ಕನ್ನಡಕ್ಕೆ ಚಪ್ಪಲಿ ತೋರಿಸಿದವರು ಮಣ್ಣು ಮುಕ್ಕಲಿ…!
– ಜಯತೀರ್ಥ ನಾಡಗೌಡ, ವಿಜಾಪುರ
ಕನ್ನಡಕ್ಕೆ ಚಪ್ಪಲಿ ತೋರಿಸಿ ಕರ್ನಾಟಕದಲ್ಲೇ ಮೇಯರ್ ಆಗಲು ಸಾಧ್ಯವೇ! ಹೌದು ಇಂಥ ಘನಘೋರ ಕೃತ್ಯಗಳು ನಮ್ಮ ರಾಜ್ಯದಲ್ಲಿ ಮಾತ್ರ ಕಾಣ ಸಿಗುತ್ತವೆ. ಇತ್ತೀಚಿಗೆ ಬೆಳಗಾವಿಯಲ್ಲಿ ನಡೆದ
ವಿಶ್ವಕನ್ನಡ ಸಮ್ಮೇಳನ, ನಡೆಸಕೂಡದು ಎಂದು ಅಡ್ಡಿಪಡಿಸಿ ಚಪ್ಪಲಿ ತೋರಿಸಿದ್ದ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ನ ನಿರ್ಲಜ್ಜ ಮಹಿಳೆ ಮಂದಾ ಬಾಳೆಕುಂದ್ರಿ ಬೆಳಗಾವಿಯ ಮೇಯರ್ ಆಗಿರುವುದು, ಎಲ್ಲ ಕನ್ನಡಿಗರು ತಮ್ಮ ಎಕ್ಕಡದಿಂದ ತಾವೇ ಹೊಡೆದುಕೊಂಡಂತೆ.
ಎಲ್ಲ ವರದಿ, ತೀರ್ಪುಗಳು ಬಂದು ಬೆಳಗಾವಿ ಕನ್ನಡದ ಅವಿಭಾಜ್ಯ ಅಂಗ ಅಂತ ಸಾಬೀತಾದರೂ, ಹಾಳು .ಈ.ಎಸ್ ನ ಕಾರ್ಯಕರ್ತರು ಪುಂಡಾಟಿಕೆ ಮಾಡುತ್ತಿರುವುದು ನಮ್ಮ ಆಳಿದ/ಆಳುವ ಘನಂದಾರಿ ಪಕ್ಷಗಳ ಕಾಣಿಕೆಯೇ ಸರಿ. ಕ.ರ.ವೇ ಸತತ ಪರಿಶ್ರಮದಿಂದ ಜಾಗ ಖಾಲಿ ಮಾಡಿದ್ದ ಶಿವಸೇನೆ, ಎಂಇಎಸ್ ನವರನ್ನು ಮತ್ತೆ ಬೆಳೆಯಲು ಬಿಟ್ಟು ಇಂಥ ರಾಜದ್ರೋಹಿಗಳೊಂದಿಗೆ ಚುನಾವಣ ಹೊಂದಾಣಿಕೆ ಮಾಡಲು ಕೂಡ ನಮ್ಮ ಕೆಲ ಧುರೀಣರು ಮನಸ್ಸು ಮಾಡಿದ್ದು ಎಲ್ಲರಿಗೂ ಗೊತ್ತಿದ್ದ ಸತ್ಯ.
ದಯವಿಟ್ಟು ಗುದ್ದಲಿಪೂಜೆಗೆ ಬನ್ನಿ…
– ಕಿರಣ ಬಾಟ್ನಿ
’ನಿಲುಮೆ’ಯಲ್ಲಿ ಪ್ರಕಟವಾಗಿದ್ದ ಶ್ರೀ ಅಜಕ್ಕಳ ಗಿರೀಶಬಟ್ಟರ ’ಕನ್ನಡಕ್ಕಿಂತ ತಮಿಳು ಯಾವುದರಲ್ಲಿ ಮುಂದಿದೆ?’ ಎಂಬ ಬರಹಕ್ಕೆ ಉತ್ತರವಾಗಿ ನಾನು ಬರೆದಿದ್ದ ’ಇಗೋ, ಇದರಲ್ಲಿ ಮುಂದಿದೆ’ ಎಂಬ
