ವಿಷಯದ ವಿವರಗಳಿಗೆ ದಾಟಿರಿ

Posts tagged ‘ಸಿ.ಎಸ್.ಎಲ್.ಸಿ’

3
ಮಾರ್ಚ್

ನಮ್ಮದು ಜ್ಞಾನ ಮಾರ್ಗ.ನಿಮ್ಮ ಮಾರ್ಗ ಯಾವುದು ಬುದ್ಧಿಜೀವಿಗಳೇ?

– ರಾಕೇಶ್ ಶೆಟ್ಟಿ

ಬುದ್ಧಿಜೀವಿ/ಸೆಕ್ಯುಲರ್/ಪ್ರಗತಿಪರರಿಗೆ ನಮಸ್ಕಾರ,

 

ವೈಚಾರಿಕ ಅಸ್ಪೃಷ್ಯತೆಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ನಡೆದಿರುವ,ನಡೆಯುತ್ತಿರುವ ಬೌದ್ಧಿಕ ಫ್ಯಾಸಿಸಂನ ವಿರುದ್ಧ ನೀವೆಲ್ಲರೂ ಜನವರಿ ೩೦ನೇ ತಾರೀಖು ಬೆಂಗಳೂರಿನಲ್ಲಿ ಮೆರವಣಿಗೆ ಮತ್ತು ಬಹಿರಂಗ ಸಭೆಯೊಂದನ್ನು ಮಾಡಿದ್ದೀರಿ.ಆ ಸಭೆಯ ಕರಪತ್ರದ ಕೆಲವು ಸಾಲುಗಳ ಮೂಲಕ ನನ್ನ ಈ ಬಹಿರಂಗ ಪತ್ರವನ್ನು ಪ್ರಾರಂಭಿಸುತಿದ್ದೇನೆ.

“ತಾತ್ವಿಕವಾದ ಭಿನ್ನಾಭಿಪ್ರಾಯಗಳ ಹೊರತಾಗಿಯೂ ಪರಸ್ಪರ ಗೌರವದಿಂದ ನಡೆದುಕೊಳ್ಳುವ ಸಂಸ್ಕೃತಿ ಕರ್ನಾಟಕದಲ್ಲಿತ್ತು. ಚಾರ್ವಾಕರಿಗೆ ಕೂಡ ನಮ್ಮ ಚರ್ಚೆಯ ಚಾವಡಿಯಲ್ಲಿ ಒಂದಿಷ್ಟು ಜಾಗವಿತ್ತು.ಆದರೆ ಈಗ ಇದ್ದಕ್ಕಿದ್ದ ಹಾಗೆ ಸಾಹಿತಿಗಳು, ಚಿಂತಕರು,ಬುದ್ಧಿಜೀವಿಗಳು,ಪತ್ರಕರ್ತರು ಹೋರಾಟಗಾರರಲ್ಲಿ ಒಬ್ಬೊಬ್ಬರನ್ನೇ ಆಯ್ದು ಹಂಗಿಸಿ,ನಿಂದಿಸಿ,ಅಪಹಾಸ್ಯ ಮಾಡಿ, ಸುಳ್ಳು ಆರೋಪಗಳ ಮೂಲಕ ಅವರ ಚಾರಿತ್ರ್ಯ ಹನನ ಮಾಡಲಾಗುತ್ತಿದೆ.ಇದು ಸತ್ಯ,ನ್ಯಾಯ ಮತ್ತು ನಿಜವಾದ ಧರ್ಮದ ಪರ ಮಾತನಾಡುವವರ ನೈತಿಕ ಸ್ಥೈರ್ಯ ಕುಸಿದುಹೋಗುವಂತೆ ಮಾಡುವ ಹುನ್ನಾರ.ಈ ಕುಟಿಲ ಉದ್ದೇಶಕ್ಕಾಗಿ ಮಾಧ್ಯಮಗಳನ್ನು ಕೂಡ ಬಳಸಿಕೊಳ್ಳಲಾಗುತ್ತಿದೆ. ಜನವಿರೋಧಿ ನಿಲುವು ಹೊಂದಿರುವ ಹಿಡಿಯಷ್ಟಿರುವ ವ್ಯಕ್ತಿಗಳು ತಮ್ಮ ಅಭಿಪ್ರಾಯವನ್ನೇ ಸಾರ್ವಜನಿಕ ಅಭಿಪ್ರಾಯವೆಂದು ಬಿಂಬಿಸಲು ಹೊರಟಿದ್ದಾರೆ.ಇದನ್ನೇ ಬಳಸಿಕೊಂಡು ಮಾಧ್ಯಮಗಳು ತಮ್ಮ ತೀರ್ಮಾನಗಳನ್ನು “ಜನಭಿಪ್ರಾಯ”ದ ಹೆಸರಲ್ಲಿ ಸಮರ್ಥಿಸಿಕೊಳ್ಳುವ ಪ್ರಯತ್ನ ಮಾಡುತ್ತಿವೆ…”

ಹೌದೇ? ನಿಜವಾಗಿಯೂ ಕರ್ನಾಟಕದಲ್ಲಿ ನಮ್ಮ ಸೆಕ್ಯುಲರ್ ‘ಆಪ್ತ ಮಿತ್ರ’ರು ಹೇಳುತ್ತಿರುವಂತೆ ಬೌದ್ಧಿಕವಾಗಿ ಉಸಿರು ಕಟ್ಟಿಸುವ ವಾತವರಣ ನಿರ್ಮಾಣವಾಗಿದೆಯೇ? ಅವರ ಆತಂಕ ಸಕಾರಣವೇ? ಹೌದು ಎನ್ನುವುದು ನನ್ನ ಅಭಿಪ್ರಾಯ.ರಾಜ್ಯದಲ್ಲಿ ನಡೆದ “ಬೌದ್ಧಿಕ ಫ್ಯಾಸಿಸಂ”ನ ಘಟನೆಗಳ ಉದಾಹರಣೆಗಳನ್ನು ನಿಮ್ಮ ಮುಂದೆ ಇಡುತ್ತಿದ್ದೇನೆ.

ಮೊದಲನೆಯ ಉದಾಹರಣೆ :ಬೆಲ್ಜಿಯಂನ ಗೆಂಟ್ ವಿವಿಯ ಸಹಭಾಗಿತ್ವದಲ್ಲಿ ಶಿವಮೊಗ್ಗದ ಕುವೆಂಪು ವಿವಿಯಲ್ಲಿ ಪ್ರೊ.ಎಸ್ ಎನ್ ಬಾಲಗಂಗಾಧರ ಅವರ ನೇತೃತ್ವದಲ್ಲಿ ಭಾರತೀಯ ಸಮಾಜ ಮತ್ತು ಸ್ಥಳಿಯ ಸಂಸ್ಕೃತಿಗಳ ಬಗ್ಗೆ ಅಧ್ಯಯನ ನಡೆಸುತ್ತಿದ್ದ “ಸ್ಥಳಿಯ ಸಂಸ್ಕೃತಿಗಳ ಅಧ್ಯಯನ ಕೇಂದ್ರ(CSLC)”ವನ್ನು ಮುಚ್ಚಿಸಲಾಯಿತು.ಕಾರಣ ಆ ಸಂಸ್ಥೆ ಪಟ್ಟಭದ್ರ ಹಿತಾಸಕ್ತಿಗಳಿಗೆ ಮಣಿಯದೇ ತನ್ನ ಸಂಶೋಧನೆಯ ವಿಷಯಗಳನ್ನು ಮಂಡಿಸಿದ್ದು. ಮತ್ತಷ್ಟು ಓದು »

