೃತಿಯಲ್ಲಿ ಸಾವರ್ಕರ್ ಅವರ ಕ್ಷಾತ್ರತೇಜಸ್ಸಿಗೆ ಅನ್ಯಾಯವೆಸಗಲಾಗಿದೆ. ಅವರ ಹುಟ್ಟುಹಬ್ಬದ ನೆಪದಲ್ಲಿ ಇಲ್ಲಿ ಅನಾವರಣಗೊಂಡಿದೆ, ಸಾವರ್ಕರ್ ಅವರ ಸಾಚಾ ಕಥನ!

ಸ್ವತಂತ್ರ ಭಾರತದ ಇತಿಹಾಸದಲ್ಲಿ ತುಂಬಾ ವ್ಯವಸ್ಥಿತವಾಗಿ ಹಲವು ವಿಸ್ಮೃತಿಗಳನ್ನೂ ಹೇವರಿಕೆಗಳನ್ನೂ ಸೃಷ್ಟಿಸಲಾಗಿದೆ. ಇದಕ್ಕಾಗಿ, ನಮ್ಮನ್ನು ಬಹುಕಾಲ ಆಳಿದ ಸರಕಾರಗಳು ಸೆಕ್ಯುಲರಿಸಂ, ಧರ್ಮನಿರಪೇಕ್ಷತೆ, ಮೈನಾರಿಟಿಯಿಸಂ ಇತ್ಯಾದಿ ವಿಭ್ರಮೆಗಳನ್ನು ಜನರ ಮನಸ್ಸಿನಲ್ಲಿ ಬಿತ್ತಿವೆ; ತಮ್ಮ ಹಿಡನ್ ಅಜೆಂಡಾ ಸಾಧಿಸಲು ಅವು ರಾಜಕೀಯ ಅಧಿಕಾರ, ಅಕಾಡೆಮಿಕ್ ಸೌಖ್ಯ, ತಾವೇ ಹುಟ್ಟುಹಾಕಿದ ನೂರಾರು ಸಂಘ ಸಂಸ್ಥೆಗಳು/ವಿಶ್ವವಿದ್ಯಾಲಯಗಳನ್ನು ನಿರ್ಲಜ್ಜವಾಗಿ ದುರ್ಬಳಕೆ ಮಾಡಿಕೊಂಡಿವೆ. ಇಷ್ಟೇ ಅಲ್ಲ, ಈ ಕುತಂತ್ರಗಳ ಮೂಲಕ ಸ್ವಧರ್ಮ ಮತ್ತು ಸ್ವದೇಶಗಳ ಬಗ್ಗೆ ಅಸಹ್ಯದ/ಕೀಳರಿಮೆಯ ಭಾವನೆ ಬರುವಂತೆ ಮಾಡುವಲ್ಲಿ ಈ ಶಕ್ತಿಗಳು ನಿರತವಾಗಿದ್ದವು. ಜತೆಯಲ್ಲೇ, ಭಾರತದ ಚರಿತ್ರೆಯ ಕ್ಷಾತ್ರ ತೇಜಸ್ಸಿನ ಉಜ್ಜ್ವಲ ಅಧ್ಯಾಯಗಳನ್ನು ಮರೆಮಾಚುವ ವಿಕೃತಿಯನ್ನು ಇವು ಮೈಗೂಡಿಸಿಕೊಂಡಿದ್ದವು. ದುರಂತವೆಂದರೆ, ನಾಲ್ಕೈದು ದಶಕಗಳ ಕಾಲ ಈ ʼಅತೀ ಬುದ್ಧಿವಂತಿಕೆ’ಯ ಮತ್ತು ಆತ್ಮನಾಶಕವಾದ ಕೆಲಸಗಳೆರಡೂ ಪ್ರಶ್ನಾತೀತವಾಗಿದ್ದವು! 

ಭಾರತದ ಇತಿಹಾಸದಲ್ಲಿ ಇಂತಹ ವ್ಯವಸ್ಥಿತ ಅನ್ಯಾಯಕ್ಕೊಳಗಾದವರಲ್ಲಿ `ಸ್ವಾತಂತ್ರ್ಯವೀರ’ ವಿನಾಯಕ ದಾಮೋದರ ಸಾವರ್ಕರ್ ಕೂಡ ಒಬ್ಬರು. ಮಹಾರಾಷ್ಟ್ರದ ನಾಸಿಕ್ ಬಳಿಯ ಭಾಗೂರಿನಲ್ಲಿ ತಮ್ಮ ಚಿಕ್ಕಂದಿನಲ್ಲೇ `ಮಿತ್ರಮೇಳ’ವನ್ನು ಕಟ್ಟುವ ಮೂಲಕ, ಸಾವರ್ಕರ್ ದೇಶಾಭಿಮಾನದ ಎರಕದಲ್ಲಿ ಬೆಳೆದು ಬಂದವರು. ವಯಸ್ಕರಾದ ಮೇಲೆ, ಆ ಕಾಲದ ಎಲ್ಲ ಪ್ರತಿಭಾವಂತರಂತೆಯೇ ಲಂಡನ್ನಿಗೆ ಹೋಗಿ ಬ್ಯಾರಿಸ್ಟರ್ ಪದವಿ ಪಡೆದ ಅವರು, ತಮ್ಮ ಹೆಚ್ಚಿನ ಸಮಕಾಲೀನರಂತೆ ಲೌಕಿಕ ಸುಖದ ಹಾದಿಯಲ್ಲಿ ಹೋಗಲಿಲ್ಲ. ಬದಲಿಗೆ, ಅದನ್ನು ಪ್ರಜ್ಞಾಪೂರ್ವಕವಾಗಿ ನಿರಾಕರಿಸಿ, ಬ್ಯಾರಿಸ್ಟರ್ ಪದವಿಗೆ ಓದುತ್ತಿದ್ದ ದಿನಗಳಲ್ಲೇ ದೇಶದ ಸ್ವಾತಂತ್ರ್ಯಪ್ರಾಪ್ತಿಗಾಗಿ ಬ್ರಿಟಿಷರ ವಿರುದ್ಧ ಕ್ರಾಂತಿಕಾರಿ ಹೋರಾಟದ ಮಾರ್ಗದಲ್ಲಿ ಹೊರಟರು. ತಮ್ಮ ಪ್ರಖರ ವಿಚಾರಗಳ ಮೂಲಕ ಮದನ್ ಲಾಲ್ ಧಿಂಗ್ರಾ ತರಹದ ಕ್ರಾಂತಿಕಾರಿಗಳನ್ನು ಅವರು ರೂಪಿಸಿದರು. ಲಂಡನ್ನಿನಲ್ಲಿದ್ದ `ಇಂಡಿಯಾ ಹೌಸ್’ ಅನ್ನು ತಮ್ಮ ಚಟುವಟಿಕೆಗಳ ಆಡುಂಬೊಲವನ್ನಾಗಿ ಮಾಡಿಕೊಂಡು, ಬ್ರಿಟಿಷರಿಗೆ ಸಿಂಹಸ್ವಪ್ನರಾಗಿದ್ದರು. ಅದಕ್ಕೂ ಮೊದಲು, ಭಾರತದಲ್ಲಿ ಓದುತ್ತಿದ್ದಾಗ ಲೋಕಮಾನ್ಯ ಬಾಲಗಂಗಾಧರ ತಿಲಕರ ಅನುಯಾಯಿಯಾಗಿ ಸ್ವದೇಶಿ ಚಳವಳಿಯನ್ನು ಸಂಘಟಿಸಿ, ಸಂಚಲನ ಸೃಷ್ಟಿಸಿದ್ದರು. ಅವರು ಲಂಡನ್ನಿನಲ್ಲಿದ್ದ ದಿನಗಳಲ್ಲಿ ತಾಯಿ ಭಾರತಿಯ ಸ್ವಾತಂತ್ರ್ಯಕ್ಕಾಗಿ ನಡೆಸಿದ ಚಟುವಟಿಕೆಗಳ ವೃತ್ತಾಂತವೇ ರೋಮಾಂಚಕ! ದೇಶವಾಸಿಗಳು ಸ್ವಾತಂತ್ರ್ಯಕ್ಕಾಗಿ 1857ರಲ್ಲಿ ನಡೆಸಿದ ಹೋರಾಟವನ್ನು `ಭಾರತದ ಪ್ರಪ್ರಥಮ ಸ್ವಾತಂತ್ರ್ಯ ಹೋರಾಟ’ ಎಂದು ಬಣ್ಣಿಸಿ, ಅದರ ಬಗ್ಗೆ ಸಮಗ್ರ ಗ್ರಂಥವನ್ನು ಬರೆದ ಹೆಗ್ಗಳಿಕೆ ಸಾವರ್ಕರ್ ಅವರದು. ವಾಸ್ತವವಾಗಿ, ಆ ದಿನಗಳಲ್ಲಿ ಲಂಡನ್ನಿನಲ್ಲಿ ಇವರಂತೆಯೇ ಬ್ಯಾರಿಸ್ಟರ್ ಪದವಿಗೆ ಓದುತ್ತಿದ್ದ ಜವಾಹರಲಾಲ್ ನೆಹರು ಕೂಡ ಈ ಗ್ರಂಥವನ್ನು ಅಪಾರವಾಗಿ ಮೆಚ್ಚಿಕೊಂಡು, ತಮ್ಮ ತಂದೆ ಮೋತಿಲಾಲ್ ನೆಹರು ಅವರಿಗೆ ಪತ್ರ ಬರೆದಿದ್ದಕ್ಕೆ ಪುರಾವೆಗಳಿವೆ. ವಿಷಾದದ ಸಂಗತಿಯೆಂದರೆ, ಲಂಡನ್ನಿನಿಂದ ಭಾರತಕ್ಕೆ ವಾಪಸ್ ಬಂದಮೇಲೆ, ನೆಹರು ಅವರು ಸಾವರ್ಕರ್ ಬಗ್ಗೆ ವಿರೋಧ ಬೆಳೆಸಿಕೊಂಡು ಬಿಟ್ಟರು. ಇದು ಕೊನೆಗೆ ಎಲ್ಲಿಯವರೆಗೆ ಹೋಯಿತೆಂದರೆ, ತುಷ್ಟೀಕರಣದ ರಾಜಕಾರಣ ಮತ್ತು ದೇಶವಿಭಜನಗಾಗಿ ಮುಸ್ಲಿಂ ಲೀಗ್ ಮಾಡುತ್ತಿದ್ದ ಆಗ್ರಹಗಳನ್ನು ವಿರೋಧಿಸುತ್ತಿದ್ದ ಸಾವರ್ಕರ್ ಅವರಿಗೆ ಕೋಮುವಾದಿ, ಮೂಲಭೂತವಾದಿ, ದೇಶ ವಿಭಜಕ, ಗಾಂಧಿಯವರ ಹತ್ಯೆಯ ಹಿಂದಿನ ಪಾತ್ರಧಾರಿ ಎನ್ನುವ ರೋಗಗ್ರಸ್ತ ಹಣೆಪಟ್ಟಿಗಳನ್ನು ಹಚ್ಚಲಾಯಿತು. ಹಾಗಾದರೆ, ಸಾವರ್ಕರ್  ನಿಜಕ್ಕೂ ಏನಾಗಿದ್ದರು?

