ವಿಷಯದ ವಿವರಗಳಿಗೆ ದಾಟಿರಿ

Posts tagged ‘ಹಿಂದೂ ಕಾನೂನು ಗ್ರಂಥ.ಬ್ರಿಟಿಷ್’

22
ಸೆಪ್ಟೆಂ

ಮನುಸ್ಮೃತಿ : ಪ್ರಗತಿಪರ ಮತ್ತು ಬುದ್ಧಿಜೀವಿಗಳ ಅನ್ನದಾತ

–      ರಾಕೇಶ್ ಶೆಟ್ಟಿ

ಮನು ಸ್ಮೃತಿಒಂದು ವೇಳೆ “ಬೆಳಗಾನ ಎದ್ದು ನಾ ಯಾರ್ಯಾರ ನೆನೆಯಲಿ” ಎನ್ನುವ ಪ್ರಶ್ನೆ ನಮ್ಮ ಪ್ರಗತಿಪರ ಮಿತ್ರರರನ್ನು ಒಮ್ಮೆ ಕಾಡಿದರೆ ಅವರು ಯಾರನ್ನು ನೆನಯಬಹುದು…?

“ಮನುಸ್ಮೃತಿ!”

ಹೌದು! ಅವರು ನೆನೆಯಬೇಕಿರುವುದು ಮನುಸ್ಮೃತಿಯನ್ನು.ಯಾಕೆಂದರೆ ಬಹಳಷ್ಟು ಪ್ರಗತಿಪರರು ತಮ್ಮ ದಿನನಿತ್ಯದ ಭಾಷಣಗಳಲ್ಲಿ,ಬರಹಗಳಲ್ಲಿ ಕಡ್ಡಾಯವೇನೋ ಎಂಬಂತೆ ಬಳಸಿಯೇ ಬಳಸುವ ಪದಗಳಲ್ಲಿ  “ಮನು, ಮನುವಾದಿ, ಮನುಸ್ಮೃತಿ, ಮನುವಾದಿ ಸಂವಿಧಾನ” ಇತ್ಯಾದಿಗಳು ಬಂದೇ ಬರುತ್ತವೆ (ಸಿನೆಮಾಕ್ಕೊಬ್ಬ “ಹೀರೋ/ವಿಲನ್”ಅನಿವಾರ್ಯವೆಂಬಂತೆ) ಆ ಪದಗಳನ್ನು ಬಳಸಿ ಬಳಸಿಯೇ ಹೆಸರು,ಹಣ,ಪ್ರಶಸ್ತಿ ಪಡೆದುಕೊಂಡವರ ಪಾಲಿಗೆ “ಮನುಸ್ಮೃತಿ” ಅನ್ನದಾತನೇ ಸರಿ.ಮನುಸ್ಮೃತಿಯ ಅತಿ ದೊಡ್ಡ ಫಲಾನುಭವಿಗಳು ಇವರೇ.

