ವಿಷಯದ ವಿವರಗಳಿಗೆ ದಾಟಿರಿ

Posts tagged ‘ರಾಜೀವ್ ಮಲ್ಹೋತ್ರಾ’

12
ನವೆಂ

ರಾಜೀವ್ ಮಲ್ಹೋತ್ರ ಸಂವಾದ : ಭಾಗ ೨

ಆಂಗ್ಲಮೂಲ : ಶ್ರೀ ರಾಜೀವ್ ಮಲ್ಹೋತ್ರ                                              

ಕನ್ನಡ ಅನುವಾದ : ಶ್ರೀ ಹುಲ್ಲುಮನೆ ಶ್ರೀಧರ

ರಾಜೀವ್ ಮಲ್ಹೋತ್ರ ಸಂವಾದ : ಅಯೋಧ್ಯೆ,ಸತಿ ಪದ್ಧತಿ ಮತ್ತಿತರ ವಿಷಯಗಳು – 1

ಉದಾರವಾದಿಗಳು ಮತ್ತು ಕ್ರಿಶ್ಚಿಯನ್ ಮತಕ್ಕೆ ಸೇರಿಸಿಕೊಳ್ಳುವ/ ಪ್ರಚಾರಕರ (ಇವಾನ್ಜಲಿಸ್ಟ್‌ಗಳ) ನಡುವೆ ಹೊಂದಾಣಿಕೆ:

ಬ್ರಿಟಿಷ್ ಸಂಸತ್ತಿನಲ್ಲಿ ಎಡ್ವಿನ್ ಬೆರ್ಕ್ ಸ್ಪಷ್ಟವಾಗಿ ಹೇಳಿದ್ದಿದೆ- ’ಓಕ್ ಮರಗಳನ್ನು ಥೇಮ್ಸ್ ನದಿಯ ದಂಡೆಯಿಂದ ತೆಗೆದುಕೊಂಡು ಹೋಗಿ ಗಂಗಾನದಿಯ ದಂಡೆಯುದ್ದಕ್ಕೂ ನೆಡಲಾಗದು’ ಎಂದು. ಭಾರತೀಯ ಸಂಸ್ಥಾನಗಳು ಭಾರತೀಯರ ಅಗತ್ಯಗಳನ್ನು ಪೂರೈಸುತ್ತಿದ್ದವು. ಆ ಸಂಸ್ಥೆಗಳಲ್ಲಿ ಪುನರುಜ್ಜೀವನದ ಅಗತ್ಯವಿತ್ತೇ ವಿನಃ ಅವುಗಳನ್ನು ಬದಲಿಸುವ ಅಗತ್ಯವಿರಲಿಲ್ಲ. ಆಂಗ್ಲರಲ್ಲಿ, ಸಂಸತ್ತಿನಲ್ಲಿ ಹಾಗೂ ಭಾರತದ ಆಂಗ್ಲ ಅಧಿಕಾರಿಗಳಲ್ಲಿ ಒಂದು ಬಲವಾದ ಗುಂಪಿದ್ದು ಅವರು ಭಾರತೀಯ ಸಂಸ್ಥಾನಗಳನ್ನು ಮರುನಿರ್ಮಾಣ ಮಾಡಲಿಚ್ಛಿಸಿದ್ದರು. ನಮ್ಮ ಕುತೂಹಲಕ್ಕೆ ’ಸಂಪ್ರದಾಯವಾದಿಗಳು’ (ಕನ್ಸರ್ವೇಟಿವ್‌ಗಳು) ಗಂಭೀರತೆಯಿಂದ ಭಾರತೀಯ ಸಂಸ್ಥಾನಗಳನ್ನು ಹೇಗಿದ್ದವೋ ಹಾಗೆಯೇ ಬಿಡಬೇಕೆನ್ನುತ್ತಿದ್ದರು. ’ಆಂಗ್ಲ ಉದಾರವಾದಿಗಳು’ ಭಾರತದ ಸಂಸ್ಥಾನಗಳನ್ನು ಗೊಂದಲಮಯವಾಗಿಸಲು/ ಅವ್ಯವಸ್ಥಿತಗೊಳಿಸಲು ಇಚ್ಛಿಸಿದ್ದರು. ಮತ್ತಷ್ಟು ಓದು »

