ಪುಲ್ವಾಮ ದಾಳಿ: ಭಾರತ ಕಲಿತ ಪಾಠ
– ವರುಣ್ ಕುಮಾರ್
ಫೆಬ್ರವರಿ ೧೪ನೇ ತಾರೀಖು ಭಾರತದ ಸೈನಿಕರ ಪಾಲಿಗೆ ಅತ್ಯಂತ ಕರಾಳ ದಿನ. ಕಳೆದ ದಶಕದಲ್ಲಿಯೇ ನಡೆದ ಅತ್ಯಂತ ಘೋರ ಉಗ್ರರ ದಾಳಿ ಅಮಾಯಕ ಸೈನಿಕರ ಸಾವಿಗೆ ಕಾರಣವಾಗಿ ಇಡೀ ದೇಶವೇ ಮಮ್ಮಲ ಮರುಗಿತು. ಪ್ರಪಂಚದೆಲ್ಲೆಡೆಯಿಂದ ಈ ಘಟನೆಯ ಬಗ್ಗೆ ಖಂಡನೆ ವ್ಯಕ್ತವಾಗಿ ಭಾರತದ ಜೊತೆ ನಾವಿದ್ದೇವೆ ಎಂಬ ಸಂದೇಶವನ್ನು ರವಾನಿಸಿ ಬೆಂಬಲವನ್ನು ವ್ಯಕ್ತಪಡಿಸಿದರು. ಈ ದಾಳಿಯ ಬಳಿಕ ಭಾರತದಲ್ಲಿ ನಡೆದ ಬೆಳವಣಿಗೆಗಳ ಹಾಗೂ ಈ ದಾಳಿಯಿಂದ ಭಾರತ ಕಲಿಯಬೇಕಾದ ಪಾಠಗಳೇನು ಎಂಬುದಾಗಿ ವಿಶ್ಲೇಷಿಸೋಣ.
ಭಾರತದೊಳಗಿನ ಉಗ್ರರು:
ಹೌದಲ್ಲವೇ, ನಮಗೆ ಈ ಉಗ್ರರದಾಳಿಯ ಬಳಿಕ ಹಲವಾರು ಉಗ್ರರು ನಮ್ಮ ದೇಶದೊಳಗೆ ಅಣಬೆಗಳಂತೆ ಹುಟ್ಟಿಕೊಳ್ಳತೊಡಗಿದರು. ಪಾಕಿಸ್ತಾನ್ ಜಿಂದಾಬಾದ್, ಇದು ನಿಜವಾದ ಸರ್ಜಿಕಲ್ ಸ್ಟ್ರೈಕ್ ಇತ್ಯಾದಿ ಬರಹಗಳನ್ನು ಒಳಗೊಂಡ ಅನೇಕ ದೇಶದ್ರೋಹಿ ಪೋಸ್ಟ್ ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಲಾರಂಭಿಸಿದರು. ಪಂಜಾಬ್ ಎಂದಿಗೂ ದೇಶಪ್ರೇಮಿಗಳನ್ನು ಕೊಟ್ಟಂತಹ ರಾಜ್ಯ ಆದರೆ ಅದೇ ರಾಜ್ಯದ ಸಚಿವನಾದ ಸಿಧುರವರು ಪಾಕಿಸ್ತಾನದ ಜೊತೆ ಮಾತುಕತೆ ಭಾರತ ಮುಂದಾಗಬೇಕು ಎಂದು ಸಲಹೆ ನೀಡಿದರು. ಇದರ ಬೆನ್ನಿಗೆ ಸಮಯಕ್ಕೆ ತಕ್ಕಂತೆ ಬಣ್ಣ ಬದಲಾಯಿಸುವ ಪ್ರಕಾಶ್ ರೈ ಒಂದು ಹಂತದಲ್ಲಿ ಭಾರತದ ಜೊತೆ ನಾವಿದ್ದೇವೆ ಎಂದು ಬೆಂಬಲ ನೀಡಿದರು. ಆದರೆ ಮರುದಿನ ಬಿಜೆಪಿಯ ಬಗ್ಗೆ ಮೋದಿಯವರ ಬಗ್ಗೆ ಟೀಕಿಸಿ ಘಟನೆಯನ್ನು ರಾಜಕೀಯಗೊಳಿಸಿದರು. ಕಮಲ್ ಹಾಸನ್ ಅಂತಹ ಸ್ವಯಂಘೋಷಿತ ನಾಯಕರು ಸೈನಿಕರು ಸಾಯಲೆಂದೇ ಸೇನೆಗೆ ಸೇರುತ್ತಾರೆ ಎಂದು ಹೇಳಿಕೆಗಳನ್ನು ಕೊಟ್ಟಾಗ ಇದು ಹುತಾತ್ಮರಾದ ಸೈನಿಕರ ಕುಟುಂಬಗಳಿಗೆ ಯಾವ ರೀತಿ ನೋವಾಗಬಹುದು ಎಂಬ ಕಾಳಜಿಯಿಲ್ಲದೆ ಮಾತನಾಡಿದರು. ಮತ್ತಷ್ಟು ಓದು
ಯೋಧನ ಮಾತುಗಳಲ್ಲಿ…
ಸುರೇಶ್ ಮುಗ್ಬಾಳ್
ತಿಪಟೂರು
