ವಿಷಯದ ವಿವರಗಳಿಗೆ ದಾಟಿರಿ

Posts tagged ‘ಕನ್ನಡ’

12
ಜೂನ್

ಕನ್ನಡಿಗರು ಬಿಟ್ಟಿ ಬಿದ್ದಿಲ್ಲ ಅನ್ನುವುದು ನೆನಪಿರಲಿ…!

– ರಾಕೇಶ್ ಶೆಟ್ಟಿ

ಹೊಟ್ಟೆ ಪಾಡಿಗೆ ಅಂತ ಹುಟ್ಟಿದ ಊರು ಬಿಟ್ಟು ನಮ್ಮ ಬೆಂಗಳೂರಿಗೆ ಬಂದು, ಇಲ್ಲಿನ ಅನ್ನ,ನೀರು ಕುಡಿದು ’ಕನ್ನಡ ಕಲಿಯಿರಿ’ ಅಂದರೆ ನಮ್ಮ ವಿರುದ್ಧವೇ ತಿರುಗಿ ಬಿದ್ದು ಕನ್ನಡ/ಬೆಂಗಳೂರಿನ ಬಗ್ಗೆ ದ್ವೇಷಕಾರುವುದು ಒಂದು ರೀತಿಯ ಸುಲಭದ ತುತ್ತಾಗಿದೆ.

ಮೊನ್ನೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ “ಐಟಿ ಮತ್ತು ಬಹುರಾಷ್ಟ್ರೀಯ ಕಂಪನಿಗಳ ಪ್ರವಾಹದಲ್ಲಿ ಕರ್ನಾಟಕ ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ನೆಲೆಸಿರುವವರು ಇನ್ನು ಮುಂದೆ ಪ್ರಾಥಮಿಕ ಕನ್ನಡ ಭಾಷೆ ಪರೀಕ್ಷೆಯಲ್ಲಿ ತೇರ್ಗಡೆಯಾಗುವುದು ಕಡ್ಡಾಯವಾಗಲಿದೆ” ಅನ್ನುವ ಪ್ರಸ್ತಾವನೆಯೊಂದನ್ನು ರಾಜ್ಯ ಸರಕಾರಕ್ಕೆ ಸಲ್ಲಿಸಿತ್ತು.ಇದೇ ವಿಷಯವನ್ನ ಬೆಂಗಳೂರು ಮಿರರ್ ಅನ್ನುವ ಇಂಗ್ಲೀಷ್ ಪತ್ರಿಕೆ ಅನ್ಯ ಭಾಷಿಗರನ್ನ ಉದ್ರೇಕಿಸುವ ರೀತಿಯಲ್ಲಿ ಬರೆದಿದೆ.ಅಲ್ಲಿನ ಪ್ರತಿಕ್ರಿಯೆಗಳನ್ನ ನೋಡಿದರೆ ಬರೆದವರನ್ನ ಅಟ್ಟಾಡಿಸಿ ಬಡಿಯಬೇಕು ಅನ್ನಿಸುತ್ತದೆ.

ಈ ನೆಲದಲ್ಲಿ ಬದುಕು ಕಟ್ಟಿಕೊಳ್ಳಲು ಸಾಧ್ಯವಾದರೆ, ಈ ನೆಲದ ಭಾಷೆ,ಸಂಸ್ಕೃತಿ,ಆಚಾರಗಳಿಗೆ ಬೆಲೆ ಕೊಡಬೇಕು ಅನ್ನುವ ಕಾಮನ್ ಸೆನ್ಸ್ ಇವರಲ್ಲಿ ಇಲ್ಲ ಅನ್ನುವುದಕ್ಕಿಂತ, ಯಾವುದಕ್ಕೂ ಪ್ರತಿಕ್ರಿಯಿಸಿದ ಕನ್ನಡಿಗರ ಧೋರಣೆಯನ್ನೆ ಇಂತ ಜನಗಳು ನಮ್ಮ ದೌರ್ಬಲ್ಯ ಅಂದುಕೊಂಡಿದ್ದಾರೆ.ಇಲ್ಲದಿದ್ದರೆ ಫ಼ೇಸ್ಬುಕ್ಕಿನಲ್ಲಿ ಹಾಲಿಡೇಐಕ್ಯು ಕಂಪೆನಿಯ ಉದ್ಯೋಗಿ ರಾಬಿನ್ ಚುಗ್ ಅನ್ನುವ ಪರದೇಶಿ ಕನ್ನಡಿಗರಿಗೆ ಫ಼ಕ್ ಆಫ಼್ ಅನ್ನುತ್ತಿರಲಿಲ್ಲ ಅಲ್ಲವಾ? ಆ ಕಿಡಿಗೇಡಿ ಕೆಲಸ ಮಾಡುವ ಕಂಪೆನಿಯ ವಿಳಾಸವಿಲ್ಲಿದೆ. ಅವರಿಗೊಂದು ಮಿಂಚೆ ಬರೆದು (ಭಾಷೆ ವಿಷಯ ಮುಟ್ಟಿಸುವಂತಿರಲಿ,ಬೈಗುಳ ದಯವಿಟ್ಟು ಬೇಡ) ಈ ಮಣ್ಣಿನ ಭಾಷೆಯ ಬಗ್ಗೆ ಗೌರವ ಇಲ್ಲದ ಇಂತವರನ್ನ ನಿಮ್ಮ ಕಂಪೆನಿಯಲ್ಲಿ ಇಟ್ಟುಕೊಳ್ಳುವಿರಾ ಅಂತಲೇ ಕೇಳಬೇಕು.ಮೊದಲೆ ಅವನಿಗೆ ಇಲ್ಲಿನ ರೀತಿ ರಿವಾಜುಗಳ ಬಗ್ಗೆ ತಕರಾರುಗಳಿವೆ.ಇಂತ ಹುಡುಗನನ್ನ ವಾಪಸ್ ಅವನ ಮನೆಗೆ ಕಳಿಸೋದು ನಮ್ಮ ಕರ್ತವ್ಯವಲ್ಲವೇ ಗೆಳೆಯರೇ?

