ವಿಷಯದ ವಿವರಗಳಿಗೆ ದಾಟಿರಿ

Posts tagged ‘ಹಿಂದು’

19
ಏಪ್ರಿಲ್

ಯುಎಇ ನಿಜಕ್ಕೂ ಅಷ್ಟೊಂದು ಅಸಹಿಷ್ಣು ದೇಶವೇ?

– ರಾಘವೇಂದ್ರ ಎಮ್‌ ಸುಬ್ರಹ್ಮಣ್ಯ

Arab_Gulf_States_englishಕಳೆದೆರಡು ವಾರದಿಂದ ಗಲ್ಫ್ ದೇಶಗಳಲ್ಲಿರುವ ಹಿಂದೂಗಳ ಕೆಲಸಕ್ಕೆ ಕುತ್ತು ತರುವ ವ್ಯವಸ್ಥಿತ ಸಂಚುಗಳು ನಡೆದಿವೆ. ದೆಹಲಿಯ ತಬ್ಲೀಗೀ ಜಮಾತ್’ನವರ ವರ್ತನೆಯನ್ನು ಖಂಡಿಸಿ ಏನನ್ನಾದರೂ ಬರೆದರೆ ಅದೇ ದೊಡ್ಡ ತಪ್ಪು ಎಂಬಂತೆ ಬಿಂಬಿಸಿ, ಪೋಲಿಸರಿಗೆ ದೂರು ನೀಡುವ ಕೆಲಸ ನಡೆದಿದೆ. ಹಾಗಾದರೆ ಯುಎಇಯಲ್ಲಿ ಅಷ್ಟೆಲ್ಲಾ ಸುಲಭಕ್ಕೆ ಯಾರನ್ನಾದರೂ ಅರೆಸ್ಟ್ ಮಾಡಿಸಬಹುದೇ? ಇಸ್ಲಾಂ ಬಗ್ಗೆ ಏನೂ ಕೆಟ್ಟದಾಗಿ ಬರೆಯದೇ, ಭಾರತದ ಕೆಲ ಮುಸ್ಲಿಮರ ತಪ್ಪುಗಳ ಬಗ್ಗೆ ಬರೆದರೆ ಅದು ಶಿಕ್ಷಾರ್ಹ ಅಪರಾಧವೇ?

ಹೆಚ್ಚಿನವರಿಗೆ ಅರಬ್ ರಾಷ್ಟ್ರಗಳೆಂದರೆ ಬಹಳಷ್ಟು ತಪ್ಪು ಅಭಿಪ್ರಾಯಗಳಿವೆ. ತಪ್ಪು ಮಾಡಿದರೆ ಸಾರ್ವಜನಿಕವಾಗಿ ಛಡಿಯೇಟು ಬೀಳುತ್ತದೆ, ಕೈ ಕಾಲು ತಲೆ ಕಡಿಯುತ್ತಾರೆ ಎಂಬೆಲ್ಲಾ ಅನಿಸಿಕೆಗಳಿವೆ. ಆದರೆ ಈ ಎಲ್ಲಾ ಹೆಚ್ಚಿನ ಅಭಿಪ್ರಾಯಗಳು ಬಂದಿರುವುದು ಸೌದಿ ಅರೇಬಿಯಾದಿಂದ. ಯಾಕೆಂದರೆ ಇವೆಲ್ಲಾ ಹೆಚ್ಚಾಗಿ ನಡೆಯುವುದು ಅಲ್ಲಿ ಮಾತ್ರ. ಆದರೆ ಎಲ್ಲಾ ಅರಬ್ ದೇಶಗಳೂ ಹೀಗಿಲ್ಲ. ಇಲ್ಲಿ ಇಸ್ಲಾಂ ನಿಂದನೆಯನ್ನು ಯಾರೂ ಸಹಿಸುವುದಿಲ್ಲವಾದರೂ, ಒಮಾನ್, ಬಹರೈನ್ ಮತ್ತು ಯುಎಇ ದೇಶಗಳು ಸಹಿಷ್ಣುತೆಯಲ್ಲಿ ಹೊಸ ಅಧ್ಯಾಯಗಳನ್ನೇ ಬರೆದಿವೆ. ಮತ್ತಷ್ಟು ಓದು »

