ವಿಷಯದ ವಿವರಗಳಿಗೆ ದಾಟಿರಿ

Posts tagged ‘ವೇದ’

25
ಏಪ್ರಿಲ್

ಸಾಯಣರ ವೇದವ್ಯಾಖ್ಯಾನವು ಏನನ್ನು ತಿಳಿಸುತ್ತದೆ?

– ವಿನಾಯಕ ಹಂಪಿಹೊಳಿ
vedaಸಾಯಣಾಚಾರ್ಯರು ಋಗ್ವೇದಕ್ಕೆ ಭಾಷ್ಯವನ್ನು ಬರೆಯುವಾಗ ಮೊದಲು ವೇದ ಎಂದರೇನು ?, ಅದರ ಲಕ್ಷಣವೇನು ಎಂಬುದರ ಕುರಿತು ಒಂದು ದೀರ್ಘ ಚರ್ಚೆಯನ್ನು ಮಾಡಿದ್ದಾರೆ. ಅದರಲ್ಲಿ ಪೂರ್ವಪಕ್ಷದ ವಾದಗಳನ್ನೆಲ್ಲ ಒಂದೊಂದಾಗಿ ಪರಿಗಣಿಸಿ, ವೇದದ ಲಕ್ಷಣದ ಕುರಿತು ತಮ್ಮ ಸಿದ್ಧಾಂತವನ್ನು ಮಂಡಿಸಿ, ಪೂರ್ವಪಕ್ಷಿಯ ಸಂದೇಹಗಳನ್ನೆಲ್ಲ ಪರಿಹರಿಸುತ್ತಾ ಸಾಗಿದ್ದಾರೆ. ಆ ಚರ್ಚೆ ಏನು ಎಂಬುದು ಮುಖ್ಯವಲ್ಲ. ಆ ಚರ್ಚೆಯಲ್ಲಿ ಪೂರ್ವಪಕ್ಷಿಗಳು ಮತ್ತು ಸಿದ್ಧಾಂತಿಗಳು ವೇದದ ಕುರಿತು ಯಾವ ದೃಷ್ಟಿಕೋಣವನ್ನು ಇಟ್ಟುಕೊಂಡಿದ್ದರು ಎಂಬುದು ಇಲ್ಲಿ ಮುಖ್ಯ. ಹೀಗಾಗಿ ಆ ಚರ್ಚೆಯ ಆದಿಭಾಗದ ಸಾರಾಂಶವನ್ನು ಮಾತ್ರ ನೋಡೋಣ. ಮೊದಲು ಪೂರ್ವಪಕ್ಷದ ವಾದಗಳನ್ನು ಪಟ್ಟಿ ಮಾಡಿ ನಂತರ ಸಾಯಣರು ಕೊಟ್ಟ ವೇದದ ವ್ಯಾಖ್ಯಾನವನ್ನು ನೀಡಲಾಗಿದೆ. ಪೂರ್ವಪಕ್ಷದ ಮತ: ವೇದ ಎನ್ನುವದು ಯಾವದನ್ನು? ವೇದಕ್ಕೆ ಲಕ್ಷಣಗಳೇನಾದರೂ ಇವೆಯೇ? ಪ್ರತ್ಯಕ್ಷ, ಅನುಮಾನ ಮತ್ತು ಆಗಮ ಎಂಬ ಮೂರು ಪ್ರಮಾಣಗಳಿವೆಯಲ್ಲ (ಊಟ ಮಾಡಿದರೆ ಹೊಟ್ಟೆ ತುಂಬುತ್ತದೆ ಎನ್ನುವದಕ್ಕೆ ಪ್ರತ್ಯಕ್ಷ ಪ್ರಮಾಣ, ಹೊಗೆಯಾಡುತ್ತಿರುವಲ್ಲಿ ಬೆಂಕಿಯಿರಬಹುದೆಂಬುದಕ್ಕೆ ಅನುಮಾನ ಪ್ರಮಾಣ, ಯಾಗದಿಂದ ಸ್ವರ್ಗಪ್ರಾಪ್ತಿ ಎಂಬುದಕ್ಕೆ ಆಗಮ ಪ್ರಮಾಣ), ಅವುಗಳಲ್ಲಿ ಕೊನೆಯ ಆಗಮ ಪ್ರಮಾಣವೆಂಬುದೇ ವೇದದ ಲಕ್ಷಣವೆನ್ನಲು ಸಾಧ್ಯವಿಲ್ಲ. ಏಕೆಂದರೆ ಮನ್ವಾದಿ ಸ್ಮೃತಿಗಳೂ ಆಗಮಗಳಾಗಿವೆ. ವೇದ ಎನ್ನುವದು ಸ್ವರ್ಗ ಅಥವಾ ಮೋಕ್ಷಕ್ಕೆ ಸಾಧನ ಎಂಬ ಲಕ್ಷಣವನ್ನೂ ಹೇಳಲು ಸಾಧ್ಯವಿಲ್ಲ ಕಾರಣ ಇತಿಹಾಸ ಪುರಾಣಗಳೂ ಸ್ವರ್ಗ ಅಥವಾ ಮೋಕ್ಷಕ್ಕೆ ಸಾಧನಗಳಾಗಿರುತ್ತವೆ. ಆಗಮವೇ ವೇದದ ಲಕ್ಷಣ ಎನ್ನುವದು ಅತಿವ್ಯಾಪ್ತಿದೋಷ ಒಳಗೊಂಡಿದೆ. ಬೆಳ್ಳಗಿರುವದು ಹಾಲಿನ ಲಕ್ಷಣ ಎಂದರೆ, ಸುಣ್ಣವೂ ಬೆಳ್ಳಗಿರುವದರಿಂದ, ಈ ಲಕ್ಷಣವಾಕ್ಯವು ಅತಿವ್ಯಾಪ್ತಿದೋಷ (Necessary But Not Sufficient) ಎಂಬ ದೋಷವನ್ನು ಹೊಂದಿರುತ್ತದೆ. ಮತ್ತಷ್ಟು ಓದು »

