ವಿಷಯದ ವಿವರಗಳಿಗೆ ದಾಟಿರಿ

Posts tagged ‘ಇತಿಹಾಸ’

10
ಆಗಸ್ಟ್

ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ

(ಮರೆತು ಮರೆಯಾಗಿರುವ ಸ್ವಾತಂತ್ರ್ಯ ವೀರರನ್ನು ನೆನೆಸಿಕೊಮ್ಡು ಗೌರವ ಸಲ್ಲಿಸುವ ಹಾಗೂ ಅವರ ಕುರಿತ ಮಾಹಿತಿಗಳನ್ನು ಜನರಿಗೆ ತಲುಪಿಸುವ ಸದುದ್ದೇಶದಿಂದ ರಾಮಚಂದ್ರ ಹೆಗಡೆಯವರು “ಸುಮ್ಮನೇ ಬರಲಿಲ್ಲ ಸಾತಂತ್ರ್ಯ” ಎಂಬ ಈ ಬರಹ ಸರಣಿಯನ್ನು ಪ್ರಾರಂಭಿಸಿದ್ದಾರೆ. ಕೆಲವು ಲೇಖನಗಳಿಗೆ ಮಾಹಿತಿಗಳನ್ನು ವಿವಿಧ ವೆಬ್ಸೈಟುಗಳ ಮೂಲಕ ಪಡೆದಿದ್ದರೆ, ಉಳಿದಂತೆ ತಾವು ಓದಿಕೊಂಡಿರುವುದನ್ನು ದಾಖಲಿಸಿದ್ದಾರೆ. ಈ ಸರಣಿ ನಿಲುಮೆಯ ಓದುಗರಿಗಾಗಿ – ಸಂಪಾದಕರು, ನಿಲುಮೆ)

– ರಾಮಚಂದ್ರ ಹೆಗಡೆ

ಆಗಸ್ಟ್ ತಿಂಗಳೆಂದರೆ ಭಾರತೀಯರಿಗೆ ವಿಶೇಷವಾದ ತಿಂಗಳು. ಪರಕೀಯರ ಆಳ್ವಿಕೆಯಿಂದ, ದಾಸ್ಯದ ಸಂಕೋಲೆಯಿಂದ ದೇಶ ಬಿಡುಗಡೆಗೊಂಡ ತಿಂಗಳಿದು. ಆದರೆ ಆ ಸ್ವಾತಂತ್ರ್ಯ ಅಷ್ಟು ಸುಲಭಕ್ಕೆ ದಕ್ಕಿದ್ದಲ್ಲ. ಅದರ ಹಿಂದೆ ಲಕ್ಷಾಂತರ ಜನರ ತ್ಯಾಗ ಬಲಿದಾನಗಳಿವೆ. ಸ್ವಾತಂತ್ರ್ಯ ಬಂದ ಅರವತ್ತೇ ವರ್ಷದಲ್ಲಿ ನಾವು ಅವರೆಲ್ಲರನ್ನೂ ಮರೆತೇಬಿಟ್ಟಿದ್ದೇವೆ. ನಮ್ಮ ಇಂದಿಗಾಗಿ ತಮ್ಮ ನಾಳೆಗಳನ್ನು ಬಲಿಕೊಟ್ಟವರನ್ನು ಕನಿಷ್ಠ ಈ ತಿಂಗಳಾದರೂ ನೆನೆಯಬೇಕಾದ್ದು ನಮ್ಮೆಲ್ಲರ ಕರ್ತವ್ಯ ಅಲ್ವಾ?. ದಿನಕ್ಕೊಬ್ಬ ದೇಶಭಕ್ತನನ್ನು ನೆನಪಿಸಿಕೊಳ್ಳುವ ಪ್ರಯತ್ನವಿದು. ಭಾರತೀಯ ಸ್ವಾತಂತ್ರ್ಯ ಹಬ್ಬದ ಈ ತಿಂಗಳಲ್ಲಿ ದೇಶಕ್ಕಾಗಿ ಅಮರರಾದ ವೀರರನ್ನು ಸ್ಮರಿಸುವ ಸರಣಿ ಇದು. ಇದು ಮರೆತವರನ್ನು ನೆನೆಯುವ ಪ್ರಯತ್ನ. ದೇಶಭಕ್ತರ ಕುರಿತ ಮಾಹಿತಿಗಳನ್ನು ಜೋಡಿಸುವ ಕೆಲಸವಷ್ಟೇ ನಮ್ಮದು. ಇದನ್ನು ಹೆಚ್ಚು ಜನರಿಗೆ ತಲುಪಿಸಿ. ಈ ರಾಷ್ಟ್ರಜಾಗೃತಿಯ ಆಂದೋಲನದಲ್ಲಿ ಕೈಜೋಡಿಸಿ.