ಮತ್ತಷ್ಟು ಓದು »

9
ಜೂನ್

ಬೆಂಗಳೂರು ಕೇಂದ್ರಾಡಳಿತ ಪ್ರದೇಶವಾಗಲಿ

– ಶ್ರೀ ಹರ್ಷ ಸಾಲಿಮಠ

ಇದೊಂದು ಮಾತನ್ನು ಅತ್ಯಂತ ತೀವ್ರ ಸಂಕಟದಿಂದ ಹೇಳುತ್ತಿದ್ದೇನೆ. ಕಾಲಿಗೆ ಗ್ಯಾಂಗ್ರಿನ್ ಆದಾಗ ಕಾಲನ್ನು ಕತ್ತರಿಸುತ್ತಾರಲ್ಲ ಹಾಗೆ.  ನೋವಾಗುತ್ತದೆ ಆದರೆ ಬದುಕಲು ಅದು ಅನಿವಾರ್ಯ. ಕನ್ನಡ/ಕರುನಾಡು ಉಳಿಯಬೇಕೆಂದರೆ ಈ ಕೆಲಸ ಆಗಬೇಕಾಗಿದೆ.

ಬೆಂಗಳೂರಲ್ಲಿ ಕನ್ನಡ ಸಿಗುವುದಿಲ್ಲ.ಕನ್ನಡಿಗರು ಕಾಣೆಯಾಗುತ್ತಿದ್ದಾರೆ ಎಂಬ ಮಾತನ್ನು ಅತಿಶಯೋಕ್ತಿ ಎಂದುಕೊಂಡಿದ್ದೆ.ಇತ್ತೀಚಿನ ನನ್ನ ಕೆಲ ಅನುಭವಗಳು ಇದು ಸತ್ಯವೆಂದು ಬಿಂಬಿಸಿವೆ. ನಾನು ಎರಡು ಕಂಪನಿಗಳಿಗೆ ಇಂಟರ್‍ ವ್ಯೂ ಪ್ಯಾನೆಲಿಸ್ಟ್ ಆಗಿದ್ದೇನೆ. ಎರಡು ಕಾಲೇಜುಗಳಿಗೆ ಅಕಡೆಮಿಕ್ ಕನ್ಸಲ್ಟಂಟ್ ಆಗಿದ್ದೇನೆ. ನನ್ನ ಅನುಭವ ಮತ್ತು ವಿಶ್ಲೇಷಣೆಯಿಂದ ಇದೊಂದು ಅಭಿಪ್ರಾಯವನ್ನು ಮುಂದಿಡುತ್ತಿದ್ದೇನೆ.

ಇಲ್ಲಿಯವರೆಗೆ ಕಂಪನಿಗಳಿಗಾಗಿ ಸುಮಾರು ಸೂರು ಜನರ ಸಂದರ್ಶನ ನಡೆಸಿದ್ದೇನೆ. ದಯವಿಟ್ಟು ನಂಬಿ. ಇಲ್ಲಿಯವರೆಗೆ ಒಬ್ಬನೇ ಒಬ್ಬ ಕನ್ನಡಿಗ ಸಂದರ್ಶನಕ್ಕಾಗಿ ಬಂದಿಲ್ಲ! ನಾನು ಮತ್ತು ಪ್ಯಾನೆಲ್ ನಲ್ಲಿರುವ ಕೆಲವರು ಕನ್ನಡಿಗ ಗೆಳೆಯರು ಕನ್ನಡದ ಹುಡುಗರು ಬಂದರೆ ಕೊಂಚ ದಡ್ಡರಿದ್ದರೂ ಸರಿ ಶತಾಯಗತಾಯ ಮುಂದಕ್ಕೆ ತಳ್ಳಬೇಕೆಂದು ಯೋಜಿಸಿಕೊಂಡಿದ್ದೆವು. ಆದರೆ ಕನ್ನಡದ ಒಬ್ಬ ಹುಡುಗನಾದರೂ ಬಂದರೆ ತಾನೆ? ಬಂದವರು ಬಹುತೇಕರು ತೆಲುಗರು ಮತ್ತು ಬಿಹಾರಿಗಳು! ಕೃಷ್ಣದೇವರಾಯ ವಿಶ್ವವಿದ್ಯಾಲಯದ ಲ್ಲಿ ಬಿಎಎಸ್ಸಿ  ಪದವಿ ಮುಗಿಸಿ ಎರಡು ವರುಷಗಳ ಸುಳ್ಳು ಅನುಭವ ಹಾಕಿಕೊಂಡು ಬರುತ್ತಾರೆ. ಕಂಪನಿಗಳಾದರೋ ಇವರು ಸುಳ್ಳರು ಎಂದು ತಿಳಿದೂ ತೆಗೆದುಕೊಳ್ಳುತ್ತವೆ. ಏಕೆಂದರೆ ಈಗ ಬಹುತೇಕ ಕಂಪನಿಗಳು ಸರ್ವಿಸ್ ಮತ್ತು ಮೇಂಟೆನೆನ್ಸ್ ಕೆಲಸಗಳನ್ನು ನಡೆಸುತ್ತಿವೆ. ಈ ಕೆಲಸಕ್ಕೆ ಹೆಚ್ಚಿನ ಕೌಶಲ್ಯ ಅಗತ್ಯವಿಲ್ಲ. ಒಂದೆರಡು ತಿಂಗಳಲ್ಲಿ ಯಾರಾದರೂ ಕಲಿಯಬಹುದು. ಗಿರಾಕಿಗಳಿಗೆ ತೋರಿಸಲು ಬಿಲ್ಲಿಂಗಿಗಾಗಿ ಕೆಲವು ನೌಕರರ ಅವಶ್ಯಕತೆ ಇರುತ್ತದೆ. ಹಾಗಾಗಿ ಕೌಶಲ್ಯದ ಬಗ್ಗೆ ಹೆಚ್ಚಿನ ತಲೆ ಕೆಡಿಸಿಕೊಳ್ಳದೇ ಕಂಪನಿಗಳು ಇವರನ್ನು ಕೊಳ್ಳುತ್ತವೆ. ಇವರು ಕಡಿಮೆ ಸಂಬಳಕ್ಕೆ ರಾತ್ರಿ ಪಾಳಿಗೂ ಕೆಲಸ ಮಾಡಲು ತಯಾರಿರುವುದರಿಂದ ಕಂಪನಿಗಳಿಗೂ ಲಾಭ!
ಮತ್ತಷ್ಟು ಓದು »

