ವಿಷಯದ ವಿವರಗಳಿಗೆ ದಾಟಿರಿ

Posts tagged ‘ಸಂಸ್ಕೃತ’

7
ಜೂನ್

ಸಂಸ್ಕೃತಕ್ಕಾಗಿ ಯುದ್ಧ

– ಪ್ರವೀಣ ಜಿ ಹೆಗ್ಡೆ

“ಅಮೆರಿಕನ್ ಓರಿಯಂಟಲಿಸ್ಮ್” ಅಥವಾ ಅಮೇರಿಕಾ ಚಿಂತನಾ ವಿಧಾನ/ರೀತಿ , ಇದು ಅಮೇರಿಕಾದ ಇತಿಹಾಸದಿಂದ ಹುಟ್ಟಿರುವಂಥದ್ದು. ಯೂರೋಪಿನಿಂದ ಅಮೆರಿಕಾಕ್ಕೆ ವಲಸೆ ಹೋದ ಬಿಳಿಯರು , ಅಲ್ಲಿಯ ಮೂಲ ನಿವಾಸಿಗಳ ಜೊತೆ ಕಾದಾಡಿ ಹಿಂಸೆಯ ಮೂಲಕ, ಇಲ್ಲವೇ ಅವರ ಜೊತೆಗಿದ್ದಂತೆ ವರ್ತಿಸಿ ಆಂತರಿಕವಾಗಿ ನಿಶ್ಯಕ್ತಿಗೊಳಿಸುವ ಮೂಲಕ ತಮ್ಮ ಅಧಿಪತ್ಯವನ್ನು ಅಮೇರಿಕಾದಲ್ಲಿ ಸ್ಥಾಪಿಸಿರುವುದು ಎಲ್ಲರಿಗೂ ಗೊತ್ತಿರುವ ವಿಷಯ.

ಈ ಪಾಶ್ಚಾತ್ಯ ದೃಷ್ಟಿಯ ಚೌಕಟ್ಟನ್ನೇ ಉಪಯೋಗಿಸಿ ,ಪಾಶ್ಚಾತ್ಯವಲ್ಲದ ಸಂಸ್ಕೃತಿಗಳನ್ನೂ ಅಧ್ಯಯಿಸುವುದು ಸಾಮಾನ್ಯವಾಗಿ ಜಗತ್ತಿನಾದ್ಯಂತ ರೂಢಿಯಲ್ಲಿರುವ ವಿಷಯ. ಆದರೆ ಇಲ್ಲೊಂದು ಅತ್ಯಂತ ಗಮನಾರ್ಹವಾದ ವಿಷಯವಿದೆ, ಅದ್ಯಾವುದೆಂದರೆ ಭಾರತೀಯ ಇತಿಹಾಸ ಮತ್ತು ಸಂಸ್ಕೃತಿಯ ಮೇಲೆ ಹೆಚ್ಚಾಗುತ್ತಿರುವ ಅಮೇರಿಕಾ ಪ್ರಣೀತ ಅಧ್ಯಯನದ ಪ್ರಾಬಲ್ಯ. ಅದರಲ್ಲಿಯೂ ಗಮನಿಸಲೇಬೇಕಾದ ಅತೀ ಎಚ್ಚರಿಕೆಯ ಮತ್ತು ಸೂಕ್ಷ್ಮ ವಿಷಯವೇನೆಂದರೆ,ಅವರುಗಳು ಮೇಲು ಮೇಲೆ ಭಾರತದ ಸಂಸ್ಕೃತಿಯ ಹಿತೈಷಿ ಎನ್ನುವಂತೆ ವರ್ತಿಸಿದರೂ, ಭಾರತದ ಪೂಜ್ಯ ,ಪವಿತ್ರ ಸಂಪ್ರದಾಯಗಳ ಮತ್ತು ಸನಾತನ ಧರ್ಮದ ಬಗೆಗೆ ಅವರಿಗಿರುವ ಕನಿಷ್ಠ ಗೌರವ ಮತ್ತು ಕಾಳಜಿ.

ರಾಜೀವ ಮಲ್ಹೋತ್ರ ಅವರು ತಮ್ಮ ಪುಸ್ತಕದಲ್ಲಿ “ಅಮೇರಿಕಾ ಚಿಂತನಾ ರೀತಿ” ಎಂಬುದು ಏನು, ಅದು ಭಾರತೀಯ ಸಂಸ್ಕೃತಿಯ ಅಧ್ಯಯನದಲ್ಲಿ ಯಾವರೀತಿಯಲ್ಲಿ ಉಪಯೋಗಿಸಲ್ಪಡುತ್ತಿದೆ ? ಎನ್ನುವುದನ್ನು ಅತಿ ಸ್ಪಷ್ಟವಾಗಿ ವಿವರಿಸಿದ್ದಾರೆ. ಪುಸ್ತಕದ ತಲೆ ಬರಹ ಹೇಳುವಂತೆ,ಸಂಸ್ಕೃತ ರಾಜಕೀಯ ಸಾಧನವೋ ಅಥವಾ ಪವಿತ್ರವೋ ? ಶೋಷಣೆಯೋ ಅಥವಾ ವಿಮೊಚನೆಯೋ?ಸತ್ತಿಹುದೋ ಅಥವಾ ಬದುಕಿಹುದೋ?

ಮಲ್ಹೋತ್ರರವರು, ಅಮೇರಿಕಾ ಶಿಕ್ಷಣದಲ್ಲಿ ಬೇರೂರಿರುವ ಹೊಸ ರೀತಿಯ “ಓರಿಯಂಟಲಿಸ್ಮ್“ ಅಥವಾ ಚಿಂತನಾ ವಿಧಾನ/ರೀತಿಯ ಬಗೆಗೆ ಬರೆದಿರುವ ಅತೀ ಪ್ರಮುಖರು. ಅಮೆರಿಕಾ ದೇಶವು ಜಗತ್ತಿನ ದೊಡ್ಡಣ್ಣನಾಗಿ, ಎಲ್ಲ ಕ್ಷೇತ್ರಗಳಲ್ಲಿಯೂ ಹಿಡಿತ ಸಾಧಿಸುವುದರೊಂದಿಗೆ, ಹಿಂದಿನಿಂದ ನಡೆದುಕೊಂಡು ಬಂದಿದ್ದ ಯೂರೋಪ್ ಕೇಂದ್ರಿತವಾಗಿದ್ದ ಭಾರತೀಯ ಧರ್ಮ, ಸಂಸ್ಕೃತಿಗಳ ಅಧ್ಯಯನವು ಈಗ ಅಪ್ರಸ್ತುತವಾಗಿ, ಅದರ ಸ್ಥಾನವನ್ನು ಅಮೇರಿಕ ಕೇಂದ್ರಿತ ಭಾರತದ ಅಧ್ಯಯನ ಆಕ್ರಮಿಸಿಕೊಂಡಿದೆ.

ಅಮೇರಿಕಾದ ಅಧ್ಯಯನ ಮಾಡುವ “ಚಿಂತನಾ ವಿಧಾನ” ಭಾರತೀಯ ಸಂಸ್ಕೃತಿಗೆ ಹೇಗೆ ಅಪಾಯಕಾರಿ ?

