ವಿಷಯದ ವಿವರಗಳಿಗೆ ದಾಟಿರಿ

Posts tagged ‘ಸ್ವಾತಂತ್ರ್ಯ’

23
ಮಾರ್ಚ್

ಮೇರಾ ರಂಗ್ ದೇ ಬಸಂತಿ ಚೋಲಾ…

ಶಿವಾನಂದ ಶಿವಲಿಂಗಪ್ಪ ಸೈದಾಪೂರ (ಎಂ.ಎ.ವಿದ್ಯಾರ್ಥಿ)
ರಾಜ್ಯ ಕಾರ್ಯಕಾರಣಿ ಸದಸ್ಯರು
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್
ರಾಣಿಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿ

ಸುಮಾರು ನೂರಾರು ವರ್ಷಗಳ ಕಾಲ ಪರಾಧೀನತೆಯನ್ನು ಕಿತ್ತೊಗೆಯಲು ಲಕ್ಷಾಂತರ ಜನ ತಮ್ಮ ಬಿಸಿ ನೆತ್ತರವನ್ನು ನೀರಾಗಿ ಹರಿಸಿ ನಮಗಾಗಿ, ನಮ್ಮ ಉಳಿವಿಗಾಗಿ ಹೋರಾಡಿ ಜೀವವನ್ನೇ ತೆತ್ತು ಇಂದಿನ ಸುಭದ್ರತೆಗೆ ಕಾರಣರಾದರು. 1857ರ ಮಹಾ ಸಂಗ್ರಾಮದಿಂದ 1947 ರ ವರೆಗೆ ಅನೇಕಾನೇಕ ಕ್ರಾಂತಿಕಾರಿ ಮಹನೀಯರು ಕಾರಣೀಕರ್ತರಾಗಿದ್ದಾರೆ. ಅಂತಹವರಲ್ಲಿ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ಕ್ರಾಂತಿಯ ಹೊಸ ಅಧ್ಯಾಯವನ್ನೇ ಬರೆದ ಮಹಾನ್ ಹೋರಾಟಗಾರರೆಂದರೆ ಅದು ಭಗತ್ ಸಿಂಗ್, ಸುಖದೇವ್, ರಾಜಗುರುರವರು. ಕ್ರಾಂತಿಯ ಇತಿಹಾಸದಲ್ಲಿ ಅವರ ಆತ್ಮ ಬಲಿದಾನವೇ ಅತ್ಯಂತ ಪ್ರಮುಖದೆಂದು ಹೇಳಬಹುದು. ದಾಸ್ಯ ಮುಕ್ತಿಗಾಗಿ, ತಮ್ಮ ಜೀವನದ ಅಂತಿಮ ಹೊತ್ತಿನಲ್ಲಿಯೂ ಕೂಡ ನಗು ನಗುತ ತಾಯಿ ಭಾರತಮಾತೆಯನ್ನು ಮೇರಾ ರಂಗ್ ದೇ ಬಸಂತಿ ಚೋಲಾ… ಎಂದು ಗುಣಗಾನ ಮಾಡುತ್ತ ಉರುಳನು ಚುಂಬಿಸಿ ನೇಣಿನ ಕುಣಿಕೆಗೆ ಕೊರಳನ್ನೊಡ್ಡಿದ್ದರು.

ಅಂತಹ ಮಹಾನ್ ಹೋರಾಟಗಾರರ ಬಲಿದಾನವಾಗಿ 87 ವರ್ಷ ಉರುಳಿದವು. ಅದರ ಸ್ಮರಣೆಯೇ ಈ ಲೇಖನ. ಮತ್ತಷ್ಟು ಓದು »

27
ಫೆಬ್ರ

ಛಡಿ ಏಟಿನಿಂದ ಕ್ರಾಂತಿಯ ಕಿಡಿಯವರೆಗೆ…!

– ಶಿವಾನಂದ ಶಿ ಸೈದಾಪೂರ
(ಎಂ. ಎ. ವಿದ್ಯಾರ್ಥಿ )
ABVP ರಾಜ್ಯ ಕಾರ್ಯಕಾರಿಣಿ ಸದಸ್ಯ .

