ವಿಷಯದ ವಿವರಗಳಿಗೆ ದಾಟಿರಿ

Posts tagged ‘ಸ್ವಾಮಿ ವಿವೇಕಾನಂದ’

5
ಜುಲೈ

ಸಿಡಿಲು ಸನ್ಯಾಸಿಯ ಐದು ನಿಮಿಷದ ಮಾತುಗಳು ಇಡೀ ಜಗತ್ತಿಗೆ ಸನಾತನ ಧರ್ಮದ ಶ್ರೇಷ್ಠತೆಯನ್ನು ಬಿತ್ತರಿಸಿದ್ದವು.

ಶಿವಾನಂದ ಶಿವಲಿಂಗ ಸೈದಾಪೂರ
(ಎಂ.ಎ.ವಿದ್ಯಾರ್ಥಿ.)
ರಾಣಿಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿ.

ಸ್ವಾಮಿ ವಿವೇಕಾನಂದರ 115ನೇ ಪುಣ್ಯಸ್ಮರಣೆಯ  ವಿಶೇಷ ಲೇಖನ.

ಅದೊಂದು ತಮ್ಮ ಧರ್ಮ ಪ್ರಾಬಲ್ಯವನ್ನು ಜಗತ್ತಿನ ಇತರ ದೇಶದ ಮೇಲೆ ಹರಡಲು ನಡೆಸಿದ ಸಮಾರಂಭ. ಅದಕ್ಕೂ ಒಂದು ಇತಿಹಾಸ, ನೂರ ಐವತ್ತು ವರ್ಷಗಳ ಹಿಂದೆ ಕೊಲಂಬಸ್ ಶೋಧಿಸಿದ್ದು, ಅದರ ಸ್ಮರಣೆಯ ಹೆಸರಲ್ಲಿ ಕ್ರೈಸ್ತ ಧರ್ಮವನ್ನು ಜಗತ್ತಾದ್ಯಂತ ಬಿತ್ತಲು ಆಯೋಜನಗೊಂಡಿದ್ದೇ ವಿಶ್ವ ಸರ್ವಧರ್ಮ ಸಮ್ಮೇಳನ.. ಅದಕ್ಕೆ ಕಾರಣ ಒಂದು ಉದ್ದೇಶ ಹಲವು. ಅಷ್ಟೊತ್ತಿಗೆ ಕ್ರೈಸ್ತ ಧರ್ಮ ಜಗತ್ತಿನ ಹಲವಾರು ದೇಶಗಳನ್ನು ಆಕ್ರಮಿಸಿಕೊಂಡಿತ್ತು. ಅಂತಹ ಆಕ್ರಮಣಕ್ಕೆ ಒಳಗೊಂಡ ದೇಶಗಳಲ್ಲಿ ಭಾರತವು ಒಂದು. ಮತ ಸುಧಾರಣೆಗಾಗಿ ಬುದ್ಧ, ಬಸವ, ಮಹಾವೀರ, ಶಂಕರ, ಮದ್ವಾಚಾರ್ಯರು…. ಹೀಗೆ ಎಲ್ಲರು ಬಂದು ಹೋದರು. ಯಶಸ್ವಿಯು ಇಲ್ಲ, ವಿಫಲವು ಇಲ್ಲ. ಎಲ್ಲವೂ ಮಧ್ಯಂತರದಲ್ಲಿಯೇ ಸಾಗಿತ್ತೇ ಹೊರತು ಅವರ್ಯಾರು ಸಹ ದೇಶದ ಹೋರ ಹೋಗಿ ಸನಾತನ ಧರ್ಮವನ್ನು ಪ್ರಚಾರ ಮಾಡಲಿಲ್ಲ. ಸನಾತನ ಧರ್ಮದ ಮೇಲೆ ದಾಳಿ ಆದಾಗಲೆಲ್ಲ ತಕ್ಕ ಉತ್ತರಕ್ಕೆ ಸಿದ್ಧವಾಗಿಯೇ ಇತ್ತು ಭಾರತ. ತುರ್ಕರ ದಾಳಿಗೆ ವಿಜಯನಗರ, ಮರಾಠರಂತಹ ಮನೆಗಳು ಹುಟ್ಟುತ್ತಲೇ ಬಂದವು. ಮತ್ತಷ್ಟು ಓದು »

11
ಫೆಬ್ರ

ಶಿಕ್ಷಣದಿಂದ ಸ್ತ್ರೀ ಮತ್ತು ಉಕ್ಕಿನ ತರುಣ ಪಡೆ; ಎರಡು ತತ್ವಗಳ ಸಂಗಮ ಈ ಸಾಹಿತ್ಯ ಸಮ್ಮೇಳನ

– ಅಕ್ಷತಾ ಬಜ್ಪೆ

sister-niveditaವಿವೇಕಾನಂದರ ಪಶ್ಚಿಮದ ದಿಗ್ವಿಜಯದ ಕಥೆ ನಮಗೆಲ್ಲ ಗೊತ್ತೇ ಇದೆ. ಆದರೆ ಈ ಒಂದು ದಿಗ್ವಿಜಯ ಗುರು–ಶಿಷ್ಯೆಯರ ಅಪೂರ್ವ ಸಂಗಮಕ್ಕೆ ಸಾಕ್ಷಿಯಾಯಿತು. ದೇಶಕ್ಕೆ ಶುಭಶಕುನವಾಯಿತು. ಸ್ವಾಮಿ ವಿವೇಕಾನಂದರು ಹೋದಲ್ಲೆಲ್ಲಾ ಅವರನ್ನು ಅನುಸರಿಸುತ್ತಾ ಅವರ ಉಪನ್ಯಾಸಗಳನ್ನು ಕೇಳುತ್ತಿದ್ದ ಐಯರ್ಲೆಂಡಿನ ಮಾರ್ಗರೆಟ್ ಗೆ ಭಾರತದ ಬಗ್ಗೆ ಇದ್ದ ಕುತೂಹಲ ಹೆಚ್ಚಾಗುತ್ತಲೇ ಹೋಯಿತು. ಭಾರತಕ್ಕೆ ಬರಲು ಉತ್ಸುಕರಾಗತೊಡಗಿದರು. ಇದಕ್ಕಾಗಿ ಸ್ವಾಮೀಜಿಯವರಲ್ಲಿ ನಿವೇದನೆಯನ್ನು ಸಲ್ಲಿಸಿದರು. ಆದರೆ ಸ್ವಾಮೀಜಿ ಒಪ್ಪಲಿಲ್ಲ. ಸ್ವಾಮೀಜಿಯವರು ತಮ್ಮ ಮೊದಲ ಯುರೋಪ್ ಪ್ರವಾಸ ಮುಗಿಸಿ ಆಗಷ್ಟೇ ಭಾರತಕ್ಕೆ ಹಿಂದಿರುಗಿದ್ದರು. ಪರಿಸ್ಥಿತಿಗೆ ಸ್ಪಂದಿಸಿದ ಸ್ವಾಮೀಜಿ ಮಾರ್ಗರೆಟ್ ಗೆ ಪತ್ರ ಬರೆದು ಭಾರತಕ್ಕೆ ಬರುವಂತೆ ಸೂಚನೆಯಿತ್ತರು. ಮತ್ತಷ್ಟು ಓದು »

6
ಜೂನ್

ಶಂಕರಾಚಾರ್ಯರ ಕುರಿತು ವಿವೇಕಾನಂದರ ಧೋರಣೆಗಳು.

