ವಿಷಯದ ವಿವರಗಳಿಗೆ ದಾಟಿರಿ

Posts tagged ‘ಹೋರಾಟ’

8
ಜುಲೈ

ಭಾರತ ಮತ್ತೊಂದು ಪಾಕಿಸ್ತಾನವಾಗಬಾರದು ಎಂದರೆ…

– ರಾಕೇಶ್ ಶೆಟ್ಟಿ

ಜೂನ್ 28ರ ಮಧ್ಯಾಹ್ನ ರಾಜಸ್ಥಾನದ ಉದಯಪುರದಲ್ಲಿ ನಡೆದ ಭೀಕರ ಹತ್ಯೆಯ ಘಟನೆಯಿಂದ ಸಾಮಾನ್ಯ ಹಿಂದೂ ತಲ್ಲಣಗೊಂಡಿದ್ದಾನೆ, ಆಕ್ರೋಷಿತನಾಗಿದ್ದಾನೆ. ‘ನಂಬಿಸಿ ಕತ್ತು ಕೊಯ್ಯುವುದು’ ಎಂದರೇನು ಎನ್ನುವುದನ್ನು ಇಸ್ಲಾಮಿಕ್ ಉಗ್ರರು ಕಮಲೇಶ್ ತಿವಾರಿಯ ನಂತರ, ಉದಯಪುರದ ಬಡ ಟೈಲರ್ ಕನ್ನಯ್ಯ ಲಾಲ್ ಅವರ ಹತ್ಯೆಯ ಮೂಲಕ ತೋರಿಸಿಕೊಟ್ಟಿದ್ದಾರೆ. ಕಮಲೇಶ್ ತಿವಾರಿಯವರ ಹಂತಕರಾದ ಫರಿದುದ್ಡೀನ್ ಶೇಖ್, ಅಶ್ಫಾಖ್ ಶೇಖ್ ಅವರು ತಮ್ಮನ್ನು ಹಿಂದೂಗಳೆಂದು ಫೇಸ್ಬುಕ್ಕಿನಲ್ಲಿ ಪರಿಚಯ ಮಾಡಿ, ಸ್ನೇಹ ಸಂಪಾದಿಸಿ, ಕೇಸರಿ ಕುರ್ತಾ ಧರಿಸಿ, ಸ್ವೀಟ್ ಬಾಕ್ಸಿನೊಳಗೆ ರಿವಾಲ್ವರ್ ಹಾಗೂ ಚಾಕು ಹಿಡಿದು ಬಂದಿದ್ದರು. ಕಮಲೇಶ್ ತಿವಾರಿಯವರ ಸಹಾಯಕನನ್ನು ಸಿಗರೇಟ್ ತರುವಂತೆ ಕಳುಹಿಸಿ, ಏಕಾಂಗಿಯಾಗಿದ್ದ ಕಮಲೇಶ್ ತಿವಾರಿಯರ ಮೇಲೆ ಎರಗಿ ಕತ್ತು ಸೀಳಿ, ಗುಂಡು ಹಾರಿಸಿ ಕೊಲ್ಲಲಾಗಿತ್ತು. ಮರಣೋತ್ತರ ವರದಿಯ ಪ್ರಕಾರ 15 ಬಾರಿ ಚುಚ್ಚಿ ಕೊಲ್ಲಲಾಗಿತ್ತು. 1926ರಲ್ಲಿ ಅಬ್ದುಲ್ ರಶೀದ್ ಕೂಡ ಹೀಗೆಯೇ ಸಂಭಾವಿತನಂತೆ ಬಂದು, ಸಹಾಯಕನನ್ನು ನೀರು ತರಲು ಕಳುಹಿಸಿ ಸ್ವಾಮಿ ಶ್ರದ್ದಾನಂದರನ್ನು ಗುಂಡಿಕ್ಕಿ ಕೊಂದಿದ್ದ.

ಕನ್ನಯ್ಯ ಲಾಲ್ ಅವರ ಹತ್ಯೆ ನಡೆದಿದ್ದೂ ಹೀಗೆಯೇ. ಬಟ್ಟೆ ಹೊಲಿಸುವವರ ಸೋಗಿನಲ್ಲಿ ಬಂದ ಮೊಹಮ್ಮದ್ ಗೌಸ್ , ಮೊಹಮ್ಮದ್ ರಿಯಾಜ್ , ಅಳತೆ ತೆಗೆದುಕೊಳ್ಳುವಾಗ ಕನ್ನಯ್ಯಲಾಲ್ ಅವರ ಕತ್ತು ಕೊಯ್ದರು. 21 ಬಾರಿ ಚುಚ್ಚಿ ಕೊಲ್ಲಲಾಗಿದೆ ಎಂದಿದೆ ಮರಣೋತ್ತರ ವರದಿ. ಬಹುಶಃ ಹಂತಕರು ವಿಡಿಯೋವನ್ನು ವೈರಲ್ ಮಾಡದೇ ಇದ್ದಿದ್ದರೆ, ರಾಜಸ್ಥಾನದ ಕಾಂಗ್ರೆಸ್ ಸರ್ಕಾರ ಇದಕ್ಕೊಂದು ಬೇರೆ ಕತೆ ಕಟ್ಟಿ ಮುಗಿಸುತ್ತಿತ್ತು. ನಂತರ ತಿಳಿದು ಬಂದ ವಿಷಯದ ಪ್ರಕಾರ, ಕನ್ನಯ್ಯ ಲಾಲ್ ಅವರು ಕೇವಲ ನೂಪುರ್ ಶರ್ಮ ಅವರನ್ನು ಬೆಂಬಲಿಸಿದ ಕಾರಣಕ್ಕೆ ಬಂಧನವಾಗಿ, ಬಿಡುಗಡೆಯಾಗಿ ಬಂದ ನಂತರ, ತನ್ನ ಪ್ರಾಣಕ್ಕೆ ಅಪಾಯವಿದೆ ಎಂದು ಪೋಲಿಸ್ ರಕ್ಷಣೆ ಕೋರಿದ್ದರು. ಒಬ್ಬ ಬಡವನ ಮನವಿಯನ್ನು ಪೋಲಿಸರು ಹೇಗೆ ತಾತ್ಸಾರದಿಂದ ಸ್ವೀಕರಿಸುತ್ತಾರೋ, ಹಾಗೆಯೇ ಸ್ವೀಕರಿಸಿ ಕಸದ ಬುಟ್ಟಿಯ ಜಾಗ ತೋರಿಸಿದರು. ಅಂದ ಹಾಗೆ, ಕನ್ನಯ್ಯ ಲಾಲ್ ಅವರ ಕುರಿತ ಮಾಹಿತಿಯನ್ನು ಹಂಚಿಕೊಂಡವನು ಯಾರೋ ಅನಾಮಿಕನಲ್ಲ. ಕನ್ನಯ್ಯ ಅವರ ಪಕ್ಕದ ಮನೆಯ ನಜೀಂ. ನಜೀಮನಿಗೆ ನೆರೆ ಮನೆಯವನ ಸ್ನೇಹಕ್ಕಿಂತ ಆತನ ಇಸ್ಲಾಂ ಮುಖ್ಯವಾಗಿತ್ತು. ನಂಬಿ ಕೆಟ್ಟವನು ಕನ್ನಯ್ಯ. ಕಾಶ್ಮೀರದ ಪಂಡಿತರ ಹತ್ಯೆಯಲ್ಲೂ ನೆರೆಮನೆಯವರೇ ಹೇಗೆ ಸಹಾಯ ಮಾಡಿದ್ದರು ಎನ್ನುವುದನ್ನು, ಕಾಶ್ಮೀರ್ ಫೈಲ್ಸ್ ಸಿನಿಮಾದಲ್ಲಿ ಇಡೀ ಭಾರತವೇ ನೋಡಿದೆ. ಜೊತೆಗಿದ್ದವರಿಗೆ ಮೂಹೂರ್ತ ಇಡುವ ಧೂರ್ತ ಮನಸ್ಥಿತಿಯನ್ನು ಇವರು ಕಲಿಯುವುದು ಎಲ್ಲಿಂದ?

