ವಿಷಯದ ವಿವರಗಳಿಗೆ ದಾಟಿರಿ

Posts tagged ‘ರಾಜಕೀಯ’

6
ನವೆಂ

ಸುದ್ಧಿಮಾಧ್ಯಮ: ದೇಶ ಬೆನ್ನಿಗೆ ಕಟ್ಟಿಕೊಂಡ ಕೆಂಡ

– ಪ್ರೇಮಶೇಖರ

ಪೇಯ್ಡ್ ಮೀಡಿಯಾ26/11ರ ಮುಂಬೈ ಧಾಳಿಗಳ ರೂವಾರಿಯೊಬ್ಬ ಕರಾಚಿಯಿಂದ ಹೊರಡುತ್ತಿದ್ದ ಅಜ್ಮಲ್ ಕಸಾಬ್ ಸೇರಿದಂತೆ ಹತ್ತು ಭಯೋತ್ಪಾದಕರಿಗೆ ನೀಡಿದನೆನ್ನಲಾದ ‘ಉಪದೇಶ’ ಹೀಗಿತ್ತು: “ತಾಜ್ ಹೋಟೆಲ್ ಆಕ್ರಮಿಸಿಕೊಂಡ ನಂತರ ಯಾವುದಾದರೊಂದು ಕೋಣೆ ಸೇರಿ ಅಲ್ಲಿರುವ ಟೀವಿ ಚಾಲೂ ಮಾಡಿ ಭಾರತೀಯ ನ್ಯೂಸ್ ಚಾನಲ್ ಒಂದನ್ನು ನೋಡಿ.  ಭಾರತೀಯ ಭದ್ರತಾ ಪಡೆಗಳು ನಿಮ್ಮ ವಿರುದ್ಧ ಕೈಗೊಳ್ಳುತ್ತಿರುವ ತಂತ್ರಗಳ ಇಡೀ ವಿವರ ಅದರಲ್ಲಿ ನಿಮಗೆ ದೊರೆಯತೊಡಗುತ್ತದೆ.  ಅದಕ್ಕನುಗುಣವಾಗಿ ನಿಮ್ಮ ಪ್ರತಿತಂತ್ರಗಳನ್ನು ನೀವು ರೂಪಿಸಿಕೊಳ್ಳಬಹುದು.”  ನಮ್ಮ ಮಾಧ್ಯಮಗಳು ಅತ್ಯುತ್ಸಾಹದಿಂದ ಪ್ರಸಾರ ಮಾಡುತ್ತಿದ್ದ ವಿವರಗಳೇ ತಾಜ್ ಹೋಟೆಲ್ ಮೇಲೆ ಪಾಕ್ ಉಗ್ರರ ಹಿಡಿತ ದೀರ್ಘವಾಗಲು ಕಾರಣವಾಯಿತು ಎಂಬ ಕಟುವಾಸ್ತವದ ಹಿನ್ನೆಲೆಯಲ್ಲಿ ಆ ಪಾಕ್ ಭಯೋತ್ಪಾದಕ ನಮ್ಮ ಮಾಧ್ಯಮಗಳ ನಾಡಿಮಿಡಿತವನ್ನು ಅದೆಷ್ಟು ಚೆನ್ನಾಗಿ ಅರಿತಿದ್ದ ಎಂಬ ಕಹಿಸತ್ಯ ಎದೆಗೆ ನಾಟುತ್ತದೆ.  ಈ ಪೀಠಿಕೆಯೊಂದಿಗೆ ಭಯೋತ್ಪಾದನೆಯ ವಿಷಯದಲ್ಲಿ ನಮ್ಮ ಮಾಧ್ಯಮಗಳು ಅನುಸರಿಸುವ ಕುನೀತಿಯ ಪರಿಚಯ ಮಾಧ್ಯಮಗಳ ಬಗೆಗಿನ ಲೇಖನದ ಮೂರನೆಯ ಹಾಗೂ ಅಂತಿಮ ಕಂತಿನ ವಸ್ತುವಿಷಯ.  ನನ್ನ ಅವಲೋಕನವನ್ನು ಕಾಲು ಶತಮಾನದಷ್ಟು ದೀರ್ಘವಾದ ಕಾಶ್ಮೀರದಲ್ಲಿನ ಭಯೋತ್ಪಾದನೆಯೊಂದಿಗೆ ಪ್ರಾರಂಭಿಸುತ್ತೇನೆ.

ಮತ್ತಷ್ಟು ಓದು »

28
ಆಕ್ಟೋ

ಹಿಂದೂ-ವಿರೋಧಿ ಮಾಧ್ಯಮ: ಸೃಷ್ಟಿ ಮತ್ತು ಸ್ಥಿತಿ

– ಪ್ರೇಮಶೇಖರ

ಪೇಯ್ಡ್ ಮೀಡಿಯಾಪ್ರಕರಣ ೧: ಪ್ರಮುಖ ಕನ್ನಡ ದೈನಿಕವೊಂದರಲ್ಲಿ ಸೌದಿ ಅರೇಬಿಯಾದ ಬಗ್ಗೆ ಪರಿಚಯಾತ್ಮಕ ಲೇಖನವೊಂದು ಪ್ರಕಟವಾಗುತ್ತದೆ. ಅಚ್ಚರಿಯೆಂದರೆ ಮರುದಿನವೂ ಅದೇ ಲೇಖನ ಮತ್ತೆ ಕಾಣಿಸಿಕೊಳ್ಳುತ್ತದೆ!  ಅದರ ಕೆಳಗೆ ಹೀಗೊಂದು ವಿವರಣೆ: “ನಿನ್ನೆಯ ದಿನ ಸೌದಿ ಅರೇಬಿಯಾವನ್ನು ಕುರಿತು ನೀಡಿದ ವಿವರಣೆಯಲ್ಲಿ ಮಹಮದ್ ಪೈಗಂಬರ್ ಮೆಕ್ಕಾದಿಂದ ಮದೀನಾಕ್ಕೆ ಕ್ರಿ.ಶ. ೬೨೨ರಲ್ಲಿ ಓಡಿಹೋದರು. ಅಂದಿನಿಂದ ಹಿಜ್ರಾ ಶಕೆ ಪ್ರಾರಂಭವಾಗುತ್ತದೆ ಎಂದು ಪ್ರಕಟವಾಗಿತ್ತು.ಇದರಿಂದ ಅನೇಕರ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ತಿಳಿದುಬಂದಿದೆ. ಅದಕ್ಕಾಗಿ ಪತ್ರಿಕೆ ಕ್ಷಮೆ ಯಾಚಿಸುತ್ತದೆ ಹಾಗೂ ಇಂದು ಅದೇ ಲೇಖನವನ್ನು ತಿದ್ದಿ ಪ್ರಕಟಿಸಲಾಗಿದೆ.” ಮರುಪ್ರಕಟವಾಗಿದ್ದ ಲೇಖನದಲ್ಲಿ ಪೈಗಂಬರರು ಮದೀನಾಗೆ ಓಡಿಹೋದ ಬಗೆಗಿನ ಒಂದು ಸಾಲು ಮಾಯವಾಗಿರುತ್ತದೆ.

