ವಿಷಯದ ವಿವರಗಳಿಗೆ ದಾಟಿರಿ

Posts tagged ‘ಸೆಕ್ಯುಲರ್’

27
ಆಕ್ಟೋ

ಕ್ರೂರಿಯೇ ನಮ್ಮ ನಾಡಿನ ಆದರ್ಶ ವ್ಯಕ್ತಿಯಾಗಬೇಕೆ ?

– ಡ್ಯಾನಿ ಪಿರೇರಾ

ಭಾರತದ ಇತಿಹಾಸದುದ್ದಕ್ಕೂ ವಿವಾದಾತ್ಮಕ ವ್ಯಕ್ತಿಗಳನ್ನು ಈ ರಾಷ್ಟ್ರದ ಜನಮಾನಸದಲ್ಲಿ ಸರ್ವಮಾನ್ಯ ಮಾಡಬೇಕೆಂಬ ಪ್ರಯತ್ನ ನಿರಂತರವಾಗಿ ನಡೆದಿದೆ. ಬದಲಾದ ವ್ಯವಸ್ಥೆಯಲ್ಲಿ ಆಳುವವರ ಮರ್ಜಿಗೆ ಸಿಲುಕಿದ ಇತಿಹಾಸಕಾರರು ಮಿಥ್ಯೆಯನ್ನು ಸತ್ಯವೆಂದು ತುರುಕುವ ಪ್ರಯತ್ನದಲ್ಲಿ ಯಶಸ್ವಿಯಾಗಿದ್ದಾರೆ. ಅವರ ಸಿದ್ಧಾಂತಗಳ ಮೂಸೆಯಲ್ಲಿ ದೇಶಭಕ್ತರು ಖಳನಾಯಕರಾದರೆ, ಖಳನಾಯಕರು ಬೆಳಗಾಗುವದರೊಳಗೆ ದೇಶಭಕ್ತರಾಗಿ ರೂಪಾಂತರಗೊಂಡಿದ್ದಾರೆ! ಈ ಹಿನ್ನೆಲೆಯಲ್ಲಿ ಎಂದಿನಂತೆ ಟಿಪ್ಪು ಜಯಂತಿ ವಿವಾದ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಹಾಗಾಗಿ ಕೆಲವರಿಗೆ ಟಿಪ್ಪು ಜಾತ್ಯತೀತ ಮತ್ತೆ ಕೆಲವರಿಗೆ ಮತಾಂಧನಾಗಿ ಗೋಚರಿಸುತ್ತಿದ್ದಾನೆ. ಈ ದೇಶದ ವಿಚಿತ್ರವೇನೆಂದರೆ ಈ ದೇಶದಲ್ಲಿ ಮುಸಲ್ಮಾನರಲ್ಲೇ ಈ ದೇಶಕ್ಕೆ ಬಹುದೊಡ್ಡ ಕೊಡುಗೆಯನ್ನು ಕೊಟ್ಟ ಮಹನೀಯರಿದ್ದಾರೆ. ಅವರ್ಯಾರನ್ನೂ ಈ ಸಮಾಜ ಧರ್ಮದ ಹೆಸರಲ್ಲಿ ಗುರುತಿಸುವುದಿಲ್ಲ. ಅವರು ಇಸ್ಲಾಂ ಚಿಂತನೆಗಳೊಂದಿಗೆ ಬೆಳೆದರೂ ಬೆಳೆ ಬೆಳೆದಂತೆ ಅವರ ವಾಸ್ತವ ಬದುಕಿನ ತಮ್ಮ ಪ್ರಪಂಚವನ್ನು ವಿಶಾಲಗೊಳಿಸಿದ್ದರಿಂದ ಮುಸ್ಲೀಮೇತರರಲ್ಲೂ ಅವರು ಆದರಣೀಯರಾಗಿದ್ದಾರೆ. ದುರ್ದೈವವೆಂದರೆ ಅವರು ಹುಟ್ಟಿದ ಸಮಾಜದಲ್ಲೇ ಕಡೆಗಣಿಸಲ್ಪಟ್ಟಿರುವುದರಿಂದ ಈ ದೇಶದ ಸೆಕ್ಯುಲರ್ ಪಟ್ಟಿಯಲ್ಲಿ ಅವರಿಗೆ ಮಹತ್ವದ ಸ್ಥಾನವಿಲ್ಲ. ಮತ್ತಷ್ಟು ಓದು »

24
ಸೆಪ್ಟೆಂ

ರೊಹಿಂಗ್ಯಾಗಳಿಗಾಗಿ ‘ಭಾರತ’ ತನ್ನತನವನ್ನು ಕಳೆದುಕೊಳ್ಳಬೇಕೇ ?