-ಚೈತನ್ಯ ಮಜಲುಕೋಡಿ

shankaracharya_new

ಶಂಕರರ ಕುರಿತು ಹಲವು ಬುದ್ಧಿಜೀವಿಗಳು ಅನುಸರಿಸಿರುವ ಏಕಮುಖ ಮತ್ತು ಛಿದ್ರಾನ್ವೇಷಣ ಮನಸ್ಥಿತಿಯ ಧೋರಣೆಯಲ್ಲಿ ಶಂಕರರೆಂದರೆ ವಿವೇಕಾನಂದರಿಗೆ ಅಲರ್ಜಿ ಎಂಬಂತೆ ಬಿಂಬಿಸಿಬಿಟ್ಟಿದ್ದಾರೆ. ಅಂತಹವರಿಂದಾಗಿ ನಮ್ಮಲ್ಲಿ ಯಾರು ಏನು ಬರೆದಿದ್ದಾರೆಂದು ಪೂರ್ತಿಯಾಗಿ ಅವಲೋಕಿಸುವ ಜಿಜ್ಞಾಸೆಯ ಆಸಕ್ತಿ ಮತ್ತೂ ಕಡಿಮೆಯಾಗಿಬಿಟ್ಟಿದೆ. ಪ್ರಸ್ತುತ ನಮಗೆ ವಿವೇಕಾನಂದರು ತಮ್ಮ ವಿಚಾರಗಳಲ್ಲಿ ಶಂಕರರ ಬಗ್ಗೆ ಯಾವ ರೀತಿಯ ಮನೋಭಾವ ಹೊಂದಿದ್ದರೆಂದು ಸಮಗ್ರವಾಗಿ ಅರಿಯಬೇಕಾದ್ದು ಮುಖ್ಯವಾದ ಕೆಲಸ. ತಮ್ಮ ಪ್ರಖರ ವಿದ್ವತ್ತಿನ ಸ್ವರೂಪದಿಂದ ಇಂದಿಗೂ ಈ ಆಚಾರ್ಯದ್ವಯರು ದೇದೀಪ್ಯಮಾನರಾಗಿ ಬೆಳಗುತ್ತಿದ್ದಾರೆ. ಸಾವಿರವಿವೇಕಾನಂದರು ಸೇರಿದರೆ ಒಬ್ಬರು ಶಂಕರಾಚಾರ್ಯರಾಗಬಹುದು ಎಂದು ಅವರ ಪಟ್ಟಶಿಷ್ಯೆ ಸಿಸ್ಟರ್ ನಿವೇದಿತಾ ಅವರೇ ಒಂದೆಡೆ ಹೇಳಿದ್ದಾರೆ. ಹಾಗಾಗಿ ಸ್ವಾಮಿ ವಿವೇಕಾನಂದರು ಯಾವ ಸಂದರ್ಭಗಳಲ್ಲಿ ಏನೆಲ್ಲ ನುಡಿದಿದ್ದಾರೆ/ಬರೆದಿದ್ದಾರೆ ಎಂಬ ಹಿನ್ನೆಲೆ, ಶಂಕರರ ಬಗ್ಗೆ ಅವರಿಗೆ ದೊರಕಿರಬಹುದಾದ ಅಂಶಗಳು, ಅವರ ವೈಚಾರಿಕ ತುಲನೆ ಮತ್ತು ಧೋರಣೆ, ಶಂಕರಾಚಾರ್ಯರ ಬರವಣಿಗೆ ಮತ್ತು ಜೀವನ ಇವುಗಳ ಬಗ್ಗೆ ವಿವೇಕಾನಂದರ ವಿಚಾರಗಳೇನಿದ್ದವು ಎಂಬುದನ್ನ ನೋಡೋಣ. ಮತ್ತಷ್ಟು ಓದು »

16
ಜನ

ವಿಶ್ವಗುರು ವಿವೇಕಾನಂದ ಹೀಗಿದ್ದರು – ಭಾಗ ೨

– ರೋಹಿತ್ ಚಕ್ರತೀರ್ಥ

ವಿಶ್ವಗುರು ವಿವೇಕಾನಂದ ಹೀಗಿದ್ದರು – ಭಾಗ ೧

ಮೊಳಗಿತು ಕಂಚಿನ ಕಂಠ

Swami Vivekanandaಅಂದು, ಸೆಪ್ಟೆಂಬರ್ 11ನೇ ತಾರೀಖು, ಶಿಕಾಗೋದಲ್ಲಿ ಜಮಾಯಿಸಿದ್ದ ಧರ್ಮಜಿಜ್ಞಾಸುಗಳೆದುರು ಸರ್ವಧರ್ಮ ಸಂಸತ್ತಿನ ವೇದಿಕೆಯಲ್ಲಿ ನಿಂತ ವಿವೇಕಾನಂದರ ಮಾತು ಶುರುವಾಗಿದ್ದು “ಅಮೆರಿಕದ ಸೋದರ ಸೋದರಿಯರೇ” ಎಂಬ ಶಕ್ತಿಶಾಲಿಯಾದ ಪದಗಳ ಮೂಲಕ. ತನ್ನೆದುರು ಕೂತಿದ್ದ ಅಷ್ಟೂ ಜನರನ್ನು  ಹಾಗೆ ಒಂದೇ ಉಸಿರಿನಲ್ಲಿ ತನ್ನವರನ್ನಾಗಿ ಮಾಡಿಕೊಂಡ ಯಾವ ಧರ್ಮಗುರುವೂ ಅಲ್ಲಿರಲಿಲ್ಲ. ಹಾಗಿದ್ದಾಗ ವಿವೇಕಾನಂದರು ಸೋದರ-ಸೋದರಿಯರೇ ಎಂದಿದ್ದೇ ತಡ ಇಡೀ ಸಭಾಂಗಣದಲ್ಲಿ ವಿದ್ಯುತ್ಸಂಚಾರವಾಯಿತು! ಸಭಿಕರು ಎದ್ದು ಮೂರ್ನಾಲ್ಕು ನಿಮಿಷಗಳ ದೀರ್ಘ ಕರತಾಡನ ಮಾಡಿದರು. ತನ್ನ ಕೇವಲ ಹದಿನೈದು ನಿಮಿಷಗಳ ಪುಟ್ಟ ಭಾಷಣದಲ್ಲಿ ವಿವೇಕಾನಂದರು ಭಾರತದ ಸನಾತನ ಸಂಸ್ಕøತಿಯ ಮೂಲ ಆಶಯವನ್ನು ಅನಾವರಣ ಮಾಡಿದ್ದರು. ಮರುದಿನದ ಪತ್ರಿಕೆಗಳಲ್ಲಿ ದೂರದ ಹಿಂದೂಸ್ತಾನದಿಂದ ಬಂದ ಈ ಯುವ ಸಂನ್ಯಾಸಿಯ ಸಿಂಹಗರ್ಜನೆಯದ್ದೇ ಸುದ್ದಿ! ದ ನ್ಯೂಯಾಕ್ ಹೆರಾಲ್ಡ್ ಪತ್ರಿಕೆ, “ಧರ್ಮ ಸಂಸತ್ತಿನ ಅತ್ಯಂತ ಪ್ರಮುಖ ಆಕರ್ಷಣೆ ಭಾರತದಿಂದ ಬಂದ ಸ್ವಾಮಿ ವಿವೇಕಾನಂದರು. ಅವರ ಮಾತುಗಳನ್ನು ಕೇಳಿದ ಮೇಲೆ, ಆ ಪುಣ್ಯಭೂಮಿಯತ್ತ ನಾವು ಮಿಷನರಿಗಳನ್ನು ಧರ್ಮಪ್ರಚಾರಕ್ಕಾಗಿ ಕಳಿಸುತ್ತಿರುವುದು ಅದೆಷ್ಟು ಹಾಸ್ಯಾಸ್ಪದ ಕಾರ್ಯ ಎಂಬುದು ಅರಿವಾಗುತ್ತದೆ” ಎಂದು ಬರೆಯಿತು. ಇನ್ನೊಂದು ಪತ್ರಿಕೆ, “ಜನರು ಉಳಿದವರ ಗಂಟೆಗಟ್ಟಲೆ ಉಪನ್ಯಾಸಗಳನ್ನು ಕೂಡ ಸಹಿಸಿಕೊಂಡು ಈ ಸ್ವಾಮೀಜಿಯ ಹದಿನೈದು ನಿಮಿಷಗಳ ಚಿಕ್ಕ ಭಾಷಣವನ್ನು ಕೇಳಲು ತುದಿಗಾಲಲ್ಲಿ ನಿಂತಿದ್ದರು” ಎಂದು ವಿಮರ್ಶೆ ಬರೆದಿತ್ತು. ತನ್ನ ಹನ್ನೆರಡು ವರ್ಷಗಳ ಕಠಿಣ ತಪಸ್ಸು, ಸಾಧನೆ, ಅಧ್ಯಯನ, ಚಿಂತನಗಳಿಂದ ವಿವೇಕಾನಂದರು ಈಗ “ರಾತ್ರಿಬೆಳಗಾಗುವುದರಲ್ಲಿ” ತಾರೆಯಾಗಿದ್ದರು! ಭಾರತದಲ್ಲಿ ಪ್ರಕಟವಾಗುತ್ತಿದ್ದ ಪತ್ರಿಕೆಗಳು ಕೂಡ ಅಮೆರಿಕನ್ ಪತ್ರಕರ್ತರಿಂದ ಲೇಖನಗಳನ್ನು ಬರೆಸಿ ಪ್ರಕಟಿಸಿದವು. ವಿವೇಕಾನಂದರ ಅಮೆರಿಕಾ ದಿಗ್ವಿಜಯ ಭಾರತದಲ್ಲಿ ಬಲುದೊಡ್ಡ ಸುದ್ದಿಯಾಯಿತು. ರಾಮಕೃಷ್ಣ ಮಠದಲ್ಲಂತೂ ಸಂಭ್ರಮವೇ ಸಂಭ್ರಮ ಮನೆಮಾಡಿತು. ಅಮೆರಿಕೆಯ ಹತ್ತುಹಲವಾರು ಕಡೆಗಳಲ್ಲಿ ಸ್ವಾಮೀಜಿಯ ಭಾಷಣ ಏರ್ಪಾಟಾಯಿತು. ಭಾರತದ ಸನಾತನ ಧರ್ಮದ ಬಗ್ಗೆ ಅರಿಯುವ ಆಸಕ್ತಿ ಅಲ್ಲಿನ ಬಿಳಿತೊಗಲಿನ ಜಿಜ್ಞಾಸುಗಳಿಗೆ ಹೆಚ್ಚಾಯಿತು.

