ವಿಷಯದ ವಿವರಗಳಿಗೆ ದಾಟಿರಿ

Posts tagged ‘ವಿಜಯನಗರ ಸಾಮ್ರಾಜ್ಯ’

20
ಫೆಬ್ರ

ಕರ್ನಾಟಕ ಸ್ವಾಭಿಮಾನವನ್ನು ಬಹಮನಿಗಳಿಗೆ ಒತ್ತೆಯಿಡಲು ಹೊರಟಿದ್ದ ಕಾಂಗ್ರೆಸ್

– ರಾಕೇಶ್ ಶೆಟ್ಟಿ

“ಅದೋ ಅದೋ ವಿಜಯನಗರದ ಸ್ಥಾಪನೆ,ವಿಜಯನಗರದ ಏಳಿಗೆ,ವಿಜಯನಗರದ ವೈಭವ. ಹಾ! ವಿಜಯನಗರದ ನಾಶ…” ಎಂದು ಕನ್ನಡ ರಾಷ್ಟ್ರವೀರ ಎಚ್ಚಮನಾಯಕನ ಪಾತ್ರದಲ್ಲಿ ಪರಕಾಯ ಪ್ರವೇಶ ಮಾಡಿ ಡಾ.ರಾಜ್ ಕುಮಾರ್ ಅವರು ಹೇಳುವಾಗ, ಕರ್ನಾಟಕ ಸ್ವಾಭಿಮಾನಕ್ಕಾಗಿ ಮಿಡಿಯುವ ಪ್ರತಿ ಕನ್ನಡಿಗನ ಮನದಲ್ಲೂ ತೀವ್ರ ವೇದನೆ,ಆಕ್ರೋಶದ ಅನುಭವವಾಗುತ್ತದೆ. ಆಗಲೇಬೇಕು ಕೂಡ.ಆದರೆ ಈ ಮಾತು ಕಾಂಗ್ರೆಸ್ ಹಾಗೂ ಕಾಂಗ್ರೆಸ್ ಕನ್ನಡಿಗರಿಗೆ ಅನ್ವಯವಾಗುವುದಿಲ್ಲ. ಕರ್ನಾಟಕ ಸ್ವಾಭಿಮಾನವನ್ನು ವೋಟ್ ಬ್ಯಾಕಿಂಗೆ ಅಡವಿಟ್ಟ ಕಾಂಗ್ರೆಸ್ ಪಕ್ಷಕ್ಕೆ ವಿಜಯನಗರ ಸಾಮ್ರಾಜ್ಯ ನೆನಪಾಗಲಿಲ್ಲ,ಅವರಿಗೆ ನೆನಪಾಗಿದ್ದು ಕರ್ನಾಟಕದ ಹೆಮ್ಮೆಯ ಸಾಮ್ರಾಜ್ಯವನ್ನು ನಾಮಾವಶೇಷ ಮಾಡಿದ ಬಹಮನಿ ಸುಲ್ತಾನರದ್ದು.ಉತ್ತರದಲ್ಲಿ ಮಹಮ್ಮದ್ ಬಿನ್ ತುಘಲಕನ ಕಾಲದಲ್ಲಿ ಹುಟ್ಟಿಕೊಂಡ ಬಹಮನಿ ಸುಲ್ತಾನರನ್ನು ದಕ್ಷಿಣದ ತುಘಲಕ್ ಸರ್ಕಾರ ನೆನಪಿಸಿಕೊಂಡಿದ್ದು ಕಾಕತಾಳೀಯವೋ,ಪುನರ್ಜನ್ಮದ ನೆನಪೋ ಗೊತ್ತಿಲ್ಲ.ಆದರೆ ಇಂತಹ ದರಿದ್ರ ಸರ್ಕಾರವನ್ನು ಸಹಿಸಿಕೊಳ್ಳಬೇಕಾದ ಕರ್ಮ ನಮ್ಮದು.