ಮತ್ತಷ್ಟು ಓದು »

29
ಜುಲೈ

ಹಸುವಿನ ಕೆಚ್ಚಲು ಹಿಂಡಿ ತೋಳನಿಗೆ ಹಾಲುಣಿಸುವವರು

– ರೋಹಿತ್ ಚಕ್ರತೀರ್ಥ

6a00d8341dd33453ef0168e5744052970c-550wiದಡ್ಡ ವೈರಿಯನ್ನು ಗೆಲ್ಲುವುದು ಸುಲಭ. ಆದರೆ ಅತಿ ಬುದ್ಧಿವಂತ ಶತ್ರುವಿನದ್ದೇ ಸಮಸ್ಯೆ. ಕ್ರಿಸ್ಟೋಫರ್ ನೊಲನ್‍ನ ಡಾರ್ಕ್ ನೈಟ್ ಸಿನೆಮಾ ಸರಣಿಯನ್ನು ನೋಡಿದವರಿಗೆ ಜೋಕರ್‍ನ ಪರಿಚಯ ಚೆನ್ನಾಗಿಯೇ ಇರುತ್ತದೆ. ಈತ ಹೊಡೆ ಬಡಿ ಕೊಲ್ಲು ಎನ್ನುವಂಥ ನೇರಾನೇರ ವಿಲನ್ ಅಲ್ಲ. ನಾಯಕನ ಜೊತೆಗೇ ಇದ್ದು, ಆತನ ತಂತ್ರಗಳನ್ನೆಲ್ಲ ಕರಗತ ಮಾಡಿಕೊಳ್ಳಬಲ್ಲ; ಸಂದರ್ಭ ಬಂದರೆ ನಾಯಕನಿಗಿಂತ ಚೆನ್ನಾಗಿ ಅವನ್ನು ಪ್ರಯೋಗಿಸಬಲ್ಲ ಚತುರನೀತ. ಇಂಥವರನ್ನು ಸಂಭಾಳಿಸುವುದು ಕಷ್ಟದ, ನಾಜೂಕಿನ, ಬುದ್ಧಿವಂತಿಕೆ ಮತ್ತು ಸಂಯಮ ಬೇಡುವ ಕೆಲಸ. ಸಿನೆಮಾದಲ್ಲಿ ಈತನ ಹಾವಭಾವ, ವೇಷಭೂಷಣಗಳನ್ನು ನೋಡಿಯಾದರೂ ವಿಲನ್ ಎನ್ನಬಹುದೇನೋ; ಆದರೆ ನಿಜಜೀವನದಲ್ಲಿ ಇವರು ನಮ್ಮ ನಿಮ್ಮಂತೆಯೇ ಇರುತ್ತಾರೆ. ನಮ್ಮ ಭಾಷೆಯನ್ನೇ, ನಮ್ಮ ಧಾಟಿಯಲ್ಲೇ ಮಾತಾಡುತ್ತಾರೆ. ನಮಗೇನೋ ಬಹಳ ದೊಡ್ಡ ಉಪಕಾರ ಮಾಡಲಿಕ್ಕೆಂಬಂತೆ ಹಿಂದೆ ಮುಂದೆ ಸುಳಿದಾಡಿಕೊಂಡಿರುತ್ತಾರೆ. “ನೀನೂ? ಬ್ರೂಟಸ್!” ಎಂದು ನಾವು ಕಂಗಾಲಾಗಿ ನೆಲಕ್ಕುರುಳುವಷ್ಟರಲ್ಲಿ ಕಾಲ ಮಿಂಚಿರುತ್ತದೆ. ಮತ್ತಷ್ಟು ಓದು »

28
ಮೇ

ಭಾರತದಲ್ಲಿ ಶೂದ್ರರ ಶೋಷಣೆ ನಡೆದಿದೆಯೇ??

– ವಲವಿ ವಿಜಯಪುರ

c609ಸಾಮಾನ್ಯವಾಗಿ ಭಾರತದಲ್ಲಿ ಮನುಸ್ಮೃತಿಯು ಶೂದ್ರರಿಗೆ ವೇದಗಳನ್ನು ಕಲಿಯುವ ಅಧಿಕಾರ ನೀಡಲಿಲ್ಲ. ಅವರಿಗೆ ಸಂಸ್ಕೃತದ ಜ್ಞಾನವನ್ನು  ಕೊಡಲಿಲ್ಲ. ವಿದ್ಯೆಯನ್ನು ಶೂದ್ರರಿಂದ ಮುಚ್ಚಿಡಲಾಯಿತು.  ಮೇಲ್ವರ್ಗದವರ ಮನೆಯ ಸಗಣಿಯನ್ನು ಬಾಚುವದೇ ಅವರ ಕೆಲಸವಾಗಿತ್ತು. ಯಾವುದೇ ಉನ್ನತ ಹುದ್ದೆಗಳನ್ನು ನೀಡದೇ ಅವರನ್ನು ವಂಚಿಸಲಾಯಿತು. ಮತ್ತು ಈ ವಂಚನೆಯಲ್ಲಿ ಅಧಿಕವಾಗಿ ಬ್ರಾಹ್ಮಣರು ಭಾಗೀದಾರರು. ಸಮಾಜವೆಂಬ ಪಿರಮಿಡ್ ಆಕೃತಿಯಲ್ಲಿ ಅತ್ಯಂತ ಮೇಲೆ ಬ್ರಾಹ್ಮಣನಿದ್ದರೆ ಅತ್ಯಂತ ಕೆಳಸ್ತರದಲ್ಲಿ ಶೂದ್ರನಿದ್ದಾನೆ ಮತ್ತು ಅವನನ್ನು ವಿಶೇಷವಾಗಿ ಬ್ರಾಹ್ಮಣರು ಶೋಷಣೆ ಮಾಡಿದ್ದಾರೆ ಅನ್ನುವದು ಆಧುನಿಕ ಶಿಕ್ಷಣ ಪಡೆದವರ ವಾದವಾಗಿದೆ. ಮತ್ತಷ್ಟು ಓದು »