3
ಫೆಬ್ರ

ಟಾರ್ಗೆಟ್ ನಿಲುಮೆ : ಪರದೆಯ ಹಿಂದಿನ ಕತೆ

– ರಾಕೇಶ್ ಶೆಟ್ಟಿ

freedomofspeechಸುವರ್ಣ ಸುದ್ದಿ ವಾಹಿನಿಯಲ್ಲಿ ನಡೆದ “ನಿಲುಮೆಯ ಮೇಲಿನ ದೌರ್ಜನ್ಯ” ಕುರಿತ ಚರ್ಚೆಯಲ್ಲಿ,ನಾನು ಕೊಂಚ ಆಕ್ರಮಣಕಾರಿಯಾಗಬೇಕಿತ್ತು ಎನ್ನುವುದು ನನ್ನ ಕೆಲ ಗೆಳೆಯರ ಅನಿಸಿಕೆಯಾಗಿತ್ತು.ಚರ್ಚೆಯನ್ನು ಮತ್ತೊಮ್ಮೆ ನಾನೇ ನೋಡಿದಾಗ ಕೆಲವೊಂದು ಕಡೆ ನಾನು ಆಕ್ರಮಣಕಾರಿಯಾಗಿದ್ದರೆ ಚೆನ್ನಾಗಿತ್ತು ಅಂತಲೇ ಅನಿಸಿತು.ಆದರೇನು ಮಾಡುವುದು,ಮಧ್ಯೆ ಬಾಯಿ ಹಾಕಿ ಮಾತನಾಡುವುದು ಮತ್ತು ಜೋರು ದನಿಯಲ್ಲಿ ಮಾತನಾಡುವುದೆಲ್ಲ “ಚರ್ಚೆ”ಯಲ್ಲ ಎನ್ನುವುದು ನಾನು ಬೆಳೆದು ಬಂದ ಹಾದಿ ಮತ್ತು ರೀತಿ ನನಗೆ ಕಲಿಸಿದೆ.ಹ್ಮ್ ಅದೆಲ್ಲ ಇರಲಿ.ಆವತ್ತು ಚರ್ಚೆಯ ಗದ್ದಲದಲ್ಲಿ ನಾನು ಹೇಳದೇ ಉಳಿದ ಬಹುಮುಖ್ಯ ವಿಷಯಗಳನ್ನು ದಾಖಲಿಸಬೇಕಿದೆ.ಆ ಕಾರಣಕ್ಕಾಗಿ ಈ ಲೇಖನ…

ಚರ್ಚೆಯ ನಡುವೆ,ದಿನೇಶ್  ಅಮೀನ್ ಮಟ್ಟು ಅವರು “ನಿಲುಮೆ ಗುಂಪನ್ನು ಮುಚ್ಚಬೇಕು” ಎಂದಿದ್ದನ್ನು ನೀವೆಲ್ಲರೂ ಕೇಳಿದ್ದೀರಿ.ಮಾತು ತೆಗೆದರೆ ಮುಚ್ಚಿಸಬೇಕು ಎನ್ನುವ ಈ ಪ್ರಗತಿಪರ ಚಿಂತನೆಯ ಹಿಂದಿನ ಕತೆಯೇನು? ಇವರಿಗೇಕೆ ನಿಲುಮೆಯನ್ನು ಮುಚ್ಚಿಸಲೇಬೇಕೆಂಬ ಹಟ?ಈ ಪ್ರಶ್ನೆಗಳಿಗೆ ಉತ್ತರ ಹುಡುಕಲು ನಾವು ೨೦೧೩ರ ಮಾರ್ಚ್ ನಲ್ಲಿ  ರಾಜ್ಯದ ಪ್ರತಿಷ್ಟಿತ ಪತ್ರಿಕೆಯೊಂದರಲ್ಲಿ ಶುರುವಾದ “ವಚನ ಸಾಹಿತ್ಯ ಮತ್ತು ಜಾತಿ ವ್ಯವಸ್ಥೆ” ಕುರಿತ ಚರ್ಚೆಯತ್ತ ನೋಡಬೇಕು.ಈ ಚರ್ಚೆ ಆರಂಭವಾಗಿದ್ದು  CSLC ಎಂಬ  ಸಮಾಜ ವಿಜ್ಞಾನ ಸಂಶೋಧನಾ ತಂಡದವರ “ವಚನ ಸಾಹಿತ್ಯವು ಜಾತಿವ್ಯವಸ್ಥೆಯ ವಿರುದ್ಧ ಮಾತನಾಡುತ್ತದೆಯೆ?” ಎಂಬ ಸಂಶೋಧನಾ ಪ್ರಬಂಧದೊಂದಿಗೆ.ಆ ಪತ್ರಿಕೆಯಲ್ಲಿ ಶುರುವಾದ ಚರ್ಚೆಯಲ್ಲಿ ಕೇವಲ ಒಂದು ಕಡೆಯವರ ವಾದಗಳಿಗೆ ಮಾತ್ರ ವೇದಿಕೆಯೊದಗಿಸಿ, CSLC ತಂಡದವರಿಗೆ ವಾದಕ್ಕೂ ಜಾಗ ಕೊಡದಿದ್ದಾಗ ಅವರಿಗೆ ಜೊತೆಯಾಗಿ ನಿಂತಿದ್ದು ನಿಲುಮೆ.ನಿಲುಮೆಯಲ್ಲಿ ಸಿ.ಎಸ್.ಎಲ್.ಸಿ  ತಂಡದವರ ಲೇಖನಗಳು ಪ್ರಕಟವಾಗಿ ಅದು ಫೇಸ್ಬುಕ್ಕಿನಲ್ಲೂ ವ್ಯಾಪಕ ಚರ್ಚೆಗೆ ಒಳಪಟ್ಟಿತು.ಕಡೆಗೆ ಒತ್ತಡಕ್ಕೆ ಬಿದ್ದವರು ಅನಿವಾರ್ಯವಾಗಿ ಸಿ.ಎಸ್.ಎಲ್.ಸಿಯವರ ಒಂದೆರಡು ಲೇಖನಗಳನ್ನು ಪ್ರಕಟಿಸಿ,ಆ ಚರ್ಚೆಗೆ ಅಂತ್ಯ ಹಾಡಿಸಿದರು.ಆದರೆ,ಅಷ್ಟಕ್ಕೆ ನಮ್ಮ ಪ್ರಗತಿಪರರ ಸಿಟ್ಟು ಕಮ್ಮಿಯಾದೀತೇ? ಅವರು ತಮ್ಮ ಅಧಿಕಾರದ ಜೊತೆಗಿನ ಸ್ನೇಹ(ಪುರೋಹಿತಶಾಹಿ!?) ವನ್ನು ಬಳಸಿಕೊಂಡು ಶಿವಮೊಗ್ಗದ ಕುವೆಂಪು ವಿವಿಯಲ್ಲಿ ಇದ್ದ CSLC ಸಂಶೋಧನಾ ಕೇಂದ್ರವನ್ನೇ ಮುಚ್ಚಿಸಿಬಿಟ್ಟರು! ಆಗಲಾದರೂ ನಾವು ಇವರಿಗೆ ಬೆದರಿಕೊಂಡು ಸುಮ್ಮನಾಗಬಾರದೇ? ಊಹೂಂ! ಸುಮ್ಮನಿರಲಿಲ್ಲ.ಈ ಫ್ಯಾಸಿಸ್ಟ್ ಧೋರಣೆಯ ಬಗ್ಗೆ ನಿಲುಮೆಯ ವೇದಿಕೆಯಲ್ಲಿ ಬರೆಯಲಾಯಿತು.ನಾನು ಈ ಬಗ್ಗೆ ನಿಲುಮೆಯಲ್ಲಿ,ಅಸೀಮಾ ಮಾಸಿಕದಲ್ಲಿ ಮತ್ತು ಕನ್ನಡ ಪ್ರಭ ಪತ್ರಿಕೆಯಲ್ಲಿ ಮಾನ್ಯ ಅನಂತ ಮೂರ್ತಿಯವರಿಗೆ ಬರೆದ ಬಹಿರಂಗ ಪತ್ರದಲ್ಲೂ ಪ್ರಗತಿಪರರ ಫ್ಯಾಸಿಸ್ಟ್ ಧೋರಣೆಯನ್ನು ಪ್ರಶ್ನಿಸಿದೆ.ನಿಲುಮೆಯ ಮೇಲೆ ಫ್ಯಾಸಿಸಂನ ಕರಾಳ ಛಾಯೆ ಆವರಿಸುತ್ತಲೇ ಹೋಯಿತು.

