ವಿಷಯದ ವಿವರಗಳಿಗೆ ದಾಟಿರಿ

Posts tagged ‘ಸೈನ್ಯ’

11
ಮೇ

ಮುಧೋಳ ನಾಯಿಯ ಜೊತೆಯ ಹೋಲಿಕೆಗೆ ಇವರು ಅರ್ಹರೇ?

– ಸಂತೋಷ್ ತಮ್ಮಯ್ಯ 
ಚುನಾವಣೆ ಸಮೀಪಿಸಿದಾಗಲೆಲ್ಲಾ ಕಾಂಗ್ರೆಸಿಗರು, “ನಮ್ಮ ಇತಿಹಾಸ ತೆರೆದ ಪುಸ್ತಕವಿದ್ದಂತೆ’,‘ದೇಶಕ್ಕೆ ಕಾಂಗ್ರೆಸಿನ ಕೊಡುಗೆಯೇನೆಂಬುದನ್ನು ಯಾರಿಗೂ ನಿರೂಪಿಸುವ ಆವಶ್ಯಕತೆಯಿಲ್ಲ’ಎಂದು ಆಲಾಪಿಸತೊಡಗುತ್ತಾರೆ. ಅವರ ತೆರೆದ ಪುಸ್ತಕದ ಕೆಲವೇ ಪುಟಗಳನ್ನು ನೋಡಿದರೆ ಅಲ್ಲಿ ವಿಚಿತ್ರಗಳೇ ಕಾಣಿಸುತ್ತವೆ. ಇದು ಅಂಥ ಒಂದು ಸ್ಯಾಂಪಲ್.
ಲಾಲ್ ಬಹೂದ್ದೂರ್ ಶಾಸ್ತ್ರಿಗಳ ಬಾಯಿಂದ ಭಾರತ್ ಕೀ ಆಯೂಬ್ ಎಂದು ಬೆನ್ನು ತಟ್ಟಿಸಿಕೊಂಡ ಒರ್ವ ಯೋಧ ಕ್ಯಾ.ಆಯೂಬ್ ಖಾನ್. ವೀರ ಚಕ್ರ ಪುರಷ್ಕೃತ ಕ್ಯಾ.ಖಾನ್‌ಗೆ ಶಾಸ್ತ್ರಿ ಮೇಲೆ ಅದೆಷ್ಟು ಅಭಿಮಾನವಿತ್ತೆಂದರೆ ನಿವೃತ್ತಿಯ ನಂತರ ಅವರು ಕಾಂಗ್ರೆಸ್‌ಗೆ ಸೇರಿದರು. ಎರಡು ಬಾರಿ ರಾಜಾಸ್ಥಾನದ ಜುಂಜುನು ಲೋಕಸಭಾ ಕ್ಷೇತ್ರದಿಂದ ಸ್ಫರ್ಧಿಸಿ ಸಂಸದರೂ ಆದರು. ಆದರೆ ಆಯೂಬ್ ಖಾನರಿಗೆ ಶಾಸ್ತ್ರಿಗಳ ನಿಧನಾನಂತರ ಯಾಕೋ ತನ್ನ ಆಯ್ಕೆ ತಪ್ಪಿದೆ ಎನಿಸತೊಡಗಿತು. ಇಂದಿರಾ ಸರ್ವಾಧಿಕಾರ ಮತ್ತು ರಾಜೀವ್ ಗಾಂಧಿ ಪಟಾಲಮ್ಮಿನ ಸೈನಿಕ ವಿರೋಧಿ ನೀತಿಗಳನ್ನು ಸಹಿಸುವಷ್ಟು ದಿನ ಸಹಿಸಿದರು. ಕೊನೆಗೆ ಶಾಸ್ತ್ರಿಗಳಿಗಾದ ಸ್ಥಿತಿ ನರಸಿಂಹರಾಯರಿಗೂ ಬಂದಾಗ ಹಿಂದೆ ಮುಂದೆ ನೋಡದೆ ಕಾಂಗ್ರೆಸ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ರಾಜಕೀಯ ಸಂನ್ಯಾಸ ಸ್ವೀಕರಿಸಿದರು. ಕೊನೆ ಕಾಲದಲ್ಲಿ ಆಯೂಬ್ ಖಾನರಿಗೆ ಕಾಂಗ್ರೆಸ್ ಸೇರಿದ್ದ ಬಗ್ಗೆ ಎಷ್ಟು ಪಾಪಪ್ರಜ್ಞೆ ಕಾಡುತ್ತಿತ್ತೆಂದರೆ ಆರೋಗ್ಯ ವಿಚಾರಿಸಲು ಬಂದ ವಾಜಪೇಯಿಯವರ ಪಾದಸ್ಪರ್ಶಕ್ಕೆ ಅನುಮತಿಯನ್ನೂ ಆ ಯೋಧ ಕೇಳಿದ್ದರು. ಏಕೆಂದರೆ ಒಬ್ಬ ದೇಶಭಕ್ತ ಯೋಧ ಮತ್ತು ಕಾಂಗ್ರೆಸಿಗ ಏಕಕಾಲಕ್ಕೆ ಆಗಲು ಸಾಧ್ಯವಿಲ್ಲ ಎಂಬ ಸತ್ಯ ಆಯೂಬ್ ಖಾನರಿಗೆ ತಮ್ಮ ಕೊನೆಕಾಲದಲ್ಲಿ ಅರ್ಥವಾಗಿತ್ತು.
