‘ತುರ್ತು ಪರಿಸ್ಥಿತಿ’ ವಿರುದ್ಧದ ಹೋರಾಟದಲ್ಲಿ ಹಾಸನ ಜಿಲ್ಲೆ ವಹಿಸಿದ ಪಾತ್ರ
-ಕ.ವೆಂ.ನಾಗರಾಜ್
ಪರಕೀಯರ ಸಂಕೋಲೆಯಿಂದ ೧೯೪೭ರಲ್ಲಿ ದೇಶ ಸ್ವತಂತ್ರಗೊಂಡ ಕೇವಲ ೨೮ ವರ್ಷಗಳ ನಂತರದಲ್ಲಿ ಸ್ವಕೀಯರಿಂದಲೇ ಪ್ರಜಾಪ್ರಭುತ್ವಕ್ಕೆ ಅತಿ ದೊಡ್ಡ ಗಂಡಾಂತರ ೧೯೭೫ರಲ್ಲಿ ತುರ್ತುಪರಿಸ್ಥಿತಿ ರೂಪದಲ್ಲಿ ಬಂದೆರಗಿತ್ತು. ಎರಡು ವರ್ಷಗಳ ಈ ತುರ್ತುಪರಿಸ್ಥಿತಿಯ ಅವಧಿ ದೇಶದ ಅತ್ಯಂತ ಕಲಂಕಿತ ಅವಧಿಯಾಗಿದ್ದು, ಇಂದು ಕಂಡುಬರುತ್ತಿರುವ ಅಧಿಕಾರದ ಹಪಾಹಪಿಗೆ ಭದ್ರ ತಳಪಾಯ ಒದಗಿಸಿತ್ತು. ಅಲಹಾಬಾದ್ ಉಚ್ಚನ್ಯಾಯಾಲಯವು ಅಂದಿನ ಪ್ರಧಾನಿ ಶ್ರೀಮತಿ ಇಂದಿರಾಗಾಂಧಿಯವರ ಮೇಲಿದ್ದ ಭ್ರಷ್ಠಾಚಾರದ ಆರೋಪವನ್ನು ಎತ್ತಿ ಹಿಡಿದು ಅವರ ಚುನಾವಣೆಯ ಗೆಲುವನ್ನು ಅನೂರ್ಜಿತಗೊಳಿಸಿದ್ದಲ್ಲದೆ ಮುಂದಿನ ಆರು ವರ್ಷಗಳು ಅವರು ಚುನಾವಣೆಯಲ್ಲಿ ಭಾಗವಹಿಸದಂತೆ ನಿರ್ಬಂಧಿಸಿದ್ದನ್ನು ಅವರು ಲೆಕ್ಕಿಸದೆ ಹೇಯಮಾರ್ಗ ಹಿಡಿದು ದೇಶದ ಮೇಲೆ ಅನಗತ್ಯವಾದ ತುರ್ತುಪರಿಸ್ಥಿತಿ ಹೇರಿ ಸರ್ವಾಧಿಕಾರಿಯಾಗಿ ಅಟ್ಟಹಾಸದಿಂದ ಮೆರೆದರು. ಕಹಿಯಾದ ಕಠಿಣ ಸತ್ಯವೆಂದರೆ ಭ್ರಷ್ಠಾಚಾರ ತಪ್ಪಲ್ಲವೆಂಬ ಭಾವನೆಗೆ, ಭ್ರಷ್ಠಾಚಾರ ಇಂದು ಮುಗಿಲೆತ್ತರಕ್ಕೆ ಬೆಳೆದಿರುವುದಕ್ಕೆ ಅಂದು ಹಾಕಿದ್ದ ಈ ಭದ್ರ ಬುನಾದಿಯೇ ಕಾರಣ. ಕಾಯದೆ, ಕಾನೂನುಗಳನ್ನು ಅನುಕೂಲಕ್ಕೆ ತಕ್ಕಂತೆ ತಿದ್ದಲಾಯಿತು. ರಾಷ್ಟ್ರೀಯ ಸ್ವಯಂಸೇವಕ ಸಂಘವೂ ಸೇರಿದಂತೆ ಹಲವಾರು ಸಂಘ-ಸಂಸ್ಥೆಗಳನ್ನು ನಿಷೇಧಿಸಲಾಯಿತು. ಲೋಕಸಭೆಯ ಅವಧಿ ಪೂರ್ಣಗೊಂಡರೂ ಸಂಸತ್ತಿನಲ್ಲಿ ನಿರ್ಣಯ ಮಾಡಿ ಮತ್ತೆ ಎರಡು ವರ್ಷಗಳ ಅವಧಿಗೆ ಮುಂದುವರೆಸಲಾಯಿತು. ಸಂವಿಧಾನಕ್ಕೆ ಹಲವು ತಿದ್ದುಪಡಿಗಳನ್ನು ಮಾಡಲಾಯಿತು. ೧೯೭೫ರ ಜೂನ್ ೨೬ರ ಬೆಳಕು ಹರಿಯುವಷ್ಟರಲ್ಲಿ ಭಾರತದ ಸ್ವತಂತ್ರತೆ ನಿರ್ಬಂಧಿಸಲ್ಪಟ್ಟಿತು. ಅಭಿವ್ಯಕ್ತಿ ಸ್ವಾತಂತ್ರ್ಯ, ಲೇಖನ ಸ್ವಾತಂತ್ರ್ಯ, ಪತ್ರಿಕಾ ಸ್ವಾತಂತ್ರ್ಯ, ಸ್ವಂತ ಅಭಿಪ್ರಾಯ ತಿಳಿಸುವ ಸ್ವಾತಂತ್ರ್ಯ, ಇತ್ಯಾದಿ ಎಲ್ಲಾ ನಾಗರಿಕ ಹಕ್ಕುಗಳನ್ನು ಕಸಿದುಕೊಳ್ಳಲಾಯಿತು. ದೇಶಾದ್ಯಂತ ನೂರಾರು ವಿರೋಧ ಪಕ್ಷದ ನಾಯಕರುಗಳನ್ನು ಬಂಧಿಸಿ ಸೆರೆಯಲ್ಲಿರಿಸಿದರು. ಜನರು ಸರ್ಕಾರದ ವಿರುದ್ಧ ಮಾತನಾಡಲು ಅಂಜುವಂತೆ ಆಯಿತು. ಆಕಾಶವಾಣಿ ಇಂದಿರಾವಾಣಿ ಆಯಿತು, ದೂರದರ್ಶನ ಇಂದಿರಾದರ್ಶನವಾಯಿತು. ಇಂದಿರಾ ಪರ ಸುದ್ದಿಗಳಿಗೆ ಮಾತ್ರ ಅವಕಾಶ. ‘ಇಂದಿರಾ ಅಂದರೆ ಇಂಡಿಯಾ, ಇಂಡಿಯಾ ಅಂದರೆ ಇಂದಿರಾ’ ಆಗಿಹೋಯಿತು.
