ವಿಷಯದ ವಿವರಗಳಿಗೆ ದಾಟಿರಿ

Posts tagged ‘ಶಂಕರಾಚಾರ್ಯ’

16
ಜೂನ್

ಗೂಂಡಾಗಿರಿ ಎಂದು ಕರೆಯುವ ಭಂಡತನ

Untitled5555

ಸಂಶೋಧಕರಾದ(?!!) ಭಗವಾನ್ ಅವರ ಶಂಕರಾಚಾರ್ಯ ಮತ್ತು ಪ್ರತಿಗಾಮಿತನ ಪುಸ್ತಕದ ಎರಡನೆಯ ಅಧ್ಯಾಯ “ಶಂಕರಾಚಾರ್ಯನ ಗೂಂಡಾಗಿರಿ ಮತ್ತು ವೈದಿಕ ಸಂಸ್ಕೃತಿ” ಲೇಖನದ ಶೀರ್ಷಿಕೆಯನ್ನು ಸಾಬೀತು ಪಡಿಸಲು ಸಂಶೋಧಕರು ಹಾಕಿರುವ ತಿಪ್ಪರಲಾಗ ಮತ್ತು ಬಿಟ್ಟ ಸತ್ಯವಿಚಾರಗಳು ಬೃಹದಾಕಾರವಾಗಿವೆ. ಸದ್ಯ, ಇವರುಗಳು ಗಣಿತ, ರಸಾಯನ ಶಾಸ್ತ್ರ ಮುಂತಾದುವುಗಳನ್ನು ಓದಿಲ್ಲ. ಇಲ್ಲದೇ ಹೋಗಿದ್ದರೆ ಅಲ್ಲಿ ಇವರು ಹುಟ್ಟುಹಾಕಬಹುದಾಗಿದ್ದ ಪ್ರಮೇಯಗಳಿಂದ ಎಷ್ಟು ವಿಜ್ಞಾನಿಗಳ ಆತ್ಮಗಳು ಅಕಾಲ ಮೃತ್ಯುವನ್ನಪ್ಪಿ ಪ್ರೇತಗಳಾಗುತ್ತಿದ್ದವೋ ಗೊತ್ತಿಲ್ಲ. ವಿಜ್ಞಾನ ಉಳ್ಕೊಂಡ್ರೂ ಸಮಾಜ ವಿಜ್ಞಾನವನ್ನು ಮನಕ್ಕೆ ಬಂದ ತರ್ಕ, ಊಹೆಗಳನ್ನು ವೈಜ್ಞಾನಿಕವೆಂದು ಒರಲುತ್ತಾ ಬುಡವಿಲ್ಲದ ಸಿದ್ಧಾಂತ ಮಂಡನೆ ಮತ್ತು ಬ್ರಾಹ್ಮಣರ ಖಂಡನೆಯಿಂದ ಪ್ರಚಂಡನಾಗುವ ಕೌಶಲವು ಬುದ್ಧಿಜೀವಿಗಳು ಎಂದೆನಿಸಿಕೊಳ್ಳಬೇಕಾದರೆ ಕಲಿಯಬೇಕಾದ ಕಸರತ್ತಾದ್ದರಿಂದ, ಆ ವಿಷಯದಲ್ಲಿ ಅಸಾಮಾನ್ಯ ಪ್ರತಿಭೆಯನ್ನು ಮೆರೆದಿದ್ದಾರೆ. ಕಳೆದ ಅಧ್ಯಾಯದಲ್ಲಿ ಶಂಕರಾಚಾರ್ಯರಿಂದ ಶುರುಮಾಡಿದ ಪ್ರಲಾಪವನ್ನು ಕಡೆಯಾಗುವಾಗ ನೌಕರಿ ಮಾಡುವ ಜನರವರೆಗೂ ವಿಸ್ತರಿಸಿದ್ದು ಇವರ ಪ್ರತಿಭೆಗೆ ಸಾಕ್ಷಿ. ಇಲ್ಲಿಯೂ ಅಷ್ಟೆ; ಯುಗ ಯುಗಗಳನ್ನು ಲೀಲಾಜಾಲವಾಗಿ ಹಾರಿ ನೆಗೆದು ಒಂದೆರಡು ಉದಾಹರಣೆಗಳಿಂದ ಇಡೀ ಗ್ರಂಥದ ಆಶಯವನ್ನೇ, ಆ ಜನಪದದ ಸಾಮಾರ್ಥ್ಯವನ್ನೇ ದಿಕ್ಕಾಪಾಲು ಮಾಡುವ ಅಮೋಘ ವಾದಲಹರಿಯಲ್ಲಿ ಮುಳುಗಿ ತೇಲಿದ್ದಾರೆ. ಆದರೆ ಇತಿಹಾಸವನ್ನು ತಿರುಚಿ ಬರೆಯಬಹುದಾದರೂ ಐತಿಹಾಸಿಕ ಸತ್ಯಗಳನ್ನು ನಾಶಮಾಡಲು ಸಾಧ್ಯವಿಲ್ಲವಾದ್ದರಿಂದ ವಿಚಾರಗಳ ಸತ್ಯಾಂಶಗಳನ್ನು ಪ್ರಸ್ತುತಪಡಿಸುವಲ್ಲಿ ದಯನೀಯವಾಗಿ ಸೋತಿದ್ದಾರೆ. ಈ ಅಧ್ಯಾಯದಲ್ಲಿ ಮುಖ್ಯವಾಗಿ ಆಪಾದಿಸಿರುವ ನಾಗಾರ್ಜುನಕೊಂಡದ ಬೌದ್ಧ ಮಂದಿರಗಳು ಶಂಕರಾಚಾರ್ಯರ ನೇತೃತ್ವದಲ್ಲಿ ಧ್ವಂಸವಾಗಿದ್ದು ಎಂಬುದರ ಮತ್ತು ಇನ್ನಿತರ ಐತಿಹಾಸಿಕ ವಿಚಾರಗಳೆಡೆಗೆ ನೋಡೋಣ. ಉಳಿದಂತೆ ಅದೇ ಬ್ರಾಹ್ಮಣ, ಪುರೋಹಿತಶಾಹಿ, ಹಿಂದೂ ಧರ್ಮ ಮುಂತಾದ ಪದಪುಂಜಗಳಿಂದ ಅರೋಪ ಮಾಡುತ್ತ ಪುಟಭರ್ತಿ ಮಾಡುವ ಕೆಲಸ ಮಾಡಿದ್ದಾರಾದ್ದರಿಂದ ಮತ್ತೆ ಮತ್ತೆ ಅದನ್ನು ಪರಿಶೀಲಿಸುವ ಅಗತ್ಯವಿಲ್ಲ. ಮತ್ತಷ್ಟು ಓದು »