ಹೊರದೇಶದ ಆಕ್ರಮಣಕಾರರ ಅದರಲ್ಲೂ ಮುಖ್ಯವಾಗಿ ಇಸ್ಲಾಮ್ ದಾಳಿಕೋರರ ಬರ್ಬರತೆ,ಕ್ರೌರ್ಯವೆಂತದ್ದು ಎನ್ನುವುದನ್ನು ಉತ್ತರ ಭಾರತ ಶತಮಾನಗಳ ಕಾಲ ಅನುಭವಿಸಿದೆ. ಈ ವಿಷಯದಲ್ಲಿ ದಕ್ಷಿಣ ಭಾರತದ ಅದೃಷ್ಟ ಚೆನ್ನಾಗಿಯೇ ಇತ್ತು.ಬಹುಶಃ ದಕ್ಷಿಣದ ರಾಜರು ಇಸ್ಲಾಮಿ ದಾಳಿಕೋರರ ಭಯ ನಮಗಿಲ್ಲ ಎಂಬ ಭ್ರಮೆಯಲ್ಲಿಯೇ ಬದುಕುತ್ತಿದ್ದರೋ ಏನೋ,ಆದರೆ ಅದು ಅಲ್ಲಾವುದ್ದೀನ್ ಖಿಲ್ಜಿಯ ಕಾಲದವರೆಗೂ ಮಾತ್ರವೇ.ಖಿಲ್ಜಿಯ ದಂಡನಾಯಕ ಮತಾಂತರಿ ಮಲ್ಲಿಕಾಫರ್, ಹೊಯ್ಸಳರ ರಾಜಧಾನಿ ದ್ವಾರಸಮುದ್ರದ ಮೇಲೆ ದಾಳಿಗೆ ಮುಹೂರ್ತವಿಟ್ಟ.ಆ ಸಂಧರ್ಭದಲ್ಲಿ ಹೊಯ್ಸಳ ಮಹಾರಾಜ ಮುಮ್ಮಡಿ ಬಲ್ಲಾಳ ವೀರ ತಮಿಳುನಾಡಿನ ತಿರುವಣ್ಣಾಮಲೈನಲ್ಲಿದ್ದ. ಮಲ್ಲಿಕಾಫರನ ಸ್ಥಾನದಲ್ಲಿ ವೀರ ಸೇನಾನಿಯಿದ್ದಿದ್ದರೇ, ಬಲ್ಲಾಳನು ಇದ್ದಾಗಲೇ ರಾಜಧಾನಿಗೆ ಮುತ್ತಿಗೆ ಹಾಕುವ ಧೈರ್ಯ ತೋರುತ್ತಿದ್ದನೋ ಏನೋ,ಆದರೆ ಎಷ್ಟಾದರೂ ಮತಾಂಧ ದಾಳಿಕೋರನಲ್ಲವೇ ಪೃಥ್ವಿರಾಜ ಚೌಹಾಣನ ಕಾಲದಿಂದಲೂ ಇವರು ಗೆದ್ದುಕೊಂಡು ಬಂದಿದ್ದು ಕಪಟದಿಂದಲೇ.ಮಲ್ಲಿಕಾಫರನ ಜಿಹಾದಿ ಸೈನ್ಯ ಸತತ ೧೩ ದಿನಗಳ ಕಾಲ ಹೊಯ್ಸಳರ ಭವ್ಯ ರಾಜಧಾನಿಯನ್ನು ನಾಶಮಾಡಿ ದ್ವಾರಸಮುದ್ರವನ್ನು, “ಹಾಳಾದ ಬೀಡು” ಎನ್ನುವಂತೆ ಮಾಡಿತು,ಜನರ ಬಾಯಿಯಲ್ಲಿ “ಹಳೇಬೀಡು” ಆಗಿ ಹೋಯಿತು. ಈ ವಿನಾಶವೂ ಮುಂಬರಲಿರುವ ಭವ್ಯ ಸಾಮ್ರಾಜ್ಯದ ಮುನ್ನುಡಿಯೇ ಆಗಿ ಹೋಯಿತು.ಹಾಗೊಂದು ಮುನ್ನುಡಿ ಬರೆಯಲು ಹೊರಟ ಹೊಯ್ಸಳ ದೊರೆ ಮುಮ್ಮಡಿ ಬಲ್ಲಾಳ ವೀರನಿಗೆ ಆಗ ಇನ್ನೂ ೮೨ರ ವಯಸ್ಸು ಅಷ್ಟೇ!

