ನೂರು ಸಾಲಿನ ಸರಳ (ಮಿನಿ) ರಾಮಾಯಣ ಕಾವ್ಯ…
– ನಾಗೇಶ ಮೈಸೂರು
ಶ್ರೀ ರಾಮ ಸೀತೆಯ ಕಥೆ ನಮಗೇನು ಹೊಸದಲ್ಲ ಬಿಡಿ.. ಎಲ್ಲಾ ಭಾಷೆಗಳಲ್ಲಿ ಖಂಡುಗಗಟ್ಟಲೆ ಕಥೆ, ಕಾವ್ಯಗಳು ಸಿಕ್ಕುತ್ತವೆ. ಆದರಿದು ಆಧುನಿಕ ವೇಗದ ಜಗ.. ಎಲ್ಲಾ ಸಂಕ್ಷಿಪ್ತದಲ್ಲಿ, ಫಾಸ್ಟ್ ಪುಡ್ಡಿನ ಹಾಗೆ ಶೀಘ್ರಗತಿಯಲ್ಲಿ ಸಿಗುವಂತಿದ್ದರೆ ಅದನ್ನೇ ಬಯಸುವ ಗ್ರಾಹಕ ವರ್ಗವೂ ಸಾಕಷ್ಟು ದೊಡ್ಡದಿದೆ. ಇನ್ನು ಮಿಕ್ಕವರಿಗೆ ದೊಡ್ಡದು, ಚಿಕ್ಕದು ಎನ್ನುವ ಜಿಜ್ಞಾಸೆಗಿಂತ ಸಮಯದ ಅಭಾವ. ಇನ್ನು ಕಿರಿಯರ ವಿಷಯಕ್ಕೆ ಬಂದರೆ ಅವರಿಗೆ ತೀರಾ ಭಾರವಾಗದ ರೀತಿಯಲ್ಲಿ ಅರುಹಬೇಕಾದ ಅನಿವಾರ್ಯ.. ಇದನ್ನೆಲ್ಲಾ ಗಮನದಲ್ಲಿರಿಸಿಕೊಂಡು ಹೆಣೆದ ನೂರು ಸಾಲಿನ, ಚತುಷ್ಪಾದಿ ಅವತಾರದಲ್ಲಿರುವ ಕಾವ್ಯರೂಪಿ ರಾಮಾಯಣ ಸಾರ – ಈ ಶ್ರೀರಾಮ ಚರಿತ. ನರಮಾನವನಾಗಿ ಪಡಿಪಾಟಲು ಪಟ್ಟನೆನ್ನುವ ಹಿನ್ನಲೆಯನ್ನು ಅಂತರ್ಗತವಾಗಿಸಿಕೊಂಡು ಮೂಡಿಬಂದ ಕಥಾಲಹರಿ. ಸರಳ ಲಹರಿ ಹಿತವಾಗಿ ನುಡಿವಂತಿದ್ದು ಮುದ ತಂದರೆ ಧನ್ಯ .
ಮೂರ್ಖತೆಯ ತೆಗುಳು, ದ್ವಾರಪಾಲರ ಅಹಂಕಾರಗಳು
ನೆಮ್ಮದಿಯ ವೈಕುಂಠ, ಕಿಚ್ಚನ್ಹಚ್ಚಿಸಿ ಮಹಾಲಕ್ಷ್ಮಿಗೆ ದಿಗಿಲು
ಸನಕಾದಿ ಮುನಿಗಳ ಶಾಪ, ಭೂಲೋಕದ ಜನ್ಮಪರಿತಾಪ
ಸೇವೆಯಾಳುಗಳ ವತಿಯಿಂದ, ಶ್ರೀ ಹರಿಗೂ ಬಿಡದ ಕೂಪ || ೦೧ ||
ವಾಲ್ಮೀಕಿ ಯಾರು?
