ಗಡ್ಕರಿಯ ಅ”ವಿವೇಕ” ಮತ್ತು ಸಂಘದ “ಸ್ವಾಮಿ”ನಿಷ್ಠೆ…!
– ರಾಕೇಶ್ ಶೆಟ್ಟಿ
“ಇನ್ನೊಬ್ಬ ವಿವೇಕಾನಂದನಿದ್ದಿದ್ದರೆ ಅವನಿಗೆ ತಿಳಿಯುತಿತ್ತು – ಈ ವಿವೇಕಾನಂದ ಏನು ಮಾಡಿದ್ದಾನೆ ಎಂದು… ಇರಲಿ, ಕಾಲಾಂತರದಲ್ಲಿ ಮತ್ತೆಷ್ಟು ಮಂದಿ ವಿವೇಕಾನಂದರು ಉದಿಸಲಿರುವರೋ!” ಸ್ವಾಮೀಜಿ ದೇಹತ್ಯಾಗದ ದಿನ ತಮ್ಮಷ್ಟಕ್ಕೆ ತಾವೇ ಹೇಳಿಕೊಂಡ ಮಾತುಗಳಿವು. ನಿಜ ವಿವೇಕಾನಂದ ಮಾಡಿ ಹೋಗಿದ್ದೇನು? ಯಾರನ್ನಾದರು ಕೇಳಿ ನೋಡಿ, ತಟ್ಟನೆ “ಅವರು ಸರ್ವ ಧರ್ಮ ಸಮ್ಮೇಳನದಲ್ಲಿ ಹಿಂದೂ ಧರ್ಮದ ಶ್ರೇಷ್ಠತೆಯನ್ನು ಜಗತ್ತಿಗೆ ಸಾರಿದರು” ಅಂತಲೇ ಹೇಳುತ್ತಾರೆ..ಮುಂದೇನು ಮಾಡಿದ್ದರು ಅಂತ ಕೇಳುವಷ್ಟರಲ್ಲಿ ಮಾತು ತಡವರಿಸುತ್ತದೆ… ಬಹುಷಃ ಇದೆಲ್ಲವನ್ನೂ ಅರಿತೇ ಸ್ವಾಮೀಜಿ ಬಹುಷಃ ಮೇಲಿನ ಮಾತನ್ನು ಹೇಳಿದ್ದರು ಅನ್ನಿಸುತ್ತದೆ.
ಆದರೆ,ಮುಂದೊಂದು ದಿನ ತಾನು ಪ್ರತಿಪಾದಿಸುತ್ತಿರುವ “ರಾಷ್ಟ್ರೀಯತೆ(?)” ಅನ್ನುವ ಪದವನ್ನು ಹಿಡಿದು ಪಕ್ಷವೊಂದು ಉದಯಿಸಬಹುದು ಮತ್ತು ಅದಕ್ಕೊಬ್ಬ ಮೇಧಾವಿ ಅಧ್ಯಕ್ಷ ಬಂದು ಅವನು “ಸ್ವಾಮಿ ವಿವೇಕಾನಂದರ ಬುದ್ದಿಮತ್ತೆಯನ್ನು ಮುಂಬೈನ ಕಪ್ಪು ಜಗತ್ತಿನ ಕಳ್ಳನಾಗಿದ್ದವನ ಬುದ್ದಿ ಮತ್ತೆಗೆ ಸರಿಸಮ” ಅಂತೇಳಬಹುದು ಅನ್ನುವುದನ್ನು ಮಾತ್ರ ಊಹಿಸಿರಲಿಕ್ಕಿಲ್ಲ…!