22
ಏಪ್ರಿಲ್

ಸೆಮೆಟಿಕ್ ರಿಲಿಜನ್ನಿನ ಪವಿತ್ರ ಗ್ರಂಥಗಳೂ ಮತ್ತು ಹಿಂದೂ ಧರ್ಮದ ವೇದಗಳೂ

– ವಿನಾಯಕ ಹಂಪಿಹೊಳಿ

Pustakaಸೆಮೆಟಿಕ್ ರಿಲಿಜನ್ನಿನ ಅನುಯಾಯಿಗಳು ತಮ್ಮ ಪವಿತ್ರ ಗ್ರಂಥಗಳ ರಚನೆಯನ್ನು ಕಾಲದ ಪರಿಧಿಯೊಳಗೇ ಕಾಣುತ್ತಾರೆ.ಸೃಷ್ಟಿಯ ನಂತರವೇ,ಆಡಮ್,ಮೋಸಸ್ ಬರುವದರಿಂದ ಸೃಷ್ಟಿ ಮೊದಲು, ಹಳೆ ಒಡಂಬಡಿಕೆ ನಂತರ ಎಂಬುದು ಅವರ ನಂಬಿಕೆ ಮತ್ತು ಅದು ತರ್ಕಕ್ಕೆ ಒಪ್ಪತಕ್ಕದ್ದೂ ಆಗಿದೆ. ಜೀಸಸ್ ನಂತರವೇ ಹೊಸ ಒಡಂಬಡಿಕೆ, ಪೈಗಂಬರರ ನಂತರವೇ ಖುರಾನ್ ಆವೃತ್ತಿ ಎಂಬುದನ್ನೂ ಒಪ್ಪುತ್ತಾರೆ. ಇವರೆಲ್ಲರಿಗೂ ಸೃಷ್ಟಿ ಒಂದೇ ಆಗಿರುತ್ತದೆ. ಕೇವಲ ಒಮ್ಮೆ ಮಾತ್ರ ಸೃಷ್ಟಿಯಾಗಿರುವ ಇಲ್ಲಿ ಪ್ರಳಯದ ನಂತರ ಇನ್ನೊಂದು ಸೃಷ್ಟಿ, ನಂತರ ಮತ್ತೊಂದು ಸೃಷ್ಟಿ, ಈ ಸೃಷ್ಟಿಯ ಹಿಂದಿನ ಇನ್ನೊಂದು ಸೃಷ್ಟಿ ಇವುಗಳ ಬಗ್ಗೆ ಅವರು ನಂಬುವದೇ ಇಲ್ಲವಾದ್ದರಿಂದ, ಅವರ ಪವಿತ್ರ ಗ್ರಂಥಗಳಿಗೆ ಕಾಲದ ಎಲ್ಲೆಕಟ್ಟುಗಳು ಇರುವದು ಯುಕ್ತವೇ ಆಗಿದೆ ಎಂದರೂ ತಪ್ಪಿಲ್ಲ.