ಮತ್ತಷ್ಟು ಓದು »

3
ಫೆಬ್ರ

ದಿನೇಶ್ ಅಮಿನ್ ಮಟ್ಟು ಅವರಿಗೊಂದು ಬಹಿರಂಗ ಪತ್ರ

– ಡಾ.ಟಿ.ಎನ್ ವಾಸುದೇವ ಮೂರ್ತಿ

Amin Mattuನಿಂದಂತಿ ತುಣ್ಹೀಮಾಸೀನಙï ನಿಂದಂತಿ ಬಹುಭಾಣೀನಙï |

ಮಿತಭಾಣಿನಂ ಪಿ ನಿಂದಂತಿ ನತ್ಥಿ ಲೋಕೇ ಅನಿಂದಿತೋ ||

(ಧಮ್ಮಪದ, ಕೋಧವಗ್ಗ 227)

(ಲೋಕದ ಜನ ಸುಮ್ಮನಿರುವವರನ್ನೂ ನಿಂದಿಸುವರು, ಹೆಚ್ಚು ಮಾತನಾಡುವವರನ್ನೂ ನಿಂದಿಸುವರು, ಮಿತಭಾಷಿಗಳನ್ನೂ ನಿಂದಿಸುವರು ಲೋಕದ ಜನರಿಂದ ನಿಂದನೆಗೆ ಒಳಗಾಗದವರೇ ಇಲ್ಲ)

ಮುಖವಿಲ್ಲದವರ ನಿಂದನೆಯ ಮಾತುಗಳಿಂದ ವಿಚಲಿತರಾಗಿರುವ ದಿನೇಶ್ ಅಮಿನ್ ಮಟ್ಟು ಅವರು ‘ನಿಲುಮೆ’ ಜಾಲತಾಣದ ಮೇಲೆ ದೂರು ನೀಡಿರುವುದಲ್ಲದೆ ಅದನ್ನು ಮುಚ್ಚಿಸಲು ಮುಂದಾಗಿರುವುದು ದುರದೃಷ್ಟಕರ. ಅವರ ಈ ಅಸಹನೆ ‘ಸಂತೆಯೊಳಗೆ ಮನೆಯ ಮಾಡಿ ಶಬ್ದಕ್ಕೆ ನಾಚಿದರೆಂತಯ್ಯ’ ಎಂಬ ಅಕ್ಕನ ಮಾತುಗಳನ್ನು ನೆನಪಿಸುತ್ತದೆ.

ದಿನೇಶ್ ಅಮೀನ್ ಮಟ್ಟು “ಪತ್ರಿಕೋದ್ಯಮವು ಜಾಹಿರಾತಿನ ಹಂಗಿಗೊಳಗಾಗಿರುವುದರಿಂದ ಫೇಸ್‍ಬುಕ್‍ನಂತಹ ಸಾಮಾಜಿಕ ಜಾಲತಾಣಗಳು ಭರವಸೆಯ ಅಭಿವ್ಯಕ್ತಿ ಮಾಧ್ಯಮವಾಗಬಲ್ಲದು” ಎಂಬ ಆಶಾವಾದ ವ್ಯಕ್ತಪಡಿಸುತ್ತಾರೆ.

ಆದರೆ ಸಾಮಾಜಿಕ ಜಾಲತಾಣ ವೃತ್ತಿಪರ ಪತ್ರಿಕೋದ್ಯಮಕ್ಕೆ ಪರ್ಯಾಯವಾಗಬಲ್ಲದೇ ಎಂಬ ಪ್ರಶ್ನೆ ಇನ್ನೂ ಬಗೆಹರಿಯದೆ ಅದೊಂದು ಚರ್ಚೆಯ ವಿಷಯವಾಗಿದೆ. ಸದ್ಯಕ್ಕೆ ಮುಖವಿಲ್ಲದವರಿಂದ ತಮಗಾದ ತೇಜೋವಧೆಯನ್ನು ಮರೆಮಾಚಿ, ತಾವು ನೀಡಿರುವ ಪೊಲೀಸ್ ದೂರಿನ ಸಮರ್ಥನೆಗೆ ಒಂದು ಗುರಾಣಿಯಂತೆ ಅವರು ಸದರಿ ಅಭಿಪ್ರಾಯವನ್ನು ಪ್ರಚಾರ ಮಾಡಿಕೊಂಡಿರುವಂತೆ ಮೇಲ್ನೋಟಕ್ಕೆ ಭಾಸವಾಗುತ್ತದೆ. ಅಷ್ಟಕ್ಕೂ ಅದೇನೂ ತೇಜೋವಧೆಯಲ್ಲ, ವಿವೇಕಾನಂದರ ಕುರಿತು ಅವರು ಬರೆದದ್ದು ಅನ್ಯ ಲೇಖಕನೊಬ್ಬನ ಅನುವಾದಿತ ಸಾಲುಗಳೇ ವಿನಾ ಅದೇನೂ ಅವರ ವ್ಯಕ್ತಿಗತ ಅಭಿಪ್ರಾಯವಲ್ಲ ಎಂಬ ಅರಿವಿರದ ಓದುಗರು ಮಾಡುವ ಬುಡವಿರದ ಆರೋಪಗಳನ್ನು ತೇಜೋವಧೆ ಎಂದೇಕೆ ಭಾವಿಸಬೇಕು? “ಒಂದು ಜಾಲತಾಣವನ್ನು ವಾಮಮಾರ್ಗದಿಂದಲೇ ಹೊಸಕಬಲ್ಲೆನಾದರೂ ನೇರವಾಗಿಯೇ ಅದರ ವಿರುದ್ಧ ಧ್ವನಿಯೆತ್ತಿದ್ದೇನೆ” ಎಂಬರ್ಥದ ಅವರ ಮಾತುಗಳಲ್ಲಿ ಅವರ ಪ್ರಾಮಾಣಿಕತೆ ಮತ್ತು ಸಾಚಾತನ ವಾಚ್ಯವಾಗಿ ಪ್ರದರ್ಶಿತವಾಗುತ್ತಿದ್ದರೂ ಆ ಮಾತುಗಳ ಹಿಂದೆ ಕ್ರೌರ್ಯವೇ ಇಣುಕುತ್ತಿರುವಂತೆ ಕಾಣಿಸುತ್ತದೆ. ಪತ್ರಿಕೋದ್ಯಮದ ವಿದ್ಯಾರ್ಥಿಗಳಿಗೆ “ನಿನ್ನ ಅಭಿಪ್ರಾಯದೊಂದಿಗೆ ನನ್ನ ಸಹಮತವಿಲ್ಲದಿದ್ದರೂ ನಿನ್ನ ಅಭಿಪ್ರಾಯವನ್ನು ಹತ್ತಿಕ್ಕುವ ಶಕ್ತಿಗಳ ವಿರುದ್ಧ ಪ್ರಾಣವನ್ನೇ ಪಣವಿತ್ತು ಹೋರಾಡುತ್ತೇನೆ” ಎಂಬ ವೋಲ್ಟೈರ್‍ನ ಮಾತುಗಳನ್ನು ಕಲಿಸುವ ಹಿರಿಯರು ಇಂತಹ ಕಠಿಣಕ್ರಮಕ್ಕೆ ಮುಂದಾಗುವಂತೆ ಪ್ರೇರೇಪಿಸಿರುವ ಬೆಳವಣಿಗೆಗಳನ್ನು ಕಂಡು ದಿಗಿಲಾಗುತ್ತದೆ.