ಪ್ರಕರಣ ೨: ಕೆಲದಿನಗಳ ನಂತರ ಅದೇ ಪತ್ರಿಕೆಯಲ್ಲಿ ಸ್ವಾಮಿ ವಿವೇಕಾನಂದರ ಬಗ್ಗೆ ಲೇಖನವೊಂದು ಪ್ರಕಟವಾಗುತ್ತದೆ.ವಿವೇಕಾನಂದರ ದೈಹಿಕ ಸಮಸ್ಯೆಗಳು,ಬಲಹೀನತೆಗಳ ಬಗ್ಗೆ ಅದರಲ್ಲಿನ ವಿಷಯಗಳಾವುವೂ ಹೊಸದಾಗಿರುವುದಿಲ್ಲ.  ಅವೆಲ್ಲವೂ ಕೊಲ್ಕತಾದ ರಾಮಕೃಷ್ಣ ಮಿಶನ್ ಮತ್ತು ಅಲ್ಮೋರಾದ ಅದ್ವೈತಾಶ್ರಮಗಳ ಪ್ರಕಟಣೆಗಳಲ್ಲೇ ಇವೆ.ಆದರೆ ಲೇಖನದ ಭಾಷೆ, ಕೆಲ ಪದಗಳು ಅಕ್ಷೇಪಾರ್ಹವಷ್ಟೇ ಅಲ್ಲ, ಪತ್ರಿಕೆಯ ಘನತೆಗೂ ಶೋಭೆ ತರುವಂತಿರುವುದಿಲ್ಲ.ಇದರಿಂದಾಗಿ ಹಲವರ ಭಾವನೆಗಳಿಗೆ ಧಕ್ಕೆಯಾಗುತ್ತದೆ.ಅದು ರಾಜ್ಯದ ವಿವಿಧೆಡೆ ಸಾರ್ವಜನಿಕವಾಗಿಯೂ ವ್ಯಕ್ತವಾಗುತ್ತದೆ.ಅದಕ್ಕೆ ಪತ್ರಿಕೆಯ ಪ್ರತಿಕ್ರಿಯೆ? ಒಂದಕ್ಷರದ ಕ್ಷಮಾಯಾಚನೆಯೂ ಇಲ್ಲ!

ಮತ್ತಷ್ಟು ಓದು »

1
ಆಗಸ್ಟ್

ಕಂಡವರ ಮಕ್ಕಳನ್ನು ಕಾಡಿಗಟ್ಟುತ್ತಿರುವವರು ಯಾರು?

– ವಿಘ್ನೇಶ್, ಯಲ್ಲಾಪುರ

ಮೊನ್ನೆ ಮೊನ್ನೆ ನಡೆದ ಕಾರ್ಗಿಲ್ ವಿಜಯೋತ್ಸವ ಸಂಭ್ರಮಾಚರಣೆಯನ್ನು ನೋಡಿ ಕೆಲವು ಪ್ರಗತಿಪರರು “ಯೋಧ”ರನ್ನು ಕುರಿತು,ಬಡವರ ಮಕ್ಕಳನ್ನು ಬಾವಿಗೆ ತಳ್ಳುತ್ತಾರೆ ಎಂದು ಬೊಬ್ಬೆ ಹಾಕುತಿದ್ದರು.ಇದು 24 – 11- 2008ರಂದು ಕನ್ನಡ ಪ್ರಭದಲ್ಲಿ ಪ್ರಕಟವಾಗಿದ್ದ ಲೇಖನ.ಈ ಲೇಖನವನ್ನೊಮ್ಮೆ ಓದಿ.ಕಂಡವರ ಮಕ್ಕಳನ್ನು ಬಾವಿಗೆ ತಳ್ಳಿದವರು ಯಾರು ಎಂಬುದು ಅರ್ಥವಾಗಬಹುದು

ಅವಳು ಪಾರ್ವತಿ!

ನಕ್ಸಲ್ಕೊಪ್ಪ ತಾಲೂಕಿನ ಸೂರ್ಯದೇವಸ್ಥಾನದ ಹುಡುಗಿ. ಕಾಲೇಜು ವಿದ್ಯಾಭ್ಯಾಸಕ್ಕೆಂದು ಹೋಗಿ ಸೇರಿದ್ದು ಶಿವಮೊಗ್ಗೆಯನ್ನು. ತನ್ನ ಕುಟುಂಬದಲ್ಲಿದ್ದ ಬಡತನ ಅವಳಲ್ಲಿ ಸಾಮಾಜಿಕ ಕಳಕಳಿಯನ್ನು ಹುಟ್ಟುಹಾಕಿತ್ತು; ಶಿವಮೊಗ್ಗದಲ್ಲಿದ್ದಷ್ಟು ವರ್ಷವೂ ಒಂದಲ್ಲ ಒಂದು ಸಾಮಾಜಿಕ ವಿಷಯದ ಕುರಿತು ಹೋರಾಟ ಮಾಡಲು ಪ್ರೇರೇಪಿಸಿತ್ತು. ಅದಕ್ಕಾಗಿ ವಿವಿಧ ಸಂಘಟನೆಗಳನ್ನು ಸೇರಿದಳು. ‘ಮಹಿಳಾ ಜಾಗೃತಿ’ಯ ಕಾರ್ಯಕರ್ತೆಯಾಗಿ ಹಗಲಿರುಳು ದುಡಿದಳು, ನಾಯಕಿಯಾಗಿ ಬೆಳೆದಳು. ಶಿವಮೊಗ್ಗದ ಕೆಲ ಉಪನ್ಯಾಸಕರು ದೂರದ ಆಂಧ್ರದಿಂದ ಗದ್ದರ್‍ನನ್ನು ಕರೆಸಿ ನಡೆಸಿದ ಸಭೆಗಳಲ್ಲಿ ನಡುರಾತ್ರಿಯವರೆಗೂ ಭಾಗವಹಿಸಿದಳು. ರೈತ ಹೋರಾಟದಿಂದ ಹಿಡಿದು ನದೀಮೂಲ ರಕ್ಷಣೆಯಂತಹ ವಿಷಯದವರೆಗೆ, ಕಾಲೇಜು ವಿದ್ಯಾರ್ಥಿನಿಯರ ಸಮಸ್ಯೆಯಿಂದ ಹಿಡಿದು ಕೊಳಚೆ ನಿವಾಸಿಗಳ ದನಿಯಾಗುವವರೆಗೆ ಸಾಮಾಜಿಕವಾಗಿ ತನ್ನನ್ನು ತೊಡಗಿಸಿಕೊಂಡಳು. ಹೀಗೆ ಅತ್ಯಂತ ಕ್ರಿಯಾಶೀಲಳಾಗಿದ್ದ ಹುಡುಗಿ, ಇದ್ದಕ್ಕಿದ್ದಂತೆ ಒಂದು ದಿನ ಕಣ್ಮರೆಯಾದಳು. ನಾಲ್ಕೈದು ವರ್ಷ ಪಾರ್ವತಿ ಎಲ್ಲಿದ್ದಾಳೆ ಎಂಬುದೇ ನಾಗರಿಕ ಸಮಾಜಕ್ಕೆ ತಿಳಿದಿರಲಿಲ್ಲ. ಸಮಾಜದ ಕುರಿತು ಅಪಾರ ಕಳಕಳಿಯನ್ನಿಟ್ಟುಕೊಂಡು ಹಗಲಿರುಳೂ ಸೈಕಲ್ ತುಳಿಯುತ್ತಿದ್ದ ಹುಡುಗಿ ಹೀಗೆ ಇದ್ದಕ್ಕಿದಂತೆ ಕಣ್ಮರೆಯಾಗಿದ್ದು ಏಕೆ? ಎಲ್ಲಿ ಹೋದಳು?