– ಡಾ| ಜಿ. ಭಾಸ್ಕರ ಮಯ್ಯ
ಇಂದು ಕನ್ನಡ ಸಾಹಿತ್ಯದ ಅದಮ್ಯ ಚೇತನಗಳಾದ ಮಹಾಕವಿಗಳನ್ನು ಜಾತಿಯ ಗೂಟಕ್ಕೆ ಕಟ್ಟಿ ಬಲಿ ಕೊಡುತ್ತಿರುವ ಪದ್ಧತಿ ಈಗ ಸರಿಸುಮಾರು ನಾಲ್ಕು-ಐದು ದಶಕಗಳಿಂದ ನಡೆಯುತ್ತಿದೆ. ಇದರ ಐತಿಹಾಸಿಕ ದುರಂತವೆಂದರೆ ನವೋದಯದ ನಂತರ ಎಡವುತ್ತಾ ಬಂದ ಅರೆಬರೆ ಪ್ರಕಾರವಾದ ನವ್ಯ ಸಾಹಿತ್ಯ. ಅದು ಬೆಳೆಯುವ ಮುಂಚೆಯೇ ಕಮರಿ ಹೋಯ್ತು. ಅಡಿಗ, ಲಂಕೇಶ್ ಅದಕ್ಕೊಂದು ಅಪವಾದ. ನವೋದಯದ ಪತನಶೀಲ ಕಾಲದ ಕೆಲವು ಜಾತೀಯ ವಿಷಬೀಜಗಳು ಬಂಡಾಯದ ಕಾಲದಲ್ಲಿ ಅಲ್ಲಲ್ಲಿ ಮೊಳಕೆಯೊಡೆದವು. ಈ ಬಂಡಾಯದ ರೂವಾರಿಗಳಲ್ಲಿ ಅನೇಕ ಪ್ರಮುಖರು ಅಲ್ಪವಿದ್ಯಾ ಅಪ್ರಬುದ್ಧ ಹುಸಿ ಕ್ರಾಂತಿಕಾರರು. ಇವರು ನವೋದಯದ ಪತನಶೀಲ ಮತ್ತು ನವ್ಯದ ಗೊಬ್ಬರದಿಂದಲೇ ಬೆಳೆದವರು. ಭಾರತದಾದ್ಯಂತ ಹಿಂದಿ, ಬಂಗಾಳಿ ಮೊದಲಾದ ಭಾಷೆಗಳಲ್ಲಿ ಸರಿಸುಮಾರು ಪ್ರಗತಿಶೀಲ ಜನವಾದಿ ಸಾಹಿತ್ಯಪ್ರಕಾರವು ಆರೋಗ್ಯಕರವಾಗಿ ಬೆಳೆದು ಬಂದರೆ ಕರ್ನಾಟಕದಲ್ಲಿ ಮುಖ್ಯವಾಗಿ ರೂಲಿಂಗ್ ಐಡಿಯಾಗಳನ್ನು ಬಿಂಬಿಸುವ ಹುಸಿ ಬಂಡಾಯಗಾರರೇ ‘ರೂಲಿಂಗ್’ ಆದರು. ರೂಲಿಂಗ್ ಕ್ಲಾಸಿನ ಉತ್ಪನ್ನವಾದ ಈ ‘ರೂಲಿಂಗ್’ ಐಡಿಯಾದವರು ಇಂದು ಕೂಡಾ ರೂಲಿಂಗ್ ಪಕ್ಷದ ಬಹುದೊಡ್ಡ ಪರಾಕುದಾರರು.