48345_chandra-shekhar-azad-profileಆವತ್ತು ಒಂದು ದಿನ ಕಾಶಿಯಲ್ಲಿ ದೇಶ ಭಕ್ತರೆಲ್ಲರು ಸೇರಿ ವಂದೇಮಾತರಂ ಘೋಷಣೆ ಕೂಗುತ್ತಾ ಶಾಂತಿಯುತವಾಗಿ ಮೆರವಣಿಗೆ ಹೋಗುತ್ತಿದ್ದ ಸಂದರ್ಭ. ಇದ್ದಕಿದ್ದಂತೆ ದುರಳ ಬ್ರಿಟಿಷ್ ಪೋಲಿಸ್ ಅಧಿಕಾರಿಗಳು ದೇಶ ಭಕ್ತರ ಮೇಲೆ ಲಾಠಿ ಚಾರ್ಜ್ ಮಾಡಿದರು. ಶಾಂತಿಯುತವಾಗಿ ಮೆರವಣಿಗೆಯಲ್ಲಿದ್ದವರಿಗೆ ಮನ ಬಂದಂತೆ ತಳಿಸತೊಡಗಿದ್ದರು. ಇದನ್ನು ಗಮನಿಸಿದ ಕಾಶಿವಿದ್ಯಾಪೀಠದಲ್ಲಿ ಅಧ್ಯಯನ ಮಾಡುತಿದ್ದ ಪುಟ್ಟ ಬಾಲಕನೊಬ್ಬ ಬ್ರಿಟಿಷ್ ಪೊಲೀಸರಿಗೆ ಅಟ್ಟಾಡಿಸಿ ಕಲ್ಲು ಹೊಡೆದು ಪರಾರಿಯಾದ. ಆತನ ಬೆನ್ನಟ್ಟಿದ ಪೊಲೀಸರೆ ಓಡಿ ಓಡಿ ಸುಸ್ತಾದರೆ ಹೊರತು ಆತನೇನು ಆವತ್ತು ಸಿಗಲಿಲ್ಲ. ಮರುದಿನ ಯಾರದೋ ಮೊಸದ ಜಾಲದಿಂದ ಆ ಬಾಲಕನನ್ನು ಬಂಧಿಸಿ ನ್ಯಾಯಾಲಯಕ್ಕೆ ಒಯ್ದರು. ಆತನ ಪ್ರತಿಯೊಂದು ಮಾತುಗಳನ್ನು ಕೇಳಿ ಜಡ್ಜನೇ ಹೌಹಾರಿದ. ಆ ಪುಟ್ಟ ಬಾಲಕನ ಬಾಯಿಂದ ಅಂತಹುದೆ ಮಾತುಗಳು ಬರುತ್ತಿದ್ದವು. ನಿನ್ನ ಹೆಸರು ಏನೆಂದು ಜಡ್ಜ ಕೇಳಿದರೆ ”ಅಜಾದ್” ಎಂದು ಅಬ್ಬರಿಸಿದ. ಎಲ್ಲಿ ನಿನ್ನ ಮನೆ ಎಂದರೆ ”ಜೈಲು..! ನನ್ನ ಮನೆ” ಎಂದು ಪ್ರತ್ಯುತ್ತರ ನೀಡಿದ ಆ ಬಾಲಕ. ಆ ಪುಟ್ಟ ಬಾಲಕನ ನಿಷ್ಟುರತೆಯನ್ನು ಕಂಡ ಕೋಪಿಷ್ಟ ಜಡ್ಜ ಸಾಹೇಬ್ ೧೫ ಛಡಿ ಏಟಿನ ಶಿಕ್ಷೆ ನೀಡಿದ. ಪ್ರತಿಯೊಂದು ಏಟು ಬಿದ್ದಾಗ ”ವಂದೇಮಾತರಂ”, ”ಭಾರತ್ ಮಾತಾ ಕೀ ಜೈ”, ”ಗಾಂಧೀಜಿ ಕೀ ಜೈ” ಎಂಬುವ ಘೋಷಣೆಗಳು ಆತನ ಬಾಯಿಂದ ಹೊರಡುತಿದ್ದವು. ಆ ಪುಟ್ಟ ಬಾಲಕನೆ ಚಂದ್ರಶೇಖರ್ ಅಜಾದ್. ಅಜಾದರು ತನ್ನ ಹದಿನಾಲ್ಕನೇ ವಯಸ್ಸಿನಲ್ಲಿ ಜೀವನದ ಮೊದಲ ಮತ್ತು ಕೊನೆಯ ಬಾರಿ ಬ್ರಿಟಿಷ್ ಜೈಲಿನ ಶಿಕ್ಷೆ ಅನುಭವಿಸಿದರು. ಆತನ ಸಾಹಸ ಗಾತೆಯನ್ನು ಕಂಡ ಜನತೆ ಒಂದು ಸಾರ್ವಜನಿಕ ಸಮಾರಂಭ ಏರ್ಪಡಿಸಿದ್ದರು. ಜನರನ್ನು ಉದ್ದೇಶಿಸಿ ಮಾತನಾಡುತ್ತ. ಅಜಾದ್ ”ದುಷ್ಮನೋಂಕಿ ಗೊಲಿಯೋಂ ಸೇ ಮೈ ಸಾಮ್ನಾ ಕರೂಂಗಾ. ಅಜಾದ್ ಹೂಂ ಮೇ ಅಜಾದ್ ಹೀ ರಹೂಂಗಾ” ಎಂದು ಅಬ್ಬರಿಸಿದರು. ಅಕ್ಷರಶ ಅದನ್ನೇ ಕೊನೆಯತನಕ ಪಾಲಿಸಿದ್ದರು. ಮತ್ತಷ್ಟು ಓದು »

12
ಆಗಸ್ಟ್

ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ

ದಿನ – 3
ಸದ್ಗುರು ರಾಮಸಿಂಗ್ ಕೂಕಾ
– ರಾಮಚಂದ್ರ ಹೆಗಡೆ

download (1)ದೇಶದ ಸ್ವಾತಂತ್ರ್ಯ ಇತಿಹಾಸದಲ್ಲಿ ಪಂಜಾಬಿ ಸಿಖ್ಖರ ಪಾತ್ರ ಬಹಳ ದೊಡ್ಡದು. ಅಪ್ರತಿಮ ದೇಶಭಕ್ತರ ಸಂಪ್ರದಾಯವದು. ಇಂದಿಗೂ ಭಾರತೀಯ ಸೈನ್ಯದಲ್ಲಿ ಸಿಖ್ ರೆಜಿಮೆಂಟ್ ಎಂದರೆ ಪರಮ ಪರಾಕ್ರಮಿಗಳ ದಂಡು. ಅಂತಹ ಪಂಜಾಬಿ ಸಿಖ್ಖರ ‘ನಾಮಧಾರಿ ಸಂಪ್ರದಾಯ’ ಅಥವಾ ‘ಕೂಕಾ ಪಂಥ’ ದ ಸ್ಥಾಪಕ ಸದ್ಗುರು ರಾಮಸಿಂಗ್ ಕೂಕಾ. ಮೂಲತಃ ಬಡಗಿ ವೃತ್ತಿಯ ಕುಟುಂಬದ ರಾಮಸಿಂಗ್ ತಾನೂ ತನ್ನ ತಂದೆಯ ಬಡಗಿ ಹಾಗೂ ಕೃಷಿ ಸಂಬಂಧಿತ ಚಟುವಟಿಕೆಗಳಲ್ಲಿ ನೆರವಾಗುತ್ತಿದ್ದ. ಆದರೆ ಮಿತಿಮೀರಿದ ಬ್ರಿಟಿಷರ ದೌರ್ಜನ್ಯ ಹಾಗೂ ಅಲ್ಲಿಯ ಜನರ ನಿರಭಿಮಾನ ಅವನನ್ನು ರೊಚ್ಚಿಗೆಬ್ಬಿಸಿತು. ಇದೇ ಸಂದರ್ಭವನ್ನು ಉಪಯೋಗಿಸಿಕೊಂಡ ಮಿಷನರಿಗಳು ಮತಾಂತರದಲ್ಲಿ ನಿರತರಾಗಿದ್ದವು. ಇದನ್ನೆಲ್ಲಾ ಕಂಡ ರಾಮಸಿಂಗ್ ಜನರನ್ನು ಆಧ್ಯಾತ್ಮಿಕವಾಗಿ ಮೇಲ್ಮಟ್ಟಕ್ಕೆ ಒಯ್ಯುವ, ಅವರೊಳಗೆ ದೇಶಾಭಿಮಾನ ಬೆಳೆಸುವ, ಧಾರ್ಮಿಕ, ಸಾಮಾಜಿಕ, ರಾಜಕೀಯ ಜನಜಾಗೃತಿ ನಿರ್ಧಾರದಿಂದ ಕೂಕಾ ಪಂಥವನ್ನು ಆರಂಭಿಸಿದ. ರಾಮಸಿಂಗ್ ಸದ್ಗುರು ರಾಮಸಿಂಗ್ ಆದ. ರಾಮಸಿಂಗ್ ನ ಕೂಕಾ ಪಂಥದ ಪ್ರಸಿದ್ಧಿ ಎಲ್ಲೆಡೆಗೆ ಹರಡಿ ಸಾವಿರಾರು ಜನ ಈ ಪಂಥಕ್ಕೆ ಸೇರ್ಪಡೆಯಾದರು. ಪಂಜಾಬ ಪ್ರಾಂತದ ೨೧ ಜಿಲ್ಲೆಗಳಲ್ಲೂ ಕೂಕಾಗಳ ಚಟುವಟಿಕೆಗಳ ಜಾಲ ಹಬ್ಬಿತು. ಮತ್ತಷ್ಟು ಓದು »