ಬಿಜೆಪಿಯ ಅಪಸ್ವರಕ್ಕೆ ‘ಆರ್.ಎಸ್.ಎಸ್’ನದ್ದೇ ಟ್ಯೂನ್
– ರಾಕೇಶ್ ಶೆಟ್ಟಿ
ಅಂದು ಪಾಕಿಸ್ತಾನದ ನೆಲದಲ್ಲಿ ನಿಂತು “ಜಿನ್ನಾ ಜಾತ್ಯಾತೀತರಾಗಿದ್ದರು” ಅನ್ನುವ ಸತ್ಯ ಹೇಳಿದ್ದೆ ಆ ಹಿರಿಯ ಮಾಡಿದ ದೊಡ್ಡ ತಪ್ಪು(!).ಆ ಒಂದು ಮಾತು ಅವರು ಅಲ್ಲಿವರೆಗೂ ದೇಶದ ಮೂಲೆ ಮೂಲೆಗೆ ಹೋಗಿ ಅವರು ಪಕ್ಷಕಟ್ಟಲು ಪಟ್ಟ ಶ್ರಮ,೨ ಸೀಟಿನಿಂದ ಅಧಿಕಾರದ ಚುಕ್ಕಾಣಿ ಹಿಡಿಯುವವರೆಗೂ ಪಕ್ಷ ಸಾಗಿ ಬಂದ ಹಾದಿಯಲ್ಲಿ ಅವರು ವಹಿಸಿದ ಜವಬ್ದಾರಿ ಎಲ್ಲವನ್ನು ಮರೆಸಿಹಾಕಿತ್ತು.ಧುತ್ತನೆ ಅವರ ಮಾತೃ ಸಂಘಟನೆಗೆ ಈ ಹಿರಿಯ ನಾಯಕ ಮತ್ತು ಮುಂದಿನ ಲೋಕಸಭೆ ಚುನಾವಣೆಯ ಪ್ರಧಾನಿ ಅಭ್ಯರ್ಥಿಯಾಗಿದ್ದವರಿಗೆ ವಯಸ್ಸಾಯಿತು ಅನ್ನುವ ಜ್ನಾನೋದಯ ಅರ್ಧ ರಾತಿಯಲ್ಲಿ ಆಗಿಬಿಟ್ಟಿತ್ತಲ್ಲ,ಅಷ್ಟೇ ಸಾಕಿತ್ತು ಅವಮಾನಕಾರಿಯಾಗಿ ಅವರನ್ನು ಪಕ್ಕಕ್ಕೆ ತಳ್ಳಿ,ಅಲ್ಲಿಯವರೆಗೂ ಮಹಾರಾಷ್ಟ್ರ ಬಿಟ್ಟು ಹೊರಗೆ ಹೆಸರೇ ಕೇಳಿರದ ‘ಯುವ ನಾಯಕ(?)’ ನನ್ನು ಪಕ್ಷದ ರಾಷ್ಟ್ರಾಧ್ಯಕ್ಷ ಸ್ಥಾನದಲ್ಲಿ ಪ್ರತಿಷ್ಠಾಪಿಸಲಾಯಿತು.
ಇವತ್ತಿಗೆ ‘ಆ ಹಿರಿಯ’ರನ್ನು ಮರೆತು ಮುಂದೆ ಹೋದ ಆ ಪಕ್ಷದ ಪಾಡು, ಅಹಂಕಾರದಿಂದ ಕೃಷ್ಣ ಪರಮಾತ್ಮನನ್ನು ಬಿಟ್ಟು ಬಿಲ್ವಿದ್ಯೆ ಮರೆತು ನಿಂತ ‘ಅರ್ಜುನ’ನಂತೆಯೇ ಆಗಿದೆ.ಕೂದಲು ಬೆಳೆಯೋ ಜಾಗವೆಲ್ಲ ತಲೆ ಅಂದುಕೊಂಡವರಂತೆ ಆ ಪಕ್ಷದಲ್ಲಿರುವ ಜನರೆಲ್ಲಾ ತಾವೇ ‘ಪ್ರಧಾನಿ ಅಭ್ಯರ್ಥಿ’ಗಳು ಅಂದುಕೊಂಡಿದ್ದಾರೆ.ಅಂದ ಹಾಗೆ,ಆ ಹಿರಿಯರ ಹೆಸರು ಲಾಲ್ ಕೃಷ್ಣ ಅಡ್ವಾಣಿ,ಪಕ್ಷ ಬಿಜೆಪಿ,ಮಾತೃ ಸಂಘಟನೆಯ ಹೆಸರು ‘ಆರ್.ಎಸ್.ಎಸ್’ ಮತ್ತೆ ಆ ಯುವನಾಯಕ(?) ಮೊನ್ನೆ ಮೊನ್ನೆ ತಾನೇ ಎಕರೆಗಟ್ಟಲೆ ರೈತರ ಜಮೀನು ಸ್ವಾಹ ಮಾಡಿದ್ದಾರೆ ಅನ್ನುವ ಆರೋಪ ಹೊತ್ತ ನಿತಿನ್ ಗಡ್ಕರಿ.
ಒಂದು ತಪ್ಪನ್ನು ಮತ್ತೊಂದು ತಪ್ಪಿನಿಂದ ಸಮರ್ಥಿಸಿಕೊಳ್ಳುತ್ತ….