ವಿರೋಧಿಗಳೆಸೆದ ಕಲ್ಲನ್ನೇ ತನ್ನ ಏಳಿಗೆಯ ಮೆಟ್ಟಿಲಾಗಿಸಿಕೊಂಡ ಮೋದಿ
– ಪ್ರಸನ್ನ ಬೆಂಗಳೂರು
ಭಾರತದ ರಾಜಕೀಯ ಇತಿಹಾಸದಲ್ಲಿ ೧೦ ವರ್ಷಗಳಿಗೂ ಹೆಚ್ಚು ಕಾಲ ವಿರೋಧ ಪಕ್ಷಗಳು,ಮಾಧ್ಯಮಗಳು,ಪ್ರಗತಿಪರರು ಟಾರ್ಗೆಟ್ ಮಾಡಿರುವುದು ನರೇಂದ್ರ ಮೋದಿಯವರನ್ನು . ಮೋದಿಯವನರನ್ನು ಬಿಜೆಪಿ ತನ್ನ ಪ್ರಧಾನಿ ಅಭ್ಯರ್ಥಿಯನ್ನಾಗಿ ಘೋಷಿಸಿದ ಮೇಲೆ ಅವರ ಮೇಲಿನ ಹಿಂದಿನ ಆರೋಪಗಳ ಜೊತೆ ಜೊತೆಗೆ ಅವರ ಅಭಿವೃದ್ಧಿ ಕಾರ್ಯಗಳನ್ನು ವಿಶ್ಲೇಷಣೆಗೊಳಪಡಿಸಲಾಗುತ್ತಿದೆ. ಈ ಹಿಂದೆ ಪ್ರಧಾನಿಯಾದವರ ಬಗ್ಗೆ ಇಷ್ಟೊಂದು ವಿಶ್ಲೇಷಣೆ ವಿಮರ್ಶೆ ಪರೀಕ್ಷೆ ನಡೆದಿತ್ತೆ? ನಡೆದು ಅಂತಹ ಅಗ್ನಿ ಪರೀಕ್ಷೆಯಲ್ಲಿ ಗೆದ್ದು ಬಂದಿದ್ದರೆ ಬಹುಶಃ ಭಾರತವಿಂದು ಇಂತಹ ಪರಿಸ್ಥಿತಿಯಲ್ಲಿರುತ್ತಿರಲಿಲ್ಲ ಅಲ್ಲವೆ? ಮೋದಿ ಈ ಪರಿ ಬೆಳೆದಿದ್ದಕ್ಕೆ ಕಾರಣ ಹುಡುಕುತ್ತಾ ಹೊರಟವನಿಗೆ ಕಂಡದ್ದು ಈ ವಿಭಿನ್ನವಾದ ಆದರೆ ತೆರೆಮರೆಯ ಕಾರಣ.
ಅದು ತನ್ನ ಕುಕೃತ್ಯಕ್ಕೆ ತಾನೆ ಬಲಿಯಾದ ಆತನ ದ್ವೇಷ ವರ್ಗ.ಇವರ ದ್ವೇಷ,’ತನ್ನೊಡಲ ಬೆಂಕಿ ತನ್ನನ್ನಲ್ಲದೆ ಅನ್ಯರನ್ನು ಸುಡದು‘ ಎಂಬ ಜನಪ್ರಿಯ ವಚನದಂತೆ ದ್ವೇಷಿಗಳೇ ನಾಲಿಗೆ ಕಚ್ಚಿಕೊಳ್ಳುವಂತಾಗಿರುವುದು ಸುಳ್ಳಲ್ಲ. ತಾನು ವೈಭವೀಕರಿಸಿದ ಸುಳ್ಳು ತನಗೇ ತಿರುಗುಬಾಣವಾಗಿರುವುದು ಅವರ ಈಗಿನ ಬಡಬಡಿಕೆಗೆ ಕಾರಣವಾಗಿದೆ. ಈ ವರ್ಗ ಮೋದಿಯ ವಿರುದ್ದ ಮಾಡಿದ ಅಪಪ್ರಚಾರಗಳೇ ಅಪಚಾರಗಳೇ ಅವರಿಗೆ ಇಂದು ಮುಳುವಾಗಲು ಮೂಲ ಕಾರಣವೆಂದು ಅವರು ಒಪ್ಪಿಕೊಳ್ಳಲು ಸಿದ್ದರಿಲ್ಲದಿದ್ದರೂ ಅದು ಸತ್ಯವಲ್ಲವೆಂದು ತಳ್ಳಿ ಹಾಕಲು ಅವರಿಗೆ ಸಾಧ್ಯವಾಗುವುದಿಲ್ಲ.