ಮತ್ತಷ್ಟು ಓದು »

16
ಫೆಬ್ರ

ಬಿಡುಗಡೆಯಾಗಿದ್ದು ಬಹಮನಿ ಟೀಸರ್, ಪಿಕ್ಚರ್ ಅಭೀ ಬಾಕೀ ಹೈ!

– ಸಂತೋಷ್ ತಮ್ಮಯ್ಯ
ಕರ್ನಾಟಕ ಟೂರಿಸಂ ವೆಬ್‌ಸೈಟಿನಲ್ಲಿನ್ನು ಕಲ್ಲಿನ ರಥದ ಚಿತ್ರ ಇರುವುದಿಲ್ಲವೇ? ಹಂಪಿ ಕನ್ನಡ ವಿಶ್ವವಿದ್ಯಾಲಯದ ಹೆಸರನ್ನು ಸರ್ಕಾರ ಅದಿಲ್ ಶಾಹಿ ವಿಶ್ವವಿದ್ಯಾಲಯ ಎಂದು ಬದಲಾಯಿಸುವುದೇ? ಹಂಪಿ ಉತ್ಸವ ನಿಂತುಹೋಗುತ್ತಾ? ಬರೀದ್ ಶಾಹಿಗಳ ಬೆರಕೆ ಭಾಷೆ ಉರ್ದು ರಾಜ್ಯದ ಅಕೃತ ಆಡಳಿತ ಭಾಷೆಯಾಗಿಹೋಗುತ್ತಾ? ವಾರ್ತಾ ಇಲಾಖೆ ಸ್ವತಃ ತಾನೇ ನಿಂತು ಇಮಾದ್ ಶಾಹಿ ಪುಂಡರ ಸಿನೆಮಾವನ್ನು ನಿರ್ಮಿಸುತ್ತದಾ? ಅಂಜನಾದ್ರಿ, ಮಾತಂಗ, ಮಾಲ್ಯವಂತ ಬೆಟ್ಟಗಳಲ್ಲಿನ್ನು ಬಹಮನಿ ಸುಲ್ತಾನರ ಕ್ರೌರ್ಯಗಳ ನೆರಳು ಬೆಳಕಿನ ಪ್ರದರ್ಶನಾಟ ನಡೆಯುತ್ತದಾ? ಟಿಬಿ ಡ್ಯಾಮಿಗೆ ಮರುನಾಮಕರಣ ಮಾಡುವ ಉದ್ದೇಶವೂ ಇರಬಹುದೇ?
ಹೀಗೆ ಹಲವು ಸಂದೇಹಗಳು ಮೂಡುತ್ತಿದೆ. ಮೊದಲಾಗಿದ್ದರೆ ಇವೆಲ್ಲಾ ಹುಚ್ಚು ಕಲ್ಪನೆ ಎಂದುಕೊಳ್ಳಬಹುದಿತ್ತು. ಆದರೆ ಈಗ ಹಾಗನಿಸುತ್ತಿಲ್ಲ. ಏಕೆಂದರೆ ಇನ್ನೈದು ವರ್ಷ ರಾಜ್ಯವನ್ನು ಕಾಂಗ್ರೆಸ್ ಆಳಿದರೆ ಇವೆಲ್ಲವೂ ಸಂಭವಿಸಬಹುದು. ಅಲ್ಲದೆ ಈಗ ನಾವಂತೂ ಪೋಲೆಂಡಿನಲ್ಲಿ ಹಿಟ್ಲರ್ ಜಯಂತಿ ನಡೆದರೂ, ಅಮೆರಿಕಾದಲ್ಲಿ ತಾಲೀಬಾನ್ ಫೆಸ್ಟ್ ನಡೆದರೂ ಅಚ್ಚರಿ ಹುಟ್ಟದಷ್ಟು ಸಂವೇದನಾರಹಿತರಾಗಿಬಿಟ್ಟಿದ್ದೇವೆ. ಹೀಗಿರುವಾಗ ಬಹಮನಿ ಉತ್ಸವ ನಡೆದರೆ ಅಚ್ಚರಿಯೇನೂ ಇಲ್ಲ.
