ಮರೆಯಲಾಗದ ಲಾಟರಿ ಟಿಕೆಟ್
– ಪವನ್ ಪಾರುಪತ್ತೇದಾರ
ಕಾಲೇಜ್ ನ ಗೋಡೆಯ ಮೇಲೆ ಹೋಗೆ ಬಿಡುತ್ತಾ ನಾನು ಮತ್ತು ಬಾಸ್ ಬಂಡಾರಿ ಕುಳಿತಿದ್ದೆವು. ಸಿಗರೇಟನ್ನು ಘಾಡವಾಗಿ ಎಳೆದ ಭಂಡಾರಿ ಎಲ್ಲೋ ಶಿಷ್ಯ ಇನ್ನು ಸಿಂಹ ಬಂದೆ ಇಲ್ಲಾ ಅಂದ. ನಾನು ಒಮ್ಮೆ ಗಡಿಯಾರವನ್ನು ನೋಡಿ ಬಾಸ್ ಈಗ fly ಓವರ್ ಕಾಮಗಾರಿ ನಡೆಯುತ್ತಿದೆ ಅಲ್ವಾ ಟ್ರಾಫಿಕ್ ತುಂಬಾ ಇರತ್ತೆ ಅದಕ್ಕೆ ಲೇಟ್ ಆಗಿರಬೇಕು ಎಂದೆ. ಆಗ ಸಮಯ ಸುಮಾರು ೧೧ ಘಂಟೆ. ನಾನು ದ್ವಿತೀಯ PUC ಡುಮ್ಕಿ ಹೊಡೆದು ನಮ್ಮ ಸರ್ಕಾರೀ ಕಾಲೇಜ್ ನ ಗೋಡೆಯ ಮೇಲೆ ಕೂತು ಗೆಳೆಯರ ಜೊತೆ ಹರಟೆ ಹೊಡೆಯುವುದನ್ನೇ ಕಾಯಕವಾಗಿ ಮಾಡಿಕೊಂಡಿದ್ದೆ. ಬಾಸ್ ನಮಗಿಂತ ಒಂದೆರಡು ವರುಷ ಹಿರಿಯರು. ಅವರು ಸಹ ಡಿಪ್ಲೋಮಾ ಇಯರ್ ಬ್ಯಾಕ್ ಆಗಿ ನಮ್ಮ ಜೊತೆಯಲ್ಲೇ ಅಡ್ಡ ಹೊಡೆಯುತಿದ್ದರು. ಬೆಳಿಗ್ಗೆ ತಿಂಡಿ ತಿಂದು ಮನೆಯಿಂದ ಹೊರಟರೆ ಊಟದ ಸಮಯಕ್ಕೆ ಮತ್ತೆ ಮನೆ ಸೇರುತಿದ್ದಿದ್ದು, ಮತ್ತೆ ಸಂಜೆ ೪ ಕ್ಕೆ ಕ್ರಿಕೆಟ್ ಆಡಲು ಹೊರಟರೆ ಮನೆ ಸೇರುತಿದ್ದಿದ್ದು ರಾತ್ರಿ ೧೦ ಘಂಟೆಗೆ.
ಇಂತಹ ನಮ್ಮ ದಿನಚರಿಯಲ್ಲಿ ಸಿಂಹ ಪ್ರತಿ ದಿನ ಸಿಂಹ ಒಂದು ಒಳ್ಳೆಯ ಕೆಲಸ ಮಾಡುತಿದ್ದ. ದ್ವಿತೀಯ PUC ಫೈಲ್ ಆದರು, ಮನೆಗೆ ಒಂದಷ್ಟು ಸಹಾಯವಗುತಿದ್ದ. ಅವನು ಮಾಡುತಿದ್ದ ಕೆಲಸ ನಮ್ಮೂರಿಂದ ಬೆಂಗಳೂರಿಗೆ ಹೋಗಿ ಲಾಟರಿ ಟಿಕೆಟ್ ಕೊಂಡು ತರುವುದು. ಇಷ್ಟಕ್ಕೂ ಸಿಂಹ ಎಂದರೆ ಇವನ ಧೈರ್ಯಕ್ಕೆ ಪ್ರತಾಪಕ್ಕೆ ಕೊಟ್ಟಿರುವ ಬಿರುದೇನಲ್ಲ ಬಿಡಿ. ಅ ವಯಸಿಗೆ ಅವನ ಕಿವಿಯ ಮೇಲೆ ಒಂದೆರಡು ರೋಮ ಹುಟ್ಟಿತ್ತು, ಅದನ್ನೇ ಆಗಾಗ ನಿವುತ್ತ ಸಿಂಹ ಸಿಂಹ ಹಹಹಹ ಎಂದು ವಿಚಿತ್ರವಾಗಿ ಘರ್ಜಿಸುತಿದ್ದ. ಅದಕ್ಕೆ ನಾವು ಆಯಿತು ಬಿಡಪ್ಪ ನೀನು ಸಿಂಹನೆ ಅಂತ ಹಾಗೆ ಕರೆಯುತಿದ್ದೆವು. ಅವನ ನಿಜವಾದ ಹೆಸರು ಮಹೇಶ್, ಮಹೇಶ್ ಕುಮಾರ್ ಯಾದವ್
ಮನದ ತೀರದ ತುಂಬಾ ಮರೆಯದ ಹೆಜ್ಜೆಗುರುತು!
– ವಾಣಿ ಶೆಟ್ಟಿ, ಉಡುಪಿ.
ನೆನಪುಗಳು………….. ಇವೇ ಹೊತ್ತಲ್ಲದ ಹೊತ್ತಲ್ಲಿ ಕಾಡುತ್ತವೆ.. ಮತ್ತವೇ ನೊಂದ ಮನಸ್ಸನ್ನು ಸಂತೈಸುತ್ತವೆ ಕೂಡಾ!ಅವುಗಳು ಸದಾ ನಮ್ಮ ಅದೊಂದು ಕಾಲದ…ಅನ್ನೋ ನೆನಪಿನ ಗಣಿಯ ವಜ್ರ.ಸರಿಯಾಗಿ ಏಳೆಂಟು ವರ್ಷಗಳ ಹಿಂದೆ ಹೈಸ್ಕೂಲ್ ಮುಗಿಸುವ ತರಾತುರಿಯಲ್ಲಿದ್ದೆವಲ್ಲ.ಆಗೆಲ್ಲ ನಮಗೆ ಬದುಕು ಇಷ್ಟು ಬೇಗ ಆಧುನಿಕವಾಗಿ ಬಿಡಬಹುದು ಅನ್ನೋ ಕಲ್ಪನೆಯೇ ಇದ್ದಿರಲಿಲ್ಲ.ಯಾವ ಗೋಜಲು,ಗೊಂದಲ ಗಳೇ ಇಲ್ಲದ ದಿನಗಳವು!ಸ್ಕೂಲ್ ಡೇಯ ಹಿಂದಿನ ದಿನ ನಾಟಕ ,ಡ್ಯಾನ್ಸ್ ಪ್ರಾಕ್ಟಿಸ್ ಮಾಡಿ ಶಾಲೆಯ ಹಿಂದಿದ್ದ ಮರಗಳ ಅಡಿ ಕುಳಿತು ಮಾತಾಡುವಾಗ ಬಹುಶಃ ನಮ್ಮ ನಾಲ್ವರಿಗೂ ಗೊತ್ತಿತ್ತು ಮುಂದೆ ಹೀಗೆ ಭೇಟಿ ಆಗೋದು ಕಷ್ಟ ಅಂತ.ಅಷ್ಟು ದೂರದ ಕಾಲೇಜಿಗೆ ನಮ್ಮೆಲ್ಲರ ಮನೇಲಿ ಕಳಿಸ್ತಾರೋ ಇಲ್ವೋ ಏನೇ ಆದರೂ ಸಿಗ್ತಾನೆ ಇರೋಣ ಆಯ್ತಾ ಅಂದಾಗ ಹಾಂ ಆಯ್ತು ಅದಕ್ಕೇನು ಅಂದಿದ್ದೆ..ಆಮೇಲೆ ದಿನಗಳೆಲ್ಲ ಹ್ಯಾಗೆ ಓಡಿಬಿಟ್ಟವಲ್ಲ, !