ಮೋದಿ ಮಾಡದ ತಪ್ಪಿಗೆ ಅವನನ್ನು ಹೊಣೆಗಾರನನ್ನಾಗಿಸುವ ಮೂಲಕ ಆತನ ಬೆಳವಣಿಗೆ ದಾರಿ ಮಾಡಿಕೊಟ್ಟದ್ದು ಹೇಗೆ?
ಅವಮಾನಿಸಲು ಕರೆಸಿದವರು ಬಿರುದುಕೊಟ್ಟು ಕಳುಹಿಸಿದರು
– ಸಂತೋಷ್ ತಮ್ಮಯ್ಯ
೧೯೪೭. ಹಳೆಯ ದೆಹಲಿಯ ಪುರಾನಾ ಕಿಲಾ. ದೇಶಕ್ಕೆ ಸ್ವಾತಂತ್ರ್ಯ ಬಂದು ಅತ್ತ ಲಾಲ್ ಕಿಲಾದಲ್ಲಿ ತಿರಂಗಾ ಹಾರಿ ಜನರು ಕುಣಿಯುತ್ತಿದ್ದರೆ ಪುರಾನಾ ಕಿಲಾಕ್ಕೆ ಆ ಭಾಗ್ಯವಿರಲಿಲ್ಲ. ಏಕೆಂದರೆ ಅದೇ ಹೊತ್ತಿಗೆ ದೇಶವೂ ತುಂಡಾಗಿ, ಪಾಕಿಸ್ಥಾನದಿಂದ ರಾಶಿರಾಶಿ ಹೆಣಗಳೂ , ಹಿಂಡುಹಿಂಡಾಗಿ ನಿರ್ವಸಿತರೂ ದಿಕ್ಕಿಲ್ಲದೆ ಬರುತ್ತಿದ್ದರು. ಆಗ ಅವರಿಗೆಲ್ಲಾ ತಾತ್ಕಾಲಿಕ ನೆಲೆಯನ್ನು ಕೊಟ್ಟಿದ್ದು ಈ ಪುರಾನಾ ಕಿಲಾ. ಹಳೆಯ ಕೋಟೆ. ಧ್ವಜ ಹಾರದ ಕೋಟೆ. ಹಾರಿಸಿದರೂ ಯಾರೂ ಸಂತೋಷ ಪಡದಿರುವಂಥ ಕೋಟೆ. ದೂರದ ಮುಲ್ತಾನ್, ಸಿಂಧ್, ಪಂಜಾಬ್ಗಳಿಂದ ಬಂದವರೆಲ್ಲಾ ಅಲ್ಲಿ ನೆರೆದು ಬೇರೆಯೇ ಆದ ಒಂದು ಭಾರತ ಅಲ್ಲಿ ನಿರ್ಮಾಣವಾಗಿತ್ತು. ಪುನರ್ವಸತಿ ಆಗುವವರೆಗೆ ಅವರಿಗೆಲ್ಲಾ ಅದೇ ಮನೆ. ಅದೇ ನೆಲೆ. ಅಂಥ ಒಂದು ದಿನ ಸಂಘಟನೆಯೊಂದು ನಿರ್ವಸಿತರಿಗೆ ಆಹಾರದ ಪೊಟ್ಟಣಗಳನ್ನು ವಿತರಣೆ ಮಾಡುತ್ತಿತ್ತು. ಅಲ್ಲಿ ಹನ್ನೆರಡು ವರ್ಷದ ಬಾಲಕ ಜನರ ನಡುವೆ ನುಸುಳುತ್ತಿದ್ದ. ದೊಡ್ಡ ಕೈಗಳ ಮಧ್ಯೆ ಸಣ್ಣ ಕೈಗೆ ಪೊಟ್ಟಣಗಳು ಎಟುಕುತ್ತಿರಲಿಲ್ಲ. ದೊಡ್ಡ ಕೈಗಳು ಸಂತ್ರಪ್ತವಾದ ಮೇಲೆ ಹಸಿದಿದ್ದ ಆ ಬಾಲಕನಿಗೂ ಆಹಾರದ ಪೊಟ್ಟಣ ಸಿಕ್ಕಿತ್ತು.
ಆ ಬಾಲಕ ಮುಂದೆ ಫ್ಲೈಯಿಂಗ್ ಸಿಕ್ಖ್ ಎಂದೇ ಹೆಸರಾದ ಖ್ಯಾತ ಅಥ್ಲೆಟ್ ಮಿಲ್ಖಾ ಸಿಂಗ್. ಪುರಾನಾ ಕಿಲಾದಲ್ಲಿ ಆಹಾರದ ಪೊಟ್ಟಣವನ್ನು ವಿತರಿಸಿದ ಆ ಸಂಘಟನೆ ರಾಷ್ಟ್ರೀಯ ಸ್ವಯಂಸೇವಕ ಸಂಘ ಅಂದರೆ ಆರೆಸ್ಸೆಸ್ಸ್. ಆ ಬಾಲಕ ಫ್ಲೈಯಿಂಗ್ ಸಿಕ್ಖ್ ಆಗುವಲ್ಲಿ ಆ ಆಹಾರ ಪೊಟ್ಟಣದ ಪಾತ್ರವೂ ಇದೆ. ಯಾರೂ ಹೇಳದಿದ್ದರೂ, ಯಾರೂ ಬರೆಯದಿದ್ದರೂ, ಯಾರೂ ತೋರಿಸದಿದ್ದರೂ ಅದರ ಪಾತ್ರವನ್ನು, ಅಂದಿನ ಸತ್ಯವನ್ನು ಅಲ್ಲಗೆಳೆಯಲಾಗದು. ದೇಶವಿಭಜನೆಯ ಮಹಾದುರಂತದ ಒಂದು ಉಳಿಕೆ, ಒಂದು ಚಿಹ್ನೆ, ಒಂದು ಜೀವಂತ ಸ್ಮಾರಕವಾದವರು ಸರ್ದಾರ್ ಮಿಲ್ಖಾ ಸಿಂಗ್. ದೇಶ ವಿಭಜನೆಯ ಹೊತ್ತಲ್ಲಿ ಪಾಕಿಸ್ಥಾನದಿಂದ ಓಡಿ ಭಾರತಕ್ಕೆ ಬಂದವರಿಗೆಲ್ಲಾ ಲಾಲ್ ಕೃಷ್ಣ ಅಧ್ವಾನಿ, ಸರ್ದಾರ್ ಮನಮೋಹನ ಸಿಂಗರಾಗುವ ಅದೃಷ್ಟವಿರಲಿಲ್ಲ. ಅಂಥವರಲ್ಲಿ ಮಿಲ್ಖಾ ಸಿಂಗ್ರಂಥವರೇ ಹೆಚ್ಚಿದ್ದರೆಂಬುದು ಇತಿಹಾಸದ ವಾಸ್ತವ. ಅದು ತಿಳಿಯುವುದು ಮಿಲ್ಖಾ ಸಿಂಗನ The Race of my life ನಂಥ ಆತ್ಮ ಕಥೆಗಳಿಂದ.
