ಆಚರಣೆ ಮತ್ತು ನಂಬಿಕೆಗಳ ಟೀಕೆ: ಅಂದು ಹಾಗೂ ಇಂದು ( ಭಾಗ – ೩ )
– ವಿನಾಯಕ ವಿಶ್ವನಾಥ ಹಂಪಿಹೊಳಿ
ಮುಸ್ಲಿಂ ಪರಂಪರೆಗಳಲ್ಲಿ ಮೂರು ಬಾರಿ ತಲಾಕ್ ಹೇಳಿ ಇದ್ದಕ್ಕಿದ್ದಂತೇ ಹೆಂಡತಿಯನ್ನು ತ್ಯಜಿಸುವ ಕ್ರಿಯೆ ಭಾರತೀಯರಿಗೆ ಅನೈತಿಕವಾಗಿ ಕಾಣಲು ಆ ಕ್ರಿಯೆಯಿಂದ ಒಂದು ಹೆಣ್ಣಿನ ಮನಸ್ಸಿಗೆ ಉಂಟಾಗುವ ನೋವಷ್ಟೇ ಸಾಕಾಗಿರುತ್ತದೆ. ಆದರೆ ನಾವು ಆ ಕ್ರಿಯೆಯನ್ನು ಸಮಾನತೆಯ ತತ್ತ್ವದ ಉಲ್ಲಂಘನೆಯಾಗಿ ವ್ಯಾಖ್ಯಾನಿಸುವರ ಮೂಲಕ ಟೀಕಿಸುತ್ತೇವೆ. ಮೂಲತಃ ಪ್ರೊಟೆಸ್ಟಂಟ್ ಕ್ರಿಶ್ಚಿಯನ್ ಪರಿಕಲ್ಪನೆಯಿಂದ ಬಂದ ಈ ಸಮಾನತೆಯ ಪರಿಕಲ್ಪನೆಯು ಭಾರತೀಯ ಮುಸ್ಲಿಮರಿಗೆ ಅರ್ಥವಾಗುವುದಿಲ್ಲ. ಹೀಗಾಗಿ ಈ ವಿರೋಧವನ್ನು ಮುಸ್ಲಿಮರು ಇಸ್ಲಾಂ ವೈಯಕ್ತಿಕ ಕಾನೂನಿನ ವಿರುದ್ಧ ನಡೆಯುತ್ತಿರುವ ಷಡ್ಯಂತ್ರದ ಅನುಷ್ಠಾನವಾಗಿ ನೋಡುತ್ತಾರೆ. ಲಿಬರಲ್ ವಿಚಾರವಂತರು ಮುಸ್ಲಿಮರ ನಿಲುವನ್ನು ಸಮಾನತೆಯ ತತ್ತ್ವದ ಉಲ್ಲಂಘನೆಯಾಗಿ ನೋಡುತ್ತಾರೆ. ನಾವು ನಮ್ಮ ಸಂಪ್ರದಾಯಗಳ ಕುರಿತು ಹಿಂದಿನಿಂದ ಬೆಳೆದು ಬಂದ ಟೀಕೆಗಳ ಪರಂಪರೆಗಳನ್ನು ಹೇಗೆ ಅರ್ಥೈಸಿಕೊಳ್ಳಬೇಕು, ಈಗ ಬರುತ್ತಿರುವ ಹೊಸ ಟೀಕೆಗಳನ್ನು ಹೇಗೆ ಸ್ವೀಕರಿಸಬೇಕು ಹಾಗೂ ಪ್ರತಿಕ್ರಿಯಿಸಬೇಕು ಎನ್ನುವುದರ ಸ್ಪಷ್ಟತೆಯನ್ನು ನಾವು ಕಂಡುಕೊಳ್ಳಬೇಕಿದೆ. ಮತ್ತಷ್ಟು ಓದು
ವೈಚಾರಿಕತೆ, ನಾಸ್ತಿಕತೆ ಮತ್ತು ಬುದ್ಧಿಜೀವಿಗಳ ದುರಂತ ಕತೆ
– ರೋಹಿತ್ ಚಕ್ರತೀರ್ಥ
“ನಾವು ವಿಚಾರವಾದಿಗಳಾಗಿ ನಾಸ್ತಿಕರಾಗೋಣ” ಎಂಬ ಮಾತನ್ನು ಒಬ್ಬ ಲೇಖಕ ಇತ್ತೀಚೆಗೆ ಬುದ್ಧಿಜೀವಿಗಳೆ ತುಂಬಿದ್ದ ಸಾಹಿತ್ಯ ಸಮ್ಮೇಳನವೊಂದರಲ್ಲಿ ಹೇಳಿದರಂತೆ. ಬಹುಶಃ ಅವರು ಪ್ರತಿಯೊಬ್ಬ ವಿಚಾರವಾದಿಯೂ ನಾಸ್ತಿಕನಾಗಿರಲೇಬೇಕು ಎಂಬ ಅರ್ಥದಲ್ಲಿ ಆ ಮಾತನ್ನು ಹೇಳಿರಬಹುದು. ಈ ಮಾತಿನ ಒಳಗಿಳಿಯಲು, ಮೊದಲು, ನಾವು “ವಿಚಾರವಾದ” ಅಂದರೆ ಏನು ಎನ್ನುವುದನ್ನು ನೋಡಬೇಕಾಗಿದೆ.
ವಿಚಾರವಾದಕ್ಕೆ ಕನ್ನಡದಲ್ಲಿರುವ ಅರ್ಥ: ವಿಚಾರ ಮಾಡುವ ಶಕ್ತಿ; ಚಿಂತನೆಯ ಶಕ್ತಿ ಎಂದು. ಇನ್ನೂ ಮುಂದುವರಿದು ತಾತ್ವಿಕ ದೃಷ್ಟಿ ಎಂದೂ ಹೇಳಬಹುದು. ಇಂಗ್ಲೀಷಿನಲ್ಲಿ Intellectual attitude, Ideological stance ಎಂದೆಲ್ಲ ಹೇಳುತ್ತಾರೆ. ಅಂದರೆ ಯಾವುದೇ ವಿಷಯವನ್ನು ಸರಿಯಾಗಿ ಗ್ರಹಿಸಿ, ಅದರ ಅಂತರಾರ್ಥವನ್ನು ಅರಿತು ಅದರಂತೆ ನಡೆಯುವವರು ವೈಚಾರಿಕತೆ ಬೆಳೆಸಿಕೊಂಡಿದ್ದಾರೆ ಎಂದು ಹೇಳಬಹುದು. ವಿಚಾರವಾದ ಅಥವಾ ವೈಚಾರಿಕತೆ ಎಂಬುದಕ್ಕೆ ಸಂವಾದಿಯಾಗಿ ಇಂಗ್ಲೀಷಿನಲ್ಲಿ ಬಳಕೆಯಾಗುವ “Intellectualism” ಎಂಬುದಕ್ಕೆ ಇರುವ ಅರ್ಥ: The exercise of the intellect at the expense of the emotions. ಅಂದರೆ, ಒಂದು ವಿಷಯವನ್ನು ಸರಿಯಾಗಿ ಗ್ರಹಿಸಲು ಹೋಗುವಾಗ ಅದಕ್ಕೆ ಸುತ್ತಿಕೊಂಡಿರುವ ಭಾವನಾತ್ಮಕ ಅಂಶಗಳನ್ನೆಲ್ಲ ಬದಿಗಿಟ್ಟು ಸತ್ಯವನ್ನಷ್ಟೇ ಎತ್ತಿ ಹಿಡಿಯುವುದು ಎಂದು ಅರ್ಥ. ಮಗ ಕಳ್ಳತನ ಮಾಡಿದ್ದಾನೆ. ಅದು ತಾಯಿಗೂ ಗೊತ್ತಿದೆ. ಆತನನ್ನು ಸೆರೆಮನೆಗೆ ಹಾಕಿದರೆ ತಾಯಿ ಅನಾಥೆಯಾಗುತ್ತಾಳೆ; ಆದರೆ ಆತನನ್ನು ಶಿಕ್ಷಿಸದೆ ಬಿಟ್ಟರೆ ದೇಶದ ಕಾನೂನಿಗೆ ಅಪಚಾರ. ಅಲ್ಲದೆ ಇದೇ ಉದಾಹರಣೆಯನ್ನು ನೋಡಿ ನೂರಾರು ಜನ ಕಳ್ಳತನಕ್ಕೆ ಇಳಿಯಬಹುದು. ಹಾಗಾಗಿ, ತಾಯಿಯ ಕಣ್ಣೀರನ್ನು ಕಷ್ಟಪಟ್ಟು ಅಲಕ್ಷಿಸಿ ಮಗನಿಗೆ ಶಿಕ್ಷೆಯಾಗುವಂತೆ ನೋಡಿಕೊಂಡು ಕಾನೂನನ್ನು ಎತ್ತಿಹಿಡಿಯುವುದು ಇಂಟಲೆಕ್ಚುಲಿಸಮ್ ಅಥವಾ ವೈಚಾರಿಕತೆಯ ಒಂದು ಮುಖ.