ಹಾಗೆ ನೋಡಿದರೆ ಕಾಂಗ್ರೆಸಿಗೆ ಇಂಥದ್ದೊಂದು ಯೋಚನೆ ಸ್ವಲ್ಪತಡವಾಗಿಯೇ ಬಂದಿದೆ. ನಿಜವಾಗಿಯೂ ಕಾಂಗ್ರೆಸಿಗರಿಗೆ ಟಿಪ್ಪುಗಿಂತ ಮೊದಲು ಬಹಮನಿಗಳೇ ನೆನಪಿಗೆ ಬರಬೇಕಿತ್ತು. ಅದಕ್ಕೊಂದು ಕಾರಣವಿದೆ. ಬಹಳ ವರ್ಷಗಳ ಕಾಲ ಕಾಂಗ್ರೆಸಿಗರಿಗೆ ಮತ್ತು ಅವರ ಕೂಲಿಗೆ ದುಡಿಯುವ ಬುದ್ಧಿಜೀವಿಗಳಿಗೆ ಬಹಮನಿಗಳ ಚರಿತ್ರೆಯನ್ನು ಒಂದು ವೈಚಾರಿಕ ಚೌಕಟ್ಟಿಗೆ ತರಲು ಕಷ್ಟವಾಗಿತ್ತು. ಏಕೆಂದರೆ ಇವರಿಗೆಲ್ಲಾ ಬಹಮನಿಗಳನ್ನು ನಿಜಾಂ ಶಾಹಿ, ಅದಿಲ್ ಶಾಹಿ ಇಮಾದ್ ಶಾಹಿ, ಬರೀದ್ ಶಾಹಿ ಮತ್ತು ಕುತುಬ್ ಶಾಹಿ ಎಂದು ವಿಂಗಡಿಸಬೇಕೋ ಅಥವಾ ಬಹಮನಿ ಎಂದು ಒಗ್ಗೂಡಿಸಿ ಅವರಲ್ಲಿ ಎಂದೂ ಇಲ್ಲದ ಒಗ್ಗಟ್ಟನ್ನು ಮೂಡಿಸಬೇಕೋ ಎಂಬ ಬಗ್ಗೆ ಭಯಂಕರ ಗೊಂದಲವಿತ್ತು. ಕೆಲವರು ಈ ಐದು ಸಂಸ್ಥಾನಗಳನ್ನು ಪ್ರತ್ಯೇಕ ಎಂದು ವಿಂಗಡಿಸಲು ಪ್ರಯತ್ನಿಸಿದಷ್ಟೂ ಶಾಹಿಗಳ ಜನ್ಮತಃ ಗುಣಗಳಾದ ಅನೈತಿಕ ಸಂಬಂಭ, ರಕ್ತಸಂಬಂಗಳ ಕೊಲೆ, ದರೋಡೆ, ಕ್ರೌರ್ಯಗಳೇ ತಲೆಹಾಳುಮಾಡುತ್ತಿದ್ದವು. ಅಲ್ಲದೆ ವಿದೇಶಿ ಪ್ರವಾಸಿಗಳಿಂದ ವರ್ಣೀಸಲ್ಪಟ್ಟ ವಿಜಯನಗರ ವೈಭವವನ್ನು ಸಾರಾಸಗಟಾಗಿ ನಿರಾಕರಿಸುವ ಸ್ಥಿತಿಯಲ್ಲೂ ಎಡಪಂಥೀಯರಿರಲಿಲ್ಲ.  ಮುಸ್ಲಿಂ ಅರಸರನ್ನು ನೇರಾನೇರಾ ವಿವರಿಸಲು ಕೈ ಬಾರದ ಕಾರಣ ಇವರಿಗೆಲ್ಲಾ ಬಹಮನಿ ಸುಲ್ತಾನರು ಸಾಂಸ್ಕೃತಿಕ, ಸಾಮಾಜಿಕ ಸುಧಾರಕರಂತೆಯೂ, ವಿಜಯನಗರದಲ್ಲಿ ಶೈವ-ವೈಷ್ಣವ ಜಗಳಗಳಿದ್ದಂತೆಯೂ ಇತಿಹಾಸ ರಚನೆಯಾಯಿತು. ಪ್ರಾಜ್ಞರು ಆಗಲೇ ಬಹಮನಿಗಳ ವೈಭವಕ್ಕೆ ವೇದಿಕೆ ಸಿದ್ಧವಾಗುತ್ತಿದೆ ಎಂದು ಎಚ್ಚರಿಸಿದ್ದರು. ಆ ವೇದಿಕೆಯನ್ನು ಬಳಸುವ ಕಾಲ ಪಕ್ವವಾಗಿರುವುದರಿಂದ ಬಹಮನಿ ಟೀಸರ್ ಅನ್ನು ಬಿಡುಗಡೆ ಮಾಡಲಾಗಿದೆ! ಅದಕ್ಕೆ ಸಿದ್ಧರಾಮಯ್ಯ ಕಾಲಕ್ಕಿಂತ ಯೋಗ್ಯ ಕಾಲ ಬೇರಾವುದಿದೆ? ಹಾಗಾಗಿ ಬಹಮನಿ ಉತ್ಸವ ನಡೆದರೂ ನಡೆಯಬಹುದು. ಅದರಲ್ಲಿ ಅಚ್ಚರಿಯೇನೂ ಇಲ್ಲ.

