ವಿಷಯದ ವಿವರಗಳಿಗೆ ದಾಟಿರಿ

Posts tagged ‘ವಿದ್ಯಾಭ್ಯಾಸ’

14
ಜೂನ್

ಖಾಸಗಿ ಕಾಲೇಜಿನ ಕಲಿಕೆ- ಬರೀ ಗಿಲೀಟಿನ ಬುಡುಬುಡಿಕೆ

Untitled56

ಶ್ರದ್ಧಾಹಿ ಪರಮಾಗತಿಃ-
● ನನ್ನ ಆಟೋ ಮಾರಿದರು ಮಗಳಿಗೆ ಪ್ರವೇಶ ದೊರೆಯಲಿಲ್ಲ
● ೯೫% ಅಂಕ ಪಡೆದರೂ ಕಾಲೇಜಿನಲ್ಲಿ ಸೀಟಿಲ್ಲ
● ಹಿಂದೂ ಧರ್ಮದ ಮಕ್ಕಳಿಗೆ ಪ್ರವೇಶವಿಲ್ಲ; ನಮ್ಮ ಕೋಮಿನ ಮಕ್ಕಳಿಗೆ ಆದ್ಯತೆ
● ಪೋಷಕರು ಭರಿಸಲಾಗದಷ್ಟು ಕಾಲೇಜುಗಳು ದುಬಾರಿ
● ದುಬಾರಿ ಕಾಲೇಜಿಗೆ ಸೇರಿಸಿದರೂ ಟ್ಯೂಷನ್ ಹೇಳಿಸಲೇಬೇಕು – ಸಾವಿರಾರು ರೂಪಾಯಿಗಳ ಧಂಧೆ
● ದುಬಾರಿ ಕಾಲೇಜಿಗೆ ಸೇರಿಸುವ ಕುಟುಂಬಗಳಲ್ಲಿ ಆದಾಯದ ಬಹು ಭಾಗ ಶುಲ್ಕಕ್ಕೆ ಹೋಗುವ ಕಾರಣ ಜೀವನದ ಹಲವು ಅಗತ್ಯತೆಗಳನ್ನು ಕಡಿತಗೊಳಿಸಿಕೊಂಡು ಮನೆಯ/ಮನಸ್ಸಿನ/ದೇಹದ ಆರೋಗ್ಯಕ್ಕೆ ಸಂಚಾಕಾರ ತಂದುಕೊಳ್ಳುವ ಸಾಧ್ಯತೆ ಹೆಚ್ಚು.
● ಇಷ್ಟೆಲ್ಲಾ ಕಷ್ಟ ಪಡುವ ತಾಯಿತಂದೆಯರಿಂದ ಅಥವಾ ಮಗುವೇ ಸಂವೇದನಾಶೀಲನಾಗಿದ್ದರೆ ಅದಕ್ಕೆ ಕಷ್ಟಗಳು ತಿಳಿದು ನೇರ ಅಥವಾ ಪರೋಕ್ಷ ಒತ್ತಡಕ್ಕೆ ಒಳಗಾಗಿ ವಿದ್ಯಾಭ್ಯಾಸಕ್ಕೆ ಆಡ್ದಿಯಾಗಬಹುದು.
● ಇದು ಒಂದು ಆರೋಗ್ಯಕರ ಬೆಳವಣಿಗೆ ಅಲ್ಲ.
● ಕ್ರಿಶ್ಚಿಯನ್ ಅಥವಾ ಮುಸಲ್ಮಾನರ ವಿದ್ಯಾ ಸಂಸ್ಥೆಗಳಿಗೆ ಸೇರಿ ಅಲ್ಲಿ ಹೂವು ಮುಡಿಯುವಂತಿಲ್ಲ, ಹಣೇ ಕುಂಕುಮ ಇಡುವಂತಿಲ್ಲ, ಸೀರೆ ಉಡುವಂತಿಲ್ಲ, ಬಳೆ ತೊಡುವಂತಿಲ್ಲ ಎಂಬ ತಲೆಹರಟೆ ಅಸಹಿಷ್ಣತೆಯ ಪರಮಾವಧಿಯ ನಿಷೇಧಗಳನ್ನು ಅನುಭವಿಸಬೇಕು. ಇನ್ನು ಲವ್ ಜಿಹಾದು/ಪ್ರೇಮಕ್ಕೆ ಒತ್ತಡ ಹಾಕುವುದು ಇತ್ಯಾದಿ ಸಮಸ್ಯೆಗಳು ಸೇರಿ ‘ಕಾಸು ಹಾಳು ತಲೆಯು ಬೋಳು’ ಎಂಬ ಗಾದೆಯಂತೆ ಆಗುವುದೊಂದು ಅಭಾಸ.
ಈ ಸಮಸ್ಯೆಗಳು ಎಂದಿಗೂ ಇದ್ದಂತಹವೇ.ಆದರೆ ಇತ್ತೀಚೆಗೆ ಅದರ ವ್ಯಾಪ್ತಿ, ಗಹನತೆ ಹೆಚ್ಚಾಗಿದೆ. ಮತ್ತಷ್ಟು ಓದು »