8
ಫೆಬ್ರ

ಸಂಸ್ಕೃತ ಮತ್ತು ಕನ್ನಡಗಳ ಅಂತರ್ಜಾಲ ಸ್ಥಿತಿಗತಿ

– ನವೀನ್ ಗಂಗೋತ್ರಿ

ಸಂಸ್ಕೃತಸಂಸ್ಕೃತದ ಕುರಿತಾಗಿ ಭಾರೀ ಅನುಕಂಪದಿಂದ ಮಾತಾಡುವ ಬಲುದೂರದ ಮಿತ್ರವಲಯವೊಂದಿದೆ ನನ್ನ ಬಳಿ. ಸಂಸ್ಕೃತವನ್ನೋದಿಕೊಂಡ ನಾನು, ನನ್ನಂಥವರು, ನಮ್ಮ ಸಂಸ್ಕೃತ ಸಂಸ್ಥೆಗಳು, ಸಂಸ್ಕೃತ ಪ್ರಪಂಚ ಮತ್ತು ಸಂಸ್ಕೃತಭಾಷೆಯ ಕುರಿತಾದ ಆಳವಾದ ಅನುಕಂಪ ಮತ್ತು ಕರುಣವೊಂದು ಅವರ ದನಿಯಲ್ಲಿರುತ್ತದೆ. ಆದರೆ ನನಗೆಂದಿಗೂ ಈ ಅನುಕಂಪ ಸಮರ್ಪಕವೆಂದೆನಿಸಿಲ್ಲ. ಬಹುಶಃ ಎಪತ್ತು ಎಂಭತ್ತು ತೊಂಭತ್ತರ ದಶಕದ ಸಂಸ್ಕೃತದ ಸ್ಥಿತಿಯ ಕುರಿತಾದ ಅವರ ಗ್ರಹಿಕೆ ಇನ್ನೂ ಅಪ್ಡೇಟಾಗಿಲ್ಲವೆಂದು ಸುಮ್ಮನಾಗುತ್ತೇನೆ. ವಾಸ್ತವದಲ್ಲಿ ಸಂಸ್ಕೃತದ ಪ್ರಪಂಚ ಚಟುವಟಿಕೆಯಿಂದ ಕೂಡಿದೆಯಲ್ಲದೆ ಅದು ಪ್ರಪಂಚದ ಬಹುಪಾಲನ್ನು ತಲುಪುವ ದಿಕ್ಕಿನಲ್ಲಿ ಸಮರ್ಥ ಹೆಜ್ಜೆಯನ್ನಿಟ್ಟಿದೆ. ಸಂಸ್ಕೃತಕ್ಕಾಗಿ ಉಳಿದೆಲ್ಲವನ್ನೂ ತೊರೆದ ನಿಷ್ಠ ಕಾರ್ಯಕರ್ತರಿದ್ದಾರೆ, ವಿದ್ವಾಂಸರಿದ್ದಾರೆ, ಸಂಸ್ಥೆಗಳಿವೆ ಮತ್ತು ವಿವಿ ಗಳಿವೆ. ನಿಜವೆಂದರೆ ಸಂಸ್ಕೃತದ ಕಾರ್ಯ ಭಾರತದಲ್ಲಿ ಮಾತ್ರವಲ್ಲ, ಯೂರೋಪ್ ನಿಂದ ಕೂಡ ನಡೆಯುತ್ತಿದೆ. ಅದರ ಪರಿಣಾಮವೇ ಸಂಸ್ಕೃತದ ಲಭ್ಯತೆ ಎಲ್ಲಾ ಅರ್ಥದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ನಿಮ್ಮಲ್ಲಿ ಅಂತರ್ಜಾಲದ ವ್ಯವಸ್ಥೆ ಇದೆಯೆಂದರೆ ಸಂಸ್ಕೃತ ವಿಶ್ವದ ಕ್ಲಾಸಿಕ್ ಕೃತಿಗಳೆಲ್ಲವೂ ನಿಮ್ಮಲ್ಲಿವೆ ಎಂದೇ ಅರ್ಥ. ಈ ಮಾತುಗಳಲ್ಲಿ ನಿಮಗೆ ನಂಬಿಕೆಯಿಲ್ಲವೆಂದಾದರೆ ಸುಮ್ಮನೇ ಒಮ್ಮೆ ಗೂಗಲಿನಲ್ಲಿ ಸಂಸ್ಕೃತದ ಕೃತಿಯೊಂದಕ್ಕಾಗಿ ಹುಡುಕಾಡಿ ನೋಡಿ.

ಸಂಸ್ಕೃತದ ಕೃತಿಗಳಿಗಾಗಿ ಹುಡುಕಿದಂತೆಯೇ ಕನ್ನಡದ ಕ್ಲಾಸಿಕ್ ಕೃತಿಗಳಿಗಾಗಿ ಹುಡುಕಿ ನೋಡಿದರೆ ನಿಮಗೆ ನಿಜಕ್ಕೂ ಖೇದವಾಗುತ್ತದೆ. ನಾವು ಆರೇಳು ಕೋಟಿ ಜನ ಕರ್ನಾಟಕದಲ್ಲಿ ಕುಳಿತು, ಬೆಂಗಳೂರಿನಂಥ ಸಿಲಿಕಾನ್ ಕಣಿವೆಯನ್ನು ನಮ್ಮ ರಾಜಧಾನಿಯನ್ನಾಗಿ ಇಟ್ಟುಕೊಂಡು, ಮಹಾ ಮಹಾ ವಿಶ್ವ ವಿದ್ಯಾಲಯಗಳನ್ನು ಕಟ್ಟಿಕೊಂಡು, ಕನ್ನಡಕ್ಕಾಗಿ ಕೈಯೆತ್ತುವ ಸಂಘ ಸಂಸ್ಥೆಗಳನ್ನೆಲ್ಲಾ ಇಟ್ಟುಕೊಂಡು ನಮ್ಮ ಮಹತ್ತರ ಕೃತಿಗಳನ್ನು ಇನ್ನೂ ಅಂತರ್ಜಾಲಕ್ಕೆ ಬಿಡುಗಡೆ ಮಾಡದೇ ಗೆಣಸು ಹೆರೆಯುತ್ತ ಕೂತಿದ್ದೇವೆ. ಕುಮಾರವ್ಯಾಸನ ಕರ್ಣಾಟಕ ಭಾರತ ಕಥಾಮಂಜರಿ (ಕೆಲಸ ಅರ್ಧವಾಗಿದೆ), ಕುವೆಂಪುರವರ ರಾಮಾಯಣ ದರ್ಶನಮ್ (ಕಣಜದಲ್ಲಿದೆ), ಇವನ್ನು ಹೊರತುಪಡಿಸಿದರೆ ಕನ್ನಡದ ಕ್ಲಾಸಿಕ್ ಅಂತರ್ಜಾಲದಲ್ಲಿ ಲಭ್ಯಯವಿಲ್ಲ. ಕಾರಂತರು, ತೇಜಸ್ವಿಯವರು, ಮತ್ತು ಕೆಲವು ಕಾದಂಬರಿಕಾರ್ತಿಯರ ಕೃತಿಗಳು ಪಿಡಿಎಫ್ ಆಗಿ ಲಭ್ಯವಿದ್ದರೂ ಓಸಿಆರ್ ತಂತ್ರಜ್ಞಾನ ಇಲ್ಲದ್ದರಿಂದ ರೆಫರೆನ್ಸ್ ಗೆ ಅಷ್ಟೇನೂ ಉಪಯೋಗವಿಲ್ಲ. ಬಹುಶಃ ನಮಗೆ ಹೋರಾಟಗಳೇ ಮುಗಿಯೋದಿಲ್ಲ, ದಿನಾ ಬೆಳಗಾದರೆ ಪಂಥಗಳ ಹೆಸರಿನಲ್ಲಿ ಟೌನ್ ಹಾಲ್ ಮುಂದೆ ಜಮಾಯಿಸೋದಷ್ಟೇ ಕನ್ನಡದ ಕೆಲಸ ಅಂದುಕೊಂಡು ಬಿಟ್ಟಿದ್ದೇವೆ. ಕೆಲವರಂತೂ ಮಾತೆತ್ತಿದರೆ ಸಂಸ್ಕೃತದ ವಿರುದ್ಧ ಹರಿಹಾಯುತ್ತಾರೆ. ಸಂಸ್ಕೃತ ಸತ್ತೋಗಿದೆ ಅನ್ನುತ್ತಾರೆ. ಆದರೆ ಆಧುನಿಕ ಜಗತ್ತಿನಲ್ಲಿ ಸಂಸ್ಕೃತವು ಕನ್ನಡಕ್ಕಿಂತ ವ್ಯಾಪಕವಾದ ಬದುಕನ್ನು ಬದುಕುವತ್ತ ಮುನ್ನುಗ್ಗುತ್ತಿದೆ. ನೆನಪಿಡಿ, ಸಂಸ್ಕೃತದಲ್ಲಿ ಓಸಿಆರ್ ಈಗಾಗಲೇ ಇದೆ. ಆರ್ಕೈವ್ ನಿಂದ ಅಥವ ಗೂಗಲ್ ಪುಸ್ತಕದಿಂದ ತೆರೆದುಕೊಂಡ ಸಂಸ್ಕೃತಪುಸ್ತಕದಲ್ಲಿ ಯಾವುದೇ ಶಬ್ದವನ್ನು ಆರಾಮವಾಗಿ ಹುಡುಕಬಹುದು. ಇದನ್ನೆಲ್ಲ ಭಾರತೀಯರೇ ಮಾಡಿದ್ದೆಂದು ನಾನು ಹೇಳುತ್ತಿಲ್ಲ, ಆದರೆ ಸಂಸ್ಕೃತ ನಿಷ್ಠೆಯ ಜನರಿಂದ ವಿಶ್ವದಾದ್ಯಂತ ಇದೆಲ್ಲ ಕೆಲಸ ನಡೆಯುತ್ತಿದೆ.  ಕನ್ನಡದಂಥಾ ಕನ್ನಡಕ್ಕೇನಾಗಿದೆ?

