ವಿಷಯದ ವಿವರಗಳಿಗೆ ದಾಟಿರಿ

Posts tagged ‘ಎಬಿವಿಪಿ’

16
ಫೆಬ್ರ

ಎತ್ತ ಸಾಗುತ್ತಿದೆ ಕನ್ನಡದ ಬೌದ್ಧಿಕ ಜಗತ್ತು..?

– ಡಾ. ಪ್ರವೀಣ ಟಿ. ಎಲ್
ಉಪನ್ಯಾಸಕರು
ಕುವೆಂಪು ವಿಶ್ವವಿದ್ಯಾನಿಲಯ

downloadಬೌದ್ಧಿಕವಲಯದಲ್ಲಿ ಮುಕ್ತ ಸಂವಾದಗಳು ಜ್ಞಾನದ ಬೆಳವಣಿಗೆಯ ದೃಷ್ಟಿಯಿಂದ ಅತ್ಯಂತ ಮುಖ್ಯ. ಅವುಗಳು ಹೆಚ್ಚೆಚ್ಚು ನಡೆಯಲೆಂದೇ ಯುಜಿಸಿಯಂತಹ ಸಂಸ್ಥೆಗಳು, ಸರ್ಕಾರಗಳು ಕೋಟಿಗಟ್ಟಲೇ ಹಣವನ್ನು ನೀಡುತ್ತವೆ. ವಿದ್ಯಾರ್ಥಿಗಳ ನಡುವೆ, ಚಿಂತಕರ ನಡುವೆ ಸಂವಾದಗಳು, ಚರ್ಚೆಗಳು ನಡೆದರೆ ಮಾತ್ರವೇ ತಮ್ಮ ತಿಳುವಳಿಕೆಯ ಮಿತಿಗಳನ್ನು ಕಂಡುಕೊಳ್ಳಲು ಸಾಧ್ಯವಾಗುತ್ತದೆ. ಹಾಗೂ ಹೊಸ ಹೊಸ ಚಿಂತನೆಯ ಉಗಮಕ್ಕೆ ದಾರಿಯಾಗಲಿವೆ. ಆಗ ಅಲ್ಲಿನ ಬೌದ್ಧಿಕ ವಲಯವು ಹೆಚ್ಚು ಕ್ರಿಯಾಶೀಲವಾಗಿದೆ ಎಂದು ತೀರ್ಮಾನಿಸಬಹುದು. ಕರ್ನಾಟಕದ ಸಂದರ್ಭದಲ್ಲಿ ಬುದ್ಧಿಜೀವಿಗಳೆಂದರೆ ಸಾಹಿತಿಗಳು ಎಂಬಂತಾಗಿದೆ. ಕನ್ನಡ ಬೌದ್ಧಿಕ ವಲಯದಲ್ಲಿ ಇಂತಹ ಸಂವಾದಗಳು ನಡೆಯುತ್ತಿವೆಯೇ? ಎಂಬ ಮುಖ್ಯ ಪ್ರಶ್ನೆಯೊಂದನ್ನು ಕೇಳಿಕೊಳ್ಳಬೇಕಾದ ಸುಸಂದರ್ಭದಲ್ಲಿದ್ದೇವೆ. ಮತ್ತಷ್ಟು ಓದು »

15
ಜನ

ವೇಮುಲ ಸಾವಿನ ಬಗ್ಗೆ ಮಾತಾಡಿದವರು ಈಗೆಲ್ಲಿಹರು..?

– ಶಾರದ ಡೈಮಂಡ್

15966189_1689221931091685_622901462958428392_nನೂರಾರು ಕನಸುಗಳನ್ನು ಕಟ್ಟಿಕೊಂಡಿದ್ದ ಮುಗ್ದ ಜೀವಿಯೊಂದು ಕಾಣದ ಕೈಗಳ ಕೈವಾಡಕ್ಕೆ ಬಲಿಯಾಗಿದೆ. ಕಾಂಗ್ರೆಸ್ ಸರಕಾರದ ದುರಾಡಳಿತಕ್ಕೆ ಮತ್ತೊಂದು ಜೀವ ಮಣ್ಣಾಗಿಹೋಯಿತು. ಓದುವುದರಲ್ಲಿ ಬುದ್ಧಿವಂತನಾಗಿದ್ದ, ಸೌಮ್ಯ ಸ್ವಭಾವದವನಾದ ಅಭಿಷೇಕ್ ಮೂರು ಕುಟುಂಬಗಳಿಗೆ ಸ್ವಂತ ಮಗನಂತೆಯೇ ಇದ್ದ. ಸರ್ಕಾರಿ ಕೆಲಸವೊಂದಕ್ಕೆ ಸೇರಿ ತನ್ನನ್ನು ಕಷ್ಟಪಟ್ಟು ಸಾಕುತ್ತಿರುವ ಅಪ್ಪ ಅಮ್ಮನನ್ನು ಚೆನ್ನಾಗಿ ನೋಡಿಕೊಳ್ಳಬೇಕೆಂಬುದೇ ಅವನ ಕನಸಾಗಿತ್ತು. ಶೃಂಗೇರಿಯ ಜೆಸಿಬಿಎಮ್ ಕಾಲೇಜಿನ ಬಿ.ಕಾಂ ಕೊನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ಅಭಿಷೇಕ್ ಎಂ.ಕೆ ಎಂಬ ಹುಡುಗ ಪ್ರಸಕ್ತ ವರ್ಷದ ಕಾಲೇಜಿನ ವಾಣಿಜ್ಯ ಸಂಘದ ಅಧ್ಯಕ್ಷ! ಚೆನ್ನಾಗಿ ಓದುತ್ತಿರುವ ಆಲ್ ರೌಂಡರ್ ವಿದ್ಯಾರ್ಥಿಗಳನ್ನು ಕಾಲೇಜಿನ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಸಂಘಗಳಿಗೆ ಅಧ್ಯಕ್ಷ – ಉಪಾಧ್ಯಕ್ಷರನ್ನಾಗಿ ಕಾಲೇಜಿನವರೇ ನೇಮಿಸುತ್ತಾರೆ. ನೇಮಿಸುವಾಗ ಅವನು ಯಾವ ಸಂಘಟನೆಯವನೆಂದು ಗಣನೆಗೆ ತೆಗೆದುಕೊಳ್ಳುವುದಿಲ್ಲ. ಇಂತಹ ಉತ್ತಮ ವಿದ್ಯಾರ್ಥಿಯಾದ ಅಭಿಷೇಕ್ ವಾಣಿಜ್ಯ ಸಂಘವನ್ನು ಹೊರತುಪಡಿಸಿ ತನ್ನನ್ನು ತಾನು ಎಬಿವಿಪಿ ಯಲ್ಲಿ ಗುರುತಿಸಿಕೊಂಡಿದ್ದೇ ಜೀವಕ್ಕೆ ಮುಳ್ಳಾಗುವ ಹಾಗಾಯಿತು. ಜನವರಿ ಏಳರಂದು ಎನ್.ಸಿ.ಸಿ ಮತ್ತು ಎನ್.ಎಸ್.ಎಸ್ ಜಂಟಿಯಾಗಿ ಸೈನಿಕರಿಗೆ ಗೌರವ ಸಲ್ಲಿಸುವ “ಯೋಧನಮನ” ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಮತ್ತಷ್ಟು ಓದು »