ವಿಷಯದ ವಿವರಗಳಿಗೆ ದಾಟಿರಿ

Posts tagged ‘ಸ್ವಾತಂತ್ರ್ಯ ಹೋರಾಟ’

29
ಜನ

ಸೈಮನ್ ಅಯೋಗಕ್ಕೆ ತೊಡೆ ತಟ್ಟಿದ ಪಂಜಾಬಿನ ಕೇಸರಿ.

– ಶಿವಾನಂದ ಶಿವಲಿಂಗ ಸೈದಾಪೂರ

ಪಂಜಾಬ್‍ದ ಕೇಸರಿ ಎಂದೇ ಪ್ರಸಿದ್ದರಾದ ಲಾಲಾ ಲಜಪತ್ ರಾಯರು 1865 ರ ಜನೇವರಿ 28 ರಂದು ಪಂಜಾಬ್‍ ನ ಮುನ್ಷಿ ರಾದಾಕೃಷ್ಣ ಆಜಾದ್ ಮತ್ತು ಗುಲಾಬ್ ದೇವಿಯರ ಮಗನಾಗಿ ಜನಿಸಿದರು. ಸ್ವತಂತ್ರ ಹೋರಾಟದ ದಿಕ್ಕನ್ನೇ ಬದಲಿಸಿದ ಒಂದೇ ಹೆಸರಿನಿಂದ ಮೂವರು ಜನ ಗುರುತಿಸಿಕೊಂಡ “ಲಾಲಬಾಲಪಾಲ್” ರಲ್ಲಿ ಇವರು ಒಬ್ಬರು.

1905 ರ ವರೆಗೂ ಕಾಂಗ್ರೇಸ್‍ನ ನೀತಿಯಿಂದಾಗಿ ಮಂದಗತಿಯಲ್ಲಿಯೇ ಸಾಗುತ್ತಿದ್ದ ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಕ್ರಾಂತಿಯ ಕಿಚ್ಚನ್ನು ಉದ್ದೀಪನಗೊಳಿಸಿದವರಲ್ಲಿ ಇವರು ಒಬ್ಬರು. ಪ್ರಖರ ವಾಗ್ಮಿಯಾದ ಇವರು ತಮ್ಮ ಭಾಷಣಗಳಲ್ಲಿ “ಜಗತ್ತಿನ ಇತಿಹಾಸ ರೂಪಗೊಂಡಿದ್ದೇ ರಕ್ತದಿಂದ. ನಮ್ಮ ಮಾತೃಭೂಮಿ ನಮ್ಮ ರಕ್ತವನ್ನು ಅಪೇಕ್ಷಿಸುತ್ತಾಳೆ. ರಾಷ್ಟ್ರಕ್ಕಾಗಿ ಅದನ್ನು ನೀಡಿಯೇ ಅಮರರಾಗೋಣ”. ಎಂದು ಸದಾಕಾಲ ಭಾರತೀಯ ಕ್ಷಾತ್ರ ಪರಂಪರೆಯನ್ನು ಎಚ್ಚರಗೊಳಿಸುತಿದ್ದರು. ಮಂದಗತಿಯಲ್ಲಿ ಸಾಗುತಿದ್ದ ಹೋರಾಟಕ್ಕೆ “ನಾವು ಒಂದು ಸಾಮ್ರಾಜ್ಯದ ಪ್ರಜೆಗಳು, ಭಿಕ್ಷುಕರಲ್ಲ. ಹೋರಾಟದ ಈ ಪ್ರಜ್ಞೆ ನಮ್ಮಲ್ಲಿರಬೆಕಾದದ್ದು ಅಗತ್ಯ. ನಮ್ಮ ಹಕ್ಕುಗಳನ್ನು ಪ್ರತಿಪಾದಿಸುವ ಪ್ರಜೆಗಳು ನಾವಾಗಿರಬೇಕು. ಒಂದು ದೃಢ ನಿಲುವನ್ನು ತಳೆದು ಅದಕ್ಕೆ ಅಂಟಿಕೋಳ್ಳಬೇಕು” ಎಂದು ಹೇಳುತಿದ್ದರು. “ಈ ಭೂಮಿಯ ಮೇಲೆ ಸೊಂಕಿರುವುದು ನಮ್ಮ ಪೂರ್ವಜರ ರಕ್ತ. ನಾವು ಅದರ ಮೇಲೆ ಬದುಕುತಿದ್ದೇವೆ. ಈ ಭೂಮಿ ನಮ್ಮದು ಇಲ್ಲವೇ ದೇವರದ್ದು” ಎಂದು ನಿರಂತರವಾಗಿ ಒತ್ತಿ ಒತ್ತಿ ಹೇಳಿದರು. ಮತ್ತಷ್ಟು ಓದು »

15
ಏಪ್ರಿಲ್

ನೆಹರೂ ಎಂಬ ಸ್ವಾರ್ಥ ರಾಜಕಾರಣಿ ಮತ್ತು ನೇತಾಜಿ ಎಂಬ ಸ್ವಾತಂತ್ರ್ಯ ಸೇನಾನಿ

– ರಾಕೇಶ್ ಶೆಟ್ಟಿ

Mission Netaji

“ಸುಭಾಷ್ ಸೈನ್ಯವೇನಾದರೂ ಭಾರತಕ್ಕೆ ಬಂದರೆ ನಾನು ಕತ್ತಿ ಹಿಡಿದು ಹೋರಾಡುತ್ತೇನೆ”. ಹೀಗೆ ಹೇಳಿದ ಕಠಾರಿವೀರ ಯಾವುದೋ ಬ್ರಿಟಿಷನಲ್ಲ.ಗಾಂಧಿ ಪಕ್ಷದೊಳಗಿನ ಬ್ರಿಟಿಷ್ ಶ್ರೀಮಾನ್ ಚಾಚಾ ನೆಹರೂ.ಅಷ್ಟಕ್ಕೂ ನೆಹರೂವನ್ನು “ಗಾಂಧಿ ಪಕ್ಷದೊಳಗಿನ ಬ್ರಿಟಿಷ್” ಎಂದು ನಾನು ಕರೆಯುತ್ತಿಲ್ಲ.ಖುದ್ದು ನೆಹರೂ ಅವರ ಅಮೇರಿಕಾದ ಗೆಳೆಯನಾಗಿದ್ದ ಜಾನ್ ಕೆನೆತ್ ಗಾಲ್ಬ್ರೈತ್ ಬಳಿ “ಭಾರತವನ್ನು ಆಳುವ ಕಡೆಯ ಬ್ರಿಟಿಷ್ ನಾನೇ” ಎಂದು ಹೇಳಿಕೊಂಡಿದ್ದರು. (ಈ ಜಾನ್ ಎಂತ ಮಹಾನುಭಾವನೆಂದರೆ, ಭಾರತವು ಬ್ರಿಟಿಷ್ ಆಳ್ವಿಕೆಗೆ ಒಳಪಟ್ಟಿದ್ದು ಪುಣ್ಯ ಎನ್ನುವಂತ ಮನಸ್ಥಿತಿಯವ)

