ರೇಲ್ವೇ ಇಲಾಖೆ ಮತ್ತು ಹಿಂದಿ ಹೇರಿಕೆ.!
– ಮಹೇಶ.ಎಮ್.ಆರ್
ವಿ.ಸೂ: ಬೇರೆ ಒಂದು ಬಾಶೆಯನ್ನು ಗೌರವಿಸುವುದಕ್ಕೂ ಅದನ್ನು ನಮ್ಮ ಮೇಲೆ ಹೇರಿಸಿಕೊಳ್ಳುವುದಕ್ಕೂ ಇರುವ ವ್ಯತ್ಯಾಸವನ್ನು ತಿಳಿದಿರುವವರು ಮಾತ್ರ ಮುಂದುವರಿಯಲು ಕೋರಿಕೆ.!
ಸ್ವಾತಂತ್ರ್ಯ ನಂತರ, ಬಾರತೀಯತೆಗೂ ಹಿಂದಿಗೂ ತಳುಕು ಹಾಕಿ ಅದನ್ನು ರಾಶ್ಟ್ರ ಬಾಶೆ ಮಾಡಲು ಹೊರಟ ಕೇಂದ್ರ ಸರಕಾರದ ಮತ್ತು ಕೆಲವರ ಪ್ರಯತ್ನ ಅನೇಕ ಹಿಂದಿಯೇತರರ ವಿರೋದಿ ಹೋರಾಟದ ಫಲವಾಗಿ ವಿಫಲವಾಯಿತು. ಇದರ ತರುವಾಯ ಮುಂದೆ ಕೇಂದ್ರ ಸರಕಾರ ನೋಡಿಕೊಂಡ ದಾರಿಯೇ ಆಡಳಿತ ಬಾಶೆಯೆಂಬ ಹಿಂದಿನ ಬಾಗಿಲು. ಹಿಂದಿಯನ್ನು ಆಡಳಿತ ಬಾಶೆಯನ್ನಾಗಿ ಮಾಡಿ ತನ್ನ ಸಂಸ್ಥೆ, ಇಲಾಖೆ, ಬ್ಯಾಂಕುಗಳನ್ನು ಉಪಯೋಗಿಸಿ ಹಿಂದಿನ ಬಾಗಿಲ ಮೂಲಕ.
ಕಲಾವಿದರು ಕಸಿದುಕೊಳ್ಳುತ್ತಿರುವ ಕನ್ನಡ ಗ್ರಾಹಕನ ಸ್ವಾತಂತ್ರ್ಯ.!
– ಮಹೇಶ್ ರುದ್ರಗೌಡರ್
ಜೀ ಟಿವಿಯಲ್ಲಿ ಜಾನ್ಸಿ ರಾಣಿ ಅನ್ನೊ ಹಿಂದಿ ದಾರಾವಾಹಿಯನ್ನು ಕನ್ನಡಕ್ಕೆ ಡಬ್ ಮಾಡಿ ಪ್ರಸಾರ ಮಾಡಿದ್ರು ಅಂತ ನಮ್ಮ ಕಿರುತೆರೆ ಕಲಾವಿದರು ಆ ವಾಹಿನಿಯ ಕಚೇರಿಗೆ ನುಗ್ಗಿ ಪ್ರತಿಭಟನೆ ನಡೆಸಿದರು. ಕಲಾವಿದರ ಪ್ರಕಾರ ಇದರಿಂದ ಕಿರುತೆರೆಯನ್ನೇ ನಂಬಿ ಜೀವನ ನಡೆಸುತ್ತಿರುವ ಅನೇಕ ಕುಟುಂಬಗಳು ಬೀದಿಗೆ ಬರುತ್ತವಂತೆ. ಇದರ ಜೊತೆಗೆ ಜೀ ಟಿವಿಯ ಈ ನಡೆ ಕನ್ನಡ ವಿರೋದಿಯಂತೆ. ಇವರ ವಾದವನ್ನು ಮತ್ತು ಕನ್ನಡತನವನ್ನು ಸ್ವಲ್ಪ ಆಳವಾಗಿ ನೋಡಿ ಬರೋಣ ಬನ್ನಿ.
ಹುರುಳಿಲ್ಲದ ವಾದ.!