ವೈಚಾರಿಕತೆ – ಈಗೇನೋ ಬಹಳ ಪರಿಚಿತವಾದ ಭಾರತೀಯ ಶಬ್ದ ಅನ್ನಿಸಿದರೂ ಅದರ ಉಗಮವಾದದ್ದು ಭಾರತದಲ್ಲಲ್ಲ. ಇದು ಮಧ್ಯ ಯುರೋಪಿನಲ್ಲಿ ಸುಮಾರು ಹದಿನಾರನೇ ಶತಮಾನದಲ್ಲಿ ಹುಟ್ಟಿದ ಪದ ಮತ್ತು ಪರಿಕಲ್ಪನೆ. ಇದರ ಹುಟ್ಟಿನ ಹಿನ್ನೆಲೆ ತಿಳಿಯಲು ನಾವು ಸ್ವಲ್ಪ ಹಿಂದೆ ಹೋಗಬೇಕಾಗುತ್ತದೆ. ಕ್ರಿಸ್ತ ಹುಟ್ಟಿ ಒಂದೂವರೆ ಸಾವಿರ ವರ್ಷಗಳಾದರೂ ಯುರೋಪಿಯನ್ನರು ಬೈಬಲ್ಲಿನ ಭಾಗಗಳನ್ನು ಪ್ರಶ್ನೆ ಮಾಡಲು ಹೋಗಿರಲಿಲ್ಲ. ಚರ್ಚು ಅತ್ಯಂತ ಪ್ರಬಲವಾಗಿದ್ದ ವ್ಯವಸ್ಥೆ. ಅದನ್ನು ಎದುರುಹಾಕಿಕೊಳ್ಳುವವರಿಗೆ ಸಿಗುತ್ತಿದ್ದ ಪ್ರತಿಫಲ ಮರಣ. ಬೈಬಲ್ಲಿನ ವಿರುದ್ಧ ಮಾತಾಡಿದವರನ್ನು ಒಂದೋ ಜೀವಮಾನವೆಲ್ಲ ಸೆರೆಯಲ್ಲಿ ಹಾಕಿ ಭೀಕರ ಶಿಕ್ಷೆಗಳನ್ನು ಕೊಡಲಾಗುತ್ತಿತ್ತು ಇಲ್ಲವೇ ಹಲವು ಹತ್ಯಾರಗಳ ಮೂಲಕ ದೇಹವನ್ನು ಹಾಯಿಸಿ ಕೊಲ್ಲಲಾಗುತ್ತಿತ್ತು. ಪ್ರಭುತ್ವ ಯಾವತ್ತೂ ತನ್ನ ವಿರುದ್ಧ ಮಾತಾಡುವವನನ್ನು ಬದುಕಗೊಡುವುದಿಲ್ಲ ಅಥವಾ ಆತನನ್ನು ಸಂಪೂರ್ಣವಾಗಿ ಅಲಕ್ಷಿಸಿ ಕೊನೆಗೆ ತಾನಾಗಿ ಆತ ಬಾಯಿಮುಚ್ಚಿಕೊಂಡು ಸುಮ್ಮನಾಗುವಂತೆ ಮಾಡುತ್ತದೆ. ಗ್ರೀಸ್, ರೋಮ್ ನಾಗರಿಕತೆಗಳಲ್ಲಿ ಆ ಕಾಲದಲ್ಲಿ ರಾಜರಾಗಿದ್ದವರು, ಜೊತೆಗೆ ಅವರ ಆಸ್ಥಾನ ಪಂಡಿತರಾಗಿದ್ದವರು ಜನ ನಂಬಬೇಕಾದ ಮಾತುಗಳನ್ನು ಹೇಳುತ್ತಿದ್ದರು, ಬರೆದಿಡುತ್ತಿದ್ದರು. ಅವುಗಳು ಸರಿಯಿಲ್ಲ; ಸುಳ್ಳಿನ ಕಂತೆ ಎಂದವರನ್ನು ಅಲಕ್ಷಿಸಿ ದೂರಕ್ಕೆಸೆಯುತ್ತಿದ್ದರು. ಹಾಗಾಗಿ ಸೂರ್ಯ ಭೂಮಿಗೆ ಸುತ್ತು ಬರುತ್ತಾನೆ ಎಂದು ಹೇಳಿದ ಟಾಲೆಮಿ, ಅರಿಸ್ಟಾಟಲ್ ಮೊದಲಾದವರ ತಪ್ಪು ಚಿಂತನೆಗಳು ನೂರಾರು ವರ್ಷಗಳ ಕಾಲ ನಿಂತವು. ಟಾಲೆಮಿ ರಾಜನಾಗಿದ್ದ, ಅರಿಸ್ಟಾಟಲ್ ಅಸ್ಥಾನ ಪಂಡಿತನಾಗಿದ್ದ ಎನ್ನುವುದೇ ಇದಕ್ಕೆ ಕಾರಣ. ಸೂರ್ಯನ ಸುತ್ತ ಭೂಮಿ ತಿರುಗುತ್ತಿದೆ ಎಂದು ಅವರ ಕಾಲದಲ್ಲಿ ಹೇಳಿದ ಅರಿಸ್ಟಾರ್ಕಸ್ನ ದನಿ ಪ್ರಭುತ್ವದ ಧ್ವನಿವರ್ಧಕದ ಕೆಳಗೆ ಉಡುಗಿಯೇ ಹೋಯಿತು.
ಮತ್ತಷ್ಟು ಓದು
ಆನುದೇವಾ ಹೊರಗಣವನು ಸೆಕ್ಯುಲರಿಸಂನಿಂದ
– ರಾಕೇಶ್ ಶೆಟ್ಟಿ
ಅರಸರ ಆಡಳಿತದಲ್ಲಿದ್ದು ಆ ನಂತರ ದಶಕಗಳಿಗೂ ಹೆಚ್ಚು ಕಾಲದ ಮಾವೋವಾದಿಗಳ ಹಿಂಸಾಚಾರದ ನಂತರ ಅರಸರ ಆಡಳಿತಕ್ಕೆ ತಿಲಾಂಜಲಿಯಿಟ್ಟು ಪ್ರಜಾಪ್ರಭುತ್ವವನ್ನು ಅಪ್ಪಿಕೊಂಡ ನೇಪಾಳಿಗಳು ಮತ್ತು ನೇಪಾಳ ಹೆಜ್ಜೆ-ಹೆಜ್ಜೆಗೂ ಸವಾಲುಗಳನ್ನು ಎದುರಿಸುತ್ತಲೇ ಸಾಗುತ್ತಲಿದೆ.ಪ್ರಜಾಪ್ರಭುತ್ವಕ್ಕೆ ಕಾಲಿಟ್ಟಂತೆ,ಹೊಸ ಸಂವಿಧಾನ ರಚಿಸುವ ನಿರ್ಧಾರಕ್ಕೆ ಎಲ್ಲಾ ರಾಜಕೀಯ ಪಕ್ಷಗಳು ಬಂದಿದ್ದರೂ ೨೦೦೬ರಿಂದ ಈ ಪ್ರಕ್ರಿಯೆ ನಾನಾ ವಿಘ್ನಗಳಿಂದ ಕುಂಟುತ್ತಲೇ ಸಾಗಿದೆ.ಇತ್ತೀಚೆಗೆ ನಡೆದ ಪ್ರಬಲ ಭೂಕಂಪದ ನಂತರ ದೊಡ್ಡ ಮನಸ್ಸು ಮಾಡಿ ಎಲ್ಲಾ ರಾಜಕೀಯ ಪಕ್ಷಗಳೂ ಒಗ್ಗೂಡಿ ಮತ್ತೆ ಈ ಕಾರ್ಯಕ್ಕೆ ಜೈ ಎಂದಿದ್ದವು.ಈಗ ಕಾರ್ಯ ಶುರುವಾದಂತೆ ಬಹಳಷ್ಟು ಪರ-ವಿರೋಧ ಪ್ರತಿಭಟನೆ ಚರ್ಚೆಗಳು ಶುರುವಾಗಿವೆ.