13
ಮೇ

ಶಂಕರಾಚಾರ್ಯರನ್ನು ಸ್ತುತಿಸಿದ್ದಾಯಿತು, ವಿದ್ಯಾರಣ್ಯರನ್ನೂ ಸ್ಮರಿಸೋಣ….

-ಶ್ರೀನಿವಾಸ ರಾವ್

vidyaranya

||ಅವಿದ್ಯಾರಣ್ಯಕಾನ್ತಾರೇ ಭ್ರಮತಾಂ ಪ್ರಾಣಿನಾಂ ಸದಾ

           ವಿದ್ಯಾಮಾರ್ಗೋಪದೇಷ್ಟಾರಂ ವಿದ್ಯಾರಣ್ಯಗುರುಂ ಶ್ರಯೇ||

ವಿಜಯನಗರ ಸಾಮ್ರಾಜ್ಯ ಸ್ಥಾಪನೆಗೆ ಮಾರ್ಗದರ್ಶನ ನೀಡಿದರು. ದಕ್ಷಿಣಪಥದಲ್ಲಿ ಹಿಂದೂ ಧರ್ಮದ ಸಾಮ್ರಾಜ್ಯವನ್ನು ಸ್ಥಾಪಿಸುವ ಮೂಲಕ ಶೃಂಗೇರಿ ಪೀಠಾಧಿಪತಿಗಳ ಬಿರುದಾವಳಿಗೆ ‘ಕರ್ನಾಟಕ ಸಿಂಹಾಸನ ಪ್ರತಿಷ್ಠಾಪನಾಚಾರ್ಯ’ ಎಂಬ ಬಿರುದನ್ನು ತಂದುಕೊಟ್ಟಿದ್ದೂ ಅವರೇ. ಶೃಂಗೇರಿಯ ಈಗಿನ ಪೀಠಾಧಿಪತಿಗಳಿಗೆ ‘ಕರ್ನಾಟಕ ಸಿಂಹಾಸನ ಪ್ರತಿಷ್ಠಾಪನಾಚಾರ್ಯ’ ಎಂದು ಬಿರುದಾವಳಿಗಳಲ್ಲಿ ಹೇಳಿದರೂ ನಮಗೆ ಆ ಯತಿಶ್ರೇಷ್ಠರೇ ನೆನಪಾಗುತ್ತಾರೆ. ಮನಸ್ಸು ಪುಟಿದೇಳುತ್ತದೆ. ‘ವಿದ್ಯಾಶಂಕರ ಪಾದಪದ್ಮಾರಾಧಕ’ ಎಂದಾಗಲೂ ವಿದ್ಯಾತೀರ್ಥರ ಶಿಷ್ಯರಾಗಿ-ಭಾರತೀ ತೀರ್ಥರ ಕರಕಮಲ ಸಂಜಾತರಾಗಿದ್ದ ಅವರನ್ನೇ ಮನಸ್ಸು ನೆನೆಯುತ್ತದೆ. ಮತ್ತಷ್ಟು ಓದು »

4
ನವೆಂ

ವಸಾಹತುಪ್ರಜ್ಞೆಯಲ್ಲಿ ಪುಣ್ಯಯೋನಿ-ಪಾಪಯೋನಿ

– ವಿನಾಯಕ್ ಹಂಪಿಹೊಳಿ

