ಸುಳ್ಸುದ್ದಿ : “ಭ್ರಷ್ಟಾಚಾರ ಮುಕ್ತ ಭಾರತ” ಮಾಡುತ್ತೇವೆ ಎನ್ನುವವರಿಗೆ ಕಂಕನಾಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುತ್ತೇವೆ
ಪ್ರವೀಣ್ ಕುಮಾರ್, ಮಾವಿನಕಾಡು
ಇತ್ತೀಚಿನ ಕೆಲವು ವರ್ಷಗಳಲ್ಲಿ ಭಾರತದಲ್ಲಿ “ಭ್ರಷ್ಟಾಚಾರ ಮುಕ್ತ ಭಾರತ” ಎನ್ನುವ ಘೋಷಣೆ ಟ್ರೆಂಡ್ ಆಗಿ ಬೆಳೆದಿದ್ದು ಮೊನ್ನೆ ನಡೆದ ಪಂಚ ರಾಜ್ಯಗಳ ಚುನಾವಣೆಗಳ ಬಳಿಕ ಈ ಘೋಷಣೆ ಇನ್ನಷ್ಟು ಜೋರಾಗಿ ಕೇಳಿಬರುತ್ತಿದೆ. ಇದನ್ನೇ ನೆಪವಾಗಿಟ್ಟುಕೊಂಡು ನಮ್ಮ ‘ಸುಳ್ಸುದ್ದಿ’ ವಾಹಿನಿಯ ತಂಡ “ಭ್ರಷ್ಟಾಚಾರ ಮುಕ್ತ ಭಾರತ ಎನ್ನುವ ಘೋಷಣೆಯ ಬಗ್ಗೆ ನಿಮ್ಮ ಅಭಿಪ್ರಾಯವೇನು?” ಎನ್ನುವ ಪ್ರಶ್ನೆಯನ್ನು ಹಲವು ನಾಯಕರ ಬಳಿ ಕೇಳಿತು. ನಮ್ಮ ಪ್ರಶ್ನೆಗೆ ಉತ್ತರಿಸಿದ ಕೆಲವು ರಾಜಕೀಯ ನಾಯಕರ ಉತ್ತರಗಳನ್ನು ನಿಮಗಾಗಿ ಇಲ್ಲಿ ನೀಡಲಾಗಿದೆ. ಮತ್ತಷ್ಟು ಓದು