ಛತ್ತೀಸಘಡದಲ್ಲಿನ ನಕ್ಸಲರ ಕ್ರೌರ್ಯಕ್ಕೂ, ಹತ್ಯೆಯಾದ 25 ಯೋಧರಿಗೂ ಅದೇನು ದ್ವೇಷಗಳಿತ್ತೋ ಏನೋ ಯಾರಿಗೂ ಗೊತ್ತಿಲ್ಲ. ಆದರೆ 300 ಜನ ನಕ್ಸಲರ ಗುಂಪು ಏಕಾ-ಏಕಿ CRPF ಯೋಧರಿದ್ದಲ್ಲಿಗೆ ನುಗ್ಗಿ ಒಂದೇ ಸಮನೆ ಗುಂಡು ಹಾರಿಸಿಬಿಟ್ಟಿದ್ದರು. ಕಾರಣ; ಗುಂಡುಹಾರಿಸಿಕೊಂಡು ಸತ್ತವರೆಲ್ಲಾ ಯೋಧರಾಗಿದ್ದರು, ಸೇನಾ ಸಮವಸ್ತ್ರದಲ್ಲಿದ್ದರು ಮತ್ತು ಸರ್ಕಾರದ ಪರ ಕೆಲಸ ಮಾಡುವವರಾಗಿದ್ದರು ಅಷ್ಟೇ. ವೈಯಕ್ತಿಕ ದ್ವೇಷ ಖಂಡಿತ ಯಾರಿಗೂ ಇದ್ದಿರಲಿಕ್ಕಿಲ್ಲ. ಮತ್ತಷ್ಟು ಓದು
ಸರ್ಜಿಕಲ್ ಆಪರೇಶನ್
– ವಿನಾಯಕ ಹಂಪಿಹೊಳಿ
ಸರ್ಜರಿ ಎಂದರೆ ಶಸ್ತ್ರಚಿಕಿತ್ಸೆ. ದೇಹದ ಒಂದು ಭಾಗಕ್ಕೆ ಚಿಕಿತ್ಸೆ ಅಗತ್ಯವಾದಲ್ಲಿ ಅಲ್ಲಷ್ಟೇ ದೇಹವನ್ನು ಕೊಯ್ಯುವಂತೆ, ಸೈನಿಕ ಕಾರ್ಯಾಚರಣೆಯಲ್ಲಿಯೂ ಒಂದಾನೊಂದು ಪ್ರದೇಶದಲ್ಲಷ್ಟೇ ನಡೆಸುವ ಸೀಮಿತ ಕಾರ್ಯಾಚರಣೆಯೇ ಸರ್ಜಿಕಲ್ ಆಪರೇಶನ್. ಅಮೇರಿಕದ ಸೈನ್ಯ ಒಸಾಮಾ ಬಿನ್ ಲಾಡೆನ್ ವಾಸವಾಗಿರುವ ಸ್ಥಳದ ಮಾಹಿತಿ ತಿಳಿದಾಗ ಹೀಗೆಯೇ ದಾಳಿ ಮಾಡಿತ್ತು. ಈ ಹಿಂದೆ ಇರಾಕಿನಲ್ಲಿ ನ್ಯೂಕ್ಲಿಯರ್ ಚಟುವಟಿಕೆಗಳು ನಡೆಯುತ್ತಿರುವ ಮಾಹಿತಿ ಸಿಕ್ಕಾಗ ಇಸ್ರೇಲ್ ದೇಶವು ಒಪೆರಾ ಕಾರ್ಯಾಚರಣೆಯನ್ನು ರೂಪಿಸಿ, ತನ್ನ ವಾಯುಸೇನೆಯನ್ನು ಉಪಯೋಗಿಸಿಕೊಂಡು ಆ ನ್ಯೂಕ್ಲಿಯರ್ ರಿಯಾಕ್ಟರನ್ನು ಧ್ವಂಸ ಮಾಡಿ ಬಂದಿತ್ತು. ಇಸ್ರೇಲಿನ ವಿಮಾನವೊಂದನ್ನು ಅಪಹರಿಸಿ ದೂರದ ಎಂಟೆಬ್ಬೆಯಲ್ಲಿ ಇಳಿಸಿದಾಗ ಆಪರೇಶನ್ ಥಂಡರ್ಬೋಲ್ಟ್ ಯೋಜಿಸಿ ಏಕಾಏಕಿ ಅಲ್ಲಿನ ಭಯೋತ್ಪಾದಕರ ಮೇಲೆ ದಾಳಿ ಮಾಡಿ ಬಂಧಿತರನ್ನು ಬಿಡುಗಡೆಗೊಳಿಸಿತು. ಮತ್ತಷ್ಟು ಓದು
ಸುಮ್ಮ ಸುಮ್ಮನೆ ಬರಲಿಲ್ಲ ಕನ್ನಡಕ್ಕೆ ಮಹಾವೀರ ಚಕ್ರ ; ಇವರು ಮಹಾವೀರತೆಯ ಜೀವಂತ ಸ್ಮಾರಕ
– ಸಂತೋಷ್ ತಮ್ಮಯ್ಯ
ದೇಶದ ಎರಡನೆಯ ಅತಿದೊಡ್ಡ ಶೌರ್ಯ ಪದಕ ಮಹಾವೀರ ಚಕ್ರ ಪದಕದ ಗೌರವಕ್ಕೆ ಪಾತ್ರರಾದ ಇಬ್ಬರು ಮಹಾಯೋಧರಲ್ಲಿ ಲೆ.ಕರ್ನಲ್ ಪಿ.ಎಸ್. ಗಣಪತಿ ಎರಡನೆಯವರು. ಅವರ ಬಗ್ಗೆ ಪತ್ರಿಕೆಗಳಲ್ಲಿ ಬಂದಿಲ್ಲ, ಟಿ ವಿ ಅವರ ಸಂದರ್ಶನ ನಡೆಸಿಲ್ಲ. ಅವರು ಸಭೆ ಸಮಾರಂಭಗಳಿಗೆ ಹೋಗಿಲ್ಲ. ಅವರ ಬಗ್ಗೆ ನಾಡಿನ ಜನಕ್ಕೆ ಏನೆಂದರೆ ಏನೂ ತಿಳಿದಿಲ್ಲ. ಅವರ ಸಂಪರ್ಕ ಸಂಖ್ಯೆ: 9980009687