8
ನವೆಂ

ರಾಜೀವ್ ಮಲ್ಹೋತ್ರ ಸಂವಾದ : ಅಯೋಧ್ಯೆ,ಸತಿ ಪದ್ಧತಿ ಮತ್ತಿತರ ವಿಷಯಗಳು – 1

ಆಂಗ್ಲಮೂಲ : ಶ್ರೀ ರಾಜೀವ್ ಮಲ್ಹೋತ್ರ                                              

ಕನ್ನಡ ಅನುವಾದ : ಶ್ರೀ ಹುಲ್ಲುಮನೆ ಶ್ರೀಧರ

ಈ ಚರ್ಚೆಯಲ್ಲಿ ನಾನು ದೆಹಲಿ ವಿಶ್ವವಿದ್ಯಾಲಯದಲ್ಲಿ ಇತಿಹಾಸ ಮತ್ತು ರಾಜ್ಯಶಾಸ್ತ್ರವಿಭಾಗದ ಸಹ ಪ್ರಾಧ್ಯಾಪಕರಾಗಿರುವ ಶ್ರೀಮತಿ ಮೀನಾಕ್ಷಿ ಜೈನ್‌ರೊಂದಿಗೆ ಅವರ ಕೃತಿಗಳ ಬಗ್ಗೆ ವಿಚಾರಮಾಡಲಿದ್ದೇನೆ. ನಾನು ಶ್ರೀಮತಿ. ಮೀನಾಕ್ಷಿ ಜೈನ್‌ರನ್ನು ಸುಮಾರು ಎರಡು ದಶಕಗಳಿಂದ ಬಲ್ಲೆ. ಹಾಗೂ ಅವರನ್ನು ಇಂದಿನ ಭಾರತದಲ್ಲಿ ಒಬ್ಬ ಇತಿಹಾಸ ಮತ್ತು ರಾಜಕೀಯ ವಿಷಯಗಳ ಉತ್ತಮ ವಿದ್ವಾಂಸರೆಂದು ಗೌರವಿಸುತ್ತೇನೆ. ಅವರು ದೆಹಲಿಯಲ್ಲಿ ಶಲ್ಡನ್ ಪೊಲ್ಲಾಕ್‌ನ್ನು ಕುರಿತು ನಡೆದ ೨ನೇ ಸ್ವದೇಶೀ ಇಂಡಾಲಜಿ ಸಮ್ಮೇಳನದಲ್ಲಿ ಭಾಗವಹಿಸಿ, ಒಂದು ಅದ್ಭುತ ಲೇಖನವನ್ನು ಪ್ರಸ್ತುತಪಡಿಸಿದ್ದರು. ಅವರು ಮತ್ತು ನನ್ನಲ್ಲಿ ಇರುವ ಒಂದು ಸಾಮಾನ್ಯ ಅಂಶವೆಂದರೆ ಇಬ್ಬರೂ ನಮ್ಮೊಡನೆ ವಾದ ಮಾಡುವ, ನಮ್ಮನ್ನು ಉಪೇಕ್ಷೆ ಮಾಡುವ ಅಥವಾ ನಮ್ಮ ಹೆಸರೆತ್ತಿ ದೂಷಿಸುವ ಭಾರತೀಯ ಎಡಪಂಥದವರನ್ನು ಟೀಕಿಸಿದ್ದೇವೆ. ಕಳೆದ ಅನೇಕ ವರ್ಷಗಳ ಕಾಲ ಅವರ ಸಂಪರ್ಕವಿರಲಿಲ್ಲ, ಹಾಗಾಗಿ ಈ ಅವಕಾಶವು ನಮಗೆ ಬಹಳ ದಿನಗಳ ವಿಚಾರ ವಿನಿಮಯಕ್ಕೆ ಒದಗಿಬಂದಿದೆ ಎಂದು ತಿಳಿದಿದ್ದೇನೆ. ನಾವು ಭಾರತದ ಶೈಕ್ಷಣಿಕ ವಲಯದಲ್ಲಿ ಎಡಪಂಥೀಯರ ಪ್ರಾಬಲ್ಯ, ಅಯೋಧ್ಯೆ-ಬಾಬರಿ ಮಸೀದಿಯ ವಿವಾದ, ’ಸತಿ’ ಪದ್ಧತಿಯ ಬಗ್ಗೆ ಇರುವ ತಪ್ಪು ತಿಳುವಳಿಕೆಗಳು, ಮೂರ್ತಿಭಂಜನೆ ಮತ್ತು ಸ್ವದೇಶೀ ಇಂಡಾಲಜಿಯ ಸಂಶೋಧನಾ ವಲಯ ಇತ್ಯಾದಿ ಹಲವಾರು ವಿಚಾರಗಳನ್ನು ಚರ್ಚಿಸಿದೆವು.