ಸಾವರ್ಕರ್ ಬಗ್ಗೆ ರಾಜಕೀಯ ವಿರೋಧಿಗಳು ಆಧಾರರಹಿತ ಆರೋಪಗಳನ್ನು ಮಾಡುತ್ತಿದ್ದಾರೆ. ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಅವರ ಕೊಡುಗೆಯೇನೂ ಇಲ್ಲ ಎನ್ನುತ್ತಿದ್ದಾರೆ. ಅಂಡಮಾನಿನ ಜೈಲಿನಲ್ಲಿ ಅವರು ಕರಾಳ `ಕಾಲಾಪಾನಿ’ ಶಿಕ್ಷೆ ಅನುಭವಿಸುತ್ತಿದ್ದಾಗ ಬ್ರಿಟಿಷರಿಗೆ ಬರೆದ  ಕ್ಷಮಾಪಣಾ ಧಾಟಿಯ  ಜಾಣ್ಮೆಯ ಪತ್ರಗಳನ್ನಿಟ್ಟುಕೊಂಡು ಅವರನ್ನು ದೇಶದ್ರೋಹಿಯೆಂದು ಬಿಂಬಿಸಿದ್ದಾರೆ. ಅವರೊಬ್ಬ ಬ್ರಾಹ್ಮಣವಾದಿಯಾಗಿದ್ದರು ಎಂದು ರಚ್ಚೆ ಮಾಡುತ್ತಿರುವವರ ಸಂತತಿಯೂ ಇದೆ. ಹಾಗಾದರೆ, ಇವುಗಳ ಸತ್ಯಾಸತ್ಯತೆ ಏನು? ಇಂತ ಮಿಥ್ಯೆಗಳನ್ನು ಸತ್ಯದ ಒರೆಗಲ್ಲಿಗೆ ಹಚ್ಚಿ, ಭಗ್ನಗೊಳಿಸಲು ಇದು ಸಕಾಲ. ಈ ದೃಷ್ಟಿಯಿಂದ ನೋಡಿದರೆ, ಇದು ಭಾರತದ ನೈಜ ಚರಿತ್ರೆಯು ವಿಕೃತಿ ಮತ್ತು ವಿಸ್ಮೃತಿಗಳ ಪೊರೆಯನ್ನು ಕಿತ್ತೆಸೆದು, ವಸ್ತುನಿಷ್ಠ ಆಕೃತಿಯನ್ನು ಪಡೆದುಕೊಳ್ಳುತ್ತಿರುವ ನಿರ್ಣಾಯಕ ಕಾಲಘಟ್ಟವಾಗಿದೆ. 

ದೇಶದಲ್ಲಿ ಇಂದು ʼಹಿಂದುತ್ವʼದ ಅಲೆ ಪ್ರಖರವಾಗಿದೆ. ಇದರ ಕೀರ್ತಿಯಲ್ಲಿ ಹೆಚ್ಚಿನ ಪಾಲು ಸಲ್ಲಬೇಕಾದ್ದು ಸಾವರ್ಕರ್ ಅವರಿಗೆ! ಏಕೆಂದರೆ, ಈ ಪರಿಕಲ್ಪನೆ ಮತ್ತು ಸಾಂಸ್ಕೃತಿಕ ಅಸ್ಮಿತೆಯನ್ನು ವ್ಯಾಪಕವಾಗಿ ಮುನ್ನೆಲೆಗೆ ತಂದವರೇ ಅವರು. ಇದರ ಜತೆಗೆ ಅವರು, ಹಿಂದೂ ಮಹಾಸಭಾದ ಅಧ್ಯಕ್ಷರಾಗಿ ದೇಶದಲ್ಲಿ ಎಬ್ಬಿಸಿದ ಹಿಂದೂ ಅಸ್ಮಿತೆಯ ನಂದಾದೀಪ ಈಗ ಜಾಜ್ವಲ್ಯಮಾನವಾಗಿ ಬೆಳಗುತ್ತಿದೆ. ಅದರ ಪ್ರಭೆಯ ಮುಂದೆ ಬಣ್ಣಬಣ್ಣದ ತರಹೇವಾರಿ ಸಿದ್ಧಾಂತಗಳ ವೇಷ ಕಳಚಿ ಬಿದ್ದಿದೆ. 

ಸಾವರ್ಕರ್ ಅವರ ಬಹುಮುಖಿ ಮತ್ತು ಸಮಾಜಪರ ವ್ಯಕ್ತಿತ್ವದ ಇನ್ನೊಂದಿಷ್ಟು ಆಯಾಮಗಳನ್ನು ಇಲ್ಲಿ ನೆನೆಯಬೇಕು. ನಮಗೆಲ್ಲ ಗೊತ್ತಿರುವಂತೆ, ದೇಶದ ಸ್ವಾತಂತ್ರ್ಯಕ್ಕಾಗಿ ಕಾಂಗ್ರೆಸ್ ಪಕ್ಷ ಮತ್ತು ಅದರ ಬೆರಳೆಣಿಕೆಯಷ್ಟು ನಾಯಕರು ಮಾತ್ರ ಶ್ರಮಿಸಿದರು ಎನ್ನುವ ಚಿತ್ರಣ ಹಲವು ತಲೆಮಾರುಗಳ ಜನರಲ್ಲಿ ಬೇರೂರಿದೆ. ಅಂದಂತೆ, ಕಾಂಗ್ರೆಸ್ ಪಕ್ಷವು ಬ್ರಿಟಿಷರಿಂದ ಭಾರತಕ್ಕೆ ಪೂರ್ಣಸ್ವಾತಂತ್ರ್ಯಕ್ಕಾಗಿ ದನಿಯೆತ್ತಿದ್ದು 1929ರಷ್ಟು ತಡವಾಗಿ! ಅಲ್ಲಿಯವರೆಗೂ ಆ ಪಕ್ಷದ ನಾಯಕರೆಲ್ಲ ಭಾರತವು ಬ್ರಿಟಿಷರ ಅಧೀನದಲ್ಲೇ (ಡೊಮಿನಿಯನ್ ಸ್ಟೇಟ್) ಮುಂದುವರಿಯುವುದರ ಪರವಾಗಿದ್ದರು. ಆದರೆ, ಸಾವರ್ಕರ್ ಇದಕ್ಕೂ 20 ವರ್ಷಗಳ ಮುಂಚೆಯೇ -1909ರಲ್ಲೇ- `ಸಂಪೂರ್ಣ ಸ್ವಾತಂತ್ರ್ಯವು ನಮ್ಮ ಹಕ್ಕು! ಇದರಲ್ಲಿ ಗುಲಗಂಜಿಯಷ್ಟು ಕಡಿಮೆಯಾದರೂ ನಾವು ಅದನ್ನು ಒಪ್ಪುವುದಿಲ್ಲ!!’ ಎಂದು ಘರ್ಜಿಸಿದ್ದರು. ಇದನ್ನು ಸಹಿಸದ ಬ್ರಿಟಿಷರು, ಸಾವರ್ಕರ್ ಅವರನ್ನು ಅಂಡಮಾನ್ ಜೈಲಿಗೆ ತಳ್ಳಿ, 50 ವರ್ಷಗಳ ಜೀವಾವಧಿ ಶಿಕ್ಷೆಯನ್ನು ವಿಧಿಸಿದರು. ಅಲ್ಲಿ ಈ `ಸ್ವಾತಂತ್ರ್ಯವೀರ’ ಅನುಭವಿಸಿದ ಯಮಯಾತನೆ ವರ್ಣಿಸಲಸದಳ. 