ಈ ಪ್ರಶ್ನೆಗೆ ಉತ್ತರ ಸಿಕ್ಕಿದ್ದು, 2003ರ ನವೆಂಬರ್ 17ನೇ ತಾರೀಖು. ಕಾರ್ಕಳ ತಾಲೂಕಿನ ಈದು ಬಳಿಯ ಬೊಲ್ಲೊಟ್ಟುವಿನ ಮನೆಯೊಂದರಲ್ಲಿ ರಾತ್ರಿ ಸಿಡಿದ ಪೋಲೀಸರ ಗುಂಡಿನ ಬೆಳಕಲ್ಲಿ ಪಾರ್ವತಿ ಗೋಚರಿಸಿದಳು. ಹರೆಯದ ಕನಸುಗಳೆಲ್ಲ ಅರಳಿ,ಬದುಕಿನ ಗಾಂಭೀರ್ಯದತ್ತ ಹೊರಳಬೇಕಾದ ವಯಸ್ಸಿನಲ್ಲಿ ಪಾರ್ವತಿ ಹೆಣವಾಗಿ ಬಿದ್ದಿದ್ದಳು! ಅವಳ ಜೊತೆಗೇ ಮಸಣ ಸೇರಿದ ಹಾಜಿಮಾಳ ಕಥೆಯೂ ಇದಕ್ಕಿಂತ ಭಿನ್ನವೇನಲ್ಲ! ಮತ್ತಷ್ಟು ಓದು »

8
ಜನ

ರಾಷ್ಟ್ರದ ಹಿತ ದೃಷ್ಟಿಯಿಂದಾದರು ಈ ಭಯೋತ್ಪಾದನೆಯ ರಾಜಕೀಯಕ್ಕೆ ಅಂತ್ಯ ಹಾಡಬೇಕಲ್ಲವೇ?

– ಅನಿಲ ಚಳಗೇರಿ

Terror Boatಡಿಸೆಂಬರ್ ೩೧ ರ ರಾತ್ರಿ ಶಂಕಿತ ಉಗ್ರರ ಹಡಗನ್ನು ನೌಕ ಪಡೆ ಪತ್ತೆ ಹಚ್ಚಿ ಅದನ್ನು ಹಿಂಬಾಲಿಸಿ ಹೋದಾಗ ಅದರಲ್ಲಿರುವವರು ಹಡಗನ್ನು ಸ್ಪೋಟಿಸಿದರು ಎನ್ನುವ ವಿಷಯ ತಿಳಿದೊಡನೆ ನಮ್ಮಲ್ಲಿ ಅನೇಕರಿಗೆ ನೌಕಾಪಡೆಗೆ ಒಂದು ಶಬ್ಭಾಶ್ ಹೇಳಬೇಕೆನ್ನಿಸಿರಬಹುದು, ಅದಾಗಲೇ ರಾಜಕೀಯ ಪಕ್ಷಗಳು ಇಂತಹ ಒಂದು ಹಡಗು ಇತ್ತಾ? ಅದರಲ್ಲಿ ನಿಜವಾಗಲು ಉಗ್ರರಿದ್ದರಾ ? ಅದು ಪಾಕಿಸ್ತಾನಕ್ಕೆ ಸೇರಿದ ಹಡಗಾಗಿತ್ತಾ ? ಹಾಗಿದ್ದರೆ ಅವುಗಳ ದಾಖಲೆ ವೀಡಿಯೊ ದೃಶ್ಯಗಳನ್ನು ಬಿಡುಗಡೆ ಮಾಡಿ, ನಮಗೆ ಇದರ ಮೇಲೆ ಶಂಕೆಯಿದೆಯೆಂದು ಪ್ರಶ್ನಿಸಲು ಪ್ರಾರಂಭಿಸಿದನ್ನು ನೋಡಿ ನೋಡಿ ನಮ್ಮಲ್ಲಿ ಅನೇಕರಿಗೆ ಬೇಜಾರಾಗಿರಬೇಕು.  ಪ್ರತಿ ಬಾರಿ ಉಗ್ರಗಾಮಿಯೊಬ್ಬ ಸಿಕ್ಕಾಗ, ಬಾಂಬ್ ದಾಳಿಯಾದಾಗ ಅಥವಾ ಯಾವುದೇ ಉಗ್ರ ಚಟುವಟಿಕೆ ನಡೆದಾಗ, ತನಿಖೆಯ ಪ್ರಾರಂಭದಿಂದಲೇ  ಒಂದಲ್ಲ ಒಂದು ರಾಜಕೀಯ ಪಕ್ಷಗಳು ಅಥವಾ ಬುದ್ಧಿ ಜೀವಿಗಳು ಈ ಶಕಿಂತ ಆರೋಪಿಗಳ ನಿಂತೇಬಿಡುತ್ತಾರೆ. ತನಿಖೆ ನಡೆಯುತ್ತಿರುವಾಗಲೇ ಕ್ಲೀನ್ ಚಿಟ್ ಕೊಡುವದು, ರಾಜಕೀಯ ಬಣ್ಣ ಕಟ್ಟಲು ಪ್ರಯತ್ನಿಸುವದು ಅಥವಾ ಇಂತಹ ಗಂಭೀರ ವಿಷಯದಲ್ಲಿ ಜಾತಿ ಅಥವಾ ಧರ್ಮದ ಮಾತುಗಳನ್ನು ಆಡುವದು ನೋಡುತ್ತಲೇ ಇರುತ್ತೇವೆ, ಕೆಲವಿರಿಗೆ ಇದು ಇದು ಓಲೈಕೆಯ ಒಂದು ಭಾಗವಾದರೆ ಇನ್ನು ಕೆಲವರಿಗೆ ಇದು ಕೇವಲ ಪ್ರಚಾರ ಗಿಟ್ಟಿಸಿಕೊಳ್ಳಲು ಒಂದು ಗಿಮಿಕ್.  ಇಂತಹ ಹೇಳಿಕೆಗಳನ್ನು  IC – 814 ಹೈ ಜಾಕ್ ನಿಂದ ಹಿಡಿದು ಅಫ್ಜಲ್ ಗುರು, ಬಾಟ್ಲ ಹೌಸ್ ಎನ್ಕೌಂಟರ್, ಇಶ್ರಾತ್ ಜಹಾ ಎನ್ಕೌಂಟರ್, ಹೈದರಾಬಾದ್ ಬ್ಲಾಸ್ಟ್, ಜರ್ಮನ್ ಬೇಕರಿ ಬ್ಲಾಸ್ಟ್ ಹಾಗು ಮುಂಬೈ ತಾಜ್ ಅಟ್ಯಾಕ್ ಆದಗಲು  ಕೇಳುತ್ತಲೇ ಬಂದಿದ್ದೇವೆ. ಪ್ರತ್ಯೇಕತೆಯ ಹೆಸರಿನಲ್ಲಿ ಉಗ್ರವಾದ, ನಕ್ಸಲ್ ಹೆಸರಿನಲ್ಲಿ ಉಗ್ರವಾದ ಹಾಗು ಮಾವೋವಾದಿಗಳ ಉಗ್ರ ಚಟುವಟಿಕೆಯನ್ನು ವಹಿಸಿಕೊಂಡು ಮಾತನಾಡುವಂತಹ ಬುದ್ಧಿ ಜೀವಿಗಳು ಇಡೀ ದೇಶದಲ್ಲಿ ತುಂಬಿದ್ದಾರೆ. ಕೆಲವೊಮ್ಮ ರಾಜಕೀಯ ಪಕ್ಷಗಳ ಜೊತೆ, ಕೆಲವೊಮ್ಮೆ ಮಾಧ್ಯಮಗಳ ಜೊತೆ ಇನ್ನು ಕೆಲವೊಮ್ಮೆ ಮಾನವ ಹಕ್ಕು ಹೋರಾಟದ ನೆಪದಲ್ಲಿ ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ದಶಕಗಳ ಹಿಂದೆಯೇ ಧರ್ಮ ಮತ್ತು  ರಾಜಕೀಯದ ಹೆಸರಿನಲ್ಲಿ ಇಂಥಹ ಸಂಘಟನೆಗಳನ್ನು ಸಮರ್ಥಿಸಿಕೊಂಡ ಪಾಕಿಸ್ತಾನ, ಆಫ್ತಾನಿಸ್ತಾನ, ಇರಾಕ್ ಹಾಗು ಇಂತಹ ಅನೇಕ ರಾಷ್ಟ್ರಗಳು ತಾವೇ ಬೆಳಸಿದ ಈ ಉಗ್ರರಿಂದ ತಮ್ಮ ದೇಶವನ್ನು ಕಾಪಾಡಿಕೊಳ್ಳಲು ಇಂದು ಕಷ್ಟಪಡುತ್ತಿರುವದನ್ನು ನಾವೆಲ್ಲ ನೋಡುತ್ತಿದ್ದೇವೆ.
ಮತ್ತಷ್ಟು ಓದು »