ಈ ದಾರಾವಾಹಿ ಈಗಾಗಾಲೇ ತೆಲುಗು, ತಮಿಳು ಬಾಶೆಗೆ ಡಬ್ ಆಗಿ ಅಲ್ಲಿ ಪ್ರಸಾರವಾಗುತ್ತಿದೆ. ಹಾಗಾದರೆ ಆಂದ್ರ ತಮಿಳುನಾಡಿನಲ್ಲಿ ಕಲಾವಿದರೇ ಇಲ್ಲವೇ.? ಅಲ್ಲಿಯೂ ಕಲಾವಿದರಿದ್ದಾರೆ, ಅವರಲ್ಲಿಯೂ ಅನೇಕರಿಗೆ ಕಿರುತೆರೆಯಿಂದಲೇ ಹೊಟ್ಟೆ ತುಂಬುತ್ತದೆ. ಅಲ್ಲಿ ಅವರಿಗೆ ಇಲ್ಲದ ಸಮಸ್ಯೆ ದಿಡೀರನೇ ಕರ್ನಾಟಕಕ್ಕೆ ಬಂದ ಕೂಡಲೇ ಹೇಗೆ ಹುಟ್ಟುತ್ತದೆ. ಇದಕ್ಕೆ ಯಾರು ಕಾರಣ. ಯಾಕೆ ಈ ಮನಸ್ಥಿತಿ.! ಇದೇ ಸಂದರ್ಬದಲ್ಲಿ ಒಬ್ಬ ಕಲಾವಿದರು ಹೇಳಿದ್ರು, ಒಂದು ದಾರಾವಾಹಿ ಕನ್ನಡಕ್ಕೆ ಡಬ್ ಮಾಡಲು ಬಿಟ್ಟರೆ, ಅದರ ಜೊತೆಗೆ ನೂರಾರು ದಾರಾವಾಹಿಗಳು ಬಂದು ನಿಲ್ಲುತ್ತವೆ ಅಂತ.! ಇದು ಯಾವ ಮನಸ್ಥಿತಿಯನ್ನು ತೋರಿಸುತ್ತದೆ. ಸ್ಪರ್ದೆ ಎದುರಿಸುವ ಹಿಂಜರಿಕೆಯನ್ನು ತೋರಿಸುತ್ತದೆ ಅಲ್ಲವೇ.! ಸ್ಪರ್ದೆ ಎಂದ ತಕ್ಷಣ ಬೀದಿಗೆ ಬರುವ ಮಾತು ಇತರ ಬಾಶೆಯ ಕಲಾವಿದರ ಬಾಯಲ್ಲಿ ಬರದೇ ಬರೀ ನಮ್ಮ ಕಲಾವಿದರ ಬಾಯಲ್ಲಿ ಮಾತ್ರ ಏಕೆ ಬರುತ್ತದೆ.? ಒಂದು ಹಿಂದಿ ಬಾಶೆಯಲ್ಲಿರುವ ದಾರಾವಾಹಿಯನ್ನು ಕನ್ನಡ ಚಾನಲ್ಲಿನಲ್ಲಿ ಕನ್ನಡದಲ್ಲಿ ತೋರಿಸಿದರೇ ಅದು ಕನ್ನಡ ವಿರೋದಿ ಎನ್ನುವ ಇವರ ಕನ್ನಡತನಕ್ಕೆ ಏನನ್ನಬೇಕು. ಡಬ್ ಮಾಡದೇನೇ ಹಿಂದಿಯಲ್ಲೇ ತೋರಿಸಿದರೆ ಅದು ಕನ್ನಡಪರವಾಗುವುದೋ.! ಮತ್ತಷ್ಟು ಓದು 
ಕಾಸರಗೋಡಿನ ಕನ್ನಡಿಗರ ತ್ಯಾಗ ಮತ್ತು ಬಲಿದಾನಗಳನ್ನು ಕರ್ನಾಟಕ ಮರೆತಿದೆಯೇ..!?
– ಕುಮಾರ ರೈತ
“ಕಾಸರಗೋಡು, ಕರ್ನಾಟಕದ ಕನ್ಯಾಕುಮಾರಿ. ಉತ್ತರದಲ್ಲಿ ಬೆಳಗಾವಿ, ಬಳ್ಳಾರಿಗಳಂತೆ ದಕ್ಷಿಣ ಕನ್ನಡದಲ್ಲಿ ನಮ್ಮದು ಕರ್ನಾಟಕದ ಕನ್ಯಾಕುಮಾರಿ. ಕನ್ನಡನಾಡಿನ ಈ ತೆಂಕಣ ಬಾಗಿಲನ್ನು ತೆರೆದಿಟ್ಟು ಕನ್ನಡಿಗರು ಎಚ್ಚರತಪ್ಪಿ ನಿದ್ರೆ ಹೋದುದ್ದೇ ಆದರೆ ನಮ್ಮ ಜನರಿಗೂ, ನಮ್ಮ ನಾಡಿಗೂ ಅಮೂಲ್ಯವಾದ ಕನ್ನಡ ಸಂಸ್ಕೃತಿಗೂ ಪ್ರಮಾದ ಒದಗುವುದರಲ್ಲಿ ಸಂಶಯವಿಲ್ಲ. ವಿಶಾಲ ಕೇರಳ ಚಳವಳಿಯು ಆರಂಭವಾಗಿ ಹತ್ತು ವರ್ಷಗಳು ಸಂದುಹೋದವು. ದಕ್ಷಿಣ ಕನ್ನಡ, ಕೊಡಗು, ನೀಲಗಿರಿ ಜಿಲ್ಲೆಗಳು ಮಲಬಾರಿನೊಂದಿಗೆ ಜತೆಗೊಂಡು ಕೇರಳ ಸಂಸ್ಥಾನ ಅಥವಾ ಪಶ್ಚಿಮ ಪ್ರಾಂತ ಸಂಸ್ಥಾನವೊಂದು ನಿರ್ಮಾಣವಾಗಬೇಕೆಂದು ಈ ಚಳವಳಿಯು ಪ್ರಬಲವಾಗುತ್ತಾ ನಡೆದಿದೆ. ಈ ಚಳವಳಿಯ ಮರ್ಮವನ್ನು ತಿಳಿದುಕೊಂಡು ಕನ್ನಡಿಗರು ಅದನ್ನು ಸಕಾಲದಲ್ಲಿಯೇ ಪ್ರತಿಭಟಿಸದೇ ಹೋದರೆ ಸ್ವಲ್ಪಕಾಲದೊಳಗಾಗಿಯೇ ದಕ್ಷಿಣ ಕನ್ನಡ ಜಿಲ್ಲೆಯ ಕಾಸರಗೋಡಾದರೂ ಮಲಬಾರಿನವರ ಮಡಿಲಿಗೆ ಬೀಳಬೇಕಾಗಬಹುದು”
