ವಿಷಯದ ವಿವರಗಳಿಗೆ ದಾಟಿರಿ

Posts tagged ‘ಶ್ರೀ ಅರಬಿಂದೋ’

18
ಫೆಬ್ರ

ಅಂಬಿಕಾತನಯದತ್ತರ “ ಬೆಳಗು” – ಶ್ರೀ ಅರವಿಂದರ “ ಚಿನ್ಮಯದ ಆತ್ಮದೀಪ ”

– ಪುಟ್ಟು ಕುಲಕರ್ಣಿ,ಕುಮಟಾ

ಬೇಂದ್ರೆ ಮತ್ತು ಅರಬಿಂದೋವರಕವಿ ಅಂಬಿಕಾತನಯದತ್ತರು , ಜ್ಞಾನಪೀಠ ಪ್ರಶಸ್ತಿ ಸ್ವೀಕರಿಸುವ ಮುನ್ನ ಮಾಡಿದ ಭಾಷಣದಲ್ಲಿ ಒಂದು ಸಾಲು ಹೀಗಿದೆ, ‘ ನನ್ನ “ಬೆಳಗು” ಮತ್ತು “ಹಕ್ಕಿ ಹಾರುತಿದೆ” ಕವನಗಳನ್ನು ಮುಗ್ಧ ವಿದ್ಯಾರ್ಥಿಗಳಿಗೆ ಕಲಿಸಿ ಕೊಡಲಾಗುತ್ತಿದೆ. ಆದರೆ ಅದನ್ನು ಕಲಿಸುತ್ತಿರುವ ಶಿಕ್ಷಕರು ಆ ವಿದ್ಯಾರ್ಥಿಗಳಿಗಿಂತ ಮುಗ್ಧರಾಗಿದ್ದಾರೆ….. “ . ಈ ಸಾಲುಗಳನ್ನು ಓದಿದಾಗ , ಇಲ್ಲಿಯವರೆಗೂ “ಬೆಳಗು” ಕವನದ ಬಗೆಗೆ ಬಂದ ವಿಶ್ಲೇಷಣೆಗಳ ಕುರಿತು ಕವಿಗೆ ತೃಪ್ತಿ ಇಲ್ಲವೆಂದು ತೋರುತ್ತಿದೆ. ಹಾಗಾದರೆ ಈ “ಬೆಳಗು” ಮತ್ತು “ಹಕ್ಕಿ ಹಾರುತಿದೆ ನೋಡಿದಿರಾ” ಕವನಗಳನ್ನು ಬೇರೊಂದು ಆಯಾಮದಿಂದ ವಿಶ್ಲೇಷನೆ ಮಾಡಬೇಕೆ? ಹಾಗಿದ್ದಲ್ಲಿ ಅದಕ್ಕೆ ಇರುವ ಮಾನಕಗಳೇನು? ಯಾವ ಅಥವಾ ಯಾರ ಪ್ರಭಾವದಲ್ಲಿ ಈ ಕವನಗಳು ರೂಪಿತಗೊಂಡಿವೆ? ಬೌದ್ಧಿಕ ಹಂತದ ಶಬ್ದಜಾಲದ ಹೊರತಾಗಿಯೂ , ಪ್ರಜ್ಞಾ ವಲಯದ ಆಚೆಯಲ್ಲಿ ಸಾಗಿ ಅನಂತಾನಂತದ ಜೊತೆಗೆ ಜೋಡಣೆಯಾಗಬಲ್ಲ ಅನೂಹ್ಯವಾದದು ಏನಾದರೂ ಇಲ್ಲಿ ಹೇಳಲ್ಪಡುತ್ತಿದೆಯೋ?

ಇಲ್ಲಿರುವ ಶಬ್ದಮಾಧುರ್ಯದ ಆಚೆ ಇರುವ “ ಏನನ್ನೋ” ಕವಿ ಈ “ಬೆಳಗು” ಕವನದಲ್ಲಿ ಅಡಗಿಸಿದ್ದಾನೆ. ಈ “ಬೆಳಗು” ಕೇವಲ ನಾಮಪದವೋ, ಕ್ರಿಯಾಪದವೋ ಅಥವಾ ವಿಶೇಷಣವೋ ಅಥವಾ ಎಲ್ಲವೂ ಆಗಿ ಅರ್ಥಗರ್ಭಿತವಾಗಿದೆಯೋ?

“ಬೆಳಗು” ನಾಮಪದವಾಗಿ ಉಷೆಯ ಕಾಲವೆಂದು ಸರ್ವವಿದಿತ. ಆದರೆ ಅದೇ ಬೆಳಗು ಕ್ರಿಯಾಪದವಾಗಿ ಹೊಳೆ, ಆರತಿಯೆತ್ತು ಎನ್ನುವ ಅರ್ಥವನ್ನೂ ಹೇಳುತ್ತಿದೆ. ಹೊಳೆಯುವ , ಮಿನುಗುವ ವಿಶೇಷಣದಲ್ಲೂ ಸಹಿತ ಮಿಂಚುತ್ತಿದೆ. ಹಾಗಾದರೆ ಇಲ್ಲಿರುವ ಬೆಳಗು ಯಾವುದು? ಚುಮುಚುಮು ಬೆಳಗೇ? ಪೆರ್ವೆಳಗೆ ? ಬಳ್ಳಿವೆಳಗೆ ? ಬೆರಕೆವೆಳಗೆ? ಬೆಳ್ವೆಳಗೆ? ಹೀಗೆ ಹತ್ತಾರು ಹಂತದ ಪ್ರಶ್ನೆಗಳನ್ನು ನಿಲ್ಲಿಸುತ್ತಿದೆ. ಬೆಳಗೊಂದಿಸು ಎನ್ನುವದಕ್ಕೆ ಕಾಂತಿಗೊಳಿಸು ಎನ್ನುವ ಅರ್ಥವೂ ಇದೆ ಈ ಎಲ್ಲ ಹಂತದ ಸ್ವಾನುಭವವನ್ನು ಆ ಉಷೆಯ ಸಮಯದ ತೋಷದಲ್ಲಿ ಕಂಡೇ ಅನುಭವಿಸಬೇಕು. ಯಾವ ಶಬ್ದದದಲ್ಲಿ ಹೇಳಿದರೂ ಆ ಅನುಭಾವ ಸಿಕ್ಕಲಾರದು.

ಮತ್ತಷ್ಟು ಓದು »