ಅವುಗಳಲ್ಲಿ ಒಂದು,ನೇಪಾಳದ ಭಾಗಗಳನ್ನು ಜನರ ಆಚರಣೆ-ಭಾಷೆಯ ಮೇಲೆ ಪ್ರತ್ಯೇಕವಾಗಿಸುವುದನ್ನು ವಿರೋಧ ವ್ಯಕ್ತವಾಗುತ್ತಿದೆ.ಈ ನಡೆ ಮುಂದೆ ನೇಪಾಳವನ್ನು ಇನ್ನಷ್ಟು ಚೂರು ಚೂರು ಮಾಡಲಿದೆ ಎಂಬ ದೂರದೃಷ್ಟಿಯುಳ್ಳವರು ನೇಪಾಳದಲ್ಲಿರುವುದು ನೇಪಾಳಿಗಳ ಪುಣ್ಯವೇ ಸರಿ.ಬಹುಷಃ ಅವರು ಭಾರತದ ಸ್ಥಿತಿಯಿಂದ ಪಾಠ ಕಲಿತಿರಬಹುದು.ಅದರಲ್ಲೂ ಮುಖ್ಯವಾಗಿ ಭಾರತದ ಈಶಾನ್ಯ ರಾಜ್ಯಗಳನ್ನು ನೋಡಿ.ಒಂದೆಡೆ ಮಿಷನರಿಗಳ ಚಿತಾವಣೆ,ಮತ್ತೊಂದೆಡೆ ಜನಾಂಗೀಯ ಆಧರಿತ ಉಗ್ರಪಡೆಗಳ ಹಿಂಸಾಚಾರಗಳಿಂದ ಈಗಾಗಲೇ ಎಂಟು ರಾಜ್ಯಗಳಾಗಿರುವ ಈಶಾನ್ಯ ಭಾಗವೂ ಇನ್ನೂ ಚೂರುಚೂರಾಗುವ ಆಂತಕವಿದ್ದೇ ಇದೆ.ಈಶಾನ್ಯ ರಾಜ್ಯಗಳ ಉದಾಹರಣೆಯೇಕೆ.ನೆರೆಯ ತಮಿಳುನಾಡಿನಲ್ಲಿಯೇ ಭಾಷೆ ಮತ್ತು ನಮ್ಮ ಸಂಸ್ಕೃತಿಯಗೇ ಪರಕೀಯವಾದ ’ದ್ರಾವಿಡ ಜನಾಂಗೀಯ’ ಎಂಬ ಹುಚ್ಚು ಕಲ್ಪನೆಯ ಚಳುವಳಿಯ ನೆಪದಲ್ಲಿ ಏನೆಲ್ಲಾ ಅಧ್ವಾನಗಳಾಯಿತು ಎಂಬುದನ್ನು ನೋಡಿದರೆ ಸಾಕಲ್ಲವೇ? ಈ ನಿಟ್ಟಿನಲ್ಲಿ ನೋಡಿದಾಗ ನೇಪಾಳಿಗಳ ಆತಂಕ ಸರಿಯಾಗಿದೆ ಎನಿಸುತ್ತದೆ.
ವಿಜ್ಞಾನ, ರಿಲಿಜನ್ನು ಮತ್ತು ದರ್ಶನಗಳಲ್ಲಿ ತರ್ಕದ ಸ್ಥಾನ – ಭಾಗ ೩
– ವಿನಾಯಕ ಹಂಪಿಹೊಳಿ
ವಿಜ್ಞಾನ, ರಿಲಿಜನ್ನು ಮತ್ತು ದರ್ಶನಗಳಲ್ಲಿ ತರ್ಕದ ಸ್ಥಾನ – ಭಾಗ ೧
ವಿಜ್ಞಾನ, ರಿಲಿಜನ್ನು ಮತ್ತು ದರ್ಶನಗಳಲ್ಲಿ ತರ್ಕದ ಸ್ಥಾನ – ಭಾಗ ೨
ದರ್ಶನಗಳಲ್ಲಿ ತರ್ಕ:
“ಭಗವಂತನಲ್ಲಿ ತನ್ನನ್ನು ಆರಾಧಿಸುವವರ ಮೇಲೆ ಪ್ರೀತಿ, ತನ್ನನ್ನು ಆರಾಧಿಸದವರ ಮೇಲೆ ಕ್ರೋಧ, ತನಗಿಷ್ಟ ಬಂದ ಹಾಗೆ ಮಾಡುವ ಸ್ವೇಚ್ಛೆ ಇವೆಲ್ಲವೂ ತುಂಬಿಕೊಂಡಿವೆ.” ಎಂಬ ಈ ಸೆಮೆಟಿಕ್ ರಿಲಿಜನ್ನಿನ ವಾಕ್ಯವನ್ನು ಭಾರತೀಯ ದಾರ್ಶನಿಕನೊಬ್ಬನಿಗೆ ಹೇಳಿ ನೋಡಿ. ಆಗ ಆತನ ಪ್ರತಿಕ್ರಿಯೆ ಹೇಗಿರುತ್ತದೆ? “ಛೇ! ಕೋಪ, ಆಸೆಗಳನ್ನು ಇಟ್ಟುಕೊಂಡವನು ಭಗವಂತ ಹೇಗಾದಾನು?” ಎಂದೇ ಪ್ರತಿಕ್ರಿಯೆ ನೀಡುತ್ತಾನಲ್ಲವೇ? ಕಾರಣ ನಮ್ಮ ಭಾರತೀಯ ದರ್ಶನಗಳ ತಳಹದಿಯೇ ಬೇರೆ. ದರ್ಶನಗಳಲ್ಲಿಯೂ ತರ್ಕಕ್ಕೆ ರಿಲಿಜನ್ನುಗಳಂತೆ ಪ್ರಥಮ ಪ್ರಾಶಸ್ತ್ಯವಿಲ್ಲ. ತರ್ಕದಿಂದ ಭಗವತ್ಪ್ರಾಪ್ತಿಯೂ ಇಲ್ಲ, ಮೋಕ್ಷವೂ ಇಲ್ಲ. ಆದರೆ “ಈ ಸಿದ್ಧಾಂತವೇ ಸತ್ಯ” ಎಂದು ಎದ್ದು ನಿಂತು ಒಬ್ಬ ಹೇಳಬೇಕಾದರೆ, ಆತ ಆ ತನ್ನ ಸಿದ್ಧಾಂತವನ್ನು ತರ್ಕಾಗ್ನಿಪರೀಕ್ಷೆಗೆ ದೂಡಿ ಪವಿತ್ರವಾಗಿ ಹೊರತರಬೇಕು. ರಿಲಿಜನ್ನುಗಳಂತೆ ಪುಸ್ತಕವೇ ಪರಮ ಸತ್ಯವಲ್ಲ ಈ ದರ್ಶನಗಳಲ್ಲಿ. ಅನುಭವವೇ ಪ್ರಧಾನ. “ವೇದಗಳು ಅಗ್ನಿ ತಣ್ಣಗಿದೆ ಎಂದು ಸಾವಿರ ಸಾರಿ ಹೇಳಿದರೂ ಅನುಭವವನ್ನೇ ಅನುಸರಿಸಬೇಕು” ಎಂದು ಶಂಕರರು ಹೇಳಿದ್ದಾರೆ. ಉಪನಿಷತ್ತುಗಳೂ ಕೂಡ “ಇಲ್ಲಿ ವೇದಗಳು ವೇದಗಳಾಗಿರುವದಿಲ್ಲ” ಎಂದು ಸಾರುತ್ತವೆ. ಅಂದರೆ ವೇದಕ್ಕಿಂತಲೂ ಅನುಭವಕ್ಕೇ ಪ್ರಥಮ ಪ್ರಾಶಸ್ತ್ಯ. ಸಹಸ್ರಾರು ಅನುಭವಿಗಳ ಅನುಭವದೊಂದಿಗೆ ತಾಳೆಯಾಗುವದರಿಂದಲೇ ವೇದ ಉಪನಿಷತ್ತು, ಗೀತೆಗಳಿಗೆ ನಮ್ಮಲ್ಲಿ ಹೆಚ್ಚು ಗೌರವ.