ಭಾಷಾವಾರು ಪ್ರಾಂತ್ಯ ರಚನೆಯಾಗುವುದಕ್ಕೂ ಒಂಭತ್ತು ವರ್ಷಗಳಿಗೂ ಮೊದಲೇ ಶ್ರೀಧರ ಕಕ್ಕಿಲಾಯರು ಹೇಳಿದ್ದ ಖಚಿತ ಅಭಿಪ್ರಾಯವಿದು. ಇವರು ಕಾಸರಗೋಡಿನ ಸುಪ್ರಸಿದ್ಧ ವಕೀಲರಾಗಿದ್ದರು. ಕಾಸರಗೋಡನ್ನು ಕರ್ನಾಟಕಕ್ಕೆ ಸೇರ್ಪಡೆಗೊಳಿಸಲು ಸತತ ೨೫ ವರ್ಷ ಹೋರಾಟ ಮಾಡಿದರು. ಅವರ ಜೀವಿತಾವಧಿಯವರೆಗೂ ಈ ಹೋರಾಟದಲ್ಲಿ ಸಕ್ರಿಯರಾಗಿದ್ದರು. ೧೯೪೭ರ ಡಿಸೆಂಬರ್ನಲ್ಲಿ ಕಾಸರಗೋಡಿನ ಬೋರ್ಡ್ ಹೈಸ್ಲೂಲ್ ಆವರಣದಲ್ಲಿ ೩೧ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆತು. ಈ ಸಂದರ್ಭದಲ್ಲಿ ಹೊರಬಂದ ಸ್ಮರಣ ಸಂಚಿಕೆ ‘ತೆಂಕುನಾಡು’ ಸ್ಮರಣ ಸಂಚಿಕೆಯಲ್ಲಿ ಶ್ರೀಧರ ಕಕ್ಕಿಲಾಯರ ಈ ಲೇಖನ ಪ್ರಕಟವಾಯಿತು. ಅದರ ಶೀರ್ಷಿಕೆ ‘ಕನ್ನಡ-ಮಲೆಯಾಳ ಸಮಸ್ಯೆ’
ಇದನ್ನೆಲ್ಲ ಪ್ರಸ್ತಾಪಿಸಲು ಕಾರಣವಿದೆ. ಕಾಸರಗೋಡಿಗೆ ಹೋದಾಗಲೆಲ್ಲ ನಾನು ಭೇಟಿ ಕೊಡುವ ಖಾಯಂ ಸ್ಥಳಗಳ ಸಾಲಿನಲಿಬೇಕಲ್ ಕೋಟೆ ಸೇರಿದೆ. ಇಲ್ಲಿ ಪ್ರಾಣದೇವರ ಗುಡಿಯಿದೆ. ಹೊರಭಾಗದಲ್ಲಿ ಗುಡಿ ಹೆಸರನ್ನು ಕನ್ನಡದಲ್ಲಿ ಬರೆಯಲಾಗಿದೆ. ಬೇಕಲ್ ಕೋಟೆ ನಿರ್ಮಾಣ ಮಾಡಿದ್ದು ಕನ್ನಡಿಗ ರಾಮನಾಯಕ. (ಟಿಪ್ಪು ಸುಲ್ತಾನ್ ಸೈನ್ಯದ ದಂಡನಾಯಕ ( ಮೂಲತಃ ಬೇಕಲ್ ಕೋಟೆ ಕನ್ನಡ ಪ್ರದೇಶ. ಇದಕ್ಕೆ ಅನೇಕ ಕುರುಹುಗಳಿವೆ. ಕೋಟೆ ಇರುವ ಊರಿನ ಹೆಸರು ‘ಅಗಸರ ಹೊಳೆ. ಈ ಎರಡೂ ಪದಗಳು ಅಚ್ಚಗನ್ನಡ.
ಸಂಸತ್ತಿನಲ್ಲಿ ಕನ್ನಡದ ಕಂಪು ಸದಾ ಮೊಳಗಲಿ
– ಅರುಣ್ ಜಾವಗಲ್
ನೆನ್ನೆ ನಡೆದ ಸಂಸತ್ ಕಲಾಪದಲ್ಲಿ ನಮ್ಮ ರಾಜ್ಯದಿಂದ ಆಯ್ಕೆಯಾದ ಲೋಕಸಬಾ ಸದಸ್ಯರಾದ ಚಲುವರಾಯಸ್ವಾಮಿಯವರು ಕನ್ನಡದಲ್ಲಿ ಬಾಶಣ ಮಾಡಿ ಗಮನ ಸೆಳೆದಿದ್ದಾರೆ. ಬಹಳ ದಿನಗಳ ಮೇಲೆ ಸಂಸತ್ತಿನಲ್ಲಿ ಕನ್ನಡದ ಕಂಪು ಮೊಳಗಿದೆ.
೧೯೬೭ ರಲ್ಲಿ ಲೋಕಸಬೆಯ ಕಲಾಪಗಳಲ್ಲಿ ಕನ್ನಡದಲ್ಲಿ ಮೊಟ್ಟ ಮೊದಲ ಬಾರಿಗೆ ಜೆ ಹೆಚ್ ಪಟೇಲ್ ರವರು ಬಾಶಣ ಮಾಡಿದ್ದರು. ಮೊಟ್ಟ ಮೊದಲ ಬಾರಿಗೆ ಸಂಸತ್ತಿನಲ್ಲಿ ಕನ್ನಡದ ಡಿಂಡಿಮ ಮೊಳಗಿಸಿದ ಕೀರ್ತಿ ಪಟೇಲ್ ರವರಿಗೆ ಸಲ್ಲಬೇಕು.