ಭಗವದ್ಗೀತೆಇತ್ತೀಚೆಗೆ ಕೆ. ಎಸ್. ಭಗವಾನ್ ಎಂಬ ಬುದ್ಧಿಜೀವಿಯೋರ್ವರಿಂದಾಗಿ ಭಗವದ್ಗೀತೆಯ ಒಂಬತ್ತನೇ ಅಧ್ಯಾಯದ ೩೨ ಮತ್ತು ೩೩ನೇ ಶ್ಲೋಕಗಳು ಭಾರೀ ವಿವಾದಕ್ಕೊಳಗಾದವು. ಆ ಶ್ಲೋಕಗಳಲ್ಲಿ ಕೆಲವೇ ವರ್ಗದ ಜನರನ್ನು ಪುಣ್ಯಯೋನಿಗಳೆಂತಲೂ ಉಳಿದ ಬಹುಸಂಖ್ಯಾತರನ್ನು ಪಾಪಯೋನಿಗಳೆಂತಲೂ ಕೃಷ್ಣ ಕರೆದದ್ದು ಈ ಹಿಂದೂ ರಿಲಿಜನ್ನಿನಲ್ಲಿ ಇರುವ ಸಾಮಾಜಿಕ ಅಸಮಾನತೆಗೆ ಪ್ರತ್ಯಕ್ಷ ಸಾಕ್ಷಿ ಎಂಬಂತೆ ಚಿತ್ರಿಸಲಾಯಿತು. ಆ ಎರಡು ಶ್ಲೋಕಗಳನ್ನು ಗದ್ದೆಯಲ್ಲಿನ ಕಳೆಗೆ ಹೋಲಿಸಿ, ಇವುಗಳನ್ನು ತೆಗೆದು ಹಾಕಬೇಕೆಂದು ಅಭಿಪ್ರಾಯಪಟ್ಟರು. ಆ ಎರಡು ಶ್ಲೋಕಗಳು “ಶ್ರುಣ್ವಂತು ವಿಶ್ವೇ ಅಮೃತಸ್ಯ ಪುತ್ರಾಃ” ಎಂಬ ಉಪನಿಷದ್ವಾಕ್ಯಕ್ಕೆ ವಿರುದ್ಧವಾದ ಆಶಯವನ್ನು ಹೊಂದಿದೆ ಎಂಬುದಾಗಿ ಸಾರಿದರು. ಈ ಹಿಂದೂ ಎಂಬ ಧರ್ಮದಲ್ಲಿ ಎರಡು ಭಾಗಗಳಿವೆ, ಅವು ಸಾಮಾಜಿಕ ಮತ್ತು ಅಧ್ಯಾತ್ಮಿಕ, ಎರಡೂ ಕ್ಷೇತ್ರಗಳಲ್ಲಿ ಅನೇಕ ಕೃತಿಗಳಿವೆ, ಅದರಲ್ಲಿ ಅಧ್ಯಾತ್ಮಿಕ ಕೃತಿಗಳ ಕುರಿತು ಅವರಿಗೆ ಸಮ್ಮತಿಯಿದೆ, ಆದರೆ ಸಾಮಾಜಿಕ ಕೃತಿಗಳ ಕುರಿತು ಅವರಿಗೆ ಭಾರೀ ಆಕ್ಷೇಪವಿದೆ ಎಂಬ ಅವರ ಹೇಳಿಕೆಯನ್ನು ಅವರ ವಾದದ ಸಾರಾಂಶ ಎನ್ನಬಹುದು.