ಮತ್ತಷ್ಟು ಓದು »

14
ಜನ

ವಿಶ್ವಗುರು ವಿವೇಕಾನಂದ ಹೀಗಿದ್ದರು – ಭಾಗ ೧

– ರೋಹಿತ್ ಚಕ್ರತೀರ್ಥ

Swami Vivekanandaಕೆಲ ವರ್ಷಗಳ ಹಿಂದೆ ವಿವೇಕಾನಂದರ ಮೇಲೆ ಅದೊಂದು ಲೇಖನ ಪ್ರಕಟವಾಗಿತ್ತು. ಭಗವಾನ್ ಗೀತೆಯನ್ನು ಸುಟ್ಟು ಹಾಕುತ್ತೇನೆ ಎಂದಮೇಲೆ ಏಕಾಏಕಿ ಆ ಪುಸ್ತಕದ ಸೇಲ್ಸ್ ಹೆಚ್ಚಾದಂತೆ, ವಿವೇಕರ ಮೇಲೆ ಬರೆದಿದ್ದ ಈ ಲೇಖನ ಪ್ರಕಟವಾದ ಮೇಲೆ ಹಲವು ತರುಣರು ವಿವೇಕಾನಂದರನ್ನು ಆಳವಾಗಿ ಅಭ್ಯಾಸ ಮಾಡಲು ಕೂತುಬಿಟ್ಟಿದ್ದರು! ಯಾಕೆಂದರೆ ವಿವೇಕರ ನಿಜಬಣ್ಣ ಬಯಲು ಮಾಡುವ ಉತ್ಸಾಹದಲ್ಲಿ ಲೇಖಕ ಬರೆದಿದ್ದ ಸಾಲುಗಳು ಆಘಾತ ಹುಟ್ಟಿಸುವಲ್ಲಿ ಯಶಸ್ವಿಯಾಗಿದ್ದವು. ಲೇಖನದ ತೊಂಬತ್ತೊಂಬತ್ತು ಭಾಗ ವಿವೇಕಾನಂದರನ್ನು ವಾಚಾಮಗೋಚರವಾಗಿ ತೆಗಳಿ, ಕೊನೆಯ ಒಂದೆರಡು ಸಾಲುಗಳಲ್ಲಿ “ಇಷ್ಟೆಲ್ಲ ಇದ್ದರೂ ಯಕಶ್ಚಿತ್ ಮನುಷ್ಯನೊಬ್ಬ ವಿವೇಕಾನಂದ ಆಗಲು ಸಾಧ್ಯ” ಎಂಬ “ತಿಪ್ಪೆ ಸಾರಿಸಿ” ಲೇಖನವನ್ನು ಮುಗಿಸಲಾಗಿತ್ತು. ಹೆತ್ತತಾಯಿಯನ್ನು ಅಸಹ್ಯ ಪದಗಳಿಂದ ನಿಂದಿಸಿ ಕೊನೆಗೆ “ಅವೇನೇ ಇದ್ದರೂ ನೀನು ತಾಯಿ” ಎಂದು ಹೇಳುವ ಧಾಟಿಯಲ್ಲಿ ಲೇಖಕರು ತನ್ನ ಜಾಣಮಾತುಗಳನ್ನು ಹೊಸೆದಿದ್ದರು. ವಿವೇಕಾನಂದರ ಬಗ್ಗೆ ಸರ್ವೇಸಾಧಾರಣವಾದ ಒಂದಷ್ಟು ಜನರಲ್ ಸಾಹಿತ್ಯವನ್ನು ಓದಿಕೊಂಡದ್ದು ಬಿಟ್ಟರೆ ನನಗೂ ಆ ಧೀಮಂತನ ಜೀವನದ ಹೆಚ್ಚಿನ ವಿವರಗಳು ತಿಳಿದಿರಲಿಲ್ಲ. ಲೇಖನದ ಅಪಪ್ರಚಾರವೊಂದು ನೆಪವಾಗಿ ನಾನೂ ವಿವೇಕಾನಂದರ ಬಗ್ಗೆ ಓದಲು ಕೂತೆ!