ನೋಡಲು ಅದೊಂದು ಲೋಹದ ಬಿಲ್ಲೆ. ಅದರಲ್ಲಿ ನಕ್ಷತ್ರದ ಚಿಹ್ನೆ. ಅದರ ಅಂಚಿನಲ್ಲಿ ಕಂಡೂ ಕಾಣದಂತೆ ಕೆತ್ತಿದ ಪಡೆದವರ ಹೆಸರು, ಪಡೆದ ದಿನಾಂಕ. ಕದನಕ್ಕೆ ತೆರಳಿದ ಪ್ರತೀ ಯೋಧನಿಗೂ ಅದನ್ನು ಪಡೆಯುವ ಅದಮ್ಯ ಹಂಬಲ. ಏಕೆಂದರೆ ಅದು ವೀರತೆಯ ಪ್ರತೀಕ. ಹೆಸರು ಮಹಾವೀರ ಚಕ್ರ. ಯುದ್ಧಕಾಲದಲ್ಲಿ ಮಹಾಪರಾಕ್ರಮಕ್ಕೆ ನೀಡುವ ಎರಡನೆಯ ಅತೀ ದೊಡ್ಡ ಶೌರ್ಯ ಪ್ರಶಸ್ತಿ. ಬ್ರಿಟಿಷ್ ಸೈನ್ಯದಲ್ಲಿ ‘ಡಿಶ್ಟಿಂಗ್ವಿಸ್ಡ್ ಸರ್ವೀಸ್ ಕ್ರಾಸ್’ ಹೇಗೋ ಹಾಗೆ ಭಾರತಕ್ಕೆ ಈ ಮಹಾವೀರ ಚಕ್ರ. ಮಹಾ ಸಮರಪಡೆಯನ್ನು ಹೊಂದಿರುವ ಭಾರತದಲ್ಲಿ ೧೯೪೭ರಿಂದ ಇದುವರೆಗೆ ಮಹಾವೀರ ಚಕ್ರದ ಗೌರವಕ್ಕೆ ಪಾತ್ರರಾದವರು ಕೇವಲ ೨೧೮ ಮಂದಿ ವೀರರು. ಅವರಲ್ಲಿ ೬ ಜನ ಯೋಧರು ಮಹಾವೀರ ಚಕ್ರವನ್ನು ಎರಡೆರಡು ಬಾರಿ ಪಡೆದ ವೀರರಲ್ಲಿ ವೀರರು (MahaVira chakra bar). ಹೀಗಿರುವಾಗ ಭಾರತೀಯ ಸೈನ್ಯಕ್ಕೆ ಮಹಾಮಹಾ ಯೋಧರನ್ನು ನೀಡಿದ ನಮ್ಮ ಕರ್ನಾಟಕದಲ್ಲಿ ಇದನ್ನು ಪಡೆದವರಾರು ಎಂದು ನೋಡಿದರೆ ಕಾಣುವವರು ಕನ್ನಡದ ಇಬ್ಬರು ಮಹಾರ ಚಕ್ರಧರರು. ಅವರಲ್ಲೊಬ್ಬರು ‘ಟೈಗರ್ ಆಫ್ ಸರ್ಗೋದಾ’ ಎಂದು ಖ್ಯಾತರಾದ ಸ್ಕ್ವಾ.ಲೀ.ಅಜ್ಜಾಮಾಡ ಬಿ.ದೇವಯ್ಯ. ಮತ್ತೊಬ್ಬರು ಮೇ.(ನಂತರ ಲೆ.ಕರ್ನಲ್)ಪಿ.ಎಸ್ ಗಣಪತಿ. ಒಬ್ಬರು ಅಮರಯೋಧ. ಮತ್ತೊಬ್ಬರು ಮಹಾವೀರತೆಯ ಜೀವಂತ ಸ್ಮಾರಕ. ಮತ್ತಷ್ಟು ಓದು
ಜನರಲ್ ತಿಮ್ಮಯ್ಯ
– ಸಿ. ರವಿ ಕುಮಾರ್
ಒಂದು ದಿನ ನನ್ನ ತಂದೆಯವರು ತಮ್ಮ ಬಳಿ ಇದ್ದ ಮಿಲಿಟರಿ ಇತಿಹಾಸ ಈ ಒಂದು ಘಟನೆಯನ್ನು ತಿಳಿಸಿದರು. ಅದನ್ನು ಕೇಳಿದ ಮೇಲೆ ಬಹುಶಃ ನಮ್ಮ ಅಂದಿನ ಪ್ರಧಾನಿ ನೆಹರುರವರು ಈ ವ್ಯಕ್ತಿಯ ಅನುಭವವನ್ನು ಬಳಸಿಕೊಂಡಿದ್ದರೆ 1962ರ ಚೇನದೊಡನೆ ನಡೆದ ಯುದ್ಧದ ಗತಿ ಬದಲಾಗುತ್ತಿತ್ತೊ ಏನೊ? `ಅಪ್ಪಣೆ ಮೀರಿ ತಿಮ್ಮಯ್ಯ ಗೆದ್ದಾಗ’ ಎರಡನೇ ಮಹಾಯುದ್ಧದ ಮಧ್ಯಕಾಲ. ಜಪಾನಿ ಪಡೆಗಳು ಬರ್ಮಾ ದೇಶದಲ್ಲಿ ಹೊಕ್ಕು ಎತ್ತೆತ್ತಲೂ ಹಬ್ಬಿದ್ದವು. ಇರಾವತೀ ನದಿಯ ಕಣಿವೆ ಜಪಾನೀಯರ ವಶವಾಗಿ ಬ್ರಹ್ಮಪುತ್ರಾ ಕಣಿವೆಯೀಗ ಅವರ ತೋಪುಗಳ ಗರ್ಜನೆಯಿಂದ ಪ್ರತಿಧ್ವನಿಸುತ್ತಿತ್ತು. ಬ್ರಿಟಿಶ್ ಸಾಮ್ರಾಜ್ಯವಾದದ ಪರಕ್ರಮ ಸೂರ್ಯ ಅಕಾಲದಲ್ಲೇ ಅಸ್ತಂಗತನಾಗಿದ್ದ. ಬೆಟ್ಟದ ಒಂದು ಕೋಡಿನಲ್ಲಿ ಇನ್ನೂರೈವತ್ತು ಜಪಾನೀ ಸೈನಿಕರು ಕಂದಕ ತೋಡಿ ಬಲವಾಗಿ ತಳವೂರಿದ್ದರು. ಆ ಶೃಂಗದ ಕೆಳಗೆ ಕಡಿದಾದ ಬೆಟ್ಟದ ಗೋಡೆಗೆ ಅಂಟಿಕೊಂಡು ಭಾರತ ಸೈನ್ಯದ ಕುಮಾಂವ್ ರೆಜಿಮೆಂಟಿನ ಜವಾನರು ಟೆಂಟ್ ಹಾಕಿದ್ದರು. ಎರಡು ಸೈನ್ಯದ ಸೈನಿಕರು ತಮ್ಮ ತಮ್ಮ ನೆಲೆಗಳನ್ನು ಭದ್ರಪಡಿಸಿಕೊಂಡು ಮುನ್ನುಗುವ ದಾರಿಯನ್ನು ಯೋಚಿಸುತ್ತಿದ್ದವು. ಮತ್ತಷ್ಟು ಓದು
ಸಾಯದ ಹೊರತು ನಿಮಗವನ ಹೆಸರು ಕೂಡ ಗೊತ್ತಿರುವುದಿಲ್ಲ…
– ರೋಹಿತ್ ಚಕ್ರತೀರ್ಥ
ಅವನೊಬ್ಬನಿದ್ದ. ತನ್ನ ಮನೆಯ ಒಂದು ಭಾಗದಲ್ಲಿ ಅಂಗಡಿ ಇಟ್ಟುಕೊಂಡಿದ್ದ. ಪ್ರತಿದಿನ ಬೆಳಗ್ಗೆ ಮನೆಯ ಒಳಗಿಂದ ಷಟರ್ ತೆಗೆದು ಅಂಗಡಿ ತೆರೆಯುತ್ತಿದ್ದ. ಆದರೆ ಪ್ರತಿದಿನ ಆ ಕಬ್ಬಿಣದ ಬಾಗಿಲನ್ನು ಮೇಲಕ್ಕೆ ಸರಿಸುವಾಗ ಆತನ ಕಣ್ಣಿಗೆ ಮೊದಲು ಬೀಳುತ್ತಿದ್ದದ್ದು, ಅಂಗಡಿಯ ಎದುರಿಗೇ ಮಲಗಿರುತ್ತಿದ್ದ ಒಬ್ಬ ಭಿಕ್ಷುಕ. ಕೆದರಿದ, ಎಣ್ಣೆ ಕಾಣದ ತಲೆಕೂದಲು, ಬಣ್ಣಗೆಟ್ಟ ಮುಖ, ಹಲವು ದಿನಗಳಿಂದ ಸ್ನಾನ ಕಾಣದ ಮೈ, ಹರಿದ ಪ್ಯಾಂಟು, ಪುಟ್ಟಮಕ್ಕಳು ಗೀಚಿದಂತಿರುವ ನೂರೆಂಟು ಗೆರೆಗೀಟುಗಳಿಂದ ಕೂಡಿದ ಹರಕುಮುರುಕು ಅಂಗಿ, ಪ್ರಕ್ಷಾಲನವಿಲ್ಲದೆ ರಸಿಕೆಕಟ್ಟಿದ ಕೆಂಡಗಣ್ಣು, ಬಾಯಿ ತೆರೆದರೆ ಬ್ರಹ್ಮಾಂಡದರ್ಶನ. ಅಂಥ ಒಬ್ಬ ಭಿಕಾರಿ ತನ್ನ ಅಂಗಡಿಯೆದುರು ಅಪಶಕುನದಂತೆ ಕೈಕಾಲು ಮುದುರಿಕೊಂಡು ನಿದ್ದೆ ಹೊಡೆಯುವುದನ್ನು ನೋಡಿ ಅಂಗಡಿಯ ಮಾಲಿಕನಿಗೆ ನಖಶಿಖಾಂತ ಕೋಪ ಬಂದುಬಿಡುತ್ತಿತ್ತು. “ಕತ್ತೇ ಭಡವಾ” ಎಂದು ಗಟ್ಟಿಯಾಗಿ ಕಿರುಚುತ್ತಿದ್ದ. ಆತನ ಗಂಟಲಿಗೆ ಬೆಚ್ಚಿಬಿದ್ದೆದ್ದ ಭಿಕ್ಷುಕ ಕಂಗಾಲಾಗಿ ದಿಕ್ಕಾಪಾಲಾಗಿ ಓಡಿಹೋಗುತ್ತಿದ್ದ.