ನಮ್ಮ ಸಂಪ್ರದಾಯಗಳು ಪುನರ್ಜನ್ಮವನ್ನು ನಂಬುತ್ತವೆ. ಮತ್ತು ಜೀವನದಲ್ಲಿ ಕಾಣುವ ಪರಿಣಾಮಗಳಿಗೆ ಪ್ರತ್ಯಕ್ಷವಾಗಿ ಕಾಣದ ಕಾರಣಗಳನ್ನು ಪೂರ್ವಜನ್ಮಕ್ಕೆ ಹೊಂದಿಸಿ ಅರಿಯುವದು ನಮ್ಮಲ್ಲಿ ಮೊದಲಿನಿಂದ ಇರುವ ಪರಂಪರೆ. ತನ್ಮೂಲಕ ಒಬ್ಬ ಜೀವನದಲ್ಲಿ ಪಡೆದಿರುವ ಪ್ರತಿಯೊಂದಕ್ಕೂ ಒಂದು ಕಾರಣವನ್ನು ಹುಡುಕಿಕೊಳ್ಳುವದು ಸಹಜವಾದ ಪ್ರಕ್ರಿಯೆ. ಆತ್ಮಕ್ಕೆ ಲಿಂಗವಿರುವದಿಲ್ಲ, ಲಿಂಗವೆಂಬುದು ಕೇವಲ ದೇಹದ ಒಂದು ಗುಣ ಎಂಬುದು ನಮ್ಮ ಸಂಪ್ರದಾಯಗಳಲ್ಲಿ ಹಾಸುಹೊಕ್ಕಾಗಿರುವ ವಿಚಾರ. ಹೀಗಾಗಿ ಆತ್ಮ-ಪುನರ್ಜನ್ಮ-ದೇಹಗಳ ಕುರಿತು ಇರುವ ಈ ಆಧ್ಯಾತ್ಮಿಕ ವಿಚಾರಗಳಲ್ಲಿ ಒಂದು ಆತ್ಮ ಒಮ್ಮೆ ಗಂಡಾಗಿ, ಮುಂದಿನ ಜನ್ಮದಲ್ಲಿ ಹೆಣ್ಣಾಗಿ ಮತ್ತೊಂದು ಜನ್ಮದಲ್ಲಿ ಪ್ರಾಣಿಯಾಗಿ ಹುಟ್ಟುವ ಕಲ್ಪನೆಗಳು ಕಥೆಗಳು ಹೇರಳವಾಗಿ ಕಂಡುಬರುತ್ತವೆ. ಹೀಗಾಗಿ ಜನ್ಮದಿಂದ ಜನ್ಮಕ್ಕೆ ಅಲೆಯುವ ಒಂದು ಆತ್ಮ ಗಂಡು ದೇಹ ಪಡೆಯುವದಕ್ಕೋ, ಇಲ್ಲವೇ ಹೆಣ್ಣು ದೇಹ ಪಡೆಯುವದಕ್ಕೋ ಒಂದು ಕಾರಣ ಬೇಕಾಗುತ್ತದೆ.