ಅನೇಕ ದರ್ಶನಗಳು ಅನೇಕ ತರ್ಕಗಳನ್ನನುಸರಿಸಿವೆ. ವೇದವನ್ನೊಪ್ಪದ ಬೌದ್ಧ ಮತ್ತು ಚಾರ್ವಾಕ ದರ್ಶನಗಳು ತಮ್ಮದೇ ತರ್ಕ ವ್ಯವಸ್ಥೆಯನ್ನು ಹಾಕಿಕೊಂಡಿವೆ. ವೇದಗಳನ್ನೊಪ್ಪುವ ಸಾಂಖ್ಯ, ಪೂರ್ವಮೀಮಾಂಸ ಮತ್ತು ವೇದಾಂತ ಮತಗಳೂ ಕೂಡ ವೇದ/ಉಪನಿಷತ್ತುಗಳಲ್ಲಿ ಬರುವ ತರ್ಕವನ್ನು ಆಧಾರವಾಗಿಟ್ಟುಕೊಂಡಿವೆ. ಇಲ್ಲಿ ಭಾರತದಲ್ಲಿ ಅತ್ಯಂತ ಜನಪ್ರಿಯವಾದ ಮತ್ತು ದೇಶಾದ್ಯಂತ ಅನೇಕ ವಿದ್ವಜ್ಜನರು ಒಪ್ಪಿರುವ ಅದ್ವೈತ ವೇದಾಂತ ದರ್ಶನವನ್ನು ತೆಗೆದುಕೊಳ್ಳೋಣ. ಮುಖ್ಯವಾಗಿ ವೇದಾಂತಗಳಲ್ಲಿ ಕಾಣುವ ತರ್ಕ ಅತ್ಯಂತ ಜಟಿಲ. ಕಾರಣ ಉಪನಿಷತ್ತುಗಳು ಅನುಸರಿಸುವ ತರ್ಕ ರೋಮಾಂಚನಗೊಳಿಸುವಂಥದ್ದು. ಏಕೆಂದರೆ ಅದು ಮನುಷ್ಯನ ಮೂಲಭೂತ ನಂಬಿಕೆಗಳನ್ನೇ ಪ್ರಶ್ನಿಸುತ್ತದೆ. “ಆತ್ಮದ ವಿಷಯದಲ್ಲಿ, ಇದೆ ಎಂದು ಕೆಲವರು ಇಲ್ಲ ಎಂದು ಕೆಲವರು” ಎಂಬುದರೊಂದಿಗೆ ಆರಂಭವಾಗುವ ಕಠೋಪನಿಷತ್ತು, “ಆತ್ಮನು ಇದ್ದಾನೆ” ಎಂಬುದನ್ನು ತಾರ್ಕಿಕವಾಗಿ ಸಾಧಿಸಿ ಮುಕ್ತಾಯಗೊಳ್ಳುತ್ತದೆ. ಹಾಗೆಯೇ, ಶಂಕರರು “ಮನುಷ್ಯನಿಗೆ ಇಷ್ಟವಾದದ್ದನ್ನು ಪಡೆದುಕೊಳ್ಳುವದು ಮತ್ತು ಅನಿಷ್ಟವಾದದ್ದನ್ನು ಕಳೆದುಕೊಳ್ಳುವದು ಸ್ವಾಭಾವಿಕವಾಗಿದೆ. ಈ ಇಷ್ಟಪ್ರಾಪ್ತಿ-ಅನಿಷ್ಟಪರಿಹಾರವೆಂಬುದು ಜೀವಿಗಳ ಸ್ವಭಾವವು. ಉಪನಿಷತ್ತುಗಳ ಉದ್ದೇಶವೇ ಈ ಸ್ವಭಾವದ ಕಾರಣವನ್ನು ಅರಿಯುವದು” ಎಂದು ಹೇಳಿದ್ದಾರೆ. ಹೀಗೆ ಮನುಷ್ಯನ ಮೂಲ ನಂಬಿಕೆಯನ್ನೇ ತರ್ಕಕ್ಕೆ ಒಡ್ಡುವಲ್ಲಿ ಉಪನಿಷತ್ತುಗಳು ತೋರಿದ ಧೈರ್ಯ ಯಾವ ರಿಲಿಜನ್ನುಗಳಲ್ಲೂ ಕಂಡು ಬಂದಿಲ್ಲ.
ನಾಡು-ನುಡಿ ಮರುಚಿಂತನೆ : ಹಿಂದೂ ಧರ್ಮ ಇಲ್ಲದಿದ್ದರೆ ಬಹುಸಂಖ್ಯಾತರು ಯಾರು?
– ರಾಜಾರಾಮ ಹೆಗಡೆ
ಇತ್ತೀಚೆಗೆ ಲಿಂಗಾಯತ ಮಠಾಧೀಶರೊಬ್ಬರು ‘ಹಿಂದೂ ಧರ್ಮ ಇಲ್ಲ ಏಕೆಂದರೆ ಹಿಂದೂಗಳು ಸಾವಿರಾರು ದೇವತೆಗಳನ್ನು ಪೂಜಿಸುತ್ತಾರೆ, ಹಾಗಾಗಿ ವೀರಶೈವರು ಹಿಂದೂಗಳಲ್ಲ, ವೀರಶೈವರು ಒಬ್ಬನೇ ದೇವತೆಯನ್ನು ಪೂಜಿಸುತ್ತಾರೆ ಹಾಗಾಗಿ ಅವರದು ಪ್ರತ್ಯೇಕ ಧರ್ಮ’ ಎಂಬ ಹೇಳಿಕೆಯನ್ನು ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ವೈಷ್ಣವ ಮಠಾಧೀಶರೊಬ್ಬರು ‘ಹಿಂದೂಗಳು ಪೂಜಿಸುವ ಶಿವ ಹಾಗೂ ಲಿಂಗಾಯತರ ಶಿವ ಒಂದೇ ಆಗಿರುವುದರಿಂದ ಅವರೂ ಹಿಂದೂ ಧರ್ಮಕ್ಕೆ ಸೇರಿದ್ದಾರೆ’ ಎಂದರು. ಇವರೆಲ್ಲ ದೇವತೆಗಳನ್ನು ಹಾಗೂ ಧರ್ಮವನ್ನು ಸಮೀಕರಿಸುತ್ತ ತಮ್ಮ ವಾದವನ್ನು ಮಂಡಿಸುತ್ತಿರುವುದು ಕುತೂಹಲಕಾರಿಯಾಗಿದೆ. ನಮ್ಮ ಇತಿಹಾಸ ಪುರಾಣಾದಿಗಳಲ್ಲಿ ಧರ್ಮದ ಕುರಿತು ಎಷ್ಟೊಂದು ಜಿಜ್ಞಾಸೆಗಳಿವೆಯಾದರೂ ಅದರ ನಿರ್ಣಯಕ್ಕೆ ದೇವತೆಗಳನ್ನು ಯಾರೂ ಕರೆದು ತಂದಿಲ್ಲ. ಹಾಗಾದರೆ ನಮ್ಮ ಮಠಾಧೀಶರುಗಳೆಲ್ಲ ನಡೆಸುತ್ತಿರುವ ಚರ್ಚೆ ಏನು?