ಲೋಕಸಬೆ ಕಲಾಪಗಳಿಗೆ ಹಿಂದಿ/ಇಂಗ್ಲೀಶ್ ಬರಲ್ಲ ಅಂತ ಹಲವಾರು ಜನ ಹಿಂದಿಯೇತರ ಲೋಕಸಬಾ ಸದಸ್ಯರು ಕಲಾಪಗಳಿಗೆ ಹೋಗದೆ ಅತವಾ ಹೋದರು ಯಾವುದೇ ಚರ್ಚೆಯಲ್ಲಿ ಪಾಲ್ಗೊಳ್ಳದ ಬಗ್ಗೆ ಕೇಳಿದ್ದಿವಿ. ಆದರೆ ತಮ್ಮ ಬಾಶೆಯಲ್ಲು ಬಾಶಣ ಮಾಡಲು ಪ್ರಜಾಪ್ರಬುತ್ವದಲ್ಲಿ ಅವಕಾಶವಿದ್ದರು ಹಲವಾರು ಜನ ಸದಸ್ಯರು ತಮ್ಮ ಬಾಶೆಯನ್ನ ಬಳಸದಿರುವುದು ದುರಂತವೇ! ನಿಜಕ್ಕು ಅವರು ತಮ್ಮ ಬಾಶೆಯನ್ನ ಬಳಸಿದ್ದೇ ಆದಲ್ಲಿ ವಿಶಯವನ್ನ ಅತ್ಯಂತ ನೇರ ಮತ್ತು ನಿಕರವಾಗಿ ಹೇಳಬಹುದಲ್ಲದೇ ಲೋಕಸಬಾ ಟಿವಿ ಅತವಾ ಇನ್ಯಾವುದೋ ಟಿವಿಯಲ್ಲಿ ಅವರವರ ಕ್ಷೇತ್ರದ ಜನರಿಗೂ ತಾವು ಆಯ್ಕೆ ಮಾಡಿ ಕಳಿಸಿದ ಸದಸ್ಯ ಏನ್ ಮಾತಾಡ್ತಿದ್ದಾರೆ, ಯಾವ ವಿಶಯ ಪ್ರಸ್ತಾಪಿಸುತ್ತಿದ್ದಾರೆ ಅನ್ನೊದು ತಿಳಿಯೋ ಹಾಗೆ ಆಗುತ್ತೆ.
ಮತ್ತಷ್ಟು ಓದು 
ಕನ್ನಡದ ಕತ್ತು ಹಿಚುಕುತ್ತಿರುವ ಕೇರಳ ಸರಕಾರ…!?
– ಕುಮಾರ ರೈತ
ಶೀರ್ಷಿಕೆ ಓದಿದಾಗ ಆಶ್ವರ್ಯ-ಪ್ರಶ್ನಾರ್ಥಕ ಭಾವಗಳು ಮೂಡುವುದು ಸಹಜ. ಆದರೆ ‘ಕನ್ನಡದ ಕತ್ತು ಹಿಚುಕುತ್ತಿರುವ ಕೇರಳ ಸರಕಾರ ಎನ್ನುವುದು ಅಕ್ಷರಶಃ ಸತ್ಯ. ಗಡಿ ಅಂಚಿನ ಕಾಸರಗೋಡಿನಿಂದ ಕನ್ನಡಕ್ಕೆ ಸ್ಥಾನವೇ ಇಲ್ಲದಂತೆ ಮಾಡುವ ನಿಟ್ಟಿನಲ್ಲಿ ಆ ಸರಕಾರ ನಾನಾ ಬಗೆಯ ತಂತ್ರಗಾರಿಕೆಯನ್ನು ಮಾಡುತ್ತಲೇ ಬಂದಿದೆ. ಭಾಷಾವಾರು ಪ್ರಾಂತ್ಯ ರಚನೆಯಾಗಿ 54 ವರ್ಷ ಸಂದರೂ ಕಾಸರಗೋಡಿನಲ್ಲಿ ಕನ್ನಡ ಉಳಿದಿರುವುದನ್ನು ಕಂಡು ಈ ಬಾರಿ ಪ್ರಬಲ ಅಸ್ತ್ತ ಪ್ರಯೋಗಿಸಿದೆ. ಇದಕ್ಕೆ ತಕ್ಕ ಪ್ರತ್ಯಸ್ತ್ರ ಹೂಡದೇ ಇದ್ದರೆ ಸಂಭವಿಸುವ ಅಪಾಯಗಳು ಅನೇಕ. ಅವುಗಳೇನು…..?
ಫೀವರ್ ಗೆ ಹಿಂದಿ ಜ್ವರ – ಎಚ್ಚೆತ್ತುಕೊಳ್ಳಲು ಸಕಾಲ !