ಈ ದಿನದ ಸ್ಮರಣೆ: *ರಾಣಿ ಗಾಯಡಿನ್ ಲೂ*
======================
Gaidinlui_20150125ರಾಣಿ ಗಾಯಡಿನ್ ಲೂ: ಹೆಸರು ಕೇಳಿದರೆ ಇದು ಯಾರೋ ಬ್ರಿಟಿಷ್ ವ್ಯಕ್ತಿ ಅನ್ನಿಸಬಹುದು. ಆದರೆ ಈ ರಾಣಿ ಗಾಯಡಿನ್ ಲೂ ಈಶಾನ್ಯ ರಾಜ್ಯ ನಾಗಲ್ಯಾಂಡ್ ನ ಆಧ್ಯಾತ್ಮಿಕ ಹಾಗೂ ರಾಜಕೀಯ ಹೋರಾಟದ ನಾಯಕಿಯಾಗಿದ್ದ, ಬ್ರಿಟಿಷ್ ಆಡಳಿತದ ವಿರುದ್ಧ ಈಶಾನ್ಯ ರಾಜ್ಯದಲ್ಲಿ ದಂಗೆ ಎಬ್ಬಿಸಿದ ದಿಟ್ಟ ಮಹಿಳೆ. ತನ್ನ 12ನೇ ವಯಸ್ಸಿಗೇ ಹೋರಾಟಕ್ಕೆ ಧುಮುಕಿ 16ನೇ ವಯಸ್ಸಿಗೆ ಜೀವಾವಧಿ ಶಿಕ್ಷೆಗೆ ಗುರಿಯಾದ ಈಕೆಯ ಕೇವಲ 4 ವರ್ಷಗಳ ಹೋರಾಟದ ತಾಕತ್ತು ಎಂಥದ್ದು ಎಂದು ತಿಳಿದರೆ ಅಚ್ಚರಿ ಎನಿಸುತ್ತದೆ. ಬ್ರಿಟಿಷರ ವಿರುದ್ಧ ಹೋರಾಟ ಅಷ್ಟೇ ಅಲ್ಲದೇ ನಾಗಾ ಜನರಲ್ಲಿ ತಮ್ಮ ಸ್ವಧರ್ಮದ ಬಗ್ಗೆ ಕೀಳರಿಮೆ ಹೊಡೆದೋಡಿಸಿ ಅಭಿಮಾನ ಮೂಡುವಂತೆ ಮಾಡಿದರು. ಪ್ರತಿಯೊಂದು ವನವಾಸಿ ಸಮುದಾಯದ ಬಳಿ ತೆರಳಿ ಬ್ರಿಟಿಷರ ಕುತಂತ್ರದ ಕುರಿತು ಮುಗ್ಧ ಜನರಿಗೆ ತಿಳಿ ಹೇಳಿದರು. ಗಾಯಡಿನ್ ಲೂರಿಂದ ಆಕರ್ಷಿತರಾದ ವನವಾಸಿ ಮಹಿಳೆಯರು ಒಂದು ಸೇನಾ ಪಡೆಯನ್ನೇ ಕಟ್ಟಿದರು. ಇದರಿಂದ ಉತ್ಸಾಹಿತಳಾದ ಗಾಯಡಿನ್ ಲೂ ಅವರಿಗೆ ಸಾಂಪ್ರದಾಯಿಕ ಮದ್ದುಗುಂಡುಗಳ ತಯಾರಿಕೆ, ಬಂದೂಕು ತರಬೇತಿಯನ್ನು ಕೊಟ್ಟಳು. ಮುಂದೆ ಬ್ರಿಟಿಷರ ವಿರುದ್ಧ ಗೆರಿಲ್ಲಾ ಯುದ್ಧವನ್ನು ಮಾಡಿದಳು. ಇವಳ ರಣನೀತಿಯಿಂದ ಬ್ರಿಟಿಷರು ತತ್ತರಿಸಿಹೋಗಿದ್ದರು. ಬ್ರಿಟಿಷರಿಗೆ ಸಿಂಹಸ್ವಪ್ನ ವಾಗಿದ್ದ ಈಕೆ ಬ್ರಿಟಿಷರ ತಂತ್ರಗಳನ್ನೆಲ್ಲಾ ಕ್ಷೀಣಿಸುವಂತೆ ಮಾಡಿದಳು. ಧರ್ಮ ರಕ್ಷಣೆ ಮತ್ತು ಬ್ರಿಟಿಷರನ್ನು ಭಾರತ ಬಿಟ್ಟು ಓಡಿಸಿ ಎನ್ನುವ ವಿಷಯವಿಟ್ಟುಕೊಂಡು ಹೋರಾಟ ಮಾಡಿದಳು. ಇವಳಿಗೆ ಹೇಗಾದರು ಮಾಡಿ ಕಡಿವಾಣ ಹಾಕಬೇಕು ಎಂದು ನಿರ್ಧರಿಸಿದ ಬ್ರಿಟಿಷ ಸರಕಾರ ಆ ರಾಜ್ಯಗಳಿಗೆ ತನ್ನ ಸೈನ್ಯವನ್ನೇ ಕಳುಹಿಸಿಕೊಟ್ಟಿತು. ಅಷ್ಟೇ ಅಲ್ಲದೇ ಆ ಕಾಲದಲ್ಲಿಯೇ ಅವಳ ಸುಳಿವು ನೀಡಿದವರಿಗೆ 400ರೂ. ಬಹುಮಾನದ ಜೊತೆಗೆ ಸರಕಾರದ ಸುಂಕವನ್ನು ಮನ್ನಾ ಮಾಡುವದಾಗಿ ಆಮಿಷ ತೋರಿಸಿತು. ಬ್ರಿಟಿಷರು ಎಂದಿನಂತೆ ತಮ್ಮ ಕುತಂತ್ರ ಬುದ್ಧಿಯ ಮೂಲಕ ಗಾಯಿಡಿನ್ ಲೂ ಆಪ್ತರಿಗೆ ಆಮಿಷವೊಡ್ಡಿ ಅವಳ ಸುಳಿವು ಪತ್ತೆಹಚ್ಚಿತು. ಇಬ್ಬರ ಮಧ್ಯೆ ದೊಡ್ಡ ಯುದ್ಧವೇ ನಡೆದುಹೋಯಿತು. ಕೊನೆಗೆ 1932ರ ಅಕ್ಟೋಬರ್ 12 ರಂದು ಗಾಯಿಡಿನ್ ಲೂ ಮೇಲೆ ವಿವಿಧ ಸುಳ್ಳು ಆರೋಪವನ್ನು ಹೊರಿಸಿ, ಸಂಬಂಧವೇ ಇಲ್ಲದ ಕೊಲೆ ಅರೋಪವನ್ನು ತಲೆಗೆ ಕಟ್ಟಿ ಬಂಧಿಸಲಾಯಿತು. ಮತ್ತಷ್ಟು ಓದು »

