ವಿಷಯದ ವಿವರಗಳಿಗೆ ದಾಟಿರಿ

Posts tagged ‘ಶೋಷಣೆ’

20
ಸೆಪ್ಟೆಂ

ಸಿದ್ಧಾಂತಗಳ ಚರಿತ್ರೆ – 3 ಕಮ್ಯುನಿಸಂ: ( ಅಪ್ರಸ್ತುತ ಸಿದ್ಧಾಂತ, ಅವಾಸ್ತವಿಕ ಪರಿಹಾರ )

– ರೋಹಿತ್ ಚಕ್ರತೀರ್ಥ
ಸಿದ್ಧಾಂತಗಳ ಚರಿತ್ರೆ – 1 (ಕಾರ್ಲ್ ಮಾರ್ಕ್ಸ್ ಕಟ್ಟಿಕೊಟ್ಟ ಕಲ್ಪನೆಯ ಸ್ವರ್ಗ)
ಸಿದ್ಧಾಂತಗಳ ಚರಿತ್ರೆ – 2 ( ಆತನ ಚಿಂತನೆ ಅರ್ಧ ಭೂಗೋಲವನ್ನು ನಿಯಂತ್ರಿಸಿತು! )
karl-marx-wikimedia-commonsಕಮ್ಯುನಿಸ್ಟ್ ಚಿಂತನೆಯನ್ನು ಕಾರ್ಲ್ ಮಾರ್ಕ್ಸ್ ಪ್ರಾರಂಭಿಸಿದವನಲ್ಲ; ಆದರೆ ಅದಕ್ಕೊಂದು ಸ್ಪಷ್ಟ ರೂಪ ಕೊಟ್ಟವನು ಆತ. ಮಾರ್ಕ್ಸ್ ತೀರಿಕೊಂಡ ಮೂವತ್ತು ವರ್ಷಗಳ ನಂತರ ರಷ್ಯದಲ್ಲಿ ಕ್ರಾಂತಿಯಾಗಿ ಲೆನಿನ್ ಅಧಿಪತ್ಯ ಬಂತು. ಮಾರ್ಕ್ಸ್ ನ ಅದುವರೆಗಿನ ಅಪ್ರಕಟಿತ ಕೃತಿಗಳೆಲ್ಲ ಒಂದರ ಮೇಲೊಂದರಂತೆ ಸಾಲಾಗಿ ಪ್ರಕಟವಾಗಿ ಜಗತ್ತಿನ ಹಲವು ದೇಶಗಳಲ್ಲಿ, ಹಲವು ಯುವಕರ ಕೈಗೆ ಬಂದು, ಅವರೆಲ್ಲ ತಮ್ಮ ಸುತ್ತಲಿನ ಹಳೆಯ ವ್ಯವಸ್ಥೆಯನ್ನು ಕಿತ್ತೊಗೆಯುವ ಸಂಕಲ್ಪ ತೊಡುವಂತಾಯಿತು. 1920ರಿಂದ 1960ರವರೆಗಿನ ಅವಧಿ ಕಮ್ಯುನಿಸಂ ಮತ್ತು ಮಾಕ್ರ್ಸಿಸಂಗಳ ಉಚ್ಛ್ರಾಯಕಾಲ. ರಷ್ಯ, ಚೀನಾ, ಕೊರಿಯ, ಕಾಂಬೋಡಿಯಾ, ಜರ್ಮನಿ, ಗ್ರೇಟ್ ಬ್ರಿಟನ್, ಫ್ರಾನ್ಸ್, ಕ್ಯೂಬಾದಂಥ ಹಲವು ದೇಶಗಳು ಮಾಕ್ರ್ಸ್ ಚಿಂತನೆಯ ಪ್ರಯೋಗ ಶಾಲೆಗಳಾದವು. ಸ್ವಾತಂತ್ರ್ಯಾ ನಂತರದ ಮೊದಲ ಮೂರು ದಶಕಗಳಲ್ಲಿ ಭಾರತ ಕೈಗೊಂಡ ಹತ್ತುಹಲವು ಯೋಜನೆಗಳಲ್ಲಿ ಸೋವಿಯೆಟ್ ರಷ್ಯಾ ಪ್ರಣೀತ ಕಮ್ಯುನಿಸಂನ ದಟ್ಟ ಛಾಯೆಯಿದ್ದದ್ದು ಸುಸ್ಪಷ್ಟ. ಆದರೆ 1970ರ ನಂತರ ರಷ್ಯಾ ಹಲವು ಹೋಳುಗಳಾಗಿ ಒಡೆದುಹೋಗಿ ಶೀತಲಸಮರ ಅಘೋಷಿತ ಅಂತ್ಯ ಕಂಡಿದ್ದರಿಂದ ಕಮ್ಯುನಿಸಂ ಹಿನ್ನಡೆಯನುಭವಿಸಿತು. ಅಲ್ಲದೆ ಕಮ್ಯುನಿಸಂನ್ನು ಅಪ್ಪಿಕೊಂಡ ದೇಶಗಳೆಲ್ಲ ಸರ್ವಾಧಿಕಾರಿಗಳ ನಿಯಂತ್ರಣಕ್ಕೊಳಪಟ್ಟು ಬೃಹತ್ ಪ್ರಮಾಣದ ಹತ್ಯಾಕಾಂಡಗಳಿಗೆ ಸಾಕ್ಷಿಯಾದ್ದರಿಂದ, ಮಾರ್ಕ್ಸ್ ನ ಚಿಂತನೆಗಳ ಮೇಲಿದ್ದ ಭರವಸೆಗಳೆಲ್ಲ ಕಮರಿಹೋದವು. ಕಮ್ಯುನಿಸಂನ ಮೆಕ್ಕಾ ಎಂದೇ ಕರೆಸಿಕೊಳ್ಳುತ್ತಿದ್ದ ರಷ್ಯಾದೊಳಗಿನ ಬಡತನ, ಶೋಷಣೆ, ಸ್ವಾತಂತ್ರ್ಯಹರಣ, ಹಿಂಸಾಚಾರಗಳ ಕಟು ಕತೆಗಳು ಹೊರಜಗತ್ತಿಗೆ ತಿಳಿಯತೊಡಗಿದ್ದು 70ರ ದಶಕದ ನಂತರ; ಅದೂ ತುಣುಕು ತುಣುಕಾಗಿ. ಮತ್ತಷ್ಟು ಓದು »