ಬರಹಕ್ಕೆ ಹಲವರು ತಮ್ಮ ಅನಿಸಿಕೆಯನ್ನು ತಿಳಿಸಿ, ಅದರ ಬಗ್ಗೆ ’ನಿಲುಮೆ’ಯಲ್ಲಿ ಚರ್ಚೆಯಾಗಿರುವುದು ಮನಸ್ಸಿಗೆ ಮುದ ತಂದಿದೆ. ಕನ್ನಡದ ಸೊಲ್ಲರಿಮೆ ಮತ್ತು ನುಡಿಯರಿಮೆಗಳ ವಿಶಯ ಬಹಳ ಮುಕ್ಯವಾದುದು. ಹಾಗೆಯೇ, ಕನ್ನಡ-ಕನ್ನಡಿಗ-ಕರ್ನಾಟಕಗಳ ಬಗ್ಗೆ ಕಾಳಜಿಯುಳ್ಳವರು ಇದನ್ನು ಕುರಿತು ನೆಮ್ಮದಿಯ ಮನಸ್ಸಿನಿಂದ ಚಿಂತಿಸುವುದು ಕೂಡ ಬಹಳ ಮುಕ್ಯವಾದುದು. ಆದುದರಿಂದ ನನ್ನ ಬರಹಕ್ಕೆ ಬಂದ ಅನಿಸಿಕೆಗಳನ್ನು ನಿದಾನವಾಗಿ ಕುಳಿತು ಯೋಚಿಸಿ ಉತ್ತರಿಸಲು ಸಮಯವನ್ನು ಕೊಟ್ಟ ’ಒಡ-ಕಾಳಜಿಗ’ರಿಗೆ ದನ್ಯವಾದಗಳು. ಇಲ್ಲಿ ನಾನು ಮಂಡಿಸಿದ ವಿಶಯಕ್ಕೆ ಸಂಬಂದಿಸಿದ ಅನಿಸಿಕೆಗಳಿಗೆ ನನ್ನ ಟಿಪ್ಪಣಿಗಳನ್ನು ಬರೆಯಲು ಪ್ರಯತ್ನಿಸುತ್ತೇನೆ.
’ಕನ್ನಡದಾ ಮಕ್ಕಳೆಲ್ಲ ಒಂದಾಗಿ’ ಮಕ್ಕಳಲ್ಲ!
ಮೊದಲನೆಯದಾಗಿ, ಶ್ರೀ ನರೇಂದ್ರಕುಮಾರ್ ಎಸ್. ಎಸ್. ಅವರು ನಾನು ’ಪ್ರಶ್ನೆಗಳನ್ನು ಸ್ವಾಗತಿಸುವೆನೆಂದೂ, ಪ್ರಶ್ನಿಸಿದವರ ಮೇಲೆ ಹಾರಾಡುವುದಿಲ್ಲವೆಂದೂ, ತರ್ಕಬದ್ದವಾದುದನ್ನು ಒಪ್ಪುವೆನೆಂದೂ’ ಎಣಿಸಿ ಕೆಲ ಪ್ರಶ್ನೆಗಳನ್ನು ನನ್ನ ಮುಂದಿಟ್ಟಿದ್ದಾರೆ. ಅವರ ಈ ಪೀಟಿಕೆ ಬಹಳ ಸಂತಸ ತಂದಿತು, ಏಕೆಂದರೆ ಈ ನಂಬುಗೆಯು ಯಾವರೀರ್ವರ ನಡುವೆ ಇರುವುದಿಲ್ಲವೋ, ಅವರ ನಡುವೆ ಚರ್ಚೆಗೆ ಅರ್ತವಿಲ್ಲ. ಆ ನಂಬುಗೆಯನ್ನು ನಾನು ಈ ನನ್ನ ಟಿಪ್ಪಣಿಯಲ್ಲಿ ಉಳಿಸಿಕೊಳ್ಳುತ್ತೇನೆ ಎಂದು ನಂಬಿದ್ದೇನೆ.
ಮೊದಲ ಬಾನಯಾನ : ಚಳಿಯಲ್ಲೂ ಬೆವೆತಿತ್ತು ಮನಸ್ಸು..!