-ವಸಂತ್ ಶೆಟ್ಟಿ
ಎಂದಿನಂತೆ ಕಚೇರಿಗೆ ಹೋಗ್ತಾ ಎಫ್.ಎಮ್ ಹಾಕಿದ್ರೆ ಅವಕ್ಕಾದೆ. 104% ಬೊಂಬಾಟ್ ಕನ್ನಡ ಹಾಡುಗಳು ಅಂತೆಲ್ಲ ನಮ್ಮ ಮೆಚ್ಚುಗೆ ಗಳಿಸಿದ್ದ ಫೀವರ್ ಎಫ್.ಎಮ್ ಕನ್ನಡ ಹಾಡಿಗೆ ಸೋಡಾ ಚೀಟಿ ಕೊಟ್ಟು ಕೇವಲ ಹಿಂದಿ ಹಾಡುಗಳನ್ನು ಹಾಕೋಕೆ ಶುರು ಮಾಡಿದ್ರು. ಒಂದ್ ಸಲಿ ಹಾಕಿರೋ ಸ್ಟೇಶನ್ ಸರಿಗಿದೆಯಾ ಅಂತ ನೋಡ್ಕೊಂಡೆ. ಸರಿಯಾಗೇ ಇದೆ, ಆದರೆ ಬೊಂಬಾಟ್ ಕನ್ನಡ ವಾಹಿನಿಯಲ್ಲಿ ಹಿಂದಿ ದೇವತೆಯನ್ನು ಪ್ರತಿಷ್ಟಾಪಿಸಿಯಾಗಿತ್ತು. ಸರಿ ಯಾವುದಕ್ಕೂ ಒಂದ್ ಸಲಿ ಫೀವರ್ ಎಫ್.ಎಮ್ ಅನ್ನೇ ಸಂಪರ್ಕಿಸಿ ಯಾಕ್ರಪ್ಪ ಹೀಗೆ ಅಂತ ಕೇಳೊಣ ಅಂತ ಅವರ ಫೇಸ್ ಬುಕ್ ಪುಟದಲ್ಲಿ ಒಬ್ಬ ಕೇಳುಗನಾಗಿ ವಿಚಾರಿಸಿದ್ರೆ ಸಿಕ್ಕ ಉತ್ತರ: “We have changed the sound of the station”, “Music has no language” “Hindi is our national language” ಅನ್ನೋ ಹಸಿ ಸುಳ್ಳಿನ ಕಾಗಕ್ಕ-ಗುಬ್ಬಕ್ಕನ ಕತೆಗಳು. ಇದನ್ನು ಪ್ರತಿಭಟಿಸಿ ಗ್ರಾಹಕರಾಗಿ ನಮ್ಮ ಆಯ್ಕೆ ಕನ್ನಡ, ಅದನ್ನು ಕೊಡದ ವಾಹಿನಿಗೆ ಬೆಂಗಳೂರಿನ ಮಾರುಕಟ್ಟೆಯೇ ಬುದ್ದಿ ಕಲಿಸುತ್ತೆ ಅಂತ ಹೇಳಿದೆ. ಅದಿರಲಿ, ಫೀವರ್ ಎಫ್.ಎಮ್ ನದ್ದು ಒಂದು ಉದಾಹರಣೆಯಷ್ಟೇ. ಇವತ್ತು ನಮ್ಮ ನಾಡಿನಲ್ಲಿ ಪ್ರತಿಯೊಂದು ಕ್ಷೇತ್ರದಲ್ಲೂ ಈ ನೆಲದ ನುಡಿಯನ್ನು ಬದಿಗೊತ್ತಿ ಪ್ರತಿ ಹಂತದಲ್ಲೂ ವಲಸೆ ಬಂದ ಯಾರೋ ನಾಲ್ಕು ಜನರಿಗಾಗಿ ವ್ಯವಸ್ಥೆಯೆಲ್ಲ ಕಟ್ಟಬೇಕು, ವ್ಯವಸ್ಥಯೆಲ್ಲ ಇರಬೇಕು ಅನ್ನುವಂತೆ ವರ್ತಿಸುವ ವಲಸಿಗರಿಗೆ, ಅವರ ತಾಳಕ್ಕೆ ತಕ್ಕಂತೆ ಕುಣಿಯುವ ಈ ವ್ಯವಸ್ಥೆಗೆ ಏನೆನ್ನಬೇಕು. ಯಾಕೆ ಹಾಗ್ ಹೇಳಿದೆ ಅನ್ನೋದನ್ನ ಒಂದ್ ನಾಲ್ಕು ಉದಾಹರಣೆ ಜೊತೆ ಹೇಳ್ತಿನಿ.
- ಬೆಂಗಳೂರಿನ ಟ್ರಾಫಿಕ್ ಪೋಲಿಸರಿಗೆ (ಬಿಟಿಪಿ) ಹಿಂದಿ/ಇಂಗ್ಲಿಷ್ ಬರಲ್ಲ. ಅದರಿಂದ ಎಷ್ಟು ತೊಂದರೆಯಾಯ್ತು ಗೊತ್ತಾ ಅಂತ ಒಂದಿಷ್ಟು ಜನ ಬಿಟಿಪಿಯ ಫೇಸ್ ಬುಕ್ ತಾಣದಲ್ಲಿ ಹೋಗಿ ಗೋಳು ತೋಡಿಕೊಳ್ಳುತ್ತಾರೆ. ಯಾರಪ್ಪ ಈ ನಾಲ್ಕು ಜನರು ಅಂದ್ರೆ ಅದೇ ಅನ್ನ ಅರಸಿ ಬೆಂಗಳೂರಿಗೆ ವಲಸೆ ಬಂದ ಮಹನೀಯರು. ವಲಸೆ ಬಂದ ನಾಡಿನ ವ್ಯವಸ್ಥೆ ತನಗೆ ಅನುಕೂಲವಾಗುವಂತಿರಬೇಕು, ತನಗೆ ಚೂರೇ ಚೂರು ಕಷ್ಟವಾದರೂ ಅದನ್ನು ಸಹಿಸಲು ಆಗದು ಅನ್ನುವ ಈ ಜನರ ಮನಸ್ಥಿತಿ ಎಂತದ್ದು? ವಲಸಿಗರಿಗಾಗಿಯೇ ನಾಡಿನ ಎಲ್ಲ ವ್ಯವಸ್ಥೆಗಳನ್ನು ಜಗತ್ತಿನಲ್ಲಿ ಎಲ್ಲಿಯಾದರೂ ಕಟ್ಟಿದ್ದಾರಾ?
ಪರಭಾಷೆಯ ಚಿತ್ರಗಳಿಗೆ ಮಾರುಕಟ್ಟೆ ನಿರ್ಮಿಸಿ ಕೊಡುತ್ತಿರುವವರ್ಯಾರು?