ಹಾಗಾಗಿಯೋ ಏನೋ ಸ್ವಾತಂತ್ರ್ಯಾನಂತರ ರಾಜಕಾರಣಕ್ಕೆ ಬಂದ ಶೇ.೯೯ರಷ್ಟು ಮಾಜಿ ಯೋಧರು ಕಾಂಗ್ರೆಸಿಗೆ ಸೇರಲಿಲ್ಲ. ಕ್ಯಾ.ಅಮರೀಂದರ್ ಸಿಂಗರನ್ನೇ ನೋಡಿ. ಅವರೋರ್ವ ಕಾಂಗ್ರೆಸಿಗ ಎಂಬುದಕ್ಕಿಂತ ಹೆಚ್ಚಾಗಿ ಸಿಕ್ಖ್ ನಾಯಕನಾಗೇ ದೇಶಕ್ಕೆ ಕಾಣುತ್ತಾರೆ. ಇತ್ತೀಚೆಗೆ ಕೆನಡಾದ ಪ್ರಧಾನಿ ಭಾರತಕ್ಕೆ ಬಂದಾಗ ಅವರು ನಡೆದುಕೊಂಡ ರೀತಿಯಿಂದ ಹಿಡಿದು ಕಾರ್ಗಿಲ್ ಯುದ್ಧ, ಉರಿ ಆಕ್ರಮಣ, ಪಟಾನ್‌ಕೋಟ್ ದಾಳಿಗಳ ಸಂದರ್ಭದಲ್ಲೆಲ್ಲಾ ಅವರು ಮುಖ್ಯಮಂತ್ರಿಯಾಗಿ ಕಂಡದ್ದಕ್ಕಿಂತಲೂ ಮಾಜಿ ಯೋಧನಾಗಿಯೇ ಕಂಡರು. ರಾಜೇಶ್ ಪೈಲೆಟ್ ಎಂಬ ಸೋನಿಯಾ ಮನೆಯ ನಿಯತ್ತಿನ ಪ್ರಾಣಿಯೊಂದನ್ನು ಬಿಟ್ಟರೆ ಅಣ್ಣಾ ಹಜಾರೆ, ರಾಜ್ಯವರ್ಧನ ಸಿಂಗ್ ರಾಥೋಡ್, ಜ. ವಿಕೆ ಸಿಂಗ್, ಬಿ.ಸಿ ಖಂಡೂರಿ, ಜೆಎಫ್‌ಆರ್ ಜೆಕಬ್, ಕುಂಜ್ಞಿರಾಮನ್ ಪಾಲಟ್ ಕಂಡೇತ್, ಜಸ್ವಂತ್ ಸಿಂಗ್, ಕ್ಯಾ.ಜಗತ್ ರ್ ಸಿಂಗ್ ದ್ರೋಣ, ಅಡ್ಮಿರಲ್ ವಿಷ್ಣು ಭಾಗ್ವತ್‌ರಂಥಾ ನೂರಾರು ಮಾಜಿ ಯೋಧರು ರಾಜಕಾರಣದಲ್ಲಿದ್ದರೂ ಅವರಾರೂ ಕಾಂಗ್ರೆಸಿದ್ದೆಡೆ ಮಗ್ಗುಲು ಕೂಡಾ ಬದಲಿಸಿಲ್ಲ!
ಯಾಕೆಂದರೆ ಸೈನಿಕನನ್ನ್ನು ಗೌರವಿಸಿದ ಒಂದೇ ಒಂದೇ ಒಂದು ಉದಾಹರಣೆ ಕಾಂಗ್ರೆಸಿನಲ್ಲಿ ಕಾಣಸಿಕ್ಕುವುದಿಲ್ಲ. ಕಾಂಗ್ರೆಸಿನ ಮನೆದೇವರು ನೆಹರೂ ಪ್ರತಿಷ್ಠಾಪನೆಯಾದಂದಿನಿಂದಲೂ ಆ ಗುಣ ಅವರ ‘ತೆರೆದ ಪುಸ್ತಕ ’ದಲ್ಲಿ ಕಂಡುಬರುತ್ತವೆ. ಏಕೆಂದರೆ ದೇಶ ಸ್ವಾತಂತ್ರ್ಯದ ಆನಂದದಲ್ಲಿ ತೇಲುತ್ತಿದ್ದರೆ ಅತ್ತ ಸೇನೆಗಿನ್ನೂ ಸ್ವಾತಂತ್ರ್ಯ ಸಿಕ್ಕಿರಲಿಲ್ಲ! ೧೯೪೭ರ ಆಗಸ್ಟ್ ೧೫ರಂದು ಮೌಂಟ್ ಬ್ಯಾಟನ್ ಜಾಗಕ್ಕೆ ನೆಹರೂ ಬಂದು ಕೂತಾಗ ನೆಹರೂಗೆ ಸೇನಾ ಮುಖ್ಯಸ್ಥ ಕೂಡಾ ಭಾರತೀಯನೇ ಆಗಿರಲಿ ಎಂಬ ಮನಸ್ಸು ಬಂದಿರಲಿಲ್ಲ. ಯಾವ ಹಿಂಜರಿಕೆಯೂ ಇಲ್ಲದೆ ನೆಹರೂ ಅದೇ ದಿನ ರಾಬ್ ಲೊಖಾರ್ಟ್ ಎಂಬವನನ್ನು ಸೇನಾ ದಂಡನಾಯಕನನ್ನಾಗಿ ನೇಮಿಸಿದರು. ಕೊನೆಗೆ ಈ ಲೊಖಾರ್ಟನಿಗೇ ನಾಚಿಕೆಯಾಗಿ ಇಂಗ್ಲೆಂಡಿಗೆ ಹೊರಟುಹೋದ. ನಂತರ ಕೂಡಾ ನೆಹರೂ ಸ್ವತಂತ್ರ ತೀರ್ಮಾನ ತೆಗೆದುಕೊಳ್ಳುವ ಗುಣ ಭಾರತೀಯರಿಗೆಲ್ಲಿದೆ ಎನ್ನುತ್ತಾ ಮತ್ತೊಬ್ಬ ಬಿಳಿಯ ರಾಯ್ ಬುಷರ್ ನನ್ನು ನೇಮಕ ಮಾಡಿದರು. ಒಂದು ವರ್ಷದವರೆಗೆ ಸೇನಾ ಮುಖ್ಯಸ್ಥನಾಗಿದ್ದ ಬುಷರ್ ಮತ್ತಷ್ಟು ವರ್ಷ ಮುಂದುವರಿಯುತ್ತಿದ್ದನೋ ಏನೋ. ಆದರೆ ದೇಶೀ ಸೇನಾ ನಾಯಕನ ಕೂಗು ಸೈನ್ಯದೊಳಗೆ ಗಟ್ಟಿಯಾಗುತ್ತಿತ್ತು. ಆಗ ನೆಹರೂ ಅಂದಿನ ರಕ್ಷಣಾ ಸಚಿವ ಬಲವಂತ್ ಸಿಂಗ್ ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಒಲ್ಲದ ಮನಸ್ಸಿನಿಂದ ಕೆ.ಎಂ ಕಾರ್ಯಪ್ಪನವರನ್ನು ಸೇನಾ ಮಹಾದಂಡನಾಯಕನನ್ನಾಗಿ ನೇಮಕ ಮಾಡಿದರು. ಮತ್ತು ಕಾರ್ಯಪ್ಪರ ಮೇಲೆ ಒಂದು ಕಣ್ಣಿಡಲಾರಂಭಿಸಿದರು. ಸರಿಯಾಗಿ ಅದೇ ಹೊತ್ತಲ್ಲಿ ಪಾಕಿಸ್ಥಾನದ ಆಕ್ರಮಣದ ಸೂಚನೆಯೂ ಇದ್ದುದರಿಂದ ನೆಹರೂಗೆ ಹಾಗೆ ಮಾಡದೆ ಬೇರೆ ದಾರಿ ಇರಲಿಲ್ಲ. ಕಾಶ್ಮೀರ ಆಕ್ರಮಣವನ್ನು ಹಿಮ್ಮೆಟ್ಟಿಸಲು ಕಾರ್ಯಪ್ಪ ಕಳುಹಿಸಿದ ಮತ್ತೊಬ್ಬ ಅಧಿಕಾರಿ ತಿಮ್ಮಯ್ಯ ಕೆಲವೇ ದಿನಗಳಲ್ಲಿ ಕಾಶ್ಮೀರಿಗಳ ಮನಸ್ಸು ಗೆದ್ದಿದ್ದು ಮತ್ತು ಪಾಕ್ ಆಕ್ರಮಿತ ಕಾಶ್ಮೀರದ ಜನರು ತಿಮ್ಮಯ್ಯ ಆಳಿದರೆ ನಾವು ಭಾರತ ಒಕ್ಕೂಟಕ್ಕೆ ಸೇರುವೆವು ಎಂದದ್ದೆಲ್ಲವೂ ನೆಹರೂಗೆ ನಡುಕ ಹುಟ್ಟಿಸಿ ಕಾರ್ಯಪ್ಪ ಮತ್ತು ತಿಮ್ಮಯ್ಯರಿಬ್ಬರನ್ನೂ ತಣ್ಣಗೆ ದ್ವೇಷಿಸತೊಡಗಿದರು. ಇವೆಲ್ಲವನ್ನೂ ಜಾರಿಗೆ ತರುತ್ತಿದ್ದವನು ಹಿಟ್ಲರನ ಹಿಂದಿದ್ದ ಹಿಮ್ಲರ್ ನಂಥ ಸರ್ದಾರ್ ಬಲವಂತ್ ಸಿಂಗ್. ಅಂದರೆ ‘ಕಾರ್ಯಪ್ಪ-ತಿಮ್ಮಯ್ಯರನ್ನು ನೆಹರೂ-ಮೆನನ್‌ಗಳು ಸರಿಯಾಗಿ ನಡೆಸಿಕೊಳ್ಳಲಿಲ್ಲ’ ಎಂಬ ಮೋದಿ ಹೇಳಿಕೆ ಕಾಂಗ್ರೆಸಿನ ‘ತೆರೆದ ಪುಸ್ತಕ’ದಲ್ಲೇ ಇವೆ ಎಂದಂತಾಯಿತು!