ಮತ್ತಷ್ಟು ಓದು »

16
ಜೂನ್

ನಾಡು-ನುಡಿ ಮರುಚಿಂತನೆ : ಶಂಕರಾಚಾರ್ಯರು ಮತ್ತು ಜಾತಿವ್ಯವಸ್ಥೆಯ ಕಥೆ

– ಪ್ರೊ.ರಾಜಾರಾಮ್ ಹೆಗಡೆ
ಪ್ರಾಧ್ಯಾಪಕರು, ಇತಿಹಾಸ ಮತ್ತು ಪ್ರಾಕ್ತನಶಾಸ್ತ್ರ ವಿಭಾಗ, ಕುವೆಂಪು ವಿ.ವಿ

Shankaraacharya1ಶಂಕರಾಚಾರ್ಯರು ಇಂದು ಒಂದು ವರ್ಗದ ಬುದ್ಧಿಜೀವಿಗಳ ಟೀಕೆಗೆ ಗುರಿಯಾಗಿದ್ದಾರೆ.ಅವರೆಂದರೆ ಜಾತಿ ವ್ಯವಸ್ಥೆಯ ವಿನಾಶವನ್ನು ಪ್ರತಿಪಾದಿಸುವವರು.ಜಾತಿ ವ್ಯವಸ್ಥೆ ಎಂಬ ಕಥೆಯ ಸಾರವಿಷ್ಟು: ಇಂದು ಭಾರತದಲ್ಲಿ ಕಂಡುಬರುವ ಸಕಲ ಜಾತಿಗಳನ್ನೂ, ಅವುಗಳ ಪದ್ಧತಿಗಳನ್ನೂ ಹಾಗೂ ತರತಮಗಳನ್ನೂ ಪ್ರಾಚೀನ ಕಾಲದಲ್ಲಿ ಬ್ರಾಹ್ಮಣರು ರಚಿಸಿದರು ಹಾಗೂ ತಮ್ಮ ಧರ್ಮಶಾಸ್ತ್ರಗಳೆಂಬ ಕಾನೂನುಗಳನ್ನು ಮಾಡಿ ಅವು ಮುಂದುವರೆಯುವಂತೆ ನೋಡಿಕೊಂಡರು. ಈ ಕಥೆಯನ್ನು ಸತ್ಯ ಎಂದು ಒಪ್ಪಿಕೊಳ್ಳಬೇಕಾದರೆ ಅದಕ್ಕೆ ಆಧಾರಗಳು ಬೇಕೇ ಬೇಕು. ಶಂಕರಾಚಾರ್ಯರು ಅಂಥದ್ದೊಂದು ಆಧಾರ ಎಂಬುದಾಗಿ ಈ ಬುದ್ಧಿಜೀವಿಗಳು ನಂಬಿದ್ದಾರೆ. ಶಂಕರರ ತತ್ವಜ್ಞಾನ ಹಾಗೂ ಜಿಜ್ಞಾಸೆಗಳು ಈ ವರ್ಗಕ್ಕೆ ಅಪ್ರಸ್ತುತ. ಅವರ ತತ್ವಜ್ಞಾನವೇ ಬ್ರಾಹ್ಮಣಶಾಹಿಯ ಒಂದು ಕಣ್ಕಟ್ಟಾಗಿರುವುದರಿಂದ ಅದಕ್ಕೆ ಬಲಿಯಾಗಬಾರದು ಎಂಬ ಎಚ್ಚರಿಕೆ ಕೂಡ ಇವರಲ್ಲಿ ಸದಾ ಜಾಗೃತವಾಗಿ ಇರುತ್ತದೆ.