-ಡಾ. ಅಶೋಕ್ ಕೆ.ಆರ್
ಮಂಗಳೂರಿನ ಪಡೀಲಿನಲ್ಲಿ ನಡೆದ ಘಟನೆಯ ಬಗ್ಗೆ ನೀವೀಗಾಗಲೇ ಬಹಳಷ್ಟು ಓದಿ ನೋಡಿರುತ್ತೀರಿ. ಹಿಂದೂ ಜಾಗರಣ ವೇದಿಕೆ ಸಂಸ್ಕೃತಿಯ ಹೆಸರಿನಲ್ಲಿ ನಡೆಸಿದ್ದು ಕ್ಷಮಿಸಲಾಗದ ತಪ್ಪು. ಇದ್ದ ಹುಡುಗರಲ್ಲಿ ಅತಿ ಹೆಚ್ಚು ಹೊಡೆಸಿಕೊಂಡವನು ಮುಸ್ಲಿಮನಂತೆ ಕಾಣುತ್ತಿದ್ದನೆನ್ನುವುದೇ ಇವರ ಪುಂಡಾಟಕ್ಕೆ ಕಾರಣವಾಯಿತಾ? ಆ ಹುಡುಗ ಕೂಡ ದಕ್ಷಿಣ ಕನ್ನಡದಲ್ಲಿ ಬಿಜೆಪಿಯನ್ನು ಹಿಂದಿನಿಂದಲೂ ಬಹಳವಾಗಿ ಬೆಂಬಲಿಸುತ್ತಿರುವ ಹಿಂದು ಧರ್ಮದ ಒಂದು ಜಾತಿಗೆ ಸೇರಿದವನು! ಯಾವುದೇ ಧರ್ಮದ ಮತೀಯವಾದ ಅಪಾಯಕಾರಿ. ದುರದೃಷ್ಟವಶಾತ್ ದಕ್ಷಿಣ ಕನ್ನಡದಲ್ಲಿ ಹಿಂದು ಮುಸ್ಲಿಂ ಸಂಘಟನೆಗಳು ಮತೀಯವಾದದಲ್ಲಿ ತೊಡಗುತ್ತ ದಕ್ಷಿಣ ಕನ್ನಡದ ನೈಜ ಸಮಸ್ಯೆಗಳನ್ನೇ ಮರೆಸುತ್ತಿವೆ. ಈಗ ನಡೆದಿರುವ ಪುಂಡಾಟಿಕೆಗಳಿಗಿಂತಲೂ ಹೆಚ್ಚಿನ ಅಪಾಯಕಾರಿ ಪ್ರವೃತ್ತಿ ಈ ಮತೀಯವಾದಿಗಳನ್ನು ಸಮರ್ಥಿಸಿಕೊಳ್ಳುತ್ತಿರುವ ವಿದ್ಯಾವಂತರೆನ್ನಿಸಿಕೊಂಡವರಲ್ಲಿ ಕಾಣಿಸುತ್ತಿರುವುದು ಬರಲಿರುವ ಕೆಟ್ಟ ದಿನಗಳ ಮುನ್ಸೂಚನೆಯಾ?
ಅಂತರ್ಜಾಲದ ಪರಿಣಾಮವಾಗಿ ಪ್ರತಿಯೊಬ್ಬರಿಗೂ ತಮ್ಮ ಅಭಿಪ್ರಾಯ ವ್ಯಕ್ತಪಡಿಸುವುದು ಸುಲಭವಾಗಿದೆ. ಫೇಸ್ ಬುಕ್ಕಿನಲ್ಲಿ, ವಿವಿಧ ಬ್ಲಾಗುಗಳಲ್ಲಿ, ಹೊಸ ದಿಗಂತದಂತಹ ಪತ್ರಿಕೆಗಳಲ್ಲಿ ಪಡೀಲಿನ ಘಟನೆಯ ಬಗ್ಗೆ ಬಹುತೇಕ ವಿದ್ಯಾವಂತರೇ ಬರೆಯುತ್ತಿರುವ ಲೇಖನ, ಕಮೆಂಟುಗಳನ್ನು ಗಮನಿಸಿದರೆ ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿಯೇ ದೋಷವಿದೆಯೇನೋ ಎಂಬ ಅನುಮಾನ ಕಾಡುತ್ತದೆ. “ಮಂಡ್ಯದಲ್ಲಿ ‘ಹಿಂದೂ’ ಹೆಣ್ಣುಮಗಳನ್ನು ನಾಲ್ವರು ‘ಮುಸ್ಲಿಮರು’ ಚಲಿಸುವ ರೈಲಿನಿಂದ ಹೊರತಳ್ಳಿದುದನ್ನು ಯಾಕೆ ದೊಡ್ಡ ಸುದ್ದಿ ಮಾಡಲಿಲ್ಲ? ಅಸ್ಸಾಮಿನಲ್ಲಿ ಬೋಡೋ ಹಿಂದೂಗಳನ್ನು ಬಾಂಗ್ಲಾ ಮುಸ್ಲಿಮರು ಶೋಷಿಸುತ್ತಿರುವುದ್ಯಾಕೆ?” ಎಂಬಂಥಹ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ!
