ವಿಷಯದ ವಿವರಗಳಿಗೆ ದಾಟಿರಿ

Posts tagged ‘ಹಿಂದೂ’

8
ಜುಲೈ

ಭಾರತ ಮತ್ತೊಂದು ಪಾಕಿಸ್ತಾನವಾಗಬಾರದು ಎಂದರೆ…

– ರಾಕೇಶ್ ಶೆಟ್ಟಿ

ಜೂನ್ 28ರ ಮಧ್ಯಾಹ್ನ ರಾಜಸ್ಥಾನದ ಉದಯಪುರದಲ್ಲಿ ನಡೆದ ಭೀಕರ ಹತ್ಯೆಯ ಘಟನೆಯಿಂದ ಸಾಮಾನ್ಯ ಹಿಂದೂ ತಲ್ಲಣಗೊಂಡಿದ್ದಾನೆ, ಆಕ್ರೋಷಿತನಾಗಿದ್ದಾನೆ. ‘ನಂಬಿಸಿ ಕತ್ತು ಕೊಯ್ಯುವುದು’ ಎಂದರೇನು ಎನ್ನುವುದನ್ನು ಇಸ್ಲಾಮಿಕ್ ಉಗ್ರರು ಕಮಲೇಶ್ ತಿವಾರಿಯ ನಂತರ, ಉದಯಪುರದ ಬಡ ಟೈಲರ್ ಕನ್ನಯ್ಯ ಲಾಲ್ ಅವರ ಹತ್ಯೆಯ ಮೂಲಕ ತೋರಿಸಿಕೊಟ್ಟಿದ್ದಾರೆ. ಕಮಲೇಶ್ ತಿವಾರಿಯವರ ಹಂತಕರಾದ ಫರಿದುದ್ಡೀನ್ ಶೇಖ್, ಅಶ್ಫಾಖ್ ಶೇಖ್ ಅವರು ತಮ್ಮನ್ನು ಹಿಂದೂಗಳೆಂದು ಫೇಸ್ಬುಕ್ಕಿನಲ್ಲಿ ಪರಿಚಯ ಮಾಡಿ, ಸ್ನೇಹ ಸಂಪಾದಿಸಿ, ಕೇಸರಿ ಕುರ್ತಾ ಧರಿಸಿ, ಸ್ವೀಟ್ ಬಾಕ್ಸಿನೊಳಗೆ ರಿವಾಲ್ವರ್ ಹಾಗೂ ಚಾಕು ಹಿಡಿದು ಬಂದಿದ್ದರು. ಕಮಲೇಶ್ ತಿವಾರಿಯವರ ಸಹಾಯಕನನ್ನು ಸಿಗರೇಟ್ ತರುವಂತೆ ಕಳುಹಿಸಿ, ಏಕಾಂಗಿಯಾಗಿದ್ದ ಕಮಲೇಶ್ ತಿವಾರಿಯರ ಮೇಲೆ ಎರಗಿ ಕತ್ತು ಸೀಳಿ, ಗುಂಡು ಹಾರಿಸಿ ಕೊಲ್ಲಲಾಗಿತ್ತು. ಮರಣೋತ್ತರ ವರದಿಯ ಪ್ರಕಾರ 15 ಬಾರಿ ಚುಚ್ಚಿ ಕೊಲ್ಲಲಾಗಿತ್ತು. 1926ರಲ್ಲಿ ಅಬ್ದುಲ್ ರಶೀದ್ ಕೂಡ ಹೀಗೆಯೇ ಸಂಭಾವಿತನಂತೆ ಬಂದು, ಸಹಾಯಕನನ್ನು ನೀರು ತರಲು ಕಳುಹಿಸಿ ಸ್ವಾಮಿ ಶ್ರದ್ದಾನಂದರನ್ನು ಗುಂಡಿಕ್ಕಿ ಕೊಂದಿದ್ದ.

ಕನ್ನಯ್ಯ ಲಾಲ್ ಅವರ ಹತ್ಯೆ ನಡೆದಿದ್ದೂ ಹೀಗೆಯೇ. ಬಟ್ಟೆ ಹೊಲಿಸುವವರ ಸೋಗಿನಲ್ಲಿ ಬಂದ ಮೊಹಮ್ಮದ್ ಗೌಸ್ , ಮೊಹಮ್ಮದ್ ರಿಯಾಜ್ , ಅಳತೆ ತೆಗೆದುಕೊಳ್ಳುವಾಗ ಕನ್ನಯ್ಯಲಾಲ್ ಅವರ ಕತ್ತು ಕೊಯ್ದರು. 21 ಬಾರಿ ಚುಚ್ಚಿ ಕೊಲ್ಲಲಾಗಿದೆ ಎಂದಿದೆ ಮರಣೋತ್ತರ ವರದಿ. ಬಹುಶಃ ಹಂತಕರು ವಿಡಿಯೋವನ್ನು ವೈರಲ್ ಮಾಡದೇ ಇದ್ದಿದ್ದರೆ, ರಾಜಸ್ಥಾನದ ಕಾಂಗ್ರೆಸ್ ಸರ್ಕಾರ ಇದಕ್ಕೊಂದು ಬೇರೆ ಕತೆ ಕಟ್ಟಿ ಮುಗಿಸುತ್ತಿತ್ತು. ನಂತರ ತಿಳಿದು ಬಂದ ವಿಷಯದ ಪ್ರಕಾರ, ಕನ್ನಯ್ಯ ಲಾಲ್ ಅವರು ಕೇವಲ ನೂಪುರ್ ಶರ್ಮ ಅವರನ್ನು ಬೆಂಬಲಿಸಿದ ಕಾರಣಕ್ಕೆ ಬಂಧನವಾಗಿ, ಬಿಡುಗಡೆಯಾಗಿ ಬಂದ ನಂತರ, ತನ್ನ ಪ್ರಾಣಕ್ಕೆ ಅಪಾಯವಿದೆ ಎಂದು ಪೋಲಿಸ್ ರಕ್ಷಣೆ ಕೋರಿದ್ದರು. ಒಬ್ಬ ಬಡವನ ಮನವಿಯನ್ನು ಪೋಲಿಸರು ಹೇಗೆ ತಾತ್ಸಾರದಿಂದ ಸ್ವೀಕರಿಸುತ್ತಾರೋ, ಹಾಗೆಯೇ ಸ್ವೀಕರಿಸಿ ಕಸದ ಬುಟ್ಟಿಯ ಜಾಗ ತೋರಿಸಿದರು. ಅಂದ ಹಾಗೆ, ಕನ್ನಯ್ಯ ಲಾಲ್ ಅವರ ಕುರಿತ ಮಾಹಿತಿಯನ್ನು ಹಂಚಿಕೊಂಡವನು ಯಾರೋ ಅನಾಮಿಕನಲ್ಲ. ಕನ್ನಯ್ಯ ಅವರ ಪಕ್ಕದ ಮನೆಯ ನಜೀಂ. ನಜೀಮನಿಗೆ ನೆರೆ ಮನೆಯವನ ಸ್ನೇಹಕ್ಕಿಂತ ಆತನ ಇಸ್ಲಾಂ ಮುಖ್ಯವಾಗಿತ್ತು. ನಂಬಿ ಕೆಟ್ಟವನು ಕನ್ನಯ್ಯ. ಕಾಶ್ಮೀರದ ಪಂಡಿತರ ಹತ್ಯೆಯಲ್ಲೂ ನೆರೆಮನೆಯವರೇ ಹೇಗೆ ಸಹಾಯ ಮಾಡಿದ್ದರು ಎನ್ನುವುದನ್ನು, ಕಾಶ್ಮೀರ್ ಫೈಲ್ಸ್ ಸಿನಿಮಾದಲ್ಲಿ ಇಡೀ ಭಾರತವೇ ನೋಡಿದೆ. ಜೊತೆಗಿದ್ದವರಿಗೆ ಮೂಹೂರ್ತ ಇಡುವ ಧೂರ್ತ ಮನಸ್ಥಿತಿಯನ್ನು ಇವರು ಕಲಿಯುವುದು ಎಲ್ಲಿಂದ?

ಮತ್ತಷ್ಟು ಓದು »
23
ಏಪ್ರಿಲ್

ಎಲ್ಲದಕ್ಕೂ ಹಿಂದೂಗಳನ್ನು ದೂಷಿಸುವ ಮುನ್ನ …

– ಬೇಲಾಡಿ ದೀಪಕ್ ಶೆಟ್ಟಿ 

So called ವಿಚಾರವಾದಿಗಳೇ, ಲಿಬರಲ್ಗಳೇ ದ್ವೇಷ ಮಾಡಬೇಡಿ, ಫೋಭೀಯಾ ಬೆಳೆಸಬೇಡಿ ಅನ್ನುವವರೇ,

ಅರ್ಥ ಮಾಡ್ಕೊಳ್ಳಿ.ನಮ್ಮ ಸಿಟ್ಟು ಇರೋದು ಯಾವುದೇ ಧರ್ಮದ ಮೇಲಲ್ಲ. ಹಾಗಂತ ದ್ವೇಷನೂ ಸಾಧಿಸುತ್ತಿಲ್ಲ, ಫೋಭೀಯಾನೂ ಹುಟ್ಟು ಹಾಕುತ್ತಿಲ್ಲ.