ಆದರೆ ಅದು, ಒಂದು ದಿನದ ಮಟ್ಟಿಗೆ ಮಾತ್ರ. ಮರುದಿನ ಅಂಗಡಿ ಬಾಗಿಲು ತೆರೆಯುವಾಗ ಭಿಕ್ಷುಕನ ಸವಾರಿ ಅಲ್ಲಿ ಹಾಜರಿರುತ್ತಿತ್ತು. ಮತ್ತೆ ಮಾಲಿಕನ ಅರಚಾಟ ನಡೆಯುತ್ತಿತ್ತು. ಈ ಕ್ರಮ ಒಂದು ದಿನವೂ ತಪ್ಪದಂತೆ ನಡೆದುಕೊಂಡು ಬರುತ್ತಿತ್ತು. ಕೆಲವೊಮ್ಮೆ ಮಾಲೀಕ ದೊಡ್ಡ ದೊಣ್ಣೆ ಎತ್ತಿಕೊಂಡು ಬಂದು ಭಿಕ್ಷುಕನಿಗೆ ಬಾರಿಸುತ್ತಿದ್ದ. ಪೆಟ್ಟು ತಿಂದ ಭಿಕ್ಷುಕ ನೋವಿನಿಂದ ಕೈಕಾಲು ಬಡಿದುಕೊಂಡು ಓಡಿಹೋಗುತ್ತಿದ್ದ. ಇನ್ನು ಕೆಲವೊಮ್ಮೆ ಮಾಲೀಕ ಒಂದು ಬಕೆಟ್ ತಣ್ಣಗೆ ನೀರು ತಂದು ಈತನ ಮೈಮೇಲೆ ಸುರಿಯುತ್ತಿದ್ದ. ಮತ್ತೆ ಕೆಲವೊಮ್ಮೆ ಬೂಟು ಹಾಕಿಕೊಂಡು ಬಂದು ಮಲಗಿ ಗೊರಕೆ ಹೊಡೆಯುತ್ತಿದ್ದವನನ್ನು ಒದ್ದದ್ದೂ ಉಂಟು. ಒಮ್ಮೆ, ಅಂಗಡಿಯ ಬಾಗಿಲು ತೆಗೆಯುವಾಗ, ಮೂತ್ರವಿಸರ್ಜನೆಯ ವಾಸನೆ ಮಾಲೀಕನ ಮುಖಕ್ಕೆ ಹೊಡೆಯಿತು. ಈ ದರಿದ್ರ ಮನುಷ್ಯ ಇಲ್ಲಿ ಮಲಗುವುದು ಮಾತ್ರವಲ್ಲದೆ ತನ್ನ ದೇಹಬಾಧೆಗಳನ್ನೂ ತೀರಿಸಿಕೊಳ್ಳುತ್ತಾನೆಂದು ಅವತ್ತು ಅವನಿಗೆ ಮೈಯೆಲ್ಲ ಉರಿದಿತ್ತು. ಕೈಗೆ ಸಿಕ್ಕಿದ್ದನ್ನೆಲ್ಲ ಆ ಭಿಕ್ಷುಕನ ಮೇಲೆ ಎತ್ತಿಹಾಕಿ ತನ್ನ ಕೋಪ ತೋರಿಸಿದ್ದ.
ಸೈನಿಕರೊಂದಿಗೆ ಸದೃಢ ಭಾರತ ಸರಕಾರ
– ಅನಿರುದ್ಧ ಎಸ್.ಆರ್ , ಭದ್ರಾವತಿ
“ಈ ಕ್ಷಣದಿಂದಲೇ ಪಾಕಿಸ್ಥಾನ ಅಪ್ರಚೋದಿತ ದಾಳಿ ನಡೆಸುವುದನ್ನು ನಿಲ್ಲಿಸಬೇಕು, ಭಾರತದ ಕಡೆಯಿಂದ ಎಂದಿಗೂ ಸ್ವಯಂ ಪ್ರೇರಿತವಾಗಿ ಗುಂಡಿನ ದಾಳಿ ನಡೆಯುವುದಿಲ್ಲ. ಆದರೆ ನಿಮ್ಮ ಕಡೆಯಿಂದ ಗುಂಡಿನ ದಾಳಿಯೇನಾದರೂ ನಡೆದರೆ, ಆನಂತರ ನಮ್ಮಿಂದ ಹಾರುವ ಗುಂಡುಗಳನ್ನು ಲೆಕ್ಕ ಹಾಕಲು ನಿಮಗೆ ಸಾಧ್ಯವಿಲ್ಲ ” ಹೀಗೆ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದು ಸರಕಾರದ ಗೃಹ ಸಚಿವರಾದ ರಾಜನಾಥ್ ಸಿಂಗ್.
ಈ ಯೋಧರು ತಮ್ಮ ಆಳುಗಳಿಗೆ ಕೊಟ್ಟ ಕೂಲಿ ಮುಖ್ಯಮಂತ್ರಿಯೂ ಕೊಡಲಾರ !