5
ಜೂನ್

ಗಾಂಧಿ ಪಕ್ಷದೊಳಗಿನ ಬ್ರಿಟಿಷರು…!

– ರಾಕೇಶ್ ಶೆಟ್ಟಿ

ತಲೆಬರಹವನ್ನ ನಕಲಿ ಗಾಂಧಿಗಳ ಪಕ್ಷದೊಳಗಿನ ಬ್ರಿಟಿಷರು ಅಂತ ಓದಿಕೊಳ್ಳಿ.ಮಹಾತ್ಮರ ಹೆಸರನ್ನ ಬೇಡ ಬೇಡವೆಂದರೂ ಅನಿವಾರ್ಯವಾಗಿ ಅವರ ಹೆಸರನ್ನ ದುರ್ಬಳಕೆ ಮಾಡಿಕೊಳ್ಳುತ್ತಿರುವ ಪಕ್ಷದ/ಸರ್ಕಾರದ ದೌರ್ಜನ್ಯದ ವಿರುದ್ಧ ಮಾತನಾಡುವಾಗ ಬಳಸಿಕೊಳ್ಳಲೇಬೇಕಿದೆ.

ಪ್ರಾಮಾಣಿಕ ಪ್ರಧಾನಿಯ ಸರ್ಕಾರ ಅನೈತಿಕ ಕೆಲಸಕ್ಕೆ ಕಡೆಗೂ ಕೈ ಇಟ್ಟಿದೆ.ಮಧ್ಯರಾತ್ರಿ ಕಳ್ಳರಂತೆ-ದರೋಡೆಕೋರರಂತೆ ರಾಮ್ ಲೀಲಾ ಮೈದಾನಕ್ಕೆ ನುಗ್ಗಿ ಹೆಂಗಸರು-ಮಕ್ಕಳು ಅಂತ ನೋಡದೆಯೆ ರಾಕ್ಷಸರಂತೆ ವರ್ತಿಸಿದ ರೀತಿ ನೋಡಿದರೆ, ಮನಮೋಹನ್ ಸಿಂಗ್ ಅನ್ನುವ ಸೋ-ಕಾಲ್ಡ್ ಪ್ರಧಾನಿಯ ಪ್ರಾಮಾಣಿಕತೆ ಉಪ್ಪಿನಕಾಯಿ ಹಾಕಲಿಕ್ಕಾ ಅಂತ ಕೇಳಲೆಬೇಕಾಗುತ್ತದೆ.

ಹುಚ್ಚು ನಾಯಿ ಕಡಿತಕ್ಕೆ ಚುಚ್ಚು ಮದ್ದು ತೆಗೆದುಕೊಳ್ಳದಿದ್ದರೆ ಏನಾಗುತ್ತೆ ಅನ್ನೋದಕ್ಕೆ ದಿಗ್ವಿಜಯ್ ಸಿಂಗ್ ಆಗಾಗ ನೀಡೋ ಹೇಳಿಕೆಗಳೇ ಉದಾಹರಣೆ.ಇಂತ ದಿಗ್ಗಿ ನಿನ್ನೆ ಹೇಳಿದ ಮಾತು ನೆನಪಿದೆಯಾ? ‘ಸರ್ಕಾರ ರಾಮ್ದೇವ್ ಅವರಿಗೆ ಹೆದರಿಲ್ಲ, ಒಂದು ವೇಳೆ ಹೆದರಿದ್ದರೆ ರಾಮ್ ದೇವ್ ಅವರನ್ನ ಬಂಧಿಸುತಿತ್ತು!’.ಹಾಗೇ ಹೇಳಿದ ಮಧ್ಯರಾತ್ರಿಯೇ ಬ್ರಿಟಿಷರು ಜಲಿಯನ್ ವಾಲಾಬಾಗ್ಗೆ ನುಗ್ಗಿದ ರೀತಿಯಲ್ಲೆ ನುಗ್ಗಿ ಅದೇ ರಾಮ್ ದೇವ್ರನ್ನ ಬಂಧಿಸಿದ್ದಾರೆ.ಅಂದರೆ ಕಾಂಗ್ರೆಸ್ಸ್ ಸರ್ಕಾರದ ಬೆದರಿದೆ ಅಂತಲೇ ಅರ್ಥವಲ್ಲವಾ?