11
ಆಗಸ್ಟ್

ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ

– ರಾಮಚಂದ್ರ ಹೆಗಡೆ

ಈ ದಿನದ ಸ್ಮರಣೆ: ಕಾರ್ನಾಡ್ ಸದಾಶಿವ ರಾವ್

14MNRAO_G53ASPDES__2509976eಬೆಂಗಳೂರಿನ ಪ್ರತಿಷ್ಠಿತ ಬಡಾವಣೆ ‘ಸದಾಶಿವ ನಗರ’ ಎಂಬುದು ಎಲ್ಲರಿಗೂ ತಿಳಿದದ್ದೇ. ಆದರೆ ಅದ್ಯಾರು ಸದಾಶಿವ ಎಂಬುದು ಬಹುತೇಕರಿಗೆ ತಿಳಿಯದು. ಆ ಸದಾಶಿವರೇ ಅಪ್ರತಿಮ ದೇಶಭಕ್ತ ದಕ್ಷಿಣ ಕನ್ನಡದ ಗಾಂಧಿ ಎಂದೇ ಸುಪ್ರಸಿದ್ಧರಾದ ಶ್ರೀ ಕಾರ್ನಾಡ್ ಸದಾಶಿವರಾವ್. ಇವರು ಮಂಗಳೂರನ್ನು ತಮ್ಮ ಕಾರ್ಯಕ್ಷೇತ್ರವನ್ನಾಗಿ ಮಾಡಿಕೊಂಡು ಸ್ವಾತಂತ್ರ್ಯ ಚಳವಳಿಯಲ್ಲಿ ಸಕ್ರಿಯವಾಗಿ ಪಾಲ್ಗೊಂಡವರು. ಸದಾಶಿವರಾಯರ ಮನೆ ಸ್ವಾತಂತ್ರ್ಯ ಸಂಗ್ರಾಮದ ತವರು ಮನೆಯಾಗಿತ್ತು. ಮಹಾತ್ಮಾ ಗಾಂಧಿ, ಚಿತ್ತರಂಜನ ದಾಸ, ರಾಜಗೋಪಾಲಾಚಾರಿ ಹಾಗೂ ಸರೋಜಿನಿ ನಾಯ್ಡುರವರಿಗೆ ವಸತಿಗೃಹವಾಗಿತ್ತು. ದೇಶದಲ್ಲಿ ಉಪ್ಪಿನ ಸತ್ಯಾಗ್ರಹ ಪ್ರಾರಂಭವಾದಾಗ ಕಾರ್ನಾಡು ಸದಾಶಿವರಾಯರು ಅಂಕೋಲೆಗೆ ಹೋಗಿ ಅಲ್ಲಿನ ಜನತೆಗೆ ಮಾರ್ಗದರ್ಶನ ನೀಡಿ ಅಲ್ಲಿ ನಾಲ್ಕು ದಿನಗಳಿದ್ದರು. ಮತ್ತಷ್ಟು ಓದು »

10
ಆಗಸ್ಟ್

ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ

(ಮರೆತು ಮರೆಯಾಗಿರುವ ಸ್ವಾತಂತ್ರ್ಯ ವೀರರನ್ನು ನೆನೆಸಿಕೊಮ್ಡು ಗೌರವ ಸಲ್ಲಿಸುವ ಹಾಗೂ ಅವರ ಕುರಿತ ಮಾಹಿತಿಗಳನ್ನು ಜನರಿಗೆ ತಲುಪಿಸುವ ಸದುದ್ದೇಶದಿಂದ ರಾಮಚಂದ್ರ ಹೆಗಡೆಯವರು “ಸುಮ್ಮನೇ ಬರಲಿಲ್ಲ ಸಾತಂತ್ರ್ಯ” ಎಂಬ ಈ ಬರಹ ಸರಣಿಯನ್ನು ಪ್ರಾರಂಭಿಸಿದ್ದಾರೆ. ಕೆಲವು ಲೇಖನಗಳಿಗೆ ಮಾಹಿತಿಗಳನ್ನು ವಿವಿಧ ವೆಬ್ಸೈಟುಗಳ ಮೂಲಕ ಪಡೆದಿದ್ದರೆ, ಉಳಿದಂತೆ ತಾವು ಓದಿಕೊಂಡಿರುವುದನ್ನು ದಾಖಲಿಸಿದ್ದಾರೆ. ಈ ಸರಣಿ ನಿಲುಮೆಯ ಓದುಗರಿಗಾಗಿ – ಸಂಪಾದಕರು, ನಿಲುಮೆ)

