ವಿಷಯದ ವಿವರಗಳಿಗೆ ದಾಟಿರಿ

Posts tagged ‘ಇಸ್ಲಾಂ’

2
ಏಪ್ರಿಲ್

“ಧರ್ಮ”ದ ದಾರಿ ತಪ್ಪಿಸುತ್ತಿರುವ ಹಿರಿಯರು;ಇಲ್ಲದ ಹಿಂದೂ ರಿಲಿಜನ್ನಿನ ಭ್ರಮೆಯಲ್ಲಿ ಕಿರಿಯರು

 – ರಾಕೇಶ್ ಶೆಟ್ಟಿ

Chimu Kalburgiಕಳೆದ ಜೂನ್ ೯ರಂದು ನಡೆದಿದ್ದ ಮೌಢ್ಯಮುಕ್ತ ಸಮಾಜ,ಕರ್ನಾಟಕ ಮೂಢನಂಬಿಕೆ ಪ್ರತಿಬಂಧಕ ಕಾಯ್ದೆ ಅನುಷ್ಠಾನ ಚರ್ಚಾ ಕಾರ್ಯಕ್ರಮದಲ್ಲಿ ಹಂಪಿ ಕನ್ನಡ ವಿವಿಯ ವಿಶ್ರಾಂತ ಕುಲಪತಿ ಡಾ.ಕಲ್ಬುರ್ಗಿಯವರು,ದೇವರ ವಿಗ್ರಹಗಳ ಮೇಲೆ ಮೂತ್ರ ಮಾಡಿದರೂ ಏನೂ ಆಗದುಎಂದು ಹೇಳಿ ಸುದ್ದಿಯಾಗಿದ್ದರು. ಈಗ ಮತ್ತೆ, ಗದುಗಿನಲ್ಲಿ ಆಯೋಜಿಸಲಾಗಿದ್ದ ’ಸಮಾಜಶಾಸ್ತ್ರ,ಕನ್ನಡಶಾಸ್ತ್ರ ಮತ್ತು ಅರ್ಥಶಾಸ್ತ್ರ ವಿಚಾರಗೋಷ್ಠಿ’ಯಲ್ಲಿ, ಹಿಂದುಗಳಿಗೆ ಧರ್ಮಗ್ರಂಥವೇ ಇಲ್ಲ.ಭಗವದ್ಗೀತೆ ಹಿಂದುಗಳ ಧರ್ಮ ಗ್ರಂಥವಲ್ಲ,ಅದೊಂದು ವಚನ ಸಾಹಿತ್ಯರಾಜ್ಯ ಸರ್ಕಾರ ನಡೆಸಲು ತೀರ್ಮಾನಿಸಿರುವ ಜಾತಿಜನಗಣತಿಯ ಪ್ರಶ್ನಾವಳಿಯಲ್ಲಿ ಧರ್ಮ,ಜಾತಿ,ಉಪಜಾತಿಗೊಂದು ಪ್ರತ್ಯೇಕ ಕಾಲಂ ನಿಗದಿಪಡಿಸಲಾಗಿದೆ.ಜಾತಿ ಜನಗಣತಿಯಲ್ಲಿ ಧರ್ಮ ಯಾಕೆ ಬೇಕು.ಏಕೆಂದರೆ ಧರ್ಮ ಮತ್ತು ಜಾತಿ ಎರಡೂ ಒಂದೇ.ಜೈನ ಧರ್ಮವೂ ಹೌದು,ಜಾತಿಯೂ ಹೌದು.ಅದರಂತೆ ಮುಸ್ಲಿಂ,ಕ್ರಿಶ್ಚಿಯನ್ ಮತ್ತು ಬೌದ್ಧ ಧರ್ಮವೂ ಹೌದು,ಜಾತಿಯೂ ಹೌದು.ಹೀಗಿದ್ದಾಗ ಇಂತಹ ಅನವಶ್ಯಕ ಕಾಲಂಗಳು ಏಕೆ ಬೇಕು?” ಎಂದು ಪ್ರಶ್ನಿಸಿದ್ದಾರೆಂದು ವರದಿಯಾಗಿತ್ತು.