ಅಲ್ಪಸಂಖ್ಯಾತಧರ್ಮದ ಹೆಸರಿನಲ್ಲಿ ಜಾತ್ಯಾತೀತತೆಯ ಸೋಗಿನಲ್ಲಿ, ಬಹುಸಂಖ್ಯಾತರ ಭಾವನೆಗಳಿಗೆ ರಾಷ್ಟ್ರ ಮತ್ತು ಜೀವನ ಪದ್ದತಿಯ ವಿಚಾರಗಳಲ್ಲಿ ನಮ್ಮ ಭಾವನೆಗಳಿಗೆ ಘಾಸಿ ಆದ್ರೂ ಸುಮ್ಮನೆ ಎಷ್ಟು ದಿನ ಅಂತ ತಾಳ್ಮೆಯಿಂದ ಇರೋದು. ಒಂದಲ್ಲ ಒಂದು ದಿನ ಆಕ್ರೋಶದ ಕಟ್ಟೆ ಒಡೆಯಲೇಬೇಕಲ್ಲವೇ.

ಅದೂ ಹೋಗ್ಲಿ, ಆರೈಕೆ ಕೇಂದ್ರದಲ್ಲಿ ಮಲ ವಿಸರ್ಜನೆ, ನರ್ಸ್ಗಳ ಎದುರು ಬಟ್ಟೆ ಬಿಚ್ಚೋದು, ನೋಟಿಗೆ ಬಾಯಲ್ಲಿ ಉಗುಳು ಹಚ್ಚೋದು. ಆಶಾ ಕಾರ್ಯಕರ್ತೆಯರ ಮೇಲಿನ ಹಲ್ಲೆ, ಮೊನ್ನೆ ಮೊನ್ನೆ ಪೋಲಿಸರ ಮೇಲೆ ಹಲ್ಲೆ , ಇಡೀ ದೇಶ ಪಕ್ಷಾತೀತವಾಗಿ ಸ್ವಲ್ಪ ವಿಚಾರದಲ್ಲಿ ವ್ಯತ್ಯಾಸ ವಿದ್ದರೂ ಸಾಮೂಹಿಕವಾಗಿ ಹೋರಾಡುವಾಗ,ಇವರ ಈ ಕಿರಿಕ್ಕು. ಎಲ್ಲರಂತೆ ಇರಲು ಏನು ಪ್ರಾಬ್ಲಂ. ಇದೇ ರೀತಿ ಅರಬ್ ದೇಶಗಳಲ್ಲಿ ಮಾಡಿದ್ರೆ ಏನು ಮಾಡ್ತಿದ್ದರು. ಇಲ್ಲಿ ಏನು ಮಾಡಿದ್ರು ನಡೀತಿದೆ ಅನ್ನೋ ಮನೋಭಾವನೆ. ಸರ್ವೇ ಜನೋ ಸುಖಿನೋ ಭವಂತು, ವಸುದೈವ ಕುಟುಂಬಕಂ ಅಂದವರಿಗೆ ಈ ಗತಿ.

ಮತ್ತಷ್ಟು ಓದು »

10
ನವೆಂ

ಅಥೆನ್ಸ್‌ನಲ್ಲಿಲ್ಲದ ಒಂದು ಅಯೋಧ್ಯೆಯಲ್ಲಿತ್ತು! ಅದೇ ಧರ್ಮ

– ಸಂತೋಷ್ ತಮ್ಮಯ್ಯ

ಆಧುನಿಕ ವಾಸ್ತು ಪ್ರಾಕಾರಗಳಲ್ಲಿ ಅತ್ಯಂತ ಜನಪ್ರೀಯತೆಯನ್ನು ಗಳಿಸಿರುವ ಶೈಲಿಗಳಲ್ಲಿ ಗ್ರೀಕ್ ಶೈಲಿಯೂ ಒಂದು. ಅಮೆರಿಕಾದ ವೈಟ್ ಹೌಸಿನಿಂದ ಹಿಡಿದು ಕರ್ನಾಟಕದ ಮಹಾನಗರಗಳ ಪುರಭವನಗಳವರೆಗೂ ಗ್ರೀಕ್ ವಾಸ್ತುಶೈಲಿ ತನ್ನ ಛಾಪನ್ನು ಒತ್ತಿದೆ. ಬೃಹದಾಕಾರದ ಉದ್ದನೆಯ ಕಂಬಗಳು, ಏನೋ ಒಂದು ಗಾಂಭೀರ್ಯವನ್ನೂ ರಾಜಕಳೆಯನ್ನೂ ಒಡಲಲ್ಲಿಟ್ಟುಕೊಂಡ ಈ ಶೈಲಿಯ ಕಟ್ಟಡಗಳು ಕೊಂಚ ಅಧ್ಯಾತ್ಮದ ಭಾವವನ್ನೂ, ಕೊಂಚ ಭೀತಿಯ ಲಕ್ಷಣವನ್ನೂ ಸೂಸುತ್ತಿರುವಂತೆ ಕಾಣಿಸುತ್ತವೆ. ಇಂಥ ಕಟ್ಟಡಗಳು ಇಂದು ಜಗತ್ತಿನ ಸಾಮಾಜಿಕ ಸಂರಚನೆಯನ್ನೂ ಮೀರಿ, ರಾಜಕೀಯ ವಾತಾವರಣವನ್ನೂ ದಾಟಿ, ಪ್ರಾದೇಶಿಕತೆಯ ಶೈಲಿಗಳೆಡೆಯಲ್ಲೂ ಜನಪ್ರೀಯತೆಯನ್ನು ಪಡೆದುಕೊಂಡಿವೆ. ಪುರಾತನ ಗ್ರೀಕ್ ಸಂಸ್ಕೃತಿಗೆ ಮೆರುಗನ್ನೂ ಆಧುನಿಕ ವಾಸ್ತುಶೈಲಿಗೆ ಸವಾಲನ್ನೂ ಒಡ್ಡಿರುವ ಈ ಶೈಲಿ ಗ್ರೀಕ್ ನಾಗರಿಕತೆ ಅಳಿದರೂ ತಾನು ಅಳಿಯದೆ ಉಳಿದುಕೊಂಡಿದೆ. ಅಷ್ಟೇನೂ ಸೂಕ್ಷ್ಮತೆಯಿಲ್ಲದ, ನಾಜೂಕುತನವಿಲ್ಲದ, ಹೆಚ್ಚೇನೂ ಕೌಶಲ್ಯವಿಲ್ಲದಂತೆ ಕಾಣುವ ಗ್ರೀಕ್ ಶೈಲಿ ತನ್ನ ಸರಳತೆಯಿಂದಲೂ ಯೂರೋಪನ್ನು ದಾಟಿ ದೂರದ ಕೊಡಗು-ಚಿಕ್ಕಮಗಳೂರಿನ ಕಾಫಿ ಪ್ಲಾಂಟರುಗಳ ಬೃಹತ್ ಬಂಗಲೆಗಳಲ್ಲೂ ಪ್ರಾತಿನಿಧ್ಯವನ್ನು ಪದೆದುಕೊಂಡಿವೆ. ಜಗತ್ತಿನ ಚಿತ್ರರಂಗದ ಸಿನೆಮಾ ಸೆಟ್ಟುಗಳಲ್ಲಿ, ಕಾವ್ಯ-ಕಥೆಗಳಲ್ಲಿ ರೂಪಕದಂತೆಯೂ ಬಳಕೆಯಾಗಿದೆ. ಭಗ್ನ ಪ್ರೇಮದ ಸಂಕೇತಗಳಂತೆಯೂ ಬಳಕೆಯಾಗಿದೆ ಎಂದರೆ ಅದರ ಜನಪ್ರೀಯತೆಯನ್ನು ಅಂದಾಜಿಸಬಹುದು. ವಸಹಾತುಷಾಹಿ ಬುದ್ಧಿಯ ಬ್ರಿಟಿಷ್,ಫ್ರೆಂಚ್,ಡಚ್ ಜನಗಳ ಕಡಲು ದಾಟಿ ಮೆರೆಯುವ ಜಾಯಮಾನಗಳಿಂದ ಆ ಶೈಲಿ ವಿಶ್ವವ್ಯಾಪಿಯಾಗಿದ್ದೇನೋ ನಿಜ. ಆದರೆ ಅದನ್ನು ಜಗತ್ತು ಗುರುತಿಸುವುದು ಗ್ರೀಕ್ ಶೈಲಿ ಎಂದೇ.

