ಅಯೋಧ್ಯೆ : ಸೆಕ್ಯುಲರ್ ಮಾರೀಚರಿಗೆ ಸುಪ್ರೀಂ ರಾಮಬಾಣ
– ರಾಕೇಶ್ ಶೆಟ್ಟಿ
ನವೆಂಬರ್ ೯,೨೦೧೯ರ ಶನಿವಾರದ ದಿನಕ್ಕೂ,ಸೆಪ್ಟಂಬರ್ ೩೦,೨೦೧೦ರ ಗುರುವಾರದ ದಿನಕ್ಕೂ ಸಾಮ್ಯತೆಯಿದೆ. ಆ ಎರಡು ದಿನಗಳು ೪೯೧ ವರ್ಷಗಳಷ್ಟು ಹಳೆಯದಾದ ರಾಮಜನ್ಮಭೂಮಿಯ ಸಿವಿಲ್ ವ್ಯಾಜ್ಯಕ್ಕೆ ಸಂಬಂಧಿಸಿದ ಕೇಸಿನ ತೀರ್ಪು ಬರುವ ದಿನಗಳಾಗಿದ್ದವು.
“ವಿವಾದಿತ 2.7 ಎಕರೆ ಭೂಮಿಯನ್ನು ಯಾವುದೇ ಒಂದು ಪಂಗಡಕ್ಕೆ ನೀಡದೆ ಮೂರು ಹೋಳುಗಳನ್ನಾಗಿ,ಪ್ರಸ್ತುತ ರಾಮಲಲ್ಲಾ ಇರುವ ಸ್ಥಳ ರಾಮಮಂದಿರ ನಿರ್ಮಾಣಕ್ಕೆ,ಅದರ ಹೊರಗಿನ ಜಾಗ ಬಾಬ್ರಿ ಮಸೀದಿ ಕ್ರಿಯಾ ಸಮಿತಿಗೆ ಸೇರಬೇಕು ಮತ್ತು ಉಳಿದ ಮೂರನೇ ಒಂದು ಭಾಗವನ್ನು ನಿರ್ಮೋಹಿ ಅಖಾಡಕ್ಕೆ ನೀಡಬೇಕು” ಎಂದು ಅಲಹಾಬಾದ್ ಹೈಕೋರ್ಟ್ ೨೦೧೦ರಲ್ಲಿ ನೀಡಿದ ತೀರ್ಪು ಯಾವ ಗುಂಪಿಗೂ ಒಪ್ಪಿಗೆಯಾಗಲಿಲ್ಲ.ಆ ನಂತರ ೨೦೧೧ರ ಅಕ್ಟೋಬರ್ ತಿಂಗಳಿನಲ್ಲಿ,ಸುಪ್ರೀಂ ಕೋರ್ಟು,ಅಲಹಬಾದ್ ನ್ಯಾಯಾಲಯದ ತೀರ್ಪಿಗೆ ತಡೆಯಾಜ್ಞೆ ನೀಡಿತ್ತು.
ಅದಾದ ನಂತರ ಈ ಕೇಸಿಗೆ ಪೂರಕವಾಗಿ ಬಂದ ಮತ್ತೊಂದು ಬಹುಮುಖ್ಯ ತೀರ್ಪು, 1994ರ ಅಲಹಾಬಾದ್ ಹೈಕೋರ್ಟ್ ಆದೇಶದಂತೆ, ಇಸ್ಲಾಂ ಪ್ರಕಾರ ಮಸೀದಿಯ ಮಹತ್ವ ಹಾಗೂ ನಮಾಜ್ ಮಾಡಲು ಅದೇ ಜಾಗ ಆಗಬೇಕೆಂದೇನಿಲ್ಲ, ಬಯಲು ಪ್ರದೇಶವೊಂದರಲ್ಲೂ ಪ್ರಾರ್ಥನೆ ಸಲ್ಲಿಸಬಹುದು ಎಂಬ ತೀರ್ಪನ್ನು ಸುಪ್ರೀಂ ಕೋರ್ಟ್ ಕೂಡ ಎತ್ತಿ ಹಿಡಿದಿದ್ದು ಹಾಗೂ ಈ ವಿವಾದ ವಿಚಾರಣೆಗೆ ಸಾಂವಿಧಾನಿಕ ಪೀಠದ ಅಗತ್ಯವಿಲ್ಲ ಎನ್ನುವುದಾಗಿತ್ತು.
ಇದಾದ ನಂತರ ಅರ್ಜಿದಾರರು ಹಾಗೂ ಮಧ್ಯಸ್ಥಿಕೆದಾರರ ಜೊತೆಗೂಡಿ ಸಮಸ್ಯೆಗೆ ಸೌಹಾರ್ದಯುತ ಪರಿಹಾರಕ್ಕೂ ಸುಪ್ರೀಂ ಕೋರ್ಟ್ ಮಾರ್ಚ್ ತಿಂಗಳಲ್ಲಿ ಅವಕಾಶ ನೀಡಿತ್ತು. ಅಂತಿಮವಾಗಿ ಸತತ ೪೦ ದಿನಗಳ ಮ್ಯಾರಥಾನ್ ವಿಚಾರಣೆ ನಡೆಸಿತ್ತು.ಕಡೆಯ ದಿನ ಮತ್ತಷ್ಟು ಸಮಯ ಕೋರಿದ ಅರ್ಜಿದಾರರಿಗೆ,ಮುಖ್ಯನ್ಯಾಯ ಮೂರ್ತಿಗಳಾದ ರಂಜನ್ ಗೋಗೋಯ್ ಅವರು ‘Enough is Enough’ ಎಂದಿದ್ದರು.ಎಲ್ಲರ ಚಿತ್ತ ನವೆಂಬರ್ ತಿಂಗಳಲ್ಲಿ ಬರಲಿರುವ ತೀರ್ಪಿನ ಮೇಲೆಯೇ ಇತ್ತು. ನವೆಂಬರ್ ೯ನೇ ತಾರೀಕು ಐತಿಹಾಸಿಕ ತೀರ್ಪು ಹೊರಬಿದ್ದಿದೆ. ವಿವಾದಿತ ೨.೨೭ ಎಕರೆ ಜಾಗವು ರಾಮ್ ಲಲ್ಲಾನಿಗೆ ಸೇರಿದ್ದು ಎಂದು ಕೋರ್ಟ್ ತೀರ್ಪಿತ್ತಿದೆ. ಸುನ್ನಿ ವಕ್ಫ್ ಬೋರ್ಡಿಗೆ ಬೇರೆ ಜಾಗದಲ್ಲಿ ೫ ಎಕರೆ ಭೂಮಿಯನ್ನು ಇನ್ನು ೩-೪ ತಿಂಗಳಲ್ಲಿ ನೀಡುವಂತೆಯೂ ಸೂಚಿಸಿದೆ. ಮಂದಿರ ನಿರ್ಮಾಣದ ಹೊಣೆಯನ್ನು ಹಾಗೂ ನಿರ್ವಹಣೆಗಾಗಿ ಟ್ರಸ್ಟ್ ರಚನೆಯ ಹೊಣೆಯನ್ನು ಕೇಂದ್ರ ಸರ್ಕಾರಕ್ಕೆ ವಹಿಸಿದೆ.ಬಾಬ್ರಿ ಮಸೀದಿಯು ಖಾಲಿ ಜಾಗದಲ್ಲಿ ನಿರ್ಮಾಣವಾಗಿಲ್ಲ ಎನ್ನುವುದನ್ನು ಕೋರ್ಟ್ ಒಪ್ಪಿದೆಯಾದರೂ, ಮಂದಿರವನ್ನು ಕೆಡವಿ ಕಟ್ಟಿರುವುದುಕ್ಕೆ ಪುರಾವೆ ಇಲ್ಲವೆಂದಿದೆ.ಹಾಗೆಯೇ ಮಸೀದಿಯ ಕೆಳಗೆ ಎಎಸ್ಐ ಉತ್ಖನನ ನಡೆಸಿ ನೀಡಿದ ವರದಿಯನ್ನು ಪುರಸ್ಕರಿಸಿ ಅಲ್ಲಿ ಇಸ್ಲಾಮೇತರ ಮಂದಿರದ ಅವಶೇಷ ಸಿಕ್ಕಿರುವುದನ್ನು ಒಪ್ಪಿಕೊಂಡಿದೆ. ಜೊತೆಗೆ ವಿವಾದಿತ ಜಾಗವು ರಾಮ ಜನ್ಮಸ್ಥಳ ಎನ್ನುವ ಹಿಂದೂಗಳ ವೈಯುಕ್ತಿಕ ನಂಬಿಕೆಯು ವಿವಾದರಹಿತವಾದದ್ದು ಎಂದಿದೆ.ಇದಿಷ್ಟು ತೀರ್ಪಿನ ಸಾರಾಂಶ.