ಗಾಂಧಿ ಪಕ್ಷದೊಳಗಿನ ಬ್ರಿಟಿಷ್ ಎನ್ನಲಿಕ್ಕೆ ಇನ್ನೊಂದು ಸತ್ಯವೂ ಈಗ ಬಹಿರಂಗವಾಗಿದೆ.ಭಾರತವು ಸ್ವತಂತ್ರವಾಗಿ, ಸುಮಾರು ೨೦ ವರ್ಷಗಳ ಕಾಲ ನೇತಾಜಿ ಕುಟುಂಬದ ಮೇಲೆ ಶ್ರೀಮಾನ್ ನೆಹರೂ ಅವರ ಘನ ಸರ್ಕಾರ “ಗೂಢಚಾರಿಕೆ”ಯನ್ನು ಮಾಡಿದೇ ಎಂಬುದೇ ಆ ಸತ್ಯ.ಅದೂ ಬ್ರಿಟಿಷರ MI15 ಎಂಬ ಗೂಢಚಾರ ಸಂಸ್ಥೆಯೊಂದಿಗೆ ಸೇರಿಕೊಂಡು! ಹೀಗಿರುವಾಗ ನೆಹರೂ ತನ್ನನ್ನು ತಾನು “I am the last Englishman to rule in India.” ಎಂದಿದ್ದು ಸರಿಯಾಗಿಯೇ ಇದೆ ಅಲ್ಲವೇ? ಅಷ್ಟಕ್ಕೂ ಬ್ರಿಟಿಷರಿಗೆ ನೇತಾಜಿಯವರ ಮೇಲೆ ಗೂಢಚಾರಿಕೆ ಮಾಡಲಿಕ್ಕೆ ಕಾರಣಗಳಿದ್ದವು.ಆದರೆ ನೆಹರೂ ಮಹಾಶಯರಿಗೇನಿತ್ತು ಅಂತ ಕಾರಣ? “ಅಭದ್ರತೆ” ಭಾವವೇ?ನೇತಾಜಿಯವರು ತೈಪೆಯ ವಿಮಾನಾಪಘಾತದಲ್ಲಿ ಮರಣಹೊಂದಿದರು ಎಂದು ಸೃಷ್ಟಿಸಲಾಗಿದ್ದ ಸುದ್ದಿಯನ್ನು ಇತರರಂತೆ ನೆಹರೂ ಸಹ ನಂಬಿರಲಿಲ್ಲ.ಒಂದು ವೇಳೆ ಸ್ವತಂತ್ರ ಭಾರತಕ್ಕೆ ನೇತಾಜಿ ಕಾಲಿಟ್ಟರೆ,ಗಾಂಧೀಜಿಯ ಮರಣದ ನಂತರ ಏಕಮೇವಾದ್ವೀತಿಯನಂತಿರುವ ತನ್ನ ಕುರ್ಚಿ ಉಳಿಯುವುದಿಲ್ಲವೆಂಬ ಘೋರ ಸತ್ಯ ತಿಳಿದಿದ್ದರಿಂದಲೇ? ನೆಹರೂವಿಗೆ,ನೇತಾಜಿಯವರ ಮೇಲೆ ಅಂತದ್ದೊಂದು ಅಭದ್ರತೆ,ಈರ್ಷ್ಯೆ ಇರಲಿಲ್ಲವೆಂದಾದರೇ, ಬ್ರಿಟನ್ ಪ್ರಧಾನಿಯಾಗಿದ್ದ ಕ್ಲೆಮೆಂಟ್ ಆಟ್ಲಿಯವರಿಗೆ,ಸುಭಾಷ್ ರಷ್ಯಾದಲ್ಲಿ ಇರುವ ಬಗ್ಗೆ ಮತ್ತು ರಷ್ಯಾ ಮಿತ್ರಪಡೆಗಳಿಗೆ ನಂಬಿಕೆ ದ್ರೋಹ ಮಾಡಿದಂತೆ ಎಂಬಂತ ಸಾಲುಗಳಿರುವ ಪತ್ರವೊಂದನ್ನು ಬರೆದಿದ್ದರು ಎನ್ನುವುದು ಸುಳ್ಳೇ? ಅದೆಲ್ಲಾ ಬಿಡಿ.ಸ್ವಾತಂತ್ರ್ಯ ಸಿಕ್ಕ ನಂತರ ಐ.ಎನ್.ಎ ಸೈನಿಕರನ್ನು ನೆಹರೂ ನಡೆಸಿಕೊಂಡ ರೀತಿ ನೋಡಿ.ಆ ಸೈನಿಕರಿಗೆ ಭಾರತೀಯ ಸೈನ್ಯದಲ್ಲಿ ಕಾಲಿಡಲು ಬಿಡಲಿಲ್ಲ.ಪಿಂಚಣಿಗಾಗಿ ಆ ಸೈನಿಕರು ೧೯೭೭ರವರೆಗೂ ಕಾಯಬೇಕಾಯಿತು! ಆಜಾದ್ ಹಿಂದ್ ಸೈನಿಕರು ಭಾರತೀಯ ಸೇನೆ ಸೇರಿಕೊಂಡ ಮೇಲೆ ನೇತಾಜಿ ಪ್ರತ್ಯಕ್ಷವಾದರೇ,ಸೈನ್ಯ ಅವರ ಪರ ನಿಂತೀತೂ ಎಂಬ ಭಯವಿತ್ತೇ? ನೆಹರೂ ಅವರ ಈ ನಡೆಗಳನ್ನೆಲ್ಲ ಹೇಗೆ ಅರ್ಥೈಸಿಕೊಳ್ಳಬೇಕು?

ಮತ್ತಷ್ಟು ಓದು »

2
ಏಪ್ರಿಲ್

ಚಿದಂಬರಂ ಪಿಳ್ಳೆ

– ನವೀನ್ ನಾಯಕ್

ಚಿದಂಬರಂ ಪಿಳ್ಳೆಭರತಖಂಡದ ಒಂದೊಂದೆ ಭಾಗಗಳನ್ನು ತಮ್ಮ ಕುತಂತ್ರದಿಂದ ಕಬಳಿಸಿದ ಬ್ರಿಟೀಶರು ಎಲ್ಲೆಲ್ಲೂ ತಮ್ಮ ಧಾರ್ಷ್ಟ್ಯವನ್ನು ತೋರತೊಡಗಿದರು. ನಮ್ಮ ಸಂಸ್ಕೃತಿಯನ್ನು ಒಂದೆಡೆ ಹೀಯಾಳಿಸುತ್ತ ಇನ್ನೊಂದೆಡೆ ಮತಾಂತರಿಸುತ್ತ ತಮ್ಮ ಸಾಮ್ರಾಜ್ಯವನ್ನು ಶಾಶ್ವತಗೊಳಿಸಲು ಸರ್ವಪ್ರಯತ್ನವನ್ನು ಮಾಡುತ್ತಲೇ ಇದ್ದರು. ತೆರಿಗೆ ಪದ್ದತಿಯ ವಿರೂಪದಿಂದ ಲಕ್ಷಾಂತರ ನೇಕಾರರು , ಕಾರ್ಮಿಕರು ಬೀದಿಗೆ ಬಿದ್ದರು.ದೇಶಿಯ ಮಾರುಕಟ್ಟೆಯನ್ನು ತಮ್ಮ ಕೈವಶ ಮಾಡಿಕೊಂಡು ಅನಾವಶ್ಯಕ ತೆರಿಗೆಗಳನ್ನು ಹೇರಿ ಸಾಮಾನ್ಯ ಜನರು ತತ್ತರಿಸುವಂತೆ ಮಾಡತೊಡಗಿದರು. ಸಮುದ್ರ ಪಯಣಗಳಿಗೂ ಇದರ ಬಿಸಿ ತಟ್ಟಿತ್ತು. ಆ ದಿನಗಳಲ್ಲಿ ಕೊಲೊಂಬೊ ಹಾಗು ತೂತ್ತುಕುಡಿಯ ನಡುವಿನ ಹಡಗು ಪಯಣದ ಸಂಪೂರ್ಣ ಅಧಿಕಾರ ಬ್ರಿಟೀಶರ ಕೈಯಲ್ಲಿತ್ತು. ಬ್ರಿಟೀಶ್ ಇಂಡಿಯಾ ಸ್ಟೀಮ್ ನ್ಯಾವಿಗೇಶನ್ ಕಂಪನಿ ಎಂಬ ಈ ಸಂಸ್ಥೆ ತಮಗಿಷ್ಟ ಬಂದಂತೆ ಪ್ರಯಾಣ ವೆಚ್ಚವನ್ನು ಏರಿಸತೊಡಗಿದರು. ಇವರ ದುರಹಂಕಾರಕ್ಕೆ ಸೆಡ್ಡು ಹೊಡೆಯಲು ಲೆಕ್ಕಚಾರ ಹಾಕಿ ಕುಳಿತವರೇ ಚಿದಂಬರಂ ಪಿಳ್ಳೆ.

