ಕಲ್ಬುರ್ಗಿ,ಕಲ್ಲು ಮತ್ತು Colonial Consciousness
– ರಾಕೇಶ್ ಶೆಟ್ಟಿ
ಬೆಂಗಳೂರಿನ ವಿಜ್ಞಾನ ಭವನದಲ್ಲಿ ಜೂನ್ ೯ರ ಸೋಮವಾರ ನಡೆದ ಮೌಢ್ಯಮುಕ್ತ ಸಮಾಜ, ಕರ್ನಾಟಕ ಮೂಢನಂಬಿಕೆ ಪ್ರತಿಬಂಧಕ ಕಾಯ್ದೆ ಅನುಷ್ಠಾನ ಚರ್ಚಾ ಕಾರ್ಯಕ್ರಮದಲ್ಲಿ ವಯಸ್ಸಿನಲ್ಲಿ ಹಿರಿಯರಾದ (ಕೇವಲ ವಯಸ್ಸಿನಲ್ಲಷ್ಟೇ) ಪ್ರೊ.ಎಂ.ಎಂ. ಕಲ್ಬುರ್ಗಿಯವರು, ” ದೇವರ ವಿಗ್ರಹಗಳ ಮೇಲೆ ಮೂತ್ರ ಮಾಡಿದರೂ ಏನೂ ಆಗದು. ಅವುಗಳಿಗೆ ಕಾಯುವ ಶಕ್ತಿಯೂ ಇಲ್ಲ, ಕಾಡುವ ಶಕ್ತಿಯೂ ಇಲ್ಲ. ದೇವತೆ, ದೇವಾಲಯಗಳ ವಿರುದ್ಧ ಚಳವಳಿ ನಡೆಯಬೇಕು.” ಅಂತೆಲ್ಲ ಬಡಬಡಿಸಿ ಎಲ್ಲರಿಂದ ತಪರಾಕಿ ಹಾಕಿಸಿಕೊಂಡ ಮೇಲೆ “ನಾ ಹಂಗೇ ಹೇಳೇ ಇಲ್ಲಾರೀ, ನಾನು ಹಿಂದೂ ಇದ್ದೀನಿ, ನಾನ್ಯಾಕೇ ಮೂತ್ರ ಮಾಡಿ ಅಂತ ಹೇಳ್ತೀರ್ರೀ… ಅನಂತಮೂರ್ತಿ ಹಿಂಗ್ ಬರ್ದಾರಾ ಅಂತ ನಾನ್ ಸಭಿಯೋಳಗ ಹೇಳಿನ್ರೀ… ತಪ್ಪ್ ತಿಳಿ ಬ್ಯಾಡರ್ರೀ…” ಅಂತೆಲ್ಲ ಸೃಷ್ಟೀಕರಣ ಕೊಟ್ಟರು.
ನಿಜವಾಗಿ ಕಲ್ಬುರ್ಗಿಯವರ ಮನಸ್ಸಿನಲ್ಲಿದ್ದಿದ್ದು “ಮೂರ್ತಿ”ಗಳ ಮೇಲೆ ಮೂತ್ರ ಮಾಡಿದ ಹೊರೆ ಹೊರಿಸಿ ಅದರ ಜೊತೆಗೆ ಮೂರ್ತಿ ಪೂಜೆ ಮಾಡುವ ಜನರ “ಮೌಢ್ಯ” (ಅವರ ಮಂದ ಬುದ್ದಿಯ ಪ್ರಕಾರ) ನಿವಾರಿಸುವುದಾಗಿತ್ತು ಅನ್ನಿಸುತ್ತದೆ.ಕಲ್ಬುರ್ಗಿಯವರು ಹೀಗೆ ಹೇಳಿಕೆ ಕೊಡುವುದರಿಂದ ಒಂದೇ ಕಲ್ಲಿಗೆ ಎರಡು ಹಕ್ಕಿ (“ಮೂರ್ತಿ” ಮತ್ತು “ಮೌಢ್ಯ”) ಹೊಡೆಯುವ ಆಲೋಚನೆಯಲ್ಲಿದ್ದರೇನೋ.ಪಾಪ!
“ಮೂರ್ತಿ”ಗಳ ಮೇಲೆ ಕಲ್ಬುರ್ಗಿಯವರಿಗೆ ಈ ವಿಶೇಷ ಮಮತೆ ಯಾಕೆ? ಪ್ರಜಾವಾಣಿಯಲ್ಲಿ “ಮೂರ್ತಿ”ಗಳಿಗೆ ೧೦ ಲಕ್ಷ ಸರ್ಕಾರಿ ಕಾಣಿಕೆ ಕೊಟ್ಟದ್ದನ್ನು ವಿರೋಧಿಸಿ ಸೋತುಹೋಗಿದ್ದ ಕಲ್ಬುರ್ಗಿಗಳು,”ಮೂರ್ತಿಗಳ ಮೇಲೆ ಮೂತ್ರ ಮಾಡಿದರೂ ಏನೂ ಆಗುವುದಿಲ್ಲ” ಅನ್ನುವ ಮೂಲಕ ಸೇಡು ತೀರಿಸಿಕೊಂಡರು, ಅನ್ನುವಲ್ಲಿಗೆ ಅವರ ಹೇಳಿಕೆಯ ಮೊದಲನೇ “ಹಕ್ಕಿ” ಯಾವುದೆಂದು ಹೊಳೆಯುತ್ತದೆ.
ಅಸಲಿಗೆ ತಪ್ಪೆಲ್ಲ ಆಯ್ಕೆ ಸಮಿತಿಯದ್ದು!