– ಸಂತೋಷ್ ತಮ್ಮಯ್ಯ
೧೯೯೯ರ ಜುಲೈ ತಿಂಗಳು. ದೇಶಾದ್ಯಂತ ಕಾರ್ಗಿಲ್ ಯುದ್ಧದ ಬಿಸಿ ವ್ಯಾಪಿಸುತ್ತಿತ್ತು. ಎಲ್ಲೆಲ್ಲೂ ಆಕ್ರೋಶ, ಯೋಧರ ಸ್ಥೈರ್ಯ ಹೆಚ್ಚಿಸುವ ಕಾರ್ಯಕ್ರಮಗಳು ನಡೆಯುತ್ತಿದ್ದವು. ದೇಶದ ಮೂಲೆ ಮೂಲೆಗಳಿಂದ ನಿಧಿಸಂಗ್ರಹ, ಪಾಕ್ ಖಂಡನೆ, ಪ್ರತಿಭಟನೆ, ಬಲಿದಾನಿಗಳಿಗೆ ನಮನ ಕಾರ್ಯಕ್ರಮಗಳು ನಡೆಯುತ್ತಿದ್ದವು. ಅಂಥ ಒಂದು ದಿನ ಕೊಡಗಿನ ಗೋಣಿಕೊಪ್ಪದಲ್ಲಿ ಕಾರ್ಗಿಲ್ ನಮನದ ಮೆರವಣಿಗೆ ನಡೆಯುತ್ತಿತ್ತು, ಜನ ಕಿಕ್ಕಿರಿದು ಸೇರಿದ್ದರು. ನಾಗರಿಕರು, ಮಾಜಿ ಯೋಧರು, ವರ್ತಕರು, ಸಂತೆಗೆ ಬಂದವರು, ವಿದ್ಯಾರ್ಥಿಗಳು ಸೇರಿದ್ದರು. ಮಾಜಿ ಮಿಲಿಟರಿ ಅಧಿಕಾರಿಯೊಬ್ಬರು ಪಾಕ್ ವಿರುದ್ಧ ಕೆಂಡಾಮಂಡಲವಾಗಿ ಮಾತಾಡಿದರು. ಜಯಘೋಷಗಳೊಂದಿಗೆ ಮೆರವಣಿಗೆ ಹೊರಟಿತು. ಮುಶ್ರಫನ ಪ್ರತಿಕೃತಿ ದಹಿಸುವುದರೊಂದಿಗೆ ಮೆರವಣಿಗೆ ಮುಕ್ತಾಯವಾಗುತ್ತದೆ ಎಂದು ಘೋಷಿಸಲಾಯಿತು. ಹೀಗೆ ಮೆರವಣಿಗೆ ಸಾಗಿ ಬಸ್ ಸ್ಟಾಂಡಿಗೆ ಮುಟ್ಟಿ ಮುಶ್ರಫನ ಪ್ರತಿಕೃತಿಗೆ ಇನ್ನೇನು ಬೆಂಕಿ ಹಚ್ಚಬೇಕು, ಅಷ್ಟರಲ್ಲಿ ಪೊನ್ನಂಪೇಟೆ ಕಡೆಯಿಂದ ಅತಿ ವೇಗವಾಗಿ ಬಂದ ಕಾರೊಂದು ಮೆರವಣಿಗೆಯ ಮುಂದೆ ಬಂದು ಜಕ್ಕೆಂದು ನಿಂತಿತು. ಜನರು ಬೆಂಕಿ ಹಚ್ಚುವುದನ್ನು ಬಿಟ್ಟು ಆ ಕಾರನ್ನು ನೋಡತೊಡಗಿದರು. ನೋಡುತ್ತಿದ್ದಂತೆ ಆ ಕಾರಿಂದ ಬಿಳಿಯಾದ ಸುರುಳಿ ಮೀಸೆಯ ಮುದುಕರೊಬ್ಬರು ಇಳಿದರು. ಅವರ ಕೈ ನಡುಗುತ್ತಿತ್ತು. ಡಬಲ್ ಬ್ಯಾರಲ್ ಬಂದೂಕನ್ನು ಬೇರೆ ಹಿಡಿದಿದ್ದರು. ಒಂದು ಕ್ಷಣ ಆ ಸಾವಿರಾರು ಜನರು ಸ್ತಬ್ದರಾದರು. ಈ ಅಜ್ಜ ನೋಡನೋಡುತ್ತಲೇ ಕೋವಿಗೆ ಕಾಡತೂಸುಗಳನ್ನು ತುಂಬಿಸಿದರು. ಜೈ ಮಾಕಾಳಿ ಎನ್ನುತ್ತಲೇ ಮುಶರಫನ ಪ್ರತಿಕೃತಿಗೆ ಎರಡು ಗುಂಡುಗಳನ್ನು ಹಾರಿಸಿಯೇಬಿಟ್ಟರು! ಸಾವಿರಾರು ಜನ ಸೇರಿದ್ದ ಮೆರವಣಿಗೆ ಸನ್ನಿ ಹಿಡಿದವರಂತೆ ಜಯಘೋಷ ಮೊಳಗಿಸಿತು. ನಂತರ ಆ ಅಜ್ಜನನ್ನು ಪತ್ರಿಕೆಗಳು ಮಾತಾಡಿಸಿದವು. ಆ ಅಜ್ಜ ಹವಾಲ್ದಾರ್ ಮುದ್ದಪ್ಪ. ಬ್ರಿಟೀಷ್ ಕಾಲದಲ್ಲೇ ಆರ್ಮಿ ಸೇರಿ ಎರಡನೆ ಮಹಾಯುದ್ಧದಲ್ಲಿ ಪಾಲ್ಗೊಂಡಿದ್ದ ಯೋಧ. ಅರವತ್ತೆರಡರ ಯುದ್ದದಲ್ಲಿ ಪಾಲ್ಗೊಂಡು ಚೀನಾದಲ್ಲಿ ಸೆರೆಯಾಳಗಿದ್ದ ವ್ಯಕ್ತಿ. ತಮ್ಮ ೮೫ನೇ ವಯಸ್ಸಿನಲ್ಲೂ ಅವರು “ನಾನು ಈಗಲೂ ಕಾರ್ಗಿಲ್ ಗೆ ಹೋಗಲು ಸಿದ್ಧ” ಎಂದು ಮೀಸೆ ತಿರುವಿ ವರದಿಗಾರರಿಗೆ ಹೇಳಿದ್ದರು. ಮತ್ತಷ್ಟು ಕೆದಕಿ ನೋಡಿದರೆ ಆ ಅಜ್ಜ ದಕ್ಷಿಣ ಕೊಡಗಿನಲ್ಲಿ ಅತಿ ದೊಡ್ಡ ಕಾಫಿ ತೋಟವನ್ನು ಹೊಂದಿದ್ದ ಟಾಪ್ ಹತ್ತು ಜನರಲ್ಲಿ ಒಬ್ಬರು. ಆ ಕಾಲದಲ್ಲೇ ಅವರ ಮಕ್ಕಳು ಹೆಲಿಕಾಫ್ಟರನ್ನು ಖರೀದಿಸಲು ಓಡಾಡುತ್ತಿದ್ದರು.