– ಅರುಣ್ ಜಾವಗಲ್
ಸುವರ್ಣ ಕನ್ನಡ ಪಿಲಂ ಅವಾರ್ಡ್ ಕಾರ್ಯಕ್ರಮ ಕಳೆದ ವಾರ ಟಿವಿಯಲ್ಲಿ ನೋಡಿದೆ. ನಿಜಕ್ಕು ಅದ್ಬುತವಾದ ಕಾರ್ಯಕ್ರಮ, ಪರಬಾಶೆಗಳಲ್ಲಿ ಮಾತ್ರ ನಡೆಯುತ್ತಿದ್ದ ಅದ್ದೂರಿ ಕಾರ್ಯಕ್ರಮಗಳು, ಇತ್ತೀಚಿನ ದಿನಗಳಲ್ಲಿ ಕನ್ನಡದಲ್ಲು ನಡೆಯಲು ಪ್ರಾರಂಬವಾಗಿರೋದು ನಿಜಕ್ಕೂ ಸಂತೋಶಕರ. ಈ ರೀತಿಯ ಕಾರ್ಯಕ್ರಮಗಳು, ಕನ್ನಡ ಚಿತ್ರರಂಗ, ತಾವೇನು ಯಾರಿಗೂ ಕಡಿಮೆಯಿಲ್ಲ ಅನ್ನೊದನ್ನ ಎತ್ತಿಹಿಡಿದಿದೆ….ಜನರೆಂದರೆ ಯಾರ್ ಯಾರು ಕಾಗೇರಿಯವರೇ?
ಇವತ್ತಿನ (೦೩.೦೭.೨೦೧೧ರ) ಕನ್ನಡಪ್ರಭ ದಿನಪತ್ರಿಕೆಯ ಒಂಬತ್ತನೇ ಪುಟದಲ್ಲಿ ಮಾನ್ಯ ಶಿಕ್ಷಣಮಂತ್ರಿಗಳಾದ ಶ್ರೀ ವಿಶ್ವೇಶ್ವರಹೆಗ್ಡೆ ಕಾಗೇರಿಯವರ “ಬುಲೆಟ್ ಸಂದರ್ಶನ“ವೊಂದು ಪ್ರಕಟವಾಗಿದೆ. ಸರ್ಕಾರ ಇಂಗ್ಲೀಶ್ ಮಾಧ್ಯಮ ಶಾಲೆಗಳನ್ನು ತೆರೆಯುವ ಬಗ್ಗೆ ಚರ್ಚೆ ಆರಂಭಿಸಿರುವ ಹಿನ್ನೆಲೆಯಲ್ಲಿ ಇದು ಕುತೂಹಲಕರವಾಗಿದ್ದು, ಒಂದು ಥರ ಸರ್ಕಾರದ ಮುಂದಿನ ನಡೆಯ ದಿಕ್ಸೂಚಿಯೂ ಆಗಿದೆ. ಇಡೀ ಸಂದರ್ಶನದ ಪ್ರಮುಖ ಮಾತುಗಳು ಇಂತಿವೆ.
ಸಾಹಿತಿಗಳಷ್ಟೇ… ಜನತೆಯಲ್ಲ!
ತಮ್ಮ ಸರ್ಕಾರದ ನಿಲುವನ್ನು ಸಮರ್ಥಿಸಿಕೊಳ್ಳಲು ಯಾವ ಮಟ್ಟಕ್ಕಾದರೂ ಇಳಿಯಲು ತಾವು ಸಿದ್ಧ ಎಂಬುದನ್ನು ಮಂತ್ರಿಗಳು ಸಾಬೀತು ಮಾಡುತ್ತಿರುವಂತೆ ಇವರ ಮಾತುಗಳಿವೆ. ಇಂಗ್ಲೀಶ್ ಮಾಧ್ಯಮ ಶಾಲೆಗಳಿಗೆ ಸಾಹಿತಿಗಳು ಮಾತ್ರಾ ವಿರೋಧ ತೋರಿಸಿದ್ದಾರೆ, ಇವರಷ್ಟೇ ನಾಡಿನ ಜನತೆಯಲ್ಲ… ಹಳ್ಳಿಗಾಡಿನ ಜನರೂ ಕೂಡಾ ಅವರ ಅಭಿಪ್ರಾಯ ಹೇಳಲಿ… ಇತ್ಯಾದಿಯಾಗಿ ಮಂತ್ರಿಗಳು ಮಾತಾಡಿದ್ದಾರೆ. ಇದಲ್ಲದೆ ಮಾಧ್ಯಮಗಳಿಗೆ ಜನರ ಅಭಿಪ್ರಾಯ ನಿರೂಪಿಸುವ ಹೊಣೆಗಾರಿಕೆಯನ್ನೂ ವಹಿಸಿದ್ದಾರೆ. ಈ ಪ್ರಯತ್ನವು ಸಾಹಿತಿಗಳ ಬಾಯಿ ಮುಚ್ಚಿಸುವ “ನಿಮ್ಮ ಮಕ್ಕಳು ಇಂಗ್ಲೀಶ್ ಮಾಧ್ಯಮದಲ್ಲಿ ಓದಬಹುದು, ಬಡವರ ಮಕ್ಕಳು ಓದಬಾರದಾ?” ಎಂಬಂತಹ ಮತ್ತೊಂದು ಅಸ್ತ್ರವಾಗಿದೆ. ಇರಲಿ… ಕಾಗೇರಿಯವರು ಆಡಿರುವ ಮಾತುಗಳತ್ತ ನೋಡೋಣ.
ಹಿಂದಿ ಹೇರಿಕೆಯಲ್ಲೂ ಸುಣ್ಣ ಬೆಣ್ಣೆ..!