ನಾವು ಧರ್ಮ ಎಂಬ ಶಬ್ದವನ್ನು ಇಂಗ್ಲೀಷಿನ ರಿಲಿಜನ್ ಎಂಬ ಶಬ್ದದ ಭಾಷಾಂತರವಾಗಿ ಬಳಸುತ್ತೇವೆ. ಜ್ಯೂಡಾಯಿಸಂ, ಕ್ರಿಶ್ಚಿಯಾನಿಟಿ ಹಾಗೂ ಇಸ್ಲಾಂಗಳು ಮಾತ್ರವೇ ರಿಲಿಜನ್ನುಗಳು. ಅವರಿಗೆ ಈ ಪ್ರಪಂಚವನ್ನು ಹಾಗೂ ಮನುಷ್ಯರನ್ನು ಸೃಷ್ಟಿಸಿದ ತಂತಮ್ಮ ದೇವನು ಒಬ್ಬನೇ ಸತ್ಯ. ಅವನ ಆಜ್ಞೆಯನ್ನು ಉಲ್ಲಂಘಿಸಿದ ಪಾಪಕ್ಕಾಗಿ ಅವನಿಂದ ಅಭಿಶಪ್ತರಾಗಿ ಮನುಷ್ಯರೆಲ್ಲ ಅವನ ಲೋಕದಿಂದ ಭೂಮಿಗೆ ಬಿದ್ದರು, ಇಂಥ ಮನುಷ್ಯರು ತಮ್ಮ ಪಾಪವನ್ನು ಕಳೆದುಕೊಂಡು ಮರಳಿ ದೇವನ ಲೋಕವನ್ನು ಸೇರುವ ಮಾರ್ಗವೇ ರಿಲಿಜನ್ನು. ಈ ಸಂಗತಿಯನ್ನು ಸತ್ಯದೇವನು ಸ್ವತಃ ಆಯಾ ರಿಲಿಜನ್ನಿನ ಒಬ್ಬ ಪ್ರವಾದಿಗೆ ತಿಳಿಸಿದ್ದಾನೆ ಹಾಗೂ ಅದನ್ನಾಧರಿಸಿ ಅವರ ಪವಿತ್ರ ಗ್ರಂಥ ರೂಪುಗೊಂಡಿದೆ. ಈ ಗ್ರಂಥಗಳ ವಾಕ್ಯಗಳು ಆಯಾ ರಿಲಿಜನ್ನಿನ ಅನುಯಾಯಿಗಳ ಕ್ರಿಯೆಗಳಿಗೆ ಆಧಾರವಾಗಿರುತ್ತವೆ.
ವಿಜ್ಞಾನ, ರಿಲಿಜನ್ನು ಮತ್ತು ದರ್ಶನಗಳಲ್ಲಿ ತರ್ಕದ ಸ್ಥಾನ – ಭಾಗ ೨
– ವಿನಾಯಕ ಹಂಪಿಹೊಳಿ
ವಿಜ್ಞಾನ, ರಿಲಿಜನ್ನು ಮತ್ತು ದರ್ಶನಗಳಲ್ಲಿ ತರ್ಕದ ಸ್ಥಾನ – ಭಾಗ ೧
ರಿಲಿಜನ್ನುಗಳಲ್ಲಿ ತರ್ಕಕ್ಕೆ ನಂಬಿಕೆಯ ನಂತರದ ಸ್ಥಾನವಿದೆ. ನಂಬಿಕೆಗೆ ಪ್ರಥಮ ಪ್ರಾಶಸ್ತ್ಯ. ನಂಬಿಕೆಗೂ ತರ್ಕಕ್ಕೂ ವಿರೋಧಾಭಾಸವಿದ್ದಲ್ಲಿ ನಂಬಿಕೆಯೇ ಸತ್ಯ. ತರ್ಕಕ್ಕೆ ಅಲ್ಲಿ ಜಾಗವಿಲ್ಲ. ತರ್ಕದಿಂದ ಭಗವಂತನ ದರ್ಶನವೂ ಆಗುವದಿಲ್ಲ ಮತ್ತು ತರ್ಕದಿಂದ ಸ್ವರ್ಗಪ್ರಾಪ್ತಿಯೂ ಇಲ್ಲ. ತರ್ಕವೇನಿದ್ದರೂ, ಉಳಿದ ರಿಲಿಜನ್ನುಗಳಿಗಿಂತ ತಮ್ಮ ರಿಲಿಜನ್ನು ಹೇಗೆ ಶ್ರೇಷ್ಠ ಎಂಬುದನ್ನು ತೋರಿಸಲು, ಮತ್ತು ತಮ್ಮ ರಿಲಿಜನ್ನುಗಳ ಮೂಲ ಕಲ್ಪನೆಗಳು ಮಾತ್ರ ಪರಮ ಸತ್ಯ ಎಂದು ಸಾಬೀತು ಪಡಿಸಲು ಅಷ್ಟೇ. ಉದಾಹರಣೆಗಾಗಿ ದೇವನು ಒಬ್ಬನೇ ಎಂಬುದನ್ನು ಸೆಮೆಟಿಕ್ ರಿಲಿಜನ್ನುಗಳು ನಂಬುತ್ತವೆ. ಮತ್ತು ಅದಕ್ಕೆ ಸಾಕಷ್ಟು ತರ್ಕಗಳನ್ನೂ ನೀಡುತ್ತವೆ. ಆದರೆ ದೇವನ ನಾಮ ಮತ್ತು ಗುಣಗಳ ಬಗ್ಗೆ ವಿರೋಧಾಭಾಸಗಳಿವೆ. ಪ್ರತಿಯೊಂದು ರಿಲಿಜನ್ನೂ ತಮ್ಮ ಪ್ರವಾದಿಗಳೇ ಸತ್ಯ ಎಂದು ಸಾರುತ್ತವೆ. ಮತ್ತು ಉಳಿದ ರಿಲಿಜನ್ನುಗಳ ಮುಂದೆ ಅದನ್ನೇ ತರ್ಕಬದ್ಧವಾಗಿ ಸಾಧಿಸುತ್ತವೆ.
ಆದರೂ ರಿಲಿಜನ್ನಿನ ಅನುಯಾಯಿಗಳು ತರ್ಕವನ್ನು ತಮ್ಮ ರಿಲಿಜನ್ನಿನ ಗ್ರಂಥಗಳ ಮೇಲೆ ಬಿಟ್ಟುಕೊಳ್ಳುವದಿಲ್ಲ. ಉದಾಹರಣೆಗೆ ಹಳೇ ಒಡಂಬಡಿಕೆಯೇ ಸತ್ಯ ಎಂಬುದು ಯಹೂದಿಗಳು ನಂಬುತ್ತಾರೆ ಅದಕ್ಕೆ ಅವರು ತರ್ಕವನ್ನು ಬೇಡುವದಿಲ್ಲ. ಆದರೆ ಹೊಸ ಒಡಂಬಡಿಕೆಯನ್ನು ಒಪ್ಪಿಕೊಳ್ಳಲು ತರ್ಕದ ಸಾಧನೆಯನ್ನು ಅಪೇಕ್ಷಿಸುತ್ತಾರೆ. ಮೊಹಮದ್ ಪೈಗಂಬರ್ ಅಂತಿಮ ಪ್ರವಾದಿ ಎಂಬುದನ್ನು ಮುಸ್ಲಿಮರು ತಮ್ಮ ಗ್ರಂಥದಿಂದಲೇ ಒಪ್ಪಿರುತ್ತಾರೆ. ಆದರೆ ಉಳಿದ ರಿಲಿಜನ್ನಿನವರಿಗೂ ಅದನ್ನು ಮನವರಿಕೆ ಮಾಡಲು ತರ್ಕವನ್ನಾಶ್ರಯಿಸುತ್ತಾರೆ. ಉಳಿದ ಗ್ರಂಥಗಳಲ್ಲಿನ ಇತಿಮಿತಿಗಳನ್ನು ತೋರಿಸಲು ತರ್ಕವನ್ನು ಹಿಡಿಯುತ್ತಾರೆ. ಆದರೆ ತಮ್ಮ ಗ್ರಂಥಗಳ ಇತಿಮಿತಿಗಳನ್ನು ತೋರಿಸುವ ಅದೇ ತರ್ಕವನ್ನು ಅಲ್ಲಗೆಳೆದು ತಮ್ಮ ಗ್ರಂಥವು ತರ್ಕಾತೀತವೆಂದು ಸಾರುತ್ತಾರೆ.