ಮತ್ತಷ್ಟು ಓದು »

23
ಮೇ

ಮೂರ್ತಿಗಳೇ.ಯಾರ ಸರ್ಕಾರ ಮತ್ತು ಯಾರು ಫ್ಯಾಸಿಸ್ಟ್ ಗಳು?

– ರಾಕೇಶ್ ಶೆಟ್ಟಿ

ಅನಂತಮೂರ್ತಿ - ಸಿದ್ದರಾಮಯ್ಯಇವತ್ತಿನ ಕನ್ನಡ ಪ್ರಭದಲ್ಲಿ ಪ್ರಕಟವಾದ ನನ್ನ ಲೇಖನದ ಪೂರ್ಣ ಭಾಗವಿದು.ಈ ಲೇಖನವನ್ನು ಮೂರ್ತಿಗಳಿಗೂ ಮೇಲ್ ಮಾಡಿದ್ದೇನೆ.
“ಮೋದಿಯನ್ನು ಫ್ಯಾಸಿಸ್ಟ್” ಅಂತ ಮಾತು ಮಾತಿಗೆ ಕರೆಯುತ್ತಿರುವ,ನಾಡಿನ ಸಾಕ್ಷಿ ಪ್ರಜ್ಞೆ ಎಂದು ತಮ್ಮ ಶಿಷ್ಯ ವೃಂದದಿಂದ ಕರೆಸಿಕೊಳ್ಳುವ ನಮ್ಮ ಅನಂತಮೂರ್ತಿಗಳು,ಇತರ ಪ್ರಗತಿಪ್ರರು ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಮಾತನಾಡುವ ಗೆಳೆಯರು ಉತ್ತರಿಸಬೇಕಾದ ಪ್ರಶ್ನೆಗಳು. ಉತ್ತರದ ನಿರೀಕ್ಷೆಯಿದೆ…

ಎಲ್ಲಾ ಸಮೀಕ್ಷೆಗಳನ್ನು ಹುಸಿ ಮಾಡಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಏಕಾಂಗಿಯಾಗಿ ಅಭೂತಪೂರ್ವ ಜಯ ದಾಖಲಿಸಿದೆ. ಮೋದಿಯವರ ಗೆಲುವಿನ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಮೋದಿ ಅಭಿಮಾನಿಗಳ ಖುಷಿಯೂ ಮುಗಿಲು ಮುಟ್ಟಿದೆ.ಈ ಖುಷಿಯ ನಡುವೆ ಮುಖ್ಯವಾಗಿ ಪ್ರಸ್ತಾಪವಾಗುತ್ತಿರುವುದು “ನರೇಂದ್ರ ಮೋದಿ ಪ್ರಧಾನಿಯಾದರೆ ತಾವು ಭಾರತದಲ್ಲಿ ಇರಲು ಇಚ್ಛೆ ಪಡುವುದಿಲ್ಲ” ಎಂದು ನೀವು ಕಳೆದ ವರ್ಷದ ಸೆಪ್ಟಂಬರ್ ತಿಂಗಳಿನಲ್ಲಿ ನೀಡಿದ್ದ ಹೇಳಿಕೆ.

ಸಾಹಿತಿಗಳಿಕೇ ರಾಜಕೀಯ ಉಸಾಬರಿ ಅನ್ನುವುದು ಕೆಲವರು ವಾದವಾದರೆ,ಅದಕ್ಕೆ ಪ್ರತಿಯಾಗಿ ಸಾಹಿತಿಗಳಾದವರಿಗೂ ವೈಯುಕ್ತಿಕ ನಿಲುವುಗಳಿದ್ದರೇನು ತಪ್ಪು ಅನ್ನುವ ಪ್ರತಿವಾದವೂ ಕೇಳಿಬರುತ್ತಿದೆ.ಒಂದು ಕ್ಷಣಕ್ಕೆ ಮೂರ್ತಿಗಳ ರಾಜಕೀಯ ನಿಲುವುಗಳನ್ನು ಬದಿಗಿಡೋಣ.ಬುದ್ದಿಜೀವಿಗಳಾದ ಮೂರ್ತಿಗಳಿಗೆ ಮತ್ತವರ ಸೆಕ್ಯುಲರ್ ಸಾಹಿತಿಗಳ ತಂಡಕ್ಕೆ,ನಾಡಿನ ಬೌದ್ಧಿಕ ವಲಯದ ವಿಷಯವೊಂದರ ಮೂಲಕ ಒಂದಿಷ್ಟು ಬಹಿರಂಗ ಪ್ರಶ್ನೆಗಳನ್ನು ಕೇಳಿ ಅವರಿಂದ ಉತ್ತರ ಬಯಸೋಣ.

ನಾಡಿನ ಸಾಕ್ಷಿ ಪ್ರಜ್ಞೆ ಎಂದು ತಮ್ಮ ಶಿಷ್ಯ ವೃಂದದಿಂದ ಕರೆಸಿಕೊಳ್ಳುವ ನಮ್ಮ ಅನಂತ ಮೂರ್ತಿಗಳು,ಇತ್ತೀಚಿನ ದಿನಗಳಲ್ಲಿ ಈ ನಾಡಿನ ತಲ್ಲಣಗಳೆಲ್ಲವಕ್ಕೂ ನಿಜವಾಗಿಯೂ ಸ್ಪಂದಿಸಿದ್ದಾರೆಯೇ? ಉತ್ತರ : ಬಹುಷಃ ಇಲ್ಲವೆನ್ನಬಹುದು.

ಮತ್ತಷ್ಟು ಓದು »

31
ಆಕ್ಟೋ

“ಓಲೈಕೆ ಮತ್ತು ತುಷ್ಟೀಕರಣ” ಜಾತ್ಯಾತೀತತೆಯ ಸಂಕೇತಗಳೇ?

ಮು ಅ ಶ್ರೀರಂಗ ಬೆಂಗಳೂರು

Mindsetಒಂದು ರಾಜಕೀಯ ಧೋರಣೆಗೆ ಕಂಕಣಬದ್ಧವಾದ “ಹೊಸತು”ಎಂಬ ಮಾಸಪತ್ರಿಕೆಯ ಜುಲೈ ೨೦೧೩ರ ಸಂಚಿಕೆಯಲ್ಲಿ “ಆಧುನಿಕೋತ್ತರವಾದವೂ ಸಿ. ಎಸ್. ಎಲ್. ಸಿ. ಚಿಂತನಾಕ್ರಮವೂ”ಎಂಬ ಲೇಖನವನ್ನು ಬೆಂಗಳೂರಿನ ಕೆ. ಪ್ರಕಾಶ್ ಎಂಬುವವರು ಬರೆದಿದ್ದಾರೆ. ೫ ಪುಟಗಳಷ್ಟು ವಿಸ್ತಾರವಾದ ಆ ಲೇಖನದ ೧೬ ಪ್ಯಾರಾಗಳಲ್ಲಿ ಸುಮಾರು ೧೫ ಜನ ಬುದ್ಧಿಜೀವಿಗಳ,ಚಿಂತಕರ,ಉದ್ದುದ್ದದ ವಾಕ್ಯಗಳನ್ನು(ಉದ್ಧರಣೆಗಳು)ಪ್ರಕಾಶ್ ಅವರು ತಮ್ಮ ಲೇಖನಕ್ಕೆ “ಬಲ”ಬರಲಿ ಎಂದು ಉಪಯೋಗಿಸಿಕೊಂಡಿದ್ದಾರೆ. ಆ ದೊಡ್ಡ ದೊಡ್ಡ ವಾಕ್ಯಗಳ ನಡುವೆ “ಫಿಲ್ಲರ್”ತರಹ ತಮ್ಮ ನಾಲ್ಕೈದು ಸಾಲುಗಳನ್ನು ಸೇರಿಸಿದ್ದಾರೆ. ಆ “ಫಿಲ್ಲರ್”ಗಳ ಮುಖ್ಯ ಉದ್ದೇಶ ಕುವೆಂಪು ವಿ. ವಿ.ಯಲ್ಲಿನ ಸಿ ಎಸ್ ಎಲ್ ಸಿ ಯನ್ನು ಖಂಡಿಸುವುದಷ್ಟೇ ಆಗಿದೆ.