ಆದರೆ ಶಂಕರರ ಸಿದ್ಧಾಂತವನ್ನು ಪರಿಚಯಿಸಿಕೊಂಡ ಯಾರಿಗಾದರೂ ಅವರು ಎಲ್ಲಾ ಬಿಟ್ಟು ಜಾತಿಭೇದವನ್ನು ಎತ್ತಿ ಹಿಡಿಯಲಿಕ್ಕಾಗಿ ತಮ್ಮ ಜೀವ ಸವೆಸಿದರು ಎಂಬುದು ಹಾಸ್ಯಾಸ್ಪದವಾಗಿ ಕಾಣುವುದರಲ್ಲಿ ಸಂದೇಹವಿಲ್ಲ. ತಾವು ಪ್ರತಿಪಾದಿಸುವ ಜ್ಞಾನವು ಜಾತಿ, ಒಣ ಪಾಂಡಿತ್ಯ, ತರ್ಕ, ಶಾಸ್ತ್ರ ಇತ್ಯಾದಿಗಳನ್ನು ಮೀರಿದ್ದು ಎಂಬುದನ್ನು ಅವರು ಸ್ಪಷ್ಟವಾಗಿಯೇ ಸಾರುತ್ತಾರೆ. ಜ್ಞಾನಿಯಾದವನಲ್ಲಿ ‘ಜಾತಿ ಭೇದ’ ಅಳಿಯುತ್ತದೆ ಹಾಗೂ ಎಲ್ಲರಲ್ಲೂ ನಾನೇ ಇದ್ದೇನೆ ಎನ್ನುವ ಅನುಭವವಾಗುತ್ತದೆ ಎನ್ನುತ್ತಾರೆ.  ಇಂಥ ಹೇಳಿಕೆಗಳು ಜಾತಿಭೇದವನ್ನು ಗಟ್ಟಿಮಾಡುತ್ತವೆ ಎನ್ನಬಹುದಾದರೆ ಜಾತಿಭೇದ ಅಳಿಯಬೇಕು ಎನ್ನುತ್ತಿರುವ ಇಂದಿನ ಎಲ್ಲ ಬುದ್ಧಿಜೀವಿಗಳ ಹೇಳಿಕೆಗಳೂ ಅದೇ ಕೆಲಸವನ್ನು ಮಾಡುತ್ತಿವೆ ಎಂದೇಕೆ ಹೇಳಬಾರದು? ಹಾಗಾಗಿ ಶಂಕರರ ಮೇಲಿನ ಆಪಾದನೆಯು ತರ್ಕಬದ್ಧವಾಗಿ ಕಾಣಿಸುವುದಿಲ್ಲ. ಹಾಗಾದರೆ ಈ ಆಪಾದನೆಯು ಎಲ್ಲಿಂದ ಹುಟ್ಟಿಕೊಂಡಿತು?

ಮತ್ತಷ್ಟು ಓದು »

14
ಮೇ

ಶ್ರೀ ಶಂಕರಾಚಾರ್ಯ ಜೀವನ ಸಂದೇಶ

– ರಾಘವೇಂದ್ರ ಅಡಿಗ ಎಚ್ಚೆನ್

Shankaraacharya1ಭಾರತದಲ್ಲಿ ಹಿಂದೂ ಧರ್ಮವು ಸಂಕಷ್ಟದಲ್ಲಿದ್ದ ಎಂಟನೇ ಶತಮಾನದ ಕಾಲಘಟ್ಟದಲ್ಲಿ, ಹಿಂದೂಗಳಲ್ಲಿದ್ದ ಜಾತಿ ಪದ್ದತಿ, ಮೂಢ ಆಚರಣೆಗಳ ಬಗ್ಗೆ ಆಗ ಪ್ರಬಲರಾಗಿದ್ದ ಬೌದ್ದ ಸನ್ಯಾಸಿಗಳು ಸಾಕಷ್ಟು ನಿಂದನೆಗಳನ್ನು ಮಾಡುತ್ತಿದ್ದ ಕಾಲದಲ್ಲಿ ಹಿಂದೂ ಧರ್ಮೀಯರಲ್ಲಿ ಮತ್ತೆ ಆತ್ಮವಿಶ್ವಾಸ ಹುಟ್ಟಿಸಿ ದೇಶದ ಮೂಲೆ ಮೂಲೆಗಳಲ್ಲಿ ಸಂಚರಿಸಿ ತಮ್ಮ ಅದ್ವೈತ ತತ್ವದ ಮೂಲಕ ಧರ್ಮ ಜಾಗೃತಿಯನ್ನುಂಟುಮಾಡಿ ಹಿಂದೂ ಧರ್ಮವನ್ನು ಪುನರುತ್ತಾನಗೊಳಿಸಿದವರು ಶ್ರೀ ಶಂಕರಾಚಾರ್ಯರು. ಕಳೆದ ಮೇ 4 ರಂದು ಜಗದ್ಗುರು ಆದಿ ಶಂಕರಾಚಾರ್ಯರ ಜಯಂತಿಯನ್ನು ವಿಶ್ವಾದ್ಯಂತ ಆಚರಿಸಲಾಯಿತು.