ಇದರ ಪರಿಣಾಮವಾಗಿ ಇಂದು ಕನಕದಾಸರು ಕುರುಬನಾಗಿದ್ದಾರೆ.ಬಸವಣ್ಣ ಲಿಂಗಾಯತನಾಗಿದ್ದಾರೆ.ಕುವೆಂಪು ಗೌಡರಾಗಿದ್ದಾರೆ.ಅಂತೆಯೇ ಹಲವಾರು ಶ್ರೇಷ್ಠಲೇಖಕರು ಬ್ರಾಹ್ಮಣ-ಶೂದ್ರ ಇತ್ಯಾದಿ ವಿಧ ವಿಧ ಜೈಲುಗಳಲ್ಲಿ ಬಂಧಿತರಾಗಿದ್ದಾರೆ. ಹಿಂದೆಂದೂ ಇಲ್ಲದ ಜಾತಿವಾದ ಇಂದು ಸಾಹಿತ್ಯ ಮತ್ತು ಸಂಸ್ಕೃತಿಯ ವಲಯದಲ್ಲಿ ವ್ಯಾಪಿಸಿದೆ. ಈ ದುರಂತಕ್ಕೆ ಇತ್ತೀಚೆಗಿನ ಸೇರ್ಪಡೆ ವಾಲ್ಮೀಕಿ.
ವಾಲ್ಮೀಕಿ ಜನಾಂಗದ ವ್ಯಕ್ತಿಯೊಬ್ಬರು ಸರ್ಕಾರದಲ್ಲಿ ಪ್ರಭಾವಶಾಲಿಯಾಗಿದ್ದ ಕಾಲದಲ್ಲಿ ಆದಿಕವಿ ವಾಲ್ಮೀಕಿಗೆ ಹಠಾತ್ ಲಾಟರಿ ಹಾರಿತು.ವಾಲ್ಮೀಕಿ ಜಯಂತಿ ಆಚರಿಸಲು ಸರ್ಕಾರ ಅಧಿಸೂಚನೆ ಹೊರಡಿಸಿತು.ಆ ದಿನ ಕರ್ನಾಟಕದಲ್ಲಿ ರಜಾದಿನವೆಂದು ಘೋಷಿಸಲಾಯಿತು. ಹೀಗೆ ಭಾರತದ ರಾಷ್ಟ್ರೀಯ ಮಹಾಕವಿಯೊಬ್ಬನಿಗೆ ಕರ್ನಾಟಕದಲ್ಲಿ ಈ ಪರಿ ಮರಣೋತ್ತರ ಗೌರವ ಸಂದಿತು. ಕರ್ನಾಟಕದಾದ್ಯಂತ ಸಭೆಸಮಾರಂಭಗಳು, ವಾಲ್ಮೀಕಿ ಭವನ ನಿರ್ಮಾಣದ ಯೋಜನೆ – ಇತ್ಯಾದಿಗಳು ವಿಜ್ರಂಭಿಸಿದವು.
ಶೂದ್ರ ಶಂಬುಕ ಮತ್ತು ರಾಮಾಯಣ – ಒಂದು ಚರ್ಚೆ
– ರಾಘವೇಂದ್ರ ಸುಬ್ರಹ್ಮಣ್ಯ
ಹಲವಾರು ಜನ ಶಂಬುಕನ ಉದಾಹರಣೆ ಕೊಟ್ಟು ರಾಮನ ಮೇಲೆ ಅಧರ್ಮದ ಪಟ್ಟ ಹೊರಿಸ್ತಾರೋದು ನೋಡಿ, ನನ್ನ ದೃಷ್ಟಿಕೋನವನ್ನೂ ಹಂಚಿಕೊಳ್ಳೋಣವೆಂದು ನಿರ್ಧರಿಸಿದ್ದರಿಂದ,ಈ ಲೇಖನ.ಇದರ ಬಗ್ಗೆ ಒಂದು ಚರ್ಚೆ ಆದ್ರೆ ಚೆನ್ನಾಗಿರುತ್ತೆ ಅನ್ನಿಸ್ತು. ನಾನು ರಾಮಾಯಣನ್ನು ಧರ್ಮಗ್ರಂಥವಾಗಿ ಅಥವಾ ಪುರಾಣವನ್ನಾಗಿ ನೋಡುವುದಿಲ್ಲವಾದ್ದರಿಂದ, ರಾಮನೆಂಬ ‘ಮರ್ಯಾದಾ ಪುರುಷೋತ್ತಮ’ ಮಾಡಿದ್ದು ಸರಿಯೋ ತಪ್ಪೋ ಎಂಬ ವಿಮರ್ಷೆಗೆ ಕೈ ಹಾಕಲಾರೆ. ರಾಮನೆಂಬ ಪಾತ್ರ ಮಾಡಿದ್ದು ಸರಿಯೋ ಎಂದು ನೋಡುವ ಪ್ರಯತ್ನವಷ್ಟೇ.