ಮತ್ತಷ್ಟು ಓದು »
3
ಆಕ್ಟೋ

ಮಾದರೀ ಹೋರಾಟಗಾರರ ಮುಂದಾಳತ್ವದಲ್ಲಿ ಪ್ರಾಯೋಜಿತ ಪ್ರತಿಭಟನೆಗಳು

– ಎಸ್. ಎನ್. ಭಾಸ್ಕರ್‍

dr-br-ambedkarದಲಿತಪರ ಹೋರಾಟ, ಚಳುವಳಿಗಳಲ್ಲಿ ತನ್ನನ್ನು ತೊಡಗಿಸಿಕೊಂಡಿರುವ ದಲಿತ ಸಂಬಂಧಿ ಸಂಘಟನೆಯ ಮುಖಂಡರೊಬ್ಬರು ತಮ್ಮ ಚಳುವಳಿ, ಧ್ಯೇಯ ಗಳ ಬಗ್ಗೆ ಮಾತನಾಡುತ್ತಾ, ಈ ಹಿಂದೆ ಸಂವಿಧಾನ ಶಿಲ್ಪಿ ಡಾ. ಬಿ.ಆರ್‍. ಅಂಬೇಡ್ಕರ್‍ ರವರು ಹೇಳಿದ್ದ ಈ ಮಾತುಗಳನ್ನು ಉಲ್ಲೇಖಿಸುತ್ತಾರೆ.

“ಹಿಂದೂ ಧರ್ಮವೆಂಬುದು ಬಹು ಮಹಡಿಗಳನ್ನು ಹೊಂದಿರುವ ಒಂದು ಕಟ್ಟಡವಿರುವ ಹಾಗೆ. ವಿಪರ್ಯಾಸವೆಂದರೆ ಇಲ್ಲಿ ಒಂದು ಮಹಡಿಯಿಂದ ಮತ್ತೊಂದು ಮಹಡಿಗೆ ಹೋಗಲು ಯಾವುದೇ ಮೆಟ್ಟಿಲುಗಳಿಲ್ಲ. ನೆಲಮಹಡಿಯಲ್ಲಿರುವವನು ಕೊನೆಯ ತನಕ ಅಲ್ಲೇ ಇರಬೇಕಾಗುತ್ತದೆ. ಮೇಲ್ಮಹಡಿಯಲ್ಲಿರುವವನು ಕೊನೆಯವರೆಗೂ ಮೇಲ್ಮಟ್ಟದಲ್ಲಿಯೇ ಇರುವಂತೆ ನೋಡಿಕೊಳ್ಳಲಾಗುತ್ತದೆ” ಮತ್ತಷ್ಟು ಓದು »

14
ಸೆಪ್ಟೆಂ

ಪ್ರತಿಭಟನೆಯನ್ನೂ ಅಪರಾಧವನ್ನೂ ಏಕೆ ಸಮೀಕರಿಸುತ್ತೀರಿ ಮಾಧ್ಯಮಗಳೇ?

– ವಿನಾಯಕ ಹಂಪಿಹೊಳಿ

 imagesರಾಜ್ಯಾದ್ಯಂತ ಪ್ರತಿಭಟನೆಗಳನ್ನು ವರದಿ ಮಾಡುವ ಸಂದರ್ಭದಲ್ಲಿ ನಮ್ಮ ಮಾಧ್ಯಮಗಳುವಾಹನಗಳಿಗೆ ಬೆಂಕಿ ಹಚ್ಚುವದರ ಮೂಲಕ ಕಲ್ಲು ತೂರುವ್ರದರ ಮೂಲಕ ಪ್ರತಿಭಟನಾಕಾರರು ತಮ್ಮ ಆಕ್ರೋಶ ವ್ಯಕ್ತಪಡಿಸಿದರುಎಂಬ ಮಾತನ್ನು ಬಳಸಿದ್ದೇ ತಪ್ಪು ಎಂಬುದು ನನ್ನ ಅನಿಸಿಕೆ. ಏಕೆಂದರೆ ಇಂತಹ ಅನೈತಿಕ ಕಾರ್ಯಗಳನ್ನು, `ಆಕ್ರೋಶದ ಸಹಜ ಅಭಿವ್ಯಕ್ತಿ’ ಎಂಬಂತೆ ಬಿಂಬಿಸಿರುವದೇ ಕ್ರಿಯೆಯನ್ನು ಸಮರ್ಥಿಸಿದಂತೆ. ಉದಾಹರಣೆಗೆಚಾರ್ಲಿ ಹೆಬ್ಡೋ ಕಚೇರಿಯ ಮೇಲೆ ಬಾಂಬು ಹಾಕುವದರ ಮೂಲಕ ಭಯೋತ್ಪಾದಕರು ತಮ್ಮ ಆಕ್ರೋಶ ವ್ಯಕ್ತಪಡಿಸಿದರುಎಂದು ಸುದ್ದಿ ಬಿತ್ತರಿಸಿದರೆ ಹೇಗಿರುತ್ತದೆ? ಭಯೋತ್ಪಾದಕರಂತೆ ಜೀವ ತೆಗೆದಿಲ್ಲ ಎನ್ನುವದನ್ನು ಒಪ್ಪಬಹುದು. ಆದರೆ ಸಾಲಸೋಲ ಮಾಡಿ ಪಡೆದ ಲಾರಿಗಳೇ, ಜೀವನಾಧಾರವನ್ನಾಗಿ ಮಾಡಿಕೊಂಡಿರುವ ಲಾರಿ ಡ್ರೈವರು ಕ್ಲೀನರುಗಳಿಗೆ, ಅವರ ಸಂಸಾರಕ್ಕೆ ಇದ್ದ ಒಂದೇ ಜೀವನೋಪಾಯವನ್ನೇ, ಕಸಿದುಕೊಳ್ಳುವದು ಸರಿಯೇ? ಜೀವ ತೆಗೆಯುವದಕ್ಕಿಂತ ಜೀವನ ತೆಗೆಯುವದು ಕಡಿಮೆ ಅಪರಾಧವಾಯಿತೇ?

ಮತ್ತಷ್ಟು ಓದು »

9
ಜುಲೈ

ವಿದ್ಯಾರ್ಥಿ ರಾಜಕೀಯ ಕ್ರಿಯಾಶೀಲತೆ ಮುಂದಿರುವ ಸವಾಲುಗಳು

ಬಿ.ಜಿ. ಕುಲಕರ್ಣಿ
ಸಹಾಯಕ ಪ್ರಾಧ್ಯಾಪಕರು
ರಾಜ್ಯಶಾಸ್ತ್ರ ವಿಭಾಗ
ಬಸವಪ್ರಭು ಕೋರೆ ಮಹಾವಿದ್ಯಾಲಯ
ಚಿಕ್ಕೋಡಿ. ಜಿಲ್ಲಾ: ಬೆಳಗಾವಿ

poverವಿದ್ಯಾರ್ಥಿ ರಾಜಕೀಯ ಕ್ರೀಯಾಶಿಲತೆ ಕುರಿತು ಚರ್ಚಿಸುವಾಗ ಉದ್ಭವವಾಗುವ ಮೊದಲ ಪ್ರಶ್ನೆಯೆಂದರೆ ವಿದ್ಯಾರ್ಥಿಗಳು ರಾಜಕೀಯದಲ್ಲಿ ಭಾಗವಹಿಸಬೇಕೆ ಅಥವಾ ಬೇಡವೇ ? ಈ ವಿಷಯಕ್ಕೆ ಸಂಬಂಧಿಸಿದಂತೆ ಎರಡು ಪಂಥಗಳಿವೆ. ಮೊದಲನೆಯ ಪಂಥದ ಅಭಿಪ್ರಾಯವೆನೆಂದರೆ ವಿದ್ಯಾರ್ಥಿಗಳ ಮೊದಲ ಆದ್ಯತೆ ಅಧ್ಯಯನ. ಆದ್ದರಿಂದ ವಿದ್ಯಾರ್ಥಿಗಳು ಅಧ್ಯಯನದಲ್ಲಿ ನಿರತರಾಗಬೇಕು. ಆ ಮೂಲಕ ತಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದು ವಾದಿಸುತ್ತಾರೆ. ಎರಡನೆ ಪಂಥವು ವಿದ್ಯಾರ್ಥಿಗಳೂ ಜನ ಸಮೂಹದ ಭಾಗವಾಗಿರುವುದರಿಂದ, ರಾಜಕೀಯ ಸಮಾಜ ಬಿಟ್ಟು ಇಲ್ಲವಾದ್ದರಿಂದ, ರಾಜಕೀಯ ನಿರ್ಧಾರಗಳು ವಿದ್ಯಾರ್ಥಿಗಳ ಮೇಲೂ ಪ್ರಭಾವ ಬೀರುವುದರಿಂದ ವಿದ್ಯಾರ್ಥಿಗಳು ರಾಜಕೀಯದಲ್ಲಿ ಭಾಗವಹಿಸಬೇಕು ಎಂಬ ವಾದ ಮಂಡಿಸುತ್ತಾರೆ. ವಿದ್ಯಾರ್ಥಿಗಳು ರಾಜಕೀಯದಲ್ಲಿ ಏಕೆ ಭಾಗವಹಿಸಬೇಕು ಎಂಬ ವಾದಕ್ಕೆ ಪ್ರಬಲ ಕಾರಣಗಳನ್ನು ಇಲ್ಲಿ ಚರ್ಚಿಸಲಾಗಿದೆ. ಮತ್ತಷ್ಟು ಓದು »

13
ಆಕ್ಟೋ

ಕೈಲಾಶ್ ಸತ್ಯಾರ್ಥಿ : ಮಾನವತೆಯ ಕೈಲಾಸ ಪರ್ವತ

– ರಾಘವೇಂದ್ರ ಅಡಿಗ

ಕೈಲಾಶ್ ಸತ್ಯಾರ್ಥಿಭಾರತದ ಮಧ್ಯ ಪ್ರದೇಶದ ವಿದಿಶಾ ನಗರದಲ್ಲಿ ಹುಟ್ಟಿ “ಬಚಪನ್ ಬಚಾವೋ” ಆಂದೋಳನದ ಮೂಲಕ ಸಾವಿರಾರು ಮಕ್ಕಳನ್ನು ಜೀತ ವಿಮುಕ್ತಿಗೊಳಿಸಿದ ವ್ಯಕ್ತಿ 60 ರ ಪ್ರಾಯದ ಕೈಲಾಶ್ ಸತ್ಯಾರ್ಥಿಯವರ ಕುರಿತಾಗಿ ಮೊನ್ನೆ ನೋಬೆಲ್ ಶಾಂತಿ ಪಾರಿತೋಶಕ ಘೋಷಣೆ ಆಗುವವರೆಗೂ ನಮಗೆ ಯಾರೊಬ್ಬರಿಗೂ ಅವರ ಬಗೆಗೆ ತಿಳಿದಿರಲಿಲ್ಲ ಎನ್ನುವುದು ನಮ್ಮ ದೇಶದ ಸಾಧಕನೋರ್ವನ ಬಗೆಗೆ ನಮಗಿರುವ ಉದಾಸೀನತೆಗೆ ಸಾಕ್ಷಿಯಲ್ಲವೆ? ಭಾರತದ ಸಾಮಾನ್ಯ ಜನರಿಗಾಗಲೀ, ಭಾರತದ ಘನ ಸರ್ಕಾರಗಳಿಗಾಗಲೀ, ಸಾವಿರಾರು ಸಂಖ್ಯೆಯಲ್ಲಿರುವ ಸಂಘ ಸಂಸ್ಥೆಗಳಲ್ಲಿ ಯಾರೊಬ್ಬರಿಗೂ ಇವರ ಬಗೆಗೆ, ಇವರ ಸಾಮಾಜಿಕ ಕಳಕಳಿಯ ಕಾರ್ಯಗಳ ಬಗೆಗೆ ಯಾವೊಂದು ವಿಚಾರವೂ ತಿಳಿದಿರಲಿಲ್ಲ! “ಡರ್ಟಿ ಪಿಕ್ಚರ್” ನಂತಹಾ ಚಲನಚಿತ್ರಗಳಲ್ಲಿ ನಟಿಸಿದ ನಟಿಮಣಿಯರಿಗೆಲ್ಲ ಭಾರತದ ಉನ್ನತ ನಾಗರಿಕ ಗೌರವ “ಪದ್ಮಶ್ರೀ” ಪ್ಯ್ರಸ್ಕಾರವು ಸಂದಿರುವಾಗ ನಮ್ಮ ನಡುವೆಯೇ ಇದ್ದು ಸಾವಿರಾರು ಬಡ ಮಕ್ಕಳ ಉದ್ದಾರಕ್ಕಾಗಿ ಟೊಂಕಕಟ್ಟಿದ ಕೈಲಾಶ್ ರಂತಹವರನ್ನು ನಮ್ಮ ಸರ್ಕಾರಗಳು ಗುರುತಿಸದೇ ಹೋದುದು ತೀರಾ ಖೇದಕರ ಸಂಗತಿಯಲ್ಲವೆ? ಇನ್ನಾದರೂ ನಮ್ಮ ದೇಶದ ಸರ್ಕಾರಗಳು, ಸಂಘ ಸಂಸ್ಥೆಗಳು ಗುರುತಿಸಿ ಗೌರವಿಸಬೇಕಿದೆ. ಹಾಗಾದಾಗ ಮಾತ್ರವೇ ನಮ್ಮ ಸಮಾಜಕ್ಕೂ, ಜನತೆಗೂ ಮಾನವತೆಯ ಮೌಲ್ಯಗಳ ಅರಿವಿದೆ ಎಂದು ಇತರರಿಗೆ ತಿಳಿಸಿದಂತಾಗುತ್ತದೆ.