ಮತ್ತಷ್ಟು ಓದು »

1
ಜೂನ್

ಬೆಂಗಳೂರಿನಲ್ಲಿ ನಡೆದ ಭ್ರಷ್ಟಾಚಾರ ವಿರೋಧಿ ಆಂದೋಲನ…

– ಚೇತನ್ ಜೀರಾಳ್

ಬಹುಷಃ ಕಳೆದ ಕೆಲವು ತಿಂಗಳಿಂದ ದೇಶದ ಪ್ರತಿಯೊಬ್ಬ ಪ್ರಜೆಯು ಮಾತನಾಡುತ್ತಿರುವುದು ದೇಶದಲ್ಲಿ ವ್ಯಾಪಕವಾಗಿರುವ ಭ್ರಷ್ಟಾಚಾರದ ಬಗ್ಗೆ. ಈ ಭ್ರಷ್ಟಾಚಾರ ಅನ್ನೋ ಮಹಾಮಾರಿ ಪ್ರತಿಯೊಂದು ಕ್ಷೇತ್ರದಲ್ಲೂ ತನ್ನ ಕರಾಳ ಬಾಹುವನ್ನು ಚಾಚಿದೆ. ಭ್ರಷ್ಟಾಚಾರ ಸಮಾಜದ ನೈತಿಕತೆಯ ಜೊತೆಗೆ , ಇಡೀ ನಾಡನ್ನೇ ಅಧೋಗತಿಯತ್ತ ಕೊಂಡ್ಯೊಯುತ್ತದೆ. ಇಂದು ಭ್ರಷ್ಟಾಚಾರ ಅನ್ನುವುದು ಜಾತಿ, ಮತ, ಧರ್ಮ, ಭಾಷೆ ಹೀಗೆ ಎಲ್ಲವನ್ನು ಮೀರಿ ಬೆಳೆದು ನಿಂತು ನಮ್ಮ ನಾಡಿನ ಏಳಿಗೆಗೆ ಮಾರಕವಾಗಿ ಪರಿಣಮಿಸಿದೆ. ಕೇಂದ್ರ ಹಾಗೂ ರಾಜ್ಯ ಅನ್ನೋ ಭೇದವಿಲ್ಲದೇ ಭ್ರಷ್ಟಾಚಾರ ಇಂದು ಸಮಾಜದ ಎಲ್ಲ ಕ್ಷೇತ್ರಗಳಲ್ಲೂ ನೆಲೆಗೊಂಡಿದೆ. ಭ್ರಷ್ಟಾಚಾರ ಅಳಿಯದ ಹೊರತು ನಮ್ಮ ರಾಜ್ಯ ಏಳಿಗೆ ಕಾಣುವುದಕ್ಕೆ ಸಾಧ್ಯವೇ ಇಲ್ಲಾ. ಈ ಭ್ರಷ್ಟಾಚಾರ ಎಂಬ ರಕ್ಷಸವನ್ನು ನಾವೆಲ್ಲಾ ಸೇರಿ ಹೊಡೆದು ಹಾಕಲೇ ಬೇಕು.

ಮತ್ತಷ್ಟು ಓದು »

30
ಮೇ

ಶಿಕ್ಷಣ ಎಂಬ ವ್ಯಾಪಾರದ ಕುರಿತು…..

ಅರೆಹೊಳೆ ಸದಾಶಿವರಾವ್

ಈಗ ಎಲ್ಲಿ ನೋಡಿದರೂ ಶೈಕ್ಷಣಿಕ ವರ್ಷದ ಪುನರಾರಂಭದ ಕಾಲ. ಇತ್ತೀಚೆಗೆ ಶಿಕ್ಷಣದ ಕೆಲವು ಮಹತ್ವದ ಫಲಿತಾಂಶಗಳು ಹೊರಬಿದ್ದುವು. ಯಾಕೋ ಇವುಗಳನ್ನು ಗಮನಿಸಿದಾಗ ಕೆಲವು ಪ್ರಶ್ನೆಗಳು ಏಳುತ್ತವೆ. ಹೀಗೇ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಗಮನಿಸುತ್ತಿದ್ದಾಗ, ನನಗೆ ತಿಳಿದ ಕೆಲವು ಶಾಲೆಗಳು ನೂರು ಶೇಕಡಾ ಬಂದದ್ದನ್ನು ಓದಿದೆ. ಆದರೆ ಆ ಶಾಲೆಗಳು ವಾಸ್ತವಿಕವಾಗಿ ಆ ರೀತಿಯ ಗುಣಮಟ್ಟದ ಶಿಕ್ಷಣವನ್ನು ಕೊಟ್ಟ ಬಗ್ಗೆ ಅನುಮಾನಗಳಿದ್ದುವು. ಕೊನೆಗೆ ಈ ನೂರು ಶೇಕಡಾದ ಮರ್ಮವನ್ನು ತಿಳಿಯಹೋದರ ಅಚ್ಚರಿ ಹುಟ್ಟಿದ ಅಂಶವೆಂದರೆ, ಅಲ್ಲಿಂದ ಈ ಪರೀಕ್ಷೆಗೆ ಬರೆದ ವಿದ್ಯಾರ್ಥಿಗಳು ಕೇವಲ ೧೩ಎಂಬುದು!  ಮತ್ತೊಂದು ಶಾಲೆಯ ಪರಿಚಿತ ಮುಖ್ಯೋಪಾದ್ಯಾಯರು ತಮ್ಮ ಶಾಲೆಯ ಫಲಿತಾಂಶವನ್ನು ನೂರು ಶೇಕಡಾ ನಿರೀಕ್ಷಿಸಿದ್ದೆ. ಆದರೆ ಕೇವಲ ೮೭ ಶೇಕಡಾ ಬಂತೆಂದು ಅಳಲು ತೋಡಿಕೊಂಡಾಗ ಅವರ ಶಾಲೆಯಲ್ಲೆಷ್ಟು ವಿದ್ಯಾರ್ಥಿಗಳು ಕುಳಿತಿದ್ದರು ಎಂದು ಪ್ರಶ್ನಿಸಿದರೆ ಆಶ್ಚರ್ಯ ಕಾದಿತ್ತು. ಒಟ್ಟೂ ಕುಳಿತ ನೂರು ಮಕ್ಕಳಲ್ಲಿ ೮೭ ಜನ ಮಕ್ಕಳು ಉನ್ನತ ದರ್ಜೆಯಲ್ಲಿ ಪಾಸಾಗಿದ್ದರು!. ಆದರೆ ಪತ್ರಿಕೆಯಲ್ಲಿ ಹಾಕಿಕೊಳ್ಳಲು ಅವರ ಫಲಿತಾಂಶದ ಶೇಕಡಾವಾರು ೮೭ ಮಾತ್ರ!. ಮತ್ತಷ್ಟು ಓದು »