ಆ ಅಪಪ್ರಚಾರದ ಲೇಖನವನ್ನು ಓದುತ್ತಿದ್ದಾಗ ನನ್ನನ್ನು ತಡೆದುನಿಲ್ಲಿಸಿದ ಒಂದು ಸಾಲು ಹೀಗಿತ್ತು: ವಿವೇಕಾನಂದರು ಇಂಗ್ಲೀಷಿನಲ್ಲಿ 46 ಅಂಕ ಪಡೆದಿದ್ದರು; ಶಾಲಾಶಿಕ್ಷಕನಾಗುವ ಅರ್ಹತೆಯೂ ಇಲ್ಲ ಎಂಬ ಕಾರಣಕ್ಕೆ ಸ್ವತಃ ಈಶ್ವರಚಂದ್ರ ವಿದ್ಯಾಸಾಗರರು ಅವರನ್ನು ಕೆಲಸದಿಂದ ತೆಗೆದುಹಾಕಿದ್ದರು.ಈ ಮಾತುಗಳನ್ನು ಓದಿದಾಗ,ನನಗೆ ಥಟ್ಟನೆ ಆರ್.ಕೆ.ನಾರಾಯಣ, ಬನ್ನಂಜೆ ಗೋವಿಂದಾಚಾರ್ಯ, ಶ್ರೀನಿವಾಸ ರಾಮಾನುಜನ್, ಎವಾರಿಸ್ಟ್ ಗ್ಯಾಲ್ವ ನೆನಪಿಗೆ ಬಂದರು. ನಿಮಗೆ ಗೊತ್ತಿದೆಯೋ ಇಲ್ಲವೋ, ಭಾರತೀಯ ಇಂಗ್ಲೀಷ್ ಸಾಹಿತ್ಯಲೋಕದ ದಿಗ್ಗಜ ಆರ್.ಕೆ. ನಾರಾಯಣ್ ಕಾಲೇಜು ದಿನಗಳಲ್ಲಿ ಇಂಗ್ಲೀಷ್ ಭಾಷೆಯಲ್ಲಿ ಫೇಲಾಗಿದ್ದರು! ಸಂಸ್ಕೃತದ ಪ್ರಕಾಂಡ ಪಂಡಿತ ಬನ್ನಂಜೆಯವರಿಗೆ ಎರಡು ಸಲ ಪ್ರವೇಶ ಪರೀಕ್ಷೆಗೆ ಕೂತರೂ ಸಂಸ್ಕೃತ ಕಾಲೇಜಿಗೆ ಸೇರಬೇಕಾದಷ್ಟು ಮಾರ್ಕು ಸಿಗಲಿಲ್ಲ! ಗಣಿತ ತಾರೆ ರಾಮಾನುಜನ್ ಎಫ್‍ಎ ಪರೀಕ್ಷೆಯಲ್ಲಿ ಫೇಲಾಗಿದ್ದ ಹುಡುಗ, ಮುಂದೆ ಕೇವಲ ಮೂವತ್ತು ವರ್ಷ ವಯಸ್ಸಲ್ಲೇ ಇಂಗ್ಲೆಂಡಿನ ಕೇಂಬ್ರಿಡ್ಜ್ ವಿವಿಯಲ್ಲಿ ಬಿ.ಎ. ಪದವಿ ಪಡೆದು ಫೆಲೋ ಆಫ್ ರಾಯಲ್ ಸೊಸೈಟಿ ಆದರು! ಗಣಿತದ ಇನ್ನೊಂದು ಅದ್ಭುತ ಪ್ರತಿಭೆ; ಗ್ರೂಪ್ ಸಿದ್ಧಾಂತವೆಂಬ ಹೊಸ ಶಾಖೆಯನ್ನು ಹುಟ್ಟಿಸಿದ ಗ್ಯಾಲ್ವನಿಗೆ ತನ್ನ ಹುಟ್ಟೂರು ಪ್ಯಾರಿಸ್ಸಿನ ಎಕೋಲ್ ಪಾಲಿಟೆಕ್ನಿಕ್ ಎಂಬ ಕಾಲೇಜಿನ ಸಂದರ್ಶನದಲ್ಲಿ ಎರಡು ಸಲ ಮಂಗಳಾರತಿಯಾಗಿತ್ತು. ಯಾವುದೇ ವ್ಯಕ್ತಿಯ ಜೀವನ ನಿಂತ ನೀರಾಗಿರುವುದಿಲ್ಲ; ಅದು ನಿರಂತರ ಚಲನಶೀಲ. ಹಾಗೊಂದು ಊಧ್ರ್ವಗತಿ ಇರುವುದರಿಂದಲೇ ಸಾಮಾನ್ಯವ್ಯಕ್ತಿಗಳು ಮಹಾತ್ಮರಾಗುತ್ತಾರೆ ಎಂಬುದನ್ನು ಬಲ್ಲ ಯಾರಿಗೇ ಆಗಲಿ, ವಿವೇಕಾನಂದರು ಶಾಲೆ-ಕಾಲೇಜುಗಳಲ್ಲಿ ಕಡಿಮೆ ಮಾರ್ಕು ಪಡೆದರು ಎನ್ನುವುದು ಅವರನ್ನು ಅಳೆಯುವ ಮಾನದಂಡ ಅನ್ನಿಸುವುದಿಲ್ಲ. ಸಾಮಾನ್ಯರಲ್ಲಿ ಸಾಮಾನ್ಯ ವ್ಯಕ್ತಿಯೂ ತನ್ನ ಜೀವನದಲ್ಲಿ ಎದುರಾಗುತ್ತಹೋದ ಪಲ್ಲಟಗಳಿಗೆ ಎದೆಯೊಡ್ಡಿ ನಿಂತಾಗ ಮಾತ್ರ ಮಹಾತ್ಮನಾಗಬಲ್ಲ ಎಂಬುದನ್ನು ನಾವು ಅರ್ಥ ಮಾಡಿಕೊಳ್ಳಬೇಕು. ಹಾಗಾಗಿ, ಶಾಲೆಯಲ್ಲಿ 46 ಮಾರ್ಕು ಪಡೆದರು ಎಂಬ ಕಾರಣ ಕೊಟ್ಟು ಓದುಗರನ್ನು ಆಘಾತಗೊಳಿಸಿದ ಲೇಖನದಲ್ಲಿ ವಿವೇಕಾನಂದರ ಔನ್ನತ್ಯವನ್ನು ಅರಿತುಕೊಳ್ಳಲು ದಾರಿಯಾಗುವ ಇನ್ನಷ್ಟು ಆಘಾತಗಳಿರಬಲ್ಲವು ಎಂದು ಮನದಟ್ಟಾಯಿತು. ಅಲ್ಲಿಂದ ಮುಂದಕ್ಕೆ ನಾನು ಕಂಡುಕೊಂಡ ವಿವೇಕಾನಂದರ ನಿಜಚಿತ್ರಣ ಇಲ್ಲಿದೆ.

ಮತ್ತಷ್ಟು ಓದು »