ಇಂಥಾ ವಿಖ್ಯಾತ ವಾಸ್ತು ಶೈಲಿಯ ಮೂಲವಿರುವುದು ಪುರಾತನ ಅಥೆನ್ಸಿನ ಪಾರ್ಥೆನಾನ್ ದೇವಿ ಮಂದಿರದಲ್ಲಿ. ತನ್ನ ಶೈಲಿ ಜಗತ್ತಿನಾದ್ಯಂತ ಹರಡಿದ್ದರೂ ಇಂದಿಗೂ ಪಾರ್ಥೆನಾನ್ ಒಂದು ಮುರುಕು ಮಂಟಪವೇ. ತನ್ನತನವನ್ನು ಜಗತ್ತಿಗೆ ಹರಡಿದ ಮೇಲೆ ಇನ್ನು ಕೆಲಸವೇನಿದೆ ಎಂಬಂತೆ ಒಂದು ಕಾಲದ ಪಾರ್ಥೆನಾನ್ ಅದೇ ಗ್ರೀಸಿನ ಅಕ್ರೊಪೊಲೀಸ್ ಬೆಟ್ಟದ ಮೇಲೆ ನಿಡುಸುಯ್ಯುವಂತೆ ಬಿದ್ದುಕೊಂಡಿದೆ. ಇಷ್ಟೇ ಆಗಿದ್ದರೆ ಅದರಲ್ಲೇನೋ ವಿಶೇಷವಿರುತ್ತಿರಲಿಲ್ಲ. ಕೇವಲ ವಾಸ್ತು ಶಾಸದ ಶೈಲಿಯೊಂದರ ಬಣ್ಣನೆ ಸದ್ಯದ ಆವಶ್ಯಕತೆಯಂತೂ ಖಂಡಿತಾ ಅಲ್ಲ.

ಮತ್ತಷ್ಟು ಓದು »

13
ನವೆಂ

ಇಸ್ಲಾಮ್ ವಿಮರ್ಶೆ ಮಾಡಬಾರದಮ್ಮ,ಹಿಂದೂಗಳನ್ನು ಟೀಕಿಸುವುದು ಕರ್ಮ: ಮೈತ್ರಿ ಸರ್ಕಾರದ್ದು ಧೃತರಾಷ್ಟ್ರ ಪ್ರೇಮ!

– ಶ್ರೀನಿವಾಸ್ ರಾವ್

ಘಟನೆ-1
ಬ್ರಿಟೀಶ್ ವಿರುದ್ಧದ ಹೋರಾಟದಲ್ಲಿ ಕೆಂಪೇಗೌಡರ ಪಾತ್ರವೇನು? ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರು ಮರುನಾಮಕರಣ ಮಾಡಬೇಕು – ಗಿರೀಶ್ ಕಾರ್ನಾಡ್
ಗಿರೀಶ್ ಕಾರ್ನಾಡ್ ಗೆ ಇತಿಹಾಸ ಗೊತ್ತಿಲ್ಲ, ಸರ್ಕಾರಿ ಪ್ರಾಯೋಜಿತ ಸಾಹಿತಿ- ಹೆಚ್ ಡಿ ಕುಮಾರಸ್ವಾಮಿ

2015 ರ ಟಿಪ್ಪು ಜಯಂತಿ ಕಾರ್ಯಕ್ರಮ, ರಕ್ತಪಾತವಾದರೂ ಸರಿಯೇ ಟಿಪ್ಪು ಜಯಂತಿಯನ್ನು ನಡೆಸಲೇಬೇಕೆಂಬ ಜಿದ್ದಿಗೆ ಬಿದ್ದಿದ್ದ ಸಿದ್ದರಾಮಯ್ಯ ಸರ್ಕಾರ, ಟಿಪ್ಪು ಸುಲ್ತಾನನನ್ನು ಬಣ್ಣಿಸಲು “ಟಿಪ್ಪುವಿನ ಕನಸುಗಳು”ನ್ನು ಕಟ್ಟಿಕೊಟ್ಟಿದ್ದ ಸಾಹಿತಿ ಗಿರೀಶ್ ಕಾರ್ನಾಡ್ ಅವರನ್ನು ಆಹ್ವಾನಿಸಿತ್ತು. ತಮ್ಮ ಧಣಿಯ ಎದುರು ಅವರ ಕುಲದೈವವನ್ನು ಹೊಗಳಲು ನಿಂತ ಸರ್ಕಾರಿ ಪ್ರಾಯೋಜಿತ ಸಾಹಿತಿ ಗಿರೀಶ್ ಕಾರ್ನಾಡ್ ಮಾತಿನ ಓಘದಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರೇಕೆಬೇಕು? ಟಿಪ್ಪು ಹೆಸರಿಡಬೇಕು, ಟಿಪ್ಪು ಬ್ರಿಟೀಷರ ವಿರುದ್ಧ ಹೋರಾಡಿದ್ದ, ಆದರೆ ಸ್ವಾತಂತ್ರ್ಯ ಹೋರಾಟದಲ್ಲಿ ಕೆಂಪೇಗೌಡರ ಪಾತ್ರ ಇರಲಿಲ್ಲ ಎಂದುಬಿಟ್ಟಿದ್ದರು.

ಬ್ರಿಟೀಷರ ವಿರುದ್ಧದ ಹೋರಾಟದಲ್ಲಿ ಕೆಂಪೇಗೌಡರ ಪಾತ್ರ ಏನು? ಮಹಾಭಾರತದ ಯುದ್ಧದಲ್ಲಿ ಅರ್ಜುನ ಕೌರವರ ವಿರುದ್ಧ ಏಕೆ ಬ್ಯಾಲಿಸ್ಟಿಕ್ ಮಿಸೈಲ್ ಪ್ರಯೋಗ ಮಾಡಲಿಲ್ಲ? ದನ್ಯಾಂಗ್-ಕುನ್ಶಾನ್ ಗ್ರ್ಯಾಂಡ್ ಬ್ರಿಡ್ಜ್ ನಿರ್ಮಾಣಕ್ಕೆ ಶ್ರೀರಾಮನ ಕೊಡುಗೆ ಏನು
ಎಂಬಂಥಹ ಸೆನ್ಸಿಬಲ್ ಪ್ರಶ್ನೆಗಳು ಸೆಕ್ಯುಲರ್ ಸರ್ಕಾರಿ ಪ್ರಾಯೋಜಿತ ಬುದ್ಧಿಜೀವಿಗಳಿಗಷ್ಟೇ ಹೊಳೆಯುವುದಕ್ಕೆ ಸಾಧ್ಯ. ಇರಲಿ…

ಮತ್ತಷ್ಟು ಓದು »

29
ಮಾರ್ಚ್

ಹಿಂದೂಧರ್ಮದಿಂದ ಹೊರಹೋಗುವುದು ಎಂದರೇನು?

– ರಾಕೇಶ್ ಶೆಟ್ಟಿ

ಅರ್ಧ ಸೌಟು ಲಾರ್ಡ್ ಕರ್ಜನ್,ಒಂದು ಹಿಡಿಯಷ್ಟು ನೆಹರೂ-ಜಿನ್ನಾ ಮಿಶ್ರಣಕ್ಕೆ ಅರ್ಧ ಗ್ಲಾಸು ತುಘಲಕ್-ಟಿಪ್ಪು ಎಂಬ ದ್ರಾವಣ ಬೆರೆಸಿದರೇ ಸಿದ್ದರಾಮಯ್ಯ ತಯಾರಾಗಿಬಿಡುತ್ತಾರೆ. ಲಾರ್ಡ್ ಕರ್ಜನ್ ಸಾಧನೆ ಬಂಗಾಳ ವಿಭಜನೆಯದ್ದು. ಭಾರತ ವಿಭಜನೆಯ ಸಾಧನೆ ಜಿನ್ನದ್ದಾದರೂ,ಕಾಂಗ್ರೆಸ್-ನೆಹರೂ ಯೋಗದಾನವನ್ನು ಮರೆಯುವಂತಿಲ್ಲವಲ್ಲ.ಅದೇ ಸಾಲಿಗೆ ಸೇರುವುದು ಹಿಂದೂ ವಿಭಜನೆ ಮಾಡಿದ ಸನ್ಮಾನ್ಯ ಸಿದ್ದರಾಮಯ್ಯ. ಕರ್ಜನ್ ಬಂಗಾಳ ವಿಭಜನೆಗೆ ಕೈ ಹಾಕಿದ್ದು ಮತೀಯ ಆಧಾರದ ಮೇಲೆ,ಕರ್ಜನ್ ಹಾದಿಯನ್ನೇ ದಾರಿದೀಪವಾಗಿಸಿಕೊಂಡವ ಜಿನ್ನಾ,ದೇಶವನ್ನೇ ಮತೀಯವಾಗಿ ವಿಭಜಿಸಿದರು.ಇಬ್ಬರೂ ನೆಮ್ಮದಿಯಿಂದಿದ್ದ ಸಮಾಜವನ್ನು ವಿಭಜಿಸಿದ್ದು ಅಧಿಕಾರಕ್ಕಾಗಿ. ಈಗ ಕಾಂಗ್ರೆಸ್ ಪಕ್ಷದ ಸಿದ್ದರಾಮಯ್ಯ ಮತ್ತವರ ಸಚಿವರು ವೀರಶೈವ-ಲಿಂಗಾಯಿತ ವಿಭಜನೆ ಮಾಡಿದ್ದು ಚುನಾವಣೆ ಗೆಲ್ಲಬೇಕೆಂಬ ಏಕೈಕ ಕಾರಣಕ್ಕಾಗಿ.ರಾಜಕೀಯ ಕಾರಣದಾಚೆಗೆ ಈ ವಿಭಜನೆಯಲ್ಲಿರುವುದು ವ್ಯಾವಹಾರಿಕ ಕಾರಣಗಳು, ಅಲ್ಪಸಂಖ್ಯಾತ ಬ್ಯಾಡ್ಜಿನಡಿ ಸಿಗುವ ಸೌಲಭ್ಯಗಳ ಆಧಾರವಷ್ಟೇ.ರಾಜಕೀಯ,ವ್ಯಾವಹಾರಿಕ ಕಾರಣಗಳಿಗಿಂತ , ಈ ವಿಷಯದ ವೈಚಾರಿಕ ಆಯಾಮದ ಬಗ್ಗೆ ಗಮನಹರಿಸುವುದು ಈ ಲೇಖನದ ಉದ್ದೇಶ.