– ಡ್ಯಾನಿ ಪಿರೇರಾ
ಹಳ್ಳಿಮೈಸೂರು

ಭಾರತ ಎಲ್ಲಾ ಜಾತಿ ಜನಾಂಗಗಳನ್ನು ತನ್ನೊಡಲಲ್ಲಿ ಆಶ್ರಯ ನೀಡಿ ಆದರಿಸಿದ ದೇಶ. ಕೆಲವರು ಆಶ್ರಯ ಬೇಡಿ ಬಂದರೆ ಮತ್ತೆ ಕೆಲವರು ದುರಾಸೆಯಿಂದ ದಾಳಿ ಇಟ್ಟವರು. ಬಂದವರಲ್ಲಿ ಅನೇಕರು ಇಲ್ಲಿ ಬೆರೆತರು, ಕಲಿತರು ಕಲಿಸಿದರು. ಮತ್ತೆ ಕೆಲವರು ಬೆರೆತಂತೆ ಕಂಡರೂ ಬೇರೆಯಾಗಿಯೇ ಉಳಿದಿದ್ದಾರೆ. ಅವರು ಶರೀರ ಮಾತ್ರ ಇಲ್ಲಿದ್ದರೆ ಮನಸ್ಸು ಜಾತಿ-ಮತ-ಪಂಥಗಳಾಚೆ ಯೋಚಿಸಲು ಸ್ವಾತಂತ್ರ್ಯ ಬಂದು ಎಪ್ಪತ್ತು ವರ್ಷಗಳೇ ಕಳೆದಿದ್ದರೂ ಸಾಧ್ಯವಾಗಿಲ್ಲ. ಅವರೊಳಗಿನ ಮತಾಂಧತೆಯ ಭಾವ ಇಲ್ಲಿ ಎಲ್ಲವನ್ನೂ ಪಡೆದ ಮೇಲೂ ಹಾಗೆಯೇ ಇದೆ ಎಂದರೆ ಅದು ಸರಿಯಾಗದ ಮನಸ್ಥಿತಿ ಎನ್ನುವ ನಿಷ್ಕರ್ಶೆಗೆ ಬರಬೇಕಾಗುತ್ತದೆ. ಇಲ್ಲಿ ಸಮರಸತೆಯಿಂದ ಬೆರೆತ ಜನಾಂಗವೊಂದು ಈ ನೆಲದ ಸಂಸ್ಕೃತಿಯೊಂದಿಗೆ ಸಮ್ಮಿಳಿತಗೊಂಡು ಸ್ವಾತಂತ್ರ್ಯ ಹೋರಾಟದಲ್ಲಿ ಮೊದಲ್ಗೊಂಡು ಈ ದೇಶದ ಬದುಕಿನೊಂದಿಗೆ ಸಮರಸಗೊಂಡು ಹೊರಗಿನಿಂದ ಬಂದವರಿಗೆ ಮಾತ್ರವಲ್ಲ, ತಾವು ಇಲ್ಲಿನ ಮೂಲದವರು ಎನ್ನುವವರಿಗೂ ಆದರ್ಶಪ್ರಾಯರಾಗಿದ್ದಾರೆ. ಈ ಜನಾಂಗ ಈ ದೇಶದ ಮೂಲಭೂತವಾದಿ ಮನಸ್ಥಿತಿಗೆ ನೀತಿ ಮಾರ್ಗವಾಗಬೇಕಿತ್ತು! ದುರ್ದೈವ ಹಾಗಾಗಲಿಲ್ಲ. ಮತ್ತಷ್ಟು ಓದು »

20
ಸೆಪ್ಟೆಂ

ಪ್ರಗತಿಪರ ಫ್ಯಾಸಿಸ್ಟುಗಳಿಂದ ಪ್ರಜಾಪ್ರಾಭುತ್ವವ್ವನ್ನು ರಕ್ಷಿಸಬೇಕಾಗಿದೆ

– ರಾಕೇಶ್ ಶೆಟ್ಟಿ

ದೇಶದಾದ್ಯಂತ ಇಂದು ನಡೆಯುತ್ತಿರುವ Intellectual Intolerance ಹುಟ್ಟಿಕೊಂಡಿದ್ದು 16 May 2014 ರಂದು. ಆ ದಿನ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಮತ್ತು ಎನ್.ಡಿ.ಎ ಪ್ರಚಂಡ ಬಹುಮತಗಳಿಸಿ ಅಧಿಕಾರ ಹಿಡಿಯದೇ ಹೋಗಿದ್ದರೆ ಇವತ್ತು ಭಾರತದ ಹಾದಿ ಬೀದಿಗಳಲ್ಲಿ ಗಂಜಿಗಿರಾಕಿಗಳು ಎದೆಬಡಿದುಕೊಂಡು ಅಳಬೇಕಿರಲಿಲ್ಲ. ಆದರೆ ಏನು ಮಾಡುವುದು ಹೇಳಿ? ಭಾರತದ ಪಾಲಿಗೆ ಅಚ್ಛೇ ದಿನಗಳು ನಿಕ್ಕಿಯಾಗಿದ್ದವಲ್ಲ ಹಾಗಾಗಿ ಮೋದಿಯವರೇ ಗೆದ್ದರು. ಅಷ್ಟಕ್ಕೂ ಮೋದಿಯವರು ಗೆದ್ದಿದ್ದಕ್ಕೆ, ಗೆದ್ದ ನಂತರ ಯಶಸ್ವಿ ಮತ್ತು ಮೂರು ವರ್ಷಗಳ ಜನಪ್ರಿಯ ಆಡಳಿತವನ್ನು ನೀಡಿ ನಾಲ್ಕನೇ ವರ್ಷದತ್ತ ಶರವೇಗದಲ್ಲಿ ಹೊರಟಿರುವಾಗ ಗಂಜಿಗಿರಾಕಿಗಳದೇಕೆ ಈ ಗೋಳು? ಅವರ ಗೋಳಿನ ಕಾರಣವನ್ನು ಸರಳೀಕರಿಸಿ ಮೂರು ಪ್ರಮುಖ ಕಾರಣಗಳನ್ನು ನೀಡಬಹುದು. ಮತ್ತಷ್ಟು ಓದು »

28
ಆಗಸ್ಟ್

ಕಾಂಗ್ರೆಸ್ಸಿನ ವೈಚಾರಿಕತೆಯು ಇಸ್ಲಾಮಿಕ್ ಐಡಿಯಾಲಜಿಯ ಸೆಕ್ಯುಲರ್ ರೂಪವೇ?