ಕೃಷ್ಣ ಗಾರುಡಿ ವರ್ಸಸ್ ನರೀಂದ್ರ ಮೋಡಿ!
– ತುರುವೇಕೆರೆ ಪ್ರಸಾದ್
ಮೋದಿ: ಗುರುಗಳೇ, ಕಮಲ ಸೈನ್ಯದ ಮುಂದಿನ ಮಹಾಸಮರ ದಳಪತಿಯಾಗಿ ನೇಮಿಸಲ್ಪಟ್ಟಿರುವೆ. ಕೃಪೆ ಮಾಡಿ ಆಶೀರ್ವದಿಸಿ
ಅಡ್ವಾನಿ: ಛೀ! ಗುರುದ್ರೋಹಿ, ತೊಲಗಿಲ್ಲಿಂದ! ನಿನ್ನ ಮುಖ ತೋರಿಸಬೇಡ ನನಗೆ..!
ಮೋದಿ: ಈ ದುರಾಗ್ರಹವೇಕೆ ಗುರುವೇ! ಇದು ನೀವೇ ಕಲಸಿಕೊಟ್ಟ ಪಟ್ಟು.. ಏಕೀ ವಿರೋಧ? ಗುರು ಮಿಂಚಿನ ಶಿಷ್ಯಡು ಎಂದು ಎದೆ ತಟ್ಟಿ ಹೇಳುವುದು ಬಿಟ್ಟು! ನಿಮ್ಮ ಮುಖವಾಣಿಯಾಗಿದ್ದ ನನಗೇ ನೀವು ಅಡ್ಡವಾಣಿಯಾಗುವುದೇ?
ಅಡ್ವಾನಿ: ರಥ ಹತ್ತಿ ಅತಳ ಸುತಳ ಪಾತಾಳ ಸುತ್ತಿದ ಈ ಅತಿರಥ ಮಹಾರಥನ ಮುಂದೆ ನೀನ್ಯಾವ ಲೆಕ್ಕ?
ಮೋದಿ: ಯಾರು ತಿಳಿಯರು ನಿಮ್ಮ ರಥಬಲದ ಪರಾಕ್ರಮ
ಸಂದಿಗೊಂದಿಗಳೊಳ್ ಸಂಚರಿಸಿದ ನಿಮ್ಮ ರಥಯಾತ್ರೆಗಳ ಕರ್ಮ
ಎಲ್ಲದಕೂ ಕಾರಣವು ಶ್ರೀ ರಾಮ ನಾಮ
ಕಲ್ಯಾಣಸಿಂಗ್ ಇಲ್ಲದಿದ್ದರೆ ಮೂರು ನಾಮ
ಕಡಾಣಿ ಮುರಿದ ರಥದೊಡೆಯ ನೀವು ತೃಣಕ್ಕೆ ಸಮಾನ..!
ಅಡ್ವಾನಿ: ಜನಸಂಘ ಶೂರ ನಾ ಶ್ರೀರಾಮ ಬಲನೋ, ಸಂಘದೊಡನೆ ಹೋರಾಡಿ ಅಧ್ಯಕ್ಷ ಗಾದಿಯಂ ಪಡೆದವನೋ,ಗಡ್ಕರಿಯ ಉತ್ಸವಕೆ ಸಂಚಕಾರ ತಂದವನೋ? ಪ್ರಧಾನಿ ಪಟ್ಟಕ್ಕೆ ಎದುರಾಗೋ ಕುರಿಗಳಂ ನೀವಾಳಿಸೋ ವ್ಯಾಘ್ರನಿವನೋ..ಉಗ್ರ ಪ್ರತಾಪಿ..
೨೦೦೪ ರಲ್ಲಿಯೇ ಅಡ್ವಾಣಿ ಯುಗಾ೦ತ್ಯ ಆಗಿ ಹೋಗಿತ್ತು!