ಲಿಂಗಾಯಿತರು “ಹಿಂದೂ ಧರ್ಮ” ಭಾಗವಲ್ಲ,ಅವರದ್ದು ಪ್ರತ್ಯೇಕ “ಧರ್ಮ” ಎಂದು ನಡೆಯುತ್ತಿರುವ ಈ ಚರ್ಚೆಯಲ್ಲಿ ಮುಖ್ಯವಾಗುವುದು ಹಿಂದೂ+ಧರ್ಮ ಪದಗಳು. ಒಂದು ಉದಾಹರಣೆಯ ಮೂಲಕ ಈ ಚರ್ಚೆಯೊಳಗೆ ಹೋಗೋಣ :ಶಾಲಾ ಪಠ್ಯವೊಂದರಲ್ಲಿ “ಭಾರತ ವೈವಿಧ್ಯಮಯ ದೇಶ.ಇಲ್ಲಿ ಹಿಂದೂ,ಜೈನ,ಬೌದ್ಧ,ಸಿಖ್,ಇಸ್ಲಾಂ,ಕ್ರಿಶ್ಚಿಯಾನಿಟಿ, ಪಾರ್ಸಿ (ಮುಂದೆ ಲಿಂಗಾಯತ ?) ಹೀಗೆ ಬಹಳಷ್ಟು ಧರ್ಮಗಳಿವೆ” ಎಂಬ ಪಾಠವನ್ನು ಕೇಳಿದ ವಿದ್ಯಾರ್ಥಿಯೊಬ್ಬ ಶಾಲೆ ಮುಗಿಸಿಕೊಂಡು ಹೊರಗೆ ಬಂದಾಗ,ಅವನಿಗೆ ಎದುರಾದ ಭಿಕ್ಷುಕನೊಬ್ಬ “ಧರ್ಮ ಮಾಡಪ್ಪ” ಅಂತಾನೇ.ಆಗ ಆ ಪಾಪದ ಹುಡುಗನಿಗೆ “ತರಗತಿಯಲ್ಲಿ ಮೇಷ್ಟ್ರು ಹೇಳಿದ ಅಷ್ಟೊಂದು ವೈವಿಧ್ಯಮಯ “ಧರ್ಮ”ಗಳಲ್ಲಿ ಯಾವ ಧರ್ಮವನ್ನು ಈ ಭಿಕ್ಷುಕನಿಗೆ ಮಾಡಬೇಕು? ಅಷ್ಟಕ್ಕೂ ಧರ್ಮ ಮಾಡುವುದೆಂದರೇನು?” ಎಂಬಿತ್ಯಾದಿ ಪ್ರಶ್ನೆಗಳು ಕಾಡಿದರೆ,ನಮ್ಮ ಬುದ್ಧಿಜೀವಿಗಳ ಬಳಿ ಆ ಹುಡುಗನ ಪ್ರಶ್ನೆಗೆ ಉತ್ತರವಿದೆಯೇ?

ಮತ್ತಷ್ಟು ಓದು »

22
ಆಕ್ಟೋ

ಲಿಂಗಾಯತವೆಂಬುದು ಹೊಸ ಧರ್ಮವೇ? … ಭಾಗ 2

– ದೇವು ಹನೆಹಳ್ಳಿ,
ಬಾರಕೂರು, ಉಡುಪಿ

ಮತ,ಪಂಥ,ಧರ್ಮ,Religion ಇತ್ಯಾದಿ… ಭಾಗ 1

Religion ಅನ್ನು `ಧರ್ಮ’ ವೆಂದು ಅನುವಾದಿಸಿದ್ದು ಶತಮಾನದ ದೊಡ್ಡ ಅಕ್ರಮ-ಸಕ್ರಮ ಯೋಜನೆ.    

ನಾವು ಭಾರತೀಯರು Religion ಎಂಬ ಏಕಸೂತ್ರದಲ್ಲಿ ಇಲ್ಲ ಎಂಬುದು ನಮ್ಮ ಸುಪ್ತಪ್ರಜ್ಞೆಗೆ ಗೊತ್ತು. ಏಕಸೂತ್ರಕ್ಕೆ ಏನೆನ್ನಬೇಕು? ಅದೊಂದು Religion ಅಲ್ಲ, ಜೀವನವಿಧಾನ ಎಂದು ಯಾರೋ ಅಂದರು. (ಎಂ.ಬಿ. ಪಾಟೀಲರೂ ಅದನ್ನೇ ಹೇಳುತ್ತಾರೆ! `ಹಿಂದೂ ಎಂಬುದಿಲ್ಲ; ಇಲ್ಲಿದ್ದುದು ಬರೇ ಜಾತಿಗಳು’ಎಂದು ಕಾಗೋಡು ತಿಮ್ಮಪ್ಪನವರು ಸರಿಯಾಗಿಯೇ ಹೇಳಿದ್ದಾರೆ.) ಜೀವನಧರ್ಮ ಎಂದರು. ಸನಾತನ ಪದ್ಧತಿ ಎಂದರು. ಸನಾತನ ಧರ್ಮ ಎಂದುಬಿಟ್ಟರು. `ಧರ್ಮ’ ಎಂದುಬಿಟ್ಟ ಅಚಾತುರ್ಯವಿದೆಯಲ್ಲಾ, ಅದು ಈ ಶತಮಾನದ ಒಂದು ದೊಡ್ಡ ಅಕ್ರಮ-ಸಕ್ರಮ ಯೋಜನೆ.

ಈ ಅಸ್ಪಷ್ಟವಾದ ‘ಧರ್ಮ’ ಎಂಬ ಪದ ಬಳಕೆಯಾದ ಕಾಲಘಟ್ಟದಲ್ಲಿ ನಡೆದುಹೋದ ಒಂದು ಚಾರಿತ್ರಿಕ ಘಟನೆಯೆಂದರೆ ಚಿಕಾಗೋದಲ್ಲಿ ನಡೆದ Parliament of World’s Religions. ಇದನ್ನು ಭಾರತೀಯ ಭಾಷೆಗಳಿಗೆ, ಕನ್ನಡಕ್ಕೆ ವಿಶ್ವ ಸರ್ವಧರ್ಮ ಸಮ್ಮೇಳನ ಎಂದು ಭಾಷಾಂತರಿಸಲಾಯಿತು. (ಅದಾಗಲೇ ಉತ್ತರಭಾರತದಲ್ಲಿ ಹಲವಾರು ಭಾಷೆಗಳ ಪದಗಳನ್ನು ಎರವಲು ಪಡೆದು ‘ಹಿಂದಿ’ ಎಂಬ ಹೊಸ ಭಾಷೆಯನ್ನು ತಯಾರಿಸುತ್ತಿದ್ದ  ಕಾಲದಲ್ಲಿ ಮತಕ್ಕೆ (Religion) ಬದಲಾಗಿ, ಧರಮ್ ಎನ್ನುವ ಪರಿಪಾಠ ಬಂದಿತ್ತು.) ಅದುವರೆಗೆ Religionಗೆ ಸಂವಾದಿಯಾಗಿ, ಸಮಾನಾರ್ಥಕವಾಗಿ ಬಳಕೆಯಾಗುತ್ತಿದ್ದ ‘ಮತ’ ಎಂಬ ಶಬ್ದವನ್ನು ಕದಲಿಸಿ ಅಲ್ಲಿ ‘ಧರ್ಮ’ ಎಂಬ ಪದವನ್ನು ಕೂರಿಸಲಾಯಿತು.  ಧರ್ಮ ಎಂಬುದು ಯಾವತ್ತೂ ಋತ, ನ್ಯಾಯ, ನೀತಿ, ಸತ್ಯ, ಋಜುತ್ವ, ದಯೆ, ಕರುಣೆ, ಕರ್ತವ್ಯ, ನ್ಯಾಯಸಮ್ಮತ ನಡವಳಿಕೆ ಮುಂತಾದ ಮಾನವೀಯ ಮೌಲ್ಯಗಳ ಮೊತ್ತವಾಗಿ ಗ್ರಹಿಸಿದ್ದೇ ವಿನಃ ಸಂಕುಚಿತ ಮತೀಯ ತೀರ್ಮಾನ, ಗ್ರಹಿಕೆಗಳಾಗಿ ಅಲ್ಲ.