21
ಜೂನ್

ನಾವೇಕೆ ಪಾಶ್ಚಾತ್ಯ ಸಂಸ್ಕೃತಿಯನ್ನು ಅರ್ಥ ಮಾಡಿಕೊಳ್ಳಬೇಕು? ( ಭಾಗ – ೪ )

ಎಸ್.ಎನ್. ಬಾಲಗಂಗಾಧರ
(ತಿದ್ದುಪಡಿ ಮಾಡಿದ ಅನುವಾದ.
ಮೂಲ ಅನು: ಸಿ.ಎಸ್.ಎಲ್.ಸಿ ಸಂಶೋಧಕರು, ‘ಪೂರ್ವಾವಲೋಖನ’ ಕೃತಿಯಲ್ಲಿ ಪ್ರಕಟವಾಗಿದೆ.)

ಎರಡು ವಿಭಿನ್ನ ಮಾರ್ಗಗಳು :

ಸಾಮಾನ್ಯವಾಗಿ ಪಶ್ಚಿಮದಲ್ಲಿ ನಮ್ಮ ಸಂಸ್ಕೃತಿಗೆ ಸಂಬಂಧಿಸಿದಂತೆ ಪದೇಪದೇ ಕೇಳಿಬರುವ ಈ ಪ್ರಶ್ನೆಗಳನ್ನು ಗಮನಿಸಿ. ನೀವು ಹಣೆಗೆ ತಿಲಕ ಇಡುವುದೇಕೆ? ಗೋಮಾಂಸವನ್ನು ನೀವೇಕೆ ತಿನ್ನುವುದಿಲ್ಲ? ನೀವು ಶಿಶ್ನವನ್ನು ಪೂಜೆ ಮಾಡುತ್ತೀರಂತೆ ಹೌದೆ? ಜಾತಿ ಪದ್ಧತಿಯ ಬಗ್ಗೆ ನಿಮ್ಮ ಅನಿಸಿಕೆಯೇನು? ಈಗಲೂ ಭಾರತದಲ್ಲಿ ವಿಧವೆಯರನ್ನು ಸುಡುತ್ತಾರೆಯೇ? ನಿಮ್ಮ ದೇವರುಗಳಿಗೇಕೆ ಆರೆಂಟು ಕೈಗಳು ಇರುತ್ತವೆ? ನಿಮ್ಮ ರಿಲಿಜನ್ನಿನ ಚಿಹ್ನೆ ಯಾವುದು? ನೀವು ದೇವಸ್ಥಾನದಲ್ಲಿ ಮೂರ್ತಿಪೂಜೆ/idolatry ಮಾಡುತ್ತೀರಾ? ನೀವು ದೇವರನ್ನು ನಂಬುತ್ತೀರಾ? Are you religious? ಇತ್ಯಾದಿ. ಈ ರೀತಿಯ ಪ್ರಶ್ನೆಗಳು ಎದುರಾದಾಗ ಯಾರಾದರೂ ಹೇಗೆ ಪ್ರತಿಕ್ರಿಯಿಸಬಹುದು? ಸ್ಥೂಲವಾಗಿ ಹೇಳುವುದಾದರೆ, ಇದಕ್ಕೆ ಎರಡು ವಿಧದಲ್ಲಿ ಪ್ರತಿಕ್ರಿಯಿಸಬಹುದು. ಮೊದಲನೆಯದು, ಈ ಪ್ರಶ್ನೆಗಳು ಗ್ರಹಿಸಲು ಸಾಧ್ಯವಾಗುವಂಥ ಮತ್ತು ನಮಗೆ ಅರ್ಥವಾಗುವ ಪ್ರಶ್ನೆಗಳು ಎಂಬ ಊಹೆಯೊಂದಿಗೆ ಈ ಪ್ರಶ್ನೆಗಳಿಗೆ ಉತ್ತರ ನೀಡುವುದು. ಸುಧಾರಣಾವಾದಿಗಳ ಕಾಲದಿಂದ ಇಂದಿನವರೆಗೆ ನಾವು ಅನುಸರಿಸಿದ ಮಾರ್ಗ ಇದೇ. ಆದರೆ ಅಮೆರಿಕೆಯಲ್ಲಿ ನೆಲೆಸುವ ಭಾರತೀಯರ [ಅಷ್ಟೇ ಏಕೆ, ಸಂಕುಚಿತಗೊಳ್ಳುತ್ತಿರುವ ಆ ಜಗತ್ತಿನಲ್ಲಿ, ಭಾರತದಲ್ಲಿನ ಭಾರತೀಯರ] ಪರಿಸ್ಥಿತಿ ಇಂದು ಬದಲಾಗಿದೆ: ಹಿಂದಿನ ಕಾಲದ ಸುಧಾರಕರು ಭಾರತೀಯ ಸಂದರ್ಭದಲ್ಲಿ ಮಾತನಾಡುತ್ತಿದ್ದರು, ಆದರೆ ನಾವಿಂದು ಪಾಶ್ಚಾತ್ಯ ಸಂಸ್ಕೃತಿಯ ಸಂದರ್ಭದಲ್ಲಿ ನಿಂತು ಮಾತನಾಡುತ್ತಿದ್ದೇವೆ. ಬದಲಾದ ಈ ಸಾಂಸ್ಕೃತಿಕ ಪರಿಸ್ಥಿತಿಯಲ್ಲಿ ನಾವೂ ನಮ್ಮ ಸುಧಾರಣಾವಾದಿಗಳು ನಡೆದ ಮಾರ್ಗವನ್ನು ಅನುಸರಿಸಿದರೆ ಉಂಟಾಗುವ ಪರಿಣಾಮವನ್ನು ಗ್ರಹಿಸುವುದು ಬಹಳ ಮುಖ್ಯವಾಗಿದೆ. ಮತ್ತಷ್ಟು ಓದು »

