ವಿಷಯದ ವಿವರಗಳಿಗೆ ದಾಟಿರಿ

Posts tagged ‘ಸಂತೋಷ್ ತಮ್ಮಯ್ಯ’

3
ಜನ

ಹಿಂದೂಗಳು ಎರಡನೇ ದರ್ಜೆಯ ಪ್ರಜೆಗಳೇ ಮುಖ್ಯಮಂತ್ರಿಗಳೇ?

 – ರಾಕೇಶ್ ಶೆಟ್ಟಿ

ಇಂಗ್ಲೀಷ್ ಸುದ್ದಿ ವಾಹಿನಿಗಳಲ್ಲಿ ತಮ್ಮ ಪ್ಯಾನೆಲ್ ಚರ್ಚೆಗಳ ಮೂಲಕ,ಹಾಗೂ ಪ್ಯಾನೆಲಿಸ್ಟ್-ರಾಜಕಾರಣಿಗಳಿಗೆ ನಿರ್ಭಿತಿಯಿಂದ ಪ್ರಶ್ನೆ ಕೇಳುವ ಮೂಲಕ ದೇಶದ ಗಮನ ಸೆಳೆದ ಪತ್ರಕರ್ತ ಅರ್ನಬ್ ಗೋಸಾಮಿಯವರಂತೆಯೇ ಕರ್ನಾಟಕ ರಾಜ್ಯದ ಪತ್ರಿಕಾ ರಂಗದಲ್ಲಿ ತಮ್ಮ ನೇರಾ ನೇರ ಪ್ರಶ್ನೆಗಳು ಹಾಗೂ ಸತ್ಯ-ನ್ಯಾಯದ ಪರ ದನಿಯಾದವರು ಸುವರ್ಣ ಸುದ್ದಿ ವಾಹಿನಿಯ ಮುಖ್ಯಸ್ಥರಾದ ಅಜಿತ್ ಹನಮಕ್ಕನವರ್.ಇವರು ನಡೆಸಿಕೊಡುವ ಲೆಫ್ಟ್-ರೈಟ್-ಸೆಂಟರ್ ಎಂಬ ಚರ್ಚಾ ಕಾರ್ಯಕ್ರಮದಲ್ಲಿ ದಾಖಲೆಗಳನ್ನು ಮುಂದಿಟ್ಟುಕೊಂಡು, ಸುತ್ತಿ ಬಳಸಿ ಹೊಗಳಿಕೆಯ ಮಾತನಾಡದೇ ಸತ್ಯವನ್ನು ಸ್ಪಷ್ಟವಾಗಿ ಹೇಳುವುದು ಅಜಿತ್ ಶೈಲಿ.ಐತಿಹಾಸಿಕ ಸತ್ಯವನ್ನು ನೇರವಾಗಿ ಹೇಳಿದ್ದರಿಂದಾಗಿ ಈಗ ಅಜಿತ್ ಹನಮಕ್ಕನವರ್ ಸಂಕಟದಲ್ಲಿದ್ದಾರೆ.

ಕಳೆದ ಗುರುವಾರ, ಪ್ರೊ.ಭಗವಾನರನ ಕುರಿತ ಚರ್ಚೆಯ ಸಮಯದಲ್ಲಿ,ಭಗವಾನರನ ಪರ ವಹಿಸಿದ್ದ ಮಹೇಶ್ ಚಂದ್ರಗುರು ಅವರ “ಯಾರೂ ಪ್ರಶ್ನಾತೀತರಲ್ಲ” ಎನ್ನುವ ಮಾತಿಗೆ ಪ್ರತಿಯಾಗಿ ಅಜಿತ್, ಹೌದು ಸರ್ ನಿಮ್ಮ ಮಾತು ಒಪ್ಪುತ್ತೇನೆ ಯಾರೂ ಕೂಡ ಪ್ರಶ್ನಾತೀತರಲ್ಲ. ಆದರೆ ಯಾರನ್ನು ಪ್ರಶ್ನಿಸಲು  ನೀವುಗಳು (ಬುದ್ಧಿಜೀವಿಗಳು) ಆರಿಸಿಕೊಳ್ಳುತ್ತೀರಿ ಎಂದರೆ,ಯಾರನ್ನು ಪ್ರಶ್ನಿಸಿದರೆ ಅತ್ಯಂತ ಕಡಿಮೆ ಅಪಾಯ ಆಗಬಹುದೋ ಅಂತವರನ್ನು ಮಾತ್ರ ಆರಿಸಿಕೊಳ್ಳುತ್ತೀರಿ. ರಾಮನನ್ನು ಪ್ರಶ್ನಿಸಬಹುದು.೫೩ ವಯಸ್ಸಿನಲ್ಲಿ ೬ ವರ್ಷದ ಹೆಣ್ಣುಮಗುವನ್ನು ಮದುವೆಯಾದವರನ್ನು ಪ್ರಶ್ನಿಸುವ ಧೈರ್ಯ ನಿಮಗೆ ಬರುವುದಿಲ್ಲ ಎನ್ನುವ ಅರ್ಥದಲ್ಲಿ ಮಾತನ್ನಾಡಿದ್ದರು.ಅಷ್ಟೇ ನೋಡಿ ಶುರುವಾಯಿತು!

