ಹಿಂದೂ ಸಂಸ್ಕೃತಿಯ ಕುರಿತು ವಿವೇಕಾನಂದರ ವಿಚಾರಗಳು
– ಪ್ರೊ.ರಾಜಾರಾಮ ಹೆಗಡೆ,
ಇತಿಹಾಸ ಮತ್ತು ಪ್ರಾಕ್ತನ ಶಾಸ್ತ್ರ ವಿಭಾಗ, ಕುವೆಂಪು ವಿಶ್ವವಿದ್ಯಾನಿಲಯ
೧.ವಿವೇಕಾನಂದರ ವಿಚಾರಗಳು: ಜಾತಿ ಪದ್ಧತಿ
೨.ವಿವೇಕಾನಂದರ ವಿಚಾರಗಳು: ಸಮಾಜ ಸುಧಾರಣೆ
೩.ವಿವೇಕಾನಂದರ ವಿಚಾರಗಳ ಐತಿಹಾಸಿಕ ಸಂದರ್ಭ
ವಿವೇಕಾನಂದರ ಗುರಿಯನ್ನು ಒಂದೇ ಸಾಲಿನಲ್ಲಿ ಹೇಳಬಹುದಾದರೆ ‘ಹಿಂದೂ ಸಂಸ್ಕೃತಿಯ ಉದಾತ್ತ ಧ್ಯೇಯಗಳ ಕುರಿತು ಜಾಗೃತಿ ಮೂಡಿಸುವುದು’ ಎನ್ನಬಹುದು. ಆದರೆ ಈ ಒಂದು ಸಾಲೇ ನಮಗಿಂದು ಅರ್ಥವಾಗದ ಸ್ಥಿತಿಗೆ ಬಂದಿದ್ದೇವೆ ಎಂಬುದೊಂದು ವಿಪರ್ಯಾಸ. ಅದಕ್ಕೆ ಕಾರಣ ಕಳೆದ ನೂರು ವರ್ಷಗಳಲ್ಲಿ ಭಾರತೀಯ ರಾಜಕೀಯದಲ್ಲಿ ನಡೆದಿರುವ ಬೆಳವಣಿಗೆಗಳು. ಹಿಂದೂ ಎಂಬ ಶಬ್ದವನ್ನು ಇಂದು ನಿರ್ವಿಕಾರವಾಗಿ, ವಸ್ತುನಿಷ್ಠವಾಗಿ ನೋಡುವುದೇ ನಮಗೆ ಸಾಧ್ಯವಿಲ್ಲದಂತಾಗಿದೆ. ಒಂದೆಡೆ ಹಿಂದುತ್ವದ ರಾಜಕೀಯದಿಂದಾಗಿ ಅದನ್ನು ಭಾವನಾತ್ಮಕವಾಗಿ ಕ್ರೈಸ್ತ, ಇಸ್ಲಾಂ ಎಂಬ ಪ್ರಭೇದಗಳಿಗೆ ಪ್ರತಿಯಾಗಿ ನಮ್ಮೊಂದು ಅಹಂ ಎಂಬಂತೇ ನೋಡುವುದನ್ನು ಕಲಿತಿದ್ದೇವೆ,ಅಥವಾ ಪ್ರಗತಿಪರ ಚಳವಳಿಗಳ ರಾಜಕೀಯದಿಂದಾಗಿ ಅದಕ್ಕೆ ಇಲ್ಲದ ಹಲ್ಲು ಉಗುರುಗಳನ್ನು ಆರೋಪಿಸಿ ಅದರ ಕುರಿತು ಸಂದೇಹ ಹಾಗೂ ಭಯಗಳ ಮೂಲಕ ಪ್ರತಿಕ್ರಿಯಿಸುವುದನ್ನು ಕಲಿತಿದ್ದೇವೆ. ಎರಡೂ ಪಕ್ಷಗಳೂ ಈ ಶಬ್ದಕ್ಕೆ ನಿರ್ದಿಷ್ಟ ರಾಜಕೀಯ ಅರ್ಥಗಳನ್ನು ರೂಢಿಸಿಬಿಟ್ಟಿವೆ. ವಿವೇಕಾನಂದರ ಕುರಿತು ನಮ್ಮ ತಲೆಮಾರಿನವರ ಪ್ರತಿಕ್ರಿಯೆಗಳು ಈ ಅರ್ಥಗಳಿಂದ ಪ್ರಭಾವಿತವಾಗಿವೆ ಎಂಬುದು ಸ್ಪಷ್ಟ.