ತಮಿಳುನಾಡಿನ ಓಟ್ಟಪ್ಪಿದಪುರಂನಲ್ಲಿ ಉಳಗನಾಥಂ ಮತ್ತು ಪರಮಾಯಿ ಅಮ್ಮಾಳ್ ದಂಪತಿಗೆ ಸೆಪ್ಟಂಬರ್ 5 1827 ರಲ್ಲಿ  ಚಿದಂಬರಂ ಪಿಳ್ಳೆಯವರು ಜನಿಸಿದರು. ತನ್ನ ಹದಿಮೂರನೇ ವಯಸ್ಸಿನವರೆಗೆ ಜನ್ಮಸ್ಥಳದಲ್ಲೇ ಕಳೆದ ಚಿದಂಬರಂರವರು ಮುಂದಿನ ವಿದ್ಯಾಭ್ಯಾಸಕ್ಕಾಗಿ ತೂತ್ತುಕುಡಿ ಎಂಬಲ್ಲಿಗೆ ಬಂದರು. ತಮ್ಮ ವಿದ್ಯಾಭ್ಯಾಸ ಮಾಡುತ್ತ ಜೊತೆಗೆ ಇಂಗ್ಲಿಷ್ ಭಾಷೆಯಲ್ಲಿ ತಮ್ಮ ಪ್ರಭುತ್ವ ಸ್ಥಾಪಿಸಿಕೊಂಡರು. ತದನಂತರ ಕೆಲಕಾಲ ತಾಲ್ಲೂಕು ಕಛೇರಿಯಲ್ಲಿ ಗುಮಾಸ್ತನಾಗಿ ದುಡಿದರು. ಈ ಕೆಲಸ ಚಿದಂಬರಂರವರಿಗೆ ತೃಪ್ತಿಯನ್ನು ತಂದು ಕೊಡುವಲ್ಲಿ ವಿಫಲವಾಯಿತು. ಚಿದಂಬರಂರವರ ವಂಶದ ಹಿರಿತಲೆಗಳು ವಕೀಲಿ ವೃತ್ತಿಯಲ್ಲಿ ನಿಷ್ಣಾತರಾಗಿದ್ದರು.  ಇದೇ ಪ್ರಭಾವವನ್ನು ಬಳಸಿಕೊಂಡು ಅನ್ಯಾಯವಾಗಿ ಪೋಲಿಸ್ ಇಲಾಕೆಯ ಕಪಿಮುಷ್ಟಿಯಲ್ಲಿ ಸಿಲುಕಿದ ನಿರಪರಾಧಿಗಳ ಪರವಾಗಿ ವಾದಿಸಲು ವಕೀಲಿ ಅಭ್ಯಸಿಸಿ ತಿರುಚ್ಚಿಯ ಸಬ್ ಮ್ಯಾಜಿಸ್ಟ್ರೇಟ್ ಕೋರ್ಟ್ ನಲ್ಲಿ ವಕೀಲಿ ವೃತ್ತಿಯನ್ನು ಆರಂಭಿಸಿದರು. ಎಷ್ಟೋ ಬಾರಿ ನಿರಪರಾಧಿಗಳ ಪರವಾಗಿ ನಿಃಶುಲ್ಕವಾಗಿ ಮೊಕದ್ದಮೆ ನಡೆಸಿಕೊಟ್ಟು ಜನರ ಪ್ರೀತಿ ವಿಶ್ವಾಸವನ್ನು ಗಳಿಸಿದರು. ಚಿದಂಬರಂರವರ ಈ ಕೆಲಸದಿಂದ ಬ್ರಿಟೀಶರು,ಪೋಲಿಸ್ ಅಧಿಕಾರಿಗಳ ದ್ವೇಷಕ್ಕೆ ಒಳಗಾಗತೊಡಗಿದರು.

ಆಧ್ಯಾತ್ಮ ಮತ್ತು ಶಿವನ ಕುರಿತು ಅಪಾರ ಶ್ರದ್ದೆಯನ್ನು ಚಿದಂಬರಂ ಬೆಳೆಸಿಕೊಂಡಿದ್ದರು.ತಮಿಳು ಸಾಹಿತ್ಯವನ್ನು ಓದಿ ಅದ್ಭುತ ಜ್ಞಾನವನ್ನು ಮೈಗೂಡಿಸಿಕೊಂಡಿದ್ದರಲ್ಲದೇ ಯೋಗ್ಯ ಗುರುಗಳ ಮತ್ತು ಸಾಧುಗಳ ಸಂಪರ್ಕವನ್ನು ಸಹ ಬೆಳೆಸಿಕೊಂಡಿದ್ದರು. ಜೊತೆಗೆ ರಾಷ್ಟ್ರೀಯ ವಿಚಾರಗಳಲ್ಲಿ ಅತೀವ ಆಸಕ್ತಿಯನ್ನು ಹೊಂದಿದ್ದರು. 1898 ಡಿಸೆಂಬರ್  ಸಮಯದಲ್ಲಿ ಮದ್ರಾಸಿನಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ ಸ್ವಾಗತ ಸಮಿತಿಯ ಕಾರ್ಯದರ್ಶಿ ಮತ್ತು ಕೋಶಾಧಿಕಾರಿಯ ಹೊಣೆಯನ್ನು ಹೊತ್ತಿಕೊಂಡಿದ್ದರು. ಆ ಮಹಾಧಿವೇಶನದಲ್ಲಿ ಭಾಗವಹಿಸಿದ ಒಟ್ಟು 614 ಪ್ರತಿನಿಧಿಗಳಲ್ಲಿ 519ಜನ ತಮಿಳುನಾಡಿನಿಂದಲೇ ಬಂದಿದ್ದರು. ಅಷ್ಟು ಜನರನ್ನು ಅಧಿವೇಶನಕ್ಕಾಗಿ ಕಲೆಹಾಕಿದ್ದ ಶ್ರೇಯಸ್ಸು ಚಿದಂಬರಂರವರದೇ !
ಮತ್ತಷ್ಟು ಓದು »

23
ಮಾರ್ಚ್

ಸಾಯುವ ಕೊನೆ ಕ್ಷಣದಲ್ಲೂ ಆ ಮೂವರ ಬಾಯಲ್ಲಿ ಮೊಳಗಿದ ಮಂತ್ರ…. ಭಾರತ್ ಮಾತಾ ಕೀ ಜೈ!