ಗಮನಿಸಬೇಕಾದ ಅಂಶವೆಂದರೆ, ನಂತರ ಬಂದ ಸೆಮೆಟಿಕ್ ರಿಲಿಜನ್ ಹಿಂದಿನಿಂದ ಬಂದ ರಿಲಿಜನ್ ಅನ್ನು ತಿರಸ್ಕರಿಸದೇ, ಕೇವಲ ಅದರ ಪರಿಷ್ಕೃತ ಆವೃತ್ತಿ ಎಂಬುದಾಗಿ ಮಾತ್ರ ಪರಿಗಣಿಸಲ್ಪಡುತ್ತದೆ. ಉದಾಹರಣೆಗೆ, ಹಳೇ ಒಡಂಬಡಿಕೆಯಲ್ಲಿ ಪ್ರಕ್ಷೇಪಗಳಾಗಿರುವದರಿಂದ ಜೀಸಸ್ ಮುಖಾಂತರ ಮೂಲ ಬೋಧನೆಗಳನ್ನು ಹೊಸ ಒಡಂಬಡಿಕೆಯಲ್ಲಿ ನೀಡಲಾಗಿದೆ ಎಂದು ಕ್ಯಾಥೋಲಿಕ್ ಜನರೂ,ಎರಡೂ ಒಡಂಬಡಿಕೆಯಲ್ಲಿ ಪ್ರಕ್ಷೇಪಗಳಾಗಿರುವದರಿಂದ ಖುರಾನಿನಲ್ಲಿ ಇನ್ನೊಮ್ಮೆ ಮೂಲ ಬೋಧನೆಗಳನ್ನು ನೀಡಲಾಗಿದೆ ಎಂದು ಮುಸ್ಲಿಮ್ ಜನರೂ ಭಾವಿಸುತ್ತಾರೆ. ವಿಶೇಷವೆಂದರೆ ಖುರಾನು ತನ್ನ ಹಿಂದಿನ ಗ್ರಂಥಗಳಂತೆ ಭವಿಷ್ಯದಲ್ಲಿ ಇನ್ನೊಬ್ಬ ದೇವದೂತನ ಆಗಮನವನ್ನು ಅಲ್ಲಗಳೆದು ಅದೇ ಅಂತಿಮ ಎಂದು ಹೇಳಿಕೊಂಡಿದೆ.
ಮತ್ತಷ್ಟು ಓದು »