ಅಂಡಮಾನಿನಿಂದ ಬಿಡುಗಡೆಯಾಗಿ ಬಂದಮೇಲೂ ಸಾವರ್ಕರ್ ಅವರಿಗೆ ಇತರರಂತೆ ಮುಕ್ತವಾಗಿ ಓಡಾಡಲು ಬ್ರಿಟಿಷರು ಅವಕಾಶ ಕೊಡಲಿಲ್ಲ. ಬದಲಿಗೆ, ಮಹಾರಾಷ್ಟ್ರದ ರತ್ನಗಿರಿಯಲ್ಲಿ ಅವರನ್ನು 14-15 ವರ್ಷಗಳ ಕಾಲ ನಿರ್ಬಂಧಿತ ವಾಸದಲ್ಲಿ ಇಡಲಾಗಿತ್ತು! ಆದರೂ ಭಾರತದ ಶ್ರೇಯಸ್ಸಿಗೆ ತುಡಿಯುತ್ತಿದ್ದ ಅವರು ಆ ಇತಿಮಿತಿಗಳನ್ನು ಮೆಟ್ಟಿ ನಿಂತು, ಹಲವು ಶ್ರೇಯಸ್ಕರವಾದ ಉಪಕ್ರಮಗಳನ್ನು ಕೈಗೊಂಡರು. ಈ ನಿಟ್ಟಿನಲ್ಲಿ ಮೊದಲು ಅವರು ಕೈಗೆತ್ತಿಕೊಂಡಿದ್ದು, ಅಸ್ಪೃಶ್ಯತೆ ಮತ್ತು ಜಾತಿ ತಾರತಮ್ಯ ನಿವಾರಣೆಯ ಕೆಲಸ. ಇದಕ್ಕಾಗಿ ಅವರು ದಲಿತ ಸಮುದಾಯಕ್ಕೆ ಸೇರಿದ ಮಹಾಡ್ ದಂಪತಿಗಳ ಪಾದಪೂಜೆ ಮಾಡಿದರು. ದೇವಸ್ಥಾನದ ಗಣೇಶೋತ್ಸವಗಳಲ್ಲಿ ದಲಿತರಿಗೆ ಅಗ್ರಮನ್ನಣೆ ಕೊಡಿಸಿದರು. ಜಾತಿಪಂಥಗಳ ಭೇದವಿಲ್ಲದ ಭಜನಾ ಮಂಡಲಿಗಳನ್ನು ಏರ್ಪಡಿಸಿದರು. ಶಾಲೆಗಳನ್ನು ಕಟ್ಟಿಸಿದರು. ದಲಿತರ ಮಕ್ಕಳಿಗೆ ಪುಸ್ತಕಗಳನ್ನು ಹಂಚಿದರು. ಇವೆಲ್ಲಕ್ಕೂ ಕಲಶವಿಟ್ಟಂತೆ, ದಲಿತರಿಗೆ ದೇವಸ್ಥಾನ ಪ್ರವೇಶದ ಮುಕ್ತ ಹಕ್ಕು ಎಷ್ಟೊಂದು ಅಗತ್ಯವೆನ್ನುವುದನ್ನು ಮನಗಂಡಿದ್ದ ಅವರು, ಅವರಿಗೆಂದೇ `ಪತಿತ ಪಾವನ ಮಂದಿರ’ವನ್ನೇ ಕಟ್ಟಿಸಿದರು! 

ಎಲ್ಲವೂ ಅವರು ಅಂದುಕೊಂಡಂತೆಯೇ ನಡೆದಿದ್ದರೆ, ಬಾಬಾಸಾಹೇಬ್ ಅಂಬೇಡ್ಕರರೇ ಈ ಮಂದಿರವನ್ನು ಉದ್ಘಾಟಿಸಬೇಕಿತ್ತು. ಆದರೆ, ಪೂರ್ವನಿಗದಿತ ಕಾರ್ಯಕ್ರಮಗಳಿಂದಾಗಿ ಅವರು ಬರಲಾಗಲಿಲ್ಲ. ಆದರೇನಂತೆ, ಅಸ್ಪೃಶ್ಯತೆ ನಿವಾರಣೆಯ ನಿಟ್ಟಿನಲ್ಲಿ ಸಾವರ್ಕರರ ಪ್ರಾಮಾಣಿಕ ಕಳಕಳಿಯನ್ನು ಮನಗಂಡಿದ್ದ ಅವರು, `ಸಾವರ್ಕರರಂಥ ಹತ್ತು ಮಂದಿ ಇದ್ದರೆ, ಒಂದೆರಡು ದಶಕಗಳಲ್ಲಿ ಈ ದೇಶದಿಂದ ಅಸ್ಪೃಶ್ಯತೆ ನಾಮಾವಶೇಷವಾಗಿ ಹೋಗಲಿದೆ!’ ಎಂದು ಉದ್ಗರಿಸಿದ್ದರು.

ಈ ಉಪಕ್ರಮವನ್ನು ಮತ್ತಷ್ಟು ವಿಸ್ತರಿಸಿದ ಸಾವರ್ಕರ್, ಅಂತರ್ಜಾತೀಯ ಭೋಜನ ಕೂಟಗಳನ್ನು ಏರ್ಪಡಿಸಿದರು. ಅಂತರ ಜಾತೀಯ ವಿವಾಹಗಳ ಜತೆಗೆ ಅಂತರಪ್ರಾಂತೀಯ ವಿವಾಹಗಳನ್ನು ಪ್ರೋತ್ಸಾಹಿಸಿದರು. ನಿಜ ಹೇಳಬೇಕೆಂದರೆ, ಇವೆಲ್ಲವನ್ನೂ ಅವರು ಮಾಡಿದ್ದು ಗಾಂಧೀಜಿಯವರು ಅಸ್ಪೃಶ್ಯತೆ ನಿವಾರಣೆಗೆ ಕರೆ ಕೊಡುವುದಕ್ಕೂ ಎಷ್ಟೋ ವರ್ಷಗಳ ಮುಂಚೆಯೇ! ಆದರೆ, ಗಾಂಧೀಜಿಯವರು ದಲಿತರ ಕೇರಿಗೆ ಹೋಗಿ ಮಲ ಎತ್ತಿದ್ದನ್ನು ಮಾತ್ರ ಹೇಳುವ `ಅನುಕೂಲಸಿಂಧು ಶಕ್ತಿಗಳು’, ಸಾವರ್ಕರರ ಈ ಸೇವೆಯನ್ನು ಮತ್ತು ಅವರು ರವಾನಿಸಿದ ಪರಿವರ್ತನೆಯ ಸಂಕೇತಗಳನ್ನು ನೇಪಥ್ಯಕ್ಕೆ ಸರಿಸಿರುವುದು ನಮ್ಮ ದೇಶದಲ್ಲಿ ಬೇರೂರಿರುವ `ಬೌದ್ಧಿಕ ಅಪ್ರಾಮಾಣಿಕತೆ’ಗೊಂದು ನಿದರ್ಶನವಷ್ಟೆ. ಇದಿಷ್ಟೇ ಅಲ್ಲ, ಹಿಂದೂಗಳಲ್ಲಿ ವೈಜ್ಞಾನಿಕ ಮನೋಭಾವ ಮತ್ತು ನಗರೀಕರಣದ ಪ್ರಜ್ಞೆಗಳು ಹೆಚ್ಚುವುದರಿಂದ ಭಾರತ ಅಖಂಡವಾಗಿ ಉಳಿಯಲಿದೆ ಎಂದು ಅಚಲವಾಗಿ ನಂಬಿದ್ದ ಅವರು, ದಲಿತರ ಆಹಾರದ ಹಕ್ಕಿನ ವಿಚಾರದಲ್ಲಿ ಆ ಸಮುದಾಯದ ಪರವಾಗಿ ನಿಂತಿದ್ದರು! ಇದಕ್ಕಾಗಿ ಅವರು, ಮೇಲ್ಜಾತಿಗಳ ಮೇಲೆ ವೈಚಾರಿಕ ಪ್ರಹಾರವನ್ನೇ ನಡೆಸಿದರು. 

ಇನ್ನು, ಸಾವರ್ಕರ್ ಅವರೊಬ್ಬ `ಮುಸ್ಲಿಂ ವಿರೋಧಿ’ ಎನ್ನುವ ವಿಚಾರಕ್ಕೆ ಬರೋಣ. ಇಂಥವರಿಗೆ ಚರಿತ್ರೆಯ ಪ್ರಜ್ಞೆ ಎಷ್ಟೊಂದು ಅಳ್ಳಕವಾಗಿದೆ ಎನ್ನುವುದಕ್ಕೆ ಇದು ಇನ್ನೊಂದು ಉದಾಹರಣೆ. ಏಕೆಂದರೆ, ಸಾವರ್ಕರ್ ತಮ್ಮ ಬದುಕಿನ ಪೂರ್ವಾರ್ಧದಲ್ಲಿ ಪ್ರಾಮಾಣಿಕವಾಗಿ ಹಿಂದೂ-ಮುಸ್ಲಿಂ ಐಕ್ಯತೆಗೆ ಶ್ರಮಿಸಿದವರು. ಅವರ ಈ ಪ್ರತಿಪಾದನೆಯನ್ನು ಸ್ವತಃ ಗಾಂಧೀಜಿಯೇ ಮೆಚ್ಚಿಕೊಂಡಿದ್ದರು. ವಿಲಕ್ಷಣ ಸಂಗತಿಯೆಂದರೆ, ಇವತ್ತಿನ ಗಾಂಧೀವಾದಿಗಳಿಗೆ ಇದು ಗೊತ್ತಿಲ್ಲ! ಆದರೆ, ದೂರದ ಟರ್ಕಿಗೆ ಸಂಬಂಧಿಸಿದ ವಿದ್ಯಮಾನವಾಗಿದ್ದ ಖಿಲಾಫತ್ ಚಳವಳಿಯ ಬಗ್ಗೆ ಅತಾರ್ಕಿಕವಾದ ಸಹಾನುಭೂತಿಯನ್ನು ಹೊಂದಿದ್ದ ಒಂದು ವರ್ಗ/ಪಕ್ಷವು ಬಿತ್ತತೊಡಗಿದ ಪ್ರತ್ಯೇಕತೆಯ ಭಾವನೆಯನ್ನು ನೋಡಿದ ಮೇಲೆ ಸಾವರ್ಕರ್, ಮುಂದಿನ ಅಪಾಯವನ್ನು ಗ್ರಹಿಸಿ ನಿಷ್ಠುರವಾಗಿ ಮಾತನಾಡತೊಡಗಿದರು. ಅಲ್ಲಿಯವರೆಗೂ ಬ್ರಿಟಿಷರ ಸೇನೆಯಲ್ಲಿ ತೀರಾ ಅತ್ಯಲ್ಪ ಪ್ರಮಾಣದಲ್ಲಿದ್ದ ಹಿಂದೂಗಳು ಹೆಚ್ಚುಹೆಚ್ಚಾಗಿ ಸಂಖ್ಯೆಯಲ್ಲಿ ಸಶಸ್ತ್ರ ಪಡೆಗಳಿಗೆ ಸೇರುವ ಕೆಲಸವನ್ನು ಆಂದೋಲನದಂತೆ ನಡೆಸಿದರು. ಜಾಗತಿಕ ಮಟ್ಟದಲ್ಲಿ ಬೆಳಗುತ್ತಿರುವ ಭಾರತದ ಈ ಚರಿತ್ರೆಯನ್ನು ನಾವೆಲ್ಲರೂ ಅರಿಯಬೇಕು. 