30
ಸೆಪ್ಟೆಂ

ಇತಿಹಾಸದ ಅಚ್ಚರಿಗಳಲ್ಲಿ ಒಂದು ಇಣುಕು: ‘ಕರ್ನಾಟಕದ ಅಂದಿನ ಶ್ರೇಷ್ಟರ ಇಂದಿನ ವಂಶಸ್ಥರು ಮತ್ತು ಕುರುಹುಗಳು’

– ರಾಘವೇಂದ್ರ ಅಡಿಗ ಹೆಚ್.ಎನ್

Chidananda Murthy - Kannada ಕಳೆದ ವಾರ ಕನ್ನಡದ ಒಂದು ಅಪೂರ್ವ ಮತ್ತು ನೂತನ ಸ್ವರೂಪದ ಕೃತಿಯೊಂದರ ಬಿಡುಗಡೆ ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನೆರವೇರಿತು.( ಆ ಸಂದರ್ಭದಲ್ಲಿ ನಾನೂ ಸಹ ಅಲ್ಲಿ ಇದ್ದೆ ಎನ್ನುವ ವಿಚಾರವೇ ನನಗೊಂದು ಖುಷಿಯ ಸಂಗತಿ.) ಕನ್ನಡ ಸಾಹಿತ್ಯ ಹಾಗೂ ಸಾಂಸ್ಕೃತಿಕ ಲೋಕದ ಅಗ್ರರಲ್ಲಿ ಒಬ್ಬರಾದ ಡಾ. ಎಮ್. ಚಿದಾನಂದಮೂರ್ತಿಯವರ ‘ಕರ್ನಾಟದ ಅಂದಿನ ಶ್ರೇಷ್ಟರ ಇಂದಿನ ವಂಶಸ್ಥರು ಮತ್ತು ಕುರುಗಳು’ ಎನ್ನುವ ಹೆಸರಿನ ಕೃತಿಯು ಗಾತ್ರದಲ್ಲಿ ಚಿಕ್ಕದಾಗಿದ್ದರೂ ಅದರಲ್ಲಿರುವ ವಿಷಯದ ದೃಷ್ಟಿಯಿಂದ ತೀರಾ ವಿನೂತನವಾದುದ ಅಷ್ಟೇ ಅಲ್ಲ ಬಹು ಮೌಲ್ಯಯುತವಾದುದು ಕೂಡ. ಲೇಖಕರೇ ಹೇಳುವಂತೆ ‘ಇಂತಹಾ ಒಂದು ಪುಸ್ತಕ ಕನ್ನಡದಲ್ಲಿ ಬರುತ್ತಿರುವುದು ಇದೇ ಮೊದಲು,ಇತರೆ ಭಾರತೀಯ ಭಾಷೇಗಳಲ್ಲಿಯೂ ಬಂದಂತಿಲ್ಲ’. ಈ ಒಂದು ಪುಸ್ತಕದಿಂದ ನಾವು-ನೀವು ಓದಿರುವ ಕನ್ನಡದ ಪ್ರಾಚೀನ ಕವಿಗಳು, ನಮ್ಮನ್ನಾಳಿದ ರಾಜ ಮಹಾರಾಜರ ವಂಶಸ್ಥರ ಕುರಿತಾಗಿ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳಬಹುದು.

ಕನ್ನಡದ ಶ್ರೇಷ್ಠ ಸಂಶೋಧಕರೂ, ಚಿಂತಕರೂ, ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ ಪುರಸ್ಕೃತರೂ ಆಗಿರುವ ಡಾ. ಎಮ್. ಚಿದಾನಂದಮೂರ್ತಿಗಳ ಈ ಕಿರುಹೊತ್ತಿಗೆ ಅವರ ಹಲವು ವರ್ಷಗಳ ಪರಿಶ್ರಮದ ಫಲ. ಶತ ಶತಮಾನಗಳ ಹಿಂದೆ ಆಳಿಹೋದ ರಾಜವಂಶಸ್ಥರ, ನೂರಾರು-ಸಾವಿರಾರು ವರ್ಷಗಳ ಹಿಂದೆ ಬದುಕಿ ಕಾವ್ಯಗಳನ್ನು ರಚಿಸಿದ ಪ್ರಾಚೀನ ಕವಿಮಹೋದಯರ ಈಗಿನ ವಂಶಸ್ಥರು ಯಾರೆನ್ನುವುದನ್ನು ಪತ್ತೆ ಮಾಡಿ ಅವರನ್ನು ಸಂದರ್ಶಿಸಿ, ಅವರ ಬಳಿ ಇದ್ದ ಅಂದಿನ ಕಾಲದ ಕುರುಹುಗಳನ್ನು ನೋಡಿ ಅದರ ಬಗ್ಗೆ ಲೇಖನ ಅಥವಾ ಪುಸ್ತಕ ಬರೆಯುವುದು ಅಷ್ಟೇನೂ ಸುಲಭವಲ್ಲ. ಉದಾಹರಣೆಗೆ ಕನ್ನಡದ ಆದಿಕವಿ ಪಂಪನನ್ನು ತೆಗೆದುಕೊಂಡರೆ ಅವನ ಕಾಲ ಕ್ರಿ.ಶ.೯೦೨. ಅವನು ‘ವಿಕ್ರಮಾರ್ಜುನ ವಿಜಯ’ ಕಾವ್ಯವನ್ನು ಪೂರ್ಣಗೊಳಿಸಿದ್ದು ಕ್ರಿ.ಶ.೯೪೨ ರಲ್ಲಿ. ಅಂದರೆ ಇಂದಿಗೆ ಸುಮಾರು ಸಾವಿರದ ನೂರು ವರ್ಷಗಳಾದವು. ಹೀಗೆ ಸಾವಿರ ವರ್ಷಗಳ ಹಿಂದೆ ಬದುಕಿದ್ದ ಪಂಪನ ತಂದೆ ಹಾಗೂ ತಾಯಿಯ ವಂಶಸ್ಥರ ವಿವರಗಳಾನ್ನು ಪತ್ತೆ ಮಾಡುವುದು ಮತ್ತು ಅವರನ್ನು ಸ್ವತಃ ಸಂದರ್ಶಿಸಿ ಮತ್ತಷ್ಟು ಮಾಹಿತಿಯನ್ನು ಕಲೆಹಾಕಿ ಪುಸ್ತಕ ಪ್ರಕಟಿಸುವುದು ಬಲು ಅಪರೂಪದ ಸಂಗತಿ. ಹೀಗಾಗೆ ಇಂತಹಾ ಪುಸ್ತಕವು ಕನ್ನಡದಲ್ಲಿ ತೀರಾ ನೂತನವಾಗಿರುವುದು ಸಾಧ್ಯ.

