ಸದ್ದಿಲ್ಲದೇ ಸ್ತ್ರೀ ಶಿಕ್ಷಣಕ್ಕೆ ನಾಂದಿ ಹಾಡಿದ ಹರಿಕಾರ – ಶ್ರೀ ಶಿವಕುಮಾರ ಸ್ವಾಮೀಜಿ.
– ಡಾ.ಸುದರ್ಶನ ಗುರುರಾಜರಾವ್
ಸರಿ ಸುಮಾರು ನೂರಾಹನ್ನೊಂದು ವರ್ಷಗಳ ಕಾಲ ದೇಶಸೇವೆಯೇ ಈಶಸೇವೆ ಎಂದೆನ್ನುತ್ತಾ, ಜನತೆಯಲ್ಲಿಯೇ ಜನಾರ್ದನನನ್ನು ಕಂಡು ನಮ್ಮನ್ನಗಲಿದ ಯುಗಪುರುಷ, ನಡೆದಾಡುವ ದೇವರೆಂದೇ ಜನಮಾನಸಗಳಲ್ಲಿ ನೆಲೆಯಾಗಿದ್ದ ಶ್ರೀ ಶಿವಕುಮಾರಸ್ವಾಮಿಗಳು ನಮ್ಮನ್ನು ತೊರೆದು ನೈತಿಕವಾಗಿ ದಿನೇ ದಿನೇ ಅಧೋಗತಿಗಿಳಿಯುತ್ತಿರುವ ನಮ್ಮ ಸಮಾಜವನ್ನು ಆ ಮೂಲಕವಾಗಿ ಸಾತ್ವಿಕ ಸಮುದಾಯವನ್ನು ಅನಾಥರನ್ನಾಗಿ ಮಾಡಿ ಹೋದದ್ದು ದುಃಖಕರವಾದ ಸಂಗತಿಯೇ ಸರಿ. ಕಾಲನ ಕರೆಗೆ ಓಗೊಡದವರಾರು?
ಸ್ವಾಮೀಜಿಗಳ ಬಗ್ಗೆ ಅವರು ಹಗಲಿರುಳು ದುಡಿದು ಕಾಯಾ ವಾಚಾ ಮನಸಾ ದೀನರ ಕರೆಗೆ ಓಗೊಟ್ಟದ್ದು, ಏನೂ ಇದ್ದಿಲ್ಲದ ಒಂದು ಬಿಡಿ ಮಠವನ್ನು ಬೃಹತ್ ಸಂಸ್ಥೆಯನ್ನಾಗಿ ಬೆಳೆಸಿದ್ದು, ಆ ಮೂಲಕವಾಗಿ ಲಕ್ಷಾಂತರ ಜೀವಗಳ ಅಭಿವೃದ್ಧಿಗೆ ಕಾರಣರಾದದ್ದು , ಜಾತ್ಯಾತೀತರೆಂದು ಕೊಚ್ಚಿಕೊಳ್ಳುವ ಸರಕಾರಗಳ ಅನೀತಿಯ ಕಾಕದೃಷ್ಟಿಗೆ ಬಿದ್ದು ಕಷ್ಟ ಅನುಭವಿಸಿದರೂ ಒಂದೇ ಒಂದು ಮಾತನಾಡದೆ ಮಠದ ಮಕ್ಕಳಿಗೆ ಅನ್ನಪೋಷಣೆ ವಿದ್ಯಾದಾನಗಳನ್ನು ಅವಿರತವಾಗಿ ಮುಂದುವರಿಸಿದ್ದು ಎಲ್ಲವನ್ನು ಕೇಳಿ, ಓದಿ ತಿಳಿದಿದ್ದೇವೆ. ಇವೆಲ್ಲದರ ನಡುವೆ ತುಮಕೂರಿನ ಆಸುಪಾಸಿನಲ್ಲಿ ನಾನಾ ಕಾರಣಗಳಿಗೆ ವಿದ್ಯಾಭ್ಯಾಸಕ್ಕೆ ಅವಕಾಶವಿಲ್ಲದ ಹೆಣ್ಣುಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಅವಕಾಶ ಮಾಡಿಕೊಟ್ಟ ಸಮಾನತೆಯ ಹರಿಕಾರ ಶ್ರೀ ಸ್ವಾಮೀಜಿಗಳು ಎಂಬುದು ಬಹುತೇಕರಿಗೆ ತಿಳಿದಿಲ್ಲದ ವಿಚಾರ.