“ಮಡೆ ಸ್ನಾನ”ದಿಂದ ಪ್ರಾರಂಭವಾಗುವ ಈ ಲೇಖನ ಕೊನೆಗೆ ಬಂದು ನಿಲ್ಲುವುದು  “ವಚನಗಳು vs ಜಾತಿ ವ್ಯವಸ್ಥೆ”ಬಗ್ಗೆ  “ಪ್ರಜಾವಾಣಿ”ಪತ್ರಿಕೆಯಲ್ಲಿ ಸುಮಾರು ಮೂರು ತಿಂಗಳಿನಷ್ಟು ಕಾಲ ನಡೆದ ವಾದ-ಪ್ರತಿವಾದದ “ಅನುಭವ ಮಂಟಪದಲ್ಲಿ”. ಪ್ರಕಾಶ್ ಅವರು ತುಂಬಾ ಆರಾಧಿಸುವ ಪ್ರೊ। ಐಜಾಜ್ ಅಹ್ಮದ್ ಅವರೇ “ಆಧುನಿಕೋತ್ತರವಾದವು ಹಲವು ವಿಭಿನ್ನ ಎಳೆಗಳಿಂದ ರಚಿತವಾಗಿದ್ದು ಅದನ್ನು ಒಂದು ಸುಸಂಬದ್ಧ ಚಿಂತನೆಯಾಗಿ ಮಂಡಿಸುವುದು ಕಷ್ಟ ಎಂದು ಎಚ್ಚರಿಸುತ್ತಲೇ ಅದರ ಪ್ರಮುಖ ಲಕ್ಷಣಗಳನ್ನು ಗುರುತಿಸುತ್ತಾರಂತೆ”(ಹೊಸತು ಜುಲೈ ೨೦೧೩ ಪುಟ ೩೦). ಸಿ ಎಸ್ ಎಲ್ ಸಿ ಯದೂ ಆ ಹಲವು ಹಾದಿಗಳಲ್ಲಿ ಒಂದು ಎಳೆ ಎಂದು  ಪ್ರಕಾಶ್ ಅವರು ಒಪ್ಪಿಕೊಳ್ಳಲು ಸಿದ್ದರಿಲ್ಲ.

ಮತ್ತಷ್ಟು ಓದು »

13
ಆಕ್ಟೋ

ಬಸವ ಚಳುವಳಿಯನ್ನು ಕಾಡುತ್ತಿರುವ ಸಾಹಿತ್ಯ ಲೋಕದ ಬು(ಲ)ದ್ಧಿ ಜೀವಿಗಳು !

– ವಿಶ್ವಾರಾಧ್ಯ ಸತ್ಯಂಪೇಟೆ, ಶಹಾಪುರ

vachana-charche       ಇಷ್ಟು ದಿನಗಳವರೆಗೆ ಧಾರ್ಮಿಕ ಲೋಕದ ಗುಂಗಾಡುಗಳು ಬಸವಣ್ಣನರನ್ನು ಕಾಡುತ್ತಿದ್ದವು. ಅವರು ರಚಿಸಿದ ವಚನಗಳಿಗೆ ತದ್ವಿರುದ್ಧವಾಗಿ ತಾವು ಬದುಕಿದ್ದಲ್ಲದೆ ತಮ್ಮ ಭಕ್ತರ ಹಿಂಡನ್ನು ತಮ್ಮ ಹಿಂದೆ ಕಟ್ಟಿಕೊಂಡು ಬಸವಾದಿ ಶರಣರಿಗೆ ಸಾಕಷ್ಟು ಅಪಚಾರ ಮಾಡಿದ್ದರು. ಇದೀಗ ಸಾಹಿತ್ಯ ಲೋಕದ ಗುಂಗಾಡುಗಳೂ ತಾವೇನು ಕಡಿಮೆ ಇಲ್ಲ ಎಂದು ಬಸವಣ್ಣನವರನ್ನು ಹಾಗೂ ಅವರು ಬರೆದ ವಚನ ಸಾಹಿತ್ಯವನ್ನು ಪರಾಮರ್ಶಿಸುವ ಎಗ್ಗತನ ತೋರುತ್ತ, ಇಲ್ಲ ಸಲ್ಲದ ಕುಯುಕ್ತಿಗಳನ್ನು ನಡೆಸಿದ್ದಾರೆ.  ಹಲವಾರು ವರ್ಷಗಳಿಂದ ಬಸವಣ್ಣನವರ ಕುರಿತು ಪರಾಮರ್ಶಿಸುವ ಬುದ್ದಿವಂತಿಕೆಯನ್ನು ತೋರುತ್ತಿರುವ ಬುದ್ಧಿಜೀವಿ ವೇಷದಾರಿ ಬರಹಗಾರರು ಸಮಯ ಸಿಕ್ಕಾಗಲೆಲ್ಲ ಬಸವಣ್ಣನವರ ಮೇಲೆ ಕೆಸರನ್ನು ಎರಚುತ್ತ ತಾವು ದೊಡ್ಡವರಾಗಬೇಕೆಂಬ ಹುನ್ನಾರ ನಡೆಸಿದ್ದು ಎಲ್ಲರಿಗೂ ಗೊತ್ತಿರುವಸಂಗತಿಯೆ ಆಗಿದೆ.

ಹಿಂದೊಮ್ಮೆ ಗುಲ್ಬರ್ಗಾದ ಕಪಟರಾಳ ಕೃಷ್ಣರಾವ್ ಎಂಬ ಸಂಶೋಧಕನೋರ್ವ ಅನುಭವ ಮಂಟಪವೇ ಇಲ್ಲ ಎಂದು ಸಂಶೋಧಿಸಿ ಹೇಳಿದ್ದ. ಆಗ ಲಿಂಗಾಯತ ಧರ್ಮದವರೆಂದು ಸೋಗುಹಾಕಿರುವ ಸೋಗಲಾಡಿ ಗುರು- ಜಗದ್ಗುರುಗಳೆಲ್ಲ ತಮ್ಮ ತುಟಿಗಳನ್ನು ಹೊಲಿದುಕೊಂಡು ತೆಪ್ಪಗಿದ್ದರು. ಅರೆಬರೆ ಜ್ಞಾನದ ಲಿಂಗವಂತ ಸಮಾಜದ ಜನಗಳು ‘ನಮಗೂ ಬಸವಣ್ಣನವರಿಗೂ ಯಾವ ಬಾದರಾಯಣ ಸಂಬಂಧ ?’ ಎಂದುಕೊಂಡು ಕಪಟರಾಳರ ಕಪಟತನವನ್ನು ಪ್ರಶ್ನಿಸಲು ಹೋಗಲಿಲ್ಲ. ಈಗೀಗ ಬುದ್ದಿಜೀವಿಗಳೆಂದು ತಮ್ಮಷ್ಟಕ್ಕೆ ತಾವೇ ಕರೆದುಕೊಂಡಿರುವ ಕೆಲವು  ಸೋಕಾಲ್ಡ ಜನಗಳು ಬಸವಣ್ಣನವರ ಘನ ವ್ಯಕ್ತಿತ್ವವನ್ನು ಸಂಶೋಧಿಸುತ್ತಿದ್ದೇವೆ ಎಂಬ ನೆವದಲ್ಲಿ ಸಾಕಷ್ಟು ಘಾಸಿಯನ್ನುಂಟುಮಾಡಿದ್ದಾರೆ. ‘ಮಹಾಚೈತ್ರ’ ಕೃತಿಯ ಮೂಲಕ ಎಚ್.ಎಸ್. ಶಿವಪ್ರಕಾಶ, ‘ಆನುದೇವ ಹೊರಗಣದವನು’ ಪುಸ್ತಕದ ಮೂಲಕ ಬಂಜಗೇರಿ ಜಯಪ್ರಕಾಶ, ‘ಧರ್ಮಕಾರಣ’ದ ಮೂಲಕ ಪಿ.ವಿ.ನಾರಾಯಣ ಮುಂತಾದವರು ತಮ್ಮ ಮೂಗಿನ ನೇರಕ್ಕೆ ವಿಚಾರಗಳನ್ನು ಪ್ರಸ್ತಾಪಿಸುವ ಮೂಲಕ ಈಗಾಗಲೇ ಮೂತಿಗೆ ಇಕ್ಕಿಸಿಕೊಂಡಿದ್ದಾರೆ.

ಆದರೂ ಇತ್ತೀಚೆಗೆ ಬಾಲಗಂಗಾಧರ ಮತ್ತು ಡಂಕಿನ್ ಝಳಕಿ ಎಂಬ ಮಹಾಶಯರುಗಳು ವಚನಕಾರರು ಜಾತಿ ವಿರೋಧಿಗಳಾಗಿದ್ದರು ಎಂಬ ಅಭಿಪ್ರಾಯವು ಆಧುನಿಕ ಸಂದರ್ಭದಲ್ಲಿ ವೀರಶೈವರು ವಸಾಹತುಶಾಹಿ ಪಾಶ್ಚಾತ್ಯ ಚಿಂತಕರ ಪ್ರಭಾವದಿಂದ ಕಟ್ಟಿಕೊಂಡ ಪ್ರಮೇಯವಾಗಿದೆ ಎಂದು ವಾದಿಸುತ್ತಾರೆ. ಜೊತೆಗೆ ಜಾತಿ ವ್ಯವಸ್ಥೆಯ ವಿರುದ್ಧ ಹೋರಾಟ ಮಾಡುವುದು ವಚನಕಾರರ ಮೂಲಭೂತ ಗುರಿಯಾಗಿತ್ತು ಎನ್ನುವುದು ಅಸಂಬದ್ಧ ತರ್ಕವಾಗಿದೆ ಎಂದೂ ಜೊತೆಗೆ ಅದು ಬ್ರಾಹ್ಮಣ ವಿರೋಧಿ ಚಳುವಳಿಯ ಅಭಿವ್ಯಕ್ತಿಗಳೆಂದು ಹೇಳಲು ವಚನಗಳಲ್ಲಿಯೇ ಆಧಾರವಿಲ್ಲವೆಂದು ಅಭಿಪ್ರಾಯಪಟ್ಟಿದ್ದಾರೆ.   ಇದನ್ನು ಕೆಲವು ಜನ ಸೋಕಾಲ್ಡ  ಬು(ಲ)ದ್ದಿ ಜೀವಿಗಳು ವಚನಗಳ ಬಗ್ಗೆ ಹೊಸ ಚಿಂತನೆ ಮತ್ತು ಚರ್ಚೆಗಳಿಗೆ ಅನುವುಮಾಡಿಕೊಟ್ಟದ್ದಕ್ಕೆ ಧನ್ಯವಾದಗಳನ್ನೂ ಅರ್ಪಿಸಿದ್ದು ಅವರ ಎಬಡತನಕ್ಕೆ ಸಾಕ್ಷಿಯಾಗಿದೆಯೆಂದರೂ ತಪ್ಪಾಗುವುದಿಲ್ಲ.

ಮತ್ತಷ್ಟು ಓದು »

3
ಆಕ್ಟೋ

ಪ್ರೊ.ಬಾಲು ಅವರಿಗೆ ಚೆಕ್ ಗಣರಾಜ್ಯದ ಪಾರ್ದುಬಿತ್ಸೆ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್

Prof Balu2ಕರ್ನಾಟಕದಲ್ಲಿ ಈಗ ಗೌರವ ಡಾಕ್ಟರೇಟ್ ಪದವಿ ಎನ್ನುವುದು ಮಾರುಕಟ್ಟೆಯಲ್ಲಿ ದೊರೆಯುವ ವಸ್ತುವಾಗಿರುವುದು ನಮಗೆಲ್ಲ ಗೊತ್ತಿರುವ ವಿಚಾರವೇ. ಆದರೆ ಯುರೋಪಿನ ವಿಶ್ವವಿದ್ಯಾಲಯಗಳಲ್ಲಿ ಇದು ಇನ್ನೂ ತನ್ನ ಘನತೆ ಹಾಗೆ ಉಳಿಸಿ ಕೊಂಡಿದೆ. ಉದಾಹರಣೆಗೆ, ಪ್ರೊಫೆಸರ್ ಎಸ್. ಎನ್. ಬಾಲಗಂಗಾಧರ ರಾವ್ ಅವರಿಗೆ ೩೦/೯/೨೦೧೩ರಂದು  ಗೌರವ ಡಾಕ್ಟರೇಟ್ ಪದವಿ ಮತ್ತು ಬಂಗಾರದ ಪದಕದೊಂದಿಗೆ ಸನ್ಮಾನ ಮಾಡಿದ ಚೆಕ್ ಗಣರಾಜ್ಯದ ಪಾರ್ದುಬಿತ್ಸೆ ವಿಶ್ವವಿದ್ಯಾಲಯ ತನ್ನ ೧೫ ವರ್ಷಗಳ ಇತಿಹಾಸದಲ್ಲಿ ಕೊಟ್ಟಿದ್ದು ಕೇವಲ ಬೆರಳೆಣಿಕೆಯಷ್ಟು ಗೌರವ ಡಾಕ್ಟರೇಟ್ ಪದವಿಗಳನ್ನು ಮಾತ್ರ.

ಈ ಸಂದರ್ಭದಲ್ಲಿ ಎಸ್. ಎನ್. ಬಾಲಗಂಗಾಧರ ರಾವ್ ಅವರ ಸಾಧನೆಗಳ ಕುರಿತು ಅಲ್ಲಿನ ಸಮಾಜ ವಿಜ್ಞಾನಗಳ ಡೀನ್ ಮಾಡಿದ ಭಾಷಣದ ಕನ್ನಡ ಅವತರಣಿಕೆಯನ್ನು ನಾವಿಲ್ಲಿ ಕೊಡುತ್ತಿದ್ದೇವೆ.

–      ನಿಲುಮೆ

 

ಮತ್ತಷ್ಟು ಓದು »

4
ಸೆಪ್ಟೆಂ

“ಡುಂಢಿ” ಅನ್ನುವ ಕೃತಿ ಮತ್ತು “ಸೆಕ್ಯುಲರಿಸಂ” ಅನ್ನುವ ಅವಕಾಶವಾದ …!