ಮತ್ತಷ್ಟು ಓದು »

29
ಏಪ್ರಿಲ್

ಯೋಧನ ಮಾತುಗಳಲ್ಲಿ…

ಸುರೇಶ್ ಮುಗ್ಬಾಳ್

ತಿಪಟೂರು

downloadಛತ್ತೀಸಘಡದಲ್ಲಿನ ನಕ್ಸಲರ ಕ್ರೌರ್ಯಕ್ಕೂ, ಹತ್ಯೆಯಾದ 25 ಯೋಧರಿಗೂ ಅದೇನು ದ್ವೇಷಗಳಿತ್ತೋ ಏನೋ ಯಾರಿಗೂ ಗೊತ್ತಿಲ್ಲ. ಆದರೆ 300 ಜನ ನಕ್ಸಲರ ಗುಂಪು ಏಕಾ-ಏಕಿ CRPF ಯೋಧರಿದ್ದಲ್ಲಿಗೆ ನುಗ್ಗಿ ಒಂದೇ ಸಮನೆ ಗುಂಡು ಹಾರಿಸಿಬಿಟ್ಟಿದ್ದರು. ಕಾರಣ; ಗುಂಡುಹಾರಿಸಿಕೊಂಡು ಸತ್ತವರೆಲ್ಲಾ ಯೋಧರಾಗಿದ್ದರು, ಸೇನಾ ಸಮವಸ್ತ್ರದಲ್ಲಿದ್ದರು ಮತ್ತು ಸರ್ಕಾರದ ಪರ ಕೆಲಸ ಮಾಡುವವರಾಗಿದ್ದರು ಅಷ್ಟೇ. ವೈಯಕ್ತಿಕ ದ್ವೇಷ ಖಂಡಿತ ಯಾರಿಗೂ ಇದ್ದಿರಲಿಕ್ಕಿಲ್ಲ. ಮತ್ತಷ್ಟು ಓದು »

3
ಡಿಸೆ

ಆ ಯೋಧನ ಸಾವೂ ಕೂಡಾ ಚಿಲ್ಲರೆ ಸಂಗತಿಯಲ್ಲಿ ಹೂತುಹೋಯಿತು..!

– ಸಂತೋಷ್ ತಮ್ಮಯ್ಯ

srinivas-kumar-sinha-3ಅಂದು ಭಾರತೀಯ ಮಿಲಿಟರಿ ಇತಿಹಾಸದಲ್ಲಿ ಹಿಂದೆಂದೂ ನಡೆಯದ ಘಟನೆಯೊಂದುನಡೆದುಹೋಗಿತ್ತು. ದೇಶಾದ್ಯಂತ ಅಚ್ಚರಿ, ಕೆಲವರಿಗೆ ಆಘಾತ. ಇದೇಕೆ ಹೀಗೆ ಎಂಬ ಉದ್ಗಾರ. ಆರ್ಮಿ ಕೇಂದ್ರಕಛೇರಿಯ ಸೌತ್‌ಬ್ಲಾಕ್‌ನಲ್ಲಿ ತಿಂಗಳುಗಟ್ಟಲೆ ಗಾಸಿಫ್‌ಗಳು. ಎಮರ್ಜೆನ್ಸಿ ಇನ್ನೂ ಹೋಗಿಲ್ಲವೇ? ಇಂದಿರಾ ಸರ್ವಾಧಿಕಾರಕ್ಕೆ ಇದಕ್ಕಿಂತ ಇನ್ನೇನು ಉದಾಹರಣೆ ಬೇಕು ಎಂದು ವಿರೋಧ ಪಕ್ಷಗಳ ಆರೋಪ.

ಅಂದು ನಡೆದಿದ್ದು ಇಷ್ಟು:
ಆರ್ಮಿಯ ೧೧ನೇ ಚೀಫ್ ಆಫ್ ಆರ್ಮಿ ಸ್ಟಾಫ್ ಕೆ.ವಿ ಕೃಷ್ಣರಾವ್ ೧೯೮೩ರ ಮೇ ಕೊನೆಯಲ್ಲಿ ನಿವೃತ್ತರಾಗುವವರಿದ್ದರು. ಕೆಲವು ದಿನಗಳ ಹಿಂದಿನಿಂದಲೇ ಸೌತ್ ಬ್ಲಾಕ್ ಹೊಸ ಜನರಲ್‌ನ ನೇಮಕದ ಪ್ರಕ್ರಿಯೆಯಲ್ಲಿ ನಿರತವಾಗಿತ್ತು. ಹೊಸ ಜನರಲ್ ಯಾರೆಂಬ ಬಗ್ಗೆ ಆರ್ಮಿಗಾಗಲಿ, ಜನರಿಗಾಗಲೀ ಯಾವುದೇ ಗೊಂದಲಗಳಿರಲಿಲ್ಲ. ಏಕೆಂದರೆ ಕೃಷ್ಣರಾವ್ ಚೀಫ್ ಆಗಿದ್ದಾಗ ವೈಸ್ ಚೀಫ್ ಆಫ್ ಆರ್ಮಿ ಸ್ಟಾಫ್ ಆಗಿದ್ದವರು ಮಹಾ ಮೇಧಾವಿ ಯೋಧ ಶ್ರೀನಿವಾಸ್ ಕುಮಾರ್ ಸಿನ್ಹಾ. ಮಿಲಿಟರಿಯ ಸೇವಾರ್ಹತೆಯಲ್ಲಿ ಸದ್ಯಕ್ಕಿದ್ದ ಹಿರಿಯರು ಅವರೇ. ಅಲ್ಲದೆ ಅವರು ಪ್ರಥಮ ಮಹಾದಂಡನಾಯಕ ಜನರಲ್ ಕಾರ್ಯಪ್ಪನವರಿಗೆ adc-aide de corps ಅಗಿದ್ದ ಅನುಭವಸ್ಥರು. ಜನರಲ್ ಆಯ್ಕೆಗೆ ಇನ್ನು ಅಧಿಕೃತ ಪ್ರಕಟಣೆಯೊಂದು ಮಾತ್ರ ಉಳಿದಿತ್ತು. ಜ.ಕೃಷ್ಣರಾವ್ ನಿವೃತ್ತರಾಗುವ ಕೇವಲ ಮೂರು ದಿನಗಳ ಹಿಂದೆ ಆ ಅಧಿಕೃತ ಪ್ರಕಟಣೆ ಹೊರಬಿತ್ತು. ದೇಶವನ್ನು ಆಘಾತಕ್ಕೆ ದೂಡಿದ್ದು ಆ ಪ್ರಕಟಣೆಯೇ. ಏಕೆಂದರೆ ಎಸ್. ಕೆ. ಸಿನ್ಹಾ ಅವರಿಗಿಂತ ವಯಸ್ಸಿನಲ್ಲೂ, ಸೇವಾವಧಿಯಲ್ಲೂ ಕಿರಿಯರಾಗಿದ್ದ ಲೆ.ಜ ಎ.ಎಸ್. ವೈದ್ಯ ಅವರನ್ನು ಭೂಸೇನೆಯ ದಂಡನಾಯಕ ಎಂದು ಘೋಷಣೆ ಮಾಡಲಾಗಿತ್ತು. ಈ ಎ.ಎಸ್ ವೈದ್ಯ ಎಂಥ ಮಹಾ ಯೋಧರೆಂದರೆ ಮಹಾವೀರ ಚಕ್ರವನ್ನು ಎರಡೆರಡು ಬಾರಿ ಪಡೆದು mahavirachakra bar ಎಂದು ಹೆಸರು ಪಡೆದಿದ್ದವರು. ಅಂದರೆ ಎಸ್. ಕೆ ಸಿನ್ಹಾರನ್ನು ಸೂಪರ್ ಸೀಡ್ ಮಾಡಲಾಗಿತ್ತು! ಮತ್ತಷ್ಟು ಓದು »