– ರಾಮಚಂದ್ರ ಹೆಗಡೆ

ಆಗಸ್ಟ್ ತಿಂಗಳೆಂದರೆ ಭಾರತೀಯರಿಗೆ ವಿಶೇಷವಾದ ತಿಂಗಳು. ಪರಕೀಯರ ಆಳ್ವಿಕೆಯಿಂದ, ದಾಸ್ಯದ ಸಂಕೋಲೆಯಿಂದ ದೇಶ ಬಿಡುಗಡೆಗೊಂಡ ತಿಂಗಳಿದು. ಆದರೆ ಆ ಸ್ವಾತಂತ್ರ್ಯ ಅಷ್ಟು ಸುಲಭಕ್ಕೆ ದಕ್ಕಿದ್ದಲ್ಲ. ಅದರ ಹಿಂದೆ ಲಕ್ಷಾಂತರ ಜನರ ತ್ಯಾಗ ಬಲಿದಾನಗಳಿವೆ. ಸ್ವಾತಂತ್ರ್ಯ ಬಂದ ಅರವತ್ತೇ ವರ್ಷದಲ್ಲಿ ನಾವು ಅವರೆಲ್ಲರನ್ನೂ ಮರೆತೇಬಿಟ್ಟಿದ್ದೇವೆ. ನಮ್ಮ ಇಂದಿಗಾಗಿ ತಮ್ಮ ನಾಳೆಗಳನ್ನು ಬಲಿಕೊಟ್ಟವರನ್ನು ಕನಿಷ್ಠ ಈ ತಿಂಗಳಾದರೂ ನೆನೆಯಬೇಕಾದ್ದು ನಮ್ಮೆಲ್ಲರ ಕರ್ತವ್ಯ ಅಲ್ವಾ?. ದಿನಕ್ಕೊಬ್ಬ ದೇಶಭಕ್ತನನ್ನು ನೆನಪಿಸಿಕೊಳ್ಳುವ ಪ್ರಯತ್ನವಿದು. ಭಾರತೀಯ ಸ್ವಾತಂತ್ರ್ಯ ಹಬ್ಬದ ಈ ತಿಂಗಳಲ್ಲಿ ದೇಶಕ್ಕಾಗಿ ಅಮರರಾದ ವೀರರನ್ನು ಸ್ಮರಿಸುವ ಸರಣಿ ಇದು. ಇದು ಮರೆತವರನ್ನು ನೆನೆಯುವ ಪ್ರಯತ್ನ. ದೇಶಭಕ್ತರ ಕುರಿತ ಮಾಹಿತಿಗಳನ್ನು ಜೋಡಿಸುವ ಕೆಲಸವಷ್ಟೇ ನಮ್ಮದು. ಇದನ್ನು ಹೆಚ್ಚು ಜನರಿಗೆ ತಲುಪಿಸಿ. ಈ ರಾಷ್ಟ್ರಜಾಗೃತಿಯ ಆಂದೋಲನದಲ್ಲಿ ಕೈಜೋಡಿಸಿ.

