ವಿಡಂಬನೆ: ಸಾಹಿತ್ಯ ಗದ್ದುಗೆ ಹಾಗೂ ಮಣ್ಣಂಗಟ್ಟಿ ಸಾಹಿತ್ಯ!
– ತುರುವೇಕೆರೆ ಪ್ರಸಾದ್
ತರ್ಲೆಕ್ಯಾತನಳ್ಳಿ ಖ್ಯಾತ ಸಾಹಿತಿ ಅನಂತ ಜೋಷಿ ಮತ್ತು ತಾಲ್ಲೂಕ ಸಾಹಿತ್ಯ ಸಭೆಯ ನೂತನ ಅಧ್ಯಕ್ಷ ಗುದ್ಲಿಂಗ ಜಮಖಂಡಿ ಅವರ ಮಧ್ಯೆ ನಡೆದ ಫೋನ್ ಸಂಭಾಷಣೆ ಹೀಗಿದೆ:
‘ನಮಸ್ಕಾರ್ರೀ ! ನಾನ್ ಜಮಖಂಡಿ ಮಾತಾಡಕ್ ಹತ್ತೀನಿ’
‘ಓಹೋ! ಜಮಖಂಡಿ ಅವರು!ಏನ್ರಪ್ಪಾ! ಆರಾಮದೀರೇನು?’
‘ಹಾಂ! ಆರಾಮದೀನಿ..ವಿಷ್ಯ ತಿಳೀತೇನ್ರೀ ಎಪ್ಪಾ?’
‘ಯಾವ ವಿಷ್ಯ ಹೇಳಕ್ ಹತ್ತೀರಿ ನೀವು? ಕೊಶ್ನೆ ಪೇಪರ್ ಲೀಕಾಯ್ತಲ್ಲ ಅದಾ ? ಇಲ್ಲ ಯಡಿಯೂರಪ್ಪಗೆ ಅಧ್ಯಕ್ಷ ಪಟ್ಟ ಸಿಕ್ತಲ್ಲ ಅದಾ?’
‘ಏ ! ಅವೆಲ್ಲಾ ಹಳೇದಾತ್ ಬಿಡ್ರಿ, ಈಗ ನಂಗ್ ಸಾಹಿತ್ಯ ಸಭೆ ಅಧ್ಯಕ್ಷಗಿರಿ ಸಿಕ್ಕೈತೆ, ಮೊನ್ನೆ ಯುಗಾದಿ ಮುಂದ ಪೇಪರ್ನಾಗ್ ಬಂದಿತ್ತು, ನೀವು ನೋಡ್ಲಿಲ್ಲೇನು?’
‘ಅರೆ! ಹೌದಾ? ನಿಮ್ಗೆ ಅಧ್ಯಕ್ಷಗಿರಿ ಕಟ್ಯಾರಾ? ಅಂದ್ರೆ ಹಾರ ತುರಾಯಿ ಹಾಕಿಸ್ಕೊಳೋಕ್ ಕೊಳ್ ಚಾಚ್ಕಂಡ್ ಕುಂತ್ ಬಿಟ್ರಿ ಅನ್ನಿ, ಇಂದ್ರಾಬಾಯವ್ರು ನಮಗಾ ಒಂದ್ ಮಾತೂ ಕೇಳ್ದ, ಸಭೆನೂ ಕರೀದೆ ನಿಮ್ಮನ್ನ ಹೆಂಗ್ ಅಧ್ಯಕ್ಷ ಮಾಡಾರೆ?’
‘ನಿಮ್ಗೆ ಇದ್ ಕೇಳಿದ್ ಕೂಡ್ಲೆ ಹೊಟ್ಟೆನಾಗೆ ಮೆಣಸಿನಕಾಯ್ ಕಿವುಚಿದಂಗಾಗ್ತದೆ ಅಂತ ನಂಗೊತ್ತಿತ್ತು ಬಿಡ್ರಲಾ! ಅದೆಂಥ ಹೊಟ್ಟೆ ಉರೀನ್ರೀ ನಿಮ್ದು..! ಇನ್ನೊಬ್ರಿಗೆ ಒಳ್ಳೇದಾತು ಅಂದ್ರೆ ಸಹಿಸೋ ಮಂದಿ ಅಲ್ಲ ನೀವು’ ಮತ್ತಷ್ಟು ಓದು
ಅಸಹಿಷ್ಣುತೆ – ಮನೆ ಮನೆ ಕಥೆ!
– ನಾಗೇಶ ಮೈಸೂರು
ಯಾಕೋ ಗುಬ್ಬಣ್ಣ ಪತ್ತೆಯಿಲ್ಲದೆ ಮಾಯಾವಾಗಿಹೋಗಿದ್ದ ಒಂದು ತಿಂಗಳಿಂದ. ಆಗೀಗ ಮಧ್ಯೆ ಬರಿ ಒಂದೆರಡು ಮೆಸೇಜ್ ಮಾತ್ರ ಕಳಿಸಿ ‘ವೆರಿ ಬಿಜಿ’ ಅಂತೊಂದು ಚೋಟು ಸುದ್ಧಿ ಹಾಕಿ ಇನ್ನು ಕುತೂಹಲ ಜಾಸ್ತಿ ಮಾಡಿಬಿಟ್ಟಿದ್ದ. ‘ಪ್ರಾಜೆಕ್ಟುಗಳೆಲ್ಲ ಕ್ಯಾನ್ಸಲ್ಲಾಗಿ ಇದ್ದಕ್ಕಿದ್ದಂತೆ ಫುಲ್ ಫ್ರೀ ಟೈಮ್ ಸಿಕ್ಕಿಬಿಟ್ಟಿದೆ; ಸ್ವಲ್ಪ ಬ್ರೇಕು ಸಿಕ್ಕಿದಾಗಲೆ ಅಲ್ಲಿ ಇಲ್ಲಿ ಓಡಾಡಿಕೊಂಡು ಬಿಡಬೇಕು ಸಾರ್.. ಈಗಲಾದರು ನೋಡೊ ಜಾಗವೆಲ್ಲ ನೋಡಿಬಿಡಬೇಕು ಅನ್ಕೊಂಡಿದೀನಿ’ ಅಂತಿದ್ದ. ‘ಹೇಳಿದ ಹಾಗೆ ಎಲ್ಲಾದರು ಟೂರು ಹೊಡಿತಿದಾನ ?’ ಅನ್ಕೊಂಡೆ, ಕ್ರಿಸ್ಮಸ್ಸಿನ ರಜೆ ಹತ್ತಿರವಾಗುವಾಗಲಾದರೂ ಸಿಕ್ತಾನ ನೋಡೋಣ ಅನ್ಕೊಂಡು ‘ವಾಟ್ಸಪ್ ಗುಬ್ಬಣ್ಣ ? ಮೆರ್ರಿ ಕ್ರಿಸ್ಮಸ್’ ಎಂದು ಮತ್ತೊಂದು ತುಂಡು ಸುದ್ದಿ ಕಳಿಸಿದೆ.