ಮತ್ತಷ್ಟು ಓದು »

21
ನವೆಂ

ನಿಂದಕರಿಂದಲೇ ಸಂತೋಷ, ನಿಂದಕರಿದ್ದರೆ ಸಂತೋಷ

– ಬಿದರೆಪ್ರಕಾಶ್

“ನಿಂದಕರಿರಿಬೇಕು, ನಿಂದಕರಿರಬೇಕು
ದುಷ್ಟ ಜನರು ಸೃಷ್ಟಿಯೊಳಿದ್ದರೆ
ಶಿಷ್ಟ ಜನರಿಗೆಲ್ಲಾ ಕೀರ್ತಿಗಳು”

ಎಂದು ಅಂದು ಹಾಡಿದ ಪುರಂದರ ದಾಸರ ನುಡಿಗಳು ಎಂದಿಗೂ ಎಂದೆಂದಿಗೂ ಪ್ರಸ್ತುತವೆಂದು ಇತ್ತೀಚೆಗಿನ ಕೆಲವು ಹಿದ್ಯಮಾನಗಳಿಂದ ವೇದ್ಯವಾಗುತ್ತದೆ.. ಹೌದು, ಪುರಂದರದಾಸರ ವಾಣಿಯಂತೆ ದುಷ್ಟ ಜನರಿಂದಲೇ ಶಿಷ್ಟ ಜನರಿಗೆ ಕೀರ್ತಿಗಳು ಲಭ್ಯವಾಗಿವೆ. ಹಾಗೆಂದು ಈ ಶಿಷ್ಟ ಜನರು ಕೀರ್ತಿಗಾಗಿ ಆಸೆ ಪಟ್ಟವರಲ್ಲ, ಪರರ ತಂಟೆಗೆ ಹೋದವರಲ್ಲ, ಕರ್ತವ್ಯಮುಖಿಯಾಗಿ ತಮ್ಮ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದ ಈ ಇಬ್ಬರು ವ್ಯಕ್ತಿಗಳು ಇಂದು ಖ್ಯಾತಿಗೆ, ಕೀರ್ತಿಗೆ ಭಾಜನರಾಗುತ್ತಿದ್ದಾರೆಂದರೆ ಅದಕ್ಕೆ ಕಾರಣ ಈ ನಿಂದಕರೇ. ಬಹುಷಃ ಈ ನಿಂದಕರಿರದಿದ್ದರೆ ಈ ಇಬ್ಬರು ವ್ಯಕ್ತಿಗಳು ಇಂದಿಗೂ ತೆರೆಮರೆಯಲ್ಲಿಯೇ ಇರುತ್ತಿದ್ದರೇನೋ. ಹಿನ್ನೆಲೆಯಲ್ಲೇ ತಮ್ಮ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದ ಈ ಇಬ್ಬರನ್ನು ಮುನ್ನಲೆಗೆ ತಂದು ನಿಲ್ಲಿಸಿರುವುದು ಈ ನಿಂದಕರೇ. ಅದಕ್ಕಾಗಿಯೇ ಈ ನಿಂದಕರಿಗೆ ಧನ್ಯವಾದ ಹೇಳಲೇಬೇಕು.

