ದಲಿತರ ಮೇಲಿನ ದೌರ್ಜನ್ಯ ಮತ್ತು ಪರಿಹಾರ ಕಾಯಿದೆ,1989 – ಭಾಗ ೨
– ಷಣ್ಮುಖ ಎ
ಸಹಪ್ರಾದ್ಯಾಪಕರು, ರಾಜ್ಯಶಾಸ್ತ್ರ ವಿಭಾಗ, ಕುವೆಂಪು ವಿಶ್ವವಿದ್ಯಾನಿಲಯ
ಕ್ಷೇತ್ರಾಧ್ಯಯನ ಆಧಾರಿತ ಮಾಹಿತಿಗಳು ಮತ್ತು ವಿಶ್ಲೇಷಣೆ:
ಈ ಮೇಲಿನ ಪ್ರಶ್ನೆಯನ್ನು ಪರಿಶೀಲಿಸಲು ಒಂದು ಕ್ಷೇತ್ರಾಧಾರಿತ ಸಂಶೋಧನಾ ಪ್ರಾಜೆಕ್ಟ್ನ ಮಾಹಿತಿಗಳು ಕೆಲವು ವಿಶೇಷವಾದ ಆಸಕ್ತಿಕರ ಅಂಕಿ-ಅಂಶಗಳನ್ನು ಕೊಡುತ್ತವೆ. ಈ ಕ್ಷೇತ್ರಾಧ್ಯಯನದ ಮಾಹಿತಿಗಳು, ದಾಖಲಾಗುವ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ಮತ್ತು ಅವುಗಳು ಶಿಕ್ಷೆಯಾಗುವ ಪ್ರಕರಣಗಳ ಪ್ರಮಾಣದ ನಡುವಿನ ಅಂತರಕ್ಕೆ ಕಾರಣಗಳ ಬಗ್ಗೆ ಬೇರೆಯದೇ ರೀತಿಯಲ್ಲಿ ಯೋಚಿಸಲು ದಾರಿ ಮಾಡಿಕೊಡುತ್ತದೆ.
ಮೈಸೂರು ವಿಶ್ವವಿದ್ಯಾನಿಲಯದ ಆಂತ್ರೋಪಾಲಜಿ ವಿಭಾಗದ ಅಧ್ಯಾಪಕರೊಬ್ಬರು ತಮ್ಮ ಏಳುಜನ ಸಂಶೋದನಾ ಸಹಾಯಕರೊಂದಿಗೆ ಕರ್ನಾಟಕ ಸರ್ಕಾರದ ಪರವಾಗಿ ಬೆಂಗಳೂರಿನ ಡಾ. ಬಿ. ಆರ್. ಅಂಬೇಡ್ಕರ್ ಸಂಶೋಧನ ಕೇಂದ್ರದ ವತಿಯಿಂದ ಒಂದು ಸಂಶೋಧನಾ ಅಧ್ಯಯನ ಕೈಗೊಂಡಿದ್ದರು. ಇದು ‘ಕರ್ನಾಟಕದಲ್ಲಿನ ಪರಿಶಿಷ್ಟ ಜಾತಿಗಳ ಮೇಲಿನ ದೌರ್ಜನ್ಯ ಮತ್ತು ದೌರ್ಜನ್ಯಕ್ಕೆ ಬಲಿಯಾದವರಿಗೆ ನೀಡಲಾಗಿರುವ ಪರಿಹಾರಗಳ’ ಬಗ್ಗೆ ಮಾಡಲಾದ ಒಂದು ಮೌಲ್ಯಮಾಪನ ಅಧ್ಯಯನವಾಗಿದೆ. ಇದು ಬಾಗಲಕೋಟೆಯೊಂದನ್ನುಳಿದು ಉಳಿದ ಕರ್ನಾಟಕದ ಎಲ್ಲಾ 26 ಜಿಲ್ಲೆಗಳಿಂದ ದೌರ್ಜನ್ಯ ಪ್ರಕರಣಗಳನ್ನು ದಾಖಲಿಸಿ ಪರಿಹಾರಗಳನ್ನು ಪಡೆದ ಫಲಾನುಭವಿ ದಲಿತರನ್ನು ಮತ್ತು ಅಪರಾಧಿಗಳನ್ನು ಗುರುತಿಸಿ ಅವರುಗಳಲ್ಲಿ ಪ್ರತಿಜಿಲ್ಲೆಯಿಂದ ಶೇ. 10ರಷ್ಟು ಜನರನ್ನು ಸಂದರ್ಶನ ನಡೆಸಿದ್ದಾರೆ.
ಮೊದಲಿಗೆ ಅವರ ಅಧ್ಯಯನದಲ್ಲಿ ದಲಿತರ ಮೇಲಿನ ದೌರ್ಜನ್ಯಗಳಿಗೆ ಮೂಲಕಾರಣ (Root Cause) ವಾದ ಅಂಶಗಳಾವುವು ಮತ್ತು ಅವುಗಳಲ್ಲಿ ಯಾವ ಯಾವ ರೀತಿಯ ನಡವಳಿಕೆಗಳು ಬರುತ್ತವೆ ಎಂಬುದನ್ನು ಯಾವ ರೀತಿ ಗುರುತಿಸುತ್ತಾರೆ ಎನ್ನುವುದನ್ನು ನೋಡೋಣ.
ದಲಿತರ ಮೇಲಿನ ದೌರ್ಜನ್ಯಕ್ಕೆ ಮೂಲಕಾರಣಗಳು: ಈ ವರದಿಯಲ್ಲಿ ನಮೂದಿಸಿರುವಂತೆ ಪೋಲೀಸರು ಎಫ್ಐಆರ್ನಲ್ಲಿ ಉಲ್ಲೇಖಿಸಿರುವ ಕಾರಣಗಳು ಮತ್ತು ಅಧ್ಯಯನದ ಸಂದರ್ರ್ಭದಲ್ಲಿ ಸಂದರ್ಶಿತ ಮಾಹಿತಿದಾರರು ನೀಡಿದ ಕಾರಣಗಳನ್ನು ತುಲನೆ ಮಾಡಿ ಅವುಗಳನ್ನು ವರ್ಗೀಕರಿಸಿದ್ದಾರೆ. ಅವುಗಳೆಂದರೆ: ಸಾಮಾಜಿಕ ತಾರತಮ್ಯ, ಭೂವಿವಾದ, ರಾಜಕೀಯ ವೈಷಮ್ಯ, ಹಿಂದಿನ ವೈರತ್ವ, ಆರ್ಥಿಕ ವ್ಯವಹಾರಗಳು, ಕಾರ್ಮಿಕ ವ್ಯಾಜ್ಯಗಳು, ಮತ್ತು ಇತರೆ. ಅವುಗಳ ಕುರಿತು ಸಂಕ್ಷಿಪ್ರವಾಗಿ ನೋಡುವುದಾದರೆ,
- ಸಾಮಾಜಿಕ ತಾರತಮ್ಯ (Social Discrimination): ಈ ವರ್ಗೀಕರಣದಡಿಯಲ್ಲಿ ಅಸ್ಪೃಷ್ಯತೆ ಆಚರಣೆಗಳು ಎನ್ನಬಹುದಾಂತಹ ಅಂಶಗಳನ್ನು ಪಟ್ಟಿಮಾಡಲಾಗಿದೆ ಎನ್ನುತ್ತದೆ ವರದಿ. ಮುಖ್ಯವಾಗಿ, ಸಮಾಜದ ಪ್ರತಿಯೊಂದು ಜಾತಿಗಳು ಪರಸ್ಪರ ವ್ಯವಹರಿಸುವಂತಹ ಪ್ರದೇಶಗಳಾದ ಶಾಲೆಗಳು, ಆಸ್ಪತ್ರೆಗಳು, ಗ್ರಾಮ ಅಥವಾ ಪಟ್ಟಣ ಪಂಚಾಯಿತಿಗಳು, ಮತ್ತಿತರೆ ಕಾರ್ಯಕ್ಷೇತ್ರಗಳಲ್ಲಿ ಮೇಲ್ಜಾತಿಗಳ ಸದಸ್ಯರಿಂದ ಅಸ್ಪೃಷ್ಯತೆಯ ಆಚರಣೆಗಳೆಂದು ಕಂಡುಬಂದ ಅಂಶಗಳು. ಅವುಗಳೆಂದರೆ:
- ಶಾಲೆಗಳಲ್ಲಿ ಪರಿಶಿಷ್ಟಜಾತಿಯ ಮಕ್ಕಳನ್ನು ಪ್ರತ್ಯೇಕ ಬೆಂಚ್ಗಳಲ್ಲಿ ಕುಳಿತುಕೊಳ್ಳುವಂತೆ ಮಾಡಿರುವುದು.