ವಿವೇಕಾನಂದರ ವಿಚಾರಗಳ ಐತಿಹಾಸಿಕ ಸಂದರ್ಭ
– ಪ್ರೊ.ರಾಜಾರಾಮ ಹೆಗಡೆ
ಇತಿಹಾಸ ಮತ್ತು ಪ್ರಾಕ್ತನ ಶಾಸ್ತ್ರ ವಿಭಾಗ, ಕುವೆಂಪು ವಿಶ್ವವಿದ್ಯಾನಿಲಯ
೧.ವಿವೇಕಾನಂದರ ವಿಚಾರಗಳು: ಜಾತಿ ಪದ್ಧತಿ
೨.ವಿವೇಕಾನಂದರ ವಿಚಾರಗಳು: ಸಮಾಜ ಸುಧಾರಣೆ
ಕಳೆದೆರಡು ಅಂಕಣಗಳಲ್ಲಿ ವಿವೇಕಾನಂದರು ಸಮಾಜ ಸುಧಾರಣೆಯ ಕುರಿತು ಹಾಗೂ ಜಾತಿಯ ಕುರಿತು ಏನು ಹೇಳುತ್ತಾರೆ ಎಂಬುದನ್ನು ನೋಡಿದೆವು. ಪ್ರಗತಿಪರರು ಜಾತಿ ಪದ್ಧತಿಯ ಹಾಗೂ ಬ್ರಾಹ್ಮಣರ ಕುರಿತ ಅವರ ಟೀಕೆಗಳು, ಕ್ರೈಸ್ತ, ಇಸ್ಲಾಂ ಮತಗಳ ಕುರಿತು ಹೇಳಿದ ಸಕಾರಾತ್ಮಕ ಮಾತುಗಳನ್ನಷ್ಟೇ ಎತ್ತಿ ಹೇಳಿದ್ದಾರೆ. ಮತ್ತೊಂದು ಥರದ ಹೇಳಿಕೆಗಳನ್ನು ನಾನು ಪ್ರಸ್ತುತ ಪಡಿಸಿದ್ದೇನೆ. ಅಲ್ಲಿ ಅವರು ಸಮಾಜ ಸುಧಾರಕರನ್ನು ಟೀಕಿಸುತ್ತಾರೆ ಹಾಗೂ ಜಾತಿ, ಬ್ರಾಹ್ಮಣ ಇತ್ಯಾದಿಗಳ ಕುರಿತು ತುಂಬಾ ಹೆಮ್ಮೆಯಿಂದ ಮಾತನಾಡುತ್ತಾರೆ. ಈ ಎರಡೂ ರೀತಿಯ ಹೇಳಿಕೆಗಳನ್ನು ಯಾವ ರೀತಿ ಜೋಡಿಸಿಕೊಂಡರೆ ವಿವೇಕಾನಂದರು ಒಟ್ಟಾರೆಯಾಗಿ ಏನು ಹೇಳುತ್ತಿದ್ದಾರೆ ಎಂಬುದು ಅರ್ಥವಾಗಬಹುದು? ಅದಕ್ಕೆ ಅವರ ಕಾಲಕ್ಕೆ ಹೋಗಬೇಕು. ವಿವೇಕಾನಂದರು ತಮ್ಮ ಕಾಲದ ಯಾವ ಸವಾಲುಗಳಿಗೆ ಉತ್ತರಿಸುತ್ತಿದ್ದರು?