ಈಗ ಕಾಡುತ್ತಿವೆ ನೆನಪುಗಳು ಸಾಯುವಷ್ಟು…! ಅಂದುಕೊಂಡಿದ್ದು ಸಾಧಿಸಿ ಸಂಪೂರ್ಣವಾಗಿ ಆಧುನಿಕತೆಯ ಗೂಡೊಳಗೆ ಬಂದ ಮೇಲೆ ಇಂದು ಎಲ್ಲವೂ ಇದೆ ಇಲ್ಲಿ ..ಸಮಯ ಮರೆಸುವ ಸ್ನೇಹಿತರು ,ಅಂತರ್ಜಾಲಗಳು, ರೆಸಾರ್ಟ್, ಗೇಮ್ಸ್,ಪಿಕ್ನಿಕ್ ,…ಇನ್ನೂ..ಆದರೆ ಬರೀ ನೂರು ಪುಟಗಳ ನನ್ನ ಹಳೆಯ ಆಟೋಗ್ರಾಫ್ ಕೊಡೊ ಅಧ್ಬುತ ಭಾವುಕತೆಯನ್ನು ಯಾವ ಆರ್ಕುಟ್, ಫೇಸ್ ಬುಕ್ ಗಳು ಕೂಡಾ ಕೊಡಲಾರವು..ಈ ಆಟೋಗ್ರಾಫ್ ನಲ್ಲಿ ರಜನಿ ಬರೆದ ಒಂದು ವಾಕ್ಯವಿದೆ “ನಮ್ಮ ಜೀವನ ಒಂದು ಬಸ್ ಪ್ರಯಾಣ ಇದ್ದ ಹಾಗೆ .ನಮ್ಮ ನಮ್ಮ ಸ್ಟಾಪ್ ಬಂದಾಗ ಇಳಿದು ಕೊಳ್ಳಲೇಬೇಕು”..ಹೇಯ್, ತಿರುಗಿ ಬಂದಿದ್ದೆನಲ್ಲಾ ನೀವೆಲ್ಲ ಇಳಿದಲ್ಲಿ ನಿಮ್ಮನ್ನು ಹುಡುಕಿಕೊಂಡು !!?ಎಲ್ಲಿದ್ರಿ ನೀವೆಲ್ಲಾ ಅಲ್ಲಿ ?ಬರೀ 4-5 ವರ್ಷದಲ್ಲೇ ನಿಮ್ಮ ಮೂರೂ ಜನರ ಮದುವೆಯಾಗಿ ಎಲ್ಲೆಲ್ಲೋ ಹೋಗಿಬಿಟ್ಟಿರಲ್ಲ..ನಿನ್ನ ಅಡ್ರೆಸ್ ,ಫೋನ್ ನಂಬರ್ ತುಂಬಾ ಹುಡುಕಿದ್ಲು.ಅಡ್ರೆಸ್ ಕೊಡಲೇ ಇಲ್ವಂತೆ ನೀನು.ಮದುವೆಗ್ ಕರಿಯೋಕೆ ಆಗಲಿಲ್ಲ ಅಂತ ಎಸ್ಟ್ ಬೇಜಾರ್ ಮಾಡ್ಕೊಂಡ್ಲು ಗೊತ್ತ ..ಹೆಚ್ಚು ಕಮ್ಮಿ ಮೂವರ ಮನೆಯಲ್ಲೂ ಹೇಳಿದ ಮಾತಿದು ..ಪೇಲವ ನಗೆ ನಕ್ಕಿದ್ದೆ..ಮುಂದೆ ಎಲ್ಲಿ ಹ್ಯಾಗೆ ಎಷ್ಟು ಓದ್ತೀನಿ ಅಂತ ಗೊತ್ತಿಲ್ಲದವಳು ಏನು ಅಡ್ರೆಸ್ ಕೊಟ್ಟಿರಬೇಕಿತ್ತು?ನಿಮ್ಮೆಲ್ಲರ ಮದುವೆ ಆಲ್ಬಮ್ ನೋಡ್ಲಿಕ್ಕೆ ಸಿಕ್ಕಿದ್ದಷ್ಟೇ ಪುಣ್ಯ ! ಹಾಗೆ ವಾಪಾಸ್ ಬರೋವಾಗ ಶಾಲೆಯ ಬಳಿ ಹೋಗಿದ್ದೆ..ಸಡನ್ ಆಗಿ “ಮೈ ಆಟೋಗ್ರಾಫ್ ” ಸಿನೆಮಾ ನೆನಪಾಗಿತ್ತು.
ಎಳೆ ಹುಡುಗನ ಕನಸುಗಳು
ಪವನ್ ಪರುಪತ್ತೆದಾರ
ಜೀವನವನ್ನು ಸರಿಯಾಗಿ ಗಮನಿಸುತ್ತಾ ಹೋದರೆ ಒಮ್ಮೊಮ್ಮೆ ಅತೀ ಚಿಕ್ಕ ವಿಷಯಗಳು ಮನಸಿಗೆ ನಾಟಿಬಿಡುತ್ತವೆ, ನಮ್ಮ ಮನೆ ಪಕ್ಕದಲ್ಲೇ ಇರುವ ಒಬ್ಬ ಹುಡುಗನ್ನ ನನ್ನ ಗಾಡಿ ಒರೆಸಲೆಂದು ಕರೆದೆ ಅವನ ಹೆಸರು ವಿಶ್ವನಾಥ, ಪ್ರೀತಿಯಿಂದ ಎಲ್ಲರು ಪಪ್ಪಳ ಎಂದು ಕರೀತಾರೆ. ಹತ್ತಿರದಲ್ಲೇ ಇರೋ ಒಂದು ಸರ್ಕಾರೀ ಶಾಲೆಯಲ್ಲಿ 3 ನೆ ತರಗತಿ ವ್ಯಾಸಂಗ ಮಾಡ್ತಾ ಇದಾನೆ. ಓದಿನಲ್ಲೂ ಮುಂದು ಕೆಲಸದಲ್ಲೂ ಮುಂದು ನ ಕರೆದ ತಕ್ಷಣ ಓಡಿ ಬಂದು ಏನು ಪವನಣ್ಣ ಕರೆದ್ರಲ್ಲ ಅಂದ, ಗಾಡಿ ಒರೆಸಿ ಕೊಡೊ ಪಪ್ಪಳ ಅಂದೆ, ಅದಕ್ಕೆ ಅವರಮ್ಮಮ್ಗೆ ಅಮ್ಮೋ ನ ಪವನಣ್ಣ ವೀಟ್ ಕಿಟೆ ಇರಕ್ಕೆ ಅಂತ ಕಿರುಚಿದ( ಅವರ ಮಾತೃ ಭಾಷೆ ತಮಿಳು ).