6
ಜನ

ಸಮಾನೋ ಮಂತ್ರ: ಸಮಿತಿ: ಸಮಾನೀ-ಒಂದು ಚಿಂತನೆ

-ಹರಿಹರಪುರಶ್ರೀಧರ್

ಅನೇಕ ದಿನಗಳಿಂದ ನನ್ನ ಮನದೊಳಗೆ ಒಂದು ಚಿಂತೆ ಕಾಡುತ್ತಿದೆ.ನಮಗೆಲ್ಲಾ ಜನ್ಮಕೊಟ್ಟಈ ನೆಲಕ್ಕೆ ಪುಣ್ಯಭೂಮಿ, ಮೋಕ್ಷಭೂಮಿ, ತ್ಯಾಗಭೂಮಿ,ದೇವಭೂಮಿ, ಎಂದೆಲ್ಲಾ ಕವಿಗಳು ಬಣ್ಣಿಸಿದ್ದಾರೆ.ನಮ್ಮ ಋಷಿಪುಂಗವರ ತಪಸ್ಸಿನಿಂದ, ಅವರ ಆದರ್ಶಮಯ ಜೀವನದಿಂದ ನಮ್ಮ ದೇಶಕ್ಕೆ “ವಿಶ್ವಗುರುವಿನ” ಸ್ಥಾನ ಲಭಿಸಿತ್ತು ಎಂಬ ವಿಚಾರವನ್ನೂ ಸಹ ಕೇಳುತ್ತೇವೆ.ನಮ್ಮ ಈ ನೆಲದಲ್ಲಿಯೇ “ಮುತ್ತು ರತ್ನಗಳನ್ನು ಬಳ್ಳದಿಂದ ಅಳೆದು ಮಾರುತ್ತಿದರೆಂದೂ” ಕೇಳಿದ್ದೇವೆ.ಇವೆಲ್ಲದರ ಜೊತೆಗೆ ನಮ್ಮ ನಿತ್ಯ ಸಂಕಲ್ಪವಾದರೋ ” ಸರ್ವೇ ಭವಂತು ಸುಖಿನ:…….ಮಾ ಕಶ್ಚಿತ್ ದು:ಖ ಭಾಗ್ಭವೇತ್”-ಎಲ್ಲರೂ ಸುಖವಾಗಿರಬೇಕು…….., ಯಾರಿಗೂ ದು:ಖ ಬರುವುದು ಬೇಡ”. ಇದು ನಮ್ಮ ನಿತ್ಯ ಪ್ರಾರ್ಥನೆ ಯಾಗಿತ್ತು. ಆದರೆ ಎಲ್ಲೋ ಎನೋ ತಪ್ಪಾಗಿದೆಯಲ್ಲಾ! ಯಾವುದೋ ಕೊಂಡಿ ಕಳಚಿದೆಯಲ್ಲಾ!!

 ಮೊನ್ನೆ ನಾನು ಅಗ್ನಿಹೋತ್ರ ಮಾಡುತ್ತಾ ಕುಳಿತಿದ್ದೆ. ನಮ್ಮಕ್ಕ ನಮ್ಮ ಮನೆಗೆ ಬಂದವರು ” ಇದೇನೋ ನೀನು “ಹೋಮ ಮಾಡುತ್ತಿದ್ದೀಯಾ? ಯಜುರ್ವೇದವರು ಮಾಡಬೇಕಾದ್ದು,ಋಗ್ವೇದಿಯಾದ ನೀನು ಮಾಡುತ್ತಿದ್ದೀಯಲ್ಲಾ!!” ವೇದಸುಧೆಯ ವಾರ್ಷಿಕೋತ್ಸವದಲ್ಲಿ ನಡೆದ ಅಗ್ನಿಹೋತ್ರ ಕಾರ್ಯಕ್ರಮದಲ್ಲಿ ಸ್ವತ: ಅಗ್ನಿಹೋತ್ರ ಮಾಡಿದ್ದ ನಮ್ಮ ಅಕ್ಕ ಶ್ರೀ ಸುಧಾಕರ ಶರ್ಮರಿಂದ ಅಗ್ನಿಹೋತ್ರದ ಅರ್ಥವಿವರಣೆಯನ್ನು ಸವಿಸ್ತಾರವಾಗಿ ಕೇಳಿದ್ದರು. ಅಂದು ಮೆಚ್ಚುಗೆ ವ್ಯಕ್ತಪಡಿಸಿದ್ದವರು. ಇವರೇ. ಆದರೆ ಅವರ ಬಾಯಲ್ಲಿಯೇ ಈ ಪ್ರಶ್ನೆ. ನಾನು ನಮ್ಮಕ್ಕನಿಗೆ ಹೇಳಿದೆ” ಆರೋಗ್ಯ ನಿಮಗೆ ಮಾತ್ರ ಬೇಕೋ? ಬೇರೆಯವರಿಗೆ ಬೇಡವೋ?

ಅವರು ನಿರುತ್ತರರಾಗಿದ್ದರು.