ಮತ್ತಷ್ಟು ಓದು »

13
ಮೇ

ಶಂಕರಾಚಾರ್ಯರನ್ನು ಸ್ತುತಿಸಿದ್ದಾಯಿತು, ವಿದ್ಯಾರಣ್ಯರನ್ನೂ ಸ್ಮರಿಸೋಣ….

-ಶ್ರೀನಿವಾಸ ರಾವ್

vidyaranya

||ಅವಿದ್ಯಾರಣ್ಯಕಾನ್ತಾರೇ ಭ್ರಮತಾಂ ಪ್ರಾಣಿನಾಂ ಸದಾ

           ವಿದ್ಯಾಮಾರ್ಗೋಪದೇಷ್ಟಾರಂ ವಿದ್ಯಾರಣ್ಯಗುರುಂ ಶ್ರಯೇ||

ವಿಜಯನಗರ ಸಾಮ್ರಾಜ್ಯ ಸ್ಥಾಪನೆಗೆ ಮಾರ್ಗದರ್ಶನ ನೀಡಿದರು. ದಕ್ಷಿಣಪಥದಲ್ಲಿ ಹಿಂದೂ ಧರ್ಮದ ಸಾಮ್ರಾಜ್ಯವನ್ನು ಸ್ಥಾಪಿಸುವ ಮೂಲಕ ಶೃಂಗೇರಿ ಪೀಠಾಧಿಪತಿಗಳ ಬಿರುದಾವಳಿಗೆ ‘ಕರ್ನಾಟಕ ಸಿಂಹಾಸನ ಪ್ರತಿಷ್ಠಾಪನಾಚಾರ್ಯ’ ಎಂಬ ಬಿರುದನ್ನು ತಂದುಕೊಟ್ಟಿದ್ದೂ ಅವರೇ. ಶೃಂಗೇರಿಯ ಈಗಿನ ಪೀಠಾಧಿಪತಿಗಳಿಗೆ ‘ಕರ್ನಾಟಕ ಸಿಂಹಾಸನ ಪ್ರತಿಷ್ಠಾಪನಾಚಾರ್ಯ’ ಎಂದು ಬಿರುದಾವಳಿಗಳಲ್ಲಿ ಹೇಳಿದರೂ ನಮಗೆ ಆ ಯತಿಶ್ರೇಷ್ಠರೇ ನೆನಪಾಗುತ್ತಾರೆ. ಮನಸ್ಸು ಪುಟಿದೇಳುತ್ತದೆ. ‘ವಿದ್ಯಾಶಂಕರ ಪಾದಪದ್ಮಾರಾಧಕ’ ಎಂದಾಗಲೂ ವಿದ್ಯಾತೀರ್ಥರ ಶಿಷ್ಯರಾಗಿ-ಭಾರತೀ ತೀರ್ಥರ ಕರಕಮಲ ಸಂಜಾತರಾಗಿದ್ದ ಅವರನ್ನೇ ಮನಸ್ಸು ನೆನೆಯುತ್ತದೆ. ಮತ್ತಷ್ಟು ಓದು »