ಭಾರತದ ಶೈಕ್ಷಣಿಕ ವಲಯದಲ್ಲಿ ಎಡಪಂಥೀಯರ ಪ್ರಾಬಲ್ಯ:

ಭಾರತೀಯ ಶಿಕ್ಷಣವಲಯದಲ್ಲಿ ಬುದ್ಧಿವಂತರಿಗೆ ನೀಡುವ ಪ್ರೋತ್ಸಾಹಧನದ ವಿಚಾರವಾಗಿ ಚರ್ಚಿಸುವಾಗ ಎಡಪಂಥದ ಪ್ರಬಲ ವಿದ್ವಾಂಸರಾದ ಇರ್ಫಾನ್ ಹಬೀಬ್ ಮತ್ತು ರೋಮಿಲಾ ಥಾಪರ್‌ರ ಅಡಿಯಲ್ಲಿ ಶಿಕ್ಷಣವಲಯದಲ್ಲಿ ಉಸಿರುಕಟ್ಟಿಸುವ ವಾತಾವರಣವು ಇತ್ತು ಎಂದು ಅವರು ಅಭಿಪ್ರಾಯಪಟ್ಟರು. ಅವರು ಶಿಕ್ಷಣವಲಯದಲ್ಲಿ ಸಹಾಯಧನವನ್ನು ನೀಡುವ ಎಲ್ಲ ಸಂಸ್ಥೆಗಳ ಮೇಲೆಯೂ ಮತ್ತು ಸಂಶೋಧನೆ ಮಾಡಲು ಬರುವ ಎಲ್ಲ ವಿದ್ಯಾರ್ಥಿಗಳೂ ಇವರ ಅಡಿಯಲ್ಲಿ, ಇವರ ದೃಷ್ಟಿಕೋನದ ಪ್ರಕಾರವೇ ಕೆಲಸ ಮಾಡುವಂತೆ ತಮ್ಮ ಸಂಪೂರ್ಣ ನಿಯಂತ್ರಣವನ್ನು ಚಲಾಯಿಸಿಕೊಂಡಿದ್ದರು. ಹೀಗಾಗಿ ಇವರ ವಿಚಾರಗಳನ್ನು ಬೆಂಬಲಿಸದವರಿಗೆ ಅಥವಾ ಬೇರೆ ಆಲೋಚನೆಯ ಧಾಟಿ ಹೊಂದಿದವರಿಗೆ ಯಾವ ಇತಿಹಾಸಕಾರನಾಗಿ ಅಥವಾ ವಿದ್ವತ್ತಿನಲ್ಲಿಯೂ ತಮ್ಮ ಗುರುತನ್ನು ಉಳಿಸಲು ದುಸ್ತರವಾಗುತ್ತಿತ್ತು. ಯಾರಾದರೂ ವಿಭಿನ್ನವಾದ ಅಥವಾ ವೈರುಧ್ಯದ ದೃಷ್ಟಿಕೋನವನ್ನು ಹೊಂದಿದ್ದರೆ ಅವರು ತಮ್ಮದೇ ಆದ ಮಾರ್ಗವನ್ನು ರೂಪಿಸಿಕೊಳ್ಳ ಬೇಕಾಗಿತ್ತು. ಆ ಮಾರ್ಗವು ಏಕಾಂಗಿಯಾಗಿದ್ದು ಅವರು ತಮ್ಮಷ್ಟಕ್ಕೆ ತಾವೇ ನಡೆಯಬೇಕಾಗಿತ್ತು.

ಮತ್ತಷ್ಟು ಓದು »

24
ಫೆಬ್ರ

ಇಲ್ಲಿ ಅಸಹಿಷ್ಣುತೆಯಿದೆ!

Dedicated to our purva paksha and uttara- paksha debating tradition. With gratitude to the purva-pakshins (opponents) I have learned from. May we engage in this intellectual yajna, with mutual respect.