– ವಿನಾಯಕ ಹಂಪಿಹೊಳಿ

ಕಾಂಗ್ರೆಸ್ ಹಾಗೂ ಕಮ್ಯುನಿಸ್ಟ್ ಪಕ್ಷಗಳ ಪರ ವಹಿಸುವ ಬುದ್ಧಿಜೀವಿಗಳು ಮತ್ತು ಜಾಕೀರ್ ನಾಯ್ಕ್ ಮುಂತಾದ ಇಸ್ಲಾಮಿಕ್ ಐಡಿಯಾಲಜಿಯ ಪ್ರಚಾರಕರು ವಾದಿಸುವ, ಪ್ರತಿಕ್ರಿಯಿಸುವ, ಸಮರ್ಥಿಸಿಕೊಳ್ಳುವ, ವಿರೋಧಿಸುವ ರೀತಿಗಳಲ್ಲಿ ಬಹಳ ಸಾಮ್ಯತೆಗಳಿವೆ ಎಂದು ನನಗೆ ಹಲವು ಸಲ ಅನಿಸಿದ್ದಿದೆ. ಈ ಎರಡೂ ಪಂಗಡಗಳು ಬೇರೆ ಬೇರೆ ಐಡಿಯಾಲಜಿಗಳನ್ನೇ ಹೊಂದಿದ್ದರೂ ಕೂಡ ಇವು ಮಂಡಿಸುವ ವಾದಗಳ ರೂಪರೇಷೆಗಳು ಒಂದೇ ತೆರನಾಗಿವೆ. ಇದನ್ನು ಅರಿಯಲು ಈ ಎರಡೂ ಗುಂಪುಗಳ ವಾದಸರಣಿಗಳನ್ನು ಹಾಗೂ ಪ್ರತಿಕ್ರಿಯೆಗಳನ್ನು ನೋಡೋಣ.

ಇಸ್ಲಾಮಿಕ್ ಸಂಘಟನೆಗಳಿಗೆ ಇಸ್ಲಾಮಿಕ್ ಐಡಿಯಾಲಜಿಯೇ ಸರ್ವಶ್ರೇಷ್ಠವಾಗಿದೆ. ಉಳಿದ ರಿಲಿಜನ್ನುಗಳು ಸುಳ್ಳು ರಿಲಿಜನ್ನುಗಳಾಗಿವೆ. ಸಂವಿಧಾನಕ್ಕಿಂತ ಕುರಾನೇ ಶ್ರೇಷ್ಠವಾಗಿದೆ. ಆದರೆ ಕಾಂಗ್ರೆಸ್ ಹಾಗೂ ಕಮ್ಯುನಿಸ್ಟ್ ಬುದ್ಧಿಜೀವಿಗಳು ತಾವು ಸೆಕ್ಯುಲರ್ ಆಗಿದ್ದು, ಮೂಲಭೂತವಾದಿಗಳಲ್ಲ ಎಂಬುದನ್ನು ಪದೇ ಪದೇ ಹೇಳುತ್ತಿರುತ್ತಾರೆ. ಭಾರತದಲ್ಲಿ ಸಂವಿಧಾನವೇ ಶ್ರೇಷ್ಠವಾಗಿದ್ದು, ರಿಲಿಜನ್ನುಗಳು ವೈಯಕ್ತಿಕವೆಂದು ಅವರು ಒಪ್ಪುತ್ತಾರೆ. ಇಸ್ಲಾಮಿಕ್ ಐಡಿಯಾಲಜಿಯ ಪ್ರಚಾರಕರಂತೆ ಕುರಾನೇ ಶ್ರೇಷ್ಠವೆಂಬ ಭಾವನೆ ಬುದ್ಧಿಜೀವಿಗಳಲ್ಲಿಲ್ಲ. ಅವರು ಕುರಾನ್ ಹಾಗೂ ಬೈಬಲ್ಲನ್ನು ಏಕರೀತಿಯಲ್ಲಿ ಗೌರವಿಸಬಲ್ಲರು ಹಾಗೂ ಎರಡರಿಂದಲೂ ಸಮಾನ ಅಂತರವನ್ನು ಕಾಯ್ದುಕೊಳ್ಳಬಲ್ಲರು. ಆದರೆ ಹಿಂದೂಗಳ ಕುರಿತು, ಹಿಂದೂ ಧರ್ಮಗ್ರಂಥಗಳೆಂದು ಕರೆಯಲ್ಪಡುವ ಕೃತಿಗಳ ಕುರಿತು ಬುದ್ಧಿಜೀವಿಗಳ ಅಭಿಪ್ರಾಯವು ಇಸ್ಲಾಂ ಮುಂತಾದ ಐಡಿಯಾಲಜಿಯನ್ನು ಪ್ರತಿಪಾದಿಸುವವರ ಅಭಿಪ್ರಾಯಕ್ಕಿಂತ ಎಷ್ಟು ಭಿನ್ನವಾಗಿದೆ ಎನ್ನುವದು ಈಗಿನ ಪ್ರಶ್ನೆ.