ಭಾರತೀಯ ಸಂದರ್ಭದಲ್ಲಿ  Religionಗೆ ಸಂವಾದಿಯಾಗಿ ‘ಮತ’ ಎನ್ನುವುದಕ್ಕಿಂತ ‘ಧರ್ಮ’ಎಂದರೆ ಹೆಚ್ಚು ಸ್ವೀಕಾರಾರ್ಹತೆ, Legitimacy, ಬರುವ ವಾಸನೆ ಬಡಿಯುತ್ತಲೇ ರಕ್ತದಲ್ಲಿ ಮಿಂದೆದ್ದ Religion(ಮತ)ಗಳೆಲ್ಲ ತಮ್ಮನ್ನು ಧರ್ಮ ಎಂದು ಕರೆದುಕೊಳ್ಳಲಾರಂಭಿಸಿದವು. ಮತಪಂಥಗಳ ಕುರಿತಾದ ವಾಗ್ವಾದವನ್ನೇ ಹಾಳುಗೆಡವಿದ ಈ ವಿದ್ಯಮಾನ ಎಲ್ಲ ಭಾರತೀಯ ಭಾಷೆಗಳ ಪದಕೋಶಗಳನ್ನು ಕಲುಷಿತಗೊಳಿಸಿಬಿಟ್ಟಿತು. ಯುರೋಪಿಯನ್ ಭಾಷೆಗಳಲ್ಲಿ Religion ಮತ್ತು Munificence+Benevolence +Values+ Rectitude ಒಂದೇ ಅಲ್ಲ; ಆದರೆ ಭಾರತದಲ್ಲಿ ಮತ ಮತ್ತು ಧರ್ಮ ಎಂದರೆ ಒಂದೇ!

‘ನೂರು ಮತಗಳ ಹೊಟ್ಟ ತೂರಿ…’ ಎಂದು ಹಾಡುವ ಕಾಲದಲ್ಲಿ ಕುವೆಂಪು ಅವರ ಶಬ್ದಕೋಶ ಸರಿಯಿತ್ತು. ಆದರೆ ಅವರೇ `ಇಸ್ಲಾಂ ಧರ್ಮ’ ಎಂಬ ಹೊತ್ತಗೆ ಬರೆದರು! ಆದರೆ ಪಂಪನಿಗೆ ಈ ಗೊಂದಲವಿರಲಿಲ್ಲ. ಧರ್ಮ ಎಂದರೇನು, ಅಧರ್ಮ ಎಂದರೇನು? ಪಂಪ ಸ್ಪಷ್ಟವಾಗಿ ಹೇಳುತ್ತಾನೆ:

ಮತ್ತಷ್ಟು ಓದು »

21
ಆಕ್ಟೋ

ಮತ,ಪಂಥ,ಧರ್ಮ,Religion ಇತ್ಯಾದಿ… ಭಾಗ 1

– ದೇವು ಹನೆಹಳ್ಳಿ,
ಬಾರಕೂರು, ಉಡುಪಿ

 

ಒಂದು ಕಲ್ಲನು ಕಡಿದು ಮತ್ತೊಂದು ಕಲ್ಲಿಗೆ

ಭೋಗವ ಕೊಟ್ಟಿಹೆನೆಂಬ ಅಜ್ಞಾನವಿದೇನೋ?

–  ಅಲ್ಲಮಪ್ರಭು

 

ಲಿಂಗಾಯತ, ವೀರಶೈವ ‘ಸ್ವತಂತ್ರಧರ್ಮ’ ಘೋಷಣೆ, ಮಾನ್ಯತೆ ಇತ್ಯಾದಿಗಳ ಕುರಿತು ವ್ಯಾಪಕ ಚರ್ಚೆ, ಗುದ್ದಾಟಗಳನ್ನು ಪ್ರಸ್ತಾಪಿಸುವ ಮೊದಲು ‘ನಾನು ಯಾರು’ ಎಂಬುದನ್ನು ಸ್ಪಷ್ಟಗೊಳಿಸುವುದು ಅಗತ್ಯ ಮತ್ತು ಒಳಿತು. ಕಳೆದೆರಡು ಸಾವಿರ ವರ್ಷಗಳಿಂದ ‘ನಾನ್ಯಾರು’ ಎಂಬುದು ನನ್ನ ಸಮಸ್ಯೆಯಾಗಿರಲಿಲ್ಲ. ಯಾಕೆಂದರೆ ನಾನು ಅಜ್ಞಾನಿ, ಮೂಢ. ಅದು ಯಾರಿಗೆ ಸಮಸ್ಯೆಯಾಯಿತೋ ಅವರೇ ನೀಡಿದ ವ್ಯಾಖ್ಯೆಗಳನ್ನು ಒಪ್ಪಿಕೊಳ್ಳುತ್ತೇನೆ. ಏಕೆಂದರೆ ಅದು ಅನಿವಾರ್ಯ. ಹೌದು, ನಾನು ಪೇಗನ್,ಕಾಫಿರ, ಹೀದನ್. ಅನಂತರ ಹಿಂದೂ ಎಂದರು. “ಹಿಂದೂ” ಎನ್ನಿಸಿಕೊಳ್ಳುವುದು ಕೂಡಾ ನನ್ನ ಅಗತ್ಯವಾಗಿರಲಿಲ್ಲ, ಕೋರಿಕೆಯಾಗಿರಲಿಲ್ಲ. (ಕುರಿಯನ್ನು ‘ಕುರಿ’ ಎನ್ನುವುದು ಕುರಿಯ ಅಗತ್ಯವೇನೂ ಅಲ್ಲವಲ್ಲ?!) ಆದರೂ ಒಪ್ಪಿಕೊಳ್ಳುತ್ತೇನೆ. ಈಗ ಎಸ್.ಎಂ. ಜಾಮದಾರ್, ಗೊ.ರು.ಚ., ರಂಜಾನ್ ದರ್ಗಾ, ಮಾತೆ ಮಹಾದೇವಿ, ಮೀನಾಕ್ಷಿ ಬಾಳಿ ಮೊದಲಾದ ಶರಣಶರಣೆಯರು, ಅಸಂಖ್ಯ ಮಠಾಧೀಶರು, ಸಿದ್ಧರಾಮಯ್ಯನವರ ಸರಕಾರದ ಮಂತ್ರಿಗಳು, ಚಿಂತಕರು, ಪ್ರಗತಿಪರರು, ಪತ್ರಕರ್ತರು, ವಿಚಾರವಾದಿಗಳು, ಬುದ್ಧಿಜೀವಿಗಳು, liberals ಮುಂತಾದವರು ಒಂದು ಕೈಯಲ್ಲಿ ನನ್ನ ಕತ್ತು ಹಿಡಿದು, ಇನ್ನೊಂದು ಕೈಯಲ್ಲಿ ಕತ್ತಿ ಹಿಡಿದು ‘ಭವಿ’ ಎಂದು ಕರೆಯುತ್ತಿದ್ದಾರೆ. ನಾನು ಅಜ್ಞಾನಿಯಲ್ಲವೇ? ಮಹಾಪ್ರಸಾದವೆಂಬೆನು! (ಭವಿ ಎಂದರೆ ಇಷ್ಟಲಿಂಗವನ್ನು ಪೂಜಿಸದವನು; ಲೌಕಿಕವನ್ನು, ಅಂದರೆ ಭವವನ್ನು ನೆಚ್ಚಿ ಮೋಕ್ಷ ಪಡೆಯಲಾರದವನು; ಪಾಪಿ ಇತ್ಯಾದಿ.)

ಸತ್ಯವೆಂದರೆ ಪೇಗನ್, ಹೀದನ್, ಕಾಫಿರ್, ಹಿಂದೂ, ಭವಿ ಎಂಬೆಲ್ಲಾ ಬಿರುದುಗಳಿಗೂ, ಪಾಪಿ, ಅಜ್ಞಾನಿ, ಅವಿಶ್ವಾಸಿ, ಕಳ್ಳ, ಮೂರ್ತಿಪೂಜೆ ಮಾಡುವ ಮೂರ್ಖ, ಕಂದಾಚಾರಿ, ಮೂಢ, ಅನಾಚಾರಿ, ಮಿಥ್ಯಾರಾಧಕ ಎಂಬೆಲ್ಲಾ ಪದನಾಮಗಳಿಗೂ ಅಂತಹ ವ್ಯತ್ಯಾಸವೇನೂ ಇಲ್ಲ! ಜತೆಗೆ ವೈಯಕ್ತಿಕವಾಗಿ ನಾನು ನಾಸ್ತಿಕ ಮತ್ತು ನಿರೀಶ್ವರಿ. (ನಿರೀಶ್ವರವಾದಿಯಲ್ಲ.) ಅದು ಕೂಡಾ ಕಳೆದ 2-3 ಸಾವಿರ ವರ್ಷಗಳಿಂದ ನಾನು, ನನ್ನಂತಹ ಅಸಂಖ್ಯ ಪೇಗನ್ನರಿಗೆ ಸಮಸ್ಯೆಯಾಗಿರಲಿಲ್ಲ; ಯಾವ ಪೇಗನ್ನರೂ ನನ್ನನ್ನು ಸಾರ್ವಜನಿಕವಾಗಿ ಸುಡಲಿಲ್ಲ.

ನಾವು ನಮ್ಮ ಅಜ್ಞಾನದಲ್ಲಿ ಸುಖವಾಗಿದ್ದರೂ, ನಮಗೆ ಅವು ಸಮಸ್ಯೆಯಾಗಿ ಕಂಡಿಲ್ಲದಿದ್ದರೂ ‘ಇತರರಿಗೆ’ ಯಾಕೆ ಸಮಸ್ಯೆಯಾದವು? ಇವೆಲ್ಲ ಹಲವು ದಿಕ್ಕಿನಿಂದ ಒಂದಾಗಿ, ಒಂದೊಂದಾಗಿ ಆರಂಭಗೊಂಡವು ಎನ್ನಬಹುದು.