ಈ ಮೆಸೇಜಿಗೆ ಗುಬ್ಬಣ್ಣ ಖಂಡಿತವಾಗಿ ರೆಸ್ಪಾಂಡ್ ಮಾಡ್ತನೆ ಅಂತ ಭರವಸೆಯಿತ್ತು. ಯಾವ ಹಬ್ಬಹರಿದಿನಕ್ಕು ನಾನು ‘ವಿಷ್’ ಮೆಸೇಜ್ ಕಳಿಸಿದವನಲ್ಲ.. ಗುಬ್ಬಣ್ಣ ಹಬ್ಬ ಹರಿದಿನಕ್ಕೆ ವಿಷಸ್ ಕಳಿಸಿದಾಗಲೂ ಬರಿ ‘ಥ್ಯಾಂಕ್ಸ್’ ಅನ್ನೊ ರಿಪ್ಲೈ ಬರೆದರೆ ಅದೇ ಹೆಚ್ಚು. ಅಂತಹವನಿಗೆ ಅವನು ಆಚರಣೆ ಮಾಡದ ಹಬ್ಬಗಳಿಗೆಲ್ಲ ಬೇಕಂತಲೆ ವಿಷಸ್ ಕಳಿಸಿ ಸ್ವಲ್ಪ ರೇಗುವಂತೆ ಮಾಡುತ್ತಿದ್ದೆ.. ಅವಕ್ಕೆಲ್ಲ ಕಳಿಸಿದ್ದಕ್ಕಲ್ಲ ಅವನಿಗೆ ಕೋಪ ; ‘ನಮ್ಮ ಹಬ್ಬಗಳಿಗೆ ಕಳಿಸದೆ, ಕಳಿಸಿದ್ದಕ್ಕು ರೆಸ್ಪಾಂಡ್ ಮಾಡದೆ ಸಂಬಂಧಿಸದೆ ಇರೋದಕ್ಕೆ ಮಾತ್ರ ಉದ್ದುದ್ದ ಮೆಸೇಜ್ ಕಳಿಸಿ ವಿಷ್ ಮಾಡುವೆನಲ್ಲಾ?’ ಅಂತ. ಹಾಗೆ ಕಳಿಸಿದಾಗೆಲ್ಲ ಉರಿದೆದ್ದು ಬೀಳುವುದು, ರೇಗುವುದು ಮಾಮೂಲಾದ ಕಾರಣ, ಬೇಕೆಂತಲೆ ಆ ಮೆಸೇಜ್ ಕಳಿಸಿದ್ದು!
ಆ ಕಾಲವೊಂದಿತ್ತು…ದೇಶಕ್ಕೆ ದೇಶವೇ ಸ್ವರ್ಗವಾಗಿತ್ತು…
– ವಿಜಯ್ ಪೈ
ಆ ಕಾಲವೊಂದಿತ್ತು..ದಿವ್ಯ ತಾನಾಗಿತ್ತು. ದೇಶಕ್ಕೆ ದೇಶವೇ ಸ್ವರ್ಗವಾಗಿತ್ತು. ಹೌದು ಎಲ್ಲವೂ ಸರಿಯಾಗಿತ್ತು ನನ್ನ ಪ್ರೀತಿಯ ಈ ಇಂಡಿಯಾದಲ್ಲಿ , ಈಗ ನಾನು ಹೇಳುತ್ತಿರುವುದು ಇತಿಹಾಸದ ಮಾತಲ್ಲ, ಇದು ಕೇವಲ ಹದಿನೆಂಟು ತಿಂಗಳ ಹಿಂದಿನ ಮಾತು.
ದೇಶದ ತುಂಬ ಕೋಮು ಸೌಹಾರ್ದ, ಅನಿರ್ಬಂಧಿತ ಅಭಿವ್ಯಕ್ತಿ ಸ್ವಾತಂತ್ರ್ಯವಿತ್ತು, ಮನಸ್ಸಿಗೆ ಬಂದದ್ದನ್ನು ಮನಸ್ಸಿಗೆ ಬಂದಲ್ಲಿ ಮಾತನಾಡಬಹುದಿತ್ತು. ಒಂದೇ ಒಂದು ಪುಸ್ತಕ, ನಾಟಕ ಅಥವಾ ಸಿನೇಮಾ ನಿಷೇಧಿಸಿದ ದಾಖಲೆಯಿರಲಿಲ್ಲ.
‘ಜಾತಿ”ಯೆಂಬ ಶಬ್ದದ ಪ್ರಸ್ತಾಪವೇ ಇರಲಿಲ್ಲ ಎಲ್ಲೂ..,”ಧರ್ಮ”ದ ಪ್ರಸ್ತಾಪವೋ ಕೇಳಲೇ ಬೇಡಿ. ಹಸಿವಿರಲ್ಲಿಲ್ಲ..ಬಡತನವಿರಲಿಲ್ಲ. ಎಲ್ಲ ರೈತರೂ ಲಕ್ಷಾಧಿ/ಕೋಟ್ಯಾಧಿಪತಿಗಳಾಗಿದ್ದರಿಂದ ಯಾವ ರೈತನೂ ಆತ್ಮಹತ್ಯೆ ಮಾಡಿಕೊಳ್ಳುತ್ತಿರಲಿಲ್ಲ. ಸರಕಾರಿ/ಸರಕಾರೇತರ ಯಾವುದೇ ಕೆಲಸಗಳಿಗೆ ರೈತರ ಒಂದಿಂಚೂ ಜಮೀನನ್ನು ಕೂಡ ಕಬಳಿಸುತ್ತಿರಲಿಲ್ಲ. ರೈತರು ಸ್ಚ ಇಚ್ಛೆಯಿಂದ ತಾವಾಗಿಯೇ ದಾನ ಕೊಡುತ್ತಿದ್ದರು ಮತ್ತು ಸರಕಾರಕ್ಕೆ ಬೇಸರವಾಗಬಾರದೆಂದು ಕೊಟ್ಟ ಜಮೀನಿಗೆ ಒಂದಷ್ಟು ಗೌರವಧನ ತೆಗೆದುಕೊಳ್ಳುತ್ತಿದ್ದರು. ಬಂಡವಾಳಶಾಹಿ ಕಾರ್ಪೊರೇಟ್ ಗಳು ನನ್ನ ಇಂಡಿಯಾದ ರೈತನ ಮುಂದೆ ಹೆದರಿ ಡೊಗ್ಗಾಲು ಊರಿ ಕೂರುತ್ತಿದ್ದವು.