ಡಾ.ಕಲ್ಬುರ್ಗಿಯವರ ಹೇಳಿಕೆಯನ್ನು ವಿರೋಧಿಸಿ,ಹಿರಿಯ ಸಂಶೋಧಕರಾದ ಡಾ.ಎಂ ಚಿದಾನಂದ ಮೂರ್ತಿಗಳು ವಿಜಯವಾಣಿಯ ಜನಮತ ವಿಭಾಗದಲ್ಲಿ ಪತ್ರವೊಂದನ್ನು ಬರೆದು ಕಲ್ಬುರ್ಗಿಯವರು ಗದುಗಿನಲ್ಲಿ ಮಾತನಾಡುತ್ತ ಹಿಂದೂ ಎಂಬ ಧರ್ಮವೇ ಇಲ್ಲಎಂದು ವಿತಂಡವಾದ ಮಾಡಿರುವುದು ಪತ್ರಿಕೆಗಳಲ್ಲಿ ವರದಿಯಾಗಿದೆಎನ್ನುತ್ತಾ ಮುಂದುವರೆದೂ ಧರ್ಮ ಎಂಬ ಶೀರ್ಷಿಕೆಯಡಿಯಲ್ಲಿ ಹಿಂದೂ ಎಂದು ದಾಖಲಿಸಲು ಸುಪ್ರೀಂ ಕೋರ್ಟ್ ಅವಕಾಶ ಮಾಡಿಕೊಟ್ಟಿದೆ.’ಹಿಂದೂ ವಿವಾಹ ಕಾನೂನುಎಂಬ ಕಾನೂನು ಕೂಡ ಇದೆ.ಕಲ್ಕತ್ತೆಯ ಮಠವೊಂದು ತಾನು ಹಿಂದು ವ್ಯಾಪ್ತಿಗೆ ಬರುವುದಿಲ್ಲವೆಂದಾಗ,೧೯೯೫ರಲ್ಲಿ ಸರ್ವೋಚ್ಚ ನ್ಯಾಯಾಲಯದ ಪೂರ್ಣಪೀಠವು ಅದು ಹಿಂದು ಧರ್ಮಕ್ಕೆ ಸೇರಿದ ಮಠಎಂದು ತೀರ್ಪು ನೀಡಿದೆ.ಗಾಂಧೀಜಿ ತಮ್ಮನ್ನು ಸನಾತನಿ ಹಿಂದೂಎನ್ನುತ್ತಾರೆ.ಸ್ವಾಮಿ ವಿವೇಕಾನಂದರು ಶಿಕಾಗೋದಲ್ಲಿ ತಮ್ಮನ್ನು ಹಿಂದುಎಂದು ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ… ” ಇತ್ಯಾದಿ ಉದಾಹರಣೆಗಳನ್ನು ನೀಡಿದ್ದಾರೆ.

ಮತ್ತಷ್ಟು ಓದು »

19
ಜೂನ್

ಕಲ್ಬುರ್ಗಿ,ಕಲ್ಲು ಮತ್ತು Colonial Consciousness

– ರಾಕೇಶ್ ಶೆಟ್ಟಿ

consciousnessಬೆಂಗಳೂರಿನ ವಿಜ್ಞಾನ ಭವನದಲ್ಲಿ ಜೂನ್ ೯ರ ಸೋಮವಾರ ನಡೆದ ಮೌಢ್ಯಮುಕ್ತ ಸಮಾಜ, ಕರ್ನಾಟಕ ಮೂಢನಂಬಿಕೆ ಪ್ರತಿಬಂಧಕ ಕಾಯ್ದೆ ಅನುಷ್ಠಾನ ಚರ್ಚಾ ಕಾರ್ಯಕ್ರಮದಲ್ಲಿ ವಯಸ್ಸಿನಲ್ಲಿ ಹಿರಿಯರಾದ (ಕೇವಲ ವಯಸ್ಸಿನಲ್ಲಷ್ಟೇ) ಪ್ರೊ.ಎಂ.ಎಂ. ಕಲ್ಬುರ್ಗಿಯವರು, ” ದೇವರ ವಿಗ್ರಹಗಳ ಮೇಲೆ ಮೂತ್ರ ಮಾಡಿದರೂ ಏನೂ ಆಗದು. ಅವುಗಳಿಗೆ ಕಾಯುವ ಶಕ್ತಿಯೂ ಇಲ್ಲ, ಕಾಡುವ ಶಕ್ತಿಯೂ ಇಲ್ಲ. ದೇವತೆ, ದೇವಾಲಯಗಳ ವಿರುದ್ಧ ಚಳವಳಿ ನಡೆಯಬೇಕು.” ಅಂತೆಲ್ಲ ಬಡಬಡಿಸಿ ಎಲ್ಲರಿಂದ ತಪರಾಕಿ ಹಾಕಿಸಿಕೊಂಡ ಮೇಲೆ “ನಾ ಹಂಗೇ ಹೇಳೇ ಇಲ್ಲಾರೀ, ನಾನು ಹಿಂದೂ ಇದ್ದೀನಿ, ನಾನ್ಯಾಕೇ ಮೂತ್ರ ಮಾಡಿ ಅಂತ ಹೇಳ್ತೀರ್ರೀ… ಅನಂತಮೂರ್ತಿ ಹಿಂಗ್ ಬರ್ದಾರಾ ಅಂತ ನಾನ್ ಸಭಿಯೋಳಗ ಹೇಳಿನ್ರೀ… ತಪ್ಪ್ ತಿಳಿ ಬ್ಯಾಡರ್ರೀ…” ಅಂತೆಲ್ಲ ಸೃಷ್ಟೀಕರಣ ಕೊಟ್ಟರು.