8
ಆಗಸ್ಟ್

ಸೋತು ಗೆದ್ದ ಸ೦ತನ ಕತೆಯಿದು…

– ಗುರುರಾಜ್ ಕೊಡ್ಕಣಿ,ಯಲ್ಲಾಪುರ

ರಾಮಕೃಷ್ಣ ಪರಮಹಂಸರಾಮಕೃಷ್ಣ ಪರಮಹ೦ಸರು ಯಾರಿಗೆ ತಾನೇ ಗೊತ್ತಿಲ್ಲ.ಬಹುಪಾಲು ಭಾರತೀಯರಿಗೆ ರಾಮಕೃಷ್ಣರು ಚಿರಪರಿಚಿತರು.ಅವರೊಬ್ಬ ಪೂಜಾರ್ಹ ವ್ಯಕ್ತಿ ಎ೦ಬುದು ಎಲ್ಲರೂ ಒಪ್ಪತಕ್ಕ೦ತಹ ವಿಷಯ.ಆದರೆ ಆರ೦ಭಿಕ ದಿನಗಳಲ್ಲಿ ಬಹುತೇಕ ಜನರು ಅವರನ್ನೊಬ್ಬ ವಿಚಿತ್ರ ವ್ಯಕ್ತಿಯೆ೦ಬ೦ತೆ ಭಾವಿಸುತ್ತಿದ್ದರು. ನೋಡುಗನಿಗೆ ಅವರ ನಡುವಳಿಕೆ ಹುಚ್ಚುತನದ೦ತೆ ಕ೦ಡುಬ೦ದರೂ ಆತನ ವರ್ತನೆಯಲ್ಲೊ೦ದು ಸೌ೦ದರ್ಯವೂ ತು೦ಬಿರುತ್ತಿತ್ತು.ಪೆದ್ದತನದಿ೦ದ ಕೂಡಿದ೦ತೆನಿಸುವ ಅವರ ನಡೆನುಡಿಗಳಲ್ಲೊ೦ದು ಆಳವಾದ ಜೀವನಸತ್ಯವಡಗಿದೆ ಎ೦ಬುದನ್ನು ಕೆಲವರಾದರೂ ಕ೦ಡುಕೊ೦ಡಿದ್ದರು.ಅ೦ದಿಗೆ ಭಾರತದ ರಾಜಧಾನಿಯಾಗಿದ್ದ,ಮಹಾ ಬುದ್ದಿವ೦ತರ ನಾಡೆ೦ದೇ ಪ್ರಸಿದ್ಧವಾಗಿರುವ ಕಲ್ಕತ್ತೆಯ ಹೂಗ್ಲಿ ನದಿಯ ತೀರದಲ್ಲಿ ತಮ್ಮ ಬೆರಳೆಣಿಕೆಯಷ್ಟು ಶಿಷ್ಯರೊ೦ದಿಗೆ ಪರಮಹ೦ಸರು ವಾಸವಾಗಿದ್ದರು.ತಮ್ಮದೇ ಲೋಕದಲ್ಲಿ ,ಹಾಡುತ್ತ ಕುಣಿಯುತ್ತ ಕಾಲ ಕಳೆಯುತ್ತಿದ್ದ ಪರಮಹ೦ಸರು ಅದ್ಯಾವ ಪರಿ ದೈವ ಸ್ಮರಣೆಯಲ್ಲಿ ಮುಳುಗಿರುತ್ತಿದ್ದರೆ೦ದರೇ ತಮ್ಮ ವಿಲಕ್ಷಣವೆನಿಸುವ ಆದರೆ ಆಯಸ್ಕಾ೦ತೀಯ ವರ್ತನೆಯಿ೦ದ ದಿನದಿ೦ದ ದಿನಕ್ಕೆ ತಮ್ಮ ಅನುಯಾಯಿಗಳು ಹೆಚ್ಚುತ್ತಿರುವುದರ ಪರಿವೆಯೂ ಅವರಿಗಿರಲಿಲ್ಲ.

ಹೀಗೊಬ್ಬ ವಿಕ್ಷಿಪ್ತ ವ್ಯಕ್ತಿ ತಮ್ಮ ನಡುವೆಯೇ ಇದ್ದಾನೆ ಮತ್ತು ಆತ ದೇವರ ಇರುವಿಕೆಯನ್ನು ಕಲ್ಕತ್ತೆಯಲ್ಲಿಯೇ ಸಾರುತ್ತಿದ್ದಾನೆ ಎ೦ಬುದನ್ನು ಮೊದಲು ಗಮನಿಸಿದವರು ಪಶ್ಚಿಮ ಬ೦ಗಾಳದ ಮಹಾನ್ ಚಿ೦ತಕರಲ್ಲಿ ಒಬ್ಬರಾದ ಕೇಶವ ಚ೦ದ್ರ ಸೇನರು.ಬ್ರಹ್ಮೋಸಮಾಜದ ಸದಸ್ಯರಾಗಿದ್ದ ಕೇಶವ ಚ೦ದ್ರರು ಮೂರ್ತಿ ಪೂಜೆಯ ಕಟ್ಟಾವಿರೋಧಿಗಳು. ಪರಮ ನಾಸ್ತಿಕರು ಮತ್ತು ಚತುರ ವಾಗ್ಮಿ. ಕಾಳಿದೇವಿಯ ವಿಗ್ರಹಾರಾಧಕನೊಬ್ಬ ತಮ್ಮ ಊರಿನಲ್ಲಿಯೇ ದೇವರ ಮಹಿಮೆಯನ್ನು ಸಾರುವ ಕೆಲಸವನ್ನು ಮಾಡುತ್ತಿದ್ದಾನೆ,ಅ೦ಥವನಿಗೆ ಕೆಲವು ಕಾಲೇಜಿನ ಅಧ್ಯಾಪಕರು ಶಿಷ್ಯರಾಗಿದ್ದಾರೆನ್ನುವ ವಿಷಯವನ್ನು ಕೇಳಿದಾಗ ಕೇಶವ ಸೇನರಿಗೆ ನಖಶಿಖಾ೦ತ ಕೋಪ.

ಮತ್ತಷ್ಟು ಓದು »

18
ಫೆಬ್ರ

ವಿವೇಕಾನಂದರ ವಿಚಾರಗಳು: ಸಮಾಜ ಸುಧಾರಣೆ

– ಪ್ರೊ.ರಾಜಾರಾಮ ಹೆಗಡೆ

ಇತಿಹಾಸ ಮತ್ತು ಪ್ರಾಕ್ತನ ಶಾಸ್ತ್ರ ವಿಭಾಗ, ಕುವೆಂಪು ವಿಶ್ವವಿದ್ಯಾನಿಲಯ

Swami Vivekanandaಕನ್ನಡದ ಅಂಕಣಕಾರರೊಬ್ಬರು ನಾಲ್ಕಾರು ವರ್ಷಗಳ ಹಿಂದೆ ವಿವೇಕಾನಂದರ ಕುರಿತು ಬರೆದ ಲೇಖನವೊಂದು ಜಾಲತಾಣಗಳಲ್ಲಿ ಇತ್ತೀಚೆಗೆ ಹರಿದಾಡಿತು. ಇದು ತುಂಬಾ ವಿವಾದಾತ್ಮಕವಾದ ಲೇಖನವಾಗಿತ್ತು, ಕಾರಣ, ವಿವೇಕಾನಂದರ ಕುರಿತು ಇರುವ ಅತಿಮಾನುಷ ಕಲ್ಪನೆಗಳನ್ನು ಒಡೆಯುವುದು ತನ್ನ ಗುರಿ ಎಂಬುದೇ ಆ ಲೇಖನದ ಘೋಷಣೆ. ಆ ಲೇಖನದಲ್ಲೇ ವಿವೇಕಾನಂದರು ಮತ್ತೊಂದು ರೀತಿಯ ಅತಿಮಾನುಷರಾಗಿ ಚಿತ್ರಿತರಾದುದು ವಿಪರ್ಯಾಸ. ಅದೆಂದರೆ ಅವರು ಅಕ್ಷರಶಃ ಇಂದಿನ ಪ್ರಗತಿಪರರಂತೆ ವಿಚಾರ ಮಾಡುತ್ತಿದ್ದುದು: ಹಿಂದೂ ಧರ್ಮವೊಂದು ನರಕ, ಹಾಗಾಗಿ ಅದು ನಾಶವಾಗಬೇಕು, ಜಾತಿ ವ್ಯವಸ್ಥೆ ಹೋಗಬೇಕು, ಕ್ರಿಸ್ತನ ಪಾದವನ್ನು ತಮ್ಮ ರಕ್ತದಿಂದ ತೊಳೆದರೂ ಕಡಿಮೆಯೇ, ಭಾರತೀಯ ಸಂಸ್ಕøತಿಗೆ ಇಸ್ಲಾಂನ ಶರೀರ ಇರಬೇಕು, ಬ್ರಾಹ್ಮಣರು ಭಾರತಕ್ಕೆ ಶಾಪ, ಇತ್ಯಾದಿ. ಅವರು ಮಾಂಸವನ್ನು ತಿಂದಿದ್ದು, ಹುಕ್ಕಾ ಸೇದಿದ್ದು, ಹಾಗೂ ಹಲವಾರು ರೋಗಗಳಿಂದ ನರಳಿದ್ದು ಆ ಲೇಖನಕ್ಕೆ ಬಹಳ ನಿರ್ಣಾಯಕವಾಗಿ ಕಂಡಿದೆ. ಏಕೆಂದರೆ ಇಂದ್ರಿಯಗಳ ಮೇಲೆ ನಿಯಂತ್ರಣವನ್ನೇ ಕಳೆದುಕೊಂಡು ಇಲ್ಲದ ಚಟಗಳನ್ನು, ರೋಗಗಳನ್ನು ಆಹ್ವಾನಿಸಿಕೊಂಡು, ಸಮಾಜವನ್ನು( ತನಗೆ ಬೇಕಾದಾಗ) ಧಿಕ್ಕರಿಸಿ ಬದುಕುವುದು ಪ್ರಗತಿಪರ ಜೀವನ ಶೈಲಿಯ ಸಂಕೇತವಾಗಿದೆ. ಇಂಥವರಿಗೆ ವಿವೇಕಾನಂದರು ಪ್ರಗತಿಪರರಾಗಬೇಕಾದರೆ ಹೀಗೇ ಇರಬೇಕಾದುದು ಸಹಜ.