– ಮಹೇಶ. ಎಮ್. ಆರ್
ಇವತ್ತಿನ (೨೬-೦೬-೧೧) ಪ್ರಜಾವಾಣಿ ದಿನಪತ್ರಿಕೆಯಲ್ಲಿ ಮಿನಿಸ್ಟ್ರಿ ಆಫ್ ಮೈಕ್ರೊ, ಸ್ಮಾಲ್ ಆಂಡ್ ಮಿಡಿಯಮ್ ಎಂಟರಪ್ರೈಜಸ್ ಅವರು ತಮ್ಮ ಕಾಯರ್ ಬೋರ್ಡ್ ಎಂಬ ಸಂಸ್ಥೆಯ ಮೂಲಕ ಒಂದು ಜಾಹೀರಾತನ್ನು ಕೊಟ್ಟಿದ್ದಾರೆ. ಅದು ಸಂಪೂರ್ಣ ಹಿಂದಿಯಲ್ಲಿರೋದು ಕಾಣುತ್ತೆ. ಅವರ ಮಾಹಿತಿ ಪ್ರಜಾವಾಣಿ ಓದುವ ಅಥವಾ ಆ ಜಾಹೀರಾತನ್ನು ನೋಡುವ ಬಹುತೇಕ ಜನರಿಗೆ, ಕಣ್ಣಿಗೆ ಬಿದ್ದರೂ ಮಾಹಿತಿ ತಿಳಿಸುವ ಹಂತಕ್ಕೆ ಅದು ಹೋಗುವುದಿಲ್ಲ ಎಂಬುದು ಸತ್ಯ. ಹೀಗಾಗಿ ಮಾಹಿತಿ ಕೊಡುವ ಉದ್ದೇಶಕ್ಕಿಂತ ಅದರಲ್ಲಿ ಹಿಂದಿ ಹೇರಿಕೆಯ ಉದ್ದೇಶನೇ ಎದ್ದು ಕಾಣುತ್ತೆ. ಇನ್ನು ಈ ಜಾಹೀರಾತು ಕೊಟ್ಟ ಕಾಯರ್ ಬೋರ್ಡ ಅನ್ನೋ ಸಂಸ್ಥೆಯ ಕೇಂದ್ರ ಕಚೇರಿ ಕೇರಳದ ಕೊಚ್ಚಿಯಲ್ಲಿದೆ. ಕೇರಳದ ಬಾಶೆ ಮಲಯಾಳಂ, ಹೀಗಾಗಿ ಅಲ್ಲಿನೂ ಇದೇ ರೀತಿ ಹಿಂದಿಯಲ್ಲಿ ಕೊಟ್ಟಿದ್ದಾರಾ ಅಂತ ನೋಡಿದ್ರೆ,, ಅಲ್ಲಿನ ಮಲಯಾಳ ಮನೋರಮಾ ದಿನಪತ್ರಿಕೆಯಲ್ಲಿ ಇದೇ ಜಾಹೀರಾತು ಸಂಪೂರ್ಣ ಆಂಗ್ಲ್ ಬಾಶೆಯಲ್ಲಿತ್ತು. ವಿಚಿತ್ರ ಅಂದ್ರೆ, ಕಾಯರ್ ಬೋರ್ಡ ತಮ್ಮೂರಿನಲ್ಲಿ ಆಂಗ್ಲ ಬಾಶೆಯಲ್ಲಿ ಜಾಹೀರಾತು ಹಾಕಿಸಿ, ನಮ್ಮೂರಿನಲ್ಲಿ ಹಿಂದಿಯಲ್ಲಿ ಜಾಹೀರಾತು ಹಾಕಿಸಿದ್ದು.! ಎರಡು ಹಿಂದಿಯೇತರ ದಿನಪತ್ರಿಕೆಗಳೇ. ಒಂದು ಪ್ರಾದೇಶಿಕ ದಿನಪತ್ರಿಕೆಯಲ್ಲಿ ಆಂಗ್ಲ ಮತ್ತೊಂದರಲ್ಲಿ ಹಿಂದಿ ಹಾಕಿದ್ದು ಯಾಕೆ ಅನ್ನೋದಶ್ಟೆ ಪ್ರಶ್ನೆ. ಎರಡೂ ಕಡೆ ಪ್ರಾದೇಶಿಕ ಬಾಶೆನೇ ಇರಬೇಕಿತ್ತು ಅನ್ನೋದು ಮಾತ್ರ ವಿವಾದಕ್ಕೆ ಎಡೆ ಇಲ್ಲದ ವಾದ.! ಅಂದಹಾಗೆ ಬೆಂಗಳೂರಿನಲ್ಲೂ ಅದರ ಪ್ರಾದೇಶಿಕ ಕಚೇರಿ ಇದೆ.
ಕನ್ನಡ ಪರ ದನಿಯೆತ್ತಿದರೆ ತಾಲಿಬಾನಿಗಳಾ!?
(ಮಾತೃ ಭಾಷೆಗೆ ಅಪಮಾನಕಾರಿ ಹೇಳಿಕೆ ನೀಡಿದ ವಲಸಿಗರ ಬೆನ್ನು ಬಿದ್ದಿದ್ದಕ್ಕೆ ಕನ್ನಡ ಅಭಿಮಾನಿಗಳಿಗೆ ಸಿಕ್ಕ ಬಿರುದು ’ಇಂಟರ್ನೆಟ್ ತಾಲಿಬಾನಿಗಳು’ ,ಮತ್ತು ಅದನ್ನ ದಯಪಾಲಿಸಿದ್ದು ಕ್ಷ-ಕಿರಣ ಅನ್ನುವ ಬ್ಲಾಗು.ಮಾತೃ ಭಾಷೆಯ ಮಹತ್ವದ ಮತ್ತು ಆ ವಿಷಯದ ಅರಿವಿಲ್ಲದೆ ಬರೆಯುವವರ ಮೇಲೆ ನಿಲುಮೆಗೆ ಅನುಕಂಪವಿದೆ.ಆ ಬರಹಕ್ಕೆ ಹೊಳೆನರಸೀಪುರ ಮಂಜುನಾಥ್ ಅವರ ಉತ್ತರ ಇಲ್ಲಿದೆ – ನಿಲುಮೆ)
– ಹೊಳೆನರಸೀಪುರ ಮ೦ಜುನಾಥ. ಬೆ೦ಗಳೂರು.