ಈ ದಿನದ ಸ್ಮರಣೆ: *ರಾಣಿ ಗಾಯಡಿನ್ ಲೂ*
======================
Gaidinlui_20150125ರಾಣಿ ಗಾಯಡಿನ್ ಲೂ: ಹೆಸರು ಕೇಳಿದರೆ ಇದು ಯಾರೋ ಬ್ರಿಟಿಷ್ ವ್ಯಕ್ತಿ ಅನ್ನಿಸಬಹುದು. ಆದರೆ ಈ ರಾಣಿ ಗಾಯಡಿನ್ ಲೂ ಈಶಾನ್ಯ ರಾಜ್ಯ ನಾಗಲ್ಯಾಂಡ್ ನ ಆಧ್ಯಾತ್ಮಿಕ ಹಾಗೂ ರಾಜಕೀಯ ಹೋರಾಟದ ನಾಯಕಿಯಾಗಿದ್ದ, ಬ್ರಿಟಿಷ್ ಆಡಳಿತದ ವಿರುದ್ಧ ಈಶಾನ್ಯ ರಾಜ್ಯದಲ್ಲಿ ದಂಗೆ ಎಬ್ಬಿಸಿದ ದಿಟ್ಟ ಮಹಿಳೆ. ತನ್ನ 12ನೇ ವಯಸ್ಸಿಗೇ ಹೋರಾಟಕ್ಕೆ ಧುಮುಕಿ 16ನೇ ವಯಸ್ಸಿಗೆ ಜೀವಾವಧಿ ಶಿಕ್ಷೆಗೆ ಗುರಿಯಾದ ಈಕೆಯ ಕೇವಲ 4 ವರ್ಷಗಳ ಹೋರಾಟದ ತಾಕತ್ತು ಎಂಥದ್ದು ಎಂದು ತಿಳಿದರೆ ಅಚ್ಚರಿ ಎನಿಸುತ್ತದೆ. ಬ್ರಿಟಿಷರ ವಿರುದ್ಧ ಹೋರಾಟ ಅಷ್ಟೇ ಅಲ್ಲದೇ ನಾಗಾ ಜನರಲ್ಲಿ ತಮ್ಮ ಸ್ವಧರ್ಮದ ಬಗ್ಗೆ ಕೀಳರಿಮೆ ಹೊಡೆದೋಡಿಸಿ ಅಭಿಮಾನ ಮೂಡುವಂತೆ ಮಾಡಿದರು. ಪ್ರತಿಯೊಂದು ವನವಾಸಿ ಸಮುದಾಯದ ಬಳಿ ತೆರಳಿ ಬ್ರಿಟಿಷರ ಕುತಂತ್ರದ ಕುರಿತು ಮುಗ್ಧ ಜನರಿಗೆ ತಿಳಿ ಹೇಳಿದರು. ಗಾಯಡಿನ್ ಲೂರಿಂದ ಆಕರ್ಷಿತರಾದ ವನವಾಸಿ ಮಹಿಳೆಯರು ಒಂದು ಸೇನಾ ಪಡೆಯನ್ನೇ ಕಟ್ಟಿದರು. ಇದರಿಂದ ಉತ್ಸಾಹಿತಳಾದ ಗಾಯಡಿನ್ ಲೂ ಅವರಿಗೆ ಸಾಂಪ್ರದಾಯಿಕ ಮದ್ದುಗುಂಡುಗಳ ತಯಾರಿಕೆ, ಬಂದೂಕು ತರಬೇತಿಯನ್ನು ಕೊಟ್ಟಳು. ಮುಂದೆ ಬ್ರಿಟಿಷರ ವಿರುದ್ಧ ಗೆರಿಲ್ಲಾ ಯುದ್ಧವನ್ನು ಮಾಡಿದಳು. ಇವಳ ರಣನೀತಿಯಿಂದ ಬ್ರಿಟಿಷರು ತತ್ತರಿಸಿಹೋಗಿದ್ದರು. ಬ್ರಿಟಿಷರಿಗೆ ಸಿಂಹಸ್ವಪ್ನ ವಾಗಿದ್ದ ಈಕೆ ಬ್ರಿಟಿಷರ ತಂತ್ರಗಳನ್ನೆಲ್ಲಾ ಕ್ಷೀಣಿಸುವಂತೆ ಮಾಡಿದಳು. ಧರ್ಮ ರಕ್ಷಣೆ ಮತ್ತು ಬ್ರಿಟಿಷರನ್ನು ಭಾರತ ಬಿಟ್ಟು ಓಡಿಸಿ ಎನ್ನುವ ವಿಷಯವಿಟ್ಟುಕೊಂಡು ಹೋರಾಟ ಮಾಡಿದಳು. ಇವಳಿಗೆ ಹೇಗಾದರು ಮಾಡಿ ಕಡಿವಾಣ ಹಾಕಬೇಕು ಎಂದು ನಿರ್ಧರಿಸಿದ ಬ್ರಿಟಿಷ ಸರಕಾರ ಆ ರಾಜ್ಯಗಳಿಗೆ ತನ್ನ ಸೈನ್ಯವನ್ನೇ ಕಳುಹಿಸಿಕೊಟ್ಟಿತು. ಅಷ್ಟೇ ಅಲ್ಲದೇ ಆ ಕಾಲದಲ್ಲಿಯೇ ಅವಳ ಸುಳಿವು ನೀಡಿದವರಿಗೆ 400ರೂ. ಬಹುಮಾನದ ಜೊತೆಗೆ ಸರಕಾರದ ಸುಂಕವನ್ನು ಮನ್ನಾ ಮಾಡುವದಾಗಿ ಆಮಿಷ ತೋರಿಸಿತು. ಬ್ರಿಟಿಷರು ಎಂದಿನಂತೆ ತಮ್ಮ ಕುತಂತ್ರ ಬುದ್ಧಿಯ ಮೂಲಕ ಗಾಯಿಡಿನ್ ಲೂ ಆಪ್ತರಿಗೆ ಆಮಿಷವೊಡ್ಡಿ ಅವಳ ಸುಳಿವು ಪತ್ತೆಹಚ್ಚಿತು. ಇಬ್ಬರ ಮಧ್ಯೆ ದೊಡ್ಡ ಯುದ್ಧವೇ ನಡೆದುಹೋಯಿತು. ಕೊನೆಗೆ 1932ರ ಅಕ್ಟೋಬರ್ 12 ರಂದು ಗಾಯಿಡಿನ್ ಲೂ ಮೇಲೆ ವಿವಿಧ ಸುಳ್ಳು ಆರೋಪವನ್ನು ಹೊರಿಸಿ, ಸಂಬಂಧವೇ ಇಲ್ಲದ ಕೊಲೆ ಅರೋಪವನ್ನು ತಲೆಗೆ ಕಟ್ಟಿ ಬಂಧಿಸಲಾಯಿತು. ಮತ್ತಷ್ಟು ಓದು »

28
ಜೂನ್

ಗಾಂಧಿ ತಾತಾ ಯಾಕಾಗಿ ಹೀಗೆಲ್ಲಾ ಮಾಡಿದಿರಿ?

– ಶ್ರೀಕಾಂತ್ ಆಚಾರ್ಯ

mahatma_gandhiನೇರಾ ನೇರಾ ವಿಷಯಕ್ಕೆ ಬರುತ್ತೀನಿ. ಕೆಲವಷ್ಟು ವಿಷಯಗಳಲ್ಲಿ ಗಾಂಧೀ ತಾತಾ ತುಂಬಾ ಇಷ್ಟವಾಗಿ ಬಿಡುತ್ತಾರೆ. ಆದರೆ ಉಳಿದ ಕೆಲವು ವಿಷಯಗಳಲ್ಲಿ ನನಗೆ ಗಾಂಧೀಜಿಯ ಬಗ್ಗೆ ಒಳ್ಳೆಯ ಅಭಿಪ್ರಾಯಗಳಿಲ್ಲ. ಅಷ್ಟಕ್ಕೂ ನನ್ನ ಅಭಿಪ್ರಾಯ ಇಲ್ಲಾರಿಗೂ ಅನಿವಾರ್ಯವಲ್ಲ ಬಿಡಿ. ಹೇಳಿದ್ದೆಲ್ಲವನ್ನ ಸುಖಾಸುಮ್ಮನೆ ನಂಬಿ ಬಿಡಿ ಅಂತ ನಿಮ್ಮಲ್ಲಿ ಅಂಗಾಲಾಚುವುದೂ ಇಲ್ಲ. ಸಮಾನ ಮನಸ್ಕರಿದ್ದರೆ ಓದಿಕೊಳ್ಳಬಹುದು. ಹೌದು ಅಂತನ್ನಿಸಿದರೆ ಮಾತ್ರ ತಾಕಲಾಟಕ್ಕೆ ಎಡತಾಕುತ್ತೀರಿ. ಯೋಚನೆಗೆ ಬೀಳುತ್ತೀರಿ. ಅಖಂಡ ಭಾರತದ ಕೋಟ್ಯಾಂತರ ಜನರ ಹೃದಯ ಹೊಕ್ಕಿ ಕುಳಿತ ಗಾಂಧೀಜಿಯನ್ನ ಕೆಲವೊಂದು ಕಾರಣಕ್ಕೆ ದ್ವೇಷಿಸುತ್ತಿದ್ದೀನಿ ಅಂದರೆ ಬಹುಷಃ ನೀವೂ ತಕರಾರು ಮಾಡಲಿಕ್ಕಿಲ್ಲ(ವಿಷಯ ಬಲ್ಲವರಿಗೆ ಮಾತ್ರ) ಅಲ್ಲವಾ? ಮತ್ತಷ್ಟು ಓದು »