17
ಸೆಪ್ಟೆಂ

ಸಿದ್ಧಾಂತಗಳ ಚರಿತ್ರೆ – 2 ( ಆತನ ಚಿಂತನೆ ಅರ್ಧ ಭೂಗೋಲವನ್ನು ನಿಯಂತ್ರಿಸಿತು! )

– ರೋಹಿತ್ ಚಕ್ರತೀರ್ಥ
ಸಿದ್ಧಾಂತಗಳ ಚರಿತ್ರೆ – 1 (ಕಾರ್ಲ್ ಮಾರ್ಕ್ಸ್ ಕಟ್ಟಿಕೊಟ್ಟ ಕಲ್ಪನೆಯ ಸ್ವರ್ಗ)
karl-marx-wikimedia-commonsಕಾರ್ಲ್ ಮಾರ್ಕ್ಸ್ ನ ಒಟ್ಟು ಚಿಂತನೆಯನ್ನು ಹೀಗೆ ಸಂಗ್ರಹಿಸಬಹುದು: ಕೈಗಾರಿಕೆಗಳು ಬೆಳೆದು, ಯಂತ್ರ ಸಂಸ್ಕೃತಿಯ ಮೂಲಕ ಆಧುನಿಕತೆಯು ಸಮಾಜವನ್ನು ಪ್ರವೇಶಿಸಿರುವುದರಿಂದ ಮನುಷ್ಯ ಜಾಗೃತನಾಗಬೇಕು. ಯಂತ್ರಗಳು ಮನುಷ್ಯನ ಉದ್ಯೋಗವನ್ನು ಕಸಿಯುವುದು ಮಾತ್ರವಲ್ಲ; ಸಮಾಜದಲ್ಲಿ ಬಹು ದೊಡ್ಡ ಆರ್ಥಿಕ ಅಸಮತೋಲನವನ್ನು ಸೃಷ್ಟಿಸುತ್ತವೆ. ಯಂತ್ರಗಳಿಂದ ಮನುಷ್ಯ ತನ್ನ ಅಸ್ಮಿತೆಯನ್ನು ಕಳೆದುಕೊಳ್ಳುತ್ತಾನೆ. ಯಾವ ಕೆಲಸವನ್ನು ಯಾರೂ ಮಾಡಬಹುದೆಂಬ ಸನ್ನಿವೇಶ ಸೃಷ್ಟಿಯಾಗುತ್ತದೆ. ಇದರಿಂದಾಗಿ ಪ್ರತಿಯೊಬ್ಬರಿಗೂ ಕೆಲಸದಲ್ಲಿದ್ದ ಶ್ರದ್ಧೆ, ಪ್ರೀತಿ, ಆತ್ಮೀಯತೆಗಳು ಕಾಣೆಯಾಗುತ್ತವೆ. ತಾವು ಬಯಸಿದಂತೆ ಕೆಲಸಗಾರರನ್ನು ಬಳಸಿಕೊಳ್ಳುವ ಸ್ವಾತಂತ್ರ್ಯವನ್ನು ಬಂಡವಾಳಶಾಹಿಗಳು ಪಡೆಯುತ್ತಾರೆ. ಇದರಿಂದಾಗಿ ಕಾರ್ಮಿಕರನ್ನು ಅತಿ ಕಡಿಮೆ ಸಂಬಳಕ್ಕೆ ದುಡಿಸಿಕೊಂಡು ಹೊಸ ಬಗೆಯ ಗುಲಾಮಗಿರಿ ನಡೆಸಲು ಅನುಕೂಲ ಮಾಡಿಕೊಟ್ಟಂತಾಗುತ್ತದೆ. ಬಂಡವಾಳಶಾಹಿಗಳು ಲಾಭ ಎಂದು ಏನನ್ನು ಕರೆಯುತ್ತಾರೋ ಅದು ಶೋಷಣೆಯ ಮೂರ್ತ ಮೊತ್ತ. ಮತ್ತಷ್ಟು ಓದು »

11
ಸೆಪ್ಟೆಂ

ಸಿದ್ಧಾಂತಗಳ ಚರಿತ್ರೆ – 1 (ಕಾರ್ಲ್ ಮಾರ್ಕ್ಸ್ ಕಟ್ಟಿಕೊಟ್ಟ ಕಲ್ಪನೆಯ ಸ್ವರ್ಗ)

– ರೋಹಿತ್ ಚಕ್ರತೀರ್ಥ

karl-marx-wikimedia-commonsಹತ್ತೊಂಬತ್ತು ಮತ್ತು ಇಪ್ಪತ್ತನೇ ಶತಮಾನದ ಪ್ರಪಂಚವನ್ನು ಹೆಚ್ಚು ಪ್ರಭಾವಿಸಿದ, ಬದಲಾಯಿಸಿದ ಸಿದ್ಧಾಂತಗಳಲ್ಲಿ ಮೊದಲ ಸ್ಥಾನದಲ್ಲಿ ನಿಲ್ಲುವುದು ಕಮ್ಯುನಿಸಂ. ಇಪ್ಪತ್ತನೇ ಶತಮಾನದಲ್ಲಿ ನಡೆದ ಹಲವು ಮಹತ್ವದ ರಾಜಕೀಯ ಚಳುವಳಿಗೆ ಕಮ್ಯುನಿಸಂ ಮೂಲದ್ರವ್ಯವಾಗಿ ಒದಗಿಬಂತು. ಕಮ್ಯುನಿಸಂ ಎಂದರೇನು, ಅದು ಜಗತ್ತನ್ನು ಪ್ರಭಾವಿಸಿದ ಬಗೆ ಹೇಗೆ, 1970ರ ನಂತರ ಅದು ಅವನತಿಯತ್ತ ಸಾಗಲು ಕಾರಣವಾದ ಸನ್ನಿವೇಶಗಳೇನು, ಇಂದಿನ ಯುಗಕ್ಕೆ ಕಮ್ಯುನಿಸಂ ಪ್ರಸ್ತುತವೇ ಎಂಬ ವಿಚಾರಗಳನ್ನು ತಿಳಿದುಕೊಳ್ಳಲು, ಮೊದಲಿಗೆ ನಾವು ಅದರ ಹುಟ್ಟಿನ ದಿನಗಳ ಅವಲೋಕನ ಮಾಡಬೇಕಾಗುತ್ತದೆ. ಮತ್ತಷ್ಟು ಓದು »

5
ಆಗಸ್ಟ್

ಅಪರಾಧಕ್ಕೆ ಜಾತಿ ಬಣ್ಣ ಬಳಿಯುವುದೇಕೆ?