ಸಿದ್ಧಗಂಗಾ ಮಠದ ಶಾಲೆಯ ಮೊತ್ತ ಮೊದಲ ವಿದ್ಯಾರ್ಥಿನಿಯಾದ ನನ್ನ ತಾಯಿಯ ಅನುಭವದ ಪರಿಚಯ ಈ ಲೇಖನದ ಉದ್ದೇಶ. ಇದನ್ನು ಹೇಳುವಾಗ, ಬರೆಯುವಾಗ ಭಕ್ತಿ, ಕೃತಜ್ಞತೆಗಳು ಎದೆತುಂಬಿ ನಿಂತಿವೆ ಎಂದು ಪ್ರತ್ಯೇಕವಾಗಿ ಹೇಳಬೇಕಿಲ್ಲವಷ್ಟೇ. ಮತ್ತಷ್ಟು ಓದು
ಬಡವರ ಮಕ್ಕಳ ಭವಿಷ್ಯದ ಜೊತೆಗೆ ಬರಗೂರು ಭಂಡಾಟ
– ರಾಕೇಶ್ ಶೆಟ್ಟಿ
ಕಾಲಕ್ಕೆ ತಕ್ಕಂತೆ ಮನುಷ್ಯ Update ಆಗಲಿಲ್ಲಾಂದ್ರೆ Outdated ಆಗಿಬಿಡ್ತಾನೆ ಎನ್ನುವುದಕ್ಕೆ ರಾಜ್ಯದ ಬುದ್ಧಿಜೀವಿಗಳೇ ಸಾಕ್ಷಿ. ಉದಾಹರಣೆಗೆ, ಪಠ್ಯಪುಸ್ತಕ ಪುನರ್ ರಚನಾ ಸಮಿತಿಯ ಅಧ್ಯಕ್ಷರಾಗಿರುವ ಬರಗೂರು ರಾಮಚಂದ್ರಪ್ಪ ಅವರನ್ನೇ ತೆಗೆದುಕೊಳ್ಳಬಹುದು. ಬರಗೂರು ಅವರೇ ಯಾಕೆಂದರೆ, ಸಿದ್ಧರಾಮಯ್ಯನವರ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ,ಬಿಜೆಪಿಯ ಕಾಲದಲ್ಲಿ ಪಠ್ಯಪುಸ್ತಕಗಳ ಕೇಸರಿಕರಣವಾಗಿದೆ ಎಂಬ ಬುದ್ಧಿಜೀವಿಗಳ ಹುಯಿಲನ್ನು ಬೆಂಬಲಿಸಿ, ತಮ್ಮ ಆಸ್ಥಾನ ಸಾಹಿತಿಗಳಲ್ಲೊಬ್ಬರಾದ ಬರಗೂರು ರಾಮಚಂದ್ರಪ್ಪ ಅವರ ನೇತೃತ್ವದಲ್ಲಿ ಸಮಿತಿಯೊಂದನ್ನು ೨೦೧೪ರಲ್ಲಿ ರಚಿಸಿದ್ದರು.ಈ ಸಮಿತಿಯ ಕೆಲಸ ಮುಗಿಯಬೇಕಾದ ಸಮಯಕ್ಕೆ ಮುಗಿದ್ದರಿಂದ ಅವಧಿಯ ವಿಸ್ತರಣೆಯನ್ನೂ ಮಾಡಲಾಯಿತು. ಸಮಿತಿಯೊಂದರ ಅವಧಿಯ ವಿಸ್ತರಣೆಯಾಗುವಾಗ ಅಲ್ಲಿಯವರೆಗೂ ಆಗಿರುವ ಕಾರ್ಯಗಳ ವರದಿ ನೀಡುವುದು ವಾಡಿಕೆ.ಆದರೆ,ಮುಖ್ಯಮಂತ್ರಿಗಳ ಆಸ್ಥಾನ ಸಾಹಿತಿಗಳ ನೇತೃತ್ವದ ಈ ಸಮಿತಿಯನ್ನು ಹಾಗೆಲ್ಲ ಪ್ರಶ್ನಿಸಲಾದೀತೆ? ಈ ಸಮಿತಿ ರಚನೆಯಾದ ನಂತರ, ಹಿಂದಿನ ಪಠ್ಯಗಳಲ್ಲಿನ ಯಾವೆಲ್ಲ ಲೋಪದೋಷಗಳನ್ನು ಪತ್ತೆ ಮಾಡಲಾಗಿದೆ,ಏನನ್ನು ಪುನರ್ ರಚನೆ ಮಾಡುತ್ತಿದ್ದಾರೆ ಎಂಬ ಬಗ್ಗೆ ಯಾವುದೇ ಮಾಹಿತಿಯನ್ನು ಕೊಡದೆ ಎಲ್ಲವನ್ನೂ ನಿಗೂಢವಾಗಿಡಲಾಗುತ್ತಿದೆ.
ಈ ಪರಿ ನಿಗೂಢತೆಯನ್ನಿಟ್ಟುಕೊಂಡು ಬರಗೂರು ರಾಮಚಂದ್ರಪ್ಪನವರೇನು ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಲು ಹೊರಟಿದ್ದಾರೆಯೇ? ಎಲ್ಲಾ ಪಠ್ಯ ಪುಸ್ತಕಗಳ ಪರಿಷ್ಕರಣೆಯಾದರೂ ಆಗಿದೆಯೇ ಎಂದರೆ ಅದೂ ಇಲ್ಲ ಜನವರಿ ೧೫ರೊಳಗೆ ನೀಡುತ್ತಾರಂತೆ.ಬಹುಶಃ ಎಲ್ಲಾ ಪ್ರಿಂಟ್ ಆದ ನಂತರವೇ ಬರಗೂರರ ನಿಗೂಢ ಪ್ರಪಂಚದಿಂದ ಈ ಪುಸ್ತಕ ಹೊರಬರುತ್ತದೆನಿಸುತ್ತದೆ. ಇಂತಹ ನಿಗೂಢತೆಯನ್ನಿಟ್ಟುಕೊಂಡೇನೂ ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸಲು ಹೊರಟಿದ್ದರೆಯೇ ಎಂದು ನಿರೀಕ್ಷೆಯಿಟ್ಟುಕೊಂಡರೇ ಆಘಾತವಾಗುತ್ತದೆ.