ನಾನು ಗಾಡಿ ವರೆಸೋ ಬಟ್ಟೆ ತೆಗೆದು ಕೊಟ್ಟೆ ಹಾಗೆ ಒರೆಸುತ್ತಾ ಒರೆಸುತ್ತಾ ಪವನಣ್ಣ ನೀವು ಎಷ್ಟನೆ ಕ್ಲಾಸು ಅಂದ, ನಾನು ಇಂಜಿನಿಯರಿಂಗ್ ಕಣೋ ಪಪ್ಪಳ ಅಂದೆ, ಅಂದ್ರೆ 20 ನೆ ಕ್ಲಾಸ್ ಅ ಅಂದ ನಾನು ಸ್ವಲ್ಪ ಯೋಚಿಸಿ ಲೆಕ್ಕ ಹಾಕಿ 16 ನೆ ಕ್ಲಾಸು ಅಂದೆ, ಹಾಗಾದ್ರೆ ನಾನು ಇ ಥರ ಗಾಡಿ ತೊಗೋಬೇಕು ಅಂದ್ರೆ ಇನ್ನು ೧೩ ಕ್ಲಾಸ್ ಓದಬೇಕು ಅಂದ. ಸ್ವಲ್ಪ ನಕ್ಕು ಹೌದು ಧೌದು ಎಂದೆ..
ಹಾಗೆ ಗಾಡಿ ಒರೆಸುತ್ತಾ ಒರೆಸುತ್ತಾ ಪವನಣ್ಣ ನೆನ್ನೆ ನಾನು ಸೌತೆ ಕಾಯಿ ಮಾರಕ್ ಹೋಗಿದ್ದೆ ಅಂದ , ಅವರ ತೋಟದಲ್ಲಿ ಸೌತೆ ಕಾಯಿ ಬೆಳೆ ಇರಲಿಲ್ಲ ಅಲ್ಲದೆ ಅಕ್ಕ ಪಕ್ಕದ ಯಾವ ತೋಟದಲ್ಲೂ ಸೌತೆಕಾಯಿ ಬೆಳೆ ಇರಲಿಲ್ಲ ಇವನ ಹೇಗೆ ಮಾರಿಕೊಂಡು ಬಂದ ಅನ್ನೋ ಅನುಮಾನದಲ್ಲೇ, ಲೋ ಪಪ್ಪಳ ಸೌತೆಕಾಯಿ ಎಲ್ಲಿಂದ ಬಂತೋ ಅಂದೆ. ಅದಕ್ಕೆ ಅವ ಪವನಣ್ಣ ಆದ ಯಾರ್ದೋ ಮನೇಲಿ ಸ್ಕೂಲ್ ಇಂದ ವಾಪಾಸ್ ಬರೋವಾಗ ಹಸುಕಾಕು ಅಂತ ಕೊಟ್ರು, ನ ಮಾರಿಕೊಂಡು ಬಂದ್ ಬಿಟ್ಟೆ ಅಂದ ಅದಕ್ಕೆ ನಾನು ಲೋ ಕೆಟ್ಟಿರೋ ಸೌತೆಕಾಯಿ ಯಾರದ್ರು ಮಾರ್ತರೇನೋ ಅಂದೆ ಅವನು ಇಲ್ಲ ಪವನಣೋ.ಚಂದಗಿತ್ತು ಸ್ವಲ್ಪ ಬಲ್ತೋಗಿತ್ತು ಅಷ್ಟೇ ಅದಕ್ಕೆ ಮಾರಿಕೊಂಡು ಬಂದೆ ಅಂದ. ಸರಿ ಎಷ್ಟು ಕಾಸ್ ಬಂತು ಏನ್ ಮಾಡಿದೆ ಅಂದೆ, ಅದಕ್ಕೆ ೨೦ ರುಪಾಯಿ ಬಂತು, ನಮ್ಮಮ್ಮ ಪಾಪ ಓಲೆ ಇಲ್ಲ ಅಂತ ಇದ್ಲು ಅದಕ್ಕೆ ಚಿನ್ನದ ವಾಲೆ ತಂದು ಕೊಟ್ಟೆ ಅಂದ. ನನಗೆ ನಗು ತಡೆಯಕ್ಕಾಗದೆ, ಲೋ ಪಪ್ಪಳ 20 ರೂಪಾಯಿಗೆ ಯಾರೋ ಚಿನ್ನದ ವೋಲೆ ಕೊಡ್ತಾರೆ ಅಂದ್ರೆ ಅಯ್ಯೋ ಹೋಗ ಪವನಣ್ಣ ಅಷ್ಟೇ ಮತ್ತೆ ನಿಮಗೆ ಗೊತ್ತಿಲ್ಲ ಅಂದ , ಆಮೇಲೆ ಹಾಗೆ ಮುಂದುವರೆಸುತ್ತಾ ಆದ್ರೆ ಆ ವಾಲೆನ ಐಶು ಕದ್ದುಕೊಂಡೋಗವಳೆ ಕೇಳಿದ್ರೆ ನಂದೇ ಅಂತವ್ಲೇ ಪವನಣ್ಣ ಅಂದ, ಮತ್ತೆ ಈಗ ಏನೋ ಮಾಡ್ತ್ಯ ಅಂದೆ ಅದಕ್ಕೆ ಅವನು ಅಯ್ಯೋ ಹೋದ್ರೆ ಹೋಗ್ಲಿ ಶುಕ್ರವಾರ ಸಂತೆಗೆ ನಮ್ಮತ್ತೆ ಜೊತೆ carrot ಮಾರಕ್ ಹೋಗ್ತೀನಿ ಸ್ಕೂಲ್ ಬಿಟ್ ತಕ್ಷಣ ಹೋಗಿ 3 hour ವ್ಯಾಪಾರ ಮಾಡಿದ್ರೆ 20 ರುಪಾಯಿ ಕೊಡ್ತಾರೆ ಅ ಕಾಸಲ್ಲಿ ಸಂತೆಲೆ ಓಲೆ ತೆಕ್ಕೊಡ್ತೀನಿ ಅಂದ.
wow ಅವನ ಅಮ್ಮನಿಗೆ ವಾಲೆ ಕೊಡಿಸಬೇಕಂಬ ಅಸೆ ಅ ವಯಸಿಗೆ ತಾಯಿಯ ನೋವನ್ನ ಅರ್ಥ ಮಾಡ್ಕೊಳೋ ಮನಸು ನೋಡಿ ನನಗೆ ದಿಗ್ಭ್ರಮೆ ಆಯಿತು.ಅಷ್ಟರಲ್ಲೇ ಗಾಡಿ ಒರೆಸಿದ್ದಾಗಿತ್ತು ಒರೆಸೋ ಬಟ್ಟೆ ಒದೆರಿ ವಾಪಾಸ್ ಕೊಟ್ಟು ಹೋಗ್ತೀನಿ ಪವನಣ್ಣ ನಮ್ಮಪ್ಪನ ಜೊತೆ ನೀರ್ ಕಟ್ಟಕ್ ಹೋಗ್ಬೇಕು ಅಂತ ನಿಂತ, ನಾನು ಜೆಬಿಗೆ ಕೈ ಹಾಕಿದರೆ 3 ರು ಚಿಲ್ಲರೆ ಇತ್ತು ಕೊಟ್ಟು ಹೋಗಿ ಹುಂಡಿಗೆ ಹಕ್ಕೊಲೋ ಪಪ್ಪಳ ಅಂದೇ ಕುಷಿ ಕುಷಿಯಾಗಿ ಮನೆ ಕಡೆ ಓಡಿದ,…..!!!