-ನವೀನ ಗಂಗೋತ್ರಿ

ದಿ ಬ್ಯಾಟಲ್ ಫಾರ್ ಸಂಸ್ಕೃತ್ರಾಜೀವ್ ಮಲ್ಹೋತ್ರಾ ತಮ್ಮ ಇತ್ತೀಚಿನ ಹೊಸ ಪುಸ್ತಕ, ‘ದಿ ಬ್ಯಾಟಲ್ ಫಾರ್ ಸಂಸ್ಕೃತ್’ ನ ಅರ್ಪಣೆಯಲ್ಲಿ ಈ ರೀತಿ ಬರೆಯುತ್ತಾರೆ. ಈ ನೆಲದಲ್ಲಿ ಒಂದು ಕಾಲಕ್ಕೆ ಉತ್ತುಂಗ ತಲುಪಿದ್ದ ಮತ್ತು ಮಹತ್ತರ ಗೌರವಕ್ಕೆ ಪಾತ್ರವಾಗಿದ್ದ ’ವಾಕ್ಯಾರ್ಥ’ ಪರಂಪರೆ ಅಥವಾ ವಾದ ಪ್ರತಿವಾದದ ಸಂಸ್ಕೃತಿಯ ಕುರಿತು ಆ ಪುಸ್ತಕ ಧ್ವನಿಯೆತ್ತುತ್ತದೆ. ಹಾಗೆ ದನಿಯಾಗಲೇ ಬೇಕಾದ ಕಾಲಖಂಡದಲ್ಲಿ ನಾವಿದ್ದೇವೆಂಬುದು ವಿಷಯ.

ನಮ್ಮ ವೇದಗಳು, ಸ್ಮೃತಿಗಳು, ನಮ್ಮ ಕಥೆ, ಪುರಾಣ, ಕಾವ್ಯ, ಶಾಸ್ತ್ರ, ಕಲಾಪ್ರಕಾರ ಮತ್ತು ಸಮಾಜದ ವ್ಯವಸ್ಥೆಯನ್ನೆಲ್ಲ ನಾವು ಸರಿಯಾಗಿ ಅರ್ಥ ಮಾಡಿಕೊಳ್ಳುವ ಅಗತ್ಯವೇ ಇಲ್ಲ ಅನ್ನುವ ಭರದಲ್ಲಿ ನಾವಿದ್ದರೆ ನಮ್ಮದೆಲ್ಲವನ್ನೂ ತಮ್ಮ ಸಮಾಜ ಮತ್ತು ತಮ್ ತಮ್ಮ ನಾಗರಿಗಕತೆಯ ಅರಿವಿನ ಪರಿಧಿಯಲ್ಲಿ ಅರ್ಥವಿಸಿಕೊಂಡು ವ್ಯಾಖ್ಯಾನ ಬರೆಯುವ ಹುಕಿಯೊಂದು ಪಶ್ಚಿಮ ರಾಷ್ಟ್ರಗಳ ವಿದ್ವಾಂಸರಲ್ಲಿ ಬಹುಕಾಲದಿಂದ ಚಾಲ್ತಿಯಲ್ಲಿದೆ. ಭಾರತದ ಬಗ್ಗೆ ತಿಳಿದುಕೊಳ್ಳುವ ಅಗತ್ಯ ನಮಗೆ ಕಾಣಿಸಿದಾಗೆಲ್ಲ ಈ ಪಶ್ಚಿಮದ ವಿದ್ವಾಂಸರು ಬರೆದದ್ದನ್ನು ಓದದೇ ಇರಲು ಸಾಧ್ಯವೇ ಇಲ್ಲ ಅನ್ನುವಷ್ಟು ಸಂಗತಿಗಳನ್ನೀಗಾಗಲೇ ಅವರು ಬರೆದಾಗಿದೆ. ಜಗತ್ತು ಮುನ್ನೂರರವತ್ತು ಡಿಗ್ರಿ ತೆರೆದುಕೊಳ್ಳುತ್ತಿರುವ ಹೊತ್ತಿನಲ್ಲಿ ನಮ್ಮ ಕುರಿತಾಗಿ ಜಗತ್ತಿನೆಲ್ಲ ಮೂಲೆಗಳಿಂದ ಬರುವ ಚಿಂತನೆಗಳಿಗೆ ನಾವು ಕಿವಿಯಾಗಲೇ ಬೇಕಾಗುತ್ತದೆನ್ನಿ. ಆದರೆ ಅದೇ ಹೊತ್ತಿನಲ್ಲಿ ನಮ್ಮ ಕುರಿತಾದ ವಿಮರ್ಶೆಗಳಿಗೆ ಉತ್ತರವನ್ನು ಕಂಡುಕೊಳ್ಳುವುದೂ ಮತ್ತು ಅವರ ಕುರಿತಾದ ಆಮೂಲಾಗ್ರ ಅಧ್ಯಯನಮಾಡುವುದೂ ನಮಗೆ ಮುಖ್ಯವಾಗಬೇಕಿತ್ತು. ದುರದೃಷ್ಟವಶಾತ್ ನಾವು ಆ ಹಾದಿಯಲ್ಲಿ ತುಂಬಾ ತುಂಬಾ ಹಿಂದಿದ್ದೇವೆ. ಭಾರತೀಯವಲ್ಲದ ಆಬ್ರಹಾಮಿಕ್ ರಿಲಿಜನ್ನುಗಳ ಒಳಸುಳಿ ಮತ್ತು ಹುಳುಕುಗಳ ಬಗ್ಗೆ ತಾತ್ತ್ವಿಕವಾದ ಮರುಪ್ರಶ್ನೆಯನ್ನು ಹುಟ್ಟುಹಾಕುವುದಂತಿರಲಿ, ನಮ್ಮ ಕುರಿತಾಗಿಯೂ ಸರಿಯಾದ ಅವಗಾಹನೆಯೇ ಇಲ್ಲದಂಥಾ ಸ್ಥಿತಿಯಲ್ಲಿ  ನಾವಿದ್ದೇವೆ.