ಶಿಕ್ಷಣ: ಗುರಿ ಭೀಮ, ಸಾಧಕ ಕುಚೇಲ!
– ಕಲ್ಗುಂಡಿ ನವೀನ್
ಇಂದು ಶಿಕ್ಷಣ ಕ್ಷೇತ್ರದಲ್ಲಿ ನಡೆಯುತ್ತಿರುವ ಚರ್ಚೆಗಳು, ಪ್ರಯೋಗಗಳು ಇನ್ಯಾವುದೇ ಕ್ಷೇತ್ರದಲ್ಲಿ ನಡೆಯುತ್ತಿಲ್ಲ. ತೀರಾ ವಿರಳವಾಗಿದ್ದ ಓಪನ್ ಮಾದರಿ ಶಾಲೆಗಳು ಇಂದು ವಿಪುಲವಾಗಿವೆ. ಸರ್ಕಾರಿ ಶಾಲೆಗಳೂ ಅದರ ಕೆಲವು ಆಂಶಗಳನ್ನು “ಕಾಪಿ” ಮಾಡುತ್ತಿವೆ. ಇನ್ನು ಮಾಂಟೆಸ್ಸೊರಿ ಎಂಬ ಪದ್ಧತಿ (ಮಾರಿಯಾ ಮಾಂಟೆಸ್ಸೊರಿ ಎಂಬಾಕೆ ಚಾಲ್ತಿಗೆ ತಂದ ಶಿಕ್ಷಣ ಪದ್ಧತಿ) ಹೆಚ್ಚುಕಡಿಮೆ ಮನೆ ಮಾತಾಗಿದೆ. ಇದಲ್ಲದೆ, ಖಾಸಗಿ ನೆಲೆಯಲ್ಲಿ ಅನೇಕರು ತಾವೇ ಕಂಡರಿಸಿದ ಪದ್ಥತಿಯನ್ನು ಯಶಸ್ವಿಯಾಗಿ ಜಾರಿಗೆ ತಂದಿದ್ದಾರೆ. ಶಾಲೆ ಹೀಗೂ ಇರಬಲ್ಲುದೇ ಎಂದು ತಜ್ಞರೂ ಹುಬ್ಬೇರಿಸುವಂತೆ ಮಾಡಿದ್ದಾರೆ. “ಒಂದು ಇಡೀ ವರ್ಷ ನೀನು ಏನು ಬೇಕೋ ಮಾಡಿಕೋ, ನಿನಗಿಷ್ಟವಾದದ್ದನ್ನು ಕಲಿತುಕೋ” ಎಂದು ಶಾಲೆಯಲ್ಲಿ ಹೇಳುತ್ತಾರೆ ಎಂದರೆ ನಂಬುತ್ತೀರಾ? ಅದು ಆರೋಹಿ ಎಂಬ ಶಾಲೆ. ಶಿಕ್ಷಣದಲ್ಲಿ ಆಸಕ್ತಿ ಇರುವ ಎಲ್ಲರೂ ಒಮ್ಮೆ ಹೋಗಿ ನೋಡಿಯಾದರೂ ಬರಬೇಕಾದ ಶಾಲೆಯಿದು ( http://www.aarohilife.org ). ಪೂರ್ಣಪ್ರಮತಿ ಎಂಬ ವಿಶಿಷ್ಟ ಶಾಲೆಯಲ್ಲಿ ಪ್ರತಿ ವರ್ಷ ಶಿಕ್ಷಣ ಪದ್ಧತಿಗಳು ಹಾಗೂ ಕಲಿಕೆ ಹೇಗೆ ನಡೆಯುತ್ತದೆ ಎಂದು ವಿಶ್ಲೇಷಿಸಿ ಹೊಸ ಮಾರ್ಗಗಳನ್ನು ಕಂಡುಕೊಳ್ಳಲೆಂದೇ ಪೂರ್ಣಪ್ರಮತಿ ವ್ಯಾಖ್ಯಾ ಎಂಬ ಹೆಸರಿನಲ್ಲಿ ವಿಚಾರ ಸಂಕಿರಣಗಳನ್ನು ನಡೆಸುತ್ತಾರೆ. ಅನೇಕ ದೃಷ್ಟಿಕೋನಗಳಿಂದ ಹಾಗೂ ಪ್ರಯೋಗಗಳಿಂದಾಗಿ ಗಮನಿಸುತ್ತಿರಬೇಕಾದ ಶಾಲೆ, ಪೂರ್ಣಪ್ರಮತಿ (http://purnapramati.in/) ಹ್ಞಾ ಹಾಗೆ “ನೀವು ನೋಡಲೆಂದು ಬರಲೇಬೇಡಿ. ಮಕ್ಕಳು ತಮಗಿಷ್ಟವಾದದ್ದನ್ನು ಮಾಡುತ್ತಿರುತ್ತಾರೆ. ನಿಮ್ಮ ಭೇಟಿ ಅವರನ್ನು ಡಿಸ್ಟರ್ಬ್ ಮಾಡುತ್ತದೆ” ಎನ್ನುವ ಮಣಿವೆಣ್ಣನ್ ಅವರ ಶಾಲೆಯೂ ಇದೆ! ಅಷ್ಟೇ ಅಲ್ಲ ಅಲ್ಲಿನ ಪದ್ಧತಿಗಳು ನಿರಂತರ ಚರ್ಚೆ, ಮಂಥನದ ಆಧಾರದಿಂದ ಬದಲಾಗುತ್ತಿದೆ. ದೇಶದ ಶಿಕ್ಷಣ ವ್ಯವಸ್ಥೆ ನೀಡಿರುವ ಸ್ವಾತಂತ್ರ್ಯವನ್ನು ಚೆನ್ನಾಗಿಯೇ ಬಳಸಿಕೊಂಡು ಮೆಚ್ಚಿ ತಲೆದೂಗುವಂತಹ ಪ್ರಯತ್ನಗಳು ಖಾಸಗಿ ನೆಲೆಯಲ್ಲಿ ನಡೆದಿದೆ. ಇದರ ನಡುವೆ ನಮ್ಮ ಶಿಷ್ಟ ಪದ್ಧತಿಯನ್ನೇ ಮುಂದುವರೆಸುತ್ತಿರುವ, ಆದರೆ ಆದರ್ಶ ಪ್ರಾಯವಾದ ಖಾಸಗಿ ಶಾಲೆಗಳಿವೆ. ಇಲ್ಲಿಯೂ “ಅಂಕವಲ್ಲ, ಗುಣ ಮುಖ್ಯ” ಎಂದು ಯೋಚಿಸುತ್ತ ಹೊಸ ಮಾರ್ಗಗಳನ್ನು ಕಂಡುಕೊಳ್ಳುತ್ತಿರುವ ಶಾಲೆಗಳಿವೆ. ಇದರ ಜೊತೆ ತನ್ನಷ್ಟಕ್ಕೆ ತಾನು ಬೇರೆ ಯಾವ ಗೊಡವೆಗೂ ಹೋಗದೆ ಮುಂದುವರೆಯುತ್ತಿರುವ ಸಿ ಬಿ ಎಸ್ ಇ ಇತ್ಯಾದಿ ಕೇಂದ್ರದ ಪಠ್ಯಕ್ರಮವನ್ನು ಅಳವಡಿಸಿಕೊಂಡಿರುವ ಖಾಸಗಿ ಶಾಲೆಗಳಿವೆ. ಈ ಎಲ್ಲಕ್ಕಿಂತ ದೊಡ್ಡ, ಕೊರತೆ ಎಂಬ ಪದದ ಅರ್ಥವೇ ತಿಳಿಯದ ರಾಜವೈಭೋಗದ ಅಂತಾರಾಷ್ಟ್ರೀಯ ಶಾಲೆಗಳನ್ನು ಸದ್ಯದ ಚರ್ಚೆಯಿಂದ ದೂರ ಇಡೋಣ. ಮತ್ತಷ್ಟು ಓದು
ಪರಿಸರ ಶಿಕ್ಷಣ: ಸಾಧನೆ ಮತ್ತು ಸವಾಲುಗಳು
– ಕಲ್ಗುಂಡಿ ನವೀನ್
ಬೆಂಗಳೂರು
ದೂರವಾಣಿ: 944 89 05214
ಇಂದು ಪರಿಸರ, ಪರಿಸರ ಮಾಲೀನ್ಯ ಎಂದರೆ ಅದನ್ನು ವಿವರಿಸಲು ಹೆಚ್ಚು ಶ್ರಮಪಡಬೇಕಿಲ್ಲ. ಆ ಕುರಿತಾದ ಜಾಗೃತಿ ಜನಸಾಮಾನ್ಯರಲ್ಲಿ ಇದೆ. ಇದೊಂದು ತೀರಾ ಇತ್ತೀಚಿನ ಸಂತೋಷದಾಯಕ ಬೆಳವಣಿಗೆ ಎಂದರೆ ಪರಿಸರ ಕುರಿತಾದ ಸಕಾರಾತ್ಮಕ ನಿಲುವು. ಹಿಂದೆ ಪರಿಸರ ಎಂಜಿನಿಯರ್ ಒಬ್ಬರು ಹೇಳುತ್ತಿದ್ದರು: “..ನಾವು ಪರಿಸರದ ಪರವಾಗಿ ಮಾತನಾಡಿದರೆ, ನಮ್ಮನ್ನು ಕರುಣೆಯಿಂದ ನೋಡಲಾಗುತ್ತಿತ್ತು” ಎಂದು! ಇಂದು ಆ ಸ್ಥಿತಿ ಖಂಡಿತಾ ಇಲ್ಲ. ಈ ಜಾಗೃತಿ ಹದಗೆಡುತ್ತಿರುವ ನಮ್ಮ ಪರಿಸರ ವ್ಯವಸ್ಥೆಯನ್ನು ಸರಿಪಡಿಸುವಷ್ಟು ದೃಢವಾಗಿದೆಯೇ ಎಂಬ ಪ್ರಶ್ನೆ ಬೇರೆ! ಆದರೆ ಆ ಜಾಗೃತಿ ಮೂಡಿರುವುದು ಗಮನಾರ್ಹ ಮತ್ತು ಸಂತೋಷದಾಯಕ ಅಂಶ. ಮತ್ತಷ್ಟು ಓದು
ಕನ್ನಡದ ಕಲಿಗಳಾಗಿ ಆಂಗ್ಲವನ್ನು ಮಣಿಸಿ- ಖಾಸಗಿ ಶಾಲೆಗಳ ಕಡೆಗಣಿಸಿ.