– ರಾಕೇಶ್ ಶೆಟ್ಟಿ

victims_and_witnesses_of_crime_crimeಕಳೆದ ವಾರ ಎರಡು ಪ್ರಕರಣಗಳು ರಾಷ್ಟ್ರಮಟ್ಟದಲ್ಲಿ ಸುದ್ದಿಯಾದವು. ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಬಿಎಸ್ಪಿ ನಾಯಕಿ ಮಾಯಾವತಿಯವರ ಬಗ್ಗೆ, ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿದ್ದ ದಯಾಶಂಕರ್ ಮಾಡಿದ ಕೆಟ್ಟ ಟೀಕೆಯ ಪ್ರಕರಣ ಮೊದಲನೆಯದು.

ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ, ದಯಾಶಂಕರ್ ಮೇಲೆ BJP ಪಕ್ಷ ಆರು ವರ್ಷಗಳ ಕಾಲ ಉಚ್ಚಾಟನೆಯಂತಹ ಕಠಿಣ ಕ್ರಮ ಕೈಗೊಂಡಿದೆ. ಅವರ ಮೇಲೆ FIR ಕೂಡ ದಾಖಲಾಗಿದೆ. ಆದರೆ, ದಯಾಶಂಕರ್ ಅವರ ಮಗಳನ್ನು, ಮಡದಿಯನ್ನು ನಮಗೊಪ್ಪಿಸಿ ಎಂದಿರುವ BSP ನಾಯಕ ನಸೀಮುದ್ದೀನ್ ವಿರುದ್ಧ ಮಾಯಾವತಿ ಯಾವ ಕ್ರಮ ಕೈಗೊಂಡಿದ್ದಾರೆ ? ಎಷ್ಟು ಕೇಸುಗಳು ದಾಖಲಾಗಿವೆ ? ದಯಾಶಂಕರ್ ಅಕ್ರಮ ಸಂತಾನ ಎನ್ನುವ ಮೂಲಕ, ದಯಾಶಂಕರ್ ಅವರ ತಾಯಿಗೆ ಅವಮಾನ ಮಾಡಿದ BSP ಶಾಸಕಿ ಉಷಾ ಚೌಧರಿ ವಿರುದ್ಧ ಮಾಯಾವತಿ ಯಾವ ಕ್ರಮ ಕೈಗೊಂಡಿದ್ದಾರೆ ? ಎಷ್ಟು ಕೇಸುಗಳು ದಾಖಲಾಗಿವೆ ? ದಯಾಶಂಕರ್ ನಾಲಗೆ ಕತ್ತರಿಸಿ ತಂದವರಿಗೆ ಐವತ್ತು ಲಕ್ಷ ಕೊಡುತ್ತೇನೆ ಎಂದ BSP ಪಕ್ಷದ ನಾಯಕಿ ಜನ್ನತ್ ಜಹಾನ್ ಮೇಲೆ ಮಾಯಾವತಿ ಯಾವ ಕ್ರಮ ಕೈಗೊಂಡಿದ್ದಾರೆ ? ಕ್ರಮ ಕೈಗೊಳ್ಳುವುದು ಪಕ್ಕಕ್ಕಿರಲಿ. ಮಾಯವತಿಯವರು, ಅವರ ಕಾರ್ಯಕರ್ತರ ಘೋಷಣೆಗಳನ್ನು ಸಮರ್ಥಿಸಿಕೊಂಡಿದ್ದಾರೆ! ಮಾಯಾವತಿಯವರಿಗಾದರೆ ಮಾತ್ರ ನೋವು, ದಯಾಶಂಕರ್ ಅವರ ತಾಯಿ, ಮಗಳು, ಹೆಂಡತಿಗಾಗುವ ನೋವು ನೋವಲ್ಲವೇ? ಮತ್ತಷ್ಟು ಓದು »

17
ಜೂನ್

ಭಿಕ್ಷೋದ್ಯಮ ಕ್ಷೇತ್ರದಲ್ಲೂ ಮೀಸಲಾತಿಗಾಗಿ ಬಡಿದಾಡಿ: ಕಾಣೇಶ್ ಜಲ್ಲಿಕಟ್ಟು ಸಲಹೆ (ಸುಳ್ಸುದ್ದಿ)

praveenkumar mavina kadu

ಕಡಿಮೆ ಸಂಖ್ಯೆಯಲ್ಲಿರುವ ಸರಕಾರೀ ಹುದ್ದೆಗಳಿಗಾಗಿ ಹೊಡೆದಾಡುತ್ತಾ ಕುಳಿತರೆ ಉತ್ತಮ ಲಾಭವಿರುವ ಭಿಕ್ಷೋದ್ಯಮ ಬಲಾಢ್ಯರ ಪಾಲಾಗುತ್ತದೆ. ಆದ್ದರಿಂದ ಭಿಕ್ಷೋದ್ಯಮ ಕ್ಷೇತ್ರದತ್ತಲೂ ಗಮನ ಹರಿಸಿ, ಅಲ್ಲಿಯೂ ಮೀಸಲಾತಿ ಜಾರಿಗೆ ಹೋರಾಟ ನಡೆಸುವ ಮೂಲಕ ಶೋಷಿತರು ಸ್ವಾಭಿಮಾನಿ ಬದುಕು ಕಟ್ಟಿಕೊಳ್ಳಬೇಕು ಎಂದು ಹಿರಿಯ ಬುದ್ದಿಜೀವಿ ಪತ್ರಕರ್ತ ರಾಜಕಾರಣಿ ಶ್ರೀ ಕಾಣೇಶ್ ಜಲ್ಲಿಕಟ್ಟು ಸಲಹೆ ನೀಡಿದರು. ಅವರು ಶಿವಮೊಗ್ಗದಲ್ಲಿ ನಿನ್ನೆ ‘ಪ್ರಗತಿಪರ ಬರ್ನ್ ಆಲ್ ವೇದಿಕೆ’ ಹಮ್ಮಿಕೊಂಡಿದ್ದ “ಮೋದಿ ವಿರೋಧಿಗಳ ತವಕ ತಲ್ಲಣಗಳು” ಎನ್ನುವ ವಿಚಾರಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಿದ್ದರು. ಮತ್ತಷ್ಟು ಓದು »

28
ಮೇ

ಭಾರತದಲ್ಲಿ ಶೂದ್ರರ ಶೋಷಣೆ ನಡೆದಿದೆಯೇ??