ನಿಜವಾಗಿ ಕಲ್ಬುರ್ಗಿಯವರ ಮನಸ್ಸಿನಲ್ಲಿದ್ದಿದ್ದು “ಮೂರ್ತಿ”ಗಳ ಮೇಲೆ ಮೂತ್ರ ಮಾಡಿದ ಹೊರೆ ಹೊರಿಸಿ ಅದರ ಜೊತೆಗೆ ಮೂರ್ತಿ ಪೂಜೆ ಮಾಡುವ ಜನರ “ಮೌಢ್ಯ” (ಅವರ ಮಂದ ಬುದ್ದಿಯ ಪ್ರಕಾರ) ನಿವಾರಿಸುವುದಾಗಿತ್ತು ಅನ್ನಿಸುತ್ತದೆ.ಕಲ್ಬುರ್ಗಿಯವರು ಹೀಗೆ ಹೇಳಿಕೆ ಕೊಡುವುದರಿಂದ ಒಂದೇ ಕಲ್ಲಿಗೆ ಎರಡು ಹಕ್ಕಿ (“ಮೂರ್ತಿ” ಮತ್ತು “ಮೌಢ್ಯ”) ಹೊಡೆಯುವ ಆಲೋಚನೆಯಲ್ಲಿದ್ದರೇನೋ.ಪಾಪ!

“ಮೂರ್ತಿ”ಗಳ ಮೇಲೆ ಕಲ್ಬುರ್ಗಿಯವರಿಗೆ ಈ ವಿಶೇಷ ಮಮತೆ ಯಾಕೆ? ಪ್ರಜಾವಾಣಿಯಲ್ಲಿ “ಮೂರ್ತಿ”ಗಳಿಗೆ ೧೦ ಲಕ್ಷ ಸರ್ಕಾರಿ ಕಾಣಿಕೆ ಕೊಟ್ಟದ್ದನ್ನು ವಿರೋಧಿಸಿ ಸೋತುಹೋಗಿದ್ದ ಕಲ್ಬುರ್ಗಿಗಳು,”ಮೂರ್ತಿಗಳ ಮೇಲೆ ಮೂತ್ರ ಮಾಡಿದರೂ ಏನೂ ಆಗುವುದಿಲ್ಲ” ಅನ್ನುವ ಮೂಲಕ ಸೇಡು ತೀರಿಸಿಕೊಂಡರು, ಅನ್ನುವಲ್ಲಿಗೆ ಅವರ ಹೇಳಿಕೆಯ ಮೊದಲನೇ “ಹಕ್ಕಿ” ಯಾವುದೆಂದು ಹೊಳೆಯುತ್ತದೆ.

ಅಸಲಿಗೆ ತಪ್ಪೆಲ್ಲ ಆಯ್ಕೆ ಸಮಿತಿಯದ್ದು!
“ಪರಾವಲಂಬಿ ಜೀವಿ”ಗಳ ನಡುವೆ “ಪ್ರಶಸ್ತಿ/ಹಣ”ವನ್ನು ಸಮನಾಗಿ ಹಂಚಿದ್ದರೆ ಮೂತ್ರ,ಮೂರ್ತಿ ಇತ್ಯಾದಿ ವಿವಾದಗಳೇ ಆಗ್ತಿರ್ಲಿಲ್ಲ ಮಾರ್ರೆ. ಎಲ್ಲವನ್ನೂ ಒಬ್ಬರಿಗೆ ಕೊಟ್ಟರೆ.ಇನ್ನೊಬ್ಬರಿಗೆ (ತಮಗಾದ) ಅನ್ಯಾಯವನ್ನು ಪ್ರಶ್ನಿಸುವ ಅಭಿವ್ಯಕ್ತಿ ಸ್ವಾತಂತ್ರ್ಯ(!) ಇದ್ದೇ ಇರುತ್ತದಪ್ಪ… (ಸೂ : “ಪರಾವಲಂಬಿ ಜೀವಿ”ಗಳನ್ನು ಕೆಲವರು “ಬುದ್ಧಿಜೀವಿ”ಗಳು ಅನ್ನುತ್ತಾರೆ.ನಾನು ಇನ್ಮುಂದೆ ಪ್ರೀತಿಯಿಂದ “ಪರಾವಲಂಬಿ ಜೀವಿ” ಎನ್ನುತ್ತೇನೆ)