ಭಾರತದ ಎಡಪಂಥೀಯರು ದೇಶವಿರೋಧದತ್ತೇಕೆ ಸಾಗುತ್ತಾರೆ?
– ವಿನಾಯಕ್ ಹಂಪಿಹೊಳಿ
ಭಾರತದಲ್ಲಿ ಇಂದು ಎಡಪಂಥವು ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿದೆ. ಸರ್ಕಾರದಿಂದ ಎಲ್ಲ ಸವಲತ್ತುಗಳನ್ನು ಪಡೆದರೂ, ಶಿಕ್ಷಣ ಕ್ಷೇತ್ರದ ಎಲ್ಲ ಆಯಕಟ್ಟಿನ ಜಾಗಗಳನ್ನು ಆವರಿಸಿದರೂ, ಸೋಶಿಯಲ್ ಮೀಡಿಯಾ ಹೊರತುಪಡಿಸಿ ಬಹುತೇಕ ಪತ್ರಿಕಾ ಮತ್ತು ದೃಶ್ಯ ಮಾಧ್ಯಮಗಳಲ್ಲಿ ಎಡಪಂಥೀಯ ಚಿಂತನೆಯನ್ನೇ ಪ್ರಸಾರ ಮಾಡಿದ್ದರೂ, ಸರ್ಕಾರೀ ಪ್ರಶಸ್ತಿಗಳಲ್ಲಿ ಬಹುತೇಕ ಪಾಲನ್ನು ಎಡಪಂಥೀಯರಿಗೆ ಮೀಸಲಿಟ್ಟಿದ್ದರೂ, ಹಲವಾರು ಜನಪರ ಸರ್ಕಾರೀ ಯೋಜನೆಗಳು ಎಡಪಂಥೀಯ ಚಿಂತನೆಯನ್ನೇ ಅವಲಂಬಿಸಿಕೊಂಡಿದ್ದರೂ ಅದೇಕೋ ಬಹುತೇಕ ಭಾರತೀಯರು ಮಾತ್ರ ಎಡಪಂಥವನ್ನು ಒಪ್ಪಿಕೊಂಡೇ ಇಲ್ಲ.
ಎಡಪಂಥ ಶಬ್ದವು ಫ್ರೆಂಚ್ ಕ್ರಾಂತಿಯ ಅವಧಿಯಲ್ಲಿ ಹುಟ್ಟಿರುವ ಶಬ್ದವಾದರೂ ಕಾಲಕ್ರಮದಲ್ಲಿ, ಸೋಶಿಯಾಲಿಸಂ, ಕಮ್ಯುನಿಸಂ ಮುಂತಾದ ಕಲ್ಪನೆಗಳನ್ನು ಒಳಗೊಳ್ಳುತ್ತ ಹೋಯಿತು. ಸಮಾಜದಿಂದ ಹೆಚ್ಚು ಪ್ರಯೋಜನ ಪಡೆಯಲಾಗದವರ ಕುರಿತು ವಿಶೇಷ ಕಾಳಜಿಯನ್ನು ತೋರಿಸುವದು ಎಡಪಂಥದ ತತ್ತ್ವ. ಬಹುಸಂಖ್ಯಾತ ರಿಲಿಜನ್ನಿನವರಿಂದ ತುಳಿತಕ್ಕೊಳಗಾಗುವ ಅಲ್ಪಸಂಖ್ಯಾತ ರಿಲಿಜನ್ನಿನ ಜನರ ಕುರಿತು ಕಾಳಜಿ ತೋರಿಸುತ್ತದೆ. ಶ್ರೀಮಂತರಿಂದ ಅನ್ಯಾಯಕ್ಕೊಳಗಾದ ಬಡವರ ಪರವಾಗಿ ನಿಲ್ಲುತ್ತದೆ. ಒಟ್ಟಿನಲ್ಲಿ ಸಮಾಜದಲ್ಲಿ ಸಾಮಾಜಿಕ ಮತ್ತು ಆರ್ಥಿಕ ಸಮಾನತೆ ಎಂಬ ಆದರ್ಶ ಸ್ಥಾಪಿಸುವದೇ ಇದರ ಉದ್ದೇಶ.
ಸಮಾಜದಲ್ಲಿ ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆಗೆ ಕಾರಣವಾಗುವ ಪ್ರತಿಯೊಂದನ್ನೂ ಎಡಪಂಥವು ವಿರೋಧಿಸುತ್ತದೆ. ಬಹುಸಂಖ್ಯಾತರಿರುವ ರಿಲಿಜನ್ನಿನ ಜನರಿಂದ ಅಲ್ಪಸಂಖ್ಯಾತರ ರಿಲಿಜನ್ನಿನ ಜನರಿಗೆ ಸಾಮಾಜಿಕ ಅನ್ಯಾಯಗಳಾಗುವದರಿಂದ ರಿಲಿಜನ್ನುಗಳನ್ನು ವಿರೋಧಿಸುತ್ತದೆ. ಖಾಸಗೀ ಉದ್ಯಮಗಳಿಂದಾಗಿ ಆರ್ಥಿಕ ಸಂಪತ್ತುಗಳು ಉದ್ದಿಮೆದಾದರಲ್ಲಿಯೇ ಕ್ರೋಢೀಕರಣಗೊಳ್ಳುವದರಿಂದ ಖಾಸಗೀಕರಣವನ್ನು ವಿರೋಧಿಸುತ್ತದೆ. ರೈತರು ಬೆಳೆಯುವ ಬೆಳೆಯನ್ನು ಸಂಗ್ರಹಿಸಿಟ್ಟುಕೊಳ್ಳುವ ಜಮೀನುದಾರರನ್ನು ವಿರೋಧಿಸುತ್ತದೆ.
ಹಿಂದೂ-ವಿರೋಧಿ ಮಾಧ್ಯಮ: ಸೃಷ್ಟಿ ಮತ್ತು ಸ್ಥಿತಿ
– ಪ್ರೇಮಶೇಖರ
ಪ್ರಕರಣ ೧: ಪ್ರಮುಖ ಕನ್ನಡ ದೈನಿಕವೊಂದರಲ್ಲಿ ಸೌದಿ ಅರೇಬಿಯಾದ ಬಗ್ಗೆ ಪರಿಚಯಾತ್ಮಕ ಲೇಖನವೊಂದು ಪ್ರಕಟವಾಗುತ್ತದೆ. ಅಚ್ಚರಿಯೆಂದರೆ ಮರುದಿನವೂ ಅದೇ ಲೇಖನ ಮತ್ತೆ ಕಾಣಿಸಿಕೊಳ್ಳುತ್ತದೆ! ಅದರ ಕೆಳಗೆ ಹೀಗೊಂದು ವಿವರಣೆ: “ನಿನ್ನೆಯ ದಿನ ಸೌದಿ ಅರೇಬಿಯಾವನ್ನು ಕುರಿತು ನೀಡಿದ ವಿವರಣೆಯಲ್ಲಿ ಮಹಮದ್ ಪೈಗಂಬರ್ ಮೆಕ್ಕಾದಿಂದ ಮದೀನಾಕ್ಕೆ ಕ್ರಿ.ಶ. ೬೨೨ರಲ್ಲಿ ಓಡಿಹೋದರು. ಅಂದಿನಿಂದ ಹಿಜ್ರಾ ಶಕೆ ಪ್ರಾರಂಭವಾಗುತ್ತದೆ ಎಂದು ಪ್ರಕಟವಾಗಿತ್ತು.ಇದರಿಂದ ಅನೇಕರ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ತಿಳಿದುಬಂದಿದೆ. ಅದಕ್ಕಾಗಿ ಪತ್ರಿಕೆ ಕ್ಷಮೆ ಯಾಚಿಸುತ್ತದೆ ಹಾಗೂ ಇಂದು ಅದೇ ಲೇಖನವನ್ನು ತಿದ್ದಿ ಪ್ರಕಟಿಸಲಾಗಿದೆ.” ಮರುಪ್ರಕಟವಾಗಿದ್ದ ಲೇಖನದಲ್ಲಿ ಪೈಗಂಬರರು ಮದೀನಾಗೆ ಓಡಿಹೋದ ಬಗೆಗಿನ ಒಂದು ಸಾಲು ಮಾಯವಾಗಿರುತ್ತದೆ.