ಸನ್ಮಾನ್ಯ ರಾಕೇಶ ಮಥಾಯಿಸ್, ತಮ್ಮ ಬ್ಲಾಗಿನಲ್ಲಿ ತಾವು ಬರೆದಿರುವ ಅಪ್ಪಟ ಕನ್ನಡಾಭಿಮಾನಿ ಬರಹಕ್ಕೆ ನನ್ನ ಪ್ರತ್ಯುತ್ತರ ಹೀಗಿದೆ ನೋಡಿರಿ.
“ನಾನೊಬ್ಬ ಮಾಧ್ಯಮದ ವಿಧ್ಯಾರ್ಥಿ. ನನ್ನ ಸುತ್ತಮುತ್ತ ಮಾಧ್ಯಮ ಪ್ರಪಂಚದಲ್ಲಿ ನಡೆಯುತ್ತಿರುವ ಜಾತೀಯತೆ, ಲಾಬಿ, ಭ್ರಷ್ಠಾಚಾರ ನೋಡಿ ಕರ್ನಾಟಕ ಮಾಧ್ಯಮ ಲೋಕದ ಮೇಲೆ ಕ್ಷಕಿರಣ ಬೀರುವ ಅಗತ್ಯವಿದೆಯೆಂದೆನಿಸಿ ಪುಟ್ಟ ಪ್ರಯತ್ನ. ಈ ಹಾದಿ ಸುಗಮವಲ್ಲವೆಂಬ ಅರಿವು ನನಗಿದೆ, ಆದರೆ ಹಿಂದಿನ ಕಟ್ಟಳೆ ಪದ್ಧತಿಗೊಳಗಾಗದೆ ಆಗಸವನ್ನೇ ತೆರೆದಿಟ್ಟಿರುವ ಇಂಟರ್ನೆಟ್ ಮಾಧ್ಯಮಕ್ಕೆ ನಾನು ಋಣಿಯಾಗಿದ್ದೇನೆ.” ಎ೦ದು ನಿಮ್ಮ ಪರಿಚಯದಲ್ಲಿ ಹೇಳಿಕೊ೦ಡಿರುವ ತಮ್ಮ ಕಣ್ಣಿಗೆ ಹೊರ ರಾಜ್ಯದವರು ಕನ್ನಡ ನೆಲ, ಜಲ, ಭಾಷೆಯ ಬಗ್ಗೆ ತಳೆದಿರುವ ನಿಲುವು, ತೋರಿಸುತ್ತಿರುವ ಅಸಡ್ಡೆ, ಇವರಿ೦ದಾಗಿ ಅವಕಾಶವ೦ಚಿತರಾಗುತ್ತಿರುವ ಅಸಹಾಯಕ ವಿದ್ಯಾವ೦ತ ಕನ್ನಡಿಗರು ಕಾಣಿಸಲಿಲ್ಲವೇ? ಹೊರರಾಜ್ಯದವರು ಕರ್ನಾಟಕದಲ್ಲಿರಬೇಕಾದರೆ ಕನ್ನಡ ಕಲಿಯಲೇಬೇಕು ಎ೦ದಿದ್ದನ್ನು ಧೈರ್ಯವಾಗಿ ಫೇಸ್ ಬುಕ್ಕಿನ೦ತಹ ಸಾಮಾಜಿಕ ತಾಣದಲ್ಲಿ “ಫಕ್ ಆಫ್” ಎ೦ದಿದ್ದನ್ನು ವಿರೋದಿಸಿದವರು ತಮ್ಮ ಕಣ್ಣಿಗೆ “ಅ೦ತರ್ಜಾಲದ ತಾಲಿಬಾನಿಗಳು” ಎನ್ನುವ ರೀತಿಯಲ್ಲಿ ಕ೦ಡಿರುವುದು ತು೦ಬಾ ಆಶ್ಚರ್ಯಕರವಾಗಿದೆ. ಹಾಗೆಯೇ ತಮ್ಮ ಬೌದ್ಧಿಕ ದಿವಾಳಿತನವನ್ನು ಎತ್ತಿ ತೋರಿಸುತ್ತಿದೆ ಎ೦ದು ಹೇಳಲು ವಿಷಾದವಾಗುತ್ತಿದೆ.
ಕರ್ನಾಟಕ ರಕ್ಷಣಾ ವೇದಿಕೆಯವರು ನಡೆಸಿದ ಕನ್ನಡಪರ ಹೋರಾಟಗಳನ್ನು “ಪು೦ಡಾಟಗಳು” ಅನ್ನುವಷ್ಟು ಪ್ರಬುದ್ಧರಾಗಿದ್ದೀರಲ್ಲ? ತಾವು ಯಾವ ಮಾನದ೦ಡಗಳನ್ನು ಅನುಸರಿಸಿ ಈ ನಿರ್ಧಾರಕ್ಕೆ ಬ೦ದಿರುವಿರಿ ಎ೦ಬುದನ್ನೂ ವಿವರವಾಗಿ ಕನ್ನಡನಾಡಿನ ಜನತೆಗೆ ತಿಳಿಸುವ೦ಥವರಾಗಿ. ಇದೇ ಪ್ರಕರಣ ಪಕ್ಕದ ತಮಿಳುನಾಡಿನಲ್ಲಿಯೋ, ಮಹಾರಾಷ್ಟ್ರದಲ್ಲಿಯೋ ನಡೆದಿದ್ದರೆ ಇಷ್ಟು ಹೊತ್ತಿಗೆ ಹಾಗೆ ಮಾತನಾಡಿದವರನ್ನು ಹೊಡೆದು ಓಡಿಸಿರುತ್ತಿದ್ದರು.
ಮತ್ತಷ್ಟು ಓದು 