ಸಾವರ್ಕರ್ ಎಂದರೆ ಇಷ್ಟೇ ಅಲ್ಲ, ಭಾರತದ ತ್ರಿವರ್ಣ ಧ್ವಜದಲ್ಲಿ ಇಂದು ಸಾರನಾಥದ ಧರ್ಮಚಕ್ರವಿದ್ದರೆ ಅದಕ್ಕೆ ಕಾರಣರಾದವರೂ ಇವರೇ! ಇಂತಹ ಉದಾತ್ತ ಚಿಂತನಗಳ ಜತೆಯಲ್ಲೇ ಅವರು, ತಮ್ಮ ಕಾಲದ ಜಾಗತಿಕ ನಾಯಕರೊಂದಿಗೆ ಭಾರತದ ಹಿತಾಸಕ್ತಿಗಳನ್ನು ಕಾಪಾಡುವ ಸಲುವಾಗಿ ಪತ್ರ ವ್ಯವಹಾರಗಳನ್ನು ನಡೆಸುತ್ತಿದ್ದರು. ಅಂಬೇಡ್ಕರ್, ನೆಹರು, ಶಾಮಪ್ರಸಾದ್ ಮುಖರ್ಜಿ ಅವರಷ್ಟೆ ಅಲ್ಲದೆ, ಕಮ್ಯುನಿಸ್ಟರು ಮತ್ತು ಸಮಾಜವಾದಿಗಳಂತೆಯೇ ಇವರು ಕೂಡ `ಕ್ವಿಟ್ ಇಂಡಿಯಾ’ ಚಳವಳಿಯನ್ನು ನಿರಾಕರಿಸಿದ್ದರು. ದೇಶ ವಿಭಜನೆಯ ಪ್ರಸ್ತಾಪವನ್ನು ಎಲ್ಲರಿಗಿಂತಲೂ ಮೊದಲೇ ವಿರೋಧಿಸಿದ್ದರು. ಹಾಗೆಯೇ, ಈ ದೇಶದ ಬಹುಸಂಖ್ಯಾತರನ್ನು ಮಾತ್ರ ಸದಾ ನೈತಿಕ ಬಿಕ್ಕಟ್ಟಿಗೆ ದೂಡುತ್ತಿದ್ದ ಕುಟಿಲ ರಾಜಕಾರಣವನ್ನು ಅವರು ತಿರಸ್ಕರಿಸುತ್ತ, `ಮಾತೃಭೂಮಿ’ ಮತ್ತು `ಪಿತೃಭೂಮಿ’ಗಳ ರಚನಾತ್ಮಕ ಪರಿಕಲ್ಪನೆಗಳನ್ನು ಮುಂಚೂಣಿಗೆ ತಂದರು. 

ಬಹುಸಂಖ್ಯಾತರ ಪರವಾಗಿ ಮಾತನಾಡುವುದೇ ಅಪರಾಧವೆನ್ನುವ ದುಷ್ಟಕಾಲ ನಮ್ಮಲ್ಲಿ ಇತ್ತೀಚಿನವರೆಗೂ ತಾಂಡವವಾಡುತ್ತಿತ್ತು. ಅದರ ಪಳೆಯುಳಿಕೆಗಳು ಈಗಲೂ ಇವೆ. ಆದರೆ, ದೇಶದ ಪುಣ್ಯಸಂಚಯ ದೊಡ್ಡದಿದೆ. ಹೀಗಾಗಿ, ಸಾವರ್ಕರ್ ಮತ್ತು ಅವರಂತಹ ಇನ್ನೂ ಅನೇಕರ ವಿಚಾರಗಳು ಈಗ ಪುನರುಜ್ಜೀವನಗೊಂಡು, ಪ್ರಖರವಾಗಿ ಗೊತ್ತಾಗುತ್ತಿವೆ. ಇಂತಹ ದ್ರಷ್ಟಾರರ ವಾರಸುದಾರರಾಗಿರುವುದಕ್ಕೆ ಭಾರತೀಯರೆಲ್ಲರೂ ಹೆಮ್ಮೆ ಪಡಬೇಕು! 

14
ಜೂನ್

ಕೆಲವು ವ್ಯಕ್ತಿತ್ವಗಳು ಅರ್ಥವಾಗಬಾರದು, ಅಮಿತ್ ಶಾರಂತೆ!