ಪ್ರಕರಣ ೨: ಕೆಲದಿನಗಳ ನಂತರ ಅದೇ ಪತ್ರಿಕೆಯಲ್ಲಿ ಸ್ವಾಮಿ ವಿವೇಕಾನಂದರ ಬಗ್ಗೆ ಲೇಖನವೊಂದು ಪ್ರಕಟವಾಗುತ್ತದೆ.ವಿವೇಕಾನಂದರ ದೈಹಿಕ ಸಮಸ್ಯೆಗಳು,ಬಲಹೀನತೆಗಳ ಬಗ್ಗೆ ಅದರಲ್ಲಿನ ವಿಷಯಗಳಾವುವೂ ಹೊಸದಾಗಿರುವುದಿಲ್ಲ. ಅವೆಲ್ಲವೂ ಕೊಲ್ಕತಾದ ರಾಮಕೃಷ್ಣ ಮಿಶನ್ ಮತ್ತು ಅಲ್ಮೋರಾದ ಅದ್ವೈತಾಶ್ರಮಗಳ ಪ್ರಕಟಣೆಗಳಲ್ಲೇ ಇವೆ.ಆದರೆ ಲೇಖನದ ಭಾಷೆ, ಕೆಲ ಪದಗಳು ಅಕ್ಷೇಪಾರ್ಹವಷ್ಟೇ ಅಲ್ಲ, ಪತ್ರಿಕೆಯ ಘನತೆಗೂ ಶೋಭೆ ತರುವಂತಿರುವುದಿಲ್ಲ.ಇದರಿಂದಾಗಿ ಹಲವರ ಭಾವನೆಗಳಿಗೆ ಧಕ್ಕೆಯಾಗುತ್ತದೆ.ಅದು ರಾಜ್ಯದ ವಿವಿಧೆಡೆ ಸಾರ್ವಜನಿಕವಾಗಿಯೂ ವ್ಯಕ್ತವಾಗುತ್ತದೆ.ಅದಕ್ಕೆ ಪತ್ರಿಕೆಯ ಪ್ರತಿಕ್ರಿಯೆ? ಒಂದಕ್ಷರದ ಕ್ಷಮಾಯಾಚನೆಯೂ ಇಲ್ಲ!
ಸೆಕ್ಯುಲರಿಸಂ ವರ್ಸಸ್ ಮೂಲಭೂತವಾದ…?
– ಡಾ. ಪ್ರವೀಣ್ ಟಿ. ಎಲ್, ಶಿವಮೊಗ್ಗ
ಪ್ರಜಾವಾಣಿಯ ಚರ್ಚೆಯೊಂದಕ್ಕೆ ಬರೆದ ಪ್ರತಿಕ್ರಿಯೆ. ಪ್ರತಿದಿನ ‘ಮೂಲಭೂತವಾದ, ಕೋಮುವಾದ/ಕೋಮುವಾದಿ ರಾಜಕಾರಣ ಅಪಾಯಕಾರಿ’ ಎಂದು ಊಳಿಡುವ ಲೇಖನಗಳನ್ನು ಪ್ರಕಟಿಸುವ ಪತ್ರಿಕೆಗೆ ಈ ಪ್ರತಿಕ್ರಿಯೆಯು ಅಪಥ್ಯವಾಗಿರುವುದರಲ್ಲಿ ಯಾವ ಆಶ್ಚರ್ಯವೂ ಇಲ್ಲ. ಏಕೆಂದರೆ ಪ್ರಕಟಿಸಿದರೆ ಕೆಲವರ ‘ವಿಶ್ವಾಸಾರ್ಹ’ತೆಯನ್ನು ಕಳೆದುಕೊಳ್ಳುವ ಭಯ. ಅದೇನೆ ಇರಲಿ ಸದ್ಯಕ್ಕೆ ಪತ್ರಿಕೆಯ ‘ವಿಶ್ವಾಸಾರ್ಹ’ತೆಯನ್ನು ಪ್ರಶ್ನಿಸುವುದು ಈ ಲೇಖನದ ಕಾಳಜಿ ಅಲ್ಲ.
ಹಿನ್ನೆಲೆ:
ಪ್ರೊ. ಮುಜಾಫ್ಫರ್ ಅಸ್ಸಾಧಿಯವರ “ರಾಜಕಾರಣದ ಲೆಕ್ಕಾಚಾರ ಮತ್ತು ಕಥನ” ಎಂಬ ಲೇಖನವನ್ನು ಪ್ರಜಾವಾಣಿಯಲ್ಲಿ 19-09-2015ರಂದು ಪ್ರಕಟಿಸಲಾಗಿತ್ತು. ಲೇಖನವು ವಸಾಹತುಶಾಹಿ ಪಳೆಯುಳಿಕೆಯಾದ ಜನಗಣತಿ ಮಾದರಿಯನ್ನು ನಿರ್ವಸಾಹತೀಕರಣಗೊಳಿಸುವ ಕುರಿತು ವಿಷಯ ಪ್ರಸ್ತಾಪಿಸಿದ್ದರು. ಈ ಜನಗಣತಿ ಮಾದರಿಯು ಅಲ್ಪಸಂಖ್ಯಾತ ಬಹುಸಂಖ್ಯಾತ ಎಂಬ ವರ್ಗೀಕರಣಕ್ಕೆ ನಾಂದಿಹಾಡುತ್ತದೆ. ಇದರ ಲಾಭವನ್ನು ಕೋಮುವಾದಿ ರಾಜಕಾರಣವು ತನ್ನದನ್ನಾಗಿಸಿಕೊಳ್ಳುತ್ತದೆ. ಹಾಗಾಗಿ ವಸಾಹತುಶಾಹಿ ನಿರ್ಮಿಸಿದ ಈ ಜನಗಣತಿ ಮಾದರಿಗಳನ್ನು ನಿರ್ವಸಾಹತೀಕರಣಕ್ಕೊಳಪಡಿಸಬೇಕು ಎಂಬುದನ್ನು ವಿವರಿಸಿದ್ದರು. ಡಾ. ಅಜಕ್ಕಳ ಗಿರೀಶ್ ಅಲ್ಪಸಂಖ್ಯಾತ- ಬಹುಸಂಖ್ಯಾತ ಎಂಬ ವರ್ಗೀಕರಣಗಳೂ ವಸಾಹತುಶಾಹಿಯ ಪಳೆಯುಳಿಕೆಗಳೇ ಅಲ್ಲವೇ? ಎಂಬ ಪ್ರಶ್ನೆಯನ್ನು ಎತ್ತಿದ್ದರು. ಆದರೆ ಇಬ್ಬರ ಕಾಳಜಿಯೂ ಭಾರತದಲ್ಲಿನ ಧರ್ಮಾಧಾರಿತ ಪ್ರಕ್ಷುಬ್ಧತೆಗಳನ್ನು, ಸಂಘರ್ಷಗಳನ್ನು ತೊಲಗಿಸಿ, ಅವುಗಳ ನಡುವೆ ಸೌಹಾರ್ಧತೆಯನ್ನು ತರುವುದರ ಕುರಿತೇ ಆಗಿತ್ತು. ಈ ಕಾಳಜಿಯು ಅತ್ಯಂತ ಅಭಿನಂದನಾರ್ಹ ಕೂಡ. ಹಾಗೂ ಇಂದಿನ ತುರ್ತೂ ಕೂಡ. ಏಕೆಂದರೆ ನಮ್ಮ ಸುತ್ತಮುತ್ತಲಿನ ಪರಿಸ್ಥಿತಿಗಳನ್ನು ನೋಡಿದರೆ, ‘ಧಾರ್ಮಿಕ’ ಗುಂಪುಗಳ ನಡುವಿನ ವೈರತ್ವಕ್ಕೆ ಕಾರಣವೇನು? ಯಾಕೆ ದಿನೇ ದಿನೇ ಹೆಚ್ಚಾಗುತ್ತಿದೆ? ಎಂಬುದನ್ನು ತಿಳಿಯುವ ಅನಿವಾರ್ಯತೆ ಹಾಗೂ ಅದಕ್ಕೆ ಪರಿಹಾರವನ್ನು ಸೂಚಿಸುವ ಒತ್ತಡ ನಮ್ಮ ಮೇಲಿದೆ. ಈ ನಿಟ್ಟಿನಲ್ಲಿ ಅಸ್ಸಾಧಿಯವರು ಹೇಳುವಂತೆ ನಿರ್ವಸಾಹತೀಕರಣದ ಅಗತ್ಯತೆ ಇಂದಿನ ಜರೂರು. ಅದರೆ ಅದು ಅವರು ಸೂಚಿಸುವಂತೆ ಜನಗಣತಿಯ ಮಾದರಿಯಲ್ಲಿ ಮಾತ್ರವಲ್ಲ ಬದಲಾಗಿ ಸೆಕ್ಯುಲರ್ ತತ್ವದಲ್ಲಿಯೇ ಆಗಬೇಕಿದೆ.