ಮೊದಲು ಜಾಕೀರ್ ನಾಯ್ಕ್ ಮುಂತಾದ ಇಸ್ಲಾಮಿಕ ಪ್ರಚಾರಕರು ಕೆಲವು ಪ್ರಶ್ನೆಗಳನ್ನು ಹೇಗೆ ಉತ್ತರಿಸುತ್ತಾರೆ ಎಂಬುದನ್ನು ಗಮನಿಸಿ. ಉದಾಹರಣೆಗೆ, ಅಸ್ಪೃಶ್ಯತೆಗೂ ಹಾಗೂ ಮನುಸ್ಮೃತಿಗೂ ಸಂಬಂಧವಿದೆಯೇ ಎಂದು ಜಾಕೀರ್ ಮುಂತಾದವರಿಗೆ ಕೇಳಿದರೆ ಅವರು ನಿರ್ಭಿಡೆಯಿಂದ ಹೌದು ಎನ್ನುತ್ತಾರೆ. ಮನುಸ್ಮೃತಿಯಲ್ಲಿ ಶೂದ್ರರ ಮೇಲಿರುವ ನಿಬಂಧನೆಗಳನ್ನು ತಿಳಿಸುವ ಶ್ಲೋಕಗಳನ್ನೆಲ್ಲ ಉದಾಹರಿಸಿ ಅದನ್ನು ಸಾಧಿಸುತ್ತಾರೆ. ಆಗ ಅದೇ ಸ್ಮೃತಿಯಲ್ಲಿ ಬರುವ ಬ್ರಾಹ್ಮಣರ ಮೇಲಿರುವ ನಿಬಂಧನೆಗಳನ್ನು ಹಾಗೂ ಶೂದ್ರರಿಗಿರುವ ವಿನಾಯಿತಿಗಳನ್ನು ಬೇಕೆಂದೇ ಮರೆಮಾಚುತ್ತಾರೆ.

ಮತ್ತಷ್ಟು ಓದು »

31
ಜನ

ಇಂದು ಕಂಬಳ, ನಾಳೆ ಜೋಡೆತ್ತಿನ ಗಾಡಿ, ಸಂಕ್ರಾಂತಿ, ನಾಡಿದ್ದು ಇನ್ನೇನೋ…?

– ಶಿವಕುಮಾರ ಪಿ.ವಿ.
ಸಂಶೋಧನಾ ವಿದ್ಯಾರ್ಥಿ
ರಾಜ್ಯಶಾಸ್ತ್ರ ವಿಭಾಗ, ಕುವೆಂಪು ವಿಶ್ವವಿದ್ಯಾನಿಲಯ.

860897a4867e00f161e4236fd7fe5aeeಪ್ರಾಣಿಗಳಿಗೆ ಹಿಂಸೆ ನೀಡಿ ಮನರಂಜನೆ ಪಡೆಯಲಾಗುತ್ತಿದೆ ಎಂಬುದು ಕಂಬಳ, ಜಲ್ಲಿಕಟ್ಟುವಿನಂತ ಕ್ರೀಡೆಗಳನ್ನು ನಿಲ್ಲಿಸಲು ಪ್ರಾಣಿದಯಾ ಸಂಘಗಳು ನೀಡುತ್ತಿರುವ ಕಾರಣ. ನ್ಯಾಯಾಲಯವೂ ಕೂಡ ‘ಪ್ರಾಣಿ ಹಿಂಸೆ’ಯ ಮಾನದಂಡವನ್ನಾದರಿಸಿ ಈ ಕ್ರೀಡೆಗಳಿಗೆ ನಿಷೇಧಾಜ್ಞೆಯನ್ನೂ ಹೇರುತ್ತಿದೆ. ಇದನ್ನಿಟ್ಟುಕೊಂಡೇ ನೋಡಿದರೆ, ಕೋಳಿ-ಕುರಿ, ದನಗಳನ್ನು ಕಡಿದು ತಿನ್ನುವುದು ಅವುಗಳ ಮಾರಣಹೋಮವಾಗಿ ಕಾಣಿಸಬೇಕಿತ್ತು. ಆದರೆ ಹಾಗಾಗುತ್ತಿಲ್ಲ. ಆಶ್ಚರ್ಯವೆಂದರೆ, ಪ್ರಾಣಿ ಹಿಂಸೆ, ಪ್ರಾಣಿ ಬಲಿಯನ್ನು ನಿಷೇಧಿಸಬೇಕೆನ್ನುವ ಸಕಲ ಪ್ರಾಣಿಗಳ ಜೀವಪರ ದಯಾಳುಗಳೆ ಬೀಫ್, ಮತ್ತಿತರ ಮಾಂಸ ಖಾದ್ಯಗಳನ್ನು, ಅವುಗಳ ರಕ್ತದ ಸೂಪನ್ನು ಚಪ್ಪರಿಸುತ್ತಿರುತ್ತಾರೆ. ಅದಕ್ಕಾಗಿ ಹೋರಾಟಗಳನ್ನೂ ಮಾಡುತ್ತಾರೆ. ಪ್ರಾಣಿಗಳನ್ನು ಬೇಕಾದರೆ ಕಡಿದು ತಿನ್ನಿ, ಆದರೆ ಅವುಗಳಿಗೆ ಹಿಂಸೆ ಕೊಡಬೇಡಿ ಎಂಬುದು ಇವರ ಆಕ್ಷೇಪಣೆ! ಹಾಗಾದರೆ, ಪ್ರಾಣಿ ಹಿಂಸೆಯ ಗುರಾಣಿಯ ಹಿಂದಿರುವ ತರ್ಕವೇನು, ಇವರ ನಿಜವಾದ ಕಾಳಜಿ ಪ್ರಾಣಿ ಹಿಂಸೆ ಮಾಡಬಾರದೆನ್ನುವುದೇ? ಮತ್ತಷ್ಟು ಓದು »

28
ಆಕ್ಟೋ

ದಲಿತರ ಹೆಗಲ ಮೇಲೆ ಬಂದೂಕಿಟ್ಟಿರುವ ಕೈಗಳು ಯಾರದ್ದು?