– ಸಂತೋಷ್ ತಮ್ಮಯ್ಯ

೨೦೧೫ರ ಅಕ್ಟೋಬರಿನಲ್ಲಿ ದೆಹಲಿಯ ಶ್ಯಾಮ್‌ಪ್ರಸಾದ್ ಮುಖರ್ಜಿ ಅಧ್ಯಯನ ಕೇಂದ್ರ ಯುವ ಬರಹಗಾರರನ್ನು ಕರೆಸಿ ರಾಷ್ಟ್ರಮಟ್ಟದ ಕಾರ್ಯಾಗಾರವನ್ನು ಆಯೋಜಿಸಿತ್ತು. ದೇಶದ ಮೂಲೆಮೂಲೆಗಳಿಂದ ಆಗಮಿಸಿದ್ದ ಬರಹಗಾರರು ದೆಹಲಿಯ ಪಾಲಿಕಾ ಭವನದಲ್ಲಿ ಕಿಕ್ಕಿರಿದು ತುಂಬಿದ್ದರು. ಎರಡು ದಿನ ಪೂರ್ತಿ ರಾಷ್ಟ್ರೀಯತೆ, ರಾಜಕೀಯ ಸಿದ್ಧಾಂತಗಳು, ರಾಷ್ಟ್ರೀಯತೆಯ ಸವಾಲುಗಳು ಮತ್ತು ಅಪಾಯಗಳ ಬಗೆಗಿನ ಗೋಷ್ಠಿಗಳು ನಡೆದವು. ಅನಿರ್ಬನ್ ಗಂಗೂಲಿ, ವಿವೇಕ್ ಅಗ್ನಿಹೋತ್ರಿ, ಆರೆಸ್ಸೆಸ್ಸಿನ ನಂದಕುಮಾರ್ ಮುಂತಾದ ಖ್ಯಾತ ಚಿಂತಕರ ಗೋಷ್ಠಿಗಳು ಜರುಗಿದವು. ಸಮಾರೋಪ ಸಮಾರಂಭಕ್ಕೆ ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಅಮಿತ್ ಶಾರವರು ಆಗಮಿಸಿ ಭಾಷಣ ಮಾಡಲಿದ್ದಾರೆ ಎಂದು ತಿಳಿಸಲಾಯಿತು. ಅಲ್ಲಿಯವರೆಗೂ ವೈಚಾರಿಕತೆಯ ಗುಂಗಲ್ಲಿದ್ದ ಕೆಲ ಯುವ ಬರಹಗಾರರು ಸಣ್ಣಗೆ ಗೊಣಗಲಾರಂಭಿಸಿದರು. ಇಷ್ಟು ಹೊತ್ತು ಚಿಂತಕರಿಂದ ಉಪನ್ಯಾಸ ಮಾಡಿಸಿದ ಕೇಂದ್ರದವರು ಈಗ ರಾಜಕಾರಣಿಯನ್ನೇಕೆ ಕರೆಸಿದ್ದಾರೆ? ಅದೂ ರಾಜಕಾರಣ ಮತ್ತು ರಾಜಕೀಯ ಸಿದ್ಧಾಂತಗಳ ಬಗ್ಗೆ ಅಮಿತ್ ಶಾರೇನು ಮಾತಾಡಬಲ್ಲರು? ಹೆಚ್ಚೆಂದರೆ ಜನಸಂಘದ ಒಂದೆರಡು ಕಥೆಗಳನ್ನು ಹೇಳಿ ಮುಗಿಸಬಲ್ಲರಷ್ಟೆ ಎಂದುಕೊಂಡರು. ಸಂಜೆಯಾಯಿತು. ಎಂದಿನಂತೆ ಮುಖ ಗಂಟಿಕ್ಕಿಕೊಂಡ ಅಮಿತ್ ಶಾ ವೇದಿಕೆಗೆ ಹತ್ತಿದರು. ಪೋಡಿಯಂ ಮುಂದೆ ನಿಂತರು.ಇದ್ದಕ್ಕಿದ್ದಂತೆ ಪಿಸುಗುಡುತ್ತಿದ್ದ ಪಾಲಿಕಾ ಭವನದ ಸಭಾಂಗಣ ಸೂಜಿ ಬಿದ್ದರೂ ಸದ್ದಾಗುವಷ್ಟು ಮೌನವಾಯಿತು, ಗಡಸು ಧ್ವನಿಗೆ ಸಭೆ ಸಮ್ಮೋಹನಕ್ಕೊಳಗಾಯಿತು. ಮುಂದಿನ ಒಂದೂವರೆ ಗಂಟೆ ಅಮಿತ್ ಶಾ ಅದೆಂಥಾ ವಾಗ್ಝರಿ ಹರಿಸಿದರೆಂದರೆ ತಿಲಕರು, ಸಾವರ್ಕರರು ಬಂದುಹೋದರು. ಗಾಂಧಿ ಚಳವಳಿ ಮತ್ತು ಸ್ವಾತಂತ್ರ್ಯಪೂರ್ವದ ಕಾಂಗ್ರೆಸಿನ ವಿಶ್ಲೇಷಣೆಯಾಯಿತು. ಲೋಹಿಯಾ ವಾಕ್ಯಗಳ ಉಲ್ಲೇಖವಾಯಿತು. ಜೆಪಿ ನುಸುಳಿದರು, ಹಳೆಯ ಯುಎಸ್‌ಎಸ್‌ಆರ್‌ನ ಪ್ರಾರಬ್ಧಗಳ ಮಂಡನೆಯಾಯಿತು. ನೆಹರೂ ಯುಗದ ಅದ್ವಾನಗಳು ಎಳೆಎಳೆಯಾಗಿ ಬಿಚ್ಚಲ್ಪಟ್ಟವು. ಮುಖರ್ಜಿ, ಉಪಾಧ್ಯಾಯರ ಆದರ್ಶಮಯ ಸಿದ್ಧಾಂತಗಳು ತೇಲಿಬಂದವು. ಅಟಲ್-ಅಧ್ವಾನಿಯವರ ರಾಜಕೀಯ ಬದ್ಧತೆಯವರೆಗೂ ಮಾತು ಸಾಗಿತು. ಕೆಲ ಚಿಂತಕರು ಘನಗಂಭೀರವಾಗಿ ತಲೆತೂಗುತಿದ್ದರೆ, ಇನ್ನು ಕೆಲವರು ಟಿಪ್ಪಣಿ ಮಾಡಿಕೊಳ್ಳತೊಡಗಿದರು! ಅಂದರೆ ಅಮಿತ್ ಶಾ ಸಂಶೋಧಕರಂತೆ, ಇವೆಲ್ಲಕ್ಕೂ ಪುರಾವೆ ಅಂಗೈಯಲ್ಲಿದೆ ಎನ್ನುವಂತೆ ಅಧಿಕಾರಯುತವಾಗಿ ಮಾತಾಡುತ್ತಿದ್ದರು. ಅವರು ಕಮ್ಯುನಿಸ್ಟ್ ಸಿದ್ಧಾಂತವನ್ನು, ಸಮಾಜವಾದವನ್ನು, ರಾಷ್ಟ್ರೀಯತೆಯ ಮಜಲುಗಳೆಲ್ಲವನ್ನೂ ಅರೆದು ಕುಡಿದಿದ್ದರು. ಅವರ ಅಂದಿನ ಮಾತುಗಳು ಸಭಿಕರಲ್ಲಿ ಎಂಥಾ ಗುಂಗು ಹಿಡಿಸಿತ್ತೆಂದರೆ ಭಾಷಣದ ನಂತರ ಆಯೋಜಕರು ಪ್ರಶ್ನೆಗಳಿಗೆ ಅವಕಾಶವಿದೆ ಎಂದು ಘೋಷಿಸಿದರು. ಆದರೆ ಯಾರಲ್ಲೂ ಪ್ರಶ್ನೆಗಳು ಉಳಿದಿರಲಿಲ್ಲ.

ಹಾಗೆ ನೊಡಿದರೆ ಅಮಿತ್ ಶಾ ಅಂದು ಹಾಗೆ ಕಂಡಿದ್ದು ನಮಗೆ ಮಾತ್ರವೇನೂ ಅಲ್ಲ, ಅವರು ಹಾಗೆ ಕಾಣುವುದು ಮೊದಲೂ ಆಗಿರಲಿಲ್ಲ!

ಮತ್ತಷ್ಟು ಓದು »

21
ನವೆಂ

ನಿಂದಕರಿಂದಲೇ ಸಂತೋಷ, ನಿಂದಕರಿದ್ದರೆ ಸಂತೋಷ

– ಬಿದರೆಪ್ರಕಾಶ್

“ನಿಂದಕರಿರಿಬೇಕು, ನಿಂದಕರಿರಬೇಕು
ದುಷ್ಟ ಜನರು ಸೃಷ್ಟಿಯೊಳಿದ್ದರೆ
ಶಿಷ್ಟ ಜನರಿಗೆಲ್ಲಾ ಕೀರ್ತಿಗಳು”

ಎಂದು ಅಂದು ಹಾಡಿದ ಪುರಂದರ ದಾಸರ ನುಡಿಗಳು ಎಂದಿಗೂ ಎಂದೆಂದಿಗೂ ಪ್ರಸ್ತುತವೆಂದು ಇತ್ತೀಚೆಗಿನ ಕೆಲವು ಹಿದ್ಯಮಾನಗಳಿಂದ ವೇದ್ಯವಾಗುತ್ತದೆ.. ಹೌದು, ಪುರಂದರದಾಸರ ವಾಣಿಯಂತೆ ದುಷ್ಟ ಜನರಿಂದಲೇ ಶಿಷ್ಟ ಜನರಿಗೆ ಕೀರ್ತಿಗಳು ಲಭ್ಯವಾಗಿವೆ. ಹಾಗೆಂದು ಈ ಶಿಷ್ಟ ಜನರು ಕೀರ್ತಿಗಾಗಿ ಆಸೆ ಪಟ್ಟವರಲ್ಲ, ಪರರ ತಂಟೆಗೆ ಹೋದವರಲ್ಲ, ಕರ್ತವ್ಯಮುಖಿಯಾಗಿ ತಮ್ಮ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದ ಈ ಇಬ್ಬರು ವ್ಯಕ್ತಿಗಳು ಇಂದು ಖ್ಯಾತಿಗೆ, ಕೀರ್ತಿಗೆ ಭಾಜನರಾಗುತ್ತಿದ್ದಾರೆಂದರೆ ಅದಕ್ಕೆ ಕಾರಣ ಈ ನಿಂದಕರೇ. ಬಹುಷಃ ಈ ನಿಂದಕರಿರದಿದ್ದರೆ ಈ ಇಬ್ಬರು ವ್ಯಕ್ತಿಗಳು ಇಂದಿಗೂ ತೆರೆಮರೆಯಲ್ಲಿಯೇ ಇರುತ್ತಿದ್ದರೇನೋ. ಹಿನ್ನೆಲೆಯಲ್ಲೇ ತಮ್ಮ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದ ಈ ಇಬ್ಬರನ್ನು ಮುನ್ನಲೆಗೆ ತಂದು ನಿಲ್ಲಿಸಿರುವುದು ಈ ನಿಂದಕರೇ. ಅದಕ್ಕಾಗಿಯೇ ಈ ನಿಂದಕರಿಗೆ ಧನ್ಯವಾದ ಹೇಳಲೇಬೇಕು.