19
ಮಾರ್ಚ್

ಪರೀಕ್ಷೆಯ ಲೆಕ್ಕಾಚಾರ

– ನಾಗೇಶ ಮೈಸೂರು

2284916ಒಲ್ಲದ ಮನಸ್ಸಿನಿಂದ ಪುಸ್ತಕ ಹಿಡಿದು ಪರೀಕ್ಷೆಗೆ ಓದಿಕೊಳ್ಳಲು ಒದ್ದಾಡುತ್ತಿದ್ದ ಮಗನನ್ನು ಸಾಮ, ದಾನ, ದಂಡ, ಭೇಧೋಪಾಯಗಳೆಲ್ಲದರ ಬಳಕೆ ಮಾಡುತ್ತ ಸಿದ್ಧಗೊಳಿಸಲು ಹೆಣಗಾಡುತ್ತಾ ಕುಳಿತಿದ್ದೆ. ಅದೇ ಹೊತ್ತಿನಲ್ಲಿ ಟೀವಿಯಲ್ಲಿ ಪ್ರವೇಶ ಪರೀಕ್ಷೆಯ ನಂತರದ ಸವಾಲು, ಮತ್ತದನ್ನೆದುರಿಸುವ ಬಗೆಯನ್ನು ಕುರಿತು ಆತಂಕಪೂರ್ಣ ಚರ್ಚೆ ನಡೆಯುತ್ತಾ ಇತ್ತು. ಒಂದು ಕಾಲದಲ್ಲಿ ನಾವೂ ಇದನ್ನೆಲ್ಲಾ ಅನುಭವಿಸಿ ಮುಂದೆ ಸಾಗಿದ್ದವರೇ. ಆದರೆ ಆ ದಿನದಲ್ಲಿ ಕಾಡಿದ್ದ ಅದೆಷ್ಟೋ ಆತಂಕ, ಒತ್ತಡಗಳು ಕೇವಲ ಆತಂಕ, ಅಜ್ಞಾನ, ನಿಖರ ಗಮ್ಯವಿಲ್ಲದ ಒದ್ದಾಟಗಳ ಕಾರಣದಿಂದ ಉಂಟಾದದ್ದು. ಇಂದು ತಿರುಗಿ ನೋಡಿದರೆ ನಾನು ಓದಿದ್ದಕ್ಕೂ, ಮಾಡುತ್ತಿರುವ ಕೆಲಸಕ್ಕೂ ನೇರ ಸಂಬಂಧವೇ ಇಲ್ಲ. ವಿದ್ಯಾರ್ಹತೆ ಕೇವಲ ಕೆಲಸ ಗಿಟ್ಟಿಸುವ ಆರಂಭದ ರಹದಾರಿಯಾಯ್ತೆಂಬುದನ್ನು ಬಿಟ್ಟರೆ ಮಿಕ್ಕೆಲ್ಲಾ  ಹೊಸ ಹೋರಾಟ, ಪರೀಕ್ಷೆಗಳೇ ಎದುರಾದದ್ದು ವಾಸ್ತವ ಸತ್ಯ. ನಮ್ಮ ವಿದ್ಯಾರ್ಹತೆ, ವಿದ್ಯಾಭ್ಯಾಸ ಆ ಹೋರಾಟಕ್ಕೆ ನಮ್ಮನ್ನು ಸಿದ್ದಪಡಿಸಿರಲೇ ಇಲ್ಲ. ಆದರೂ ನಾವು ಅದೇ ಮರೀಚಿಕೆಯ ಹಿಂದೆ ನಮ್ಮ ಭವಿಷ್ಯದ ಪೀಳಿಗೆಯನ್ನು ತಳ್ಳುತ್ತ ಕುರಿಮಂದೆಗಳ ಹಾಗೆ ಸಾಗುತ್ತಿದ್ದೇವಲ್ಲ ಎಂದೆನಿಸಿ ಖೇದವೂ ಆಯ್ತು.
ಮತ್ತಷ್ಟು ಓದು »

17
ಜನ

ಮಕ್ಕಳಿಗೆ ಉತ್ತಮ ಮೌಲ್ಯಗಳನ್ನು (ವ್ಯಾಲ್ಯೂಸ್) ಕಲಿಸುವುದು ಹೇಗೆ?