-ರಾಘವೇಂದ್ರ ನಾವಡ
ಭಾ.ಜ.ಪಾ. ದ ಪ್ರಾಥಮಿಕ ಸದಸ್ಯತ್ವನ್ನೊ೦ದು ಬಿಟ್ಟು ಪಕ್ಷದಲ್ಲಿ ತನಗಿದ್ದ ಎಲ್ಲಾ ಹುದ್ದೆಗಳಿಗೂ ರಾಜೀನಾಮೆ ನೀಡಿದ ಅಡ್ವಾಣಿಯ ಹತಾಶ ನಡೆ ಆಶ್ಚರ್ಯವನ್ನೇನೂ ತರಲಿಲ್ಲ! ಬದಲಿಗೆ ಬೇಸರವನ್ನು೦ಟು ಮಾಡಿತು. ಗೋವಾದಲ್ಲಿ ನಡೆದ ಪಕ್ಷದ ಕಾರ್ಯಕಾರಿಣಿಗೆ ಗೈರು ಹಾಜರಾದಾಗಲೇ ಏನೋ ಮಹತ್ತರವಾದುದು ನಡೆಯುತ್ತದೆ ಎ೦ಬುದನ್ನು ಊಹೆಯಿತ್ತು! ಆದರೆ ಅಡ್ವಾಣಿಯ ಈ ನಡೆಯನ್ನಲ್ಲ! ಮೋದಿಯ ಮೇಲಿನ ಅಡ್ವಾಣಿಯವರ ವಿರೋಧದ ಅ೦ತ್ಯ ಹೇಗಾಗಬಹುದೆ೦ದು ಯೋಚಿಸುತ್ತಿದ್ದೆ.. ಮೋದಿಯ ಪದೋನ್ನತಿಯನ್ನು ಊಹಿಸಿಯಾಗಿತ್ತು! ಅದಕ್ಕಿದ್ದ ಅಡ್ವಾಣಿಯವರ ವಿರೋಧವನ್ನೂ ಅರ್ಥೈಸಿಕೊ೦ಡಿತ್ತು! ಆದರೆ ಅಡ್ವಾಣಿಯವರ ಈ ನಡೆ ಪಕ್ಷವನ್ನಷ್ಟೇ ಅಲ್ಲ! ಸಮಸ್ತ ಭಾ.ಜ.ಪಾ ಕಾರ್ಯಕರ್ತರಲ್ಲದೆ ಅದರ ಲಕ್ಷಾ೦ತರ ಅಭಿಮಾನಿಗಳಿಗೂ ಕ್ಷಣ ನಿಟ್ಟುಸಿರು ಬಿಡ್ಶುವ೦ತೆ ಮಾಡಿದೆ! ಕೇವಲ “ ಕೃಷ್ಣ “ ನ ಕೈಯಲ್ಲಿ ಆಯುಧ ಹಿಡಿಸಲೆ೦ದೇ ಕುರುಕ್ಷೇತ್ರದಲ್ಲಿ ಪಾ೦ಡವರೊ೦ದಿಗೆ ಹಿಗ್ಗಾಮುಗ್ಗ ಹೋರಾಡಿದ ಭೀಷ್ಮರು ತನ್ನ ಗುರಿ ಈಡೇರಿದ ನ೦ತರ ಶರಶಯ್ಯೆಯಲ್ಲಿ ಮಲಗಿದ೦ತೆ.. ಭಾಜಪಾದ “ ಲಾಲಕೃಷ್ಣ“ ಶಸ್ತ್ರ ತ್ಯಾಗ ಮಾಡಿರುವುದು ಬೇಸರವನ್ನು೦ಟು ಮಾಡಿದುದರ ಜೊತೆಗೆ… ಹೆ೦ಡತಿಯ ಒತ್ತಾಯಕ್ಕೋ… ವಯಸ್ಸಿನ ಪ್ರಭಾವವೋ… ಶಕ್ತಿಯ ಕೊರತೆಯೋ ಎ೦ಬುದರ ಗೊ೦ದಲದಲ್ಲಿ ತನ್ನ ಅಪ್ರಸ್ತುತತೆಯನ್ನು ಮನಗ೦ಡ ತ೦ದೆಯೊಬ್ಬ ಏಕದ೦ ಕುಟು೦ಬದ ಜವಾಬ್ದಾರಿಯನ್ನು ಮಕ್ಕಳಿಗೆ ತಲ್ಲಣದಿ೦ದಲೇ ನೀಡಿ, ಹೊರಬರುವುದನ್ನು ಕಲ್ಪಿಸಿಕೊಳ್ಳುವ೦ತೆ ಮಾಡುತ್ತದೆ!