ಆ ಹುಡುಗನು ತಾನು ನಿತ್ಯವೂ ಶಾಲೆಗೆ ನಡೆದು ಹೋಗುತ್ತಿದ್ದಾಗ ತನ್ನದೇ ಓರಗೆಯ ಹುಡುಗನೋರ್ವನು ತನ್ನ ತಂದೆಯೊಡನೆ ಕುಳಿತು ಬೂಟು ರಿಪೇರಿ ಮಡುತ್ತಿದ್ದುದನ್ನು ಕಾಣುತ್ತಿದ್ದನು. ಅದಾಗೆಲ್ಲಾ ಈ ಹುಡುಗನ ಮನಸ್ಸಿನಲ್ಲಿ ‘ನಾನು ಉತ್ಸಾಹದಿಂದಲೂ ಸಂತೋಷದಿಂದಲೂ ಶಾಲೆಗೆ ಹೋಗುತ್ತಿದ್ದರೆ ಆ ಹುಡುಗ ಮಾತ್ರ ತನ್ನ ತಂದೆಯೊಂದಿಗೆ ಕುಳಿತು ಬೂಟು ಹೊಲಿಯುತ್ತಿದ್ದಾನೆ, ಅದೇಕೆ ಹೀಗೆ?’ಎನ್ನುವ ಆಲೋಚನೆ ಹುಟ್ಟುತ್ತಿತ್ತು.

ಅದೊಮ್ಮೆ ಅದೇ ಪ್ರಶ್ನೆಯನ್ನು ತನ್ನ ಶಾಲಾ ಉಪಾದ್ಯಾಯರ ಬಳಿ ಕೇಳಲಾಗಿ “ ಅವರ ಬಳಿ ಹಣವಿಲ್ಲ, ಅವರು ಬಡವರು. ವಿದ್ಯಾಭ್ಯಾಸ ಪಡೆದುಕೊಳ್ಳಲಿಕ್ಕೆ ಸಾಕಷ್ಟು ಧನಬಲವಿಲ್ಲದವರು.” ಎನ್ನುವ ಉತ್ತರ ದೊರಕಿತು.

ಮತ್ತಷ್ಟು ಓದು »

2
ಏಪ್ರಿಲ್

ಚಿದಂಬರಂ ಪಿಳ್ಳೆ

– ನವೀನ್ ನಾಯಕ್

ಚಿದಂಬರಂ ಪಿಳ್ಳೆಭರತಖಂಡದ ಒಂದೊಂದೆ ಭಾಗಗಳನ್ನು ತಮ್ಮ ಕುತಂತ್ರದಿಂದ ಕಬಳಿಸಿದ ಬ್ರಿಟೀಶರು ಎಲ್ಲೆಲ್ಲೂ ತಮ್ಮ ಧಾರ್ಷ್ಟ್ಯವನ್ನು ತೋರತೊಡಗಿದರು. ನಮ್ಮ ಸಂಸ್ಕೃತಿಯನ್ನು ಒಂದೆಡೆ ಹೀಯಾಳಿಸುತ್ತ ಇನ್ನೊಂದೆಡೆ ಮತಾಂತರಿಸುತ್ತ ತಮ್ಮ ಸಾಮ್ರಾಜ್ಯವನ್ನು ಶಾಶ್ವತಗೊಳಿಸಲು ಸರ್ವಪ್ರಯತ್ನವನ್ನು ಮಾಡುತ್ತಲೇ ಇದ್ದರು. ತೆರಿಗೆ ಪದ್ದತಿಯ ವಿರೂಪದಿಂದ ಲಕ್ಷಾಂತರ ನೇಕಾರರು , ಕಾರ್ಮಿಕರು ಬೀದಿಗೆ ಬಿದ್ದರು.ದೇಶಿಯ ಮಾರುಕಟ್ಟೆಯನ್ನು ತಮ್ಮ ಕೈವಶ ಮಾಡಿಕೊಂಡು ಅನಾವಶ್ಯಕ ತೆರಿಗೆಗಳನ್ನು ಹೇರಿ ಸಾಮಾನ್ಯ ಜನರು ತತ್ತರಿಸುವಂತೆ ಮಾಡತೊಡಗಿದರು. ಸಮುದ್ರ ಪಯಣಗಳಿಗೂ ಇದರ ಬಿಸಿ ತಟ್ಟಿತ್ತು. ಆ ದಿನಗಳಲ್ಲಿ ಕೊಲೊಂಬೊ ಹಾಗು ತೂತ್ತುಕುಡಿಯ ನಡುವಿನ ಹಡಗು ಪಯಣದ ಸಂಪೂರ್ಣ ಅಧಿಕಾರ ಬ್ರಿಟೀಶರ ಕೈಯಲ್ಲಿತ್ತು. ಬ್ರಿಟೀಶ್ ಇಂಡಿಯಾ ಸ್ಟೀಮ್ ನ್ಯಾವಿಗೇಶನ್ ಕಂಪನಿ ಎಂಬ ಈ ಸಂಸ್ಥೆ ತಮಗಿಷ್ಟ ಬಂದಂತೆ ಪ್ರಯಾಣ ವೆಚ್ಚವನ್ನು ಏರಿಸತೊಡಗಿದರು. ಇವರ ದುರಹಂಕಾರಕ್ಕೆ ಸೆಡ್ಡು ಹೊಡೆಯಲು ಲೆಕ್ಕಚಾರ ಹಾಕಿ ಕುಳಿತವರೇ ಚಿದಂಬರಂ ಪಿಳ್ಳೆ.

ತಮಿಳುನಾಡಿನ ಓಟ್ಟಪ್ಪಿದಪುರಂನಲ್ಲಿ ಉಳಗನಾಥಂ ಮತ್ತು ಪರಮಾಯಿ ಅಮ್ಮಾಳ್ ದಂಪತಿಗೆ ಸೆಪ್ಟಂಬರ್ 5 1827 ರಲ್ಲಿ  ಚಿದಂಬರಂ ಪಿಳ್ಳೆಯವರು ಜನಿಸಿದರು. ತನ್ನ ಹದಿಮೂರನೇ ವಯಸ್ಸಿನವರೆಗೆ ಜನ್ಮಸ್ಥಳದಲ್ಲೇ ಕಳೆದ ಚಿದಂಬರಂರವರು ಮುಂದಿನ ವಿದ್ಯಾಭ್ಯಾಸಕ್ಕಾಗಿ ತೂತ್ತುಕುಡಿ ಎಂಬಲ್ಲಿಗೆ ಬಂದರು. ತಮ್ಮ ವಿದ್ಯಾಭ್ಯಾಸ ಮಾಡುತ್ತ ಜೊತೆಗೆ ಇಂಗ್ಲಿಷ್ ಭಾಷೆಯಲ್ಲಿ ತಮ್ಮ ಪ್ರಭುತ್ವ ಸ್ಥಾಪಿಸಿಕೊಂಡರು. ತದನಂತರ ಕೆಲಕಾಲ ತಾಲ್ಲೂಕು ಕಛೇರಿಯಲ್ಲಿ ಗುಮಾಸ್ತನಾಗಿ ದುಡಿದರು. ಈ ಕೆಲಸ ಚಿದಂಬರಂರವರಿಗೆ ತೃಪ್ತಿಯನ್ನು ತಂದು ಕೊಡುವಲ್ಲಿ ವಿಫಲವಾಯಿತು. ಚಿದಂಬರಂರವರ ವಂಶದ ಹಿರಿತಲೆಗಳು ವಕೀಲಿ ವೃತ್ತಿಯಲ್ಲಿ ನಿಷ್ಣಾತರಾಗಿದ್ದರು.  ಇದೇ ಪ್ರಭಾವವನ್ನು ಬಳಸಿಕೊಂಡು ಅನ್ಯಾಯವಾಗಿ ಪೋಲಿಸ್ ಇಲಾಕೆಯ ಕಪಿಮುಷ್ಟಿಯಲ್ಲಿ ಸಿಲುಕಿದ ನಿರಪರಾಧಿಗಳ ಪರವಾಗಿ ವಾದಿಸಲು ವಕೀಲಿ ಅಭ್ಯಸಿಸಿ ತಿರುಚ್ಚಿಯ ಸಬ್ ಮ್ಯಾಜಿಸ್ಟ್ರೇಟ್ ಕೋರ್ಟ್ ನಲ್ಲಿ ವಕೀಲಿ ವೃತ್ತಿಯನ್ನು ಆರಂಭಿಸಿದರು. ಎಷ್ಟೋ ಬಾರಿ ನಿರಪರಾಧಿಗಳ ಪರವಾಗಿ ನಿಃಶುಲ್ಕವಾಗಿ ಮೊಕದ್ದಮೆ ನಡೆಸಿಕೊಟ್ಟು ಜನರ ಪ್ರೀತಿ ವಿಶ್ವಾಸವನ್ನು ಗಳಿಸಿದರು. ಚಿದಂಬರಂರವರ ಈ ಕೆಲಸದಿಂದ ಬ್ರಿಟೀಶರು,ಪೋಲಿಸ್ ಅಧಿಕಾರಿಗಳ ದ್ವೇಷಕ್ಕೆ ಒಳಗಾಗತೊಡಗಿದರು.

