ಕೈಲಾಗದ ರಾಜಕಾರಣಿಗಳ ಕೊಲವೆರಿ, ಕನ್ನಡಿಗರ ಜೀವನಾಡಿ ಕಾವೇರಿ
– ರಾಕೇಶ್ ಶೆಟ್ಟಿ
ಅವತ್ತು ಬೆಳ್ಳಂಬೆಳಗ್ಗೆ ತಮ್ಮ ಹಿಂಬಾಲಕರ ಹಿಂಡು,ಕ್ಯಾಮೆರಾ ದಂಡಿನೊಂದಿಗೆ ಮೀಡಿಯಾ ಡಾರ್ಲಿಂಗ್ ಕಾನೂನು ಸಚಿವ ಸುರೇಶ್ ಕುಮಾರ್, ಗೃಹ ಸಚಿವ ಅಶೋಕ್ ಬೆಂಗಳೂರಿನಿಂದ ಗುಳೆ ಹೊರಟಿದ್ದ ಅಸ್ಸಾಂ ಜನರನ್ನು ಸಂತೈಸಲು ರೈಲ್ವೇ ನಿಲ್ದಾಣಕ್ಕೆ ಹೋಗಿ ನಿಂತಿದ್ದರು.ಆದರೆ ಈಗ ನೋಡಿ ಕಳೆದ ಇಪ್ಪತ್ತು ದಿನದಿಂದ ಕಾವೇರಿಕೊಳ್ಳದ ರೈತರು ಕಣ್ಣೀರಿಡುತಿದ್ದಾರೆ.ಬಂದ್,ಹರತಾಳಗಳಿಂದ ರಾಜ್ಯದ ಕಾನೂನು ಹದಗೆಡುತ್ತಿದೆ ಆದರೆ ಮಾನ್ಯ ಕಾನೂನು ಸಚಿವರು ನಾಪತ್ತೆಯಾಗಿದ್ದಾರೆ…! ಈ ನಡುವೆ ಗೃಹ ಸಚಿವರು ಅಸ್ಸಾಂಗೆ ಹೋಗಿದ್ದಾರಾ? ತಮಿಳುನಾಡಿಗೆ ಹೋಗಿ ಜಯಲಲಿತಾಗೂ ವಸ್ತುಸ್ಥಿತಿ ತಿಳಿಸಬಹುದಿತ್ತಲ್ಲಾ,ಯಾಕೆ ಹೋಗಲಿಲ್ಲ?
ಸುದ್ದಿ ಮಾಡಲು ಇದೇನು “ಭಾರತ”ದ ವಿಷಯವೋ ಅಥವಾ ಅವರ ಸಂಘ ಪರಿವಾರದ “ದೇಶ ಭಕ್ತಿ”ಯ ವಿಷಯವೋ ಅಲ್ಲವಲ್ಲ.ಇದು ಬರಿ ಕಾವೇರಿಯ ವಿಷ್ಯ,ಇದು ಕರ್ನಾಟಕದ ಜನತೆಯ ಪ್ರಾದೇಶಿಕತೆಯ ಸಂಕುಚಿತತೆಯ ಹೋರಾಟ ಅನ್ನಿಸರಬೇಕು.ಒಂದೆಡೆ ಇಂತ ದೇಶಭಕ್ತ ಕಾನೂನು ಸಚಿವ.ಮತ್ತೊಂದೆಡೆ ಸುಪ್ರೀಂ ಕೋರ್ಟ್ ಮುಂದೆ ನಿಂತು ೧೦ ಟಿಎಂಸಿ ನೀರು ನಾವೇ ಕೊಡ್ತೀವಿ ಅಂತ ಮುಂಚಿತವಾಗಿ ಬರೆದು ಕೊಟ್ಟ ಜಲಸಂಪನ್ಮೂಲ ಸಚಿವ ಮತ್ತು ಇಂತ ಎಡವಟ್ಟು ಸಚಿವರಿಗೊಬ್ಬ ಕಳಸವಿಟ್ಟ ಮುಖ್ಯಮಂತ್ರಿ.
