ಮುಧೋಳ ನಾಯಿಯ ಜೊತೆಯ ಹೋಲಿಕೆಗೆ ಇವರು ಅರ್ಹರೇ?

ಲಾಲ್ ಬಹೂದ್ದೂರ್ ಶಾಸ್ತ್ರಿಗಳ ಬಾಯಿಂದ ಭಾರತ್ ಕೀ ಆಯೂಬ್ ಎಂದು ಬೆನ್ನು ತಟ್ಟಿಸಿಕೊಂಡ ಒರ್ವ ಯೋಧ ಕ್ಯಾ.ಆಯೂಬ್ ಖಾನ್. ವೀರ ಚಕ್ರ ಪುರಷ್ಕೃತ ಕ್ಯಾ.ಖಾನ್ಗೆ ಶಾಸ್ತ್ರಿ ಮೇಲೆ ಅದೆಷ್ಟು ಅಭಿಮಾನವಿತ್ತೆಂದರೆ ನಿವೃತ್ತಿಯ ನಂತರ ಅವರು ಕಾಂಗ್ರೆಸ್ಗೆ ಸೇರಿದರು. ಎರಡು ಬಾರಿ ರಾಜಾಸ್ಥಾನದ ಜುಂಜುನು ಲೋಕಸಭಾ ಕ್ಷೇತ್ರದಿಂದ ಸ್ಫರ್ಧಿಸಿ ಸಂಸದರೂ ಆದರು. ಆದರೆ ಆಯೂಬ್ ಖಾನರಿಗೆ ಶಾಸ್ತ್ರಿಗಳ ನಿಧನಾನಂತರ ಯಾಕೋ ತನ್ನ ಆಯ್ಕೆ ತಪ್ಪಿದೆ ಎನಿಸತೊಡಗಿತು. ಇಂದಿರಾ ಸರ್ವಾಧಿಕಾರ ಮತ್ತು ರಾಜೀವ್ ಗಾಂಧಿ ಪಟಾಲಮ್ಮಿನ ಸೈನಿಕ ವಿರೋಧಿ ನೀತಿಗಳನ್ನು ಸಹಿಸುವಷ್ಟು ದಿನ ಸಹಿಸಿದರು. ಕೊನೆಗೆ ಶಾಸ್ತ್ರಿಗಳಿಗಾದ ಸ್ಥಿತಿ ನರಸಿಂಹರಾಯರಿಗೂ ಬಂದಾಗ ಹಿಂದೆ ಮುಂದೆ ನೋಡದೆ ಕಾಂಗ್ರೆಸ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ರಾಜಕೀಯ ಸಂನ್ಯಾಸ ಸ್ವೀಕರಿಸಿದರು. ಕೊನೆ ಕಾಲದಲ್ಲಿ ಆಯೂಬ್ ಖಾನರಿಗೆ ಕಾಂಗ್ರೆಸ್ ಸೇರಿದ್ದ ಬಗ್ಗೆ ಎಷ್ಟು ಪಾಪಪ್ರಜ್ಞೆ ಕಾಡುತ್ತಿತ್ತೆಂದರೆ ಆರೋಗ್ಯ ವಿಚಾರಿಸಲು ಬಂದ ವಾಜಪೇಯಿಯವರ ಪಾದಸ್ಪರ್ಶಕ್ಕೆ ಅನುಮತಿಯನ್ನೂ ಆ ಯೋಧ ಕೇಳಿದ್ದರು. ಏಕೆಂದರೆ ಒಬ್ಬ ದೇಶಭಕ್ತ ಯೋಧ ಮತ್ತು ಕಾಂಗ್ರೆಸಿಗ ಏಕಕಾಲಕ್ಕೆ ಆಗಲು ಸಾಧ್ಯವಿಲ್ಲ ಎಂಬ ಸತ್ಯ ಆಯೂಬ್ ಖಾನರಿಗೆ ತಮ್ಮ ಕೊನೆಕಾಲದಲ್ಲಿ ಅರ್ಥವಾಗಿತ್ತು.