“ಪರಾವಲಂಬಿ ಜೀವಿ”ಗಳ ನಡುವೆ “ಪ್ರಶಸ್ತಿ/ಹಣ”ವನ್ನು ಸಮನಾಗಿ ಹಂಚಿದ್ದರೆ ಮೂತ್ರ,ಮೂರ್ತಿ ಇತ್ಯಾದಿ ವಿವಾದಗಳೇ ಆಗ್ತಿರ್ಲಿಲ್ಲ ಮಾರ್ರೆ. ಎಲ್ಲವನ್ನೂ ಒಬ್ಬರಿಗೆ ಕೊಟ್ಟರೆ.ಇನ್ನೊಬ್ಬರಿಗೆ (ತಮಗಾದ) ಅನ್ಯಾಯವನ್ನು ಪ್ರಶ್ನಿಸುವ ಅಭಿವ್ಯಕ್ತಿ ಸ್ವಾತಂತ್ರ್ಯ(!) ಇದ್ದೇ ಇರುತ್ತದಪ್ಪ… (ಸೂ : “ಪರಾವಲಂಬಿ ಜೀವಿ”ಗಳನ್ನು ಕೆಲವರು “ಬುದ್ಧಿಜೀವಿ”ಗಳು ಅನ್ನುತ್ತಾರೆ.ನಾನು ಇನ್ಮುಂದೆ ಪ್ರೀತಿಯಿಂದ “ಪರಾವಲಂಬಿ ಜೀವಿ” ಎನ್ನುತ್ತೇನೆ)
ಜಾತೀಯತೆ: ಏನು? ಎತ್ತ?
– ಡಾ. ಶ್ರೀಪಾದ ಭಟ್
ಸೆಪ್ಟೆಂಬರ್ 13, 2007ರಂದು 11 ನೇ ಪಂಚವಾರ್ಷಿಕ ಯೋಜನೆ ಕುರಿತ ಯೋಜನಾ ಆಯೋಗದ ಸಮಾಲೋಚನಾ ಸಭೆಯಲ್ಲಿ ಪ್ರಧಾನಿ ಮನಮೋಹನ್ ಸಿಂಗ್ “ಸ್ಪೆಶಲ್ ಅಟೆನ್ಷನ್ ವುಡ್ ನೀಡ್ ಟು ಬಿ ಪೇಯ್ಡ್ ಟು ಡಿಸ್ಟ್ರಿಕ್ಟ್ಸ್ ವಿತ್ ಎಸ್ಸಿ, ಎಸ್ಟಿ, ಒಬಿಸಿ ಆಂಡ್ ಮೈನಾರಿಟಿ ಕಾನ್ಸನ್ಟ್ರೇಶನ್’’ ಎಂದು ಭಾಷಣ ಮಾಡಿದ್ದರು. ಅಲ್ಪ ಸಂಖ್ಯಾತರಿಗೆ ಸರ್ಕಾರಿ ಯೋಜನೆಯಲ್ಲಿ ಸಿಂಹಪಾಲು ದೊರೆಯಬೇಕು ಎಂದೂ ಅವರು ಹೇಳಿದ್ದರು. ಸಿಂಗ್ ಮೂಲತಃ ಅರ್ಥಶಾಸ್ತ್ರಜ್ಞರು, ರಾಜಕಾರಣಿಯಲ್ಲ. ಆದರೆ ಅವರ ಧಾಟಿ ಮತಬ್ಯಾಂಕಿನ ಮೇಲೆ ಕಣ್ಣಿಟ್ಟ ಯಾವ ರಾಜಕಾರಣಿಗೂ ಕಡಿಮೆ ಇರಲಿಲ್ಲ. ಅಂದಿನ ಸಭೆಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು, ಹಿರಿಯ ಅಧಿಕಾರಿಗಳು ಎಲ್ಲ ಹಾಜರಿದ್ದರು. ಸರ್ಕಾರದ ಯೋಜನೆಯ ಲಾಭ ಬಡವರಿಗೆ ದೊರೆಯಬೇಕು ಎಂದು ಹೇಳುವ ಬದಲು ಅಲ್ಪ ಸಂಖ್ಯಾತರಿಗೆ ದೊರೆಯಬೇಕು ಎಂದು ಅವರು ಹೇಳಿದ್ದರಲ್ಲಿ ಅಭಿವೃದ್ಧಿಗಿಂತಲೂ ಮತಗಳಿಕೆಯ ವಾಸನೆ ಢಾಳಾಗಿ ರಾಚಿದರೆ ಅದರಲ್ಲಿ ಅವರ ತಪ್ಪಿಲ್ಲ. ಕರ್ನಾಟಕದಲ್ಲಿ ಶಾದಿ ಭಾಗ್ಯ ಯೋಜನೆ ಕುರಿತ ಸರ್ಕಾರದ ನಿಲುವನ್ನು ಕೂಡ ಇದೇ ದೃಷ್ಟಿಯಲ್ಲಿ ನೋಡಬಹುದು. ಆ ಸರ್ಕಾರ, ಈ ಸರ್ಕಾರ ಎಂದಲ್ಲ ಎಲ್ಲ ಸರ್ಕಾರಗಳ ಯೋಜನೆಗಳೂ ಮತಗಳಿಕೆಯತ್ತ ನೆಟ್ಟಿರುವುದರಿಂದ ಅವರ ಘೋಷಣೆಗಳು ಹೀಗಾಗಿಬಿಡುತ್ತವೆ ಅಷ್ಟೆ.