13
ಸೆಪ್ಟೆಂ

ಅಶ್ವಮೇಧ ಯಾಗ…

– ವೇದಸುಧೆ

ಅಶ್ವಮೇಧ ಯಾಗ: ಶತಪಥ ಬ್ರಾಹ್ಮಣದಲ್ಲಿ ಅಶ್ವಮೇಧದ ಬಗ್ಗೆ ಹೇಳಿದೆ…….. “ಅಶ್ವಂ ಇತಿ ರಾಷ್ಟ್ರಂ” ಅದರ ವಿವರಣೆ ಹೀಗಿದೆ. ಶ್ವ: ಅಂದರೆ ನಾಳೆ. ಅಶ್ವ: ಅಂದರೆ ಯಾವುದಕ್ಕೆ ನಾಳೆ ಇಲ್ಲವೋ ಅದು.ಯಾವುದಕ್ಕೆ ನಾಳೆ ಎನ್ನುವುದು ಇಲ್ಲವೋ ಅದಕ್ಕೆ ನಿನ್ನೆ ಎಂಬುದೂ ಇಲ್ಲ. ಅಂದರೆ ಯಾವುದು ನಿರಂತರವಾಗಿ ಇದ್ದೇ ಇರುತ್ತದೋ ಅದಕ್ಕೆ ನಿನ್ನೆ ನಾಳೆಗಳಿಲ್ಲ.ಯಾವುದಕ್ಕೆ ನಿನ್ನೆ ನಾಳೆಗಳಿರುತ್ತದೆ ಎಂದರೆ ಯಾವುದುಶಾಶ್ವತ ವಲ್ಲವೋ ಅದಕ್ಕೆ ಇರುತ್ತದೆ. ನಿನ್ನೆ ಇತ್ತು, ಇವತ್ತು ಇದೆ. ನಾಳೆ ಗೊತ್ತಿಲ್ಲ ಅಂದರೆ ಅದು ಶಾಶ್ವತವಲ್ಲ ಎಂದಾಯ್ತು.ಯಾವುದು ನಿನ್ನೆ ಇತ್ತು, ಇವತ್ತೂ ಇದೆ, ನಾಳೆಯೂ ಇರುತ್ತದೋ ಅದು ಮಾತ್ರ ಶಾಶ್ವತ.ಯಾವುದು ನಿರಂತರವಾಗಿರುತ್ತದೆ, ಅದು ಅಶ್ವ.ಆದ್ದರಿಂದಲೇ “ಅಶ್ವಂ ಇತಿ ರಾಷ್ಟ್ರಂ” ನಾನು ಇವತ್ತು ಇದ್ದೀನಿ, ನಾಳೆ ಗೊತ್ತಿಲ್ಲ.ಆದರೆ ರಾಷ್ಟ್ರಶಾಶ್ವತ.[“ದೇಹ ನಶ್ವರವೆಂದು, ದೇಶಶಾಶ್ವತವೆಂದು, ನಶ್ವರವುಶಾಶ್ವತಕೆ ಮುಡಿಪಾಗಲೆಂದು” ಎಂಬ ಗೀತೆ ಕೇಳಿರುವೆ] ನಾವೆಲ್ಲಾ ಪ್ರಜೆಗಳು ಇಂದು ಇದ್ದೀವಿ. ಇನ್ನೊಂದು ಐವತ್ತು ವರ್ಷ ನಾವು ಇರಬಹುದೇನೋ , ಮತ್ತೆ ಬೇರೆ ಪ್ರಜೆಗಳ ಹುಟ್ಟು, ಸಾವು, ಇದೆಲ್ಲಾ ನಡೆಯುತ್ತಲೇ ಇರುತ್ತದೆ.ಎಷ್ಟೋ ತಲೆಮಾರು ಕಳೆಯುತ್ತಲೇ ಇರುತ್ತದೆ ,ಅದರೆ ರಾಷ್ಟ್ರ ಮಾತ್ರ ನಿರಂತರ. ನಿರಂತರವಾಗಿರುವ ಭೂಮಿ ರಾಷ್ಟ್ರ. ಇಂದು ಇದ್ದು ನಾಳೆ ಇಲ್ಲಾವಾಗುವವರು ನಾವು ನೀವು.

ಮತ್ತಷ್ಟು ಓದು »