– ವಲವಿ ವಿಜಯಪುರ

c609ಸಾಮಾನ್ಯವಾಗಿ ಭಾರತದಲ್ಲಿ ಮನುಸ್ಮೃತಿಯು ಶೂದ್ರರಿಗೆ ವೇದಗಳನ್ನು ಕಲಿಯುವ ಅಧಿಕಾರ ನೀಡಲಿಲ್ಲ. ಅವರಿಗೆ ಸಂಸ್ಕೃತದ ಜ್ಞಾನವನ್ನು  ಕೊಡಲಿಲ್ಲ. ವಿದ್ಯೆಯನ್ನು ಶೂದ್ರರಿಂದ ಮುಚ್ಚಿಡಲಾಯಿತು.  ಮೇಲ್ವರ್ಗದವರ ಮನೆಯ ಸಗಣಿಯನ್ನು ಬಾಚುವದೇ ಅವರ ಕೆಲಸವಾಗಿತ್ತು. ಯಾವುದೇ ಉನ್ನತ ಹುದ್ದೆಗಳನ್ನು ನೀಡದೇ ಅವರನ್ನು ವಂಚಿಸಲಾಯಿತು. ಮತ್ತು ಈ ವಂಚನೆಯಲ್ಲಿ ಅಧಿಕವಾಗಿ ಬ್ರಾಹ್ಮಣರು ಭಾಗೀದಾರರು. ಸಮಾಜವೆಂಬ ಪಿರಮಿಡ್ ಆಕೃತಿಯಲ್ಲಿ ಅತ್ಯಂತ ಮೇಲೆ ಬ್ರಾಹ್ಮಣನಿದ್ದರೆ ಅತ್ಯಂತ ಕೆಳಸ್ತರದಲ್ಲಿ ಶೂದ್ರನಿದ್ದಾನೆ ಮತ್ತು ಅವನನ್ನು ವಿಶೇಷವಾಗಿ ಬ್ರಾಹ್ಮಣರು ಶೋಷಣೆ ಮಾಡಿದ್ದಾರೆ ಅನ್ನುವದು ಆಧುನಿಕ ಶಿಕ್ಷಣ ಪಡೆದವರ ವಾದವಾಗಿದೆ. ಮತ್ತಷ್ಟು ಓದು »

24
ಏಪ್ರಿಲ್

ಶನಿಯ ಬೆನ್ನೇರಿದ ಕಾಕ, ಇದೆಲ್ಲ ನಾಟಕ ಯಾಕ?

– ರೋಹಿತ್ ಚಕ್ರತೀರ್ಥ

shani-shingnapur_650x400_41460171606ನಮ್ಮ ದೇಶದಲ್ಲಿ ಖರ್ಚಿಲ್ಲದೆ ಪ್ರಸಿದ್ಧಿ ಒದಗಿಸುವ ಎರಡು ಸಂಗತಿಗಳಿವೆ. ಒಂದು ಬುದ್ಧಿಜೀವಿಯಾಗುವುದು, ಇನ್ನೊಂದು ಮಹಿಳಾವಾದಿಯಾಗುವುದು. ಬುದ್ಧಿಜೀವಿಯಾಗಬೇಕಾದರೆ ನೀವು ಸೆಕ್ಯುಲರ್ ಎಂದು (ಏನೆಂದು ಗೊತ್ತಿರದಿದ್ದರೂ) ತೋರಿಸಿಕೊಳ್ಳಬೇಕು. ಹಿಂದೂಗಳನ್ನು, ಅವರ ಆಚರಣೆ, ಪದ್ಧತಿ, ಹಬ್ಬಹರಿದಿನಗಳನ್ನು ಬಯ್ಯಬೇಕು. ಹಿಂದೂ ದೇವರನ್ನು, ದೇವಾಲಯಗಳನ್ನು ಪ್ರಶ್ನಿಸಬೇಕು. ಮುಸ್ಲಿಂ ಮತ್ತು ಕ್ರಿಶ್ಚಿಯನ್ ರಿಲಿಜನ್ನುಗಳನ್ನು ಓಲೈಸಬೇಕು. ಮೋದಿಯನ್ನು ತೆಗಳಬೇಕು. ಭಯೋತ್ಪಾದಕರನ್ನು, ನಕ್ಸಲರನ್ನು ಬೆಂಬಲಿಸಬೇಕು. ಎಲ್ಲಕ್ಕಿಂತ ಮುಖ್ಯವಾಗಿ ನಿಮಗೆ ಬೆನ್ನುಮೂಳೆ ಇರಬಾರದು. ಜೊತೆಗೆ, ಅರ್ಥವತ್ತಾದ ಮಾತು, ತರ್ಕಬದ್ಧವಾದ ಚಿಂತನೆ – ಇವೆರಡರ ಬಗ್ಗೆ ನೀವು ಎಂದೆಂದೂ ತಲೆ ಕೆಡಿಸಿಕೊಂಡಿರಬಾರದು. ಹಾಗೆಯೇ, ಮಹಿಳಾವಾದಿಯಾಗುವುದು ಕೂಡ ಸುಲಭ. ಮೊದಲಿಗೆ ಮಹಿಳಾವಾದ = ಪುರುಷದ್ವೇಷ ಎಂಬ ಸಮೀಕರಣ ಬರೆಯಿರಿ. ಮಹಿಳೆಗೆ ಸ್ವಾತಂತ್ರ್ಯ ಬೇಕು ಅನ್ನಿ. ಉದ್ಯೋಗದಲ್ಲಿ, ಸಂಸತ್ತಿನಲ್ಲಿ, ಬಸ್ಸಿನಲ್ಲಿ, ಚಿತ್ರಮಂದಿರದಲ್ಲಿ, ನಡೆದಾಡುವ ರಸ್ತೆಯಲ್ಲಿ – ಹೀಗೆ ಎಲ್ಲೆಲ್ಲೂ ಹೆಣ್ಣಿಗೆ ಸಮಾನತೆ ಬೇಕೆಂದು ಬೊಬ್ಬೆ ಹೊಡೆಯಿರಿ. ಉದ್ಧೇಶವೇ ಇಲ್ಲದೆ ಪ್ರತಿಭಟನೆ ಮಾಡಿದರೂ ಓಕೆ. ವಿರೋಧಿಸದವರಿಗೂ ಧಿಕ್ಕಾರ ಕೂಗಿದರೂ ಓಕೆ. ಒಟ್ಟಲ್ಲಿ ನಿಮ್ಮ ಮಾತು, ಕೂಗಾಟ, ಹಾರಾಟ, ಹೋರಾಟವೆಲ್ಲ ನಾಲ್ಕು ಜನಕ್ಕೆ ಗೊತ್ತಾಗಬೇಕು, ಪತ್ರಿಕೆ ಟಿವಿಗಳಲ್ಲಿ ಬರಬೇಕು. ಮತ್ತು ಇವೆಲ್ಲದರ ಜೊತೆ, ನೀವು, ಮೇಲೆ ಹೇಳಿದ ಬುದ್ಧಿಜೀವಿಯೂ ಆಗಿರಬೇಕಾದ್ದು ಅನಿವಾರ್ಯ. ಎರಡು ವರ್ಷಗಳ ಹಿಂದೆ ಒಂದು ಬುದ್ಧಿಜೀವಿ ಮಹಿಳಾಪರ ಲೇಖಕಿ, “ಮೋದಿಯ ಮುಖ ನೋಡಿದರೇನೇ ಆತ ಸ್ತ್ರೀದ್ವೇಷಿ ಅನ್ನೋದು ಗೊತ್ತಾಗುತ್ತದೆ” ಎಂದಿದ್ದರು. ಇಂಥ ಹೇಳಿಕೆ ಕೊಡುವವರಿಗೆ ಮಹಿಳಾಪರ ಸಂಘಟನೆಗಳಲ್ಲಿ ಒಳ್ಳೆಯ ಬೇಡಿಕೆ ಇದೆ. ಮತ್ತಷ್ಟು ಓದು »