ಅದು ೧೯೮೦ ರ ಕಾಲ.. ಜನಸ೦ಘದಿ೦ದ ಬೇರ್ಪಟ್ಟು ಭಾ.ಜ.ಪಾದ ಹುಟ್ಟಿಗೆ ಕಾರಣಕರ್ತರಾದವರಿಬ್ಬರಲ್ಲಿ ವಾಜಪೇಯಿಯ ಜೊತೆಗೆ ಅಡ್ವಾಣಿಯೂ ಒಬ್ಬರು. ೧೯೮೬ ರಲ್ಲಿ ಆ ಪಕ್ಷದ ರಾಷ್ತ್ರೀಯ ಅಧ್ಯಕ್ಷರಾಗುವವರೆಗೂ ಚುನಾವಣೆಗಳಲ್ಲಿ ಭಾಜಪಾದ ಸಾಧನೆಯೇನೂ ಹೇಳಿಕೊಳ್ಳುವ೦ತಹದ್ದಾಗಿರಲಿಲ್ಲ! ಆದರೆ ನ೦ತರದ್ದು ಇತಿಹಾಸ.. ಚುನಾವಣೆಯಿ೦ದ ಚುನಾವಣೆಗೆ ಸುಧಾರಿಸುತ್ತಲೇ ಹೋದ ಭಾಜಪಾ.. ಅಡ್ವಾಣಿಯವರು ಆರ೦ಭಿಸಿದ “ಶ್ರೀರಾಮ ರಥಯಾತ್ರೆಯ“ ಲಾಭವನ್ನು ಭರಪೂರವಾಗಿ ಪಡೆದುಕೊ೦ಡಿತು! ಕಾ೦ಗ್ರೆಸ್ಸಿಗೆ ಸಮಾನವಾಗಿ ಸೆಡ್ದುಹೊಡೆದು ನಿಲ್ಲಲು ಭಾಜಪಾಕ್ಕೆ ಶಕ್ತಿ ತು೦ಬಿದವರೆ೦ದರೆ ಇಬ್ಬರೇ.. ವಾಜಪೇಯಿ ಹಾಗೂ ಅಡ್ವಾಣಿ! ಲಕ್ಷಾ೦ತರ ಕಾರ್ಯಕರ್ತರ ಅಮಿತೋತ್ಸಾಹವೂ ಇವರೊ೦ದಿಗಿತ್ತು! ಬೆನ್ನಿಗೆ ಉಗ್ರ ಹಿ೦ದುತ್ವದ ಅಜೆ೦ಡಾ… ಬೆನ್ನು ಬೆನ್ನಿಗೆ ರಥಯಾತ್ರೆಗಳು.. ಭಾರತ ರಾಜಕೀಯದಲ್ಲಿ “ ರಾಮ-ಲಕ್ಷ್ಮಣ“ರೆ೦ದೇ ಖ್ಯಾತವಾದ ಈ ಜೋಡಿ ಕಾ೦ಗ್ರೆಸ್ ಗೆ ಪರ್ಯಾಯವಾಗಿ ಭಾ.ಜ.ಪಾವನ್ನು ಬೆಳೆಸಿದ್ದಲ್ಲದೆ, ದೇಶದ ರಾಜಕೀಯದಲ್ಲಿ ಕಾ೦ಗ್ರೆಸ್ಸಿಗೆ ಬಹುದೊಡ್ಡ ಪರ್ಯಾರವಾಗಿ ಬೆಳೆದು ನಿ೦ತಿತು. ೧೯೯೬ ರ ಚುನಾವಣೆಯಲ್ಲಿ ಏಕೈಕ ಬಲು ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಬಾ.ಜ.ಪಾಕ್ಕೆ ವಾಜಪೇಯಿ ನೇತಾರರಾದರು. ಚುನಾವಣೆಗೂ ಮುನ್ನ ಅಡ್ವಾಣಿ ವಾಜಪೇಯಿಯವರನ್ನು ಬಾ.ಜ.ಪಾ ದ ಪ್ರಧಾನ ಮ೦ತ್ರಿ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದ್ದು ಫಲ ನೀಡಿತು! “ ಬದಲಾವಣೆಗಾಗಿ ಭಾ.ಜ.ಪಾ.ವನ್ನು ತನ್ನಿ“ , “ ಈ ಬಾರಿ ಬಿ.ಜೆ.ಪಿ“ ಎ೦ಬ ಕಾರ್ಯಕರ್ತರ ಚುನಾವಣಾ ಘೋಷಣೆಗಳು ಫಲ ನೀಡಿದವು. ವಾಜಪೇಯಿಯವರ ಅಕಳ೦ಕಿತ ವ್ಯಕ್ತಿತ್ವ, ರಾಜಕೀಯ ಅನುಭವ ಹಾಗೂ ಅಡ್ವಾಣಿಯವರ ಪ್ರಖರ ಹಿ೦ದುತ್ವವಾದಕ್ಕೆ ಮತದಾರರು ಮಣೆ ಹಾಕಿದರು!
ಗಡ್ಕರಿಯ ಅ”ವಿವೇಕ” ಮತ್ತು ಸಂಘದ “ಸ್ವಾಮಿ”ನಿಷ್ಠೆ…!
– ರಾಕೇಶ್ ಶೆಟ್ಟಿ
“ಇನ್ನೊಬ್ಬ ವಿವೇಕಾನಂದನಿದ್ದಿದ್ದರೆ ಅವನಿಗೆ ತಿಳಿಯುತಿತ್ತು – ಈ ವಿವೇಕಾನಂದ ಏನು ಮಾಡಿದ್ದಾನೆ ಎಂದು… ಇರಲಿ, ಕಾಲಾಂತರದಲ್ಲಿ ಮತ್ತೆಷ್ಟು ಮಂದಿ ವಿವೇಕಾನಂದರು ಉದಿಸಲಿರುವರೋ!” ಸ್ವಾಮೀಜಿ ದೇಹತ್ಯಾಗದ ದಿನ ತಮ್ಮಷ್ಟಕ್ಕೆ ತಾವೇ ಹೇಳಿಕೊಂಡ ಮಾತುಗಳಿವು. ನಿಜ ವಿವೇಕಾನಂದ ಮಾಡಿ ಹೋಗಿದ್ದೇನು? ಯಾರನ್ನಾದರು ಕೇಳಿ ನೋಡಿ, ತಟ್ಟನೆ “ಅವರು ಸರ್ವ ಧರ್ಮ ಸಮ್ಮೇಳನದಲ್ಲಿ ಹಿಂದೂ ಧರ್ಮದ ಶ್ರೇಷ್ಠತೆಯನ್ನು ಜಗತ್ತಿಗೆ ಸಾರಿದರು” ಅಂತಲೇ ಹೇಳುತ್ತಾರೆ..ಮುಂದೇನು ಮಾಡಿದ್ದರು ಅಂತ ಕೇಳುವಷ್ಟರಲ್ಲಿ ಮಾತು ತಡವರಿಸುತ್ತದೆ… ಬಹುಷಃ ಇದೆಲ್ಲವನ್ನೂ ಅರಿತೇ ಸ್ವಾಮೀಜಿ ಬಹುಷಃ ಮೇಲಿನ ಮಾತನ್ನು ಹೇಳಿದ್ದರು ಅನ್ನಿಸುತ್ತದೆ.