10
ಮಾರ್ಚ್

ಸಂಸ್ಕೃತಿ ಸರಣಿ – ಭಾಗ ೧ : ಪೂಜೆ

ಜಗತ್ತಿನ ಎಲ್ಲ ನಾಗರೀಕತೆಗಳಿಗಿಂತ ಅತೀ ಪುರಾತನವಾದದ್ದು ಭಾರತೀಯ ನಾಗರೀಕತೆ.ಆದರೆ ಆ ಪ್ರಾಚೀನತೆ ಮಾತ್ರ ಅದರ ಹೆಗ್ಗಳಿಕೆ ಅಲ್ಲ. ಪ್ರಾಚೀನವಾದದ್ದೆಲ್ಲ ಉತ್ತಮ ಎಂಬ ಭ್ರಮೆ ಮತ್ತು ಕುರುಡು ಅಭಿಮಾನ ಉಚಿತವಲ್ಲ. ತಮ್ಮ ನಾಡೇ ಪ್ರಾಚೀನ, ಆ ಕಾರಣಕ್ಕೆ ತಮ್ಮ ಸಂತತಿಯೇ ಶ್ರೇಷ್ಠ, ನಾವೇ ಸುಸಂಸ್ಕೃತರು ಇತ್ಯಾದಿ ಅನೇಕ ಭ್ರಮೆಗಳನ್ನು ಐರೋಪ್ಯರು ಹೊಂದಿದ್ದರು.ಆ ಭ್ರಮೆಗಳ ಕಾರಣದಿಂದಾಗಿ ತಮ್ಮ ಸಾರ್ವಭೌಮತ್ವವನ್ನು ಎಲ್ಲರ ಮೇಲೆ ಹೇರಲು ಹೊರಟು, ಅನೇಕ ಜಾಗತಿಕ ಹಾಗೂ ಮಾನವೀಯ ಸಮಸ್ಯೆಗಳಿಗೆ ಕಾರಣರಾಗಿದ್ದಾರೆ.