- ವಿಶೇಷ ಸಮಾರಂಭಗಳು, ವಿಧಿ ಆಚರಣೆಗಳು ಹಬ್ಬಗಳ ಸಂದರ್ಭಗಳಲ್ಲಿ ಪರಿಶಿಷ್ಟ ಜಾತಿಯ ಸದಸ್ಯರನ್ನು ಊಟಕ್ಕೆ ಪ್ರತ್ಯೇಕ ಸಾಲಿನಲ್ಲಿ ಕೂರಿಸುವುದು.
- ಸಂಘ-ಸಂಸ್ಥೆಗಳಲ್ಲಿ ಪ್ರಮುಖ ಸ್ಥಾನಗಳನ್ನು ಪಡೆಯದಂತೆ ಪರಿಶಿಷ್ಟ ಜಾತಿಯ ಸದಸ್ಯರನ್ನು ತಡೆಯುವುದು.
- ಗ್ರಾಮೀಣ ಪ್ರದೇಶಗಳ ಕೆಲವು ಹೊಟೇಲುಗಳಲ್ಲಿ ಪರಿಶಿಷ್ಟ ಜಾತಿಯ ಸದಸ್ಯರುಗಳಿಗೆ ಪ್ರತ್ಯೇಕ ಲೋಟ ಮತ್ತು ತಟ್ಟೆಗಳಲ್ಲಿ ಉಪಾಹಾರ ಪಾನಿಯಗಳನ್ನು ನೀಡಿರುವುದು.
- ಹಲವು ಹಳ್ಳಿಗಳಲ್ಲಿ ಪರಿಶಿಷ್ಟ ಜಾತಿಯ ಸದಸ್ಯರನ್ನು ದೇವಾಲಯ ಪ್ರವೇಶಕ್ಕೆ ನಿರಾಕರಿಸುವುದು.
- ಸಾರ್ವಜನಿಕ ಕೊಳವೆಗಳಿಂದ ನೀರು ಪಡೆಯುವಾಗ ಉನ್ನತ ಜಾತಿಯ ಸದಸ್ಯರು ಪರಿಶಿಷ್ಟ ಜಾತಿಯ ಸದಸ್ಯರೊಂದಿಗೆ ಜಗಳವಾಡುವುದು ಕಂಡುಬರುತ್ತದೆ. ಮೇಲ್ಜಾತಿಯವರು ಕೆಳಜಾತಿಯವರಿಗೆ ಕೆಲವು ಪ್ರದೇಶಗಳಲ್ಲಿ ನೀರು ಹಿಡಿದುಕೊಳ್ಳಲು ಬಿಡುವುದಿಲ್ಲ.
ದಲಿತರ ಮೇಲಿನ ದೌರ್ಜನ್ಯ ಮತ್ತು ಪರಿಹಾರ ಕಾಯಿದೆ,1989 – ಭಾಗ ೧
– ಷಣ್ಮುಖ ಎ
ಸಹಪ್ರಾದ್ಯಾಪಕರು, ರಾಜ್ಯಶಾಸ್ತ್ರ ವಿಭಾಗ, ಕುವೆಂಪು ವಿಶ್ವವಿದ್ಯಾನಿಲಯ, ಶಂಕರಘಟ್ಟ-577451
ಭಾರತೀಯ ಸಾಮಾಜಿಕ ವ್ಯವಸ್ಥೆಯಲ್ಲಿ ಅಸ್ಪೃಷ್ಯತೆಯ ಆಚರಣೆಯ ಮೂಲಕ ನಿರಂತರವಾಗಿ ದಲಿತರ ಮೇಲೆ ದೌರ್ಜನ್ಯಗಳು ನಡೆಯುತ್ತಾ ಇವೆ. ಈ ರೀತಿಯ ದೌರ್ಜನ್ಯಗಳಿಂದ ದಲಿತರನ್ನು ರಕ್ಷಿಸಿ ಅವರನ್ನು ಅಸ್ಪೃಷ್ಯತೆಯ ಆಚರಣೆಗಳಿಂದ ಮುಕ್ತಿಗೊಳಿಸುವ ಒಂದು ಮಹಾಅಸ್ತ್ರವೆಂಬಂತೆ ದಲಿತರ ಮೇಲಿನ ದೌರ್ಜನ್ಯ ಮತ್ತು ಪರಿಹಾರ ಕಾಯಿದೆಯನ್ನು ಭಾರತ ಸರ್ಕಾರ 1989ರಲ್ಲಿ ಜಾರಿಗೆ ತಂದಿದೆ. ಈ ಕಾಯಿದೆಯ ಜಾರಿಯಾದ ಎರಡು ದಶಕಗಳ ತರುವಾಯ ಈ ಕಾಯಿದೆಯ ಜಾರಿ ಮತ್ತು ಅದರ ಪರಿಣಾಮದ ಕುರಿತು ಚರ್ಚೆಗಳು ಮತ್ತು ಅಧ್ಯಯನಗಳು ನಡೆಯುತ್ತಿವೆ. ಬಹುತೇಕ ಈ ಚರ್ಚೆಗಳಲ್ಲಿನ ಸಾಮಾನ್ಯ ನಿಲುವೆಂದರೆ ಅಸ್ಪೃಷ್ಯತೆ ಆಚರಣೆಯ ವಿರುದ್ದ ಪ್ರಬಲವಾದ ಕಾಯಿದೆ ಇದ್ದರೂ ಇದರ ಪರಿಣಾಮಕಾರಿ ಜಾರಿಯಲ್ಲಿ ಅಧಿಕಾರಿಗಳು ಆಸಕ್ತಿವಹಿಸದಿರುವುದರಿಂದ ಈ ಕಾಯಿದೆಯಿಂದ ದಲಿತರಿಗೆ ಸಿಗಬೇಕಾದ ನ್ಯಾಯ ದೊರೆಯುತ್ತಿಲ್ಲ ಎನ್ನುವ ಸಾಮಾನ್ಯ ಆತಂಕ-ಕಾಳಜಿಗಳು ವ್ಯಕ್ತವಾಗುತ್ತಿವೆ.
ಪ್ರಸ್ತುತ ಲೇಖನವು ಈ ಆತಂಕಗಳ ವಾಸ್ತವತೆಯನ್ನು ಪರೀಕ್ಷಿಸಲು ಪ್ರಯತ್ನಿಸಿದೆ.ಸರ್ಕಾರವೇ ನಡೆಸಿರುವ ಈ ಕಾಯಿದೆಯ ಮೌಲ್ಯಮಾಪನ ಅಧ್ಯಯನ ವರಧಿಯ ಅಂಕಿಅಂಶಗಳು ಮತ್ತು ಅದರಲ್ಲಿನ ವಿವರಣೆಗಳನ್ನು ಆದರಿಸಿ ಈ ಕಾನೂನಿನಡಿಯಲ್ಲಿ ದಾಖಲಾಗಿರುವವ ಪ್ರಕರಣಗಳ ವಾಸ್ತವ ಸ್ಥಿತಿಯನ್ನು ಇಲ್ಲಿ ಪರೀಕ್ಷಿಸಲಾಗಿದೆ.
ಈ ವರದಿಯಲ್ಲಿ ಉಲ್ಲೇಖವಾಗಿರುವಂತೆ, ದೌರ್ಜನ್ಯ ಪ್ರಕರಣಗಳನ್ನು ದಾಖಲಿಸಿದ ದಲಿತರು ಈ ಕಾನೂನಿನಿಂದ ದೊರೆಯುವ ಪರಿಹಾರ ಪಡೆದ ನಂತರ ಪ್ರಕರಣದ ಕುರಿತು ಆಸಕ್ತಿಯನ್ನು ಕಳೆದುಕೊಳ್ಳುವುದೇ ಪ್ರಕರಣಗಳು ಇತ್ಯರ್ಥಗೊಳ್ಳದಿರಲು ಮುಖ್ಯ ಕಾರಣವೆಂದು ಗುರುತಿಸುತ್ತದೆ. ಜೊತೆಗೆ, ಈ ಕಾನೂನಿನಡಿಯಲ್ಲಿ ಅಸ್ಪೃಷ್ಯತೆಯ ಆಚರಣೆಯ ಕಾರಣಕ್ಕೆ ದಾಖಲಾಗುವ ಪ್ರಕರಣಗಳು ಅತಿಕಡಿಮೆ ಇದ್ದು ಇತರೇ ಜಗಳ-ವ್ಯಾಜ್ಯಗಗಳೇ ಈ ಕಾಯಿದೆಯಡಿಯಲ್ಲಿ ದಾಖಲಾಗುತ್ತಿರುವ ಅಂಶವನ್ನು ಎತ್ತಿ ತೋರಿಸುತ್ತವೆ.ಈ ರೀತಿಯಲ್ಲಿ ಈ ಕಾಯಿದೆಯು ಅಸ್ಪೃಷ್ಯತೆಯ ಆಚರಣೆಯಲ್ಲದ ವಿಚಾರಗಳಿಗೆ (ದುರು)ಉಪಯೋಗವಾಗುತ್ತಿರುವುದಕ್ಕೆ ಈ ಕಾಯಿದೆ ರೂಪುಗೊಂಡಿರುವ ಸೈದ್ಧಾಂತಿಕ ಚೌಕಟ್ಟಿನಲ್ಲಿಯೆ ಸಮಸ್ಯೆ ಇರಬೇಕೆಂದು ಈ ಲೇಖನವು ತರ್ಕಿಸುತ್ತದೆ.
