ನಾವೇಕೆ ಪಾಶ್ಚಾತ್ಯ ಸಂಸ್ಕೃತಿಯನ್ನು ಅರ್ಥ ಮಾಡಿಕೊಳ್ಳಬೇಕು? ( ಭಾಗ – ೪ )
ಎಸ್.ಎನ್. ಬಾಲಗಂಗಾಧರ
(ತಿದ್ದುಪಡಿ ಮಾಡಿದ ಅನುವಾದ.
ಮೂಲ ಅನು: ಸಿ.ಎಸ್.ಎಲ್.ಸಿ ಸಂಶೋಧಕರು, ‘ಪೂರ್ವಾವಲೋಖನ’ ಕೃತಿಯಲ್ಲಿ ಪ್ರಕಟವಾಗಿದೆ.)
ಸಾಮಾನ್ಯವಾಗಿ ಪಶ್ಚಿಮದಲ್ಲಿ ನಮ್ಮ ಸಂಸ್ಕೃತಿಗೆ ಸಂಬಂಧಿಸಿದಂತೆ ಪದೇಪದೇ ಕೇಳಿಬರುವ ಈ ಪ್ರಶ್ನೆಗಳನ್ನು ಗಮನಿಸಿ. ನೀವು ಹಣೆಗೆ ತಿಲಕ ಇಡುವುದೇಕೆ? ಗೋಮಾಂಸವನ್ನು ನೀವೇಕೆ ತಿನ್ನುವುದಿಲ್ಲ? ನೀವು ಶಿಶ್ನವನ್ನು ಪೂಜೆ ಮಾಡುತ್ತೀರಂತೆ ಹೌದೆ? ಜಾತಿ ಪದ್ಧತಿಯ ಬಗ್ಗೆ ನಿಮ್ಮ ಅನಿಸಿಕೆಯೇನು? ಈಗಲೂ ಭಾರತದಲ್ಲಿ ವಿಧವೆಯರನ್ನು ಸುಡುತ್ತಾರೆಯೇ? ನಿಮ್ಮ ದೇವರುಗಳಿಗೇಕೆ ಆರೆಂಟು ಕೈಗಳು ಇರುತ್ತವೆ? ನಿಮ್ಮ ರಿಲಿಜನ್ನಿನ ಚಿಹ್ನೆ ಯಾವುದು? ನೀವು ದೇವಸ್ಥಾನದಲ್ಲಿ ಮೂರ್ತಿಪೂಜೆ/idolatry ಮಾಡುತ್ತೀರಾ? ನೀವು ದೇವರನ್ನು ನಂಬುತ್ತೀರಾ? Are you religious? ಇತ್ಯಾದಿ. ಈ ರೀತಿಯ ಪ್ರಶ್ನೆಗಳು ಎದುರಾದಾಗ ಯಾರಾದರೂ ಹೇಗೆ ಪ್ರತಿಕ್ರಿಯಿಸಬಹುದು? ಸ್ಥೂಲವಾಗಿ ಹೇಳುವುದಾದರೆ, ಇದಕ್ಕೆ ಎರಡು ವಿಧದಲ್ಲಿ ಪ್ರತಿಕ್ರಿಯಿಸಬಹುದು. ಮೊದಲನೆಯದು, ಈ ಪ್ರಶ್ನೆಗಳು ಗ್ರಹಿಸಲು ಸಾಧ್ಯವಾಗುವಂಥ ಮತ್ತು ನಮಗೆ ಅರ್ಥವಾಗುವ ಪ್ರಶ್ನೆಗಳು ಎಂಬ ಊಹೆಯೊಂದಿಗೆ ಈ ಪ್ರಶ್ನೆಗಳಿಗೆ ಉತ್ತರ ನೀಡುವುದು. ಸುಧಾರಣಾವಾದಿಗಳ ಕಾಲದಿಂದ ಇಂದಿನವರೆಗೆ ನಾವು ಅನುಸರಿಸಿದ ಮಾರ್ಗ ಇದೇ. ಆದರೆ ಅಮೆರಿಕೆಯಲ್ಲಿ ನೆಲೆಸುವ ಭಾರತೀಯರ [ಅಷ್ಟೇ ಏಕೆ, ಸಂಕುಚಿತಗೊಳ್ಳುತ್ತಿರುವ ಆ ಜಗತ್ತಿನಲ್ಲಿ, ಭಾರತದಲ್ಲಿನ ಭಾರತೀಯರ] ಪರಿಸ್ಥಿತಿ ಇಂದು ಬದಲಾಗಿದೆ: ಹಿಂದಿನ ಕಾಲದ ಸುಧಾರಕರು ಭಾರತೀಯ ಸಂದರ್ಭದಲ್ಲಿ ಮಾತನಾಡುತ್ತಿದ್ದರು, ಆದರೆ ನಾವಿಂದು ಪಾಶ್ಚಾತ್ಯ ಸಂಸ್ಕೃತಿಯ ಸಂದರ್ಭದಲ್ಲಿ ನಿಂತು ಮಾತನಾಡುತ್ತಿದ್ದೇವೆ. ಬದಲಾದ ಈ ಸಾಂಸ್ಕೃತಿಕ ಪರಿಸ್ಥಿತಿಯಲ್ಲಿ ನಾವೂ ನಮ್ಮ ಸುಧಾರಣಾವಾದಿಗಳು ನಡೆದ ಮಾರ್ಗವನ್ನು ಅನುಸರಿಸಿದರೆ ಉಂಟಾಗುವ ಪರಿಣಾಮವನ್ನು ಗ್ರಹಿಸುವುದು ಬಹಳ ಮುಖ್ಯವಾಗಿದೆ. ಮತ್ತಷ್ಟು ಓದು
ನಾವೇಕೆ ಪಾಶ್ಚಾತ್ಯ ಸಂಸ್ಕೃತಿಯನ್ನು ಅರ್ಥ ಮಾಡಿಕೊಳ್ಳಬೇಕು..? ( ಭಾಗ – ೩ )
ಎಸ್.ಎನ್. ಬಾಲಗಂಗಾಧರ
(ತಿದ್ದುಪಡಿ ಮಾಡಿದ ಅನುವಾದ.