ಮತ್ತಷ್ಟು ಓದು »

14
ಜನ

ಬೊಳುವಾರರ “ಮುಸ್ಲಿಮನಾಗಿರುವುದೆಂದರೆ…” ಲೇಖನದ ಸುತ್ತ ಒಂದು ಚರ್ಚೆ- ಭಾಗ೨

ಬೊಳುವಾರರ “ಮುಸ್ಲಿಮನಾಗಿರುವುದೆಂದರೆ…” ಲೇಖನದ ಸುತ್ತ ಒಂದು ಚರ್ಚೆ ಭಾಗ೧

– ಪ್ರೇಮಶೇಖರ

ಶ್ರೀಯುತ ದಿನೇಶ್ ಅಮೀನ್,

ಮುಸ್ಲಿಮನಾಗಿರುವುದೆಂದರೆ.. ಬೊಳುವಾರುನಿಮ್ಮ ಉತ್ತರದ ಮೊದಲೆರಡು ಕಂತುಗಳನ್ನು ಓದಿ, ಅವುಗಳಲ್ಲಿನ ಕೊಂಕು ಮತ್ತಿತರ ನಕಾರಾತ್ಮಕ ಅಂಶಗಳನ್ನು ನಿರ್ಲಕ್ಷಿಸಿ, ಅವುಗಳಲ್ಲಿರುವ ವೈಚಾರಿಕತೆಯನ್ನಷ್ಟೇ ಗಮನಕ್ಕೆ ತೆಗೆದುಕೊಂಡೆ. ನಿಮ್ಮ ಮಾತುಗಳಿಗೆ ರೋಹಿತ್ ಚಕ್ರತೀರ್ಥರು ಸಮರ್ಪಕವಾಗಿಯೇ ಉತ್ತರಿಸಿದ್ದಾರೆ. ಆದಾಗ್ಯೂ, ನಿಮಗೆ ಉತ್ತರಿಸಬೇಕಾದ್ದು ನನ್ನ ಜವಾಬ್ಧಾರಿ ಎಂಬ ಅರಿವಿನಿಂದ ದೀರ್ಘ ವಿವರಣೆಗಳುಳ್ಳ ಪ್ರತಿಕ್ರಿಯೆಯನ್ನು ಸಿದ್ಧಪಡಿಸಿದ್ದೆ. ಇಸ್ಲಾಂ ಏಶಿಯಾ, ಯೂರೋಪ್ ಮತ್ತು ಆಫ್ರಿಕಾಗಳ ಬಹುಪಾಲು ನಾಡುಗಳಿಗೆ ಪ್ರಸರಿಸಿದ್ದು ಆಕ್ರಮಣದ ಮೂಲಕ ಎಂದು ಹೇಳಲು ಬಳಸಿದ ‘ಕತ್ತಿಯ ಮೂಲಕ’ ಎಂಬ ಮಾತನ್ನು ನೀವು ತಿಳಿದೋ ತಿಳಿಯದೆಯೋ ಅಪಾರ್ಥ ಮಾಡಿಕೊಂಡು ಕತ್ತಿಯ ಉಗಮದ ಬಗ್ಗೆ ಮಾತೆತ್ತಿ ಇಡೀ ಚರ್ಚೆಯನ್ನು ದಾರಿ ತಪ್ಪಿಸಲು ಹೋದ ನಿಮ್ಮ ವಾದಸರಣಿ; ಹಿಂದೂ-ಮುಸ್ಲಿಂ ಎಂದು ಧಾರ್ಮಿಕ ಸಂಘರ್ಷದ ಬಗ್ಗೆ ಹೇಳುತ್ತಲೇ ಹಠಾತ್ತಾಗಿ ಕಾಂಗ್ರೆಸ್-ಬಿಜೆಪಿ (ಗುಜರಾತ್ ೨೦೦೨-ದೆಹಲಿ ೧೯೮೪) ಎಂದು ರಾಜಕೀಯ ಆಯಾಮಕ್ಕೆ ಜಿಗಿಯುವ ನಿಮ್ಮ ಗೊಂದಲಮಯ ಚಿಂತನಾಧಾಟಿ; ರಕ್ತಪಾತಕ್ಕೆ ಸಂಬಂಧಿಸಿದಂತೆ ಹಿಂದೂಗಳ ವಿರುದ್ಧ ಆರೋಪಗಳನ್ನು ಮಾಡುತ್ತಲೇ ಅದೇ ವಿಷಯಕ್ಕೆ ಸಂಬಂಧಿಸಿದಂತೆ ಮುಸ್ಲಿಂ ಸಮುದಾಯದ ಬಗ್ಗೆ ಪಕ್ಷಪಾತಿ ನಿಲುವು ತೋರುವ ನಿಮ್ಮ ವಿರೋಧಾಭಾಸಪೂರ್ಣ, ಅತಾರ್ಕಿಕ ನಡೆಗಳು- ಎಲ್ಲವುಗಳತ್ತ ಸೂಕ್ತ ಉದಾಹರಣೆಗಳ ಮೂಲಕ ನಿಮ್ಮ ಗಮನ ಸೆಳೆಯಲು ಪ್ರಯತ್ನಿಸಿದ್ದೆ. ಅದು ನಮ್ಮ ನಾಡಿನ ಇತಿಹಾಸದ ಬಗ್ಗೆ, ವರ್ತಮಾನದ ಬಗ್ಗೆ ಒಂದು ಆರೋಗ್ಯಕರ ಚರ್ಚೆಗೆ ಅವಕಾಶ ಮಾಡಿಕೊಡುತ್ತದೆಂದು ನಂಬಿದ್ದೆ. ಆದರೆ ನಿಮ್ಮ ನಾಲ್ಕನೆಯ ಕಂತನ್ನು ಓದಿದ ನಂತರ ನಿಮ್ಮೊಂದಿಗೆ ನಾಗರಿಕ ವಿಧಾನದಲ್ಲಿ ಸಂವಾದ ನಡೆಸುವುದು ಸಾಧ್ಯವಿಲ್ಲ ಎಂದರಿವಾಯಿತು. ಇಷ್ಟಾಗಿಯೂ, ಸುಮ್ಮನುಳಿದುಬಿಡುವುದೂ ಸರಿಯೆನಿಸಲಿಲ್ಲ. ಹೀಗಾಗಿ ಆ ದೀರ್ಘ, ವಿವರಣಾತ್ಮಕ ಉತ್ತರವನ್ನು ಬದಿಗಿರಿಸಿ ಒಂದೆರಡು ಮೂಲಭೂತ ಪ್ರಶ್ನೆಗಳನ್ನಷ್ಟೇ ಎತ್ತಿಕೊಂಡು ಆ ಬಗ್ಗೆ ಸಂಕ್ಷಿಪ್ತವಾಗಿ ನಿಮಗೆ ಕೆಲವು ಮಾತುಗಳನ್ನು ಹೇಳಲು ಇಲ್ಲಿ ಪ್ರಯತ್ನಿಸಿದ್ದೇನೆ. ಇವುಗಳಲ್ಲಿ ಹೆಚ್ಚಿನವು ನಾನು ಸ್ವಂತ ಅಧ್ಯಯನ, ಅವಲೋಕನ, ಚಿಂತನೆಯ ಮೂಲಕ ಗಳಿಸಿದವುಗಳಾದ್ದರಿಂದ ನಿಮಗೆ ಬೇರೆಲ್ಲೂ ಸಿಗಲಾರವು. “ನಾನು ಲೇಖಕನ ವ್ಯಕ್ತಿತ್ವವನ್ನು ಆತನ ಲೇಖನಗಳ ಮೂಲಕವೇ ಅರ್ಥಮಾಡಿಕೊಳ್ಳುತ್ತಾ ಬಂದವನು” ಎಂದು ವಾರದ ಹಿಂದೆ ಘೋಷಿಸಿದ ನೀವು ನಿಮ್ಮ ಮಾತಿಗೆ ಸತ್ಯವಾಗಿ ನಡೆದುಕೊಂಡಿದ್ದರೆ ಇದನ್ನೆಲ್ಲಾ ಹೇಳಬೇಕಾದ ಅಗತ್ಯ ನನಗೆ ಬರುತ್ತಲೇ ಇರಲಿಲ್ಲ.

