ಉಸಿರೇ ಭಾರ: ಇಲ್ಲದಿರೆ ಆಧಾರ!
– ತುರುವೇಕೆರೆ ಪ್ರಸಾದ್
ದೇಶದ ಶತಕೋಟಿ ನಾಗರಿಕರಿಗೆ ಬಯೋಮೆಟ್ರಿಕ್ ಮಾಹಿತಿ ಆಧಾರದಲ್ಲಿ ವಿಶಿಷ್ಟ ಗುರುತಿನ ಸಂಖ್ಯೆ( ಯುಐಡಿ) ನೀಡುವ ಯೋಜನೆಯೇ ಆಧಾರ್. ಈ ಯೋಜನೆ ವಿಶ್ವದಲ್ಲೇ ಪ್ರಥಮ ಮತ್ತು ವಿಶಿಷ್ಟವಾದುದು, ಗುರುತಿನ ದಾಖಲೆಗಳಿಲ್ಲದವರೂ ಆಧಾರ್ ಚೀಟಿ ಪಡೆಯಬಹುದು ಎಂದು ಹೇಳಲಾಗಿದೆ. ಈ ಚೀಟಿ ವಿತರಣೆಗೆ ಬೆರಳಚ್ಚು, ಅಕ್ಷಿಪಟಲ ಸ್ಕ್ಯಾನ್, ಭಾವಚಿತ್ರ ಈ ಮೂರು ಬಯೋಮೆಟ್ರಿಕ್ ಮಾಹಿತಿಯನ್ನು ಸಂಗ್ರಹಿಸಲಾಗುತ್ತದೆ.
‘ಆಧಾರ್ ಕಾರ್ಡ್ ಕಡ್ಡಾಯವಲ್ಲ, ಐಚ್ಚಿಕ’ ಎಂದು ಕೇಂದ್ರ ಸರ್ಕಾರ ಈಚೆಗೆ ಸುಪ್ರೀಂ ಕೋರ್ಟಿಗೆ ಪ್ರಮಾಣ ಪತ್ರ ಸಲ್ಲಿಸಿದೆ. ಇದರಿಂದ ಆಧಾರ್ ಬಗೆಗಿದ್ದ ಗೊಂದಲ, ಅನಗತ್ಯ ಕಿರಿಕಿರಿಗಳಿಗೆ ಕೇಂದ್ರವೇ ಸ್ಪಷ್ಟನೆ ನೀಡಿದಂತಾಗಿದೆ. ಇದು ನಿಜಕ್ಕೂ ಸ್ವಾಗತಾರ್ಹ ಕ್ರಮ. ಉದ್ಯೋಗ ಖಾತ್ರಿ ಯೋಜನೆ, ಸರ್ವ ಶಿಕ್ಷಾ ಅಭಿಯಾನ, ರಾಷ್ಟ್ರೀಯ ಗ್ರಾಮಿಣ ಆರೋಗ್ಯ ಕಾರ್ಯಕ್ರಮ, ಭಾರತ್ ನಿರ್ಮಾಣ್ನಂತಹ ಯೋಜನೆಗಳಡಿ ಉದ್ದೇಶಿತ ಫಲಾನುಭವಿಗಳನ್ನು ಗುರುತಿಸಲು ಆಧಾರ್ ಚೀಟಿ ನೆರವಾಗುತ್ತದೆ ಎಂದು ಹೇಳಲಾಗಿತ್ತು. ಆಧಾರ್ ಚೀಟಿ ಪಡೆಯುವುದು ಸ್ವಯಂಪ್ರೇರಣೆಗೆ ಬಿಟ್ಟಿದ್ದು ಎಂದು ಆರಂಭದಲ್ಲಿ ಹೇಳಲಾಗಿತ್ತಾದರೂ ಉದ್ಯೋಗ ಪಡೆಯಲು, ಬ್ಯಾಂಕ್ ಖಾತೆ ತೆರೆಯಲು, ಮಕ್ಕಳನ್ನು ಶಾಲೆಗೆ ಸೇರಿಸಲು, ಆರೋಗ್ಯ ಸೇವೆಗಳ ಲಾಭ ಪಡೆಯಲು, ಪಡಿತರ ಚೀಟಿ ಪಡೆಯಲು, ವಿದ್ಯಾರ್ಥಿ ವೇತನ ಪಡೆಯಲು ಆಧಾರ್ ಏಕೈಕ ಕಡ್ಡಾಯ ದಾಖಲೆ ಎಂಬಂತೆ ಬಿಂಬಿಸಲಾಗುತ್ತಿದೆ. ಆಧಾರ್ ಇಲ್ಲದಿದ್ದರೆ ಸಾರ್ವಜನಿಕರಿಗೆ ಈ ದೇಶದ ಪೌರತ್ವ ಮತ್ತು ನಾಗರಿಕ ಸೌಲಭ್ಯಗಳು ದಕ್ಕುವುದಿಲ್ಲ ಎಂದು ಬೆದರಿಕೆ ಹಾಕುವ ಮಟ್ಟಿಗೆ ಅಧಿಕಾರಿಗಳು ಸಾರ್ವಜನಿಕರ ಮೇಲೆ ಒತ್ತಡ ಹೇರಿದ್ದಾರೆ. ಇತ್ತೀಚೆಗೆ ನಡೆದ ಅಧಿಕಾರಿಗಳ ಸಭೆಯೊಂದರಲ್ಲಿ ಜಿಲ್ಲಾಧಿಕಾರಿಗಳು ಆಧಾರ್ ಇಲ್ಲದೆ ಯಾವ ಯೋಜನೆಯನ್ನೂ ಅನುಷ್ಠಾನಕ್ಕೆ ತರಕೂಡದು ಎಂದು ಕಟ್ಟಾಜ್ಞೆಯನ್ನೇ ಮಾಡಿದರು. ಅಧಿಕಾರಿಗಳೇ ಈ ರೀತಿ ಅಂಕುಶ ಹಿಡಿದು ಹೊರಟರೆ ಸಾರ್ವಜನಿಕರ ಗತಿ ಏನು ಎಂದು ಯೋಚಿಸಬೇಕಿದೆ.
ಮತ್ತಷ್ಟು ಓದು 