ಎಂತಹ ಅಧ್ಭುತ ದೇಶವಾಗಿತ್ತು ನನ್ನದು..ಇಲ್ಲಿ ಯಾರು ಎಷ್ಟು ಬೇಕಾದಷ್ಟೂ , ಎಲ್ಲೆಂದರಲ್ಲಿ ಗೋ ಮಾಂಸ ಭಕ್ಷಿಸಬಹುದಿತ್ತು. ಗೋ ಹತ್ಯಾ ನಿಷೇಧ ಯಾವ ರಾಜ್ಯದಲ್ಲಿಯೂ ಇರಲಿಲ್ಲ. ಭ್ರಷ್ಟಾಚಾರ, ಅತ್ಯಾಚಾರ, ಕೊಲೆ ಈ ಶಬ್ದಗಳನ್ನು ಕೇಳುವುದೇ ಅಪರೂಪದಲ್ಲಿ ಅಪರೂಪವಾಗಿತ್ತು.
ಮತ್ತಷ್ಟು ಓದು
ಕನ್ನಡನಾಡಿನ ಅನರ್ಘ್ಯ ರತ್ನಗಳು
– ರೋಹಿತ್ ಚಕ್ರತೀರ್ಥ
ನಮ್ಮ ನಾಡು ಕವಿಪುಂಗವರಿಗೆ, ಸಮಾಜಸುಧಾರಕರಿಗೆ, ಶಾಸ್ತ್ರಕೋವಿದರಿಗೆ ನೆಲೆ ಕೊಟ್ಟ ಪುಣ್ಯಭೂಮಿ. ಇಲ್ಲಿ ಶತಶತಮಾನಗಳಿಂದ ಅನೇಕಾನೇಕ ಸಂತರು, ಪ್ರಾಜ್ಞರು, ವಿಚಾರವಾಧಿಗಳು ಆಗಿಹೋಗಿದ್ದಾರೆ. ಈಗಿನ ಇಪ್ಪತ್ತೊಂದನೇ ಶತಮಾನದಲ್ಲೂ ಅಂತಹ ಪುಣ್ಯಪುರುಷರು ಮತ್ತೆಮತ್ತೆ ನಮ್ಮ ಈ ಕರುನಾಡಿನಲ್ಲಿ ಹುಟ್ಟಿಬರುತ್ತಲೇ ಇರುವುದು ನಮ್ಮೆಲ್ಲರ ಪೂರ್ವಜನ್ಮದ ಸುಕೃತ ಎಂದೇ ತಿಳಿಯಬೇಕು. ಇಂದಿನ ಈ ಸುದಿನದಂದು ಅಂತಹ ಕೆಲ ಪುಣ್ಯಪುರುಷ/ಮಹಿಳೆಯರನ್ನು, ಸಮಾಜದ ಚಿಂತನೆಯ ಧಾಟಿಯನ್ನೇ ಬದಲಾಯಿಸಬಲ್ಲ ಪ್ರವರ್ತಕರನ್ನು ನೆನೆಯೋಣ.
ಪ್ರೊ. ಭಗ್ವಂತ – ಇವರೊಬ್ಬ ಸಮಾಜಸುಧಾರಕ ಕಮ್ ಪಂಡಿತ ಕಮ್ ವಿಚಾರವಾದಿ ಕಮ್ ಜಾತ್ಯತೀತ ಕಮ್ ಇನ್ನೇನೇನೋ ಆಗಿರುವ ಪುಣ್ಯಪುರುಷರು. ಇವರು ಜಗತ್ತಿನ ಉಳಿದೆಲ್ಲಾ ದೇಶಗಳನ್ನು ಬಿಟ್ಟು ನಮ್ಮ ಭರತಖಂಡವನ್ನು, ಅದರಲ್ಲೂ ಕರ್ನಾಟಕವನ್ನು ತನ್ನ ಅವತಾರಕ್ಕಾಗಿ ಆರಿಸಿಕೊಂಡದ್ದೇ ನಮ್ಮೆಲ್ಲರ ಪುಣ್ಯ. ಭಗ್ವಂತ್ ಅವರು ತನ್ನ ದಿವ್ಯಚಕ್ಷುಗಳಿಂದ ಈ ಸಮಾಜದ ಧರ್ಮ-ಪಂಥಗಳಲ್ಲಿ ಅಡಗಿರುವ ವಾರೆಕೋರೆಗಳನ್ನು ಹೊರಗೆಳೆದುಹಾಕಿ ಸಮಾಜಕ್ಕೆ ಭರಿಸಲಾರದ ಸಹಾಯ ಮಾಡಿದ್ದಾರೆ. ಇವರಿಗೆ ಹಿಂದೂ ಧರ್ಮದ ಭಗವದ್ಗೀತೆ ಎಂದರೆ ತುಂಬಾ ಪ್ರೀತಿ. ಅದನ್ನು ನೂರಾರು ಸಲ ಪಾರಾಯಣ ಮಾಡಿ, ಇದುವರೆಗೆ ಪಂಡಿತವರೇಣ್ಯರಿಗೆ ಕಾಣದ ಅರ್ಥಗಳನ್ನು ಹುಡುಕಿ ಹೊರತೆಗೆದ ಸಾಹಸಿ ಅವರು. ಭಗ್ವಂತ್ ಭಾರತದಲ್ಲಲ್ಲದೆ ದೂರದ ಸೌದಿಯಲ್ಲೋ ವ್ಯಾಟಿಕನ್ನಲ್ಲೋ ಹುಟ್ಟಿ ಅಲ್ಲಿನ ಧರ್ಮಗ್ರಂಥಗಳನ್ನು ಈ ರೀತಿ ಹೊಗಳಿದ್ದರೆ ಅವರಿಗೆ ಅಲ್ಲಿನ ಮಠಾಧಿಪತಿಗಳು ಮತ್ತು ಸರ್ಕಾರಗಳು ಅಲೌಕಿಕ ಪ್ರಶಸ್ತಿಗಳನ್ನು ಕೊಟ್ಟು ಸನ್ಮಾನಿಸುತ್ತಿದ್ದವು. ಮತ್ತಷ್ಟು ಓದು