ರಾಕೇಶ್ ಶೆಟ್ಟಿ

udupi‘ಅಧಿಕಾರದಲ್ಲಿರುವ ಕಾಂಗ್ರೆಸ್ಸಿಗಿಂತಲೂ, ಅಧಿಕಾರದಲ್ಲಿರದ ಕಾಂಗ್ರೆಸ್ಸ್ ದೇಶಕ್ಕೆ ಅಪಾಯಕಾರಿ’ ಅಂತ ಗೆಳೆಯನೊಬ್ಬ ಆಗಾಗ್ಗೆ ಹೇಳ್ತಾ ಇರ್ತಾನೆ. 2014ರ ಮೇ 16 ರಂದು ಬಿಜೆಪಿ ಅಧಿಕಾರ ಹಿಡಿದ ದಿನದಿಂದ ಇವತ್ತಿನವರೆಗೂ ಕಾಂಗ್ರೆಸ್ಸ್ ಪಕ್ಷದವರ ಆರ್ಭಟಗಳನ್ನು ನೋಡಿದರೇ, ಗೆಳೆಯನ ಮಾತು ನಿಜವೆನಿಸುತ್ತದೆ. 2014ರ ಲೋಕಸಭಾ ಚುನಾವಣೆಯ ಫಲಿತಾಂಶ ಈ ಹಿಂದಿನ ಯಾವುದೇ ಚುನಾವಣೆಗಳಂತಿರಲಿಲ್ಲ. ಕಾಂಗ್ರೆಸ್ ಎಂಬ ಪುರಾತನ ಪಕ್ಷ ಮಕಾಡೆ ಮಲಗಿದರೇ, ಉಳಿದ ಅವಕಾಶವಾದಿ ಪ್ರಾದೇಶಿಕ, ಕೌಟುಂಬಿಕ, ಸೆಕ್ಯುಲರ್, ಕಮ್ಯುನಿಸ್ಟ್ ಪಕ್ಷಗಳು ಹೇಳ ಹೆಸರಿಲ್ಲದಂತಾದವು. ಮತ್ತಷ್ಟು ಓದು »

9
ಸೆಪ್ಟೆಂ

ಕಾಶ್ಮೀರ ಸಮಸ್ಯೆಯ ವರ್ತಮಾನ

– ಪ್ರೊ. ರಾಜಾರಾಮ ಹೆಗಡೆ

12-kashmir-protest-2ಕಾಶ್ಮೀರವು ಇಂದು ಕೇವಲ ಭಾರತ ಪಾಕಿಸ್ತಾನ ಎಂಬ ಎರಡು ರಾಷ್ಟ್ರಗಳ ನಡುವಿನ ಹಗೆಯ ಕಾರಣವಷ್ಟೇ ಅಲ್ಲ, ಭಾರತದಲ್ಲೇ ಆಂತರಿಕ ಹಗೆಯ ಹೊಗೆಯೆಬ್ಬಿಸುತ್ತಿರುವ ಒಂದು ವರ್ತಮಾನದ ಸಮಸ್ಯೆಯಾಗಿದೆ. ಹಾಗಾಗಿ ಕಾಶ್ಮೀರ ವಿವಾದವು ಹೇಗೆ ಪ್ರಾರಂಭವಾಯಿತು, ನಮ್ಮ ಮುತ್ಸದ್ದಿಗಳು ಎಲ್ಲಿ ಎಡವಿದರು ಎಂಬ ಹಿಸ್ಟರಿಗಿಂತ ಅದರ ತೆಕ್ಕೆಯೊಳಗೆ ಬರಲು ಸೋಲುವ ಅಥವಾ ನಿರಾಕರಿಸುವ ವರ್ತಮಾನದ ಆಯಾಮಗಳು ನನಗೆ ಸೋಜಿಗ ಹುಟ್ಟಿಸುತ್ತಿವೆ. ಇಂದು ಕಾಶ್ಮೀರವು ಭಾರತ ಪಾಕಿಸ್ತಾನಗಳ ಗಡಿ ಸಮಸ್ಯೆಯಾಗಿ ಉಳಿದಿಲ್ಲ, ಬದಲಾಗಿ ಅದು ದೇಶದ ಸಮಸ್ತ ಪ್ರಗತಿಪರ ಹೋರಾಟಗಾರರಿಗೂ, ಆಜಾದಿಯ ಕರೆಯಾಗಿ ಕಾಣಿಸುತ್ತಿದೆ ಎಂಬುದನ್ನು ಗಮನಿಸುವುದು ಅಗತ್ಯ. ಕೇವಲ ಮುಸ್ಲಿಂ ಸಂಘಟನೆಗಳೊಂದೇ ಅಲ್ಲ ಭಾರತದ ಪ್ರಗತಿಪರ ಸಂಘಟನೆಗಳೂ, ಕಾಶ್ಮೀರಿ ಮುಸ್ಲಿಂ ಹೋರಾಟಗಾರರ ಜೊತೆಗೆ ಆಜಾದಿಯ ಘೋಷಣೆ ಕೂಗುತ್ತಿವೆ. ದೇಶದ ಬರ್ಬಾದಿಯ ಕುರಿತು ಮಾತನಾಡುವುದು ಈ ಸಂಘಟನೆಗಳಿಗೆ ರಾಷ್ಟ್ರೀಯತೆಯ ಸಮಸ್ಯೆಯಾಗಿ ಕಾಣಿಸುತ್ತಿಲ್ಲ. ಬದಲಾಗಿ ಬಿಡುಗಡೆಯ ಕರೆಯಾಗಿ ಕಾಣಿಸುತ್ತಿದೆ. ಇಂಥ ಚಳವಳಿಗಳನ್ನು ಬೆಂಬಲಿಸುವ ಬುದ್ಧಿಜೀವಿಗಳಿಗೆ ಇಂಥ ಘೋಷಣೆಗಳು ನ್ಯಾಯಯುತವೆನಿಸತೊಡಗಿವೆ. ಈ ಪರಿಸ್ಥಿತಿಯು ನಮಗೆ ಎರಡು ಸವಾಲುಗಳನ್ನು ಸೃಷ್ಟಿಸಿದೆ: ಮತ್ತಷ್ಟು ಓದು »