ಭಾರತದಲ್ಲಿ ಹಿಂದೂ ಧರ್ಮವು ಸಂಕಷ್ಟದಲ್ಲಿದ್ದ ಎಂಟನೇ ಶತಮಾನದ ಕಾಲಘಟ್ಟದಲ್ಲಿ, ಹಿಂದೂಗಳಲ್ಲಿದ್ದ ಜಾತಿ ಪದ್ದತಿ, ಮೂಢ ಆಚರಣೆಗಳ ಬಗ್ಗೆ ಆಗ ಪ್ರಬಲರಾಗಿದ್ದ ಬೌದ್ದ ಸನ್ಯಾಸಿಗಳು ಸಾಕಷ್ಟು ನಿಂದನೆಗಳನ್ನು ಮಾಡುತ್ತಿದ್ದ ಕಾಲದಲ್ಲಿ ಹಿಂದೂ ಧರ್ಮೀಯರಲ್ಲಿ ಮತ್ತೆ ಆತ್ಮವಿಶ್ವಾಸ ಹುಟ್ಟಿಸಿ ದೇಶದ ಮೂಲೆ ಮೂಲೆಗಳಲ್ಲಿ ಸಂಚರಿಸಿ ತಮ್ಮ ಅದ್ವೈತ ತತ್ವದ ಮೂಲಕ ಧರ್ಮ ಜಾಗೃತಿಯನ್ನುಂಟುಮಾಡಿ ಹಿಂದೂ ಧರ್ಮವನ್ನು ಪುನರುತ್ತಾನಗೊಳಿಸಿದವರು ಶ್ರೀ ಶಂಕರಾಚಾರ್ಯರು. ತಾವು ಬದುಕಿದ್ದು ಕೇವಲ 32 ವರ್ಷಗಳಷ್ಟೇ ಆದರೂ ಆದಿ ಶಂಕರರು ತಾವು ಮಾಡಿದ ಕಾರ್ಯ, ಗಳಿಸಿದ ಕೀರ್ತಿ , ಅಪಾರವಾದುದು. ಶ್ರೀಮದ್ಭಗವದ್ಗೀತೆ, ಉಪನಿಷತ್ತುಗಳು, ಬ್ರಹ್ಮಸೂತ್ರಗಳಿಗೆ ಭಾಷ್ಪಗಳನ್ನು ಬರೆದ ಮೊದಲಿಗರು ಶ್ರೀ ಶಂಕರಾಚಾರ್ಯರು. ಶಂಕರಾಚಾರ್ಯರು ಭಾರತೀಯ ವೈಚಾರಿಕ ರಂಗದಲ್ಲಿ ಕ್ರಾಂತಿಯನ್ನೇ ಮಾಡಿದ್ದವರು. ಇವರು ಯಾವೊಂದು ಹೊಸತಾದ ಮತ, ಪಂಥಗಳನ್ನು ಸ್ಥಾಪಿಸಿಲ್ಲವಾದರೂ ಹಿಂದೂ ಧರ್ಮದಲ್ಲಿನ ವೇದಸಂಪ್ರದಾಯವನ್ನೇ ಎತ್ತಿಹಿಡಿದರು. ವೇದಗಳಲ್ಲಿನ ಸತ್ವವನ್ನೂ, ಸಾರವನ್ನು ತಮ್ಮದೇ ಆದ ನೆಲೆಯಲ್ಲಿ ನಿಷ್ಕರ್ಷಿಸುವ ಮೂಲಕ ಜಗತ್ತಿಗೆ ಪ್ರಕಾಶಪಡಿಸಿದವರು ಆಚಾರ್ಯ ಶಂಕರರು ಎಂದರೆ ತಪ್ಪಾಗಲಾರದು.