ಮೂಲ ಅನು: ಸಿ.ಎಸ್.ಎಲ್.ಸಿ ಸಂಶೋಧಕರು, ‘ಪೂರ್ವಾವಲೋಖನ’ ಕೃತಿಯಲ್ಲಿ ಪ್ರಕಟವಾಗಿದೆ.)
ಒಂದು ಹೋಲಿಕೆ
ವಸಾಹತುಶಾಹಿ ಕಾಲದ ಭಾರತೀಯ ಬುದ್ಧಿಜೀವಿಗಳು ಈ ಕಥೆಯನ್ನು ಸಾರಾಸಗಟಾಗಿ ನಂಬಿದ್ದರು. (ಏಕೆ ಎಂಬುದು ಒಂದು ಮುಖ್ಯ ಪ್ರಶ್ನೆಯಾದರೂ, ಈ ಲೇಖನದಲ್ಲಿ ನಾನದನ್ನು ಚರ್ಚೆಗೆತ್ತಿಕೊಳ್ಳುವುದಿಲ್ಲ). ಇದು ಎರಡು ಪರಸ್ಪರ ವಿರುದ್ಧವಾದ ಪ್ರತಿಕ್ರಿಯೆಗಳಿಗೆ ದಾರಿಮಾಡಿತು: ಒಂದೆಡೆ ಕೆಲವು ಜನರು ಹಿಂದುಗಳ ರಿಲಿಜನ್ನಿನ ಪುನರುತ್ಥಾನಕ್ಕಾಗಿ ಪರಿಶ್ರಮಿಸಿದರು. ವೇದ ಉಪನಿಷತ್ತುಗಳಲ್ಲಿರುವ ಶುದ್ಧವಾದ ರಿಲಿಜನ್ನಿಗೆ ಹಿಂದಿರುಗಬೇಕು ಎಂದು ಅವರು ವಾದಿಸಿದರು. ಇನ್ನೊಂದೆಡೆಯಲ್ಲಿ ಹಿಂದೂಯಿಸಂ ಈಗ ಹೇಗಿದೆಯೋ ಅದೇ ಸರಿ ಎಂದು ಗಂಟಾಘೋಷವಾಗಿ ಸಮರ್ಥಿಸುವವರೂ ಇದ್ದರು. ಈ ಎರಡು ತುದಿಗಳ ನಡುವೆ ಹಲವು ವಿವಿಧ ನಿಲುವುಗಳೂ ನಿಧಾನವಾಗಿ ಹರಳುಗಟ್ಟಿದ್ದವು. ಮತ್ತಷ್ಟು ಓದು
ನಾವೇಕೆ ಪಾಶ್ಚಾತ್ಯ ಸಂಸ್ಕೃತಿಯನ್ನು ಅರ್ಥ ಮಾಡಿಕೊಳ್ಳಬೇಕು..? ( ಭಾಗ – ೧ )
ಎಸ್.ಎನ್. ಬಾಲಗಂಗಾಧರ
(ತಿದ್ದುಪಡಿ ಮಾಡಿದ ಅನುವಾದ.
ಮೂಲ ಅನು: ಸಿ.ಎಸ್.ಎಲ್.ಸಿ ಸಂಶೋಧಕರು, ‘ಪೂರ್ವಾವಲೋಖನ’ ಕೃತಿಯಲ್ಲಿ ಪ್ರಕಟವಾಗಿದೆ.)