ವೈಕುಂಠದಲ್ಲಿ ಕೋಲಾ(ಕ್ಲೋನಾ)ಹಲ-ವಿಡಂಬನಾ ಕಥೆ – ಭಾಗ ೨
– ಸುದರ್ಶನ್ ರಾವ್
ವೈಕುಂಠದಲ್ಲಿ ಕೋಲಾ(ಕ್ಲೋನಾ)ಹಲ-ವಿಡಂಬನಾ ಕಥೆ – ಭಾಗ ೧
ನಾರದರಿಗೆ ಆಶ್ಚರ್ಯ…ಸಂಬಂಧದಲ್ಲಿ ನಾನು ಕಿರಿಯ, ಬ್ರಹ್ಮನ ಮಗನಾದ ನಾನು ಇವನಿಗೆ ಮೊಮ್ಮಗನಾಗಬೇಕು. ಯಾವಾಗಲೂ ನೀನು, ತಾನು ಎಂದು ಏಕವಚನದಲ್ಲಿ ಕರೆಯುತ್ತಿದ್ದ ಇವತ್ತು ನೀವು, ನಿಮಗೆ ಎಂಬ ಬಹುವಚನ ಪ್ರಯೋಗ ಮಾಡುತ್ತಿದ್ದಾನಲ್ಲ!, ತಲೆ ಬಿಸಿ ಆಗಿರಲೇ ಬೇಕು ಎಂದು ಅವರಿಗೆ ಗೊತ್ತಾಯಿತು.
ಕಬ್ಬಿಣ ಕಾದಿರುವಾಗಲೇ ಬಡಿಯಬೇಕೆಂದು ತಮ್ಮ ಎಂದಿನ ಧಾಟಿಯಲ್ಲಿ ಹೇಳಿದರು, “ಹೇ ಭಗವಂತಾ, ಬ್ರಹ್ಮಾಂಡವೇ, ಆ ದೇವನಾಡುವ ಬೊಂಬೆಯಾಟವಯ್ಯ, ಅಂಬುಜ ನಾಭನ, ಅಂತ್ಯವಿಲ್ಲದಾತನ ತುಂಬು ಮಾಯವಯ್ಯಾ… ಈ ಲೀಲೆಯು …ಎಂದು ನಾನು ನಿನ್ನನ್ನು ಯಾವತ್ತಿನಿಂದಲೂ, ಅದೆಷ್ಟು ಬಾರಿ ಸ್ತುತಿಸಿಲ್ಲ. ಈಗ ನೋಡಿದರೆ ಭೂಮಿಯಲ್ಲಿ ಬೇರೆಯೇ ಆಟ ನಡೆದಿದೆ. ಅಲ್ಲಿ, ಆ ಭೂಮಿಯಲ್ಲಿ, ನೀನು ಸೂತ್ರ ಕಟ್ಟಿರದ, ನಿನ್ನ ರಾಗದಾ ಭೋಗದಾ ಉರುಳಲ್ಲಿ ಸಿಕ್ಕಿರದ ಅದೆಷ್ಟೋ ಬೊಂಬೆಗಳು ಅವತರಿಸಿರುವುದನ್ನು ನಾನು ಕಣ್ಣಾರೆ ಕಂಡಿದ್ದೇನೆ.ಅವು ಇವರೆಲ್ಲರ ಕಾರ್ಯವಿಧಾನಕ್ಕೆ ಕೊಡಲಿ ಪೆಟ್ಟು ಕೊಡುತ್ತಿರುವುದೂ ನೋಡಿದ್ದೇನೆ. ಇದು ಹೀಗೇ ಮುಂದುವರಿದರೆ ನನ್ನ ಈ ಹಾಡಿಗೆ ಅರ್ಥವಿಲ್ಲದೆ ಹೋಗುತ್ತದೆ. ಅದರ ಸಾಹಿತ್ಯ ಬದಲಾಯಿಸಬೇಕಾಗುವುದು. ನಾನು ಕೇವಲ ಸುದ್ದಿಗಾರನಷ್ಟೇ. ನನಗೆ ಕಾರ್ಯಕಾರಣ ಸಂಬಂಧ ತಿಳಿಯದು. ಆದರೂ ಇದು ಮಾನವರು ಕಲಿತುಕೊಂಡಿರುವ ವೈದ್ಯವಿಜ್ಞ್ನಾನದ ಕರಾಮತ್ತೆಂದು ತೋರುತ್ತಿದೆ. ಯಾವುದಕ್ಕೂ ಅಶ್ವಿನೀ ದೇವತೆಗಳನ್ನು ಕರೆಸಿ ನೋಡು” ಎಂದರು. ಯಾವತ್ತಿನಂತೆ ಅಪೂರ್ಣ ಸಲಹೆ ನೀಡಿ ಮತ್ತಷ್ಟು ಮಜಾ ಪಡೆಯುವ ನಾರದರ ಬುದ್ಧಿ ಅಲ್ಲೂ ಸುಮ್ಮನಿರಲಿಲ್ಲ,. ಈ ನಾರದ ನನ್ನ ಪಾರಮ್ಯವನ್ನೇ ಪ್ರಶ್ನಿಸಬಲ್ಲ ಸನ್ನಿವೇಶದ ಮಾತಾನಾಡುತ್ತಿದ್ದಾನಲ್ಲ. ಇದೇನಿರಬಹುದು. ಸ್ವಲ್ಪ ಮೈಮರೆತಿದ್ದಕ್ಕೆ ಏನೇನೋ ನಡೆದು ಹೋಗಿದೆ ಎಂದು ಕಿರೀಟ ತೆಗೆದು, ತಲೆ ಕೆರೆದುಕೊಂಡು ಅಶ್ವಿನೀದೇವತೆಗಳನ್ನು ಕರೆಸಿದ.