ಮತ್ತಷ್ಟು ಓದು
ಆನುದೇವಾ ಹೊರಗಣವನು ಸೆಕ್ಯುಲರಿಸಂನಿಂದ
– ರಾಕೇಶ್ ಶೆಟ್ಟಿ
ಅರಸರ ಆಡಳಿತದಲ್ಲಿದ್ದು ಆ ನಂತರ ದಶಕಗಳಿಗೂ ಹೆಚ್ಚು ಕಾಲದ ಮಾವೋವಾದಿಗಳ ಹಿಂಸಾಚಾರದ ನಂತರ ಅರಸರ ಆಡಳಿತಕ್ಕೆ ತಿಲಾಂಜಲಿಯಿಟ್ಟು ಪ್ರಜಾಪ್ರಭುತ್ವವನ್ನು ಅಪ್ಪಿಕೊಂಡ ನೇಪಾಳಿಗಳು ಮತ್ತು ನೇಪಾಳ ಹೆಜ್ಜೆ-ಹೆಜ್ಜೆಗೂ ಸವಾಲುಗಳನ್ನು ಎದುರಿಸುತ್ತಲೇ ಸಾಗುತ್ತಲಿದೆ.ಪ್ರಜಾಪ್ರಭುತ್ವಕ್ಕೆ ಕಾಲಿಟ್ಟಂತೆ,ಹೊಸ ಸಂವಿಧಾನ ರಚಿಸುವ ನಿರ್ಧಾರಕ್ಕೆ ಎಲ್ಲಾ ರಾಜಕೀಯ ಪಕ್ಷಗಳು ಬಂದಿದ್ದರೂ ೨೦೦೬ರಿಂದ ಈ ಪ್ರಕ್ರಿಯೆ ನಾನಾ ವಿಘ್ನಗಳಿಂದ ಕುಂಟುತ್ತಲೇ ಸಾಗಿದೆ.ಇತ್ತೀಚೆಗೆ ನಡೆದ ಪ್ರಬಲ ಭೂಕಂಪದ ನಂತರ ದೊಡ್ಡ ಮನಸ್ಸು ಮಾಡಿ ಎಲ್ಲಾ ರಾಜಕೀಯ ಪಕ್ಷಗಳೂ ಒಗ್ಗೂಡಿ ಮತ್ತೆ ಈ ಕಾರ್ಯಕ್ಕೆ ಜೈ ಎಂದಿದ್ದವು.ಈಗ ಕಾರ್ಯ ಶುರುವಾದಂತೆ ಬಹಳಷ್ಟು ಪರ-ವಿರೋಧ ಪ್ರತಿಭಟನೆ ಚರ್ಚೆಗಳು ಶುರುವಾಗಿವೆ.
ಅವುಗಳಲ್ಲಿ ಒಂದು,ನೇಪಾಳದ ಭಾಗಗಳನ್ನು ಜನರ ಆಚರಣೆ-ಭಾಷೆಯ ಮೇಲೆ ಪ್ರತ್ಯೇಕವಾಗಿಸುವುದನ್ನು ವಿರೋಧ ವ್ಯಕ್ತವಾಗುತ್ತಿದೆ.ಈ ನಡೆ ಮುಂದೆ ನೇಪಾಳವನ್ನು ಇನ್ನಷ್ಟು ಚೂರು ಚೂರು ಮಾಡಲಿದೆ ಎಂಬ ದೂರದೃಷ್ಟಿಯುಳ್ಳವರು ನೇಪಾಳದಲ್ಲಿರುವುದು ನೇಪಾಳಿಗಳ ಪುಣ್ಯವೇ ಸರಿ.ಬಹುಷಃ ಅವರು ಭಾರತದ ಸ್ಥಿತಿಯಿಂದ ಪಾಠ ಕಲಿತಿರಬಹುದು.ಅದರಲ್ಲೂ ಮುಖ್ಯವಾಗಿ ಭಾರತದ ಈಶಾನ್ಯ ರಾಜ್ಯಗಳನ್ನು ನೋಡಿ.ಒಂದೆಡೆ ಮಿಷನರಿಗಳ ಚಿತಾವಣೆ,ಮತ್ತೊಂದೆಡೆ ಜನಾಂಗೀಯ ಆಧರಿತ ಉಗ್ರಪಡೆಗಳ ಹಿಂಸಾಚಾರಗಳಿಂದ ಈಗಾಗಲೇ ಎಂಟು ರಾಜ್ಯಗಳಾಗಿರುವ ಈಶಾನ್ಯ ಭಾಗವೂ ಇನ್ನೂ ಚೂರುಚೂರಾಗುವ ಆಂತಕವಿದ್ದೇ ಇದೆ.ಈಶಾನ್ಯ ರಾಜ್ಯಗಳ ಉದಾಹರಣೆಯೇಕೆ.ನೆರೆಯ ತಮಿಳುನಾಡಿನಲ್ಲಿಯೇ ಭಾಷೆ ಮತ್ತು ನಮ್ಮ ಸಂಸ್ಕೃತಿಯಗೇ ಪರಕೀಯವಾದ ’ದ್ರಾವಿಡ ಜನಾಂಗೀಯ’ ಎಂಬ ಹುಚ್ಚು ಕಲ್ಪನೆಯ ಚಳುವಳಿಯ ನೆಪದಲ್ಲಿ ಏನೆಲ್ಲಾ ಅಧ್ವಾನಗಳಾಯಿತು ಎಂಬುದನ್ನು ನೋಡಿದರೆ ಸಾಕಲ್ಲವೇ? ಈ ನಿಟ್ಟಿನಲ್ಲಿ ನೋಡಿದಾಗ ನೇಪಾಳಿಗಳ ಆತಂಕ ಸರಿಯಾಗಿದೆ ಎನಿಸುತ್ತದೆ.
ನಾಡು-ನುಡಿ : ಮರುಚಿಂತನೆ – ಮೂಲಭೂತವಾದದ ಒಂದು ಸೆಕ್ಯುಲರ್ ಅವತಾರ
– ಪ್ರೊ.ರಾಜಾರಾಮ್ ಹೆಗಡೆ
ಪ್ರಾಧ್ಯಾಪಕರು, ಇತಿಹಾಸ ಮತ್ತು ಪ್ರಾಕ್ತನಶಾಸ್ತ್ರ ವಿಭಾಗ, ಕುವೆಂಪು ವಿ.ವಿ
ಪ್ರಗತಿಪರರು ಕ್ರೈಸ್ತ ಹಾಗೂ ಮುಸ್ಲಿಂ ಸಮಾಜಗಳನ್ನು ಟೀಕಿಸುವ ಕ್ರಮಕ್ಕೂ ಹಿಂದೂ ಸಮಾಜವನ್ನು ಟೀಕಿಸುವ ಕ್ರಮಕ್ಕೂ ಒಂದು ಮೂಲಭೂತ ವ್ಯತ್ಯಾಸವಿದೆ. ಆ ಸಮಾಜಗಳಲ್ಲಿ ಯಾವುದಾದರೂ ತಪ್ಪು ಆಚರಣೆಯ ಕುರಿತು ಚರ್ಚೆ ಎದ್ದರೆ ಅವನ್ನು ಅವರ ಪವಿತ್ರಗ್ರಂಥಗಳು ಸಮರ್ಥಿಸಲು ಸಾಧ್ಯವೇ ಇಲ್ಲ ಎಂಬುದು ಇವರ ಧೃಡ ನಂಬಿಕೆ. ಅವು ಏನಿದ್ದರೂ ಇಂದಿನ ಅನುಯಾಯಿಗಳ ಅಜ್ಞಾನಕ್ಕೆ ಸಂಬಂಧಿಸಿದ್ದು ಅಷ್ಟೆ. ಉದಾಹರಣೆಗೆ, ಇಂದು ಭಯೋತ್ಪಾದನೆಯ ಕುರಿತು ನಡೆಯುವ ಚರ್ಚೆಗಳನ್ನು ಗಮನಿಸಿ. ಪ್ರತಿಯೊಬ್ಬರೂ ಕೂಡ ಅವು ಇಸ್ಲಾಂನ ಪವಿತ್ರಗ್ರಂಥಗಳಿಗೆ ವಿರುದ್ಧವಾಗಿವೆ ಎಂಬ ತರ್ಕವನ್ನಿಟ್ಟೇ ಅವುಗಳನ್ನು ಖಂಡಿಸುತ್ತಾರೆ. ಅಂದರೆ ಅವರ ಕೃತ್ಯಗಳನ್ನು ಇಸ್ಲಾಂನ ನಿರ್ದೇಶನಗಳಲ್ಲ ಎಂಬುದಾಗಿ ನೋಡುವುದು ಅತ್ಯಂತ ನಿರ್ಣಾಯಕವಾಗಿದೆ. ಜಿಹಾದಿಗೆ ಸಂಬಂಧಿಸಿದಂತೆ, ಬುರ್ಖಾಕ್ಕೆ ಸಂಬಂಧಿಸಿದಂತೆ, ತಲಾಖ್ಗೆ ಸಂಬಂಧಿಸಿದಂತೆ, ಹೀಗೆ ಇದುವರೆಗೆ ಎಷ್ಟು ಚರ್ಚೆಗಳು ಎದ್ದಿವೆಯೋ ಅವುಗಳಲ್ಲೆಲ್ಲ ಎಲ್ಲೂ ಕೂಡ ಪವಿತ್ರ ಗ್ರಂಥದ ನಿಂದನೆ ಆಗದಂತೇ ಎಚ್ಚರವಹಿಸಿ ವಾದಗಳನ್ನು ಬೆಳೆಸಲಾಗುತ್ತದೆ. ಅಂದರೆ ಇಸ್ಲಾಂ ರಿಲಿಜನ್ನು ಮೂಲತಃ ಒಳ್ಳೆಯದು, ಇಂದಿನ ದುಷ್ಪರಿಣಾಮಕ್ಕೆ ಅದು ಹೊಣೆಯಲ್ಲ ಎಂಬುದು ಇವರ ವಾದ.