– ಪ್ರಶಾಂತ್ ಯಳವಾರಮಠ
ನನ್ನ ಮುಂದಿನ ಪುಟ್ಟ ಸ್ಕ್ರೀನ್ ಮೇಲೆ ಚಲಿಸ್ತಾ ಇರೋ ವೇಗ ೭೫೦ ಮೈಲ್ಸ್/ಗಂಟೆಗೆ ಅಂತ ಮತ್ತು ಹೊರಗಡೆಯ ತಾಪಮಾನ -೬೩’ಸೆ ಅಂತ ತೋರಿಸ್ತಾ ಇದೆ !!! ನನ್ನ ಹೆಂಡತಿ ಹೇಳಿದಹಾಗೆ ಟೇಕ್ ಆಫ್ ಆಗುವಾಗ ಕಣ್ಣು ಮುಚ್ಚಿಕೊಂಡು ಕುಳಿತಿದ್ದ ನಾನು ಕಣ್ಬಿಟ್ಟಾಗ ಕಂಡ ಮಾಹಿತಿ ಇದು! ಏರ್ ಫ್ರಾನ್ಸ್ ವಿಮಾನದಲ್ಲಿ ಅದೂ ಮೊಟ್ಟಮೊದಲಬಾರಿಗೆ ವಿಮಾನದಲ್ಲಿ ಪ್ರಯಾಣಿಸುತ್ತಾ ಇರೋ ನನ್ನ ಹುಚ್ಚು ಮನಸ್ಸಿನಲ್ಲಿ ಸಾವಿರಾರು ಕೆಟ್ಟ ಯೋಚನೆಗಳು ಬಂದು ಮನಸ್ಸು ತನ್ನಷ್ಟಕ್ಕೆ ತಾನೆ ಭಯಬೀತಗೊಂಡಿತ್ತು. ಇದರಿಂದ ಅತ್ತಿಂದಿತ್ತ ನೋಡುತ್ತಾ ಪಕ್ಕದಲ್ಲಿ ಯಾವುದೇ ಫೀಲಿಂಗ್ಸ್ ಗಳು ಇರದೇ ಕುಳಿತುಕೊಂಡಿರುವ ಅಜ್ಜಿಯೊಬ್ಬಳನ್ನು ನೋಡಿ ಧೈರ್ಯತಂದುಕೊಳ್ಳಲು ಪ್ರಯತ್ನಿಸಿದೆ, ನಾನು ಮೊದಲ ಬಾರಿ ವಿಮಾನದಲ್ಲಿ ಪ್ರಯಾಣಿಸುತ್ತಿದ್ದೇನೆ ಅದಕ್ಕೆ ಹೀಗೆಲ್ಲ ಅನಿಸುತ್ತಾ ಇದೆ ಅಂಥ ನನ್ನಷ್ಟಕ್ಕೆ ನಾನೆ ಗೊಂದಲಗಳಿಂದ ಕೂಡಿದ ಮನಸ್ಸಿಗೆ ಸಮಾಧಾನ ಹೇಳುತ್ತಾ ಇದ್ದೆ.
ಇವುಗಳ ಮದ್ದೆ ತಮ್ಮ ನಾಜೂಕಾದ ನಡಿಗೆಗಳಿಂದ ಮುಖದಲ್ಲಿ ತುಂಬು ಮುಗುಳ್ನಗೆಗಳನ್ನು ತುಂಬಿಕೊಂಡ ಗಗನಸಖಿಯರು ಅತ್ತಿಂದಿತ್ತ ಓಡಾಡ್ತಾ ಇದ್ದಾರೆ ಎಷ್ಟೋ ಜನ ಕೆಂಪು ಮುಖಗಳ ವಿದೇಶಿಯರು ತಮ್ಮ ಮಾತೃಭಾಷೆ ಫ್ರೆಂಚ್ ನಲ್ಲಿ ಮಾತಾಡುತ್ತ, ನಗುತ್ತಾ ನಿರ್ಭೀತರಾಗಿ ಹರಟುತ್ತಿದ್ದಾರೆ. ವಿಮಾನದಲ್ಲಿ ಆಗ್ತಾ ಇರೋ ಈ ಎಲ್ಲ ಆಗುಹೋಗುಗಳಿಂದ ನನಗು ಸ್ವಲ್ಪ ಸಮಾಧಾನವಾಗಿ ಮನಸ್ಸು ಹಗುರವಾಯಿತು.
ರಾಷ್ಟ್ರೀಯ ಪಕ್ಷಗಳ ಒಡೆದು ಆಳುವ ನೀತಿ…!
– ಚೇತನ್ ಜೀರಾಳ್
ಕಳೆದ ಎರಡು ವಾರಗಳಲ್ಲಿ ನಡೆದಿರುವ ಸುದ್ದಿಗಳ ಬಗ್ಗೆ ನಿಮ್ಮ ಗಮನ ಹರಿಸಲು ಇಷ್ಟಪಡುತ್ತೇನೆ. ಪತ್ರಿಕೆಗಳಲ್ಲಿ ಕೇವಲ ಸುದ್ದಿ ಎನ್ನುವಂತೆ ಇವುಗಳನ್ನು ಬಿತ್ತರಿಸಲಾಯಿತು, ಆದರೆ ಇವುಗಳ ಬಗ್ಗೆ ಎಲ್ಲೂ ಚರ್ಚೆಯಾಗಿಲ್ಲ.