ಯೋಧನ ಮಾತುಗಳಲ್ಲಿ…
ಸುರೇಶ್ ಮುಗ್ಬಾಳ್
ತಿಪಟೂರು
ಛತ್ತೀಸಘಡದಲ್ಲಿನ ನಕ್ಸಲರ ಕ್ರೌರ್ಯಕ್ಕೂ, ಹತ್ಯೆಯಾದ 25 ಯೋಧರಿಗೂ ಅದೇನು ದ್ವೇಷಗಳಿತ್ತೋ ಏನೋ ಯಾರಿಗೂ ಗೊತ್ತಿಲ್ಲ. ಆದರೆ 300 ಜನ ನಕ್ಸಲರ ಗುಂಪು ಏಕಾ-ಏಕಿ CRPF ಯೋಧರಿದ್ದಲ್ಲಿಗೆ ನುಗ್ಗಿ ಒಂದೇ ಸಮನೆ ಗುಂಡು ಹಾರಿಸಿಬಿಟ್ಟಿದ್ದರು. ಕಾರಣ; ಗುಂಡುಹಾರಿಸಿಕೊಂಡು ಸತ್ತವರೆಲ್ಲಾ ಯೋಧರಾಗಿದ್ದರು, ಸೇನಾ ಸಮವಸ್ತ್ರದಲ್ಲಿದ್ದರು ಮತ್ತು ಸರ್ಕಾರದ ಪರ ಕೆಲಸ ಮಾಡುವವರಾಗಿದ್ದರು ಅಷ್ಟೇ. ವೈಯಕ್ತಿಕ ದ್ವೇಷ ಖಂಡಿತ ಯಾರಿಗೂ ಇದ್ದಿರಲಿಕ್ಕಿಲ್ಲ. Read more
ಆ ಯೋಧನ ಸಾವೂ ಕೂಡಾ ಚಿಲ್ಲರೆ ಸಂಗತಿಯಲ್ಲಿ ಹೂತುಹೋಯಿತು..!
– ಸಂತೋಷ್ ತಮ್ಮಯ್ಯ
ಅಂದು ಭಾರತೀಯ ಮಿಲಿಟರಿ ಇತಿಹಾಸದಲ್ಲಿ ಹಿಂದೆಂದೂ ನಡೆಯದ ಘಟನೆಯೊಂದುನಡೆದುಹೋಗಿತ್ತು. ದೇಶಾದ್ಯಂತ ಅಚ್ಚರಿ, ಕೆಲವರಿಗೆ ಆಘಾತ. ಇದೇಕೆ ಹೀಗೆ ಎಂಬ ಉದ್ಗಾರ. ಆರ್ಮಿ ಕೇಂದ್ರಕಛೇರಿಯ ಸೌತ್ಬ್ಲಾಕ್ನಲ್ಲಿ ತಿಂಗಳುಗಟ್ಟಲೆ ಗಾಸಿಫ್ಗಳು. ಎಮರ್ಜೆನ್ಸಿ ಇನ್ನೂ ಹೋಗಿಲ್ಲವೇ? ಇಂದಿರಾ ಸರ್ವಾಧಿಕಾರಕ್ಕೆ ಇದಕ್ಕಿಂತ ಇನ್ನೇನು ಉದಾಹರಣೆ ಬೇಕು ಎಂದು ವಿರೋಧ ಪಕ್ಷಗಳ ಆರೋಪ.