ಆದರೆ,ಮುಂದೊಂದು ದಿನ ತಾನು ಪ್ರತಿಪಾದಿಸುತ್ತಿರುವ “ರಾಷ್ಟ್ರೀಯತೆ(?)” ಅನ್ನುವ ಪದವನ್ನು ಹಿಡಿದು ಪಕ್ಷವೊಂದು ಉದಯಿಸಬಹುದು ಮತ್ತು ಅದಕ್ಕೊಬ್ಬ ಮೇಧಾವಿ ಅಧ್ಯಕ್ಷ ಬಂದು ಅವನು “ಸ್ವಾಮಿ ವಿವೇಕಾನಂದರ ಬುದ್ದಿಮತ್ತೆಯನ್ನು ಮುಂಬೈನ ಕಪ್ಪು ಜಗತ್ತಿನ ಕಳ್ಳನಾಗಿದ್ದವನ ಬುದ್ದಿ ಮತ್ತೆಗೆ ಸರಿಸಮ” ಅಂತೇಳಬಹುದು ಅನ್ನುವುದನ್ನು ಮಾತ್ರ ಊಹಿಸಿರಲಿಕ್ಕಿಲ್ಲ…!
ಬಿಜೆಪಿಯ ಅಪಸ್ವರಕ್ಕೆ ‘ಆರ್.ಎಸ್.ಎಸ್’ನದ್ದೇ ಟ್ಯೂನ್
– ರಾಕೇಶ್ ಶೆಟ್ಟಿ
ಅಂದು ಪಾಕಿಸ್ತಾನದ ನೆಲದಲ್ಲಿ ನಿಂತು “ಜಿನ್ನಾ ಜಾತ್ಯಾತೀತರಾಗಿದ್ದರು” ಅನ್ನುವ ಸತ್ಯ ಹೇಳಿದ್ದೆ ಆ ಹಿರಿಯ ಮಾಡಿದ ದೊಡ್ಡ ತಪ್ಪು(!).ಆ ಒಂದು ಮಾತು ಅವರು ಅಲ್ಲಿವರೆಗೂ ದೇಶದ ಮೂಲೆ ಮೂಲೆಗೆ ಹೋಗಿ ಅವರು ಪಕ್ಷಕಟ್ಟಲು ಪಟ್ಟ ಶ್ರಮ,೨ ಸೀಟಿನಿಂದ ಅಧಿಕಾರದ ಚುಕ್ಕಾಣಿ ಹಿಡಿಯುವವರೆಗೂ ಪಕ್ಷ ಸಾಗಿ ಬಂದ ಹಾದಿಯಲ್ಲಿ ಅವರು ವಹಿಸಿದ ಜವಬ್ದಾರಿ ಎಲ್ಲವನ್ನು ಮರೆಸಿಹಾಕಿತ್ತು.ಧುತ್ತನೆ ಅವರ ಮಾತೃ ಸಂಘಟನೆಗೆ ಈ ಹಿರಿಯ ನಾಯಕ ಮತ್ತು ಮುಂದಿನ ಲೋಕಸಭೆ ಚುನಾವಣೆಯ ಪ್ರಧಾನಿ ಅಭ್ಯರ್ಥಿಯಾಗಿದ್ದವರಿಗೆ ವಯಸ್ಸಾಯಿತು ಅನ್ನುವ ಜ್ನಾನೋದಯ ಅರ್ಧ ರಾತಿಯಲ್ಲಿ ಆಗಿಬಿಟ್ಟಿತ್ತಲ್ಲ,ಅಷ್ಟೇ ಸಾಕಿತ್ತು ಅವಮಾನಕಾರಿಯಾಗಿ ಅವರನ್ನು ಪಕ್ಕಕ್ಕೆ ತಳ್ಳಿ,ಅಲ್ಲಿಯವರೆಗೂ ಮಹಾರಾಷ್ಟ್ರ ಬಿಟ್ಟು ಹೊರಗೆ ಹೆಸರೇ ಕೇಳಿರದ ‘ಯುವ ನಾಯಕ(?)’ ನನ್ನು ಪಕ್ಷದ ರಾಷ್ಟ್ರಾಧ್ಯಕ್ಷ ಸ್ಥಾನದಲ್ಲಿ ಪ್ರತಿಷ್ಠಾಪಿಸಲಾಯಿತು.
ಇವತ್ತಿಗೆ ‘ಆ ಹಿರಿಯ’ರನ್ನು ಮರೆತು ಮುಂದೆ ಹೋದ ಆ ಪಕ್ಷದ ಪಾಡು, ಅಹಂಕಾರದಿಂದ ಕೃಷ್ಣ ಪರಮಾತ್ಮನನ್ನು ಬಿಟ್ಟು ಬಿಲ್ವಿದ್ಯೆ ಮರೆತು ನಿಂತ ‘ಅರ್ಜುನ’ನಂತೆಯೇ ಆಗಿದೆ.ಕೂದಲು ಬೆಳೆಯೋ ಜಾಗವೆಲ್ಲ ತಲೆ ಅಂದುಕೊಂಡವರಂತೆ ಆ ಪಕ್ಷದಲ್ಲಿರುವ ಜನರೆಲ್ಲಾ ತಾವೇ ‘ಪ್ರಧಾನಿ ಅಭ್ಯರ್ಥಿ’ಗಳು ಅಂದುಕೊಂಡಿದ್ದಾರೆ.ಅಂದ ಹಾಗೆ,ಆ ಹಿರಿಯರ ಹೆಸರು ಲಾಲ್ ಕೃಷ್ಣ ಅಡ್ವಾಣಿ,ಪಕ್ಷ ಬಿಜೆಪಿ,ಮಾತೃ ಸಂಘಟನೆಯ ಹೆಸರು ‘ಆರ್.ಎಸ್.ಎಸ್’ ಮತ್ತೆ ಆ ಯುವನಾಯಕ(?) ಮೊನ್ನೆ ಮೊನ್ನೆ ತಾನೇ ಎಕರೆಗಟ್ಟಲೆ ರೈತರ ಜಮೀನು ಸ್ವಾಹ ಮಾಡಿದ್ದಾರೆ ಅನ್ನುವ ಆರೋಪ ಹೊತ್ತ ನಿತಿನ್ ಗಡ್ಕರಿ.