ಮತ್ತಷ್ಟು ಓದು »

23
ಸೆಪ್ಟೆಂ

ವಸಾಹತುಪ್ರಜ್ಞೆಯ ಪ್ರಾಯೋಜಿತ ಪಂದ್ಯಾವಳಿಗಳು – ಭಾಗ ೨

– ವಿನಾಯಕ ಹಂಪಿಹೊಳಿ

ಸಂಸ್ಕೃತ v/s ಆಡುಭಾಷೆ, ಶಾಸ್ತ್ರೀಯ v/s ಜಾನಪದ, ಪುರೋಹಿತ v/s ಭಕ್ತ, ಆರ್ಯ v/s ದ್ರಾವಿಡ … – ಭಾಗ ೧

ಸಂಸ್ಕೃತ v/s ಆಡುಭಾಷೆ, ಶಾಸ್ತ್ರೀಯ v/s ಜಾನಪದ, ಪುರೋಹಿತ v/s ಭಕ್ತ, ಆರ್ಯ v/s ದ್ರಾವಿಡ … – ಭಾಗ ೨

Colonial Consciousnessಇದೇ ಪ್ರಶ್ನೆಯು ಪುರೋಹಿತ ಮತ್ತು ಭಕ್ತನ ನಡುವಿನ ಯುದ್ಧಕ್ಕೂ ಅನ್ವಯವಾಗುತ್ತದೆ. ಹಾಗೊಂದು ವೇಳೆ ಅಷ್ಟೊಂದು ಅಸಹನೆ/ಶೋಷಣೆಗಳು ಇದ್ದರೆ ಜಾತಿಜಾತಿಗಳ ನಡುವೆ ಯುದ್ಧವೇ ಜರುಗಿ ಎಲ್ಲ ಜಾತಿಗಳೂ ನಾಶವಾಗಬೇಕಿತ್ತು. ಆದರೆ ಎಲ್ಲ ಜಾತಿಗಳೂ ಒಂದೇ ಹಳ್ಳಿಯಲ್ಲಿ ತಮ್ಮಷ್ಟಕ್ಕೆ ತಾವಿರುವದು ಏಕೆ? ಈ ಎಲ್ಲ ಪ್ರಕ್ರಿಯೆಗಳನ್ನು ಈ ಸಿದ್ಧಾಂತವು ವಿವರಿಸಿಲ್ಲ.

ಆದರೂ ಬ್ರಿಟೀಷರು ನೀಡಿದ ವಸಾಹತುಪ್ರಜ್ಞೆಯನ್ನು ಶಿರಸಾ ಹೊತ್ತುಕೊಂಡು ಅವರ ಸಿದ್ಧಾಂತಗಳನ್ನು ಒಪ್ಪಿಕೊಂಡಿದ್ದೇವೆ. ಜಾತಿಗೊಂದು, ಕೇರಿಗೊಂದು, ಊರಿಗೊಂದು ಭಾಷಾವೈವಿಧ್ಯತೆಯಿರುವಲ್ಲಿ ಯೂರೋಪಿನಂತೆ ಭಾಷಾವಾರು ಪ್ರಾಂತ್ಯಗಳನ್ನು ಮಾಡಿಕೊಂಡಿದ್ದೇವೆ. ಇಡೀ ಸಹಸ್ರಮಾನದಲ್ಲಿ ಎಂದೂ ನಡೆಯದ ಮಹಾಪ್ರಾಣಗಳ ಅಗತ್ಯತೆಯ ಕುರಿತ ಚರ್ಚೆಗಳು ಈಗೀಗ ನಡೆಯುತ್ತಿವೆ. ಕನ್ನಡಿಗರಿಗೆ ಎಂದಿಗೂ ವಿರುದ್ಧವಾಗಿ ಕಾಣದ, ಕರ್ನಾಟಕದ ೫ ವೀರಶೈವ ಪೀಠಗಳು ಪ್ರಗತಿಪರರ ದೃಷ್ಟಿಯಲ್ಲಿ, ಏಕಾಏಕೀ ಶರಣ ಚಳುವಳಿಗೆ ವಿರುದ್ಧವಾದ ಬೆಳವಣಿಗೆಗಳಾಗಿಬಿಟ್ಟಿವೆ. ಕರ್ನಾಟಕ ಸಂಗೀತವನ್ನು ವಿರೋಧಿಸುವ ಅಂಶಗಳು ಜಾನಪದ ಸಂಗೀತದಲ್ಲಿ ಎಲ್ಲೆಲ್ಲಿ ಕಂಡುಬಂದಿವೆ ಎಂಬ ಚಿತ್ರವಿಚಿತ್ರ ಸಂಶೋಧನೆಗಳು ಬರುತ್ತಿವೆ. ಆರ್ಯ-ದ್ರಾವಿಡ ವಾದದಲ್ಲಿನ ದೋಷಗಳ ಕುರಿತು ಚರ್ಚೆ ಶುರುಮಾಡಿದರೂನೂ, ಅದು ಪುರೋಹಿತಶಾಹಿಯ ಹುನ್ನಾರವಾಗಿಬಿಡುತ್ತದೆ.