– ನಿತ್ಯಾನಂದ ವಿವೇಕವಂಶಿ

ಭಗತ್ ಸಿಂಗ್,ರಾಜ್ ಗುರು,ಸುಖ ದೇವ್ಓದುವ ಮುನ್ನ..

ಈ ದೇಶಕ್ಕೆ ಸ್ವಾತಂತ್ರ್ಯವೆಂಬುದು ಸುಮ್ಮನೆ ಬರಲಿಲ್ಲ. ಸುಮಾರು ಆರೂವರೆ ಲಕ್ಷ ವೀರ ವೀರಾಂಗನೆಯರ ಪ್ರಾಣತ್ಯಾಗದ ಫಲವಾಗಿ ಈ ಸ್ವಾತಂತ್ರ್ಯ ದೊರಕಿದೆ. ಅವರು ತಮ್ಮ ನೆತ್ತರು ಹರಿಸಿ ಗಳಿಸಿಕೊಟ್ಟ ಸ್ವಾತಂತ್ರ್ಯವನ್ನು ನಾವಿಂದು ಅನುಭವಿಸುತ್ತಿದ್ದೇವೆ. ಈ ಸ್ವಾತಂತ್ರ್ಯ ಹೋರಾಟವೆಂಬ ಮಹಾ ಯಜ್ಞದಲ್ಲಿ ತಮ್ಮ ಪ್ರಾಣವನ್ನೇ ಆಹುತಿಯನ್ನಾಗಿ ನೀಡಿದ ವೀರರ ತ್ಯಾಗ ಬಲಿದಾನಗಳು ಅನನ್ಯವಾದವು. ಹೋರಾಟದ ಈ ಇತಿಹಾಸದಲ್ಲಿ ಹಲವಾರು ರೋಚಕ ಘಟನೆಗಳು, ರೋಮಾಂಚನಕಾರಿ ಕಥೆಗಳು, ಅದ್ವಿತೀಯ ತ್ಯಾಗ ಬಲಿದಾನದ ಘಟನೆಗಳಿವೆ. ಅವುಗಳಲ್ಲಿ ಕೆಲವು ಇತಿಹಾಸದ ಪುಟಗಳಲ್ಲಿ ಸುವರ್ಣಾಕ್ಷರಗಳಲ್ಲಿ ಬರೆಯಲ್ಪಟ್ಟಿದ್ದರೆ, ಇನ್ನು ಕೆಲವು ಅಜ್ಞಾತವಾಗಿ, ಹೊರ ಪ್ರಪಂಚಕ್ಕೆ ಪ್ರಕಟಗೊಳ್ಳದೇ, ಕಾಲಗರ್ಭದಲ್ಲಿ ಹೂತುಹೋಗಿ ಕಣ್ಮರೆಯಾಗಿವೆ. ಹೀಗೆ ಇತಿಹಾಸದ ಪುಟಗಳಲ್ಲಿ ದಾಖಲಾಗಿ ಉಳಿದಿರುವ ರೋಚಕ ಘಟನೆಗಳಲ್ಲಿ ಭಗತ್‍ಸಿಂಗ್, ರಾಜಗುರು, ಸುಖದೇವ್‍ರ ತ್ಯಾಗ ಬಲಿದಾನಗಳು ಚಿರಸ್ಮರಣೀಯವಾದುದಾಗಿದೆ. ತಮ್ಮ ಮಾತೃಭೂಮಿಯನ್ನು ಪರಕೀಯರ ಆಳ್ವಿಕೆಯಿಂದ ಮುಕ್ತಗೊಳಿಸಲು, ದಾಸ್ಯದ ಸಂಕೋಲೆಯನ್ನು ಕಿತ್ತೊಗೆಯಲು ಬ್ರಿಟೀಷ್ ಸಾಮ್ರಾಜ್ಯಶಾಹಿಯ ವಿರುದ್ಧ ಸಮರವನ್ನೇ ಸಾರಿದ ಈ ಮೂವರು ಕ್ರಾಂತಿಕಾರಿಗಳಿಗೆ ಬ್ರಿಟೀಷ್ ನ್ಯಾಯಾಲಯವು ಗಲ್ಲು ಶಿಕ್ಷೆಯನ್ನು ವಿಧಿಸಿತು. 23 ಮಾರ್ಚ್ 1931 ರಂದು ತಮ್ಮ 23-24 ನೇ ವಯಸ್ಸಿನಲ್ಲಿಯೇ ಈ ಮೂವರು ಕ್ರಾಂತಿಸೋದರರು ನಗುನಗುತ್ತಾ ಬಲಿಗಂಬವನ್ನೇರಿದರು. ದುರದೃಷ್ಟಕರ ಸಂಗತಿಯೆಂದರೆ ನಮಗ್ಯಾರಿಗೂ ಆ ದಿನದ ನೆನಪೇ ಇಲ್ಲ. ಪ್ರತೀ ವರ್ಷ ಮಾರ್ಚ್ 23 ರಂದು ವಾರ್ತಾ ಇಲಾಖೆಯಿಂದ ದಿನಪತ್ರಿಕೆಗಳಲ್ಲಿ ಪ್ರಕಟಗೊಳ್ಳುವ ಜಾಹಿರಾತು ಬಿಟ್ಟರೆ, ‘ಶಹೀದ್ ಡೇ’ಯನ್ನು ಆಚರಿಸುವ ಕೆಲವು ಸಂಘಟನೆಗಳನ್ನು ಬಿಟ್ಟರೆ ಇಡೀ ದೇಶದಲ್ಲಿ ಎಲ್ಲಿಯೂ ಈ ಅಪೂರ್ವ ಬಲಿದಾನವನ್ನು ಸ್ಮರಿಸಿಕೊಳ್ಳುತ್ತಿಲ್ಲ. ಕಾರಣವೇನೆಂದರೆ ನಮಗೆ ಈ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಮಡಿದವರ ಹೆಸರೂ ಕೂಡಾ ನೆನಪಿಲ್ಲ.
ಮತ್ತಷ್ಟು ಓದು »

18
ಆಗಸ್ಟ್

ಸುಭಾಷರ ನೆನಪಿನೊಂದಿಗೆ ಮರೆಯಬಾರದ ಹೆಣ್ಣು

– ಚೇತನಾ ತೀರ್ಥಹಳ್ಳಿ

ಹೆಣ್ಣು- ಮಣ್ಣಿನ ಹಿಂದೆ ಬಿದ್ದವರೆಲ್ಲ ಕೆಡುತ್ತಾರೆ- ಹಾಗನ್ನುತ್ತಾರಲ್ಲವೆ? ಆದರೆ, ಸುಭಾಷರು ಮಾತ್ರ ಕೆಡಲಿಲ್ಲ. ಬದಲಾಗಿ ಉನ್ನತ ಗೌರವವನ್ನೇ ಪಡೆದರು. ಶತಮಾನಗಳ ಕಾಲ ಉಳಿಯುವಂತಾದರು. ಯಾಕೆ ಗೊತ್ತಾ? ಅವರು ಹಂಬಲಿಸಿದ ನೆಲ ಭಾರತ. ಮತ್ತು, ಅವರು ಪ್ರೇಮಿಸಿದ ಹೆಣ್ಣು ಎಮಿಲೀ!……….. ಸುಭಾಷ್ ಅವರನ್ನ ನೆನೆಸಿಕೊಂಡರೆ, ಎಮಿಲಿಗೂ ನಮ್ಮಿಂದ ಒಂದು ಗೌರವ ಸಲ್ಲಲಿ ಅಂತ ಹಾರೈಸ್ತಾ….