7
ಸೆಪ್ಟೆಂ

ಫ್ರಾನ್ಸಿನ ಸೆಕ್ಯುಲರಿಸಂ ಮತ್ತು ಇಸ್ಲಾಮಿನ ಜಗಳದಲ್ಲಿ ಭಾರತಕ್ಕೇನು ಪಾಠ?

– ವಿನಾಯಕ ಹಂಪಿಹೊಳಿ

726567-burqaಸದ್ಯಕ್ಕೆ ಫ್ರಾನ್ಸಿನಲ್ಲಿ ಬುರ್ಕ ಬ್ಯಾನ್ ಕುರಿತು ಚರ್ಚೆ ನಡೆಯುತ್ತಿದೆ. ಬುರ್ಕಾ ಬ್ಯಾನ್ ತುಂಬಾ ಹಿಂದೆಯೇ ಆಗಿದೆ. ಈ ರೀತಿಯ ನಿಷೇಧಗಳಿಗೆ ಫ್ರಾನ್ಸ್ ಕೊಡುತ್ತಿರುವ ಕಾರಣ ರಿಲಿಜನ್ನುಗಳು ಪ್ರತಿಪಾದಿಸುವ ವಸ್ತ್ರಸಂಹಿತೆಯನ್ನು ಪಬ್ಲಿಕ್ ವಲಯದಲ್ಲಿ ಪಾಲಿಸುವುದು ಅಲ್ಲಿನ ಸೆಕ್ಯುಲರಿಸಂ ಐಡಿಯಾಲಜಿಯೊಂದಿಗೆ ಸರಿಹೊಂದದಿರುವದು. ಫ್ರಾನ್ಸಿನಲ್ಲಿ ಪ್ರಜಾಪ್ರಭುತ್ವದ ಆಡಳಿತವನ್ನು ಚರ್ಚಿನಿಂದ ಪ್ರತ್ಯೇಕಿಸುವ ಪ್ರಕ್ರಿಯೆ ತುಂಬ ಕಟ್ಟುನಿಟ್ಟಾಗಿತ್ತು. ಫ್ರಾನ್ಸಿನ ಸೆಕ್ಯುಲರಿಸಂ ರಿಲಿಜನ್ನನ್ನು ಕೇವಲ ರಾಜಕೀಯದಿಂದಷ್ಟೇ ಪ್ರತ್ಯೇಕಿಸುವದಷ್ಟೇ ಅಲ್ಲ, ಫ್ರಾನ್ಸ್ ದೇಶವು ಯಾವ ರಿಲಿಜನ್ನಿನೊಂದಿಗೂ ಗುರುತಿಸಿಕೊಳ್ಳಬಾರದು ಎನ್ನುವದು ಅದರ ಆಶಯ. ಆದ್ದರಿಂದ ಫ್ರಾನ್ಸ್ ದೇಶವು ತನ್ನನ್ನು ತಾನು ರಿಪಬ್ಲಿಕ್ ಮತ್ತು ಸೆಕ್ಯುಲರ್ ದೇಶವೆಂದು ಘೋಷಿಸಿಕೊಂಡಿತ್ತು. ಈ ರೀತಿಯ ಲಿಬರಲ್ ಸೆಕ್ಯುಲರಿಸಂ ಅನ್ನು ಬರೀ ಕ್ರಿಶ್ಚಿಯನ್ನರೇ ತುಂಬಿಕೊಂಡಿದ್ದ ದೇಶದಲ್ಲಿ ಈ ರೀತಿಯ ಸೆಕ್ಯುಲರಿಸಂ ಅನ್ನು ಜಾರಿಗೆ ತರುವದು ಅಷ್ಟು ಕಷ್ಟವಾಗಿರಲಿಲ್ಲ. ಮತ್ತಷ್ಟು ಓದು »

24
ಏಪ್ರಿಲ್

ಶನಿಯ ಬೆನ್ನೇರಿದ ಕಾಕ, ಇದೆಲ್ಲ ನಾಟಕ ಯಾಕ?