ಮತ್ತಷ್ಟು ಓದು
ವೈಕುಂಠದಲ್ಲಿ ಕೋಲಾ(ಕ್ಲೋನಾ)ಹಲ-ವಿಡಂಬನಾ ಕಥೆ
– ಸುದರ್ಶನ್ ರಾವ್
ಕ್ಷೀರ ಸಾಗರದ ಮಧ್ಯದಲ್ಲಿ ಶೇಷ ಶಾಯಿಯಾಗಿ ಶ್ರೀ ಲಕ್ಷ್ಮಿಯ ಸೇವೆ ಪಡೆಯುತ್ತಿದ್ದ ಶ್ರೀಮನ್ನಾರಾಯಣನಿಗೆ ಡಿಸ್ಟರ್ಬ್ ಮಾಡುವ ಇರಾದೆ ಜಯ ವಿಜಯರಿಗೆ ಖಂಡಿತಾ ಇರಲಿಲ್ಲ. ತ್ರೇತಾ ದ್ವಾಪರ ಯುಗಗಳಲ್ಲಿ ಧರ್ಮಸಂಸ್ಥಾಪನೆಯನ್ನು ಮಾಡಿದ ನಂತರ ದೀರ್ಘ ವಿಶ್ರಾಂತಿಯಲ್ಲಿದ್ದ ಅವನು ಯಾವ ಕಿರಿ ಕಿರಿಯನ್ನೂ ನಿರೀಕ್ಷಿಸುತ್ತಿರಲಿಲ್ಲ. ಜಾಗತಿಕ ತಾಪಮಾನ ಏರುತ್ತಿರುವ ತೆರದಲ್ಲೇ ಮಾನವರ ಅನಾಚಾರಗಳೂ ಹೆಚ್ಚುತ್ತಿರುವುದು ಅವನಿಗೆ ತಿಳಿಯದ ವಿಷಯವಾಗಿರದಿದ್ದರೂ ಪ್ರಪಂಚವನ್ನು ಹಾಲು ಕಾಯಿಸಿದಂತೆ ತನ್ನಷ್ಟಕ್ಕೆ ತಾನು ಕಾಯ್ದು ಕೊಳ್ಳಲಿ, ಉಕ್ಕಿದಾಗ ನೋಡೋಣ ಎಂಬ ಎಣಿಕೆ ಅವನದು.ಅದೂ ಅಲ್ಲದೆ ದೇವಸ್ಥಾನಗಳ ಹುಂಡಿಯಲ್ಲಿ ಹಣದ ಮಹಾಪೂರವೇ ಹರಿಯುತ್ತಿರಲಾಗಿ ಧರ್ಮಕ್ಕೆ ಚ್ಯುತಿ ಬಂದಿರಲಾರದೆಂದು ಅವನ ಊಹೆ. ಇಷ್ಟಕ್ಕೂ ತಿರುಪತಿಯ ಹುಂಡಿಯಿಂದ ಕುಬೇರನ ಸಾಲಕ್ಕೆ ಹಣ ಚುಕ್ತಾ ಆಗುತ್ತಿರಲು ಒಂದು ರೀತಿಯ ನಿರಾಳವೇ ಅವನಲ್ಲಿತ್ತು.
ಆದರೆ ಅಂದು ಬೆಳ್ಳಂಬೆಳಿಗ್ಗೆಯೇ ಭೂದೇವಿ ಬಹಳ ಅಸ್ತವ್ಯಸ್ತ ವೇಷದಲ್ಲಿ ವಿಷ್ಣುದರ್ಶನಕ್ಕಾಗಿ ಬಂದಳು. ಸ್ವಾಮಿ ಇನ್ನೂ ಮಲಗಿರಬಹುದೆಂದೇ ದ್ವಾರಪಾಲಕರ ಎಣಿಕೆ. ತಾನು ತನ್ನ ಪತಿಯೊಡನೆ ಮಾತುಕತೆ ನಡೆಸಬೇಕಾಗಿದೆಯೆಂದೂ, ತುರ್ತಾಗಿ ತನಗೆ ಬಾಗಿಲು ತೆಗೆಯಬೇಕೆಂದೂ ಆಗ್ರಹಿಸಿದಳು. ಜಯ-ವಿಜಯರಿಗೆ ಧರ್ಮ ಸಂಕಟ. ಬಿಟ್ಟ್ರೂ ತೊಂದರೆ ಬಿಡದೇ ಇದ್ದರೂ ತೊಂದರೆ.’ಇತ್ತ ಹಾವು ಅತ್ತ ಹುಲಿ ’ ಎಂಬ ಪರಿಸ್ಥಿಗೆ ಸಿಲುಕಿ ಹಲುಬಿದರು. ಸನಕಾದಿ ಮುನಿಗಳ ಶಾಪಕ್ಕೆ ತುತ್ತಾಗಿ, ಭೂಭಾರ ಇಳಿಸಲು ದುಷ್ಟಾತಿ ದುಷ್ಟರಾಗಿ ಜನ್ಮ ತಾಳಿ ಹತರಾಗಿದ್ದ ನೆನಪು ಇನ್ನೂ ಮಾಸಿರಲಿಲ್ಲ. ಮುಖ ಮುಖ ನೋಡಿಕೊಂಡು ತಮ್ಮ ಹಣೆ ಬರಹವನ್ನು ಹಳಿಯುತ್ತಾ ಬಾಗಿಲು ತೆಗೆದು ಭೂದೇವಿಯನ್ನು ಒಳಗೆ ಬಿಟ್ಟರು.
ಒಂದು ರಾಜಕೀಯ ವಿಡಂಬನೆ:ಬಪ್ಪರೆ ಬಪ್ಪ.. ತಿಪ್ಪರ್ ಲಾಗ ಹಾಕಪ್ಪಾ…
– ತುರುವೇಕೆರೆ ಪ್ರಸಾದ್
ಎಲೆಕ್ಷನ್ ಆದ್ಮೇಲೆ ಯಾವ ಯಾವ ಮುಖಂಡರು ಏನೇನು ಮಾಡ್ತಿದಾರೆ ಅಂತ ಸಮೀಕ್ಷೆ ಮಾಡೋಕೆ ರಾಂಪ ಪಕ್ಷಭೇದ ಮರೆತು ಎಲ್ಲರ ಮನೆ, ಪಕ್ಷಗಳ ಅಡ್ಡೆಗೆ ಬಿಜುಗೈದ. ವಿವಿಧ ರಾಜಕೀಯ ಮುಖಂಡರು ರಿಸಲ್ಟ್ ಬರೋತನಕ ಏನು ಸ್ಟಾಪ್ಗ್ಯಾಪ್ ಅರೇಂಜ್ಮೆಂಟ್ ಮಾಡ್ಕೊಂಡಿದಾರೆ ಅನ್ನೋ ರಾಂಪನ ಪ್ರಶ್ನೆಗೆ ಬಂದ ಪ್ರತಿಕ್ರಿಯೆಗಳು ಕೆಳಕಂಡಂತಿವೆ.