ಒಬ್ಬ ವ್ಯಕ್ತಿಯು ಗತಿಸಿ 110 ವರ್ಷಗಳಾದ ಮೇಲೆ ಅವನ ಜೀವನ ಶೈಲಿ ಹಾಗೂ ದೈಹಿಕ ಆಕೃತಿಯ ಕುರಿತು ಅವನ ಆರಾಧಕರಲ್ಲಿ ಏನೇನು ತಪ್ಪು ಕಲ್ಪನೆಗಳು ಹುಟ್ಟಿಕೊಳ್ಳುತ್ತವೆ ಎಂಬುದು ಅಷ್ಟು ಮುಖ್ಯವಲ್ಲ. ಹಾಗೂ ಜೀವನ ಶೈಲಿ ಮತ್ತು ದೇಹಸ್ಥಿತಿಗಳು ಒಬ್ಬನ ಜ್ಞಾನಸಾಧನೆಯನ್ನು ಆಳೆಯಲು ಮಾನದಂಡಗಳಲ್ಲ. ಭಾರತೀಯ ಅಧ್ಯಾತ್ಮ ಪರಂಪರೆಯು ಈ ಕುರಿತು ಯಾವುದೇ ಸಂದೇಹವನ್ನೂ ಉಳಿಸುವುದಿಲ್ಲ. ಹಾಗಾಗಿ ನಿಜವಾಗಿಯೂ ಕಾಳಜಿ ವಹಿಸಬೇಕಾದದ್ದು ವಿವೇಕಾನಂದರ ವಿಚಾರಗಳ ಕುರಿತು ಹುಟ್ಟಿಕೊಳ್ಳಬಹುದಾದ ತಪ್ಪು ಕಲ್ಪನೆಗಳ ಕುರಿತು. ಅವರ ವಿಚಾರಗಳ ಕುರಿತು ಏನೇನು ವಿಕೃತ ಚಿತ್ರಣಗಳು ಹುಟ್ಟಿಕೊಂಡಿವೆಯೆಂಬುದಕ್ಕೆ ಈ ಮೇಲಿನ ಲೇಖನವೂ ಒಂದು ಉದಾಹರಣೆ. ಇಲ್ಲಿ ವಿವೇಕಾನಂದರ ಭಾಷಣಗಳಿಂದ ನಾಲ್ಕಾರು ಆಯ್ದ ಸಾಲುಗಳನ್ನು ಸಂದರ್ಭದಿಂದ ಎತ್ತಿ ತಮ್ಮ ಪ್ರತಿಪಾದನೆಗೆ ಅಸಹಜವಾಗಿ ಒಗ್ಗಿಸಿಕೊಳ್ಳಲಾಗಿದೆ. ವಿವೇಕಾನಂದರ ಭಾಷಣಗಳನ್ನು ಕೂಲಂಕಷವಾಗಿ ಪರಿಶೀಲಿಸಿದಾಗ ಇಂದು ಪ್ರಗತಿಪರರೆಂದು ಕರೆದುಕೊಳ್ಳುವವರು ಪ್ರತಿಪಾದಿಸಬಯಸುವ ಸಮಾಜ ಸುಧಾರಣೆಯ ಕುರಿತು ಒಟ್ಟಾರೆಯಾಗಿ ವಿವೇಕಾನಂದರ ಅಭಿಪ್ರಾಯಗಳು ಏನು ಎಂಬುದು ತಿಳಿದುಬರುತ್ತದೆ. ಈ ಕೆಳಗೆ ನಾನು ವಿವೇಕಾನಂದರ ಹೇಳಿಕೆಗಳನ್ನೇ ಸಂಕ್ಷಿಪ್ತಗೊಳಿಸಿದ್ದೇನೆ.
ಮತ್ತಷ್ಟು ಓದು »

1
ಫೆಬ್ರ

ಭಾರತೀಯ ಸಂಸ್ಕೃತಿಯನ್ನು ವಿರೂಪಗೊಳಿಸುವ ಪಾಶ್ಚಾತ್ಯ ಚಿಂತನಾ ಮಾರ್ಗಗಳು

ಶಿವಕುಮಾರ ಮತ್ತು ಡಂಕಿನ್ ಝಳಕಿ

Swami Vivekanandaದಿನೇಶ್ ಅಮೀನ್ ಮಟ್ಟು ಅವರು ಪ್ರತಿಷ್ಠಿತ ಪತ್ರಿಕೆಯೊಂದಕ್ಕೆ ೨೦೧೨ರಲ್ಲಿ ಬರೆದ ವಿವೇಕಾನಂದರ ಕುರಿತ ಲೇಖನ ಬಹಳಷ್ಟು ಚರ್ಚೆಯನ್ನು ಹುಟ್ಟುಹಾಕಿದೆ. ಈ ಲೇಖನದ ವಿರುದ್ಧ ಎದ್ದ ದನಿಗಳ ಕುರಿತು ತಮ್ಮ ಸಮರ್ಥನೆಯನ್ನು ಹೊಸೆಯುತ್ತಾ, ತಮ್ಮ ಫೇಸ್ಬುಕ್ ಪುಟದಲ್ಲಿ, ತಮ್ಮ ಲೇಖನ ಐತಿಹಾಸಿಕವಾಗಿ ಸರಿಯಾಗಿದೆ ಮತ್ತು ತಾವು ವಿವೇಕಾನಂದರ ಬಗ್ಗೆ ಪ್ರಕಟವಾಗಿರುವ ಸುಮಾರು 200 ಪುಸ್ತಕಗಳನ್ನು ಓದಿದ್ದಾಗಿ ಹೇಳಿಕೊಳ್ಳುತ್ತಾರೆ. ಅವರ ಪರವಾಗಿ ವಾದಿಸುತ್ತ ಮತ್ತೊಬ್ಬರು, ‘ರೋಗಿಷ್ಟ’ ಎನ್ನುವುದು ಬೈಗುಳವೇ ಅಲ್ಲ, ‘ಕಡಿಮೆ ಅಂಕ ಗಳಿಸುವವ’ ಎಂಬುದು ‘ಅವಮಾನದ’ ವಿಷಯವಲ್ಲ ಎಂದು ಹೇಳ ತೊಡಗಿದ್ದಾರೆ. ಈ ಹೊತ್ತಿನಲ್ಲಿ ಕೆಲವು ವಿಚಾರಗಳನ್ನು ಮತ್ತೊಮ್ಮೆ ಚರ್ಚೆಗೆತ್ತಿಕೊಳ್ಳುವುದು ಈ ಪುಟ್ಟ ಲೇಖನದ ಉದ್ದೇಶ.