********************************************************************
ಅಲಾಲ್ ಟಪಾಲ್…!
– ಪವನ್ ಪಾರುಪತ್ತೇದಾರ
ನಮ್ಮಪ್ಪ ನನ್ನ ಹಾಗೆ ಕರೆಯೋದ್ರಲ್ಲು ಒಂದು ಅರ್ಥ ಇತ್ತು ಕಾರಣ ಇತ್ತು. ಏಳುತ್ತಾ ಇದ್ದದ್ದು ೯ ಘಂಟೆ ಎದ್ದು ಹಲ್ಲು ತಿಕ್ಕೋ ಅಷ್ಟರಲ್ಲಿ ಅಮ್ಮ ಕಾಫೀ ಕೊಡುತಿದ್ದರು, ನಂತರ ಸ್ನಾನ ಮುಗಿಸಿ
ತಿಂಡಿ. ಅಷ್ಟರಲ್ಲಿ ೧೧ ಘಂಟೆ ಆಗಿರೋದು. ಇನ್ನು ಆಗ ಕಂಪ್ಯೂಟರ್ ಮುಂದೆ facebook, orkut, ಅ ಸಂಘ, ಈ ಕೂಟ, ಇನ್ಯಾವುದೋ ಬಳಗ ಅಂತ ಚಾಟಿಂಗ್ ಮಾಡುತ್ತಾ ಕೂತರೆ ಮಧ್ಯಾಹ್ನ ೨ ಘಂಟೆ ಆಗುವುದೇ ಗೊತ್ತಾಗುವುದಿಲ್ಲ. ಅಷ್ಟರಲ್ಲಿ ದೇವಸ್ಥಾನಕ್ಕೆ ಹೋಗಿದ್ದ ಅಪ್ಪ ಮನೆಗೆ ಬರುತ್ತಾರೆ. ಊಟ ಮಾಡಲು ಎಲ್ಲರು ಕೂತು ಊಟ ಮುಗಿಸಿ ನಂತರ ಮತ್ತೆ online ಹೋದರೆ ಮತ್ತೆ ಸಮಯದ ಅರಿವೇ ಇರುವುದಿಲ್ಲ.
ಸಂಜೆ ೬ ಘಂಟೆ ಹೊತ್ತಿಗೆ ಹಸು ಮನೆಯಲ್ಲಿನ ಸಗಣಿ ಕಸ clean ಮಾಡಿ, ಮತ್ತೆ ಒಂದು ರೌಂಡ್ ಕಾಫೀ ಕುಡಿದು ಹೊರಟರೆ ಮತ್ತೆ ಮನೆ ಸೇರುತಿದ್ದಿದ್ದು 10 ಘಂಟೆಗೆ. ಸ್ನೇಹಿತರ ಜೊತೆ ಅಡ್ಡ, ಕಾಡು ಹರಟೆ, ಮನೆಗೆ ಬಂದೊಡನೆ ಊಟ ಮಾಡಿ ಮತ್ತೆ online 12 ರ ತನಕ ಚಾಟಿಂಗ್ ನಂತರ ನಿದ್ದೆ. ಈ ರೀತಿಯ ದಿನಚರಿ ಇರುವ ಯಾವ ಮಗನನ್ನಾದರೂ ಅಲಾಲ್ ಟಪಾಲ್ ಅನ್ನದೆ ಮುದ್ದು ಮಾಡೋದಕ್ಕ ಸಾಧ್ಯ??
ಹೌದು ನಾನು ಅಲಾಲ್ ಟಪಾಲೇ, ಅಲೆದು ಅಲೆದು ನಂತರ ಅದರ ಗುರಿಯನ್ನು ಸೇರುವ ಟಪಾಲಿನ ಮೇಲೆ ಒಂದು ವಿಳಾಸ ಇರುತ್ತದೆ. ಹಾಗೆ ನನ್ನ ಈ ಬದುಕಿನ ವಿಳಾಸ ನಾನೆ ಬರೆದುಕೊಂಡಿರುವಂತೆ ಎಲೆಕ್ಟ್ರಾನಿಕ್ಸ್ ಇಂಜಿನಿಯರ್ ಆಗಬೇಕೆಂದು. ಆದರೆ ವಿಧಿ ಅದನ್ನು ಸರ್ಟಿಫಿಕೇಟ್ ಗಷ್ಟೇ ಸೀಮಿತಗೊಳಿಸಿದೆ. campus ಇಂಟರ್ವ್ಯೂ ಗೆ ಬಂದ ಕಂಪನಿಗಳೆಲ್ಲ software ಗಳೆ, ನಾನು ಅದ್ರಲ್ಲಿ ಸೆಲೆಕ್ಟ್ ಆಗೋವಷ್ಟು ಬುದ್ಧಿವಂತ ಆಗಿರಲಿಲ್ಲ ಅನ್ಸುತ್ತೆ. ಯಾವ ಕಂಪನಿಯವರು ನನ್ನ ಸೆಲೆಕ್ಟ್ ಮಾಡಿಲ್ಲ.
ನಮಗೆ ದುಡ್ಡಿನ ಬೆಲೆ ಗೊತ್ತಿದ್ಯಾ?
-ಪ್ರಶಸ್ತಿ. ಪಿ,ಶಿವಮೊಗ್ಗ
ಇಸ್ತ್ರಿಯಂಗಡಿಗೆ ಹೋಗಿದ್ದೆ.. ಅಲ್ಲಿ ಅವ ಹೇಳ್ತಾ ಇದ್ದ. ೧ ಚೀಲ ಇದ್ದಿಲಿಗೆ ೧೫೦೦ ರೂಪಯಿ. ಒಂದು ವರ್ಷನೂ ಬರಲ್ಲ ಈ ಇಸ್ತ್ರಿ ಪೆಟ್ಟಿಗೆ, ಅದ್ಕೆ ೪೦೦೦ ರೂಪಾಯಿ. ಬಟ್ಟೆಗೆ ೩ ರೂ ಕೇಳಿದ್ರೆ ನೀವು ಹಿಂದೆ ಮುಂದೆ ನೋಡ್ತೀರ. ಜೀವನ ಕಷ್ಟಾಪ್ಪ. ಅವನು ಹೇಳೋದು ಕೇಳ್ದಾಗ ಅನುಸ್ತು.. ” ನಮಗೆ ದುಡ್ಡಿನ ಬೆಲೆ ಗೊತ್ತಿದ್ಯಾ” ಅಂತ.
