“ವಿಶ್ವರೂಪ” ದರ್ಶನವಂತೂ ಆಗುತ್ತಿದೆ….!
– ಚಕ್ರವರ್ತಿ ಸೂಲಿಬೆಲೆ
ಸೆಕ್ಯುಲರ್ ಭಾರತ!
ಇನ್ನಾದರೂ ಹಾಗೆ ಕರೆಯೋಕೆ ನಾಚ್ಕೋಬೇಕು. ಇಸ್ಲಾಮ್ ಭಾರತ ಅಂತಾನೋ ಹಿಂದೂ ವಿರೋಧಿ ಭಾರತ ಅಂತಾನೋ ಕರೆದರೆ ಒಂದಷ್ಟು ಅತೃಪ್ತ ಆತ್ಮಗಳು ತೃಪ್ತಿಗೊಂಡಾವು. ಕಳೆದ ಎಂಟ್ಹತ್ತು ದಿನಗಳ ನಾಟಕ ನೋಡಿದರೆ ಹಾಗನ್ನಿಸುವುದು ಸಹಜವೇ.
‘ವಿಶ್ವರೂಪಮ್’ ಬಿಡುಗಡೆಗೆ ಕಿರಿಕ್ ಅಯ್ತು. ಹತ್ಯೆ ಮಾಡುವ ಮುನ್ನ ಭಯೋತ್ಪಾದಕ ಅಲ್ಲಾಹನಿಗೆ ವಂದಿಸಿ ಹೊರಡುವುದನ್ನು ತೋರಿಸಿರುವುದೇ ಗಲಾಟೆಗೆ ಕಾರಣವಂತೆ. ತಮಿಳುನಾಡು ಸರ್ಕಾರ ಸಿನೆಮಾ ತಡೆಹಿಡಿಯಿತು. ಬೇರೆಬೇರೆ ರಾಜ್ಯಗಳಲ್ಲಿ ಬಿಡುಗಡೆಗೆ ಮುನ್ನ ಮುಸಲ್ಮಾನ ಸಂಘಟನೆಗಳು ಪ್ರತಿಭಟನೆ ಮಾಡಿದವು. ದಾವಣಗೆರೆಯಲ್ಲಿ ಕೋಮು ಗಲಭೆಯೇ ನಡೆಯಿತು. ತಮಿಳುನಾಡಿನ ಸಿನೆಮಾ ಮಂದಿರದಲ್ಲಿ ಪೆಟ್ರೋಲ್ ಬಾಂಬ್ ಎಸೆಯಲಾಯ್ತು. ಅಚ್ಚರಿಯೇನು ಗೊತ್ತೆ? ಜನಾರ್ಧನ ಪೂಜಾರಿಯವರು ಬಾಯಿ ತೆರೆಯಲೇ ಇಲ್ಲ. ಬುದ್ಧಿ ಮಾರಿಕೊಂಡು ಬದುಕುವ ಕೆಲವರು ಬೆಂಗಳೂರಿನಲ್ಲಿ ತಣ್ಣಗೆ ಕುಳಿತುಬಿಟ್ಟಿದ್ದಾರೆ.
ಯಾಕೆ ಸ್ವಾಮಿ? ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಬೆಲೆಯೇ ಇಲ್ವೆ? ಈಗ ನಿಮಗೆ ಧರ್ಮದ ಹೆಸರಲ್ಲಿ ಕ್ರೌರ್ಯ ಕಾಣುವುದೆ ಇಲ್ಲವೆ?
ಪ್ರೇಮ, ಯುದ್ಧ ಮತ್ತು ಚುನಾವಣೆಯಲ್ಲಿ ಎಲ್ಲವೂ ನ್ಯಾಯವೇ
-ಚಾಮರಾಜ ಸವಡಿ