ಮುಖ್ಯವಾಗಿ, ಭಾರತೀಯ ಸಮಾಜದ ಕುರಿತ ಜಾತಿವ್ಯವಸ್ಥೆಯ ಚೌಕಟ್ಟಿನ ಹಿನ್ನೆಲೆಯಲ್ಲಿ ಕೆಳಜಾತಿ-ಮೇಲ್ಜಾತಿಗಳ ಕುರಿತು ವಸಾಹತುಶಾಹಿ ಸ್ಟೀರಿಯೋಟೈಪುಗಳು ಸಮಾಜವಿಜ್ಞಾನದಲ್ಲಿ ಹರಡಿಕೊಂಡಿದೆ. ಜಾತಿಗಳ ಕುರಿತ ಈ ರೀತಿಯ ಸ್ಟೀರಿಯೋಟೈಪುಗಳನ್ನು ಆಧರಿಸಿದ ನಿರೂಪಣೆಗಳಿಂದ ಹುಟ್ಟಿಕೊಂಡಿರುವ ಬೌದ್ಧಿಕ ವಲಯದಲ್ಲಿನ ಸಾಮಾನ್ಯ ಗ್ರಹಿಕೆಗಳು ಈ ಕಾಯಿದೆ ರೂಪಿತಗೊಳ್ಳಲು ಕಾರಣವಾಗಿದೆ. ಈ ಸಾಮಾನ್ಯಗ್ರಹಿಕೆಗಳು ಇಲ್ಲಿಯ ವಾಸ್ತವ ಸ್ಥಿತಿಯಾಗಿರದೇ ಇರುವುದರಿಂದ ಈ ಕಾಯಿದೆಯಿಂದ ತಮ್ಮ ಸಮಸ್ಯೆಗಳನ್ನು ಪರಿಹಾರ ಮಾಡಿಕೊಂಡು ನ್ಯಾಯಪಡೆಯುವುದಕ್ಕಿಂತ ಹೆಚ್ಚಾಗಿ ಲಾಭ ಪಡೆಯುವ ಕಡೆಗಷ್ಟೇ ಒಲವಿದೆ. ಅಲ್ಲದೆ ದಲಿತರ ಸಮಸ್ಯೆಗಳನ್ನು ಪರಿಹರಿಸುವುದಕ್ಕಿಂತ ಹೆಚ್ಚಾಗಿ ಈ ಕಾಯಿದೆಯು ಹಲವು ಹೊಸ ರೀತಿಯ ಸಮಸ್ಯೆಗಳನ್ನು ಹುಟ್ಟುಹಾಕುತ್ತಿದೆ ಎಂದು ಈ ಲೇಖನವು ವಾದಿಸುತ್ತದೆ. ಮತ್ತಷ್ಟು ಓದು
ಕೈಲಾಶ್ ಸತ್ಯಾರ್ಥಿ : ಮಾನವತೆಯ ಕೈಲಾಸ ಪರ್ವತ
– ರಾಘವೇಂದ್ರ ಅಡಿಗ
ಭಾರತದ ಮಧ್ಯ ಪ್ರದೇಶದ ವಿದಿಶಾ ನಗರದಲ್ಲಿ ಹುಟ್ಟಿ “ಬಚಪನ್ ಬಚಾವೋ” ಆಂದೋಳನದ ಮೂಲಕ ಸಾವಿರಾರು ಮಕ್ಕಳನ್ನು ಜೀತ ವಿಮುಕ್ತಿಗೊಳಿಸಿದ ವ್ಯಕ್ತಿ 60 ರ ಪ್ರಾಯದ ಕೈಲಾಶ್ ಸತ್ಯಾರ್ಥಿಯವರ ಕುರಿತಾಗಿ ಮೊನ್ನೆ ನೋಬೆಲ್ ಶಾಂತಿ ಪಾರಿತೋಶಕ ಘೋಷಣೆ ಆಗುವವರೆಗೂ ನಮಗೆ ಯಾರೊಬ್ಬರಿಗೂ ಅವರ ಬಗೆಗೆ ತಿಳಿದಿರಲಿಲ್ಲ ಎನ್ನುವುದು ನಮ್ಮ ದೇಶದ ಸಾಧಕನೋರ್ವನ ಬಗೆಗೆ ನಮಗಿರುವ ಉದಾಸೀನತೆಗೆ ಸಾಕ್ಷಿಯಲ್ಲವೆ? ಭಾರತದ ಸಾಮಾನ್ಯ ಜನರಿಗಾಗಲೀ, ಭಾರತದ ಘನ ಸರ್ಕಾರಗಳಿಗಾಗಲೀ, ಸಾವಿರಾರು ಸಂಖ್ಯೆಯಲ್ಲಿರುವ ಸಂಘ ಸಂಸ್ಥೆಗಳಲ್ಲಿ ಯಾರೊಬ್ಬರಿಗೂ ಇವರ ಬಗೆಗೆ, ಇವರ ಸಾಮಾಜಿಕ ಕಳಕಳಿಯ ಕಾರ್ಯಗಳ ಬಗೆಗೆ ಯಾವೊಂದು ವಿಚಾರವೂ ತಿಳಿದಿರಲಿಲ್ಲ! “ಡರ್ಟಿ ಪಿಕ್ಚರ್” ನಂತಹಾ ಚಲನಚಿತ್ರಗಳಲ್ಲಿ ನಟಿಸಿದ ನಟಿಮಣಿಯರಿಗೆಲ್ಲ ಭಾರತದ ಉನ್ನತ ನಾಗರಿಕ ಗೌರವ “ಪದ್ಮಶ್ರೀ” ಪ್ಯ್ರಸ್ಕಾರವು ಸಂದಿರುವಾಗ ನಮ್ಮ ನಡುವೆಯೇ ಇದ್ದು ಸಾವಿರಾರು ಬಡ ಮಕ್ಕಳ ಉದ್ದಾರಕ್ಕಾಗಿ ಟೊಂಕಕಟ್ಟಿದ ಕೈಲಾಶ್ ರಂತಹವರನ್ನು ನಮ್ಮ ಸರ್ಕಾರಗಳು ಗುರುತಿಸದೇ ಹೋದುದು ತೀರಾ ಖೇದಕರ ಸಂಗತಿಯಲ್ಲವೆ? ಇನ್ನಾದರೂ ನಮ್ಮ ದೇಶದ ಸರ್ಕಾರಗಳು, ಸಂಘ ಸಂಸ್ಥೆಗಳು ಗುರುತಿಸಿ ಗೌರವಿಸಬೇಕಿದೆ. ಹಾಗಾದಾಗ ಮಾತ್ರವೇ ನಮ್ಮ ಸಮಾಜಕ್ಕೂ, ಜನತೆಗೂ ಮಾನವತೆಯ ಮೌಲ್ಯಗಳ ಅರಿವಿದೆ ಎಂದು ಇತರರಿಗೆ ತಿಳಿಸಿದಂತಾಗುತ್ತದೆ.