ಅಪ್ಪನೋ ಅಮ್ಮನೋ ಬೇಕಾದಗ ದುಡ್ಡು ಕೊಟ್ಟಿರ್ತಾರೆ. ಬ್ಯಾಂಕ್ ಸಾಲ ಮಾಡಿ ಓದೋ ಹಲ ಗೆಳೆಯರಿಗೂ A.T.M ಇಂದ ದುಡ್ಡು ಬೇಕಂದಾಗ ಸಿಗುತ್ತೆ ಅನ್ನೋ ಭರವಸೆ ಇರುತ್ತೆ. ಅದ್ರ ಹಿಂದೆ ನಮ್ಮ ತಂದೆ/ತಾಯಿ ಶ್ರಮ ಎಷ್ಟಿರುತ್ತೆ ಅಂತ ಎಂದಾದ್ರು ಯೋಚ್ನೆ ಮಾಡಿರ್ತೀವಾ? ಪ್ರತೀ ಪೈಸೆ ಹಿಂದೆನೂ ಎಷ್ಟು ಶ್ರಮ ಅಡಗಿರುತ್ತೆ ಅಂತ ಯೋಚ್ನೆ ಮಾಡ್ತೀವಾ?
ಖರ್ಚು ಮಾಡೋದು ತಪ್ಪು ಅಂತ ನಾ ಹೇಳ್ತಿಲ್ಲ. ಆದ್ರೆ ನಾವು ಖರ್ಚು ಮಾಡ್ತಿರೋ ಪ್ರತೀ ರೂಪಾಯಿ ಬೆಲೆ ನಮಗೆ ಗೊತ್ತಾ ಅನ್ನೋ ಸಂದೇಹ ಸುಮಾರು ಸಲ ಕಾಡುತ್ತೆ. ದುಡ್ಡು ಕೊಟ್ಟು ತಂಗಡಿರ್ತೀವಿ. ಸ್ವಲ್ಪ ಉಪ್ಪೋ , ಖಾರಾನೋ ಜಾಸ್ತಿ ಆಯ್ತು ಅಂದ್ರೆ ಹಾಗೆ ದಂಡ ಮಾಡ್ತೀವಿ.. ಮನೇನಲ್ಲೂ ಎಷ್ಟೋ ಸಲ ತಿಂಡಿ ತಿನ್ನದೇ ಜಗಳ ಮಾಡ್ಕೊಂಡು ಹೊರಟು ಬಂದಿರ್ತೀವಿ.. ದುಡ್ಡಿರುತ್ತಲ್ಲಾ.. ಕೊಟ್ರೆ ಬೇರೆದು, ಒಳ್ಳೇದು ಸಿಗುತ್ತೆ ಅನ್ನೋ ಭಾವನೆ ಅಲ್ವಾ?. . ಆದ್ರೆ ನಮಗೆ ಬೇಜಾರು ಮಾಡ್ಬಾರ್ದು ಅಂತ ಸುಮ್ಮನಿರೋ ಅಪ್ಪ-ಅಮ್ಮ, ದುಡ್ಡು ಕೊಟ್ಟಿದೀವಿ ಅಂತ ಸುಮ್ಮನಿರೋ ಹೋಟಲಿನವರು.. ಹೀಗೆ ಏನು ಕಾಣ್ತಿದೆಯೋ ಆದರ ಹಿಂದಿನ ವಾಸ್ತವ ಅರಿಯೋಕೆ ಪ್ರಯತ್ನನೇ ಮಾಡಲ್ಲ ಅಲ್ವಾ? ನೀರು ತರ ಖರ್ಚು ಮಾಡ್ತಿರೋ ದುಡ್ಡಿನ ಬೆಲೆ ಬಗ್ಗೆ ಒಂದಿನನಾದ್ರೂ ತಲೆ ಕೆಡ್ಸ್ಕಂಡಿರ್ತೀವಾ?
ದಕ್ಷಿಣ ಸುಡಾನ್ ಈಗ ಸ್ವತಂತ್ರ
– ಗೋವಿಂದ ಭಟ್
ಸೈಕಲು ಪ್ರವಾಸದಲ್ಲಿ ನಾನು ಕೆನ್ಯಾ ರಾಜದಾನಿ ನೈರೋಬಿಗೆ ಹಾರುವುದು. ಅನಂತರ ಉಗಂಡಾ, ಸುಡಾನ್ ದಾರಿಯಾಗಿ ಈಜಿಪ್ಟ್ ತಲಪುವುದು ನನ್ನ ಗುರಿಯಾಗಿತ್ತು. ಬಹು ಪಾಲು ರಸ್ತೆ ಇಲ್ಲದ ಕಾರಣ ಜುಬಾ ಪಟ್ಟಣದಿಂದ ನೈಲ್ ನದಿಯ ದೋಣಿಯಲ್ಲಿ ಉತ್ತರಕ್ಕೆ ಸಾಗುವುದು ನನ್ನ ಆಲೋಚನೆಯಾಗಿತ್ತು. ನನ್ನ ಉದ್ದೇಶಿತ ಹಾದಿಯಲ್ಲಿ ಬಹು ಕಾಲದಿಂದ ಅಂದರೆ ಅಂದಿಗೆ ಮೂವತ್ತು ವರ್ಷದಿಂದ ಜನಾಂಗಿಯ ಕಲಹ ನಡೆಯುತ್ತಿದ್ದರೂ ಹಲವು ಪ್ರವಾಸಿಗರು ದೋಣಿಯಲ್ಲಿ ದಾಟುವುದರಲ್ಲಿ ಸಫಲರಾಗಿದ್ದರು. ಅಲ್ಲಿನ ಒಂದು ದೋಣಿಯ ಚಿತ್ರ ಇಲ್ಲಿದೆ. ನನ್ನ ಜರ್ಮನಿಯ ಸೈಕಲು ಗೆಳೆಯ ಫ್ರೆಡ್ ಪೋಲ್ ೧೯೬೪ ರಲ್ಲಿ ಇಲ್ಲೆ ದಾಟಿದ್ದರು. ಅದಕ್ಕೆ ನಾನು ಸಾಕಷ್ಟು ತಯಾರಿ ನಡೆಸಿದ್ದೆ.
ಆದರೆ ಕೆನ್ಯಾ ತಲಪುವಾಗ ಪರೀಸ್ಥಿತಿ ಕಠೀಣವಾಗಿರುವುದು ಅರಿವಾಯಿತು. ನನ್ನ ದಾರಿಯಲ್ಲಿದ್ದ ಉಗಂಡಾ ಹಾಗೂ ಸುಡಾನ್ ಅಂತರ್ಯುದ್ದ ಬರ್ಜರಿಯಾಗಿ ನಡೆಯುತ್ತಿದ್ದರೆ ಉತ್ತರದ ಇತಿಯೋಪಿಯ ಸಹಾ ದಾರಿ ಬಿಡುತ್ತಿರಲಿಲ್ಲ. ಹಾಗಾಗಿ ನನ್ನ ಯೋಜನೆಗಳೆಲ್ಲ ತಲೆಕೆಳಗಾಗಿ ಯುರೋಪಿನಿಂದ ಹಿಂತಿರುಗುವ ಬದಲು ಅಮೇರಿಕವನ್ನು ಹಾದು ಜಗತ್ತು ಪೂರ್ತಿ ಸುತ್ತು ಬರಲು ತೀರ್ಮಾನಿಸಿದೆ.
