ಅನಾಥ ಪ್ರಜ್ಞೆಯ ಸ್ಥಿತಿ
ಇದೊಂದು ಮನಸಿನ ಭಾವನೆ ವಿಚಿತ್ರವಾದರೂ ಸತ್ಯ. ಅದೆಷ್ಟು ಮನಸ್ಸನ್ನು ಕಾಡುವ ಹಿಂಸೆ ಕೊಟ್ಟು ಸಾಯಿಸಿಬಿಡುವ ದುರ್ಬಲ ಮನಸ್ಸಿನ ಹಪಹಪಿಸುವ ಕ್ಷಣ. ಆ ಒಂದು ಸಂದರ್ಭ ನಾನು ಒಂಟಿ, ನನಗ್ಯಾರು ಇಲ್ಲ, ನಾನು ಯಾಕೆ ಬದುಕಿರಬೇಕು, ಯಾರಿಗಾಗಿ ಬದುಕಬೇಕು, ನಾನಿಲ್ಲದಿದ್ದರೆ ಏನಂತೆ, ನಾನು ಯಾರಿಗೂ ಬೇಡಾದವಳು/ನು. ಹೀಗೆ ದುರ್ಬಲ ಮನಸ್ಸು ಹೇಳಿಕೊಳ್ಳುತ್ತದೆ. ಯಾಕೆ ಹೀಗೆ ಈ ಮನಸ್ಸು. ಇದಕ್ಕಿನ್ನೇನು ಬೇಕು ? ಸುತ್ತ ಎಲ್ಲರೂ ಇದ್ದಾರಲ್ಲ! ಇನ್ನೂ ಯಾಕೆ ಈ ಕೊರಗು. ಹೀಗೆ ಎಷ್ಟು ಬುದ್ಧಿ ಹೇಳಿದರೂ ಕೇಳಲಾರದ ಮನಸ್ಸು ಪದೇ ಪದೇ ಈ ಸ್ಥಿತಿಗೆ ಬರುತ್ತದೆ. ಯೋಚಿಸಿ ಯೋಚಿಸಿ ಕಣ್ಣೀರು ಹೆಣ್ಣಾದರೆ, ಅದೇ ಗಂಡಾದರೆ ಸಾಮಾನ್ಯವಾಗಿ ದುಶ್ಚಟಕ್ಕೆ ದಾಸ. ಯಾಕೆ ಹೀಗೆ? ಮತ್ತಷ್ಟು ಓದು