’ದಿ ಬ್ಯಾಟಲ್ ಫಾರ್ ಸಂಸ್ಕೃತ್’- ಪುಸ್ತಕವು ಬರಿಯ ಸಂಸ್ಕೃತ ಭಾಷೆಯೊಂದರ ಬಗ್ಗೆ ಮಾತ್ರವೇ ಕಾಳಜಿಯ ದನಿಯೆತ್ತದೆ, ಸಮಗ್ರವಾಗಿ ನಮ್ಮ ಚಿಂತನ ಪರಂಪರೆಯ ಸಧ್ಯದ ಅವಸ್ಥೆಯನ್ನೂ ಚರ್ಚಿಸುತ್ತದೆ. ಅದನ್ನು ಕಳಕೊಂಡ ನಾವು ಇವತ್ತಿಗೆದುರಿಸುತ್ತಿರುವ ಬೌದ್ಧಿಕ ಅಪಾಯಗಳನ್ನು ವಿಶ್ಲೇಷಿಸುತ್ತದೆ. ನಮ್ಮ ಸುತ್ತಲೂ ಸುದ್ದಿ ಮಾಡುವ ಕನ್ನಡದ ಬೌದ್ಧಿಕ ಲೋಕವನ್ನು ಪ್ರಸ್ತುತ ಪುಸ್ತಕದ ಹಿನ್ನೆಲೆಯಲ್ಲಿ ನೋಡೋಣ.

ಮತ್ತಷ್ಟು ಓದು »