ಆಧ್ಯಾತ್ಮ ಮತ್ತು ಶಿವನ ಕುರಿತು ಅಪಾರ ಶ್ರದ್ದೆಯನ್ನು ಚಿದಂಬರಂ ಬೆಳೆಸಿಕೊಂಡಿದ್ದರು.ತಮಿಳು ಸಾಹಿತ್ಯವನ್ನು ಓದಿ ಅದ್ಭುತ ಜ್ಞಾನವನ್ನು ಮೈಗೂಡಿಸಿಕೊಂಡಿದ್ದರಲ್ಲದೇ ಯೋಗ್ಯ ಗುರುಗಳ ಮತ್ತು ಸಾಧುಗಳ ಸಂಪರ್ಕವನ್ನು ಸಹ ಬೆಳೆಸಿಕೊಂಡಿದ್ದರು. ಜೊತೆಗೆ ರಾಷ್ಟ್ರೀಯ ವಿಚಾರಗಳಲ್ಲಿ ಅತೀವ ಆಸಕ್ತಿಯನ್ನು ಹೊಂದಿದ್ದರು. 1898 ಡಿಸೆಂಬರ್  ಸಮಯದಲ್ಲಿ ಮದ್ರಾಸಿನಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ ಸ್ವಾಗತ ಸಮಿತಿಯ ಕಾರ್ಯದರ್ಶಿ ಮತ್ತು ಕೋಶಾಧಿಕಾರಿಯ ಹೊಣೆಯನ್ನು ಹೊತ್ತಿಕೊಂಡಿದ್ದರು. ಆ ಮಹಾಧಿವೇಶನದಲ್ಲಿ ಭಾಗವಹಿಸಿದ ಒಟ್ಟು 614 ಪ್ರತಿನಿಧಿಗಳಲ್ಲಿ 519ಜನ ತಮಿಳುನಾಡಿನಿಂದಲೇ ಬಂದಿದ್ದರು. ಅಷ್ಟು ಜನರನ್ನು ಅಧಿವೇಶನಕ್ಕಾಗಿ ಕಲೆಹಾಕಿದ್ದ ಶ್ರೇಯಸ್ಸು ಚಿದಂಬರಂರವರದೇ !
ಮತ್ತಷ್ಟು ಓದು »

8
ಜನ

ತುಳುವಿಗೆ ೮ನೇ ಪರಿಚ್ಛೇದದ ಮಾನ್ಯತೆ ತುಳುವರ “ಹಕ್ಕು” ಯಾರ ಭಿಕ್ಷೆಯಲ್ಲ…!

– ರಾಕೇಶ್ ಶೆಟ್ಟಿ

Tulu - 8th Scheduleಬೆಂಗಳೂರಿನ ಸಮಸ್ತ ತುಳು ಸಂಘಟನೆಗಳೂ ಒಗ್ಗೂಡಿ,ತುಳುವನ್ನು ಸಂವಿಧಾನದ ೮ನೇ ಪರಿಚ್ಛೇದಕ್ಕೆ ಸೇರಿಸುವಂತೆ ಮತ್ತು ಇತರೆ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕಳೆದ ವರ್ಷದ ಸೆಪ್ಟಂಬರ್ ೨೮ ರ ಶನಿವಾರ ಕಳೆದ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಒಂದು ದಿನದ ’ಹಕ್ಕೊತ್ತಾಯ – ಪ್ರತಿಭಟನೆ’ಯನ್ನು ಮಾಡಿದ್ದವು.ಅಂದಿನ ಪ್ರತಿಭಟನೆಯ ನೇತೃತ್ವ ವಹಿಸಿದವರು ಹಿರಿಯ ಸಾಹಿತಿ ಡಾ|| ಡಿ.ಕೆ ಚೌಟ ಅವರು. ಚೌಟ ಅವರ ಭಾಷಣದಲ್ಲಿ ಇಷ್ಟು ವರ್ಷಗಳ ಕಾಯುವಿಕೆಯನ್ನು ಕಡೆಗಣಿಸಿದ ರಾಜಕಾರಣಿಗಳು,ವ್ಯವಸ್ಥೆಗಳ ಮೇಲೆ ಸಾತ್ವಿಕ ಕೋಪ ಎದ್ದು ಕಾಣುತಿತ್ತು.ಹಾಗೆಯೇ ತುಳುವಿಗೆ ಇರುವ ಅಪಾಯ, ನಮ್ಮ ಭೂಮಿ ಮಲಯಾಳಿಗಳ ಪಾಲಾಗುತ್ತಿರುವ ಬಗೆಗಿನ ಆತಂಕವಿತ್ತು.ಆ ದಿನ ಬಹಳಷ್ಟು ಜನ ಮಾತನಾಡಿದರು.ಆದರೆ ನಿಜವಾಗಿಯೂ ತುಳುವರ ಅಸ್ಮಿತೆಯನ್ನು ಬಡಿದ್ದೆಬ್ಬಿಸುವಂತ ಮಾತನಾಡಿದ್ದು ಚೌಟ ಅವರೊಬ್ಬರೇ.ಅವರ ಮಾತು ಮತ್ತದಕ್ಕೆ ವ್ಯಕ್ತವಾದ ಸ್ಪಂದನೆ ಕಂಡಾಗ ಏನಾದರೂ ಒಳ್ಳೆಯ ಬೆಳವಣಿಗೆಗಳು ಆಗಬಹುದು ಅಂದುಕೊಳ್ಳುತಿದ್ದೆ.ಅಷ್ಟರಲ್ಲೇ, ರಾಜಕಾರಣಿಗಳ ಆಗಮನವಾಯಿತು…!