28
ನವೆಂ

ಅಭಿವ್ಯಕ್ತಿ ಸ್ವಾತಂತ್ರವೆಂಬ ಕಪಟ ನಾಟಕ

– ಹೃಷಿಕೇಶ್ ಚಿಕ್ಕಮಗಳೂರು

tv9ಇತ್ತೀಚೆಗೆ ಕಳೆದ ಸೋಮವಾರದಿಂದ ಟಿ.ವಿ9 ವಾಹಿನಿಯನ್ನು ಪ್ರಸಾರ ಮಾಡದಂತೆ ಘನ ಸರ್ಕಾರದ ಮುಖ್ಯಸ್ಥರು ಕೇಬಲ್ ಆಪರೇಟರ್ ಗಳಿಗೆ ಫತ್ವಾವನ್ನು ಹೊರಡಿಸಿದ್ದರು.ಅದರನ್ವಯ ಬಹುತೇಕ ಪ್ರದೇಶಗಳಲ್ಲಿ ಆ ವಾಹಿನಿಯು ಕೇಬಲ್ ವಾಹಿನಿಗಳ ಲಿಸ್ಟ್ ನಿಂದ ಮಾಯವಾಗಿತ್ತು.(ನಂತರ ಕೇಬಲ್ ಆಪರೇಟರುಗಳ ಜೊತೆ ಮತುಕತೆಯೆಂಬ ಕಾರ್ಯಕ್ರಮದ ನೆಪದಲ್ಲಿ ಈ ಫತ್ವಾವನ್ನು ಹಿಂಪಡೆದು,ವಾಹಿನಿಯ ಪ್ರಸಾರಕ್ಕೆ ಅವಕಾಶಕೊಡಲಾಯಿತು)ಆ ವಾಹಿನಿಯನ್ನು ನೋಡದೆ ಊಟ ನಿದ್ದೆ ಬಿಟ್ಟು ಯಾರೂ ಸಾಯದೇ ಇದ್ದರೂ ಸಹ ಒಂದು ಆಸಕ್ತದಾಯಕ ಬೆಳವಣಿಗೆಯೊಂದು ಕಂಡುಬರುತ್ತದೆ. ಅದೆಂದರೆ ಅಭಿವ್ಯಕ್ತಿ ಸ್ವಾತಂತ್ರಕ್ಕೆ ಅಡ್ಡಿ, ಹಾಗೂ ಸರ್ಕಾರದ ನಾಲ್ಕನೇ ಅಂಗ ಎಂದೇ ಖ್ಯಾತಿ ಗಳಿಸಿದ ಮಾಧ್ಯಮದ ಮೇಲೆ ಒಂದು ಸುತ್ತಿನ ಬಿಗಿಹಿಡಿತ ಸಾಧಿಸಲು ಸರ್ಕಾರ ಶತಾಯಗತಾಯ ಪ್ರಯತ್ನ ಪಡುತ್ತಿರುವುದು ಗೋಚರವಾಗುತ್ತಿದೆ.

ಹಾಲಿ ಸಚಿವರೊಬ್ಬರ ಸ್ಟಿಂಗ್ ಆಪರೇಷನ್ ಮಾಡಲು ಹೋಗಿ ಈ ವಾಹಿನಿಗೆ ವಕ್ರದೃಷ್ಟಿ ಬಿದ್ದಂತಾಗಿದೆ. ವಿಷಯ ಏನೇ ಇದ್ದಿರಿಲಿ, ಆದರೆ ಸರ್ಕಾರದ ವಿರುದ್ಧ ಕಾರ್ಯಕ್ರಮಗಳನ್ನು ಮಾಡಲೇಬಾರದು ಎಂಬುದು ದಾಷ್ಟ್ಯದ ಪರಮಾವಧಿ ಎಂದೇ ಹೇಳಬೇಕು. ಬ್ರಿಟೀಷರ ನಂತರ ಪತ್ರಿಕಾ ಸ್ವಾತಂತ್ಯದ ಮೇಲೆ ನಿರ್ಬಂಧವನ್ನು ಹೇರಿದ್ದು ಮಾಜಿ ಪ್ರಧಾನಿ ಇಂದಿರಾ ಗಾಂಧಿ, ತದ ನಂತರ ಆ ಕೀರ್ತಿ ಪ್ರಸ್ತುತ ಸರ್ಕಾರಕ್ಕೆ ಸಲ್ಲುತ್ತದೆ. ಎಲ್ಲಾ ಮಾಧ್ಯಮದ ಮೇಲೂ ನಿರ್ಬಂಧ ಹೇರದಿದ್ದರೂ ನಿರ್ದಿಷ್ಟವಾಗಿ ತನಗೆ ಆಗದವರ ಮೇಲೆ ನಿರ್ಬಂಧ ಹೇರುವುದು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಅಡ್ಡಯಲ್ಲದೆ ಮತ್ತೇನೂ ಅಲ್ಲ.