ಆ ಹುಡುಗನು ತಾನು ನಿತ್ಯವೂ ಶಾಲೆಗೆ ನಡೆದು ಹೋಗುತ್ತಿದ್ದಾಗ ತನ್ನದೇ ಓರಗೆಯ ಹುಡುಗನೋರ್ವನು ತನ್ನ ತಂದೆಯೊಡನೆ ಕುಳಿತು ಬೂಟು ರಿಪೇರಿ ಮಡುತ್ತಿದ್ದುದನ್ನು ಕಾಣುತ್ತಿದ್ದನು. ಅದಾಗೆಲ್ಲಾ ಈ ಹುಡುಗನ ಮನಸ್ಸಿನಲ್ಲಿ ‘ನಾನು ಉತ್ಸಾಹದಿಂದಲೂ ಸಂತೋಷದಿಂದಲೂ ಶಾಲೆಗೆ ಹೋಗುತ್ತಿದ್ದರೆ ಆ ಹುಡುಗ ಮಾತ್ರ ತನ್ನ ತಂದೆಯೊಂದಿಗೆ ಕುಳಿತು ಬೂಟು ಹೊಲಿಯುತ್ತಿದ್ದಾನೆ, ಅದೇಕೆ ಹೀಗೆ?’ಎನ್ನುವ ಆಲೋಚನೆ ಹುಟ್ಟುತ್ತಿತ್ತು.
ಅದೊಮ್ಮೆ ಅದೇ ಪ್ರಶ್ನೆಯನ್ನು ತನ್ನ ಶಾಲಾ ಉಪಾದ್ಯಾಯರ ಬಳಿ ಕೇಳಲಾಗಿ “ ಅವರ ಬಳಿ ಹಣವಿಲ್ಲ, ಅವರು ಬಡವರು. ವಿದ್ಯಾಭ್ಯಾಸ ಪಡೆದುಕೊಳ್ಳಲಿಕ್ಕೆ ಸಾಕಷ್ಟು ಧನಬಲವಿಲ್ಲದವರು.” ಎನ್ನುವ ಉತ್ತರ ದೊರಕಿತು.
ಅತ್ಯಾಚಾರ: ಹುಯಿಲೆಬ್ಬಿಸುವುದೇಕೆ?
– ಡಾ. ಶ್ರೀಪಾದ ಭಟ್
ಸಹಾಯಕ ಪ್ರಾಧ್ಯಾಪಕ,ತುಮಕೂರು ವಿಶ್ವವಿದ್ಯಾನಿಲಯ, ತುಮಕೂರು, ಕರ್ನಾಟಕ
ಕಳೆದ ಒಂದೆರಡು ವಾರಗಳಿಂದ ಯಾವ ಮಾಧ್ಯಮ ಓದಿದರೂ ನೋಡಿದರೂ ಅತ್ಯಾಚಾರದ್ದೇ ಸುದ್ದಿ. 2012ರಲ್ಲಿ ದೆಹಲಿಯಲ್ಲಿ ನಿರ್ಭಯಾಳ ಮೇಲೆ ನಡೆದ ಹೇಯ ಕೃತ್ಯದ ತರುವಾಯ ಇಂಥ ಪ್ರಕರಣಗಳು ನಿರ್ಭಯವಾಗಿ ಹೆಚ್ಚು ಸುದ್ದಿಯಾಗುತ್ತಿವೆ. ಇದು ಗುಣವೋ ದೋಷವೋ ಗೊತ್ತಿಲ್ಲ. ಈಚೆಗೆ ಬೆಂಗಳೂರಿನ ಶಾಲೆಯೊಂದರಲ್ಲಿ ಆರು ವರ್ಷದ ಮಗುವಿನ ಮೇಲೆ ಅತ್ಯಾಚಾರ ನಡೆದ ಮೇಲೆ ಕಾಕತಾಳೀಯವೋ ಎಂಬಂತೆ ಬೆಂಗಳೂರಿನಲ್ಲಿ ನಿತ್ಯ ಒಂದೆರಡು, ರಾಜ್ಯಾದ್ಯಂತ ಒಂದೇದಿನ ಎಂಟು ಇಂಥ ಪ್ರಕರಣಗಳು ವರದಿಯಾದವು. ಮಾಧ್ಯಮಗಳಂತೂ ಅತ್ಯಾಚಾರ ಎಲ್ಲಿಂದ ಎಷ್ಟುಹೊತ್ತಿಗೆ ಬರುತ್ತದೆ ಎಂದು ಕಾದು ಕೂತಿರುವವರಂತೆ ಅಲ್ಲೊಂದು ಅತ್ಯಾಚಾರವಂತೆ ಎಂಬ ಅಂತೆ ಕಂತೆಯನ್ನೂ ಅತ್ಯಾಚಾರವಾಗಿದೆ ಎಂದೇ ಬಿಂಬಿಸಿ ಅವಸರದಿಂದ ವರದಿ ಮಾಡಿಯೇ ಮಾಡಿದರು. ಕಳೆದವಾರ ಬೇರೆಲ್ಲ ಕಡೆಯಿಂದ ಇಂಥ ಸುದ್ದಿ ಬಂದಂತೆ ತುಮಕೂರಿನಿಂದಲೂ ಸುದ್ದಿ ಬಂತು. ದಿನ ಕಳೆದ ಮೇಲೆ ಆ ಹುಡುಗಿಯೇ ಠಾಣೆಗೆ ಹೋಗಿ ನನ್ನ ಮೇಲೆ ಅತ್ಯಾಚಾರವಾಗಿಲ್ಲ ಎಂದು ಹೇಳಿಕೆಕೊಟ್ಟಳು! ಸತ್ಯಾಸತ್ಯತೆ ಏನಿದೆಯೋ?
ಇಂಥ ಸುದ್ದಿಗಳ ಪ್ರಸಾರಕ್ಕೆ ಯಾಕಿಷ್ಟು ಅವಸರ? ಇದೊಂದು ಕ್ರೇಜು ಹುಟ್ಟಿಸುವ ಸಂಗತಿಯೇ? ಅಥವಾ ಇಂಥ ವರದಿಯಿಂದ ದೌರ್ಜನ್ಯಕ್ಕೆ ಒಳಗಾದವರಿಗೆ ನ್ಯಾಯ ಕೂಡಲೇ ದೊರೆತೇಬಿಡುತ್ತದಾ? ಇಂಥ ವರದಿಯಿಂದ ಪ್ರಯೋಜನ ಯಾರಿಗೆ? ಕೆಲವರ ಸುದ್ದಿ ಚಪಲ ತೀರಬಹುದು ಅಷ್ಟೆ.
ಶಾ ಬಾನು,ಫೆಮಿನಿಸಂ,ಸೆಕ್ಯುಲರಿಸಂ ಮತ್ತು ಸಮಾನ ನಾಗರೀಕ ಸಂಹಿತೆ
– ರಾಕೇಶ್ ಶೆಟ್ಟಿ
ದೇಶದಲ್ಲಿರುವ ಷರಿಯತ್ ಕೋರ್ಟುಗಳಿಗೆ ಕಾನೂನು ಮಾನ್ಯತೆಯಿಲ್ಲ.ಫತ್ವಾ ಹೊರಡಿಸುವುದು ಕಾನೂನು ಬಾಹಿರ ಎಂದು ಸುಪ್ರೀಂ ಕೋರ್ಟು ಇತ್ತೀಚೆಗೆ ನೀಡಿದ ತೀರ್ಪು ಮತ್ತೊಮ್ಮೆ “ಸಮಾನ ನಾಗರೀಕ ಸಂಹಿತೆ”ಯ ಜಾರಿಯ ಬಗ್ಗೆ ಚರ್ಚೆ ಶುರುವಾಗುವಂತೆ ಮಾಡಿದೆ. ಸಮಾನ ನಾಗರೀಕ ಸಂಹಿತೆಯ ಜೊತೆ ಜೊತೆಗೆ ಈ ತೀರ್ಪಿನ ಜೊತೆಗೆ ನೆನಪಾಗುವುದು ೮೦ರ ದಶಕದ ’ಶಾ ಬಾನು ಪ್ರಕರಣ’
ಏನಿದು ಶಾ ಬಾನು ಪ್ರಕರಣ : ಇಂದೋರಿನ ವಕೀಲ ಮೊಹಮ್ಮದ್ ಅಹ್ಮದ್ ಖಾನ್ ನ ಪತ್ನಿ ಶಾ ಬಾನು.ಮದುವೆಯಾಗಿ ೧೪ ವರ್ಷಗಳ ನಂತರ ಎರಡನೇ ಮದುವೆಯಾದ ಅಹ್ಮದ್ ಖಾನ್.ಇಬ್ಬರು ಹೆಂಡಿರ ಜೊತೆ ಸಂಸಾರ ನಡೆಸಿ ಕಡೆಗೆ ಕೆಲ ವರ್ಷಗಳ ನಂತರ ಐದು ಮಕ್ಕಳ ತಾಯಿಯಾಗಿದ್ದ ಶಾ ಬಾನುವನ್ನು ಆಕೆಯ ೬೨ನೇ ವಯಸ್ಸಿನಲ್ಲಿ ಆಕೆಯ ಐದು ಮಕ್ಕಳ ಜೊತೆಗೆ ಹೊರಹಾಕಿದ.ಒಪ್ಪಂದದಂತೆ ಮಾಸಿಕ ೨೦೦ ರೂ ಜೀವನಾಂಶವನ್ನು ಆಕೆಗೆ ನೀಡದಿದ್ದರ ವಿರುದ್ಧ ಸುಪ್ರೀಂ ಕೋರ್ಟಿನಲ್ಲಿ ಏಪ್ರಿಲ್ ೧೯೭೮ರಲ್ಲಿ ದಾವೆ ಹೂಡುತ್ತಾರೆ ಶಾ ಬಾನು.ಮಾಸಿಕ ೫೦೦ರೂ ಜೀವನಾಂಶ ಬೇಕೆಂದು ಕೇಳಿಕೊಳ್ಳುತ್ತಾರೆ.