30
ಸೆಪ್ಟೆಂ

ಇತಿಹಾಸದ ಅಚ್ಚರಿಗಳಲ್ಲಿ ಒಂದು ಇಣುಕು: ‘ಕರ್ನಾಟಕದ ಅಂದಿನ ಶ್ರೇಷ್ಟರ ಇಂದಿನ ವಂಶಸ್ಥರು ಮತ್ತು ಕುರುಹುಗಳು’

– ರಾಘವೇಂದ್ರ ಅಡಿಗ ಹೆಚ್.ಎನ್

Chidananda Murthy - Kannada ಕಳೆದ ವಾರ ಕನ್ನಡದ ಒಂದು ಅಪೂರ್ವ ಮತ್ತು ನೂತನ ಸ್ವರೂಪದ ಕೃತಿಯೊಂದರ ಬಿಡುಗಡೆ ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನೆರವೇರಿತು.( ಆ ಸಂದರ್ಭದಲ್ಲಿ ನಾನೂ ಸಹ ಅಲ್ಲಿ ಇದ್ದೆ ಎನ್ನುವ ವಿಚಾರವೇ ನನಗೊಂದು ಖುಷಿಯ ಸಂಗತಿ.) ಕನ್ನಡ ಸಾಹಿತ್ಯ ಹಾಗೂ ಸಾಂಸ್ಕೃತಿಕ ಲೋಕದ ಅಗ್ರರಲ್ಲಿ ಒಬ್ಬರಾದ ಡಾ. ಎಮ್. ಚಿದಾನಂದಮೂರ್ತಿಯವರ ‘ಕರ್ನಾಟದ ಅಂದಿನ ಶ್ರೇಷ್ಟರ ಇಂದಿನ ವಂಶಸ್ಥರು ಮತ್ತು ಕುರುಗಳು’ ಎನ್ನುವ ಹೆಸರಿನ ಕೃತಿಯು ಗಾತ್ರದಲ್ಲಿ ಚಿಕ್ಕದಾಗಿದ್ದರೂ ಅದರಲ್ಲಿರುವ ವಿಷಯದ ದೃಷ್ಟಿಯಿಂದ ತೀರಾ ವಿನೂತನವಾದುದ ಅಷ್ಟೇ ಅಲ್ಲ ಬಹು ಮೌಲ್ಯಯುತವಾದುದು ಕೂಡ. ಲೇಖಕರೇ ಹೇಳುವಂತೆ ‘ಇಂತಹಾ ಒಂದು ಪುಸ್ತಕ ಕನ್ನಡದಲ್ಲಿ ಬರುತ್ತಿರುವುದು ಇದೇ ಮೊದಲು,ಇತರೆ ಭಾರತೀಯ ಭಾಷೇಗಳಲ್ಲಿಯೂ ಬಂದಂತಿಲ್ಲ’. ಈ ಒಂದು ಪುಸ್ತಕದಿಂದ ನಾವು-ನೀವು ಓದಿರುವ ಕನ್ನಡದ ಪ್ರಾಚೀನ ಕವಿಗಳು, ನಮ್ಮನ್ನಾಳಿದ ರಾಜ ಮಹಾರಾಜರ ವಂಶಸ್ಥರ ಕುರಿತಾಗಿ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳಬಹುದು.