ಮಟ್ಟುರವರ ವಿವೇಕಾನಂದರ ಕುರಿತ ಲೇಖನದ ಈ ಸಾಲುಗಳನ್ನು ನೋಡಿ: “ಸ್ವಾಮಿ ವಿವೇಕಾನಂದರು ದಡ್ಡ ವಿದ್ಯಾರ್ಥಿಯಾಗಿದ್ದರು. … ಹುಟ್ಟಿನಿಂದಲೇ ರೋಗಿಷ್ಠರಾಗಿದ್ದ ಅವರು ಸಾಯುವ ಹೊತ್ತಿಗೆ ಒಂದೆರಡಲ್ಲ, ಮೂವತ್ತೊಂದು ರೋಗಗಳಿಂದ ಬಳಲಿ ಹೋಗಿದ್ದರು. ಎಲ್ಲ ಬಂಗಾಳಿಗಳಂತೆ ಅವರೊಬ್ಬ ಮಹಾ ತಿಂಡಿಪೋತರಾಗಿದ್ದರು. ಜೀವನದ ಕೊನೆಯ ದಿನದವರೆಗೂ ಅವರು ಮಾಂಸಾಹಾರಿ ಆಗಿದ್ದರು. … ವ್ಯಸನಿಯಂತೆ ಸಿಗರೇಟ್-ಹುಕ್ಕಾ ಸೇದುವ ಧೂಮಪಾನಿಯಾಗಿದ್ದರು. … ತೀವ್ರ ತಲೆನೋವಿನಿಂದ ಹಿಡಿದು ಹೃದಯದ ಕಾಯಿಲೆವರೆಗೆ … ಮಲಬದ್ಧತೆ, ಭೇದಿ, ನರದೌರ್ಬಲ್ಯ, ಮಂಡಿನೋವು, ಕಾಲುಬಾವು ಎಲ್ಲವೂ ಅವರನ್ನು ಕಾಡುತ್ತಿತ್ತು. … ಈ ಎಲ್ಲ ರೋಗಗಳ ನಡುವೆಯೂ ಅವರ ನಾಲಗೆಯ ಚಪಲ ಮಾತ್ರ ಕಡಿಮೆಯಾಗಿರಲಿಲ್ಲ. … (ವಿವೇಕಾನಂದ) ಮಾತ್ರ ಮಾಂಸದ ಅಡುಗೆಯನ್ನು ಬಗೆಬಗೆಯಲ್ಲಿ ಮಾಡುತ್ತಿದ್ದ…. ಕುಟುಂಬದ ಕಷ್ಟಗಳನ್ನು ತಾಯಿಯ ಹೆಗಲ ಮೇಲೆ ಹಾಕಿ ವಿವೇಕಾನಂದರು ಸಂಸಾರ ತೊರೆದು ಸನ್ಯಾಸಿಯಾಗುತ್ತಾರೆ.” ಇವು ಲೇಖನದ ವಾದದ ಕೆಲವೊಂದು ಝಲಕ್ ಅಷ್ಟೇ.

ಮತ್ತಷ್ಟು ಓದು »

12
ಜನ

ನವಯುಗಾಚಾರ್ಯ ಸ್ವಾಮಿ ವಿವೇಕಾನಂದ

– ಎಸ್.ಎನ್.ಭಾಸ್ಕರ್‍, ಬಂಗಾರಪೇಟೆ

Swami Vivekanandaಮರುದಿನ ಪೂರ್ವ ದಿಗಂತದಿಂದ ಉದಯಿಸುವ ನೇಸರ ಅಂಧಕಾರವನ್ನು ಕೊಲ್ಲಿ ಬೆಳಕನ್ನು ಪಸರಿಸುವಂತೆ, ತನ್ನ ಜನ್ಮ ಭೂಮಿಯ, ಸನಾತನ ಹಿಂದೂ ಧರ್ಮದ ಸಂಸ್ಕೃತಿ ಪರಂಪರೆಯ, ಆಳ-ಅಗಾಧತೆಯ, ವೇದಾಂತ ದರ್ಶನದ ಪ್ರಖರವಾದ ಬೆಳಕಿನ ಅನುಭೂತಿ ಇಡೀ ಅಮೇರಿಕಕ್ಕೆ ಅಲ್ಲ ಇಡೀ ವಿಶ್ವಕ್ಕೇ ಹಬ್ಬಬೇಕಿದೆ. ಮಾತೃಭೂಮಿಯ ಬಗ್ಗೆ ಅಪಾರವಾದ ಕರುಣಾಭರಿತ ರಾಷ್ಟ್ರಪ್ರೇಮವನ್ನು, ಗುರುವಾಣಿಯನ್ನು, ತನ್ನ ದೃಢ ಸಂಕಲ್ಪವನ್ನು ಮನದಲ್ಲಿ ಹೊತ್ತ ಮಹಾ ಸನ್ಯಾಸಿ, ಅಪ್ರತಿಮ ರಾಷ್ಟ್ರಪ್ರೇಮಿ, ಯೋಗಾಚಾರ್ಯ ಶ್ರೀ ಸ್ವಾಮಿ ವಿವೇಕಾನಂದರು ೧೮೯೩ ನೇ ಸೆಪ್ಟೆಂಬರ್‍ ೧೦ ರಂದು ಅಮೇರಿಕದ ಚಿಕಾಗೋ ರೈಲ್ವೆ ನಿಲ್ದಾಣದಲ್ಲಿ ಇಳಿಯುತ್ತಾರೆ.ಮುಂದಿನ ದಿನವೇ ನಡೆಯಲಿದ್ದ ವಿಶ್ವ ಧರ್ಮ ಸಮ್ಮೇಳನದಲ್ಲಿ ಸನಾತನ ಹಿಂದೂ ಧರ್ಮದ ಪ್ರತಿನಿಧಿಯಾಗಿ ಭಾಗವಹಿಸಲು. ಇಷ್ಟಕ್ಕೂ, ಆಗಾಗಲೇ ಕತ್ತಲು ವ್ಯಾಪಿಸಿದ್ದ ರಾತ್ರಿಯಂದು ಚಿಕಾಗೋ ರೈಲ್ವೇ ನಿಲ್ದಾಣದಲ್ಲಿ ಇಳಿದ ವಿವೇಕಾನಂದರ ಸ್ಥಿತಿಯಾದರೂ ಹೇಗಿತ್ತು ಎಂದು ಕೊಂಡಿರಿ?