ನನ್ನ ಅನುಭವವೊಂದನ್ನು ನಿಮ್ಮೊಂದಿಗೆ ಹಂಚಿಕೊಳ್ಳುವ ಮೂಲಕ ಈ ಲೇಖನವನ್ನು ಪ್ರಾರಂಭಿಸುತ್ತೇನೆ. ಅಮೇರಿಕಾದಲ್ಲಿರುವ ಅನಿವಾಸಿ ಭಾರತೀಯರ ಬಾಯಲ್ಲಿ ನಾನು ಈ ಕೆಳಗಿನ ಮಾತುಗಳನ್ನು ಪದೇ ಪದೇ ಕೇಳಿದ್ದೇನೆ: “ನಾನು ಹಲವು ದಶಕಗಳ ಹಿಂದೆ ಅಮೇರಿಕಕ್ಕೆ ಬಂದಾಗ ನನಗೆ ಹಿಂದೂಯಿಸಂನ ಕುರಿತು ಅಷ್ಟಾಗಿ ತಿಳಿದಿರಲಿಲ್ಲ. ನನ್ನ ಈ ಅಜ್ಞಾನದ ಕುರಿತು ನನಗೆ ಅರಿವು ಮೂಡಿದ್ದೇ ನನ್ನ ಮಕ್ಕಳು ಹಿಂದೂಯಿಸಂ ಎಂದರೆ ಏನು ಎಂದು ಪ್ರಶ್ನಿಸಲು ಆರಂಭಿಸಿದಾಗ. ನಾನು ಅವರಿಗೆ ಹಿಂದೂಯಿಸಂ ಎಂದರೇನು ಎಂದು ಕಲಿಸಬೇಕಿತ್ತು, ಆದ್ದರಿಂದ ನಾನೂ ಹಿಂದೂಯಿಸಂ ಕುರಿತು ಭಾರತದಲ್ಲಿದ್ದಾಗ ತಿಳಿದುಕೊಂಡದ್ದಕ್ಕಿಂತ ಹೆಚ್ಚು ಅಮೆರಿಕೆಯಲ್ಲಿ ಕುಳಿತು ತಿಳಿದುಕೊಂಡೆ. (ಈ ವಿಚಾರದಲ್ಲಿ ಆ ಸ್ವಾಮಿ ಅಥವಾ ಈ ಸಂಘಟನೆ ನನಗೆ ಸಹಾಯ ಮಾಡಿತು. ಅವರಿಗೆ ನನ್ನ ಕೃತಜ್ಞತೆಗಳು).” ಮತ್ತಷ್ಟು ಓದು
ವೇದಾಂತದ ಕಥೆಗಳ ಆಧಾರದಲ್ಲಿ ಇತಿಹಾಸ ಶಬ್ದದತ್ತ ಕಿರುನೋಟ
– ವಿನಾಯಕ ಹಂಪಿಹೊಳಿ
ಹಿಸ್ಟರಿ ಎನ್ನುವ ಶಬ್ದದ ಸ್ವರೂಪವು ಬೈಬಲ್ಲಿನ ಥಿಯಾಲಜಿಯಲ್ಲಿ ನಮಗೆ ಕಾಣಸಿಗುತ್ತದೆ. ಪ್ರತಿಯೊಂದು ಸಮಾಜಕ್ಕೂ ಗಾಡ್ ತನ್ನ ಸಂದೇಶಗಳನ್ನು ಪ್ರವಾದಿಗಳ ಮೂಲಕ ತಲುಪಿಸಿರುತ್ತಾನೆ. ಇದು ಒಂದಾನೊಂದು ಕಾಲದಲ್ಲಿ ಆ ಸಮಾಜದಲ್ಲಿ ನಡೆದಿರುವ ಘಟನೆಯಾಗಿರುತ್ತದೆ. ಆ ಸಮಾಜದ ಜನರನ್ನು ಅರಿತುಕೊಳ್ಳಲು ಹಾಗೂ ಅಲ್ಲಿನ ಜನರು ಆಚರಿಸುವ ಪದ್ಧತಿಗಳಲ್ಲಿ ರಿಲಿಜಿಯಸ್ ಯಾವುದು ಎಂದು ಗುರುತಿಸಿಕೊಳ್ಳಲು ಈ ಸಂದೇಶಗಳು ಅಗತ್ಯ. ಹೀಗಾಗಿ ಸಮುದಾಯವೊಂದನ್ನು ಅಧ್ಯಯನ ಮಾಡುವಾಗ ಆ ಸಮುದಾಯದಲ್ಲಿ ಗಾಡ್ ಯಾವಾಗ ಮಧ್ಯಪ್ರವೇಶಿಸಿ ತನ್ನ ಸಂದೇಶಗಳನ್ನು ನೀಡಿದ್ದ ಎನ್ನುವುದನ್ನು ಕಂಡುಕೊಳ್ಳುವದು ಅಗತ್ಯ. ಹಿಸ್ಟರಿ ಎನ್ನುವ ಅಧ್ಯಯನ ಕ್ರಮವು ಈ ಪ್ರಕ್ರಿಯೆಯಿಂದಲೇ ಹುಟ್ಟಿರುತ್ತದೆ. ಲಭ್ಯವಿರುವ ಶಾಸನಗಳ ಆಧಾರದಲ್ಲಿ ಸಮಂಜಸವಾದ ವಿವರಣೆಯೊಂದನ್ನು ಕಟ್ಟಿಕೊಡುವುದೇ ಹಿಸ್ಟರಿಯ ಧ್ಯೇಯ. ಹಿಸ್ಟರಿ ಶಬ್ದಕ್ಕೆ ಪರ್ಯಾಯವಾಗಿ ನಾವು ಇತಿಹಾಸ ಎಂಬ ಶಬ್ದವನ್ನು ಬಳಸುತ್ತ ಬಂದಿದ್ದೇವೆ. ಆದರೆ ವಸಾಹತು ಪ್ರಜ್ಞೆಗೂ ಪೂರ್ವದಲ್ಲಿ ಇತಿಹಾಸ ಎಂಬ ಶಬ್ದವು ಏನನ್ನು ಪ್ರತಿನಿಧಿಸುತ್ತಿತ್ತು? ಸದ್ಯಕ್ಕೆ ಉಪನಿಷತ್ತುಗಳ ಕಥೆ ಮತ್ತು ಅದಕ್ಕೆ ಶಂಕರಾಚಾರ್ಯರು ಬರೆದ ಭಾಷ್ಯಗಳನ್ನು ಆಧಾರವಾಗಿಟ್ಟುಕೊಂಡು ಚರ್ಚಿಸೋಣ. ಮತ್ತಷ್ಟು ಓದು
ವಸಾಹತುಪ್ರಜ್ಞೆಯಲ್ಲಿ ಪುಣ್ಯಯೋನಿ-ಪಾಪಯೋನಿ
– ವಿನಾಯಕ್ ಹಂಪಿಹೊಳಿ
ಇತ್ತೀಚೆಗೆ ಕೆ. ಎಸ್. ಭಗವಾನ್ ಎಂಬ ಬುದ್ಧಿಜೀವಿಯೋರ್ವರಿಂದಾಗಿ ಭಗವದ್ಗೀತೆಯ ಒಂಬತ್ತನೇ ಅಧ್ಯಾಯದ ೩೨ ಮತ್ತು ೩೩ನೇ ಶ್ಲೋಕಗಳು ಭಾರೀ ವಿವಾದಕ್ಕೊಳಗಾದವು. ಆ ಶ್ಲೋಕಗಳಲ್ಲಿ ಕೆಲವೇ ವರ್ಗದ ಜನರನ್ನು ಪುಣ್ಯಯೋನಿಗಳೆಂತಲೂ ಉಳಿದ ಬಹುಸಂಖ್ಯಾತರನ್ನು ಪಾಪಯೋನಿಗಳೆಂತಲೂ ಕೃಷ್ಣ ಕರೆದದ್ದು ಈ ಹಿಂದೂ ರಿಲಿಜನ್ನಿನಲ್ಲಿ ಇರುವ ಸಾಮಾಜಿಕ ಅಸಮಾನತೆಗೆ ಪ್ರತ್ಯಕ್ಷ ಸಾಕ್ಷಿ ಎಂಬಂತೆ ಚಿತ್ರಿಸಲಾಯಿತು. ಆ ಎರಡು ಶ್ಲೋಕಗಳನ್ನು ಗದ್ದೆಯಲ್ಲಿನ ಕಳೆಗೆ ಹೋಲಿಸಿ, ಇವುಗಳನ್ನು ತೆಗೆದು ಹಾಕಬೇಕೆಂದು ಅಭಿಪ್ರಾಯಪಟ್ಟರು. ಆ ಎರಡು ಶ್ಲೋಕಗಳು “ಶ್ರುಣ್ವಂತು ವಿಶ್ವೇ ಅಮೃತಸ್ಯ ಪುತ್ರಾಃ” ಎಂಬ ಉಪನಿಷದ್ವಾಕ್ಯಕ್ಕೆ ವಿರುದ್ಧವಾದ ಆಶಯವನ್ನು ಹೊಂದಿದೆ ಎಂಬುದಾಗಿ ಸಾರಿದರು. ಈ ಹಿಂದೂ ಎಂಬ ಧರ್ಮದಲ್ಲಿ ಎರಡು ಭಾಗಗಳಿವೆ, ಅವು ಸಾಮಾಜಿಕ ಮತ್ತು ಅಧ್ಯಾತ್ಮಿಕ, ಎರಡೂ ಕ್ಷೇತ್ರಗಳಲ್ಲಿ ಅನೇಕ ಕೃತಿಗಳಿವೆ, ಅದರಲ್ಲಿ ಅಧ್ಯಾತ್ಮಿಕ ಕೃತಿಗಳ ಕುರಿತು ಅವರಿಗೆ ಸಮ್ಮತಿಯಿದೆ, ಆದರೆ ಸಾಮಾಜಿಕ ಕೃತಿಗಳ ಕುರಿತು ಅವರಿಗೆ ಭಾರೀ ಆಕ್ಷೇಪವಿದೆ ಎಂಬ ಅವರ ಹೇಳಿಕೆಯನ್ನು ಅವರ ವಾದದ ಸಾರಾಂಶ ಎನ್ನಬಹುದು.