– ಸುದರ್ಶನ ಗುರುರಾಜರಾವ್
ಕನ್ನಡ ಮಾಧ್ಯಮದಲ್ಲಿದ್ದು ಇಂಗ್ಲಿಷ್ ಕಲಿಯಲು/ಕಲಿಸಲು ಸುಲಭ ವಿಧಾನ
೧.ಪರಿಚಯ
೨.ಕಲಿಕೆಯ ಕ್ರಮ (ಸ್ಥೂಲ ರೂಪು ರೇಷೆ )
೩.ಇಂಗ್ಲಿಷ್ ಭಾಷೆಯ ವ್ಯವಸ್ಥಿತ ಅಭ್ಯಾಸ ಮತ್ತು ಇಂಗ್ಲಿಷ್ ಕಲಿಕೆಯ ಪರಿಕರಗಳು- ಭಾಷಾಂತರ ಪಾಠಮಾಲೆ
೪.ಉಪಸಂಹಾರ ಮತ್ತು ಪರಿಸಮಾಪ್ತಿ.
ಪರಿಚಯ :
ಕನ್ನಡದಲ್ಲಿ ಕಲಿತರೆ ಭವಿಷ್ಯವಿಲ್ಲ, ಇಂಗ್ಲೀಷ್ ಮಾಧ್ಯಮ ಎಂದರೆ ಮಾತ್ರವೇ ಯಶಸ್ಸಿನ ಮಂತ್ರ ಎಂಬೊಂದು ನಂಬಿಕೆಯನ್ನು ಜನಮಾನಸದಲ್ಲಿ ಬಲವಾಗಿ ಬಿತ್ತಿ ಕಾಲಕ್ರಮದಲ್ಲಿ ನೀರೆರೆರ್ದು ಪೋಷಿಸಿಕೊಂಡು ಬಂದ ಖಾಸಗಿ ವ್ಯವಸ್ಥಾಪಕರು, ಅವರೊಡನೆ ಕೈಜೋಡಿಸಿ ತಮ್ಮ ನೆಲ-ಜಲ- ಭಾಷೆ ಸಂಸ್ಕೃತಿಗೆ ಚೂರಿ ಹಾಕಿದ ಭ್ರಷ್ಟ ರಾಜಕಾರಿಣಿಗಳು, ಧೃತರಾಷ್ಟ್ರನಂತೆ ತಿಳಿದು ಸುಮ್ಮನಿದ್ದ ಸರಕಾರವು ಜನರನ್ನು ಸುಲಿದು ಹಣದ ಹೊಳೆಯನ್ನು ತಮ್ಮ ಕಡೆಗೆ ಹರಿಸಿಕೊಳ್ಳುವುದರಲ್ಲಿ ಯಶಸ್ವಿಯಾಗಿವೆ. ಕ್ಲಿಷ್ಟ ಸಮಸ್ಯೆಗಳಿಗೆ ಪರಿಹಾರ ಬಹಳಷ್ಟು ಬಾರಿ ಸರಳವೇ ಇರುತ್ತದೆ. ಅದನ್ನು ಗುರುತಿಸಿ ಅಳವಡಿಸಿಕೊಳ್ಳುವ ಭಾರ ಪ್ರಜ್ಞಾವಂತ ಸಮಾಜದ್ದಾಗಿರಬೇಕು. ಅಂತಹ ಸರಳೋಪಾಯಗಳನ್ನು ಹುಡುಕಿಸಿ ಪಸರಿಸುವ ಕೆಲಸ ಶಿಕ್ಷಣ ಮತ್ತು ಸಾಹಿತ್ಯ-ಸಂಸ್ಕೃತಿ ಇಲಾಖೆಗಳದ್ದಾಗಿರಬೇಕು. ಆದರೆ ಎಲ್ಲರೂ ಕಳ್ಳರೇ! ಗೊಂದಲವನ್ನು ಹಬ್ಬಿಸಿ ಅದರ ಲಾಭ ಪಡೆಯಲು ನಿಂತ ಬೇಲಿಯೇ ಎದ್ದು ಹೊಲ ಮೇಯ್ದ ಪರಿಣಾಮವಾಗಿ ಇಂದು ಕನ್ನಡ ಶಾಲೆಗಳು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿವೆ. ಖಾಸಗಿಗೆ ಪೈಪೋಟಿ ಕೊಡುವಲ್ಲಿ ಸೋಲುತ್ತಿವೆ. ಅವುಗಳಲ್ಲಿ ಕೆಲವನ್ನು ನೋಡೋಣ ಮತ್ತಷ್ಟು ಓದು
ಖಾಸಗಿ ಕಾಲೇಜಿನ ಕಲಿಕೆ- ಬರೀ ಗಿಲೀಟಿನ ಬುಡುಬುಡಿಕೆ
ಶ್ರದ್ಧಾಹಿ ಪರಮಾಗತಿಃ-
● ನನ್ನ ಆಟೋ ಮಾರಿದರು ಮಗಳಿಗೆ ಪ್ರವೇಶ ದೊರೆಯಲಿಲ್ಲ
● ೯೫% ಅಂಕ ಪಡೆದರೂ ಕಾಲೇಜಿನಲ್ಲಿ ಸೀಟಿಲ್ಲ
● ಹಿಂದೂ ಧರ್ಮದ ಮಕ್ಕಳಿಗೆ ಪ್ರವೇಶವಿಲ್ಲ; ನಮ್ಮ ಕೋಮಿನ ಮಕ್ಕಳಿಗೆ ಆದ್ಯತೆ
● ಪೋಷಕರು ಭರಿಸಲಾಗದಷ್ಟು ಕಾಲೇಜುಗಳು ದುಬಾರಿ
● ದುಬಾರಿ ಕಾಲೇಜಿಗೆ ಸೇರಿಸಿದರೂ ಟ್ಯೂಷನ್ ಹೇಳಿಸಲೇಬೇಕು – ಸಾವಿರಾರು ರೂಪಾಯಿಗಳ ಧಂಧೆ
● ದುಬಾರಿ ಕಾಲೇಜಿಗೆ ಸೇರಿಸುವ ಕುಟುಂಬಗಳಲ್ಲಿ ಆದಾಯದ ಬಹು ಭಾಗ ಶುಲ್ಕಕ್ಕೆ ಹೋಗುವ ಕಾರಣ ಜೀವನದ ಹಲವು ಅಗತ್ಯತೆಗಳನ್ನು ಕಡಿತಗೊಳಿಸಿಕೊಂಡು ಮನೆಯ/ಮನಸ್ಸಿನ/ದೇಹದ ಆರೋಗ್ಯಕ್ಕೆ ಸಂಚಾಕಾರ ತಂದುಕೊಳ್ಳುವ ಸಾಧ್ಯತೆ ಹೆಚ್ಚು.
● ಇಷ್ಟೆಲ್ಲಾ ಕಷ್ಟ ಪಡುವ ತಾಯಿತಂದೆಯರಿಂದ ಅಥವಾ ಮಗುವೇ ಸಂವೇದನಾಶೀಲನಾಗಿದ್ದರೆ ಅದಕ್ಕೆ ಕಷ್ಟಗಳು ತಿಳಿದು ನೇರ ಅಥವಾ ಪರೋಕ್ಷ ಒತ್ತಡಕ್ಕೆ ಒಳಗಾಗಿ ವಿದ್ಯಾಭ್ಯಾಸಕ್ಕೆ ಆಡ್ದಿಯಾಗಬಹುದು.
● ಇದು ಒಂದು ಆರೋಗ್ಯಕರ ಬೆಳವಣಿಗೆ ಅಲ್ಲ.
● ಕ್ರಿಶ್ಚಿಯನ್ ಅಥವಾ ಮುಸಲ್ಮಾನರ ವಿದ್ಯಾ ಸಂಸ್ಥೆಗಳಿಗೆ ಸೇರಿ ಅಲ್ಲಿ ಹೂವು ಮುಡಿಯುವಂತಿಲ್ಲ, ಹಣೇ ಕುಂಕುಮ ಇಡುವಂತಿಲ್ಲ, ಸೀರೆ ಉಡುವಂತಿಲ್ಲ, ಬಳೆ ತೊಡುವಂತಿಲ್ಲ ಎಂಬ ತಲೆಹರಟೆ ಅಸಹಿಷ್ಣತೆಯ ಪರಮಾವಧಿಯ ನಿಷೇಧಗಳನ್ನು ಅನುಭವಿಸಬೇಕು. ಇನ್ನು ಲವ್ ಜಿಹಾದು/ಪ್ರೇಮಕ್ಕೆ ಒತ್ತಡ ಹಾಕುವುದು ಇತ್ಯಾದಿ ಸಮಸ್ಯೆಗಳು ಸೇರಿ ‘ಕಾಸು ಹಾಳು ತಲೆಯು ಬೋಳು’ ಎಂಬ ಗಾದೆಯಂತೆ ಆಗುವುದೊಂದು ಅಭಾಸ.
ಈ ಸಮಸ್ಯೆಗಳು ಎಂದಿಗೂ ಇದ್ದಂತಹವೇ.ಆದರೆ ಇತ್ತೀಚೆಗೆ ಅದರ ವ್ಯಾಪ್ತಿ, ಗಹನತೆ ಹೆಚ್ಚಾಗಿದೆ. ಮತ್ತಷ್ಟು ಓದು
“ನೆಟ್ಟಿ”ಗೇರಿದ ಪಠ್ಯ @ ನೆತ್ತಿಗೇರುವುದೇ?
-ಸುದರ್ಶನ ರಾವ್
ಅಂತರ್ಜಾಲದಲ್ಲಿ ಕನ್ನಡ ಮಾಧ್ಯಮ ಶಾಲಾ ಪಠ್ಯಗಳು
ನಾವು ಶಾಲೆಯಲ್ಲಿ ಓದುತ್ತಿರುವಾಗ ಒಂದು ತರಗತಿಯಿಂದ ಉತ್ತೀರ್ಣರಾಗಿ ಇನ್ನೊಂದು ತರಗತಿಗೆ ಹೋಗುವುದರ ಜೊತೆಗೆ ಮುಂದಿನ ತರಗತಿಯ ಪಠ್ಯ ಪುಸ್ತಕಗಳ ಬೇಟೆಯೂ ಶುರುವಾಗುತ್ತಿತ್ತು. ಏಪ್ರಿಲ್ ಹತ್ತನೇ ತಾರೀಖು ನಮ್ಮ ಶಾಲೆಗಳಲ್ಲಿ ಫಲಿತಾಂಶ ಪ್ರಕಟವಾಗಿ ಅಧಿಕೃತವಾಗಿ ಪಾಸಾಗಿದ್ದೇವೆಂದು ಘೋಷಣೆಯಾಗುತ್ತಿದ್ದಂತೆ ನಮಗಿಂತ ಒಂದು ವರ್ಷ ಮುಂದಿನ ವಿದ್ಯಾರ್ಥಿಗಳೊಂದಿಗೆ ನಮ್ಮ ಮಾತುಕತೆ ಶಾಲಾ ಆವರಣದಲ್ಲೇ ಶುರುವಾಗುತ್ತಿತ್ತು. . ಮತ್ತಷ್ಟು ಓದು
ನೀನೋದಿದ ವಿದ್ಯೆಗೆಲ್ಲಿಡುವೆ ನೈವೇದ್ಯ?