ಸಮಾಜಕ್ಕೋಸ್ಕರ ತಮ್ಮ ಜೀವನವನ್ನು ಕೊಟ್ಟು ಪ್ರಚಾರಕರಾಗಿ,ರಾಜ್ಯ ಬಿಜೆಪಿಯಲ್ಲಿ ಕೇಂದ್ರ ಬಿಂದುವಿನಂತೆ ಕಳೆದ ಹತ್ತು ವರ್ಷಗಳಿಂದ ತಮಗೆ ಕೊಟ್ಟ ಜವಾಬ್ದಾರಿಯನ್ನು ನಿರ್ವಹಿಸುತ್ತಿರುವ ಬಿ.ಎಲ್.ಸಂತೋಷ್(ಸಂತೋಷ್‌ಜೀ)ರವರು ಒಬ್ಬರಾದರೆ,ಪತ್ರಕರ್ತರಾಗಿ ಅಂಕಣಕಾರರಾಗಿ ರಾಷ್ಟ್ರೀಯ ವಿಚಾರಗಳನ್ನು ಪ್ರತಿಪಾದಿಸುತ್ತಾ, ಜೀವನಕ್ಕಿಂತ ಅಧ್ಯಯನಕ್ಕೇ ಆದ್ಯತೆ ಕೊಟ್ಟು, ಕಾರ್ಯನಿರ್ವಹಿಸುತ್ತಿರುವ ಸಂತೋಷ್ ತಮ್ಮಯ್ಯ ಮತ್ತೋರ್ವರು. ಸಂತೋಷ್‌ಜೀರವರು ರಾಜಕೀಯ ಕ್ಷೇತ್ರದಲ್ಲಿದ್ದರೂ ಎಂದಿಗೂ ಪ್ರಚಾರ ಪ್ರಿಯರಾಗಲಿಲ್ಲ. ತಮ್ಮಲ್ಲಿರುವ ಅಗಾಧ ಸಂಘಟನಾ ಸಾಮರ್ಥ್ಯವನ್ನು ಕಳೆದ ಹತ್ತು ವರ್ಷಗಳಿಂದ ಬಿಜೆಪಿಯನ್ನು ಕಟ್ಟುವುದಕ್ಕಾಗಿಯೇ ಧಾರೆ ಎರೆಯುತ್ತಿರುವ ಇವರು ಮತ್ತು ಇವರ ಸಾಮರ್ಥ್ಯ ಬಿಜೆಪಿಯ ಒಳಗಿರುವವರಿಗೆ ಮತ್ತು ಪರಿವಾರದ ಕಾರ್ಯಕರ್ತರುಗಳಿಗೆ ಮಾತ್ರ ಪರಿಚಯವಿತ್ತು.ಅದೇ ರೀತಿ ಅಸೀಮ ಪತ್ರಿಕೆಯ ಸಂಪಾದಕರಾಗಿ,ಹೊಸದಿಗಂತ ಪತ್ರಿಕೆಯ ಅಂಕಣಕಾರರಾಗಿ ಓದು ಮತ್ತು ಬರಹಗಳನ್ನು ಮಾತ್ರ ಅಂಟಿಸಿಕೊಂಡು, ಅಧ್ಯಯನದ ಮೂಲಕ ಅಗಾಧ ಬರವಣಿಗೆಯ ಸಾಮರ್ಥ್ಯವನ್ನು ಹೊಂದಿದ್ದ, ಸಂಕೋಚ ಸ್ವಭಾವದ ಸಂತೋಷ್ ತಮ್ಮಯ್ಯ ಸಹ ಎಂದೂ ಮುನ್ನಲೆಗೆ ಬಂದವರಲ್ಲ. ತಮ್ಮ ತಮ್ಮ ಕ್ಷೇತ್ರಗಳಲ್ಲಿ ತಮಗಿರುವ ಶಕ್ತಿಯನ್ನು ವಿನಿಯೋಗಿಸಿ ತೆರೆಮರೆಯಲ್ಲಿಯೇ ಕಾರ್ಯ ನಿರ್ವಹಿಸುತ್ತಿದ್ದ ಈ ಇಬ್ಬರನ್ನೂ ನಿಂದಕರುಗಳು ಜನರ ಮುಂದೆ ತಂದು ನಿಲ್ಲಿಸಿಬಿಟ್ಟಿದ್ದಾರೆ. ಈ ಕಾರಣದಿಂದಾಗಿಯೇ ಸಂತೋಷ್‌ಜೀ ಮತ್ತು ಸಂತೋಷ್ ತಮ್ಮಯ್ಯ ಇಬ್ಬರ ಹೆಸರು ಜನಜನಿತಾಗುತ್ತಿದೆ. ಇವರಿಬ್ಬರ ಸಾಮರ್ಥ್ಯದ ಅರಿವು ಜನರಿಗೆ ಆಗತೊಡಗಿದೆ. ಅದಕ್ಕೇ ಅಂದು ಪುರಂದರ ದಾಸರು ಹೇಳಿದ ’ಶಿಷ್ಟ ಜನರ ಕೀರ್ತಿಗಳಿಗೆ ನಿಂದಕರಿರಬೇಕು, ನಿಂದಕರಿರಿಬೇಕು’ ಎಂಬ ನುಡಿ ಇಂದೂ ಪ್ರಸ್ತುತವೆಂಬುದು ರುಜುವಾತಾಗಿಬಿಟ್ಟಿದೆ.

