ಹಳ್ಳಿಗರೇ ಕರೆಂಟ್ ಉಳಿಸಿ, ಎಂಜಿ ರೋಡಿಗೆ ಲೈಟ್ ಹಾಕಬೇಕು
ಪ್ರಪಂಚ ಹೀಗೆನೇ!
ಯಾರು ಪಾಲಿಸ್ತಾರೋ ಅವರ ಮೇಲೆಯೇ ಎಲ್ಲವನ್ನು ಹೇರಿ ಅರಾಮದಲ್ಲಿ ಇದ್ದು ಬಿಡುತ್ತೆ. ‘ಉಳಿಸಿ’ ಅಂತ ಸರ್ಕಾರ ಯಾವುದಾದ್ರು ಅಭಿಯಾನ ಮಾಡಿದ್ರೆ ಅದರ ಟಾರ್ಗೆಟ್ ಮಧ್ಯಮ ಇಲ್ಲವೇ ಕೆಳವರ್ಗವೇ ಆಗಿರುತ್ತೆ. ಅದು ನೀರುಳಿಸಿ ಎಂಬುದೋ, ಪೆಟ್ರೋಲ್ ಉಳಿಸಿ ಅಂತಲೋ, ಕಡೆಗೆ ವಿದ್ಯುತ್ ಉಳಿಸಿ ಅಂತಾನೋ ಇರಬಹುದು. ಇಲ್ಲಿ ‘ಉಳಿಸಬೇಕಾದವರು’ ಯಾವುದನ್ನು ಕಡಿಮೆ ಪಡೆಯುತ್ತಿರುತ್ತಾರೋ ಅವರೇ! ವಿಚಿತ್ರ, ಆದ್ರೂ ಸತ್ಯ.
ಉದಾಹರಣೆಗೆ ನೀರು ಉಳಿಸಿ-ಮಿತವಾಗಿ ಬಳಸಿ ಅಂತ ಹೇಳಲಾಗುತ್ತೆ. ಆದ್ರೆ ಅದನ್ನು ಪಾಲಿಸಬೇಕಾದ ಜನತೆಗೆ ವಾರಕ್ಕೆ ಒಮ್ಮೆಯೋ ಎರಡು ಬಾರಿಯೋ ನೀರು ಬಂದ್ರೆ ಅದೇ ಹೆಚ್ಚು. ಒಮ್ಮೆ ಎಲ್ಲಿಯಾದ್ರೂ ಈ ಜನರು ಈ ನಿಯಮಗಳನ್ನು ಪಾಲಿಸುವಲ್ಲಿ ಸೋತರೆ ನಾವೆಲ್ಲ ಬೊಬ್ಬೆ ಹಾಕಿ ಬಿಡ್ತೇವೆ. ಅದ್ರೆ ಆ ಬೊಬ್ಬೆಯಲ್ಲಿ ಸತ್ಯವೊಂದು ಮುಚ್ಚಿ ಹೋಗಿರುತ್ತೆ. ಒಬ್ಬ ಶ್ರೀಮಂತನ ಮನೆಯ ಟಾಯ್ಲೆಟ್ ನಲ್ಲಿ ಬಳಕೆಯಾಗುವ ನೀರಿನಷ್ಟು ಸಾಮಾನ್ಯ ಜನರ ಕುಡಿಯುವ ನೀರು ಶುದ್ಧವಾಗಿರಲ್ಲ.






