ವಿಷಯದ ವಿವರಗಳಿಗೆ ದಾಟಿರಿ

Posts tagged ‘ಅಬ್ದುಲ್ ಕಲಾಂ’

30
ಜುಲೈ

ಸಮಯ ’ಪ್ರಜ್ಞೆ’ ಎಲ್ಲೆ ಮೀರಿದರೆ ಸಮಾಜ ಸಿಡಿದೇಳಬೇಕಾಗುತ್ತೆ..!

– ಸಂಕೇತ್ ಹೆಗ್ಡೆ

ಅಬ್ದುಲ್ ಕಲಾಂಮಾನವ ಸಮಾಜ ಕೆಲವು ವ್ಯಕ್ತಿಗಳನ್ನು ಸೃಷ್ಟಿಸುವಲ್ಲಿ ಯಶಸ್ವಿಯಾಗಿದೆ! ಯೆಸ್, ಅವರೂ ಇದೇ ಪ್ರದೇಶದಲ್ಲಿ ಹುಟ್ಟಿದವರು,ಇದೇ ಗಾಳಿ ಸೇರಿಸಿದವರು, ಇದೇ ಮಣ್ಣಿನಲ್ಲಿ ಬೆಳೆದ ಆಹಾರ ತಿಂದವರು, ನಾವು ಕುಡಿಯುವ H2Oವನ್ನೇ ಕುಡಿದವರು. ಆದರೆ ಅವರಲ್ಲೊಂದು ಅಪೂರ್ವ ‘Character’ ಮೂಡಿರುತ್ತೆ! ಕ್ಷಮಿಸಿ, ಅವರು ಬೆಳೆಸಿಕೊಂಡಿರುತ್ತಾರೆ. ಅದು ನಿಷ್ಕಳಂಕ ವ್ಯಕ್ತಿತ್ವ, ಕೈತೊಳೆದುಕೊಂಡು ಮುಟ್ಟಬೇಕು! ಅಂಥವರು ಜನರಿಗೆ ತೀರಾ ಆಪ್ಯಾಯಮಾನವಾಗಿರುತ್ತಾರೆ. ಅವರು ಜೀವನದಲ್ಲಿ ಯಾರೂ ಸಾಧಿಸದಿದ್ದದ್ದೊಂದನ್ನು ಸಾಧಿಸಿರಬಹುದು, ಅತ್ಯುನ್ನತ ಹುದ್ದೆಯನ್ನು ಅಲಂಕರಿಸಿರಬಹುದು, ಅಥವಾ ಶ್ರೇಷ್ಠ ಪ್ರಶಸ್ತಿಗಳನ್ನು ಪಡೆದುಕೊಂಡಿರಬುಹುದು, ಕೊನೆಗೆ ರಾಷ್ಟ್ರಪತಿ ಹುದ್ದೆಯನ್ನೂ ಅಲಂಕರಿಸಿರಬಹುದು! It doesn’t matter, ಜನ ಅವರನ್ನು ಪ್ರೀತಿಸುವುದು ಖಂಡಿತ ಇವ್ಯಾವುದಕ್ಕೂ ಅಲ್ಲ! ಕೇವಲ ಅಂಥವರ ಹೃದಯ ಸಂಪನ್ನತೆಗೆ. ಕಲಾಂ ಸರ್ ಒಮ್ಮೆ ಬಾಯ್ಬಿಟ್ಟು ಹೇಳಿದ್ದರು ” I am not a handsome guy, but I can give my hand-to-some-one who needs help. Beauty is in heart, not in face” ಅಂತ. ಕಲಾಂ ದೇಶ ಬಾಂಧವರ ಕಣ್ಮಣಿಯಾಗಿದ್ದು ತಮ್ಮ ರೂಪದಿಂದಲ್ಲ, ನಡತೆಯಿಂದ. ಕಲಾಂ ತೀರಾ ಪುಟ್ಟ ಮಕ್ಕಳೊಂದಿಗೆ ಕಾಲಕಳೆಯುತ್ತಿದ್ದ ಎಷ್ಟು ಫೋಟೋಗಳು ಬೇಕು? ಕಂದಮ್ಮಗಳು ತಾತನನ್ನು ಹಾಗೆ ಅವರನ್ನು ಸುತ್ತುವರಿಯುತ್ತಿದ್ದವಲ್ಲ, ಅವುಗಳಿಗೆ ರಾಷ್ಟ್ರಪತಿ ಅಂದರೇನು, Rocket Engineer ಅಂದರೇನು ಅಂತ ಬಿಲ್ ಕುಲ್ ಗೊತ್ತಿರುವುದಿಲ್ಲ!

ಮತ್ತಷ್ಟು ಓದು »

23
ಮಾರ್ಚ್

ಡಾ.ಅಬ್ದುಲ್ ಕಲಾಂರನ್ನ ನಿನ್ನೆ ಸಾಯಿಸುವವರಿದ್ದರು!