ಇವೆಲ್ಲದಕ್ಕೂ ಮುಖ್ಯವಾಗಿ ಪಾಶ್ಚಿಮಾತ್ಯರು ನಮ್ಮಲ್ಲಿ ಯಾವೆಲ್ಲ ವೈರುಧ್ಯಗಳನ್ನು ಕಂಡರೋ, ಅವುಗಳನ್ನು ವಿವರಿಸಲು ಆಧರಿಸಿದ ಆರ್ಯ-ದ್ರಾವಿಡ ಸಿದ್ಧಾಂತದ ಬುಡಕ್ಕೇ ಇಂದು ವಿಜ್ಞಾನ ಕೊಡಲಿ ಪೆಟ್ಟನ್ನು ನೀಡಿದೆ. ಜೈವಿಕವಾಗಿ, ಭೌತಿಕವಾಗಿ ಇಂದು ಸಿಗುವ ಎಲ್ಲ ವೈಜ್ಞಾನಿಕ ಸಾಕ್ಷಿಗಳು ಈ ಸಿದ್ಧಾಂತವನ್ನು ಕಸದ ಬುಟ್ಟಿಗೆ ಎಸೆದಿವೆ. ಸರಸ್ವತಿ ನದಿಯ ಅಸ್ತಿತ್ವ, ದ್ವಾರಕೆಯ ಅವಶೇಷಗಳು, ಮುಂತಾದ ಭೌತಿಕ ಸಾಕ್ಷಿಗಳು ಒಂದೆಡೆಯಾದರೆ, ಡಿ.ಎನ್.ಎ. ಆಧಾರಿತ ವಲಸೆಯ ವರದಿಗಳನ್ನು ಹೇಳುವ ಜೈವಿಕ ಸಾಕ್ಷಿಗಳು ಇನ್ನೊಂದೆಡೆ. ಹೀಗಾಗಿ ವೈಜ್ಞಾನಿಕವಾಗಿ ಸಾಬೀತಾಗದ ಈ ಆರ್ಯರ ವಲಸೆಯಾಗಲೀ, ಅದರ ಆಧಾರದ ಮೇಲೆ ಹೇಳಲಾಗುವ ಅನುಭವಕ್ಕೇ ಬಾರದ ಸಾಮಾಜಿಕ ವೈರುಧ್ಯ, ಚಳುವಳಿಗಳು ಶಾಲೆಗಳಲ್ಲಿ ಕಲಿಯಲೂ ಯೋಗ್ಯವಲ್ಲ. ಕಲಿಸಲೂ ಯೋಗ್ಯವಲ್ಲ.

ಮತ್ತಷ್ಟು ಓದು »

22
ಸೆಪ್ಟೆಂ

ವಸಾಹತುಪ್ರಜ್ಞೆಯ ಪ್ರಾಯೋಜಿತ ಪಂದ್ಯಾವಳಿಗಳು – ಭಾಗ ೧

– ವಿನಾಯಕ ಹಂಪಿಹೊಳಿ

ಸಂಸ್ಕೃತ v/s ಆಡುಭಾಷೆ, ಶಾಸ್ತ್ರೀಯ v/s ಜಾನಪದ, ಪುರೋಹಿತ v/s ಭಕ್ತ, ಆರ್ಯ v/s ದ್ರಾವಿಡ … – ಭಾಗ ೧

Colonial Consciousnessಕ್ರಿ.ಶ. ೧೪೦೦ರ ತನಕ ಬೈಬಲ್ಲಿನ ಹಳೇ ಒಡಂಬಡಿಕೆ ಮತ್ತು ಹೊಸ ಒಡಂಬಡಿಕೆಗಳು ಹಿಬ್ರೂ, ಗ್ರೀಕ್ ಮತ್ತು ಲ್ಯಾಟಿನ್ ಭಾಷೆಗಳಲ್ಲಿ ಇದ್ದವು. ಆಕ್ಸಫರ್ಡ್ ಪ್ರೊಫೆಸರ್ ಆಗಿದ್ದ ಜಾನ್ ವಿಕ್ಲಿಫ್ ಎಂಬಾತನು ೧೩೮೦ರಲ್ಲಿ ಮೊದಲ ಬಾರಿಗೆ ಬೈಬಲ್ಲಿನ ಇಂಗ್ಲೀಷ್ ಭಾಷಾಂತರವನ್ನು ಮಾಡಿದ್ದ ಎಂದು ಹೇಳಬಹುದು. ಇದಕ್ಕಿಂತ ಹಿಂದೆಯೂ ಭಾಷಾಂತರಗಳಾಗಿರಬಹುದಾದರೂ ಐತಿಹಾಸಿಕ ಸಾಕ್ಷ್ಯವಾಗಿ ಇದೊಂದು ದೊರಕುತ್ತದೆ. ಇದು ಪೋಪನ ಕೋಪಕ್ಕೆ ಗುರಿಯಾಗಿ, ವಿಕ್ಲಿಫ್ ತೀರಿಕೊಂಡಾಗ ಆತನ ಎಲುಬುಗಳನ್ನು ಪುಡಿ ಮಾಡಿಸಿ ಪೋಪ್ ನದಿಯಲ್ಲಿ ಹಾಕಿಸಿದ್ದ ಎಂದು ಕಥೆ.

ವಿಕ್ಲಿಫ್ ನಂತರ ಆತನ ಅನುಯಾಯಿಯಾದ ಜಾನ್ ಹಸ್ ಎಂಬಾತನು ವಿಕ್ಲಿಫ್ ಯೋಚನೆಗಳನ್ನು ಇನ್ನಷ್ಟು ಪ್ರಚುರಪಡಿಸಿದನು. ಪ್ರತಿಯೋರ್ವನಿಗೂ ಆತನ ಮಾತೃಭಾಷೆಯಲ್ಲಿ ಬೈಬಲ್ಲನ್ನು ಓದಲು ಅವಕಾಶ ನೀಡಬೇಕು ಎಂಬುದು ಆತನ ಆಗ್ರಹವಾಗಿತ್ತು. ಲ್ಯಾಟಿನ್ನೇತರ ಭಾಷೆಯಲ್ಲಿ ಬೈಬಲ್ಲಿನ ಪ್ರತಿಯನ್ನು ಹೊಂದಿದ್ದರೆ ಮರಣದಂಡನೆ ವಿಧಿಸುವದಾಗಿ ಹೇಳಿದ್ದ ಚರ್ಚಿನ ನಿರ್ಧಾರವನ್ನು ವಿರೋಧಿಸಲು ಜನರಿಗೆ ಕರೆಯಿತ್ತಿದ್ದನು. ೧೪೧೫ರಲ್ಲಿ ಆತನನ್ನು ವಿಕ್ಲಿಫ್ ನ ಇಂಗ್ಲೀಷ್ ಬೈಬಲ್ಲಿನ ಪ್ರತಿಗಳೊಂದಿಗೆ ಜೀವಂತವಾಗಿ ಸುಡಲಾಯಿತು. ಆತನ ಕೊನೆಯ ಮಾತುಗಳು “ಯಾರ ಸುಧಾರಣೆಯ ಕರೆಯನ್ನು ತುಳಿಯಲಾಗದೋ ಅಂತ ಮನುಷ್ಯನೊಬ್ಬನನ್ನು ದೇವನು ಬೆಳೆಸುವನು” ಎಂದು ಪ್ರತೀತಿ.