ಹಿಂದುತ್ವವೇ ನಮ್ಮ ತತ್ವ ಎಂದು ಸಾರುತ್ತ ಮಾಡಿದ್ದೇನು?
ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದಾಗ ಸಂಭ್ರಮ…ಬ್ರಿಟಿಷರ ದಾಸ್ಯದ ಸಂಕೋಲೆಯಿಂದ ಬಿಡಿಸಿಕೊಂಡು ಸಂತೋಷದಿಂದ ಬದುಕು ಸಾಗಿಸಬಹುದು ಎನ್ನುವ ಅಸೆಯ ಅಂಬಾರಿಯನ್ನು ಹೊಡೆದು ಉರುಳಿಸಿದರಲ್ಲಾ ಎನ್ನುವ ಭಾವನೆ ಮೂಡಿದರೆ ತಪ್ಪಲ್ಲ. ಕಾರಣ ರಾಜ್ಯದ ರಾಜಕೀಯದಲ್ಲಿನ ಪ್ರಸ್ತುತ ಬೆಳವಣಿಗೆ. 1950ರಲ್ಲಿ ಸಂವಿಧಾನ ರಚನೆಯಾಗಿ ಪ್ರಜಾಪ್ರಭುತ್ವ ವ್ಯವಸ್ಥೆ ಜಾರಿಗೆ ಬಂದು ಶಾಸಕಾಂಗ,ನ್ಯಾಯಾಂಗ,ಕಾರ್ಯಾಂಗ ಹಾಗೂ ಮಾಧ್ಯಮರಂಗಗಳು ಸಮಾಜದ ಸ್ವಾಸ್ಥ್ಯ ಕಾಪಾಡುವ ಪ್ರಮುಖ ಪಾತ್ರಧಾರಿಗಳು ಎಂದು ಎದೆ ತಟ್ಟಿಕೊಂಡು ಹೇಳುತ್ತಿದ್ದ ಕಾಲ ಮರೆಯಾಗಿದೆ. ಆದರೆ ಯಾವುದೇ ರಂಗದಲ್ಲಿ ಲೋಪದೋಷಗಳಾದರೂ ಕಷ್ಟ ಅನುಭವಿಸುವವರು ಸಾಮಾನ್ಯ ಜನತೆ ಎನ್ನುವುದು ಸ್ಪಷ್ಟ.
ಯತ್ಖಲು ಖಲಮುಖಹುತವಹವಿನಿಹಿತಮಪಿ ಶುದ್ದಿಮೇವ ಪರಮೇತಿ
ತದನಲ ಶೌಚಮಿವಾಂಶುಕಮಿಹ ಲೋಕೇ ದುರ್ಲಭಂ ಪ್ರೇಮ||
ನೀಚರ ಬಾಯೆಂಬ ಬೆಂಕಿಯಲ್ಲಿ ಬಿದ್ದದ್ದೆಲ್ಲ ಶುದ್ದವಾಗುವುದೆಂಬ ಮಾತು ಸರ್ವಥಾ ಸರಿಯಲ್ಲ. ಏಕೆಂದರೆ ಬೆಂಕಿಯಲ್ಲಿ ಬಿದ್ದು ಶುದ್ದವಾಗಿ ಉಳಿದು ಬಂದ ಬಟ್ಟೆಯೆಷ್ಟು ದುರ್ಲಭವೋ ದುಷ್ಟರ ಬಾಯಿಗೆ ಸಿಲುಕಿ ಶುದ್ದವಾಗಿ ಹೊರಬಂದ ಸದ್ಗುಣಗಳು ಅಷ್ಟೇ ದುರ್ಲಭ.