ಮತ್ತಷ್ಟು ಓದು »

15
ಸೆಪ್ಟೆಂ

ಮುಲ್ಲಾ ಇಸ್ಲಾಂ ಮತ್ತು ಮಹಾತ್ಮರ ಘನತೆ

-ಡಾ ಅಶೋಕ್ ಕೆ ಆರ್

ವರುಷದ ಹಿಂದೆ ಸಂದರ್ಶನವೊಂದರಲ್ಲಿ ಶಾರೂಕ್ ಖಾನ್ ‘ಮುಲ್ಲಾಗಳ ಇಸ್ಲಾಂ ಮತ್ತು ಅಲ್ಲಾಹುವಿನ ಇಸ್ಲಾಂ’ ಎಂಬ ಮಾತು ಹೇಳಿದ್ದರು. ಮುಲ್ಲಾಗಳ ಇಸ್ಲಾಂನಿಂದ ಇಸ್ಲಾಂ ಧರ್ಮಕ್ಕೆ ಮತ್ತು ಮುಖ್ಯವಾಗಿ ಮನುಷ್ಯತ್ವಕ್ಕೆ ಆಗುತ್ತಿರುವ ಹಾನಿಯನ್ನು ವಿವರಿಸಿದ್ದರು ಶಾರೂಕ್. ಚಲನಚಿತ್ರವೊಂದರ ಸಂಬಂಧವಾಗಿ ಲಿಬಿಯಾ ಮತ್ತಿತರ ಮುಸ್ಲಿಂ ಬಾಹುಳ್ಯದ ದೇಶಗಳಲ್ಲಿ ನಡೆಯುತ್ತಿರುವ ವಿನಾಕಾರಣದ ಹಿಂಸಾಚಾರದ ವರದಿಗಳನ್ನು ಓದಿದಾಗ ಶಾರುಕ್ ಮಾತುಗಳು ನೆನಪಾದವು. ಮಾನವೀಯ ಮೌಲ್ಯಗಳ ಬಗ್ಗೆ ಮಾತನಾಡುವ ಕೆಲವು ಚಲನಚಿತ್ರಗಳನ್ನು ಹೊರತುಪಡಿಸಿದರೆ ಉಳಿದೆಲ್ಲವೂ ಆಯಾ ದೇಶ – ಧರ್ಮ –ಪ್ರದೇಶಕ್ಕೆ ಸೀಮಿತವಾದಂತಹ ಚಿತ್ರಗಳಷ್ಟೇ. ಇದೇ ಕಾರಣದಿಂದ ಭಾರತದ ಚಿತ್ರಗಳಲ್ಲಿ ಪಾಕಿಸ್ತಾನ ಶತ್ರುವಾಗಿ ಚಿತ್ರಿಸಲ್ಪಡುತ್ತದೆ, ಅಮೆರಿಕಾದ ಚಿತ್ರಗಳಲ್ಲಿ ರಷಿಯನ್ನರು ಅಮಾನವೀಯರಂತೆ ತೋರಿಸಲ್ಪಡುತ್ತಾರೆ. ನಾವು ಭಾರತದವರಾಗಿದ್ದರೆ ಚಿತ್ರ ಹಿಡಿಸುತ್ತದೆ, ಮನುಷ್ಯ ನಿರ್ಮಿತ ಗಡಿಯಾಚೆಗೆ ಹುಟ್ಟಿದ್ದರೆ ಚಿತ್ರ ಕೋಪ ಮೂಡಿಸುತ್ತದೆ. ಮತಿಗೆಟ್ಟ ಧರ್ಮಾಂಧರು ಅನ್ಯಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುವುದು ಎಲ್ಲ ಧರ್ಮದಲ್ಲೂ ಸಾಮಾನ್ಯ, ಮುಸ್ಲಿಮರೂ ಇದಕ್ಕೆ ಹೊರತಲ್ಲ. ಅಂಥವನೇ ಒಬ್ಬ ಯಹೂದಿ ತನ್ನ ನಿರ್ದೇಶನದ ಚಿತ್ರದಲ್ಲಿ ಮುಸ್ಲಿಮರ ಬಗ್ಗೆ, ಪ್ರವಾದಿಯ ಬಗ್ಗೆ, ಇಸ್ಲಾಮಿನ ಬಗ್ಗೆ ಅವಹೇಳನಕಾರಿ ಮಾತುಗಳನ್ನು ಬಳಸಿದ್ದಾನೆ ಎಂಬುದೇ ನೆಪವಾಗಿ ಮುಲ್ಲಾಗಳ ಇಸ್ಲಾಂ ವಿಜ್ರಂಭಿಸುತ್ತಿದೆ.

ಮತ್ತಷ್ಟು ಓದು »