ಅಂದು ನಡೆದಿದ್ದು ಇಷ್ಟು:
ಆರ್ಮಿಯ ೧೧ನೇ ಚೀಫ್ ಆಫ್ ಆರ್ಮಿ ಸ್ಟಾಫ್ ಕೆ.ವಿ ಕೃಷ್ಣರಾವ್ ೧೯೮೩ರ ಮೇ ಕೊನೆಯಲ್ಲಿ ನಿವೃತ್ತರಾಗುವವರಿದ್ದರು. ಕೆಲವು ದಿನಗಳ ಹಿಂದಿನಿಂದಲೇ ಸೌತ್ ಬ್ಲಾಕ್ ಹೊಸ ಜನರಲ್ನ ನೇಮಕದ ಪ್ರಕ್ರಿಯೆಯಲ್ಲಿ ನಿರತವಾಗಿತ್ತು. ಹೊಸ ಜನರಲ್ ಯಾರೆಂಬ ಬಗ್ಗೆ ಆರ್ಮಿಗಾಗಲಿ, ಜನರಿಗಾಗಲೀ ಯಾವುದೇ ಗೊಂದಲಗಳಿರಲಿಲ್ಲ. ಏಕೆಂದರೆ ಕೃಷ್ಣರಾವ್ ಚೀಫ್ ಆಗಿದ್ದಾಗ ವೈಸ್ ಚೀಫ್ ಆಫ್ ಆರ್ಮಿ ಸ್ಟಾಫ್ ಆಗಿದ್ದವರು ಮಹಾ ಮೇಧಾವಿ ಯೋಧ ಶ್ರೀನಿವಾಸ್ ಕುಮಾರ್ ಸಿನ್ಹಾ. ಮಿಲಿಟರಿಯ ಸೇವಾರ್ಹತೆಯಲ್ಲಿ ಸದ್ಯಕ್ಕಿದ್ದ ಹಿರಿಯರು ಅವರೇ. ಅಲ್ಲದೆ ಅವರು ಪ್ರಥಮ ಮಹಾದಂಡನಾಯಕ ಜನರಲ್ ಕಾರ್ಯಪ್ಪನವರಿಗೆ adc-aide de corps ಅಗಿದ್ದ ಅನುಭವಸ್ಥರು. ಜನರಲ್ ಆಯ್ಕೆಗೆ ಇನ್ನು ಅಧಿಕೃತ ಪ್ರಕಟಣೆಯೊಂದು ಮಾತ್ರ ಉಳಿದಿತ್ತು. ಜ.ಕೃಷ್ಣರಾವ್ ನಿವೃತ್ತರಾಗುವ ಕೇವಲ ಮೂರು ದಿನಗಳ ಹಿಂದೆ ಆ ಅಧಿಕೃತ ಪ್ರಕಟಣೆ ಹೊರಬಿತ್ತು. ದೇಶವನ್ನು ಆಘಾತಕ್ಕೆ ದೂಡಿದ್ದು ಆ ಪ್ರಕಟಣೆಯೇ. ಏಕೆಂದರೆ ಎಸ್. ಕೆ. ಸಿನ್ಹಾ ಅವರಿಗಿಂತ ವಯಸ್ಸಿನಲ್ಲೂ, ಸೇವಾವಧಿಯಲ್ಲೂ ಕಿರಿಯರಾಗಿದ್ದ ಲೆ.ಜ ಎ.ಎಸ್. ವೈದ್ಯ ಅವರನ್ನು ಭೂಸೇನೆಯ ದಂಡನಾಯಕ ಎಂದು ಘೋಷಣೆ ಮಾಡಲಾಗಿತ್ತು. ಈ ಎ.ಎಸ್ ವೈದ್ಯ ಎಂಥ ಮಹಾ ಯೋಧರೆಂದರೆ ಮಹಾವೀರ ಚಕ್ರವನ್ನು ಎರಡೆರಡು ಬಾರಿ ಪಡೆದು mahavirachakra bar ಎಂದು ಹೆಸರು ಪಡೆದಿದ್ದವರು. ಅಂದರೆ ಎಸ್. ಕೆ ಸಿನ್ಹಾರನ್ನು ಸೂಪರ್ ಸೀಡ್ ಮಾಡಲಾಗಿತ್ತು! Read more
ಮೋದಿಜಿ ಮಾಡುವುದೆಲ್ಲ ವೋಟಿಗಲ್ಲಾ…!