ಮರುಚುನಾವಣೆ ಹಾಗೂ ತೆಲುಗಿನಲ್ಲಿ ಭಾಷಣ:
ಮೊನ್ನೆ ನಡೆದ ಮರುಚುನಾವಣೆಯ ಪ್ರಚಾರಕ್ಕಾಗಿ ನಮ್ಮ ರಾಜ್ಯದ ರಾಷ್ಟ್ರೀಯ ಪಕ್ಷಗಳು ಭರ್ಜರಿ ಪ್ರಚಾರ ಕೈಗೊಂಡವು, ಅದಕ್ಕಾಗಿಯೇ ಹೊರರಾಜ್ಯದ ಚಲನಚಿತ್ರ ನಟ/ನಟಿಯರನ್ನು ಕರೆಸಿದ್ದವು. ಮತದಾರನನ್ನು ಓಲೈಸುವ ಭರದಲ್ಲಿ ನಮ್ಮ ರಾಜಕೀಯ ಪಕ್ಷಗಳು ಮಾಡುತ್ತಿರುವ ತಪ್ಪುಗಳು ಮಾತ್ರ ಬಹಳ ದೊಡ್ಡದಾಗಿವೆ. ಬಂಗಾರ ಪೇಟೆಯಲ್ಲಿ ನಡೆದ ಉಪಚುನಾವಣೆಗಾಗಿ ನಡೆಸಿದ ಪ್ರಚಾರದಲ್ಲಿ ಕಾಂಗ್ರೆಸ್ ಪಕ್ಷ ತೆಲಗು ಚಿತ್ರನಟ ಚಿರಂಜೀವಿಯನ್ನು ಬಳಸಿಕೊಂಡಿತ್ತು. ಅವರು ಸಹ ಭರ್ಜರಿಯಾಗಿ ತೆಲುಗಿನಲ್ಲಿ ಭಾಷಣ ಮಾಡಿ ಹೊರಟು ಹೋದರು. ಇದರಲ್ಲಿ ತಪ್ಪೇನು ಅಂತೀರಾ? ಮತದಾರನನ್ನು ಓಲೈಸುವ ಭರದಲ್ಲಿ ಕರ್ನಾಟಕದ ವಿವಿಧ ಭಾಷಿಕರಲ್ಲಿ ಒಡಕುಂಟು ಮಾಡಲಾಗುತ್ತಿದೆ. ಮೊನ್ನೆ ನಡೆದಿದ್ದು ಸಹ ಅದೇ, ಹಲವು ಶತಮಾನ ಅಥವಾ ಹಲವು ದಶಕಗಳಿಂದ ಇಲ್ಲಿ ನೆಲೆಸಿರುವ ತೆಲುಗು ಭಾಷಿಕರು ಕನ್ನಡದವರೇ ಆಗಿಹೋಗಿದ್ದಾರೆ. ಆದರೆ ನೀವು ತೆಲುಗರು ನೀವು ಕನ್ನಡಿಗರಲ್ಲಾ ಅಂತಾ ತೋರಿಸೋ ಪ್ರಯತ್ನಗಳೇ ಚಿರಂಜೀವಿ ಯಂತಹ ತೆಲುಗು ನಟರನ್ನು ಕರೆದುಕೊಂಡು ಬಂದು ಕರ್ನಾಟಕದಲ್ಲಿ ಭಾಷಣ ಮಾಡಿಸುವುದು. ಕರ್ನಾಟಕದ ಜನರನ್ನ ಓಲೈಸಲು ಆಂಧ್ರಪ್ರದೇಶದ ಕರಾವಳಿ ತೀರದ ಒಬ್ಬ ನಟ ಬಂದು ನೀವು ಕನ್ನಡಿಗರಲ್ಲಾ ಎಂದು ಸಂದೇಶ ನೀಡಿಸುವ ಕೆಲಸ ಮಾಡುತ್ತಿರುವ ಪಕ್ಷಗಳು ಮಾಡುತ್ತಿರುವುದಾದರು ಏನು ಅನ್ನೋದನ್ನ ತಾವೇ ಪ್ರಶ್ನಿಸಿಕೊಳ್ಳಲಿ.
“ತಾಯ್ನುಡಿಯಲ್ಲಿ ಕಲಿಕೆ” ಯಾಕೆ ಮಹತ್ವದ್ದು?
– ಪ್ರಿಯಾಂಕ್
ತಾಯ್ನುಡಿಯಲ್ಲಿ ಕಲಿಕೆ ಮಾಡಿ ಉಪಯೋಗ ಏನು? ಚಿಕ್ಕ ಮಕ್ಕಳು ಯಾವ ಭಾಷೆ ಬೇಕಿದ್ರೂ ಬೇಗ ಕಲಿತಾರಲ್ಲ, ಹಾಗಾಗಿ ಚಿಕ್ಕಂದಿಂದಲೇ ಇಂಗ್ಲೀಷಿನಲ್ಲಿ ಕಲಿಸಿಬಿಟ್ರೆ ಎಲ್ರಿಗೂ ಒಳ್ಳೇದಲ್ವ? ಇಂತಹ ಪ್ರಶ್ನೆಗಳು ಬಹಳಷ್ಟು ಜನರಲ್ಲಿ ಇರೋದನ್ನ ಕಾಣಬಹುದು.
