ದೆವ್ವಗಳ ಊರಿನಲ್ಲಿ
– ರಾಕೇಶ್ ಶೆಟ್ಟಿ
Most Haunted Places in India ಎನ್ನುವ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವುದು ರಾಜಸ್ಥಾನದಲ್ಲಿರುವ ಬಾಂಗ್ರಾ ಕೋಟೆ.
ಬಾಂಗ್ರಾ ಕೋಟೆಯಲ್ಲಿ ಸೂರ್ಯೋದಯದ ಮೊದಲು ಮತ್ತು ಸೂರ್ಯಾಸ್ತದ ನಂತರ ಯಾರಿಗೂ ಪ್ರವೇಶವಿಲ್ಲ ಎಂಬ ಬೋರ್ಡನ್ನು ಭಾರತೀಯ ಪುರಾತತ್ವ ಇಲಾಖೆಯೇ ತಗುಲಿಹಾಕಿದೆಯಂತೆ. ಈ ಎಚ್ಚರಿಕೆಯನ್ನು ಮೀರಿ ಸೂರ್ಯಾಸ್ತದ ನಂತರ ಕೋಟೆಯಲ್ಲಿಯೇ ಉಳಿಯಲೆತ್ನಿಸಿದವರು ಮರಳಿಬಂದಿಲ್ಲವೆಂಬುದು ಅಲ್ಲಿನ ಗ್ರಾಮಸ್ಥರ ಅಂಬೋಣ. ಸತ್ಯವೋ,ಸುಳ್ಳೋ ಗೊತ್ತಿಲ್ಲ. ಈ ಭೂತದ ಕೋಟೆಯ ಹಿಂದೆ ಎರಡು ಮೂರು ಕತೆಗಳಿವೆ. ಮತ್ತಷ್ಟು ಓದು
ಸೆಮಿಫೈನಲ್ ಮತ್ತು ಫೈನಲ್
-ನವೀನ್ ನಾಯಕ್
ಭಾರತದ ಸೆಮಿಫೈನಲ್ ಎಂದೇ ಬಿಂಬಿತವಾಗಿದ್ದ ಪಂಚರಾಜ್ಯಗಳ ಚುನಾವಣೆ ಹಲವು ಹೊಸ ವಿಚಾರಗಳನ್ನು ತೆರೆದಿಟ್ಟಿದೆ.
1) ನೋಟ ( none of the above ) ಬಳಸಲು ಮೊದಲು ಶುರು ಮಾಡಿದ್ದು.
2) ಜನಲೋಕಪಾಲ್ ಹೋರಾಟದಿಂದ ಬಂದ ರಾಜಕೀಯ ಪಕ್ಷ ಆಪ್
3) ಇನ್ನಾರು ತಿಂಗಳಲ್ಲಿ ಲೋಕಸಭೆ ಚುನಾವಣೆ ಇರುವುದರಿಂದ ಎಲ್ಲಾ ರಾಜಕೀಯ ಪಕ್ಷಗಳಿಗೆ ಪೂರ್ವ ತಯಾರಿಗೆ ಜನರ ನಾಡಿ ಮಿಡಿತ ತಿಳಿಯಲು ಸಿಕ್ಕ ಒಂದು ಅವಕಾಶ.
4) ಮೋದಿ ಮತ್ತು ಕಾಂಗ್ರೆಸ್ ಹಣಾಹಣಿ.
ಇಡೀ ದೇಶದ ಪ್ರಜೆಗಳನ್ನು ಡಿಸೆಂಬರ್ 8 ಕ್ಕೆ ಗಮನೀಯವಾಗುವಂತೆ ಮಾಡಿದ್ದು ಈ ನಾಲ್ಕು ಕಾರಣಗಳಿಗಾಗಿ. ಪ್ರಸಕ್ತ ರಾಜಕಾರಣದ ವೈಫಲ್ಯದಿಂದಾಗಿ ಹೈರಾಣಾಗಿರುವ ಜನರು ರಾಜಕೀಯಕ್ಕೆ ಯಾವ ಪಾಠ ಕಲಿಸಬಹುದೆಂದು ಎಲ್ಲರೂ ತಿಳಿಯಲು ಬಯಸುತಿದ್ದರು. ಮತದಾರ ಪ್ರಭು ಇಲ್ಲಿ ಯಾವ ಅಂಶ ಮುಖ್ಯವಾಗಿ ಗಣನೆಗೆ ತೆಗೆದುಕೊಳ್ಳಬಹುದು, ಆತನ ಸಧ್ಯದ ಮನಸ್ಥಿತಿ ಏನು. ಇದು ಆಯಾ ರಾಜ್ಯಕ್ಕೆ ಸಂಬಂದಪಟ್ಟರೂ ದೇಶಕ್ಕೆ ಖಂಡಿತಾ ಮೇಲಿನ ನಾಲ್ಕು ಕಾರಣಗಳಿಗಾಗಿ ಮಾರ್ಗದರ್ಶಿಯಾಗಿದೆ.
1) ನೋಟ- ಅಭ್ಯರ್ಥಿಗಳನ್ನು ತಿರಸ್ಕರಿಸುವ ಹಕ್ಕನ್ನು ಸುಪ್ರೀಂ ತೀರ್ಪಿನ ಅನ್ವಯ ವೋಟಿಂಗ್ ಮೆಷೀನಲ್ಲಿ ಬಳಸಲಾಯಿತು. ಇದೊಂದು ಕ್ರಾಂತಿಕಾರಕ ಬದಲಾವಣೆಯಾದರೂ ಅಭ್ಯರ್ಥಿಗಳ ಮೇಲೆ ಇದರ ಪ್ರಭಾವ ಬೀರದಂತಿದೆ. ಚುನಾವಣ ಆಯೋಗ ಇದನ್ನು ಬೆಲೆ ಇಲ್ಲದ ಮತಗಳು ಎಂದು ಪರಿಗಣಿಸಿವೆ. ಏಕೆಂದರೆ ನೋಟದ ಬಗ್ಗೆ ಇನ್ನೂ ಸ್ಪಷ್ಟ ತೀರ್ಮಾನಗಳನ್ನು ಆಯೋಗ ಕಂಡುಕೊಂಡಿಲ್ಲ. ಅದೇನೆ ಇರಲಿ, ಇದರಿಂದ ನಿಂತಿರುವವರೆಲ್ಲ ಕಳ್ಳರೇ ನಂಗೆ ಯಾರೂ ಇಷ್ಟವಿಲ್ಲದ ಕಾರಣ ಮತದಾನ ಮಾಡುತ್ತಿಲ್ಲ ಎಂದು ನೆಪವೊಡ್ಡಿ ನಿರ್ಲಕ್ಷ್ಯವಹಿಸುತಿದ್ದ ಸುಶಿಕ್ಷಿತರ ಪ್ರತಿಕ್ರಿಯೆ ತಿಳಿಯಬಹುದಿತ್ತು. ನಾಲ್ಕು ರಾಜ್ಯದಲ್ಲಿ 11.53 ಕೋಟಿ ಮತ ಚಲಾವಣೆಯಾಗಿದೆ ಅದರಲ್ಲಿ 1.31 ಶೇಕಡಾ ಮತದಾರರು ಈ ವ್ಯವಸ್ತೆಯನ್ನು ಬಳಸಿದ್ದಾರೆ.