ಸುಡಾನ್ ದೇಶದಲ್ಲಿ ಉತ್ತರದಲ್ಲಿ ಅರಬ್ ಮುಸ್ಲಿಮರ ಪ್ರಾಬಲ್ಯ. ಅದಿಕಾರವೆಲ್ಲ ಅವರ ಕೈಯಲ್ಲಿ ಕೇಂದ್ರಿತ. ದಕ್ಷಿಣದಲ್ಲಿ ವಾಸ್ತವ್ಯ ಇರುವುದು ಕರಿಯ ಕ್ರೈಸ್ತ ಅನುಯಾಯಿಗಳು. ಬ್ರೀಟಿಶರು ಸ್ವಾತಂತ್ರ ಕೊಡುವಾಗ ಈಜಿಪ್ಟ್ ಜತೆ ಒಪ್ಪಂದ ಮಾಡಿ ಒಂದು ಕಿತಾಪತಿ ಮಾಡಿದ್ದರು. ಈ ಕರಿ ಜನರೇ ಜೀವಿಸುವ ದಕ್ಷಿಣ ಸುಡಾನ್ ಪ್ರಾಂತ್ಯವನ್ನು ಪಕ್ಕದ ಕರಿಯ ಜನರಿರುವ ಕೆನ್ಯಾ ಉಗಂಡಾದಿಂದ ಬೇರ್ಪಡಿಸಿ ಬಹುಕಾಲ ಈಜಿಪ್ಟ್ ವಶವಾಗಿದ್ದ ಉತ್ತರ ಸುಡಾನ್ ಜತೆ ಸೇರಿಸಿಬಿಟ್ಟರು. ಚಿತ್ರದಲ್ಲಿ ಕಾಣುವಂತೆ ಉತ್ತರಬಾಗ ಮರುಭೂಮಿಯಾದರೆ ದಕ್ಷಿಣಬಾಗದಲ್ಲಿ ಹುಲ್ಲುಗಾವಲು ಹಾಗೂ ಕುರುಚಲು ಕಾಡು. ಉತ್ತರದವರಿಂದ ಸತತವಾಗಿ ದಬ್ಬಾಳಿಕೆ, ಅನ್ಯಾಯ. ಶ್ರೀಲಂಕದಲ್ಲಿ ಇದ್ದಂತಹ ಪರಿಸ್ಥಿತಿ.
ದೆವ್ವದ ಹರಕೆ!!
– ನಾಗರಾಜ್ ಮೌಳಿ
ನಿಮಗೆ ಗೊತ್ತಿದೆ ಎಷ್ಟೊಂದು ದೆವ್ವ ಭೂತ, ಪಿಚಾಚಿಗಳು, ಹಾಗೆ ಅದು ಇದು ಅಂತ ಮೂವೀಸ್ ಬಂದಿದಾವೆ, ಕಥೆಗಳು , ಕಾದಂಬರಿಗಳು, ಹಾಗೆ ಅಲ್ಲಿ ಇಲ್ಲಿ ಕೇಳಿದ್ದು ಎಲ್ಲ ನಮ್ಮ ಕಿವಿಗೂ ಬೀಳ್ತಾ ಇರ್ತವೆ. ಅದರಲ್ಲಿ ಕೆಲವೊಂದು ನಿಮಗಾಗಿ ಇಲ್ಲಿ ಬರೀತಿನಿ…..ಅದಕ್ಕೂ ಮುಂಚೆ ನಮ್ಮೂರಲ್ಲಿ ದೆವ್ವ, ದೈವ, ದಯ್ಯ ಹೀಗೆಲ್ಲಾ ಕರಿತಾರೆ ನಿಮಗೆ ಯಾವತರ ಅನ್ಸುತ್ತೋ ಹಾಗೆ ಓದಿ..
ಮೊನ್ನೆ ಟಿವಿ 9 ಲಿ ತೋರಿಸ್ತಾ ಇದ್ರು ಬೆಂಗಳೂರಲ್ಲಿ ಒಂದು 8 ಮಹಡಿ ಬಿಲ್ಡಿಂಗ್ ಇದ್ಯಂತೆ ಅಲ್ಲಿ ಯಾರು ಹೋಗೋಕೆ ಅಗಲ್ವಂತೆ, ಅದು ಏನು ಅಂತ ನೋಡೋಕೆ ಟಿವಿ 9 ತಂಡ ಹೋದಾಗ ಭಯಾನಕ ಅನುಭವ ಆಯಿತಂತೆ, ಅದನ್ನು ತೋರಿಸ್ತಿದ್ರು ಅದು ರಾತ್ರಿ ಕಣ್ರೀ ಸ್ವಲ್ಪ ಭಯನೆ ಆಯಿತು ನನಗೂ.. ಏನ್ ಕೇಳ್ತೀರಾ ಆಟೋಮೇಟಿಕ್ ಆಗಿ ಮಾಮೂಲಿ ಬಾಗಿಲು ತೆಗೆದುಕೊಳ್ಳುತ್ತೆ, ನಿಮ್ಮ ಹತ್ತಿರದಲ್ಲೇ ನೆರಳುಗಳು ಒಡಿಯಾಡ್ತವೆ, 1ನೇ ಮಹಡಿಗೆ ಹೋದ್ರೆ 4ನೇ ಮಹಡಿಲಿ, ಹಾಗೆ 4ನೇ ದಕ್ಕೆ ಹೋದರೆ 1ನೆದರಲ್ಲಿ ಯಾರೋ ಭಯಾನಕವಾಗಿ ಅಳುತ್ತಿರುವ ಶಭ್ದ, ಮೆಟ್ಟಿಲುಗಳಿಂದ ಯಾರೋ ಇಳಿದುಕೊಂಡು ಹೋಗ್ತಾ ಇರೋ ಸದ್ದು ಕೇಳಿಸುತ್ತೆ ಅಬ್ಬಾ ನೋಡಿ ಸ್ವಲ್ಪ ನೀರಾದೆ….