ಸ್ವಾಮಿನಾಮಿಕ್ಸ್ ಹೆಸರಿನಡಿ ಅಂಕಣ ಬರೆಯುವ “ಸ್ವಾಮಿನಾಥನ್ ಐಯ್ಯರ್” ಅವರು, ತಮ್ಮ ಈ ಅಂಕಣದಲ್ಲಿ, ಮಕ್ಕಳಿಗೆ ಮೊದಲು ತಾಯ್ನುಡಿಯಲ್ಲಿ ಕಲಿಕೆಯಾಗಬೇಕಾದ್ದು ಯಾಕೆ ಮುಖ್ಯ ಎಂಬುದನ್ನು ಅಧ್ಯಯನದ ಉದಾಹರಣೆಗಳ ಜೊತೆಗೆ ತೋರಿಸಿದ್ದಾರೆ. ಅವರ ಅಂಕಣದ ಆಯ್ದ ಕೆಲವು ಅಂಶಗಳನ್ನು ಇಲ್ಲಿ (ಕನ್ನಡದಲ್ಲಿ) ಹಾಕಲಾಗಿದೆ.
* ಎರಡನೇ ತರಗತಿಯಲ್ಲಿರುವ ಮಕ್ಕಳು ಸರಾಗವಾಗಿ ಓದಲು ಕಲಿಯದಿದ್ದರೆ, ಅವರು ಬಹುಶ ಮುಂದೆಂದೂ ಚೆನ್ನಾಗಿ ಓದಲಾರರು. ಅವರು ಓದಿನಲ್ಲಿ ಹಿಂದೆ ಉಳಿಯುವ ಸಾಧ್ಯತೆಯೇ ಹೆಚ್ಚು.
ಇಗೋ,ಇದರಲ್ಲಿ ಮುಂದಿದೆ…
– ಕಿರಣ ಬಾಟ್ನಿ, ಬನವಾಸಿ ಬಳಗ
’ನಿಲುಮೆ’ಯಲ್ಲಿ ಕನ್ನಡದ ಸೊಲ್ಲರಿಮೆಯ ಬಗ್ಗೆ ಚರ್ಚೆಯಾಗುತ್ತಿರುವುದು ಒಳ್ಳೆಯ ಸಂಗತಿ. ಅಕ್ಟೋಬರ್ ೨೦೦೮ರಲ್ಲಿ ನಾನು ಬರೆದ ಒಂದು ಬರಹವನ್ನು ಬನವಾಸಿ ಬಳಗದ ಗೆಳೆಯರಾದ ಶ್ರೀ
ಆನಂದ್ ಜೋಶಿಯವರು ಈ ಚರ್ಚೆಗೆ ಸರಿಹೊಂದುತ್ತದೆ ಎಂದು ಪ್ರಕಟಣೆಗೆ ಕಳುಹಿಸಿ ಅದು ಪ್ರಕಟಿಸಲಾಗಿ, ಆ ಬರಹದಲ್ಲಿ ಬಂದ ಕೆಲವು ವಿಶಯಗಳ ಬಗ್ಗೆ, ಮತ್ತು ಬನವಾಸಿ ಬಳಗದ ನಿಲುವುಗಳ ಬಗ್ಗೆ ತಮ್ಮ ೪/೪/೨೦೧೧ರ ಬರಹದಲ್ಲಿ ಶ್ರೀ. ಅಜಕ್ಕಳ ಗಿರೀಶ ಬಟ್ಟರು ಪ್ರತಿಕ್ರಿಯೆ ನೀಡಿರುವುದರಿಂದ ಈ ಬರಹವನ್ನು ಬರೆಯುತ್ತಿದ್ದೇನೆ.