– ರಾಕೇಶ್ ಶೆಟ್ಟಿ

Dundi mattu CSLC“ಡುಂಢಿ”ಯ ಬಗ್ಗೆ ಗೆಳೆಯರೊಬ್ಬರ ಜೊತೆ ಮಾತನಾಡುತಿದ್ದೆ. ಅವರು “Immortals of Meluha” ಪುಸ್ತಕವನ್ನು ಉಲ್ಲೇಖಿಸಿ, “ಆ ಪುಸ್ತಕದಲ್ಲಿ ಶಿವ, ಗಾಂಜಾ ಸೇದುತ್ತಾನೆ,ಟಿಬೆಟಿಯನ್ ಮೂಲದವನು ಅಂತ ಬರೆದಿತ್ತು ಅದು ಭರ್ಜರಿ ಸೇಲ್ ಆಗಿತ್ತು.ಈ ಡುಂಢಿ ಪ್ರಿಂಟ್ ಹಾಕಿಸಿದ್ದೇ ೧೫೦-೨೦೦ ಪ್ರತಿಯಂತಲ್ಲ” ಅಂದರು. ನಾನಂದೆ “ನಿಮಗೆ, ’ದೇವರ ಪಾಲಿಟಿಕ್ಸ್’ ಅರ್ಥವಾಗಿಲ್ಲ. ಆ ಪುಸ್ತಕದಲ್ಲಿ ಶಿವನನ್ನು, ’ಟಿಬೆಟಿಯನ್’ ಅನ್ನುವ ಬದಲೋ ’ಬ್ರಾಹ್ಮಣ/ಆರ್ಯ’ ಅಂತೇನಾದರೂ ಚಿತ್ರಿಸಿದ್ದರೇ ಈಗ ಡುಂಢಿಯ ಪರ ಮಾತನಾಡುತ್ತಿರುವ ಕರ್ನಾಟಕದ ಸೋ-ಕಾಲ್ಡ್ ಸೆಕ್ಯುಲರ್ ಗಳೆಲ್ಲ ಆ ಪುಸ್ತಕದ ವಿರುದ್ಧ ಮಾತನಾಡುತಿದ್ದರು”.

“ಒಬ್ಬ ನಕಲಿಯೋ ಅಥವಾ ಹಲವಾರು ಅಸಲಿಗಳ ಒಂದು ಸಂಕೇತವೊ ಆಗಿರುವ ಗಣಪತಿಯನ್ನು ಕುರಿತು ಹಲವು ಪುರಾಣಗಳು ಹಲವಾರು ರೀತಿಯ ಕಥೆಗಳನ್ನು ಹೇಳಿವೆ. ಈ ಢುಂಢೀಯೂ ಹಾಗೇ ಒಂದು ಮನೋರಂಜನೆ ಅಥವಾ ವಿಚಾರಕ್ಕೆ ಹಚ್ಚಬಹುದಾದ, ನಿಜವೆಂದು ನಂಬಲು ಇಷ್ಟ ಪಡುವ ಹೂರಣದ ಒಂದು ಕಲ್ಪನೆಯ ಪುರಾಣವೇ.” ಅನ್ನುವ ಮಾತುಗಳನ್ನಿಟ್ಟುಕೊಂಡ “ಡುಂಢಿ” ಅನ್ನುವ ಕೃತಿಯನ್ನು ಓದದೇ ಅದು ಕೃತಿಯೋ,ವಿಕೃತಿಯೋ ಅಂತ ನಿರ್ಧಾರ ಮಾಡುವುದು ಹೇಗೆ? ಅನ್ನುವ ಪ್ರಶ್ನೆಯನ್ನು ಮುಂದಿಡುತ್ತ ಮತ್ತು ಒಬ್ಬ ಲೇಖಕನನ್ನು ಬಂಧಿಸುವಂತ ಮಟ್ಟದವರೆಗೂ ಹೋಗಿದ್ದನ್ನು ವಿರೋಧಿಸುತ್ತಲೇ,ಈ ಮಾತು ಕೇಳುತಿದ್ದೇನೆ.ನಾನು ನನ್ನ ಗೆಳೆಯರಿಗೆ ಹೇಳಿದ ಮಾತಿನಲ್ಲಿ ಸತ್ಯವಿರಬಹುದು ಅಂತ ನಿಮಗೂ ಅನ್ನಿಸುವುದಿಲ್ಲವೇ? (“ಶಿವ”ನಮ್ಮವನು ಅವನನ್ನು ಹೈಜಾಕ್ ಮಾಡಿದ್ದಾರೆ ಅಂತ ಬರೆದವರನ್ನೂ ನೋಡಿದ್ದೇನೆ. ದೇವರನ್ನೂ ಈ ಮಂದಿ ತಮ್ಮ ಗುಂಪಿನೊಳಗೆ ಸೇರಿಸಿಕೊಳ್ಳುತ್ತಾರೆ ಶಿವಾ ಶಿವಾ…!)

ಮತ್ತಷ್ಟು ಓದು »

22
ಆಗಸ್ಟ್

ರಮಾನಂದ ಐನಕೈ ಅವರ “ನಮಗೆ ನಾವೇ ಪರಕೀಯರು” ಪುಸ್ತಕದ ಕುರಿತು

– ಮು . ಅ . ಶ್ರೀರಂಗ  ಯಲಹಂಕ  ಬೆಂಗಳೂರು

ನಮಗೆ ನಾವೇ ಪರಕೀಯರುರಮಾನಂದ ಐನಕೈ ಅವರ “ನಮಗೆ ನಾವೇ ಪರಕೀಯರು ” (ನ. ನಾ. ಪ) (ಪ್ರಕಾಶಕರು : ರಾಷ್ಟ್ರೋತ್ಹಾನ ಸಾಹಿತ್ಯ ಬೆಂಗಳೂರು -೧೯ )ಪುಸ್ತಕ ಓದುವ ಮುನ್ನ ನಾನು ಪ್ರೊ .ಎಸ್ .ಎನ್. ಬಾಲಗಂಗಾಧರ (ಬಾಲು)ಅವರ ವಿಚಾರಗಳನ್ನು ಆಧರಿಸಿದ ಕನ್ನಡಕ್ಕೆ ಅನುವಾದವಾಗಿರುವ ಮೂರುಪುಸ್ತಕಗಳನ್ನು ಓದಿದ್ದೆ (ಪೂರ್ವಾವಲೋಕನ ,ಭಾರತದಲ್ಲಿ ಜಾತಿ ವ್ಯವಸ್ಥೆ ಇದೆಯೆ? ಮತ್ತು ಹುಡುಕಾಟವನ್ನು ನಿಲ್ಲಿಸದಿರೊಣ). ಸ್ಮೃತಿ-ವಿಸ್ಮೃತಿ ;ಭಾರತೀಯ ಸಂಸ್ಕೃತಿ ತನ್ನ ವಿಚಾರ ಮತ್ತು ಗಾತ್ರದಲ್ಲಿ ತುಂಬಾ ಘನವಾಗಿದೆ ಹೀಗಾಗಿ ನಿಧಾನವಾಗಿ ಓದಿ ಅರ್ಥಮಾಡಿಕೊಳ್ಳಬೇಕಾಗಿದೆ. ಇದುವರೆಗೆ ಸುಮಾರು ಇನ್ನೂರು ಪುಟಗಳನ್ನು ಓದಿದ್ದೆನೆ. ರಮಾನಂದರ ಪ್ರಸ್ತುತ ಪುಸ್ತಕ ಮೇಲೆ ಹೇಳಿದ ಬಾಲು ಅವರ ನಾಲ್ಕು ಪುಸ್ತಕಗಳ ಅದರಲ್ಲೂ ಮುಖ್ಯವಾಗಿ ಸ್ಮೃತಿ-ವಿಸ್ಮೃತಿ ಪುಸ್ತಕದಲ್ಲಿರುವ ವಿಷಯಗಳನ್ನು ನೇರವಾಗಿ ಭಟ್ಟಿ ಇಳಿಸಿರುವುದರ ಪ್ರತಿಫಲ! ಇದಕ್ಕೆ ಪುರಾವೆಗಳು ರಮಾನಂದರ ನ.ನಾ.ಪ.. ಪುಸ್ತಕದಲ್ಲೇ ಇವೆ.