ಕನ್ನಡದ ಶ್ರೇಷ್ಠ ಸಂಶೋಧಕರೂ, ಚಿಂತಕರೂ, ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ ಪುರಸ್ಕೃತರೂ ಆಗಿರುವ ಡಾ. ಎಮ್. ಚಿದಾನಂದಮೂರ್ತಿಗಳ ಈ ಕಿರುಹೊತ್ತಿಗೆ ಅವರ ಹಲವು ವರ್ಷಗಳ ಪರಿಶ್ರಮದ ಫಲ. ಶತ ಶತಮಾನಗಳ ಹಿಂದೆ ಆಳಿಹೋದ ರಾಜವಂಶಸ್ಥರ, ನೂರಾರು-ಸಾವಿರಾರು ವರ್ಷಗಳ ಹಿಂದೆ ಬದುಕಿ ಕಾವ್ಯಗಳನ್ನು ರಚಿಸಿದ ಪ್ರಾಚೀನ ಕವಿಮಹೋದಯರ ಈಗಿನ ವಂಶಸ್ಥರು ಯಾರೆನ್ನುವುದನ್ನು ಪತ್ತೆ ಮಾಡಿ ಅವರನ್ನು ಸಂದರ್ಶಿಸಿ, ಅವರ ಬಳಿ ಇದ್ದ ಅಂದಿನ ಕಾಲದ ಕುರುಹುಗಳನ್ನು ನೋಡಿ ಅದರ ಬಗ್ಗೆ ಲೇಖನ ಅಥವಾ ಪುಸ್ತಕ ಬರೆಯುವುದು ಅಷ್ಟೇನೂ ಸುಲಭವಲ್ಲ. ಉದಾಹರಣೆಗೆ ಕನ್ನಡದ ಆದಿಕವಿ ಪಂಪನನ್ನು ತೆಗೆದುಕೊಂಡರೆ ಅವನ ಕಾಲ ಕ್ರಿ.ಶ.೯೦೨. ಅವನು ‘ವಿಕ್ರಮಾರ್ಜುನ ವಿಜಯ’ ಕಾವ್ಯವನ್ನು ಪೂರ್ಣಗೊಳಿಸಿದ್ದು ಕ್ರಿ.ಶ.೯೪೨ ರಲ್ಲಿ. ಅಂದರೆ ಇಂದಿಗೆ ಸುಮಾರು ಸಾವಿರದ ನೂರು ವರ್ಷಗಳಾದವು. ಹೀಗೆ ಸಾವಿರ ವರ್ಷಗಳ ಹಿಂದೆ ಬದುಕಿದ್ದ ಪಂಪನ ತಂದೆ ಹಾಗೂ ತಾಯಿಯ ವಂಶಸ್ಥರ ವಿವರಗಳಾನ್ನು ಪತ್ತೆ ಮಾಡುವುದು ಮತ್ತು ಅವರನ್ನು ಸ್ವತಃ ಸಂದರ್ಶಿಸಿ ಮತ್ತಷ್ಟು ಮಾಹಿತಿಯನ್ನು ಕಲೆಹಾಕಿ ಪುಸ್ತಕ ಪ್ರಕಟಿಸುವುದು ಬಲು ಅಪರೂಪದ ಸಂಗತಿ. ಹೀಗಾಗೆ ಇಂತಹಾ ಪುಸ್ತಕವು ಕನ್ನಡದಲ್ಲಿ ತೀರಾ ನೂತನವಾಗಿರುವುದು ಸಾಧ್ಯ.

ಮತ್ತಷ್ಟು ಓದು »