ಕಪಟ ನಾಟಕ ಸೂತ್ರಧಾರಿ ನೀನೇ…
– ಅಶ್ವಿನ್ ಅಮಿನ್
ದೇಶದ ಯಾವುದೇ ಮೂಲೆಯಲ್ಲಿ ಆಡ್ವಾಣಿ, ವಾಜಪೇಯಿಯಂತಹ ಹಿರಿಯ ಬಿಜೆಪಿ ಮುತ್ಸದ್ದಿಗಳು ‘ಜೈ ಶ್ರೀ ರಾಮ್ ಎಂದರೆ ಸಾಕು ಅದು ಮಂಗಳೂರಿನವರ ಬಾಯಲ್ಲಿ ಮಾರ್ದನಿಸುತ್ತದೆ. ಹಿಂದುತ್ವ ಎಂದರೆ ಉಸಿರು, ಹಿಂದುತ್ವ ಎಂದರೆ ಜೀವನ, ಹಿಂದುತ್ವ ಎಂದರೆ ಸರ್ವಸ್ವ ಎಂದು ಹಿಂದುತ್ವವನ್ನೇ ಮೈಗೂಡಿಸಿಕೊಂಡ ನಾಡು ಈ ಕರಾವಳಿಯ ಮಂಗಳೂರು ಹಾಗು ಉಡುಪಿ ಜಿಲ್ಲೆಗಳು… ಬರೀ ವೋಟ್ ಬ್ಯಾಂಕ್ ಗಷ್ಟೇ ಹಿಂದುತ್ವದ ಸೋಗು ಹಾಕಿಕೊಳ್ಳುವ ಈ ಕಾಲದಲ್ಲಿ ಹೃದಯದಿಂದ ಹಿಂದುತ್ವವನ್ನು ಅಪ್ಪಿಕೊಂಡವರಿವರು.ಇಲ್ಲಿ ಬಿಜೆಪಿಯಿಂದ ಹಿಂದುತ್ವ ಬಂದಿಲ್ಲ ಬದಲಾಗಿ ಹಿಂದುತ್ವದಿಂದ ಬಿಜೆಪಿ ಬಂದಿದೆ ಆದರೆ ಈಗ ನಾವೆಷ್ಟು ಮೂರ್ಖರಾಗಿದ್ದೆವು ಎಂಬುದರ ಅರಿವಾಗುತ್ತಿದೆ. ವೋಟ್ ಬ್ಯಾಂಕ್ ಗಾಗಿ ನಮ್ಮ ಹಿಂದುತ್ವವನ್ನು ಬಳಸಿಕೊಂಡರಲ್ಲ ಎಂಬ ಬಗ್ಗೆ ಖೇದವಾಗುತ್ತಿದೆ. ಇದಕ್ಕೆ ಕಾರಣರಾದವರ ಮೇಲೆ ಕೋಪ, ಸಿಟ್ಟು, ಅಸಹನ, ಜೊತೆ ಜೊತೆಗೆ ನಮ್ಮ ಮೇಲೆಯೇ ಅಸಹನೆ ಹುಟ್ಟುತ್ತಿದೆ…!
ಈಗಿನ ಕಾಲಘಟ್ಟದಲ್ಲಿ ಕರ್ನಾಟಕದಲ್ಲಿ ಬಿಜೆಪಿ ನಿಜವಾಗಲೂ ಅದರ ಸಿದ್ಧಾಂತಗಳನ್ನು ಉಳಿಸಿಕೊಂಡಿದ್ದರೆ ಅದು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿಯಲ್ಲಿ ಮಾತ್ರವೇನೋ… ಪ್ರತಿ ಸಲದ ಚುನಾವಣೆಯಲ್ಲೂ ಬಿಜೆಪಿಗೆ ಅತ್ಯಧಿಕ ಶಾಸಕರನ್ನು ಕೊಟ್ಟ, ಪಕ್ಷದ ಯಾವ ಕ್ಲಿಷ್ಟ ಸಂದರ್ಭಗಳಲ್ಲೂ ಕೈ ಹಿಡಿಯುವಂತಹ ಜಿಲ್ಲೆಯಿದು. ಆದರೆ ಗೆದ್ದು ಅಧಿಕಾರಕ್ಕೆ ಬಂದ ಮೇಲೆ ಮಾತ್ರ ಎಲ್ಲರಿಂದಲೂ ಕಡೆಗಣಿಸಲ್ಪಟ್ಟಿತು. ಚುನಾವಣಾ ಗೆಲ್ಲುವವರೆಗೆ ಹಿಂದುತ್ವ ಎಂದು ಮಾತನಾಡುತ್ತಿದ್ದ ರಾಜ್ಯದ ಹಿರಿಯ ನಾಯಕರುಗಳು ಲಿಂಗಾಯಿತ, ಒಕ್ಕಲಿಗ ಎಂದು ಶುರುವಿಟ್ಟುಕೊಂಡರು. ‘ನಾವೆಲ್ಲಾ ಹಿಂದೂ, ನಾವೆಲ್ಲಾ ಒಂದು’ ಎಂದು ಭಾಷಣ ಮಾಡುವ ಮಂದಿ ಜಾತಿ ಲೆಕ್ಕ ಆರಂಭಿಸಿದರು.