14
ನವೆಂ

ಮೋದಿಜಿ ಮಾಡುವುದೆಲ್ಲ ವೋಟಿಗಲ್ಲಾ…!

– ವಿಕ್ರಮ್ ಎಂ.ಆರ್

know-what-pm-modi-were-doing-in-surgical-strike-nightನಲವತ್ತು ವರ್ಷಗಳಿಂದ ಹಾಗೆಯೇ ಮೂಲೆ ಗುಂಪಾಗಿ ಬಿದ್ದಿತ್ತು. 1973ರಲ್ಲಿ ಇಂದಿರಾಗಾಂಧಿ OROP ಪ್ರಸ್ತಾಪವನ್ನೇ ಕಿತ್ತು ಎಸೆದಿದ್ದರು. ಇಂದು ಮೋದಿ ಸರ್ಕಾರ ದೇಶಕ್ಕಾಗಿ ಜೀವನವನ್ನೇ ಮುಡುಪಾಗಿಟ್ಟ ಸೈನಿಕರ ಕನಸನ್ನು ನನಸು ಮಾಡಿದೆ. GST ಎಷ್ಟು ವರ್ಷದಿಂದ ಚರ್ಚೆಯಲ್ಲಿತ್ತು, ನೀವೇ ವಿಚಾರ ಮಾಡಿ! ಗಾಂಧಿ ಮನೆತನದ ತಂದಿಟ್ಟ ನೂರೆಂಟು ವಿಘ್ನಗಳ ನಡುವೆಯೂ ಮೋದಿಜಿ GST ಬಿಲ್ಲನ್ನು ಸಂಸತ್ತಿನಲ್ಲಿ ತಂದು ಎರಡೂ ಸದನದಲ್ಲಿ ಮಂಡನೆ ಮಾಡಿ ಎಲ್ಲರ ಒಪ್ಪಂದ ಪಡೆದು ಪಾಸು ಮಾಡಲಾಗಿದೆ. ಪ್ರಧಾನಮಂತ್ರಿ ಧನ ಜನ ಯೋಜನೆ ಅಸ್ತಿತ್ವಕ್ಕೆ ಬಂದಾಗಿನಿಂದ ಎಷ್ಟೋ ಕೋಟಿ ಬಡ ಜನರು ಬ್ಯಾಂಕಿನಲ್ಲಿ ತಮ್ಮ ಖಾತೆ ಹೊಂದಿದ್ದಾರೆ. ಮೊದಲು ಅವರಿಗೆ ಸಿಗಬೇಕಾದ ಹಣ ಕೈಗೆ ಬರುತ್ತಿರಲಿಲ್ಲ ಆದರೆ ಈಗ ನೇರವಾಗಿ ಅವರ ಖಾತೆಗೆ ಜಮಾ ಆಗುತ್ತದೆ. ನಮ್ಮ ಕಂಪನಿಯಲ್ಲಿರುವ ಕಾಂಟ್ರಾಕ್ಟ್ ಕೆಲಸಗಾರನೊಬ್ಬ ಹೀಗೆ ಹೇಳುತ್ತಾನೆ “ಸರ್, ಮೊದಲು ನೂರು ರೂಪಾಯಿ ವೇತನ ಇದ್ದರೆ ಅದರಲ್ಲಿ ಇಪ್ಪತ್ತು ರೂಪಾಯಿಯನ್ನು ಮೇಲ್ವಿಚಾರಕ ಇಟ್ಟುಕೊಂಡು ಉಳಿದಿದ್ದನ್ನು ನನಗೆ ಕೊಡುತ್ತಿದ್ದ ಆದರೆ ಈಗ ನೇರವಾಗಿ ನೂರು ರುಪಾಯಿ ನನ್ನ ಬ್ಯಾಂಕಿಗೆ ಬರುತ್ತದೆ”. ಇದು ಒಂದು ಉದಾಹರಣೆ ಅಷ್ಟೇ, ಇಂತಹ ಸಾವಿರ ನಿದರ್ಶನಗಳನ್ನು ಹಂಚಿಕೊಳ್ಳಬಹುದು. ಇವೆಲ್ಲ ಒಂದಲ್ಲಾ ಒಂದುಕಡೆ ದೇಶದ ಅಭಿವೃದ್ಧಿಗೆ ಪೂರಕವಾಗಿದೆ‌. ಆದರೆ ಮೋದಿ ಸರ್ಕಾರ ಏನೇ ಮಾಡಿದರೂ ಕೆಲವರಿಗೆ ಉರಿ. ವಿರೋಧ ಪಕ್ಷ ಅಥವಾ ಕೆಲವು ಬುದ್ಧಿಜೀವಿಗಳು ಮೋದಿಜಿಯವರ ಪ್ರತಿ ಪ್ರಯತ್ನವನ್ನೂ ವಿರೋಧಿಸುವುದು ಯಾತಕ್ಕೆ? ಮಾಡಬೇಕು ಇಲ್ಲವೇ ಮಾಡಲು ಬಿಡಬೇಕು. ಅರವತ್ತು ವರ್ಷವಾಯಿತು, ಇನ್ನೂ ದೇಶ ಎಷ್ಟು ಮುಂದುವರಿಯಬೇಕೋ ಅಷ್ಟು ಮುಂದುವರಿದಿಲ್ಲ. ಮೋದಿಜಿ ಬಂದಾಗಿನಿಂದ ಒಂದು ರಿದಮ್ ಸಿಕ್ಕಿದೆ ಅದನ್ನು ಹಾಳು ಮಾಡಲು‌ ಕಾರಣಗಳೇನು? ಏನೇ ಮಾಡಿದರೂ ಅದು ಚುನಾವಣೆಯಲ್ಲಿ ಮತ ಗಳಿಸಲೇ ಮಾಡಿದ್ದು ಎಂದು ಡಂಗುರ ಬಾರಿಸುತ್ತ ಸಾರುವ ಈ ಎಡಬಿಡಂಗಿಗಳ ಉದ್ದೇಶವಾದರೂ ಏನು? ಮತ್ತಷ್ಟು ಓದು »