ಬಿ.ಎಲ್.ಸೋತೋಷ್, ಬಹಳಷ್ಟು ಜನರು ಸಂತೋಷ್‌ಜೀ ಎಂದು ಆತ್ಮೀಯವಾಗಿ, ಗೌರವಪೂರ್ವಕವಾಗಿ ಕರೆಸಿಕೊಳ್ಳುವ ಇವರು ಬಿಜೆಪಿಯಲ್ಲಿ ’ಸಂಘಟನಾ ಕಾರ್ಯದರ್ಶಿ’ ಎಂದರೆ ಹೇಗಿರಬೇಕು ಎಂಬುದಕ್ಕೆ ಮಾದರಿಯಾಗಿ ಬಿಜೆಪಿಯ ಸಂಘಟನೆಗಾಗಿ ತಮ್ಮ ಜೀವನವನ್ನು ಸಮರ್ಪಿಸಿ ಕಾರ್ಯನಿರ್ವಹಿಸುತ್ತಿರುವವರು.ಬಿಜೆಪಿಯನ್ನು ಸಂಘಟನಾತ್ಮಕವಾಗಿ ಶಕ್ತವಾಗಿಸುವಲ್ಲಿ ಸಂತೋಷ್‌ಜೀಯವರ ಪಾತ್ರ ಅಸದಳವಾದುದು ಎಂಬುದನ್ನು ಬಿಜೆಪಿಯಲ್ಲಿ ಅವರನ್ನು ಸಹಿಸಿಕೊಳ್ಳದವರೂ ಒಪ್ಪಿಕೊಳ್ಳುತ್ತಾರೆ.

ಮತ್ತಷ್ಟು ಓದು »

7
ನವೆಂ

ಅರಮನೆ ಕಡತಗಳಲ್ಲೇ ಇದೆ ಟಿಪ್ಪು ದೌರ್ಜನ್ಯಕ್ಕೆ ಸಾಕ್ಷಿ

– ಸಂತೋಷ್ ತಮ್ಮಯ್ಯ

ಸರಕಾರ ಹೊರಡಿಸುವ ಕೆಲವು ಗಜೆಟಿಯರುಗಳ ಪುಟ ತೆರೆದರೆ ಇವೆಷ್ಟು ಕೆಜಿ ತೂಗಬಹುದು ಎಂಬ ಭಾವನೆ ಬೇಡಬೇಡವೆಂದರೂ ಬಂದುಬಿಡುತ್ತದೆ. ಏಕೆಂದರೆ ಪ್ರಯೋಜನಕ್ಕಿಲ್ಲದ ಅವೇ ಹಳಹಳಿಕೆಗಳು, ಅಧಿಕೃತತೆಯಿಲ್ಲದ ಮಾಹಿತಿಗಳು, ವಿಕೃತಿಗೊಂಡ ಇತಿಹಾಸಗಳು ಆರಂಭವಾಗುವುದೇ ಈ ಗಜೆಟಿಯರುಗಳಿಂದ. ಸ್ವಾತಂತ್ರ್ಯಾ ನಂತರ ಪ್ರಕಟಗೊಂಡ ಯಾವುದೇ ಜಿಲ್ಲೆಯ ಗಜೆಟಿಯರುಗಳನ್ನು ಗಮನಿಸಿದರೂ ಸೆಕ್ಯುಲರ್ ವಾಸನೆ ಅವುಗಳ ಪುಟಗಳ ಒಳಗಳೊಳಗಿಂದ ರಪ್ಪನೆ ಬಡಿಯುತ್ತದೆ. ಕೊಡಗು ಗಜೆಟಿಯರುಗಳಲ್ಲಿ ಹಾಲೇರಿ ರಾಜರ ಉಲ್ಲೇಖಗಳಿರುತ್ತವೆ. ಆದರೆ ಟಿಪ್ಪುದಾಳಿಯ ಉಲ್ಲೇಖಗಳಿರುವುದಿಲ್ಲ. ಮೈಸೂರು