ಸಮಾಜಕ್ಕೋಸ್ಕರ ತಮ್ಮ ಜೀವನವನ್ನು ಕೊಟ್ಟು ಪ್ರಚಾರಕರಾಗಿ,ರಾಜ್ಯ ಬಿಜೆಪಿಯಲ್ಲಿ ಕೇಂದ್ರ ಬಿಂದುವಿನಂತೆ ಕಳೆದ ಹತ್ತು ವರ್ಷಗಳಿಂದ ತಮಗೆ ಕೊಟ್ಟ ಜವಾಬ್ದಾರಿಯನ್ನು ನಿರ್ವಹಿಸುತ್ತಿರುವ ಬಿ.ಎಲ್.ಸಂತೋಷ್(ಸಂತೋಷ್‌ಜೀ)ರವರು ಒಬ್ಬರಾದರೆ,ಪತ್ರಕರ್ತರಾಗಿ ಅಂಕಣಕಾರರಾಗಿ ರಾಷ್ಟ್ರೀಯ ವಿಚಾರಗಳನ್ನು ಪ್ರತಿಪಾದಿಸುತ್ತಾ, ಜೀವನಕ್ಕಿಂತ ಅಧ್ಯಯನಕ್ಕೇ ಆದ್ಯತೆ ಕೊಟ್ಟು, ಕಾರ್ಯನಿರ್ವಹಿಸುತ್ತಿರುವ ಸಂತೋಷ್ ತಮ್ಮಯ್ಯ ಮತ್ತೋರ್ವರು. ಸಂತೋಷ್‌ಜೀರವರು ರಾಜಕೀಯ ಕ್ಷೇತ್ರದಲ್ಲಿದ್ದರೂ ಎಂದಿಗೂ ಪ್ರಚಾರ ಪ್ರಿಯರಾಗಲಿಲ್ಲ. ತಮ್ಮಲ್ಲಿರುವ ಅಗಾಧ ಸಂಘಟನಾ ಸಾಮರ್ಥ್ಯವನ್ನು ಕಳೆದ ಹತ್ತು ವರ್ಷಗಳಿಂದ ಬಿಜೆಪಿಯನ್ನು ಕಟ್ಟುವುದಕ್ಕಾಗಿಯೇ ಧಾರೆ ಎರೆಯುತ್ತಿರುವ ಇವರು ಮತ್ತು ಇವರ ಸಾಮರ್ಥ್ಯ ಬಿಜೆಪಿಯ ಒಳಗಿರುವವರಿಗೆ ಮತ್ತು ಪರಿವಾರದ ಕಾರ್ಯಕರ್ತರುಗಳಿಗೆ ಮಾತ್ರ ಪರಿಚಯವಿತ್ತು.ಅದೇ ರೀತಿ ಅಸೀಮ ಪತ್ರಿಕೆಯ ಸಂಪಾದಕರಾಗಿ,ಹೊಸದಿಗಂತ ಪತ್ರಿಕೆಯ ಅಂಕಣಕಾರರಾಗಿ ಓದು ಮತ್ತು ಬರಹಗಳನ್ನು ಮಾತ್ರ ಅಂಟಿಸಿಕೊಂಡು, ಅಧ್ಯಯನದ ಮೂಲಕ ಅಗಾಧ ಬರವಣಿಗೆಯ ಸಾಮರ್ಥ್ಯವನ್ನು ಹೊಂದಿದ್ದ, ಸಂಕೋಚ ಸ್ವಭಾವದ ಸಂತೋಷ್ ತಮ್ಮಯ್ಯ ಸಹ ಎಂದೂ ಮುನ್ನಲೆಗೆ ಬಂದವರಲ್ಲ. ತಮ್ಮ ತಮ್ಮ ಕ್ಷೇತ್ರಗಳಲ್ಲಿ ತಮಗಿರುವ ಶಕ್ತಿಯನ್ನು ವಿನಿಯೋಗಿಸಿ ತೆರೆಮರೆಯಲ್ಲಿಯೇ ಕಾರ್ಯ ನಿರ್ವಹಿಸುತ್ತಿದ್ದ ಈ ಇಬ್ಬರನ್ನೂ ನಿಂದಕರುಗಳು ಜನರ ಮುಂದೆ ತಂದು ನಿಲ್ಲಿಸಿಬಿಟ್ಟಿದ್ದಾರೆ. ಈ ಕಾರಣದಿಂದಾಗಿಯೇ ಸಂತೋಷ್‌ಜೀ ಮತ್ತು ಸಂತೋಷ್ ತಮ್ಮಯ್ಯ ಇಬ್ಬರ ಹೆಸರು ಜನಜನಿತಾಗುತ್ತಿದೆ. ಇವರಿಬ್ಬರ ಸಾಮರ್ಥ್ಯದ ಅರಿವು ಜನರಿಗೆ ಆಗತೊಡಗಿದೆ. ಅದಕ್ಕೇ ಅಂದು ಪುರಂದರ ದಾಸರು ಹೇಳಿದ ’ಶಿಷ್ಟ ಜನರ ಕೀರ್ತಿಗಳಿಗೆ ನಿಂದಕರಿರಬೇಕು, ನಿಂದಕರಿರಿಬೇಕು’ ಎಂಬ ನುಡಿ ಇಂದೂ ಪ್ರಸ್ತುತವೆಂಬುದು ರುಜುವಾತಾಗಿಬಿಟ್ಟಿದೆ.

ಬಿ.ಎಲ್.ಸೋತೋಷ್, ಬಹಳಷ್ಟು ಜನರು ಸಂತೋಷ್‌ಜೀ ಎಂದು ಆತ್ಮೀಯವಾಗಿ, ಗೌರವಪೂರ್ವಕವಾಗಿ ಕರೆಸಿಕೊಳ್ಳುವ ಇವರು ಬಿಜೆಪಿಯಲ್ಲಿ ’ಸಂಘಟನಾ ಕಾರ್ಯದರ್ಶಿ’ ಎಂದರೆ ಹೇಗಿರಬೇಕು ಎಂಬುದಕ್ಕೆ ಮಾದರಿಯಾಗಿ ಬಿಜೆಪಿಯ ಸಂಘಟನೆಗಾಗಿ ತಮ್ಮ ಜೀವನವನ್ನು ಸಮರ್ಪಿಸಿ ಕಾರ್ಯನಿರ್ವಹಿಸುತ್ತಿರುವವರು.ಬಿಜೆಪಿಯನ್ನು ಸಂಘಟನಾತ್ಮಕವಾಗಿ ಶಕ್ತವಾಗಿಸುವಲ್ಲಿ ಸಂತೋಷ್‌ಜೀಯವರ ಪಾತ್ರ ಅಸದಳವಾದುದು ಎಂಬುದನ್ನು ಬಿಜೆಪಿಯಲ್ಲಿ ಅವರನ್ನು ಸಹಿಸಿಕೊಳ್ಳದವರೂ ಒಪ್ಪಿಕೊಳ್ಳುತ್ತಾರೆ.

ಮತ್ತಷ್ಟು ಓದು »

11
ಮೇ

ದಲಿತರನ್ನು ರಾಜಕೀಯವಾಗಿ ಬಳಸಿಕೊಳ್ಳುವ ಹುನ್ನಾರ ಇನ್ನೆಷ್ಟು ದಿನ ಮುಂದುವರೆಯುವುದು?

– ಶಿವಾನಂದ ಸೈದಾಪೂರ

ಪಿ.ಜಿ ಡಿಪ್ಲೊಮಾ ಇನ್ ಅಂಬೇಡ್ಕರ್ ಸ್ಟಡಿಸ್

ಬೆಳಗಾವಿ.

ಈಗಲೇ ಎರಡು ದಿನಗಳಲ್ಲಿ ನಡೆದ ಘಟನೆಗಳು; ನೂರಕ್ಕೆ ನೂರರಷ್ಟು ಮತದಾನದ ಜಾಗೃತಿಗಾಗಿ ಊರೂರುಗಳಿಗೆ ಸಂಪರ್ಕ ಮಾಡುತ್ತಿರುವ ಹೊತ್ತಲ್ಲಿ ಆದ ಸ್ವಂತ ಅನುಭವ. ದಲಿತರ ಓಣಿಗಳನ್ನು ಪ್ರವೇಸಿಸುವಾಗ ನಡೆದಂತದ್ದವುಗಳು. ಘಟನೆ  ಓಣಿಯ ಪ್ರವೇಶಕ್ಕೂ ಮೊದಲು ಗಮನಿಸಿದಾಗ ಕಣ್ಣಿಗೆ ರಾಚುವಂಥದ್ದು; ಈ ಕೇರಿಯಲ್ಲಿ ಕಾಂಗ್ರೆಸ್ ಒಂದನ್ನು ಬಿಟ್ಟು ಬಿಜೆಪಿಯವರಿಗೆ ಪ್ರವೇಶವಿಲ್ಲ! ಈ ರೀತಿ ಫಲಕ ನೇತಾಡುತಿತ್ತು. ಇಂತಹ ವಾತಾವರಣ ಇನ್ನೂ ಯಾಕೆ ಹೀಗಿದೆ? ಚುನಾವಣೆ ಸಂದರ್ಭದಲ್ಲಿಯೇ ಯಾಕೆ ಹೀಗೆ? ಇದನ್ನು ಏನು ಅಂತ ತರ್ಕಿಸಬಹುದು? ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳು ಕಳೆದರೂ ಯಾಕೆ ಈ ವಾತಾವರಣ? ಅಸ್ಪೃಶ್ಯತೆ ನಿವಾರಣೆಗಾಗಿ ಒಂದು ಕಡೆ ಹೋರಾಟಗಳು ನಡೆಯುತ್ತಿದ್ದರೆ, ಮತ್ತೊಂದು ಕಡೆ ಅವರನ್ನು ಸ್ವೃಶ್ಯ ಸಮಾಜ ವಾಸಿಯಾಗಲು ಬಿಡದೆ ನಡೆಸುತ್ತಿರುವ ರಾಜಕೀಯ ಷಡ್ಯಂತ್ರವೇ ಬಹಳಷ್ಟಿವೆ.