24
ಆಗಸ್ಟ್

ಇವರು ಮೆಚ್ಚುವ ವಸ್ತು ಇಲ್ಲಿಲ್ಲ ಜೋಕೆ!

– ತೇಜಸ್ವಿನಿ ಹೆಗಡೆ.

india-pakistan-border5ಅದೊಂದು ಸುವಿಶಾಲ ಮನೆ. ಎಷ್ಟಂಕಣದ್ದು ಎಂದು ಹೇಳಲೂ ಆಗದಷ್ಟು ದೊಡ್ಡ ಮನೆ! ಆ ಮನೆಯೊಳಗೆ ಅಸಂಖ್ಯಾತ ಕೋಣೆಗಳು. ಗಾತ್ರದಲ್ಲಿ, ಆಕಾರಗಳಲ್ಲಿ, ಅಂದ ಚೆಂದಗಳಲ್ಲಿ ವಿವಿಧತೆಯನ್ನು, ವೈವಿಧ್ಯಗಳನ್ನು ಹೊಂದಿದ ಕೋಣೆಗಳು. ಅದೊಂದು ಬಹು ದೊಡ್ಡ ಒಟ್ಟು ಕುಟುಂಬ. ಕೆಲವು ಸದಸ್ಯರಿಗಂತೂ ಕೋಣೆಗಳೇ ಇಲ್ಲ. ಇದಕ್ಕಾಗಿ ಹೋರಾಟ ಮಾಡುತ್ತಿರುತ್ತಾರೆ. ಅವರ ಇದೇ ಅನಿವಾರ್ಯತೆಯನ್ನೇ ಬಂಡವಾಳ ಮಾಡಿಕೊಂಡು, ಅವರ ನೈಜ ಹೋರಾಟವನ್ನೇ ದಿಕ್ಕೆಡಿಸಿ, ತಮ್ಮ ಕುಟಿಲ ಸ್ವಾರ್ಥಕ್ಕಾಗಿಯೇ ಮನೆಯೊಡೆಯಲು ಕೆಲವೊಂದು ಸದಸ್ಯರು ಸಂಚು ಮಾಡುತ್ತಿರುತ್ತಾರೆ. ಕೆಲವು ನೆರಹೊರೆಯ ಕುಟುಂಬಗಳ ಕುಮ್ಮಕ್ಕೂ ಇದಕ್ಕೆ ಲಭಿಸುತ್ತಿರುತ್ತದೆ. ಹೀಗಾಗಿ ಕಚ್ಚಾಟ, ಜಗಳ, ಹೊಡೆದಾಟ ಪ್ರತಿದಿವಸವೂ ಅಲ್ಲಿ ನಡೆಯುತ್ತಿರುತ್ತದೆ ಮತ್ತು ಅದನ್ನು ಆ ಇಡೀ ಮನೆಯ ಜವಾಬ್ದಾರಿಯನ್ನು ಹೊತ್ತ ಯಜಮಾನ ಹಾಗೂ ಇನ್ನಿತರ ಹಿರಿಯ ಸದಸ್ಯರು ಬಗೆಹರಿಸಲು ಪ್ರಯತ್ನಿಸುತ್ತಲೇ ಇರುತ್ತಾರೆ. ಕಾಲ ಸರಿದಂತೇ, ಸ್ವಾರ್ಥಿಗಳ ಸತತ ತಲೆತುಂಬುವಿಕೆಯ ಪರಿಣಾಮದಿಂದ ಮನೆಯ ಕೆಲವೊಂದಿಷ್ಟು ಜನಕ್ಕೆ ಆಗಾಗ ಅನ್ನಿಸತೊಡಗುತ್ತದೆ.. ಈ ಮನೆಯೊಳಗೆ ಮಾತ್ರ ಸರಿಯಾದ ವ್ಯವಸ್ಥೆಯಿಲ್ಲ.. ಯಾವುದೂ ಸರಿಯಿಲ್ಲ.. ಭದ್ರತೆಯಿಲ್ಲ.. ಎಂಬಿತ್ಯಾದಿ ಕೊರಗು, ಕೂಗು ಎದ್ದೇಳುತ್ತಿರುತ್ತದೆ. ಮನೆಯನ್ನು ಒಂದಿಷ್ಟು ಪಾಲು ಮಾಡಿ ಹಂಚಿದರೇ ಪರಿಹಾರ ಎಂದು ಹೊರಟವರೂ ಹಲವರಿರುತ್ತಾರೆ. ಆದರೆ ಆ ಮನೆಯ ಹೊರಗೆ ಬಿದ್ದರೆ, ಅದರ ಅಕ್ಕ ಪಕ್ಕದ ಅಷ್ಟೇ ಮನೆಗಳೊಳಗಿನ ಸ್ಥಿತಿ-ಗತಿಯೂ ಬಹುಪಾಲು ಅದೇ ರೀತಿ ಇರುವುದು ಆ ಜನರಿಗೆ ಅರಿವಾಗಿರುವುದೇ ಇಲ್ಲ ಅಥವಾ ಕೆಲವರಿಗೆ ತಿಳಿದಿದ್ದರೂ ತಿಳಿಯದಂತೇ ನಟಿಸುತ್ತಿರುತ್ತಾರೆ. ಕ್ರಮೇಣ ಮನೆಯೊಳಗಿನ ಪ್ರತಿಯೊಂದು ಸಂಭ್ರಮದಲ್ಲೂ ಒಂದಲ್ಲಾ ಒಂದು ಕೊರಗು, ಕೆಡುಕು ತೆಗೆದು ಕಟಕಿಯಾಡುವ, ಮನೆಯನ್ನು, ಮನೆ ಮಂದಿಯನ್ನು ಹಳಿಯುತ್ತಲೇ, ಜರೆಯುತ್ತಲೇ ಸವೆಯುವ ಪ್ರಕ್ರಿಯೆ ಶುರುವಾಗುತ್ತದೆ. ಮತ್ತಷ್ಟು ಓದು »