31
ಮಾರ್ಚ್

ಸಾವರ್ಕರ್ ಬಗ್ಗೆ ಮಾತಾಡುವುದಕ್ಕೂ ಯೋಗ್ಯತೆ ಬೇಕು

-ಡ್ಯಾನಿ ಪಿರೇರಾ
ಹಳ್ಳಿಮೈಸೂರು-573210

355-Vinyaka-Damodar-Savarkar1123-03-2016 ರಂದು ಭಗತ್ ಸಿಂಗ್, ರಾಜಗುರು ಸುಖದೇವರ ಬಲಿದಾನದ ದಿನ ಸಾಮಾಜಿಕ ಜಾಲತಾಣದಲ್ಲಿ ಇದ್ದಕ್ಕಿದ್ದಂತೆ ಒಂದು ಸುದ್ಧಿ ಕಾಣಿಸಿತು. ಅದು ಕಾಂಗ್ರೆಸ್ಸಿನ ಅಧಿಕೃತ ಐಎನ್‍ಸಿ ಟ್ವಿಟರ್ ನಲ್ಲಿ ಪ್ರಕಟವಾದ ಸಂದೇಶ ವಾಗಿತ್ತು. ಅದರಲ್ಲಿ ಹೇಳುತ್ತಿರುವುದೇನು?! ಭಗತ್ ಸಿಂಗ್, ಸ್ವಾತಂತ್ರ್ಯವೀರ ಸಾವರ್ಕರ್‍ರ ಭಾವಚಿತ್ರದಡಿಯಲ್ಲಿ ಒಬ್ಬರನ್ನು ದೇಶಭಕ್ತ ಮತ್ತೊಬ್ಬರನ್ನು ದೇಶದ್ರೋಹಿ ಎಂದು ಟ್ವಿಟ್ ಮಾಡಲಾಗಿರುವ ಸಂದೇಶವದು! ಈ ದೇಶದ ಸ್ವಾತಂತ್ರ್ಯ ಯೋಧರ ಬಗೆಗಿನ ಕಾಂಗ್ರೆಸ್ಸಿನ ಮಾನಸೀಕತೆಯನ್ನು ಬಲ್ಲವರಿಗೆ ಈ ಹೇಳಿಕೆಯನ್ನು ನೋಡಿದಾಗ ಆಶ್ಚರ್ಯವಾಗುವುದಿಲ್ಲವಾದರೂ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲಾತಾಣಗಳಲ್ಲಿ ಒಂದಷ್ಟು ಹುಡುಕಾಟ ನಡೆಸುವ ಯುವ ಮನಸ್ಸುಗಳಿಗೆ ಸ್ವಾತಂತ್ರ್ಯ ಹೋರಾಟಗಾರನೊಬ್ಬನ ಮಾತ್ರವಲ್ಲದೇ ಇಡೀ ಜೀವನವನ್ನೇ ದೇಶ ಮಾತೆಯ ಸೇವೆಗಿಟ್ಟ ಮಹಾನ್ ವ್ಯಕ್ತಿಯ ವ್ಯಕ್ತಿತ್ವ ಪ್ರೇರಣೆ ಕೊಡಬೇಕಾಗುವ ವಿಷಯವಾಗಬೇಕಾದ ಹಿನ್ನೆಲೆಯಲ್ಲಿ ಅವರ ಬಗೆಗಿನ ಕಾಂಗ್ರೆಸ್ ಪಕ್ಷದ ಮಾತು ನಿಜಕ್ಕೂ ತಪ್ಪು ಸಂದೇಶ ಕೊಡುವಂತದ್ದು! ಇವರೇಕೆ ಹೀಗೆ? ಒಬ್ಬ ವ್ಯಕ್ತಿ ಅಥವಾ ಸಂಸ್ಥೆಯ ನಡುವೆ ಭಿನ್ನಾಭಿಯವಿದ್ದೊಡನೇ ಆ ವ್ಯಕ್ತಿ ವಿದ್ರೋಹಿ ಆಗಬಲ್ಲನೇ?! ಮತ್ತಷ್ಟು ಓದು »

15
ಆಗಸ್ಟ್

ಗುಂಡಿಗೆ ಎದೆ ಕೊಟ್ಟವ ೧೩ರ ಪೋರ..!