ತಮ್ಮ ಬಳಿಯಲ್ಲಿದ್ದ ಹಣವೆಲ್ಲವೂ ವ್ಯಯವಾಗಿ ಕಿಲುಬು ಕಾಸೂ ಸಹಾ ಇರಲಿಲ್ಲ. ಹಿಂದಿನ ದಿನ ಪರಿಚಯಸ್ಥರೊಬ್ಬರು ನೀಡಿದ್ದ ಚಿಕಾಗೋವಿನ ಅವರ ಗೆಳೆಯರ ವಿಳಾಸ ಬರೆದಿಟ್ಟುಕೊಂಡಿದ್ದ ಚೀಟಿ ಸಹಾ ಅಕಸ್ಮಾತಾಗಿ ಕಳೆದುಹೋಗಿತ್ತು. ಕಾವಿಯ ನಿಲುವಂಗಿ, ರುಮಾಲು ಧರಿಸಿದ್ದ ಸ್ವಾಮಿಗಳಿಗೆ ಅಲ್ಲಿನ ಚಳಿಯ ರುಧ್ರತೆ ಚುಚ್ಚತೊಡಗಿತ್ತು. ಹೆಚ್ಚಾಗಿ ಜರ್ಮನ್ನರೇ ವಾಸವಿದ್ದ ಚಿಕಾಗೋವಿನಲ್ಲಿ ಭಾಷೆಯು ಅಂತಹ ಸಹಾಯಕ್ಕೆ ಬರಲಿಲ್ಲ. ಇವರ ವೇಷಧಾರಣೆಯನ್ನು ನೋಡಿ ಕೆಲವರು ನಗತೊಡಗದರೆ, ಮತ್ತೆ ಕೆಲವರು ಅನುಮಾನದಿಂದ ನೋಡತೊಡಗಿದರು. ದಿನವೆಲ್ಲವೂ ಏನನ್ನೂ ಸೇವಿಸದೇ ಇದ್ದ ಕಾರಣ ಹಸಿವಿನಿಂದ ಬಳಲಿದ್ದರು. ಮನದಲ್ಲಿ ಮತ್ತೊಮ್ಮೆ ತಮ್ಮ ಗುರುವರ್ಯರನ್ನು ನೆನೆದು ಅಲ್ಲೇ ನಿಲ್ದಾಣದಲ್ಲಿ ಬಿದ್ದಿದ್ದ ಒಂದು ದೊಡ್ಡ ಪೆಟ್ಟಿಗೆಯೊಳಗೆ ಹೋಗಿ ಮಲಗಿಬಿಟ್ಟರು. ಕತ್ತಲಿನೊಡನೆ ರಮಿಸುತ್ತಾ ಅಸಹನೀಯವಾದ ಚಳಿ ಸುತ್ತಲೂ ವ್ಯಾಪಿಸಿತ್ತು, ಊಟವಿಲ್ಲದೇ ಹೊಟ್ಟೆಯಲ್ಲಿ ಹಸಿವಿನ ಸಂಕಟ, ಬೆಳಗಾದರೇ ಸನಾತನ ಧರ್ಮದ ಪ್ರತಿನಿಧಿಯಾಗಿ ತಾನು ಪಾಲ್ಗೊಳ್ಳಬೇಕಾದ ವಿಶ್ವ ಧರ್ಮ ಸಮ್ಮೇಳನ. ಕುವೆಂಪು ಬರೆಯುತ್ತಾರೆ “ನಾಳೆಯೆಂದರೆ ಅವರ ಹರಿಕಂಠ ಗರ್ಜನೆಯಿಂದ ಸಮಸ್ತ ಅಮೇರಿಕಾ ದೇಶವೇ ಎಚ್ಚರಗೊಳ್ಳಬೇಕು. ಇಂದಾದರೋ ಗತಿಯಿಲ್ಲದೇ ಪೆಟ್ಟಿಗೆಯಲ್ಲಿ ಮಲಗಿದ್ದಾರೆ. ಈಶ್ವರೇಚ್ಚೆ!”.

ಮತ್ತಷ್ಟು ಓದು »

12
ಜನ

ತೇಜಃಪುಂಜ

– ರಾಜೇಶ್ ರಾವ್

Rastriya Yuva Dinaತಮಿಳುನಾಡಿನ ಒಂದು ಹಳ್ಳಿ. ಮರವೊಂದರ ಕೆಳಗೆ ಕುಳಿತು ಸಂತನೊಬ್ಬ ತನ್ನ ಶಿಷ್ಯರಿಗೆ ಹೇಳುತ್ತಿದ್ದಾನೆ…

“ಹಿಂದೂಸ್ಥಾನ ಮತಾಂಧರ ದಾಸ್ಯಕ್ಕೆ ಸಿಲುಕಿ ತನ್ನ ಕ್ಷಾತ್ರತ್ವ, ಸ್ವಾಭಿಮಾನ, ಅಸ್ಮಿತೆಯನ್ನು ಮರೆತು ನಿದಿರೆ, ಮದಿರೆ, ನಪುಂಸಕತ್ವದ ವಶವಾಗಿದ್ದಾಗ ದೇಶದ ಕ್ಷಾತ್ರ ತೇಜವನ್ನು ಬಡಿದೆಬ್ಬಿಸಿದನಾತ. ಮತಾಂಧ ಮೊಘಲ್, ಆದಿಲ್, ನಿಜಾಮ್, ಬರೀದ್, ಕುತುಬ್, ಇಮಾಮ್ ಶಾಹಿಗಳ ತಂತ್ರಕ್ಕೆ ಪ್ರತಿತಂತ್ರ ರೂಪಿಸಿ ಹಿಂದೂಗಳ ಮಾನ, ಪ್ರಾಣ ರಕ್ಷಣೆ ಮಾಡಿದ. ತೋರಣ, ಚಾಕಣ, ಪನ್ನಾಳ, ಪುರಂದರ…ಹೀಗೆ ಕೋಟೆಗಳ ಮೇಲೆ ಕೋಟೆ ಗೆದ್ದು…ಛತ್ರಪತಿಯಾಗಿ ಹಿಂದೂಸಾಮ್ರಾಜ್ಯದ ಶೌರ್ಯ, ಸ್ಥೈರ್ಯ, ಸಾಹಸವನ್ನು ಜಗತ್ತಿಗೆ ಪ್ರಚುರಪಡಿಸಿದ….”

ಶಿಷ್ಯರಿಗೋ ಆಶ್ಚರ್ಯ. ತಮ್ಮ ಗುರುಗಳ್ಯಾಕೆ ಆ ದರೋಡೆಕೋರ ಶಿವಾಜಿಯ ಬಗ್ಗೆ ಹೇಳುತ್ತಿದ್ದಾರೆ?

ಆ ಗುರು ಮತ್ಯಾರು ಅಲ್ಲ. ಮುಂದೊಂದು ದಿನ ಐದೇ ಐದು ನಿಮಿಷಗಳ ಭಾಷಣದಲ್ಲಿ ಜಗತ್ತಿನ ಎದುರು ತನ್ನ ದೇಶ ಜಗತ್ತಿನ ಗುರು, ತನ್ನ ಸಂಸ್ಕೃತಿ ಉತ್ಕೃಷ್ಟವಾದ ಸನಾತನ ಸಂಸ್ಕೃತಿ, ತನ್ನ ನಾಗರೀಕತೆ ಇಂದಿಗೂ ಅಳಿದಿಲ್ಲ ಎಂದು ಜಾಗತಿಕ ಧರ್ಮ ಸಮ್ಮೇಳನದಲ್ಲಿ ಭಾರತದ ಹಿರಿಮೆ, ಗರಿಮೆಯನ್ನು ಜಗತ್ತಿಗೆ ಮನವರಿಕೆ ಮಾಡಿಕೊಟ್ಟನೋ, ನನ್ನ ಭಾರತಕ್ಕೆ ಶಿವಾಜಿಯಂತಹ ೧೦೦ ಮಂದಿ ತರುಣರು ಸಾಕೆಂದು ಯುವ ಜನತೆಯನ್ನು ಬಡಿದೆಬ್ಬಿಸಿದನೋ ಅಂತಹ ಸಿಡಿಲ ಸಂತ ಸ್ವಾಮಿ ವಿವೇಕಾನಂದ.

ಮತ್ತಷ್ಟು ಓದು »