ವಿವೇಕಾನಂದರು ರಾಮಕೃಷ್ಣರ ಶಿಷ್ಯರಾಗುವ ವೇಳೆಗಾಗಲೇ ಬಂಗಾಲದಲ್ಲಿ ಆಧುನಿಕ ವಿಚಾರಧಾರೆಯು ವಿದ್ಯಾವಂತರಲ್ಲಿ ತನ್ನ ಪ್ರಭಾವವನ್ನು ಸಾಕಷ್ಟು ಬೀರಿತ್ತು. ಪಾಶ್ಚಾತ್ಯ ಶಿಕ್ಷಣವೆಂದರೆ ಈ ಪ್ರಪಂಚದ ಕುರಿತು ವೈಜ್ಞಾನಿಕ ಚಿತ್ರಣಗಳನ್ನು ತಿಳಿದುಕೊಳ್ಳುವುದು.ಈ ಚಿತ್ರಣಗಳನ್ನಾಧರಿಸಿ ಭಾರತದಲ್ಲಿ ಸಮಾಜ ಸುಧಾರಣೆಗಳು ಮೊದಲುಗೊಂಡವು. ಭಾರತೀಯ ಸಮಾಜದಲ್ಲಿ ಉಳಿದೆಲ್ಲ ಸಮಾಜಗಳಲ್ಲಿ ಇರುವಂತೆ ದೌರ್ಜನ್ಯಗಳು, ಕ್ರೂರ ಆಚರಣೆಗಳು ಎಲ್ಲ ಇದ್ದವು. ಆದರೆ ಬ್ರಿಟಿಷರು ಭಾರತದಲ್ಲಿ ಇರುವ ಕ್ರೂರ ಆಚರಣೆಗಳೆಲ್ಲವೂ ಹಿಂದೂಯಿಸಂ ಎಂಬ ಭ್ರಷ್ಟ ರಿಲಿಜನ್ನಿನ ಲಕ್ಷಣಗಳು, ಇವನ್ನೆಲ್ಲ ಬ್ರಾಹ್ಮಣರು ಬಹು ಹಿಂದೆಯೇ ಸ್ವಲಾಭಕ್ಕಾಗಿ ಹುಟ್ಟುಹಾಕಿದ್ದಾರೆ.ಈ ಆಚರಣೆಗಳೆಲ್ಲವೂ ಸ್ವಾರ್ಥದ ಮೌಢ್ಯದ ಅನೈತಿಕ ತಳಹದಿಯ ಮೇಲೆ ನಿಂತಿವೆ, ಇತ್ಯಾದಿಯಾಗಿ ಅದಕ್ಕೊಂದು ಕಾರಣವನ್ನು ನೀಡಿದರು.ಹಾಗಾಗಿ ಇಂಥ ಕ್ರೂರ ಆಚರಣೆಗಳನ್ನು ನಿಲ್ಲಿಸಬೇಕಾದರೆ ಈ ಸಮಾಜದ ತಳಹದಿಯನ್ನೇ ನಾಶಗೊಳಿಸಬೇಕು ಎಂಬ ಅಭಿಪ್ರಾಯವನ್ನು ವಿದ್ಯಾವಂತರಲ್ಲಿ ಹುಟ್ಟುಹಾಕಿದರು.ಅಂದರೆ ಭಾರತೀಯರ ರಿಲಿಜನ್ನೇ ಭ್ರಷ್ಟವಾಗಿದೆ, ಅಮಾನವೀಯವಾಗಿದೆ ಎಂಬುದು ಈ ವಿದ್ಯಾವಂತರ ಸಾಮಾನ್ಯ ಜ್ಞಾನವಾಯಿತು.
ವಿವೇಕಾನಂದರ ವಿಚಾರಗಳು: ಜಾತಿ ಪದ್ಧತಿ
– ಪ್ರೊ.ರಾಜಾರಾಮ ಹೆಗಡೆ
ಇತಿಹಾಸ ಮತ್ತು ಪ್ರಾಕ್ತನ ಶಾಸ್ತ್ರ ವಿಭಾಗ, ಕುವೆಂಪು ವಿಶ್ವವಿದ್ಯಾನಿಲಯ
ವಿವೇಕಾನಂದರ ವಿಚಾರಗಳು: ಸಮಾಜ ಸುಧಾರಣೆ
ಸಾಧಾರಣವಾಗಿ ಇಂದು ವಿವೇಕಾನಂದರ ಕುರಿತು ಒಂದು ಅಭಿಪ್ರಾಯ ಚಾಲ್ತಿಯಲ್ಲಿರುವುದು ಕಂಡುಬರುತ್ತದೆ. ಅದೆಂದರೆ ಅವರು ಜಾತಿ ಪದ್ಧತಿಯ ನಿರ್ಮೂಲನೆಗಾಗಿ ಹೋರಾಡಿದರು ಎಂಬುದು. ವಿವೇಕಾನಂದರ ಕುರಿತ ಈ ಚಿತ್ರವು ಇಂದು ಎಷ್ಟು ಗಟ್ಟಿಯಾಗಿದೆಯೆಂದರೆ ಅವರ ಅನುಯಾಯಿಗಳು ಕೂಡ ಅವರ ಕುರಿತು ಮಾತನಾಡುವಾಗ ಈ ಅಂಶವನ್ನೇ ಮೊದಲು ಒತ್ತಿ ಹೇಳುತ್ತಾರೆ. ವಿವೇಕಾನಂದರ ಪ್ರಸ್ತುತತೆಯನ್ನು ಮನದಟ್ಟು ಮಾಡಿ ಕೊಡುವಾಗ ಅವರು ಹಿಂದೂ ಧರ್ಮದ ಶ್ರೇಷ್ಟತೆಯನ್ನು ಎತ್ತಿಹಿಡಿದಿದ್ದರು ಎನ್ನುವುದು ಅನಿವಾರ್ಯ.