ಮನುವಾದಿ ಸಂವಿಧಾನ,ಮನುಸ್ಮೃತಿಯೇ ಹಿಂದೂಗಳ ಕಾನೂನು ಗ್ರಂಥ ಅಂತೆಲ್ಲ ಈ ಪ್ರಗತಿಪರರು ಮಾತನಾಡುವಾಗ ನನ್ನಂತ ಜನ ಸಾಮಾನ್ಯರಿಗೆ ಯಾರೀತ “ಮನು”?,”ಮನುಸ್ಮೃತಿ” ಎಂದರೇನು? ಎನ್ನುವ ಪ್ರಶ್ನೆಗಳೇಳುತ್ತವೆ.ಈ ಪ್ರಶ್ನೆಗಳು ನಮ್ಮಲ್ಲಿ ಯಾಕೆ ಮೂಡುತ್ತವೆಯೆಂದರೆ,ನನ್ನ ದಿನನಿತ್ಯದ ಜೀವನದಲ್ಲಿ,ನನ್ನ ಅನುಭವ,ಆಚರಣೆಗಳಲ್ಲಿ ನಾನೆಂದಿಗೂ ಈ ಮನುವನ್ನೋ, ಮನುಸ್ಮೃತಿಯನ್ನೋ ಮುಖಾಮುಖಿಯಾಗಿಲ್ಲ.ಹಳ್ಳಿಗಳಲ್ಲಿ ನಡೆಯುತಿದ್ದ/ನಡೆಯುತ್ತಿರುವ ನ್ಯಾಯ ಪಂಚಾಯಿತಿಗಳನ್ನು ನಾನು ನೋಡಿದ್ದೇನೆ ಅಲ್ಲಿ ಎಲ್ಲೂ ಮನುಸ್ಮೃತಿಯ ಆಧಾರದ ಮೇಲೆ ತೀರ್ಮಾನಗಳನ್ನು ನೀಡಿದ್ದನ್ನು ಕಂಡಿಲ್ಲ. ನಿಜವಾಗಿಯೂ “ಮನುಸ್ಮೃತಿ” ಅನ್ನುವುದೊಂದಿದೆ ಎನ್ನುವುದು ನನಗೆ ತಿಳಿದಿದ್ದೇ ಬುದ್ಧಿಜೀವಿಗಳ ಮಾತುಗಳನ್ನು ಕೇಳಲು (ಅದು ನನ್ನ ೨೦ನೇ ವಯಸ್ಸಿನ ನಂತರ) ಆರಂಭಿಸಿದ ಮೇಲೆಯೇ ಹೊರತು,ಅದಕ್ಕೂ ಮೊದಲು ನನ್ನ “ಹಿಂದೂ ಸಂಪ್ರದಾಯ”ಕ್ಕೊಂದು “ಕಾನೂನು ಗ್ರಂಥ”ವಿದೆ ಎನ್ನುವುದೇ ನನಗೆ ಗೊತ್ತಿರಲಿಲ್ಲ.ನಮಗೇ ಪರಕೀಯವಾಗಿರುವ ಈ “ಮನು ಮತ್ತು ಮನುಸ್ಮೃತಿ” ಅದೇಗೆ “ಹಿಂದೂ ಕಾನೂನು ಗ್ರಂಥ”ವಾಗುತ್ತದೆ? ಈ ವಾದಗಳು ಹುಟ್ಟಿಕೊಂಡಿದ್ದು ಹೇಗೆ ಅಂತ ನೋಡಲಿಕ್ಕೆ ಹೊರಟರೆ ನಾವು ಹೋಗಿ ನಿಲ್ಲುವುದು ಬ್ರಿಟಿಷರ ಬಳಿ.

ವ್ಯಾಪಾರಕ್ಕೆಂದು ಇಲ್ಲಿಗೆ ಬಂದು ನಮ್ಮ ನೆಲವನ್ನೇ ಕಬಳಿಸಿ ಇಲ್ಲಿ ಕುಳಿತ ಬ್ರಿಟಿಷರಿಗೆ ಇಲ್ಲಿನ ಅಗಾಧ ಸಾಮಾಜಿಕ,ಸಾಂಸ್ಕೃತಿಕ ವೈವಿಧ್ಯಮಯ ಸಮಾಜದ ತಲೆಬುಡ ಅರ್ಥವಾಗಲಿಲ್ಲ.ಇಲ್ಲಿ ಅವರ ಆಳ್ವಿಕೆ ಜಾರಿಗೆ ತರಲಿಕ್ಕಾಗಿ ಅವರಿಗೆ ಅವರ ದೇಶದಲ್ಲಿರುವಂತದ್ದೇ ಒಂದು ವ್ಯವಸ್ಥೆ ಬೇಕು ಎಂದುಕೊಂಡು ಯುರೋಪಿಯನ್ ಸಾಮಾಜಿಕ ವ್ಯವಸ್ಥೆಯನ್ನೇ ನಮ್ಮ ಸಮಾಜಕ್ಕೂ ಸಮೀಕರಿಸಿದರು.ಅವರಿಗೆ ಇಲ್ಲಿ ಮುಖ್ಯವಾಗಿ ತಲೆನೋವು ತರುತಿದ್ದ ವಿಷಯಗಳಲ್ಲಿ “ವ್ಯಾಜ್ಯದ ತೀರ್ಮಾನಗಳು” ಪ್ರಮುಖವಾಗಿದ್ದವು.

ಮತ್ತಷ್ಟು ಓದು »