‘ದೇಶ ಮೊದಲು’ ಎಂದ ಕದನ ಕಲಿಗಳ ಆತ್ಮ ಸಮ್ಮಾನವನ್ನು ದೇನಿಸುತ್ತಾ….
– ರಾಘವೇಂದ್ರ ಅಡಿಗ ಎಚ್ಚೆನ್
ಯಾರೇ ಒಬ್ಬ ವ್ಯಕ್ತಿ ಸೈನ್ಯಕ್ಕೆ ಸೇರುತ್ತಾನೆಂದರೆ ಆ ವ್ಯಕ್ತಿಯ ಜಾತಿ, ಧರ್ಮಗಳೇನು ಎನ್ನುವುದನ್ನು ಯಾರೊಬ್ಬರೂ ಕೇಳುವುದಿಲ್ಲ. ಬದಲಾಗಿ ಅವನಿಗಿರುವ ದೇಶಾಭಿಮಾನಕ್ಕೆ ದೇಶವಾಸಿಗಳೆಲ್ಲಾ ತಲೆದೂಗುತ್ತಾರೆ. ಸೈನ್ಯಕ್ಕೆ ಸೇರ್ಬಹುದಾದ ವ್ಯಕ್ತಿ ಯಾರೇ ಆದರೂ ಅವನ ಬಗ್ಗೆ ಇಡಿ ದೇಶವೇ ಹೆಮ್ಮೆ ಪಡುತ್ತದೆ ಏಕೆಂದರೆ ಭಾರತೀಯ ಸೇನೆ ನಿರ್ವಹಿಸುವ ಕಾರ್ಯ ಅಂತಹುದು. ಮಳೆ, ಚಳಿ, ಶೀತ ಮಾರುತ, ಬಿರು ಬಿಸಿಲು ಎನ್ನುವುದನ್ನೂ ಲೆಕ್ಕಿಸದೆ ಹಗಲಿರುಳೂ ದೇಶದ ಗಡಿ ಕಾಯುವ ಯೋಧರ ದೇಶ ನಿಷ್ಠೆಯಿಂದಾಗಿಯೇ ಇಂದು ನಾವೆಲ್ಲಾ ನೆಮ್ಮದಿಯಿಂದ ಬದುಕುತ್ತಿದ್ದೇವೆ.
ಅದು 1999 ಮೇ ತಿಂಗಳು, ಪಾಕಿಗಳು ಕಾರ್ಗಿಲ್ನ, ಪೂರ್ವ ಬಟಾಲಿಕ್ನ ಮತ್ತು ದ್ರಾಸ್ನ ಉತ್ತರ ದಿಕ್ಕಿನ ಬೆಟ್ಟಗಳನ್ನು ಏರತೊಡಗಿದರು. ಗಟ್ಟಿ ಮುಟ್ಟಾಗಿದ್ದ ಬಂಕರುಗಳನ್ನು ತಮ್ಮೊಂದಿಗಿಟ್ಟುಕೊಂಡಿದ್ದ ಅವರು ಭಾರತೀಯದ ಸರ್ವ ರೀತಿಯ ಧಾಳಿಗೂ ಸನ್ನದ್ದರಾಗಿದ್ದರು. ಹಳ್ಳಿಗಾಡಿನ ದನಗಾಹಿಗಳಿಂದ ಪಾಕಿಸ್ತಾನದ ಈ ಕುಟಿಲೋಪಾಯವನ್ನರಿತ ನಮ್ಮ ಸೇನೆ ವರದಿ ತರಲೆಂದು ಸೌರಭ್ ಕಾಲಿಯಾ ನೇತೃತ್ವದಲ್ಲಿ ಐವರನ್ನು ಗುಡ್ಡ ಹತ್ತಿಸಿತು. ಶತ್ರುಪಡೆಗಳ ಸಾಮರ್ಥ್ಯದ ಅಂದಾಜಿಲ್ಲದ ನಮ್ಮವರು ಬೆಟ್ಟ ಹತ್ತಿ ಪಾಕ್ ನ ಮತಾಂಧ ಸೈನಿಕರ ಕೈಯಲ್ಲಿ ಸಿಕ್ಕಿಹಾಕಿಕೊಂಡು ಕ್ರೂರವಾದ ಹಿಂಸೆಗೆ ತುತ್ತಾದರು. ಅಷ್ಟೆ ಅಲ್ಲ ಅವರುಗಳ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಭಾರತೀಯ ಸೇನಾ ಶಿಬಿರಕ್ಕೆ ಹಿಂತಿರುಗಿಸಲಾಯಿತು.