ಘಟನೆ ಎರಡು; ರಾಯಬಾಗ ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದೇ ಹೆಸರಾದ ಹಿಡಕಲ್ ನಲ್ಲಿ ನಡೆದದ್ದು. ಇದೇ ಒಂದು ವಾರದಲ್ಲಿ ನಡೀದಿದೆ. ದಲಿತರ ಓಣಿಯಲ್ಲಿ ಮಹಿಳೆಯೊಬ್ಬಳು ಬೈಗುಳಗಳುಳ್ಳ ವಿಡಿಯೋವೊಂದು ವೈರಲ್ ಆಗಿದೆ. ಆ ವಿಡಿಯೋದಲ್ಲಿರುವುದೇನು ಸಾಮಾನ್ಯ ಸಂಗತಿಯೇನಲ್ಲ. ಹಾಲಿ ಶಾಸಕ ಮತ್ತು ಈ ಸಲದ ಕುಡಚಿ ಮತ  ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ.ರಾಜು ಅವರನ್ನು ಅತ್ಯಂತ ಕೀಳು ಮಟ್ಟಕ್ಕಿಳಿದು ಬಾಯಿಗೆ ಬಂದಂತೆ ನಿಂದಿಸುತ್ತಿರುವುದು. ಸ್ವತಃ ತಾನು ಒಬ್ಬ ಹೆಣ್ಣು ಅನ್ನೋದನ್ನು ಮರೆತು ಪಿ.ರಾಜು ಅವರ ತಾಯಿಯನ್ನು ಬೈಯುತ್ತಿರುವುದು.  ಹೇಳುವುದಕ್ಕೆ ಸಾಧ್ಯವೇ ಇಲ್ಲದ ಕನಿಷ್ಠ ಮಟ್ಟದ ಶಬ್ದಗಳನ್ನು ಬಳಸಿ ಬೈಯುತ್ತಿರುವುದನ್ನು ನೋಡಿದರೆ ಎಂಥವರಿಗಾದರೂ ಮೈ ಬೆವರುತ್ತದೆ. ಆ ಕೀಳುಮಟ್ಟದ ಶಬ್ದಗಳನ್ನು ಕೇಳಿದರೆ ಯಾವ ಸ್ತ್ರೀ ಪುರುಷರು ಅಸಹ್ಯ ಪಡುವದರಲ್ಲಿ ಎರಡು ಮಾತಿಲ್ಲ. ಇಷ್ಟಕ್ಕೂ ಆ ವಿಡಿಯೋದಲ್ಲಿ ಮಹಿಳೆ ಮಾಡುತ್ತಿರುವುದಾದರೇನು ಗೊತ್ತೇ? ಈ ಸಲದ ಕುಡಚಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಅಮಿತ್ ಘಾಟಗೆ ಪರ ಪ್ರಚಾರ ಮಾಡುತ್ತಿದ್ದಾಳೆ. ಸ್ವತಃ ಅವಳೇ ಹೇಳುತ್ತಾಳೆ ದಲಿತಕೇರಿಗಳಲ್ಲಿ ಅಮಿತ್ ಘಾಟಗೆ ಮತ್ತು ಸಿದ್ದರಾಮಯ್ಯನವರನ್ನು ಬಿಟ್ಟರೆ ಬೇರೆ ಯಾರೂ ಬರಬಾರದಂತೆ!  ಉಳಿದವರ್ಯಾರು ದಲಿತ ಕೇರಿಯ ಸಮೀಪ ಕೂಡ ಸುಳಿಬಾರದಂತೆ! ಸ್ವಾತಂತ್ರ್ಯ ಬಂದು ಎಪ್ಪತ್ತು ವರ್ಷಗಳಲ್ಲಿ ಐವತ್ತಕ್ಕೂ ಅಧಿಕ ವರ್ಷಗಳ ಕಾಲ ಈ ದೇಶವನ್ನು ಆಳಿದ್ದು ಕಾಂಗ್ರೆಸ್ ಸರ್ಕಾರವೇ. ಆದರೆ ಅಭಿವೃದ್ಧಿಗಿಂತ ಜನಸಾಮಾನ್ಯರಲ್ಲಿ ಯಾವ ರೀತಿ ಜಾತಿಯತೆಯನ್ನು ಬಿತ್ತಿ ಬೆಳೆಸಿದೆ ಎಂಬುವುದು ಇದರಿಂದಲೇ ಸ್ಪಷ್ಟವಾಗುತ್ತದೆ.

ಮತ್ತಷ್ಟು ಓದು »

12
ಏಪ್ರಿಲ್

ಅವರ ಸಹಕಾರವಿಲ್ಲದೆ ಈ ಮರಳು ದಂಧೆ ನಡೆಯುತ್ತಾ ?

– ನರೇಂದ್ರ ಎಸ್ ಗಂಗೊಳ್ಳಿ, ವಾಣಿಜ್ಯಶಾಸ್ತ್ರ ಉಪನ್ಯಾಸಕರು.

ಕಳೆದ ಭಾನುವಾರ ರಾತ್ರಿ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕಂಡ್ಲೂರು ಎಂಬಲ್ಲಿ ತಡರಾತ್ರಿ ಅಕ್ರಮ ಮರಳುಗಾರಿಕೆ ದಂಧೆಯ ಕುರಿತಂತೆ ತನಿಖೆ ಮಾಡಲು ತೆರಳಿದ್ದ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ತಹಶೀಲ್ದಾರ್ ಶಿಲ್ಪಾ ನಾಗ್ , ಅಂಪಾರು ಗ್ರಾಮಕರಣ ಕಾಂತರಾಜು ಸೇರಿದಂತೆ ಆರು ಜನರ ತಂಡದ ಮೇಲೆ ಈ ಅಕ್ರಮ ದಂಧೆ ನಿರತ ತಂಡ ಹಲ್ಲೆ ನಡೆಸಿ ಕೊಲೆ ಯತ್ನ ನಡೆಸಿದ್ದು ಖಂಡನೀಯ. ಮೊದಲು ಬಿಹಾರ ಉತ್ತರ ಪ್ರದೇಶದಂತಹ ರಾಜ್ಯಗಳಲ್ಲಿ ಇಂತಹ ಘಟನೆಗಳು ಕೇಳಿಬರುತ್ತಿದ್ದವು, ಆದರೆ ಇದೀಗ ಬುದ್ಧಿವಂತರ ಜಿಲ್ಲೆ ಎಂದೆನ್ನಿಸಿಕೊಂಡ ಉಡುಪಿಯಲ್ಲೇ ಇಂತಹ ಘಟನೆ ನಡೆದಿರುವುದು ಇಡೀ ಜಿಲ್ಲೆಯ ಜನರೇ ತಲೆ ತಗ್ಗಿಸುವಂತಾಗಿದೆ.

ಮತ್ತಷ್ಟು ಓದು »

14
ಸೆಪ್ಟೆಂ

ಪ್ರತಿಭಟನೆಯನ್ನೂ ಅಪರಾಧವನ್ನೂ ಏಕೆ ಸಮೀಕರಿಸುತ್ತೀರಿ ಮಾಧ್ಯಮಗಳೇ?

– ವಿನಾಯಕ ಹಂಪಿಹೊಳಿ

 imagesರಾಜ್ಯಾದ್ಯಂತ ಪ್ರತಿಭಟನೆಗಳನ್ನು ವರದಿ ಮಾಡುವ ಸಂದರ್ಭದಲ್ಲಿ ನಮ್ಮ ಮಾಧ್ಯಮಗಳುವಾಹನಗಳಿಗೆ ಬೆಂಕಿ ಹಚ್ಚುವದರ ಮೂಲಕ ಕಲ್ಲು ತೂರುವ್ರದರ ಮೂಲಕ ಪ್ರತಿಭಟನಾಕಾರರು ತಮ್ಮ ಆಕ್ರೋಶ ವ್ಯಕ್ತಪಡಿಸಿದರುಎಂಬ ಮಾತನ್ನು ಬಳಸಿದ್ದೇ ತಪ್ಪು ಎಂಬುದು ನನ್ನ ಅನಿಸಿಕೆ. ಏಕೆಂದರೆ ಇಂತಹ ಅನೈತಿಕ ಕಾರ್ಯಗಳನ್ನು, `ಆಕ್ರೋಶದ ಸಹಜ ಅಭಿವ್ಯಕ್ತಿ’ ಎಂಬಂತೆ ಬಿಂಬಿಸಿರುವದೇ ಕ್ರಿಯೆಯನ್ನು ಸಮರ್ಥಿಸಿದಂತೆ. ಉದಾಹರಣೆಗೆಚಾರ್ಲಿ ಹೆಬ್ಡೋ ಕಚೇರಿಯ ಮೇಲೆ ಬಾಂಬು ಹಾಕುವದರ ಮೂಲಕ ಭಯೋತ್ಪಾದಕರು ತಮ್ಮ ಆಕ್ರೋಶ ವ್ಯಕ್ತಪಡಿಸಿದರುಎಂದು ಸುದ್ದಿ ಬಿತ್ತರಿಸಿದರೆ ಹೇಗಿರುತ್ತದೆ? ಭಯೋತ್ಪಾದಕರಂತೆ ಜೀವ ತೆಗೆದಿಲ್ಲ ಎನ್ನುವದನ್ನು ಒಪ್ಪಬಹುದು. ಆದರೆ ಸಾಲಸೋಲ ಮಾಡಿ ಪಡೆದ ಲಾರಿಗಳೇ, ಜೀವನಾಧಾರವನ್ನಾಗಿ ಮಾಡಿಕೊಂಡಿರುವ ಲಾರಿ ಡ್ರೈವರು ಕ್ಲೀನರುಗಳಿಗೆ, ಅವರ ಸಂಸಾರಕ್ಕೆ ಇದ್ದ ಒಂದೇ ಜೀವನೋಪಾಯವನ್ನೇ, ಕಸಿದುಕೊಳ್ಳುವದು ಸರಿಯೇ? ಜೀವ ತೆಗೆಯುವದಕ್ಕಿಂತ ಜೀವನ ತೆಗೆಯುವದು ಕಡಿಮೆ ಅಪರಾಧವಾಯಿತೇ?