ಮತ್ತೆ ಒಂದು ಮನೆ ಇದೆ ನಮ್ಮ ಊರಲ್ಲಿ ಆ ಮನೆಯ ಯಜಮಾನ್ರು ನಮ್ಮ ಅಪ್ಪನ ಹತ್ರ ನಾವು ಚಿಕ್ಕವರಿದ್ದಾಗ ಬಂದು ಹೇಳ್ತಿದ್ರು, ಅವ್ರ ಮನೇಲಿ ಮರದ ತೊಲೆಗಳ ಮೇಲೆ ಯಾರೋ ಕಂಟಿನಿಯಸ್ ಆಗಿ ಗುದ್ದಿದ ಶಭ್ದ ಕೇಳುತ್ತಿತಂತೆ, ಹಾಗೆ ರಾತ್ರಿ ಒಬ್ಬ ಎತ್ತರದ ಮನುಷ್ಯ ದೀಪ ಹಿಡಿದುಕೊಂಡು ಹಾರಿ ಹೋಗ್ತಾ ಇದ್ದಹಾಗೆ, ಗೇಟಿನಬಳಿ ಯಾವುದೋ ಬಿಳಿ ಸೀರೆಯ ಹೆಂಗಸು ನಿಂತು ಅಳುತ್ತಿರುವ ಹಾಗೆ ಕಾಣಿಸ್ತಿತ್ತಂತೆ,
ಮನೇಲಿ ಮಲಗಿದ್ರೆ ಮೈತುಂಬಾ ಯಾವುದೋ ಒಂದು ಹಾವು ಹರಿದಾಡಿದ ಅನುಭವ ಆಗಿ ಶಾಂತಿ ಮಾಡಿಸಿದ್ದನ್ನ ನೋಡಿದೀನಿ, ಮನೇಲಿ ನೀರು ಅದಾಗಿ ಅದೇ 5 ನಿಮಿಷದಲ್ಲಿ ಕೆಂಪು ಬಣ್ಣಕ್ಕೆ ತಿರುಗೋದು, ಏನು ಅಡಿಗೆ ಮಾಡಿದ್ರೂ, ಉಪ್ಪು ಹಾಕದೇ ಇದ್ರು, ತಿಂದಾಗ ಅತಿಯಾಗಿ ಉಪ್ಪಾಗಿ ಊಟಾನೇ ಬಿಟ್ಟು ಏಳಬೇಕು ಹಾಗೆ ಆಗ್ತಿತ್ತು ಅಂತ ಹೇಳ್ತೀದ್ರು, ಅದನ್ನ ನೋಡೋಕೆ ನಮ್ಮ ಕೆಲವು ಗುರುತು ಪರಿಚಯ ಇರೋರು ಹೋಗಿದ್ರೂ ನಾವು ಬಿಡಿ ತುಂಬಾ ದೈರ್ಯವಂತರು ಹಾಗಾಗಿ ಅಂತ ಸಾಹಸ ಮಾಡಲಿಲ್ಲ. ಮತ್ತಷ್ಟು ಓದು 
ಪ್ರೀತಿ ಕುರುಡಾದರೂ ಪ್ರಿತಿಸುವವರು ಕುರುಡಾಗದಿರಲಿ
– ಪವನ್ ಪಾರುಪತ್ತೇದಾರ್
ಅಗ್ರಹಾರದ ಶಾಮಣ್ಣನವರಿಗೆ ತಮ್ಮ ಮಗಳನ್ನ ಬ್ಯಾಂಕ್ ಮ್ಯಾನೇಜರ್ ಮಾಡಬೇಕಂಬ ಅಸೆ ಇತ್ತು.ಮಗಳಿಗೆ SSLC ವರೆಗೂ ಹಳ್ಳಿಯಲ್ಲಿನ ಶಾಲೆಯಲ್ಲಿ ಓದಿಸಿದರು, ಪ್ರತಿದಿನ ಮಗಳನ್ನ ಶಾಲೆಗೆ ಕರೆದೊಯ್ಯುವುವುದು ಮತ್ತೆ ಕರೆತರುವುದು ಅವರದೇ ಕೆಲಸ. ಮನೆಗೆ ಕರೆ ತಂದೊಡನೆ ಮುದ್ದಾಗಿ ಮಾತನಾಡಿಸಿ ಶಾಲೆಯ ಬಗ್ಗೆ ವಿಚಾರಿಸುವುದು ಇವೆಲ್ಲ ನಡೆಯುತ್ತಿತ್ತು. ಆದರೆ ಹಳ್ಳಿಯಲ್ಲಿ ಕಾಲೇಜ್ ಇಲ್ಲದಿದ್ದರಿಂದ ಅನಿವಾರ್ಯವಾಗಿ ಪಕ್ಕದ ಪಟ್ಟಣಕ್ಕೆ ಸೇರಿಸಬೇಕಾಯ್ತು, ಪ್ರತಿ ದಿನ ಬಸ್ ಅಲ್ಲಿ ಪ್ರಯಾಣ ಮಗಳು ಮನೆಯಿಂದ ಹೊರ ಮತ್ತೆ ಸಂಜೆ ಬರುವ ವರೆಗೂ ಅವಳದ್ದೇ ಚಿಂತೆ ಶಾಮಣ್ಣ ಮತ್ತು ಅವರ ಹೆಂಡತಿಗೆ. ಆಗಾಗ ಕಾಲೇಜ್ ಬಳಿ ಹೋಗುತಿದ್ದರು, ಒಂದೆರಡು ಸಲಿ ಅವರು ಹೋದಾಗ ಮಗಳು ಕಾಲೇಜ್ ನಲ್ಲಿ ಇರಲಿಲ್ಲ.
ಮಗಳು ಮನೆಗೆ ಬಂದಮೇಲೆ ಕೇಳಿದಾಗ ಸ್ನೇಹಿತೆಯ ಮನೆಗೆ ಓದಲು ಹೋಗಿದ್ದೆ ಎಂದಳು. ಆದರು ಶಾಮಣ್ಣ ನವರಿಗೆ ಏನೋ ಒಂದು ರೀತಿ ಅನುಮಾನ ಮಗಳು ಎಲ್ಲಾದರೂ ತಪ್ಪು ದಾರಿ ತುಳಿಯುತಿರುವಳೋ ಅನ್ನೋ ಭಯ, ಕಾಲೇಜ್ ಹತ್ತಿರದಲ್ಲೇ ಇದ್ದಿದ್ದರೆ ಮೊದಲಿನ ಹಾಗೆ ತಾನೆ ಜೊತೆಯಲಿ ಹೋಗಿ ಬರಬಹುದಾಗಿತ್ತು ಅನ್ನೋ ಯೋಚನೆ ಇನ್ನು ಸ್ವಲ್ಪ ದಿನಗಳಾದ ಮೇಲೆ ಕಾಲೇಜ್ ಗೆ ಹೋದ ಶಾಮಣ್ಣ ನವರ ಮಗಳು ಮತ್ತೆ ಮನೆಗೆ ತಿರುಗಿ ಬಂದಿಲ್ಲ. ಆಮೇಲೆ ತಿಳಿದ ವಿಷಯ ಅಂದ್ರೆ ಅವಳು ಪಟ್ಟಣದಲ್ಲಿನ ಒಬ್ಬ ಆಟೋ ಡ್ರೈವರ್ ಜೊತೆ ಓದಿ ಹೋಗಿದ್ದಳು, ಹತ್ತಾರು ಎಕರೆ ಜಮೀನು ಅಸ್ತಿ ಪಾಸ್ತಿ ಎಲ್ಲ ಇದ್ದ ಶಾಮಣ್ಣನವರಿಗೆ ಮಗಳ ಮದುವೆ ಮಾಡುವುದು ಅಷ್ಟೇನೂ ಕಷ್ಟದ ಕೆಲಸವಾಗಿರಲಿಲ್ಲ. ಆದರೆ ಮಗಳು ವಿದ್ಯಾವಂತೆ ಅಗಲಿ ಎಂದು ಅಸೆ ಪಟ್ಟಿದ್ದಕ್ಕೆ ಶಾಮಣ್ಣ ನವರಿಗೆ ಸಿಕ್ಕ ಪ್ರತಿಫಲ ಬಹಳ ವಿಷಾದನೀಯ. ಬಹಳ ಕಟ್ಟುನಿಟ್ಟಿನ ಬ್ರಾಹ್ಮಣ ಕುಟುಂಬ ಊರಿನ ಜನ ಮಾತ್ರವಲ್ಲದೆ ನೆಂಟರು ಇಷ್ಟರ ಮಧ್ಯೆ ಸಹ ಅವಮಾನ ಪಡುವಂತಾಯಿತು.
ಅಟ್ಲಾಂಟಿಕ್ ಸಾಗರ ಸಮ್ಮುಖದಲ್ಲಿ….