ಜೀವನ

ಅದು ಎಂಟು-ಒಂಭತ್ತನೇ ಶತಮಾನಗಳ ಮಧ್ಯದ ಅವಧಿ. ಭಾರತ ದಕ್ಷಿಣ ಸಮುದ್ರ ತೀರದ ಕೇರಳ ರಾಜ್ಯದ ಕಾಲಟಿ ಎಂಬೊಂದು ಸಣ್ಣ ಹಳ್ಳಿ. ಆ ಹಳ್ಳಿಯಲ್ಲಿ ಶಿವಗುರು ಹಾಗೂ ಆರ್ಯಾಂಬರೆನ್ನುವ ಬಡ ಬ್ರಾಹ್ಮಣಾ ದಂಪತಿಗಳು ವಾಸವಾಗಿದ್ದರು. ಊಟ, ವಸತಿಗಳಎಲ್ಲಾ ಅದು ಹೇಗೋ ದಿನನಿತ್ಯವೂ ನಡೆಯುತ್ತಿದ್ದರೂ ಆ ದಂಪತಿಗಳೈಗೆ ‘ತಮ್ಮದಾದ ಒಂದು ಮಗುವಿಲ್ಲ, ತಮಗೆ ಸಂತಾನಭಾಗ್ಯವಿಲ್ಲ’ ಎನ್ನುವ ಚಿಂತೆಯು ಬಲವಾಗಿ ಕಾಡುತ್ತಿತ್ತು. ಹೀಗಿರಲು ಇದೇ ಚಿಂತೆಯಲ್ಲಿ ಆ ಈರ್ವರೂ ತಾವು ಈ ಕುರಿತು ಪರಮೇಶ್ವರನ ಮೊರೆಹೋಗಲು ತೀರ್ಮಾನಿಸಿ ಅದರಂತೆ ಪರಮೇಶ್ವರನನ್ನು ಶ್ರದ್ದಾ ಭಕ್ತಿಗಳಿಂದ ಆರಾಧಿಸಿಲು ಮುಂದಾದಾರು. ಅದೊಂದು ದಿನ ಪರಮೇಶ್ವರನು ತಾನು ಶಿವಗುರುವಿನ ಕನಸಿನಲ್ಲಿ ಕಾಣಿಸಿಕೊಂಡು- “ಭಕ್ತಾ, ನಿನ್ನ ಪೂಜೆಗೆ ಮೆಚ್ಚಿದ್ದೇನೆ. ನಿನ್ನ ಕೋರಿಕೆಯನ್ನು ನಾನು ಈಡೇರಿಸಲಿದ್ದೇನೆ, ನಿನಗೆಂತಹಾ ಮಗನು ಬೇಕು? ಮಹಾನ್ ಜ್ಞಾನಿಯಾದ, ಆದರೆ ಅಲ್ಪಾಯುವದ ಮಗನು ಬೇಕೋ, ಇಲ್ಲವೇ ಅಲ್ಪ ಜ್ಞಾನಿಯಾದ ದೀರ್ಘಾಯುವಾದ ಮಗನು ಬೇಕೋ?” ಎಂದೆನ್ನಲು ಶಿವಗುರುವು ತಾನು ಕ್ಷಣಕಾಲವೂ ಯೋಚಿಸದೆ- “ನನಗೆ ಮಹಾಜ್ಞಾನಿಯಾದ ಮಗನು ಬೇಕು” ಎಂದೆನ್ನಲು “ತಥಾಸ್ತು” ಎಂದ ಪರಮೇಶ್ವರನು ತಾನು ಅಂತರ್ಧಾನನಾದನು. ಅದಾದ ಕೆಲ ತಿಂಗಳಿನಲ್ಲಿಯೇ ಮಾತೆ ಆರ್ಯಾಂಬಾ ಜನ್ಮತಃ ಮಹಾಜ್ಞಾನಿಯಾದ ಶಂಕರನಿಗೆ ಜನ್ಮವಿತ್ತಳು.

ಮತ್ತಷ್ಟು ಓದು »