-ರಾಕೇಶ್ ಶೆಟ್ಟಿ

ನನ್ನ ಶಾಲೆಯ ದಿನಗಳವು ಆಗಿನ್ನೂ ಶಂಕರ್ ನಾಗ್ ಅಪಘಾತದಲ್ಲಿ ನಮ್ಮಿಂದ ದೂರವಗಿದ್ದರು,ಅದೇ ಸಮಯದಲ್ಲಿ ಕಿಡಿಗೇಡಿಗಳು ವಿಷ್ಣು ಇನ್ನಿಲ್ಲ ಅಂತ ಸುದ್ದಿ ಹಬ್ಬಿಸಿದ್ದರು.ಕಡೆಗದು ಟುಸ್ಸ್ ಪಟಾಕಿಯಾಗಿತ್ತು.ಈ ರೀತಿಯ ಸುದ್ದಿಗಳನ್ನ ಕೇಳಿ ಕೇಳಿ,ಕಡೆಗೆ ನಿಜವಾಗಿ ವಿಷ್ಣು ನಮ್ಮನ್ನ ಅಗಲಿದ ದಿನ,ಬೆಳ್ಳಂ ಬೆಳಿಗ್ಗೆ ಗೆಳೆಯ ಶ್ರೀಕಾಂತ ಬಂದು ವಿಷ್ಣು ಹೊದ್ರಂತೆ ಅಂದಾಗ, ’ಜೊತೆಗ್ ನೀನೂ ಹೋಗಲೆ’ ಅಂತ ಬೈದು ಕಳಿಸಿದ್ದೆ.ಆದರೆ ನಿಜ ಅಂತ ಗೊತ್ತಾದಗ ಮನಸ್ಸು ಕಳವಳಗೊಂಡಿತ್ತು.

ಈ ಗಾಳಿ ಸುದ್ದಿಗಳೇ ಹಾಗೆ ಅಲ್ವಾ? ನಿಜ ಸುದ್ದಿಗಳಿಗೊಂದು ಗುದ್ದು ನೀಡಿ ಹೊರಟು ನಿಲ್ಲುತ್ತವೆ! ಕಳೆದವಾರ ತಾನೆ ಆಫ಼ೀಸಿನಲ್ಲಿ ಕುಳಿತಿದ್ದವನಿಗೆ ಅತ್ತಿಗೆ ಕರೆ ಮಾಡಿ ಜಪಾನ್ ಮುಳುಗುತ್ತಿದೆ ನೋಡು ಅಂದಾಗಲು ನಂಬಲಿಕ್ಕಾಗಲಿಲ್ಲ.ಆದರೆ ಅದೂ ನಿಜವಾಗಿತ್ತು 😦

ಮತ್ತೆ ನಿನ್ನೆ ಮಧ್ಯಾನ ಗೆಳೆಯ ಸಾತ್ವಿಕ್ ಕರೆ ಮಾಡಿ ’ವಿಷ್ಯ ಗೊತ್ತಾಯ್ತ?’ ಅಂದ್ರು. ’ಏನ್ರಿ’ ಕೇಳ್ದೆ. ’ಅಬ್ದುಲ್ ಕಲಾಂ ಹೋಗ್ಬಿಟ್ರಂತೆ’ ಅನ್ನೋದಾ!…’ನೋಡಿ confirm ಮಾಡಿ ಹೇಳ್ರಿ’ ಅಂದ್ರು.’ಹೌದಾ!?’ ಅಂತ ತಡಬಡಾಯಿಸಿ ಗೂಗಲ್ ದೇವರಲ್ಲಿ ಪ್ರಶ್ನೆ ಹಾಕಿದರೆ ಮೊದಲ ಸುದ್ದಿ ಇದ್ದದ್ದು ’Abdul Kalam’s Advisor Dr.Hafiz Saleh Muhammad Alladin died’ ಅಂತ.ನಾನೋ ಗಾಬರಿಯಲ್ಲಿ ಅದನ್ನ ಅಬ್ದುಲ್ ಕಲಾಮ್ ಅವರೇ ಹೋಗ್ಬಿಟ್ರು ಅಂತಲೇ ಓದಿ ಕೊಂಡು, ಆಫ಼ಿಸಿನಲ್ಲೂ ಕಲಾಂ ಹೋಗ್ಬಿಟ್ರು ಅಂದು,ಕಡೆಗೆ ಇನ್ನೊಮ್ಮೆ ಶಾಂತನಾಗಿ ನೋಡಿ. ’ಹೇ,ಇಲ್ಲಾ ರೀ,ಯಾವನೋ ಕಿಡಿಗೇಡಿ ಸುದ್ದಿ ಮಾಡಿದ್ದಾನೆ’ ಅಂದೆ.
ಮತ್ತಷ್ಟು ಓದು »