ಒಬ್ಬರು ಚಿಕ್ಕಮಗಳೂರಿನ ಸಂಸದ ಜಯಪ್ರಕಾಶ್ ಹೆಗ್ಡೆ,ಮತ್ತೊಬ್ಬರು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ಅನಂತ ಕುಮಾರ್.ಇಂತ ಪ್ರತಿಭಟನಾ ಸಭೆಗಳಿಗೆ ರಾಜಕಾರಣಿಗಳನ್ನೇಕೆ ಕರೆಯುತ್ತಾರೆ ಅನ್ನುವುದು ನನಗೆ ಅರ್ಥವಾಗಲಿಲ್ಲ!

ಅದಕ್ಕೇ ಸರಿಯಾಗಿಯೇ ಈ ಇಬ್ಬರ ಮಾತುಗಳು ಸಾಗಿತ್ತು.ಪ್ರತಿಭಟನೆಗೆಂದು ಬಂದವರನ್ನು ತಮ್ಮ ಆಶ್ವಾಸನೆಗಳ ಮೂಲಕ,ಹಾಸ್ಯ ಚಟಾಕಿಗಳ ಮೂಲಕ ಸಮಾಧಾನಪಡಿಸುವ ಎಂದಿನ ರಾಜಕಾರಣಿಗಳ ಓಲೈಕೆಯ ಶೈಲಿಯ ಭಾಷಣ.೮ನೇ ಪರಿಚ್ಚೇದ ಬಿಟ್ಟು ಕೋರಿರೊಟ್ಟಿ,ನೀರ್ ದೋಸೆ ಇತ್ಯಾದಿ ಇತ್ಯಾದಿ.ಅನಂತ ಕುಮಾರ್ ಅವರು ನವೆಂಬರ್ ತಿಂಗಳಲ್ಲಿ ನೀವು ಒಂದು ತುಳು ನಿಯೋಗವನ್ನು ಕರೆದುಕೊಂಡು ದೆಹಲಿಗೆ ಬನ್ನಿ ಆ ಸಮಯಕ್ಕೆ ಶುರುವಾಗುವ ಸಂಸತ್ತಿನ ಅಧಿವೇಶನದಲ್ಲಿ  ತುಳುವನ್ನು ಸಂವಿಧಾನದ ೮ನೇ ಪರಿಚ್ಛೇದಕ್ಕೆ ಸೇರಿಸುವ ಬಗ್ಗೆ ಮಾತನಾಡುವ ಅಂತ ಹೇಳಿ ಎಲ್ಲರ ಚಪ್ಪಾಳೆಯನ್ನು ಗಿಟ್ಟಿಸಿದ್ದರು.ಅನಂತ ಕುಮಾರ್ ಅವರ ಮಾತನ್ನು ಹೆಗ್ಡೆಯವರು ಅನುಮೋದಿಸಿದ್ದರು.ವೇದಿಕೆಯಲ್ಲಿದ್ದವರೂ ಅದಕ್ಕೇ ಸಮ್ಮತಿಸುವುದರೊಂದಿಗೆ ಪ್ರತಿಭಟನಾ ಸಭೆ ’ಶಾಂತ’ವಾಯಿತು.

ಮತ್ತಷ್ಟು ಓದು »

21
ಆಕ್ಟೋ

ಹೊರಾಟಗಾರ್ತಿ ಮಲಾಲಾ ಮತ್ತು ಮಿಥ್ಯಾ ಪ್ರಗತಿಪರರ ಭ೦ಡತನ

– ಗುರುರಾಜ್ ಕೊಡ್ಕಣಿ,ಯಲ್ಲಾಪುರ

Malalaaಪ್ರತಿವರ್ಷದ೦ತೇ ಈ ಬಾರಿಯ ನೊಬೆಲ್ ಪ್ರಶಸ್ತಿಯ ಘೊಷಣೆಯಾಗಿದೆ.ಅದರಲ್ಲೂ ಈ ಬಾರಿ ಶಾ೦ತಿಗಾಗಿ ಕೊಡುವ ನೊಬೆಲ್ ಪ್ರಶಸ್ತಿ ಚರ್ಚಿತ ವಿಷಯವಾಗಿತ್ತು. .ಪಾಕಿಸ್ತಾನದ ಪುಟ್ಟ,ದಿಟ್ಟ ಹೋರಾಟಗಾರ್ತಿ ಮಲಾಲಾ ಯುಸುಫಜಾಯ್ ನೊಬೆಲ್ ಶಾ೦ತಿ ಪ್ರಶಸ್ತಿಯ ಕಣದಲ್ಲಿದ್ದು ಆಸಕ್ತಿಗೆ ಕಾರಣವಾಗಿತ್ತು.ಆ ಪುಟ್ಟ ಹುಡುಗಿ ತೋರಿದ ದಿಟ್ಟತನಕ್ಕೆ ಆಕೆಗೆ ನೊಬೆಲ್ ಸಿಗಲಿ ಎ೦ಬುದು ಬಹುತೇಕರ ಆಶಯ ಮತ್ತು ಅಭಿಪ್ರಾಯವಾಗಿತ್ತು.ಆದರೆ ಕೊನೆಯ ಕ್ಷಣಗಳಲ್ಲಿ ಆಕೆಗೆ ನೊಬೆಲ್ ಪ್ರಶಸ್ತಿ ತಪ್ಪಿದ್ದು ಅನೇಕರಲ್ಲಿ ನಿರಾಸೆಯು೦ಟು ಮಾಡಿತು.ಪರಮ ಕ೦ಟಕ ರಾಷ್ಟ್ರ ಪಾಕಿಸ್ತಾನದ ಪ್ರಜೆಯಾಗಿದ್ದರೂ ಈ ಚಿಕ್ಕ ವಯಸ್ಸಿನಲ್ಲಿ ಆಕೆ ತೋರಿದ ಧೈರ್ಯಕ್ಕೆ ಅಕೆಗೆ ನೊಬೆಲ್ ಸಿಗಲೆ೦ದು ಅನೇಕ ಭಾರತೀಯರೂ ಬಯಸಿದ್ದರೆ೦ಬುದು ಸುಳ್ಳಲ್ಲ