ನವೆಂಬರ್ ೧೯೭೮ರಲ್ಲಿ ಖಾನ್ ಶಾ ಬಾನು ಅವರಿಗೆ ತಲಾಖ್ ನೀಡಿ,ಈಗ ಆಕೆ ನನ್ನ ಪತ್ನಿಯಲ್ಲ ಮತ್ತು ಆಕೆಗೆ ಇಸ್ಲಾಮಿಕ್ ಲಾ ಮೂಲಕ ಕೊಡಬೇಕಾದ ೫,೪೦೦ ರೂ ಬಿಟ್ಟರೆ ನಾನು ಇನ್ನಾವುದೇ ಹಣವನ್ನು ಕೊಡಬೇಕಾಗಿಲ್ಲ ಎಂದು ವಾದಿಸುತ್ತಾನೆ ಖಾನ್.ಆಗಸ್ಟ್ ೧೯೭೯ರಲ್ಲಿ ಸ್ಥಳೀಯ ನ್ಯಾಯಾಲಯ ಮಾಸಿಕ ೨೫ರೂ ನೀಡುವಂತೆ ತೀರ್ಪು ಕೊಟ್ಟಿತ್ತು.ಶಾ ಬಾನು ಕೇಸನ್ನು ಹೈಕೋರ್ಟಿಗೆ ಕೊಂಡೊಯ್ದರು.ಅಲ್ಲಿ ಶಾ ಬಾನು ಪರವಾಗಿ ೧೯೮೦ರ ಜುಲೈನಲ್ಲಿ ಬಂದ ತೀರ್ಪು ಮಾಸಿಕ ೧೭೯ ರೂ ನೀಡುವಂತೆ ತೀರ್ಪು ನೀಡುತ್ತದೆ.ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟಿಗೆ ಖಾನ್ ಹೋಗುತ್ತಾನೆ.ಶಾ ಬಾನು ಈಗ ನನ್ನ ಪತ್ನಿಯಲ್ಲ ಇಸ್ಲಾಮಿಕ್ ಕಾನೂನಿಂತೆ ಆಕೆಗೆ ನಾನು ತಲಾಖ್ ನೀಡಿ ಎರಡನೇ ಮದುವೆಯಾಗಿದ್ದೇನೆ ಎನ್ನುತ್ತಾನೆ.
’ಗ೦ಡಸರೇ ಕೆಟ್ಟವರು’ ಎನ್ನುವ ಮುನ್ನ..
– ಗುರುರಾಜ್ ಕೊಡ್ಕಣಿ,ಯಲ್ಲಾಪುರ
ರಾಹುಲ್ ತು೦ಬಾ ಬುದ್ದಿವ೦ತ ಇ೦ಜೀನಿಯರಿ೦ಗ್ ವಿದ್ಯಾರ್ಥಿಯಾಗಿದ್ದ.ಪದವಿ ಮುಗಿಸಿದ ಅವನಿಗೆ ಅವನ ಬುದ್ದಿಮತ್ತೆಗೆ ತಕ್ಕ೦ತೇ ಅಮೇರಿಕದ ಪ್ರತಿಷ್ಠಿತ ಕ೦ಪನಿಯೊ೦ದರಲ್ಲಿ ನೌಕರಿ ಸಿಕ್ಕಿತ್ತು.ಸುಮಾರು ಐದು ವರ್ಷಗಳ ಕಾಲ ಅಲ್ಲಿ ದುಡಿದ ಅವನು ಮರಳಿ ಭಾರತಕ್ಕೆ ತೆರಳಲು ನಿಶ್ಚಯಿಸಿದ.ತನ್ನ ಪೋಷಕರಿಗೆ ಅವನು ತನ್ನ ನಿರ್ಧಾರ ತಿಳಿಸಿದಾಗ ಅವರೂ ಸಹ ಸ೦ತಸ ವ್ಯಕ್ತಪಡಿಸಿದ್ದರು.ಇದೇ ಖುಷಿಯಲ್ಲಿ ಅವರು ತಮ್ಮ ಒಬ್ಬನೇ ಮಗನ ಮದುವೆ ಮಾಡುವುದರ ಬಗ್ಗೆ ಯೋಚಿಸಿದರು.ಆ ಬಗ್ಗೆ ಅವರು ರಾಹುಲನೊ೦ದಿಗೆ ಚರ್ಚಿಸಿದಾಗ ಅವನೂ ಸಮ್ಮತಿಸಿದ್ದ.ಅವರು ಅವನಿಗೆ ತಕ್ಕ ವಧುವಿಗಾಗಿ ಹುಡುಕಾಟ ನಡೆಸತೊಡಗಿದರು.ಅಲ್ಲದೇ ಅವನ ಮಾಹಿತಿಯನ್ನು ವಿವಾಹ ಸ೦ಬ೦ಧಿ ಅ೦ತರ್ಜಾಲ ತಾಣವೊ೦ದರಲ್ಲೂ ಪ್ರಕಟಿಸಿದ್ದರು.
ಹಾಗೆ ರಾಹುಲನ ಅಪ್ಪ ಅಮ್ಮ ರಾಹುಲನಿಗಾಗಿ ಹುಡುಗಿ ಹುಡುಕುವ ಪ್ರಯತ್ನದಲ್ಲಿದ್ದಾಗ ಮದುವೆಯ ವೆಬ್ ಸೈಟಿನಲ್ಲಿ ಅವರಿಗೆ ಪರಿಚಯವಾದ ಹುಡುಗಿಯ ಹೆಸರು ಕವಿತಾ.ಅವರಿಗೆ ಹುಡುಗಿಯ ರೂಪ ಇಷ್ಟವಾಗಿತ್ತು. ಅವರು ರಾಹುಲನಿಗೆ ಅವಳನ್ನು ತೋರಿಸಿದಾಗ ಅವನು ಕವಿತಾಳನ್ನು ಮೊದಲ ನೋಟದಲ್ಲೇ ಮೆಚ್ಚಿದ್ದ.ಎಲ್ಲರಿಗೂ ಹುಡುಗಿ ಒಪ್ಪಿಗೆಯಾಗಿದ್ದರಿ೦ದ ಅವರು ಕವಿತಾ ಮತ್ತವಳ ಪೋಷಕರನ್ನು ತಮ್ಮ ಮನೆಗೆ ಆಹ್ವಾನಿಸಿ ಮಾತುಕತೆ ನಡೆಸಲು ನಿರ್ಧರಿಸಿದರು.ಕವಿತಾಳ ತಾಯಿ ಕೆಲವು ವರ್ಷಗಳ ಹಿ೦ದೆ ತೀರಿ ಹೋಗಿದ್ದರು.ಕವಿತಾ ಮತ್ತು ಅವಳ ತ೦ದೆ ರಾಹುಲನ ಮನೆಗೆ ಬ೦ದು ಮದುವೆಯ ಮಾತುಕತೆ ನಡೆಸಿದರು.ಮೂಲತ: ತಾವು ಮು೦ಬಯಿಯ ನಿವಾಸಿಗಳೆ೦ದು,ತಮಗೂ ರಾಹುಲ್ ಇಷ್ಟವಾಗಿರುವುದಾಗಿ ತಿಳಿಸಿದರು.ಕವಿತಾಳ ಸರಳ ವ್ಯಕ್ತಿತ್ವ,ಹಿರಿಯರೆಡೆಗಿನ ಅವಳ ಗೌರವವನ್ನು ಕ೦ಡ ರಾಹುಲನ ತ೦ದೆತಾಯಿಗಳು ಇವಳೇ ತಮ್ಮ ಸೊಸೆಯೆ೦ದು ಆಗಲೇ ತೀರ್ಮಾನಿಸಿದ್ದರು.ಹಿರಿಯರೆಲ್ಲರೂ ಸೇರಿ ಮದುವೆಯ ದಿನಾ೦ಕವನ್ನು ನಿರ್ಧರಿಸಿದರು. ಅತ್ಯ೦ತ ಸರಳ ಜೀವಿಗಳಾಗಿದ್ದ ರಾಹುಲನ ಪೋಷಕರು ವರದಕ್ಷಿಣೆ ,ವರೋಪಚಾರದ೦ತಹ ಯಾವ ಬೇಡಿಕೆಗಳನ್ನೂ ವಧುವಿನ ತ೦ದೆಯ ಮು೦ದಿಡಲಿಲ್ಲ.