– ನಾಗೇಶ ಮೈಸೂರು
ಹೀಗೆ ಯೋಚಿಸುತ್ತ ಕುಳಿತಿದ್ದೆ ಪಾರ್ಕಿನ ಬೆಂಚೊಂದರ ಮೇಲೆ. ಶನಿವಾರ, ಭಾನುವಾರಗಳ ಒಂದೂವರೆ ತಾಸಿನ ನಡೆದಾಟ ಮುಗಿಸಿ, ಹಿಂದಿರುಗುವ ಮುನ್ನ ಅಲ್ಲೊಂದರ್ಧ ಗಂಟೆ ಕೂತು ವಿಶ್ರಮಿಸಿ ಹೊರಡುವುದು ರೂಢಿ. ಹಾಗೆ ಕೂತ ಗಳಿಗೆ, ಮನಸಿಗಷ್ಟು ಹುರುಪೆದ್ದರೆ ಒಂದು ಕವನವೊ, ಚುಟುಕವೊ ಗೀಚುವುದುಂಟು. ಇಲ್ಲವಾದರೆ, ಕಿವಿಗುಟ್ಟುವ ಹಾಡಿನ ಜತೆ ಗುನುಗುತ್ತ ಯಾವುದೋ ಆಲೋಚನೆಯಲ್ಲಿ ಕಳುವಾಗುವುದು ಉಂಟು. ಪ್ರತಿಬಾರಿಯೂ ಇದೇ ಪದೇ ಪದೇ ಪುನರಾವರ್ತನೆಯಾದರೂ ಇನ್ನು ಬೋರೆನಿಸುವ ಮಟ್ಟಕ್ಕೆ ತಲುಪದ ಕಾರಣ, ಇದನ್ನು ಮನಸಿಗೆ ಹಿತವಾದ ಪ್ರಕ್ರಿಯೆಯೆಂದೇ ಅಂದುಕೊಂಡೇನೋ, ಒಂದೆರಡು ವರ್ಷಗಳಿಂದ ಇದು ಹಾಗೆ ಮುಂದುವರೆದಿದೆ. ಮತ್ತಷ್ಟು ಓದು
ಪೇಪರು ಔಟಾಗಿ, ಎಂಟ್ರೆನ್ಸು ಬೇಕಾಗಿ..
– ನಾಗೇಶ ಮೈಸೂರು
ಅದು ಸುಮಾರು ೮೨-೮೩ ರ ಕಾಲ. ನಾವು ಅಗ ಎರಡನೆ ಪೀಯೂಸಿಯಲ್ಲಿ ಓದುತಿದ್ದೆವು. ಆಗಿನ್ನೂ ಎಂಜಿನಿಯರಿಂಗ್, ಮೆಡಿಕಲ್ ಸೀಟುಗಳಿಗೆ ಪ್ರವೇಶ ಪರೀಕ್ಷೆ ಇರಲಿಲ್ಲ – ಪೀಯೂಸಿ ಅಂಕೆ, ದರ್ಜೆಯ ಮೇಲೆ ಸೀಟು ನಿರ್ಧಾರವಾಗುತ್ತಿದ್ದ ಕಾಲ. ‘ಸೈನ್ಸ್ ತೆಗೆದುಕೊಂಡರೆ ಕೆಲಸ ಸುಲಭ ಸಿಗುತ್ತೆ’ ಅನ್ನುವ ಜನಪ್ರಿಯ ನಂಬಿಕೆಯನುಸಾರ ಪೀಸಿಎಂಬಿ ತೆಗೆದುಕೊಡಿದ್ದ ನನಗಂತೂ ಕೂತಲ್ಲಿ, ನಿಂತಲ್ಲಿ ಅದೇ ಧ್ಯಾನ, ಆತಂಕ, ಕಳವಳ.