“ನಿನ್ನ ನೋಡಲು ಮತ್ತೆಂದೂ ಸಾಧ್ಯವಾಗದೆ ಹೋಗಬಹುದು. ಆದರೆ ನನ್ನ ನಂಬು. ನೀನು ಸದಾ ನನ್ನ ಹೃದಯದಲ್ಲಿ, ಆಲೋಚನೆಗಳಲ್ಲಿ, ಕನಸಲ್ಲಿ ಇದ್ದೇ ಇರುತ್ತೀಯೆ. ಹಾಗೇನಾದರೂ ವಿಧಿ ನಮ್ಮಿಬ್ಬರನ್ನು ಶಾಶ್ವತವಾಗಿ ಅಗಲಿಸಿದನೆಂದುಕೋ… ಮುಂದಿನ ಹುಟ್ಟಿನಲ್ಲಿ ಮತ್ತೆ ನಿನ್ನ ಸೇರಲು ನಾನು ಪರಿತಪಿಸುವೆ. ನನ್ನ ಕಿನ್ನರೀ… Jeden tag denke ich an sie- ನಿನ್ನನ್ನ ಪ್ರತಿದಿನವೂ ನೆನೆಸಿಕೊಳ್ಳುತ್ತೇನೆ”
( ಸುಭಾಷ್ ಚಂದ್ರ ಬೋಸ್, ಎಮಿಲೀ ಶೆಂಕಲ್ ಗೆ ಬರೆದ ಪತ್ರದಲ್ಲಿ)

ನರನರದಲ್ಲಿ ನೆಲದ ಉನ್ಮಾದ. ಹೋರಾಟದ ಕೆಚ್ಚು. ತನ್ನನ್ನೇ ದೇಶದ ಹೆಸರಿಗೆ ಬರೆದಿಟ್ಟ ಪ್ರೌಢ ಗಂಡಸಿನ ಎದೆಯಲ್ಲೂ ಒಂದು ಬೆಚ್ಚಗಿನ ಗೂಡು. ಪುಟ್ಟದೊಂದು ಖಾಸಗಿ ಬದುಕು. ಅಲ್ಲಿ, ಮೊಗೆದಷ್ಟೂ ಚಿಮ್ಮುವ ಪ್ರೀತಿ. ಎದೆ ಸೀಯುವ ವಿರಹದ ಕಾವು. ಕಾಸಗಲ ಕಣ್ಣೆದುರು ಮುಕ್ತ ಭಾರತದ ಕನಸು. ಒಳಗಿನೊಳಗಲ್ಲಿ ಅವಳ ಪ್ರೇಮ ಬಂಧನದ ನೆನಪು.

ಸುಭಾಷ್ ಚಂದ್ರ ಬೋಸ್… ಮತ್ತಷ್ಟು ಓದು »

15
ಆಗಸ್ಟ್

ಗುಂಡಿಗೆ ಎದೆ ಕೊಟ್ಟವ ೧೩ರ ಪೋರ..!

– ರಾಕೇಶ್ ಶೆಟ್ಟಿ

ಸರಿಯಾಗಿ ಇಂದಿಗೆ ೬೯ ವರ್ಶದ ಹಿಂದಿನ,ಅಂದು ಆಗಸ್ಟ್ ೧೫ ,೧೯೪೨ನೆ ಇಸವಿ. ಆಗಿನ್ನೂ ಹುಬ್ಬಳಿಯ ಆಗಸದಲ್ಲಿ ಸ್ವಾತಂತ್ರ್ಯದ ಸೂರ್ಯ ಉದಯಿಸಿದ್ದ.ಹಕ್ಕಿಗಳ ಕಲರವದ ನಡುವೆ , ದುರ್ಗದ ಬಯಲಿನಲ್ಲಿ ‘ವಂದೇ ಮಾತರಂ’ ‘ಭಾರತ ಮಾತಾಕಿ ಜೈ’ ಘೋಷಣೆಗಳು ಮೊಳಗುತಿದ್ದವು. ಅಕ್ಕ ಪಕ್ಕದ ಮನೆಯ ಮಕ್ಕಳೆಲ್ಲ ಆಟವಾಡುತಿದ್ದರೆ ಅವನು ಮಾತ್ರ ಬೆಳಿಗ್ಗೆ ಬೇಗ ಎದ್ದು, ಶ್ವೇತವರ್ಣದ ಜುಬ್ಬಾ-ಪೈಜಾಮ ಧರಿಸಿ, ತನಗಿಂತಲೂ ಎತ್ತರವಿದ್ದ ಒಂದು ಬೊಂಬಿಗೆ ‘ತ್ರಿವರ್ಣ ಧ್ವಜ’ ಕಟ್ಟಿಕೊಂಡವನೇ ಮಲಗಿದ್ದ ತಾಯಿಯ ಬಳಿ ಹೋಗಿ ಅವಳನ್ನು ಎಬ್ಬಿಸಿ ಆಶೀರ್ವದಿಸುವಂತೆ ಕೇಳಿದ. ಶ್ವೇತ ವಸ್ತ್ರಧಾರಿಯಾಗಿ ‘ತ್ರಿವರ್ಣ ಧ್ವಜ’ವನ್ನಿಡಿದ ಮಗನನ್ನು ನೋಡಿ,

ಆ ತಾಯಿ ಕೇಳಿದಳು “ಎಲ್ಲಿ ಹೊರಟೆ ಮಗು?”
“ಅಮ್ಮ , ನಾನು ದುರ್ಗದ ಬಯಲಿನಲ್ಲಿ ನಡೆಯುತ್ತಿರುವ ‘ಕ್ವಿಟ್ ಇಂಡಿಯಾ ಚಳುವಳಿ’ಯಲ್ಲಿ ಪಾಲ್ಗೊಳ್ಳಲು ಹೊರಟಿದ್ದೇನೆ”

“ಆದರೆ ಮಗು, ಅಲ್ಲಿ ಹಿರಿಯರೇ ಇರುತ್ತಾರೆ ಕಣೋ!”
ಮತ್ತಷ್ಟು ಓದು »

30
ಮೇ

ಸಾವರ್ಕರ್ ಮತ್ತು ನೆಹರೂ : ಹೋಲಿಸಬಾರದ ವ್ಯಕ್ತಿಗಳು

– ಚಕ್ರವರ್ತಿ ಸೂಲಿಬೆಲೆ

NS(ಮೇ ೨೮) ಸಾವರ್ಕರ್ ಜನ್ಮ ದಿನ. ಈ ಸಂಧರ್ಭದಲ್ಲಿ ಭಾರತದ ದಿಕ್ಕು ಬದಲಿಸಿದ ಇಬ್ಬರು ವ್ಯಕ್ತಿಗಳ ತುಲನಾತ್ಮಕ ಬರಹ ಇಲ್ಲಿದೆ. ಯಾರು ಯಾವ ಬಗೆಯಲ್ಲಿ ದಿಕ್ಕು ಬದಲಿಸಿದರು ಅಥವಾ ತಪ್ಪಿಸಿದರು ಎನ್ನುವುದು ಓದುಗರ ವಿವೇಚನೆಗೆ ಬಿಟ್ಟಿದ್ದು…

ಇತಿಹಾಸದ ಪುಟಗಳು ಅದೆಷ್ಟು ಬೇಗ ಹಿಂದೆ ಹಿಂದೆ ಹೋಗಿಬಿಡುತ್ತವಲ್ಲ! ಒಂದು ಪುಟವನ್ನು ತಿರುವಿಹಾಕಿದಂತೆ ಆ ಪುಟದಲ್ಲಿರುವ ಸಂಗತಿಗಳನ್ನೆಲ್ಲಾ ಮರೆತುಬಿಟ್ಟರೆ ಮುಗಿದೇಹೋಯಿತು. ನೆನಪಿಟ್ಟುಕೊಂಡು ಮುಂದಡಿ ಇಡುವವ ಮಾತ್ರ ವಿಜಯಿಯಾದಾನು. ನಮ್ಮ ಇತಿಹಾಸ ಒಂಥರಾ ಸೆಮಿಸ್ಟರ್ ಪದ್ಧತಿಯ ಶಿಕ್ಷಣದಂತಾಗಿಬಿಟ್ಟಿದೆ. ಈ ಸೆಮಿಸ್ಟರ್ ನಲ್ಲಿ ಕಲಿತದ್ದು ಮುಂದಿನ ಬಾರಿಗೆ ಬೇಕಾಗಲಾರದು. ಸದ್ಯಕ್ಕೆ ಸಾವರ್ಕರ್ ಭಾರತೀಯರ ಪಾಲಿಗೆ ಹಾಗೆಯೇ ಆಗಿಬಿಟ್ಟಿದ್ದಾರೆ. ಅವರು ಹುಟ್ಟಿ125 ವರ್ಷ ಕಳೆಯುವುದರೊಳಗಾಗಿ ಅವರು ಸಮಾಜದ ಕಣ್ಣಿಂದ ದೂರವೇ ಆಗಿಬಿಟ್ಟಿದ್ದಾರೆ. ಯಾವ ರಾಷ್ಟ್ರದ ಏಕತೆ- ಅಖಂಡತೆಗಾಗಿ; ಯಾವ ಪರಿಪೂರ್ಣ ಸಮಾಜದ ಪರಿಪೂರ್ಣ ಉನ್ನತಿಗಾಗಿ ತಮ್ಮ ಜೀವನವನ್ನೇ ತೇಯ್ದುಬಿಟ್ಟರೋ ಆ ವ್ಯಕ್ತಿ ಅದೇ ದೇಶದ ಸ್ಮೃತಿಯಿಂದ ದೂರವಾಗೋದು ದುರಂತವೇ ಸರಿ.

ಹಾಗೆ ನೋಡಿದರೆ ಕಳೆದ ಶತಕದ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಬೌದ್ಧಿಕವಾಗಿ ಹಾಗೆಯೇ ಪ್ರತ್ಯಕ್ಷವಾಗಿ ಪಾಲ್ಗೊಂಡ ಅಪರೂಪದ ಸಾಹಸಿ ಸಾವರ್ಕರರೇ ಎಂಬುದರಲ್ಲಿ ಅನುಮಾನವಿಲ್ಲ. ಸಿಕ್ಕಸಿಕ್ಕಲ್ಲಿ ಗುಂಡು ಹೊಡೆದು ಅದನ್ನೇ ಕ್ರಾಂತಿ ಎನ್ನುತ್ತಿರಲಿಲ್ಲ ಸಾವರ್ಕರ್. ಅವರ ಪ್ರತಿಯೊಂದು ಕೆಲಸದ ಹಿಂದೆ ಬೆಟ್ಟದಷ್ಟು ಚಿಂತನೆ, ಫಲಿತಾಂಶದ ನಂತರದ ಪರಿಸ್ಥಿತಿಯ ಕುರಿತು ಮುಂದಾಲೋಚನೆ- ಎಲ್ಲವೂ ಇರುತ್ತಿತ್ತು. ಅವರು ಲೇಖನಿ ಹಿಡಿದರೆ ಆ ಕಾಲಘಟ್ಟದ ಮಹಾಮಹಿಮ ಲೆಖಕರನ್ನೂ ಮೀರಿಸುವಷ್ಟು ಪ್ರತಿಭಾವಂತ. ಪಿಸ್ತೂಲು ಹಿಡಿದರೆ, ಎದುರಾಳಿಗಳ ರಕ್ತವೇ ತಣ್ಣಗಾಗುವಷ್ಟು ಕೆಚ್ಚೆದೆ. ಮಾತಿಗೆ ನಿಂತರೆ ಮೈಯೆಲ್ಲ ಕಿವಿಯಾಗಿ ಕೇಳಬೇಕೆನ್ನಿಸುವ ಮಧುರ ದನಿ, ಅಸ್ಖಲಿತ ವಿಚಾರಗಳ ಧಾರಾಪ್ರವಾಹ. ಬಿಡಿ. ಅಂತಹ ವ್ಯಕ್ತಿ ಯುಗಕ್ಕೊಬ್ಬರೇ!

ಮತ್ತಷ್ಟು ಓದು »

23
ಮಾರ್ಚ್

‘ಸತ್ತು ಬದುಕುವುದು ಹೇಗೆ!?’ ಎಂದು ತೋರಿಸಿಕೊಟ್ಟವನ ನೆನಪಿಗೆ…

– ರಾಕೇಶ್ ಶೆಟ್ಟಿ

ಕ್ರಾಂತಿಕಾರಿಗಳೆಂದರೆ ಹಾದಿ ತಪ್ಪಿದ ದೇಶ ಭಕ್ತರಲ್ಲ, ಅವರಿಗೂ ಧ್ಯೇಯ,ಗುರಿ,ಆದರ್ಶಗಳಿರುತ್ತವೆ.ಮತ್ತು ಆ ಆದರ್ಶಗಳನ್ನ ಪಾಲಿಸಲು ತಮ್ಮ ಜೀವವನ್ನು ಸಹ ಅವರು ಅರ್ಪಿಸಬಲ್ಲರು ಅಂತ ಜಗತ್ತಿಗೆ ತೋರಿಸಿಕೊಟ್ಟವರು, ಹುಟ್ಟಿ ಬಂದು ಅಷ್ಟೇ ಬೇಗ ಅದಿನ್ಯಾವ್ದೋ ತುರ್ತು ಕೆಲಸವಿದೆ ಅನ್ನುವಂತೆ ಎದ್ದು ಹೊರಟವರು,ಸತ್ತು ಬದುಕುವುದು ಹೇಗೆ ಅಂತ ತೋರಿಸಿಕೊಟ್ಟು ಹೋದವರು ಭಗತ್ ಸಿಂಗ್,ರಾಜಗುರು ಮತ್ತು ಸುಖದೇವ್.