ಗಜೆಟಿಯರುಗಳಲ್ಲಿ ಟಿಪ್ಪು ಗುಣಗಾನವಿರುತ್ತವೆಯೇ ಹೊರತು ಲಕ್ಷ್ಮಮ್ಮಣ್ಣಿಯ ಪ್ರಸ್ಥಾಪವಿರುವುದಿಲ್ಲ. ಮಂಡ್ಯ ಜಿಲ್ಲಾ ಗಜೆಟಿಯರುಗಳು ಇನ್ನೂ ಭಯಾನಕ. ಇತಿಹಾಸದ ಘಟನೆಗಳನ್ನು ವಿವರಿಸುತ್ತಾ ಅಲ್ಲಿ ಇಸವಿಗಳೇ ಮಾಯವಾಗುವ ಚಮತ್ಕಾರಗಳಿವೆ. ಅಂದರೆ ೧೭೫೦ರಿಂದ ೧೮೦೦ರವರೆಗಿನ ಯಾವ ಘಟನೆಗಳೂ ಮಂಡ್ಯ ಜಿಲ್ಲಾ ಗಜೆಟಿಯರುಗಳಲ್ಲಿಲ್ಲ. ಅಂದರೆ ೪ನೇ ಮೈಸೂರು ಯುದ್ಧದ ಪ್ರಮುಖ ಘಟನಾವಳಿಯಾಗಿ ದಾಖಲಾಗುವ ಮಳವಳ್ಳಿ ಯುದ್ಧದ ಬಗ್ಗೆ ಒಂದೇ ಒಂದು ಸಾಲೂ ಇಲ್ಲ. ಒಕ್ಕಲಿಗ ಪರಾಕ್ರಮದ ದಾಖಲೆಯನ್ನು ಅಳಿಸಿಹಾಕಲು ಗಜೆಟ್ ಪಂಡಿತರು ಒಂದು ಕಾಲಘಟ್ಟವನ್ನೇ ಎಗರಿಸಿಬಿಟ್ಟಿದ್ದಾರೆ! ಹಾಗಾಗಿ ಮಳವಳ್ಳಿ ಯುದ್ಧದ ಕುರುಹುಗಳಿದ್ದರೂ, ಇತಿಹಾಸ ಮೈಚೆಲ್ಲಿ ಬಿದ್ದಿದ್ದರೂ ಉರಿಗೌಡ ಮತ್ತು ದೊಡ್ಡನಂಜೇಗೌಡರ ಹೋರಾಟಗಳ ಉಲ್ಲೇಖಗಳು ಸಿಗುತ್ತಿಲ್ಲ. ಮಳವಳ್ಳಿ ಯುದ್ಧವನ್ನೇ ಹೇಳದ ಇಂಥ ಗಜೆಟಿಯರುಗಳನ್ನಿಟ್ಟುಕೊಂಡು ಮಂಡ್ಯ ಜಿಲ್ಲೆಗೇನು ಪ್ರಯೋಜನ? ಹಾಗಾಗಿ ಹಿಂದೆ ಮುಂದೆ ನೋಡದೆ ಸ್ವಾತಂತ್ರ್ಯಾ ನಂತರದ ಮಂಡ್ಯ ಜಿಲ್ಲಾ ಗಜೆಟಿಯರುಗಳನ್ನು ತೂಕಕ್ಕೆ ಹಾಕಬಹುದು. ಅಷ್ಟೇ ಅಲ್ಲ ಟಿಪ್ಪುಸುಲ್ತಾನ್ ಸಮರ್ಥಕರಿಗೆ ದೊಡ್ಡ ಬಲವನ್ನು ಈ ಗಜೆಟಿಯರುಗಳು ಒದಗಿಸುತ್ತಿವೆ. ಟಿಪ್ಪು ಕ್ರೂರತೆಯನ್ನು ಹುಡುಕುವವರಿಗೆ ಇವು ತೊಡಕಾಗುತ್ತಿವೆ. ಮತ್ತಷ್ಟು ಓದು »