ನಮ್ಮ ಸಂಪ್ರದಾಯಗಳು ಪುನರ್ಜನ್ಮವನ್ನು ನಂಬುತ್ತವೆ. ಮತ್ತು ಜೀವನದಲ್ಲಿ ಕಾಣುವ ಪರಿಣಾಮಗಳಿಗೆ ಪ್ರತ್ಯಕ್ಷವಾಗಿ ಕಾಣದ ಕಾರಣಗಳನ್ನು ಪೂರ್ವಜನ್ಮಕ್ಕೆ ಹೊಂದಿಸಿ ಅರಿಯುವದು ನಮ್ಮಲ್ಲಿ ಮೊದಲಿನಿಂದ ಇರುವ ಪರಂಪರೆ. ತನ್ಮೂಲಕ ಒಬ್ಬ ಜೀವನದಲ್ಲಿ ಪಡೆದಿರುವ ಪ್ರತಿಯೊಂದಕ್ಕೂ ಒಂದು ಕಾರಣವನ್ನು ಹುಡುಕಿಕೊಳ್ಳುವದು ಸಹಜವಾದ ಪ್ರಕ್ರಿಯೆ. ಆತ್ಮಕ್ಕೆ ಲಿಂಗವಿರುವದಿಲ್ಲ, ಲಿಂಗವೆಂಬುದು ಕೇವಲ ದೇಹದ ಒಂದು ಗುಣ ಎಂಬುದು ನಮ್ಮ ಸಂಪ್ರದಾಯಗಳಲ್ಲಿ ಹಾಸುಹೊಕ್ಕಾಗಿರುವ ವಿಚಾರ. ಹೀಗಾಗಿ ಆತ್ಮ-ಪುನರ್ಜನ್ಮ-ದೇಹಗಳ ಕುರಿತು ಇರುವ ಈ ಆಧ್ಯಾತ್ಮಿಕ ವಿಚಾರಗಳಲ್ಲಿ ಒಂದು ಆತ್ಮ ಒಮ್ಮೆ ಗಂಡಾಗಿ, ಮುಂದಿನ ಜನ್ಮದಲ್ಲಿ ಹೆಣ್ಣಾಗಿ ಮತ್ತೊಂದು ಜನ್ಮದಲ್ಲಿ ಪ್ರಾಣಿಯಾಗಿ ಹುಟ್ಟುವ ಕಲ್ಪನೆಗಳು ಕಥೆಗಳು ಹೇರಳವಾಗಿ ಕಂಡುಬರುತ್ತವೆ. ಹೀಗಾಗಿ ಜನ್ಮದಿಂದ ಜನ್ಮಕ್ಕೆ ಅಲೆಯುವ ಒಂದು ಆತ್ಮ ಗಂಡು ದೇಹ ಪಡೆಯುವದಕ್ಕೋ, ಇಲ್ಲವೇ ಹೆಣ್ಣು ದೇಹ ಪಡೆಯುವದಕ್ಕೋ ಒಂದು ಕಾರಣ ಬೇಕಾಗುತ್ತದೆ.
ವಸಾಹತುಪ್ರಜ್ಞೆಯ ಪ್ರಾಯೋಜಿತ ಪಂದ್ಯಾವಳಿಗಳು – ಭಾಗ ೨
– ವಿನಾಯಕ ಹಂಪಿಹೊಳಿ
ಸಂಸ್ಕೃತ v/s ಆಡುಭಾಷೆ, ಶಾಸ್ತ್ರೀಯ v/s ಜಾನಪದ, ಪುರೋಹಿತ v/s ಭಕ್ತ, ಆರ್ಯ v/s ದ್ರಾವಿಡ … – ಭಾಗ ೧
ಸಂಸ್ಕೃತ v/s ಆಡುಭಾಷೆ, ಶಾಸ್ತ್ರೀಯ v/s ಜಾನಪದ, ಪುರೋಹಿತ v/s ಭಕ್ತ, ಆರ್ಯ v/s ದ್ರಾವಿಡ … – ಭಾಗ ೨
ಇದೇ ಪ್ರಶ್ನೆಯು ಪುರೋಹಿತ ಮತ್ತು ಭಕ್ತನ ನಡುವಿನ ಯುದ್ಧಕ್ಕೂ ಅನ್ವಯವಾಗುತ್ತದೆ. ಹಾಗೊಂದು ವೇಳೆ ಅಷ್ಟೊಂದು ಅಸಹನೆ/ಶೋಷಣೆಗಳು ಇದ್ದರೆ ಜಾತಿಜಾತಿಗಳ ನಡುವೆ ಯುದ್ಧವೇ ಜರುಗಿ ಎಲ್ಲ ಜಾತಿಗಳೂ ನಾಶವಾಗಬೇಕಿತ್ತು. ಆದರೆ ಎಲ್ಲ ಜಾತಿಗಳೂ ಒಂದೇ ಹಳ್ಳಿಯಲ್ಲಿ ತಮ್ಮಷ್ಟಕ್ಕೆ ತಾವಿರುವದು ಏಕೆ? ಈ ಎಲ್ಲ ಪ್ರಕ್ರಿಯೆಗಳನ್ನು ಈ ಸಿದ್ಧಾಂತವು ವಿವರಿಸಿಲ್ಲ.