– ವಿಕ್ರಮ್ ಎಂ.ಆರ್
ನಲವತ್ತು ವರ್ಷಗಳಿಂದ ಹಾಗೆಯೇ ಮೂಲೆ ಗುಂಪಾಗಿ ಬಿದ್ದಿತ್ತು. 1973ರಲ್ಲಿ ಇಂದಿರಾಗಾಂಧಿ OROP ಪ್ರಸ್ತಾಪವನ್ನೇ ಕಿತ್ತು ಎಸೆದಿದ್ದರು. ಇಂದು ಮೋದಿ ಸರ್ಕಾರ ದೇಶಕ್ಕಾಗಿ ಜೀವನವನ್ನೇ ಮುಡುಪಾಗಿಟ್ಟ ಸೈನಿಕರ ಕನಸನ್ನು ನನಸು ಮಾಡಿದೆ. GST ಎಷ್ಟು ವರ್ಷದಿಂದ ಚರ್ಚೆಯಲ್ಲಿತ್ತು, ನೀವೇ ವಿಚಾರ ಮಾಡಿ! ಗಾಂಧಿ ಮನೆತನದ ತಂದಿಟ್ಟ ನೂರೆಂಟು ವಿಘ್ನಗಳ ನಡುವೆಯೂ ಮೋದಿಜಿ GST ಬಿಲ್ಲನ್ನು ಸಂಸತ್ತಿನಲ್ಲಿ ತಂದು ಎರಡೂ ಸದನದಲ್ಲಿ ಮಂಡನೆ ಮಾಡಿ ಎಲ್ಲರ ಒಪ್ಪಂದ ಪಡೆದು ಪಾಸು ಮಾಡಲಾಗಿದೆ. ಪ್ರಧಾನಮಂತ್ರಿ ಧನ ಜನ ಯೋಜನೆ ಅಸ್ತಿತ್ವಕ್ಕೆ ಬಂದಾಗಿನಿಂದ ಎಷ್ಟೋ ಕೋಟಿ ಬಡ ಜನರು ಬ್ಯಾಂಕಿನಲ್ಲಿ ತಮ್ಮ ಖಾತೆ ಹೊಂದಿದ್ದಾರೆ. ಮೊದಲು ಅವರಿಗೆ ಸಿಗಬೇಕಾದ ಹಣ ಕೈಗೆ ಬರುತ್ತಿರಲಿಲ್ಲ ಆದರೆ ಈಗ ನೇರವಾಗಿ ಅವರ ಖಾತೆಗೆ ಜಮಾ ಆಗುತ್ತದೆ. ನಮ್ಮ ಕಂಪನಿಯಲ್ಲಿರುವ ಕಾಂಟ್ರಾಕ್ಟ್ ಕೆಲಸಗಾರನೊಬ್ಬ ಹೀಗೆ ಹೇಳುತ್ತಾನೆ “ಸರ್, ಮೊದಲು ನೂರು ರೂಪಾಯಿ ವೇತನ ಇದ್ದರೆ ಅದರಲ್ಲಿ ಇಪ್ಪತ್ತು ರೂಪಾಯಿಯನ್ನು ಮೇಲ್ವಿಚಾರಕ ಇಟ್ಟುಕೊಂಡು ಉಳಿದಿದ್ದನ್ನು ನನಗೆ ಕೊಡುತ್ತಿದ್ದ ಆದರೆ ಈಗ ನೇರವಾಗಿ ನೂರು ರುಪಾಯಿ ನನ್ನ ಬ್ಯಾಂಕಿಗೆ ಬರುತ್ತದೆ”. ಇದು ಒಂದು ಉದಾಹರಣೆ ಅಷ್ಟೇ, ಇಂತಹ ಸಾವಿರ ನಿದರ್ಶನಗಳನ್ನು ಹಂಚಿಕೊಳ್ಳಬಹುದು. ಇವೆಲ್ಲ ಒಂದಲ್ಲಾ ಒಂದುಕಡೆ ದೇಶದ ಅಭಿವೃದ್ಧಿಗೆ ಪೂರಕವಾಗಿದೆ. ಆದರೆ ಮೋದಿ ಸರ್ಕಾರ ಏನೇ ಮಾಡಿದರೂ ಕೆಲವರಿಗೆ ಉರಿ. ವಿರೋಧ ಪಕ್ಷ ಅಥವಾ ಕೆಲವು ಬುದ್ಧಿಜೀವಿಗಳು ಮೋದಿಜಿಯವರ ಪ್ರತಿ ಪ್ರಯತ್ನವನ್ನೂ ವಿರೋಧಿಸುವುದು ಯಾತಕ್ಕೆ? ಮಾಡಬೇಕು ಇಲ್ಲವೇ ಮಾಡಲು ಬಿಡಬೇಕು. ಅರವತ್ತು ವರ್ಷವಾಯಿತು, ಇನ್ನೂ ದೇಶ ಎಷ್ಟು ಮುಂದುವರಿಯಬೇಕೋ ಅಷ್ಟು ಮುಂದುವರಿದಿಲ್ಲ. ಮೋದಿಜಿ ಬಂದಾಗಿನಿಂದ ಒಂದು ರಿದಮ್ ಸಿಕ್ಕಿದೆ ಅದನ್ನು ಹಾಳು ಮಾಡಲು ಕಾರಣಗಳೇನು? ಏನೇ ಮಾಡಿದರೂ ಅದು ಚುನಾವಣೆಯಲ್ಲಿ ಮತ ಗಳಿಸಲೇ ಮಾಡಿದ್ದು ಎಂದು ಡಂಗುರ ಬಾರಿಸುತ್ತ ಸಾರುವ ಈ ಎಡಬಿಡಂಗಿಗಳ ಉದ್ದೇಶವಾದರೂ ಏನು? Read more
ಇವರು ಮೆಚ್ಚುವ ವಸ್ತು ಇಲ್ಲಿಲ್ಲ ಜೋಕೆ!
– ತೇಜಸ್ವಿನಿ ಹೆಗಡೆ.
ಅದೊಂದು ಸುವಿಶಾಲ ಮನೆ. ಎಷ್ಟಂಕಣದ್ದು ಎಂದು ಹೇಳಲೂ ಆಗದಷ್ಟು ದೊಡ್ಡ ಮನೆ! ಆ ಮನೆಯೊಳಗೆ ಅಸಂಖ್ಯಾತ ಕೋಣೆಗಳು. ಗಾತ್ರದಲ್ಲಿ, ಆಕಾರಗಳಲ್ಲಿ, ಅಂದ ಚೆಂದಗಳಲ್ಲಿ ವಿವಿಧತೆಯನ್ನು, ವೈವಿಧ್ಯಗಳನ್ನು ಹೊಂದಿದ ಕೋಣೆಗಳು. ಅದೊಂದು ಬಹು ದೊಡ್ಡ ಒಟ್ಟು ಕುಟುಂಬ. ಕೆಲವು ಸದಸ್ಯರಿಗಂತೂ ಕೋಣೆಗಳೇ ಇಲ್ಲ. ಇದಕ್ಕಾಗಿ ಹೋರಾಟ ಮಾಡುತ್ತಿರುತ್ತಾರೆ. ಅವರ ಇದೇ ಅನಿವಾರ್ಯತೆಯನ್ನೇ ಬಂಡವಾಳ ಮಾಡಿಕೊಂಡು, ಅವರ ನೈಜ ಹೋರಾಟವನ್ನೇ ದಿಕ್ಕೆಡಿಸಿ, ತಮ್ಮ ಕುಟಿಲ ಸ್ವಾರ್ಥಕ್ಕಾಗಿಯೇ ಮನೆಯೊಡೆಯಲು ಕೆಲವೊಂದು ಸದಸ್ಯರು ಸಂಚು ಮಾಡುತ್ತಿರುತ್ತಾರೆ. ಕೆಲವು ನೆರಹೊರೆಯ ಕುಟುಂಬಗಳ ಕುಮ್ಮಕ್ಕೂ ಇದಕ್ಕೆ ಲಭಿಸುತ್ತಿರುತ್ತದೆ. ಹೀಗಾಗಿ ಕಚ್ಚಾಟ, ಜಗಳ, ಹೊಡೆದಾಟ ಪ್ರತಿದಿವಸವೂ ಅಲ್ಲಿ ನಡೆಯುತ್ತಿರುತ್ತದೆ ಮತ್ತು ಅದನ್ನು ಆ ಇಡೀ ಮನೆಯ ಜವಾಬ್ದಾರಿಯನ್ನು ಹೊತ್ತ ಯಜಮಾನ ಹಾಗೂ ಇನ್ನಿತರ ಹಿರಿಯ ಸದಸ್ಯರು ಬಗೆಹರಿಸಲು ಪ್ರಯತ್ನಿಸುತ್ತಲೇ ಇರುತ್ತಾರೆ. ಕಾಲ ಸರಿದಂತೇ, ಸ್ವಾರ್ಥಿಗಳ ಸತತ ತಲೆತುಂಬುವಿಕೆಯ ಪರಿಣಾಮದಿಂದ ಮನೆಯ ಕೆಲವೊಂದಿಷ್ಟು ಜನಕ್ಕೆ ಆಗಾಗ ಅನ್ನಿಸತೊಡಗುತ್ತದೆ.. ಈ ಮನೆಯೊಳಗೆ ಮಾತ್ರ ಸರಿಯಾದ ವ್ಯವಸ್ಥೆಯಿಲ್ಲ.. ಯಾವುದೂ ಸರಿಯಿಲ್ಲ.. ಭದ್ರತೆಯಿಲ್ಲ.. ಎಂಬಿತ್ಯಾದಿ ಕೊರಗು, ಕೂಗು ಎದ್ದೇಳುತ್ತಿರುತ್ತದೆ. ಮನೆಯನ್ನು ಒಂದಿಷ್ಟು ಪಾಲು ಮಾಡಿ ಹಂಚಿದರೇ ಪರಿಹಾರ ಎಂದು ಹೊರಟವರೂ ಹಲವರಿರುತ್ತಾರೆ. ಆದರೆ ಆ ಮನೆಯ ಹೊರಗೆ ಬಿದ್ದರೆ, ಅದರ ಅಕ್ಕ ಪಕ್ಕದ ಅಷ್ಟೇ ಮನೆಗಳೊಳಗಿನ ಸ್ಥಿತಿ-ಗತಿಯೂ ಬಹುಪಾಲು ಅದೇ ರೀತಿ ಇರುವುದು ಆ ಜನರಿಗೆ ಅರಿವಾಗಿರುವುದೇ ಇಲ್ಲ ಅಥವಾ ಕೆಲವರಿಗೆ ತಿಳಿದಿದ್ದರೂ ತಿಳಿಯದಂತೇ ನಟಿಸುತ್ತಿರುತ್ತಾರೆ. ಕ್ರಮೇಣ ಮನೆಯೊಳಗಿನ ಪ್ರತಿಯೊಂದು ಸಂಭ್ರಮದಲ್ಲೂ ಒಂದಲ್ಲಾ ಒಂದು ಕೊರಗು, ಕೆಡುಕು ತೆಗೆದು ಕಟಕಿಯಾಡುವ, ಮನೆಯನ್ನು, ಮನೆ ಮಂದಿಯನ್ನು ಹಳಿಯುತ್ತಲೇ, ಜರೆಯುತ್ತಲೇ ಸವೆಯುವ ಪ್ರಕ್ರಿಯೆ ಶುರುವಾಗುತ್ತದೆ. Read more
ಸುಮ್ಮ ಸುಮ್ಮನೆ ಬರಲಿಲ್ಲ ಕನ್ನಡಕ್ಕೆ ಮಹಾವೀರ ಚಕ್ರ ; ಇವರು ಮಹಾವೀರತೆಯ ಜೀವಂತ ಸ್ಮಾರಕ