ಮತ್ತಷ್ಟು ಓದು »

9
ಜುಲೈ

ವಿದ್ಯಾರ್ಥಿ ರಾಜಕೀಯ ಕ್ರಿಯಾಶೀಲತೆ ಮುಂದಿರುವ ಸವಾಲುಗಳು

ಬಿ.ಜಿ. ಕುಲಕರ್ಣಿ
ಸಹಾಯಕ ಪ್ರಾಧ್ಯಾಪಕರು
ರಾಜ್ಯಶಾಸ್ತ್ರ ವಿಭಾಗ
ಬಸವಪ್ರಭು ಕೋರೆ ಮಹಾವಿದ್ಯಾಲಯ
ಚಿಕ್ಕೋಡಿ. ಜಿಲ್ಲಾ: ಬೆಳಗಾವಿ

poverವಿದ್ಯಾರ್ಥಿ ರಾಜಕೀಯ ಕ್ರೀಯಾಶಿಲತೆ ಕುರಿತು ಚರ್ಚಿಸುವಾಗ ಉದ್ಭವವಾಗುವ ಮೊದಲ ಪ್ರಶ್ನೆಯೆಂದರೆ ವಿದ್ಯಾರ್ಥಿಗಳು ರಾಜಕೀಯದಲ್ಲಿ ಭಾಗವಹಿಸಬೇಕೆ ಅಥವಾ ಬೇಡವೇ ? ಈ ವಿಷಯಕ್ಕೆ ಸಂಬಂಧಿಸಿದಂತೆ ಎರಡು ಪಂಥಗಳಿವೆ. ಮೊದಲನೆಯ ಪಂಥದ ಅಭಿಪ್ರಾಯವೆನೆಂದರೆ ವಿದ್ಯಾರ್ಥಿಗಳ ಮೊದಲ ಆದ್ಯತೆ ಅಧ್ಯಯನ. ಆದ್ದರಿಂದ ವಿದ್ಯಾರ್ಥಿಗಳು ಅಧ್ಯಯನದಲ್ಲಿ ನಿರತರಾಗಬೇಕು. ಆ ಮೂಲಕ ತಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದು ವಾದಿಸುತ್ತಾರೆ. ಎರಡನೆ ಪಂಥವು ವಿದ್ಯಾರ್ಥಿಗಳೂ ಜನ ಸಮೂಹದ ಭಾಗವಾಗಿರುವುದರಿಂದ, ರಾಜಕೀಯ ಸಮಾಜ ಬಿಟ್ಟು ಇಲ್ಲವಾದ್ದರಿಂದ, ರಾಜಕೀಯ ನಿರ್ಧಾರಗಳು ವಿದ್ಯಾರ್ಥಿಗಳ ಮೇಲೂ ಪ್ರಭಾವ ಬೀರುವುದರಿಂದ ವಿದ್ಯಾರ್ಥಿಗಳು ರಾಜಕೀಯದಲ್ಲಿ ಭಾಗವಹಿಸಬೇಕು ಎಂಬ ವಾದ ಮಂಡಿಸುತ್ತಾರೆ. ವಿದ್ಯಾರ್ಥಿಗಳು ರಾಜಕೀಯದಲ್ಲಿ ಏಕೆ ಭಾಗವಹಿಸಬೇಕು ಎಂಬ ವಾದಕ್ಕೆ ಪ್ರಬಲ ಕಾರಣಗಳನ್ನು ಇಲ್ಲಿ ಚರ್ಚಿಸಲಾಗಿದೆ. ಮತ್ತಷ್ಟು ಓದು »

5
ಜೂನ್

ಜೀವಮಾನದ ಸಿದ್ಧಿ ಮತ್ತು ಹದಿನೈದು ನಿಮಿಷಗಳ ಪ್ರಸಿದ್ಧಿ

– ರೋಹಿತ್ ಚಕ್ರತೀರ್ಥ
startup-pr-media-publicity1966ರಲ್ಲಿ ನಡೆದ ಸಣ್ಣ ಘಟನೆ ಅದು. ಆಂಡಿ ವಾರ್ಹಲ್ ಎಂಬ ಪ್ರಸಿದ್ಧ ಅಮೆರಿಕನ್ ಕಲಾವಿದನನ್ನು ನ್ಯಾಟ್ ಫಿಂಕಲ್‍ಸ್ಟೀನ್ ಎಂಬ ಫೋಟೋಗ್ರಾಫರ್ ಸೆರೆ ಹಿಡಿಯುತ್ತಿದ್ದಾಗ, ಆಂಡಿಯ ನೂರಾರು ಅಭಿಮಾನಿಗಳು ತಾವೂ ಕ್ಯಾಮೆರಾ ಫ್ರೇಮಿನಲ್ಲಿ ಬರಬೇಕೆಂದು ಆತನ ಹಿಂಬದಿಯಲ್ಲಿ ಮುಖ ತೂರಿಸುವುದೋ ಸುಮ್ಮಸುಮ್ಮನೆ ಅಡ್ಡ ಹಾಯುವುದೋ ಮಾಡುತ್ತಿದ್ದರಂತೆ. ಆಗ ಆಂಡಿ ನ್ಯಾಟ್‍ಗೆ “ನೋಡಯ್ಯ, ಪ್ರತಿಯೊಬ್ಬರೂ ಪ್ರಸಿದ್ಧರಾಗಲು ಬಯಸುತ್ತಿದ್ದಾರೆ” ಎಂದ. ನ್ಯಾಟ್, “ಹೌದು ಆಂಡಿ! ಹದಿನೈದು ನಿಮಿಷಗಳ ಪ್ರಸಿದ್ಧಿಗಾಗಿ!” ಎಂದುತ್ತರಿಸಿದ. ಹಾಗೆ ಅಕಸ್ಮಾತ್ತಾಗಿ ಹುಟ್ಟಿದ ಈ “ಹದಿನೈದು ನಿಮಿಷಗಳ ಪ್ರಸಿದ್ಧಿ” ಎಂಬ ಪಡೆನುಡಿ ಅಮೆರಿಕನ್ ಸಂಸ್ಕೃತಿಯಲ್ಲಿ ಹದಿನೈದು ನಿಮಿಷಗಳಲ್ಲ, ಹಲವು ವರ್ಷಗಳ ಕಾಲ ಪ್ರಸಿದ್ಧವಾಗಿ ಚಾಲ್ತಿಯಲ್ಲಿತ್ತು. ಜಗತ್ತಿನಲ್ಲಿ ಮೊದಲೆಲ್ಲ ದೇಶದ ರಾಜರಾಣಿಯರು ಮತ್ತು ಬೆರಳೆಣಿಕೆಯಷ್ಟು ಸಚಿವರನ್ನು ಬಿಟ್ಟರೆ ಬೇರಾರೂ ಪ್ರಸಿದ್ಧಿಯ ಉತ್ತುಂಗಕ್ಕೆ ಏರುತ್ತಿರಲಿಲ್ಲ. ರಾಜಕೀಯದ ಸೋಂಕಿಲ್ಲದೆ ಪ್ರಸಿದ್ಧಿಗೆ ಬರಬೇಕೆಂದರೆ ಒಂದೋ ಸಾಹಿತಿ/ಕಲಾವಿದನಾಗಬೇಕಿತ್ತು ಇಲ್ಲವೇ ವಿಜ್ಞಾನಿಯಾಗಬೇಕಿತ್ತು. ಎರಡೂ ಹತ್ತುಹಲವು ವರ್ಷಗಳ ಕಠಿಣ ಪರಿಶ್ರಮ, ತಪಸ್ಸುಗಳನ್ನು ಬೇಡುವ ಕೆಲಸಗಳು. ದಿನಬೆಳಗಾಗುವುದರಲ್ಲಿ ಪ್ರಸಿದ್ಧರಾದರು ಎಂದು ಹೇಳುವ ವ್ಯಕ್ತಿಗಳು ಕೂಡ ಅಂಥದೊಂದು ಪ್ರಸಿದ್ಧಿಗಾಗಿ ಹಲವು ವರ್ಷಗಳ ದಿನ-ರಾತ್ರಿಗಳನ್ನು ವ್ಯಯ ಮಾಡುತ್ತಿದ್ದರು. ಕಾಲ ಮುಂದುವರಿದಂತೆ, ಪತ್ರಿಕೆ ರೇಡಿಯೋ ಟಿವಿ ಸಿನೆಮ ಇತ್ಯಾದಿ ಹಲವು ಮಾಧ್ಯಮಗಳು ಬಂದವು. ಇಂಥ ಹಲವು ಆಯ್ಕೆಗಳು ಸುಲಭಸಾಧ್ಯವಾದ ಮೇಲೆ ಯೇನಕೇನ ಪ್ರಕಾರೇಣ ಪ್ರಸಿದ್ಧ ಪುರುಷೋ ಭವ ಎಂಬ ಧ್ಯೇಯಮಾರ್ಗದಲ್ಲಿ ನಡೆಯುವವರೂ ಹೆಚ್ಚಾದರು. ಶಾಶ್ವತ ಸಿದ್ಧಿ ಬಯಸುವವರಿಗಿಂತ ಇಂದೋ ಈ ವಾರವೋ ತಪ್ಪಿದರೆ ಈ ಒಂದು ತಿಂಗಳು ಚಲಾವಣೆಯಲ್ಲಿದ್ದರೆ ಸಾಕು ಎಂಬ ಮನೋಭಾವದವರು ಹೆಚ್ಚಾದರು. ಇವೆಲ್ಲವನ್ನು ಮುಂಚಿತವಾಗಿ ಊಹಿಸಿಯೇ “ಮುಂದೊಂದು ದಿನ ಜನ ಕೇವಲ ಹದಿನೈದು ನಿಮಿಷಗಳ ಪ್ರಸಿದ್ಧಿಯನ್ನಷ್ಟೇ ಪಡೆಯುವ ಸಂದರ್ಭ ಬರಬಹುದು” ಎಂಬರ್ಥದಲ್ಲಿ ನ್ಯಾಟ್ ಆ ಮಾತುಗಳನ್ನು ಹೇಳಿದ್ದ. ಮತ್ತಷ್ಟು ಓದು »