ವಿಜ್ಞಾನ, ರಿಲಿಜನ್ನು ಮತ್ತು ದರ್ಶನಗಳಲ್ಲಿ ತರ್ಕದ ಸ್ಥಾನ – ಭಾಗ ೧
– ವಿನಾಯಕ ಹಂಪಿಹೊಳಿ
ತರ್ಕ ಮನುಷ್ಯನಿಗಿರುವ ಒಂದು ಅತ್ಯುತ್ತಮ ಸಾಧನ. ಇದನ್ನು ಆಧರಿಸಿ ಮಾನವ ತನ್ನ ಜೀವನದಲ್ಲಿ ಅನೇಕ ಬದಲಾವಣೆಗಳನ್ನು ಮಾಡಿಕೊಂಡಿದ್ದಾನೆ. ವಿಜ್ಞಾನವಂತೂ ತರ್ಕದ ಆಧಾರದ ಮೇಲೆಯೇ ಬೆಳೆದಿರುವಂಥದ್ದು. ರಿಲಿಜನ್ನು ಮತ್ತು ದರ್ಶನಗಳಲ್ಲಿ ತರ್ಕಕ್ಕೆ ವಿಜ್ಞಾನದಂತೆ ಮೊದಲನೇ ಪ್ರಾಶಸ್ತ್ಯವಿಲ್ಲವಾದರೂ, ತರ್ಕವನ್ನು ಸಂಪೂರ್ಣವಾಗಿ ಬಿಟ್ಟು ನಿಂತಿಲ್ಲ. ಪಾಶ್ಚಿಮಾತ್ಯ ರಿಲಿಜನ್ನುಗಳಿಗೂ ಭಾರತೀಯ ದರ್ಶನಗಳಿಗೂ ಇರುವ ಮುಖ್ಯ ವ್ಯತ್ಯಾಸ ಈಗಾಗಲೇ ನಿಲುಮೆಯಲ್ಲಿ ಸಾಕಷ್ಟು ಚರ್ಚೆಯಾಗಿದೆ. ಹೀಗಾಗಿ ಅವುಗಳ ವ್ಯತ್ಯಾಸದ ಕಡೆಗೆ ಹೆಚ್ಚು ಗಮನ ಕೊಡದೇ ಇವೆರಡರಲ್ಲೂ ತರ್ಕದ ಸ್ಥಾನವೇನು ಎಂಬುದರ ಬಗ್ಗೆ ಚರ್ಚಿಸೋಣ.
ವಿಜ್ಞಾನದಲ್ಲಿ ತರ್ಕ:
ಗಣಿತೀಯ ತರ್ಕ ಪದ್ಧತಿಯನ್ನು ವಿಜ್ಞಾನ ಅಳವಡಿಸಿಕೊಂಡಿದೆ. ಗಣಿತೀಯ ತರ್ಕದಲ್ಲಿ ’ಅಥವಾ’, ’ಮತ್ತು’, ’ಆದರೆ’ ಮುಂತಾದ ಸಂಬಂಧಗಳು ಮುಖ್ಯವಾಗಿರುತ್ತವೆ. ಎಲ್ಲ ವೈಜ್ಞಾನಿಕ ಸಿದ್ಧಾಂತಗಳೂ ಒಂದು ಗಣಿತೀಯ ತರ್ಕವೊಂದನ್ನು ಸಾಧಿಸಲು ಪ್ರಯತ್ನಿಸುತ್ತವೆ. ಕಾರಣ ಗಣಿತೀಯ ತರ್ಕದಿಂದ ಸಾಧಿಸಲ್ಪಟ್ಟ ಸಿದ್ಧಾಂತಗಳಲ್ಲಿ ಮೂಲ ಊಹೆಯು ತಪ್ಪಾಗಿಲ್ಲದಿದ್ದ ಪಕ್ಷದಲ್ಲಿ ಸಿದ್ಧಾಂತವು ಎಂದಿಗೂ ಸುಳ್ಳಾಗದು. ಐನ್ಸ್ಟೈನರ ಮಾತುಗಳಲ್ಲಿ ಹೇಳುವದಾದರೆ “ವೈಜ್ಞಾನಿಕ ಸಿದ್ಧಾಂತವೆಂಬುದು ಕೇವಲ ಕೆಲವೇ ಊಹೆಗಳನ್ನಾಧರಿಸಿ ನಿರ್ಮಿಸಿದ ಗಣಿತೀಯ ಮಾದರಿ”. ಉದಾಹರಣೆಗಾಗಿ ಅವರ ಸಾಪೇಕ್ಷತಾ ಸಿದ್ಧಾಂತವನ್ನೇ ತೆಗೆದುಕೊಳ್ಳೋಣ. ಅದರಲ್ಲಿ ಅವರು ಮಾಡಿದ ಊಹೆಗಳು ಎರಡೇ. ಮೊದಲನೇಯದು ಭೌತಿಕ ಕ್ರಿಯೆಗಳು ಎಲ್ಲ ರೀತಿಯ ಕಲ್ಪಿತ ಚೌಕಟ್ಟುಗಳಲ್ಲಿ ಒಂದೇ ತೆರನಾಗಿ ಅನ್ವಯವಾಗುತ್ತವೆ. ಎರಡನೇಯದು ಬೆಳಕಿನ ವೇಗ ಆ ಎಲ್ಲ ರೀತಿಯ ಕಲ್ಪಿತ ಚೌಕಟ್ಟುಗಳಲ್ಲಿ ಒಂದೇ ಆಗಿರುತ್ತದೆ. ಎಲ್ಲಿಯವರೆಗೆ ಈ ಊಹೆಗಳನ್ನು ನಿರಾಕರಿಸುವ ಪ್ರಕರಣಗಳು ಬೆಳಕಿಗೆ ಬರುವದಿಲ್ಲವೋ ಅಲ್ಲಿಯವರೆಗೂ ಸಾಪೇಕ್ಷತಾ ಸಿದ್ಧಾಂತ ಸತ್ಯವೇ.
ಬಹುಸಂಖ್ಯಾತರಿಗೆ ರಿಲಿಜನ್ ಇಲ್ಲವಾದರೆ ಅಲ್ಪಸಂಖ್ಯಾತರು ಯಾರು?
– ರಾಕೇಶ್ ಶೆಟ್ಟಿ
ಅದು ರಾಮಕೃಷ್ಣ ಮಿಷನ್ ವರ್ಸಸ್ ಪಶ್ಚಿಮ ಬಂಗಾಳ ಸರ್ಕಾರದ ನಡುವೆ ನಡೆದ ಕುತೂಹಲಕಾರಿ ಕಾನೂನು ಕದನ.ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅನುದಾನದಲ್ಲಿ ರಾಮಕೃಷ್ಣ ಮಿಷನ್ ಸಂಸ್ಥೆಗೆ ಸೇರಿದ ಶಿಕ್ಷಣ ಸಂಸ್ಥೆಯೊಂದರಲ್ಲಿ ಶುರುವಾಗಿದ್ದ ಕಾಲೇಜಿನ ನಿರ್ವಹಣೆಗೆ ಸಂಬಂಧಿಸಿದಂತೆ,ಸರ್ಕಾರದ ಹಸ್ತಕ್ಷೇಪವನ್ನು ಪ್ರಶ್ನಿಸಿ ರಾಮಕೃಷ್ಣ ಮಿಷನ್ ನ್ಯಾಯಾಲಯದ ಮೆಟ್ಟಿಲೇರಿತ್ತು.ತಮ್ಮ ಸಂಘಟನೆಯೂ ರಾಮಕೃಷ್ಣರ ಬೋಧನೆಗಳ ಮೇಲೆ ಆಧಾರಿತವಾಗಿರುವುದರಿಂದ ತಮ್ಮ ಶಿಕ್ಷಣ ಸಂಸ್ಥೆಗಳಿಗೆ ಸಂವಿಧಾನದ Article 30(1) ಮತ್ತು Article 26(a) ಕಾಯ್ದೆಯಡಿಯಲ್ಲಿ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ಇರಬೇಕಾದ ರಕ್ಷಣೆಯಿದೆ ಎಂದು ವಾದಿಸಿತ್ತು.ಈ ಪ್ರಕರಣದಲ್ಲಿ ಸುಪ್ರೀಂ ಕೋರ್ಟು, ರಾಮಕೃಷ್ಣಯಿಸಂ ಎಂಬ ಪ್ರತ್ಯೇಕವಾದ ರಿಲಿಜನ್ ಇಲ್ಲ ಮತ್ತದು ಹಿಂದೂ ಸಂಪ್ರದಾಯಗಳ ವ್ಯಾಪ್ತಿಯಲ್ಲೇ ಇದೆ ಎಂದಿತ್ತು ಹಾಗೂ ಹಿಂದೂ ಎಂಬುದು ರಿಲಿಜನ್ ಅಲ್ಲ ಅದೊಂದು ಜೀವನ ಪದ್ಧತಿ ಎಂದು ತೀರ್ಪು ನೀಡಿತ್ತು.ಈ ದೇಶದ ಸರ್ವೋಚ್ಚ ನ್ಯಾಯಾಲಯವೇ ಹಿಂದೂ ಎಂಬುದು ರಿಲಿಜನ್ ಅಲ್ಲ ಎಂದ ಮೇಲೆ ನಮ್ಮ ಸರ್ಕಾರಗಳು ಅದನ್ನು ಪರಿಗಣಿಸಬೇಕಿತ್ತಲ್ಲವೇ?