ಆದರೂ ಬ್ರಿಟೀಷರು ನೀಡಿದ ವಸಾಹತುಪ್ರಜ್ಞೆಯನ್ನು ಶಿರಸಾ ಹೊತ್ತುಕೊಂಡು ಅವರ ಸಿದ್ಧಾಂತಗಳನ್ನು ಒಪ್ಪಿಕೊಂಡಿದ್ದೇವೆ. ಜಾತಿಗೊಂದು, ಕೇರಿಗೊಂದು, ಊರಿಗೊಂದು ಭಾಷಾವೈವಿಧ್ಯತೆಯಿರುವಲ್ಲಿ ಯೂರೋಪಿನಂತೆ ಭಾಷಾವಾರು ಪ್ರಾಂತ್ಯಗಳನ್ನು ಮಾಡಿಕೊಂಡಿದ್ದೇವೆ. ಇಡೀ ಸಹಸ್ರಮಾನದಲ್ಲಿ ಎಂದೂ ನಡೆಯದ ಮಹಾಪ್ರಾಣಗಳ ಅಗತ್ಯತೆಯ ಕುರಿತ ಚರ್ಚೆಗಳು ಈಗೀಗ ನಡೆಯುತ್ತಿವೆ. ಕನ್ನಡಿಗರಿಗೆ ಎಂದಿಗೂ ವಿರುದ್ಧವಾಗಿ ಕಾಣದ, ಕರ್ನಾಟಕದ ೫ ವೀರಶೈವ ಪೀಠಗಳು ಪ್ರಗತಿಪರರ ದೃಷ್ಟಿಯಲ್ಲಿ, ಏಕಾಏಕೀ ಶರಣ ಚಳುವಳಿಗೆ ವಿರುದ್ಧವಾದ ಬೆಳವಣಿಗೆಗಳಾಗಿಬಿಟ್ಟಿವೆ. ಕರ್ನಾಟಕ ಸಂಗೀತವನ್ನು ವಿರೋಧಿಸುವ ಅಂಶಗಳು ಜಾನಪದ ಸಂಗೀತದಲ್ಲಿ ಎಲ್ಲೆಲ್ಲಿ ಕಂಡುಬಂದಿವೆ ಎಂಬ ಚಿತ್ರವಿಚಿತ್ರ ಸಂಶೋಧನೆಗಳು ಬರುತ್ತಿವೆ. ಆರ್ಯ-ದ್ರಾವಿಡ ವಾದದಲ್ಲಿನ ದೋಷಗಳ ಕುರಿತು ಚರ್ಚೆ ಶುರುಮಾಡಿದರೂನೂ, ಅದು ಪುರೋಹಿತಶಾಹಿಯ ಹುನ್ನಾರವಾಗಿಬಿಡುತ್ತದೆ.
ಇವೆಲ್ಲದಕ್ಕೂ ಮುಖ್ಯವಾಗಿ ಪಾಶ್ಚಿಮಾತ್ಯರು ನಮ್ಮಲ್ಲಿ ಯಾವೆಲ್ಲ ವೈರುಧ್ಯಗಳನ್ನು ಕಂಡರೋ, ಅವುಗಳನ್ನು ವಿವರಿಸಲು ಆಧರಿಸಿದ ಆರ್ಯ-ದ್ರಾವಿಡ ಸಿದ್ಧಾಂತದ ಬುಡಕ್ಕೇ ಇಂದು ವಿಜ್ಞಾನ ಕೊಡಲಿ ಪೆಟ್ಟನ್ನು ನೀಡಿದೆ. ಜೈವಿಕವಾಗಿ, ಭೌತಿಕವಾಗಿ ಇಂದು ಸಿಗುವ ಎಲ್ಲ ವೈಜ್ಞಾನಿಕ ಸಾಕ್ಷಿಗಳು ಈ ಸಿದ್ಧಾಂತವನ್ನು ಕಸದ ಬುಟ್ಟಿಗೆ ಎಸೆದಿವೆ. ಸರಸ್ವತಿ ನದಿಯ ಅಸ್ತಿತ್ವ, ದ್ವಾರಕೆಯ ಅವಶೇಷಗಳು, ಮುಂತಾದ ಭೌತಿಕ ಸಾಕ್ಷಿಗಳು ಒಂದೆಡೆಯಾದರೆ, ಡಿ.ಎನ್.ಎ. ಆಧಾರಿತ ವಲಸೆಯ ವರದಿಗಳನ್ನು ಹೇಳುವ ಜೈವಿಕ ಸಾಕ್ಷಿಗಳು ಇನ್ನೊಂದೆಡೆ. ಹೀಗಾಗಿ ವೈಜ್ಞಾನಿಕವಾಗಿ ಸಾಬೀತಾಗದ ಈ ಆರ್ಯರ ವಲಸೆಯಾಗಲೀ, ಅದರ ಆಧಾರದ ಮೇಲೆ ಹೇಳಲಾಗುವ ಅನುಭವಕ್ಕೇ ಬಾರದ ಸಾಮಾಜಿಕ ವೈರುಧ್ಯ, ಚಳುವಳಿಗಳು ಶಾಲೆಗಳಲ್ಲಿ ಕಲಿಯಲೂ ಯೋಗ್ಯವಲ್ಲ. ಕಲಿಸಲೂ ಯೋಗ್ಯವಲ್ಲ.