ಮತ್ತಷ್ಟು ಓದು »

23
ಮೇ

ಮೂರ್ತಿಗಳೇ.ಯಾರ ಸರ್ಕಾರ ಮತ್ತು ಯಾರು ಫ್ಯಾಸಿಸ್ಟ್ ಗಳು?

– ರಾಕೇಶ್ ಶೆಟ್ಟಿ

ಅನಂತಮೂರ್ತಿ - ಸಿದ್ದರಾಮಯ್ಯಇವತ್ತಿನ ಕನ್ನಡ ಪ್ರಭದಲ್ಲಿ ಪ್ರಕಟವಾದ ನನ್ನ ಲೇಖನದ ಪೂರ್ಣ ಭಾಗವಿದು.ಈ ಲೇಖನವನ್ನು ಮೂರ್ತಿಗಳಿಗೂ ಮೇಲ್ ಮಾಡಿದ್ದೇನೆ.
“ಮೋದಿಯನ್ನು ಫ್ಯಾಸಿಸ್ಟ್” ಅಂತ ಮಾತು ಮಾತಿಗೆ ಕರೆಯುತ್ತಿರುವ,ನಾಡಿನ ಸಾಕ್ಷಿ ಪ್ರಜ್ಞೆ ಎಂದು ತಮ್ಮ ಶಿಷ್ಯ ವೃಂದದಿಂದ ಕರೆಸಿಕೊಳ್ಳುವ ನಮ್ಮ ಅನಂತಮೂರ್ತಿಗಳು,ಇತರ ಪ್ರಗತಿಪ್ರರು ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಮಾತನಾಡುವ ಗೆಳೆಯರು ಉತ್ತರಿಸಬೇಕಾದ ಪ್ರಶ್ನೆಗಳು. ಉತ್ತರದ ನಿರೀಕ್ಷೆಯಿದೆ…

ಎಲ್ಲಾ ಸಮೀಕ್ಷೆಗಳನ್ನು ಹುಸಿ ಮಾಡಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಏಕಾಂಗಿಯಾಗಿ ಅಭೂತಪೂರ್ವ ಜಯ ದಾಖಲಿಸಿದೆ. ಮೋದಿಯವರ ಗೆಲುವಿನ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಮೋದಿ ಅಭಿಮಾನಿಗಳ ಖುಷಿಯೂ ಮುಗಿಲು ಮುಟ್ಟಿದೆ.ಈ ಖುಷಿಯ ನಡುವೆ ಮುಖ್ಯವಾಗಿ ಪ್ರಸ್ತಾಪವಾಗುತ್ತಿರುವುದು “ನರೇಂದ್ರ ಮೋದಿ ಪ್ರಧಾನಿಯಾದರೆ ತಾವು ಭಾರತದಲ್ಲಿ ಇರಲು ಇಚ್ಛೆ ಪಡುವುದಿಲ್ಲ” ಎಂದು ನೀವು ಕಳೆದ ವರ್ಷದ ಸೆಪ್ಟಂಬರ್ ತಿಂಗಳಿನಲ್ಲಿ ನೀಡಿದ್ದ ಹೇಳಿಕೆ.

ಸಾಹಿತಿಗಳಿಕೇ ರಾಜಕೀಯ ಉಸಾಬರಿ ಅನ್ನುವುದು ಕೆಲವರು ವಾದವಾದರೆ,ಅದಕ್ಕೆ ಪ್ರತಿಯಾಗಿ ಸಾಹಿತಿಗಳಾದವರಿಗೂ ವೈಯುಕ್ತಿಕ ನಿಲುವುಗಳಿದ್ದರೇನು ತಪ್ಪು ಅನ್ನುವ ಪ್ರತಿವಾದವೂ ಕೇಳಿಬರುತ್ತಿದೆ.ಒಂದು ಕ್ಷಣಕ್ಕೆ ಮೂರ್ತಿಗಳ ರಾಜಕೀಯ ನಿಲುವುಗಳನ್ನು ಬದಿಗಿಡೋಣ.ಬುದ್ದಿಜೀವಿಗಳಾದ ಮೂರ್ತಿಗಳಿಗೆ ಮತ್ತವರ ಸೆಕ್ಯುಲರ್ ಸಾಹಿತಿಗಳ ತಂಡಕ್ಕೆ,ನಾಡಿನ ಬೌದ್ಧಿಕ ವಲಯದ ವಿಷಯವೊಂದರ ಮೂಲಕ ಒಂದಿಷ್ಟು ಬಹಿರಂಗ ಪ್ರಶ್ನೆಗಳನ್ನು ಕೇಳಿ ಅವರಿಂದ ಉತ್ತರ ಬಯಸೋಣ.

ನಾಡಿನ ಸಾಕ್ಷಿ ಪ್ರಜ್ಞೆ ಎಂದು ತಮ್ಮ ಶಿಷ್ಯ ವೃಂದದಿಂದ ಕರೆಸಿಕೊಳ್ಳುವ ನಮ್ಮ ಅನಂತ ಮೂರ್ತಿಗಳು,ಇತ್ತೀಚಿನ ದಿನಗಳಲ್ಲಿ ಈ ನಾಡಿನ ತಲ್ಲಣಗಳೆಲ್ಲವಕ್ಕೂ ನಿಜವಾಗಿಯೂ ಸ್ಪಂದಿಸಿದ್ದಾರೆಯೇ? ಉತ್ತರ : ಬಹುಷಃ ಇಲ್ಲವೆನ್ನಬಹುದು.

ಮತ್ತಷ್ಟು ಓದು »

18
ಮಾರ್ಚ್

ಜಾತ್ಯಾತೀತರೆನಿಸಿಕೊಳ್ಳಲು ಮುಸಲ್ಮಾನರ ಟೋಪಿ ಧರಿಸಲೇಬೇಕೆ?

– ನರೇಂದ್ರ ಕುಮಾರ್

Secular Nandan Nilekaniಮುಂಬರುವ ಲೋಕಸಭಾ ಚುನಾವಣೆಯಲ್ಲಿ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಂದನ್ ನೀಲೇಕಣಿಯವರು ಸ್ಪರ್ಧಿಸುತ್ತಿರುವುದು ಅಧಿಕೃತವಾಗಿ ಪ್ರಕಟವಾಗಿದೆ. ಅವರು ಕಾಂಗ್ರೆಸ್ ಅಭ್ಯರ್ಥಿಯೆಂದು ಘೋಷಣೆಯಾದ ಕೂಡಲೇ ಮುಸಲ್ಮಾನರ ಟೋಪಿ ಧರಿಸಿ ತಾವು ಕೂಡಾ “ಜಾತ್ಯಾತೀತ”ರೆಂದು ಲೋಕಕ್ಕೆಲ್ಲಾ ಸಾರಿದರು. ಈ ರೀತಿ ಮುಸಲ್ಮಾನ ಟೋಪಿ ಧರಿಸಿ “ಜಾತ್ಯಾತೀತ”ರಾಗುವುದು ಕಾಂಗ್ರೆಸ್ ಪರಂಪರೆಯೇ ಆದಂತಿದೆ. ಅದಕ್ಕಿಂತಲೂ ಮಿಗಿಲಾಗಿ, ಮುಸಲ್ಮಾನ ಟೋಪಿ ಧರಿಸದಿದ್ದವರನ್ನು “ಕೋಮುವಾದಿ” ಎಂದು ಖಂಡಿಸಲಾಗುತ್ತದೆ. ಒಂದೆರಡು ವರ್ಷದ ಹಿಂದೆ ಗುಜರಾತಿನಲ್ಲಿ ನಡೆದ ಸದ್ಭಾವನಾ ಸಭೆಯೊಂದರಲ್ಲಿ ನರೇಂದ್ರ ಮೋದಿಯವರಿಗೆ ಮುಸಲ್ಮಾನರೊಬ್ಬರು ಟೋಪಿ ನೀಡಿದರು. ಮೋದಿಯವರು ಆ ಟೋಪಿಯನ್ನು ಧರಿಸಲಿಲ್ಲ. ಆ ಕೂಡಲೇ ಅವರನ್ನು “ಕೋಮುವಾದಿ” ಎಂದು ಖಂಡಿಸಲಾಯಿತು.