– ರಾಕೇಶ್ ಶೆಟ್ಟಿ

ಸರಿಯಾಗಿ ಇಂದಿಗೆ ೬೯ ವರ್ಶದ ಹಿಂದಿನ,ಅಂದು ಆಗಸ್ಟ್ ೧೫ ,೧೯೪೨ನೆ ಇಸವಿ. ಆಗಿನ್ನೂ ಹುಬ್ಬಳಿಯ ಆಗಸದಲ್ಲಿ ಸ್ವಾತಂತ್ರ್ಯದ ಸೂರ್ಯ ಉದಯಿಸಿದ್ದ.ಹಕ್ಕಿಗಳ ಕಲರವದ ನಡುವೆ , ದುರ್ಗದ ಬಯಲಿನಲ್ಲಿ ‘ವಂದೇ ಮಾತರಂ’ ‘ಭಾರತ ಮಾತಾಕಿ ಜೈ’ ಘೋಷಣೆಗಳು ಮೊಳಗುತಿದ್ದವು. ಅಕ್ಕ ಪಕ್ಕದ ಮನೆಯ ಮಕ್ಕಳೆಲ್ಲ ಆಟವಾಡುತಿದ್ದರೆ ಅವನು ಮಾತ್ರ ಬೆಳಿಗ್ಗೆ ಬೇಗ ಎದ್ದು, ಶ್ವೇತವರ್ಣದ ಜುಬ್ಬಾ-ಪೈಜಾಮ ಧರಿಸಿ, ತನಗಿಂತಲೂ ಎತ್ತರವಿದ್ದ ಒಂದು ಬೊಂಬಿಗೆ ‘ತ್ರಿವರ್ಣ ಧ್ವಜ’ ಕಟ್ಟಿಕೊಂಡವನೇ ಮಲಗಿದ್ದ ತಾಯಿಯ ಬಳಿ ಹೋಗಿ ಅವಳನ್ನು ಎಬ್ಬಿಸಿ ಆಶೀರ್ವದಿಸುವಂತೆ ಕೇಳಿದ. ಶ್ವೇತ ವಸ್ತ್ರಧಾರಿಯಾಗಿ ‘ತ್ರಿವರ್ಣ ಧ್ವಜ’ವನ್ನಿಡಿದ ಮಗನನ್ನು ನೋಡಿ,

ಆ ತಾಯಿ ಕೇಳಿದಳು “ಎಲ್ಲಿ ಹೊರಟೆ ಮಗು?”
“ಅಮ್ಮ , ನಾನು ದುರ್ಗದ ಬಯಲಿನಲ್ಲಿ ನಡೆಯುತ್ತಿರುವ ‘ಕ್ವಿಟ್ ಇಂಡಿಯಾ ಚಳುವಳಿ’ಯಲ್ಲಿ ಪಾಲ್ಗೊಳ್ಳಲು ಹೊರಟಿದ್ದೇನೆ”

“ಆದರೆ ಮಗು, ಅಲ್ಲಿ ಹಿರಿಯರೇ ಇರುತ್ತಾರೆ ಕಣೋ!”
ಮತ್ತಷ್ಟು ಓದು »

15
ಆಗಸ್ಟ್

ಸ್ವಾತಂತ್ರ್ಯ …

– ಅನಿತ ನರೇಶ್ ಮಂಚಿ

ಶತ ಶತಮಾನಗಳ ಸಂಕೋಲೆಯ ಕಿತ್ತೊಗೆಯಲು
ರಾಷ್ಟ್ರದೊಳಗೆ ಉದಿಸಿತು ಧೀಮಂತ ಕಲಿಗಣ
ಒಳಗೊಳಗೇ ತಳ ಊರಿದ ಪರದಾಸ್ಯದ
ಹಿಮ ಬಂಡೆಯ ಕರಗಿಸಲು ಮೂಡಿತದೋ ಹೊಂಗಿರಣ

ಬೆಂಕಿ ಉಗುಳುವ ಬಂದೂಕುಗಳ ಲೆಕ್ಕಿಸದೆ ಎದೆಯೊಡ್ಡಿ
ನಿಂತವು ತಾಯಿ ಭಾರತಿಯ ಧೀರ ಮಕ್ಕಳು
ಜಾತಿ ಮತಗಳ ಬದಿಗೊತ್ತಿ ಒಮ್ಮತದಿ ನಿಂದು
ಕೆಂಪ ಅಳಿಸಿ ಹಸಿರ ಹರಡುವ ಛಲ ಹೊತ್ತ ಒಕ್ಕಲು

ವಂದೇ ಮಾತರಂ ಆಯಿತು ತಾರಕ ಮಂತ್ರ
ಆಳುವವನ ಎದೆಯಲ್ಲಿ ಕುಟ್ಟುತ್ತಿತ್ತು ಭಯದ ಒನಕೆ
ಸಿಕ್ಕವರ ಸೆರೆಗೆ ತಳ್ಳಿ ಮಾಡಿದರು ಹಿಂಸಾ ನರ್ತನ
ಅದೆಷ್ಟೋ ಕೊರಳಿಗೆ ಬಿದ್ದಿತ್ತು ಹಸಿ ಸಾವಿನ ಕುಣಿಕೆ

 

ಮತ್ತಷ್ಟು ಓದು »