– ರೋಹಿತ್ ಚಕ್ರತೀರ್ಥ

shani-shingnapur_650x400_41460171606ನಮ್ಮ ದೇಶದಲ್ಲಿ ಖರ್ಚಿಲ್ಲದೆ ಪ್ರಸಿದ್ಧಿ ಒದಗಿಸುವ ಎರಡು ಸಂಗತಿಗಳಿವೆ. ಒಂದು ಬುದ್ಧಿಜೀವಿಯಾಗುವುದು, ಇನ್ನೊಂದು ಮಹಿಳಾವಾದಿಯಾಗುವುದು. ಬುದ್ಧಿಜೀವಿಯಾಗಬೇಕಾದರೆ ನೀವು ಸೆಕ್ಯುಲರ್ ಎಂದು (ಏನೆಂದು ಗೊತ್ತಿರದಿದ್ದರೂ) ತೋರಿಸಿಕೊಳ್ಳಬೇಕು. ಹಿಂದೂಗಳನ್ನು, ಅವರ ಆಚರಣೆ, ಪದ್ಧತಿ, ಹಬ್ಬಹರಿದಿನಗಳನ್ನು ಬಯ್ಯಬೇಕು. ಹಿಂದೂ ದೇವರನ್ನು, ದೇವಾಲಯಗಳನ್ನು ಪ್ರಶ್ನಿಸಬೇಕು. ಮುಸ್ಲಿಂ ಮತ್ತು ಕ್ರಿಶ್ಚಿಯನ್ ರಿಲಿಜನ್ನುಗಳನ್ನು ಓಲೈಸಬೇಕು. ಮೋದಿಯನ್ನು ತೆಗಳಬೇಕು. ಭಯೋತ್ಪಾದಕರನ್ನು, ನಕ್ಸಲರನ್ನು ಬೆಂಬಲಿಸಬೇಕು. ಎಲ್ಲಕ್ಕಿಂತ ಮುಖ್ಯವಾಗಿ ನಿಮಗೆ ಬೆನ್ನುಮೂಳೆ ಇರಬಾರದು. ಜೊತೆಗೆ, ಅರ್ಥವತ್ತಾದ ಮಾತು, ತರ್ಕಬದ್ಧವಾದ ಚಿಂತನೆ – ಇವೆರಡರ ಬಗ್ಗೆ ನೀವು ಎಂದೆಂದೂ ತಲೆ ಕೆಡಿಸಿಕೊಂಡಿರಬಾರದು. ಹಾಗೆಯೇ, ಮಹಿಳಾವಾದಿಯಾಗುವುದು ಕೂಡ ಸುಲಭ. ಮೊದಲಿಗೆ ಮಹಿಳಾವಾದ = ಪುರುಷದ್ವೇಷ ಎಂಬ ಸಮೀಕರಣ ಬರೆಯಿರಿ. ಮಹಿಳೆಗೆ ಸ್ವಾತಂತ್ರ್ಯ ಬೇಕು ಅನ್ನಿ. ಉದ್ಯೋಗದಲ್ಲಿ, ಸಂಸತ್ತಿನಲ್ಲಿ, ಬಸ್ಸಿನಲ್ಲಿ, ಚಿತ್ರಮಂದಿರದಲ್ಲಿ, ನಡೆದಾಡುವ ರಸ್ತೆಯಲ್ಲಿ – ಹೀಗೆ ಎಲ್ಲೆಲ್ಲೂ ಹೆಣ್ಣಿಗೆ ಸಮಾನತೆ ಬೇಕೆಂದು ಬೊಬ್ಬೆ ಹೊಡೆಯಿರಿ. ಉದ್ಧೇಶವೇ ಇಲ್ಲದೆ ಪ್ರತಿಭಟನೆ ಮಾಡಿದರೂ ಓಕೆ. ವಿರೋಧಿಸದವರಿಗೂ ಧಿಕ್ಕಾರ ಕೂಗಿದರೂ ಓಕೆ. ಒಟ್ಟಲ್ಲಿ ನಿಮ್ಮ ಮಾತು, ಕೂಗಾಟ, ಹಾರಾಟ, ಹೋರಾಟವೆಲ್ಲ ನಾಲ್ಕು ಜನಕ್ಕೆ ಗೊತ್ತಾಗಬೇಕು, ಪತ್ರಿಕೆ ಟಿವಿಗಳಲ್ಲಿ ಬರಬೇಕು. ಮತ್ತು ಇವೆಲ್ಲದರ ಜೊತೆ, ನೀವು, ಮೇಲೆ ಹೇಳಿದ ಬುದ್ಧಿಜೀವಿಯೂ ಆಗಿರಬೇಕಾದ್ದು ಅನಿವಾರ್ಯ. ಎರಡು ವರ್ಷಗಳ ಹಿಂದೆ ಒಂದು ಬುದ್ಧಿಜೀವಿ ಮಹಿಳಾಪರ ಲೇಖಕಿ, “ಮೋದಿಯ ಮುಖ ನೋಡಿದರೇನೇ ಆತ ಸ್ತ್ರೀದ್ವೇಷಿ ಅನ್ನೋದು ಗೊತ್ತಾಗುತ್ತದೆ” ಎಂದಿದ್ದರು. ಇಂಥ ಹೇಳಿಕೆ ಕೊಡುವವರಿಗೆ ಮಹಿಳಾಪರ ಸಂಘಟನೆಗಳಲ್ಲಿ ಒಳ್ಳೆಯ ಬೇಡಿಕೆ ಇದೆ. ಮತ್ತಷ್ಟು ಓದು »

23
ಏಪ್ರಿಲ್

ಪ್ರತ್ಯೇಕ ಪಂಕ್ತಿ ಭೋಜನ : “ಸಂಪ್ರದಾಯ”ದ ಮುಸುಕಿನ “ಅನಾಗರೀಕ” ವರ್ತನೆಯ ಸುತ್ತ

– ರಾಕೇಶ್ ಶೆಟ್ಟಿ

ಪ್ರತ್ಯೇಕ ಪಂಕ್ತಿ ಬೇಧಉಡುಪಿಯ ಮಠ ಸದಾಕಾಲ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಲ್ಲಿರುತ್ತದೆ. ಅದರಲ್ಲೂ ಬಹುಪಾಲು ಅದು ಸುದ್ದಿಯಾಗುವುದು ವಿವಾದಗಳಿಂದಲೇ, ಹಲವು ಬಾರಿ ಅದು ಪೇಜಾವರ ಶ್ರೀಗಳ ಯಾವುದೋ ಹೇಳಿಕೆಯ ಮೂಲಕವೇ ಸುದ್ದಿಯಾದರೇ ಉಳಿದಂತೆ ಅದು ಮತ್ತೆ ಮತ್ತೆ ಸುದ್ದಿಯಾಗುವುದು  ‘ಪ್ರತ್ಯೇಕ ಪಂಕ್ತಿ ಭೋಜನ’ದ ಕಾರಣಕ್ಕೆ.