ಮತ್ತಷ್ಟು ಓದು »

18
ಆಕ್ಟೋ

ಏಕ್ ಥಾ ಟೈಗರ್…! ಅವನೊಬ್ಬನಿದ್ದ ನಮ್ಮ ಸಳ…!

– ಚರಿತ್ರ ಕುಮಾರ್

ಮಲೆನಾಡಿನ ಒಂದು ಹಳ್ಳಿ. ಗುರುವೊಬ್ಬ ಶಿಷ್ಯರನ್ನು ಕೂರಿಸಿಕೊಂಡು ಬಯಲಲ್ಲಿ ಪಾಠ ಹೇಳಿಕೊಡುತ್ತಿದ್ದ. ತನ್ಮಯನಾಗಿದ್ದ ಗುರು. ಆಲಿಸುತ್ತಾ ಮನನಮಾಡಿಕೊಳ್ಳುತ್ತಿದ್ದ ಶಿಷ್ಯರು. ವಿದ್ಯೆಯನ್ನು ಪರಿಕಿಸಲೋ ಅಥವಾ ಶಿಷ್ಯರನ್ನು ಅಳೆಯಲೋ ಅಥವಾ ಗುರುವಿನ ಮಟ್ಟವನ್ನು ತಿಳಿಯಲೋ ಎಂಬಂತೆ ವ್ಯಾಘ್ರವೊಂದು ಘರ್ಜಿಸುತ್ತಾ ಬಂತು. ಎಂಥಾ ಗುರು-ಶಿಷ್ಯರೂ ಒಮ್ಮೆ ಅವಕ್ಕಾಗುವ ಸಮಯ. ಗುರುವಿನ ಬಾಯಿಂದ ಬಂದಿದ್ದು ಒಂದೇ ಒಂದು ಮಾತು “ಹೊಯ್-ಸಳ” . ಸಳ ಎಂಬವನು ಶಿಷ್ಯ. ಆತ ನೆಚ್ಚಿನ ಶಿಷ್ಯನೇ ಇರಬೇಕು. ಆತ ಕತ್ತಿ ಹಿರಿಯಲಿಲ್ಲ. ಬಾಣ ಹೂಡಲಿಲ್ಲ. ಬಯಲಲ್ಲಿ ಗುರುಸಮ್ಮುಖದಲ್ಲಿ ಪಾರಾಯಣ ಮಾಡುತ್ತಿದ್ದವನಿಗೆ ಗುರುವಾಕ್ಯವೇ ಆಯುಧಕ್ಕಿಂತ ವೊನಚಾಯಿತು. ಸಳ ಬರಿಗೈಯಲ್ಲೇ ಕಾದ. ಗುರುವಾಕ್ಯ ಪೂರೈಸಿತು. ಹುಲಿ ಅಸುನೀಗಿತು. ಹೊಯ್ ಸಳ ಎಂದಿದ್ದ ಗುರುವೇ ಈಗ “ಭಲೇ ಸಳ” ಎಂದ. ಮುಂದೆ ಗುರುವಾಕ್ಯಬಲದಿಂದಲೇ ಯುವಕ/ಬಾಲಕ ಸಳ ರಾಜ್ಯ ಕಟ್ಟಿದ, ಆಳಿದ. ವಿದ್ಯೆಯ ಬಲ, ಗುರುವಿನ ಬಲ ಮತ್ತು ಶಿಷ್ಯನ ಅಂತಶಕ್ತಿಗೆ ಇವೆಲ್ಲಾ ಘಟನೆಗಳು ಸಾಕ್ಷಿಗಳಾಗಿ ನಿಲ್ಲುತ್ತವೆ. ಇದು ಕನ್ನಡದ ಇತಿಹಾಸದಲ್ಲಿ ದಾಖಲಾಗುವ ಮಹತ್ತರ ಪ್ರಸಂಗ. ಸ್ವಶಕ್ತಿಯಿಂದ , ಸ್ವಚಿಂತನೆಯಿಂದ ಸಾಮ್ರಾಜ್ಯವೊಂದು ಮೈದಾಳಿದ ಕಥೆ. ಹೀಗೆ ಕರ್ನಾಟಕ ಮರೆಯಲಾಗದ, ಸುವರ್ಣಯುಗವನ್ನು ಕಂಡ ಹೊಯ್ಸಳ ಸಾಮ್ರಾಜ್ಯಮುಂದೆ ಹಲವು ವೈಭವಗಳನ್ನು ಕಂಡಿತು. ಕನ್ನಡದ ಹಲವು ಕುರುಹುಗಳನ್ನು ಬಿಟ್ಟುಹೋಯಿತು. ಕರ್ನಾಟಕ ಶಿಲ್ಪ ಕಲೆಗಳ ಬೀಡಾಯಿತು. ಭೂಲೋಕದ ಸ್ವರ್ಗ ಎಂದು ಕವಿಗಳು ವರ್ಣಿಸುವಂತಾಯಿತು. ಕರ್ನಾಟಕ ನಾಟ್ಯ ಕಲೆಗಳ ನಾಡಾಯಿತು. ಸರ್ವಧರ್ಮ ಸಮನ್ವಯದ ನೆಲೆಯಾಯಿತು. ದ್ವಾರಸಮುದ್ರದ ಹೊಯ್ಸಳರು ಗಡಿಯಾಚೆಗಿನ ರಾಜರೊಂದಿಗೂ ಕಾದಾಡಿ ಕನ್ನಡದ ಹಿರಿಮೆಯನ್ನು ಸಾರಿದರು. ಆಧುನಿಕ ಪರಿಭಾಷೆಯಲ್ಲಿ ಹೇಳಬೇಕೆಂದರೆ ಕನ್ನಡದ ಮನಸ್ಸನ್ನು ಪ್ರಬಲವಾಗಿ ರೂಪಿಸಿದವರೇ ಹೊಯ್ಸಳರು. ಕರ್ನಾಟಕದಲ್ಲಿ ಶಿವ ದೇವಾಲಯಗಳು ಪ್ರಸಿದ್ಧವಾಗಿದ್ದೇ ವೈಷ್ಣವರಾಗಿದ್ದ ಹೊಯ್ಸಳರ ಕಾಲದಲ್ಲಿ ಎಂಬುದು ಇಂದಿನ ಕಾಲಮಾನದಲ್ಲೂ ಸೋಜಿಗ ಹುಟ್ಟಿಸುವ ಸಂಗತಿ.