ವಸಾಹತುಪ್ರಜ್ಞೆಯ ಪ್ರಾಯೋಜಿತ ಪಂದ್ಯಾವಳಿಗಳು – ಭಾಗ ೧
– ವಿನಾಯಕ ಹಂಪಿಹೊಳಿ
ಸಂಸ್ಕೃತ v/s ಆಡುಭಾಷೆ, ಶಾಸ್ತ್ರೀಯ v/s ಜಾನಪದ, ಪುರೋಹಿತ v/s ಭಕ್ತ, ಆರ್ಯ v/s ದ್ರಾವಿಡ … – ಭಾಗ ೧
ಕ್ರಿ.ಶ. ೧೪೦೦ರ ತನಕ ಬೈಬಲ್ಲಿನ ಹಳೇ ಒಡಂಬಡಿಕೆ ಮತ್ತು ಹೊಸ ಒಡಂಬಡಿಕೆಗಳು ಹಿಬ್ರೂ, ಗ್ರೀಕ್ ಮತ್ತು ಲ್ಯಾಟಿನ್ ಭಾಷೆಗಳಲ್ಲಿ ಇದ್ದವು. ಆಕ್ಸಫರ್ಡ್ ಪ್ರೊಫೆಸರ್ ಆಗಿದ್ದ ಜಾನ್ ವಿಕ್ಲಿಫ್ ಎಂಬಾತನು ೧೩೮೦ರಲ್ಲಿ ಮೊದಲ ಬಾರಿಗೆ ಬೈಬಲ್ಲಿನ ಇಂಗ್ಲೀಷ್ ಭಾಷಾಂತರವನ್ನು ಮಾಡಿದ್ದ ಎಂದು ಹೇಳಬಹುದು. ಇದಕ್ಕಿಂತ ಹಿಂದೆಯೂ ಭಾಷಾಂತರಗಳಾಗಿರಬಹುದಾದರೂ ಐತಿಹಾಸಿಕ ಸಾಕ್ಷ್ಯವಾಗಿ ಇದೊಂದು ದೊರಕುತ್ತದೆ. ಇದು ಪೋಪನ ಕೋಪಕ್ಕೆ ಗುರಿಯಾಗಿ, ವಿಕ್ಲಿಫ್ ತೀರಿಕೊಂಡಾಗ ಆತನ ಎಲುಬುಗಳನ್ನು ಪುಡಿ ಮಾಡಿಸಿ ಪೋಪ್ ನದಿಯಲ್ಲಿ ಹಾಕಿಸಿದ್ದ ಎಂದು ಕಥೆ.
ವಿಕ್ಲಿಫ್ ನಂತರ ಆತನ ಅನುಯಾಯಿಯಾದ ಜಾನ್ ಹಸ್ ಎಂಬಾತನು ವಿಕ್ಲಿಫ್ ಯೋಚನೆಗಳನ್ನು ಇನ್ನಷ್ಟು ಪ್ರಚುರಪಡಿಸಿದನು. ಪ್ರತಿಯೋರ್ವನಿಗೂ ಆತನ ಮಾತೃಭಾಷೆಯಲ್ಲಿ ಬೈಬಲ್ಲನ್ನು ಓದಲು ಅವಕಾಶ ನೀಡಬೇಕು ಎಂಬುದು ಆತನ ಆಗ್ರಹವಾಗಿತ್ತು. ಲ್ಯಾಟಿನ್ನೇತರ ಭಾಷೆಯಲ್ಲಿ ಬೈಬಲ್ಲಿನ ಪ್ರತಿಯನ್ನು ಹೊಂದಿದ್ದರೆ ಮರಣದಂಡನೆ ವಿಧಿಸುವದಾಗಿ ಹೇಳಿದ್ದ ಚರ್ಚಿನ ನಿರ್ಧಾರವನ್ನು ವಿರೋಧಿಸಲು ಜನರಿಗೆ ಕರೆಯಿತ್ತಿದ್ದನು. ೧೪೧೫ರಲ್ಲಿ ಆತನನ್ನು ವಿಕ್ಲಿಫ್ ನ ಇಂಗ್ಲೀಷ್ ಬೈಬಲ್ಲಿನ ಪ್ರತಿಗಳೊಂದಿಗೆ ಜೀವಂತವಾಗಿ ಸುಡಲಾಯಿತು. ಆತನ ಕೊನೆಯ ಮಾತುಗಳು “ಯಾರ ಸುಧಾರಣೆಯ ಕರೆಯನ್ನು ತುಳಿಯಲಾಗದೋ ಅಂತ ಮನುಷ್ಯನೊಬ್ಬನನ್ನು ದೇವನು ಬೆಳೆಸುವನು” ಎಂದು ಪ್ರತೀತಿ.