13
ಜುಲೈ

ಬಹುಶಃ ನನಗೇ ಈ ಶೋಷಣೆ,ಸಮಾನತೆ,ಸಹಪಂಕ್ತಿ ಇವೆಲ್ಲಾ ಅರ್ಥವಾಗೊಲ್ಲ

– ರಾಘವೇಂದ್ರ ಸುಬ್ರಹ್ಮಣ್ಯ,ಶೃಂಗೇರಿ

Samaanateಯಾಕಂದ್ರೆ ನಮ್ಮೂರಲ್ಲಿ ದೇವಸ್ಥಾನಕ್ಕೆ ಒಳಗೆ ಬಿಡೋದ್ರ ಬಗ್ಗೆ ಗಲಾಟೆಯೇ ಇಲ್ಲ. ಶೃಂಗೇರಿ ಅಂತಲ್ಲ, ಸುತ್ತ ಮುತ್ತಲಿನ ಯಾವೂರಿನಲ್ಲೂ ‘ಏಯ್ ಹೊರಗೆ ಹೋಗೋ, ದೇವಸ್ಥಾನದೊಳಗೆ ನೀನು ಬರೋ ಹಾಗಿಲ್ಲ’ ಅನ್ನಲ್ಲ. ಅಲ್ಲಿ ಜನರನ್ನ ಹೊರಗಿಡೋದು ಬಿಡಿ, ಉಲ್ಟಾ, ಕೆಲವಷ್ಟು ಕೆಲಸಗಳಿಗೆ ಕೆಲಜನರು ಬರದಿದ್ರೆ ಮುಖ್ಯ ಕೆಲಸಗಳೇ ನಡೀತಾ ಇರ್ಲಿಲ್ಲ. ಉದಾಹರಣೆಗೆ, ಭೋವಿ ಜನಾಂಗದ ಜನರು ಬಂದು ಪಲ್ಲಕ್ಕಿ ಹೊರ್ಲಿಲ್ಲ ಅಂದ್ರೆ, ಸಾರದಬಾಗಿಲಿನಿಂದ ಜನ ಬಂದು ದೀಪ, ದೀವಟಿಗೆ, ಚಾಮರ ಹಿಡೀಲಿಲ್ಲ ಅಂದ್ರೆ ನವರಾತ್ರಿಯ ಅಡ್ಡಪಲ್ಲಕ್ಕಿಯ ಉತ್ಸವವೇ ನಡಿತಾ ಇರ್ಲಿಲ್ಲ. ಅವತ್ತಿನ ಮಟ್ಟಿಗೆ ನಾನಂತೂ ಅದನ್ನ ಶೋಷಣೆ ಅಂತಾ ಅಂದ್ಕೊಳ್ಳಿಲ್ಲ. ಉಲ್ಟಾ ಅದು ನಮ್ಮ ಐಡೆಂಟಿಟಿಯಾಗಿತ್ತು. ಇವತ್ತಿನ ಹುಡುಗ್ರು ಏನಂದ್ಕೊಳ್ತಾರೋ ಗೊತ್ತಿಲ್ಲಪ್ಪ. ಶೃಂಗೇರಿಯಲ್ಲಂತೂ ಬುರ್ಖಾ ಹಾಕಿಕೊಂಡೇ ಕೆಲ ಹೆಣ್ಣುಮಕ್ಕಳು ದೇವಸ್ಥಾನದಲ್ಲಿರೋ ಮೀನುಗಳಿಗೆ ಮಂಡಕ್ಕಿ ತಿನ್ಸೋಕೆ ಬಂದಿರೋದನ್ನ ನೋಡಿದ್ದೇನೆ. ದೇವಸ್ಥಾನವೆಂದರೆ ನಾಲ್ಕು ಜನ ಸೇರೋ ಜಾಗ ಅಂದುಕೊಂಡು ಬೆಳೆದ ನನಗೆ ಶೋಷಣೆಯ ಆಂಗಲ್ಲೇ ಹೊಳೆಯಲಿಲ್ಲ. ಅದೂ ಅಲ್ದೆ ‘ತಿಂಗಳ ಆ ದಿನಗಳಲ್ಲಿ’ ದೇವಸ್ಥಾನದೊಳಗೆ ಹೋಗದ ನನ್ನ ಅತ್ತೆಯಂದಿರು, ಉತ್ಸವ ಮೂರ್ತಿ ಹೊರಗೆ ಬಂದಾಗ ಕೈಮುಗಿದು ‘ನೋಡು ನಾವು ಒಳಗೆ ಹೋಗದಿದ್ರೇನಂತೆ, ಶಾರದಮ್ಮನೇ ಹೊರಗೆ ಬಂದು ನಮಗೆ ದರ್ಶನ ಕೊಟ್ಲು’ ಅಂತಾ ಹೇಳಿದ್ದು ನನಗೆ ತಮಾಷೆ ಎನ್ನಿಸಲೇ ಇಲ್ಲ. ಅವೊಂತರಾ pradigm shift ಮಾಡುವಂತಾ ಮಾತುಗಳಾಗಿಬಿಟ್ಟವು. ಆದರೂ ಕೆಲವರು ‘ನಮ್ಮನ್ನು ದೇವಸ್ಥಾದೊಳಕ್ಕೆ ಬಿಡಲಿಲ್ಲ’ ಅಂತಾ ಹೋರಾಟ ಮಾಡುವಾಗ ನನಗೆ ಆಶ್ಚರ್ಯವಾಗುತ್ತೆ. ಅದಕ್ಕೇ ಏನೋಪ್ಪ ನನಗೆ ಇವೆಲ್ಲಾ ಅರ್ಥವಾಗೊಲ್ಲ.