ಆ ಬರಹದಲ್ಲಿ ಗಿರೀಶಬಟ್ಟರನ್ನು ಕುರಿತು ನಾನು ಯಾವ ಮಾತನ್ನೂ ಆಡಿಲ್ಲ; ಅದನ್ನು ಬರೆದಾಗ ಅವರು ತಮ್ಮ ಹೊತ್ತಗೆಯನ್ನು ಪ್ರಕಟಿಸಿದ್ದರ ನೆನಪಿಲ್ಲ, ಅವರ ಹೆಸರೂ ನನಗಾಗ ಗೊತ್ತಿರಲಿಲ್ಲ. ಆದುದರಿಂದ ಆ ಬರಹದಲ್ಲಿ ಶಂಕರಬಟ್ಟರಿಗೆ ಗಿರೀಶಬಟ್ಟರು ಕೊಟ್ಟಿರುವ ಉತ್ತರಗಳ ವೈಗ್ನಾನಿಕತೆ-ಅವೈಗ್ನಾನಿಕತೆಗಳ ಬಗ್ಗೆ ನಾನು ಮಾತನಾಡಿರಲು ಸಾದ್ಯವೇ ಇರಲಿಲ್ಲ. ಆದರೆ ಶ್ರೀ. ಕೆ. ವಿ. ತಿರುಮಲೇಶರ ಒಂದು ಬರಹವನ್ನು ಕುರಿತು ಆ ಮಾತುಗಳನ್ನು ಆಡಿದ್ದು ನಿಜ, ಅವರು ಪ್ರತಿನಿದಿಸುವ ’ಹಳೆ-ಶಾಲೆ’ಯವರೆಲ್ಲರನ್ನೂ ಕುರಿತು ಆ ಮಾತುಗಳನ್ನು ಆಡಿದ್ದು ನಿಜ. ಈಗ ಗಿರೀಶಬಟ್ಟರಿಗೆ ಆ ಮಾತುಗಳು ತಮ್ಮನ್ನು ಕುರಿತೇ ಆಡಿದ್ದು ಎಂದು ಅನಿಸಿರುವುದರಲ್ಲಿ ಹಳೆಯ ಬರಹವನ್ನು ಹೊಸ ಚರ್ಚೆಯೊಂದರಲ್ಲಿ ಪ್ರಕಟಿಸಿದ್ದು ಒಂದು ಕಾರಣವಾದರೆ, ಮತ್ತೊಂದು ಕಾರಣ ನಿಜಕ್ಕೂ ಗಿರೀಶಬಟ್ಟರು ಆ ’ಹಳೆ-ಶಾಲೆ’ಗೇ ಸೇರುತ್ತಾರೆ ಎನ್ನುವುದು. ಮೊದಲನೆಯ ಕಾರಣಕ್ಕೆ ಬನವಾಸಿ ಬಳಗದ ಪರವಾಗಿ ನಾನು ಗಿರೀಶಬಟ್ಟರಲ್ಲಿ ಕ್ಶಮೆ ಕೇಳಿಕೊಳ್ಳುತ್ತ, ಎರಡನೆಯ ಕಾರಣದಿಂದ ಪ್ರೇರಿತರಾಗಿ ಅವರು ತಮ್ಮ ೪/೪/೨೦೧೧ರ ಬರಹದಲ್ಲಿ ಅದೇ ಹಳೆಯ ವಾದವನ್ನು ಮಂಡಿಸಿರುವುದರಿಂದ ಅದಕ್ಕೆ ಇಲ್ಲಿ ಮರುವುತ್ತರ.
ಅಜಕ್ಕಳರಿಗೇಕೆ ಈ ಅಸಹನೆ?
(ಡಾ.ಅಜಕ್ಕಳ ಗಿರೀಶ್ ಭಟ್ ಅವರ ಲೇಖನಕ್ಕೆ ಶುಭಶ್ರೀಯವರ ಉತ್ತರ ಇಲ್ಲಿದೆ – ನಿಲುಮೆ)
– ಶುಭಶ್ರೀ
ಈ ಪುಸ್ತಕವನ್ನು ಬರೆದಿರುವ ಡಾ. ಅಜಕ್ಕಳ ಗಿರೀಶ್ ಭಟ್ಟರು ತಾವು ಬರೆದ ಪುಸ್ತಕಕ್ಕೆ ಇಟ್ಟಿರುವ ಹೆಸರೇ ಶ್ರೀಯುತರ ಉದ್ದೇಶವು ತಾತ್ವಿಕ ನಿಲುವನ್ನು ಪ್ರತಿಪಾದಿಸುವುದಾಗಲೀ, ವಾದವೊಂದನ್ನು ಆರೋಗ್ಯಕರವಾಗಿನಡೆಸುವುದಾಗಲೀ ಅಲ್ಲವೆಂದೂ ವ್ಯಕ್ತಿಯ ತೇಜೋವಧೆಯನ್ನು ಮಾಡುವುದಕ್ಕಾಗಿ ಮಾತ್ರವೇ ಎಂದೂ ವೇದ್ಯವಾಗುವುದಿಲ್ಲವೇ? ಇಲ್ಲದಿದ್ದರೆ “ಕನ್ನಡಕ್ಕೇಕೆ ಕತ್ತರಿ?” ಎನ್ನುವ ಹೆಸರು ಸಾಕಾಗುತ್ತಿತ್ತು.