ಕಾನೂನಿನ ಶಂಖದಿಂದ ಪರಿಹಾರದ ತೀರ್ಥ ಬರುತ್ತದೆಯೇ?
– ರಾಕೇಶ್ ಶೆಟ್ಟಿ
ಇತ್ತೀಚೆಗೆ ಪ್ರಕಟವಾದ ಸುದ್ದಿಗಳಲ್ಲಿ ಬಹುವಾಗಿ ಕಾಡಿದ್ದು,ವಿಜಯವಾಣಿಯಲ್ಲಿ ಜನವರಿ ೨೯ರಂದು ಮತ್ತೆ ಫೆಬ್ರವರಿ ೫ರಂದು ಪ್ರಕಟವಾದ ೨ ಸುದ್ದಿಗಳು.ಒಂದು ಸಿಲಿಕಾನ್ ಸಿಟಿ ಬೆಂಗಳೂರಿನ ಪಕ್ಕದಲ್ಲೇ ಇರುವ ಆನೇಕಲ್ ಪುರಸಭೆ ವ್ಯಾಪ್ತಿಯಲ್ಲಿ ವರದಿಯಾದ ಮಲಹೊರುವ ಪ್ರಕರಣ ಮತ್ತು ಇನ್ನೊಂದು ಮಂಡ್ಯದ ಕಾಂಗ್ರೆಸ್ಸ್ ಕಛೇರಿಗೆ ಸಂಬಂಧಿಸಿದ ಮ್ಯಾನ್ ಹೋಲ್ ಅನ್ನು ಪೌರಕಾರ್ಮಿಕನೊಬ್ಬ ಬರಿಗೈಯಿಂದ ಸ್ವಚ್ಚ ಮಾಡುತಿದ್ದ ವರದಿ.
ಆನೇಕಲ್ಲಿನ ಪ್ರಕರಣ ವರದಿಯಾದ ಮೇಲೆ ಸರ್ಕಾರ ಎಚ್ಚೆತ್ತುಕೊಂಡು, ‘ಮಲಹೊರುವಂತೆ ಪ್ರೇರೆಪಿಸಿದ’ ಮತ್ತು ‘ಜಾತಿನಿಂದನೆ’ಯ (ಇದರಲ್ಲಿ ಜಾತಿ ನಿಂದನೆಯಾಗಿದ್ದು ಹೇಗೆ ಅನ್ನುವುದು ತಿಳಿಯಲಿಲ್ಲ) ಆರೋಪದ ಮೇಲೆ ಒಬ್ಬರನ್ನು ಬಂಧಿಸಿದ ಫಾಲೋ-ಅಪ್ ಸುದ್ದಿಯೂ ಪತ್ರಿಕೆಯಲ್ಲಿ ಬಂದಿತ್ತು. ಆದರೆ,ಸರಿಯಾದ ಒಳಚರಂಡಿ ವ್ಯವಸ್ಥೆಯನ್ನು ರೂಪಿಸದ ಸರ್ಕಾರ ಇಂತ ಪ್ರಕರಣದಲ್ಲಿ ಮೊದಲ ಆರೋಪಿಯಾಗಬೇಕೆ ಅಥವಾ ವ್ಯವಸ್ಥೆಯ ನಿರ್ಲಕ್ಷ್ಯದ ಅನಿವಾರ್ಯತೆಗೆ ಬಿದ್ದು,ಕಾರ್ಮಿಕರಿಂದ ಮಲಹೊರಿಸುವ ಸ್ಥಿತಿಗೆ ಬಂದು ನಿಲ್ಲುವವರು ಆರೋಪಿಗಳಾಗಬೇಕೆ?
ಅತ್ಯಾಧುನಿಕ ಉಪಕರಣಗಳು ಆಯಾ ಪಾಲಿಕೆ/ನಗರಸಭೆ/ಪುರಸಭೆ/ಗ್ರಾಮಪಂಚಾಯಿತಿ ಗಳಲ್ಲಿ ಲಭ್ಯವಿದ್ದೂ ಮತ್ತು ಅವುಗಳನ್ನು ಬಳಸುವ ಬಗ್ಗೆ ಜನರಿಗೆ ಅರಿವು ಮೂಡಿಸಿ,ಅವು ಸುಲಭವಾಗಿ ದಕ್ಕುವಂತೆ ಸರ್ಕಾರ ಮಾಡಿದ್ದರೆ,ಒಬ್ಬರು ಜೈಲಿಗೆ ಹೋಗುವುದನ್ನು ತಪ್ಪಿಸಬಹುದಿತ್ತಲ್ಲವೇ?
ಹೊರಾಟಗಾರ್ತಿ ಮಲಾಲಾ ಮತ್ತು ಮಿಥ್ಯಾ ಪ್ರಗತಿಪರರ ಭ೦ಡತನ
– ಗುರುರಾಜ್ ಕೊಡ್ಕಣಿ,ಯಲ್ಲಾಪುರ
ಪ್ರತಿವರ್ಷದ೦ತೇ ಈ ಬಾರಿಯ ನೊಬೆಲ್ ಪ್ರಶಸ್ತಿಯ ಘೊಷಣೆಯಾಗಿದೆ.ಅದರಲ್ಲೂ ಈ ಬಾರಿ ಶಾ೦ತಿಗಾಗಿ ಕೊಡುವ ನೊಬೆಲ್ ಪ್ರಶಸ್ತಿ ಚರ್ಚಿತ ವಿಷಯವಾಗಿತ್ತು. .ಪಾಕಿಸ್ತಾನದ ಪುಟ್ಟ,ದಿಟ್ಟ ಹೋರಾಟಗಾರ್ತಿ ಮಲಾಲಾ ಯುಸುಫಜಾಯ್ ನೊಬೆಲ್ ಶಾ೦ತಿ ಪ್ರಶಸ್ತಿಯ ಕಣದಲ್ಲಿದ್ದು ಆಸಕ್ತಿಗೆ ಕಾರಣವಾಗಿತ್ತು.ಆ ಪುಟ್ಟ ಹುಡುಗಿ ತೋರಿದ ದಿಟ್ಟತನಕ್ಕೆ ಆಕೆಗೆ ನೊಬೆಲ್ ಸಿಗಲಿ ಎ೦ಬುದು ಬಹುತೇಕರ ಆಶಯ ಮತ್ತು ಅಭಿಪ್ರಾಯವಾಗಿತ್ತು.ಆದರೆ ಕೊನೆಯ ಕ್ಷಣಗಳಲ್ಲಿ ಆಕೆಗೆ ನೊಬೆಲ್ ಪ್ರಶಸ್ತಿ ತಪ್ಪಿದ್ದು ಅನೇಕರಲ್ಲಿ ನಿರಾಸೆಯು೦ಟು ಮಾಡಿತು.ಪರಮ ಕ೦ಟಕ ರಾಷ್ಟ್ರ ಪಾಕಿಸ್ತಾನದ ಪ್ರಜೆಯಾಗಿದ್ದರೂ ಈ ಚಿಕ್ಕ ವಯಸ್ಸಿನಲ್ಲಿ ಆಕೆ ತೋರಿದ ಧೈರ್ಯಕ್ಕೆ ಅಕೆಗೆ ನೊಬೆಲ್ ಸಿಗಲೆ೦ದು ಅನೇಕ ಭಾರತೀಯರೂ ಬಯಸಿದ್ದರೆ೦ಬುದು ಸುಳ್ಳಲ್ಲ