೧೪೫೦ರಲ್ಲಿ ಪ್ರಿಂಟಿಂಗ್ ಪ್ರೆಸ್ ಕಂಡುಹಿಡಿದ ಜೊಹನ್ ಗುಂಟನ್ಬರ್ಗ್ ಲ್ಯಾಟಿನ್ನಿನಲ್ಲಿದ್ದ ಬೈಬಲ್ಲಿನ ಮೊದಲ ಪ್ರತಿಯನ್ನು ತಂದನು. ಇದು ಪ್ರೊಟೆಸ್ಟಂಟ್ ಸುಧಾರಣೆಗೆ ಮೊದಲ ಅಡಿಗಲ್ಲಾಯಿತು. ನಂತರ ಎರಾಸ್ಮಸ್ ಅದರಲ್ಲಿನ ತಪ್ಪುಗಳನ್ನು ಸರಿಪಡಿಸಿ ಇನ್ನೊಂದು ಮುದ್ರಿತ ಪ್ರತಿಯೊಂದನ್ನು ತಂದನು. ೧೪೯೦ರಲ್ಲಿ ಥೊಮಸ್ ಲಿನೇಕರ್ ಬೈಬಲ್ಲಿನ ಭಾಷಾಂತರದ ಪರವಾಗಿ ವಾದಿಸಿದನು. ೧೪೯೬ರಲ್ಲಿ ಜಾನ್ ಕೋಲೆಟ್ ಎಂಬ ಇನ್ನೊಬ್ಬ ಆಕ್ಸಫರ್ಡ್ ಪ್ರೊಫೆಸರ್ ಹೊಸ ಒಡಂಬಡಿಕೆಯನ್ನು ಇಂಗ್ಲೀಷಿನಲ್ಲಿ ಭಾಷಾಂತರಿಸಲು ಯತ್ನಿಸಲು ಚರ್ಚು ಅದನ್ನು ವಿರೋಧಿಸಿತು. ಅಷ್ಟರೊಳಗಾಗಲೇ ವಿಲಿಯಮ್ ಟಿಂಡೇಲ್ ಎಂಬ ಸುಧಾರಣಾ ಚಳುವಳಿಗಾರರ ಮುಖಂಡ ಮೊದಲ ಬಾರಿಗೆ ಹೊಸ ಒಡಂಬಡಿಕೆಯನ್ನು ಇಂಗ್ಲೀಷಿನಲ್ಲಿ ಮುದ್ರಿಸಿದನು. ಹೀಗಾಗಿ ಆತನನ್ನು ಇಂಗ್ಲೀಷ್ ಭಾಷೆಯ ಆರ್ಕಿಟೆಕ್ಟ್ ಎಂದೂ ಕರೆಯಲಾಗುತ್ತದೆ. ಈ ಎಲ್ಲ ಬೆಳವಣಿಗೆಗಳನ್ನು ಚರ್ಚ್ ವಿರೋಧಿಸುತ್ತಲೇ ಬಂದಿತು.

ಮತ್ತಷ್ಟು ಓದು »

22
ಜೂನ್

ನಾಡು-ನುಡಿ ಮರುಚಿಂತನೆ : ಅಕ್ಷರಕ್ಕೂ,ಶಿಕ್ಷಣಕ್ಕೂ,ವಿದ್ಯೆಗೂ,ಜ್ಞಾನಕ್ಕೂ ಏನು ಸಂಬಂಧ?

– ಪ್ರೊ.ರಾಜಾರಾಮ್ ಹೆಗಡೆ
ಪ್ರಾಧ್ಯಾಪಕರು, ಇತಿಹಾಸ ಮತ್ತು ಪ್ರಾಕ್ತನಶಾಸ್ತ್ರ ವಿಭಾಗ, ಕುವೆಂಪು ವಿ.ವಿ

ಜ್ಞಾನಸಾಧಾರಣವಾಗಿ ಪ್ರಾಚೀನ ಭಾರತೀಯ ಶಿಕ್ಷಣ ಪದ್ಧತಿಯ ಕುರಿತು ಒಂದು ಆರೋಪವನ್ನು ಪದೇ ಪದೇ ಮಾಡಲಾಗುತ್ತದೆ: ಅದೆಂದರೆ  ಬ್ರಾಹ್ಮಣರು ಶೂದ್ರರನ್ನು ಹಾಗೂ ಅಸ್ಪೃಶ್ಯರನ್ನು ಅಕ್ಷರ ಜ್ಞಾನದಿಂದ ವಂಚಿಸಿದ್ದಾರೆ. ಆಕಾರಣದಿಂದಾಗಿ ಅವರಿಗೆ ಜ್ಞಾನವನ್ನೂ, ವಿದ್ಯೆಯನ್ನೂ ನಿರಾಕರಿಸಿದ್ದರು ಅಂತ. ನಮ್ಮ ಜಾತಿ ವ್ಯವಸ್ಥೆಯಲ್ಲಿ ಶೋಷಣೆಯ ಒಂದು ಲಕ್ಷಣ ಎಂಬಂತೆ ಕೆಲವು ಹಿತಾಸಕ್ತಿ ಪೀಡಿತ ಗುಂಪುಗಳು ಈ ಸಂಗತಿಯನ್ನು ತಪ್ಪದೇ ಹೇಳುತ್ತಿರುತ್ತವೆ.

ಹೀಗೆ ಹೇಳುವವರು ಇಂದಿನ ಶಿಕ್ಷಣ ವ್ಯವಸ್ಥೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡಿರುತ್ತಾರೆ. ಆಧುನಿಕ ಶಿಕ್ಷಣವು ಅಕ್ಷರಾಭ್ಯಾಸಕ್ಕೂ ಶಿಕ್ಷಣಕ್ಕೂ ಒಂದು ಅವಿನಾಭಾವಿಯಾದ ಸಂಬಂಧ ಕಲ್ಪಿಸುತ್ತದೆ. ಆ ಕಾರಣದಿಂದಲೇ ಸಂಪೂರ್ಣ ಸಾಕ್ಷರತೆಯ ಕಾರ್ಯಕ್ರಮವನ್ನು ನಮ್ಮ ಸರ್ಕಾರವು ಹಮ್ಮಿಕೊಂಡಿದೆ ಹಾಗೂ ವಿಶ್ವಸಂಸ್ಥೆ ಕೂಡಾ ಅಕ್ಷರವನ್ನು ಅಭಿವೃದ್ಧಿಯ ಮಾನದಂಡವನ್ನಾಗಿ ಸ್ವೀಕರಿಸಿದೆ. ವಯಸ್ಕರಿಗೆ ಕೂಡಾ ಅವರು ಸಾಯುವುದರ ಒಳಗೆ ಒಮ್ಮೆಯಾದರೂ ಅಕ್ಷರಾಭ್ಯಾಸವನ್ನು ಮಾಡಿಸುವುದು ನಿರ್ಣಾಯಕ ಎಂದು ಭಾವಿಸಲಾಗಿದೆ. ಈ ರೀತಿಯ ಶಿಕ್ಷಣ ಪದ್ಧತಿಯಲ್ಲಿ ಜ್ಞಾನವನ್ನು ಪುಸ್ತಕವನ್ನು ಓದುವ ಮೂಲಕವೇ ಪಡೆಯುವುದು ಅತ್ಯವಶ್ಯ. ಇದು ಪಾಶ್ಚಾತ್ಯ ಸಂಸ್ಕೃತಿಯ ಕ್ರಮ. ಅಲ್ಲಿ ಸತ್ಯದೇವನ ವಾಣಿಯು ಅಂತಿಮವಾದ ಸತ್ಯವಾಗಿದ್ದು ಅದು ಬರೆಹದ ಮೂಲಕವೇ ಲಭ್ಯವಿರುವುದರಿಂದ ಬರೆಹವನ್ನು ಕಲಿಯುವುದು ನಿರ್ಣಾಯಕ.