,         ೧. ಬಾಲು ಅವರೇ ತಮ್ಮ ಮುನ್ನುಡಿಯಲ್ಲಿ—ರಮಾನಂದರ ಎಲ್ಲಾ ಲೇಖನಗಳು ಈ ವಿಷಯಗಳ ಕುರಿತಾಗಿ ಬೆಲ್ಜಿಯಂ ಹಾಗೂ ಭಾರತದಲ್ಲಿ ಕುವೆಂಪು ವಿ. ವಿ. ಸ್ಥಳೀಯ ಸಂಸ್ಕೃತಿಗಳ ಅಧ್ಯಯನ ಕೇಂದ್ರದಲ್ಲಿ ನಡೆಯುತ್ತಿರುವ ಸಂಶೋಧನೆಗಳಿಂದ ಪ್ರಭಾವಿತವಾಗಿವೆ ಎಂದ್ದಿದ್ದಾರೆ (ಪುಟxii)

೨. ಲೇಖಕರ ಮಾತಿನಲ್ಲಿ ಸ್ವತಃ ರಮಾನಂದ ಐನಕೈ ಅವರೇ ಮೇಲೆ ಹೇಳಿದ ಬಾಲು ಅವರ ಮಾತುಗಳನ್ನೇ ಅನುಮೋದಿಸಿದ್ದಾರೆ—ಬಾಲು ಅವರ ಮೂಲ ಸಿದ್ಧಾಂತಕ್ಕೆ ಚ್ಯುತಿ ಬಾರದ ಹಾಗೆ ಅವರ ವಿಚಾರಗಳನ್ನು ನನ್ನ ಅನುಭವಗಳ ಮೂಲಕ ಸರಳವಾಗಿ ನಿರೂಪಿಸುವ ಕೆಲಸ ಮಾಡಿದ್ದೇನೆ (ಪುಟ xvi )(ರಮಾನಂದರ ಅನುಭವಗಳ ಪ್ರಮಾಣ ಈ ಪುಸ್ತಕದ ವಿಚಾರದಲ್ಲಿ ತೀರಾ ಕಡಿಮೆ ಎಂಬುದು ಓದುಗರಿಗೆ ಮನವರಿಕೆಯಾಗುತ್ತದೆ!)

೩. ರಮಾನಂದರ ಪ್ರಸ್ತುತ ಪುಸ್ತಕ್ಕಕ್ಕೆ (ನ.ನಾ.ಪ) ಹಿನ್ನೆಲೆ ಬರೆದಿರುವ ದಾ॥ ರಾಜಾರಾಮ ಹೆಗಡೆಯವರು ಸಹ ರಮಾನಂದರದು ಸ್ವತಂತ್ರ ಲೇಖನಗಳಾದರೂ ಕೂಡ ಭಾರತೀಯ ಸಂಸ್ಕೃತಿಯ ಕುರಿತು ಎಸ್ . ಎನ್ . ಬಾಲಗಂಗಧರ ಅವರ ಹೊಸ ವಾದಗಳಿಂದ ಪ್ರಭಾವಿತವಾಗಿವೆ. (ಪುಟ xviii)

ಮತ್ತಷ್ಟು ಓದು »

10
ಜೂನ್

CSLC ಯ ಸಂಶೋಧನೆ ಮತ್ತು ಪ್ರಗತಿಪರರ ಫ್ಯಾಸಿಸ್ಟ್ ಧೋರಣೆ

CSLC– ರಾಕೇಶ್ ಶೆಟ್ಟಿ

ಅಲ್ಲಿಯವರೆಗೂ ಸುಖಾ ಸುಮ್ಮನೆ ಭೂಮಿಯ ಸುತ್ತ ಗಿರಕಿ ಹೊಡೆಯುತಿದ್ದ ಸೂರ್ಯನಿಗೆ ಸುತ್ತುವುದರಿಂದ ಮುಕ್ತಿ ಕೊಡಿಸಿ,’ಭೂಮಿಯೇ ಸೂರ್ಯನ ಸುತ್ತ ಸುತ್ತುತ್ತಿದೆ’ ಅಂದವನು ಕೋಪರ್ನಿಕಸ್. ಅವನ ಕೆಲಸವನ್ನ ಮುಂದುವರಿಸಿದವರು ಗೆಲಿಲಿಯೋ ಮತ್ತು ಬ್ರುನೋ.ಈ ಮೂವರು ಬರುವವರೆಗೂ ಸೂರ್ಯನೇ ಭೂಮಿಯ ಸುತ್ತ ಸುತ್ತುತ್ತಾನೆ ಅಂತಲೇ ಜನರು ನಂಬಿದ್ದರು.ಅದೇ ಜನರ ಮಧ್ಯದಿಂದ ಎದ್ದು ಬಂದು,’ಇಲ್ಲ ಸ್ವಾಮಿ ಭೂಮಿಯೇ ಸುತ್ತೋದು’ ಅಂದಿದ್ದ ಕೋಪರ್ನಿಕಸ್ ಅದೇ ಜನರಿಂದ ಹುಚ್ಚ ಅನ್ನಿಸಿಕೊಂಡಿದ್ದ.ಅವನ ನಂತರ ಬಂದ ಗೆಲಿಲಿಯೋ ಮತ್ತು ಬ್ರುನೋ ಸಹ ಕೋಪರ್ನಿಕಸ್ ವಾದಕ್ಕೆ ಸೈ ಅಂದರು.

ಸಮಾಜದ ನಂಬಿಕೆಯ ಬುಡವನ್ನು ಅಲುಗಾಡಿಸುವ ಯಾವುದೇ ಪ್ರಯತ್ನಕ್ಕೆ ದೊಡ್ಡ ಮಟ್ಟದಲ್ಲೇ ಅಡೆ-ತಡೆಗಳು ಎದುರಾಗಬೇಕಲ್ಲವೇ? ಗೆಲಿಲಿಯೋ,ಬ್ರೂನೋಗು ಅದೇ ಆಯಿತು. ಇವರ ಸಂಶೋಧನೆಯಿಂದ ಕನಲಿ ಕೆಂಡವಾದ ಪೋಪ್ ಎಂಟನೇ ಅರ್ಬನ್,“Heliocentric System” ಅನ್ನುವುದೇ ಸುಳ್ಳು ಎಂದು ಸಾರ್ವಜನಿಕವಾಗಿ ಗೆಲಿಲಿಯೋ ಮತ್ತು ಬ್ರೂನೋನನ್ನು ಖಂಡಿಸಿ, ಅವರಿಬ್ಬರ ಸಂಶೋಧನೆಗೂ ನಿರ್ಬಂಧವನ್ನೂ ಹೇರಿದರು.

ಗೆಲಿಲಿಯೋನನ್ನು ಜೈಲಿಗೂ ತಳ್ಳಲಾಯಿತು, ಸಾಯುವವರೆಗೂ ಗೃಹ ಬಂಧನದಲ್ಲಿರಿಸಲಾಯಿತು.1642ರಲ್ಲಿ ಗೆಲಿಲಿಯೋ ಮರಣವನ್ನಪ್ಪಿದಾಗ ಆತನನ್ನು ಕ್ರೈಸ್ತರ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ಮಾಡುವುದಕ್ಕೂ ಬಿಡಲಿಲ್ಲ.ಇನ್ನು ಬಾಹ್ಯಾಕಾಶವೆಂಬುದು Finite ಅಲ್ಲ, Infinite. ಅದಕ್ಕೆ ಕೊನೆಯೇ ಇಲ್ಲ ಎಂದು ವಾದಿಸುವ ಧೈರ್ಯ ತೋರಿದ ಬ್ರೂನೋನನ್ನಂತೂ,೧೫೯೨ರಲ್ಲಿ ಬಂಧಿಸಿ ರೋಮನ್ ಕ್ಯಾಥೋಲಿಕ್ ಚರ್ಚ್‌ನ ನ್ಯಾಯಾಲಯದ(The Inquisition) ಮುಂದೆ 7 ವರ್ಷಗಳ ಕಾಲ ವಿಚಾರಣೆ ಗೊಳಪಡಿಸಿ, ಕೊನೆಗೆ ಉರಿವ ಜ್ವಾಲೆಯಲ್ಲಿ ಸುಡುವ ಮರಣದಂಡನೆಯನ್ನು ವಿಧಿಸಿದರು.

ಮತ್ತಷ್ಟು ಓದು »