ಇದರಲ್ಲೇನು ಸ್ವಾರಸ್ಯ? ಎಂದು ನೀವು ಹುಬ್ಬೇರಿಸಬಹುದು. ಪ್ರತಿಯೊಂದು ಮತಾನುಯಾಯಿಗಳಿಗೂ ತಮ್ಮ ಮತದ ಕುರಿತು ನಂಬಿಕೆ ಇರುವುದು ಸ್ವಾಭಾವಿಕ. ಆದರೆ ನಾನು ಹೇಳುತ್ತಿರುವುದು ಶ್ರದ್ಧಾವಂತ ಮುಸ್ಲಿಮರ ಕಥೆಯಲ್ಲ, ಬದಲಾಗಿ ತಾವು ಪ್ರಗತಿಪರರೆಂದು, ಸೆಕ್ಯುಲರ್ವಾದಿಗಳು ಅಥವಾ ಬುದ್ಧಿಜೀವಿಗಳೆಂದು ಕರೆದುಕೊಂಡ ಮುಸ್ಲಿಮರ ಕಥೆ. ಇದು ಮುಸ್ಲಿಂ ಬುದ್ಧಿಜೀವಿಗಳದೊಂದೇ ಕಥೆಯಲ್ಲ, ಸೆಕ್ಯುಲರ್ ಎಂದು ಕರೆದುಕೊಂಡ ಹಿಂದೂ ಬುದ್ಧಿಜೀವಿಗಳ ಕಥೆ ಕೂಡಾ ಹೌದು. ಅಂದರೆ ಯಾವ ರಿಲಿಜನ್ನುಗಳಿಗೂ ಸೇರದೇ ತಟಸ್ಥವಾಗಿ ಚಿಂತನೆ ನಡೆಸಬೇಕೆಂದು ಪ್ರತಿಪಾದಿಸುವವರು. ಇದುವರೆಗೆ ಮುಸ್ಲಿಮರ ಪವಿತ್ರಗ್ರಂಥವೇ ಸರಿಯಿಲ್ಲ ಎಂದು ಯಾವ ಮುಸ್ಲಿಂ ಅಥವಾ ಹಿಂದೂ ಸೆಕ್ಯುಲರ್ ಬುದ್ಧಿಜೀವಿ ಕೂಡ ಹೇಳಿದ್ದು ನಾನು ಕೇಳಿಲ್ಲ. ಹಾಗಂತ ಅವರು ಹಾಗೆ ಹೇಳಬೇಕಿತ್ತು ಅಂತಾಗಲೀ, ಯಾರದಾದರೂ ಪವಿತ್ರಗ್ರಂಥವನ್ನು ನಿಂದಿಸುವುದು ಸರಿಯೆಂದಾಗಲೀ ನಾನಿಲ್ಲಿ ಸೂಚಿಸುತ್ತಿಲ್ಲ ಎಂಬುದನ್ನು ಸ್ಪಷ್ಟೀಕರಿಸುತ್ತೇನೆ. ನಾನು ನಿಮ್ಮ ಗಮನ ಸೆಳೆಯಲೆತ್ನಿಸುವುದು ನಮ್ಮ ಬುದ್ಧಿಜೀವಿಗಳ ಈ ಧೋರಣೆಯ ಕುರಿತು. ಅವರು ಅಪ್ರಾಮಾಣಿಕರು ಅಂತ ನನ್ನ ಹೇಳಿಕೆಯಲ್ಲ. ಅವರಿಗೆ ನಿಜವಾಗಿಯೂ ಹಾಗೇ ಅನಿಸುತ್ತದೆ ಅಂತಲೇ ಇಟ್ಟುಕೊಳ್ಳೋಣ.
ಮತ್ತಷ್ಟು ಓದು
ಮಾನ ಕಳೆದುಕೊಂಡ ಸನ್ಮಾನಗಳು
– ರೋಹಿತ್ ಚಕ್ರತೀರ್ಥ
ನಾನು ಮಾಡಿದ ಕೆಲಸ ಸರಿಯಿದೆ ಎಂದು ಒಪ್ಪಿದರೆ ಸಾಕು. ಅದೇ ನನಗೆ ಬಹುದೊಡ್ಡ ಪ್ರಶಸ್ತಿ. ಬೇರೆ ಬಹುಮಾನ ಏಕೆ? – ಎಂದ ಗ್ರೆಗೊರಿ ಪೆರೆಲ್ಮನ್. ಅವನ ಕೆಲಸದ ಔನ್ನತ್ಯವನ್ನು ಮೆಚ್ಚಿ ಒಂದು ಮಿಲಿಯ ಡಾಲರ್ಗಳನ್ನು (ಅಂದರೆ, ಆರು ಕೋಟಿ ರುಪಾಯಿ!) ಹಿಡಿದು ನಿಂತಿದ್ದವರಿಗೆ ಬಾಗಿಲು ಕೂಡ ತೆರೆಯಲಿಲ್ಲ ಆ ಮಹರಾಯ! ನಿಮ್ಮನ್ನು ಒಳಬಿಟ್ಟೆನೆಂದರೆ, ಹಿಂದೆಯೇ ಪತ್ರಕರ್ತರು ತೂರಿಕೊಂಡು ಒಳಸೇರುತ್ತಾರೆ. ನೂರೆಂಟು ಪ್ರಶ್ನೆ ಕೇಳಿ ತಲೆ ತಿನ್ನುತ್ತಾರೆ. ಇನ್ನು ಪತ್ರಿಕೆಗಳಲ್ಲಿ, ಟಿವಿಯಲ್ಲಿ ನನ್ನ ಮುಖ ಕಂಡರೆ ಸಾಕು, ಬೀದಿಯಲ್ಲಿ ಆರಾಮಾಗಿ ನಡೆದುಹೋಗಲಿಕ್ಕೂ ತೊಂದರೆ. ಪ್ರಶಸ್ತಿ ಬಂತು ಅಂತ ಕೈಗೊಂದು-ಕಾಲಿಗೊಂದು ಗೆಳೆಯರು, ನೆಂಟರು ಹುಟ್ಟಿಕೊಳ್ಳುತ್ತಾರೆ. ಇದೆಲ್ಲ ಬೇಕಾ? ಪ್ರಶಸ್ತಿಯೂ ಬೇಡ, ಅದು ತರುವ ನೂರೆಂಟು ತಾಪತ್ರಯಗಳೂ ಬೇಡ ಎಂದು ಎಲ್ಲರನ್ನೂ ಗೇಟ್ಪಾಸ್ ಮಾಡಿದ್ದ ಜಗತ್ತಿನ ಶ್ರೇಷ್ಠ ಗಣಿತಜ್ಞರಲ್ಲಿ ಒಬ್ಬನಾದ ಪೆರೆಲ್ಮನ್.