8
ಆಗಸ್ಟ್

ಸುಮ್ಮ ಸುಮ್ಮನೆ ಬರಲಿಲ್ಲ ಕನ್ನಡಕ್ಕೆ ಮಹಾವೀರ ಚಕ್ರ ; ಇವರು ಮಹಾವೀರತೆಯ ಜೀವಂತ ಸ್ಮಾರಕ

– ಸಂತೋಷ್ ತಮ್ಮಯ್ಯ

9ದೇಶದ ಎರಡನೆಯ ಅತಿದೊಡ್ಡ ಶೌರ್ಯ ಪದಕ ಮಹಾವೀರ ಚಕ್ರ ಪದಕದ ಗೌರವಕ್ಕೆ ಪಾತ್ರರಾದ ಇಬ್ಬರು ಮಹಾಯೋಧರಲ್ಲಿ ಲೆ.ಕರ್ನಲ್ ಪಿ.ಎಸ್. ಗಣಪತಿ ಎರಡನೆಯವರು. ಅವರ ಬಗ್ಗೆ ಪತ್ರಿಕೆಗಳಲ್ಲಿ ಬಂದಿಲ್ಲ, ಟಿ ವಿ ಅವರ ಸಂದರ್ಶನ ನಡೆಸಿಲ್ಲ. ಅವರು ಸಭೆ ಸಮಾರಂಭಗಳಿಗೆ ಹೋಗಿಲ್ಲ. ಅವರ ಬಗ್ಗೆ ನಾಡಿನ ಜನಕ್ಕೆ ಏನೆಂದರೆ ಏನೂ ತಿಳಿದಿಲ್ಲ. ಅವರ ಸಂಪರ್ಕ ಸಂಖ್ಯೆ: 9980009687