ಆ ಅಂಶವನ್ನಿಟ್ಟುಕೊಂಡೇ ಹಿಂದುತ್ವವಾದಿಗಳು ವಿವೇಕಾನಂದರನ್ನು ತಮ್ಮ ಮೂಲಪುರುಷರೆಂಬಂತೆ ಪರಿಗಣಿಸುತ್ತಾರೆ. ಹಾಗಾಗಿ ಬಹುಶಃ ಇಂದಿನ ಸೆಕ್ಯುಲರ್ ಚಿಂತಕರು ಅವರು ಜಾತಿಯ ಕುರಿತು ಮಾಡಿದ ಟೀಕೆಗಳನ್ನು ಪ್ರಧಾನವಾಗಿ ಇಟ್ಟು ಅವರ ವಿಚಾರಗಳನ್ನು ಪ್ರಸ್ತುತ ಪಡಿಸುವ ಉಪಾಯಗಳನ್ನು ಬೆಳೆಸಿರಲೂ ಬಹುದು. ಒಟ್ಟಿನಲ್ಲಿ ವಿವೇಕಾನಂದರ ಸೆಕ್ಯುಲರೀಕರಣದ ಒಂದು ಭಾಗವಾಗಿ ಈ ಅಭಿಪ್ರಾಯವು ಜನಪ್ರಿಯತೆಯನ್ನು ಪಡೆದಿದೆ.
ಕರ್ನಾಟಕದಲ್ಲಿ ಕುವೆಂಪು ಅವರು ವಿವೇಕಾನಂದರ ವಿಚಾರಗಳಿಂದ ಪ್ರಭಾವಿತರಾಗಿದ್ದರು ಹಾಗೂ ಅವರ ಮೂಲಕ ವಿವೇಕಾನಂದರ ವಿಚಾರಗಳು ಶೂದ್ರ ಚಳವಳಿಯ ಒಂದು ಭಾಗವಾಗಿ ಕನ್ನಡ ಚಿಂತಕರಿಗೆ ಪರಿಚಯಿಸಲ್ಪಟ್ಟಿವೆ. ಹಿಂದುತ್ವದವರು ಬ್ರಾಹ್ಮಣರ ವಕ್ತಾರರು ಎಂದು ಈ ಚಿಂತಕರು ಪರಿಗಣಿಸಿರುವುದರಿಂದ ವಿವೇಕಾನಂದರ ಮೂಲ ಆಶಯವನ್ನು ಇವರು ತಿರುಚಬಹುದೆಂಬ ಆತಂಕ ಕೂಡ ಈ ಚಿಂತಕರಲ್ಲಿದೆ. ಹಾಗಾಗಿ ಕುವೆಂಪು ಅವರು ಹಿಂದೂ ಪರಂಪರೆಯ ಶ್ರೇಷ್ಟತೆಯ ಕುರಿತು ವ್ಯಕ್ತಪಡಿಸುವ ಚಿಂತನೆಗಳನ್ನು ಅವರ ಆರಾಧಕರು ಈಗ ಮೂಲೆಗೆ ಹಾಕಿದಂತಿದೆ. ಅವರನ್ನೂ ಕೂಡ ಇಂದಿನ ಪ್ರಗತಿಪರರ ಆಕಾರಕ್ಕೆ ಒಗ್ಗಿಸುವ ಪ್ರಯತ್ನವೇ ಎದ್ದುಕಾಣುವಂತಿದೆ. ಒಟ್ಟಿನಲ್ಲಿ ವಿವೇಕಾನಂದರು ಜಾತಿವಿರೋಧಿ ಎಂಬ ಚಿತ್ರಣವನ್ನು ತಮಗೆ ಬೇಕಾದಂತೆ ಕಲ್ಪಿಸಿಕೊಳ್ಳಲಾಗುತ್ತಿದೆ. ವಿವೇಕಾನಂದರು ಜಾತಿಯ ಕುರಿತು ಏನು ಹೇಳುತ್ತಾರೆ?