“ದುಡ್ಡೇ ಎಲ್ಲ ತೊಂದರೆಗಳಿಗೆ ಬೇರು” ಎಂದು ಸ್ವಾಮೀಜಿಗಳು ಹೇಳಿದಾಗ ಭಕ್ತರೆಲ್ಲ ಒಂದೇ ಧ್ವನಿಯಲ್ಲಿ “ನಮಗೆ ಆ ಬೇರು ಬೇಕು!” ಎಂದು ಕೂಗಿದ್ದರಂತೆ. ಬಹುಶಃ ಈಗ, “ಪ್ರಶಸ್ತಿಯೇ ಎಲ್ಲ ತಾಪತ್ರಯಗಳಿಗೂ ಮೂಲ” ಎಂದು ಹೇಳಿದರೆ, ಸರಕಾರ ಕೊಟ್ಟ ಗೆಡ್ಡೆಗೆಣಸುಗಳಲ್ಲೇ ಉಸಿರು ಹಿಡಿದುಕೊಂಡಿರುವ ಬುದ್ಧಿಜೀವಿಗಳು ನಮಗೂ ಆ ಕಂದಮೂಲ ಬೇಕು ಎಂದು ಪಟ್ಟುಹಿಡಿದಾರು. ಅರ್ಹರನ್ನು ಅನ್ಯರು ಗುರುತಿಸಿ ಪ್ರಶಸ್ತಿಯ ಕಿರೀಟ ತೊಡಿಸಿ ಶಾಲುಹೊದಿಸಿ ಒಂದಷ್ಟು ದುಡ್ಡೋ ಸ್ಮರಣಿಕೆಯೋ ಕೈಯಲ್ಲಿಟ್ಟು ಕೃತಾರ್ಥರಾಗುವ ಕಾಲ ಒಂದಿತ್ತು. ಆದರೆ, ಈಗ ಪ್ರಶಸ್ತಿಗಳನ್ನು ಕೂಡ ಬಿಕರಿಗಿಡಲಾಗಿದೆ. ರಾಜ್ಯ ಅಥವಾ ಕೇಂದ್ರದಲ್ಲಿ ಸರಕಾರ ಬದಲಾದ ಕೂಡಲೇ, ಆಯಾಯಾ ಪಕ್ಷಗಳನ್ನು ಬೆಂಬಲಿಸುವ ಪ್ರತಿಭಾವಂತರು ಚುರುಕಾಗುತ್ತಾರೆ. ಇಷ್ಟು ವರ್ಷ ಆಗದೇ ನೆನೆಗುದಿಗೆ ಬಿದ್ದ ಕೆಲಸವನ್ನು ಈಗ ಹೇಗಾದರೂ ಮಾಡಿಸಿಕೊಳ್ಳಬೇಕು ಎಂದು ಸರಕಾರವೆಂಬ ವೃಂದಾವನಕ್ಕೆ ಸುತ್ತುಬರುತ್ತಾರೆ. ಕಾಯಿ ಒಡೆಯುತ್ತಾರೆ. ಹಣ್ಣು ನೈವೇದ್ಯ ಸಮರ್ಪಣೆ ಮಾಡುತ್ತಾರೆ. ಅಷ್ಟಶತೋತ್ತರ ನಾಮಾವಳಿಯೂ ನಡೆಯುತ್ತದೆ. ಇಷ್ಟೆಲ್ಲ ಪಾಡುಪಟ್ಟ ಭಕ್ತನನ್ನು ಸಂಪ್ರೀತಗೊಳಿಸಲು ಸರಕಾರ ಅವನಲ್ಲಿ ಯಾವ ಪ್ರಶಸ್ತಿ ಬೇಕು ವತ್ಸಾ ಎಂದು ಕೇಳಲೇಬೇಕಾದ ಪರಿಸ್ಥಿತಿ ಬರುತ್ತದೆ. ಪೂಸಿ ಹೊಡೆದು ಗಾಳಿ ಖಾಲಿಯಾದವರು ಯಾವುದಾದರೂ ನಡೆದೀತು ಎಂಬ ಹಂತಕ್ಕೆ ಬಂದಿರುತ್ತಾರೆ. ಆದರೆ, ಕೆಲವು ಜಗಜಟ್ಟಿಗಳು ಇಂಥದ್ದೇ ಬೇಕು, ಅದು ಕೊಡೋದಿಲ್ಲವಾದರೆ ಯಾವುದೂ ಬೇಡ ಎಂದು ರಚ್ಚೆ ಹಿಡಿಯುತ್ತಾರೆ. ಇಂತಹ ಕಂದಮ್ಮಗಳನ್ನು ರಮಿಸಿ ಮುದ್ದಿಸಿ ಹಾಲುಕೊಟ್ಟು ತಣ್ಣಗಾಗಿಸುವ ಹೊತ್ತಿಗೆ ಕೆಲವು ಸಲ ಸರಕಾರಕ್ಕೆ ಹೆಣ ಬಿತ್ತೆನ್ನಿಸುವಷ್ಟು ಸುಸ್ತು ಹೊಡೆಯುವುದೂ ಉಂಟು. ಆದರೇನು ಮಾಡೋಣ? ಸರಕಾರಕ್ಕೆ ತನ್ನ ಪರಾಕುಪಂಪು ಒತ್ತಿಸಿಕೊಳ್ಳಲು ಈ ವಂಧಿಮಾಗಧರ ಗಡಣ ಬೇಕು. ಮತ್ತು ಈ ಗಡಣಕ್ಕೆ ತನ್ನಗಂಟಲನ್ನು ಸದಾ ತೇವವಾಗಿಟ್ಟುಕೊಳ್ಳಲು ನೆರವು ನೀಡುವ ರಾಜಾಶ್ರಯ ಬೇಕು. ಇದು ಸಾರ್ವಜನಿಕ ತೆರಿಗೆ ದುಡ್ಡಿನ ಕೃಪಾಪೋಷಿತ ಪರಸ್ಪರ ಸಹಕಾರ ಸಂಘ.
ನಾಡು-ನುಡಿ : ಮರುಚಿಂತನೆ – ನೆಹರು ಸೆಕ್ಯುಲರಿಸಂ ಯಾರ ವಾರಸುದಾರ?