25
ಸೆಪ್ಟೆಂ

ಸಾವಿನಲ್ಲೂ ಸಂದೇಶ ಬಿಟ್ಟುಹೋದ ರಾಷ್ಟ್ರವಾದದ ದಧೀಚಿ

– ಸಂತೋಷ್ ತಮ್ಮಯ್ಯ 

ಆ ಘಟನೆಯನ್ನು ನೆನಪಿಸಿಕೊಳ್ಳುತ್ತಾ ಕೆಲವರು “ಕೊನೆ ಕ್ಷಣಕ್ಕೆ ಅದೊಂದು ಬದಲಾವಣೆ ಆಗದೇ ಹೋಗಿದಿದ್ದರೆ ಜನಸಂಘದ ಕಥೆಯೇ ಬೇರೆ ಇರುತ್ತಿತ್ತು” ಎಂದು ಹೇಳುತ್ತಾರೆ. ಬೇರೆ ಎಂದರೆ ಹೇಗೆ ಎಂದರೆ ಅದಕ್ಕೆ ಉತ್ತರವಿಲ್ಲ. ಹಾಗೆನ್ನುವ ಎಲ್ಲರಲ್ಲೂ ಒಂದು ನಂಬಿಕೆ ಸ್ಪಷ್ಟವಾಗಿದೆ. ಜನಸಂಘ ವ್ಯಕ್ತಿ ಕೇಂದ್ರಿತ ಪಕ್ಷವಲ್ಲ ಎಂದು ಎಲ್ಲರಿಗೂ ತಿಳಿದಿದೆ. ಆದರೂ ಕೂಡಾ ಎಲ್ಲರೂ ಕಥೆ ಬೇರೆಯಾಗಿರುತ್ತಿತ್ತು ಎಂದೇ ಹೇಳುವರು. ಒಂದೇ ಒಂದು ಕ್ಷಣಕ್ಕೆ ಒಂದು ಪಕ್ಷದ ಆಗುಹೋಗುಗಳು ನಿರ್ಧರಿತವಾಗುವುದಿಲ್ಲ ಎಂದು ಅವರೆಲ್ಲರೂ ನಂಬಿದ್ದರೂ ‘ಕಥೆ ಬೇರೆಯಾಗಿರುತ್ತಿತು’ ಎಂಬ ಮಾತನ್ನು ನಿಟ್ಟುಸಿರಿನಿಂದ ಆವರೆಲ್ಲರೂ ಹೇಳದೇ ಇರುವುದಿಲ್ಲ. ದೀನದಯಾಳರ ನಂತರವೂ ಪಕ್ಷ ಅದೇ ತತ್ತ್ವ ಸಿದ್ಧಾಂತಗಳಿಂದ ಮುನ್ನಡೆಯುವುದು ಎಂದು ಅಂದುಕೊಂಡಿದ್ದರೂ ಅವರ ನಂತರ ಜನಸಂಘದಲ್ಲಿ ಏನೋ ಖಾಲಿತನ. ಸಿದ್ಧಾಂತವನ್ನು ಮುನ್ನಡೆಸಲು ದೀನದಯಾಳರಂಥ ವಾಹಕರು ಬೇಕು ಎನ್ನುವ ಚಡಪಡಿಕೆ. ಬೇಸರ, ಗೊಂದಲ, ಅಸಹನೆ. ಹಾಗಾದರೆ ದೀನದಯಾಳರು ಪಕ್ಷಕ್ಕಿಂತ, ಸಿದ್ಧಾಂತಕ್ಕಿಂತ ಮೇಲಾಗಿ ಬೆಳೆದುಬಿಟ್ಟಿದ್ದರೇ ಎಂದರೆ ಅದೂ ಇಲ್ಲ. ರಾಜಕೀಯ ಅವರಿಗೆಂದೂ ಗುರಿಯಾಗಿರಲೇ ಇಲ್ಲ. ಬದಲಿಗೆ ಮಾರ್ಗವಾಗಿತ್ತು. ಕೇವಲ ಒಂದು ಸಾಧನ ಮಾತ್ರವಾಗಿತ್ತು. ಅದುವರೆಗೆ ಭಾರತದಲ್ಲಿ ಏನಿತ್ತೋ ಅದನ್ನೇ ಅವರು ರಾಜಕೀಯ ಪರಿಭಾಷೆಯಲ್ಲಿ ಹೇಳಿದ್ದರು. ಅನುಷ್ಠಾನಕ್ಕೆ ಪ್ರಯತ್ನಿಸಿದ್ದರು. ಹಾಗಾದರೆ ಜನರಿಗೆ ಚಡಪಡಿಕೆ, ಖಾಲಿತನ, ಗೊಂದಲ, ಗೊಣಗುವಿಕೆಗಳು ಊಂಟಾಗಲು ಕಾರಣವೇನು? ಗಟ್ಟಿ ಸಿದ್ಧಾಂತದ ಪಕ್ಷದಲ್ಲೂ ಹೀಗಾಗುತ್ತವೆಯೇ?

ಸಾವು ಸಹಜವಾಗಿರದಿದ್ದರೆ ಎಲ್ಲೆಲ್ಲೂ ಹೀಗಾಗುತ್ತದೆ. ಅವರದ್ದು ಎಂಥವರೂ ಅಲ್ಲಾಡಿಹೋಗುವಂಥಾ ಸಾವು. ಸಾಧಾರಣವಾಗಿ ಸಂಘದವರು ಎಂಥಾ ಸಾವಿಗೂ ಕಣ್ಣೀರು ಹಾಕಲಾರರು. ಆದರೆ ಅಂಥ ಸಂಘದವರೂ ಕಣ್ಣೀರು ಹಾಕಿ ಬಿಕ್ಕಳಿಸಿದ ಸಾವು ದೀನದಯಾಳದ್ದು. ಗುರೂಜಿಯಂಥಾ ಆಧ್ಯಾತ್ಮ ಸಾಧಕರೇ ವಿಚಲಿತರಾಗಿಹೋದ ಸಾವು ದೀನದಯಾಳರದ್ದು. ದೇಶಕ್ಕೆ ದೇಶವೇ ಮಾತಾಡಿಕೊಂಡ ಸಾವು ದೀನದಯಾಳರದ್ದು. ಇಂದಿಗೂ ಉತ್ತರ ಸಿಗದ ಸಾವು ದೀನದಯಾಳರದ್ದು. ಸಾಧಕನ ಬದುಕನ್ನು ಆತನ ಸಾವಿನಲ್ಲಿ ನೋಡಬೇಕೆಂಬ ಮಾತಿದೆ. ಅದನ್ನು ೧೯೬೮ರ ಫೆಬ್ರವರಿ ೧೨ರಂದು ದೇಶ ನೋಡಿತು.