“ಶಂಕರಬಟ್ಟರಕತ್ತರಿ” ಎಂದು ಬರೆದಿರುವ ಉದ್ದೇಶವೇ ಡಾ. ಡಿ ಎನ್ ಎಸ್ ಅವರನ್ನು ಏಕಾಂಗಿ ಎಂದು ಬಿಂಬಿಸುವ ದುರುದ್ದೇಶದಿಂದ ಅಲ್ಲವೇ? ಪುಸ್ತಕದ ಹೆಸರಿನ ಬಗ್ಗೆ ಆಕ್ಷೇಪಾ ಯಾಕೆಂದರೆ ಅದರಲ್ಲಿ ಶಂಕರಭಟ್ಟರನ್ನು ಹಳಿಯುವ ಉಮ್ಮೇದಿಯೊಂದೇ ಕಾಣುತ್ತಿರುವುದು. ಡಾ. ಡಿ ಎನ್ ಶಂಕರಭಟ್ಟರ ವಿಚಾರಗಳ ಬಗ್ಗೆ ನಡುನಡುವೆ ತಮ್ಮ ವಾದಕ್ಕೆ ಅನುಕೂಲವಾಗುವಂತಹ ಸಾಲುಗಳನ್ನು ಮಾತ್ರಾ ಎತ್ತಿಕೊಂಡು ತಮಗೆ ತೋಚಿದಂತೆ ವಿಶ್ಲೇಷಿಸಿರುವಂತೆ ಕಾಣುತ್ತಿದೆ. ಯಾಕೆಂದರೆ ಅಚ್ಚಕನ್ನಡ ವರ್ಣಮಾಲೆಯೆಂದು ಅನೇಕ ಕಡೆ, ಬಹಳಷ್ಟು ಹಿಂದೆಯೇ ಈ ಮಹಾಪ್ರಾಣ ಬಿಟ್ಟ ವರ್ಣಮಾಲೆ ಪ್ರಕಟವಾಗಿದೆಯಲ್ಲವೇ?
ಮೂಲತಃ ಶಂಕರಭಟ್ಟರ ನಿಲುವುಗಳನ್ನು ಖಂಡಿಸುತ್ತಾ ಇವುಗಳನ್ನು ಒಪ್ಪಿರುವ ಯಾವ ಭಾಷಾ ವಿಜ್ಞಾನಿಯೂ ಇಲ್ಲವೆನ್ನುವಂತೆ ಕೆಲವರು ಬರೆದಿರುವುದು ಸರಿಯಲ್ಲ. ಕರ್ನಾಟಕದ ಬಹುತೇಕ ಭಾಷಾ ವಿಜ್ಞಾನಿಗಳು ಇಂದು ಡಾ.ಡಿ ಎನ್ ಎಸ್ ಅವರ ನಿಲುವುಗಳ ಬಗ್ಗೆ –ಅವುಗಳಲ್ಲಿ ಒಪ್ಪಿತವಾಗುವುವೆಷ್ಟು? ಆಗದವೆಷ್ಟು?ಎಂದೆಲ್ಲಾ ಚರ್ಚೆ ನಡೆಸಿದ್ದಾರೆ. ಹಾಂ… ಅದೂ ಭಾಷಾ ವಿಜ್ಞಾನದ ನೆಲೆಯಲ್ಲಿ. ಇವತ್ತಿನ ದಿವಸ ಕರ್ನಾಟಕದಲ್ಲಿ ಭಾಷಾವಿಜ್ಞಾನಿಗಳಲ್ಲಿ ದೊಡ್ಡ ಹೆಸರು ಡಾ. ಕೆ ವಿ ನಾರಾಯಣ, ಡಾ. ಸಿ ಎಸ್ ರಾಮಚಂದ್ರ, ಡಾ. ಮಲ್ಲಿಕಾರ್ಜುನ್ಮೇಟಿ… ಮತ್ತಷ್ಟು ಓದು 
ಕನ್ನಡನಾಡಿನ ಏಳಿಗೆ ಹೊಸದೊಂದು ಶಾಲೆಯಿಂದಲೇ ಆಗಬಲ್ಲುದು…!
– ಬನವಾಸಿ ಬಳಗ
ಕನ್ನಡದ ಸೊಲ್ಲರಿಮೆಯನ್ನು (ವ್ಯಾಕರಣವನ್ನು) ಮತ್ತು ಸ್ವರೂಪವನ್ನು ಅರ್ಥಮಾಡಿಕೊಳ್ಳುವುದರಲ್ಲಿ ವೈಜ್ಞಾನಿಕ ಮನೋಭಾವದ ಕನ್ನಡಿಗರೆಲ್ಲರ ಮನಸ್ಸನ್ನು ಗೆದ್ದಿರುವ ಶ್ರೀ. ಡಿ.ಎನ್. ಶಂಕರಭಟ್ಟರ