– ಪ್ರೊ.ರಾಜಾರಾಮ್ ಹೆಗಡೆ
ಪ್ರಾಧ್ಯಾಪಕರು, ಇತಿಹಾಸ ಮತ್ತು ಪ್ರಾಕ್ತನಶಾಸ್ತ್ರ ವಿಭಾಗ, ಕುವೆಂಪು ವಿ.ವಿ
ನೆಹರು ಅವರು ಮಹಾತ್ಮಾ ಗಾಂಧಿಯವರ ಪಟ್ಟದ ಶಿಷ್ಯ. ಅಷ್ಟಾಗಿಯೂ ನೆಹರೂ ಅವರ ನೀತಿಗಳು ಹಾಗೂ ಕಾರ್ಯಕ್ರಮಗಳು ದೇಶವನ್ನು ಗಾಂಧಿವಾದದ ವಿರುದ್ಧ ದಿಶೆಗೆ ಒಯ್ದವು ಎಂಬುದಾಗಿ ವಿದ್ವಾಂಸರ ಅಂಬೋಣ. ಉದಾಹರಣೆಗೆ ಗಾಂಧಿಯವರ ಗ್ರಾಮ ಸ್ವರಾಜ್ಯ ಕಲ್ಪನೆ, ಆಧುನೀಕರಣದ ಕುರಿತ ವಿರೋಧ, ಇವೆಲ್ಲವೂ ನೆಹರೂ ಯುಗದ ನಂತರ ರಾಜಕಾರಣದ ಕಸದ ಬುಟ್ಟಿ ಸೇರಿದ್ದು ಈಗ ಇತಿಹಾಸವಾಗಿದೆ. ಹಾಗಾಗಿ ಯಾರೂ ಈ ವಿಷಯದಲ್ಲಿ ನೆಹರೂ ಅವರು ಗಾಂಧಿಯವರ ಶಿಷ್ಯತ್ವವನ್ನು ಪೂರೈಸಿದರು ಎನ್ನುವ ಸಾಹಸಕ್ಕೆ ಹೋಗಲಾರರು. ಆದರೆ ಅಷ್ಟಾಗಿಯೂ ಕೂಡ ನೆಹರೂ ಅವರು ಗಾಂಧಿಯವರ ಶಿಷ್ಯರಾಗಿ ಉಳಿದುಕೊಳ್ಳುವುದು ಸೆಕ್ಯುಲರ್ ನೀತಿಯಲ್ಲಿ ಎಂಬುದು ನೆಹರೂ ಅವರ ಪರ ವಿರೋಧಿಗಳಿಬ್ಬರಲ್ಲೂ ಮನೆಮಾಡಿರುವ ಅನ್ನಿಸಿಕೆ. ಭಾರತದಲ್ಲಿ ಹಿಂದುತ್ವವಾದಿಗಳನ್ನು ನಿಯಂತ್ರಿಸುವ ಹಾಗೂ ಅಲ್ಪಸಂಖ್ಯಾತರ ಹಿತವನ್ನು ರಕ್ಷಿಸುವ ಕುರಿತಂತೆ ತಮ್ಮ ಗುರುವಿನ ಆಲೋಚನೆಗಳನ್ನು ನೆಹರೂ ಕಾರ್ಯರೂಪಕ್ಕೆ ಸಮರ್ಥವಾಗಿ ಇಳಿಸಿದವರು ಎಂಬುದರಲ್ಲಿ ಇಂದು ಯಾರಿಗಾದರೂ ಸಂದೇಹವಿದೆ ಎನ್ನಿಸುವುದಿಲ್ಲ. ಈ ಮೇಲಿನ ಕೊನೆಯ ಅಂಶವನ್ನು ಮಾತ್ರ ಕಾಂಗ್ರೆಸ್ಸು ಒತ್ತಿ ಹೇಳಿ ತಾನು ಗಾಂಧೀಜಿಯವರ ನಿಜವಾದ ವಾರಸುದಾರ ಎನ್ನುತ್ತ ಬಂದಿದೆ. ಆದರೆ ನೆಹರು ಸೆಕ್ಯುಲರಿಸಂಗೆ ಗಾಂಧಿಯವರ ವಾರಸುದಾರಿಕೆ ಎಷ್ಟಿದೆ?
ಇಂದು ಗಾಂಧೀ ಸೆಕ್ಯುಲರಿಸಂ ಅಂತ ಪ್ರತ್ಯೇಕವಾಗಿ ಯಾವುದೂ ಕಣ್ಣಿಗೆ ಕಾಣುವುದಿಲ್ಲ. ನೆಹರು ಸೆಕ್ಯುಲರಿಸಮ್ಮಿನ ಇಂದಿನ ವಾರಸುದಾರರ ಚಿಂತನೆಗೂ ಗಾಂಧೀ ಚಿಂತನೆಗೂ ಇರುವ ಬಿರುಕುಗಳನ್ನು ಗಮನಿಸಿದರೆ ಈ ವಾರಸುದಾರಿಕೆಯ ಸ್ವರೂಪವು ಸ್ಪಷ್ಟವಾಗಬಹುದು. ನೆಹರೂ ಕಾಲದಲ್ಲಿ ಪ್ರಚಲಿತದಲ್ಲಿ ಬಂದ ಸೆಕ್ಯುಲರಿಸಂಗೆ ಅಲ್ಪಸಂಖ್ಯಾತರ ಓಲೈಕೆಯ ರಾಜಕೀಯವನ್ನು ಬಿಟ್ಟರೆ ಅದರಲ್ಲಿ ಸೆಕ್ಯುಲರ್ ಆದದ್ದು ಏನೂ ಕಾಣಿಸುವುದಿಲ್ಲ. ಹಾಗೂ ಹಿಂದೂ ಸಂಪ್ರದಾಯಗಳ ಕುರಿತು ಜಿಗುಪ್ಸೆ, ಅವಹೇಳನವೂ ಕೂಡ ಈ ಸೆಕ್ಯುಲರಿಸಂನ ಒಂದು ಲಕ್ಷಣ. ಅಂದರೆ ಹಿಂದೂ ಪರಂಪರೆಯು ಅನೈತಿಕ ಸಮಾಜ ವ್ಯವಸ್ಥೆಯನ್ನು, ಅರ್ಥಾತ್ ಜಾತಿವ್ಯವಸ್ಥೆಯನ್ನು ಎತ್ತಿ ಹಿಡಿಯುತ್ತದೆ, ಸಮಸ್ತ ಸಂಸ್ಕೃತ ಗ್ರಂಥಗಳೆಲ್ಲವೂ ಬ್ರಾಹ್ಮಣೇತರರ ಶೋಷಣೆಗಾಗಿಯೇ ರಚನೆಯಾಗಿವೆ, ಈ ಸಮಾಜವನ್ನು ಆದಷ್ಟೂ ಹಿಂದೂ ಸಂಪ್ರದಾಯಗಳ ಹಿಡಿತದಿಂದ ಹೊರತಂದ ಹೊರತೂ ಅದರ ಉದ್ಧಾರ ಸಾಧ್ಯವಿಲ್ಲ ಎನ್ನುವುದೇ ಇಂದಿನ ಸೆಕ್ಯುಲರಿಸಂ ಆಗಿದೆ. ಈ ಸೆಕ್ಯುಲರಿಸಂ ಪ್ರಕಾರ ಹಿಂದೂ ಸಂಪ್ರದಾಯಗಳಲ್ಲಿನ ಮೌಢ್ಯದ ನಿರ್ಮೂಲನೆಗಾಗಿ ಕಾನೂನುಗಳನ್ನು ಮಾಡುವುದೇ ಮುಖ್ಯ ಕಾರ್ಯಕ್ರಮ.
ವಿವೇಕಾನಂದರ ವಿಚಾರಗಳು: ಜಾತಿ ಪದ್ಧತಿ
– ಪ್ರೊ.ರಾಜಾರಾಮ ಹೆಗಡೆ
ಇತಿಹಾಸ ಮತ್ತು ಪ್ರಾಕ್ತನ ಶಾಸ್ತ್ರ ವಿಭಾಗ, ಕುವೆಂಪು ವಿಶ್ವವಿದ್ಯಾನಿಲಯ
ವಿವೇಕಾನಂದರ ವಿಚಾರಗಳು: ಸಮಾಜ ಸುಧಾರಣೆ
ಸಾಧಾರಣವಾಗಿ ಇಂದು ವಿವೇಕಾನಂದರ ಕುರಿತು ಒಂದು ಅಭಿಪ್ರಾಯ ಚಾಲ್ತಿಯಲ್ಲಿರುವುದು ಕಂಡುಬರುತ್ತದೆ. ಅದೆಂದರೆ ಅವರು ಜಾತಿ ಪದ್ಧತಿಯ ನಿರ್ಮೂಲನೆಗಾಗಿ ಹೋರಾಡಿದರು ಎಂಬುದು. ವಿವೇಕಾನಂದರ ಕುರಿತ ಈ ಚಿತ್ರವು ಇಂದು ಎಷ್ಟು ಗಟ್ಟಿಯಾಗಿದೆಯೆಂದರೆ ಅವರ ಅನುಯಾಯಿಗಳು ಕೂಡ ಅವರ ಕುರಿತು ಮಾತನಾಡುವಾಗ ಈ ಅಂಶವನ್ನೇ ಮೊದಲು ಒತ್ತಿ ಹೇಳುತ್ತಾರೆ. ವಿವೇಕಾನಂದರ ಪ್ರಸ್ತುತತೆಯನ್ನು ಮನದಟ್ಟು ಮಾಡಿ ಕೊಡುವಾಗ ಅವರು ಹಿಂದೂ ಧರ್ಮದ ಶ್ರೇಷ್ಟತೆಯನ್ನು ಎತ್ತಿಹಿಡಿದಿದ್ದರು ಎನ್ನುವುದು ಅನಿವಾರ್ಯ.