ಮತ್ತಷ್ಟು ಓದು »

6
ನವೆಂ

ವೇಶ್ಯಾವೃತ್ತಿ: ಮಹಿಳೆಯರ ರಕ್ಷಣೆಗೆ ಮಹಿಳೆಯರ ಅತ್ಯಾಚಾರವೇ?

– ತುರುವೇಕೆರೆ ಪ್ರಸಾದ್

ಮಹಿಳಾ ದೌರ್ಜನ್ಯವೇಶ್ಯಾವೃತ್ತಿಯನ್ನು ಕಾನೂನು ಬದ್ಧಗೊಳಿಸಬೇಕು. ಇದರಿಂದ ಸ್ವಲ್ಪ ಮಟ್ಟಿಗೆ ಸ್ತ್ರೀಯರ ಮೇಲಿನ ದೌರ್ಜನ್ಯಗಳು ಹಾಗೂ ಅತ್ಯಾಚಾರಗಳು ನಿಯಂತ್ರಣಕ್ಕೆ ಬರುತ್ತವೆ ಎಂದು ಹಲವರು ಅಭಿಪ್ರಾಯಪಡುತ್ತಾರೆ. ಪ್ರಪಂಚದ ಹಲವು ಕಡೆ ನಡೆಸಿದ ಸಮೀಕ್ಷೆ ಹಾಗೂ ಅಧ್ಯಯನಗಳಲ್ಲಿ ಇದಕ್ಕೆ ಪೂರಕವಾದ ಅಂಕಿ ಅಂಶಗಳು ಸಿಕ್ಕಿವೆ. ಅವುಗಳಲ್ಲಿ ಕೆಲವನ್ನು ಉದಾಹರಿಸುವುದಾದರೆ ಎನ್‍ಬಿಇಎಲ್ ಅಧ್ಯಯನದ ಪ್ರಕಾರ ರೋಡ್ ದ್ವೀಪದಲ್ಲಿ 2003-2009ರ ಅವಧಿಯಲ್ಲಿ ವೇಶ್ಯಾ ವೃತ್ತಿಯನ್ನು ಕಾನೂನುಬದ್ಧಗೊಳಿಸಿದಾಗ ಶೇ.39 ರಷ್ಟು ಅತ್ಯಾಚಾರ ಪ್ರಕರಣಗಳು ಕಡಿಮೆಯಾಗಿದ್ದವು. ಗೊನೇರಿಯಾ ಕಾಯಿಲೆಯ ಹರಡುವಿಕೆ ಪ್ರಮಾಣ    ಶೇ.45ರಷ್ಟು ಕಡಿಮೆಯಾಗಿತ್ತು. ಬೈಲಾರ್ ವಿಶ್ವವಿದ್ಯಾಲಯದ ಸಂಪನ್ಮೂಲ ವ್ಯಕ್ತಿಗಳಾದ ಸ್ಕಾಟ್ ಕನ್ನಿಂಗ್ ಹ್ಯಾಮ್ ಮತ್ತು ಮಾನಿಷಾ ಶಾ ವೇಶ್ಯೆಯರ ಮೇಲಿನ ಕ್ರಿಮಿನಲ್ ಮೊಕದ್ದಮೆಗಳನ್ನು ಹಿಂದೆ ತೆಗೆದ ಪರಿಣಾಮ ಹೆಂಗಸರ ಮೇಲಿನ ಅಪರಾಧ ಹಾಗೂ ದೌರ್ಜನ್ಯಗಳ ಸಂಖ್ಯೆ ಇಳಿಮುಖವಾಗಿತ್ತು ಎಂಬುದನ್ನು ಗುರುತಿಸಿದ್ದಾರೆ. ನಾರ್ತ್ ಈಸ್ರ್ಟನ್ ಸ್ಟೇಟ್ ಯೂನಿವಸಿಟಿಯ ಕಿರ್ಬಿ ಆರ್. ಕಂಡೀಫ್ ಅಮೇರಿಕಾದಲ್ಲಿ ವೇಶ್ಯಾವೃತ್ತಿಯನ್ನು ಕಾನೂನುಬದ್ಧಗೊಳಿಸಿದರೆ       ಶೇ.25ರಷ್ಟು ಅಂದರೆ 25ಸಾವಿರ ಅತ್ಯಾಚಾರ ಪ್ರಕರಣಗಳು ಕಡಿಮೆಯಾಗಬಹುದೆಂದು ಬಹಳ ಹಿಂದೆಯೇ ಸಲಹೆ ನೀಡಿದ್ದರು. ಕ್ವೀನ್ಸ್‍ಲ್ಯಾಡ್‍ನಲ್ಲಿ ಕಾನೂನುಬದ್ಧವಾಗಿ ನಡೆಸುತ್ತಿದ್ದ ವೇಶ್ಯಾಗೃಹಗಳನ್ನು ಮುಚ್ಚಿದಾಗ ಅಲ್ಲಿನ ಅತ್ಯಾಚಾರ ಪ್ರಕರಣಗಳ ಪ್ರಮಾಣ ಶೇ.149ಕ್ಕೆ ಏರಿತು ಎಂದು ಲಿಂಡಾ ರಿಚ್‍ಮ್ಯಾನ್ ಅಭಿಪ್ರಾಯ ಪಡುತ್ತಾರೆ. 2004ರಲ್ಲಿ ಜರ್ಮನಿಯಲ್ಲಿ ವೇಶ್ಯಾವೃತ್ತಿಯನ್ನು ಕಾನೂನುಬದ್ಧಗೊಳಿಸಿ ನೊಂದಾಯಿಸಿದ ವೇಶ್ಯೆಯರಿಗೆ ಆರೋಗ್ಯವಿಮೆ, ನಿವೃತ್ತಿ ವೇತನ ಇತರೆ ಸೌಲಭ್ಯಗಳನ್ನು ನೀಡುವುದಾಗಿ ಘೋಷಿಸಲಾಗಿತ್ತು. ಇದರಿಂದ ಪ್ರವಾಸೋದ್ಯಮ ಬೃಹತ್ತಾಗಿ ಬೆಳೆಯಿತು. ಹೆಂಗಸರಿನ ಮೇಲಿನ ಅಪರಾಧ ಪ್ರಕರಣಗಳು ಗಣನೀಯ ಸಂಖ್ಯೆಯಲ್ಲಿ ಕಡಿಮೆಯಾದವು. ಅದರೆ ಕೇವಲ 44 ಮಂದಿ ವೃತ್ತಿನಿರತ ಮಹಿಳೆಯರು ಮಾತ್ರವೇ ಸರ್ಕಾರದ ಸವಲತ್ತು ಪಡೆದರು. ಇದೇ ಅವಧಿಯಲ್ಲಿ ಜರ್ಮನ್ ಧೋರಣೆಗೆ ವಿರುದ್ಧವಾಗಿ ಸ್ವೀಡನ್ ವೇಶ್ಯಾವೃತ್ತಿಯನ್ನು ಸಂಪೂರ್ಣ ನಿಯಂತ್ರಿಸುವ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿತು. ಇದರ ಪರಿಣಾಮ ಸ್ವೀಡನ್‍ನಲ್ಲಿ ಮಹಿಳೆಯರ ಮೇಲಿನ ಅಪರಾಧಗಳ ಸಂಖ್ಯೆ ಏರುಪ್ರಮಾಣ ದಾಖಲಿಸಿತು. ವೇಶ್ಯಾವೃತ್ತಿಯಲ್ಲಿ ತೊಡಗುವವರು ವಯಸ್ಕರಾಗಿರಬೇಕು ಮತ್ತು ಯಾವುದೇ ಒತ್ತಡಕ್ಕೆ ಬಲಿಯಾಗದಂತೆ ಈ ವೃತ್ತಿಯನ್ನು ಕಾನೂನು ಬದ್ಧಗೊಳಿಸಬಹುದು. ಇದರಿಂದ ಭಾರತದಲ್ಲಿ ಸಹ ಅತ್ಯಾಚಾರ ಪ್ರಕರಣಗಳು ಹಾಗೂ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತವೆ ಎಂದು ಖ್ಯಾತ ಪತ್ರಕರ್ತ ದಿ. ಕುಶ್ವಂತ್‍ಸಿಂಗ್ ಸಹ ಅಭಿಪ್ರಾಯಪಟ್ಟಿದ್ದರು.