ಕಾವೇರಿ ಪ್ರಾಧಿಕಾರದ ಸಭೆಯಲ್ಲಿ ಪ್ರಧಾನಿ ತೀರ್ಪನ್ನು ವಿರೋಧಿಸಿ, ಕುರ್ಚಿ ಬೇಕಾದರೂ ಬಿಡುತ್ತೇನೆ, ಕಾವೇರಿ ಬಿಡಲಾರೆ ಅಂದ ಶೆಟ್ಟರ್ ಮುಖಾಂತರ ಒಬ್ಬ ಹೀರೊನನ್ನು ಹುಡುಕಲು ರಾಜ್ಯದ ರೈತರು ಕನಸು ಕಾಣುತಿದ್ದರು.ಆದರೆ ಅವರಿಗೆ ಕಾವೇರಿಗಿಂತ ಕುರ್ಚಿಯೇ ಹೆಚ್ಚಾಯಿತು ನೋಡಿ.ರಾತ್ರೋ ರಾತ್ರಿ ನೀರು ಹರಿಸಲು ಶುರು ಮಾಡಿದ್ದಾರೆ.ಹೀರೊ ಆಗೋದು ಬಿಡಿ ಕಡೆ ಪಕ್ಷ ಜೀರೊ ಆದರು ಅಂತೇಳಿದರೆ, ಅದು ನಾವು ಆ “ಜೀರೊ” ಅನ್ನೋ ಪದಕ್ಕೆ ಅವಮಾನ ಮಾಡಿದಂತೆ. ಇಡೀ ರಾಜ್ಯ ಬಂದ್ ಮಾಡಿ ಹೊತ್ತಿ ಉರಿಯುತಿದ್ದರೆ ಮಾನ್ಯ ಮುಖ್ಯಮಂತ್ರಿಗಳು ಪೋಲಿಸ್ ಸರ್ಪಗಾವಲಿನೊಂದಿಗೆ ಭದ್ರವಾಗಿ ಮನೆಯಲ್ಲಿ ಕುಳಿತಿದ್ದಾರೆ, ರೋಮ್ ಹತ್ತಿ ಉರಿಯುತಿದ್ದಾಗ ಪಿಟೀಲು ಕುಯ್ಯುತಿದ್ದ ನೀರೋನಂತೆ…!
ಸುಂದರ್ ರಾಜ್ ನೆನಪಿಸಿಕೊಂಡಂತೆ ಅಂಬರೀಷ್ !
– ಶ್ರೀಧರ್ ಜಿ ಸಿ ಬನವಾಸಿ
ಅಂಬರೀಷ್ ಜೊತೆಗಿನ ನನ್ನ ಸ್ನೇಹವನ್ನು ಈ ಮೂಲಕ ವರ್ಣಿಸೋದು ತುಂಬಾ ಕಷ್ಟ. ಅಂಬರೀಷ್ ಜೊತೆಗಿನ ನನ್ನ ಒಡನಾಟ, ಸ್ನೇಹ, ಓಡಾಟ, ಕೆಲಸಮಾಡಿದ್ದು ನನಗೆ ಬೆಟ್ಟದಷ್ಟು ಅಪಾರ ನೆನಪುಗಳು ನನ್ನ ಮನಸ್ಸಿನಲ್ಲಿವೆ. ಆತ ಹೀಗೆ ಅಂತ ಹೇಳೋದು ತುಂಬಾ ಕಷ್ಟ, ಆತನ ತರಹ ನೀವಾಗಬೇಕು ಅಂತಾನೂ ಹೇಳೋದು ತುಂಬಾ ಕಷ್ಟ. ಅಂಬರೀಷನಿಗೆ ಅಂಬರೀಷನೇ ಸಾಟಿ. ಅಂಬರೀಷ್ ಯಾಕೆ ಇಷ್ಟವಾಗ್ತಾರೆ ಅಂತ ಅವರನ್ನ ಇಷ್ಟಪಡೋ ಎಲ್ಲರನ್ನು ಕೇಳಿ ಒಬ್ಬೋಬ್ಬರು ಆತನನ್ನು ಒಂದೊಂದು ರೀತಿಯಲ್ಲಿ ವರ್ಣಿಸುತ್ತಾರೆ. ಹಾಗಾಗಿ ಅಂಬರೀಷ್ ಇಷ್ಟವಾಗಲು ಬಹಳಷ್ಟು ಕಾರಣಗಳಿವೆ. ಕನ್ನಡಚಿತ್ರರಂಗವೇಕೇ, ರಾಜಕೀಯ, ಬೇರೆ ಚಿತ್ರರಂಗ, ರಾಜ್ಯ ರಾಜಕೀಯ, ದೆಹಲಿ ರಾಜಕೀಯದ ವ್ಯಕ್ತಿಗಳು ಕೂಡ ಆತನನ್ನು ಇಷ್ಟಪಡುತ್ತಾರೆ. ಆತನ ವ್ಯಕ್ತಿತ್ವೇ ಅಂತಹದ್ದು. ಅಜಾತಶತ್ರು, ಹುಂಬತನ, ಎದೆಗಾರಿಕೆ, ಬೇರೆಯವರಿಗೆ ಮರುಗುವ ಮನಸ್ಸು ಆತನ ಗುಣಗಾನ ಮಾಡುವುದು ನಿಜವಾಗಿಯೂ ಕಷ್ಟ ಸಾಧ್ಯ. ಇಂತಹ ಅಂಬರೀಷ್ ನನ್ನ ಆತ್ಮೀಯ ಸ್ನೇಹಿತ ಅನ್ನುವುದೇ ನನ್ನ ಹೆಮ್ಮೆಗೆ ಕಾರಣ.