ಏನಿದು ಮತ್ತೆ ಈ ವಿವಾದ ಅಂತ ನೋಡಲಿಕ್ಕೆ ಹೋದರೆ :  ಕೃಷ್ಣ ಮಠದ ಭೋಜನ ಶಾಲೆಯಲ್ಲಿ ಶನಿವಾರ (ಏ 19) ಬಂಟ್ಸ್ ಸಮುದಾಯದ ಮಹಿಳೆಯೊಬ್ಬರು ತನ್ನ ಸ್ನೇಹಿತೆಯರ ಜೊತೆ ಊಟಕ್ಕೆ ಕುಳಿತಿದ್ದರು. ಮಹಿಳೆ ಊಟ ಮಾಡುತ್ತಿರುವ ಸಂದರ್ಭದಲ್ಲಿ ಮಠದ ಅಧಿಕಾರಿಗಳು ಬ್ರಾಹ್ಮಣರೇತರರಿಗೆ ಇಲ್ಲಿ ಊಟಕ್ಕೆ ಅವಕಾಶವಿಲ್ಲ ಎಂದು ಮಹಿಳೆಯನ್ನು ಊಟದ ಮಧ್ಯದಲ್ಲೇ ಎಬ್ಬಿಸಿದ್ದಾರೆ ಎನ್ನುವುದು ವಿವಾದ.

“ನಾನು ಉಡುಪಿ ಮೂಲದವಳು, ವೈದ್ಯಕೀಯ ಕ್ಷೇತ್ರದವಳು. ನಾನು ಚೌಕಿಯಲ್ಲಿ (ಬ್ರಾಹ್ಮಣರಿಗಾಗಿರುವಊಟದ ಹಾಲ್) ಊಟಕ್ಕೆ ಕುಳಿತಿಲ್ಲ.ಭೋಜನ ಶಾಲೆಯಲ್ಲಿ ಊಟಕ್ಕೆ ಕೂತೆ. ಅಲ್ಲಿ ಇತರ ಜಾತಿಯವರಿಗೆ ಊಟದ ವ್ಯವಸ್ಥೆ ಇಲ್ಲ ಎನ್ನುವುದಾದರೆ ಫಲಕ ಹಾಕಬೇಕಿತ್ತು. ತುಂಬಿದ ಊಟದ ಹಾಲಿನಲ್ಲಿ ಎಲ್ಲರ ಮುಂದೆ ನನ್ನನ್ನು ಊಟ ಮಾಡುತ್ತಿರಬೇಕಾದರೆ ಎಬ್ಬಿಸಿ ಹೊರಕ್ಕೆಕಳುಹಿಸಿದರು. ಸ್ನೇಹಿತೆಯರ ಮುಂದೆ ನನಗೆ ತುಂಬಾ ಅವಮಾನವಾಗಿದೆ.ನನಗಾದ ಪರಿಸ್ಥಿತಿ ಬೇರೆಯಾರಿಗೂ ಬರುವುದು ಬೇಡ “

ಇದು,ಉಡುಪಿಯ ಶ್ರೀಕೃಷ್ಣ ದೇವಸ್ಥಾನದ ಭೋಜನಶಾಲೆಯಿಂದ “ಅನಾಗರೀಕ”ರ ಕೈಯ್ಯಿಂದ ಹೊರಹಾಕಲ್ಪಟ್ಟ ಹೆಣ್ಣು ಮಗಳೊಬ್ಬಳ ನೋವಿನ ನುಡಿಗಳು.

ಈಗೀನ ಕಾಲದಲ್ಲೂ ಊಟಕ್ಕೆ ಕೂತವರನ್ನು ಅವರ ಚರ್ಮದ / ಜಾತಿಯ ಬಣ್ಣದಿಂದ ಗುರುತಿಸಿ ಎಬ್ಬಿಸುವ ಅನಾಗರೀಕರು ನಮ್ಮ ನಡುವೆ ಬದುಕುತಿದ್ದಾರೆ ಅನ್ನುವುದೇ ನಾಗರೀಕ ಸಮಾಜವೊಂದುತಲೆ ತಗ್ಗಿಸುವ ವಿಚಾರ. ಊಟದ ಸಮಯದಲ್ಲಿ ಮಾತ್ರ ಬೇರೆ ಜಾತಿಯವರು ಬೇಡ ಅನ್ನುವುದಾದರೇ,ಬೇರೆ ಜಾತಿಯವರು ಕೊಡುವ ದೇಣಿಗೆ,ಕಾಣಿಕೆಗಳೇಕೆ ಬೇಕು ಇವರಿಗೆ? ಪರಮಾತ್ಮ ಶ್ರೀ ಕೃಷ್ಣ ಇವರ ಖಾಸಗಿ ಸ್ವತ್ತಾದರೇ, ಹಾಗೆ ಹೇಳಿ ಬಿಡುವುದೊಳಿತು. ಆಗ ಯಾರು ಅಲ್ಲಿಗೆ ಹೋಗಿ ಹೀಗೆ ಅವಮಾನ ಮಾಡಿಸಿಕೊಂಡು ಬರಲಿಚ್ಛಿಸುವುದಿಲ್ಲ.

–*–*–*–

ಮತ್ತಷ್ಟು ಓದು »