ಇಂದು ದೀನದಯಾಳರ ಜನ್ಮಶತಮಾನೋತ್ಸವ. ಅವರ ಹುಟ್ಟಿದ ದಿನದಂದೇ ಸಾವಿನ ಮಾತನ್ನಾಡಬೇಕು. ಏಕೆಂದರೆ ದೀನದಯಾಳರ ಅಂತಿಮ ಸಂಸ್ಕಾರ ನಡೆದ ನಂತರ ಅಟಲಬಿಹಾರಿ ವಾಜಪೇಯಿಯವರು ಅಂದೇ ಕರೆಕೊಟ್ಟಿದ್ದರು, “ಬನ್ನಿ, ಪಂಡಿತ್‌ಜಿ ಅವರ ರಕ್ತದ ಒಂದೊಂದು ಹನಿಯನ್ನೂ ಹಣೆಯ ಗಂಧವನ್ನಾಗಿಸಿಕೊಂಡು ನಮ್ಮ ಗುರಿಯತ್ತ ಸಾಗೋಣ. ಅವರ ಚಿತೆಯಿಂದ ಹೊರಬರುತ್ತಿರುವ ಒಂದೊಂದು ಕಿಡಿಯನ್ನು, ಹೃದಯದಲ್ಲಿರಿಸಿಕೊಂಡು ಪರಿಶ್ರಮದ ಪರಾಕಾಷ್ಠೆಯನ್ನು ಹಾಗೂ ಪ್ರಯತ್ನಗಳ ಎಲ್ಲೆಯನ್ನು ತಲುಪೋಣ. ಈ ದಧೀಚಿಯ ಅಸ್ಥಿಗಳ ವಜ್ರಾಯುಧವನ್ನು ತಾಯಾರಿಸಿ ಅಸುರರ ಮೇಲೆ ಆಕ್ರಮಣ ಮಾಡೋಣ ಹಾಗೂ ಪವಿತ್ರ ಭೂಮಿಯನ್ನು ನಿಷ್ಕಂಟಕವನ್ನಾಗಿಸೋಣ”. ಹಾಗಾಗಿ ದೀನದಯಾಳರ ಸಾವು ಸಿದ್ಧಾಂತಿಗಳು ಮರೆಯಬಾರದ ಸಾವು. ಆ ಚಿತೆಯ ಬೆಂಕಿ ಸದಾ ಎದೆಯಲ್ಲಿ ಸುಡುತ್ತಿರಬೇಕಾದ ಉರಿ.

ಮತ್ತಷ್ಟು ಓದು »