ಅಂಬಿ ‘ನಾನೊಬ್ಬ ಅದ್ಭುತ ನಟ’ ಅಂತ ಎಲ್ಲೂ, ಯಾರ ಹತ್ತಿರವೂ ಹೇಳಿಕೊಂಡವರಲ್ಲ. ಆದರೆ, ವ್ಯಕ್ತಿಯಾಗಿ, ಸಮಾಜದ ಶಕ್ತಿಯಾಗಿ, ಉತ್ತಮ ಮನುಷ್ಯನಾಗಿ ಅಂಬಿಗೆ ಅಂಬಿಯೇ ಸಾಟಿ. ಇಂಥ ವೈವಿಧ್ಯತೆಯ ಮನುಷ್ಯನನ್ನು ಎಲ್ಲಿ ಹುಡುಕಿದರೂ ಸಿಕ್ಕುವುದಿಲ್ಲ. ಆ ದಿನಗಳಲ್ಲಿ ನನಗೆ ಅಂಬಿ ಕಂಡರೆ ಸಣ್ಣ ಒಳ್ಳೆಯ ಹೊಟ್ಟೆಕಿಚ್ಚಂತೂ ಇತ್ತು, ಏನಪ್ಪಾ ಈ ಮನುಷ್ಯ ಪುಟ್ಟಣ್ಣನಂತಹ ನಿರ್ದೇಶಕರ ಮನಸ್ಸನ ಹೇಗಂಪಾ ಗೆದ್ದು ಬಿಟ್ಟಿದ್ದಾನೆ. ನಾವೇನೋ ಬಾಲಚಂದರ್ ಸಿನಿಮಾಗಳಲ್ಲಿ ಗುರುತಿಸಿಕೊಂಡುಬಿಟ್ಟಿದ್ವಿ. ಆದರೆ ಪುಟ್ಟಣ್ಣರ ಸಿನಿಮಾಗಳಲ್ಲಿ ನಮಗೆ ಅವಕಾಶ ಸಿಕ್ಕಿರಲಿಲ್ಲ. ಈತನ್ನ ನೋಡಿದ್ರೆ ಪುಟ್ಟಣ್ಣನವರ ಹೆಚ್ಚಿನ ಸಿನಿಮಾಗಳಲ್ಲಿ ಚಾನ್ಸ್ ತಗೋತಾ ಇದಾನೆ. ಪುಟ್ಟಣ್ಣ ಕಣಗಾಲ್ ಗುರುಕೃಪೆಗೆ ಹೆಚ್ಚು ಒಳಗಾದ ನಟ ಅಂಬರೀಶ್ನನ್ನು ಕಂಡಾಗ ಈ ರೀತಿಯ ಅವ್ಯಕ್ತ ಅಸೂಹೆಯ ಪ್ರೀತಿ ಆತನ ಮೇಲಿತ್ತು. ಆದರೆ ಅಂಬರೀಷ್ ತನ್ನ ನಿಷ್ಕಲ್ಮಶ ಪ್ರೀತಿಯಿಂದ ನನ್ನನ್ನು ಗೆದ್ದುಬಿಟ್ಟಿದ್ದ.