೧೪೫೦ರಲ್ಲಿ ಪ್ರಿಂಟಿಂಗ್ ಪ್ರೆಸ್ ಕಂಡುಹಿಡಿದ ಜೊಹನ್ ಗುಂಟನ್ಬರ್ಗ್ ಲ್ಯಾಟಿನ್ನಿನಲ್ಲಿದ್ದ ಬೈಬಲ್ಲಿನ ಮೊದಲ ಪ್ರತಿಯನ್ನು ತಂದನು. ಇದು ಪ್ರೊಟೆಸ್ಟಂಟ್ ಸುಧಾರಣೆಗೆ ಮೊದಲ ಅಡಿಗಲ್ಲಾಯಿತು. ನಂತರ ಎರಾಸ್ಮಸ್ ಅದರಲ್ಲಿನ ತಪ್ಪುಗಳನ್ನು ಸರಿಪಡಿಸಿ ಇನ್ನೊಂದು ಮುದ್ರಿತ ಪ್ರತಿಯೊಂದನ್ನು ತಂದನು. ೧೪೯೦ರಲ್ಲಿ ಥೊಮಸ್ ಲಿನೇಕರ್ ಬೈಬಲ್ಲಿನ ಭಾಷಾಂತರದ ಪರವಾಗಿ ವಾದಿಸಿದನು. ೧೪೯೬ರಲ್ಲಿ ಜಾನ್ ಕೋಲೆಟ್ ಎಂಬ ಇನ್ನೊಬ್ಬ ಆಕ್ಸಫರ್ಡ್ ಪ್ರೊಫೆಸರ್ ಹೊಸ ಒಡಂಬಡಿಕೆಯನ್ನು ಇಂಗ್ಲೀಷಿನಲ್ಲಿ ಭಾಷಾಂತರಿಸಲು ಯತ್ನಿಸಲು ಚರ್ಚು ಅದನ್ನು ವಿರೋಧಿಸಿತು. ಅಷ್ಟರೊಳಗಾಗಲೇ ವಿಲಿಯಮ್ ಟಿಂಡೇಲ್ ಎಂಬ ಸುಧಾರಣಾ ಚಳುವಳಿಗಾರರ ಮುಖಂಡ ಮೊದಲ ಬಾರಿಗೆ ಹೊಸ ಒಡಂಬಡಿಕೆಯನ್ನು ಇಂಗ್ಲೀಷಿನಲ್ಲಿ ಮುದ್ರಿಸಿದನು. ಹೀಗಾಗಿ ಆತನನ್ನು ಇಂಗ್ಲೀಷ್ ಭಾಷೆಯ ಆರ್ಕಿಟೆಕ್ಟ್ ಎಂದೂ ಕರೆಯಲಾಗುತ್ತದೆ. ಈ ಎಲ್ಲ ಬೆಳವಣಿಗೆಗಳನ್ನು ಚರ್ಚ್ ವಿರೋಧಿಸುತ್ತಲೇ ಬಂದಿತು.
Sin ಅನ್ನು ಭಾಷಾಂತರಿಸಿದ ಪಾಪವೇ ವಸಾಹತುಪ್ರಜ್ಞೆ
– ವಿನಾಯಕ ಹಂಪಿಹೊಳಿ
Sin ಶಬ್ದದ ಅರ್ಥವೇನು ಎಂದು ಕೇಳಿದರೆ ಎಗ್ಗಿಲ್ಲದೇ ಪಾಪ ಎಂದು ಉಚ್ಚರಿಸಿಬಿಡುತ್ತೇವೆ. ಇದರಲ್ಲಿ ಅಷ್ಟು ತಲೆಕೆಡಿಸಿಕೊಳ್ಳುವಂಥದ್ದೇನೂ ಇಲ್ಲ ಎಂದೇ ಅನ್ನಿಸುತ್ತದೆ. ಮಾಡಬಾರದ್ದನ್ನು ಮಾಡುವದು ಪಾಪ ಎಂದು ನಾವೂ ಹೇಳುತ್ತೇವೆ. ಪಾಶ್ಚಿಮಾತ್ಯ ಕ್ರೈಸ್ತರೂ ಹೇಳುತ್ತಾರೆ. ಹೀಗಾಗಿ ಒಂದು ಹಂತದಲ್ಲಿ Sin=ಪಾಪ ಎನ್ನುವದು ಒಪ್ಪಿತವೇ. ಹಾಗೆಯೇ sinner=ಪಾಪಿ ಎಂಬುದೂ ಸರಿ. ಆದರೆ ಇಲ್ಲೊಂದು ಸಮಸ್ಯೆಯಿದೆ. ಪಾಪದ ವಿರುದ್ಧ ಪದ ಏನು ಎಂದಾಗ ಕ್ಷಣವೂ ತಡಮಾಡದೇ ಪುಣ್ಯ ಎನ್ನುತ್ತೇವೆ. ಆದರೆ Sin ಶಬ್ದದ ವಿರುದ್ಧ ಪದ ಏನು ಎಂದು ಕೇಳಿದರೆ?
ಮುಗ್ಗರಿಸಿ ಬಿದ್ದ ಅನುಭವವಾಯಿತಲ್ಲವೇ? ಇರಲಿ, Thesaurus ನಲ್ಲಿ Sin ಗೆ ಎಷ್ಟೊಂದು ವಿರುದ್ಧಪದಗಳಿವೆಯೋ ಅವನ್ನೆಲ್ಲ ಗಮನಿಸೋಣ, ಅವುಗಳು advantage, good, goodness, good deed, kindness, obedience, right, virtue, perfection, behavior, morality.ಇವೆಲ್ಲ ಶಬ್ದಗಳೂ ಪುಣ್ಯದ ಸುತ್ತ ಗಿರಕಿ ಹೊಡೆಯುತ್ತವೆಯೇ ವಿನಃ ಒಂದಾದರೂ ಪುಣ್ಯವನ್ನು ಸಂಪೂರ್ಣವಾಗಿ ಪ್ರತಿನಿಧಿಸುವಷ್ಟು ಪುಣ್ಯ ಕಟ್ಟಿಕೊಂಡಿದೆಯೇ? “ನೀವು ಜೀವನದಲ್ಲಿ ಬಹಳಷ್ಟು ಪುಣ್ಯ ಗಳಿಸಿದ್ದೀರಿ” ಎನ್ನುವದನ್ನು ಹೇಗೆ ಭಾಷಾಂತರಿಸುತ್ತೀರಿ?