ಮತ್ತಷ್ಟು ಓದು »

30
ಆಕ್ಟೋ

ದಲಿತರ ಮೇಲಿನ ದೌರ್ಜನ್ಯ ಮತ್ತು ಪರಿಹಾರ ಕಾಯಿದೆ,1989 – ಭಾಗ ೩

– ಷಣ್ಮುಖ ಎ

ಸಹಪ್ರಾದ್ಯಾಪಕರು, ರಾಜ್ಯಶಾಸ್ತ್ರ ವಿಭಾಗ, ಕುವೆಂಪು ವಿಶ್ವವಿದ್ಯಾನಿಲಯ

ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳ ಚಿತ್ರಣಕಾಯಿದೆ ಮತ್ತು ವಾಸ್ತವ ಸ್ಥಿತಿಗಳು

The Scheduled Castes and Scheduled Tribes (Prevention of Atrocities) Act, 1989ಈ ವರದಿಯಲ್ಲಿ ಸಂಗ್ರಹಿಸಿರುವ ಅಂಕಿ-ಅಂಶ ಮತ್ತು ಉಲ್ಲೇಖಿತವಾಗಿರುವ ವಿವರಣೆಗಳನ್ನೇ ಗಮನಿಸಿದರೂ ದಲಿತರ ಮೇಲಿನ ದೌರ್ಜನ್ಯ ಕಾಯ್ದೆಯು ಏಕೆ ವಿಫಲವಾಗುತ್ತಿದೆ ಎನ್ನುವುದು ಅರಿವಿಗೆ ಬರುತ್ತದೆ. ಈ ವರದಿಯಲ್ಲಿನ ಅಂಶಗಳು ಸ್ಪಷ್ಟಪಡಿಸುವ ಹಾಗೆ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಜಾತಿವ್ಯವಸ್ಥೆಯ ಚೌಕಟ್ಟಿನಡಿಯಲ್ಲಿ ನಿರೂಪಿಸಲಾದ ಸಾಮಾಜಿಕ ತಾರತಮ್ಯದ ಅಥವಾ ಅಸ್ಪೃಷ್ಯತೆಯ ಆಚರಣೆಯ ಹೆಸರಿನಲ್ಲಿ ದಾಖಲಾಗುತ್ತಿರುವುದು ಕೆಲವೇ ಪ್ರಕರಣಗಳು. ಅದರಲ್ಲೂ ನೇರವಾಗಿ ಈ ರೀತಿಯ ಪ್ರಕರಣಗಳಲ್ಲಿ ನಿಂದನೆ ಮತ್ತು ಹಲ್ಲೆಗಳನ್ನೊಳಗೊಂಡ ಪ್ರಕರಣಗಳೇ ಹೆಚ್ಚಿನವು. ಉಳಿದಂತೆ ಈ ವರದಿಯು ನಿಜಕ್ಕೂ ಸಾಮಾಜಿಕ ತಾರತಮ್ಯ, ಅಸ್ಪೃಷ್ಯತಾಚರಣೆ ಎನ್ನುವುಂತಹ ಪ್ರಕರಣಗಳನ್ನು ವಿರಳವಾಗಿ ಹೆಸರಿಸುತ್ತದೆ. ಉಳಿದಂತೆ ನಿಂದನೆ, ಹಲ್ಲೆ, ಭೂ ವಿವಾದ, ಗೋಮಾಳ, ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದ ಸಾಮಾನ್ಯ ಪ್ರಕರಣಗಳೇ ಹೆಚ್ಚಾಗಿವೆ.