ಒಂದು ವೇಳೆ ಪರಿಗಣಿಸಿದ್ದರೆ ಈಗಲೂ ಸರ್ಕಾರಿ,ಖಾಸಗಿ ಕಚೇರಿ,ಶಿಕ್ಷಣ ಸಂಸ್ಥೆ ಇತ್ಯಾದಿಗಳ ಅರ್ಜಿಗಳಲ್ಲಿ “ಹಿಂದೂ” ಎಂಬುದನ್ನು “ರಿಲಿಜನ್” ಕಾಲಂನಲ್ಲಿ ಭರ್ತಿ ಮಾಡಿಕೊಳ್ಳುತ್ತಿರಲಿಲ್ಲ. ಉದಾಹರಣೆಗೆ ಇತ್ತೀಚೆಗಷ್ಟೇ ಕರ್ನಾಟಕ ರಾಜ್ಯ ಸರ್ಕಾರ ಮಾಡಿದ ಜಾತಿಗಣತಿಯ ವೇಳೆ ನನಗಾದ ಅನುಭವದ ಬಗ್ಗೆ ಹೇಳಬೇಕು.
ವಸಾಹತುಶಾಹಿಯ ರಮ್ಯ ಕಥಾನಕ – ಭಾಗ ೨
– ಡಾ.ಶ್ರೀಪಾದ ಭಟ್
ಸಹಾಯಕ ಪ್ರಾಧ್ಯಾಪಕ,ಡಾ.ಡಿ ವಿ ಗುಂಡಪ್ಪ ಕನ್ನಡ ಅಧ್ಯಯನ ಕೇಂದ್ರ
ತುಮಕೂರು ವಿಶ್ವವಿದ್ಯಾನಿಲಯ, ತುಮಕೂರು
ವಸಾಹತುಶಾಹಿಯ ರಮ್ಯ ಕಥಾನಕ – ಭಾಗ ೧
ನೋಬಿಲಿಯ ಉಲ್ಲೇಖಗಳು ಅಸ್ಪಷ್ಟವಾಗಿದ್ದರೂ ಆತನ ವಾದದ ಕೇಂದ್ರಬಿಂದು ನೇರವಾಗಿತ್ತು. ಇವನನ್ನು ದಾರಿತಪ್ಪಿಸುವವರಂತಲ್ಲದೇ ಈತ ಭಾರತೀಯ ಸಂಸ್ಕೃತಿಯನ್ನು ಅರ್ಥಮಾಡಿಕೊಳ್ಳಲು ಮಾತ್ರವಲ್ಲದೇ ಧಾರ್ಮಿಕ ನಂಬಿಕೆಗಳ ಹಾಗೂ ಅದರ ಸಾಂಸ್ಕೃತಿಕ ಸಂಗತಿಗಳ ವೈಶಿಷ್ಟ್ಯವನ್ನು ತಿಳಿದುಕೊಳ್ಳಲು ಸಾಕಷ್ಟು ಪರಿಶ್ರಮಪಟ್ಟಿದ್ದ. ಬ್ರಾಹ್ಮಣ ಸಂಪ್ರದಾಯದ ಅನೇಕ ಸಂಗತಿಗಳನ್ನು ಸೂಕ್ಷ್ಮವಾಗಿ ಅವಲೋಕಿಸಿ ಅಳವಡಿಸಿಕೊಂಡಿದ್ದ. ಶಿಖೆ, ತಿಲಕಧಾರಣೆ ಇತ್ಯಾದಿಗಳನ್ನು ಅನುಸರಿಸುತ್ತಿದ್ದ. ಬ್ರಾಹ್ಮಣ ತಜ್ಞರನ್ನು ಭೇಟಿ ಮಾಡಿ ಅವರಿಂದ ಆಚರಣೆಗಳ ಮೂಲದ ಅರ್ಥವನ್ನು ತಿಳಿದುಕೊಂಡ. ಬಹಳಷ್ಟು ಯೂರೋಪಿಯನ್ನರು ಹಿಂದೂಗಳ ಬಹುಪಾಲು ಆಚರಣೆಗಳನ್ನು ಅರ್ಥಮಾಡಿಕೊಳ್ಳದೇ ಅಪರಿಚಿತವಾದ ಅವು ಮೂರ್ತಿಪೂಜೆಯೊಂದಿಗೆ ಸೇರಿಕೊಂಡ ಮೂಢನಂಬಿಕೆಗಳೆಂದು ಹೇಳುತ್ತಿದ್ದರೆ, ನೋಬಿಲಿ ಇವುಗಳಲ್ಲಿ ಬಹುಪಾಲು ಆಚರಣೆಗಳು ನಾಗರಿಕ ಜೀವನ ಶೈಲಿಯನ್ನು ರೂಪಿಸುವಂಥವು ಎಂದು ದೃಢಪಡಿಸಿದ. ಕೆಲವು ಆಚರಣೆಗಳಿಗೆ ಧಾರ್ಮಿಕವಾಗಿ ಯಾವುದೇ ಸಂಬಂಧವಿಲ್ಲ ಎಂಬುದನ್ನು ತೋರಿಸಿದ. ಸಾಂಪ್ರದಾಯಿಕ ಧಾರ್ಮಿಕ ಹಿಂದೂ ಆಚರಣೆಗಳನ್ನು ಮೀರಿ ನಾಗರಿಕ ವರ್ತನೆಗಳನ್ನು ಮಾತ್ರ ಉಳಿಸಿಕೊಳ್ಳುವಂತೆ ಮತಾಂತರಿಗಳಿಗೆ ಸೂಚಿಸಿರುವುದಾಗಿ ಹೆಳಿರುವುದಾಗಿ ಸ್ವತಃ ಬ್ರಾಹ್ಮಣ ಆಚರಣೆ ಮಾಡುತ್ತಿದ್ದ ನೋಬಿಲಿ ವಾದಿಸಿದ.
ನಂತರ ಆತ ಯೂರೋಪಿಯನ್ನರ ಹೆಸರು ಇಟ್ಟುಕೊಳ್ಳುವಂತೆ, ವೇಷಭೂಷಣ ತೊಡುವಂತೆ, ಭಾರತೀಯ ಸಮಾಜದಲ್ಲಿನ ಯಾವುದೇ ಕುರುಹು ಉಳಿಯದಂತೆ ವ್ಯವಸ್ಥಿತವಾಗಿ ಪ್ರಚಾರ ಮಾಡುತ್ತಿದ್ದ ತನ್ನ ಮಾರ್ಗಕ್ಕೆ ಅಡ್ಡಿಯಾಗಿರುವವರನ್ನು ತರಾಟೆಗೆ ತೆಗೆದುಕೊಂಡ. ಮತಾಂತರಗೊಂಡವರು ಅನಗತ್ಯವಾಗಿ ತಮ್ಮ ಮೂಲಸಮಾಜದ ಆಚರಣೆಯನ್ನು ಕೈಬಿಡುವಂತೆ ಹೇಳುವ ಇಂಥವರನ್ನು ನೋಬಿಲಿ ಖಂಡಿಸಿದ. ಕ್ರಿಶ್ಚಿಯನ್ನೇತರ ಭಾರತೀಯ ಸಮಾಜದವರು ಮತಾಂತರಿಗಳನ್ನು “ತಮ್ಮ ಮೂಲವನ್ನು ಕಳೆದುಕೊಂಡವರು, ಅವನತಿ ಉಂಟುಮಾಡುವವರು’’ ಎಂಬಂತೆ ಕಾಣುತ್ತಿದ್ದರು. ಕ್ರಿಶ್ಚಿಯನ್ ಆಚರಣೆಯನ್ನು ನಾವೇಕೆ ಇಷ್ಟು ಕಡ್ಡಾಯ ಮಾಡಿದ್ದೇವೆ ಎಂಬುದನ್ನು ಕ್ರಿಶ್ಚಿಯನ್ನೇತರರಿಗೆ ಅರ್ಥಮಾಡಿಕೊಳ್ಳಲು ಸಾಧ್ಯವಾಗಲಿಲ್ಲ.