ಈಗಾಗಲೇ ಮಲಾಲಾ ವಿಶ್ವದಾದ್ಯ೦ತ ಮನೆಮಾತಾಗಿದ್ದರೂ ಆಕೆಯ ಬಗ್ಗೆ ಹೆಚ್ಚಾಗಿ ಗೊತ್ತಿಲ್ಲದಿದ್ದವರಿಗೆ ಕೊ೦ಚ ಮಾಹಿತಿ ನೀಡುತ್ತಿದ್ದೇನೆ.ಹದಿನಾರು ವರ್ಷದ ಮಲಾಲಾ ಯುಸುಫಜಾಯ್ ಮೂಲತ: ಪಾಕಿಸ್ತಾನದ ತಾಲಿಬಾನ್ ಪೀಡಿತ ಸ್ವಾಟ್ ಕಣಿವೆಯವಳು.ತಾಲಿಬಾನಿ ಆಡಳಿತದಲ್ಲಿನ ಈ ಪ್ರದೇಶದಲ್ಲಿ ತಾಲಿಬಾನ್ ಕರ್ಮಠ ಇಸ್ಲಾ೦ ಸ೦ಪ್ರದಾಯಗಳನ್ನು ,ಕಾನೂನುಗಳನ್ನು ಈ ಪ್ರದೇಶದಲ್ಲಿ ಜಾರಿಗೊಳಿಸಿದೆ.ಹೆಣ್ಣು ಮಕ್ಕಳಿಗೆ ವಿದ್ಯಾಭ್ಯಾಸವಿಲ್ಲ ಎ೦ಬ ಕಾನೂನನ್ನು ಈ ಪ್ರದೇಶದಲ್ಲಿ ಜಾರಿಗೊಳಿಸಿದ್ದರು.ಅಲ್ಲಿ ತಾಲಿಬಾನಿಗಳ ನಿರ್ಣಯವನ್ನು ಯಾರೂ ಪ್ರಶ್ನಿಸುವ೦ತಿರಲಿಲ್ಲ.ಆದರೆ ಈ ಪುಟ್ಟ ಬಾಲಕಿ ಮಲಾಲಾ ಈ ಅನ್ಯಾಯವನ್ನು ವಿರೋಧಿಸುವ ನಿರ್ಧಾರಕ್ಕೆ ಬ೦ದಳು.ತನ್ನ ಹನ್ನೊ೦ದನೆಯ ವಯಸ್ಸಿನಲ್ಲಿ ಬಿಬಿಸಿಯ ಅ೦ತರ್ಜಾಲ ತಾಣಗಳಿಗೆ ಮಲಾಲಾ ಗುಪ್ತ ನಾಮದಲ್ಲಿ ಬ್ಲಾಗ್ ಬರೆಯಲಾರ೦ಭಿಸಿದಳು.ಬಿಬಿಸಿಯ೦ತಹ ವಿಶ್ವಮಾನ್ಯ ಸ೦ಸ್ಥೆಗೆ ,ಸ್ವಾಟ್ ನಲ್ಲಿ ತಾಲಿಬಾನಿಗಳ ಅರಾಜಕತೆ,ಮಹಿಳೆಯರ ಮೇಲಿನ ದೌರ್ಜನ್ಯವನ್ನು ವಿವರಿಸುವ ಪ್ರಯತ್ನ ಮಾಡಿದಳು. ಮಹಿಳಾ ಶಿಕ್ಷಣದ ಬಗ್ಗೆ ತನ್ನ ಅಭಿಪ್ರಾಯವನ್ನು ವಿಶ್ವಕ್ಕೆ ಅರುಹಿದಳು.ಚಿಕ್ಕ ವಯಸ್ಸಿನಲ್ಲಿಯೇ ಆಕೆಯ ವೈಚಾರಿಕತೆಗೆ ತಲೆದೂಗಿದ ನ್ಯೂಯಾರ್ಕ್ ಟೈಮ್ಸ್ ಆಕೆಯ ಬಗ್ಗೆ ಸಾಕ್ಷ್ಯ ಚಿತ್ರವನ್ನು ನಿರ್ಮಿಸಿತು.ಅಲ್ಲಿ೦ದ ವಿಶ್ವ ಪ್ರಸಿದ್ದಳಾದ ಆಕೆ ಮುಕ್ತವಾಗಿ ಮಾಧ್ಯಮಗಳಲ್ಲಿ,ಪತ್ರಿಕೆಗಳಲ್ಲಿ ಸ೦ದರ್ಶನಗಳನ್ನು ನೀಡತೊಡಗಿದಳು.ಆಗ ಎಚ್ಚೆತ್ತುಕೊ೦ಡ ಪಾಕಿಸ್ತಾನದ ಸೈನ್ಯ ಸ್ವಾಟ್ ಕಣಿವೆಯ ಮೇಲೆ ಕದನ ಘೋಷಿಸಿತು. ’ಎರಡನೇ ಸ್ವಾಟ್ ಯುದ್ದ’ ಎ೦ದೇ ಪ್ರಸಿದ್ಧವಾದ ಈ ಯುದ್ದದಲ್ಲಿ ಪಾಕಿಸ್ತಾನಿ ಸೈನ್ಯ ಸ್ವಾಟ್ ಕಣಿವೆಯನ್ನು ಮರಳಿ ತನ್ನ ವಶಕ್ಕೆ ಪಡೆಯಿತು.ಅನೇಕ ತಾಲಿಬಾನಿ ಕಮಾ೦ಡರಗಳ ಬ೦ಧನವಾಯ್ತು.

ಮತ್ತಷ್ಟು ಓದು »

19
ಆಕ್ಟೋ

ಮಲಾಲಾ ~ ನಿಜವಾದ ಕಥೆ(ಪುರಾವೆಗಳ ಸಹಿತ)

ಮೂಲ : ನದೀಂ ಎಫ್ ಪರಾಚ

ಅನುವಾದ : ನಿವೇದಿತ ಥಾಡಣಿ

Malalaಸೆಪ್ಟೆಂಬರ್ 2012 ರಲ್ಲಿ, ಪಾಕಿಸ್ತಾನದ ಸ್ವಾತ್ ಕಣಿವೆಯಲ್ಲಿ ಒಬ್ಬ ತಾಲಿಬಾನ್ ಕಾರ್ಯಕರ್ತ  15 ವರ್ಷದ ಶಾಲಾ ಹುಡುಗಿಯ ಮುಖ ಮತ್ತು ತಲೆಗೆ  ಗುಂಡು ಹಾರಿಸಿದ್ದಾನೆ  ಎಂದು ವರದಿಯಾಯಿತು.ಈ ದಾಳಿ ವಿಶ್ವದಾದ್ಯಂತ ಆಕ್ರೋಶಕ್ಕೆ ಕಾರಣವಾಯಿತು ಮತ್ತು ಈ ಸುದ್ದಿಗೆ  ಸ್ಥಳೀಯ ಮತ್ತು ಅಂತರರಾಷ್ಟ್ರೀಯ ಮಾಧ್ಯಮಗಳಲ್ಲಿ ತುಂಬಾ ಮಹತ್ವ ನೀಡಲಾಯಿತು.

ಅವಳೇ ಮಲಾಲಾ.

ಪಾಕಿಸ್ತಾನದಲ್ಲಿ ನಂತರ ಇಂಗ್ಲೆಂಡ್ ನಲ್ಲಿ  ವೈದ್ಯರು ಮಲಾಲಾಳ  ಮುಖ ಮತ್ತು ತಲೆಯ ಮೇಲೆ ಅನೇಕ ಶಸ್ತ್ರಚಿಕಿತ್ಸೆಗಳನ್ನು ನೆರವೇರಿಸಿದರೂ ಅವಳು ಉಳಿಯುವ ಸಾಧ್ಯತೆ ಇಲ್ಲ ಎಂದು ವರದಿಯಾಗಿತ್ತು.

ಇಂದು ಮಲಾಲಾ ಯುಕೆಯಲ್ಲಿ ವಾಸಿಸುತ್ತಿದ್ದಾರೆ. ಪಾಕಿಸ್ತಾನದ ಮಹಿಳೆಯರ ಶಿಕ್ಷಣದ ಸಲುವಾಗಿ ಅದರಲ್ಲೂ ವಿಶೇಷವಾಗಿ ತೀವ್ರವಾದಿಗಳು ಮತ್ತು ಉಗ್ರಗಾಮಿಗಳು ಬಾಲಕಿಯರ ಶಾಲೆಗಳನ್ನು ಹಾರಿಸಿದ ಪ್ರದೇಶಗಳಲ್ಲಿ ಕೆಲಸ ಮುಂದುವರಿಸುತ್ತೇನೆ ಎಂದು ಪ್ರತಿಜ್ಞೆ ಮಾಡಿದ್ದಾರೆ ಎಂದು ಹೇಳಲಾಗುತ್ತದೆ.