ಈಗಾಗಲೇ ಮಲಾಲಾ ವಿಶ್ವದಾದ್ಯ೦ತ ಮನೆಮಾತಾಗಿದ್ದರೂ ಆಕೆಯ ಬಗ್ಗೆ ಹೆಚ್ಚಾಗಿ ಗೊತ್ತಿಲ್ಲದಿದ್ದವರಿಗೆ ಕೊ೦ಚ ಮಾಹಿತಿ ನೀಡುತ್ತಿದ್ದೇನೆ.ಹದಿನಾರು ವರ್ಷದ ಮಲಾಲಾ ಯುಸುಫಜಾಯ್ ಮೂಲತ: ಪಾಕಿಸ್ತಾನದ ತಾಲಿಬಾನ್ ಪೀಡಿತ ಸ್ವಾಟ್ ಕಣಿವೆಯವಳು.ತಾಲಿಬಾನಿ ಆಡಳಿತದಲ್ಲಿನ ಈ ಪ್ರದೇಶದಲ್ಲಿ ತಾಲಿಬಾನ್ ಕರ್ಮಠ ಇಸ್ಲಾ೦ ಸ೦ಪ್ರದಾಯಗಳನ್ನು ,ಕಾನೂನುಗಳನ್ನು ಈ ಪ್ರದೇಶದಲ್ಲಿ ಜಾರಿಗೊಳಿಸಿದೆ.ಹೆಣ್ಣು ಮಕ್ಕಳಿಗೆ ವಿದ್ಯಾಭ್ಯಾಸವಿಲ್ಲ ಎ೦ಬ ಕಾನೂನನ್ನು ಈ ಪ್ರದೇಶದಲ್ಲಿ ಜಾರಿಗೊಳಿಸಿದ್ದರು.ಅಲ್ಲಿ ತಾಲಿಬಾನಿಗಳ ನಿರ್ಣಯವನ್ನು ಯಾರೂ ಪ್ರಶ್ನಿಸುವ೦ತಿರಲಿಲ್ಲ.ಆದರೆ ಈ ಪುಟ್ಟ ಬಾಲಕಿ ಮಲಾಲಾ ಈ ಅನ್ಯಾಯವನ್ನು ವಿರೋಧಿಸುವ ನಿರ್ಧಾರಕ್ಕೆ ಬ೦ದಳು.ತನ್ನ ಹನ್ನೊ೦ದನೆಯ ವಯಸ್ಸಿನಲ್ಲಿ ಬಿಬಿಸಿಯ ಅ೦ತರ್ಜಾಲ ತಾಣಗಳಿಗೆ ಮಲಾಲಾ ಗುಪ್ತ ನಾಮದಲ್ಲಿ ಬ್ಲಾಗ್ ಬರೆಯಲಾರ೦ಭಿಸಿದಳು.ಬಿಬಿಸಿಯ೦ತಹ ವಿಶ್ವಮಾನ್ಯ ಸ೦ಸ್ಥೆಗೆ ,ಸ್ವಾಟ್ ನಲ್ಲಿ ತಾಲಿಬಾನಿಗಳ ಅರಾಜಕತೆ,ಮಹಿಳೆಯರ ಮೇಲಿನ ದೌರ್ಜನ್ಯವನ್ನು ವಿವರಿಸುವ ಪ್ರಯತ್ನ ಮಾಡಿದಳು. ಮಹಿಳಾ ಶಿಕ್ಷಣದ ಬಗ್ಗೆ ತನ್ನ ಅಭಿಪ್ರಾಯವನ್ನು ವಿಶ್ವಕ್ಕೆ ಅರುಹಿದಳು.ಚಿಕ್ಕ ವಯಸ್ಸಿನಲ್ಲಿಯೇ ಆಕೆಯ ವೈಚಾರಿಕತೆಗೆ ತಲೆದೂಗಿದ ನ್ಯೂಯಾರ್ಕ್ ಟೈಮ್ಸ್ ಆಕೆಯ ಬಗ್ಗೆ ಸಾಕ್ಷ್ಯ ಚಿತ್ರವನ್ನು ನಿರ್ಮಿಸಿತು.ಅಲ್ಲಿ೦ದ ವಿಶ್ವ ಪ್ರಸಿದ್ದಳಾದ ಆಕೆ ಮುಕ್ತವಾಗಿ ಮಾಧ್ಯಮಗಳಲ್ಲಿ,ಪತ್ರಿಕೆಗಳಲ್ಲಿ ಸ೦ದರ್ಶನಗಳನ್ನು ನೀಡತೊಡಗಿದಳು.ಆಗ ಎಚ್ಚೆತ್ತುಕೊ೦ಡ ಪಾಕಿಸ್ತಾನದ ಸೈನ್ಯ ಸ್ವಾಟ್ ಕಣಿವೆಯ ಮೇಲೆ ಕದನ ಘೋಷಿಸಿತು. ’ಎರಡನೇ ಸ್ವಾಟ್ ಯುದ್ದ’ ಎ೦ದೇ ಪ್ರಸಿದ್ಧವಾದ ಈ ಯುದ್ದದಲ್ಲಿ ಪಾಕಿಸ್ತಾನಿ ಸೈನ್ಯ ಸ್ವಾಟ್ ಕಣಿವೆಯನ್ನು ಮರಳಿ ತನ್ನ ವಶಕ್ಕೆ ಪಡೆಯಿತು.ಅನೇಕ ತಾಲಿಬಾನಿ ಕಮಾ೦ಡರಗಳ ಬ೦ಧನವಾಯ್ತು.
ಮಲಾಲಾ ~ ನಿಜವಾದ ಕಥೆ(ಪುರಾವೆಗಳ ಸಹಿತ)
ಮೂಲ : ನದೀಂ ಎಫ್ ಪರಾಚ
ಅನುವಾದ : ನಿವೇದಿತ ಥಾಡಣಿ
ಸೆಪ್ಟೆಂಬರ್ 2012 ರಲ್ಲಿ, ಪಾಕಿಸ್ತಾನದ ಸ್ವಾತ್ ಕಣಿವೆಯಲ್ಲಿ ಒಬ್ಬ ತಾಲಿಬಾನ್ ಕಾರ್ಯಕರ್ತ 15 ವರ್ಷದ ಶಾಲಾ ಹುಡುಗಿಯ ಮುಖ ಮತ್ತು ತಲೆಗೆ ಗುಂಡು ಹಾರಿಸಿದ್ದಾನೆ ಎಂದು ವರದಿಯಾಯಿತು.ಈ ದಾಳಿ ವಿಶ್ವದಾದ್ಯಂತ ಆಕ್ರೋಶಕ್ಕೆ ಕಾರಣವಾಯಿತು ಮತ್ತು ಈ ಸುದ್ದಿಗೆ ಸ್ಥಳೀಯ ಮತ್ತು ಅಂತರರಾಷ್ಟ್ರೀಯ ಮಾಧ್ಯಮಗಳಲ್ಲಿ ತುಂಬಾ ಮಹತ್ವ ನೀಡಲಾಯಿತು.
ಅವಳೇ ಮಲಾಲಾ.
ಪಾಕಿಸ್ತಾನದಲ್ಲಿ ನಂತರ ಇಂಗ್ಲೆಂಡ್ ನಲ್ಲಿ ವೈದ್ಯರು ಮಲಾಲಾಳ ಮುಖ ಮತ್ತು ತಲೆಯ ಮೇಲೆ ಅನೇಕ ಶಸ್ತ್ರಚಿಕಿತ್ಸೆಗಳನ್ನು ನೆರವೇರಿಸಿದರೂ ಅವಳು ಉಳಿಯುವ ಸಾಧ್ಯತೆ ಇಲ್ಲ ಎಂದು ವರದಿಯಾಗಿತ್ತು.
ಇಂದು ಮಲಾಲಾ ಯುಕೆಯಲ್ಲಿ ವಾಸಿಸುತ್ತಿದ್ದಾರೆ. ಪಾಕಿಸ್ತಾನದ ಮಹಿಳೆಯರ ಶಿಕ್ಷಣದ ಸಲುವಾಗಿ ಅದರಲ್ಲೂ ವಿಶೇಷವಾಗಿ ತೀವ್ರವಾದಿಗಳು ಮತ್ತು ಉಗ್ರಗಾಮಿಗಳು ಬಾಲಕಿಯರ ಶಾಲೆಗಳನ್ನು ಹಾರಿಸಿದ ಪ್ರದೇಶಗಳಲ್ಲಿ ಕೆಲಸ ಮುಂದುವರಿಸುತ್ತೇನೆ ಎಂದು ಪ್ರತಿಜ್ಞೆ ಮಾಡಿದ್ದಾರೆ ಎಂದು ಹೇಳಲಾಗುತ್ತದೆ.