ನೋಡಲು ಅದೊಂದು ಲೋಹದ ಬಿಲ್ಲೆ. ಅದರಲ್ಲಿ ನಕ್ಷತ್ರದ ಚಿಹ್ನೆ. ಅದರ ಅಂಚಿನಲ್ಲಿ ಕಂಡೂ ಕಾಣದಂತೆ ಕೆತ್ತಿದ ಪಡೆದವರ ಹೆಸರು, ಪಡೆದ ದಿನಾಂಕ. ಕದನಕ್ಕೆ ತೆರಳಿದ ಪ್ರತೀ ಯೋಧನಿಗೂ ಅದನ್ನು ಪಡೆಯುವ ಅದಮ್ಯ ಹಂಬಲ. ಏಕೆಂದರೆ ಅದು ವೀರತೆಯ ಪ್ರತೀಕ. ಹೆಸರು ಮಹಾವೀರ ಚಕ್ರ. ಯುದ್ಧಕಾಲದಲ್ಲಿ ಮಹಾಪರಾಕ್ರಮಕ್ಕೆ ನೀಡುವ ಎರಡನೆಯ ಅತೀ ದೊಡ್ಡ ಶೌರ್ಯ ಪ್ರಶಸ್ತಿ. ಬ್ರಿಟಿಷ್ ಸೈನ್ಯದಲ್ಲಿ ‘ಡಿಶ್ಟಿಂಗ್ವಿಸ್ಡ್ ಸರ್ವೀಸ್ ಕ್ರಾಸ್’ ಹೇಗೋ ಹಾಗೆ ಭಾರತಕ್ಕೆ ಈ ಮಹಾವೀರ ಚಕ್ರ. ಮಹಾ ಸಮರಪಡೆಯನ್ನು ಹೊಂದಿರುವ ಭಾರತದಲ್ಲಿ ೧೯೪೭ರಿಂದ ಇದುವರೆಗೆ ಮಹಾವೀರ ಚಕ್ರದ ಗೌರವಕ್ಕೆ ಪಾತ್ರರಾದವರು ಕೇವಲ ೨೧೮ ಮಂದಿ ವೀರರು. ಅವರಲ್ಲಿ ೬ ಜನ ಯೋಧರು ಮಹಾವೀರ ಚಕ್ರವನ್ನು ಎರಡೆರಡು ಬಾರಿ ಪಡೆದ ವೀರರಲ್ಲಿ ವೀರರು (MahaVira chakra bar). ಹೀಗಿರುವಾಗ ಭಾರತೀಯ ಸೈನ್ಯಕ್ಕೆ ಮಹಾಮಹಾ ಯೋಧರನ್ನು ನೀಡಿದ ನಮ್ಮ ಕರ್ನಾಟಕದಲ್ಲಿ ಇದನ್ನು ಪಡೆದವರಾರು ಎಂದು ನೋಡಿದರೆ ಕಾಣುವವರು ಕನ್ನಡದ ಇಬ್ಬರು ಮಹಾರ ಚಕ್ರಧರರು. ಅವರಲ್ಲೊಬ್ಬರು ‘ಟೈಗರ್ ಆಫ್ ಸರ್ಗೋದಾ’ ಎಂದು ಖ್ಯಾತರಾದ ಸ್ಕ್ವಾ.ಲೀ.ಅಜ್ಜಾಮಾಡ ಬಿ.ದೇವಯ್ಯ. ಮತ್ತೊಬ್ಬರು ಮೇ.(ನಂತರ ಲೆ.ಕರ್ನಲ್)ಪಿ.ಎಸ್ ಗಣಪತಿ. ಒಬ್ಬರು ಅಮರಯೋಧ. ಮತ್ತೊಬ್ಬರು ಮಹಾವೀರತೆಯ ಜೀವಂತ ಸ್ಮಾರಕ. ಮತ್ತಷ್ಟು ಓದು »

6
ಆಗಸ್ಟ್

ಎಲ್ಲಿಯ ಹವಾಲ್ದಾರ್ ಜಪ್ಪು? ಎಲ್ಲಿಯ ಸದ್ದಾಂ ಹುಸೇನ್?

– ಸಂತೋಷ್ ತಮ್ಮಯ್ಯ

jappuಮೂರು ವರ್ಷದ ಹಿಂದೆ ಇಂಥದ್ದೇ ಒಂದು ಮಳೆಗಾಲದಲ್ಲಿ ಹವಾಲ್ದಾರ್ ಜಪ್ಪು ಬೆಂಗಳೂರಿನಲ್ಲಿ ಸಿಕ್ಕಿದ್ದರು. ಅಂದು ಜಪ್ಪು ಕಾರ್ಗಿಲ್ ವಿಜಯ್ ದಿವಸ್ ಆಚರಿಸಲು ತಮ್ಮ ಮೆಡಲುಗಳ ಸಮೇತ ಬೆಂಗಳೂರಿಗೆ ಬಂದುಬಿಟ್ಟಿದ್ದರು. ಅದಾದ ನಂತರ ಮತ್ತೆ ಮೊನ್ನೆ ಸಿಕ್ಕಿದ್ದರು. ಸಿಕ್ಕವರು ಈಗ ತಾನು ಊರಲ್ಲಿಲ್ಲವೆಂದೂ ದಕ್ಷಿಣ ಕೊಡಗಿನ ತಾವಳಗೇರಿ ಶೆಟ್ಟಿಗೇರಿ ಎಂಬ ಊರಲ್ಲಿರುವುದಾಗಿಯೂ ಬಾಡಿಗೆ ಮನೆಯೊಂದನ್ನು ಹಿಡಿದು ಮಗಳನ್ನು ಪ್ರೈಮರಿ ಓದಿಸುತ್ತಿದ್ದೇನೆಂದು ಹೇಳಿದ್ದರು. ಪುರುಸೋತ್ತಾದಾಗ ಒಮ್ಮೆ ಮನೆಗೆ ಬರಬೇಕೆಂದೂ ಹೇಳಿದ್ದರು. ಮೂರು ವರ್ಷಗಳ ಹಿಂದೆ ಇದ್ದ ಆ ದೊಡ್ಡ ಸ್ವರದ ರಭಸ ಕಿಂಚಿತ್ತೂ ಮಾಸಿರಲಿಲ್ಲ. ಗಡಸುತನ ಮಾಯವಾಗಿರಲಿಲ್ಲ. ಆದರೆ ಮಾತುಮಾತಿಗೆ ಆಕ್ರೋಶಗೊಳ್ಳುವ ಅವರ ಜಾಯಮಾನ ಮೂರು ವರ್ಷಗಳಲ್ಲಿ ಮೂರುಪಟ್ಟು ಹೆಚ್ಚಿದಂತೆ ಕಂಡುಬಂತು. ಮತ್ತಷ್ಟು ಓದು »