ಇಂಥ ಎಷ್ಟೋ ಸಂಗತಿಗಳನ್ನು ಇತಿಹಾಸದ ಪುಟಗಳು ವಿವರಿಸುತ್ತಾ ಹೋಗುತ್ತವೆ. ಆ ಸಂಗತಿಗಳೆಲ್ಲವೂ ಹುಲಿಕೊಂದ ಸಳನ ವಂಶದ ವೈಭವಗಳು-ಕೊಡುಗೆಗಳು. ಇಷ್ಟೊಂದು ವೈಭವಶಾಲಿ, ಪರಾಕ್ರಮಶಾಲಿ,ಪರಿಶ್ರಮಶಾಲಿ ಸಾಮ್ರಾಜ್ಯಕ್ಕೆ ಬೀಜ ಹಾಕಿದ ಸಳ ನಿಜವಾದ ಕರ್ನಾಟಕದ ಹುಲಿ. ಪರಾಕ್ರಮದಲ್ಲಿ, ಗುರುವಾಕ್ಯ ಪರಿಪಾಲನೆಯಲ್ಲಿ , ಹಿಡಿದ ಸಂಗತಿಯನ್ನು ಪಾಲಿಸುವುದರಲ್ಲಿ , ಧರ್ಮ ಕಾರ್ಯದಲ್ಲಿ ,ಪರೋಪಕಾರದಲ್ಲೂ ಆತ ಹುಲಿ. ಅವನೊಬ್ಬನಿದ್ದ ಹುಲಿ. ಏಕ್ ಥಾ ಟೈಗರ್. ಹುಲಿ ಎಂದು ಕರೆದರೆ ಇವನನ್ನೇ ಕರೆಯಬೇಕು ಎಂಬ ಗುಣಲಕ್ಷಣ, ವ್ಯಕ್ತಿತ್ವವನ್ನು ಹೊಂದಿದ್ದ ಸಳ ರಾಜ್ಯ ಕಟ್ಟದೆ ಇನ್ನಾರು ಕಟ್ಟಿಯಾರು? ಆತನನ್ನಲ್ಲದೆ ಇನ್ನಾರನ್ನು ತಾನೇ ಹುಲಿ ಎಂದು ಕರೆಯಲಾದೀತು?

ಮತ್ತಷ್ಟು ಓದು »

16
ಜುಲೈ

ಕೇಸರೀಕರಣ: ದಾಯಾದಿಗಳ ಕಲಹ

– ಸಂತೋಷ್ ಕುಮಾರ್ ಪಿಕೆ

ಕರ್ನಾಟಕದ ಪ್ರಾಥಮಿಕ ಶಾಲಾಪಠ್ಯದಲ್ಲಿ ಹೊಸ ಪಠ್ಯಕ್ರಮವನ್ನು ಸೇರ್ಪಡೆ ಮಾಡುತ್ತಿರುವ ಕುರಿತು ಎರಡು ಬಣಗಳ ನಡುವೆ ವ್ಯಾಪಕವಾದ ಚರ್ಚೆಯಾಗುತ್ತಿರುವುದು ಒಳ್ಳೆಯ ಸಂಗತಿ. ಬಿ.ಜೆ.ಪಿಯವರು ಹೊಸಪಠ್ಯಕ್ರಮವನ್ನು ಕೇಸರೀಕರಣವೆಂದೂ ಆದರೆ ಅದು ವಿರೋಧಿ ಬಣಗಳು ತಿಳಿದುಕೊಂಡಿರುವ ರೀತಿಯದ್ದಲ್ಲ ಎಂತಲೂ ಹಾಗೂ ಅದರ ವಿರೋಧಿ ಗುಂಪು ಅದು ಕೇಸರೀಕರಣ ಪ್ರಕ್ರಿಯೆ ಎಂತಲೂ ನಿರಪಯುಕ್ತವಾದ ಚರ್ಚೆಯನ್ನು ಬಿರುಸಾಗಿ ನಡೆಸುತ್ತಿದ್ದಾರೆ. ಪ್ರಸ್ತುತ ಬರಹದಲ್ಲಿ ಆ ಚರ್ಚೆಯಲ್ಲಿ ಪಾಲ್ಗೊಂಡವರು ಬೇರೆ ಬೇರೆ ತುದಿಯಲ್ಲಿ ನಿಂತಂತೆ ಭಾಸವಾದರೂ ಇಬ್ಬರೂ ಒಂದೇ ಸೇತುವೆಯ ಮೇಲೆ ನಿಂತಿರುವುದನ್ನು ನಿದರ್ಶಿಸುವ ಪ್ರಯತ್ನವನ್ನು ಮಾಡಲಾಗುವುದು. ಮೊದಲನೆಯದಾಗಿ ಬಿ.ಜೆ.ಪಿ.ಬಣದ ವಾದದಿಂದ ಪ್ರಾರಂಭಿಸುತ್ತೇನೆ.

ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ವಿಶ್ವೇಶ್ವರ ಹೆಡಗೆ ಕಾಗೇರಿಯವರು ಇತ್ತೀಚೆಗೆ ತಮ್ಮ ಲೇಖನದಲ್ಲಿ ಕೇಸರೀಕರಣದ ಕುರಿತು ಎಲ್ಲರಿಗೂ ಗೊಂದಲವಿದ್ದು, ಅದರ ಕುರಿತು ಸ್ಪಷ್ಟತೆ ಅದನ್ನು ವಿರೋಧಿಸುವ ವಿರೋಧಿಗಳಿಗಿಲ್ಲ ಎಂಬ ಮಾತನ್ನು ಹೇಳಿದ್ದಾರೆ. ನನ್ನ ಪ್ರಕಾರ, ಕೇಸರೀಕರಣದ ಕುರಿತು ಅದರ ವಿರೋಧಿಗಳಿಗಿರಲಿ, ಅದರ ಸ್ವಯಂ ಪ್ರತಿಪಾದಕರಿಗೇ ಸರಿಯಾದ ಜ್ಞಾನ ಇರುವುದು ಅನುಮಾನ. ಏಕೆಂದರೆ ಇದುವೇ ಕೇಸರೀಕರಣ ಎಂದು ಸ್ಪಷ್ಟವಾಗಿ ಹೇಳುವ ಧೈರ್ಯ ಯಾರಿಗೂ ಇದ್ದಂತಿಲ್ಲ, ಕೇವಲ ಭಗವಾಧ್ವಜ ಹಿಡಿದುಕೊಂಡು ಮಾಡುವ ಕೆಲಸಗಳು ಮಾತ್ರ ಕೇಸರೀಕರಣವಾಗುತ್ತದೆಯೇ? ಖಂಡಿತ ಇಲ್ಲ, ಏಕೆಂದರೆ ಕೇಸರೀಕರಣ ಎಂಬುದು ಒಂದು ಐಡಿಯಾಲಜಿ, ನಿದರ್ಶಿ ಷ್ಟವಾಗಿ ಇಂತಿಂತಹ ಕೆಲಸಗಳನ್ನು ಮಾಡಬೇಕು ಎಂದು ನಿರ್ದೇಶನ ನೀಡುವ ವಿಚಾರಗಳ ಗುಚ್ಚ ಅದಾಗಿದೆ. ಹಾಗೂ ಕೇಸರೀಕರಣದ ಕುರಿತು ಯಾವುದೇ ಸಿದ್ಧಾಂತ (ಥಿಯರಿ)ದ ಜ್ಞಾನಶಿಸ್ತು (ಜ್ಞಾನಶಿಸ್ತಿನ ಅಗತ್ಯ ಇಲ್ಲ ಎಂದು ಬಿ.ಜೆಪಿ ಯವರು ಭಾವಿಸಿದ್ದರೂ ಕೂಡ) ಇಲ್ಲದಿರುವುದರಿಂದ ಜನರು ತಮ್ಮ ಮನಸೋಇಚ್ಚೆ ಅರ್ಥಮಾಡಿಕೊಳ್ಳಲು ಸಾಧ್ಯವಿದೆ.

ಮತ್ತಷ್ಟು ಓದು »

16
ಮೇ

ನಮ್ಮ ಇತಿಹಾಸ ನಾವೇ ಬರೆದು ಓದೋದು ಬೇಡವೆ?

– ಚಕ್ರವರ್ತಿ ಸೂಲಿಬೆಲೆ

ಬ್ರಿಟಿಷ್ ಅಧಿಕಾರಿ ಮ್ಯಾಲೆಸನ್ ಈ ದೇಶದ ಜನರನ್ನು ಹುಚ್ಚರು ಅಂತ ಕರೀತಾನೆ. ಏಕೆ ಗೊತ್ತೇನು? ನೇಣು ಶಿಕ್ಷೆಗೆ ಕಳಿಸಿದರೆ ಈ ದೇಶದ ಜನ ಹೆದರೋದಿರಲಿ, ತಾವೇ ನೇಣುಗಂಬದ ಬಳಿ ಧಾವಿಸಿ ನೇಣು ಕುಣಿಕೆಯನ್ನು ಕೊರಳಿಗೆ ಹಾಕಿಕೊಂಡುಬಿಡ್ತಾ ಇದ್ದರಂತೆ. ಆದಷ್ಟು ಬೇಗ ನನ್ನ ನೇಣಿಗೇರಿಸಿ ಅಂತ ಗೋಗರಿಯುತ್ತಾ ಇದ್ದರಂತೆ. ಹೀಗೇಕೆಂದು ಪ್ರಶ್ನಿಸಿದಾಗ, ಪುನರ್ಜನ್ಮ ನಂಬೋರು ನಾವು, ಬೇಗ ಹೊರಟರೆ, ಬೇಗ ಮರಳಿ ಬರುತ್ತೇವಲ್ಲ! ಅನ್ನುವ ವಾದ ಮಂಡಿಸುತ್ತಿದ್ದರಂತೆ. ಹೆದರಿಸಬೇಕೆಂದು ನೇಣಿಗೇರಿಸಿದರೆ, ಅದೇ ಪ್ರೇರಣೆಯಾಗುವ ರೀತಿ ಅತೀ ವಿಶಿಷ್ಟವಲ್ಲವೆ? ಅದಕ್ಕೇ ಬ್ರಿಟಿಷರಿಗೆ ಅಷ್ಟೊಂದು ಕೋಪ.