ಇದು ಯಾವ ಸೀಮೆ ಜಾತ್ಯಾತೀತತೆ? ಒಂದು ಕೋಮಿನ ಟೋಪಿ ಧರಿಸಿದರೆ ಜಾತ್ಯಾತೀತ, ಧರಿಸದಿದ್ದರೆ ಕೋಮುವಾದಿ!? ಈ ದೇಶದಲ್ಲಿ ಬೇರೆ ಕೋಮುಗಳೇ ಇಲ್ಲವೆ? ಅವುಗಳಲ್ಲಿ ಅನೇಕ ಕೋಮುಗಳೂ ಅಲ್ಪಸಂಖ್ಯಾತವಲ್ಲವೇ? ಆ ಕೋಮುಗಳ ಲಾಂಚನವನ್ನೋ, ಟೋಪಿಯನ್ನೋ ಈ ರಾಜಕಾರಣಿಗಳು ಏಕೆ ಧರಿಸಿ ಪತ್ರಿಕೆಗಳಲ್ಲಿ ಚಿತ್ರ ಹಾಕಿಸಿಕೊಳ್ಳುವುದಿಲ್ಲ? ಮುಸಲ್ಮಾನ ಟೋಪಿ ಧರಿಸದಿದ್ದವರು ಕೋಮುವಾದಿಯಾಗುವುದಾದರೆ, ಆ ಉಳಿದ ಅಲ್ಪಸಂಖ್ಯಾತ ಕೋಮುಗಳ ಟೋಪಿ ಧರಿಸದಿದ್ದವರೂ ಕೋಮುವಾದಿ ಆಗಬೇಕಲ್ಲವೇ? ಮುಸಲ್ಮಾನರಿಗಿಂತ ಬಹಳ ಕಡಿಮೆ ಸಂಖ್ಯೆಯಲ್ಲಿರುವವರು ಜೈನರು. ಯಾವ ರಾಜಕಾರಣಿಯೂ ಜೈನರ ದಿರಿಸು ಧರಿಸಿ ತನ್ನ “ಜಾತ್ಯಾತೀತತೆ”ಯನ್ನು ಮೆರೆದದ್ದು ನನಗೆ ತಿಳಿದಿಲ್ಲ. ಅಥವಾ ಪಾರ್ಸಿ ಲಾಂಚನ ಧರಿಸಿಯೋ, ಇಲ್ಲವೇ ಬೌದ್ಧರ ದಿರಿಸು ಧರಿಸಿಯೋ, ಕ್ರೈಸ್ತರಂತೆ ವೇಷ ಹಾಕಿದ್ದೋ ಎಲ್ಲೂ ನೋಡಿಲ್ಲ.

ಮತ್ತಷ್ಟು ಓದು »

12
ಫೆಬ್ರ

ನಾಡು-ನುಡಿ:ಮರುಚಿಂತನೆ – “ಜಾತಿ ಹಾಗೂ ಅಸ್ಮಿತೆ ರಾಜಕೀಯ” ಭಾಗ ೨

– ಪ್ರೊ. ಜೆ.ಎಸ್. ಸದಾನಂದ, ಕುವೆಂಪು ವಿಶ್ವವಿದ್ಯಾನಿಲಯ

Social Science Column Logoನಾಡು-ನುಡಿ:ಮರುಚಿಂತನೆ – “ಜಾತಿ ಹಾಗೂ ಅಸ್ಮಿತೆ ರಾಜಕೀಯ” ಭಾಗ ೧

ನವ ಸಾಮಾಜಿಕ ಚಳುವಳಿ ಸಿದ್ಧಾಂತಗಳು:
1960 ಹಾಗೂ 70ರ ದಶಕದಲ್ಲಿ ಪ್ರಾರಂಭವಾದ ನವ ಸಾಮಾಜಿಕ ಚಳುವಳಿ ಸಿದ್ಧಾಂತಗಳು ಮಾರ್ಕ್ಸ್ ವಾದಿ ನಿಲುವುಗಳಿಗಿಂತ ಭಿನ್ನವಾದ ನಿಲುವನ್ನು ಮುಂದಿಡಲು ಯಶಸ್ವಿಯಾದವು. ವರ್ಗಾದಾರಿತವಲ್ಲದ ಅಸ್ಮಿತೆಯ ರಾಜಕೀಯ ಕೇವಲ ಸಾಂಕೇತಿಕ ಎನ್ನುವ ಮಾರ್ಕ್ಸ್ ವಾದಿ ನಿಲುವನ್ನು ಇವು ಅಲ್ಲಗಳೆಯುತ್ತವೆ. ಈ ಸಿದ್ಧಾಂತವು ಅಸ್ಮಿತೆ ರಾಜಕೀಯವನ್ನು ಒಂದು ವಿಶಿಷ್ಟ ಬಗೆಯ ರಾಜಕೀಯ ಎಂದೇ ಪ್ರತಿಪಾದಿಸುತ್ತದೆ. ಅಸ್ಮಿತೆಯಾದಾರಿತ ಚಳುವಳಿಗಳನ್ನು ಆಧುನಿಕತೆಯ ಪರಿಣಾಮವಾಗಿ ಆರ್ಥಿಕ ಮತ್ತು ಸಾಮಾಜಿಕ ವಲಯದ ಉನ್ನತ ಸ್ಥರದಲ್ಲಿ ಆದ ರಾಚನಿಕ ಬದಲಾವಣೆ ಅಸ್ಮಿತೆ ರಾಜಕೀಯವನ್ನು ಹುಟ್ಟು ಹಾಕಿದೆ ಮತ್ತು ಇದೊಂದು ಐತಿಹಾಸಿಕವಾದ ಸಾಮೂಹಿಕ ಪ್ರತಿಕ್ರಿಯೆ ಎಂದು ಈ ಸಿದ್ಧಾಂತದ ಪ್ರತಿಪಾದನೆಯಾಗಿದೆ. ಕೆಲವು ವಿದ್ವಾಂಸರು ಹೇಳುವಂತೆ ಅಸ್ಮಿತೆ ರಾಜಕೀಯವು ಕೈಗಾರಿಕೋತ್ತರ ಸಮಾಜದಲ್ಲಾಗುತ್ತಿರುವ ಒಂದು ಬಗೆಯ ಸ್ಥಿತ್ಯಂತರ (ಟೌರಿನ್ 1981).  ಹಬರ್ಮಾಸ್ರವರ ಅಭಿಪ್ರಾಯದಲ್ಲಿ ಅಸ್ಮಿತೆ ಚಳುವಳಿಗಳು ಪ್ರಭುತ್ವದ ನಿಯಂತ್ರಣ ಹಾಗೂ ಅದರ ನಿರ್ಣಯಗಳ ಒತ್ತಡಕ್ಕೆ ಹೆಚ್ಚು ಹೆಚ್ಚಾಗಿ ಒಳಗಾಗುತ್ತಿರುವ ಸಮುದಾಯಗಳು ಅಂತಹ ಹಿಡಿತದಿಂದ ತಪ್ಪಿಸಿಕೊಳ್ಳುವ ಪ್ರಯತ್ನದ ಫಲವಾಗಿವೆ (ಹಬರ್ಮಾಸ್ 1985).