ಫೇಲಾಗಿ ಬಿಟ್ಟರೆ ಎಲ್ಲರ ಎದುರು ಮುಖವೆತ್ತಿ ತಿರುಗುವುದು ಹೇಗೆ ಅನ್ನುವುದಕ್ಕಿಂತ, ಸುತ್ತ ಮುತ್ತಲಿನವರೆಲ್ಲ ಇಟ್ಟುಕೊಂಡಿರುವ ‘ಮಹಾ ಬುದ್ಧಿವಂತ, ಗ್ಯಾರಂಟಿ ಎಂಜಿನಿಯರೋ, ಡಾಕ್ಟರೋ ಆಗ್ತಾನೆ’ ಅನ್ನೋ ನಂಬಿಕೆ ಸುಳ್ಳಾಗಿಬಿಟ್ರೆ ಏನು ಕಥೆಯಪ್ಪ ? ಅನ್ನೋ ಅಳುಕೇ ಹೆಚ್ಚಾಗಿ ಕಿತ್ತು ತಿನ್ನುತ್ತಿತ್ತು. ಇನ್ನು ಮಿಕ್ಕಿದ್ದೆಲ್ಲ ಹೇಳುವ ಹಾಗೆ ಇಲ್ಲಾ ಬಿಡಿ – ಬೆಳಗಿನಿಂದ ಕಾಲೇಜು ಕ್ಲಾಸು, ಮುಗಿಯುತ್ತಿದ್ದಂತೆ ಸೈಕಲ್ ಏರಿ ಹೊರಟರೆ ಒಂದು ಕಡೆಯಿಂದ ಟ್ಯೂಶನ್ನಿನ ಪರಿಭ್ರಮಣನೆ.. ಎಂಜಿನಿಯರಿಂಗೋ, ಮೆಡಿಕಲ್ಲೋ ಆನ್ನೋ ಸಂದಿಗ್ದಕ್ಕೆ ಎಲ್ಲಾ ನಾಲ್ಕು ಸಬ್ಜೆಕ್ಟ್ಟಿಗೂ ಟ್ಯೂಷನ್.. ಮನೆಗೆ ಬಂದ ಮೇಲೆ ಮತ್ತೆ ರಿವಿಷನ್, ಸ್ಟಡಿ ನಡುರಾತ್ರಿಯವರೆಗೆ. ಇವಿಷ್ಟು ಬಿಟ್ಟರೆ ಬೇರೆ ಬದುಕೇ ಇಲ್ಲ ಅನ್ನೋ ತರಹದ ಜೀವನ. ಮತ್ತಷ್ಟು ಓದು
ಪರೀಕ್ಷೆಯ ಲೆಕ್ಕಾಚಾರ
– ನಾಗೇಶ ಮೈಸೂರು
ಒಲ್ಲದ ಮನಸ್ಸಿನಿಂದ ಪುಸ್ತಕ ಹಿಡಿದು ಪರೀಕ್ಷೆಗೆ ಓದಿಕೊಳ್ಳಲು ಒದ್ದಾಡುತ್ತಿದ್ದ ಮಗನನ್ನು ಸಾಮ, ದಾನ, ದಂಡ, ಭೇಧೋಪಾಯಗಳೆಲ್ಲದರ ಬಳಕೆ ಮಾಡುತ್ತ ಸಿದ್ಧಗೊಳಿಸಲು ಹೆಣಗಾಡುತ್ತಾ ಕುಳಿತಿದ್ದೆ. ಅದೇ ಹೊತ್ತಿನಲ್ಲಿ ಟೀವಿಯಲ್ಲಿ ಪ್ರವೇಶ ಪರೀಕ್ಷೆಯ ನಂತರದ ಸವಾಲು, ಮತ್ತದನ್ನೆದುರಿಸುವ ಬಗೆಯನ್ನು ಕುರಿತು ಆತಂಕಪೂರ್ಣ ಚರ್ಚೆ ನಡೆಯುತ್ತಾ ಇತ್ತು. ಒಂದು ಕಾಲದಲ್ಲಿ ನಾವೂ ಇದನ್ನೆಲ್ಲಾ ಅನುಭವಿಸಿ ಮುಂದೆ ಸಾಗಿದ್ದವರೇ. ಆದರೆ ಆ ದಿನದಲ್ಲಿ ಕಾಡಿದ್ದ ಅದೆಷ್ಟೋ ಆತಂಕ, ಒತ್ತಡಗಳು ಕೇವಲ ಆತಂಕ, ಅಜ್ಞಾನ, ನಿಖರ ಗಮ್ಯವಿಲ್ಲದ ಒದ್ದಾಟಗಳ ಕಾರಣದಿಂದ ಉಂಟಾದದ್ದು. ಇಂದು ತಿರುಗಿ ನೋಡಿದರೆ ನಾನು ಓದಿದ್ದಕ್ಕೂ, ಮಾಡುತ್ತಿರುವ ಕೆಲಸಕ್ಕೂ ನೇರ ಸಂಬಂಧವೇ ಇಲ್ಲ. ವಿದ್ಯಾರ್ಹತೆ ಕೇವಲ ಕೆಲಸ ಗಿಟ್ಟಿಸುವ ಆರಂಭದ ರಹದಾರಿಯಾಯ್ತೆಂಬುದನ್ನು ಬಿಟ್ಟರೆ ಮಿಕ್ಕೆಲ್ಲಾ ಹೊಸ ಹೋರಾಟ, ಪರೀಕ್ಷೆಗಳೇ ಎದುರಾದದ್ದು ವಾಸ್ತವ ಸತ್ಯ. ನಮ್ಮ ವಿದ್ಯಾರ್ಹತೆ, ವಿದ್ಯಾಭ್ಯಾಸ ಆ ಹೋರಾಟಕ್ಕೆ ನಮ್ಮನ್ನು ಸಿದ್ದಪಡಿಸಿರಲೇ ಇಲ್ಲ. ಆದರೂ ನಾವು ಅದೇ ಮರೀಚಿಕೆಯ ಹಿಂದೆ ನಮ್ಮ ಭವಿಷ್ಯದ ಪೀಳಿಗೆಯನ್ನು ತಳ್ಳುತ್ತ ಕುರಿಮಂದೆಗಳ ಹಾಗೆ ಸಾಗುತ್ತಿದ್ದೇವಲ್ಲ ಎಂದೆನಿಸಿ ಖೇದವೂ ಆಯ್ತು.
ಮತ್ತಷ್ಟು ಓದು