– ಅಮಿತಾ ರವಿಕಿರಣ್
”ದೇಶ ಸುತ್ತು ಕೋಶ ಓದು” ಅನ್ನೋ ಗಾದೆ ಮಾತು ನನಗೇ ಬಹಳ ಇಷ್ಟಾ….ಯಾಕಂದ್ರೆ ಅದರಲ್ಲಿ ತಿರುಗಾಟ ಇಷ್ಟಾ ಪಡೋರ್ ಬಗ್ಗೆ ಒಂದು ಒಲುಮೆ ಇದೆಯಲ್ಲ ಅದಕ್ಕೆ….!!ಬಾಲ್ಯದಿಂದಲೂ ನನಗೇ ತಿರುಗಾಟ ಅತಿ ಪ್ರಿಯವಾದ ವಿಷಯ ಶಾಲೆಯ ಟ್ರಿಪ್ಪ್ ಗಳನ್ನೂ ನಾ ಯಾವತ್ತು ಮಿಸ್ ಮಾಡಿಲ್ಲ…ಅದರ ನಂತರ ಸಂಗೀತ ನನ್ನ ವೃತ್ತಿ ಆಯಿತು ಅಲ್ಲಿ ಸ್ಪರ್ಧೆ…ಇಲ್ಲಿ ಕಾರ್ಯಕ್ರಮ ಅಂತ ಬರೀ ತಿರುಗಾಟ ನಡೆಸಿದ್ದೆ… ,ಕೆ ಎಸ್ಸ್ ಆರ್ ಟಿ ಸಿ ಬಸ್ಸು ಅಂದರೆ ನನ್ನ ಎರಡನೇ ತವರು ..ಕಾಲೇಜ್ ಗೆ ಹೋಗಿದ್ದು ಧಾರವಾಡ್ ದಲ್ಲಿ..ಮೊದಲಿಗೆ ಕರ್ನಾಟಕ ಕಾಲೇಜ್ ಸಂಗೀತ ವಿದ್ಯಾಲಯ ,,,,ಆಮೇಲೆ ಕರ್ನಾಟಕ ವಿಶ್ವ ವಿದ್ಯಾಲಯ…ನನ್ನೂರಿಂದ ೭೬ ಕಿ ಮಿ ದೂರದಲ್ಲಿದ್ದರು ನಾ ದಿನ ಓಡಾಡಿಯೇ ಪದವಿ ಮತ್ತು ಸ್ನಾತಕೋತ್ತರ ಪದವಿ ಮುಗಿಸಿದ್ದು….
ಕಳ್ಳಹೊಳೆ ಮತ್ತು ಹೇಮಾವತಿ
– ಹಂಸಾನಂದಿ
ನಮ್ಮೂರ ಹತ್ತಿರ ಹರಿಯೋ ಯಗಚೀನ ಕಳ್ಳ ಹೊಳೆ ಅಂತಿದ್ದರಂತೆ. ಯಾಕಂದ್ರೆ, ಅದರ ಹರಿವು ಸಣ್ಣದು, ಆದರೆ, ಎಲ್ಲೋ ಇಪ್ಪತ್ತು ಮೂವತ್ತು ಮೈಲಿ ಹಿಂದೆ ಮಳೆಯಾದರೆ ಯಗಚಿಯಲ್ಲಿ ಇದ್ದಕ್ಕಿದ್ದಂತೆ ನೆರೆ ಬಂದು ಬಿಡುತ್ತಿತ್ತಂತೆ. ಅಂತಹ ಸಂದರ್ಭದಲ್ಲಿ, ಹೊಳೆಯ ಪಾತ್ರದಲ್ಲಿ ಆಟವಾಡುತ್ತಿದ್ದ ಮಕ್ಕಳು, ದನ ಕರುಗಳೆಲ್ಲ ಕೊಚ್ಚಿಕೊಂಡು ಹೋಗುತ್ತಿದ್ದವಂತೆ. ಯಾವಾಗ ನೀರು ಬರುತ್ತೆ ಅನ್ನೋದು ಗೊತ್ತಾಗದೇ, ಕಳ್ಳನ ತರಹ ಜನ ಜಾನುವಾರನ್ನೆಲ್ಲ ನುಂಗಿಕೋತಾ ಇದ್ದಿದ್ದರಿಂದಲೇ ಇದು ಕಳ್ಳ ಹೊಳೆ ಅಂತ ಹೆಸರಾಗಿತ್ತಂತೆ. ಇವೆಲ್ಲ ನಾನು ಗೊರೂರು ರಾಮಸ್ವಾಮಿ ಅಯ್ಯಂಗಾರರ ಪುಸ್ತಕದಲ್ಲಿ ಓದಿದ್ದ ವಿಷಯಗಳು.
ಮೂರನೇ ತರಗತಿಯಲ್ಲಿ ನಮಗೆ ಎರಡು ಪಠ್ಯ ಪುಸ್ತಕಗಳಿದ್ದವು – ಒಂದು ನಮ್ಮ ರಾಜ್ಯ ಅಂತ, ಮತ್ತೊಂದು ನಮ್ಮ ಜಿಲ್ಲೆ ಅಂತ. ನಮ್ಮ ಜಿಲ್ಲೆ ಅಂದರೆ ನೋಡುವ ಸ್ಥಳಗಳು ಬೇಲೂರು ಹಳೇಬೀಡು ಶ್ರವಣಬೆಳಗೊಳ; ಬೆಳೆಯೋ ಬೆಳೆಗಳು ರಾಗಿ ಆಲೂಗೆಡ್ಡೆ ಕಾಫಿ ಬೀಜ; ಕೈಗಾರಿಕೆ ಅಂದರೆ ಯಂತ್ರಭಾಗಗಳ ಕಾರ್ಖಾನೆ, ಕಾಫಿ ಬೀಜ ಸಂಸ್ಕರಣೆ ಅಂತ ನಾವು ಓದಿಕೊಂಡಿದ್ದೇ ಓದಿಕೊಂಡಿದ್ದು. ಅದರಲ್ಲಿ ಜಿಲ್ಲೆಯ ನದಿಗಳು ಅಂದರೆ ಕಾವೇರಿ ಹೇಮಾವತಿ ಮತ್ತೆ ಯಗಚಿ ಅಂತಲೂ ಇರ್ತಿತ್ತು. ನನ್ನ ಊರಿಗೆ ತೀರ ಹತ್ತಿರವಿದ್ದ ಯಗಚಿಯ ಹರಿವನ್ನ ನಾನು ನೋಡಿದ್ದೇ ಕಡಿಮೆ. ಊರಿನ ಪಶ್ಚಿಮದ ಹಾಲುಬಾಗಿಲು ಅನ್ನುವ ಕಡೆ ಯಗಚಿ ಹೊಳೆ ಪಕ್ಕದಲ್ಲಿ ಒಂದು ನೀರನ್ನು ಶುಚಿಮಾಡಿ, ಊರಿಗೆ ಸರಬರಾಜು ಮಾಡುವ ವ್ಯವಸ್ಥೆ ಇತ್ತು. ಕೆಲವೊಮ್ಮೆ ನಮ್ಮ ತರಗತಿಯ ಕೆಲವು ಹುಡುಗರು ಹಾಲುಬಾಗ್ಲಿನಲ್ಲಿ ಹೋಗಿ ಈಜಿ ಬಂದೆವು ಅಂತ ಹೇಳ್ತಿದ್ದಿದ್ದೂ ಉಂಟು.