ವಸಾಹತುಶಾಹಿಯ ರಮ್ಯ ಕಥಾನಕ – ಭಾಗ ೧
– ಡಾ.ಶ್ರೀಪಾದ ಭಟ್
ಸಹಾಯಕ ಪ್ರಾಧ್ಯಾಪಕ,ಡಾ.ಡಿ ವಿ ಗುಂಡಪ್ಪ ಕನ್ನಡ ಅಧ್ಯಯನ ಕೇಂದ್ರ
ತುಮಕೂರು ವಿಶ್ವವಿದ್ಯಾನಿಲಯ, ತುಮಕೂರು
ಆಫ್ರಿಕ ಜಾನಪದ ಕುರಿತ ವಿಶ್ವಕೋಶವನ್ನು ಸಿದ್ಧಪಡಿಸುವ ಕೆಲಸದಲ್ಲಿರುವಾಗ ಅಲ್ಲಿನ ಮೂಲನಿವಾಸಿಗಳಿಗೆ ಸಂಬಂಧಿಸಿದ ಸಮಗ್ರ ಮಾಹಿತಿಯನ್ನು ಕಲೆಹಾಕಬೇಕಾಗಿ ಬಂತು.ಮಾಕೊಂಡೆ, ಲುಂಗ, ಲುಂಡ, ಲುವಾಲೆ ಮೊದಲಾದ ಇಪ್ಪತ್ತಕ್ಕೂ ಹೆಚ್ಚು ಮೂಲನಿವಾಸಿಗಳನ್ನು ಕುರಿತ ಇತಿಹಾಸ, ಮಾಹಿತಿ ಕಲೆಹಾಕಿದಾಗ ಅಚ್ಚರಿ ಎನಿಸುವ ಸಂಗತಿಗಳು ಒಂದೊಂದಾಗಿ ಹೊರಬೀಳತೊಡಗಿದವು. ಆ ಹಿನ್ನೆಲೆಯಲ್ಲಿ ಈ ಲೇಖನ.
ಕ್ರಿಶ್ಚಿಯಾನಿಟಿಯ ಬಿಬ್ಲಿಕಲ್ ಥಿಯಾಲಜಿ ಹಿನ್ನೆಲೆಯ ಯೂರೋಪಿನ ಎಂಪಿರಿಕಲ್ ಇತಿಹಾಸವೇ ಇಡೀ ವಿಶ್ವದ ಮನುಕುಲದ ಇತಿಹಾಸ ಹೇಗಾಗಿದೆ ಎಂಬುದನ್ನು ಪ್ರೊ.ಬಾಲಗಂಗಾಧರ (ಬಾಲು) ಅವರು ಎಳ್ಳಷ್ಟೂ ಶಂಕೆ ಇಲ್ಲದಂತೆ ಸಾಧಾರವಾಗಿ ತಮ್ಮ ಕೃತಿಗಳಲ್ಲಿ ಅದರಲ್ಲೂ “ದಿ ಹೀದನ್ ಇನ್ ಹಿಸ್ ಬ್ಲೈಂಡ್ನೆಸ್ (1994)” ಹಾಗೂ “ಡು ಆಲ್ ರೋಡ್ ಲೀಡ್ ಟು ಜೆರುಸಲೇಂ? ದಿ ಮೇಕಿಂಗ್ ಆಫ್ ಇಂಡಿಯನ್ ರಿಲಿಜನ್ಸ್ (2014)” ಸಂಶೋಧನ ಗ್ರಂಥಗಳಲ್ಲಿ ದಾಖಲಿಸಿದ್ದಾರೆ.ಸ್ಥಾಪಿತ ವಾದಗಳಲ್ಲೇ ಸ್ವಂತಿಕೆ ಕಂಡುಕೊಂಡ ಶೈಕ್ಷಣಿಕ ಹಾಗೂ ವಿದ್ವತ್ ವಲಯದ ಜನರಿಗೆ ಬಾಲು ಅವರ ಚಿಂತನೆಯಿಂದ ಕಿರಿಕಿರಿ ಆಗಬಹುದು, ಆಗುತ್ತಿದೆ. ಇದರ ಫಲವಾಗಿಯೇ ಅವರೆಲ್ಲ ಬಾಲು ಅವರ ಕೃತಿಯನ್ನು ಓದದೇ ಅವರೊಬ್ಬ ಪುರೋಗಾಮಿ, ಪ್ರತಿಗಾಮಿ ಇತ್ಯಾದಿ ಇತ್ಯಾದಿ ಹಣೆಪಟ್ಟಿ ಹಚ್ಚುವ ಕೆಲಸ ನಡೆಸಿದ್ದಾರೆ. ಜಾನಪದದ ವಿದ್ಯಾರ್ಥಿಯಾಗಿ, ಕ್ಷೇತ್ರಕಾರ್ಯಕರ್ತನಾಗಿ ಕೆಲಸಮಾಡುತ್ತಿರುವ ನನಗೆ ನಮ್ಮ ಸುತ್ತಲಿನ ಕನಿಷ್ಠ ಮೂವತ್ತು ವಿಭಿನ್ನ ಸಮುದಾಯಗಳ ವಿವಿಧ ಆಚಾರ-ವಿಚಾರಗಳ ಪ್ರತ್ಯಕ್ಷ ಅನುಭವವಿದೆ. ಬಾಲು ಅವರ ಚಿಂತನೆ ಓದುವವರೆಗೆ ಈ ಆಚಾರ-ವಿಚಾರಗಳಲ್ಲಿ ಇರುವ ಸಾಮ್ಯ, ವೈವಿಧ್ಯಗಳು ಅಸಂಖ್ಯ ಪ್ರಶ್ನೆಗಳನ್ನು ಹುಟ್ಟುಹಾಕುತ್ತಿದ್ದವೇ ವಿನಾ ಎಡ-ಬಲಗಳ ಹೊಯ್ದಾಟದ ಯಾವ ಪ್ರಚಲಿತ ಸಿದ್ಧಾಂತಗಳೂ ತೃಪ್ತಿಕರ ಉತ್ತರ ನೀಡಿರಲಿಲ್ಲ. “ನಮ್ಮ ದೇಶದಲ್ಲಿ ರಿಲಿಜನ್ ಇಲ್ಲ; ಇಲ್ಲಿರುವುದು ಆಚರಣೆ ಮತ್ತು ಸಂಪ್ರದಾಯಗಳು. ಯಾರು ಯಾವ ಆಚರಣೆ ಮತ್ತು ಸಂಪ್ರದಾಯವನ್ನು ಬೇಕಾದರೂ ಅನುಸರಿಸಬಹುದು. ಇದಕ್ಕೆ ಜಾತಿ ಕಟ್ಟು ಎಂಬುದಿಲ್ಲ. ಯಾವುದೂ ಹೆಚ್ಚಲ್ಲ, ಯಾವುದೂ ಕೀಳಲ್ಲ. ನಮ್ಮಲ್ಲಿ ಧರ್ಮ ಇದೆ, ರಿಲಿಜನ್ ಇಲ್ಲ. ಯಾವುದೂ ನಮ್ಮಲ್ಲಿ ಒಂದು ಎನ್ನುವುದಿಲ್ಲ. ದೇವರಾಗಲೀ, ಸ್ಕ್ರಿಪ್ಚರ್ (ರಿಲಿಜಿಯಸ್ ಸೂತ್ರ ನಿರ್ದೇಶಿಸುವ ಗ್ರಂಥಗಳು) ಆಗಲೀ ಯಾವುದೂ ಒಂದಿಲ್ಲ. ಇವೆಲ್ಲ ಒಂದೇ ಎಂಬುದು ಇರುವುದು ಕ್ರಿಶ್ಚಿಯನ್, ಇಸ್ಲಾಂನಂಥ ರಿಲಿಜನ್ನುಗಳಲ್ಲಿ” ಎನ್ನುವ ಬಾಲು ಅವರು ವಸಾಹತುಗಳ ಮೂಲಕ ಭಾರತಕ್ಕೆ ರಿಲಿಜನ್ ಪರಿಕಲ್ಪನೆ ತಪ್ಪಾಗಿ ಹೇಗೆ ಬಂದಿದೆ ಹಾಗೂ ಅದು ಏನೆಲ್ಲ ಅನಾಹುತ ಉಂಟುಮಾಡಿದೆ ಎಂಬುದನ್ನು ಎಳೆಎಳೆಯಾಗಿ ವಿವರಿಸುತ್ತಾರೆ.