ಜೋಕುಮಾರ್:ನಿಜ! ರಿಸಲ್ಟ್ ಗೆ ಒಂದು ತಿಂಗಳು ಕಾಯೋದು ಅಂದ್ರೆ ತುಂಬಾ ಕಷ್ಟ. ಈ ಕಾಲ್ದಲ್ಲಿ ಸಿಇಟಿ ರಿಸಲ್ಟೇ 15ದಿನಕ್ಕೆ ಬರುತ್ತೆ. ಅಂತಾದ್ರಲ್ಲಿ ಎಲೆಕ್ಷನ್ ರಿಸಲ್ಟ್ ಇಷ್ಟು ಲೇಟಾದ್ರೆ ಹೇಗೆ? ಈ ಒಂದು ತಿಂಗಳಲ್ಲಿ ಎಲ್ಲಾ ದೇಸೀ ಅಂಗಮರ್ದನ, ಫಾರಿನ್ ಮಸಾಜ್ ಸೆಂಟರ್ಗಳನ್ನ ವಿಸಿಟ್ ಮಾಡ್ಬೇಕು ಅಂದ್ಕೊಂಡಿದೀನಿ. ಹಾಗೇ ಹೊಸ ಚಿತ್ರ ‘ಕಣ್ಣೀರ್ ಕಣ್ಣೀರ್’ ಡಾಕ್ಯುಮೆಂಟರಿನ ಸಹಾರಾ ಡೆಸರ್ಟ್ನಲ್ಲಿ ಶೂಟ್ ಮಾಡ್ಬೇಕು ಅಂತ ಪ್ಲಾನಿದೆ. ರೈತರಿಗಾಗಿ ನೀರು ಮರುಪೂರಣ ತರ ಕಣ್ಣೀರು ಮರುಪೂರಣ ಮಾಡೋ ಬಗ್ಗೆ ಹೊಸ ಹೊಸ ಯೋಜನೆಗಳ ಸ್ಕೆಚ್ ಹಾಕಿದೀನಿ. ಇದು ಯಾವಾಗ್ಲೂ ಕಣ್ಣಿರು ಸುರಿಸೋ ರೈತರಿಗೆ ಹಾಗೂ ರಾಜಕೀಯ ಮುಖಂಡರಿಗೆ ಉಪಯೋಗ ಆಗುತ್ತೆ.
ಮುದ್ದೇಗೌಡರು:ಮುದ್ದೆ ತಿಂದ ತಕ್ಷಣ ಕಣ್ ಎಳ್ಕೊಂಡು ಹೋಗ್ತಿತ್ತು. ಈಗ ಯಾಕೋ ಕಾಂಪೋಸ್ ನುಂಗುದ್ರೂ ನಿದ್ದೆ ಹತ್ತುತ್ತಿಲ್ಲ. ಕೇಳ್ಕೊಂಡು ತೂಕಡಿಸೋಣ ಅಂದ್ರೆ ಲೋಕಲ್ ಭಾಷಣಗಳೂ ಇಲ್ಲ. ಕೇರಳದಲ್ಲಿ ಯಾರೋ ನಿದ್ದೆಗೆ ಆಯುರ್ವೇದ ಔಷಧಿ ಕೊಡ್ತಾರಂತೆ, ಅಲ್ಲಿಗೆ ಹೋಗೋಣ ಅಂದ್ಕೊಂಡಿದೀನಿ..ಹಾಗೇ ಬರ್ತಾ ನಮ್ ಪಕ್ಷದ ಬಗ್ಗೆ ಹೀನಾಯವಾಗಿ ಮಾತಾಡ್ದೋರಿಗೆ ನಿದ್ದೆ ಕೆಡಿಸೋಕೆ ಏನಾದ್ರೂ ಮದ್ದು, ನಿಂಬೇಹಣ್ಣು ತಂದೇ ತರ್ಬೇಕು ಅಂದ್ಕೊಂಡಿದೀನಿ..
ಹುಡ್ಕೋ ಕುಮಾರ್:ಸಂಜಯ್ ಬಾರು ಅವರ ಪುಸ್ತಕ ಸ್ವಲ್ಪ ಲೇಟಾಗಿ ಸಿಕ್ತು. ಇಲ್ಲ ಅಂದಿದ್ರೆ ಕೈ ಪಕ್ಷದೋರು ಬಾರಲ್ಲೇ ಕೂದಲು ಕಿತ್ಕೊಳೋ ಹಾಗೆ ಮಾಡ್ತಿದ್ದೆ. ಈಗ ಅದನ್ನ ಸ್ಟಡಿ ಮಾಡ್ತಿದೀನಿ. ಅದೇ ಮಾದರಿಲಿ ‘ಮೇಕಿಂಗ್ ಆಫ್ ಮುದ್ದರಾಮಯ್ಯ- ಭಾಗ್ಯ ಬಂಡಲ್ಸ್ ‘ ಅಂತ ಒಂದು ನಾವೆಲ್ ಬರೆಯೋ ಸಿದ್ಧತೇಲಿದೀನಿ.ಹಾಗೇ ಒಂದು ಪದ್ಯ ಬರ್ದಿದೀನಿ ಕೇಳಿ..
ಸಂಜಯ ಬರು
ಎಬ್ಸಿದ್ದಾರೆ ಕೈ ಸಿಬಿರು
ಸಿಂಗ್ ಬರೀ ಡಾಲು
ಸೋನಿಯಾದೇ ಡೌಲು?