– ಸಂತೋಷ್ ತಮ್ಮಯ್ಯ
ದೇಶದ ಎರಡನೆಯ ಅತಿದೊಡ್ಡ ಶೌರ್ಯ ಪದಕ ಮಹಾವೀರ ಚಕ್ರ ಪದಕದ ಗೌರವಕ್ಕೆ ಪಾತ್ರರಾದ ಇಬ್ಬರು ಮಹಾಯೋಧರಲ್ಲಿ ಲೆ.ಕರ್ನಲ್ ಪಿ.ಎಸ್. ಗಣಪತಿ ಎರಡನೆಯವರು. ಅವರ ಬಗ್ಗೆ ಪತ್ರಿಕೆಗಳಲ್ಲಿ ಬಂದಿಲ್ಲ, ಟಿ ವಿ ಅವರ ಸಂದರ್ಶನ ನಡೆಸಿಲ್ಲ. ಅವರು ಸಭೆ ಸಮಾರಂಭಗಳಿಗೆ ಹೋಗಿಲ್ಲ. ಅವರ ಬಗ್ಗೆ ನಾಡಿನ ಜನಕ್ಕೆ ಏನೆಂದರೆ ಏನೂ ತಿಳಿದಿಲ್ಲ. ಅವರ ಸಂಪರ್ಕ ಸಂಖ್ಯೆ: 9980009687
ನೋಡಲು ಅದೊಂದು ಲೋಹದ ಬಿಲ್ಲೆ. ಅದರಲ್ಲಿ ನಕ್ಷತ್ರದ ಚಿಹ್ನೆ. ಅದರ ಅಂಚಿನಲ್ಲಿ ಕಂಡೂ ಕಾಣದಂತೆ ಕೆತ್ತಿದ ಪಡೆದವರ ಹೆಸರು, ಪಡೆದ ದಿನಾಂಕ. ಕದನಕ್ಕೆ ತೆರಳಿದ ಪ್ರತೀ ಯೋಧನಿಗೂ ಅದನ್ನು ಪಡೆಯುವ ಅದಮ್ಯ ಹಂಬಲ. ಏಕೆಂದರೆ ಅದು ವೀರತೆಯ ಪ್ರತೀಕ. ಹೆಸರು ಮಹಾವೀರ ಚಕ್ರ. ಯುದ್ಧಕಾಲದಲ್ಲಿ ಮಹಾಪರಾಕ್ರಮಕ್ಕೆ ನೀಡುವ ಎರಡನೆಯ ಅತೀ ದೊಡ್ಡ ಶೌರ್ಯ ಪ್ರಶಸ್ತಿ. ಬ್ರಿಟಿಷ್ ಸೈನ್ಯದಲ್ಲಿ ‘ಡಿಶ್ಟಿಂಗ್ವಿಸ್ಡ್ ಸರ್ವೀಸ್ ಕ್ರಾಸ್’ ಹೇಗೋ ಹಾಗೆ ಭಾರತಕ್ಕೆ ಈ ಮಹಾವೀರ ಚಕ್ರ. ಮಹಾ ಸಮರಪಡೆಯನ್ನು ಹೊಂದಿರುವ ಭಾರತದಲ್ಲಿ ೧೯೪೭ರಿಂದ ಇದುವರೆಗೆ ಮಹಾವೀರ ಚಕ್ರದ ಗೌರವಕ್ಕೆ ಪಾತ್ರರಾದವರು ಕೇವಲ ೨೧೮ ಮಂದಿ ವೀರರು. ಅವರಲ್ಲಿ ೬ ಜನ ಯೋಧರು ಮಹಾವೀರ ಚಕ್ರವನ್ನು ಎರಡೆರಡು ಬಾರಿ ಪಡೆದ ವೀರರಲ್ಲಿ ವೀರರು (MahaVira chakra bar). ಹೀಗಿರುವಾಗ ಭಾರತೀಯ ಸೈನ್ಯಕ್ಕೆ ಮಹಾಮಹಾ ಯೋಧರನ್ನು ನೀಡಿದ ನಮ್ಮ ಕರ್ನಾಟಕದಲ್ಲಿ ಇದನ್ನು ಪಡೆದವರಾರು ಎಂದು ನೋಡಿದರೆ ಕಾಣುವವರು ಕನ್ನಡದ ಇಬ್ಬರು ಮಹಾರ ಚಕ್ರಧರರು. ಅವರಲ್ಲೊಬ್ಬರು ‘ಟೈಗರ್ ಆಫ್ ಸರ್ಗೋದಾ’ ಎಂದು ಖ್ಯಾತರಾದ ಸ್ಕ್ವಾ.ಲೀ.ಅಜ್ಜಾಮಾಡ ಬಿ.ದೇವಯ್ಯ. ಮತ್ತೊಬ್ಬರು ಮೇ.(ನಂತರ ಲೆ.ಕರ್ನಲ್)ಪಿ.ಎಸ್ ಗಣಪತಿ. ಒಬ್ಬರು ಅಮರಯೋಧ. ಮತ್ತೊಬ್ಬರು ಮಹಾವೀರತೆಯ ಜೀವಂತ ಸ್ಮಾರಕ. Read more
ಎಲ್ಲಿಯ ಹವಾಲ್ದಾರ್ ಜಪ್ಪು? ಎಲ್ಲಿಯ ಸದ್ದಾಂ ಹುಸೇನ್?
– ಸಂತೋಷ್ ತಮ್ಮಯ್ಯ
ಮೂರು ವರ್ಷದ ಹಿಂದೆ ಇಂಥದ್ದೇ ಒಂದು ಮಳೆಗಾಲದಲ್ಲಿ ಹವಾಲ್ದಾರ್ ಜಪ್ಪು ಬೆಂಗಳೂರಿನಲ್ಲಿ ಸಿಕ್ಕಿದ್ದರು. ಅಂದು ಜಪ್ಪು ಕಾರ್ಗಿಲ್ ವಿಜಯ್ ದಿವಸ್ ಆಚರಿಸಲು ತಮ್ಮ ಮೆಡಲುಗಳ ಸಮೇತ ಬೆಂಗಳೂರಿಗೆ ಬಂದುಬಿಟ್ಟಿದ್ದರು. ಅದಾದ ನಂತರ ಮತ್ತೆ ಮೊನ್ನೆ ಸಿಕ್ಕಿದ್ದರು. ಸಿಕ್ಕವರು ಈಗ ತಾನು ಊರಲ್ಲಿಲ್ಲವೆಂದೂ ದಕ್ಷಿಣ ಕೊಡಗಿನ ತಾವಳಗೇರಿ ಶೆಟ್ಟಿಗೇರಿ ಎಂಬ ಊರಲ್ಲಿರುವುದಾಗಿಯೂ ಬಾಡಿಗೆ ಮನೆಯೊಂದನ್ನು ಹಿಡಿದು ಮಗಳನ್ನು ಪ್ರೈಮರಿ ಓದಿಸುತ್ತಿದ್ದೇನೆಂದು ಹೇಳಿದ್ದರು. ಪುರುಸೋತ್ತಾದಾಗ ಒಮ್ಮೆ ಮನೆಗೆ ಬರಬೇಕೆಂದೂ ಹೇಳಿದ್ದರು. ಮೂರು ವರ್ಷಗಳ ಹಿಂದೆ ಇದ್ದ ಆ ದೊಡ್ಡ ಸ್ವರದ ರಭಸ ಕಿಂಚಿತ್ತೂ ಮಾಸಿರಲಿಲ್ಲ. ಗಡಸುತನ ಮಾಯವಾಗಿರಲಿಲ್ಲ. ಆದರೆ ಮಾತುಮಾತಿಗೆ ಆಕ್ರೋಶಗೊಳ್ಳುವ ಅವರ ಜಾಯಮಾನ ಮೂರು ವರ್ಷಗಳಲ್ಲಿ ಮೂರುಪಟ್ಟು ಹೆಚ್ಚಿದಂತೆ ಕಂಡುಬಂತು. Read more