ಕೊಡುಗೆ ಬಹಳ ಮುಖ್ಯವಾದದ್ದು. ಭಟ್ಟರ “ಕನ್ನಡಕ್ಕೆ ಬೇಕು ಕನ್ನಡದ್ದೇ ವ್ಯಾಕರಣ”, “ಮಾತಿನ ಒಳಗುಟ್ಟು”, “ಕನ್ನಡ ನುಡಿ ನಡೆದುಬಂದ ದಾರಿ” ಮುಂತಾದ ಹೊತ್ತಿಗೆಗಳು ಜನರಲ್ಲಿ ಕನ್ನಡದ ಬಗೆಗಿರುವ ತಪ್ಪು ತಿಳುವಳಿಕೆಯನ್ನು ಸುಟ್ಟು ಹಾಕುತ್ತವೆ. ಈ ಕ್ಷೇತ್ರದಲ್ಲಿ ಬಹುಕಾಲದಿಂದ ಕನ್ನಡದ ಭಾಷಾವಿಜ್ಞಾನಿಗಳು ಮತ್ತು ವ್ಯಾಕರಣಕಾರರು ಮಾಡಿಕೊಂಡು ಬಂದಿರುವ ತಪ್ಪುಗಳನ್ನು ಭಟ್ಟರು ಖಡಾಖಂಡಿತವಾಗಿ ತೋರಿಸಿಕೊಟ್ಟಿರುವುದರಿಂದ (ಮತ್ತು ಇನ್ನೂ ಮುಂದೆ ಬರುವ ಹೊತ್ತಿಗೆಗಳಲ್ಲಿ ತೋರಿಸಿಕೊಡಲಿರುವುದರಿಂದ) ಹಳೆ-ಶಾಲೆಗೆ ಅಂಟಿಕೊಂಡಿರುವ ಕೆಲವರ ಕಾಲ್ಕೆಳಗಿನ ನೆಲವೇ ಕುಸಿದಂತಾಗಿ, ಭಟ್ಟರನ್ನೂ ಮತ್ತವರ ತತ್ವಗಳನ್ನೂ ಕಟುವಾಗಿ ವಿರೋಧಿಸುವುದನ್ನೇ ಒಂದು ಹವ್ಯಾಸವಾಗಿಸಿಕೊಂಡಿದ್ದಾರೆ! ತಮಾಷೆಯೇನೆಂದರೆ ಇವರಾರ ವಿರೋಧವೂ ಭಟ್ಟರ ವೈಜ್ಞಾನಿಕತೆಯ ಮಟ್ಟಕ್ಕೆ ಏರದೆ ಬರೀ ಅವರನ್ನು ವೈಯಕ್ತಿಕವಾಗಿ ಮೂದಲಿಸುವುದರಿಂದ ಹಿಡಿದು, ಸಂಸ್ಕೃತದ ಪಂಡಿತರಾದ ಅವರೇ ಸಂಸ್ಕೃತದ್ವೇಷಿಗಳೆಂದು ಮೂದಲಿಸುವವರೆಗೆ, ಎಪ್ಪತ್ತೈದು ವರ್ಷದ ಮುದುಕರಾದ ಭಟ್ಟರು ರಾಜಕೀಯ ಲಾಭಕ್ಕಾಗಿ ಇದನ್ನು ಮಾಡುತ್ತಿದ್ದಾರೆ ಎನ್ನುವ ಸೊಂಟದ ಕೆಳಗಿನ ಆರೋಪದವರೆಗೆ ಮಾತ್ರ ತಲುಪುತ್ತವೆ! ಈ ಅವೈಜ್ಞಾನಿಕತೆಯೇ ಕನ್ನಡದ ಸ್ವರೂಪವನ್ನು ಅರ್ಥಮಾಡಿಕೊಳ್ಳುವುದರಲ್ಲಿ ಕನ್ನಡಿಗರನ್ನು ಸೋಲಿಸಿರುವುದರಿಂದ ಇದನ್ನು ಕಿತ್ತೊಗೆಯದೆ ಬೇರೆ ದಾರಿಯಿಲ್ಲ. ಈ ಹಿನ್ನೆಲೆಯಲ್ಲಿ ಅಕ್ಟೋಬರ್ ೩ರ ವಿಜಯಕರ್ನಾಟಕ ಪತ್ರಿಕೆಯಲ್ಲಿ ಪ್ರಕಟವಾದ “ಕೂಡಲಸಂಗಮ ದೇವನ ಕನ್ನಡ” ಎಂಬ ಬರಹದಲ್ಲಿ ಶ್ರೀ ಕೆ.ವಿ. ತಿರುಮಲೇಶ್ ಅವರು ಅದೇ ಅವೈಜ್ಞಾನಿಕತೆಯನ್ನು ಓದುಗರ ಮುಂದಿಟ್ಟು ನಮ್ಮ ಈ ಮರುವುತ್ತರವನ್ನು ತಾವೇ ಬರಮಾಡಿಕೊಂಡಿದ್ದಾರೆ. ತಿರುಮಲೇಶರ ಬರಹದಲ್ಲಿ ಆ ಹಳೆ-ಶಾಲೆಯ ಅವೈಜ್ಞಾನಿಕತೆಯು ಮೈದಳೆದು ಬಂದಿರುವುದರಿಂದ ನಮ್ಮ ಈ ಉತ್ತರವು ಅವರಿಗೊಬ್ಬರಿಗೇ ಅಲ್ಲದೆ ಆ ಹಳೆ-ಶಾಲೆಯವರೆಲ್ಲರಿಗೂ ಒಪ್ಪುತ್ತದೆ.