ಚಂದನ್ ಕಣಿ:‘ದೇಹಕೆ ಉಸಿರೇ ಸದಾ ಭಾರ, ಇಲ್ಲ ಆಧಾರ’ ಈ ಹಳೇ ಹಾಡಿಗೆ ‘ಕೈ ಪಕ್ಷಕೆ ಸಂಜಯ ಸದಾ ಭಾರ, ಆರೋಪಕಿಲ್ಲ ಆಧಾರ’ ಅಂತ ಹೊಸ ಟ್ಯೂನ್ ಹಾಕ್ತಿದೀನಿ. ಎಲ್ಲರ ಅಧಿಕೃತ, ಅನಧಿಕೃತ ಹೆಂಡ್ತೀರನ್ನ ಹುಡುಕೋ ಒಂದು ಹೊಸ ಸಾಫ್ಟ್ವೇರ್ ಡವಲಪ್ ಮಾಡ್ಬೇಕು ಅಂತ ಪ್ಲಾನ್ ಮಾಡ್ತಿದೀನಿ ಮತ್ತಷ್ಟು ಓದು
ವಿಡಂಬನೆ : ರಾಮನ್ ದೇವನ್ ಟೀ!
– ತುರುವೇಕೆರೆ ಪ್ರಸಾದ್
ಗುದ್ಲಿಂಗ ತನ್ನ ಗುಡ್ಲು ಹೋಟ್ಲಲ್ಲಿ ಪುಕ್ಕಟೆ ಟೀ ಕೊಡ್ತಿದಾನೆ ಅಂತ ಊರೆಲ್ಲಾ ಗುಲ್ಲಾಗಿತ್ತು. ಎಂಜಲು ಕೈಲಿ ಕಾಗೆ ಓಡಿಸ್ದೋನು, ಟೀಗೆ ಹುಣಿಸೇಬೀಜ ಕುಟ್ ಹಾಕಿ ಬೇಸ್ ಕೊಡ್ತಿದ್ದೋನು, ಮೂರು ದಿನದ ಹಿಂದಿನ ಒಡೆದ ಹಾಲಿಗೆ ಸೋಡಾ ಹಾಕ್ತಿದ್ದೋನು ಪುಕ್ಕಟೆ ಟೀ ಕೊಡೋಕೆ ಹೇಗೆ ಸಾಧ್ಯ ಅಂತ ಅಚ್ಚರಿ ಪಟ್ಟು ಪರ್ಮೇಶಿ ಪಟಾಲಂ ಗುದ್ಲಿಂಗನ ಟೀ ಹೋಟ್ಲು ಹತ್ರ ದೌಡಾಯಿಸುದ್ರು. ಗುದ್ಲಿಂಗನ ಹೋಟ್ಲು ತುಂಬಾ ಜನವೋ ಜನ! ಎಲ್ಲಾ ಪುಕ್ಕಟೆ ಟೀ ಹೀರ್ತಿದ್ರು, ಹಾಗೇ ಗುದ್ಲಿಂಗನ ಟೀ ಬಗ್ಗೆ, ರಾಜಕೀಯದ ಬಗ್ಗೆ ಬಿಸಿ ಬಿಸಿ ಚರ್ಚೆಗಳು ನಡೆದಿದ್ವು. ಎಲ್ಲಾ ಬೆಕ್ಕಸ ಬೆರಗಾಗಿ ನೋಡುದ್ರು.
‘ಏನೋ ಗುದ್ಲಿಂಗ? ಬಿಟ್ಟಿ ಟೀ ಸಮಾರಾಧನೆ ಮಾಡ್ತಿದೀಯ..’ಕೇಳಿದ ಪರ್ಮೇಶಿ
‘ ಹೂ ಕಣ್ರೋ! ಯಾವ್ದೋ ಕಂಪನಿಯೋರು ಸ್ಯಾಂಪಲ್ಗೆ ಅಂತ ಟೀ ಕೊಟ್ಟಿದ್ರು. ಅದನ್ನ ನಾನ್ಯಾಕೆ ದುಡ್ಡಿಗೆ ಮಾರ್ಕೊಬೇಕು ಅಂತ ಜನಕ್ಕೆ ಫ್ರೀ ಟೀ ಕೊಡ್ತಿದೀನಿ. ಕೆರೆಯ ನೀರನು ಕೆರೆಗೆ ಚೆಲ್ಲಿ’ ಅಂತಾರಲ್ಲ ಹಾಗೆ ಎಂದು ಹಲ್ಕಿರಿದ.
ವಿಡಂಬನೆ:ಕಟ್ಟುವೆವು ಕಸದ ನಾಡೊಂದನು!
– ತುರುವೇಕೆರೆ ಪ್ರಸಾದ್
ಮೊನ್ನೆ ಮೊನ್ನೆ ನಿಧಾನಸೌಧದದಲ್ಲಿ ಮಂತ್ರಿಗಳೊಬ್ಬರು ತಮ್ಮ ಕಛೇರಿಯ ಗೋಡೆ ಒಡೆದ ಹಿನ್ನಲೆಯಲ್ಲಿ ಹಲವರು ಮತ್ಸದ್ದಿಗಳ ತರ್ಕ-ಕುತರ್ಕಗಳ ಸಾರಾಂಶ ಇಲ್ಲಿದೆ:
ಅನುಮಾನುಲು : ನಿಧಾನ ಸೌಧದ ಗೋಡೆ ಒಡೆದಿದ್ರಲ್ಲಿ ತಪ್ಪೇನೂ ಇಲ್ಲ. ನಾವು ಏನಾದ್ರೂ ಒಡುದ್ರೆ ದೊಡ್ಡ ಇಶ್ಯೂ ಮಾಡ್ತೀರಿ.ಆದ್ರೆ ನೀವು ದೊಡ್ ದೊಡ್ಡೋರು ಎಲ್ಲಾ ಉರುಳುಸ್ತಿದ್ರೂ ಕೇಳೋರೇ ಇಲ್ಲ..ಈಗ ಗೋಡೆ ಒಡೆದಿದ್ರಿಂತ ಏನು ಆಕಾಶ ತಲೆ ಮೇಲೆ ಬಿದ್ದಿದೆಯಾ?ಡಿಶ್ಕುಂ ಕುಮಾರ್ ನನ್ ರೂಂ ಮೇಲೆ ಕಣ್ ಹಾಕಿದ್ರು. ಅವರು ಗೋಡೆ ಒಡೀದೆ ಬಿಡ್ತಿದ್ರಾ? ಶತಶತಮಾನಗಳಿಂದ ಕಟ್ಟಿರೋ ಜಾತಿ, ಮತ,ಪಂಥಗಳ ಗೋಡೆಯನ್ನು ಒಡೀರಿ, ಎಲ್ಲಾ ಈಚೆ ಬನ್ನಿ ಅಂತ ನಮ್ ಸಾಹಿತಿಗಳು ಹೇಳ್ತಾನೇ ಇರಲ್ವಾ? ನಾಲ್ಕು ಗೋಡೆ ಶಿಕ್ಷಣ ಅಂತ ಹೀಗಳೆಯಲ್ಲವಾ? ಏನೇ ಸುಧಾರಣೆ ಆದ್ರೂ ಮೊದ್ಲು ನಿಧಾನಸೌಧದಿಂದ ಆಗ್ಬೇಕು ಅಂತ ಹೇಳಲ್ವಾ? ಗೋಡೆ ಒಡೆಯೋದನ್ನೂ ಅಲ್ಲಿಂದಲೇ ಶುರು ಮಾಡಿದೀವಿ..ಇದೂ ಒಂದು ಆದರ್ಶ ಅಂತ ನಿಮಗ್ಯಾಕನಿಸಲ್ಲ..?