ಮತ್ತಷ್ಟು ಓದು »

5
ಜನ

ಪುಸ್ತಕ ಪರಿಚಯ : ಶಿಲಾಕುಲ ವಲಸೆ

– ವಿದ್ಯಾ ಕುಲಕರ್ಣಿ

ಶಿಲಾಕುಲ ವಲಸೆಕಾದಂಬರಿ : – ಶಿಲಾಕುಲ ವಲಸೆ

ಲೇಖಕರು :- ಕೆ. ಎನ್ ಗಣೇಶಯ್ಯ

ಸಾರಾಂಶ :- ಆರ್ಯರು ಪಶ್ಚಿಮದಿಂದ ಭಾರತಕ್ಕೆವಲಸಿಗರಾಗಿ ಬರಲಿಲ್ಲ.ಪಶ್ಚಿಮಕ್ಕೆ ವಲಸೆ ಹೋದರು.

ನಾನು ಕಾದಂಬರಿಗಳನ್ನು ಓದಲು ಅಥವಾ ಓದುವ ಹುಚ್ಚು ರೂಢಿಸಿಕೊಂಡಿದ್ದು ಶ್ರೀ ತರಾಸು ಅವರ ಸಿಡಿಲ ಮೊಗ್ಗು ಕಾದಂಬರಿಯಿಂದ ಅಂತ ಹೇಳಬಹುದು.  ಆ ಕಾದಂಬರಿಯನ್ನು ನಮ್ಮಣ್ಣನ ತರಗತಿಗೆ ಪಠ್ಯ ಪುಸ್ತಕವಾಗಿ ಹಚ್ಚಿದ್ದರು. ಅವನು ನನಗೆ ಅದನ್ನು ಓದಲು ತಿಳಿಸಿದ್ದಲ್ಲದೇ ಅದರಲ್ಲಿನ ಕೆಲವಾರು ಅಂಶಗಳ ಕುರಿತು ಚರ್ಚಿಸಿ, ಅದನ್ನು ವಿವರಿಸಿ ಹೇಳಿದ್ದಲ್ಲದೇ ನಾನು ಸರಿಯಾಗಿ ತಿಳಿದಿರುವೆನೋ ಇಲ್ಲವೋ ಎಂದು ಪರೀಕ್ಷೆ ಸಹ ಮಾಡಿದ್ದ. ಹೀಗಾಗಿ ನಾನು ಸುಮಾರು 8 ನೇ ತರಗತಿಯಲ್ಲಿದ್ದಾಗಲೇ ಅದನ್ನು ಚನ್ನಾಗಿ ಓದಿ ಹಾಗೇನೇ ಓದುವ ಗೀಳು ಬೆಳೆಸಿಕೊಂಡಿದ್ದೆ. ಶ್ರೀಮತಿ ಗೀತಾ ನಾಗಭೂಷಣ ಅವರ ಕಥೆ ಹೂವ ತಂದವರು ಸಹ ನಮಗೆ ಪಠ್ಯಪುಸ್ತಕದಲ್ಲಿ ಪಾಠವಾಗಿತ್ತು. ಅದನ್ನು ನನ್ನಣ್ಣ ನನಗೆ ಚನ್ನಾಗಿ ವಿವರಿಸಿ ಓದಿಸಿ ಹೇಳಿದ್ದರಿಂದ ಓದುವ ಗೀಳನ್ನು ಬೆಳೆಸಿದ ಅವನಿಗೆ ನನ್ನ ಕೃತಜ್ಞತೆ ಮೊದಲು ಸಲ್ಲುತ್ತವೆ.

ನಂತರದ ದಿನಗಳಲ್ಲಿ ನಾನು ತ್ರಿವೇಣಿ , ಉಷಾ ನವರತ್ನರಾಂ , ರೇಖಾ ಕಾಖಂಡಕಿ ಎಚ್ . ಜಿ ರಾಧಾದೇವಿ. ಎಂ. ಕೆ ಇಂದಿರಾರ ಹಾಗೂ ಇನ್ನಿತರರ ಕಾದಂಬರಿಗಳನ್ನು ಹಾಗೆ ಕಾರಂತರ ಭೈರಪ್ಪರ ಕಾದಂಬರಿಗಳನ್ನು ಓದಿದೆ. ಆದರೆ ಈ ಎಲ್ಲಾ ಕಾದಂಬರಿಗಳಿಗಿಂತ ನನಗೆ ಅಚ್ಚು ಮೆಚ್ಚಾದದ್ದು ಶ್ರೀ ಎಂಡಮೂರಿ ಅವರ ಕಾದಂಬರಿಗಳು . ಅವುಗಳನ್ನು ಓದಲು ಆರಂಭಿಸಿದರೆ ಪುಸ್ತಕ ಕೆಳಗಿಡಲೇ ಆಗುವದಿಲ್ಲ. ಅಷ್ಟೊಂದು ಥ್ರಿಲ್ಲಿಂಗ್ ಇರುತ್ತವೆ. ಇಷ್ಟೊಂದು ಸುಂದರವಾಗಿ ಪುಸ್ತಕ ಕೆಳಗಿಡಲೇ ಆಗದಂತೆ ಕಾದಂಬರಿ ಬರೆಯುವವರು ಕನ್ನಡದಲ್ಲಿ ಇಲ್ಲವಲ್ಲಾ ಎಂದು ನಾನು ಕೊರಗುತ್ತಿದ್ದೆ. ಆ ಕೊರಗನ್ನು ತುಂಬಿದವರೇ ಶ್ರೀ ಕೆ. ಎನ್ ಗಣೇಶಯ್ಯನವರು.

ಶ್ರೀ ಗಣೇಶಯ್ಯನವರ ಕಾದಂಬರಿಗಳು ಯಾಕೆ ಇಷ್ಟವಾಗುತ್ತವೆಂದರೆ ಒಂದನೆಯದು ಬರವಣಿಗೆಯಲ್ಲಿನ ಥ್ರಿಲ್ಲಿಂಗ್. ಎರಡನೆಯದು ಆಧಾರ ಸಮೇತ ಇತಿಹಾಸದ ನಿರೂಪಣೆ.ಇತಿಹಾಸ ಪುಸ್ತಕವನ್ನು ಓದುವದೆಂದರೆ ತುಂಬಾ ಬೇಜಾರು ಮಾಡಿಕೊಳ್ಳುವವರಿಗಾಗಿ ಸುಂದರ ಚೌಕಟ್ಟಿನಲ್ಲಿ ಕಥಾ ರೂಪದಲ್ಲಿ ಇತಿಹಾಸ ತಿಳಿಸುವದು ಗಣೇಶಯ್ಯ ಕಾದಂಬರಿಯ ಉದ್ದೇಶಗಳೆನ್ನಬಹುದು. ಕೇವಲ ರೋಚಕತೆಗಾಗಿ ಏನೋ ಒಂದನ್ನು ಹೇಳದೇ ಅವರು ಐತಿಹಾಸಿಕ ಸಾಕ್ಷಿ ಪುರಾವೆಗಳ ಸಮೇತ ತಿಳಿಸುತ್ತಾರೆ. ಅವುಗಳನ್ನು ಯಾರೂ ಪರೀಕ್ಷೆ ಮಾಡಬಹುದಾಗಿದೆ.