ಅಂದಿನ ವಾಜಪೇಯಿ ನೇತೃತ್ವದ ಎನ್.ಡಿ.ಎ. ಸರ್ಕಾರವು ತಕ್ಷಣವೇ ‘ಆಪರೇಷನ್ ವಿಜಯ್’ ಹೆಸರಿನಲ್ಲಿ ಸೈನಿಕ ಕಾರ್ಯಾಚರಣೆ ನಡೆಸಲು ಆದೇಶ ನೀಡಿತು. ಆದರೆ ಅಂತಹಾ ಸೂಕ್ಷ್ಮ ಸ್ಥಿತಿಯಲ್ಲಿ ದೇಶದ ಗಡಿ ಕಾಯುತ್ತಿದ್ದ ಸೈನಿಕರ ಬಳಿ ಸರಿಯಾದ ಆಧುನಿಕ ಶಸ್ತ್ರಾಸ್ತ್ರಗಳೂ ಇರಲಿಲ್ಲ! ದೇಹ ರಕ್ಷಣೆಗೆ ಅವಷ್ಯವಾದ ಬಟ್ಟೆಗಳೂ ಇರಲಿಲ್ಲ! ಮತ್ತಷ್ಟು ಓದು
ಇಂತ ಸಾವಿಗೆ ಕೊನೆಯೆಂದು?
– ಗುರುಗಜಾನನ ಭಟ್
ಕೇವಲ ಎರಡು ಜನ ಉಗ್ರರು ಐದು ಜನ ಸೈನಿಕರನ್ನು ಕೊಂದರೆಂದರೆ ನಮ್ಮ ಸೈನಿಕರದ್ದು ಎಂತಹ ಸಾವಾಗಿರಬೇಕು ?? ಎಂದಾದರೂ ಯೋಚಿಸಿದ್ದೇವೆಯೇ? ಕೈಯಲ್ಲಿ ಉಗ್ರರು ಆಧುನಿಕ ಮೆಷೀನ್ ಗನ್ನುಗಳನ್ನೂ ಹಿಡಿದು ಬಂದರೆ , ಭಾರತೀಯ ಸೈನಿಕನಲ್ಲಿ ಎಂತಹ ಗನ್ನುಗಳಿರುತ್ತವೆ ಎಂದು ಗಮನಿಸಿದ್ದೆವೆಯೇ?? ನಮ್ಮ ಮುಗ್ಧ ಯೋಧರ ಎದೆಯಲ್ಲಿ ಅಗಾಧ ದೇಶಪ್ರೇಮವನ್ನು ಬಿತ್ತಿ , ಅದನ್ನು ಬೆಳೆಸಿ ಹೆಮ್ಮರ ವಾಗಿಸಿ , ಕೈಯಲ್ಲಿ ಸರಿಯಾದ ಗನ್ನುಗಳನ್ನೂ ಕೊಡದೆ, ಎದೆಗೆ ರಕ್ಷಾ ಕವಚಗಳನ್ನು ನೀಡದೆ , ಯುದ್ದಕ್ಕೆ ನಿಲ್ಲಿಸಿ ಬಿಡುತ್ತೆವಲ್ಲ ಇದಾವ ನ್ಯಾಯ ?
ಸೈನಿಕರನ್ನು ಕೊಲ್ಲಲು ಬಿಟ್ಟು, ಸತ್ತಮೇಲೆ ಪರಮವೀರ ಚಕ್ರ ಕೊಡುವ ಸರ್ಕಾರ ಬಹುಶಃ ಯಾವ ದೇಶದಲ್ಲೂ ಇಲ್ಲ. ನಮ್ಮ ನೆಲದಲ್ಲೇ ನಮ್ಮ ಸೈನಿಕರ ಹತ್ಯೆ ನಡೆಯುತ್ತದಲ್ಲ ಇದಕ್ಕಿಂತ ವಿಪರ್ಯಾಸ ಎಲ್ಲಾದರೂ ಉಂಟೇ ?? ಕಟ್ಟ ಕಡೆಗೆ ಸೈನಿಕ ಸತ್ತಿದ್ದಾನೆ , ಅವನದು ಮಾತೃ ಭಕ್ತಿ , ನೆಲದ ಮಣ್ಣಿನ ಪ್ರೀತಿ , ಎಲ್ಲವೂ ಸರಿ , ಆದರೇ ಅದನ್ನು ತೋರಿಸಲು ಸಾಯಲೇ ಬೇಕಿತ್ತೆ?? ಅಥವಾ ಆ ಸಾವು ಅನಿವಾರ್ಯವಾಗಿತ್ತೆ ??
ಎಂದು ಕೊನೆ ಈ ಸಾವಿಗೆ ?? 1947 ರಿಂದಲೂ ನಮ್ಮ ಸೈನಿಕರು ಸಾಯುತ್ತಲೇ ಇದ್ದಾರೆ ನಮ್ಮ ಸೈನಿಕನಿಗೆ , ಅವನ ವೀರಾವೇಶಕ್ಕೆ , ಅವನ ಆತ್ಮ ಸ್ತೈರ್ಯಕ್ಕೆ , ಅವನ ಮಣ್ಣಿನ ಪ್ರೀತಿಗೆ , ಸರ್ಕಾರ ಕೊಟ್ಟಿದ್ದಾದರೂ ಏನು ? ನಮ್ಮ ಸೈನಿಕರ ಆಲೋಚನೆಯನ್ನೇಕೆ ಬದಲು ಮಾಡಲಾಗದು ?? ನೀನು ಹೊರಟಿರುವುದು ವೀರಮರಣವನ್ನೊಪ್ಪಲು ಅಲ್ಲ , ನಿನ್ನನ್ನು ಕಳುಹಿಸುತ್ತಿರುವುದು , ಸಾಯಲಿ ಎಂದಲ್ಲ , ಸಾಯಿಸು ಎಂದು . ನಿನಗೆ ಮುಕ್ತ ಅವಕಾಶವಿದೆ , ದೇಶದ್ರೋಹಿಗಳನ್ನು ಸದೆ ಬಡಿ ಎಂದು ಯಾಕೆ ಆತನಿಗೆ ತಿಳಿಸಬಾರದು ??