ಆ ಅಂಶವನ್ನಿಟ್ಟುಕೊಂಡೇ ಹಿಂದುತ್ವವಾದಿಗಳು ವಿವೇಕಾನಂದರನ್ನು ತಮ್ಮ ಮೂಲಪುರುಷರೆಂಬಂತೆ ಪರಿಗಣಿಸುತ್ತಾರೆ. ಹಾಗಾಗಿ ಬಹುಶಃ ಇಂದಿನ ಸೆಕ್ಯುಲರ್ ಚಿಂತಕರು ಅವರು ಜಾತಿಯ ಕುರಿತು ಮಾಡಿದ ಟೀಕೆಗಳನ್ನು ಪ್ರಧಾನವಾಗಿ ಇಟ್ಟು ಅವರ ವಿಚಾರಗಳನ್ನು ಪ್ರಸ್ತುತ ಪಡಿಸುವ ಉಪಾಯಗಳನ್ನು ಬೆಳೆಸಿರಲೂ ಬಹುದು. ಒಟ್ಟಿನಲ್ಲಿ ವಿವೇಕಾನಂದರ ಸೆಕ್ಯುಲರೀಕರಣದ ಒಂದು ಭಾಗವಾಗಿ ಈ ಅಭಿಪ್ರಾಯವು ಜನಪ್ರಿಯತೆಯನ್ನು ಪಡೆದಿದೆ.
ಕರ್ನಾಟಕದಲ್ಲಿ ಕುವೆಂಪು ಅವರು ವಿವೇಕಾನಂದರ ವಿಚಾರಗಳಿಂದ ಪ್ರಭಾವಿತರಾಗಿದ್ದರು ಹಾಗೂ ಅವರ ಮೂಲಕ ವಿವೇಕಾನಂದರ ವಿಚಾರಗಳು ಶೂದ್ರ ಚಳವಳಿಯ ಒಂದು ಭಾಗವಾಗಿ ಕನ್ನಡ ಚಿಂತಕರಿಗೆ ಪರಿಚಯಿಸಲ್ಪಟ್ಟಿವೆ. ಹಿಂದುತ್ವದವರು ಬ್ರಾಹ್ಮಣರ ವಕ್ತಾರರು ಎಂದು ಈ ಚಿಂತಕರು ಪರಿಗಣಿಸಿರುವುದರಿಂದ ವಿವೇಕಾನಂದರ ಮೂಲ ಆಶಯವನ್ನು ಇವರು ತಿರುಚಬಹುದೆಂಬ ಆತಂಕ ಕೂಡ ಈ ಚಿಂತಕರಲ್ಲಿದೆ. ಹಾಗಾಗಿ ಕುವೆಂಪು ಅವರು ಹಿಂದೂ ಪರಂಪರೆಯ ಶ್ರೇಷ್ಟತೆಯ ಕುರಿತು ವ್ಯಕ್ತಪಡಿಸುವ ಚಿಂತನೆಗಳನ್ನು ಅವರ ಆರಾಧಕರು ಈಗ ಮೂಲೆಗೆ ಹಾಕಿದಂತಿದೆ. ಅವರನ್ನೂ ಕೂಡ ಇಂದಿನ ಪ್ರಗತಿಪರರ ಆಕಾರಕ್ಕೆ ಒಗ್ಗಿಸುವ ಪ್ರಯತ್ನವೇ ಎದ್ದುಕಾಣುವಂತಿದೆ. ಒಟ್ಟಿನಲ್ಲಿ ವಿವೇಕಾನಂದರು ಜಾತಿವಿರೋಧಿ ಎಂಬ ಚಿತ್ರಣವನ್ನು ತಮಗೆ ಬೇಕಾದಂತೆ ಕಲ್ಪಿಸಿಕೊಳ್ಳಲಾಗುತ್ತಿದೆ. ವಿವೇಕಾನಂದರು ಜಾತಿಯ ಕುರಿತು ಏನು ಹೇಳುತ್ತಾರೆ?
ಮತಾಂತರ ಸರಿಯಾದರೇ ,ಮರುಮತಾಂತರವೇಕೆ ತಪ್ಪು?
– ರಾಕೇಶ್ ಶೆಟ್ಟಿ
ಹೀಗೆ ಹತ್ತು ದಿನಗಳ ಹಿಂದೆ ಮೆಜೆಸ್ಟಿಕ್ ರೈಲ್ವೆ ನಿಲ್ದಾಣದ ಹತ್ತಿರ ಒಂದು ಜಾಹೀರಾತು ಓದಿದ್ದೆ.”೧೫ ಕಥೆಗಳು ನಿಮ್ಮ ಜೀವನವನ್ನೇ ಬದಲಾಯಿಸುವವು” ಅಂತ ಬರೆದಿತ್ತು.ಇದ್ಯಾವುದೋ ವ್ಯಕ್ತಿತ್ವ ವಿಕಸನ ಕಾರ್ಯಕ್ರಮದ ಜಾಹೀರಾತು ಎಂದುಕೊಂಡೆ.ಆದರೆ,ಇತ್ತೀಚೆಗೆ ದಿನ ಪತ್ರಿಕೆಗಳ ಮುಖಪುಟದಲ್ಲೂ ದೊಡ್ಡದಾಗಿ ಇದೇ ಜಾಹೀರಾತು “ಅನುಭವಿಸಿ ಬದಲಾಯಿಸುವ ಶಕ್ತಿ – ೧೫ ಕಥೆಗಳು ನಿಮ್ಮ ಜೀವನವನ್ನು ಬದಲಾಯಿಸುವುದು” ಎಂದು ಕಾಣಿಸಲಾರಂಭಿಸಿತು. ಪ್ರತಿದಿನ ಜಾಹೀರಾತು ಕೊಡುವಂತದ್ದು ಈ ಪುಸ್ತಕದಲ್ಲಿ ಅಂತದ್ದೇನಿದೆ ಎಂದು ಓದುವ ಕೂತುಹಲವಾಗಿ ಓದಿದೆ.ಮೂರ್ನಾಲ್ಕು ಪುಟ ಓದಿದಂತೆ ಪುಸ್ತಕದ ಮುಂದಿನ ಪುಟಗಳಲ್ಲಿ ಏನಿರಬಹುದು ಮತ್ತು ಈ ಪುಸ್ತಕ ಓದಿದವರು ಏನಾಗಿ ಬದಲಾಗಬೇಕು ಎಂಬ ಉದ್ದೇಶವಿದೆಯೆಂದು ಖುದ್ದು ಅನುಭವಿಸಿದೆ!
ಆ ಪುಸ್ತಕದಲ್ಲಿ ಬಾಲಿವುಡ್ ನಟ ಜಾನಿಲಿವರ್,ನಟಿ ನಗ್ಮಾ ಇನ್ನೂ ಹಲವರು ತಮ್ಮ ತಮ್ಮ ಕತೆಗಳನ್ನು ಹೇಳಿ ಕೊಂಡಿದ್ದಾರೆ.ಈ ಪುಸ್ತಕದ ಸರಳ ಸಾರಾಂಶವೇನೆಂದರೆ,”ಬೈಬಲ್ ಮತ್ತು ಜೀಸಸ್” ಮಾತ್ರ ಸತ್ಯ ಮತ್ತು ಅವು ಮಾತ್ರವೇ “ಪಾಪಿ”ಗಳಾದ ಮನುಷ್ಯ ಬದುಕಿನ ಬಿಡುಗಡೆಯ ಹಾದಿ ಎಂಬುದು!.ಅದೊಂದೇ ಮಾತ್ರ ಸತ್ಯವೆಂದಾದರೆ,ಉಳಿದ ರಿಲಿಜನ್ನುಗಳು, ಸಂಪ್ರದಾಯಗಳು ಮತ್ತು ಭಿನ್ನ ಹಾದಿಗಳೆಲ್ಲವೂ ಸುಳ್ಳು ಅಂತಾಯಿತಲ್ಲ! ಈ ಪುಸ್ತಕದ ಉದ್ದೇಶವನ್ನು ಇನ್ನೂ ಸರಳ ಮಾಡುವುದಾದರೆ ಅಥವಾ ಸಾಮಾನ್ಯಜನರ ಭಾಷೆಯಲ್ಲಿ ಹೇಳುವುದಾದರೆ,ಜನರನ್ನು ಕ್ರಿಸ್ತ ಮತಕ್ಕೆ ಬನ್ನಿ ಎಂದು ಕರೆಯುವ ಮತಾಂತರದ ಹೊಸ ತಂತ್ರವಷ್ಟೇ.ಈ ಬಗ್ಗೆ ಯಾವ ಮೀಡಿಯಾಗಳು,ಯಾವ ಸೆಕ್ಯುಲರ್ ನಾಯಕನೂ ಅಬ್ಬರಿಸಿ ಬೊಬ್ಬಿರಿಯಲಿಲ್ಲ,ಸಮಾಜದಲ್ಲಿ ಅಶಾಂತಿಗೆ ಕಾರಣವಾಗುತ್ತದೆ ಎಂದು ಮೊಸಳೆ ಕಣ್ಣೀರೂ ಸುರಿಸಲಿಲ್ಲ.