ಮೊದಲಿಗೆ ಒಂದು ಸ್ಪಷ್ಟೀಕರಣ- ಮಾನವರೆಲ್ಲರೂ ಸಮಾನರು ಎಂಬ ಧೃಡನಂಬಿಕೆಯ ತಳಹದಿಯ ಮೇಲೆ ಗಟ್ಟಿಯಾಗಿ ನಿಂತು ಎಲ್ಲ ಬಗೆಯ ಹಿಂಸೆ, ಶೋಷಣೆ, ತಾರತಮ್ಯಗಳನ್ನು ತಿರಸ್ಕರಿಸುವುದು ನನ್ನ ಜೀವನಮೌಲ್ಯ. ವಿಮರ್ಶೆಯನ್ನು ಸ್ವಾಗತಿಸುವ ಧರ್ಮದ ವಿರುದ್ಧ ಪುಂಖಾನುಪುಂಖ ಹೇಳಿಕೆ ನೀಡುವ, ವಿಮರ್ಶೆಗೆ ಬದಲಾಗಿ ತಲೆದಂಡ ಕೇಳುವ ಧರ್ಮದ ಬಗ್ಗೆ ಜಾಣಮೌನ ವಹಿಸುವ ಚತುರಮತಿ ಬುದ್ಧಿಜೀವಿ ನಾನಲ್ಲ. ಅಲ್ಲದೇ, ಹಣ, ಪ್ರಶಸ್ತಿ, ಸ್ಥಾನಮಾನಗಳ ಹುಚ್ಚೂ ನನಗಿಲ್ಲ.

ಮತ್ತಷ್ಟು ಓದು »

5
ಜನ

ಬೊಳುವಾರರ “ಮುಸ್ಲಿಮನಾಗಿರುವುದೆಂದರೆ…” ಲೇಖನದ ಸುತ್ತ ಒಂದು ಚರ್ಚೆ

ಇತ್ತೀಚೆಗೆ, ಲೇಖಕ ರೋಹಿತ್ ಚಕ್ರತೀರ್ಥ ಅವರ ಕಥಾಸಂಕಲನಕ್ಕೆ ಹಿರಿಯ ಲೇಖಕರಾದ ಬೊಳುವಾರ ಮಹಮ್ಮದ್ ಕುಂಞ್ ಯವರು ಮುನ್ನುಡಿ ಬರೆದಿರುವ ವಿಷಯವಾಗಿ ಫೇಸ್ಬುಕ್ಕಿನಲ್ಲಿ ವಾದ-ವಿವಾದಗಳು ನಡೆಯುತ್ತಿವೆ.ಅದಕ್ಕೆ ಪ್ರತಿಕ್ರಿಯಿಸಿದ ಬೊಳುವಾರರು, ಮೂವತ್ತು ವರ್ಷಗಳ ಹಿಂದೆ ಬರೆದಿದ್ದ “ಮುಸ್ಲಿಮನಾಗಿರುವುದೆಂದರೆ…” ಲೇಖನವನ್ನು ನೆನೆಸಿಕೊಂಡರು.ಆ ಲೇಖನದ ಕುರಿತಾಗಿ ಕಥೆಗಾರರು ಮತ್ತು ವಿಜಯವಾಣಿಯ ಅಂಕಣ ಬರಹಗಾರರಾದ ಪ್ರೇಮಶೇಖರ ಅವರು ತಮ್ಮ ವಾಲ್ನನಲ್ಲೊಂದು ಅಭಿಪ್ರಾಯ ಹಾಕಿದ್ದರು.ಆ ಅಭಿಪ್ರಾಯದ ಕುರಿತು ಮುಖ್ಯಮಂತ್ರಿಯ ಮಾಧ್ಯಮ ಸಲಹೆಗಾರ ದಿನೇಶ್ ಅಮೀನ್ ಅವರು “ಪ್ರೇಮಶೇಖರ ಅವರೇ, ನಿಮ್ಮಲ್ಲಿ ಲೇಖನ ಇದ್ದರೆ ಮತ್ತೊಮ್ಮೆ ಓದಿ. ಯಾವುದು ಬದಲಾಗಿದೆ? ಮುಸ್ಲಿಮರನ್ನು ಹಿಂದುತ್ವವಾದಿಗಳು ನೋಡುವ ಯಾವ ದೃಷ್ಟಿ ಬದಲಾಗಿದೆ ಎಂದು ಒಂದೊಂದಾಗಿ ಹೇಳಿಬಿಡಿ” ಎಂದಿದ್ದರು.ಪ್ರೇಮಶೇಖರ ಅವರು ಅಮೀನರಿಗೆ ಕೊಟ್ಟ ಉತ್ತರ ಇಲ್ಲಿದೆ… ಜೊತೆಗೆ ಬೊಳುವಾರರ ಹಳೇ ಲೇಖನದ ಪ್ರತಿಯೂ ಇದೆ – ನಿಲುಮೆ

– ಪ್ರೇಮ ಶೇಖರ ಅವರ ಮೊದಲ ಅಭಿಪ್ರಾಯ 

ಮುಸ್ಲಿಮನಾಗಿರುವುದೆಂದರೆ.. ಬೊಳುವಾರುಬೊಳುವಾರರು “ಸುಧಾ” ಸಾಪ್ತಾಹಿಕದಲ್ಲಿ “ಮುಸ್ಲಿಮನಾಗಿರುವುದೆಂದರೆ…” ಎಂಬ ಲೇಖನ ಬರೆದು ಮೂವತ್ತನಾಲ್ಕೂವರೆ ವರ್ಷಗಳಾಗುತ್ತಾ ಬಂದಿವೆ. ಈ ಆವಧಿಯಲ್ಲಿ ನೇತ್ರಾವತಿಯಲ್ಲಿ ಅದೆಷ್ಟು ನೀರು ಹರಿದಿದೆ! ಹಾಗೆಯೇ ಬೊಳುವಾರರು ಬೆಳೆಯುತ್ತಾ ಹೋಗಿದ್ದಾರೆ, ಅದು ಅವರ ಹೆಗ್ಗಳಿಕೆ. ಆದರೆ ಅದಕ್ಕೆ ವಿರುದ್ಧವಾಗಿ, ಆ ಲೇಖನವನ್ನು ಅಂದು ಓದಿದವರು ಅಲ್ಲೇ ಉಳಿದುಬಿಟ್ಟಿದ್ದಾರೆ. ಹೀಗಾಗಿ ಕರ್ನಾಟಕದ ಸಾಂಸ್ಕೃತಿಕ ವಾತಾವರಣ ಅಧಃಪಾತಾಳಕ್ಕಿಳಿಯುತ್ತಿದೆ.

ಮೂವತ್ತೂ ದಾಟದ ಆ ದಿನಗಳಲ್ಲಿ ಬೊಳುವಾರರು ಬರೆದ, ವೈಚಾರಿಕತೆಗಿಂತಲೂ ಭಾವನಾತ್ಮಕತೆಗೆ ಒತ್ತುಕೊಟ್ಟಿದ್ದ, ಆ ಲೇಖನದಲ್ಲಿ ಒಳ್ಳೆಯ ಒಳನೋಟಗಳಿದ್ದಂತೇ ಉಪಖಂಡದ ಇತಿಹಾಸದ ಬಗ್ಗೆ, ದೇಶವಿಭಜನೆಯ ಬಗ್ಗೆ ಹಲವು ತಪ್ಪುಗ್ರಹಿಕೆಗಳೂ ಇದ್ದವು. ಭಾರತಕ್ಕೆ ಮುಸ್ಲಿಮರ, ನಂತರ ಬ್ರಿಟಿಷರ ಆಗಮನದ ಸ್ವರೂಪದ ಬಗ್ಗೆ, ದೇಶವಿಭಜನೆಯ ಬಗ್ಗೆ ಬೊಳುವಾರದ ತಿಳುವಳಿಕೆಗಳಲ್ಲಿ ಅಸ್ಪಷ್ಟತೆಯಿತ್ತು. ನನಗೆ ತಕ್ಷಣಕ್ಕೆ ನೆನಪಾಗುವುದು ಇದು- “ಪಾಕಿಸ್ತಾನ ಬೇಕೇ ಬೇಡವೇ ಎಂದು ಒಂದು ಜನಮತಗಣನೆ ನಡೆಯಿತಂತೆ, ಆದರೆ ಅಂಥದು ನಡೆದ ಬಗ್ಗೆ ನನ್ನ ತಂದೆಯವರಿಗೆ ಗೊತ್ತೇ ಇಲ್ಲ” ಎಂಬುದಾಗಿ ಬೊಳುವಾರರು ಬರೆದಿದ್ದರು. ವಾಸ್ತವವೆಂದರೆ ಬೊಳುವಾರರ ತಂದೆಯವರಿಗೆ ಆ ಜನಮತಗಣನೆಯ ಬಗ್ಗೆ ಗೊತ್ತಾಗಿ ಅವರದರಲ್ಲಿ ಭಾಗಿಯಾಗುವ ಸಾಧ್ಯತೆಯೇ ಇರಲಿಲ್ಲ. ಯಾಕೆಂದರೆ ಅಂಥದೊಂದು ಆಯ್ಕೆ ಎದುದಾದದ್ದು ಗಡಿನಾಡು ಪ್ರಾಂತ್ಯ ಮತ್ತು ಸಿಲ್ಹೆಟ್ (ಈಗ ಬಾಂಗ್ಲಾದೇಶದಲ್ಲಿದೆ) ಜಿಲ್ಲೆಯ ಜನತೆಗೆ ಮಾತ್ರ. ದೇಶವಿಭಜನೆಯ ನಿಜವಾದ ಆರೋಪಿಗಳಾದ ಮುಸ್ಲಿಂ ಲೀಗ್‍ ಮತ್ತು ಬ್ರಿಟಿಷರ ಪಾತ್ರವನ್ನು ಕಡೆಗಣಿಸಿ ಪರಿಸ್ಥಿತಿಯ ಕೈಗೊಂಬೆಯಾದ ಕಾಂಗ್ರೆಸ್‍ನ ಪಾತ್ರವನ್ನು ದೊಡ್ಡದಾಗಿ ತೋರಿಸುವ ಪ್ರಯತ್ನವೂ ಆ ಲೇಖನದಲ್ಲಿತ್ತು. ಕೋಮುವಾದದ ಉಗಮದ ಬಗೆಗೂ ಅಂಥದೇ ತಪ್ಪುತಿಳುವಳಿಕೆಯ ಭಾವನಾತ್ಮಕ ವಿವರಣೆಗಳಿದ್ದವು. ಅಂಥದೊಂದು ತಪ್ಪುಗ್ರಹಿಕೆಯನ್ನು ಎರಡುವಾರಗಳ ನಂತರ ಸಮುದ್ರಮಧನ ವಿಭಾಗದಲ್ಲಿ ಪ್ರಜ್ಞಾವಂತ ಓದುಗರೊಬ್ಬರು “ಮುಸ್ಲಿಂ ಲೀಗ್ ಯಾವಾಗ ಸ್ಥಾಪನೆಯಾಯಿತು, ಆರ್‌ಎಸ್‌ಎಸ್ ಯಾವಾಗ ಸ್ಥಾಪನೆಯಾಯಿತು ಎಂದು ನೋಡಿದರೆ ಯಾವುದು ಯಾವುದಕ್ಕೆ ಪ್ರತಿಕ್ರಿಯೆ ಎಂದು ತಿಳಿಯುತ್ತದೆ” ಎಂಬುದಾಗಿ ಹೇಳುವುದರ ಮೂಲಕ ಬೊಳುವಾರರಿಗೆ ಈ ದೇಶದ ಚರಿತ್ರೆಯ ಒಂದು ಸತ್ಯವನ್ನು ಮನಗಾಣಿಸಲು ಪ್ರಯತ್ನಿಸಿದ್ದರು. ನಂತರ ಬೊಳುವಾರದು ಬೆಳೆಯುತ್ತಾ ಹೋದರು. ಐದೇ ತಿಂಗಳಲ್ಲಿ “ದೇವರುಗಳ ರಾಜ್ಯದಲ್ಲಿ” ಎಂಬ ಅದ್ಭುತ ಕಥೆ ರಚಿಸಿದರು. ಅವರ ಬೆಳವಣಿಗೆಯ ಓಟ ಇನ್ನೂ ಸಾಗಿದೆ. ನನಗವರು ಅನುಕರಣೀಯವಾಗುವುದು, ಈ ನಾಡಿಗೆ ಅವರು ಮುಖ್ಯವಾಗುವುದು ಈ ಕಾರಣಕ್ಕಾಗಿ.