ದೇಶ – ಭಾಷೆಗಳ ನಡುವೆ
– ರಾಕೇಶ್ ಶೆಟ್ಟಿ
ಆಗ ದೇಶದಲ್ಲಿ ಆಹಾರ ಸಮಸ್ಯೆಯಿತ್ತು.ಅಂತ ಕ್ಲಿಷ್ಟಕರ ಸಮಯದಲ್ಲಿ ಪ್ರಧಾನಿಯಾಗಿದ್ದವರು ಲಾಲ್ ಬಹದ್ದೂರ್ ಶಾಸ್ತ್ರಿಗಳು.ಆಹಾರದ ಸಮಸ್ಯೆಗೆ ಅಮೇರಿಕಾ PL480 (food for peace) ಕಾರ್ಯಕ್ರಮದಲ್ಲಿ ಕಳಿಸುತಿದ್ದ ಗೋಧಿ ತುಂಬಾ ಕಳಪೆ ಮಟ್ಟ ಮುಟ್ಟಿದಾಗ,ಅಂತ ಗೋಧಿಯನ್ನ ಬಳಸುವುದನ್ನ ವಿರೋಧಿಸಿದ ಶಾಸ್ತ್ರಿಗಳು ‘ಇಂತ ಅವಮಾನದ ಬದಲು ಒಪ್ಪೊತ್ತು ಉಪವಾಸ ಇರೋಣ’ ಅಂತ ದೇಶದ ಜನಕ್ಕೆ ಕರೆ ಕೊಟ್ಟಿದ್ದರು,ಹಾಗೆ ಕರೆಕೊಡುವ ಮೊದಲೇ ಅವರ ಮನೆಯಲ್ಲಿ ರಾತ್ರಿ ಅಡಿಗೆ ಮಾಡುವಂತಿಲ್ಲ ಅಂತ ಹೇಳಿದ್ದರು! , ‘ನೀ ಬಯಸುವ ಬದಲಾವಣೆ ನಿನ್ನಿಂದಲೇ ಆಗಲಿ’ ಅನ್ನುವ ಗಾಂಧೀ ಮಾತನ್ನ ಪಾಲಿಸಿ ತೋರಿಸಿದ್ದರು ಶಾಸ್ತ್ರಿಗಳು!
ಆರ್.ಎಸ್.ಎಸ್ ನ ಎರಡನೇ ಸರಸಂಘಚಾಲಕರಾದ ಶ್ರೀ ಮಾಧವ ಸದಾಶಿವ ಗೋಲ್ವಾಲ್ಕರ್ ಅವರ “ಚಿಂತನಗಂಗಾ” ಪುಸ್ತಕದ ಸುತ್ತ ಅಂತರ್ಜಾಲದಲ್ಲಿ ನಡೆಯುತ್ತಿರುವ ಚರ್ಚೆ ಫ಼ಾಲೋ ಮಾಡುವಾಗ “ಸಂಘದಲ್ಲಿ ವಿಚಾರ ಸ್ವಾತಂತ್ರವಿದೆಯೇ” ಎನ್ನುವ ಪದ ಬಳಕೆ ನೋಡಿ ನಗು ಬಂತು.ಅಸಲಿಗೆ ಯಾವುದೇ ಸಂಘಟನೆ,ಸ್ವಸ್ಥ ಸಮಾಜದಲ್ಲಿ ವಿಚಾರ ಸ್ವಾತಂತ್ರ್ಯವಿರಲೇಬೇಕು ಅದು ಇರಲಿ ಅಂತ ಕೇಳುವುದು ತಪ್ಪೇನು ಅಲ್ಲ.ಆದರೆ ವಿಚಾರ ಸ್ವಾತಂತ್ರ್ಯದ ಬಗ್ಗೆ ಕೇಳಿದವರು ಯಾರು ಅನ್ನುವುದು ಮುಖ್ಯವಾಗುತ್ತದಲ್ಲವೇ? ವೇದಾಂತ ಇರೋದು ಬೇರೆಯವ್ರಿಗೆ ಹೇಳೋಕ್ ಮಾತ್ರ ಅಂದುಕೊಂಡವರಿಗಾಗಿಯೇ ಗಾಂಧೀಜಿಯವರು ‘ನೀ ಬಯಸುವ ಬದಲಾವಣೆ ನಿನ್ನಿಂದಲೇ ಆಗಲಿ’ ಅಂದಿದ್ದು.