23
ಜುಲೈ

ಇದು ಬೌದ್ಧಿಕ ಕ್ಷತ್ರಿಯರ ಯುದ್ಧ

– ಚಕ್ರವರ್ತಿ ಸೂಲಿಬೆಲೆ

ರಾಜೀವ್ ಮಲ್ಹೋತ್ರಾಅಮೇರಿಕಾದ ಪ್ರಿಸ್ನಟನ್ ನ ಶಾಲೆ. ಅಲ್ಲಿನ ಶಿಕ್ಷರರೊಬ್ಬರು ದೆಹಲಿ ಮೂಲದ ಹಿಂದೂವೊಬ್ಬರನ್ನು ವಿವೇಕಾನಂದರು ಮತ್ತು ರಾಮಕೃಷ್ಣರ ಕುರಿತಂತೆ ಮಕ್ಕಳಿಗೆ ಪಾಠ ಮಾಡಬಾರದೆಂದು ನುಡಿದರು.ಆಶ್ಚರ್ಯಚಕಿತರಾದ ಆತ ಹುಬ್ಬೇರಿಸಿ ಏಕೆಂದು ಕೇಳಿದರೆ ಅವರು ಸಲಿಂಗಕಾಮಿಗಳಾಗಿದ್ದರಂತೆ ಎಂಬ ಉತ್ತರ ಬಂತು.ಬೆಚ್ಚಿ ಬಿದ್ದ ಭಾರತೀಯ ಮೂಲದ ವ್ಯಕ್ತಿ ಹಾಗೆ ಹೇಳಿದ್ದು ಯಾರೆಂದು ಕೇಳಿದ್ದಕ್ಕೆ ಅವರು ಆತನ ಕೈಗೊಂದು ಪುಸ್ತಕವಿತ್ತರು.ಅದು ಜೆಫ್ರಿ ಕೃಪಾಲ್ ಬರೆದಿದ್ದ ‘ಕಾಳಿಯ ಮಕ್ಕಳು’. ಕೃತಿಯುದ್ದಕ್ಕೂ ವಿಕೃತಿಗಳೇ ತುಂಬಿದ್ದುದನ್ನು ಕಂಡು ಅಸಹ್ಯದಿಂದ ಬೆಂದು ಹೋದ ಆತ ಅಮೇರಿಕಾದ ಬುದ್ಧಿವಂತರ ನಡುವೆ ತಿರುಗಾಡುತ್ತಿರುವ ಹಿಂದೂಗಳ ಅವಹೇಳನ ಮಾಡುವ ಅನೇಕ ಪುಸ್ತಕಗಳನ್ನು ಹುಡುಕಿದರು.ಅದರ ಕುರಿತಂತೆ ಇತರ ಹಿಂದೂಗಳಿಗೆ ಗೊತ್ತಿರಲಿಲ್ಲವೆಂದಲ್ಲ.ಆದರೆ ಅವರು ಅದೆಷ್ಟು ಅವಮಾನಿತರಾಗಿದ್ದರೆಂದರೆ ಬಾಯಿ ತೆರೆಯಲಾಗದೇ ಮೌನವಹಿಸಿ ಬಿಟ್ಟಿದ್ದರು.ಶಾಲೆಗಳಲ್ಲಿ ಹಿಂದೂವಾಗಿರುವುದು ಮಗುವೊಂದಕ್ಕೆ ಅತ್ಯಂತ ಕಠಿಣವಾಗಿತ್ತು.ಓರಗೆಯ ಕ್ರಿಶ್ಚಿಯನ್ನರು ಹಿಂದೂ ದೇವ-ದೇವಿಯರನ್ನು ಆಡಿಕೊಂಡು ನಗುವಾಗ ಇವರೆಲ್ಲ ಬರಿಯ ಮೂಕ ಪ್ರೇಕ್ಷಕರಷ್ಟೇ.

ರಾಜೀವ್ ಮಲ್ಹೋತ್ರಾ! ಬ್ರೇಕಿಂಗ್ ಇಂಡಿಯಾ, ಬೀಯಿಂಗ್ ಡಿಫರೆಂಟ್, ಇಂದ್ರಾಸ್ ನೆಟ್ ಗಳ ಮೂಲಕ ಅಮೇರಿಕಾದಾದ್ಯಂತ ಹರಡಿಕೊಂಡಿರುವ ಹಿಂದೂ ವಿರೋಧಿಗಳಿಗ ಸೂಕ್ತ ಉತ್ತರ ಕೊಡುತ್ತಿರುವ ವ್ಯಕ್ತಿ. ಎಡಪಂಥದ ಗಬ್ಬು ಘಾಟಿನಲ್ಲಿಯೇ ಕಾಲದೂಡುತ್ತಿರುವ ಭಾರತದ ಬುದ್ಧಿ ಜೀವಿಗಳ ಆರಾಧ್ಯವೆನಿಸಿದ್ದವರನ್ನೆಲ್ಲ ತನ್ನ ಬೌದ್ಧಿಕ ಗದಾಪ್ರಹಾರದಿಂದ ಝಾಡಿಸಿ ಕೊಡವಿ ಬಿಟ್ಟಿರುವ ಜಟ್ಟಿ ಆತ.

ಮತ್ತಷ್ಟು ಓದು »