-ರಾವ್ ಎವಿಜಿ

ಮೌಲ್ಯಗಳು ಎಂದರೇನು ಎಂಬ ಪ್ರಶ್ನೆಗೆ ‘ನಿರ್ದಿಷ್ಟ ವಸ್ತು, ಕ್ರಿಯೆ ಮತ್ತು ಸನ್ನಿವೇಶಗಳಿಗೆ ವ್ಯಕ್ತಿಗಳು ನೀಡುವ ಬೆಲೆಗೆ ಸಂಬಂಧಿಸಿದ ಅದ್ವಿತೀಯ ಶಾಬ್ದಿಕ ಪರಿಕಲ್ಪನೆಗಳು’ ಎಂಬ ಸೈದ್ಧಾಂತಿಕ ಉತ್ತರ ನೀಡಬಹುದಾದರೂ ಎಲ್ಲರಿಗೂ ಸುಲಭವಾಗಿ ಅರ್ಥವಾಗುವ ಸರ್ವಸಮ್ಮತ ಉತ್ತರ ನೀಡುವುದು ಕಷ್ಟ. ಕೆಲವು ವಿಶೇಷಜ್ಞರು ವ್ಯಕ್ತಿಯ ಮನೋಧರ್ಮಗಳ (ಆಟಿಟ್ಯೂಡ್) ಸಂಘಟನೆಯನ್ನು ಮೌಲ್ಯ ಎಂದು ಉಲ್ಲೇಖಿಸುವುದೂ ಉಂಟು. ಅದೇನೇ ಇರಲಿ ವರ್ತನೆಯ ನೈತಿಕತೆಗೆ ಸಂಬಂಧಿಸಿದಂತೆ ಯಾವುದು ಸರಿ ಯಾವುದು ತಪ್ಪು, ಜೀವನದಲ್ಲಿ ಯಾವುದಕ್ಕೆ ಎಷ್ಟು ಪ್ರಾಮುಖ್ಯ ನೀಡಬೇಕು, ಜೀವನದ ಗುರಿ ಏನಾಗಿರಬೇಕು ಮುಂತಾದವನ್ನು ನಿರ್ಧರಿಸುವುದರಲ್ಲಿ ನಾವು ಒಪ್ಪಿಕೊಂಡಿರುವ ಮೌಲ್ಯಗಳು ನಿರ್ಣಾಯಕ ಪಾತ್ರ ವಹಿಸುತ್ತವೆ ಎಂಬುದರಲ್ಲಿ ಸಂಶಯವಿಲ್ಲ. ಆದರೂ ಬಹುತೇಕ ಸನ್ನಿವೇಶಗಳಲ್ಲಿ ನಾವು ಕೈಗೊಳ್ಳುವ ಮೌಲ್ಯಾಧಾರಿತ ತೀರ್ಮಾನಗಳು ವ್ಯಕ್ತಿನಿಷ್ಠವೂ ಸಾಪೇಕ್ಷವೂ ಆಗಿರುತ್ತವೆ. (ಅ) ನಿರ್ದಿಷ್ಟ ಅಂಶಕ್ಕೆ ನಾವು ಎಷ್ಟು ಬೆಲೆ ಕೊಡುತ್ತೇವೆ ಎಂಬುದನ್ನು ಸೂಚಿಸುವ ಪರಿಮಾಣಾತ್ಮಕ ಆಯಾಮ, (ಆ) ನಿರ್ದಿಷ್ಟ ಮೌಲ್ಯಕ್ಕೆ ನಾವು ಎಷ್ಟು ಬದ್ಧರಾಗಿರುತ್ತೇವೆ ಎಂಬುದನ್ನು ಸೂಚಿಸುವ ಗುಣಾತ್ಮಕ ಆಯಾಮ ಮತ್ತು (ಇ) ನಮ್ಮಲ್ಲಿ ಅಂತಸ್ಥವಾಗಿರುವ ಮೌಲ್ಯಗಳ ನಡುವಿನ ಸಂಬಂಧವನ್ನು ಸೂಚಿಸುವ ಅಂತರ್- ಸಂಬಂಧ ಆಯಾಮ – ಈ ಮೂರು ಆಯಾಮಗಳು ನಮ್ಮಲ್ಲಿ ಅಂತಸ್ಥವಾಗಿರುವ ಮೌಲ್ಯಗಳಿಗೆ ಇರುತ್ತವೆ.

ಮತ್ತಷ್ಟು ಓದು »