ಇದು ಪೂರ್ತಿ ಕಥೆಯ ಕೇವಲ ಒಂದು ಭಾಗ ಮಾತ್ರ. ಆದರೆ ನಿಜವಾಗಿಯೂ ಗುಂಡಿಕ್ಕಿದ  ದಿನ ಏನಾಯಿತು ಎಂದು  ಮಲಾಲಾ ಹೇಳಿದ್ದ ಪೂರ್ತಿ ವರದಿಯಲ್ಲಿ ಅರ್ಧದಷ್ಟು ವರದಿಯನ್ನು ಪಾಶ್ಚಾತ್ಯ ಮಾಧ್ಯಮಗಳು ಮುಚ್ಚಿ ಹಾಕಿವೆ.

ಮತ್ತಷ್ಟು ಓದು »

14
ಆಕ್ಟೋ

ಸೌಜನ್ಯ ಹಂತಕರು ನೇಣಿಗೇರುವುದೆಂತು?

– ರಾಕೇಶ್ ಶೆಟ್ಟಿ

Justice for Kumari Soujanya“ಬಹುಷಃ ಆಗಿನ ಕಾಲವೇ ಚೆನ್ನಾಗಿತ್ತೆನೋ.ಆಗಲಾದರೂ ಕುರು ಸಭೆಯಲ್ಲಿ ದ್ರೌಪದಿಯ ವಸ್ತ್ರಾಪಹರಣವಾಗುವಾಗ ಅವಳ ಸಹಾಯಕ್ಕೆ ಕರೆದೊಡನೆಯೇ ಶ್ರೀ ಕೃಷ್ಣ ಪರಮಾತ್ಮ ಬಂದಿದ್ದ.ಪಾಪ! ಈ ಕಾಲದ ಹೆಣ್ಣು ಮಕ್ಕಳ ಕೂಗು ಆ ಕಾಣದ ದೇವರಿಗೂ,ಕಾನೂನು ಪಾಲಕರಾದ ಮನುಷ್ಯ(?)ರಿಗೂ ಕೇಳುತ್ತಿಲ್ಲ.ಕುರುಕ್ಷೇತ್ರದ ಯುದ್ಧದ ಮುಗಿದರೂ ಕೌರವರು ಇನ್ನೂ ಸತ್ತಿಲ್ಲ.ದ್ರೌಪದಿಯರ ಗೋಳು ಮುಗಿಯೋಲ್ಲ…” ಅಂತ ’ನಿರ್ಭಯ’ ಅತ್ಯಾಚಾರದ ಪ್ರಕರಣದ ಸಮಯದಲ್ಲಿ ಬರೆದಿದ್ದೆ. ಮತ್ತೆ ಅದೇ ಸಾಲುಗಳನ್ನು ನಮ್ಮ ಧರ್ಮಸ್ಥಳದ ’ಸೌಜನ್ಯ’ ಅನ್ನುವ ಹೆಣ್ಣುಮಗಳ ಬಗ್ಗೆ ಬರೆಯುವಾಗಲೂ ಬಳಸಬೇಕಾಗಿ ಬಂದಿದೆ.ಆಗ ಕೃಷ್ಣನೇನೋ ಕರೆದಾಗ ಬಂದಿದ್ದ.ಆದರೆ ಇಲ್ಲಿ ಧರ್ಮಸ್ಥಳದ ಮಂಜುನಾಥ ಸ್ವಾಮಿ ಯಾಕೋ ವರುಷ ಕಳೆದರೂ ಇನ್ನು ಕರುಣೆ ತೋರಲಿಲ್ಲ …! ನನಗೆ ಈ ದೇವರುಗಳ ಮೇಲೆ ಒಮ್ಮೊಮ್ಮೆ ಕೋಪಬರುವುದು ಇದೇ ಕಾರಣಕ್ಕಾಗಿ, ಏನೆಲ್ಲಾ ಪಾಪಗಳನ್ನು ಮಾಡಿ ಒಂದು ನೇಮ,ಒಂದು ಹರಕೆ,ಒಂದು ಹೋಮ,ಒಂದು ಹವನ,ತಪ್ಪು ಕಾಣಿಕೆ ಸಲ್ಲಿಸಿ ಸುಮ್ಮನಾಗಿಬಿಡಬಹುದೇ? ಹಾಗಿದ್ದರೆ ’ಧರ್ಮ’ವೆಲ್ಲಿದೆ?

ದಿಲ್ಲಿಯಲ್ಲಿ ಕಳೆದ ಡಿಸೆಂಬರಿನಲ್ಲಿ ನಡೆದ ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿ ’ನಿರ್ಭಯ’ ಅತ್ಯಾಚಾರ ಪ್ರಕರಣದಲ್ಲಿ ಹೋರಾಟದ ಕಿಡಿಯನ್ನು ದೆಹಲಿಯ ವಿದ್ಯಾರ್ಥಿ ಮಿತ್ರರು ಹಚ್ಚಿದ್ದರು.ಅದು ದೇಶವ್ಯಾಪಿಯೂ ಹಬ್ಬಿತ್ತು. ಖುದ್ದು ಕೇಂದ್ರ ಸರ್ಕಾರವನ್ನೇ ಮಂಡಿಯೂರುವಂತೆ ಮಾಡಿದ್ದು ಯುವಶಕ್ತಿಗೆ ಸಂದ ಜಯವಾಗಿತ್ತು.ಈಗ ನಿರ್ಭಯ ಆರೋಪಿಗಳಿಗೆ ಗಲ್ಲು ಶಿಕ್ಷೆಯಾಗಿದೆ.ಆದರೆ ನಮ್ಮ ಸೌಜನ್ಯ ಪ್ರಕರಣದ ಆರೋಪಿಗಳೇ ಇನ್ನೂ ಸಿಕ್ಕಿಲ್ಲ…! ಅತ್ಯಾಚಾರದ ಆರೋಪಿಗಳನ್ನು ವರ್ಷವಾದರೂ ಬಂಧಿಸಲಾಗದಷ್ಟು ನಿಷ್ಕ್ರಿಯರಾಗಿದ್ದಾರೆಯೇ ನಮ್ಮ ಕರ್ನಾಟಕ ಪೋಲಿಸರು? ಅಥವಾ ಪೋಲಿಸರನ್ನು ನಿಷ್ಕ್ರಿಯಗೊಳಿಸುವಲ್ಲಿ ಕಾಣದ ’ಕೈ’ ಗಳು ಕೆಲಸ ಮಾಡುತ್ತಿವೆಯೇ? ಪ್ರಕರಣ ನಡೆದಾಗ ಇದ್ದಿದ್ದು ಬಿಜೆಪಿ ಸರ್ಕಾರ.ಈಗ ಇರುವುದು ಕಾಂಗ್ರೆಸ್ಸ್ ಸರ್ಕಾರ.ಹಾಗಿದ್ದರೆ ಆ ಕಾಣದ ಕೈಗಳು ಸರ್ಕಾರದ ಕೈಗಳನ್ನೇ ಕಟ್ಟಿಹಾಕಬಲ್ಲಷ್ಟು ಬಲಿಷ್ಟವಾಗಿವೆಯೇ?

ಮತ್ತಷ್ಟು ಓದು »