ಮತ್ತಷ್ಟು ಓದು »

14
ಆಕ್ಟೋ

ನಮ್ಮ ನಮ್ಮ ಭಾಷೆಯ ಸಮಸ್ಯೆ

– ಡಾ. ಶ್ರೀಪಾದ ಭಟ್

ಸಹಾಯಕ ಪ್ರಾಧ್ಯಾಪಕ, ತುಮಕೂರು ವಿಶ್ವವಿದ್ಯಾನಿಲಯ, ತುಮಕೂರು.

ಕನ್ನಡ ಕಲಿವಾರಗಳ ಹಿಂದೆ ಭಾರತದ ಖಗೋಳ ವಿಜ್ಞಾನಿಗಳ ತಂಡ ಮಂಗಳನ ಕಕ್ಷೆಗೆ ಉಪಗ್ರಹವನ್ನು ಯಶಸ್ವಿಯಾಗಿ ಸೇರಿಸಿತು. ಈ ಸಂದರ್ಭದಲ್ಲಿ ಬಹುತೇಕ ಕನ್ನಡ ವಾಹಿನಿಗಳು ಚರ್ಚೆಯನ್ನು ಏರ್ಪಡಿಸಿದ್ದವು. ಖಗೋಳ ಅನ್ನುತ್ತಿದ್ದಂತೆ ಈ ಕುರಿತ ಭಾರತದ ಪ್ರಾಚೀನ ಜ್ಞಾನವೇತ್ತರನ್ನು ಹಾಗೂ ಇಂದಿನ ವಿಜ್ಞಾನಿಗಳನ್ನು ಅಥವಾ ಅವರ ಪ್ರತಿನಿಧಿಗಳು ಅಂದುಕೊಂಡವರನ್ನು ಚರ್ಚೆಗೆ ಆಹ್ವಾನಿಸಬೇಕಲ್ಲ? ವಾಹಿನಿಗಳೂ ಹಾಗೆಯೇ ಮಾಡಿದವು. ಎರಡೂ ಕ್ಷೇತ್ರದವರನ್ನು ಜೊತೆಗೆ ನಡುವೆ ವಿಚಾರವಾದಿಗಳನ್ನು ಕರೆತಂದು ಕೂರಿಸಲಾಗಿದ್ದ ಚರ್ಚೆಯೊಂದನ್ನು ನೋಡುತ್ತಿದ್ದೆ. ಜ್ಯೋತಿಷಶಾಸ್ತ್ರದಲ್ಲಿ ಮಂಗಳನ ಬಗ್ಗೆ ಹೀಗೆ ಹೇಳಿದೆ, ಹಾಗೆ ಹೇಳಿದೆ. ಅದೇ ಸತ್ಯ; ಭಾರತೀಯ ಋಷಿ ಮುನಿಗಳು ಅಣುವಿನ ಬಗ್ಗೂ ಪ್ರಸ್ತಾಪಿಸಿದ್ದಾರೆ, ಅವರಿಗೆಲ್ಲ ತಿಳಿದಿತ್ತು ಎಂಬಂತೆ ಆ ಶಾಸ್ತ್ರದವರು ಅನ್ನುತ್ತಿದ್ದರೆ ಮತ್ತೊಂದೆಡೆ ಹಾಗಾದ್ರೆ ಅವರಿಗೆ ಅಣುಬಾಂಬ್ ತಿಳಿದಿತ್ತಾ? ಇದೆಲ್ಲ ನಾನ್ಸೆನ್ಸ್ ಎಂದು ಆಧುನಿಕ ಜ್ಞಾನ ಪ್ರತಿಪಾದಕರು ಬಿಸಿಬಿಸಿ ಚರ್ಚೆ ಮಾಡುತ್ತಿದ್ದರು.ತಮ್ಮ ತಮ್ಮ ಪ್ರತಿಪಾದನೆಗೆ ಎರಡೂ ಗುಂಪಿನವರೂ ಬಲವಾಗಿ ಅಂಟಿಕೊಂಡೇ ಇದ್ದರು. ಸಮಯವಾಯ್ತು, ಚರ್ಚೆ ನಿಂತಿತು. ಇಂಥ ಚರ್ಚೆಗೆ ಆದಿಯೂ ಇಲ್ಲ, ಅಂತ್ಯವೂ ಇಲ್ಲ.

ಕಾರಣ ಇಷ್ಟೇ. ಭಾರತದ ಪ್ರಾಚೀನ ಜ್ಞಾನ ಅಂದರೆ ಇಲ್ಲಿ ಚಂದ್ರ, ಸೂರ್ಯ, ಮಂಗಳ ಮೊದಲಾದವುಗಳ ಬಗ್ಗೆ ಜ್ಯೋತಿಷಶಾಸ್ತ್ರದಲ್ಲಿ ಹೇಳಿರುವ ಮಾತುಗಳು ಅಥವಾ ಪಾರಂಪರಿಕ ಜ್ಞಾನ. ಇವುಗಳ ವಿವರ ಭಾಸ್ಕರಾಚಾರ್ಯ, ವರಾಹಮಿಹಿರ ಮೊದಲಾದವರ ಕೃತಿಗಳಲ್ಲಿ ತಕ್ಕಮಟ್ಟಿಗೆ ದೊರೆಯುತ್ತದೆ. ಇದನ್ನು ಇಂದಿನ ಜ್ಯೋತಿಷ್ಕರು ತುಸು ತಿಳಿದಿರುತ್ತಾರೆ. ಇನ್ನು ಆಧುನಿಕ ವಿಜ್ಞಾನ ಕುರಿತು ಮಾತನಾಡುವವರು ವಿಜ್ಞಾನಿಗಳ ಸಾಧನೆಯನ್ನು ಪತ್ರಿಕೆಗಳಲ್ಲಿ ಓದಿದವರೋ ವಿಜ್ಞಾನದ ವಿವಿಧ ಕ್ಷೇತ್ರಗಳಲ್ಲಿ ಪಾಠ ಮಾಡುವವರೋ ಆಗಿದ್ದವರು. ಇವರಲ್ಲಿ ಎರಡೂ ವರ್ಗದವರೂ ಈ ಎರಡೂ ಕ್ಷೇತ್ರದ ಜ್ಞಾನ ಸೃಷ್ಟಿಗೆ ಕಾರಣರಾದವರಲ್ಲ, ಬದಲಿಗೆ ಯಾರೋ ಮಾಡಿದ ಪ್ರಯೋಗ-ಅದರ ಫಲಿತಗಳ ಅಂತಿಮ ಫಲಾನುಭವಿಗಳು.

ಮತ್ತಷ್ಟು ಓದು »