ಈ ರೀತಿಯ ವ್ಯಾಜ್ಯಗಳು ಸಾಮಾನ್ಯವಾಗಿ ಜನರ ನಡುವೆ ದಲಿತರೆನಿಸಿಕೊಂಡಿರುವವರ ನಡುವೆ, ದಲಿತರಲ್ಲದವರ ನಡುವೆ ಮತ್ತು ದಲಿತರೆನಿಸಿಕೊಂಡವರು ಮತ್ತು ಅಲ್ಲದವರ ನಡುವೆ ನಡೆಯುತ್ತಲೇ ಇರುತ್ತವೆ. ಪ್ರಕರಣಗಳು ದಾಖಲಾಗುತ್ತಲೇ ಇರುತ್ತವೆ ಇದು ಸಾಮಾನ್ಯ ಸಂಗತಿ. ಆದರೆ,ಈ ರೀತಿಯಲ್ಲಿ ಸಾಮಾನ್ಯವಾಗಿ ದಾಖಲಾಗುವ ಪ್ರಕರಣಗಳಲ್ಲಿ ವಾದಿ ಪ್ರತಿವಾದಿಗಳು ದಲಿತರು ಮತ್ತು ದಲಿತೇತರರು ಆಗಿದ್ದರೆ, ಅದು ದಲಿತರ ಮೇಲಿನ ದೌರ್ಜನ್ಯ ಮತ್ತು ಪರಿಹಾರ ಕಾಯ್ದೆಯ ಅಡಿಯಲ್ಲಿ ದಾಖಲಾಗುತ್ತದೆ ಅಷ್ಟೇ. ಉಳಿದ ಸಂದರ್ಭದಲ್ಲಿ ಸಾಮಾನ್ಯ ಪ್ರಕರಣವೆಂದು ದಾಖಲಾಗುತ್ತದೆಯಷ್ಟೆ.

ಸಾಮಾನ್ಯವಾಗಿ ಯಾವುದೇ ಪ್ರಕರಣಗಳು ನ್ಯಾಯಾಲಯದಲ್ಲಿ ಇತ್ಯರ್ಥವಾಗುವರೆಗೆ ಅದರಲ್ಲಿ ತಪ್ಪಿತಸ್ಥರು ಮತ್ತು ಮುಗ್ದರ ತೀರ್ಮಾನ ಸಾಧ್ಯವಿಲ್ಲ. ಅದರೆ ಅದೇ ದಲಿತರ ಮೇಲಿನ ದೌರ್ಜನ್ಯ ಕಾಯ್ದೆಯಡಿಯಲ್ಲಿ ಪ್ರಕರಣವು ದಾಖಲಾದ ತಕ್ಷಣ ಅಲ್ಲಿ ಅಪರಾಧಿ ಮತ್ತು ಮುಗ್ದರ ತೀರ್ಮಾನವಾಗಿರುತ್ತದೆ. ಹಾಗಾಗಿಯೇ ಅಲ್ಲವೇ? ಇಲ್ಲಿ ಕೇವಲ ಪ್ರಕರಣ ದಾಖಲಾಗಿ ಕನ್ವಿಕ್ಷನ್ ಆಗದಿದ್ದರೂ, ಪೆಂಡಿಂಗ್ ಇದ್ದರೂ, ರಾಜಿಮಾಡಿಕೊಂಡಿದ್ದರೂ ಸಹ ಸರ್ಕಾರದ ಹಣಕಾಸಿನ ಪರಿಹಾರ ನೀಡಲಾಗಿರುತ್ತದೆ. ಅಲ್ಲದೆ ದೂರದಾರರೆನಿಸಕೊಂಡ ಮತ್ತು ದೌರ್ಜನ್ಯಕ್ಕೆ ಒಳಗಾದವರೆನಿಸಿಕೊಂಡ ದಲಿತರೂ ಸಹ ಪ್ರಕರಣಗಳನ್ನು ದಾಖಲು ಮಾಡಿ ಪರಿಹಾರ ಪಡೆದನಂತರ ಇಡೀ ಪ್ರಕರಣದ ಬಗ್ಗೆ ಆಸಕ್ತಿಯನ್ನೇ ತೋರದೆ ಕೆಲಸ ಮುಗಿಯಿತೆಂದು ಸುಮ್ಮನಿದ್ದುಬಿಡುತ್ತಿರುತ್ತಾರೆ.

ಈ ಕಾಯ್ದೆಯಡಿಯಲ್ಲಿ ದಲಿತರ ದೌರ್ಜನ್ಯ ಪ್ರಕರಣಗಳನ್ನು ಪರಿಭಾವಿಸುವುದರಲ್ಲಿಯೇ ಸಮಸ್ಯೆಗಳಿವೆ ಎನ್ನುವುದು ಒಂದೆಡೆಯಾದರೆ, ಮತ್ತೊಂದೆಡೆ ಹಳ್ಳಿಯ ದೀನರ ನಿಜವಾದ ಜಾತಿ ತಾರತಮ್ಯ ಅಥವಾ ಅಸ್ಪೃಷ್ಯತೆಯ ಆಚರಣೆಗಳ ಸಮಸ್ಯೆಗಳನ್ನು ಇದು ಹೇಗೆ ಪರಿಹರಿಸುತ್ತದೆ? ಎನ್ನುವ ಪ್ರಶ್ನೆ ಏಳುತ್ತದೆ. ಹೇಳಬೇಕೆಂದರೆ ಅಸ್ಪೃಷ್ಯತೆಯ ಆಚರಣೆಗಳ ಸಂದರ್ಭಕ್ಕಿಂತ ಅತಿಹೆಚ್ಚಾಗಿ ಈ ಕಾಯ್ದೆಯು ಬಳಕೆಯಾಗಿರುವುದೇ ಬೇರೆ ಸಂದರ್ಭಗಳಲ್ಲಿ. ಹಾಗಿದ್ದಪಕ್ಷದಲ್ಲಿ ಮಂತ್ರಿಗಳು ಮತ್ತು ಬುದ್ಧಿಜೀವಿ ವರ್ಗಗಳು ಈ ಕಾಯ್ದೆಯು ಪರಿಣಾಮಕಾರಿಯಾಗಿ ಅನುಷ್ಟಾನಗೊಳ್ಳುತ್ತಿಲ್ಲ, ಈ ಕಾಯ್ದೆಯಡಿಯಲ್ಲಿ ಶಿಕ್ಷೆಗೆ ಗುರಿಯಾಗುವವರ ಪ್ರಮಾಣ ಅತ್ಯಂತ ಕಡಿಮೆ ಇದೆಯೆಂದು ಕಳವಳ ಪಡುವುದರ ಹಿಂದೆ ಯಾವ ವಾಸ್ತವ ಸಮಸ್ಯೆಯ ಕಾಳಜಿ ಇದೆ?

ಮತ್ತಷ್ಟು ಓದು »