ಇದು ಪೂರ್ತಿ ಕಥೆಯ ಕೇವಲ ಒಂದು ಭಾಗ ಮಾತ್ರ. ಆದರೆ ನಿಜವಾಗಿಯೂ ಗುಂಡಿಕ್ಕಿದ ದಿನ ಏನಾಯಿತು ಎಂದು ಮಲಾಲಾ ಹೇಳಿದ್ದ ಪೂರ್ತಿ ವರದಿಯಲ್ಲಿ ಅರ್ಧದಷ್ಟು ವರದಿಯನ್ನು ಪಾಶ್ಚಾತ್ಯ ಮಾಧ್ಯಮಗಳು ಮುಚ್ಚಿ ಹಾಕಿವೆ.
ದೇವನೂರರ ಬರಹದ ಕುರಿತು ನಡೆದ ಚರ್ಚೆಯ ಸುತ್ತ . . .
-ಡಾ. ಕಿರಣ್ ಗಾಜನೂರು
“ದೇವನೂರರ ಕುರಿತು ಅಪಾರ ಗೌರವ ಇಟ್ಟುಕೊಂಡೆ ಈ ಮಾತು ಹೇಳುತ್ತಿದ್ದೇನೆ ಅವರ ಲೇಖನದಲ್ಲಿ ಲಾಜಿಕ್ಕೆ ಇಲ್ಲ ಇನ್ನು ತಪ್ಪುಗಳನ್ನು ಹೇಗೆ ಗುರುತಿಸುವುದು ಈಗ ಒಬ್ಬರೂ ಒಂದು ಸಂಶೋಧನೆಯ ಮೂಲಕ ನಿಮಗೆ ಒಂದು ಪ್ರಶ್ನೆ/ವಾದ ಕೇಳುತ್ತಾರೆ ಎಂದು ಇಟ್ಟುಕೊಳ್ಳಿ ಅದಕ್ಕೆ ನೀವು ಬೌದ್ಧಿಕವಾಗಿ ಅಂಧರೆ ಆ ವ್ಯಕ್ತಿ ಯಾವ ಸಂಶೋಧಾನ ವಿಧಾನ ಬಳಸಿ ಯಾವ ಮಾಹಿತಿಯ ಆಧಾರದ ಮೇಲೆ ತನ್ನ ವಾದ ಮಂಡಿಸುತ್ತಿದ್ದಾನೆ ಅದರಲ್ಲಿರುವ ದೂಷಗಳೇನು ಅವನು ಬಳಸಿದ ವಿಧಾನ ಮತ್ತು ಪಡೆದ ಮಾಹಿತಿ ಹೇಗೆ ಆ ವಸ್ಥುವಿನ ಸರಿಯಾಗಿ ವಿವರಿಸುವಲ್ಲಿ ಎಡವಿದೆ ಎಂಬುದನ್ನು ಲಾಜಿಕಲಿ ಸಾಧಿಸಬೇಕಾಗುತ್ತದೆ. ಆದರೆ ದೆವನೂರರ ಬರಹದಲ್ಲಿ ಈ ಅಂಶವೇ ಇಲ್ಲ ಅವರೂ ಇದುವರೆಗೂ ನಂಬಿಕೊಂಡು ಬಂದ ಐಡಿಯಾಲಜಿಯನ್ನು ವಿವರಿಸಿದ್ದಾರೆ ಅಷ್ಟೆ ಈ ರೀತಿಯಾದರೆ ಯಾರೂ ಬೇಕಾದರೂ ಮಾತನಾಡಬಹುದು ಆದರೆ ಅದರಿಂದ ಎನೂ ಪ್ರಯೋಜನ? ಅದೂ ಅಲ್ಲದೆ ದೆವನೂರು ಮತ್ತು ಅವರ ಹಿಂಬಾಲಕರು ನಂಬಿದ ವಿಷಯಗಳೇ ಅಂತಿಮ ಅವರ ವಿವರಣೆಗೆ ವಿರುಧ್ಧದ ಸಂಶೋಧನೆ ಯಾರೂ ಮಾಡಬಾರದು ಮಾಡಿದರೆ ಅವರ ಮೇಲೆ ಕಣ್ಣಿಡಿ ವಿಚಾರಣೇ ಮಾಡಿ ಎಂಬಿತ್ಯಾದಿ ಮಾತನಾಡುವುದು ಅವರ ವ್ಯಕ್ತಿತ್ವಕ್ಕೆ ಶೋಭೆ ತರುವ ವಿಷಯವು ಅಲ್ಲ ಒಂದೂ ಕಾಲದಲ್ಲಿ ಆರ್.ಎಸ್.ಎಸ್ ನವರನ್ನು ಯಾವ ಯಾವ ಕಾರಣಕ್ಕೆ ಇವರುಗಳು ವಿರೋಧಿಸಿದ್ದರೂ ಇವತ್ತು ಅವೇ ಲಕ್ಷಣಗಳನ್ನು ಇವರು ಅವಾಹಿಸಿಕೊಂಡು ಮಾತನಾಡುತ್ತಿದ್ದಾರೆ ಇತರರ ಸಂಶೋಧನೆ ಟೀಕಿಸುತ್ತಿದ್ದರೆ. ಅಂದರೆ ಯಾರೂ ಸಂಶೋಧನೆಯನ್ನೆ ಮಾಡಬಾರದು ಮಾಡಿದರೆ ಪರಿಣಾಮ ನೆಟ್ಟಗಿರುವುದಿಲ್ಲ ಎಂದೂ ಎಚ್ಚರಿಸುತ್ತಿದ್ದಾರೆ ಇನ್ನು ಮುಂದೆ ಹೋಗಿ ಜಿನ್ನಾ ನೀಡಿದಂತೆ ಡೈರೆಕ್ಟ್ ಆಕ್ಷನ್ ಗೆ ಕರೆನೀಡುತ್ತಿದ್ದಾರೆ ನನಗೆ ಆಶ್ಚರ್ಯವಾಗುವುದೇ ಇದಕ್ಕೆ ಯಾರೂ ಎನೇ ಸಂಶೋಧನೆ ಮಾಡಲಿ ನಾವು ಅವರೂ ಎತ್ತುವ ಪ್ರಶ್ನೆಗಳಿಗೆ ಉತ್ತರಿಸುತ್ತೇವೆ ಆ ಮಟ್ಟದ ಸೈಂಧಾಂತಿಕ ಪಕ್ವತೆ ನಾವು ನಂಬಿದ ಸಿಂಧಾಂತಕ್ಕೆ ಇದೆ ಎಂದು ಆತ್ಮವಿಶ್ವಾಸದಿಂದ ನುಡಿಯುಬೇಕಾದ ಈ ಚಿಂತಕರೂ ಹೀಗೆ ವರ್ತಿಸುತ್ತಿರುವುದು ನಮ್ಮ ಸಂಶೋಧನಾ ಮಾದರಿಯ ವೈಪಲ್ಯ ತೋರಿಸುತ್ತದೆ” ಪೇಸ್ ಬುಕ್ ನಲ್ಲಿ ನಾನೂ ಪ್ರಕಟಿಸಿದ ಈ ಬರಹಕ್ಕೆ ಹಲವರು ಅನೇಕ ರೀತಿಯ ಪ್ರಶ್ನೆಗಳನ್ನು/ಟೀಕೆಗಳನ್ನು ಮಾಡಿದ್ದಾರೆ ಅವೆಲ್ಲವುಗಳನ್ನು ಒಂದೂ ಚರ್ಚೆಯ ಮಾದರಿಯಲ್ಲಿ ಕೆಳಗೆ ಬರೆದಿದ್ದೇನೆ ನೋಡಿ. . . .
ನಮ್ಮ ಸಮಾಜದಲ್ಲಿ ನಡೆಯುತ್ತಿರುವ ಮತ್ತು ನಡೆದಿರುವ ಶೋಷಣೆಗಳ ಕುರಿತು ಅವುಗಳ ನಿವಾರಣೆಯಗಳ ಕುರಿತು ಇಲ್ಲಿರುವ ಎಲ್ಲರ ಪ್ರಯತ್ನ ಮತ್ತು ಭಾವನೆ ಎಲ್ಲವೂ ತುಂಬಾ ಗೌರವಿಸುವ ವಿಚಾರಗಳೆ ಅಂದರೆ ನಮ್ಮೇಲ್ಲರ ಹಾನೆಸ್ಟ್ ಗುರಿ ಒಂದೇ ಅದು ನಮ್ಮ ಸಮಕಾಲಿನ ಸಮಾಜದ ಶೋಷಣೆಗಳನ್ನು ಹೊಗಲಾಡಿಸಬೇಕು.