ಮತ್ತಷ್ಟು ಓದು »

6
ಫೆಬ್ರ

ನಾಡು-ನುಡಿ:ಮರುಚಿಂತನೆ – “ಜಾತಿ ಹಾಗೂ ಅಸ್ಮಿತೆ ರಾಜಕೀಯ” ಭಾಗ ೧

– ಪ್ರೊ. ಜೆ.ಎಸ್. ಸದಾನಂದ, ಕುವೆಂಪು ವಿಶ್ವವಿದ್ಯಾನಿಲಯ

Social Science Column Logoರಾಜಕೀಯ ಸಿದ್ಧಾಂತದಲ್ಲಿ ಅಸ್ಮಿತೆ ರಾಜಕೀಯದ ಪರಿಕಲ್ಪನೆ ಪ್ರಬಲವಾಗಿದ್ದು 20ನೇ ಶತಮಾನದ ಉತ್ತರಾರ್ಧದಲ್ಲಿ. ತಮ್ಮ ಅಸ್ತಿತ್ವ ಸಂಪೂರ್ಣ ಅವಗಣನೆಗೆ ಒಳಗಾಗಿದೆ ಮತ್ತು ಆ ಕಾರಣದಿಂದ ತಮ್ಮನ್ನು ಪ್ರಾತಿನಿಧ್ಯದಿಂದ ವಂಚಿತರನ್ನಾಗಿಸಿ ರಾಜಕೀಯ ಮುಖ್ಯವಾಹಿನಿಯಿಂದ ದೂರವಿರಸಲಾಗಿದೆ ಎನ್ನುವ ಭಾವನೆ ಬೆಳೆಸಿಕೊಂಡ ಒಂದು (ಸಾಮಾಜಿಕ/ಸಾಂಸ್ಕೃತಿಕ) ಗುಂಪು ರಾಜಕೀಯ ಸಂಚಲನೆಗೆ ತೊಡಗುವ ಪ್ರಕ್ರಿಯೆಯನ್ನು ಅಸ್ಮಿತೆ ರಾಜಕೀಯ ಎಂದು ಕರೆಯಲಾಗುತ್ತದೆ. ಸಾರ್ವತ್ರಿಕ ಒಳಿತು ಅಸ್ಮಿತೆ ರಾಜಕೀಯದ ಗುರಿಯಾಗಿರುವುದಿಲ್ಲ ಮತ್ತು ಅಂತಹ ರಾಜಕೀಯ ಹೋರಾಟ ಯಾವುದೇ ರಾಜಕೀಯ ಪಕ್ಷಕ್ಕೆ ಸೀಮಿತವಾಗಿರುವುದಿಲ್ಲ. ಮುಖ್ಯವಾಹಿನಿಯಿಂದ ಬದಿಗೆ ಸರಿಸಲ್ಪಟ್ಟ ತನ್ನನ್ನು ಮುಖ್ಯವಾಹಿನಿಯೊಂದಿಗೆ ಗುರುತಿಸಿಕೊಳ್ಳುವಂತೆ ಮಾಡುವುದು ಒಂದು ಗುಂಪಿನ ಅಸ್ಮಿತೆ ರಾಜಕೀಯದ ಮುಖ್ಯ ಉದ್ದೇಶವಾಗಿರುತ್ತದೆ.

20ನೇ ಶತಮಾನದ ಉತ್ತರಾರ್ಧದಲ್ಲಿ ಅಮೇರಿಕಾ ದೇಶದಲ್ಲಿ ಪ್ರಾರಂಭವಾದ (ದ್ವಿತೀಯ ಹಂತದ) ಸ್ತ್ರೀವಾದೀ ಚಳುವಳಿ, ಕರಿಯರ ನಾಗರೀಕ ಹಕ್ಕುಗಳ ಹೋರಾಟ, ಸಲಿಂಗಿಗಳು ತಮ್ಮ ಹಕ್ಕಿಗಳಿಗಾಗಿ ಮಾಡಿದ ಹೋರಾಟ ಮೊದಲಾದವುಗಳನ್ನು ಅಸ್ಮಿತೆ ರಾಜಕೀಯ ಎಂದು ಮೊತ್ತ ಮೊದಲ ಬಾರಿಗೆ ಗುರುತಿಸಲಾಯಿತು. ಈ ಎಲ್ಲಾ ಗುಂಪುಗಳು ತಮ್ಮ ವಿಶಿಷ್ಟ ಅಸ್ಮಿತೆಯನ್ನು ಗುರುತಿಸಿ ಗೌರವಿಸದೆ ಆ ಕಾರಣಕ್ಕಾಗಿ ತಾವು ಮುಖ್ಯವಾಹಿನಿಯಿಂದ ಬದಿಗೆ ಸರಿಸಲ್ಪಟ್ಟ ಪ್ರಕ್ರಿಯೆಯ ವಿರುದ್ಧ ಹೋರಾಟ ಪ್ರಾರಂಬಿಸಿದವು. ತಾವು ಸಾಮಾಜಿಕವಾಗಿ ರಾಜಕೀಯವಾಗಿ ತುಳಿತಕ್ಕೊಳಗಾಗಿದ್ದೇವೆ ಎನ್ನುವ ಭಾವನೆಯನ್ನು ಆಧರಿಸಿ ಅಸ್ಮಿತೆ ರಾಜಕೀಯದ ಸಂಘಟನೆಯು ತನ್ನ ಸ್ವರೂಪವನ್ನು ಪಡೆದುಕೊಳ್ಳುತ್ತದೆ. ಅಸ್ಮಿತೆ ರಾಜಕೀಯ ಎಂದು ಕರೆಯಲ್ಪಡುವ ರಾಜಕೀಯ/ಸಾಮಾಜಿಕ ಚಳುವಳಿಗಳ ವ್ಯಾಪ್ತಿ ವಿಶಾಲವಾದುದಾಗಿದೆ. ರಾಜಕೀಯ ಶಾಸ್ತ್ರದ ಅಧಯಯನಗಳಲ್ಲಿ ಅಸ್ಮಿತೆ ರಾಜಕೀಯಕ್ಕೆ ಸಂಬಂದಿಸಿದ ಬರವಣೆಗೆಗಳು ಪಾಶ್ಚಾತ್ಯ ಬಂಡವಾಳಿಶಾಹಿ ಪ್ರಜಾಪ್ರಭುತ್ವಗಳಿಗೆ ಸಂಬಂದಿಸಿರುತ್ತವೆ. ಬಂಡವಾಳಶಾಹಿ ವ್ಯವಸ್ಥೆಯ ಹಿಡಿತ ಪ್ರಬಲವಾಗುತ್ತಾ ಹೋದ ಹಾಗೆ ಪರಂಪರಾನುಗತವಾಗಿ ಬಂದ ಸಮುದಾಯಗಳು ತಮ್ಮ ಅಸ್ಮಿತೆಗಳನ್ನು ಕಳೆದುಕೊಳ್ಳುತ್ತಾ ಹೋಗಿ ಅಂತಹ ಸಮುದಾಯಗಳ ಸದಸ್ಯರಲ್ಲಿ ಪರಕೀಯತೆಯ ಭಾವನೆ ಹೆಚ್ಚಗುತ್ತಾ ಹೋದದ್ದರ ಪರಿಣಾಮದಿಂದಾಗಿ ಅಸ್ಮಿತೆ ರಾಜಕೀಯ ಹುಟ್ಟಿಕೊಂಡಿದೆ ಎಂದು ಕೆಲವರು ಭಾವಿಸುತ್ತಾರೆ.
ಮತ್ತಷ್ಟು ಓದು »