ಅವರು ಹುತಾತ್ಮರಾಗಿ ಇಂದಿಗೆ ೮೦ ವರ್ಷಗಳಾಯಿತು.ಬಹುಷಃ ಭಾರತದ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ  ಕ್ರಾಂತಿಯ ಕಿಡಿಯನ್ನ ಭಾರತೀಯರಲ್ಲಿ ಬಡಿದ್ದೆಬ್ಬಿಸಿದ ಅಪ್ರತಿಮ ವ್ಯಕ್ತಿ ಭಗತ್ ಸಿಂಗ್.ಚಂದ್ರ ಶೇಖರ್ ಆಜಾದ್ರಂತ ಮಹಾನ್ ಗುರುವಿನ ಶಿಷ್ಯ ಗುರುವನ್ನು ಮೀರಿಸುವಂತೆ ಮುನ್ನಡೆದು ಬಿಟ್ಟರು.ಜಲಿಯನ್ ವಾಲ ಬಾಗ್ನ ದುರಂತ ಭಾರತದ ಸ್ವಾತಂತ್ರ್ಯ ಹೋರಾಟದ ಕ್ರಾಂತಿಯ ಕಿಡಿಯ ಉದಯಕ್ಕೆ ಮುನ್ನುಡಿ ಬರೆದಿತ್ತು.ಗಾಂಧೀಜಿಯವರ ಅಸಹಕಾರ ಚಳುವಳಿಗೆ ಓ ಕೊಟ್ಟು ಬೀದಿಗಿಳಿದ ಭಾರತೀಯರಲ್ಲಿ ಪುಟ್ಟ ಮಕ್ಕಳಿಂದ ಹಿಡಿದು ಮುದುಕರವರೆಗೂ ಎಲ್ಲರು ಇದ್ದರು.ಅಂತವರ ಮಧ್ಯೆ ಬಾಲಕ ಭಗತ್ ಕೂಡ ಇದ್ದ.ಚೌರಿ-ಚೌರಾದ ಘಟನೆಯ ನಂತರ ಗಾಂಧೀಜಿ ಏಕಾಏಕಿ ಚಳುವಳಿಯನ್ನ ಹಿಂದೆ ಪಡೆದಾಗ,ಮತ್ತು ಆ ನಂತರ ಗಾಂಧೀಜಿಯ ಮಾತು ಕೇಳಿ ಶಾಲೆ ಬಿಟ್ಟು ಹೊರಬಂದು ಪಟ್ಟ ಪಾಡು ಇವೆಲ್ಲ ಭಗತ್ ಮನಸಿನಲ್ಲಿ ಗಾಂಧೀವಾದದ ಬಗ್ಗೆ ನಂಬಿಕೆ ಕಳೆಯುವಂತೆ ಮಾಡಿತು.ಬಹುಷಃ ಇವೆರಡು ಘಟನೆಗಳು ಭಗತ್ ಸಿಂಗ್ನ  ಮುಂದಿನ ಜೀವನ ದಿಕ್ಕನ್ನು ಬದಲಾಯಿಸಿದವು ಅನ್ನಬಹುದೇನೋ?

ಮತ್ತಷ್ಟು ಓದು »

21
ಮಾರ್ಚ್

“ಅರ್ನೆಸ್ಟೊ ಚೆಗುವಾರ ಕ್ರಾಂತಿಕಾರಿ ಭಾವಜೀವಿ”

– ನಾರಾಯಣ್ ಕೆ ಕ್ಯಾಸಂಬಳ್ಳಿ

Cheguvera‘ನಾನು ಎಂದಿಗೂ ಸೋತು ಮನೆಗೆ ಹಿಂತಿರುಗುವುದಿಲ್ಲ. ಸೋಲಿಗಿಂತ ಸಾವನ್ನೆ ಹೆಚ್ಚು ಇಚ್ಛಿಸುತ್ತೇನೆ’  ಎಂದು ಕ್ಯೂಬ ಬಿಡುವ ಮೊದಲು ಹೇಳಿದ ಮಾತಿನಂತೆಯೇ ನಿರಂತರವಾಗಿ ಹೋರಾಟದಲ್ಲೇ ತಮ್ಮ ಜೀವನವನ್ನು ಸವೆದು ಸೋಲಲು ಇಚ್ಛಿಸಿದೆ ತನನ್ನು ಸಾವಿಗೆ ಒಡ್ಡಿಕೊಂಡ ಮಹಾನ್ ಕ್ರಾಂತಿಕಾರಿ, ಮಾನವತಾವಾದಿ, ಗೆರಿಲ್ಲಾ ಯುದ್ಧ ತಂತ್ರ ನಿಪುಣ, ವೈದ್ಯ, ಬರಹಗಾರ, ಬುದ್ಧಿಜೀವಿ ಹಾಗೂ ಕ್ಯೂಬಾ ಕ್ರಾಂತಿಯ ಪ್ರಮುಖ ನೇತಾರ ಅರ್ನೆಸ್ಟೊ ಚೆಗುವರ ಜಗತ್ತಿನ ಕ್ರಾಂತಿಕಾರಿ ಹೋರಾಟಗಾರರಲ್ಲಿ ಪ್ರಮುಖರು. ಚೆಗುವಾರ ಹುಟ್ಟಿದ್ದು ಜೂನ್ 14, 1928ರಂದು ಅರ್ನೆಸ್ಟೊ ಚೆಗುವಾರ ಲಿಂಚ್ ಮತ್ತು ಸೀಲಿಯಾ ಡ ಲಾ ಸೆರ್ನ್ ಎಂಬ ಸ್ಪ್ಯಾನಿಷ್ ಮತ್ತು ಐರಿಷ್ ತಂದೆ ತಾಯಿಗಳ ಮೊದಲ ಮಗನಾಗಿ ಅರ್ಜೆಂಟೀನಾದ ರೊಸಾರಿಯೋ ಪಟ್ಟಣದಲ್ಲಿ. ಚೆಗುವರ ಚಿಕ್ಕಂದಿನಿಂದಲೇ ಬಡವರ, ಶ್ರಮಿಕರ ಪರವಾಗಿ ಹೆಚ್ಚು ಪ್ರೀತಿಯನ್ನು ಬೆಳೆಸಿಕೊಂಡವನು ಮತ್ತು ಎಡಪಂಥೀಯ ಒಲವು ಹೊಂದಿದ್ದ ಕುಟುಂಬದಲ್ಲಿ ಹುಟ್ಟಿಬೆಳೆದ ಅವನಿಗೆ ಚಿಕ್ಕಂದಿನಿಂದಲೇ ಸ್ಪಷ್ಟ ರಾಜಕೀಯ ದೃಷ್ಟಿಕೋನಗಳ ಬಗೆಗೆ ಪರಿಚಯ ದೊರೆಯುತಿತ್ತು.