15
ಆಗಸ್ಟ್

ಯಾರಿಗೆ ಬಂತು ಎಲ್ಲಿಗೆ ಬಂತು 47 ರ ಸ್ವಾತಂತ್ರ್ಯ

– ಪವನ್ ಪರುಪತ್ತೆದಾರ್

ಮೊದಲಿಗೆ ನಿಲುಮೆಯ ಎಲ್ಲ ಓದುಗರಿಗೆ ಸ್ವಾತಂತ್ರ್ಯದಿನದ ಶುಭಾಶಯಗಳು. ೬೫ ನೆ ಸ್ವತಂತ್ರ ದಿನದ ಆಚರಣೆ ಎಲ್ಲ ಕಡೆ ಭರ್ಜರಿಯಿಂದ ಸಾಗಲಿ ಎಂದು ಆಶಿಸೋಣ. ೧೯೪೭ ಆಗಸ್ಟ್ ೧೫ ರಂದು ಸ್ವಾತಂತ್ರ್ಯ ಸಿಕ್ಕಿದ ವಿಷಯ ನಮಗೆಲ್ಲ  ತಿಳಿದಿದ್ದೆ. ಇಂದು  ನಮಗೆ  ಅ  ಸ್ವಾತಂತ್ರ್ಯ ಎಷ್ಟರ ಮಟ್ಟಿಗೆ  ಸಿಕ್ಕಿದೆಯೆಂದರೆ ನಮ್ಮ ರಾಷ್ಟ್ರ ಧ್ವಜವನ್ನು ಉಲ್ಟಾ ಹಾರಿಸುವ  ಮಟ್ಟಿಗೆ ಸಿಕ್ಕಿದೆ. ನಾ ಬೇಕಾದರೆ ಬಾಜಿ ಕಟ್ಟುತ್ತೇನೆ ನಾಳಿನ ಪೇಪರ್ ನೋಡಿ ನಮ್ಮ ರಾಜ್ಯದಲ್ಲೇ  ಒಂದೆರಡು  ಕಡೆಯಾದರು ಧ್ವಜವನ್ನು ಉಲ್ಟಾ ಹಾರಿಸಿರುತ್ತಾರೆ. ಬ್ರಿಟಿಷರ ದಬ್ಬಾಳಿಕೆ ಹದ್ದು ಮೀರಿದಾಗ ಹಿಂಸೆಯ ನಾನಾ ಮಾರ್ಗಗಳು ಪ್ರಯೋಗಿಸಿ ಹುತಾತ್ಮರಾದವರು, ನಂತರ ದೇಶವನ್ನೆಲ್ಲ ಒಟ್ಟಿಗೆ ಸಂಘಟಿಸಿ ಅಹಿಂಸೆಯಿಂದ ಮಾತ್ರ ನಮಗೆ ಸ್ವಾತಂತ್ರ್ಯ ಸಾಧ್ಯ ಎಂದು ತೋರಿಸಿಕೊಟ್ಟು ಸ್ವಾತಂತ್ರ್ಯ ಹೋರಾಟದ ಮುಂಚೂಣಿಯಲ್ಲಿದ್ದ  ಮಹಾತ್ಮರು, ನಮ್ಮ ಈಗಿನ ಸ್ವಾತಂತ್ರ್ಯವನ್ನೇನಾದರು ನೋಡಿದ್ದರೆ, ಇವರಿಗೆ  ಯಾಕಾದ್ರು ಸ್ವಾತಂತ್ರ್ಯ ಕೊಡಿಸಿದೆವೋ ಎಂದು ಮರುಗುತಿದ್ದರೆನೋ…..

ನನ್ನ  ಮಾತುಗಳು ಅತಿಶಯೋಕ್ತಿ ಎನಿಸಬಹುದು. ಆದರೆ ನಮ್ಮ ದೇಶದಲ್ಲಿ ಎಲ್ಲರಿಗು ಎಷ್ಟು ಸ್ವಾತಂತ್ರ್ಯವಿದೆ ಅಂತ ನಿಮಗೆ ಗೊತ್ತು. ಟ್ರಾಫಿಕ್ ಪೋಲಿಸ್ ಡಾಕುಮೆಂಟ್ ಸರಿ ಇದ್ದರು ಲಂಚ ಪಡೆಯುವ ಸ್ವಾತಂತ್ರ್ಯ, ಖಾತೆ ಬದಲಾವಣೆ ಮಾಡಿಸಬೇಕಾದರೆ ಪತ್ರ ಸ್ಕಾನ್ನಿಂಗ್ ಮಾಡುವನಿಂದ ಹಿಡಿದು, ಮೊಹರು ಹಾಕುವ ಗುಮಸ್ತನಿಂದ ಹಿಡಿದು, revinue inspector ತನಕ ಲಂಚ ಪಡೆಯುವ ಸ್ವಾತಂತ್ರ್ಯ. ಗೆದ್ದೊಡನೆ ತಮ್ಮ ಕ್ಷೇತ್ರದ ಜನತೆಯನ್ನು ಮರೆತು ರೆಸಾರ್ಟ್ ಗಳಲ್ಲಿ ವಾಸ್ತವ್ಯ ಹೂಡುವ ಸ್ವಾತಂತ್ರ್ಯ, ಪಕ್ಷದ ತತ್ವ ಸಿದ್ಧಾಂತಗಳನ್ನು ಮರೆತು ಪಕ್ಷಾಂತರ ಮಾಡುವ ಸ್ವಾತಂತ್ರ್ಯ, ರೈತನ ಜಮೀನನ್ನು ಕಸಿದು ಅಧುನಿಕರಣದ ಹೆಸರಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡುವ ಸ್ವಾತಂತ್ರ್ಯ, ನಮ್ಮ ಭೂಮಿಯ ಸಂಪತ್ತಲ್ಲದೆ ಅಂತರಂಗದಲ್ಲಿರುವ ತರಂಗಾಂತರಗಳನ್ನು ಮೋಸದಿಂದ ಮಾರುವ ಸ್ವಾತಂತ್ರ್ಯ, ಇನ್ನು ತಮಾಷೆಯೆಂದರೆ ತಪ್ಪು ಮಾಡಿ ದುಷ್ಕ್ರುತ್ಯಗಳನ್ನೆಸಗಿ ವಾರ್ಷಿಕ ೧೧ ಕೋಟಿ ಹಣವನ್ನು ಸರ್ಕಾರದಿಂದ ಖರ್ಚು ಮಾಡಿಸಿಕೊಳ್ಳೋ ಸ್ವಾತಂತ್ರ್ಯ ಮತ್ತು ತಪ್ಪಿತಸ್ತ ಎಂದು ಖಾತರಿಯಾದ ಮೇಲು ಶಿಕ್ಷೆ ಇಲ್ಲದೆ ಐಶಾರಾಮಿ ಜೀವನ ನಡೆಸುವ ಸ್ವಾತಂತ್ರ್ಯ, ಇಂತಹದ್ದೆನ್ನಲ್ಲ ವಿರೋಧಿಸಿದರೆ ವಿರೋಧಿಸಿದವರ ವಿರುದ್ದವೇ ಕೇಸು ಜಡಿಯುವ ಸ್ವಾತಂತ್ರ್ಯ.ಆಹಾ ಹೇಳುತ್ತಾ ಹೋದರೆ ಪುಟಗಟ್ಟಲೆ ಇಂತಹ ಸ್ವಾತಂತ್ರ್ಯಗಳು ಸಿಗುತ್ತವೆ.

ಮತ್ತಷ್ಟು ಓದು »