ದುರಂತವೆಂದರೆ ಆ ಲೇಖನವನ್ನು ಅಂದು ಓದಿದವರು ಅದನ್ನೇ ಪವಿತ್ರಗ್ರಂಥವೆಂದು ಇಂದಿಗೂ ನಂಬಿಬಿಟ್ಟಿದ್ದಾರೆ. ಅದರಾಚೆಗೆ ಬೆಳೆಯುವ ಪ್ರಯತ್ನವನ್ನೇ ಅವರು ಮಾಡಿಲ್ಲ. ತಾವೂ ಬೆಳೆಯಲಿಲ್ಲ, ಕರ್ನಾಟಕವನ್ನೂ ಬೆಳೆಯಲು ಬಿಡುತ್ತಿಲ್ಲ. ಬೊಳುವಾರರನ್ನೂ ಅಂದಿನ ದಿನಗಳಿಗೇ ಕಟ್ಟಿಹಾಕಲು ನೋಡುತ್ತಿದ್ದಾರೆ. ನಮ್ಮ ಬೊಳುವಾರರನ್ನೂ, ನಮ್ಮ ನಾಡನ್ನೂ, ನಮ್ಮ ಸಾಂಸ್ಕೃತಿಕ ಚಿಂತನೆಯನ್ನೂ ಈ ಪ್ರತಿಗಾಮಿಗಳಿಂದ ರಕ್ಷಿಸಬೇಕಾದ ಜವಾಬ್ದಾರಿ ನಮ್ಮ ಮೇಲಿದೆ.

ಮತ್ತಷ್ಟು ಓದು »

28
ಆಕ್ಟೋ

ಹಿಂದೂ-ವಿರೋಧಿ ಮಾಧ್ಯಮ: ಸೃಷ್ಟಿ ಮತ್ತು ಸ್ಥಿತಿ

– ಪ್ರೇಮಶೇಖರ

ಪೇಯ್ಡ್ ಮೀಡಿಯಾಪ್ರಕರಣ ೧: ಪ್ರಮುಖ ಕನ್ನಡ ದೈನಿಕವೊಂದರಲ್ಲಿ ಸೌದಿ ಅರೇಬಿಯಾದ ಬಗ್ಗೆ ಪರಿಚಯಾತ್ಮಕ ಲೇಖನವೊಂದು ಪ್ರಕಟವಾಗುತ್ತದೆ. ಅಚ್ಚರಿಯೆಂದರೆ ಮರುದಿನವೂ ಅದೇ ಲೇಖನ ಮತ್ತೆ ಕಾಣಿಸಿಕೊಳ್ಳುತ್ತದೆ!  ಅದರ ಕೆಳಗೆ ಹೀಗೊಂದು ವಿವರಣೆ: “ನಿನ್ನೆಯ ದಿನ ಸೌದಿ ಅರೇಬಿಯಾವನ್ನು ಕುರಿತು ನೀಡಿದ ವಿವರಣೆಯಲ್ಲಿ ಮಹಮದ್ ಪೈಗಂಬರ್ ಮೆಕ್ಕಾದಿಂದ ಮದೀನಾಕ್ಕೆ ಕ್ರಿ.ಶ. ೬೨೨ರಲ್ಲಿ ಓಡಿಹೋದರು. ಅಂದಿನಿಂದ ಹಿಜ್ರಾ ಶಕೆ ಪ್ರಾರಂಭವಾಗುತ್ತದೆ ಎಂದು ಪ್ರಕಟವಾಗಿತ್ತು.ಇದರಿಂದ ಅನೇಕರ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ತಿಳಿದುಬಂದಿದೆ. ಅದಕ್ಕಾಗಿ ಪತ್ರಿಕೆ ಕ್ಷಮೆ ಯಾಚಿಸುತ್ತದೆ ಹಾಗೂ ಇಂದು ಅದೇ ಲೇಖನವನ್ನು ತಿದ್ದಿ ಪ್ರಕಟಿಸಲಾಗಿದೆ.” ಮರುಪ್ರಕಟವಾಗಿದ್ದ ಲೇಖನದಲ್ಲಿ ಪೈಗಂಬರರು ಮದೀನಾಗೆ ಓಡಿಹೋದ ಬಗೆಗಿನ ಒಂದು ಸಾಲು ಮಾಯವಾಗಿರುತ್ತದೆ.

ಪ್ರಕರಣ ೨: ಕೆಲದಿನಗಳ ನಂತರ ಅದೇ ಪತ್ರಿಕೆಯಲ್ಲಿ ಸ್ವಾಮಿ ವಿವೇಕಾನಂದರ ಬಗ್ಗೆ ಲೇಖನವೊಂದು ಪ್ರಕಟವಾಗುತ್ತದೆ.ವಿವೇಕಾನಂದರ ದೈಹಿಕ ಸಮಸ್ಯೆಗಳು,ಬಲಹೀನತೆಗಳ ಬಗ್ಗೆ ಅದರಲ್ಲಿನ ವಿಷಯಗಳಾವುವೂ ಹೊಸದಾಗಿರುವುದಿಲ್ಲ.  ಅವೆಲ್ಲವೂ ಕೊಲ್ಕತಾದ ರಾಮಕೃಷ್ಣ ಮಿಶನ್ ಮತ್ತು ಅಲ್ಮೋರಾದ ಅದ್ವೈತಾಶ್ರಮಗಳ ಪ್ರಕಟಣೆಗಳಲ್ಲೇ ಇವೆ.ಆದರೆ ಲೇಖನದ ಭಾಷೆ, ಕೆಲ ಪದಗಳು ಅಕ್ಷೇಪಾರ್ಹವಷ್ಟೇ ಅಲ್ಲ, ಪತ್ರಿಕೆಯ ಘನತೆಗೂ ಶೋಭೆ ತರುವಂತಿರುವುದಿಲ್ಲ.ಇದರಿಂದಾಗಿ ಹಲವರ ಭಾವನೆಗಳಿಗೆ ಧಕ್ಕೆಯಾಗುತ್ತದೆ.ಅದು ರಾಜ್ಯದ ವಿವಿಧೆಡೆ ಸಾರ್ವಜನಿಕವಾಗಿಯೂ ವ್ಯಕ್ತವಾಗುತ್ತದೆ.ಅದಕ್ಕೆ ಪತ್ರಿಕೆಯ ಪ್ರತಿಕ್ರಿಯೆ? ಒಂದಕ್ಷರದ ಕ್ಷಮಾಯಾಚನೆಯೂ ಇಲ್ಲ!

ಮತ್ತಷ್ಟು ಓದು »