25
ಏಪ್ರಿಲ್

ಹಿಂದಿ ಬೇಕು …. ಕೂಪಮಂಡೂಕತನ ಬೇಡ……..

*ಅನಿರುದ್ಧ ಕುಮಟ

ಚಿತ್ರಕೃಪೆ: ಗೂಗಲ್

ಮಕ್ಕಳ ಜಗಳದಲ್ಲಿ ಅಮ್ಮ ಬಡಪಾಯಿಯಾದಳು ಅಂತ ಒಂದು ಗಾದೆ ಮಾತು ಇದೆಯಾ? ಇಲ್ಲದಿರಲೂಬಹುದು. ಆದರೆ ನಿಮ್ಮ ಕನ್ನಡದ ಜಗಳ, ಆ ನೀರಿನ ಜಗಳ, ಆ ಧಾರ್ಮಿಕ ಕಲಹ ಇವನ್ನೆಲ್ಲ ನೋಡಿದಾಗ ನನಗೆನಿಸಿದ್ದು ಅಮ್ಮ ಬಡವಾಗಿದ್ದಾಳೆ ಅಂತ. ಅಲ್ಲಾರಿ ನೀವು ಪಕ್ಕದ ಮರಾಠಿಗರನ್ನು ಕಂಡರೆ ಬೆಂಕಿಕಾರುತ್ತಿರಿ. ಪಾಪ ಆ ತಮಿಳರು ಇಲ್ಲಿ ಬೆಳೆದರೆ ಕರಬುತ್ತೀರಿ. ಅಥವಾ ನೀರಿನ ವಿಷಯ ಹಿಡಿದುಕೊಂಡು ಸುನಾಮಿಯಂತೆ ಜಗಳ ಮಾಡುತ್ತೀರಿ…ಥಕ್ ನಿಮ್ಮ ಇಂತಹ ಜಗಳದಲ್ಲಿ ಬಡವಾದದ್ದು ಯಾರು. ಭಾರತವಲ್ಲವೇ. ಇಡೀ ಭಾರತದ ಬಗ್ಗೆ ಯೋಚಿಸಬೇಕಾದ ನಾವೆಲ್ಲ, ದಾಯಾದಿಗಳ ತರಹ ಯಾಕೆ ಕಿತ್ತಾಡಿಕೊಳ್ಳಬೇಕು? ನಿಮಗೆ ನಿಮ್ಮ ಬಗ್ಗೆಯೇ ಅಸಹ್ಯ ಎನಿಸುವುದಿಲ್ಲವೇ?

ಹಿಂದಿ ಜ್ವರಕ್ಕೆ ತುತ್ತಾದ ವಿಜಯ ಕರ್ನಾಟಕ ಅನ್ನೋ ಹೆಡ್ ಲೈನ್ ನಲ್ಲಿ ಪ್ರಕಟವಾದ ಲೇಖನವನ್ನೇ ನೋಡಿ. ಪತ್ರಿಕೆಯಲ್ಲಿ ವಿದೇಶಿಯರ ಹಿಂದಿ ಮೋಹ ಅನ್ನೋ ಲೇಖನ ಪ್ರಕಟಗೊಂಡರೆ ಸಾಕು. ಜಗತ್ತಿನಲ್ಲಿರುವ ಸಮಸ್ತ ಕನ್ನಡ ಪುಸ್ತಕಗಳೆಲ್ಲ ಬೆಂಕಿಯಲ್ಲಿ ಉರಿದು ಹೋಯ್ತು ಅನ್ನೋ ತರಹ ಯಾಕೆ ಉರಿದು ಹೋಗ್ತಿರಿ. ಅರೇ ಅದೊಂದು ಪತ್ರಿಕೆ. ಅದರಲ್ಲಿ ಭಿನ್ನ, ವಿಭಿನ್ನ ವಿಚಾರಧಾರೆಯ ಲೇಖನಗಳು ಪ್ರಕಟಗೊಳ್ಳುತ್ತವೆ. ಅವರೇನೂ ಹಿಂದಿಯಲ್ಲಿ ಬರೆದಿಲ್ಲ ನನಗಂತೂ ಕನ್ನಡಿಗರಲ್ಲಿ ಹಿಂದಿ ಕಲಿಸುವ ಒಂದು ಪ್ರಯತ್ನದಂತೆ ಆ ಲೇಖನ ಕಾಣಲೇ ಇಲ್ಲ. ನನ್ನ ಪ್ರಕಾರ ಕನ್ನಡಿಗರು ಮತ್ತಷ್ಟು ಓದು »