ನನಗೆ ಗೊತ್ತಿದ್ದಂತೆ ಕಥೆ ಹೀಗಿದೆ (ತಪ್ಪಿದ್ದಲ್ಲಿ ದಯವಿಟ್ಟು ತಿದ್ದಿ):
“ರಾಮನ ಆಸ್ಥಾನಕ್ಕೆ ಒಬ್ಬ ಬ್ರಾಹ್ಮಣ ತನ್ನ ಮಗನ ಸಾವಿಗಾಗಿ ನ್ಯಾಯ ಕೇಳಲು ಬರುತ್ತಾನೆ. ಎಲೈ ರಾಜನೇ, ನೀನೇನೋ ಅನ್ಯಾಯ ಮಾಡಿರಬೇಕು, ಆದ್ದರಿಂದ ಯಾವ ತಪ್ಪನ್ನೂ ಮಾಡನ ನನ್ನ ಮಗನ ಸಾವಾಗಿದೆ ಎಂದು ಆರೋಪಿಸುತ್ತಾನೆ. ನಾರದಮುನಿ ಇದರಬಗ್ಗೆ ಕೊಟ್ಟ ಹಿನ್ನೆಲೆ ಹಾಗೂ ಶಂಭುಕನ ತಪಸ್ಸಿನ ಬಗ್ಗೆ ತಿಳಿದು ರಾಮ ಶಂಬುಕನಿದ್ದಲ್ಲಿಗೆ ಪ್ರಯಾಣ ಬೆಳೆಸುತ್ತಾನೆ. ಶಂಬುಕನನ್ನು ಭೇಟಿ ಮಾಡಿ, ಅವನ ತಪಸ್ಸಿನ ಕಾರಣ ಕೇಳಲಾಗಿ, ಶಂಬುಕ ‘ರಾಮ, ನಾನು ಶೂದ್ರ ಕುಟುಂಬದಲ್ಲಿ ಜನಿಸಿದವನು. ನನ್ನ ಕಠಿಣ ಪರಿಶ್ರಮದಿಂದ ದೇವತೆಗಳನ್ನು ಮೆಚ್ಚಿಸಿ, ದೇವಲೋಕವನ್ನು ನನ್ನದಾಗಿ ಮಾಡಿಕೊಂಡು, ಈ ದೇಹದೊಂದಿಗೇ ಸ್ವರ್ಗವನ್ನು ಪ್ರವೇಶಿಸುವ ನಿರ್ಧಾರದಿಂದ ಈ ತಪಸ್ಸನ್ನು ಮಾಡುತ್ತಿದ್ದೇನೆ” ಎನ್ನುತ್ತಾನೆ. ಅದಕ್ಕೆ ರಾಮ ‘ಅಯ್ಯಾ ನಿನ್ನ ತಪಸ್ಸು, ಪರಿಶ್ರಮ ಒಳ್ಳೆಯದೇ ಆದರೂ, ಅದರ ಹಿಂದಿನ ಕಾರಣ ಅಸಾತ್ವಿಕವಾದದ್ದು’ ಎಂಬ ಕಾರಣದಿಂದ ಅವನ ಹರಣ ಮಾಡುತ್ತಾನೆ.
ಮತ್ತಷ್ಟು ಓದು