ಸಂಲೇಖನಾ-ಸಂಥರಾ ಆತ್ಮಹತ್ಯೆಯೆ?
– ಡಾ| ಜಿ. ಭಾಸ್ಕರ ಮಯ್ಯ
ಇತ್ತೀಚೆಗೆ ರಾಜಸ್ತಾನ್ ಹೈಕೋರ್ಟ್ “ಸಂಲೇಖನಾ-ಸಂಥರಾ”ವನ್ನು ಕಾನೂನು ಬಾಹಿರಗೊಳಿಸಿರುವ ವಿಚಾರ ಜೈನ ಸಮುದಾಯದ ಸಾತ್ವಿಕ ಆಕ್ರೋಶಕ್ಕೆ ಕಾರಣವಾಗಿದೆ. ಜನಸಂಖ್ಯೆಯಲ್ಲಿ 1 ಶೇ.ದಷ್ಟೂ ಇರದ ಜೈನ ಸಮುದಾಯದ ಧಾರ್ಮಿಕ ಆಚರಣೆಯ ಮೇಲೆ ಇದು ನಿಜಕ್ಕೂ ತಾಲಿಬಾನ್ ಮಾದರಿಯ ವ್ಯವಹಾರವಾಗಿದೆ. ನಮ್ಮ ಮಾನವ ಹಕ್ಕು ಹೋರಾಟಗಾರರು ಹಾಗೂ ಪ್ರಾಣಿದಯಾ ಸಂಘದ ಮಹಾಮಹಿಮರಿಗೆ ಇರುವುದು ಕುರುಡು ಸಿದ್ಧಾಂತ ಪ್ರೀತಿ ಹೊರತು ಮಾನವ ಪ್ರೀತಿಯಲ್ಲ. ತಮ್ಮಷ್ಟಕ್ಕೆ ತಾವಿದ್ದು, ದೇಶದ ಆರ್ಥಿಕತೆಗೆ ಮಹತ್ವದ ಕೊಡುಗೆ ನೀಡಿದ ಹಾಗೂ ನೀಡುತ್ತಿರುವ ಜೈನ ಸಮುದಾಯಕ್ಕೆ ನೋವುಂಟು ಮಾಡುವ ಈ ಕೆಲಸ ನಿಜಕ್ಕೂ ನೀಚತನದ್ದಾಗಿದೆ.
ನಾನೀಗ ಈ ಆಚರಣೆಯ ಸಂಕ್ಷಿಪ್ತ ವಿವರವನ್ನು ನೀಡುತ್ತೇನೆ:-
ಈ ಆಚರಣೆಯನ್ನು ಜೈನ ದಿಗಂಬರ ಪರಂಪರೆಯಲ್ಲಿ “ಸಂಲೇಖನಾ” ಎಂತಲೂ ಶ್ವೇತಾಂಬರದಲ್ಲಿ “ಸಲ್ಲೇಖನಾ” ಎಂತಲೂ ಕರೆಯುತ್ತಾರೆ. ಇದು ಜೈನರ ಹಲವಾರು ವ್ರತಗಳಲ್ಲಿ ಅತಿಶ್ರೇಷ್ಠವಾದ ವ್ರತರಾಜ.ಸಂಲೇಖನಾ ಮನಸ್ಸಿನ ಸಾಧನೆಯ ಒಂದು ಉಚ್ಚತಮ ಆಧ್ಯಾತ್ಮಿಕ ಸ್ಥಿತಿ.
ಮರಣದ ವಿಧಗಳು: ಮರಣಗಳಲ್ಲಿ ಪ್ರಮುಖವಾಗಿ ಎರಡು ವಿಧ. ಬಾಲ ಮರಣ ಮತ್ತು ಪಂಡಿತ ಮರಣ.ಇದನ್ನು ಇನ್ನೊಂದು ಬಗೆಯಲ್ಲಿ-ಅಕಾಮ ಮರಣ (ವಿವೇಕ ರಹಿತ, ಹಲವು ಬಾರಿ) ಹಾಗೂ ಸಕಾಮ ಮರಣ(ವಿವೇಕ ಸಹಿತ, ಒಂದೇ ಬಾರಿ) ಎಂತಲೂ ಕರೆಯುತ್ತಾರೆ.”ಗುಮ್ಮಟಸಾರ”ದ ಪ್ರಕಾರ ಬಾಲ ಮರಣವು ಚ್ಯುತ ಮತ್ತು ಚ್ಯಾವಿತವೆಂದು ಎರಡು ಬಗೆ. ಚ್ಯುತವೆಂದರೆ ಆಯುಷ್ಯ ತೀರಿದ ಬಳಿಕ ಬರುವ ಸಾವು. ಚ್ಯಾವಿತವೆಂದರೆ ವಿಷ, ರಕ್ತಕ್ಷಯ, ಧಾತುಕ್ಷಯ ಶಸ್ತಾಘಾತ, ಅಗ್ನಿದಾಹ,ಜಲದಿಂದ ಬರುವ ಸಾವು. ಇನ್ನೊಂದು ಬಗೆಯ ಮರಣಕ್ಕೆ ‘ತ್ಯಕ್ತ’ ಎನ್ನುತ್ತಾರೆ. ತ್ಯಕ್ತವೆಂದರೆ ರೋಗದಿಂದಉಂಟಾದ ಅಸಾಧ್ಯ ಮಾರಣಾಂತಿಕ ಪರಿಸ್ಥಿತಿಯಲ್ಲಿ ವಿವೇಕದಿಂದ ಶರೀರ ತ್ಯಾಗ ಮಾಡುವುದು.
ಮತ್ತಷ್ಟು ಓದು