ಚಿಂತನಗಂಗಾ ಚರ್ಚೆಯ ಪ್ರತಿಕ್ರಿಯೆಗಳ ಸುತ್ತ…
(ಗೋಲ್ವಾಲ್ಕರ್ ಅವರ ಚಿಂತನಗಂಗಾ ಪುಸ್ತಕದ ಸುತ್ತ ಬನವಾಸಿ ಬಳಗದ ಮಿತ್ರರು ಶುರು ಮಾಡಿದ ಚರ್ಚೆಗೆ ನಿಲುಮೆಯಲ್ಲಿ ಅಶ್ವಿನ್ ಅಮೀನ್ ಅವರು ಪ್ರತಿಕ್ರಿಯೆ ನೀಡಿದ್ದರು.ಅಶ್ವಿನ್ ಅವರ ಪ್ರತಿಕ್ರಿಯೆಗೆ ಪ್ರಿಯಾಂಕ್ ,ಚೇತನ್ ಮತ್ತು ಮಂಜುನಾಥ್ ಅವ್ರು ಎತ್ತಿದ ಪ್ರಶ್ನೆಗಳು ಕೇವಲ ಪ್ರತಿಕ್ರಿಯೆಗಳಾಗಿ ಕಳೆದುಹೋಗದಿರಲಿ ಅನ್ನುವ ಉದ್ದೇಶದಿಂದ ಓದುಗರಿಗಾಗಿ ಪ್ರಕಟಿಸುತಿದ್ದೇವೆ – ನಿಲುಮೆ)
– ಪ್ರಿಯಾಂಕ್
ಇಲ್ಲಿ ಹೇಳಲಾಗಿರುವ ಕೆಲ ವಿಷಯಗಳ ಬಗ್ಗೆ ನನ್ನ ಅನಿಸಿಕೆಗಳು.
– ಗೋಲ್ವಾಲ್ಕರ್ ಅವರ ಚಿಂತನಗಂಗಾ ಹೊತ್ತಗೆಯೇ ಆರ್.ಎಸ್.ಎಸ್ಸಿನ ನಿಲುವುಗಳಲ್ಲ ಅಂತಲೂ ಕೆಲವರು ಹೇಳಿದ್ದರು. ನೀವು ಬರೆದಿರೋದು ನೋಡಿ, ಆರ್.ಎಸ್.ಎಸ್ಸಿನ ನಿಲುವುಗಳೆಲ್ಲವೂ ಗೋಲ್ವಾಲ್ಕರ್ ಅವರ ಮಾತುಗಳನ್ನು ಒಪ್ಪುತ್ತದೆ ಎನ್ನುವಂತಿದೆ.
– ಹಿಂದಿಯನ್ನು ರಾಷ್ಟ್ರಬಾಷೆ ಮಾಡಬೇಕಾಗಿ ಗಾಂಧಿ ಅವರೂ ಸೇರಿದಂತೆ, ಗೋಳ್ವಾಲ್ಕರ್ ಅವರೂ ಹೇಳಿದ್ದರು. ಅದಕ್ಕೆ ಕಾರಣಗಳೂ ಇದ್ದವು ಎಂದಿದೀರಿ. ಗಾಂಧಿ ಅವರು ಹೇಳಿದ್ದೂ ನಿಜವೇ. ಅದೆಲ್ಲವನ್ನೂ ಪ್ರಶ್ನಿಸಬೇಕಾಗಿದೆ. ಗೋಳ್ವಾಲ್ಕರ್ ಅವರ ಚಿಂತನೆಗಳೇ ಸಂಘದ ನಿಲುವಾಗಿದ್ದರೆ, ಇವತ್ತಿಗೂ ಸಂಘವು ಹಿಂದಿಯನ್ನು ರಾಷ್ಟ್ರಭಾಷೆಯನ್ನಾಗಿ ಮಾಡಲು ಪ್ರಯತ್ನಿಸುತ್ತಿದೆ ಎಂದರ್ಥವಲ್ಲವೇ? ಎಲ್ಲಾರ ಮೇಲೆ ಹಿಂದಿ ಹೇರಿಕೆ ಮಾಡುವುದರ ಪರವಾಗಿ ಸಂಘವಿದೆ ಎಂಬರ್ಥವಲ್ಲವೇ? ಹಾಗೆ ಮಾಡುತ್ತಿದಾರೋ, ಇಲ್ಲವೋ ಎಂಬುದು ಪ್ರಶ್ನೆಯಾಗಿದೆ.