ಮೇ ೧೦ಕ್ಕೆ ೧೮೫೭ರಲ್ಲಿ ಸಂಗ್ರಾಮವೊಂದಕ್ಕೆ ಮುನ್ನುಡಿ ಬರೆಯಲಾಗಿತ್ತು. ಬ್ಯಾರಕ್‌ಪುರದ ಮಂಗಲ್‌ಪಾಂಡೆ ಆಂಗ್ಲ ಪೊಲೀಸ್ ಅಧಿಕಾರಿಯತ್ತ ಗುಂಡು ಸಿಡಿಸಿ, ತಿಂಗಳ ಕೊನೆಯಲ್ಲಿ ಆರಂಭವಾಗಬೇಕಾಗಿದ್ದ ಕ್ರಾಂತಿಗೆ ಆಗಲೇ ಕಿಡಿ ಹಚ್ಚಿಬಿಟ್ಟಿದ್ದ. ಅಲ್ಲಿಂದಾಚೆಗೆ ಮೀರತ್, ದೆಹಲಿಗಳು ಕ್ರಾಂತಿಯ ಕಿಡಿಗೆ ಉರಿದು ಬಿದ್ದವು. ಕಾನ್‌ಪುರ, ಝಾನ್ಸಿಗಳು ಜಯಘೋಷ ಮೊಳಗಿಸಿದವು. ಬಿಹಾರ ಕುದಿಯಿತು. ದಕ್ಷಿಣದಲ್ಲೂ ಬ್ರಿಟಿಷರ ಬುಡಕ್ಕೆ ಬಲವಾದ ಪೆಟ್ಟು ಬಿತ್ತು. ಅಂದುಕೊಂಡಂತೆಯೇ ಎಲ್ಲವೂ ಆಗಿದ್ದರೆ, ಇತಿಹಾಸದ ಹಾದಿ ಬೇರೆಯೇ ಇರುತ್ತಿತ್ತು. ಆ ವೇಳೆಗೆ ಆಂಗ್ಲರೊಟ್ಟಿಗೆ ಕಾದಾಡಿ ಹೈರಾಣಾಗಿದ್ದ ಸಿಕ್ಖರು ಭಾರತೀಯ ಸೈನಿಕರ ಬೆಂಬಲಕ್ಕೆ ಬರಲಿಲ್ಲ. ಅಯ್ಯೋ ಪಾಪ! ಅನ್ನುವ ಕೆಲವಷ್ಟು ಜನ ಆಂಗ್ಲ ಅಧಿಕಾರಿಗಳಿಗೆ ಉಳಿದುಕೊಳ್ಳುವ ಮಾರ್ಗ ತೋರಿದರು. ಅಂತೂ ಮಹಾಯುದ್ಧವೊಂದರಲ್ಲಿ ನಾವು ಸೋತಿದ್ದೆವು.

ಮತ್ತಷ್ಟು ಓದು »

20
ಜನ

ಮಿಡ್ನಾಪುರದಲ್ಲಿ ಕ್ರಾಂತಿಯ ಕಲರವ…

– ಭೀಮಸೇನ್ ಪುರೋಹಿತ್

ಬಂಗಾಳದ ತೋಟದಿಂದ, ತಾಯಿ ಭಾರತಿಗೆ ಪೂಜಿತಗೊಂಡ ಕ್ರಾಂತಿಯ ಹೂವುಗಳು ಅಸಂಖ್ಯ,ಅಂಥಾ ಒಬ್ಬ ಯುವಕನ ಸ್ಮರಣೆ ಇದು.

ಮಿಡ್ನಾಪುರ ಅನ್ನೋದು ಬಂಗಾಳದ ಒಂದು ಜಿಲ್ಲೆ. “ಅನುಶೀಲನ ಸಮಿತಿ”ಯ ಪ್ರಭಾವದಿಂದ ಅನೇಕ ಯುವಕ ಕ್ರಾಂತಿಕಾರಿಗಳು ಅಲ್ಲಿ ಬೆಳೆದಿದ್ರು..ಮಿಡ್ನಾಪುರದಲ್ಲಿ ಇದ್ದ ಆಂಗ್ಲ ಅಧಿಕಾರಿಗಳು ಅತಿಕ್ರೂರತನದಿಂದ ಆಳ್ವಿಕೆ ನಡೆಸ್ತಿದ್ರು.

ಅಲ್ಲಿನ ಮ್ಯಾಜಿಸ್ಟ್ರೇಟ್ ಗಳಂತೂ, ಕ್ರಾಂತಿಕಾರಿಗಳ ಮೇಲೆ ಕೇಸುಗಳನ್ನ ಹಾಕಿ, ವಿವಿಧ ಶಿಕ್ಷೆಗಳನ್ನ ವಿಧಿಸ್ತಿದ್ರು.ಹೀಗಾಗಿಯೇ, ಮಿಡ್ನಾಪುರದ ಯುವಕರು ಆಲ್ಲಿನ ಬ್ರಿಟಿಷರಿಗೆ ಒಂದು ಬಿಸಿ ಮುಟ್ಟಿಸಿದರು. ತಮ್ಮ ಜಿಲ್ಲೆಗೆ ಒಬ್ಬ ಭಾರತೀಯನನ್ನು ಮ್ಯಾಜಿಸ್ಟ್ರೇಟ್ ಮಾಡೋ ವರೆಗೂ, ಉಳಿದ ಆಂಗ್ಲ ಮ್ಯಾಜಿಸ್ಟ್ರೇಟ್ ಗಳನ್ನ ಕೊಲ್ತಿವಿ ಅಂತ..ಬ್ರಿಟಿಷರು ಇದನ್ನು ಅಷ್ಟೊಂದು ಪರಿಗಣಿಸಲಿಲ್ಲ.