ಭಾರತದ್ದು ಇಂತಹ ಭ್ರಮಾ ಕಲ್ಪಿತ ಮತ್ತು ಆಕ್ರಾಮಕ ಶ್ರೇಷ್ಠತೆ ಅಲ್ಲ.ಅದರ ಶ್ರೇಷ್ಠತೆಯ ಗುಣಲಕ್ಷಣಗಳೇ ಬೇರೆ. ಹೂವಿನ ಗಂಧ ಸಹ ಜವಾಗಿ ಹರಡುವಂತೆ ಭಾರತೀಯ ಜೀವನ ವಿಧಾನದ ಅಂತಃಸತ್ವ ಬಹುತೇಕ ಭೂಭಾಗವನ್ನು ಪ್ರಭಾವಿಸಿತ್ತು.ಆದರೆ ಅದೆಲ್ಲ ಈಗ ಗತಕಾಲದ ಚರಿತ್ರೆ.ಕಳೆದ ಸಾವಿರ ವರ್ಷಗಳ ಐತಿಹಾಸಿಕ ಘಟನೆಗಳು ಮತ್ತು ಪರಕೀಯ ಶಿಕ್ಷಣ ವಿಧಾನ ನಮ್ಮ ಸಂಸ್ಕೃತಿಗೆ ನಮ್ಮನ್ನೇ ಪರಕೀಯರಂತೆ ಮಾಡುತ್ತಿದೆ.ಇಂತಹ ಸಂದರ್ಭದಲ್ಲಿ ನಮ್ಮ ಸಂಸ್ಕೃತಿ, ಸಂಪ್ರದಾಯಗಳ, ಆಚರಣೆಗಳ ಕುರಿತು ಹಲವರಿಗೆ ಪ್ರಶ್ನೆಗಳೇಳುವುದು ಸಹಜವೇ.

ಅಂತಹ ಪ್ರಶ್ನೆಗಳಿಗೆ ಉತ್ತರ ರೂಪವಾಗಿ ಶ್ರೀ.ದತ್ತರಾಜ್ ಅವರು ಈ “ಸಂಸ್ಕೃತಿ ಸರಣಿ”ಯನ್ನು ಪ್ರಾರಂಭಿಸಿದ್ದಾರೆ. ಭಾರತ ಯಾವ ರೀತಿಯಲ್ಲಿ ಭಿನ್ನ ಹಾಗೂ ಶ್ರೇಷ್ಠ ಎಂಬುದನ್ನು ವಿವರಿಸಲಿದ್ದಾರೆ.ದತ್ತರಾಜ್ ಅವರು ಧಾರವಾಡದ ಬಳಿ ಹಳ್ಳಿಯಲ್ಲಿ ಹುಟ್ಟಿದವರು.ಆರನೇ ವಯಸ್ಸಿಗೇ ಮನೆ ತೊರೆದು ಮಹಾರಾಷ್ಟ್ರ, ಆಂಧ್ರ, ತಮಿಳು ನಾಡು ಇತ್ಯಾದಿ ಕಡೆಗಳಲ್ಲಿ ವೇದ ಪಂಡಿತರ ಮನೆಗಳಲ್ಲಿ ಇದ್ದು ಗುರು ಸೇವೆ, ಭಿಕ್ಷೆ ಮಾಡಿಕೊಂಡು 12 ವರ್ಷ ಋಗ್ವೇದವನ್ನು ಆರು ಅಂಗಗಳ ಸಹಿತ ಕಂಠಪಾಠ ಮಾಡಿದ್ದಾರೆ. ಕಳೆದ ಹತ್ತು ವರ್ಷಗಳಿಂದ ಪಾಠ ಮಾಡುತ್ತಿದ್ದಾರೆ.ಶಾಲಾ-ಕಾಲೇಜುಗಳ ಮೆಟ್ಟಿಲು ಹತ್ತಿದವರಲ್ಲ.ತಮ್ಮ ಅಧ್ಯಯನ ಮತ್ತು ವಿಭಿನ್ನ ಜೀವನದ ಅನುಭವದ ಆಧಾರದಿಂದ ಭಾರತೀಯ ಸಂಸ್ಕೃತಿ ಪರಿಚಯವನ್ನು ಸರಳ ಆಡು ಭಾಷೆಯಲ್ಲಿ ಮಾಡಿಕೊಡಲಿದ್ದಾರೆ.

ಸಂಸ್ಕೃತಿ ಸರಣಿಯ ಮೊದಲ ಎರಡು ಭಾಗವಾಗಿ “ಪೂಜೆ”ಯ ಕುರಿತು ಮಾತನಾಡಿದ್ದಾರೆ.ಆ ಎರಡು ಭಾಗಗಳು ನಿಮಗಾಗಿ ನಿಲುಮೆಯಲ್ಲಿ – ನಿಲುಮೆ ನಿರ್ವಾಹಕರು
ಮತ್ತಷ್ಟು ಓದು »