20
ಏಪ್ರಿಲ್

ಡಬ್ಬಿಂಗ್ ಬೇಕು/ಬೇಡ ಅನ್ನೋದನ್ನ ಪ್ರೇಕ್ಷಕ ನಿರ್ಧಾರ ಮಾಡ್ಲಿ

ಮನೋರಂಜನೆ ಎನ್ನೋದು ಎಲ್ಲರ ಹಕ್ಕು, ಒಬ್ಬ ವ್ಯಕ್ತಿ ಮನೊರಂಜನೆಯನ್ನು ತನ್ನ ಭಾಷೆಯಲ್ಲೆ ಪಡೆಯುವುದು ಕೂಡ ಆ ವ್ಯಕ್ತಿಯ ಹಕ್ಕೂ ಕೂಡ. ಇದನ್ನ ತಡೆಯಲು ಯಾವುದೇ ಕಾನೂನು ಮುಂದೆಬರುವುದಿಲ್ಲ. ಇದಕ್ಕಾಗಿಯೇ ಇರಬೇಕು ಇಂದಿಗೂ ಕನ್ನಡಕ್ಕೆ ಡಬ್ ಮಾಡಬಾರದು ಅನ್ನೋ ಕಾನೂನು ಇಲ್ಲ.
ಚಲನಚಿತ್ರಗಳು, ವಾಣಿಜ್ಯ ಮಂಡಳಿ ಅಥವಾ ಇನ್ಯಾವುದೋ ಸಂಸ್ಥೆ ಪ್ರೇಕ್ಷಕನಿಗೆ ನೀಡುತ್ತಿರುವ ಬಿಕ್ಷೆಯಲ್ಲ. ಪ್ರತಿಯೊಬ್ಬ ಪ್ರೇಕ್ಷಕನೂ ತನಗೆ ಬೇಕಾದ ಚಿತ್ರವನ್ನು ದುಡ್ಡು ಕೊಟ್ಟು ನೋಡ್ತಾನೆ ಹೊರೆತು ಬಿಟ್ಟಿಯಾಗಿ ಅಲ್ಲ. ಅದರಿಂದ ಯಾವ ಸಿನೆಮಾ ನೋಡ್ಬೇಕು ಅಥವಾ ಯಾವ ಸಿನೆಮಾ ನೋಡ್ಬಾರ್ದು ಅನ್ನೊದನ್ನ ಪ್ರೇಕ್ಷಕ ನಿರ್ಧಾರ ಮಾಡ್ತಾನೆ. ಕಾನೂನು ಇಲ್ಲದಿದ್ದರೂ ಸಹ, ಕನ್ನಡಿಗನಿಗೆ ಪ್ರಪಂಚದ ಒಳ್ಳೆಒಳೆಯ ಚಿತ್ರಗಳನ್ನು ತನ್ನ ಭಾಷೆಯಲ್ಲೇ ನೋಡಲು ಆಗದಿರುವಂತೆ ಮಾಡಿರುವುದು ಗೋರ ಅಪರಾದ ಮತ್ತು ಇದು ಮಾನವ ಹಕ್ಕುಗಳ ಉಲ್ಲಂಗನೆ ಅಂತಲೂ ಹೇಳಬಹುದಾಗಿದೆ.
ಇಂದು ಡಬ್ಬಿಂಗ್ ಅನ್ನು ವಿರೋಧಿಸುತ್ತಿರುವವರು ಪರಭಾಶೆಯ ಚಿತ್ರವನ್ನೇ ನೋಡುತ್ತಿಲ್ಲ ಎಂದೇನಿಲ್ಲ. ಡಬ್ಬಿಂಗ್ ಸಿನೆಮಾ ಬಿಡುಗಡೆಯಾದರೆ ಬೀದಿಗಿಳಿದು ಹೋರಾಟ ಮಾಡುತ್ತೇನೆ ಎಂದು ಹೇಳೋ ಚಿತ್ರರಂಗದ ನಾಯಕರೊಬ್ಬರ ಮನೆಯಲ್ಲಿ ಇಂದಿಗೂ ಪರಭಾಷೆಯ ಚಿತ್ರಗಳನ್ನ ತಮ್ಮ ಮನೆಗೇ ತರಿಸಿಕೊಂಡು ನೋಡೋ ಸಂಪ್ರದಾಯ ಇದೆಯಂತೆ….. ರಜನೀಕಾಂತ್ ಸೇರಿದಂತೆ ಹಲವಾರು ನಟರ ಅದ್ದೂರಿ ಸಿನೆಮಾಗಳನ್ನು ಬಿಡುಗಡೆಗೂ ಮುಂಚೆ ಈ ಕುಟುಂಬದವರಿಗೆಂದೇ ಒಂದು ಪ್ರದರ್ಶನ ಏರ್ಪಾಡು ಮಾಡಿದ್ದರೆಂದು ಪತ್ರಿಕೆಗಳಲ್ಲಿ ಓದಿದ್ದೇನೆ. ಡಬ್ಬಿಂಗ್ ವಿರೋಧಿಸಿ ಕನ್ನಡಿಗರಿಗೆ ಓಳ್ಳೆಯ ಸಿನೆಮಾಗಳನ್ನು ನೋಡದಂತೆ ಮಾಡಿರೋ ಜನ ತಾವು ಮಾತ್ರ ಆ ಒಳ್ಳೆಯ ಸಿನೆಮಾಗಳನ್ನು ನೋಡೋದನ್ನ ಮಾತ್ರ ಮರೆತಿಲ್ಲ. ಮತ್ತಷ್ಟು ಓದು »
19
ಏಪ್ರಿಲ್

ಕನ್ನಡ ಆಡಳಿತ ಭಾಷೆ ಯಾಕಾಗಿಲ್ಲ ಗೊತ್ತೆ!?