ಸ್ಪ್ಯಾನಿಷ್ ಅಂತರ್‍ಯುದ್ಧದ ಕಾಲದಿಂದಲೂ ಗಣತಂತ್ರ ವಾದಿಗಳ ಪ್ರಬಲ ಸಮರ್ಥಕರಾಗಿದ್ದ ತಂದೆಯ ಪ್ರಭಾವ ಚೆಗುವಾರನ ಮೇಲೆ ಸಹಜವಾಗಿಯೇ ಬೀರಿತ್ತು.ಚೆಗುವಾರ ತನ್ನ 19ನೇ ವಯಸ್ಸಿನಲ್ಲಿ (1948) ವೈದ್ಯಕೀಯ ಕಲಿಕೆಗಾಗಿ ಬ್ಯೂನಸ್ ಐರ್ಸ್ ವಿಶ್ವವಿದ್ಯಾನಿಲಯಕ್ಕೆ ಸೇರುತ್ತಾನೆ. ಆದರೆ 1951ರಲ್ಲಿ ವಿಶ್ವವಿದ್ಯಾಲಯದಿಂದ ಒಂದು ವರ್ಷ ರಜೆ ಪಡೆದು ತನ್ನ ಆಪ್ತಮಿತ್ರ ಅಲ್ಬರ್ಟೊ ಗ್ರೆನಡೋ ಜೊತೆಗೂಡಿ ಮೋಟರ್ ಸೈಕಲ್ ಮೇಲೆ ದಕ್ಷಿಣ ಅಮೆರಿಕಾದ ಪ್ರವಾಸ ಹೊರಡುತ್ತಾನೆ. ಚೆಗುವಾರನ ಬದುಕಿನಲ್ಲಿ ಈ ಪ್ರವಾಸ ಬಹಳ ಪ್ರಮುಖವಾದದ್ದು ಮತ್ತು ಚೆಗುವಾರ ತಾನೊಬ್ಬ ಕ್ರಾಂತಿಕಾರಿಯಾಗಿರಲು ಪ್ರಮುಖ ಕಾರಣ ಈ ಪ್ರವಾಸದ ಅನುಭವಗಳೇ. ಅವನೆ ಹೇಳಿದ, ಬರೆದುಕೊಂಡಿರುವ ಹಾಗೆ “ಆಂಡೀಸ್ ಪರ್ವತಶ್ರೇಣಿಯ ಉನ್ನತ ಶಿಖರವಾದ ಮಾಚು ಪಿಚ್ಚುವಿಗೆ ಹೋಗುವ ದಾರಿಯಲ್ಲಿ ಶ್ರೀಮಂತ ಭೂಮಾಲೀಕರಿಂದ ತುಂಡು ಭೂಮಿಗಳನ್ನು ಪಡೆದು ಕೃಷಿ ಮಾಡುತಿದ್ದ ರೈತಾಪಿ ಜನಸಮುದಾಯಗಳ ಹೀನಾಯ ಬದುಕು, ಕಡುಬಡತನ, ನನ್ನ ಮನಸ್ಸಿಗೆ ತಾಕಿತು. ಈ ಜನರಿಗೆ ನೆರವಾಗಬೇಕಿದ್ದಲ್ಲಿ ನಾನು ವೈದ್ಯಕೀಯ ಅಭ್ಯಾಸವನ್ನು ಬಿಟ್ಟು ಸಶಸ್ತ್ರ ಹೋರಾಟದ ರಾಜಕೀಯ ರಂಗಕ್ಕೆ ಪ್ರವೇಶಿಸಬೇಕಿದೆ ಎಂದು ಮನವರಿಕೆಯಾಯಿತು” ಎಂದು ನಂತರ ಚೆಗುವಾರ ಬರೆದುಕೊಳ್ಲುತ್ತಾನೆ. ಹಾಗಾಗಿ ಈ ಮೋಟಾರ್ ಸೈಕಲ್ ಪ್ರವಾಸ್ ಚೆಗುವಾರನ ಕ್ರಾಂತಿ ಬದುಕಿನ ಬಹಳ ದೊಡ್ಡ ತಿರುವು. ಮೋಟಾರ್ ಸೈಕಲ್ ಪ್ರವಾಸದ ಜೊತೆಗಾರ ಆಲ್ಬರ್ಟೊ ಗ್ರಾನಡೊಸ್  ಚೆ ಕುರಿತು ಹೇಳುತ್ತಾ  ಟೆಟೆ (‘ಚೆ’ ನನ್ನು ಪ್ರೀತಿಯಿಂದ ಕರೆಯುತ್ತಿದ್ದ ಹೆಸರು) ನನ್ನು ನಾನು ಮೊದಲು ಭೇೀಟಿ ಆಗಿದ್ದು 1941ರಲ್ಲಿ ಅದು ನನ್ನ ಸಹೋದರ ಥಾಮಸ್ ಮೂಲಕ. ಆಗ ನನಗೆ 13 ವರ್ಷ ವಯಸ್ಸು. ನಮ್ಮಿಬ್ಬರನ್ನು ಒಟ್ಟೊಟ್ಟಾಗಿ ತಂದ ವಿಷಯವೆಂದರೆ ಓದುವ ಅಭಿರುಚಿ ಮತ್ತು ನಿಸರ್ಗ ಪ್ರೇಮ. ಚೆ ಮನೆಗೆ ನಾನು  ವಾಡಿಕೆಯ ಅಥಿತಿಯಾಗಿದ್ದೆ. ಅಲ್ಲಿದ್ದ ಗ್ರಂಥಭಂಡಾರವನ್ನು ನನ್ನದೆಂಬತೆಯೇ ಬಳಸಿಕೊಳ್ಳುತ್ತಿದ್ದೆ. ಟೆಟೆ (ಚೆ) ಒಬ್ಬ ರೂಢಿಯ ಮಾತುಗಾರನಾಗಿದ್ದ.

ಮತ್ತಷ್ಟು ಓದು »

27
ಫೆಬ್ರ

“ಸ್ವಾತಂತ್ರ್ಯವೀರ”ನ ವ್ಯಕ್ತಿತ್ವ ಅನಾವರಣ..!!

ಭೀಮಸೇನ್ ಪುರೋಹಿತ್

“ಭಗತ್ ಸಿಂಗ್, ರಾಜಗುರು,ಆಜಾದ್ ಮುಂತಾದ ಕ್ರಾಂತಿಕಾರಗಳ ಹೆಸರುಗಳನ್ನು ಕೇಳಿದಾಗಲೆಲ್ಲ ನಾವು ಆದರದಿಂದ ತಲೆಬಾಗುತ್ತೇವೆ.ಆದರೆ, ಇಂತಹ ನೂರಾರು ಕ್ರಾಂತಿಕಾರಗಳನ್ನ ನಿರ್ಮಿಸಿದ ‘ಸಾವರ್ಕರ’ರನ್ನು ಸ್ಮರಿಸುವಾಗ ಸಂಕೋಚಕ್ಕೆ ಒಳಗಾಗುವುದು ಬಹಳ ದೌರ್ಭಾಗ್ಯದ ಸಂಗತಿ. ವೀರ ಸಾವರ್ಕರರ ಬಗ್ಗೆ ಅನೇಕ ಭ್ರಮೆಗಳನ್ನು ಹಬ್ಬಿಸಿರುವುದೇ ಇದಕ್ಕೆ ಕಾರಣ..”

ಮಾಜಿ ಕೇಂದ್ರಮಂತ್ರಿ ಹಾಗು ಕಾಂಗ್ರೆಸ್ ನಾಯಕ  ‘ವಸಂತ ಸಾಠೆ’ ಯವರ ಈ ಮಾತು ಯಾವಾಗಲೂ ನನ್ನನ್ನು ಕಾಡಿವೆ.. ಇಲ್ಲಸಲ್ಲದ, ಮಿಥ್ಯಾ ಆರೋಪಗಳನ್ನೇ ನಿಜವೆಂದು ನಂಬಿ, ಒಬ್ಬ ರಾಷ್ಟ್ರೀಯ ಪುರುಷನನ್ನು ಹಿಂಬದಿಗೆ ಸರಿಸಿ, ಅವರ ತೇಜೋವಧೆಯನ್ನೇ ನಿರಂತರವಾಗಿ ಮುಂದುವರೆಸಿಕೊಂಡು ಬಂದಿರುವುದು ನಿಜಕ್ಕೂ ಬೇಸರದ ಸಂಗತಿಯೇ..

ಕೇವಲ ಸಾವರ್ಕರರ ಮೇಲಿನ ವೃಥಾ ಅಭಿಮಾನದಿಂದ ಈ ಲೇಖನ ಹೊರಟಿಲ್ಲ.. ಬದಲಾಗಿ ಸಾವರ್ಕರರ ನಿಜಜೀವನದ ಮೇಲೆ ಬೆಳಕು ಚೆಲ್ಲುವ ಪ್ರಯತ್ನವಷ್ಟೇ..

ಮತ್ತಷ್ಟು ಓದು »