25
ನವೆಂ

ಧರ್ಮವನ್ನು ಅಫೀಮು ಎಂದವರಿಂದ ಮತ್ತೇನು ನಿರೀಕ್ಷಿಸಲಾದೀತು?

– ನರೇಂದ್ರ ಕುಮಾರ ಎಸ್.ಎಸ್

Tarun Tejpalತೆಹಲ್ಕಾ’ದ ತರುಣ್ ತೇಜಪಾಲ್ ಅವರು ನಡೆಸಿರುವರೆನ್ನಲಾದ ಲೈಂಗಿಕ ಹಲ್ಲೆ ಪ್ರಕರಣ, ಮಾಧ್ಯಮದ ಮುಖವಾಡವನ್ನು ಕಿತ್ತೆಸೆದಿದೆ. ಇದೇ ’ತೆಹಲ್ಕಾ’ವು, ಆಗಾಗ “ಕುಟುಕು ಕಾರ್ಯಾಚರಣೆ”ಯ ಮೂಲಕ ರಾಜಕಾರಣಿಗಳನ್ನು ಸಿಕ್ಕಿಹಾಕಿಸುತ್ತಿತ್ತು. ಒಂದು ಗುಪ್ತ ಕ್ಯಾಮೆರಾ ಜೊತೆಗೆ ತೆರಳುವ ಈ “ಕುಟುಕು ಕಾರ್ಯಾಚರಣೆ ಪಡೆ”, ರಾಜಕಾರಣಿಗಳಿಗೆ ತಿಳಿಯದಂತೆ ಬಲೆ ಬೀಸುತ್ತಿತ್ತು. ಅವರಿಗೆ ಆಮಿಷವನ್ನು ತೋರಿಸಿ, ಆಗ ನಡೆಯುವ ಪೂರ್ಣ ಸಂಭಾಷಣೆಯನ್ನು ಕ್ಯಾಮೆರಾ ಮೂಲಕ ಸೆರೆಹಿಡಿದು, ಆ ನಂತರ ವಿಡಿಯೋವನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡುತ್ತಿತ್ತು. ಆ ವಿಡಿಯೋ ನೋಡಿದ ಜನ, ಅದರಲ್ಲಿರುವ ರಾಜಕಾರಣಿ ಭ್ರಷ್ಟಾಚಾರಿಯೇ ಎಂದು ನಿರ್ಧಾರಕ್ಕೆ ಬರುವ ರೀತಿಯಲ್ಲಿ ಅದನ್ನು ಪ್ರಸ್ತುತ ಪಡಿಸಲಾಗುತ್ತಿತ್ತು. ನ್ಯಾಯಾಂಗ ವಿಚಾರಣೆಯ ಬದಲು ಮಾಧ್ಯಮಗಳೇ ವಿಚಾರಣೆ ನಡೆಸಿ, ರಾಜಕಾರಣಿಯನ್ನು ತಪ್ಪಿತಸ್ಥ ಎಂದು ಘೋಷಿಸಲಾಗಿಬಿಡುತ್ತಿತ್ತು.

ವ್ಯಕ್ತಿಯೊಬ್ಬ ಭ್ರಷ್ಟಾಚಾರಿ ಅಲ್ಲದಿದ್ದರೂ, ಆಮಿಷಕ್ಕೊಳಗಾಗಿ ಕೆಲವು ತಪ್ಪುಗಳನ್ನು ಮಾಡುವನು. ಉದಾಹರಣೆಗೆ, ಮನೆಗೆಲಸಕ್ಕೆ ಬರುವ ಹುಡುಗ/ಹುಡುಗಿ ಕಳ್ಳರಾಗಿರುವುದಿಲ್ಲ. ಅವರು ಕಷ್ಟಪಟ್ಟು ಕೆಲಸ ಮಾಡಿ ಸಂಪಾದಿಸುವ ಉದ್ದೇಶ ಹೊಂದಿಯೇ ಕೆಲಸಕ್ಕೆ ಬಂದಿರುತ್ತಾರೆ. ಆದರೆ, ಅವರು ಕೆಲಸ ಮಾಡುವ ಮನೆಯಲ್ಲಿ, ಈ ಹುಡುಗ/ಹುಡುಗಿಯ ಕಣ್ಣಿಗೆ ಕಾಣಿಸುವಂತೆ ಹಣವನ್ನೋ ಇಲ್ಲವೇ ಆಭರಣಗಳನ್ನೋ ಇಟ್ಟಿದ್ದರೆ, ಅವರು ಆಮಿಷಕ್ಕೆ ಒಳಗಾಗಿಬಿಡುತ್ತಾರೆ. ಅಲ್ಲಿ ಇಟ್ಟಿರುವ ಹಣ/ಆಭರಣವನ್ನು ಯಾರೂ ಗಮನಿಸುತ್ತಿಲ್ಲವೆಂದು ತಿಳಿದಾಗ, ಅದನ್ನು ತೆಗೆದುಕೊಳ್ಳೋಣ ಎಂದೆನ್ನಿಸಿಬಿಡಬಹುದು. ಆಮಿಷದಿಂದ ಉಂಟಾದ ಆಸೆಯಿಂದ ತಪ್ಪಿಸಿಕೊಳ್ಳಲಾಗದೆ “ಕಳ್ಳತನ” ನಡೆದುಬಿಡುತ್ತದೆ. ಇಲ್ಲಿ ಕಳ್ಳತನ ಮಾಡಿದ ಹುಡುಗ/ಹುಡುಗಿಯದು ಎಷ್ಟು ತಪ್ಪೋ, ಅಷ್ಟೇ ತಪ್ಪು ಆ ಹಣ/ಆಭರಣಗಳನ್ನು ಇವರ ಕಣ್ಣಿಗೆ ಕಾಣುವಂತೆ ಇಟ್ಟು ಆಮಿಷ ಕೊಟ್ಟವರದೂ ಆಗಿರುತ್ತದೆ, ಅಲ್ಲವೆ?

ಮತ್ತಷ್ಟು ಓದು »