8
ಆಗಸ್ಟ್

ಪ್ರಜಾಪ್ರಭುತ್ವ ಎಂಬುದು ರಾಮನಂತೆ ; ರಾಜಕಾರಣಕ್ಕೆ ಬೇಕಿದೆ ನೀತಿ ಸಂಹಿತೆ

– ಸಂತೋಷ್ ತಮ್ಮಯ್ಯ

ಭಾಷೆ ಇದ್ದಮೇಲೆ ವ್ಯಾಕರಣವಿರುವಂತೆ, ಕಾವ್ಯ ಇದ್ದಮೇಲೆ ಕವಿಯೊಬ್ಬನೂ ಇರುವಂತೆ ರಾಜಕೀಯ ಪಕ್ಷ ಇದ್ದಮೇಲೆ ಅದರ ಹಿಂದೊಂದು ಸಿದ್ಧಾಂತವಿರಲೇಬೇಕು. ಪಕ್ಷದ ಹುಟ್ಟು ಕೂಡಾ ಒಂದು ಸಿದ್ಧಾಂತ, ಚಳವಳಿಗಳ ಬುನಾದಿಗಳ ಮೇಲೆ ಆಗಿರುತ್ತದೆ. ಈ ಸಿದ್ಧಾಂತಗಳು ಒಂಥರಾ ಚಪ್ಪರವಿದ್ದಂತೆ. ಆ ಚಪ್ಪರದ ಕೆಳಗೆ ಪ್ರತಿಷ್ಠಾಪಿತವಾದವುಗಳೇ ಪಕ್ಷಗಳು. ವಿಶ್ವಾದ್ಯಂತದ ರಾಜಕೀಯ ಪಕ್ಷಗಳ ಜಾತಕಗಳೆಲ್ಲವೂ ಸಾಧಾರಣವಾಗಿ ಹೀಗೆಯೇ. ಒಂದು ಉದ್ದೇಶ, ಒಂದು ಧ್ಯೇಯ, ಸಮಾಜದ ಅಶೋತ್ತರ, ರಾಷ್ಟ್ರೀಯತೆ, ಪ್ರಾಂತೀಯತೆ, ಪರಂಪರೆ ಮೊದಲಾದವುಗಳು ಆ ಚಪ್ಪರದ ಕಂಬಗಳು. ಸಿದ್ಧಾಂತಗಳನ್ನು ನೋಡಿದರೂ ಆಯಾ ಪಕ್ಷಗಳ ನಡೆ, ವರ್ತನೆಗಳನ್ನು ಸುಲಭವಾಗಿ ಕಂಡುಹಿಡಿದುಬಿಡಬಹುದು. ರಾಜಕೀಯ ಪಕ್ಷಗಳು ಸಿದ್ಧಾಂತಗಳಿಲ್ಲದಿರುವ ಸಾಧ್ಯತೆಗಳೇ ಇಲ್ಲ. ಕನಿಷ್ಠ ಅವು ವ್ಯಕ್ತಿಕೇಂದ್ರಿತವಾದ ಚೆಹರೆಯನ್ನಾದರೂ ಹೊಂದಿರುತ್ತವೆ. ಅಂಥ ಪಕ್ಷ ಆ ವ್ಯಕ್ತಿಯ ವರ್ತನೆ, ಪ್ರಭಾವವನ್ನೇ ಸಿದ್ಧಾಂತವೆಂಬಂತೆ ಬಣ್ಣಿಸಿಕೊಳ್ಳುತ್ತದೆ. ಇನ್ನು ಕೆಲವೊಮ್ಮೆ ಯಾವುದೋ ದೇಶದಲ್ಲಿ ಯಾವುದೋ ಒಂದು ಹೊತ್ತಿನಲ್ಲಿ ನಡೆದ ಒಂದು ಹತ್ಯಾಕಾಂಡವನ್ನೇ ಸಿದ್ಧಾಂತ ಎಂದು ಬಿಂಬಿಸುವ ರಾಜಕೀಯ ಪಕ್ಷಗಳೂ ಇವೆ. ತತ್‌ಕ್ಷಣದ ಒಂದು ಸ್ಪಂದನೆಯನ್ನೇ ರಾಜಕೀಯ ಸಿದ್ಧಾಂತ ಎಂದುಕೊಳ್ಳುವವರೂ ಇದ್ದಾರೆ. ರಾಷ್ಟ್ರೀಯತೆಯ ಹಂಗಿಲ್ಲದಿರುವ ಸಿದ್ಧಾಂತಗಳನ್ನೂ ಕೂಡಾ ಜಗತ್ತು ನೋಡಿದೆ, ಅನುಭವಿಸಿದೆ. ಅಧುನಿಕ ಪ್ರಜಾಪ್ರಭುತ್ವಕ್ಕೂ ಪೂರ್ವದಲ್ಲೇ ಇದ್ದ ಕೆಲವು ಗುಂಪುಗಳು, ಆ ಗುಂಪುಗಳಿಗೂ ಇದ್ದ ಸಿದ್ಧಾಂತಗಳನ್ನೂ ಜಗತ್ತು ನೋಡಿದೆ. ದೀರ್ಘ ಕಾಲ ಬಾಳಿದ ಗಟ್ಟಿತನದ ಸಿದ್ಧಾಂತಗಳನ್ನು, ಪಕ್ಷಗಳನ್ನೂ ನೋಡಿದೆ. ಆತುರದಿಂದ ಸಷ್ಟಿಯಾದವು ಅಷ್ಟೇ ಬೇಗ ಕಾಲವಾದುದನ್ನೂ ನೋಡಿದೆ. ನೆಪಮಾತ್ರಕ್ಕೆ ದೊಡ್ಡದಾಗಿ ಕಾಣುವ ಆದರೆ ಒಳಗೊಳಗೇ ಸತ್ತಂತಿರುವ ಪಕ್ಷ ಮತ್ತು ಸಿದ್ಧಾಂತವನ್ನೂ ನೋಡಿದೆ. ಮತ್ತು ಹಲವು ಅನಿವಾರ್ಯತೆಗಳಿಂದ ಸಿದ್ಧಾಂತದಿಂದ ಹೊರಳಿಕೊಂಡವುಗಳನ್ನು ಕೂಡಾ ಜಗತ್ತು ಹಲವು ಸಂದರ್ಭಗಳಲ್ಲಿ ನೋಡಿದೆ. ಭಾರತವಂತೂ ಅದನ್ನು ತೀರಾ ಹತ್ತಿರದಿಂದ ನೋಡಿದೆ.

ಮತ್ತಷ್ಟು ಓದು »