ವಿಡಂಬನೆ:ಪೊರೆ ಪೊರೆ ಪೊರಕೆ..!
– ತುರುವೇಕೆರೆ ಪ್ರಸಾದ್
ದೆಹಲಿಲಿ ಆಮ್ ಆದ್ಮಿ ಪಕ್ಷ ‘ಹಾಥ್ ಕಾ ಸಫಾಯಾ’ ಮಾಡಾದ ಮೇಲೆ ದೇಶದ ಎಲ್ಲಾ ಪಕ್ಷಗಳನ್ನೂ ಗುಡಿಸಿ ಗುಂಡಾಂತರ ಮಾಡುತ್ತೆ ಅನ್ನೋ ಹಸಿ ಬಿಸಿ ಸುದ್ದಿ ಹಿನ್ನಲೆಯಲ್ಲಿ ಧೂಮಕೇತು ಸಂಪಾದಕ ಪರ್ಮೇಶಿ ಕನ್ನಡ ನಾಡಿನ ಖ್ಯಾತ ನಾಮರು ಹಾಗೂ ಆಮ್ ಆದ್ಮಿಗಳಿಗೆ ಕೇಜ್ರಿವಾಲ್, ಅವರ ಪೊರಕೆ ಗೊತ್ತಾ? ಪೊರಕೆ ಎಫೆಕ್ಟ್ ಸಿಕ್ಕಾಪಟ್ಟೆ ಡ್ಯಾಮೇಜ್ ಮಾಡಿದೆ ಅಲ್ವಾ? ಕರ್ನಾಟಕದಲ್ಲೂ ಜನ ಪೊರಕೆ ಹಿಡ್ಕಂಡ್ರೆ ಏನ್ಮಾಡ್ತೀರ? ಇತ್ಯಾದಿ ಪ್ರಶ್ನೆಹಾಕಿ ಮಾಡಿದ ಸಂದರ್ಶನದ ಗಿಳಿಪಾಠ ಇಲ್ಲಿದೆ.
ಮುದ್ದುರಾಮಯ್ಯ: ಕ್ರೇಜಿ ಪೊರಕೆಗೆ ನೋ ಛಾನ್ಸ್! ನಮ್ಮನೆ ಕಸ ನಾವೇ ಗುಡಿಸ್ಕಂಡ್ರೆ ಬೇರೆಯವರು ಪರಕೆ ಹಿಡ್ಕಂಡು ಅಲ್ಲಾಡಿಸೋ ಛಾನ್ಸೇ ಇರಲ್ಲ..ನಾನು ಮೊದ್ಲೇ ಎಲ್ಲ ಕಾಂಗ್ರೆಸ್ ಕಳೆ ಬೆಳೀದಂಗೆ ಔಷ್ಧಿ ಹೊಡ್ದಿದ್ದೆ. ಎಲ್ಲೋ ಒಂದು ಸೇರ್ಕಂಡು ಬಿಟ್ಟಿತ್ತು.ಅದ್ನೂ ಗುಡಿಸಿ ಕ್ಲೀನ್ ಮಾಡಿದೀನಿ. ಮೊನ್ನೆ ಮೊನ್ನೆ ಇನ್ನೂ ಅಲ್ಲಾಡ್ತಿದ್ ಕೂಳೆನೂ ಕಿತ್ ಎಸ್ದಿದೀನಿ..! ದೊಡ್ ಮಠದೋರಿಗೆ ಎಲ್ಲಾ ಗುಡಿಸಿ ಹಾಕೋ ಕಾಂಟ್ರಾಕ್ಟ್ ಕೊಟ್ಟಿದೀನಿ. ಇಷ್ಟಕ್ಕೂ ನಮ್ದು ಹೈಟೆಕ್ ರಾಜ್ಯ..! ಪೊರಕೆ, ಗಿರಕೆ ಎಲ್ಲಾ ನಮ್ ಹತ್ರ ನಡೆಯಲ್ಲ..ನಮ್ದೇನಿದ್ರೂ ವಾಕ್ಯೂಮ್ ಕ್ಲೀನರ್ ಸಂಸ್ಕೃತಿ..! ಹಾಗೂ ಬೇಕು ಅಂದ್ರೆ ಅನ್ನಭಾಗ್ಯ, ಕ್ಷೀರ ಭಾಗ್ಯ, ಶಾದೀ ಭಾಗ್ಯದ ತರ ಪೊರಕೆ ಭಾಗ್ಯ ಅಂತ ಮನೆ ಮನೆಗೆ ಇಂಪೋರ್ಟೆಡ್ ಪೊರಕೆ ಸಪ್ಲೈ ಮಾಡ್ತೀವಿ..ನಾವು ಪೊರಕೆ ಹಿಡಿಯೋ ಹೆಣ್ ಮಗಳು ಹೇಳ್ದಂಗೆ ಕೇಳ್ಕಂಡಿರೋ ಮಂದಿ..ಏನೋ ಆ ಶೀಲಮ್ಮ, ಸ್ವಲ್ಪ ಏಮಾರುದ್ರು ಅಂದ್ರೆ ನಾವೂ ಏಮಾರ್ತೀವಾ ?’ಕೈಯ್ಯೇ’ಇಲ್ಲದೆ ಪೊರಕೆ ಹಿಡಿಯೋದು ಹೆಂಗೆ? ಇವತ್ತಲ್ಲ ನಾಳೆ ಆ ಪೊರಕೆನ ನಾವು ಹಿಡ್ಕೊತೀವಿ ಅನ್ನೋ ನಂಬಿಕೆ ನನಗಿದೆ..