ಆಗ ಅಲ್ಲಿಗೆ ‘ಜೇಮ್ಸ್ ಪ್ಯಾಡಿ’ ಅನ್ನೋನು ಮ್ಯಾಜಿಸ್ಟ್ರೇಟ್ ಆಗಿ ಬಂದ. ಪ್ರತಿಜ್ಞೆ ಮಾಡಿದ್ದ ಕ್ರಾಂತಿಕಾರಿಗಳು, ಅದೊಂದು ಸಮಾರಂಭದಲ್ಲಿ, ಅತಿಥಿಯಾಗಿ ಬಂದಿದ್ದ ಅವನನ್ನು ಗುಂಡು ಹಾರಿಸಿ ಕೊಂದೇ ಬಿಟ್ಟರು. ಬ್ರಿಟಿಷರು ಕಲ್ಕತ್ತೆಯಿಂದ ವೈದ್ಯರನ್ನು ಕರೆಸಿದರು. ವೈದ್ಯರು ಪ್ಯಾಡಿ ಯಾ ದೇಹದಿಂದ ಗುಂಡುಗಳನ್ನು ಹೊರತೆಗೆದರೂ, ಅವನನ್ನು ಬದುಕಿಸಲಾಗಲಿಲ್ಲ.. ಯುವಕರ ನಿಲುವು ಸ್ಪಷ್ಟವಾಗಿತ್ತು. ಆಂಗ್ಲರು ಈಗ ಸ್ವಲ್ಪ ಚಿನ್ತಿಸಲಾರಮ್ಭಿಸಿದರು..

ಆನಂತರ ‘ಡಾಗ್ಲಾಸ್’ ಎಂಬ ಆಂಗ್ಲನನ್ನು ಮತ್ತೆ ಮ್ಯಾಜಿಸ್ಟ್ರೇಟ್ ಆಗಿ ನಿಯೋಜಿಸಿದರು.. ಆತ ಮೊದಲಿಂದಲೂ ಹೆದರಿದ್ದ.ಅದೊಮ್ಮೆ “ಡಿಸ್ಟ್ರಿಕ್ಟ್ ಬೋರ್ಡ್” ನ ಸಭೆ ಇತ್ತು. ಸಂಜೆಯವರೆಗೂ ಶಾಂತಿಯುತವಾಗಿಯೇ ಇತ್ತು. ಆದರೆ ಗಂಟೆ ೫ ಆಗುತ್ತಿದ್ದಂತೆ ಇಬ್ರು ಯುವಕರು, ‘ಡಾಗ್ಲಾಸ್’ ನ ಹತ್ರ ಬಂದ್ರು. ನೋಡುನೋಡುತ್ತಲೇ ಆ ಆಂಗ್ಲನ ಮೇಲೆ ಗುಂಡು ಹಾರಿಸಲಾಯಿತು..ಆ ಅಧಿಕಾರಿ ಧರೆಗುರುಳಿದ.

ಮತ್ತಷ್ಟು ಓದು »

13
ಜನ

‘ಚಿತ್ತಗಾಂಗ್’ನಲ್ಲಿ ಸ್ವಾತಂತ್ರ್ಯ’ಸೂರ್ಯ’ನ ಉದಯ…!

– ಭೀಮಸೇನ್ ಪುರೋಹಿತ್

‘ಚಿತ್ತಗಾಂಗ್’ ಅನ್ನೋ ಹೆಸರು ಕೇಳಿದರೆ ಸಾಕು, ಸ್ವಾತಂತ್ರ್ಯ ಇತಿಹಾಸವನ್ನು ಓದಿದ ಪ್ರತಿಯೊಬ್ಬರಿಗೂ ಮೈನವಿರೇಳುತ್ತದೆ. ಅಂಥಾ ಚಮತ್ಕಾರ ನಡೆದ ಸ್ಥಳ ಅದು. ಕ್ರಾಂತಿಕಾರಿಗಳ, ದೇಶಪ್ರೇಮಿಗಳ ಪುಣ್ಯಕ್ಷೇತ್ರವದು.ಆದರೆ, ದೇಶ ವಿಭಜನೆಯಾದ ಮೇಲೆ, ಈಗ ಈ ಜಾಗ ‘ಬಾಂಗ್ಲಾದೇಶ’ದಲ್ಲಿದೆ..

ಅವನ ಹೆಸರು ‘ಸೂರ್ಯಸೇನ್’. ವೃತ್ತಿಯಿಂದ ಶಿಕ್ಷಕ.. ಎಲ್ಲ ವಿದ್ಯಾರ್ಥಿಗಳ ಪ್ರೀತಿಯ ‘ಮಾಸ್ಟರ್ ದಾ’.ಹುಟ್ಟಿದ್ದು ನೌಪರ ಎಂಬ ಗ್ರಾಮದಲ್ಲಿ, 1894 ರಲ್ಲಿ…ಅದಾಗಲೇ, ಬಂಗಾಳದ ಪ್ರಸಿದ್ಧ ಸಂಘಟನೆಗಳಾದ ‘ಅನುಶೀಲನ ಸಮಿತಿ’ ಮತ್ತು ‘ಜುಗಾಂತರ’ ದಿಂದ ಪ್ರಭಾವಿತನಾಗಿದ್ದ..

ಭಾರತದ ಸ್ವಾತಂತ್ರ್ಯ, ಚಿತ್ತಗಾಂಗ್ ಗ್ರಾಮದಿಂದಲೇ ಪ್ರಾರಂಭವಾಗಬೇಕೆಂಬ ಮಹತ್ವಾಕಾಂಕ್ಷೆ ಹೊದಿದ್ದ.. ಅದಕ್ಕಾಗಿ ಮಾಸ್ಟರ್ ದಾ, ಸಂಘಟನೆಯನ್ನೂ ಶುರು ಮಾಡಿದ್ರು.. ಶಿಕ್ಷಕರಾಗಿದ್ದರಿಂದ ಸಂಘಟನೆ ಮಾಡೋದು ಅಷ್ಟೇನೂ ಕಷ್ಟ ಆಗ್ಲಿಲ್ಲ. ಶಾಲೆಯಲ್ಲಿನ, ಕೇವಲ 14-15 ವರ್ಷದೊಳಗಿನ ಪುಟ್ಟ ವಿದ್ಯಾರ್ಥಿಗಳೂ ಸೂರ್ಯಸೇನನ ಜೊತೆ ಸಹಕರಿಸಲು ಮುಂದೆ ಬಂದ್ರು..

ಮತ್ತಷ್ಟು ಓದು »