– ವಸಂತ್ ಶೆಟ್ಟಿ

ಕನ್ನಡ ನಾಡು ಏಕೀಕರಣಗೊಂಡು ದಶಕಗಳೇ ಕಳೆದರೂ ಕನ್ನಡ ಎಲ್ಲ ಹಂತದಲ್ಲಿ ಆಡಳಿತ ಭಾಷೆಯಾಗಿ ಅನುಷ್ಠಾನಗೊಂಡಿಲ್ಲ ಅನ್ನುವ ಕೂಗು ನಾವೆಲ್ಲರೂ ಕೇಳಿಯೇ ಇರುತ್ತೇವೆ. ಇದಕ್ಕೆ ಸರ್ಕಾರದ ಇಚ್ಛಾಶಕ್ತಿಯ ಕೊರತೆಯೇ ಕಾರಣ ಎಂದೂ ಕೇಳಿರುತ್ತೇವೆ. ಭಾಷಾ ವಿಜ್ಞಾನಿ ಕೆ.ವಿ.ನಾರಾಯಣ ಅವರ ಕನ್ನಡ ಜಗತ್ತು: ಅರ್ಧ ಶತಮಾನ ಅನ್ನುವ ಹೊತ್ತಗೆ ಓದುತ್ತಾ ಇದ್ದೆ. ಅಲ್ಲಿ ಈ ಬಗ್ಗೆ ಅವರು ಕೊಡುವ ವಿವರಣೆ ಒಂದು ರೀತಿಯಲ್ಲಿ ಬೇರೆಯಾಗಿದೆ ಅನ್ನಬಹುದು. ಸರ್ಕಾರದ ಹೆಚ್ಚಿನ ಪ್ರಯತ್ನ (ಬಾಯಿ ಮಾತಲ್ಲಿ ಅಂತ ಬೇಕಾದ್ರೂ ಅಂದುಕೊಳ್ಳೊಣ 🙂 )ದ ನಂತರವೂ ಆಡಳಿತದಲ್ಲಿ ಕನ್ನಡ ಬಳಕೆ ಒಂದು ರೀತಿಯಲ್ಲಿ ಪಿರಮಿಡ್ ನಂತೆ ನಮಗೆ ಗೋಚರಿಸುತ್ತೆ. ಕೆಳ ಹಂತದಲ್ಲಿ ಕನ್ನಡ ವ್ಯಾಪಕವಾಗಿ ಬಳಕೆಯಾದರೆ, ಮೇಲೆ ಮೇಲೆ ಹೋದಂತೆ ಅದರ ಪ್ರಮಾಣ ಕಡಿಮೆಯಾಗುತ್ತ ಹೋಗುತ್ತದೆ. ಹಾಗಿದ್ದರೆ ಆಡಳಿತದಲ್ಲಿ ಕನ್ನಡದ ಬಳಕೆ ಅಂದುಕೊಂಡ ಮಟ್ಟದಲ್ಲಿ ಗೆಲುವು ಪಡೆಯದಿರಲು ಕಾರಣವೇನು ಎಂದು ಅವರು ಕೊಟ್ಟ ವಿವರಣೆಯನ್ನು ಈ ಕೆಳಗೆ ಕೊಟ್ಟಿರುವೆ.

ಈ ಅಪಯಶಸ್ಸನ್ನು ಎರಡು ದಿಕ್ಕಿನಿಂದ ವಿಶ್ಲೇಷಿಸಬೇಕಾದ ಅಗತ್ಯವಿದೆ. ಕಾರ್ಯಕ್ರಮ ಯಶಸ್ಸು ಪಡೆಯದಿರಲು ಅದರ ಹಿಂದಿನ ಯೋಜನಾ ತಂತ್ರಗಳಲ್ಲಿ ಕೊರತೆ ಇರುತ್ತದೆ. ಅಥವಾ ಅನುಷ್ಠಾನದ ಹಂತದಲ್ಲಿ ಹಲವು ಎಡರು ತೊಡರುಗಳಿರಬೇಕು. ಈ ದಿಕ್ಕಿನಿಂದ ನೋಡಿದಾಗ ಕನ್ನಡ ಅನುಷ್ಠಾನಕ್ಕೆ ಬೇಕಾದ ಭಾಷಾನೀತಿ ಮತ್ತು ಯೋಜನೆಗಳು ರಾಜ್ಯ ಸರ್ಕಾರಕ್ಕೆ ಇಲ್ಲವೆಂಬ ನಿರ್ಣಯಕ್ಕೆ ಬರುವುದು ಸಾಧ್ಯ. ಆದರೆ ಇದನ್ನು ಇನ್ನೊಂದು ದಿಕ್ಕಿನಲ್ಲಿ ನೋಡಿದಾಗ ಬೇರೆಯ ಸಾಧ್ಯತೆ ಗೋಚರಿಸುತ್ತದೆ.

ಮತ್ತಷ್ಟು ಓದು »

18
ಏಪ್ರಿಲ್

ವೋಟ್ ಬ್ಯಾಂಕ್ ಭಾಷೆಯಾಗಲಿ ಕನ್ನಡ

– ರಾಕೇಶ್ ಶೆಟ್ಟಿ

ಪತ್ರಿಕೆಗಳಲ್ಲಿ ಆಗೀಗ ‘ಅನ್ನ ಕೊಡುವ ಭಾಷೆಯಾಗಲಿ ಕನ್ನಡ’ ಅನ್ನೋ ಕಳಕಳಿಯ ಲೇಖನಗಳು ಬರುತ್ತಲೇ ಇರುತ್ತವೆ.ಒಂದೆಡೆ ‘ಸರ್ವಂ ಇಂಗ್ಲೀಶ್ ಮಯಂ’ ಮತ್ತೊಂದೆಡೆ ‘ಏಕಮ್ ಭಾರತಂ ಹಿಂದಿಮಯಂ’ (ಈ ಮಂತ್ರ ಸರಿ ಇಲ್ಲ ಅಂತೆಲ್ಲ ಹೇಳ್ಬೆಡಿ 😉 )  ಅನ್ನೋ ಕೇಂದ್ರದ ನೀತಿಯ ನಡುವೆ ಕನ್ನಡ ‘ಅನ್ನ’ ಕೊಡುವ ಭಾಷೆಯಾಗುವುದು ಹೇಗೆ?  ನನಗನ್ನಿಸುವ ಹಾಗೆ, ಈಗಿನ ಪರಿಸ್ಥಿತಿಯಲ್ಲಿ  ಅನ್ನ ಕೊಡುವ ಭಾಷೆಯಾಗುವ ಶಕ್ತಿ ಬರಬೇಕೆಂದರೆ ಮೊದಲು ‘ವೋಟ್ ಕೊಡುವ ಭಾಷೆಯಾಗಬೇಕು ಕನ್ನಡ’.ಎಲ್ಲ ಪಕ್ಷಗಳು ಕುಣಿಯುವುದು ವೋಟಿಗಾಗಿ,ಪುಡಿ ವೋಟಿಗಾಗಿ ಅನ್ನೋ ಕಾಲವಿದು.ವೋಟಿಗಿರುವಷ್ಟು ಶಕ್ತಿ ಸದ್ಯಕ್ಕೆ ಯಾವುದಕ್ಕಿದೆ ನೀವೇ ಹೇಳಿ?

ಕೆಲವರು ನನ್ನ ಮಾತನ್ನು ಒಪ್ಪಬಹುದು ಇನ್ನ ಕೆಲವರು ಇದನ್ನ ನಿರಾಕರಿಸಬಹುದು. ನಿರಾಕರಿಸುವವರು ಭಾರತದ ರಾಜಕೀಯ ಇತಿಹಾಸವನ್ನೊಮ್ಮೆ ನೋಡುತ್ತಾ ಬನ್ನಿ.ಗಾಂಧೀಜಿ ಕಾಲದಿಂದ ಇಂದಿನವರೆಗೂ ನಮ್ಮಲ್ಲಿ ನಡೆಯುತ್ತಿರುವುದೇ ಓಲೈಕೆಯ ವೋಟ್ ಬ್ಯಾಂಕ್ ರಾಜಕಾರಣ ಅಲ್ವಾ?

ಮತ್ತಷ್ಟು ಓದು »

16
ಏಪ್ರಿಲ್

ಗುಲ್ಬರ್ಗ ಜಿಲ್ಲೆ ಯಾವುದೇ ಕಲೆ/ಕಲಾವಿದರೂ ಇಲ್ಲದಂತಹಾ ಮರುಭೂಮಿಯೇ?

– ಅರುಣ್ ಜಾವಗಲ್

ಕಳೆದ ಕೆಲವು ದಿನಗಳಿಂದ ಕರ್ನಾಟಕ ಸರಕಾರ ಹಲವಾರು ಜಿಲ್ಲೆಗಳಲ್ಲಿ ಉತ್ಸವಗಳನ್ನ ನಡೆಸುತ್ತಿದೆ.ಈ ಕಾರ್ಯಕ್ರಮಗಳು ಕರ್ನಾಟಕದ ಜನರ ತೆರಿಗೆ ಹಣದಲ್ಲಿ ನಡೆಯುತ್ತವೆ. ಈ ಕಾರ್ಯಕ್ರಮಗಳಲ್ಲಿ ಮುಖ್ಯವಾಗಿ ಆಯಾ ಜಿಲ್ಲೆಯ ಮತ್ತು ನಮ್ಮ ನಾಡಿನ ಕಲಾವಿದರ ಕಾರ್ಯಕ್ರಮಗಳಿಗೆ ಅವಕಾಶವಿರಬೇಕು.ಆದರೆ ಆ ಪ್ರದೇಶದ ಮತ್ತು ನಮ್ಮ ನಾಡಿನ ಇತರೇ ಕಲಾವಿದರನ್ನ ಮರೆತಿರುವ ಸರಕಾರ ಹೊರ ರಾಜ್ಯದಿಂದ ಕಲಾವಿದರನ್ನ ಕರೆಸಿ ಉತ್ಸವಗಳನ್ನ ನಡೆಸುತ್ತಿದೆ.

ಕೆಲವು ದಿನಗಳ ಹಿಂದೆ ನಡೆದ ಬೀದರ್ ಉತ್ಸವದಲ್ಲಿ ಶೇಕಡಾ 90% ರಷ್ಟು ಕಾರ್ಯಕ್ರಮ ನಡೆಸಿಕೊಟ್ಟವರು ಬೀದರ್ ಜಿಲ್ಲೆಗಾಗಲೀ ಅಥವಾ ನಮ್ಮ ನಾಡಿಗೆ ಯಾವುದೇ  ಸಂಭಂದವಿಲ್ಲದವರು.ಇದೀಗ ಇದೇ ತಿಂಗಳ 15 ರಿಂದ 17 ರ ವರೆಗೆ ಕರ್ನಾಟಕ ಸರಕಾರ ಗುಲ್ಬರ್ಗ ಉತ್ಸವವನ್ನ ಆಯೋಜಿಸಿದೆ.ಯಾವುದೇ ಅನುಮಾನವಿಲ್ಲದಂತೆ ಈ ಕಾರ್ಯಕ್ರಮಕ್ಕೂ ಸಹ ಪರಭಾಷಿಕರಿಗೆ ಬಹುಪರಾಕ್ ಹೇಳಲಾಗಿದೆ.

ಮತ್ತಷ್ಟು ಓದು »